Actress Sreeleela: ಬಾಲಯ್ಯ ಜತೆ ತೆರೆ ಹಂಚಿಕೊಳ್ಳುತ್ತಿರುವ ಕನ್ನಡತಿ ಶ್ರೀಲೀಲಾ - Vistara News

ಟಾಲಿವುಡ್

Actress Sreeleela: ಬಾಲಯ್ಯ ಜತೆ ತೆರೆ ಹಂಚಿಕೊಳ್ಳುತ್ತಿರುವ ಕನ್ನಡತಿ ಶ್ರೀಲೀಲಾ

ಬಾಲಕೃಷ್ಣ ಅವರ ಹಿಂದಿನ ಎರಡು ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದ ಎಸ್ ಥಮನ್ ಈ ಚಿತ್ರಕ್ಕೂ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಶೈನ್ ಸ್ಕ್ರೀನ್‌ನ ಸಾಹು ಗರಪತಿ ಮತ್ತು ಹರೀಶ್ ಪೆದ್ದಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶ್ರೀಲೀಲಾ (Actress Sreeleela) ಸೆಟ್‌ನಲ್ಲಿರುವ ಫೋಟೊ ವೈರಲ್‌ ಆಗಿದೆ.

VISTARANEWS.COM


on

Actress Sreeleela joins the sets of NBK108
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅನಿಲ್ ರವಿಪುಡಿ ನಿರ್ದೇಶನದ ಹೊಸ ಚಿತ್ರದಲ್ಲಿ ನಂದಮೂರಿ ಬಾಲಕೃಷ್ಣ (Nandamuri Balakrishna) ಮತ್ತು ನಟಿ ಶ್ರೀಲೀಲಾ (Actress Sreeleela) ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ʻಎನ್‌ಬಿಕೆ 108ʼ (NBK108)ಎಂಬ ಹೆಸರಿಡದ ಚಿತ್ರ ಹೈದರಾಬಾದ್‌ನಲ್ಲಿ ಚಿತ್ರೀಕರಣ ನಡೆಯುತ್ತಿದೆ. 21 ವರ್ಷದ ಶ್ರೀಲೀಲಾ ಈ ಚಿತ್ರದಲ್ಲಿ ನಂದಮೂರಿ ಬಾಲಕೃಷ್ಣ ಅವರ ಮಗಳಾಗಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ಶ್ರೀಲೀಲಾ ಸೆಟ್‌ನಲ್ಲಿರುವ ಫೋಟೊ ವೈರಲ್‌ ಆಗಿದೆ. ಶ್ರೀಲೀಲಾ ಥಂಬ್ಸ್ ಅಪ್ ನೀಡುವ ಫೋಟೊವನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಬಾಲಕೃಷ್ಣ ಅವರ ಕೈ ಹಿಡಿದಿರುವ ದೃಶ್ಯವೂ ಇದೆ.

ಬಾಲಕೃಷ್ಣ ಅವರ ಹಿಂದಿನ ಎರಡು ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದ ಎಸ್ ಥಮನ್ ಈ ಚಿತ್ರಕ್ಕೂ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಶೈನ್ ಸ್ಕ್ರೀನ್‌ನ ಸಾಹು ಗರಪತಿ ಮತ್ತು ಹರೀಶ್ ಪೆದ್ದಿ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶ್ರೀಲೀಲಾ ಅವರನ್ನು ತೆಲುಗು ಚಿತ್ರರಂಗದ ಪ್ರತಿಭಾವಂತ ಯುವ ನಟಿಯರಲ್ಲಿ ಒಬ್ಬರು. 2021 ರಲ್ಲಿ ಗೌರಿ ರೋಣಂಕಿ ನಿರ್ದೇಶನದ “ಪೆಲ್ಲಿ ಸಂಡಾಡ್” (Pelli SandaD) ಸಿನಿಮಾ ಮೂಲಕ ಟಾಲಿವುಡ್‌ಗೆ ಪದಾರ್ಪಣೆ ಮಾಡಿದರು. 2022ರಲ್ಲಿ ಬಿಡುಗಡೆಯಾದ ನಟ ರವಿತೇಜ ಅವರ ಎರಡನೇ ಚಿತ್ರ “ಧಮಾಕಾ” (Dhamaka) ದೊಂದಿಗೆ ಶ್ರೀಲೀಲಾ ಜನಪ್ರಿಯತೆಯನ್ನು ಗಳಿಸಿದರು. ಚಿತ್ರದಲ್ಲಿನ ಅವರ ಅಭಿನಯವು ವ್ಯಾಪಕವಾಗಿ ಮೆಚ್ಚುಗೆ ಗಳಿಸಿತು.

ಇದನ್ನೂ ಓದಿ: Nandamuri Balakrishna | ಅದ್ಧೂರಿಯಾಗಿ ಸೆಟ್ಟೇರಿದೆ ನಂದಮೂರಿ ಬಾಲಕೃಷ್ಣ 108ನೇ ಚಿತ್ರ: ಶ್ರೀಲೀಲಾ ನಾಯಕಿ!

NBK108 ಸೆಟ್‌ನಲ್ಲಿ ಶ್ರೀಲೀಲಾ

‘ಎನ್‌ಬಿಕೆ 108’ ಚಿತ್ರದಲ್ಲಿ ಕಾಜಲ್ ಅಗರ್ವಾಲ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಬಾಲಯ್ಯ ಹಿಂದೆಂದೂ ಕಾಣದ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತ್ರಿಶಾ ಕೃಷ್ಣನ್, ಅರ್ಜುನ್ ರಾಂಪಾಲ್, ಕೌಶಿಕ್ ಮಹಾತಾ, ಆರ್. ಶರತ್‌ಕುಮಾರ್, ಪ್ರಿಯಾಂಕಾ ಜವಾಲ್ಕರ್ ಮತ್ತು ಶ್ರೀರಾಮ್ ರೆಡ್ಡಿ ಪೊಲಾಸನೆ ಸೇರಿದಂತೆ ಬಹುತಾರಾಗಣ ಚಿತ್ರತಂಡ ಹೊಂದಿದೆ. ಹರೀಶ್ ಕಣ್ಣನ್ ಮತ್ತು ಸಿ. ರಾಮ್ ಪ್ರಸಾದ್ ಅವರ ಛಾಯಾಗ್ರಾಹಣ, ತಮ್ಮಿರಾಜು ಸಂಕಲನ ಚಿತ್ರಕ್ಕಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಸಿನಿಮಾ

Rishab Shetty And NTR: ತಾಯಿ ಜತೆಗೆ ಉಡುಪಿ ಶ್ರೀಕೃಷ್ಣನಿಗೆ ನಮಿಸಿದ ತೆಲುಗು ನಟ ಜ್ಯೂ.ಎನ್‌ಟಿಆರ್‌; ಜತೆಯಾದ ಡಿವೈನ್‌ ಸ್ಟಾರ್‌ ರಿಷಬ್‌

Rishab Shetty And NTR: ಮಂಗಳೂರು ಏರ್‌ಪೋರ್ಟ್‌ನಲ್ಲಿ ಕುಂದಾಪುರ ಬಾಯ್ಸ್ ದರ್ಶನ ಕೊಟ್ಟಿದ್ದಾರೆ. ಮಂಗಳೂರು ಏರ್‌ಪೋರ್ಟ್‌ನಲ್ಲಿ ರಿಷಬ್ ಶೆಟ್ಟಿ ಮತ್ತು ಜೂ. ಎನ್.ಟಿ.ಆರ್ ಭೇಟಿಯಾದರು. ಇದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ.

VISTARANEWS.COM


on

Rishab Shetty And NTR
Koo

Rishab Shetty And NTR: ಇಂದು (ಆಗಸ್ಟ್‌ 31) ಕುಟುಂಬ ಸಮೇತರಾಗಿ ಉಡುಪಿಯ ಶ್ರೀಕೃಷ್ಣ ಮಠಕ್ಕೆ ರಿಷಬ್ ಶೆಟ್ಟಿ ಮತ್ತು ಜ್ಯೂ. ಎನ್‌ಟಿಆರ್ (Rishab Shetty And NTR) ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.

Rishab Shetty And NTR with family

ಶ್ರಾವಣ ಮಾಸದ ಶನಿವಾರದಂದು ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದ ಸ್ಟಾರ್ ನಟರು ದೇವರ ದರ್ಶನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದರು.

NTR and Rishab Shetty

ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ಮೊದಲು ರಿಷಬ್ ಶೆಟ್ಟಿ ಮತ್ತು ಜೂ. ಎನ್.ಟಿ.ಆರ್ ಮಂಗಳೂರು ಏರ್‌ಪೋರ್ಟ್‌ನಲ್ಲಿ ಭೇಟಿಯಾಗಿದ್ದರು ಮತ್ತು ಡಿವೈನ್ ಸ್ಟಾರ್, ಟೈಗರ್‌ನನ್ನು ಸ್ವಾಗತಿಸಿದ್ದರು.

ಸೆ.2ರಂದು ನನ್ನ ತಾಯಿ ಹುಟ್ಟುಹಬ್ಬ ಇದೆ. ಅವರ ತವರು ಕುಂದಾಪುರಕ್ಕೆ ಬರಬೇಕೆಂಬ ಮಹಾದಾಸೆ ಇತ್ತು. ಮಗನಾಗಿ ಅವರ ಸಣ್ಣ ಆಸೆಯನ್ನು ಈಡೇರಿಸುವುದೇ ನನ್ನ ಭಾಗ್ಯ. ಅವರ ಹುಟ್ಟುಹಬ್ಬಕ್ಕೆ ಇದೇ ದೊಡ್ಡ ಗಿಫ್ಟ್‌. ಅಮ್ಮನನ್ನು ಕರೆದುಕೊಂಡು ಬಂದಿದ್ದು ಖುಷಿ ಆಯಿತು. ಜತೆಗೆ ಆಸೆ ಈಡೇರಿಸಿ ಎಂಬ ನೆಮ್ಮದಿ ಇದೆ ಎಂದು ಟಾಲಿವುಡ್‌ ನಟ ಜ್ಯೂ.ಎನ್‌ಟಿಆರ್‌ ತಿಳಿಸಿದರು.

Rishab Shetty And NTR photo

ಇವರಿಬ್ಬರ ದಿಢೀರ್ ಭೇಟಿ ನೋಡಿ “ತಾರಕ್ ಕಾಂತಾರದಲ್ಲಿ ನಟಿಸುತ್ತಾರಾ?” “ರಿಷಬ್ ಸಿಂಹಾದ್ರಿ ಭೇಟಿ ಏನು ಸೀಕ್ರೆಟ್ ಏನು?” ಹೀಗೆ ಹಲವಾರು ಪ್ರಶ್ನೆಗಳು ಅಭಿಮಾನಿಗಳಲ್ಲಿ ಕುತುಹಲ ಮೂಡಿಸಿದ್ದವು.

ಇದನ್ನೂ ಓದಿ: Sonal Monteiro: ಚರ್ಚ್ ವೆಡ್ಡಿಂಗ್‌ಗೂ ಮುನ್ನ ಸೋನಲ್ ಮನೆಯಲ್ಲಿ Roce Celebration

Continue Reading

ಟಾಲಿವುಡ್

Kannappa Movie: ಕಣ್ಣಪ್ಪ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಮೋಹನ್‌ ಬಾಬು ಮೊಮ್ಮಗ ಅವ್ರಾಮ್ ಮಂಚು

ಕಣ್ಣಪ್ಪ ಚಿತ್ರದ ನಾಯಕ ವಿಷ್ಣು ಮಂಚು ಅವರ ಮಗ ಮತ್ತು ಮೋಹನ್ ಬಾಬು ಅವರ ಮೊಮ್ಮಗ ಅವ್ರಾಮ್ ಮಂಚು ಇದೀಗ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡುತ್ತಿದ್ದಾನೆ. ಈ ಮೂಲಕ ಮೋಹನ್‌ ಬಾಬು ಕುಟುಂಬದ ಮೂರನೇ ತಲೆಮಾರು ಟಾಲಿವುಡ್‌ ಅಂಗಳಕ್ಕೆ ಕಾಲಿಡುತ್ತಿದೆ. ಅದೂ ಅಪ್ಪನ ಸಿನಿಮಾದಲ್ಲಿ ಎಂಬುದು ವಿಶೇಷ. ಕಣ್ಣಪ್ಪ ಚಿತ್ರದಲ್ಲಿ (Kannappa movie) ನಾಯಕನ ಬಾಲ ಪಾತ್ರಧಾರಿಯಾಗಿ ಅವ್ರಾಮ್‌ ಕಾಣಿಸಿಕೊಳ್ಳಲಿದ್ದಾನೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Kannappa movie
Koo

ಬೆಂಗಳೂರು: ಕಣ್ಣಪ್ಪ ಸಿನಿಮಾದಿಂದ ಹೊಸ ಅಪ್‌ಡೇಟ್‌ ಬಂದಿದೆ. ಕಣ್ಣಪ್ಪ ಚಿತ್ರದ ನಾಯಕ ವಿಷ್ಣು ಮಂಚು ಅವರ ಮಗ ಮತ್ತು ಮೋಹನ್ ಬಾಬು ಅವರ ಮೊಮ್ಮಗ ಅವ್ರಾಮ್ ಮಂಚು ಇದೀಗ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಈ ಮೂಲಕ ಮೋಹನ್‌ ಬಾಬು ಕುಟುಂಬದ ಮೂರನೇ ತಲೆಮಾರು ಟಾಲಿವುಡ್‌ ಅಂಗಳಕ್ಕೆ ಕಾಲಿಡುತ್ತಿದೆ. ಅದೂ ಅಪ್ಪನ ಸಿನಿಮಾದಲ್ಲಿ ಎಂಬುದು ವಿಶೇಷ. ಕಣ್ಣಪ್ಪ ಚಿತ್ರದಲ್ಲಿ (Kannappa Movie) ನಾಯಕನ ಬಾಲ ಪಾತ್ರಧಾರಿಯಾಗಿ ಅವ್ರಾಮ್‌ ಕಾಣಿಸಿಕೊಳ್ಳಲಿದ್ದಾನೆ.

ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚಿತ್ರತಂಡ ಕಣ್ಣಪ್ಪ ಚಿತ್ರದಿಂದ ಅವ್ರಾಮ್‌ ಮಂಚುವಿನ ಫಸ್ಟ್‌ ಲುಕ್‌ ಬಿಡುಗಡೆ ಮಾಡಿದೆ . ಅಪ್ಪ ವಿಷ್ಣು ಮಂಚು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡು, ಹ್ಯಾಪಿ ಜನ್ಮಾಷ್ಟಮಿ, ಕಣ್ಣಪ್ಪ ಚಿತ್ರದ ಮೂಲಕ ನನ್ನ ಮಗನನ್ನು ಲಾಂಚ್‌ ಮಾಡುತ್ತಿರುವುದಕ್ಕೆ ಹೆಮ್ಮೆ ಎನಿಸುತ್ತಿದೆ ಎಂದು ಫಸ್ಟ್‌ ಲುಕ್‌ ಸಮೇತ ಪೋಸ್ಟ್‌ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Bengaluru Power Cut: ಆ.28 ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮುಖೇಶ್‌ ಕುಮಾರ್‌ ಸಿಂಗ್‌ ನಿರ್ದೇಶನದ ಈ ಚಿತ್ರದಲ್ಲಿ ಮೋಹನ್‌ಲಾಲ್, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಬಾಬು, ಶರತ್‌ಕುಮಾರ್, ಬ್ರಹ್ಮಾನಂದಂ ಮತ್ತು ಕಾಜಲ್ ಅಗರ್ವಾಲ್ ಸೇರಿದಂತೆ ದೊಡ್ಡ ತಾರಾಗಣವಿದೆ. 24 ಫ್ರೇಮ್ಸ್ ಫ್ಯಾಕ್ಟರಿ ಮತ್ತು ಎವಿಎ ಎಂಟರ್‌ಟೈನ್‌ಮೆಂಟ್ ಬ್ಯಾನರ್‌ನಲ್ಲಿ ಕಣ್ಣಪ್ಪ ಸಿನಿಮಾವನ್ನು ನಿರ್ಮಾಣ ಮಾಡಲಾಗುತ್ತಿದೆ. ಬಿಗ್‌ಬಜೆಟ್‌ನ ಈ ಸಿನಿಮಾದ ಬಹುಪಾಲು ಚಿತ್ರೀಕರಣವನ್ನು ನ್ಯೂಜಿಲೆಂಡ್‌ನಲ್ಲಿ ಶೂಟ್‌ ಮಾಡಲಾಗಿದೆ.

ಇದನ್ನೂ ಓದಿ: Uttarkashi Tour: ಪ್ರವಾಸ ಪ್ರಿಯರಿಗೆ ಸ್ವರ್ಗ ಉತ್ತರಕಾಶಿಗೆ ಹೋಗಲು ಉತ್ತಮ ಸಮಯ ಯಾವುದು?

ಈ ಕುರಿತು ಮಾತನಾಡಿದ ವಿಷ್ಣು, “ಬಾಲ ಕಣ್ಣಪ್ಪನಾಗಿ ಅವ್ರಾಮ್ ಹೆಜ್ಜೆ ಹಾಕುವುದನ್ನು ನೋಡುವುದು ನನಗೆ ಭಾವನಾತ್ಮಕ ಅನುಭವವಾಗಿದೆ. ಈ ಚಿತ್ರವು ನಮ್ಮ ಕುಟುಂಬದಲ್ಲಿ ತಲೆಮಾರುಗಳ ಕನಸಾಗಿದೆ. ಅದರಲ್ಲೂ ಈ ಚಿತ್ರದ ಮೂಲಕ ಅವ್ರಾಮ್ ಅವರನ್ನು ಜಗತ್ತಿಗೆ ಪರಿಚಯಿಸಲು ನನಗೆ ಹೆಮ್ಮೆ ಇದೆ. ಅಪ್ರತಿಮ ಪಾತ್ರ. ಪರದೆಯ ಮೇಲೆ ಅವನ ಮ್ಯಾಜಿಕ್ ಅನ್ನು ನೋಡಲು ಎಲ್ಲರಂತೆ ನಾನೂ ಕಾತರದಲ್ಲಿದ್ದೇನೆ” ಎಂದಿದ್ದಾರೆ.

Continue Reading

ಸಿನಿಮಾ

Samantha Ruth Prabhu: ನೀವು ಪರಿಪೂರ್ಣ ತಂದೆಯಾಗುತ್ತೀರಿ; ನಾಗಚೈತನ್ಯ ಬಗ್ಗೆ ಸಮಂತಾ ಹೇಳಿದ ವಿಡಿಯೊ ವೈರಲ್

ಶ್ರೇಷ್ಠ ವ್ಯಕ್ತಿಯಾಗಿರುವ ನೀವು ಒಂದು ದಿನ “ಪರಿಪೂರ್ಣ” ತಂದೆಯಾಗುತ್ತೀರಿ ಎಂದು ನಾಗಚೈತನ್ಯ ಅವರನ್ನು ಉದ್ದೇಶಿಸಿ ಸಮಂತಾ ರುತ್ ಪ್ರಭು (Samantha Ruth Prabhu) ಹೇಳಿರುವ ವಿಡಿಯೋ ಒಂದು ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ನಾಗ ಚೈತನ್ಯ ಮತ್ತು ಸಮಂತಾ ಅವರ ವಿವಾಹದ ಹಳೆಯ ವಿಡಿಯೋದ ತುಣುಕು ಇದಾಗಿದೆ.

VISTARANEWS.COM


on

By

Samantha Ruth Prabhu
Koo

ಸಮಂತಾ ರುತ್ ಪ್ರಭು (Samantha Ruth Prabhu) ಮತ್ತು ನಾಗ ಚೈತನ್ಯ (Naga Chaitanya) ಅವರ ವಿವಾಹದ ಹಳೆಯ ವಿಡಿಯೋವೊಂದು (Viral Video) ಸಾಮಾಜಿಕ ಜಾಲತಾಣದಲ್ಲಿ (social media) ಮತ್ತೆ ಕಾಣಿಸಿಕೊಂಡಿದೆ. ಇಬ್ಬರೂ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ವಿವಾಹ ಪ್ರತಿಜ್ಞೆ ( taking vows) ಮಾಡುವುದನ್ನು ಇದರಲ್ಲಿ ಕಾಣಬಹುದು. ಸಮಂತಾ ಸುಂದರವಾದ ಬಿಳಿ ಗೌನ್ ಧರಿಸಿ ನಾಗ ​​ಚೈತನ್ಯನ ಬಗ್ಗೆ ಮಾತನಾಡಿದ್ದಾರೆ.

ಶ್ರೇಷ್ಠ ವ್ಯಕ್ತಿಯಾಗಿರುವ ನೀವು ಒಂದು ದಿನ “ಪರಿಪೂರ್ಣ” ತಂದೆಯಾಗುತ್ತೀರಿ ಎಂದು ನಾಗಚೈತನ್ಯ ಅವರನ್ನು ಉದ್ದೇಶಿಸಿ ಸಮಂತಾ ಹೇಳಿದ್ದಾರೆ.

ಹೇಗೆ ಸ್ವರವನ್ನು ಬದಲಾಯಿಸದೆಯೇ ಎಲ್ಲಾ ವಾದಗಳನ್ನು ಪರಿಹರಿಸಲಾಗುತ್ತದೆಯೋ ಮತ್ತು ಅಳುವುದನ್ನು ಬಿಟ್ಟು ಬೇರೆ ಯಾವುದನ್ನೂ ಪಡೆಯುವುದನ್ನು ತಪ್ಪಿಸಲು ನನಗೆ ಎಂದಿಗೂ ಅನುಮತಿಸುವುದಿಲ್ಲ. ನಿಮ್ಮಿಂದಾಗಿ ನಾನು ನಿಧಾನವಾಗಿ ಮತ್ತು ಖಚಿತವಾಗಿ ನಾನು ಆಗಬೇಕೆಂದು ಕನಸು ಕಂಡಿದ್ದೇನೆ ಎಂದು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.


ಅವರು ತಮ್ಮ ಮಾತನ್ನು ಮುಂದುವರಿಸುತ್ತಾ, ನೀವು ನನಗೆ ತಿಳಿದಿರುವ ಅತ್ಯಂತ ಶ್ರೇಷ್ಠ ವ್ಯಕ್ತಿ ಮತ್ತು ಒಂದು ದಿನ ನೀವು ನಮ್ಮ ಸುಂದರ ಮಗುವಿಗೆ ಪರಿಪೂರ್ಣ ತಂದೆಯಾಗುತ್ತೀರಿ ಎಂದು ನನಗೆ ತಿಳಿದಿದೆ. ನಾನು ನಿಮ್ಮನ್ನು ನೂರು ಜೀವನ, ನೂರು ಪ್ರಪಂಚ ಮತ್ತು ಯಾವುದೇ ಪರಿಸ್ಥಿತಿಯಲ್ಲೂ ಆಯ್ಕೆ ಮಾಡುತ್ತೇನೆ. ನಾನು ನಿಮ್ಮನ್ನೇ ಆರಿಸುತ್ತೇನೆ ಎಂದು ಹೇಳಿದ್ದಾರೆ.


ಸಮಂತಾ ರುತ್ ಪ್ರಭು ಮತ್ತು ನಾಗ ಚೈತನ್ಯ ಅವರು 2017ರ ಅಕ್ಟೋಬರ್‌ನಲ್ಲಿ ವಿವಾಹವಾದರು. 2021ರಲ್ಲಿ ಇಬ್ಬರೂ ತಮ್ಮ ವಿಚ್ಛೇದನದ ಬಗ್ಗೆ ಘೋಷಿಸಿ ಅಭಿಮಾನಿಗಳಿಗೆ ಆಘಾತ ನೀಡಿದರು.

ಇತ್ತೀಚೆಗೆಷ್ಟೇ ನಾಗಚೈತನ್ಯ ಶೋಭಿತಾ ಧೂಳಿಪಾಲ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಬಳಿಕ ಸಮಂತಾ ಮತ್ತು ನಾಗಚೈತನ್ಯ ಅವರ ವಿವಾಹದ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: Actor Darshan: ನಟಿ ರಚಿತಾ ರಾಮ್‌ ಜೈಲಿಗೆ ಎಂಟ್ರಿ ಕೊಟ್ಟ ದಿನವೇ ನಡೀತಾ ದರ್ಶನ್ ಸಿಗರೇಟ್ ಪಾರ್ಟಿ?

ನಾಗ ಚೈತನ್ಯ ಅವರ ತಂದೆ ಸೂಪರ್‌ಸ್ಟಾರ್ ನಾಗಾರ್ಜುನ ಅವರು ಮಗ ನಾಗ ಚೈತನ್ಯ ಮತ್ತು ಶೋಭಿತಾ ಅವರ ನಿಶ್ಚಿತಾರ್ಥವನ್ನು ಕುರಿತು ಮಾಹಿತಿ ಹಂಚಿಕೊಂಡು, ಶೋಭಿತಾ ಧೂಳಿಪಾಲ ಅವಳನ್ನು ನಮ್ಮ ಕುಟುಂಬಕ್ಕೆ ಸ್ವಾಗತಿಸಲು ನಾವು ತುಂಬಾ ಸಂತೋಷಪಡುತ್ತೇವೆ. ದಂಪತಿಗೆ ಅಭಿನಂದನೆಗಳು, ಅವರಿಗೆ ಜೀವನಪೂರ್ತಿ ಪ್ರೀತಿ ಮತ್ತು ಸಂತೋಷವನ್ನು ಹಾರೈಸುತ್ತೇನೆ ಎಂದು ಹೇಳಿದ್ದರು. ವರದಿಗಳ ಪ್ರಕಾರ ನಾಗಚೈತನ್ಯ ಮತ್ತು ಶೋಭಿತಾ ಮುಂದಿನ ವರ್ಷ ಡೆಸ್ಟಿನೇಶನ್ ವೆಡ್ಡಿಂಗ್‌ಗೆ ಯೋಜನೆ ಮಾಡುತ್ತಿದ್ದಾರೆ ಎನ್ನಲಾಗಿದೆ.

Continue Reading

ಸಿನಿಮಾ

Samantha Ruth Prabhu: ಪ್ರೀತಿ ಒಂದು ತ್ಯಾಗ! ಮಾರ್ಮಿಕ ಸಂದೇಶ ಪೋಸ್ಟ್‌ ಮಾಡಿದ ಸಮಂತಾ ರುತ್ ಪ್ರಭು ಪೋಸ್ಟ್

ಗೆಳೆಯ ಅಥವಾ ಸಂಗಾತಿಯಲ್ಲಿ ಒಬ್ಬ ಹೆಚ್ಚು ನೀಡುವ ಸ್ಥಾನದಲ್ಲಿ ಇಲ್ಲದಿದ್ದಾಗ ಇನ್ನೊಬ್ಬ ಹೇಗೆ ಹೆಚ್ಚಿನ ಪ್ರಯತ್ನವನ್ನು ಮಾಡಬೇಕಾಗುತ್ತದೆ ಎಂಬುದರ ಕುರಿತು ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಈ ಮೂಲಕ, ತಮ್ಮಲ್ಲಿ ಇಲ್ಲದೇ ಇರುವುದನ್ನು ನೀಡಿ ಸಮಾನವಾಗಿರಲು ಪ್ರಯತ್ನಿಸುವಂತೆ ಮಾಡಿರುವವರಿಗೆ ‘ಕೃತಜ್ಞತೆ’ಯನ್ನು ಅವರು ಹೇಳಿದ್ದಾರೆ.

VISTARANEWS.COM


on

By

Samantha Ruth Prabhu
Koo

ನಟಿ ಸಮಂತಾ ರುತ್ ಪ್ರಭು (Samantha Ruth Prabhu ) ಅವರು ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಹಂಚಿಕೊಂಡಿರುವ ಪೋಸ್ಟ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ (social mideia) ಚರ್ಚೆಗೆ ಕಾರಣವಾಗಿದೆ. ಇದರಲ್ಲಿ ಅವರು ಹಂಚಿಕೊಂಡಿರುವ ಪೋಸ್ಟ್ ನೋಡಿ ‘ಪ್ರೀತಿ ಒಂದು ತ್ಯಾಗ’ (Love Is A Sacrifice) ಅದು ಹೇಗೆ ಎಂಬುದರ ಕುರಿತು ಹೆಚ್ಚಿನ ನೆಟ್ಟಿಗರು ಚರ್ಚೆ ಮಾಡಲು ಪ್ರಾರಂಭಿಸಿದ್ದಾರೆ.

ಗೆಳೆಯರು, ಸಂಗಾತಿಯಲ್ಲಿ ಒಬ್ಬ ಹೆಚ್ಚು ನೀಡುವ ಸ್ಥಾನದಲ್ಲಿ ಇಲ್ಲದಿದ್ದಾಗ ಇನ್ನೊಬ್ಬ ಹೇಗೆ ಹೆಚ್ಚಿನ ಪ್ರಯತ್ನವನ್ನು ಮಾಡಬೇಕಾಗುತ್ತದೆ ಎಂಬುದರ ಕುರಿತು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ತಮ್ಮಲ್ಲಿ ಇಲ್ಲದೇ ಇರುವುದನ್ನು ನೀಡಿ ಸಮಾನವಾಗಿರಲು ಪ್ರಯತ್ನಿಸುವಂತೆ ಮಾಡಿರುವವರಿಗೆ ‘ಕೃತಜ್ಞತೆ’ಯನ್ನು ಅವರು ಹೇಳಿದ್ದಾರೆ.

ಬಹಳಷ್ಟು ಜನರು ಸ್ನೇಹ ಮತ್ತು ಸಂಬಂಧಗಳನ್ನು ಪರಸ್ಪರವಾಗಿ ನೋಡುತ್ತಾರೆ ಮತ್ತು ನಾನು ಒಪ್ಪುತ್ತೇನೆ. ನೀನು ಕೊಡು, ನಾನು ಕೊಡುತ್ತೇನೆ. ಆದರೆ ಕೆಲವೊಮ್ಮೆ ಪ್ರೀತಿಯು ಇತರ ವ್ಯಕ್ತಿಯು ಹಿಂತಿರುಗಿಸುವ ಸ್ಥಿತಿಯಲ್ಲಿಲ್ಲದಿದ್ದರೂ ಸಹ ನೀವು ನೀಡಲು ಕಾರಣವಾಗುತ್ತದೆ ಎಂದು ನಾನು ವರ್ಷಗಳಲ್ಲಿ ಕಲಿತಿದ್ದೇನೆ. ನೀವು ಕೊಡುವುದರಿಂದ ಅದು ಹೋಗುತ್ತದೆ, ನಾನು ಕೊಡುತ್ತೇನೆ.. ನೀವು ಹಿಂತಿರುಗಿಸಲು ಸಾಧ್ಯವಾಗುವವರೆಗೆ ಪ್ರತಿಯಾಗಿ ನಾನು ಕೊಡುತ್ತೇನೆ ಎಂಬುದಾಗಿ ಸಮಂತಾ ಮಾರ್ಮಿಕವಾಗಿ ಪೋಸ್ಟ್‌ನಲ್ಲಿ ಹೇಳಿದ್ದಾರೆ.


“ಪ್ರೀತಿ ಒಂದು ತ್ಯಾಗ. ಒಂದು ಋತುವಿಗಾಗಿ ಸಮತೋಲಿತ ಸಲಹೆ ಕೂಡ. ಅಭಿಮಾನಿಗಳು ಕೂಡ ಅಷ್ಟೆ. ನಾನು ಪ್ರತಿಯಾಗಿ ಕೃತಜ್ಞತೆ ಸ್ಪುರಿಸಲು ಸಾಧ್ಯವಾಗುತ್ತಿಲ್ಲ ಎಂದಾಗಲೂ ಜನ ಅಭಿಮಾನ ಸುರಿಸುತ್ತಲೇ ಇರುತ್ತಾರೆʼʼ ಎಂದು ಸಮಂತಾ ಹೇಳಿಕೊಂಡಿದ್ದಾರೆ. ಬಿಳಿ ಬಣ್ಣದ ಹೃದಯದ ಇಮೊಜಿಯೊಂದಿಗೆ ಸಮಂತಾ ಇದನ್ನು ಪೋಸ್ಟ್ ಮಾಡಿದ್ದಾರೆ.

ಈ ನಡುವೆ ಸಮಂತಾ ರುತ್ ಪ್ರಭು ಗುರುವಾರ ರಾತ್ರಿ ಮುಂಬಯಿನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡರು. ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ಈ ವಿಡಿಯೋದಲ್ಲಿ ಅವರು ಕಾರ್ಯಕ್ರಮವೊಂದಕ್ಕೆ ಆಗಮಿಸುತ್ತಿದ್ದಂತೆ ಪಾಪರಾಜಿಗಳಿಗೆ ಪೋಸ್ ನೀಡುತ್ತಿರುವುದು ಕಂಡುಬಂದಿದೆ.

ಇದನ್ನೂ ಓದಿ: Shraddha Kapoor- Shreyas Iyer: ಕ್ರಿಕೆಟಿಗ ಅಯ್ಯರ್​ ಜತೆ ಡೇಟಿಂಗ್ ಆರಂಭಿಸಿದ ನಟಿ ಶ್ರದ್ಧಾ ಕಪೂರ್‌; ಫೋಟೊ ವೈರಲ್​

ಕಪ್ಪು ಉಡುಪನ್ನು ಧರಿಸಿದ್ದ ಅವರ ವಿಡಿಯೋವನ್ನು ನೋಡಿ ಅಭಿಮಾನಿಗಳು, ನಟಿ ಸಾಕಷ್ಟು ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.


ಸಮಂತಾ ರುತ್ ಪ್ರಭು ಶೀಘ್ರದಲ್ಲೇ ʼಸಿಟಾಡೆಲ್: ಹನಿ ಬನ್ನಿʼ ವೆಬ್‌ ಸಿರೀಸ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಭಾರತೀಯ ಸರಣಿಯಾಗಿದ್ದು, ಈ ತಿಂಗಳ ಆರಂಭದಲ್ಲಿ ʼಸಿಟಾಡೆಲ್: ಹನ್ನಿ ಬನ್ನಿʼ ಚಿತ್ರದ ಟೀಸರ್ ಬಿಡುಗಡೆಯಾಯಿತು.

Continue Reading
Advertisement
Actor darshan
ಪ್ರಮುಖ ಸುದ್ದಿ8 ಗಂಟೆಗಳು ago

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

KEA UGCET 2024
ಬೆಂಗಳೂರು8 ಗಂಟೆಗಳು ago

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

ಚಿಕ್ಕೋಡಿ9 ಗಂಟೆಗಳು ago

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

BBMP plans to make arrangements for food in areas where stray dogs do not get food
ಬೆಂಗಳೂರು10 ಗಂಟೆಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು10 ಗಂಟೆಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು11 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು12 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು13 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Hopcoms store loses charm in Bengaluru
ಬೆಂಗಳೂರು14 ಗಂಟೆಗಳು ago

HOPCOMS Outlets : ಬೆಂಗಳೂರಿನಲ್ಲಿ ಚಾರ್ಮ್‌ ಕಳೆದುಕೊಂಡ ಹಾಪ್‌ಕಾಮ್ಸ್‌ ಮಳಿಗೆ

fire accident
ಬೆಂಗಳೂರು ಗ್ರಾಮಾಂತರ15 ಗಂಟೆಗಳು ago

Fire Accident : ಹೊಸೂರು ಸಮೀಪದ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು ಓಡಿ ಬಂದ ಕಾರ್ಮಿಕರು ‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌