Naresh Pavitra Marriage: ಮದುವೆಯಾದ ನಟ ನರೇಶ್- ನಟಿ ಪವಿತ್ರ, ವಿಡಿಯೊ ಇಲ್ಲಿದೆ - Vistara News

ಟಾಲಿವುಡ್

Naresh Pavitra Marriage: ಮದುವೆಯಾದ ನಟ ನರೇಶ್- ನಟಿ ಪವಿತ್ರ, ವಿಡಿಯೊ ಇಲ್ಲಿದೆ

ಕೆಲವು ದಿನಗಳ ಹಿಂದೆಯಷ್ಟೇ ತಮ್ಮ ಮೂರನೇ ಪತ್ನಿ ರಮ್ಯಾ ರಘುಪತಿ ತಮ್ಮಿಂದ 10 ಕೋಟಿ ರೂ. ಪಡೆಯಲು ಬೇಡಿಕೆ ಇಟ್ಟಿದ್ದಾರೆ ಎಂದು ನರೇಶ್ ಆರೋಪಿಸಿದ್ದರು. ಇದೀಗ ನರೇಶ್-ಪವಿತ್ರ (Naresh Pavitra Marriage) ವಿವಾಹವಾಗಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

VISTARANEWS.COM


on

Naresh Pavitra Marriage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಟಾಲಿವುಡ್ ನಟ ವಿಕೆ ನರೇಶ್ ಅವರು ನಟಿ ಪವಿತ್ರಾ ಲೋಕೇಶ್‌ (Naresh Pavitra Marriage) ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಜೋಡಿ ವಿವಾಹವಾಗಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಈ ಹಿಂದೆ ನರೇಶ್ ಮತ್ತು ಪವಿತ್ರ ಲೋಕೇಶ್ ರೊಮ್ಯಾಂಟಿಕ್ ವೀಡಿಯೊ ಹಂಚಿಕೊಳ್ಳುವುದರ ಮೂಲಕ ಮದುವೆ ಬಗ್ಗೆ ಸುಳಿವು ನೀಡಿದ್ದರು.ಇದೀಗ ಅಧಿಕೃತವಾಗಿ ಇಬ್ಬರು ಸಪ್ತಪದಿ ತುಳಿದಿದ್ದಾರೆ. ಸಾಂಪ್ರದಾಯಿಕವಾಗಿ ಹಾರ ಬದಲಾಯಿಸಿಕೊಂಡು ಮಾಂಗಲ್ಯ ಧಾರಣೆ ಮಾಡಲಾಗಿದೆ. ಕೆಲವೇ ಕೆಲವು ಆಪ್ತರು ಈ ಮದುವೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ತಮ್ಮ ಮೂರನೇ ಪತ್ನಿ ರಮ್ಯಾ ರಘುಪತಿ ತಮ್ಮಿಂದ 10 ಕೋಟಿ ರೂ. ಪಡೆಯಲು ಬೇಡಿಕೆ ಇಟ್ಟಿದ್ದಾರೆ ಎಂದು ನರೇಶ್ ಆರೋಪಿಸಿದ್ದರು. ತಮ್ಮಿಂದ ವಿಚ್ಛೇದನವನ್ನು ಪಡೆಯಲು ರಮ್ಯಾ ಅವರು 10 ಕೋಟಿ ರೂ. ಬೇಡಿಕೆ ಇಡುತ್ತಿದ್ದಾರೆ. ಅವರಿಂದ ಬಿಡುಗಡೆ ಕೊಡಿ ಎಂದು ಕೋರ್ಟ್‌ಗೆ ಮನವಿ ಮಾಡಿದ್ದರು. ಇದೀಗ ನರೇಶ್‌ ಅವರು ಪವಿತ್ರಾ ಲೋಕೇಶ್‌ (Pavitra Lokesh) ಜತೆ ನಾಲ್ಕನೇ ಮದುವೆಯಾಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Pavitra Lokesh: ರಮ್ಯಾ ರಘುಪತಿಯಿಂದ ಬಿಡುಗಡೆ ಕೊಡಿ ಎಂದು ಕೋರ್ಟ್‌ ಮೆಟ್ಟಿಲೇರಿದ ನರೇಶ್‌

ನರೇಶ್-ಪವಿತ್ರ ವಿವಾಹೋತ್ಸವ

ರಮ್ಯಾ ರಘಪತಿ ಅವರು ವಿವಿಧ ಮಾಧ್ಯಮಗಳಲ್ಲಿ ನರೇಶ್ ವಿರುದ್ಧ ತೀವ್ರ ಆರೋಪ ಮಾಡಿದ್ದರು. ʻʻನರೇಶ್‌ ಅವರಿಗೆ ಹಲವು ಮಹಿಳೆಯರೊಂದಿಗೆ ಅಫೇರ್‌ ಇದೆ. ಈ ವಿಚಾರ ನನಗೆ ತಿಳಿಯುತ್ತಿದ್ದಂತೆ ನನ್ನ ಪಾದಗಳನ್ನು ಮುಟ್ಟಿ ಕ್ಷಮೆ ಕೇಳುತ್ತಿದ್ದರು. ನನ್ನ ಅತ್ತೆ, ದಿವಂಗತ ವಿಜಯ ನಿರ್ಮಲಾ ಅವರಿಗೂ ಈ ವಿಚಾರ ಗೊತ್ತಿತ್ತು. ತಮ್ಮ ರಾಜಕೀಯ ಆಕಾಂಕ್ಷೆ ಪೂರೈಸಿಕೊಳ್ಳಲು ನರೇಶ್ ನನ್ನನ್ನು ಮದುವೆಯಾಗಿದ್ದಾನೆʼʼ ಎಂದಿದ್ದರು. ಹಾಗೂ ʻʻನಾನು ಅವರಿಗೆ ವಿಚ್ಛೇದನ ನೀಡುವುದಿಲ್ಲ. ನನ್ನ ಮಗುವಿಗೆ ಉತ್ತಮ ಭವಿಷ್ಯ ಬೇಕು ಮತ್ತು ವಿಚ್ಛೇದನವು ನೀಡುವುದು ನನಗೆ ಇಷ್ಟವಿಲ್ಲʼʼಎಂದು ಹೇಳಿಕೆ ನೀಡಿದ್ದರು.

ರಮ್ಯಾ ಮತ್ತು ನರೇಶ್ ಡಿವೋರ್ಸ್ ಕೇಸ್ ಕೋರ್ಟಿನಲ್ಲಿದೆ. ನರೇಶ್ ವಿಚ್ಛೇದನ ಕೊಡಲು ಒಪ್ಪಿದರೂ, ರಮ್ಯಾ ನಿರಾಕರಿಸುತ್ತಿ‍ದ್ದಾರೆ. ನರೇಶ್‌ ಈಗಾಗಲೇ ಮೂರು ಮದುವೆಯಾಗಿದ್ದು, ಪವಿತ್ರಾ ಲೋಕೇಶ್‌ ಜತೆ ನಾಲ್ಕನೇ ಮದುವೆಯಾಗಿದ್ದಾರೆ. ನಟಿ ಪವಿತ್ರಾ ಲೋಕೇಶ್‌ ಕೂಡ ಎರಡು ಮದುವೆಯಾಗಿದ್ದು, ಇದು ಮೂರನೇ ವಿವಾಹ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Pavithra Jayaram ಚಂದು ಮತ್ತು ಪವಿತ್ರಾ ಮದುವೆ ಆಗಲು ನಿರ್ಧರಿಸಿದ್ದರು ಎಂಬ ಸುದ್ದಿ ಹರಿದಾಡಿದೆ. ಆ ಬಗ್ಗೆ ಇದೇ ಮೊದಲ ಬಾರಿಗೆ ಪವಿತ್ರಾ ಜಯರಾಮ್​ ಅವರ ಪುತ್ರ ಪ್ರಜ್ವಲ್​ ಪ್ರತಿಕ್ರಿಯೆ ನೀಡಿದ್ದಾರೆ. ಅಮ್ಮ ಮತ್ತು ಚಂದು ಅವರು ಎಷ್ಟು ಒಳ್ಳೆಯ ಸ್ನೇಹಿತರು ಎಂಬುದು ನಮಗೆ ಮತ್ತು ಇಂಡಸ್ಟ್ರಿಯವರಿಗೆ ಗೊತ್ತು. ಅವರ ಒಡನಾಟ ಹೇಗಿತ್ತು ಅಂತ ನಾವು ನೋಡಿದ್ದೇವೆ. ಮದುವೆ ಆಗುವ ಪ್ಲ್ಯಾನ್​ ಇತ್ತು ಎಂಬುದನ್ನೆಲ್ಲ ನಾನು ಸಂದರ್ಶನದಲ್ಲಿ ನೋಡಿದೆ. ಆದರೆ ಅಷ್ಟೊಂದು ಮಾತುಕತೆ ಆಗಿರಲಿಲ್ಲ. ಅಷ್ಟೊಂದು ನಮಗೂ ಗೊತ್ತಿರಲಿಲ್ಲ ಎಂದರು.

VISTARANEWS.COM


on

Pavithra Jayaram Trinayani Serial Son Prajwal Reaction
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani Serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ (Pavithra Jayaram)‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡರು. ಇದಾದ ಬಳಿಕ ಈ ಘಟನೆಯಿಂದ ಖಿನ್ನತೆಗೊಳಗಾಗಿ ಚಂದ್ರಕಾಂತ್‌ ಅವರು ನೇಣಿಗೆ ಶರಣಾಗಿದ್ದಾರೆ ಎಂದು ವರದಿಯಾಗಿತ್ತು. ಚಂದು ಮತ್ತು ಪವಿತ್ರಾ ಮದುವೆ ಆಗಲು ನಿರ್ಧರಿಸಿದ್ದರು ಎಂಬ ಸುದ್ದಿ ಹರಿದಾಡಿದೆ. ಆ ಬಗ್ಗೆ ಇದೇ ಮೊದಲ ಬಾರಿಗೆ ಪವಿತ್ರಾ ಜಯರಾಮ್​ ಅವರ ಪುತ್ರ ಪ್ರಜ್ವಲ್​ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಜ್ವಲ್‌ ಈ ಬಗ್ಗೆ ಮಾತನಾಡಿ ʻಅಮ್ಮನಿಗೆ ಊರಿನ ಜತೆ ಒಡನಾಟ ತುಂಬ ಚೆನ್ನಾಗಿಯೇ ಇತ್ತು. ಚಿತ್ರರಂಗ ಎಂದರೆ ನಿಮಗೆ ಗೊತ್ತು. ನಾನು ಇಂಡಸ್ಟ್ರಿಗೆ ಬಂದರೂ ನನ್ನ ಜತೆ ಯಾರಾದರೂ ಇದ್ದಾರೆ ಅಂದರೆ ಫಸ್ಟ್‌ ಈ ರೀತಿ ರೂಮರ್ಸ್‌ ಹುಟ್ಟಿಕೊಳ್ಳುತ್ತೆ. ಚಂದ್ರಕಾಂತ್‌ ಕುಟುಂಬ ಕೂಡ ಬೇಸರದಲ್ಲಿದೆ. ಅಮ್ಮ ಮತ್ತು ಚಂದು ಅವರು ಎಷ್ಟು ಒಳ್ಳೆಯ ಸ್ನೇಹಿತರು ಎಂಬುದು ನಮಗೆ ಮತ್ತು ಇಂಡಸ್ಟ್ರಿಯವರಿಗೆ ಗೊತ್ತು. ಅವರ ಒಡನಾಟ ಹೇಗಿತ್ತು ಅಂತ ನಾವು ನೋಡಿದ್ದೇವೆ. ಮದುವೆ ಆಗುವ ಪ್ಲ್ಯಾನ್​ ಇತ್ತು ಎಂಬುದನ್ನೆಲ್ಲ ನಾನು ಸಂದರ್ಶನದಲ್ಲಿ ನೋಡಿದೆ. ಆದರೆ ಅಷ್ಟೊಂದು ಮಾತುಕತೆ ಆಗಿರಲಿಲ್ಲ. ಅಷ್ಟೊಂದು ನಮಗೂ ಗೊತ್ತಿರಲಿಲ್ಲʼʼ ಎಂದರು.

ಇದನ್ನೂ ಓದಿ: Pavithra Jayaram: ನನ್ನ ಗಂಡನಿಗೂ ಪವಿತ್ರಾಗೂ ‘ಸಂಬಂಧ’ ಇದ್ದದ್ದು ನಿಜ ಎಂದ ಚಂದ್ರಕಾಂತ್‌ ಪತ್ನಿ!

ಚಂದ್ರಕಾಂತ್‌ ಪತ್ನಿ ಹೇಳಿದ್ದೇನು?

ಶಿಲ್ಪಾ ಪ್ರೇಮಾ ಈ ಬಗ್ಗೆ ಮಾತನಾಡಿ ʻʻಇಬ್ಬರ ಮಧ್ಯೆ ಸಂಬಂಧ ಇರುವುದು 5 ವರ್ಷ ಮುಂಚೆಯೇ ತಿಳಿದಿತ್ತು. ನನಗೆ ಗೊತ್ತಾದ ಮೇಲೆ ರಾತ್ರಿಯೆಲ್ಲ ಕುಡಿದು ನನಗೆ ಚಂದ್ರಕಾಂತ್‌ ಹೊಡೆಯುತ್ತಿದ್ದರು. ಒಮ್ಮೆ ಪವಿತ್ರಾ ಕೂಡ ನನಗೆ ನೇರವಾಗಿ ಕೆರೆ ಮಾಡಿ ಅವನು ನನ್ನ ಗಂಡ, ಏನು ಮಾಡಿಕೊಳ್ಳುತ್ತೀಯಾ ಮಾಡಿಕೋ ಎಂದು ಹೇಳಿದ್ದಳು. ಈ ವಿಚಾರ ಪವಿತ್ರಾ ಮಕ್ಕಳಿಗೂ ಗೊತ್ತಿತ್ತು. ಅವರ ಲೈಫ್ ಅವರದ್ದು ಅವರ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಲ್ಲ ಎಂದು ಪವಿತ್ರಾ ಮಗ ಹೇಳಿದ್ದ. ಮನೆಗೆ ಬಂದರೂ ಪವಿತ್ರಾ ಫೋಟೊವನ್ನು ಚಂದ್ರಕಾಂತ್‌ ನೋಡುತ್ತಿದ್ದರು. ಇವರೂ ನನಗೆ ಸಹಾಯ ಮಾಡದೇ ಇದ್ದರೂ ನನ್ನ ಮಕ್ಕಳನ್ನು ನಾನೇ ಸಲುಹಿದೆʼʼ ಎಂದಿದ್ದರು.

ಪವಿತ್ರಾ ಮಗಳ ಸ್ಪಷ್ಟನೆ ಏನು?

ಮಗಳು ಪ್ರತೀಕ್ಷಾ ಮಾತನಾಡಿ ʻ ಚಂದ್ರಕಾಂತ್‌ ಅವರ ಸಾವಿನ‌ ಸುದ್ದಿ ನಮಗೆ ಟಿವಿಯಲ್ಲಿ ನೋಡಿ ಗೊತ್ತಾಯ್ತು. ಚಂದ್ರಕಾಂತ್‌ ಮತ್ತು ನಮ್ಮಮ್ಮ‌ ಉತ್ತಮ ಸ್ನೇಹಿತರಾಗಿದ್ದರು. ಅವರ ಸಂಬಂಧದ ಬಗ್ಗೆ ಟಿವಿಯಲ್ಲಿ ಏನೇನೋ ಮಾತಾಡ್ತಿದ್ದಾರೆ. ಅಮ್ಮನ ಅಂತ್ಯಕ್ರಿಯೆ ಆಗೋವವರೆಗೂ ಚಂದ್ರಕಾಂತ್‌ ಇದ್ದು ಹೋಗಿದ್ದರು. ಚಂದ್ರಕಾಂತ್‌ ಅವರು ಹೈದರಾಬಾದ್‌ಗೆ ಹೋದ ನಂತರವೂ ನನಗೆ ಪೋನ್ ಮಾಡಿ ಮಾತನಾಡುತ್ತಿದ್ದರು. ಆರೋಗ್ಯ ಚೆನ್ನಾಗಿ ನೋಡ್ಕೊ, ಪರೀಕ್ಷೆ ಇದೆ ತಯಾರಿ ಮಾಡ್ಕೊ ಎಂದೆಲ್ಲಾ ಧೈರ್ಯ ಹೇಳ್ತಿದ್ದರು. ಆದರೆ ಈಗ ಹೀಗಾಗಿದೆ. ಅಮ್ಮ ಮತ್ತು ಚಂದ್ರಕಾಂತ್‌ ಉತ್ತಮ ಸ್ನೇಹಿತರಾಗಿದ್ದರು. ಅಮ್ಮ ಹೈದರಾಬಾದ್‌ಗೆ ತೆರಳಿ ಆರು ವರ್ಷ ಆಯ್ತು. ಆಗನಿಂದಲೂ ಚಂದ್ರಕಾಂತ್‌ ಅಮ್ಮನಿಗೆ ಪರಿಚಯ. ಒಂದೇ ಸಿರೀಯಲ್ ನಲ್ಲಿ ನಟನೆ ಮಾಡುವ ಸಹ ನಟರ ಜತೆಗಿನ ಸಂಬಂಧ ಹೇಗಿರೋತ್ತೊ ಅಮ್ಮ ಮತ್ತು ಚಂದ್ರಕಾಂತ್‌ ಅವರ ಸಂಬಂಧವೂ ಹಾಗೆ ಇತ್ತುʼʼ‌ ಎಂದರು.

ಮಾತು ಮುಂದುವರಿಸಿ ʻʻನನ್ನ ಅಮ್ಮ ಮತ್ತು ಅಪ್ಪ ಅವರ ಸಂಬಂಧ ಕೂಡ ಚೆನ್ನಾಗಿಯೇ ಇತ್ತು. ನಾನು, ಅಣ್ಣ ಇಬ್ಬರೂ ಕಳೆದ ಎರಡು ವರ್ಷಗಳಿಂದ ಅಮ್ಮನ ಜತೆಗೆ ಹೈದರಾಬಾದ್‌ನಲ್ಲಿ ನೆಲೆಸಿದ್ದೆವು. ಈಗ ನಾವು ನಮ್ಮ ಅಮ್ಮನನ್ನು ಕಳೆದುಕೊಂಡಿದ್ದೇವೆ. ಅವರು ನಮ್ಮ ಕುಟುಂಬದ ದೊಡ್ಡ ಪಿಲ್ಲರ್‌. ನಾವಿನ್ನ ಚಿಕ್ಕವರು. ನಮಗೂ ಭವಿಷ್ಯವಿದೆ. ಯಾರೂ ಅಮ್ಮನ ಸಂಬಂಧ ಬಗೆಗೆ ತಪ್ಪಾಗಿ ಮಾತಾಡಬೇಡಿ. ನಮ್ಮಷ್ಟಕ್ಕೆ ನಮ್ಮನ್ನು ಬದುಕಲು ಬಿಡಿʼʼ ಎಂದಿದ್ದಾರೆ ಪ್ರತೀಕ್ಷಾ

Continue Reading

ಬಾಲಿವುಡ್

Kattappa To Turn Modi: ಮೋದಿ ಪಾತ್ರದಲ್ಲಿ `ಬಾಹುಬಲಿ’ ಕಟ್ಟಪ್ಪ!

Kattappa To Turn Modi: ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದರು. ಆ ಬಳಿಕ ಕೆಲವು ಚಿತ್ರ ನಿರ್ಮಾಪಕರು ಅವರ ಜೀವನಗಾಥೆಯ ಬಗ್ಗೆ ಆಸಕ್ತಿಯನ್ನು ತಳೆದರು. ನಿರ್ದೇಶಕ ಓಮುಂಗ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ‘ಪಿಎಂ ನರೇಂದ್ರ ಮೋದಿ(PM Narendra Modi)’ ಸಿನಿಮಾವನ್ನು ಪ್ರಕಟಿಸಿದರು ಮತ್ತು 2019ರಲ್ಲಿ ಈ ಸಿನಿಮಾ ಬಿಡುಗಡೆಯಾಯಿತು. ಪ್ರಧಾನಿ ನೇರಂದ್ರ ಮೋದಿ ಅವರ ಪಾತ್ರದಲ್ಲಿ ನಟ ವಿವೇಕ್ ಒಬೆರಾಯ್ ಅವರು ನಟಿಸಿದ್ದಾರೆ. ವಿವೇಕ್ ತಂದೆ ಸುರೇಶ್ ಒಬೆರಾಯ್ ಅವರು ಚಿತ್ರದ ನಿರ್ಮಾಪಕರ ಪೈಕಿ ಒಬ್ಬರು.

VISTARANEWS.COM


on

Kattappa To Turn Modi Sathyaraj To Play Biopic On Prime Minister
Koo

ಬೆಂಗಳೂರು: ಬ್ಲಾಕ್‌ಬಸ್ಟರ್ `ಬಾಹುಬಲಿ’ ಸಿನಿಮಾದಲ್ಲಿ ಕಟ್ಟಪ್ಪ (Kattappa To Turn Modi) ಪಾತ್ರಕ್ಕೆ ಹೆಸರುವಾಸಿಯಾದ ಹಿರಿಯ ನಟ ಸತ್ಯರಾಜ್ (Veteran actor Sathyaraj) ಅವರು ಪ್ರಧಾನಿ ನರೇಂದ್ರ ಮೋದಿ (Biopic On Prime Minister) ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಪಾತ್ರವನ್ನು ಸಿನಿಮಾ ತಜ್ಞ ರಮೇಶ್ ಬಾಲಾ ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಪೋಸ್ಟ್ ಹಂಚಿಕೊಂಡಿದ್ದಾರೆ.

ಪ್ರಧಾನಿ ಮೋದಿಯವರ ಜೀವನ ತೆರೆ ಮೇಲೆ ಬಂದಿರುವುದು ಇದೇನು ಮೊದಲಲ್ಲ. 2019 ರಲ್ಲಿ, ನಟ ವಿವೇಕ್ ಒಬೆರಾಯ್, ಓಮಂಗ್ ಕುಮಾರ್ ನಿರ್ದೇಶಿಸಿದ ಜೀವನಚರಿತ್ರೆಯ ಚಿತ್ರದಲ್ಲಿ ಕಂಡು ಬಂದಿದ್ದರು. ಇದಲ್ಲದೆ, ಮಹೇಶ್ ಠಾಕೂರ್, ಲಾಲ್ಜಿ ಡಿಯೋರಿಯಾ, ರಜಿತ್ ಕಪೂರ್ ಮತ್ತು ಕೆಕೆ ಶುಕ್ಲಾ ಅವರಂತಹ ಇತರ ನಟರು ಮೋದಿ ಕುರಿತು ಸಿನಿಮಾ ಮಾಡಿದ್ದಾರೆ. ಮೋದಿ ಪಾತ್ರದಲ್ಲಿ ಸತ್ಯರಾಜ್​ ಕಾಣಿಸಿಕೊಳ್ಳಲಿದ್ದಾರೆ ಎಂಬುದು ದಕ್ಷಿಣ ಭಾರತದ ಹಿರಿಯ ನಟನ ಬಗ್ಗೆ ಹೆಚ್ಚುತ್ತಿರುವ ಜನಪ್ರಿಯತೆಯನ್ನೂ ತೋರಿಸುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದರು. ಆ ಬಳಿಕ ಕೆಲವು ಚಿತ್ರ ನಿರ್ಮಾಪಕರು ಅವರ ಜೀವನಗಾಥೆಯ ಬಗ್ಗೆ ಆಸಕ್ತಿಯನ್ನು ತಳೆದರು. ನಿರ್ದೇಶಕ ಓಮುಂಗ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ‘ಪಿಎಂ ನರೇಂದ್ರ ಮೋದಿ(PM Narendra Modi)’ ಸಿನಿಮಾವನ್ನು ಪ್ರಕಟಿಸಿದರು ಮತ್ತು 2019ರಲ್ಲಿ ಈ ಸಿನಿಮಾ ಬಿಡುಗಡೆಯಾಯಿತು. ಪ್ರಧಾನಿ ನೇರಂದ್ರ ಮೋದಿ ಅವರ ಪಾತ್ರದಲ್ಲಿ ನಟ ವಿವೇಕ್ ಒಬೆರಾಯ್ ಅವರು ನಟಿಸಿದ್ದಾರೆ. ವಿವೇಕ್ ತಂದೆ ಸುರೇಶ್ ಒಬೆರಾಯ್ ಅವರು ಚಿತ್ರದ ನಿರ್ಮಾಪಕರ ಪೈಕಿ ಒಬ್ಬರು.

ಇದನ್ನೂ ಓದಿ: Actor Sathyaraj: `ಬಾಹುಬಲಿ’ ಕಟ್ಟಪ್ಪನ ತೊಡೆ ಮೇಲೆ ಕುಳಿತ ಈ ಕ್ಯೂಟ್‌ ನಟ ಯಾರು? ಹೇಳಿ ನೋಡೋಣ!

ಭಾರೀ ವಿವಾದವಾಗಿತ್ತು

2019ರ ಏಪ್ರಿಲ್- ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಿಗದಿಯಾಗಿತ್ತು. ಚುನಾವಣೆಯ ಕಾವು ಜೋರಾಗಿತ್ತು. ಇದೇ ಸಂದರ್ಭದಲ್ಲಿ ನಿರ್ಮಾಪಕರು ಪಿಎಂ ನರೇಂದ್ರ ಮೋದಿ ಸಿನಿಮಾ ಬಿಡುಗಡೆಗೆ ಮುಂದಾದರು. ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಾಯಕರ ಮಧ್ಯೆ ಒಣ ರಗಳೆಗೂ ಕಾರಣವಾಯಿತು. ಪಿಎಂ ನರೇಂದ್ರ ಮೋದಿ ಸಿನಿಮಾ ಮತದಾರರಿಗೆ ಆಮಿಷ ಒಡ್ಡಬಹುದು ಎಂಬ ಆರೋಪ ಕೇಳಿ ಬಂತು. ಹಾಗಾಗಿ ಚುನಾವಣೆ ನಡೆಯುವ ಸಂದರ್ಭದಲ್ಲಿ ಸಿನಿಮಾಗೆ ಬಿಡುಗಡೆಯ ಭಾಗ್ಯ ಸಿಗಲಿಲ್ಲ. ಫಲಿತಾಂಶ ಪ್ರಕಟವಾದ ಮಾರನೇ ದಿನ ಅಂದರೆ 2019 ಮೇ 24ರಂದು ಸಿನಿಮಾ ಬಿಡುಗಡೆಯಾಯಿತು.

ಬಿಡುಗಡೆ ಮುನ್ನ ಭಾರೀ ಸದ್ದಿಗೆ ಕಾರಣವಾಗಿದ್ದ ಪಿಎಂ ನರೇಂದ್ರ ಮೋದಿ ಸಿನಿಮಾ, ಬಿಡುಗಡೆಯ ಬಳಿಕ ಅಷ್ಟೇನೂ ಸದ್ದು ಮಾಡಲಿಲ್ಲ. ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮೆಚ್ಚುಗೆಯೂ ಸಿಗಲಿಲ್ಲ. 8 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಈ ಹಿಂದಿ ಭಾಷೆಯ ಚಿತ್ರವು ತನ್ನ ಲೈಫ್‌ ಟೈಮ್‌ನಲ್ಲಿ 28 ಕೋಟಿ ರೂ. ಗಳಿಕೆ ಮಾಡಿತ್ತು.

ಸ್ಫೂರ್ತಿಯಾದರು ಮೋದಿ

ಬಹುಶಃ ಸಂಪೂರ್ಣವಾಗಿ ಮೋದಿ ಅವರನ್ನು ಕೇಂದ್ರವಾಗಿಟ್ಟು ಈವರೆಗೆ ಅಷ್ಟೇನೂ ಚಿತ್ರಗಳ ಬಂದಿಲ್ಲ. ಆದರೆ, ಕೆಲವು ಸಿನಿಮಾಗಳಿಗೆ ಅವರು ಸ್ಫೂರ್ತಿಯಾಗಿದ್ದಾರೆ. ಕೆಲವು ಪಾತ್ರಗಳನ್ನು ಅವರನ್ನು ಹೋಲುತ್ತವೆ. ಹಾಗಾಗಿ, ಮೋದಿ ಅವರಿಗೂ ಸಿನಿಮಾ ರಂಗಕ್ಕೂ ನಂಟಿದೆ ಎದು ಹೇಳಬಹುದು.

Continue Reading

ಟಾಲಿವುಡ್

Kalki 2898 AD: ಪ್ರಭಾಸ್‌ ಜೀವನದಲ್ಲಿ ಎಂಟ್ರಿ ಆದ ವ್ಯಕ್ತಿ ಇವರೇನಾ? ಏನದು ʻಬುಜ್ಜಿʼ?

Kalki 2898 AD:  ಕಲ್ಕಿ 2898 ಎಡಿ’ ಸಿನಿಮಾ ಸೈನ್ಸ್​ ಫಿಕ್ಷನ್​ ಮಾದರಿಯಲ್ಲಿ ಮೂಡಿಬರುತ್ತಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ಇದು ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchan) ಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

VISTARANEWS.COM


on

Kalki 2898 AD Keerthy Suresh Lends Her Voice To Bujji Car
Koo

ಬೆಂಗಳೂರು: ಇತ್ತೀಚೆಗೆ ಟಾಲಿವುಡ್‌ ನಟ ಪ್ರಭಾಸ್‌ ಅವರು ಡಾರ್ಲಿಂಗ್ಸ್‌(ಫ್ಯಾನ್ಸ್)ಗೆ (Kalki 2898 AD) ಸರ್‌ಪ್ರೈಸ್ ನ್ಯೂಸ್ ಇದೆ ಎಂದು ಇನ್‌ಸ್ಟಾ ಪೋಸ್ಟ್‌ ಮಾಡಿದ್ದರು. ಇದಾದ ಬಳಿಕ ಕೆಲವರು ಪ್ರಭಾಸ್ ಮದುವೆ ಫಿಕ್ಸ್ ಎಂದು ಕಮೆಂಟ್‌ ಮಾಡಿದ್ದರು. ಕೆಲವೇ ಕ್ಷಣಗಳಲ್ಲಿ ಪ್ರಭಾಸ್‌ ಮದುವೆ ಬಗ್ಗೆ ಹೇಳುತ್ತಿಲ್ಲ. ಸಿನಿಮಾ ಬಗ್ಗೆಯೇ ಪೋಸ್ಟ್‌ ಮಾಡಿರುತ್ತಾರೆ ಎಂದು ಕಮೆಂಟ್‌ ಮಾಡಿದ್ದರು. ಅದರಂತೆ ಈಗ ಆ ವಿಶೇಷ ವ್ಯಕ್ತಿ ಯಾರು ಎನ್ನುವುದು ಈಗ ರಿವೀಲ್ ಆಗಿದೆ. ಸದ್ಯ ಚಿತ್ರದ ʻಬುಜ್ಜಿʼ ಎನ್ನುವ ಪಾತ್ರವನ್ನು ಪರಿಚಯಿಸಲಾಗಿದೆ. ʻಬುಜ್ಜಿʼ ಎನ್ನುವುದು ಒಂದು ಸಣ್ಣ ರೋಬೊ. ಸದಾ ಚಿತ್ರದ ನಾಯಕ ಭೈರವನ ಜತೆಗಿರುವ ಪಾತ್ರ. ಬುಜ್ಜಿಗೆ ನಟಿ ಕೀರ್ತಿ ಸುರೇಶ್ ವಾಯ್ಸ್ ಕೊಟ್ಟಿದ್ದಾರೆ. ಸದ್ಯ ಹೊಸ ಮೇಕಿಂಗ್ ವಿಡಿಯೊವೊಂದು ರಿಲೀಸ್ ಆಗಿದೆ.  ‘ಕಲ್ಕಿ 2898 ಎಡಿ’ ಸಿನಿಮಾದ ಪ್ರಚಾರಕ್ಕಾಗಿಯೇ ಪ್ರಭಾಸ್​ ಅವರು ಆ ರೀತಿ ಪೋಸ್ಟ್​ ಮಾಡಿದ್ದರು. 

ಸದ್ಯ ಹೊಸ ಮೇಕಿಂಗ್ ವಿಡಿಯೊವೊಂದು ರಿಲೀಸ್ ಆಗಿದೆ. ಅದಲ್ಲಿ ಬುಜ್ಜಿ “ನನ್ನ ಜೀವನವೇನು? ‘ದೇಹ ಇಲ್ಲದೇ ಹೀಗೆ ಬದುಕಬೇಕಾ?” ಎಂದು ಕೇಳುತ್ತದೆ. ಅಷ್ಟರಲ್ಲಿ ಪ್ರಭಾಸ್ ಎಂಟ್ರಿ ಆಗುತ್ತದೆ. ಬುಜ್ಜಿಯ ಬಗ್ಗೆ ಇನ್ನಷ್ಟು ತಿಳಿದುಕೊಳ್ಳಲು ಮೇ 22 ರವರೆಗೆ ಕಾಯಬೇಕು ಎಂದು ಚಿತ್ರತಂಡ ಟ್ವಿಸ್ಟ್ ಕೊಟ್ಟಿದೆ. ಬಹಳ ಸ್ಮಾರ್ಟ್ ಆಗಿರುವ ಬುಜ್ಜಿಗೆ ವಾಹನ ಇರಲಿದೆ. ವಾಹನ ಹೇಗೆ ಸಿದ್ದ ಪಡಿಸಿಲಾಗಿತ್ತು ಎನ್ನುವ ಮೇಕಿಂಗ್‌ ವಿಡಿಯೊ ಇದು. ಮೇ 22ಕ್ಕೆ ಆ ವಾಹನದ ಬಗ್ಗೆ ಮತ್ತಷ್ಟು ಮಾಹಿತಿ ಸಿಗಲಿದೆ. ನಟಿ ಕೀರ್ತಿ ಸುರೇಶ್ ವಾಯ್ಸ್ ಬುಜ್ಜಿಗೆ ಚೆನ್ನಾಗಿ ಹೊಂದಿಕೆ ಆಗುತ್ತಿದೆ. ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ನಟಿಯರು ವಾಯ್ಸ್ ಕೊಡಲಿದ್ದಾರೆ. ಕನ್ನಡದಲ್ಲಿ ಯಾರು ಡಬ್ ಮಾಡುತ್ತಾರೆ ಎನ್ನುವ ಮಾಹಿತಿ ತಿಳಿದು ಬಂದಿಲ್ಲ.

ಇದನ್ನೂ ಓದಿ: Milana Nagaraj: ಗರ್ಭಿಣಿ ಮಿಲನಾ ನಾಗರಾಜ್‌ ಧರಿಸಿರುವ ಕ್ರಶ್ಡ್ ಅನಾರ್ಕಲಿ ಬಾರ್ಡರ್‌ ಗೌನ್‌ನ ವಿಶೇಷ ಏನು?

ಕಲ್ಕಿ 2898 ಎಡಿ’ ಸಿನಿಮಾ ಸೈನ್ಸ್​ ಫಿಕ್ಷನ್​ ಮಾದರಿಯಲ್ಲಿ ಮೂಡಿಬರುತ್ತಿದೆ. ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ಇದು ಈ ವರ್ಷದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಂಡಿದೆ. ಟಾಲಿವುಡ್‌ ಸ್ಟಾರ್‌ ಪ್ರಭಾಸ್‌, ಬಾಲಿವುಡ್‌ ಬ್ಯೂಟಿ ದೀಪಿಕಾ ಪಡುಕೋಣೆ (Prabhas-Deepika Padukone) ಮೊದಲ ಬಾರಿಗೆ ತೆರೆ ಹಂಚಿಕೊಳ್ಳುತ್ತಿರುವ ಈ ಸೈನ್ಸ್‌ ಫಿಕ್ಷನ್‌ ಈಗಾಗಲೇ ಕುತೂಹಲ ಮೂಡಿಸಿದೆ. ಇವರ ಜತೆಗೆ ಘಟಾನುಘಟಿ ಕಲಾವಿದರಾದ ಬಾಲಿವುಡ್‌ನ ಅಮಿತಾಭ್‌ ಬಚ್ಚನ್‌ (Amitabh Bachchan) ಮತ್ತು ಕಮಲ್‌ ಹಾಸನ್‌ (Kamal Haasan) ಕೂಡ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ವಿವಿಧ ಭಾಷೆಗಳಲ್ಲಿ ʼಕಲ್ಕಿ 2898 ಎಡಿʼ ಸಿನಿಮಾ ತೆರೆಗೆ ಬರಲಿದೆ. ಈ ಪೈಕಿ ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಮ್ಮ ಪಾತ್ರಕ್ಕೆ ಸ್ವತಃ ದೀಪಿಕಾ ಅವರೇ ಡಬ್‌ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 2006ರಲ್ಲಿ ತೆರೆಕಂಡ ಉಪೇಂದ್ರ ಅಭಿನಯದ ಕನ್ನಡದ ʼಐಶ್ವರ್ಯಾʼ ಚಿತ್ರದ ಮೂಲಕ ದೀಪಿಕಾ ಬಣ್ಣದ ಲೋಕ ಪ್ರವೇಶಿಸಿದ್ದರು. ಅದರ ಬಳಿಕ ಅವರು ಕನ್ನಡ ಸಿನಿಮಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಅವರು ಕನ್ನಡದಲ್ಲಢ ಡಬ್‌ ಮಾಡಿರುತ್ತಿರುವ ವಿಚಾರ ಕೇಳಿ ಅಭಿಮಾನಿಗಳು ಥ್ರಿಲ್‌ ಆಗಿದ್ದಾರೆ.

ಟಾಲಿವುಡ್‌ನ ಪ್ರತಿಭಾವಂತ ನಿರ್ದೇಶಕ ನಾಗ್‌ ಅಶ್ವಿನ್‌ ಆ್ಯಕ್ಷನ್‌ ಕಟ್‌ ಹೇಳುತ್ತಿರುವ ಈ ಬಹು ತಾರಾಗಣ ಹೊಂದಿರುವ ಚಿತ್ರ ಜೂನ್ 27ರಂದು ತೆರೆಗೆ ಬರಲಿದೆ. ಮೊದಲಿಗೆ ಮೇ 9ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಆದರೆ ಚುನಾವಣೆಯ ಕಾರಣ ಸಿನಿಮಾ ರಿಲೀಸ್‌ ಡೇಟ್‌ವನ್ನು ಮುಂದೂಡಲಾಗಿತ್ತು. ಸದ್ಯ ಚಿತ್ರೀಕರಣ ಪೂರ್ಣಗೊಳಿಸಿರುವ ತಂಡ ಪೋಸ್ಟ್‌ ಪ್ರೊಡಕ್ಷನ್‌ ಕಾರ್ಯದಲ್ಲಿ ನಿರತವಾಗಿದೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ ಮೊದಲೇ ಒಪ್ಪಂದ ಮಾಡಿಕೊಂಡಂತೆ ಈ ತಿಂಗಳಲ್ಲಿ ಪ್ರೊಮೊಷನ್‌ ನಡೆಸಿಕೊಂಡಲಿದ್ದಾರೆ. ಅದರ ಭಾಗವಾಗಿ ವಿವಿಧ ಮಾಧ್ಯಮಗಳು ಅವರ ಸಂದರ್ಶನವನ್ನು ಚಿತ್ರೀಕರಿಸಲು ತಯಾರಿ ನಡೆಸಿವೆ ಎನ್ನಲಾಗಿದೆ. ಇದರ ಜತೆಗೆ ಡಬ್ಬಿಂಗ್‌ ಅನ್ನೂ ಅವರು ಪೂರ್ಣಗೊಳಿಸಲಿದ್ದಾರೆ. ಸೆಪ್ಟಂಬರ್‌ನಲ್ಲಿ ಮಗು ಜನಿಸುವ ನಿರೀಕ್ಷೆ ಇದ್ದು, ಬಾಕಿ ಇರುವ ಸಿನಿಮಾ ಚಟುವಟಿಕೆಗಳನ್ನೆಲ್ಲ ನಡೆಸಿ ದೀಪಿಕಾ ಜೂನ್‌ ಬಳಿಕ ವಿಶ್ರಾಂತಿ ಪಡೆಯಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

ಅಶ್ವತ್ಥಾಮನಾಗಿ ಗಮನ ಸೆಳೆದ ಅಮಿತಾಭ್‌

ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿರುವ ʼಕಲ್ಕಿ 2898 ಎಡಿʼ ಚಿತ್ರದಲ್ಲಿ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಅವರು ಅಶ್ವತ್ಥಾಮನಾಗಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಅವರ ಲುಕ್‌ ರಿಲೀಸ್‌ ಆಗಿದ್ದು, ಪ್ರೇಕ್ಷಕರ ಗಮನ ಸೆಳೆದಿದೆ. ಏ. 21ರಂದು ಚಿತ್ರತಂಡ ಅಮಿತಾಭ್‌ ಅವರ ಪಾತ್ರವನ್ನು ರಿವೀಲ್‌ ಮಾಡಿದೆ. ಜತೆಗೆ ಶಿವರಾತ್ರಿಯಂದು ಪ್ರಭಾಸ್‌ ಅವರ ಫಸ್ಟ್‌ಲುಕ್‌ ಬಿಡುಗಡೆ ಮಾಡಲಾಗಿತ್ತು. ಇದು ಕೂಡ ಅಭಿಮಾನಿಗಳನ್ನು ಆಕರ್ಷಿಸಿದ್ದು, ಚಿತ್ರದ ಮೇಲಿನ ನಿರೀಕ್ಷೆ ಇನ್ನಷ್ಟು ಹೆಚ್ಚಿಸಿದೆ.

ವೈಜಯಂತಿ ಮೂವೀಸ್‌ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಬಾಲಿವುಡ್‌ ನಟಿ ದಿಶಾ ಪಠಾಣಿ ಕೂಡ ಮುಖ್ಯ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಚಿತ್ರದ ಬಗ್ಗೆ ಮಾತನಾಡಿದ್ದ ನಾಗ್‌ ಚೈತ್ಯನ್ಯ, ʼʼಈ ಸಿನಿಮಾದ ಕಥೆ ಮಹಾಭಾರತದ ಕಾಲಘಟ್ಟಲ್ಲಿ ಆರಂಭವಾಗಿ ಕ್ರಿ.ಶ. 2898ರಲ್ಲಿ ಕೊನೆಗೊಳ್ಳಲಿದೆ. ಆ ಮೂಲಕ ಸುಮಾರು 6,000 ವರ್ಷಗಳ ಕಥೆಯನ್ನು ತೆರೆ ಮೇಲೆ ಮೂಡಿಸಲಿದ್ದೇವೆ. ಇದಕ್ಕಾಗಿ ಬಹಳಷ್ಟು ಶ್ರಮ ವಹಿಸಿದ್ದೇವೆʼʼ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದರು.

Continue Reading

ಟಾಲಿವುಡ್

Kajal Aggarwal: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರಕ್ಕೆ ಕಾಜಲ್ ಅಗರ್​ವಾಲ್​​ ಎಂಟ್ರಿ; ಪಾತ್ರ ಏನಿರಬಹುದು?

Kajal Aggarwal: ಈ ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಶರತ್‌ಕುಮಾರ್ ಸೇರಿ ಬಹು ತಾರಾಗಣವೇ ಇದೆ. ಇತ್ತೀಚೆಗಷ್ಟೇ ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಸಹ ಈ ಚಿತ್ರದ ಮೂಲಕ ಸೌತ್‌ ಕಡೆಗೆ ವಾಲಿದ್ದಾರೆ. ತಮ್ಮ ಭಾಗದ ಚಿತ್ರೀಕರಣವನ್ನೂ ಪೂರ್ಣಗೊಳಿಸಿದ್ದಾರೆ. ಪ್ರಭಾಸ್ ಸಹ ಕೆಲವು ದಿನಗಳ ಹಿಂದೆ ಕಣ್ಣಪ್ಪ ತಂಡವನ್ನು ಸೇರಿಕೊಂಡರು. ಈಗ ಕಾಜಲ್‌ ಅಗರ್‌ವಾಲ್‌ ಸರದಿ.

VISTARANEWS.COM


on

Kajal Aggarwal Kannappa Movie Entry
Koo

ಬೆಂಗಳೂರು: ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ತೆಲುಗಿನ ʻಕಣ್ಣಪ್ಪʼ ಸಿನಿಮಾ. ಆಗೊಬ್ಬರು ಈಗೊಬ್ಬರು ಈ ಚಿತ್ರದ ತಾರಾಬಳಗ ಸೇರಿಕೊಳ್ಳುತ್ತಲೇ ಇದ್ದಾರೆ. ಇದೀಗ ಮತ್ತೊಬ್ಬರು ಸ್ಟಾರ್‌ ನಟಿ ಈ ತಂಡ ಸೇರಿಕೊಂಡಿದ್ದಾರೆ. ಅದು ಬೇರಾರು ಅಲ್ಲ, ನಟಿ ಕಾಜಲ್‌ ಅಗರ್‌ವಾಲ್! ವಿಷ್ಣು ಮಂಚು ಮತ್ತು ಕಾಜಲ್‌ ಅಗರ್‌ವಾಲ್‌ (Kajal Aggarwal) ಈ ಹಿಂದೆ ತೆಲುಗಿನ ʻಮೊಸಗಲ್ಲುʼ ಚಿತ್ರದಲ್ಲಿ ಸಹೋದರ ಮತ್ತು ಸಹೋದರಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ವಿಷ್ಣು ಮಂಚು ಅವರ ಬಹುನಿರೀಕ್ಷಿತ ಪ್ರಾಜೆಕ್ಟ್‌ ʻಕಣ್ಣಪ್ಪʼ ಚಿತ್ರಕ್ಕೂ ಆಗಮಿಸುವ ಮೂಲಕ ಎರಡನೇ ಸಲ ಒಂದಾಗುತ್ತಿದ್ದಾರೆ.

ಹಾಗಾದರೆ, ಕಾಜಲ್‌ ಅಗರ್‌ವಾಲ್‌ ಪಾತ್ರವೇನು? ಸದ್ಯಕ್ಕೆ ಆ ಬಗ್ಗೆ ಚಿತ್ರತಂಡ ರಿವೀಲ್‌ ಮಾಡಿಲ್ಲ. ಬದಲಿಗೆ ವಿಶೇಷವಾದ ಪಾತ್ರವೊಂದರಲ್ಲಿ ಕಾಜಲ್‌ ನಟಿಸುವ ಮೂಲಕ ಕಣ್ಣಪ್ಪ ಸಿನಿಮಾದ ಭಾಗವಾಗಲಿದ್ದಾರೆ. ಈ ಸಿನಿಮಾದ ಶೂಟಿಂಗ್‌ ಸಹ ಅಷ್ಟೇ ಬಿರುಸಾಗಿಯೇ ನಡೆಯುತ್ತಿದೆ.

ಈ ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಶರತ್‌ಕುಮಾರ್ ಸೇರಿ ಬಹು ತಾರಾಗಣವೇ ಇದೆ. ಇತ್ತೀಚೆಗಷ್ಟೇ ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಸಹ ಈ ಚಿತ್ರದ ಮೂಲಕ ಸೌತ್‌ ಕಡೆಗೆ ವಾಲಿದ್ದಾರೆ. ತಮ್ಮ ಭಾಗದ ಚಿತ್ರೀಕರಣವನ್ನೂ ಪೂರ್ಣಗೊಳಿಸಿದ್ದಾರೆ. ಪ್ರಭಾಸ್ ಸಹ ಕೆಲವು ದಿನಗಳ ಹಿಂದೆ ಕಣ್ಣಪ್ಪ ತಂಡವನ್ನು ಸೇರಿಕೊಂಡರು. ಈಗ ಕಾಜಲ್‌ ಅಗರ್‌ವಾಲ್‌ ಸರದಿ.

ಇದನ್ನೂ ಓದಿ: Kajal Aggarwal: ಸೆಲ್ಫಿ ನೆಪದಲ್ಲಿ ನಟಿ ಕಾಜಲ್ ಸೊಂಟ ಮುಟ್ಟಿದ ವ್ಯಕ್ತಿ: ವಿಡಿಯೊ ವೈರಲ್‌!


ಕಣ್ಣಪ್ಪ’ ಸಿನಿಮಾ ವ್ಯಕ್ತಿಯ ಅಚಲವಾದ ಭಕ್ತಿಯ ಮೇಲೆ ಬೆಳಕು ಚೆಲ್ಲುವ ಸಿನಿಮಾ ಆಗಿದೆ. ನಾಸ್ತಿಕನಾದ ಕಣ್ಣಪ್ಪ ಮಹಾನ್ ಶಿವನ ಆರಾಧಕನಾಗಿ ಬದಲಾದ ವಿಸ್ಮಯಕಾರಿ ಕತೆಯನ್ನು ಸಿನಿಮಾ ಒಳಗೊಂಡಿದೆ. ಈ ಚಿತ್ರವು ಶಿವನ ಭಕ್ತನಾಗಿದ್ದ ಭಕ್ತ ಕಣ್ಣಪ್ಪನ ಜೀವನವನ್ನು ಆಧರಿಸಿದೆ ಎಂದು ವರದಿಯಾಗಿದೆ.

ಮೋಹನ್ ಬಾಬು ನಿರ್ಮಿಸುತ್ತಿರುವ ಕಣ್ಣಪ್ಪ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗು ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾರತೀಯ ಭಾಷೆಗಳಿಗೂ ಈ ಚಿತ್ರ ಡಬ್‌ ಆಗಿ ರಿಲೀಸ್‌ ಆಗಲಿದೆ. ಅದೇ ರೀತಿ ಚಿತ್ರೀಕರಣದ ಮುಕ್ತಾಯದ ಹಂತಕ್ಕೂ ಬಂದು ನಿಂತಿರುವ ಈ ಸಿನಿಮಾ ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕವೂ ಘೋಷಣೆ ಆಗಲಿದೆ.

Continue Reading
Advertisement
Kannada New Movie Sambavami Yuge Yuge 4K Motion Poster
ಸಿನಿಮಾ3 mins ago

Kannada New Movie: `ಸಂಭವಾಮಿ ಯುಗೇಯುಗೇ’ ಚಿತ್ರದ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆ

Prajwal Revanna Case
ಕರ್ನಾಟಕ13 mins ago

Prajwal Revanna Case: ಪೆನ್​​ಡ್ರೈವ್ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ; ದೇವರಾಜೇಗೌಡ ತಪ್ಪು ಮಾಹಿತಿ ನೀಡಿದ್ದಾರೆ: ಶಿವರಾಮೇಗೌಡ

Cholera
ಕರ್ನಾಟಕ20 mins ago

Cholera: ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಕಾಲರಾ ಅಟ್ಟಹಾಸ; ಕಲುಷಿತ ನೀರು ಕುಡಿದು 114 ಜನಕ್ಕೆ ಕಾಯಿಲೆ!

RCB vs CSK
ಕ್ರೀಡೆ23 mins ago

RCB vs CSK: ಚೆನ್ನೈ ಸೋಲಿಗೆ ಧೋನಿ ಬಾರಿಸಿದ ಔಟ್​ ಆಫ್​ದಿ ಸ್ಟೇಡಿಯಂ ಸಿಕ್ಸರ್​ ಕಾರಣ

Ninagagi Kannada Serial Ritvvikk Mathad Playing Lead In Divya Uruduga
ಕಿರುತೆರೆ25 mins ago

Ninagagi Kannada Serial: ʻನಿನಗಾಗಿʼ ಸೀರಿಯಲ್‌ನಲ್ಲಿ ದಿವ್ಯಾ ಉರುಡುಗ ಜತೆ ‘ಗಿಣಿರಾಮ’ ಧಾರಾವಾಹಿಯ ನಟ ನಟನೆ

British Journalist
ದೇಶ31 mins ago

British Journalist: “ವವ ಭಾರತದ ಬಗ್ಗೆ ಪ್ರಪಂಚಕ್ಕೆ ತಿಳಿಸಬೇಕು”- ಇಂಡಿಯಾಗೆ ಮನಸೋತ ಬ್ರಿಟಿಷ್‌ ಪತ್ರಕರ್ತ

Karnataka rain
ಮಳೆ32 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

RCB
ಕ್ರಿಕೆಟ್55 mins ago

RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Pavithra Jayaram Trinayani Serial Son Prajwal Reaction
ಸಿನಿಮಾ1 hour ago

Pavithra Jayaram: ಅಮ್ಮ ಮತ್ತು ಚಂದ್ರಕಾಂತ್‌ ಒಡನಾಟ ಹೇಗಿತ್ತು ಅಂತ ನಮಗೆ ಗೊತ್ತು ಎಂದ ಪವಿತ್ರ ಜಯರಾಮ್ ಮಗ!

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka rain
ಮಳೆ32 mins ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

ಟ್ರೆಂಡಿಂಗ್‌