Public Exam 2023 : 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್‌ ಪರೀಕ್ಷೆ; ನಿಮ್ಮ ನಿಮ್ಮ ಶಾಲೆಗಳಲ್ಲಿಯೇ ನಡೆಯಲಿದೆ ಎಕ್ಸಾಮ್‌ - Vistara News

ಪ್ರಮುಖ ಸುದ್ದಿ

Public Exam 2023 : 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್‌ ಪರೀಕ್ಷೆ; ನಿಮ್ಮ ನಿಮ್ಮ ಶಾಲೆಗಳಲ್ಲಿಯೇ ನಡೆಯಲಿದೆ ಎಕ್ಸಾಮ್‌

ಮಾ.13 ರಿಂದ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್‌ ಪರೀಕ್ಷೆ (Public Exam 2023) ನಡೆಯಲಿದ್ದು, ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಬದಲಾಗಿ ಆಯಾ ಶಾಲೆಗಳಲ್ಲಿಯೇ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆಯು ಸೂಚಿಸಿದೆ.

VISTARANEWS.COM


on

sslc preparatory exam 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: 5 ಮತ್ತು 8ನೇ ತರಗತಿಗಳಿಗೆ ಮಾರ್ಚ್‌ 13 ರಿಂದ ನಡೆಯಲಿರುವ ಮೌಲ್ಯಂಕನ ಪರೀಕ್ಷೆ (Public Exam 2023) ಬರೆಯಬೇಕಾಗಿರುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಈ ಪರೀಕ್ಷೆಯನ್ನು ಬರೆಯಲು ನೀವು ಬೇರೆ ಪರೀಕ್ಷಾ ಕೇಂದ್ರಗಳಿಗೆ ಹೋಗಬೇಕಾಗಿಲ್ಲ. ನೀವು ಓದುತ್ತಿರುವ ಶಾಲೆಯಲ್ಲಿಯೇ ಈ ಪರೀಕ್ಷೆಯನ್ನು ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆಯು ಈಗ ಸೂಚಿಸಿದೆ.

ಈ ಪಬ್ಲಿಕ್‌ ಪರೀಕ್ಷೆಯನ್ನು ಕೆಲವೇ ಕೆಲವು ಶಾಲೆಗಳಲ್ಲಿ ನಡೆಸಲು ಮೊದಲು ಸಾರ್ವಜನಿಕ ಶಿಕ್ಷಣ ಇಲಾಖೆಯು ತೀರ್ಮಾನಿಸಿತ್ತು. ಇದಕ್ಕಾಗಿ ಕೆಲವು ಶಾಲೆಗಳನ್ನು ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿತ್ತು. ಈ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹೋಗಿ ಪರೀಕ್ಷೆ ಬರೆಯುವುದು ಕಷ್ಟವಾಗುತ್ತದೆ ಎಂದು ಪೋಷಕರು ದೂರಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಓದುತ್ತಿರುವ ಶಾಲೆಗಳಲ್ಲಿಯೇ ಪರೀಕ್ಷೆ ನಡೆಸುವಂತೆ ಗುರುವಾರ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ.

ʻʻ5 ಮತ್ತು 8 ನೇ ತರಗತಿಯ ಮೌಲ್ಯಾಂಕನಕ್ಕೆ ಶಾಲಾವಾರು ವಿದ್ಯಾರ್ಥಿಗಳ ಸಂಖ್ಯೆಯನ್ನಾಧರಿಸಿ ಪರೀಕ್ಷಾ ಕೇಂದ್ರಗಳನ್ನು ರಚಿಸುವಂತೆ ಹಿಂದೆ ಸೂಚಿಸಲಾಗಿತ್ತು. ಆದರೆ ಈ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಾರಂಭಿಸಲಾಗಿರುವ ಸಹಾಯವಾಣಿಗೆ, ವಿದ್ಯಾರ್ಥಿಗಳಿಗೆ ನಿಗದಿಪಡಿಸಲಾಗಿರುವ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಅನಾನುಕೂಲವಾಗುತ್ತಿರುವ ಬಗ್ಗೆ ಹಲವು ಪೋಷಕರು ದೂರಿದ್ದಾರೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆಯಾ ಶಾಲೆಗಳನ್ನೇ ಪರೀಕ್ಷಾ ಕೇಂದ್ರಗಳಾಗಿ ಪರಿಗಣಿಸಿ ಈಗಾಗಲೇ ನಿಗದಿಪಡಿಸಿರುವ ದಿನಾಂಕಗಳಂದೇ ಮೌಲ್ಯಾಂಕನ ಪರೀಕ್ಷೆ ನಡೆಸುವುದುʼʼ ಎಂದು ಶಿಕ್ಷಣ ಇಲಾಖೆಯು ಆದೇಶದಲ್ಲಿ ಹೇಳಿದೆ.

8ನೇ ತರಗತಿಗೆ ಮಾರ್ಚ್‌ 13 ರಿಂದ 18ರ ವರೆಗೆ ಈ ಪಬ್ಲಿಕ್‌ ಪರೀಕ್ಷೆ ನಡೆಯಲಿದೆ, 5ನೇ ತರಗತಿಗೆ ಮಾರ್ಚ್‌ 15 ರಿಂದ 18ರ ವರೆಗೆ ನಡೆಯಲಿದೆ. ಎಲ್ಲ ಪರೀಕ್ಷೆಗಳು ಮಧ್ಯಾಹ್ನ 2.30 ರಿಂದ ಆರಂಭಗೊಂಡು 4.30ಕ್ಕೆ ಮುಕ್ತಾಯವಾಗಲಿವೆ. ಮೌಖಿಕ ಪರೀಕ್ಷೆಯನ್ನು ಈಗಾಗಲೇ ಶಾಲೆಗಳಲ್ಲಿ ಆರಂಭಿಸಲಾಗಿದೆ. ಪರೀಕ್ಷೆಯ ಪ್ರವೇಶ ಪತ್ರವನ್ನು ಈಗಾಗಲೇ ಶಾಲೆಗಳು ವಿದ್ಯಾರ್ಥಿಗಳಿಗೆ ಒದಗಿಸಿವೆ.

ಪರೀಕ್ಷೆಯ ದಿನದಂದು ಮಧ್ಯಾಹ್ನ 2ಗಂಟೆಯೊಳಗೆ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳು ಹಾಜರಿರಬೇಕು. 2.30 ರ ನಂತರ ಪರೀಕ್ಷಾ ಕೇಂದ್ರಕ್ಕೆ ಹಾಜರಾದರೆ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ. ಪರೀಕ್ಷೆ ಬರೆಯಲು ಅಗತ್ಯವಿರುವ ಲೇಖನ ಸಾಮಗ್ರಿಗಳಾದ ಪೆನ್ನು, ಪೆನ್ಸಿಲ್‌, ಜಿಯೋಮೆಟ್ರಿ ಬಾಕ್ಸ್‌, ರಬ್ಬರ್‌, ಶಾರ್ಪ್‌ನರ್‌ ಇತ್ಯಾದಿಗಳನ್ನು ತರಬೇಕು. ಪರೀಕ್ಷೆಯ ಅವಧಿಯು ಮುಗಿಯವವರೆಗೂ ಪರೀಕ್ಷಾ ಕೊಠಡಿಯಿಂದ ಹೊರ ಹೋಗಲು ಅವಕಾಶವಿರುವುದಿಲ್ಲ ಎಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಮಂಡಳಿಯು ಸೂಚಿಸಿದೆ.

ಪರೀಕ್ಷಾ ಕೊಠಡಿಯೊಳಗೆ ಪರೀಕ್ಷಾ ವಿಷಯಕ್ಕೆ ಸಂಬಂಧಿಸಿದ ಯಾವುದೇ ಪುಸ್ತಕ, ಕೈಬರಹದ ಚೀಟಿ, ವಿದ್ಯುನ್ಮಾನ ಉಪಕರಣಗಳು ಅಥವಾ ಮೊಬೈಲ್‌ ಫೋನ್‌, ಡಿಜಿಟಲ್‌ ಮತ್ತು ಸ್ಮಾರ್ಟ್‌ ಕೈಗಡಿಯಾರಗಳ ಬಳಕೆಯನ್ನು ನಿಷೇಧಿಸಲಾಗಿರುತ್ತದೆ ಎಂದು ಇಲಾಖೆಯು ತಿಳಿಸಿದೆ.

ಹೇಗಿರಲಿದೆ ಪರೀಕ್ಷೆ?

ಲಿಖಿತ ಪರೀಕ್ಷೆಯ ಪ್ರತಿ ವಿಷಯದ ಪ್ರಶ್ನೆ ಪತ್ರಿಕೆಯು 40 ಅಂಕಗಳಿಗೆ ಪ್ರಶ್ನೆಗಳನ್ನು ಒಳಗೊಂಡಿರಲಿದ್ದು, 20 ಅಂಕಗಳಿಗೆ ಎಂ.ಸಿ.ಕ್ಯೂ ಪಶ್ನೆಗಳನ್ನು ( ಒಂದು ಪ್ರಶ್ನೆಗೆ ನಾಲ್ಕು ಉತ್ತರ ನೀಡಲಾಗಿರುತ್ತದೆ. ಇದರಲ್ಲಿ ಸರಿಯಾದ ಉತ್ತರವನ್ನು ವಿದ್ಯಾರ್ಥಿಯು ಗುರುತಿಸಬೇಕಿರುತ್ತದೆ ) ಹಾಗೂ ಉಳಿದ 20 ಅಂಕಗಳಿಗೆ ವಾಕ್ಯ ರೂಪದಲ್ಲಿನ ಬರವಣಿಗೆಯನ್ನಾಧರಿಸಿದ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಉತ್ತರ ಬರೆಯಲು ಎರಡು ಗಂಟೆ ಕಾಲಾವಕಾಶ ನೀಡಲಾಗಿರುತ್ತದೆ. ಮಾದರಿ ಪ್ರಶ್ನೆ ಪತ್ರಿಕೆಯಲ್ಲಿ ಇದನ್ನು ಸ್ಪಷ್ಟವಾಗಿ ತೋರಿಸಲಾಗಿದೆ.

ಮಾದರಿ ಪ್ರಶ್ನೆ ಪತ್ರಿಕೆಯನ್ನು ಡೌನ್‌ಲೋಡ್‌ ಮಾಡಲು ಇಲ್ಲಿ ಕ್ಲಿಕ್‌ (Click Here ) ಮಾಡಿ

ಕನ್ನಡ ಮತ್ತು ಇಂಗ್ಲಿಷ್‌ ಎರಡೂ ಭಾಷೆಯಲ್ಲಿ ಮಾದರಿಯಲ್ಲಿ ಮಾದರಿ ಪ್ರಶ್ನೆ ಪತ್ರಿಕೆಯನ್ನು ರೂಪಿಸಲಾಗಿದ್ದು, ವಿದ್ಯಾರ್ಥಿಗಳು ತಾವು ಓದುವ ಮಾಧ್ಯಮದ ಪತ್ರಿಕೆಯನ್ನು ಡೌನ್‌ಲೋಡ್‌ ಮಾಡಿಕೊಂಡು ಪರೀಕ್ಷೆಗೆ ಸಿದ್ಧತೆ ನಡೆಸಬಹುದಾಗಿದೆ.

ಇದನ್ನೂ ಓದಿ: Karnataka Board Exams 2023 : 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್‌ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ; ಮಾ.13 ರಿಂದ ಎಕ್ಸಾಮ್‌ ಶುರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

HD Deve Gowda: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಶನಿವಾರ ತಮ್ಮ ಹುಟ್ಟುಹಬ್ಬವನ್ನು ದೇವಾಲಯ ಭೇಟಿಯೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಮೊಮ್ಮಗ ನೀಡಿದ ಏಟಿನಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಳ್ಳದ ದೇವೇಗೌಡರು, ದೇವರ ಮುಂದೆ ಈ ಅವಮಾನದಿಂದ ಪಾರು ಮಾಡೆಂದು ಮೌನವಾಗಿ ಪ್ರಾರ್ಥಿಸಿದರು. ಮೋದಿ ಅವರು ಕೂಡ ದೇವೇಗೌಡರಿಗೆ ಶುಭಾಶಯ ತಿಳಿಸಿದರು. ಇದಕ್ಕೆ ಗೌಡರು ಧನ್ಯವಾದ ತಿಳಿಸಿದ್ದಾರೆ.

VISTARANEWS.COM


on

HD Deve Gowda
Koo

ಬೆಂಗಳೂರು: ಮಾಜಿ ಪ್ರಧಾನಿ, ಮಣ್ಣಿನ ಮಗ, ಕರ್ನಾಟಕದ ಹಿರಿಯ ರಾಜಕಾರಣಿ ಎಚ್‌.ಡಿ.ದೇವೇಗೌಡ (HD Deve Gowda) ಅವರು ಶನಿವಾರ (ಮೇ 18) 93ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ದೇವೇಗೌಡರ ಜನ್ಮದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಹಿಡಿದು ನೂರಾರು ನಾಯಕರು ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ಇನ್ನು, ಬರ್ತ್‌ಡೇಗೆ ವಿಶ್‌ ಮಾಡಿದ ಹಿನ್ನೆಲೆಯಲ್ಲಿ ಮೋದಿ ಅವರಿಗೆ ದೇವೇಗೌಡರು ಥ್ಯಾಂಕ್ಸ್‌ ಹೇಳಿದ್ದಾರೆ. ಹಾಗೆಯೇ, “ಮೂರನೇ ಬಾರಿಗೆ ಗೆದ್ದು, ನೀವು ದೇಶವನ್ನು ಮುನ್ನಡೆಸಿ” ಎಂಬುದಾಗಿಯೂ ಗೌಡರು ಆಶೀರ್ವಾದ ಮಾಡಿದ್ದಾರೆ.

“ನನ್ನ ಜನ್ಮದಿನದಂದು ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ನಿಮ್ಮ ಶುಭ ಹಾರೈಕೆಗಳು ನನ್ನ ಮನಸ್ಸನ್ನು ಮತ್ತಷ್ಟು ಉಲ್ಲಾಸಗೊಳಿಸಿವೆ. ನೀವು ಶೀಘ್ರದಲ್ಲೇ ಮೂರನೇ ಬಾರಿಗೆ ದೇಶವನ್ನು ಮುನ್ನಡೆಸುವಂತಾಗಲಿ ಎಂಬುದಾಗಿ ಶುಭ ಕೋರುತ್ತೇನೆ” ಎಂದು ದೇವೇಗೌಡರು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

ಎಚ್‌.ಡಿ. ದೇವೇಗೌಡರ ಹುಟ್ಟುಹಬ್ಬಕ್ಕೆ ಶನಿವಾರ ಬೆಳಗ್ಗೆ ಸೋಷಿಯಲ್‌ ಮೀಡಿಯಾ ಎಕ್ಸ್‌ ನರೇಂದ್ರ ಮೋದಿ ಶುಭಾಶಯ ತಿಳಿಸಿದರು. ದೇಶಕ್ಕೆ ದೇವೇಗೌಡ ಸೇವೆ ಗಣನೀಯವಾಗಿದ್ದು, ರಾಜಕೀಯ ವಲಯದಲ್ಲಿ ಅವರನ್ನು ಗೌರವದಿಂದ ಕಾಣಲಾಗುತ್ತದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಅವರ ಆಸಕ್ತಿ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದರು.

ಹಲಸಿನ ಹಣ್ಣು ಕೊಟ್ಟ ಕಾರ್ಯಕರ್ತ

ಕಟ್ಟಾ ಅಭಿಮಾನಿಯೊಬ್ಬ ದೇವೇಗೌಡರಿಗೆ ಹಲಸಿನ ಹಣ್ಣನ್ನು ಉಡುಗೊರೆಯಾಗಿ ನೀಡಿದ್ದಾನೆ. ಅದನ್ನು ಅಷ್ಟೇ ಪ್ರೀತಿಪೂರ್ವಕವಾಗಿ, ಖುಷಿ ಖುಷಿಯಿಂದ ದೇವೇಗೌಡ ಅವರು ಸ್ವೀಕರಿಸಿದರು. ಅಲ್ಲದೆ, ಆ ಹಲಸಿನ ಹಣ್ಣಿನ ಬಳಿಗೆ ತಮ್ಮ ಮೂಗನ್ನು ಇಟ್ಟು ಅದರ ಪರಿಮಳವನ್ನು ಆಸ್ವಾದಿಸಿದರು. ಕಾರ್ಯಕರ್ತನ ಗಿಫ್ಟ್‌ ಬಗ್ಗೆ ಬಹಳವೇ ಖುಷಿಪಟ್ಟರು.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಶನಿವಾರ ತಮ್ಮ ಹುಟ್ಟುಹಬ್ಬವನ್ನು ದೇವಾಲಯ ಭೇಟಿಯೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಮೊಮ್ಮಗ ನೀಡಿದ ಏಟಿನಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಳ್ಳದ ದೇವೇಗೌಡರು, ದೇವರ ಮುಂದೆ ಈ ಅವಮಾನದಿಂದ ಪಾರು ಮಾಡೆಂದು ಮೌನವಾಗಿ ಪ್ರಾರ್ಥಿಸಿದರು.

ಮೊಮ್ಮಗ ಪ್ರಜ್ವಲ್‌ ಪ್ರಕರಣ ತಂದಿಟ್ಟ ಸಂಕಷ್ಟದಿಂದ ನೊಂದಿರುವ ಗೌಡರು 92 ವರ್ಷದಲ್ಲಿ ಮೊದಲ ಬಾರಿಗೆ ಗಡ್ಡಧಾರಿಯಾಗಿದ್ದರು. ಇಂದು ಮನೆಯಿಂದ ಹೊರಗೆ ಬಂದು ದೇವಾಲಯಕ್ಕೆ ಹೊರಟ ಸಂದರ್ಭದಲ್ಲಿ ಮತ್ತೆ ನೀಟ್‌ ಶೇವ್‌ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಅವರು ಬೆಂಗಳೂರಿನ ಜೆಪಿ ನಗರ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರೆಳಿ ವಿಶೇಷ ಪೂಜೆ ಸಲ್ಲಿಸಿದರು. ಪೂಜೆಯ ಬಳಿಕ ಅವರು ಮತ್ತೆ ಮನೆ ಸೇರಿಕೊಂಡರು.

ಇದನ್ನೂ ಓದಿ: Mallikarjun Kharge: ಬುಲ್ಡೋಜರ್‌ ಹೇಳಿಕೆ ನೀಡಿದ ಮೋದಿ ವಿರುದ್ಧ ಕ್ರಮ ಕೈಗೊಳ್ಳಿ; ಚುನಾವಣಾ ಆಯೋಗಕ್ಕೆ ಖರ್ಗೆ

Continue Reading

ರಾಜಕೀಯ

Prajwal Revanna Case: ದೇವರಾಜೇಗೌಡರಿಗೆ ಮೆಂಟಲ್‌ ಟ್ರೀಟ್ಮೆಂಟ್‌ ಕೊಡಿಸಬೇಕಿದೆ: ಕಾಂಗ್ರೆಸ್‌ ವ್ಯಂಗ್ಯ

Prajwal Revanna Case: ದೇವರಾಜೇಗೌಡರ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ. ದಿನಕ್ಕೊಂದು ಮಾತನಾಡುವ ದೇವರಾಜೇಗೌಡ ಮಹಿಳೆಯರ ಮಾನ ಕಳೆದ ಪ್ರಕರಣವನ್ನು ಬೇರೆಡೆಗೆ ತಿರುಗಿಸಿ, ರಾಜಕೀಕರಣಗೊಳಿಸಿ ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿದ್ದಾರೆ. ಎಸ್‌ಐಟಿ ಅಧಿಕಾರಿಗಳು ದೇವರಾಜೇಗೌಡರಿಗೆ ಮಾನಸಿಕ ಚಿಕಿತ್ಸೆ ಕೊಡಿಸುವುದು ಒಳ್ಳೆಯದು ಎಂದು ಆಕ್ರೋಶವನ್ನು ಹೊರಹಾಕಿದೆ.

VISTARANEWS.COM


on

Prajwal Revanna case Devaraje Gowda should be given mental treatment says Congress
Koo

ಹಾಸನ: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಪರವಾಗಿರಲು ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ತಮಗೆ 100 ಕೋಟಿ ರೂಪಾಯಿ ಆಫರ್‌ ನೀಡಿದ್ದಾರೆ ಎಂಬ ವಕೀಲ ದೇವರಾಜೇಗೌಡ (Devarajegowda) ಆರೋಪಕ್ಕೆ ಕಾಂಗ್ರೆಸ್‌ ಕಿಡಿಕಾರಿದೆ. ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿದ್ದಾರೆ. ಅವರಿಗೆ ಮೆಂಟಲ್‌ ಟ್ರೀಟ್ಮೆಂಟ್‌ ಕೊಡಿಸುವುದು ಒಳ್ಳೆಯದು ಎಂದು ಹೇಳಿದೆ.

ದೇವರಾಜೇಗೌಡ ವಿರುದ್ಧ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ರಾಜ್ಯ ಕಾಂಗ್ರೆಸ್, ದೇವರಾಜೇಗೌಡರ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ. ದಿನಕ್ಕೊಂದು ಮಾತನಾಡುವ ದೇವರಾಜೇಗೌಡ ಮಹಿಳೆಯರ ಮಾನ ಕಳೆದ ಪ್ರಕರಣವನ್ನು ಬೇರೆಡೆಗೆ ತಿರುಗಿಸಿ, ರಾಜಕೀಕರಣಗೊಳಿಸಿ ದಿಕ್ಕು ತಪ್ಪಿಸುವ ಪ್ರಯತ್ನದಲ್ಲಿದ್ದಾರೆ. ಎಸ್‌ಐಟಿ ಅಧಿಕಾರಿಗಳು ದೇವರಾಜೇಗೌಡರಿಗೆ ಮಾನಸಿಕ ಚಿಕಿತ್ಸೆ ಕೊಡಿಸುವುದು ಒಳ್ಳೆಯದು ಎಂದು ಆಕ್ರೋಶವನ್ನು ಹೊರಹಾಕಿದೆ.

ಬ್ರದರ್ ಸ್ವಾಮಿಗಳು ಹೇಳಿಕೊಟ್ಟ ಮಾತನ್ನು ದೇವರಾಜೇಗೌಡ ಆಡಿದ್ದಾರೆ. ಆತನ ಬಾಯಲ್ಲಿ ಬರುವ ಪ್ರತಿ ಮಾತುಗಳಲ್ಲೂ “ದೊಡ್ಡವರ“ ಚಿತಾವಣೆ ಇರುತ್ತದೆ. ಬಾಯಿ ದೇವರಾಜೇಗೌಡನದ್ದು, ಮಾತು ಬ್ರದರ್ ಸ್ವಾಮಿಗಳದ್ದು! ಇದನ್ನು ಸ್ವತಃ ದೇವರಾಜೇಗೌಡ ಒಪ್ಪಿಕೊಂಡಿರುವಾಗ ಅವರ ಮಾತುಗಳಿಗೆ ಗಾಂಭೀರ್ಯತೆಯನ್ನು, ಸತ್ಯವನ್ನು ಹುಡುಕುವುದು ಹಾಸ್ಯಾಸ್ಪದವಾಗುತ್ತದೆ” ಎಂದು ಕಾಂಗ್ರೆಸ್‌ ಕಿಡಿಕಾರಿದೆ.

100 ಕೋಟಿ ರೂ. ಆಫರ್‌ ಮಾಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಲಿ ಎಂದ ಡಿಕೆಶಿ

ಈ ಬಗ್ಗೆ ಮಾಧ್ಯಮದವರಿಗೆ ಶನಿವಾರ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ದೇವರಾಜೇಗೌಡ ಮೆಂಟಲ್ ಕೇಸ್. ಆತ ಏನು ಮಾತನಾಡುತ್ತಾನೋ, ಮಾತನಾಡಲಿ. ಏನು ಮಾಡುತ್ತಾನೋ ಮಾಡಲಿ ಎಂದು ಕಿಡಿಕಾರಿದ್ದಾರೆ. ಅಲ್ಲದೆ, ನಾನು ಆಫರ್ ಮಾಡಿದರೆ ದೇವರಾಜೇಗೌಡ ಲೋಕಾಯುಕ್ತಕ್ಕೆ ಹೋಗಿ ಕಂಪ್ಲೇಂಟ್ ಕೊಡಲಿ ಎಂದು ಸವಾಲು ಹಾಕಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನೀವು ಬುದ್ಧಿವಂತರು, ಜಾಣರಿದ್ದೀರಿ. ಆ ದೇವರಾಜೇಗೌಡನಂಥವರು ಯಾರೋ ಏನೋ ಹೇಳುತ್ತಾರೆಂದರೆ ಅದನ್ನು ಹಾಕಿಬಿಡುವುದಾ? ನಮಗೆ ರೆಪ್ಯುಟೇಷನ್ ಇದೆ. ಏನಾದರೂ ಆಧಾರ ಇದ್ದರೆ ಹಾಕಬೇಕು. ತಲೆ ಕೆಟ್ಟ, ಆಸ್ಪತ್ರೆಗೆ ಸೇರಬೇಕಾದವರ ಬಗ್ಗೆ ಮಾತನಾಡುತ್ತೀರಾ ಎಂದು ಮಾಧ್ಯಮದವರನ್ನು ಪ್ರಶ್ನೆ ಮಾಡಿದರು.

ನಾನು ಆಫರ್ ಮಾಡಿದರೆ ದೇವರಾಜೇಗೌಡ ಅವರು ಲೋಕಾಯುಕ್ತಕ್ಕೆ ಹೋಗಿ ಕಂಪ್ಲೇಂಟ್ ಕೊಡಲಿ. ಎಲ್ಲ ಪೆನ್ ಡ್ರೈವ್ ಬಗ್ಗೆ ಮಾತನಾಡಿದ್ದಾರೆ. ಸಂತ್ರಸ್ತೆಯರ ಬಗ್ಗೆ ಯಾರೂ ಏನೂ ಮಾತನಾಡುತ್ತಿಲ್ಲ ಏಕೆ? ಈ ವಿಚಾರದಲ್ಲಿ ನಾನು ಹೆಚ್ಚು ಏನೂ ಮಾತನಾಡಲ್ಲ ಎಂದು ಡಿ.ಕೆ. ಶಿವಕುಮಾರ್‌ ಗರಂ ಆಗಿಯೇ ಹೇಳಿದರು.

ನನ್ನ ಹೆಸರನ್ನು ಕೆಲವರು ಉಪಯೋಗಿಸಿಕೊಳ್ಳುತ್ತಾರೆ‌. ನೀವು ನನ್ನ ಹೆಸರು ಬಳಸಿಕೊಳ್ಳುತ್ತೀರಾ? ನನ್ನ ಹೆಸರು ಬಳಸಿಕೊಂಡರೆ ನಾನು ಯಾಕೆ ತಲೆ ಕೆಡಿಸಿಕೊಳ್ಳಬೇಕು? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ತಮ್ಮ 93ನೇ ಹುಟ್ಟುಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ಹೋಗಿದ್ದಾರೆ, ಇದು ಬಹಳ ಒಳ್ಳೆಯದು. ಅವರ ಹುಟ್ಟುಹಬ್ಬ, ಸಂತೋಷ ಕೊಡಲಿ, ದುಃಖವನ್ನು ದೂರ ಮಾಡಲಿ. ಆರೋಗ್ಯ ಆಯಸ್ಸನ್ನು ದೇವರು‌ ಕರುಣಿಸಲಿ ಎಂದು ನಮ್ಮ ಸರ್ಕಾರದ ಪರವಾಗಿ ಹಾರೈಸುತ್ತೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಅಲ್ಲೋಲ ಕಲ್ಲೋಲ ಸೃಷ್ಟಿಸಿದ ದೇವರಾಜೇಗೌಡ ಬಾಂಬ್‌

ಹಾಸನ ಜೆಎಂಎಫ್‌ಸಿ ಕೋರ್ಟ್‌ ಹೊರಗೆ ಪೊಲೀಸ್‌ ವ್ಯಾನ್‌ನೊಳಗಿದ್ದ ವಕೀಲ ದೇವರಾಜೇಗೌಡ ಮಾಧ್ಯಮದವರೊಂದಿಗೆ ಮಾತನಾಡಿ, ಎಲ್.ಆರ್. ಶಿವರಾಮೇಗೌಡ ಮೂಲ 100 ಕೋಟಿ ರೂಪಾಯಿ ಆಫರ್ ಮಾಡಿದ್ದರು. ಡಿ.ಕೆ. ಶಿವಕುಮಾರ್ ನೇರವಾಗಿ ನನ್ನ ಜತೆಗೆ ಮಾತನಾಡಿದ್ದಲ್ಲ ಎಂದು ಡಿ.ಕೆ. ಶಿವಕುಮಾರ್‌ ಶುಕ್ರವಾರ ಹೇಳಿದ್ದರು.

ನಾಲ್ಕು ಜನ ಮಂತ್ರಿಗಳ ಕಮಿಟಿ ಎಂದು ನಾನು ಹೇಳಿದ್ದೆನಲ್ಲವೇ? ಅವರ ಬಗ್ಗೆ ಹೇಳುತ್ತೇನೆ. ಎನ್‌. ಚಲುವರಾಯಸ್ವಾಮಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ ಹಾಗೂ ಇನ್ನೊಬ್ಬ ಸಚಿವರನ್ನು ಈ ಪ್ರಕರಣವನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದಾರೆ. ಈಗ ನನ್ನ ಮೇಲೆ ನಿರಂತರವಾಗಿ ಒತ್ತಡ ಹಾಕುತ್ತಿದ್ದಾರೆ. ಆದರೆ, ಅದ್ಯಾವುದಕ್ಕೂ ನಾನು ಒಪ್ಪಲಿಲ್ಲ ಎಂದು ದೇವರಾಜೇಗೌಡ ಹೇಳಿದ್ದರು.

ಇಷ್ಟೆಲ್ಲ ದೊಡ್ಡ ಹಗರಣವಾಗಿರುವುದರಿಂದ ಇದರ ಮೂಲಕ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರಲು ಹೋಗಿದ್ದರು. ನಮಗೆ ಸುಮಾರು 100 ಕೋಟಿ ರೂಪಾಯಿ ಆಫರ್ ಕೊಟ್ಟಿದ್ದರು. ಅದರಲ್ಲಿ 5 ಕೋಟಿ ರೂಪಾಯಿ ಅಡ್ವಾನ್ಸ್ ಅನ್ನು ಬೋರಿಂಗ್ ಕ್ಲಬ್‌ನ ರೂಂ ನಂಬರ್ 110ಕ್ಕೆ ಕಳಿಸಿದ್ದರು. ಆ ಮೀಟಿಂಗ್‌ಗೆ ಚನ್ನರಾಯಪಟ್ಟಣದ ಎಂ.ಎ. ಗೋಪಾಲಸ್ವಾಮಿಯನ್ನು ಕಳಿಸಿದ್ದರು. ಐದು ಕೋಟಿ ರೂಪಾಯಿ ಕ್ಯಾಶ್‌ ಅನ್ನೂ ಕೊಟ್ಟು ಕಳಿಸಿದ್ದರು. ಈ 100 ಕೋಟಿ ರೂಪಾಯಿ ಆಫರ್ ಮಾಡಿದ್ದು ಡಿ.ಕೆ. ಶಿವಕುಮಾರ್ ಎಂದು ದೇವರಾಜೇಗೌಡ ಆರೋಪಿಸಿದ್ದರು.

ಒಪ್ಪದೇ ಇದ್ದಾಗ ಅಟ್ರಾಸಿಟಿ ಕೇಸ್

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳಂಕ ತರಬೇಕು. ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವವನ್ನು ಹಾಳು ಮಾಡಬೇಕು ಎಂಬ ಕಾರಣಕ್ಕೆ ನನ್ನನ್ನು ಬಳಸಿಕೊಳ್ಳಲು ನೋಡಿದರು. ಅದಕ್ಕೆ ನಾನು ಒಪ್ಪದೇ ಇದ್ದಾಗ ಮೊದಲಿಗೆ ಅಟ್ರಾಸಿಟಿ ಕೇಸ್ ದಾಖಲು ಮಾಡಿದರು. ಅದರಲ್ಲಿ ಡಾಕ್ಯುಮೆಂಟ್ ಸಿಗಲಿಲ್ಲ ಎಂದು ದೇವರಾಜೇಗೌಡ ಹೇಳಿದ್ದರು.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌; ರೇವಣ್ಣ ವಿರುದ್ಧ ಸಂತ್ರಸ್ತೆ ಹೇಳಿಕೆಯಲ್ಲಿ ಭಾರಿ ಗೊಂದಲ!

ನನ್ನ ಮೇಲೆ ಸುಳ್ಳು ಕೇಸ್‌

ನನ್ನ ಮೇಲೆ ಹಾಕಲಾದ ಅಟ್ರಾಸಿಟಿ ಕೇಸ್‌ನಲ್ಲಿ ಯಾವುದೇ ಪ್ರಯೋಜನ ಆಗಿಲ್ಲವೆಂದು ಮತ್ತೊಬ್ಬಳ ಕೈಯಲ್ಲಿ 354a ಕೇಸ್ ಹಾಕಿಸಿದರು. ಅದೂ ವಿಫಲವಾದ ಮೇಲೆ ರೇಪ್ ಕೇಸ್ ಹಾಕಿಸಿದರು. ಈ ಅತ್ಯಾಚಾರ ಪ್ರಕರಣದಲ್ಲಿಯೂ ಅವರಿಗೆ ಯಾವುದೇ ದಾಖಲೆಗಳು ಸಿಗಲಿಲ್ಲ. ನಾಲ್ಕು ದಿನಗಳ ಕಾಲ ನಿರಂತರವಾಗಿ ವಿಚಾರಣೆ ನಡೆಸಿದ್ದಾರೆ. ಪೆನ್‌ಡ್ರೈವ್‌ ಸಿಕ್ಕಿದ್ದನ್ನು ಕೋರ್ಟ್‌ನಲ್ಲಿ ಸೀಜ್‌ ಮಾಡಿದ್ದಾರೆ ಎಂದು ದೇವರಾಜೇಗೌಡ ಆರೋಪ ಮಾಡಿದ್ದರು.

Continue Reading

ದೇಶ

ಪತ್ನಿಯ ಶೀಲ ಶಂಕಿಸಿ, ಆಕೆಯ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕಿದ ದುಷ್ಟ; ಏನು ಮಾಡಬೇಕು ಇಂಥವರಿಗೆ?

ಗುಪ್ತಾಂಗಕ್ಕೆ ಮೊಳೆ ಹೊಡೆದು, ಬೀಗ ಜಡಿದ ಪರಿಣಾಮ ಮಹಿಳೆಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮಾರಣಾಂತಿಕವಾಗಿ ಹಲ್ಲೆ ನಡೆಸಿದವನನ್ನು ನೇಪಾಳದ ಮೂಲದ, ಸದ್ಯ ಪಿಂಪ್ರಿ-ಚಿಂಚ್ವಾಡ್‌ನ ವಾಕಡ್‌ನಲ್ಲಿ ನೆಲೆಸಿದ ಉಪೇಂದ್ರ ಹುಡಕೆ (30) ಎಂಬುದಾಗಿ ಗುರುತಿಸಲಾಗಿದೆ.

VISTARANEWS.COM


on

Woman
Koo

ಮುಂಬೈ: ಗಂಡ-ಹೆಂಡತಿ, ಪ್ರಿಯತಮ-ಪ್ರಿಯತಮೆ ಸೇರಿ ಯಾವುದೇ ಸಂಬಂಧದಲ್ಲಿ ಅನುಮಾನ ಎಂಬ ಪೀಡೆ ಹೊಕ್ಕರೆ ಅಲ್ಲಿಗೆ ಮುಗಿಯಿತು ಕತೆ. ಒಂದೋ ಆ ಸಂಬಂಧದಲ್ಲಿ ಬಿರುಕು ಮೂಡುತ್ತದೆ, ಇಲ್ಲವೇ ಪರಸ್ಪರ ಹಿಂಸೆಗೆ ದಾರಿ ಮಾಡುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದ (Maharashtra) ಪುಣೆಯಲ್ಲಿ (Pune) ವ್ಯಕ್ತಿಯೊಬ್ಬ ತನ್ನ ಪತಿಯ ಶೀಲ ಶಂಕಿಸಿ, ಆಕೆ ಗುಪ್ತಾಂಗಕ್ಕೆ ಮೊಳೆ ಜಡಿದು, ಬೀಗ ಹಾಕುವ ಮೂಲಕ ರಕ್ಕಸ ಕೃತ್ಯ ಎಸಗಿದ್ದಾನೆ.

ಪುಣೆಯ ವಾಕಡ್‌ ಪ್ರದೇಶದಲ್ಲಿ ಮೇ 11ರಂದು ಪತಿಯು ಮೃಗದಂತೆ ವರ್ತಿಸಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯು ದೂರು ದಾಖಲಿಸಿದ ಬಳಿಕ ಪೊಲೀಸರು ದುಷ್ಟನನ್ನು ಬಂಧಿಸಿದ್ದಾರೆ. ಗುಪ್ತಾಂಗಕ್ಕೆ ಮೊಳೆ ಹೊಡೆದು, ಬೀಗ ಜಡಿದ ಪರಿಣಾಮ ಮಹಿಳೆಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಮಾರಣಾಂತಿಕವಾಗಿ ಹಲ್ಲೆ ನಡೆಸಿದವನನ್ನು ನೇಪಾಳದ ಮೂಲದ, ಸದ್ಯ ಪಿಂಪ್ರಿ-ಚಿಂಚ್ವಾಡ್‌ನ ವಾಕಡ್‌ನಲ್ಲಿ ನೆಲೆಸಿದ ಉಪೇಂದ್ರ ಹುಡಕೆ (30) ಎಂಬುದಾಗಿ ಗುರುತಿಸಲಾಗಿದೆ.

Physical Abuse

ಪ್ರಕರಣದ ಕುರಿತು ತನಿಖಾಧಿಕಾರಿ ಬಾಲಾಜಿ ಮೆತೆ ಅವರು ಮಾಹಿತಿ ನೀಡಿದ್ದಾರೆ. “ಗಂಡ ಹಾಗೂ ಹೆಂಡತಿ ನೇಪಾಳದವರು. ಉದ್ಯೋಗ ಅರಸಿ ಅವರು ಮೇ ತಿಂಗಳ ಮೊದಲ ವಾರದಲ್ಲಿ ವಾಕಡ್‌ಗೆ ಬಂದು ನೆಲೆಸಿದ್ದರು. ಮೇ 11ರಂದು ಪಾನಮತ್ತನಾಗಿ ಬಂದ ವ್ಯಕ್ತಿಯು ಪತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಆಕೆಯ ಶೀಲ ಶಂಕಿಸಿದ ಆತನು ಒದ್ದು, ಆಕೆಯ ಕೈಕಾಲು ಕಟ್ಟಿ, ಗುಪ್ತಾಂಗಕ್ಕೆ ಮೊಳೆ ಜಡಿದು, ಚಾಕುವಿನಿಂದ ಹಲ್ಲೆ ನಡೆಸಿ, ಬೀಗ ಹಾಕಿದ್ದಾನೆ. ಮಹಿಳೆಯು ಅಂಗಲಾಚಿದರೂ ಆತನು ಬಿಟ್ಟಿಲ್ಲ” ಎಂದು ತಿಳಿಸಿದ್ದಾರೆ.

ಮಹಿಳೆ ಅರಚುವ ಧ್ವನಿ ಕೇಳಿ ಪಕ್ಕದ ಮನೆಯ ಲಲಿತ್‌ ಪರಿಹಾರ್‌ ಎಂಬುವರು ಮನೆಗೆ ತೆರಳಿ ನೋಡಿದಾಗ, ಮಹಿಳೆಯು ರಕ್ತದ ಮಧ್ಯೆ ಬಿದ್ದಿರುವುದು ಕಂಡಿದೆ. ಕೂಡಲೇ ಅವರು ಸುತ್ತಮುತ್ತಲಿವರನ್ನು ಕರೆದ ಅವರು ಮಹಿಳೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಜ್ಞೆ ಕಳೆದುಕೊಂಡಿದ್ದ ಮಹಿಳೆಗೆ ಆಸ್ಪತ್ರೆಯಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಇದಾದ ಬಳಿಕ ಅವರು ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Murder Case : ಶೀಲ ಶಂಕಿಸಿ ಪತ್ನಿಯ ಕುತ್ತಿಗೆ ಹಿಸುಕಿ ಕೊಂದ ಸಂಶಯ ಪಿಶಾಚಿ ಗಂಡ

Continue Reading

ದೇಶ

ಉತ್ತರ ಪ್ರದೇಶದ ಮಹಿಳೆ ಮೇಲೆ ಕರ್ನಾಟಕದ ವ್ಯಕ್ತಿ ಅತ್ಯಾಚಾರ; ಆಕೆಯ ಮತಾಂತರಕ್ಕೂ ಯತ್ನ!

ಬಹ್ರೇನ್‌ನಲ್ಲಿ ಸೈಫುದ್ದೀನ್‌ ಎಂಬಾತ ನನ್ನ ಮೇಲೆ ಅತ್ಯಾಚಾರ ಎಸಗಿದ. ಅತ್ಯಾಚಾರದ ಬಳಿಕ ನಾನು ಗರ್ಭಿಣಿಯಾದೆ. ಗರ್ಭಪಾತ ಮಾಡಿಸಿಕೊ ಎಂದು ಪೀಡಿಸುವ ಜತೆಗೆ ಇಸ್ಲಾಂಗೆ ಮತಾಂತರವಾಗು ಎಂಬುದಾಗಿಯೂ ಒತ್ತಾಯ ಮಾಡಿದ. ಕೊನೆಗೆ ಆತನ ಕಿರುಕುಳ ತಾಳದೆ ಉತ್ತರ ಪ್ರದೇಶಕ್ಕೆ ಆಗಮಿಸಿದೆ ಎಂದು ಉತ್ತರ ಪ್ರದೇಶದ ಮಹಿಳೆ ದೂರಿದ್ದಾರೆ.

VISTARANEWS.COM


on

Woman
Koo

ಲಖನೌ: ಕರ್ನಾಟಕದ (Karnataka) ವ್ಯಕ್ತಿಯೊಬ್ಬ ಉತ್ತರ ಪ್ರದೇಶದ (Uttar Pradesh) ಮಹಿಳೆ ಮೇಲೆ ಬಹ್ರೇನ್‌ನಲ್ಲಿ ಅತ್ಯಾಚಾರ ಎಸಗಿ, ಆಕೆಯನ್ನು ಇಸ್ಲಾಂಗೆ ಮತಾಂತರಗೊಳಿಸಲು ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಬಹ್ರೇನ್‌ನಿಂದ (Bahrain) ಉತ್ತರ ಪ್ರದೇಶದ ಲಖನೌಗೆ ಆಗಮಿಸಿದ ಮಹಿಳೆಯು ವ್ಯಕ್ತಿಯ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

“ಬಹ್ರೇನ್‌ನಲ್ಲಿ ಸೈಫುದ್ದೀನ್‌ ಎಂಬಾತ ನನ್ನ ಮೇಲೆ ಅತ್ಯಾಚಾರ ಎಸಗಿದ. ಅತ್ಯಾಚಾರದ ಬಳಿಕ ನಾನು ಗರ್ಭಿಣಿಯಾದೆ. ಗರ್ಭಪಾತ ಮಾಡಿಸಿಕೊ ಎಂದು ಪೀಡಿಸುವ ಜತೆಗೆ ಇಸ್ಲಾಂಗೆ ಮತಾಂತರವಾಗು ಎಂಬುದಾಗಿಯೂ ಒತ್ತಾಯ ಮಾಡಿದ. ಕೊನೆಗೆ ಆತನ ಕಿರುಕುಳ ತಾಳದೆ ಉತ್ತರ ಪ್ರದೇಶಕ್ಕೆ ಆಗಮಿಸಿದೆ” ಎಂಬುದಾಗಿ ಮಹಿಳೆಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸೈಫುದ್ದೀನ್‌, ಕರ್ನಾಟಕದ ಬೀದರ್‌ ಜಿಲ್ಲೆಯವನಾಗಿದ್ದು, ಬಹ್ರೇನ್‌ನಲ್ಲಿ ವಾಸಿಸುತ್ತಿದ್ದಾನೆ. ಈತನಿಗೆ ಈಗಾಗಲೇ ಹುಡುಗಿ ನಿಶ್ಚಯವಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.

Uttar Pradesh Police

ಬಹ್ರೇನ್‌ನಲ್ಲಿ ಮಹಿಳೆಯು ಕಳೆದ 7 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಬಹ್ರೇನ್‌ನಲ್ಲಿದ್ದಾಗ ಕರ್ನಾಟಕ ಮೂಲದ ಸೈಫುದ್ದೀನ್‌ನನ್ನು ಮಹಿಳೆ ಪರಿಚಯ ಮಾಡಿಕೊಂಡಿದ್ದಾರೆ. ಪರಿಚಯದ ಸಲುಗೆಯನ್ನು ದುರುಪಯೋಗಪಡಿಸಿಕೊಂಡ ವ್ಯಕ್ತಿಯು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇದಾದ ಬಳಿಕ ಮಹಿಳೆಯು ಐದು ತಿಂಗಳ ಗರ್ಭಿಣಿ ಎಂಬುದನ್ನು ತಿಳಿದು, ಗರ್ಭಪಾತ ಮಾಡಿಸಿಕೊ ಎಂಬುದಾಗಿ ಕಿರುಕುಳ ನೀಡಿದ್ದಾನೆ. ಇಸ್ಲಾಂ ಧರ್ಮಕ್ಕೂ ಮತಾಂತರವಾಗು ಎಂದು ಪೀಡಿಸಿದ್ದಾನೆ ಎಂಬುದಾಗಿ ಮಹಿಳೆ ಆರೋಪಿಸಿದ್ದಾರೆ.

“ನನ್ನ ಮೇಲೆ ಅತ್ಯಾಚಾರ ಎಸಗಿದ ಸೈಫುದ್ದೀನ್‌ ವಿರುದ್ಧ ಬಹ್ರೇನ್‌ನಲ್ಲಿಯೇ ಕೇಸ್‌ ದಾಖಲಿಸಿದ್ದೇನೆ. ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಾನು ನೀಡಿದ ದೂರು ಹಿಂಪಡೆಯುವಂತೆ ಸೈಫುದ್ದೀನ್‌ ಕುಟುಂಬಸ್ಥರು ಕಿರುಕುಳ ನೀಡಿದರು. ನಾನು ಐದು ತಿಂಗಳ ಗರ್ಭಿಣಿಯಾಗಿದ್ದಾಗ ಮೋಸ ಮಾಡಿದರು. ನಾನು 2024ರ ಫೆಬ್ರವರಿ 13ರಂದು ಮದುವೆಯಾದ. ಇಸ್ಲಾಂ ಕಾನೂನಿನಂತೆ ಮದುವೆ ಮಾಡಲಾಯಿತು. ಇದಾದ ಬಳಿಕ ನನ್ನನ್ನು ಮತಾಂತರ ಮಾಡಲು ಯತ್ನಿಸಿದರು. ಅಲ್ಲದೆ, ವೈದ್ಯರ ಬಳಿ ತಪಾಸಣೆ ಮಾಡಿಸಿಕೊ ಎಂಬುದಾಗಿ ಮುಂಬೈಗೆ ಕಳುಹಿಸಿದರು. ಆದರೆ, ವೈದ್ಯರು ನನಗೆ ಗೊತ್ತಿಲ್ಲದೆ ಗರ್ಭಪಾತ ಮಾಡಿದರು” ಎಂಬುದಾಗಿ ಮಹಿಳೆ ಹೇಳಿದ್ದಾರೆ ಎಂದು ಟೈಮ್ಸ್‌ ಆಫ್‌ ಇಂಡಿಯಾ ವರದಿ ಮಾಡಿದೆ.

ಇದನ್ನೂ ಓದಿ: Zakir Naik: ಹಿಂದುಗಳನ್ನು ಮತಾಂತರಗೊಳಿಸುವ ಜಾಕೀರ್ ನಾಯ್ಕ್‌ನನ್ನು ಭಾರತದ ಚಕ್ರವರ್ತಿಯನ್ನಾಗಿಸಬೇಕು; ವಿವಾದ ಹುಟ್ಟುಹಾಕಿದ ಮೌಲ್ವಿ

Continue Reading
Advertisement
HD Deve Gowda
ಕರ್ನಾಟಕ1 min ago

ಮೋದಿಯವರೇ, 3ನೇ ಬಾರಿ ಪ್ರಧಾನಿಯಾಗಿ ದೇಶ ಮುನ್ನಡೆಸಿ; ಜನುಮ ದಿನದ ಶುಭಾಶಯ ಕೋರಿದ ಪ್ರಧಾನಿಗೆ ದೇವೇಗೌಡರ ಕೃತಜ್ಞತೆ

Viral Video
ದೇಶ4 mins ago

Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

Prajwal Revanna Case obscene video goes viral Advocate Devarajegowda SIT custody extended by 2 days
ಹಾಸನ4 mins ago

Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿ ಅವಧಿ 2 ವಿಸ್ತರಣೆ

RCB vs CSK:
ಕ್ರೀಡೆ11 mins ago

RCB vs CSK: ಗೆದ್ದರೂ ಆರ್​ಸಿಬಿಗೆ ಪ್ಲೇ ಆಫ್​ ಖಚಿತವಲ್ಲ; ಹೀಗಿದೆ ರನ್​ರೇಟ್​ ಲೆಕ್ಕಾಚಾರ!

Karnataka Weather Forecast Rain alert
ಮಳೆ17 mins ago

Karnataka Weather : ಮಲೆನಾಡಿನಲ್ಲಿ ಮಳೆ ಮೋಡಿ; ಭಾನುವಾರವೂ ಅಬ್ಬರ ಇರಲಿದೆ ನೋಡಿ

Koppal tragedy
ಕೊಪ್ಪಳ51 mins ago

Koppal Tragedy : ಶೌಚಾಲಯದ ಗೋಡೆ ಕುಸಿದು ಮಹಿಳೆಯರಿಬ್ಬರು ಸಾವು; ಈಜಲು ಹೋದ ಯುವಕ ನೀರುಪಾಲು

Prajwal Revanna case Devaraje Gowda should be given mental treatment says Congress
ರಾಜಕೀಯ57 mins ago

Prajwal Revanna Case: ದೇವರಾಜೇಗೌಡರಿಗೆ ಮೆಂಟಲ್‌ ಟ್ರೀಟ್ಮೆಂಟ್‌ ಕೊಡಿಸಬೇಕಿದೆ: ಕಾಂಗ್ರೆಸ್‌ ವ್ಯಂಗ್ಯ

Health Tips in Kannada tomato juice is good for health
ಆರೋಗ್ಯ1 hour ago

Health Tips in Kannada: ಟೊಮ್ಯಾಟೊ ಜ್ಯೂಸ್‌ ಆರೋಗ್ಯಕ್ಕೇಕೆ ಒಳ್ಳೆಯದು ಗೊತ್ತೆ?

T20 World Cup 2024
ಕ್ರೀಡೆ1 hour ago

T20 World Cup 2024: ಪಾಕ್​ ಉಗ್ರರ ಭೀತಿ; ಬಿಗಿ ಭದ್ರತೆ ಕೈಗೊಂಡ ವಿಂಡೀಸ್​ ಕ್ರಿಕೆಟ್​ ಮಂಡಳಿ

Cannes 2024 Indian influencer who stitched a 20 kg dress
ಬಾಲಿವುಡ್1 hour ago

Cannes 2024: 20 ಕೆಜಿ ತೂಕದ ಗೌನ್ ಧರಿಸಿ ಬೆರಗುಗೊಳಿಸಿದ ನ್ಯಾನ್ಸಿ ತ್ಯಾಗಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ22 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌