Gold rate : ಬಂಗಾರದ ದರದಲ್ಲಿ 720 ರೂ. ಇಳಿಕೆ, ಬೆಳ್ಳಿ 2,500 ರೂ. ಅಗ್ಗ! ಖರೀದಿದಾರರು ಗಮನಿಸಿ - Vistara News

ಪ್ರಮುಖ ಸುದ್ದಿ

Gold rate : ಬಂಗಾರದ ದರದಲ್ಲಿ 720 ರೂ. ಇಳಿಕೆ, ಬೆಳ್ಳಿ 2,500 ರೂ. ಅಗ್ಗ! ಖರೀದಿದಾರರು ಗಮನಿಸಿ

ಬಂಗಾರದ ದರದಲ್ಲಿ ಗುರುವಾರ 720 ರೂ. ಹಾಗೂ ಬೆಳ್ಳಿಯ ದರದಲ್ಲಿ ದಿಢೀರ್‌ 2,500 ರೂ. ಇಳಿಕೆ ಆಗಿರುವುದರಿಂದ (Gold rate) ಖರೀದಿಗೆ ಸಕಾಲ ಸೃಷ್ಟಿಯಾಗಿದೆ.

VISTARANEWS.COM


on

gold rate in bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಂಗಾರದ ದರದಲ್ಲಿ ಗುರು ವಾರ 720 ರೂ. ಇಳಿಕೆಯಾಗಿದ್ದು, 24 ಕ್ಯಾರಟ್‌ನ 10 ಗ್ರಾಮ್‌ ಚಿನ್ನದ ದರ 55,680 ರೂ.ಗೆ (Gold rate) ತಗ್ಗಿದೆ. 22 ಕ್ಯಾರಟ್‌ ಅಥವಾ ಆಭರಣ ಚಿನ್ನದ ದರದಲ್ಲಿ 650 ರೂ. ತಗ್ಗಿದ್ದು, 51,050 ರೂ.ಗೆ ಇಳಿಕೆಯಾಗಿದೆ. ಬೆಳ್ಳಿಯ ಪ್ರತಿ ಕೆ.ಜಿ ದರದಲ್ಲಿ 2,500 ರೂ. ತಗ್ಗಿದ್ದು 70,000 ರೂ.ಗೆ ತಗ್ಗಿದೆ. ಕಳೆದ ಎರಡು ದಿನಗಳಲ್ಲಿ ಬಂಗಾರದ ದರದಲ್ಲಿ ಒಟ್ಟು 920 ರೂ. ತಗ್ಗಿದೆ.

62,000 ರೂ.ಗೆ ಏರಿಕೆ ಸಾಧ್ಯತೆ:

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪ್ರತಿ ಔನ್ಸ್‌ (28 ಗ್ರಾಮ್)‌ ಬಂಗಾರದ ದರ 1636 ಡಾಲರ್‌ಗೆ ಕುಸಿದಿತ್ತು. ಆದರೆ ಈಗ 1950 ಡಾಲರ್‌ಗಳ ಎತ್ತರಕ್ಕೆ ಜಿಗಿದಿದೆ. 2,000 ಡಾಲರ್‌ಗೆ ಏರಿದರೂ ಅಚ್ಚರಿ ಇಲ್ಲ ಎಂದು ವರದಿಯಾಗಿದೆ. ಕೆಲ ವರದಿಗಳ ಪ್ರಕಾರ 2,078 ಡಾಲರ್‌ಗಳ ದಾಖಲೆಯ ಎತ್ತರಕ್ಕೆ ಏರಲಿದೆ. ಹೀಗಾಗಿ ಈ ವರ್ಷ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ದರ 62,000 ರೂ. ತನಕ ಏರಿಕೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.

ಅಮೆರಿಕ ಮತ್ತು ಯುರೋಪ್‌ನಲ್ಲಿ ಆರ್ಥಿಕ ಹಿಂಜರಿತದ ಭೀತಿ ಹಿನ್ನೆಲೆಯಲ್ಲಿ ಸ್ವರ್ಣ ದರ ಜಿಗಿದಿದೆ. ಸಾಮಾನ್ಯವಾಗಿ ಆರ್ಥಿಕ ವಿಪತ್ತಿನ ಸಂದರ್ಭ ಬಂಗಾರದ ದರ ಏರುಗತಿ ಪಡೆಯುತ್ತದೆ ಎನ್ನುತ್ತಾರೆ ಕೋಟಕ್‌ ಸೆಕ್ಯುರಿಟೀಸ್‌ನ ತಜ್ಞ ರವೀಂದ್ರ ರಾವ್.‌ 1973ರಿಂದೀಚೆಗೆ 7 ಮಹಾ ಆರ್ಥಿಕ ಹಿಂಜರಿತದ ಸಂದರ್ಭ 5 ಸಲ ಬಂಗಾರದ ದರ ಜಿಗಿದಿತ್ತು. ‌

ಚಿನ್ನದ ಆಮದು ದರ ಇಳಿಕೆಗೆ ಒತ್ತಾಯ:

ಬಂಗಾರದ ದರ ದಾಖಲೆಯ ಏರಿಕೆ ಹಿನ್ನೆಲೆಯಲ್ಲಿ ಆಮದು ಸುಂಕವನ್ನು ತಗ್ಗಿಸಬೇಕು ಎಂದು ಜ್ಯುವೆಲ್ಲರಿ ವಲಯದ ತಜ್ಞರು ಒತ್ತಾಯಿಸಿದ್ದಾರೆ. ದರ ಹೆಚ್ಚಳದ ಪರಿಣಾಮ ಬಂಗಾರಕ್ಕೆ ಬೇಡಿಕೆ ತಾತ್ಕಾಲಿಕವಾಗಿ ಇಳಿಕೆಯಾಗುವ ಸಾಧ್ಯತೆ ಇದೆ. ಆಮದು ಸುಂಕ ಈಗ 15% ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Bhavani Revanna: ಮೇ 31ರಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಈಗಾಗಲೇ ಪ್ರಜ್ವಲ್‌ ರೇವಣ್ಣ ಸ್ಪಷ್ಟಪಡಿಸಿದ್ದಾರೆ. ಇನ್ನು ಮೇ 31ರಂದೇ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ಆದೇಶವನ್ನು ಹೊರಡಿಸುವುದಾಗಿ ಕೋರ್ಟ್‌ ತಿಳಿಸಿದೆ. ಹಾಗಾಗಿ, ತಾಯಿ-ಮಗನಿಗೆ ಮೇ 31 ಮಹತ್ವದ ದಿನವಾಗಿದೆ.

VISTARANEWS.COM


on

Bhavani Revanna
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರವರೆಗೆ ತೀರ್ಪು ಕಾಯ್ದಿರಿಸಿದೆ. ಮೇ 31ರಂದು ನ್ಯಾಯಾಲಯವು ಆದೇಶ ಹೊರಡಿಸಿದ್ದು, ಅಲ್ಲಿಯವರೆಗೆ ಭವಾನಿ ರೇವಣ್ಣ ಕಾಯಬೇಕಿದೆ.

ಮೇ 31ರಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಈಗಾಗಲೇ ಪ್ರಜ್ವಲ್‌ ರೇವಣ್ಣ ಸ್ಪಷ್ಟಪಡಿಸಿದ್ದಾರೆ. ಇದರ ಬೆನ್ನಲ್ಲೇ, ಪ್ರಜ್ವಲ್‌ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದಾಗಿ ವಕೀಲ ಅರುಣ್‌ ಅವರು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಮೇ 31ರಂದೇ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ಆದೇಶವನ್ನು ಹೊರಡಿಸುವುದಾಗಿ ಕೋರ್ಟ್‌ ತಿಳಿಸಿದೆ. ಅತ್ತ, ತಮ್ಮ ವಿರುದ್ಧ ದಾಖಲಾದ ಎರಡೂ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌.ಡಿ.ರೇವಣ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ. ಮೂರೂ ಅರ್ಜಿಗಳ ಕುರಿತು ಕೋರ್ಟ್‌ ನೀಡುವ ತೀರ್ಪಿನ ಎಚ್‌.ಡಿ.ರೇವಣ್ಣ ಕುಟುಂಬದ ಭವಿಷ್ಯ ನಿಂತಿದೆ.

Prajwal Revanna Case

ಇದಕ್ಕೂ ಮೊದಲು ಭವಾನಿ ರೇವಣ್ಣ ಪರ ವಾದ ಮಂಡಿಸಿದ ವಕೀಲ ಸಂದೇಶ ಚೌಟ, “ಎಫ್ಐಆರ್ ದಾಖಲಿಸಿ 27 ದಿನಗಳಾದರೂ ಭವಾನಿ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿಲ್ಲ. ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ನಂತರ ಬೆಟ್ಟದಷ್ಟು ದಾಖಲೆ ಇವೆ ಎನ್ನುತ್ತಿದ್ದಾರೆ. ಹಾಗಿದ್ದರೆ ಇದುವರೆಗೂ ಏಕೆ ವಿಚಾರಣೆಗೆ ಕರೆಯಲಿಲ್ಲ? ತನಿಖೆಗೆ ಸಹಕರಿಸುವುದಾಗಿ ಈ ಹಿಂದೆಯೇ ಎಸ್ಐಟಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಭವಾನಿಗೆ ನಿರೀಕ್ಷಣಾ ಜಾಮೀನು ನೀಡಬೇಕು” ಎಂದರು.

ಎಸ್‌ಪಿಪಿ ವಾದವೇನಿತ್ತು?

ಮಗನ ರಕ್ಷಣೆಗಾಗಿ ಭವಾನಿ ರೇವಣ್ಣ ಒಳಸಂಚು ರೂಪಿಸಿದ್ದಾರೆ. ಸಂತ್ರಸ್ತ ಮಹಿಳೆಯ ಅಪಹರಣದ ಹಿಂದೆ ಇವರ ಕೈವಾಡವಿದೆ. ಸಂತ್ರಸ್ತ ಮಹಿಳೆಗೆ ಊಟ ನೀರು, ಸರಿಯಾಗಿ ಕೊಟ್ಟಿಲ್ಲ‌. ಆಕೆಗೆ ಬಟ್ಟೆ ಸೀರೆಯನ್ನು ಕೊಟ್ಟಿಲ್ಲ. ಆರೋಪಿ ಸತೀಶ್ ಬಾಬಣ್ಣ ಜತೆ ಭವಾನಿ ಮಾತನಾಡಿದ್ದಾರೆ. ಆರೋಪಿ ಸತೀಶ್ ಬಾಬಣ್ಣ ಕೇಳಿದಾಗ ಭವಾನಿಯವರು ಆಯ್ತು 150 ರೂಪಾಯಿ ಅಥವಾ 200 ರೂಪಾಯಿ ಸೀರೆ ಕೊಡ್ಸು ಎಂಬುದಾಗಿ ಸೂಚಿಸಿದ್ದಾರೆ” ಎಂದು ಕೋರ್ಟ್‌ಗೆ ಮಾಹಿತಿ ನೀಡಿದರು. ಕೊನೆಗೆ ನ್ಯಾಯಾಲಯವು ತೀರ್ಪನ್ನು ಮೇ 31ರವರೆಗೆ ಕಾಯ್ದಿರಿಸಿತು.

ನಾಳೆಯೇ ವಿಚಾರಣೆ ಸಾಧ್ಯವಿಲ್ಲ ಎಂದ ಕೋರ್ಟ್‌

ಪ್ರಜ್ವಲ್‌ ರೇವಣ್ಣ ಅವರು ಮೇ 31ರಂದು ಭಾರತಕ್ಕೆ ಆಗಮಿಸಲಿದ್ದು, ನಾಳೆ ಅಂದರೆ ಮೇ 30ರಂದೇ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಬೇಕು ಎಂದು ವಕೀಲ ಅರುಣ್‌ ಮನವಿ ಮಾಡಿದ್ದಾರೆ. ಆದರೆ, ನಾಳೆಯೇ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದಿರುವ ಕೋರ್ಟ್‌, ಈ ಕುರಿತು ಪ್ರತಿಕ್ರಿಯಿಸುವಂತೆ ಎಸ್‌ಐಟಿಗೆ ನೋಟಿಸ್‌ ಜಾರಿಗೊಳಿಸಿದೆ. ಆದರೆ, ಯಾವಾಗ ವಿಚಾರಣೆ ನಡೆಸಲಾಗುತ್ತದೆ ಎಂಬುದರ ಕುರಿತು ಕೋರ್ಟ್‌ ಮಾಹಿತಿ ನೀಡಿಲ್ಲ.

4 ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಜೂ.3ಕ್ಕೆ ವಿಚಾರಣೆ ಮುಂದೂಡಿಕೆ

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ನವೀನ್‌ ಗೌಡ, ಎಚ್.ಪಿ. ಪುಟ್ಟರಾಜು, ಕಾರ್ತಿಕ್‌ ಹಾಗೂ ಚೇತನ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜೂನ್ 3 ಕ್ಕೆ ಮುಂದೂಡಲಾಗಿದೆ.

ಇದನ್ನೂ ಓದಿ: Prajwal Revanna Case: ಕೆ ಆರ್‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌; ಭವಾನಿ ರೇವಣ್ಣ ಕಾರು ಚಾಲಕನಿಗೆ‌ SIT ಸಮನ್ಸ್

Continue Reading

ಕರ್ನಾಟಕ

Prajwal Revanna Case: ಭಾರತಕ್ಕೆ ಬರುವ ಮೊದಲೇ ಜಾಮೀನಿಗಾಗಿ ಪ್ರಜ್ವಲ್‌ ಅರ್ಜಿ ಸಲ್ಲಿಕೆ; ಮುಂದೇನಾಗತ್ತೆ?

Prajwal Revanna Case: ಪ್ರಜ್ವಲ್‌ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದಾಗಿ ವಕೀಲ ಅರುಣ್‌ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ, ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್‌ ಸಿಕ್ಕಂತಾಗಿದೆ. ಭಾರತಕ್ಕೆ ಹಾಸನ ಸಂಸದ ಬರುತ್ತಲೇ ಬಂದನಕ್ಕೀಡಾಗಬಾರದು ಎಂಬ ದೃಷ್ಟಿಯಿಂದ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಮೇ 31ರಂದು ಭಾರತಕ್ಕೆ ಆಗಮಿಸುವುದಾಗಿ ಹೇಳಿದ್ದ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರು, ಇದೀಗ ಬೆಂಗಳೂರಿಗೆ ಟಿಕೆಟ್‌ ಮಾಡಿರುವುದು ಕಂಡುಬಂದಿದೆ. ಜರ್ಮನಿಯ ಮ್ಯೂನಿಚ್‌ನಿಂದ ಬೆಂಗಳೂರಿಗೆ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಬುಕ್ ಮಾಡಿಕೊಂಡಿರುವ ಪ್ರಜ್ವಲ್‌ ರೇವಣ್ಣ, ಮೇ 30ರಂದು ಮಧ್ಯಾಹ್ನ ಜರ್ಮನಿಯಲ್ಲಿ ಫ್ಲೈಟ್‌ ಹತ್ತಲಿದ್ದಾರೆ. ಮತ್ತೊಂದೆಡೆ, ಬೆಂಗಳೂರು ವಿಮಾನ ನಿಲ್ದಾಣದಲ್ಲಿಯೇ (Bengaluru Report) ಅವರನ್ನು ವಶಕ್ಕೆ ಪಡೆಯಲು ಎಸ್‌ಐಟಿ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ, ನಿರೀಕ್ಷಣಾ ಜಾಮೀನಿಗಾಗಿ ಪ್ರಜ್ವಲ್‌ ರೇವಣ್ಣ ಪರ ವಕೀಲರೊಬ್ಬರು ಅರ್ಜಿ (Anticipatory Bail Plea) ಸಲ್ಲಿಸಿದ್ದಾರೆ.

ಹೌದು, ಪ್ರಜ್ವಲ್‌ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದಾಗಿ ವಕೀಲ ಅರುಣ್‌ ಅವರು ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ, ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್‌ ಸಿಕ್ಕಂತಾಗಿದೆ. ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರುತ್ತಲೇ ಅವರನ್ನು ಬಂಧಿಸಬಾರದು ಎಂಬ ದೃಷ್ಟಿಯಿಂದ ಅರುಣ್‌ ಅವರು ಪ್ರಜ್ವಲ್‌ ರೇವಣ್ಣ ಪರ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಈಗ ನ್ಯಾಯಾಲಯವು ಅರ್ಜಿಯ ಕುರಿತು ಯಾವ ತೀರ್ಪು ನೀಡುತ್ತದೆ ಎಂಬ ಕುತೂಹಲ ಮೂಡಿದೆ.

Prajwal Revanna case

ಲುಫ್ತಾನ್ಸಾ ಏರ್‌ಲೈನ್ಸ್‌ ಮೂಲಕ ಫ್ಲೈಟ್ ಟಿಕೆಟ್ ಬುಕ್ ಮಾಡಿರುವ ಪ್ರಜ್ವಲ್ ರೇವಣ್ಣ, ಗುರುವಾರ ಮಧ್ಯಾಹ್ನ 12.05ಕ್ಕೆ ಮ್ಯೂನಿಚ್‌ನಲ್ಲಿ ಫ್ಲೈಟ್ ಹತ್ತಲಿದ್ದಾರೆ. ಮಧ್ಯರಾತ್ರಿ 12.30ಕ್ಕೆ ಬೆಂಗಳೂರು ಏರ್‌ಪೋರ್ಟ್‌ಗೆ ಆಗಮಿಸಲಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರು ಆಗಮಿಸುತ್ತಲೇ ವಶಕ್ಕೆ ಪಡೆಯಲು ಎಸ್‌ಐಟಿ ಸಜ್ಜಾಗಿದ ಎಂದು ಈಗಾಗಲೇ ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

ಮೇ 27ರಂದು ವಿಡಿಯೊದಲ್ಲಿ ಮಾತನಾಡಿದ್ದ ಪ್ರಜ್ವಲ್‌ ರೇವಣ್ಣ, ನಾನು ಶುಕ್ರವಾರ (ಮೇ 31) ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಕಾಂಗ್ರೆಸ್‌ ನಾಯಕರು ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ. ನಾನು ಈ ಪ್ರಕರಣದಿಂದ ಆರೋಪಮುಕ್ತನಾಗಿ ಹೊರಬರುತ್ತೇನೆ ಎಂಬ ವಿಶ್ವಾಸವಿದೆ ಎಂಬುದಾಗಿ ಹೇಳಿದ್ದರು.

ಇದನ್ನೂ ಓದಿ: Prajwal Revanna Case: ಬೆಂಗಳೂರಿಗೆ ಪ್ರಜ್ವಲ್‌ ರೇವಣ್ಣ ಟಿಕೆಟ್ ಬುಕ್; ನಾಳೆ ಮಧ್ಯಾಹ್ನ ಜರ್ಮನಿಯಿಂದ ಪ್ರಯಾಣ

Continue Reading

ದೇಶ

Arvind Kejriwal: ಕಾಂಗ್ರೆಸ್‌ ಜತೆ ನಮ್ಮ ‘ಮದುವೆ’ ಶಾಶ್ವತ ಅಲ್ಲ ಎಂದ ಕೇಜ್ರಿವಾಲ್;‌ ‘ಡಿವೋರ್ಸ್‌’ ಯಾವಾಗ?

Arvind Kejriwal: ಕಾಂಗ್ರೆಸ್‌ ಜತೆ ನಾವೇನು ಕಾಯಂ ಮದುವೆ ಮಾಡಿಕೊಂಡಿಲ್ಲ. ಈಗ ಬಿಜೆಪಿಯನ್ನು ಸೋಲಿಸುವುದಷ್ಟೇ ನಮ್ಮ ಗುರಿಯಾಗಿದೆ. ಸರ್ವಾಧಿಕಾರ ಹಾಗೂ ಗೂಂಡಾಗಿರಿಯನ್ನು ನಿರ್ಮೂಲನೆ ಮಾಡುವ ದಿಸೆಯಲ್ಲಿ ನಾವು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದೇವೆ. ದೇಶವನ್ನು ಉಳಿಸುವುದು ನಮಗೆ ಮುಖ್ಯ ಉದ್ದೇಶವಾಗಿದೆ ಎಂಬುದಾಗಿ ಅರವಿಂದ್‌ ಕೇಜ್ರಿವಾಲ್‌ ಅವರು ಸಂದರ್ಶನದಲ್ಲಿ ತಿಳಿಸಿದ್ದಾರೆ. ಇದು ಈಗ ಭಾರಿ ಸಂಚಲನ ಮೂಡಿಸಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಶತಾಯ ಗತಾಯ ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಪ್ರತಿಪಕ್ಷಗಳು ಒಗ್ಗೂಡಿ ರಚಿಸಿರುವ ಇಂಡಿಯಾ ಒಕ್ಕೂಟದಲ್ಲಿ (India Bloc) ಆರಂಭದಿಂದಲೂ ಭಿನ್ನಮತ, ಭಿನ್ನಾಭಿಪ್ರಾಯ ತಲೆದೋರುತ್ತಿವೆ. ನಿತೀಶ್‌ ಕುಮಾರ್‌ (Nitish Kumar) ಇಂಡಿಯಾ ಒಕ್ಕೂಟ ತೊರೆದಿದ್ದು, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸಿದ್ದೇ ಇದಕ್ಕೆ ನಿದರ್ಶನಗಳಾಗಿವೆ. ಇದರ ಬೆನ್ನಲ್ಲೇ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ (Arvind Kejriwal) ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ಕಾಂಗ್ರೆಸ್‌ ಜತೆಗಿನ ನಮ್ಮ ಮದುವೆಯು (ಆಪ್‌-ಕಾಂಗ್ರೆಸ್‌ ಮೈತ್ರಿ) (AAP Congress Alliance) ಶಾಶ್ವತ ಅಲ್ಲ” ಎಂದು ಹೇಳುವ ಮೂಲಕ ಮೈತ್ರಿ ಮುರಿದುಕೊಳ್ಳುವ ಸೂಚನೆ ನೀಡಿದ್ದಾರೆ.

ಇಂಡಿಯಾ ಟುಡೇ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದ ವೇಳೆ ಅರವಿಂದ್‌ ಕೇಜ್ರಿವಾಲ್‌ ಅವರು ಹೀಗೆ ಹೇಳಿದ್ದಾರೆ. “ಕಾಂಗ್ರೆಸ್‌ ಜತೆ ನಾವೇನು ಕಾಯಂ ಮದುವೆ ಮಾಡಿಕೊಂಡಿಲ್ಲ. ಈಗ ಬಿಜೆಪಿಯನ್ನು ಸೋಲಿಸುವುದಷ್ಟೇ ನಮ್ಮ ಗುರಿಯಾಗಿದೆ. ಸರ್ವಾಧಿಕಾರ ಹಾಗೂ ಗೂಂಡಾಗಿರಿಯನ್ನು ನಿರ್ಮೂಲನೆ ಮಾಡುವ ದಿಸೆಯಲ್ಲಿ ನಾವು ಕಾಂಗ್ರೆಸ್‌ ಜತೆ ಮೈತ್ರಿ ಮಾಡಿಕೊಂಡಿದ್ದೇವೆ. ದೇಶವನ್ನು ಉಳಿಸುವುದು ನಮಗೆ ಮುಖ್ಯ ಉದ್ದೇಶವಾಗಿದೆ. ಬಿಜೆಪಿಯನ್ನು ಸೋಲಿಸುವ ದೃಷ್ಟಿಯಿಂದ ಮಾತ್ರ ನಾವು ಮೈತ್ರಿ ಮಾಡಿಕೊಂಡಿದ್ದೇವೆ” ಎಂದು ಹೇಳಿರುವುದು ಭಾರಿ ಸಂಚಲನ ಮೂಡಿಸಿದೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ

ಅಬಕಾರಿ ನೀತಿ ಜಾರಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಜೈಲುಪಾಲಾಗಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬುದಾಗಿ ಬಿಜೆಪಿ ಆಗ್ರಹಿಸುತ್ತಿದೆ. ಇದರ ಕುರಿತು ಪ್ರತಿಕ್ರಿಯಿಸಿದ ಅವರು, “ಬಿಜೆಪಿ ಹೇಳಿತು ಎಂದ ಮಾತ್ರಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅಷ್ಟಕ್ಕೂ, ನಾನು ಜೈಲಿಗೆ ಹೋಗುತ್ತೇನೆ ಎಂಬುದು ಮುಖ್ಯ ವಿಷಯವಲ್ಲ. ದೇಶದ ಭವಿಷ್ಯದ ಬಗ್ಗೆ ನನಗೆ ಚಿಂತೆ ಇದೆ. ಅವರಿಗೆ ಎಷ್ಟು ದಿನ ಬೇಕೋ, ಅಷ್ಟು ದಿನ ನನ್ನನ್ನು ಜೈಲಿನಲ್ಲಿ ಇರಿಸಲಿ. ನಾವು ಯಾವುದೇ ಕಾರಣಕ್ಕೂ ಕುಗ್ಗುವುದಿಲ್ಲ, ಹೋರಾಟ ನಿಲ್ಲಿಸಲ್ಲ” ಎಂದಿದ್ದಾರೆ. ಕೇಜ್ರಿವಾಲ್‌ ಅವರು ಜೂನ್‌ 2ರಂದು ಮತ್ತೆ ಜೈಲಿಗೆ ಹೋಗಲಿದ್ದಾರೆ.

ಇಂಡಿಯಾ ಒಕ್ಕೂಟದ ಸಭೆಗೆ ದೀದಿ ಗೈರು

ಲೋಕಸಭೆ ಚುನಾವಣೆ ಕೊನೆಯ ಹಂತಕ್ಕೆ ಬಂದು ನಿಂತಿದೆ. ಆರು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಜೂನ್‌ 1ರಂದು ಏಳನೇ ಅಥವಾ ಕೊನೆಯ ಹಂತದ ಮತದಾನದ ಮೂಲಕ ಸಾರ್ವತ್ರಿಕ ಚುನಾವಣೆ ಮುಗಿಯಲಿದೆ. ಇನ್ನು, ಕೊನೆಯ ಹಂತದ ಮತದಾನದ ದಿನವಾದ ಜೂನ್‌ 1ರಂದೇ ಇಂಡಿಯಾ ಒಕ್ಕೂಟದ ಪಕ್ಷಗಳ ಸಭೆ ನಡೆಯಲಿದೆ. ಆದರೆ, ಇಂಡಿಯಾ ಒಕ್ಕೂಟದ ಮಹತ್ವದ ಸಭೆಗೆ ಗೈರಾಗಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಇದು ಕೂಡ ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

ಇದನ್ನೂ ಓದಿ: Arvind Kejriwal: ಜಾಮೀನು ಅವಧಿ ವಿಸ್ತರಣೆಗೆ ಕೋರಿ ಅರ್ಜಿ; ಸುಪ್ರೀಂನಲ್ಲಿ ಕೇಜ್ರಿವಾಲ್‌ಗೆ ಭಾರೀ ಹಿನ್ನಡೆ-ಮತ್ತೆ ಜೈಲು ಫಿಕ್ಸ್‌!

Continue Reading

ಪ್ರಮುಖ ಸುದ್ದಿ

Love Jihad: ಲವ್ ಜಿಹಾದ್ ತಡೆಗೆ ಹೆಲ್ಪ್‌ಲೈನ್‌ ಆರಂಭಿಸಿದ ಶ್ರೀರಾಮಸೇನೆ

Love Jihad: ರಾಜ್ಯದ ಯಾವುದೇ ಹಿಂದು ಯುವತಿಯರಿಗೆ ಅನ್ಯ ಧರ್ಮದವರು ತೊಂದರೆ ನೀಡಿದರೆ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಶ್ರೀರಾಮ್ ಸೇನೆ ತಿಳಿಸಿದೆ.

VISTARANEWS.COM


on

Love Jihad
Koo

ಹುಬ್ಬಳ್ಳಿ: ರಾಜ್ಯದಲ್ಲಿ ಇತ್ತೀಚೆಗೆ ಲವ್ ಜಿಹಾದ್ ಪ್ರಕರಣಗಳು (Love Jihad) ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಿಂದು ಯುವತಿಯರ ರಕ್ಷಣೆಗೆ ಶ್ರೀ ರಾಮಸೇನೆಯಿಂದ ಸಹಾಯವಾಣಿ ಆರಂಭಿಸಲಾಗಿದೆ. ರಾಜ್ಯದ ಯಾವುದೇ ಹಿಂದು ಯುವತಿಯರಿಗೆ ಅನ್ಯ ಧರ್ಮದವರು ತೊಂದರೆ ನೀಡಿದರೆ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಶ್ರೀರಾಮ್ ಸೇನೆ ತಿಳಿಸಿದೆ.

ನಗರದ ಕ್ಯುಬಿಕ್ಸ್‌ ಹೋಟೆಲ್‌ನಲ್ಲಿ ಲವ್ ಜಿಹಾದ್ ಜಾಗೃತಿಗಾಗಿ ಸಹಾಯವಾಣಿಗೆ (9090443444) ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್‌ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ನೇಹಾ ಹಿರೇಮಠ ಕುಟುಂಬಸ್ಥರು, ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಶ್ರೀರಾಮಸೇನೆ ಪದಾಧಿಕಾರಿಗಳು ಭಾಗಿಯಾಗಿದ್ದರು.

ಈ ವೇಳೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಾತನಾಡಿ, ಪ್ರೀತಿ ಪ್ರೇಮದ ಹೆಸರಲ್ಲಿ ಹಿಂದು ಹೆಣ್ಮಕ್ಕಳ ಮತಾಂತರ, ಅತ್ಯಾಚಾರ ನಡೆಯುತ್ತಿದೆ. ಘಜ್ನಿ, ಘೋರಿ, ಟಿಪ್ಪು ಸುಲ್ತಾನ್‌ವರೆಗೂ ಈ ಪ್ರಕ್ರಿಯೆ ಚಾಲನೆಯಲ್ಲಿದೆ. ಹಿಂದು ಯುವತಿಯರಿಗಾಗಿ ನಾವು ಸಹಾಯವಾಣಿ ಉದ್ಘಾಟನೆ ಮಾಡಿದ್ದೇವೆ. ಯಾವುದೇ ಸಮಸ್ಯೆ ಇದ್ದರೂ ನಮಗೆ ತಿಳಿಸಬೇಕು, ನಾವು 24 ಗಂಟೆಯಲ್ಲಿ ಸಮಸ್ಯೆ ಬಗೆಹರಿಸುತ್ತೇವೆ. ಹಿಂದು ಹೆಣ್ಮಕ್ಕಳು ಸಾಯಬೇಡಿ, ನೀವು ಸಾಯಿಸೋ ಯೋಚನೆ ಮಾಡಬೇಕು. ನಾವು ನಿಮಗೆ ಟ್ರೇನಿಂಗ್ ಕೊಡ್ತೀವಿ, ಕ್ರೂರತನಕ್ಕೆ ಅಲ್ಲೆ ಉತ್ತರ ಕೊಡಬೇಕು. ಹಾಡಹಗಲೇ ನೇಹಾ ಕೊಲೆಯಾಗುತ್ತೆ ಅಂದ್ರೆ ಅವರಿಗೆ ಎಷ್ಟು ಟ್ರೈನಿಂಗ್ ‌ಕೊಟ್ಟಿರಬೇಕು ಎಂದು ಕಿಡಿಕಾರಿದರು.

ಕಾಂಗ್ರೆಸ್ ನಾಯಕರೇ ನೀವು ಮುಸ್ಲಿಂ ಮತಗಳಿಗಾಗಿ ಜೊಲ್ಲು ಸುರಿಸಬೇಡಿ. ಮುಸ್ಲಿಂ ಯುವಕರು ನಿಮ್ಮ ಹೆಣ್ಣುಮಕ್ಕಳನ್ನೂ ಬಿಡೋದಿಲ್ಲ. ಸರ್ಕಾರ, ರಾಜಕಾರಣಿಗಳು ಫೇಲ್ ಆಗಿದ್ದಕ್ಕೆ ನಾವು ಇದಕ್ಕೆ ಮುಂದಾಗಿದ್ದೇವೆ. ಹೌದು, ಇದು ನೈತಿಕ ಪೋಲಿಸ್ ಗಿರಿ. ಸರ್ಕಾರ ನೈತಿಕತೆ ಕಳೆದುಕೊಂಡಿದೆ. ಹೀಗಾಗಿ ನಾವು ನೈತಿಕ ಪೊಲೀಸ್ ಗಿರಿ ಆರಂಭಿಸಿದ್ದೇವೆ. ನಾವು ಹಿಂದು ಹೆಣ್ಣುಮಕ್ಕಳಿಗೆ ಬರೀ ತ್ರಿಶೂಲ ಮಾತ್ರ ಅಲ್ಲಾ, ಗನ್, ಲಾಂಗ್ ಮಚ್ಚು ಟ್ರೈನಿಂಗ್ ನೀಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ ಅಧಿಕಾರಕ್ಕೆ ಬಂದ್ರೆ ನಿಮ್ಮ ಖಾತೆಗೆ ಟಕಾಟಕ್ 1 ಲಕ್ಷ ಎಂದಿದ್ದ ರಾಹುಲ್ ಗಾಂಧಿ! ಪೋಸ್ಟ್ ಆಫೀಸ್ ಮುಂದೆ ಮುಸ್ಲಿಂ ಮಹಿಳೆಯರ ನೂಕುನುಗ್ಗಲು!!

ಹುಬ್ಬಳ್ಳಿಯಲ್ಲಿ ಮಾತ್ರವಲ್ಲದೇ ದಾವಣಗೆರೆ, ಕಲಬುರಗಿ, ಬಾಗಲಕೋಟೆ, ಬೆಂಗಳೂರು ಸೇರಿ ವಿವಿಧೆಡೆ ಲವ್‌ ಜಿಹಾದ್‌ ತಡೆಗೆ ಶ್ರೀರಾಮಸೇನಿಯ ಸಹಾಯವಾಣಿಗೆ ಏಕಕಾಲದಲ್ಲಿ ಚಾಲನೆ ನೀಡಲಾಗಿದೆ.

Continue Reading
Advertisement
Bhavani Revanna
ಕರ್ನಾಟಕ4 mins ago

Bhavani Revanna: ಭವಾನಿ ರೇವಣ್ಣ ‘ಜಾಮೀನು’ ತೀರ್ಪು ಕಾಯ್ದಿರಿಸಿದ ಕೋರ್ಟ್;‌ ಮೇ 31 ಅಮ್ಮ-ಮಗನಿಗೆ ಬಿಗ್‌ ಡೇ!

Team India's T20 WC Jersey
ಕ್ರೀಡೆ6 mins ago

Team India’s T20 WC Jersey: ನೂತನ ಜೆರ್ಸಿಯಲ್ಲಿ ಕಂಗೊಳಿಸಿದ ರಿಷಭ್​ ಪಂತ್​; ಅಭಿಮಾನಿಗಳಿಂದಲೂ ಬೆಂಬಲ

Missing Case
ಕರ್ನಾಟಕ20 mins ago

Missing Case: ಚಿಕ್ಕಬಳ್ಳಾಪುರದಲ್ಲಿ ಯುವತಿಯರ ನಾಪತ್ತೆ ಕೇಸ್‌ಗಳು ಹೆಚ್ಚಳ; ಒಂದೇ ವಾರದಲ್ಲಿ ಇಬ್ಬರು ಮಿಸ್ಸಿಂಗ್‌!

Prajwal Revanna Case
ಕರ್ನಾಟಕ27 mins ago

Prajwal Revanna Case: ಭಾರತಕ್ಕೆ ಬರುವ ಮೊದಲೇ ಜಾಮೀನಿಗಾಗಿ ಪ್ರಜ್ವಲ್‌ ಅರ್ಜಿ ಸಲ್ಲಿಕೆ; ಮುಂದೇನಾಗತ್ತೆ?

Virat Kohli
ಕ್ರೀಡೆ44 mins ago

Virat Kohli: ನ್ಯೂಯಾರ್ಕ್‌ನಲ್ಲಿ ಭಾರತ ತಂಡದ ಕಠಿಣ ಅಭ್ಯಾಸ; ಮುಂಬೈನಲ್ಲಿ ಪಾರ್ಟಿ ಮಾಡುತ್ತಾ ಎಂಜಾಯ್​ ಮಾಡುತ್ತಿರುವ ಕೊಹ್ಲಿ

PM Narendra Modi
ದೇಶ57 mins ago

PM Narendra Modi: ಒಡಿಶಾ ಸಿಎಂ ಆರೋಗ್ಯ ಹದಗೆಟ್ಟಿರುವ ಹಿಂದೆ ಇದ್ಯಾ ಭಾರೀ ಸಂಚು? ಏನಂದ್ರು ಪ್ರಧಾನಿ ಮೋದಿ?-ವಿಡಿಯೋ ಇದೆ

Arvind Kejriwal
ದೇಶ58 mins ago

Arvind Kejriwal: ಕಾಂಗ್ರೆಸ್‌ ಜತೆ ನಮ್ಮ ‘ಮದುವೆ’ ಶಾಶ್ವತ ಅಲ್ಲ ಎಂದ ಕೇಜ್ರಿವಾಲ್;‌ ‘ಡಿವೋರ್ಸ್‌’ ಯಾವಾಗ?

Love Jihad
ಪ್ರಮುಖ ಸುದ್ದಿ1 hour ago

Love Jihad: ಲವ್ ಜಿಹಾದ್ ತಡೆಗೆ ಹೆಲ್ಪ್‌ಲೈನ್‌ ಆರಂಭಿಸಿದ ಶ್ರೀರಾಮಸೇನೆ

Karan Bhushan Singh
ದೇಶ1 hour ago

Karan Bhushan Singh: ಬಿಜೆಪಿ ಅಭ್ಯರ್ಥಿಯ ಬೆಂಗಾವಲು ವಾಹನ ಡಿಕ್ಕಿಯಾಗಿ ಇಬ್ಬರ ಸಾವು

mlc election
ರಾಜಕೀಯ1 hour ago

MLC Election: ಒಂದಾದ ಸಿಎಂ- ಡಿಸಿಎಂ, ಪರಂ ಗರಂ; ಅಖಾಡಕ್ಕಿಳಿದ ರಮೇಶ್‌ ಕುಮಾರ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ21 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌