ತಾತಯ್ಯ ತತ್ವಾಮೃತಂ : ನೀವು ಏನೇ ಆಗಿರಿ, ನಿರ್ಮಲ ಹೃದಯವಂತರಾಗಿರಿ! - Vistara News

ಧಾರ್ಮಿಕ

ತಾತಯ್ಯ ತತ್ವಾಮೃತಂ : ನೀವು ಏನೇ ಆಗಿರಿ, ನಿರ್ಮಲ ಹೃದಯವಂತರಾಗಿರಿ!

ಗುರು, ಸದ್ಗುರುವಾಗುತ್ತಾನೆ. ಸದ್ಗುರುವೆಂದರೆ ಪರಮಾತ್ಮನೇ. ಸದ್ಗುರುವಿನ ವಾಕ್ಯಗಳು ಸತ್ಯವಾದವು ಎನ್ನುತ್ತಾರೆ ಶ್ರೀ ಕ್ಷೇತ್ರ ಕೈವಾರದ ಧರ್ಮಾಧಿಕಾರಿಗಳಾದ ಡಾ. ಎಂ.ಆರ್‌. ಜಯರಾಮ್‌. ತಾತಯ್ಯರ ವಚನಗಳ ಒಳಾರ್ಥವನ್ನು ತಿಳಿಸುವ ಅವರ ಅಂಕಣ ತಾತಯ್ಯ ತತ್ವಾಮೃತಂ ಇಲ್ಲಿದೆ.

VISTARANEWS.COM


on

tatayya thathvamrutam a column by dr m r jayaram about saint kaivara narayanappa
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
kaivara thathayya
M R Jayaram

ಸನಾತನ ಗುರು-ಶಿಷ್ಯ ಪರಂಪರೆಯು ಬಹಳ ವಿಶೇಷತೆಗಳಿಂದ ಕೂಡಿದೆ. ಪರಿಪೂರ್ಣ ಜ್ಞಾನದ ಸಂಪತ್ತಾದ ಗುರುವಿನ ಅನುಗ್ರಹವನ್ನು ಪಡೆಯುವುದು ಅಷ್ಟು ಸುಲಭದ ಮಾತಲ್ಲ. ಮೋಕ್ಷಮಾರ್ಗದ ಮೂಲವನ್ನು ತೋರಿಸಬಹುದು ಆದರೆ, ಅಂತಹ ಬದ್ಧತೆ, ವಿಧೇಯತೆಯಿಂದ ಕೂಡಿರುವ ಶಿಷ್ಯನು ಕಾಣಸಿಗುವುದು ದುರ್ಲಭ ಎಂದಿದ್ದಾರೆ ಕೈವಾರ ತಾತಯ್ಯನವರು.

ಗುರುಸೂತ್ರದಲ್ಲಿರುವ ಗುಣವಂತ ಬಲ್ಲ...
ಗುರು, ಸದ್ಗುರುವಾಗುತ್ತಾನೆ. ಸದ್ಗುರುವೆಂದರೆ ಪರಮಾತ್ಮನೇ. ಸದ್ಗುರುವಿನ ವಾಕ್ಯಗಳು ಸತ್ಯವಾದವು. ಲೌಕಿಕ ಪ್ರಪಂಚದಲ್ಲಿ ಮುಳುಗಿರುವ ಅಜ್ಞಾನಿಗಳಿಗೆ ತಾತಯ್ಯನವರ ಬೋಧನೆಯ ವಾಕ್ಯಗಳು ಕಠಿಣವೆನಿಸಬಹುದು ಆದರೆ ಆ ವಾಕ್ಯಗಳು ಸಂಪೂರ್ಣವಾದ ಸತ್ಯದಿಂದ ಕೂಡಿದೆ. “ಗುರುಸೂತ್ರದಲ್ಲಿರುವ ಗುಣವಂತ ಬಲ್ಲ” ಎಂದಿದ್ದಾರೆ ತಾತಯ್ಯನವರು.

ಈ ಸತ್ಯವು ಅರಿವಾಗಬೇಕಾದರೆ ಗುರುವಿನ ಕೃಪೆಯಿರುವ, ಗುರುಸೂತ್ರದಲ್ಲಿರುವ ಗುಣವಂತನಿಗೆ ಮಾತ್ರ ಅರ್ಥವಾಗುತ್ತದೆ ಎನ್ನುತ್ತಾರೆ. ತಾತಯ್ಯನವರು ಹೇಳಿರುವ ವಿದ್ಯೆ ಬ್ರಹ್ಮವಿದ್ಯೆ. ಜೀವನು ಮೂಲಾಧಾರ ಚಕ್ರದಿಂದ ಸಹಸ್ರಾರ ಚಕ್ರದಲ್ಲಿ ಸೇರಿ ಪರಮಾತ್ಮನಲ್ಲಿ ಐಕ್ಯವಾಗುವ ವಿದ್ಯೆಯೇ ಬ್ರಹ್ಮವಿದ್ಯೆ. ಇಂತಹ ಬ್ರಹ್ಮವಿದ್ಯೆಯನ್ನು ಸಾಧನೆ ಮಾಡುವ ಶಿಷ್ಯನು ಕಾಣುತ್ತಿಲ್ಲ ಎಂದಿದ್ದಾರೆ ತಾತಯ್ಯನವರು. ಹಾಗಾದರೆ ಇಂತಹ ಸಾಧನೆ ಮಾಡುವ ಶಿಷ್ಯರು ಎಲ್ಲಿ ಹೋದರು? ಸಾಧನೆಯನ್ನು ಹೇಳಿಕೊಡುವ ಗುರುಗಳು ಎಲ್ಲಿ ಹೋದರು? ಎಂಬ ಪ್ರಶ್ನೆ ಉದ್ಭವವಾಗುತ್ತದೆ ಮತ್ತು ಚಿಂತನೆ ಆರಂಭವಾಗುತ್ತದೆ. ಈ ಪ್ರಶ್ನೆಗೆ ಉತ್ತರವನ್ನು ಕಂಡುಕೊಳ್ಳಬೇಕಾದರೆ ಮಹಾಭಾರತದ ಈ ಘಟ್ಟವನ್ನು ಅರ್ಥಮಾಡಿಕೊಳ್ಳಬೇಕು.

ಅನುಭವದ ಉಪದೇಶ

ಮಹಾಭಾರತದ ಕೊನೆಯ ಭಾಗ. ಕುರುಕ್ಷೇತ್ರ ಯುದ್ಧ ಮುಗಿದಿದೆ. ಯುಧಿಷ್ಠಿರನಿಗೆ ಪಟ್ಟಾಭಿಷೇಕವಾಗಿದೆ. ರಾಜ್ಯಭಾರವನ್ನು ವಹಿಸಿಕೊಂಡಿದ್ದಾನೆ. ರಾಜ್ಯ ಪರಿಪಾಲನೆ ಮಾಡುತ್ತಿರುವ ಸಮಯದಲ್ಲೊಂದು ದಿನ ಶ್ರೀಕೃಷ್ಣನು ಅರಮನೆಗೆ ಬಂದು ಯುಧಿಷ್ಠಿರನಿಗೆ ಈ ರೀತಿಯಾಗಿ ಬೋಧಿಸುತ್ತಾನೆ. “ಯುಧಿಷ್ಠಿರ ನೀನು ರಾಜನಾಗಿ ಪ್ರಜೆಗಳನ್ನು ಪಾಲಿಸುತ್ತಿದ್ದೀಯ, ಈಗ ನೀನು ರಾಜಧರ್ಮವನ್ನು ಚೆನ್ನಾಗಿ ಅರಿತುಕೊಳ್ಳಬೇಕು. ಭೀಷ್ಮ ಪಿತಾಮಹನು ರಾಜಧರ್ಮವನ್ನು ಚೆನ್ನಾಗಿ ತಿಳಿದುಕೊಂಡಿರುವ ಜ್ಞಾನಿ. ಆದಕಾರಣ ರಾಜನಾಗಿರುವ ನೀನು ರಾಜಧರ್ಮವನ್ನು ಭೀಷ್ಮನಿಂದ ತಿಳಿದುಕೊಳ್ಳಬೇಕು ಎನ್ನುತ್ತಾನೆ.

ಈ ಮಾತನ್ನು ಮನ್ನಿಸಿದ ಯುಧಿಷ್ಠಿರ, ಶ್ರೀಕೃಷ್ಣ ಹಾಗೂ ತನ್ನ ತಮ್ಮಂದಿರೊಂದಿಗೆ ಕುರುಕ್ಷೇತ್ರದ ಶರಶಯ್ಯೆಯಲ್ಲಿ ಮಲಗಿದ್ದ ಭೀಷ್ಮನ ಬಳಿಗೆ ಬರುತ್ತಾನೆ. ಭೀಷ್ಮನ ಪಾದಗಳಿಗೆ ವಂದಿಸಿ ಸಾಲಾಗಿ ನಿಂತುಕೊಳ್ಳುತ್ತಾರೆ. ಆಗ ಶ್ರೀಕೃಷ್ಣನು ಭೀಷ್ಮನನ್ನು ಕುರಿತು, ಇಂದು ಯುಧಿಷ್ಠಿರ ರಾಜನಾಗಿ ಬಂದು, ತಮ್ಮ ಬಳಿ ರಾಜಧರ್ಮವನ್ನು ತಿಳಿದುಕೊಳ್ಳಬೇಕೆಂದು ಅಪೇಕ್ಷಿಸಿದ್ದಾನೆ. ದಯವಿಟ್ಟು ರಾಜನಿಗೆ ರಾಜಧರ್ಮದ ನೀತಿಯನ್ನು ಉಪದೇಶ ಮಾಡಿ ಎನ್ನುತ್ತಾನೆ.

ಈ ಮಾತನ್ನು ಕೇಳಿದ ಭೀಷ್ಮನು ನಸುನಗುತ್ತಾನೆ. ನಗುತ್ತಾ ಭೀಷ್ಮ ಶ್ರೀಕೃಷ್ಣನನ್ನು ಕುರಿತು “ಜಗತ್ತಿಗೆ ಓಡೆಯ ನೀನು, ನೀನೇ ಅವರಿಗೆ ರಾಜಧರ್ಮವನ್ನು ಬೋಧಿಸಬಹುದಲ್ಲವೇ? ಅದು ಬಿಟ್ಟು ನನ್ನ ಬಳಿ ಕರೆತಂದಿದಿಯಲ್ಲಾ” ಎನ್ನುತ್ತಾನೆ.
ಆಗ ಶ್ರೀಕೃಷ್ಣನು ಹೇಳುತ್ತಾನೆ “ನೀವು ಅನುಭವದಿಂದ ಕಲಿತಿದ್ದೀರಿ, ಉಪದೇಶ ಮಾಡಲು ಅನುಭವ ಬಹಳ ಮುಖ್ಯ. ನಿಮಗಿರುವ ಅನುಭವ ಯಾರಿಗೂ ಇಲ್ಲ. ಈ ರಾಜಧರ್ಮ ನಿಮ್ಮ ಬಾಯಿಂದ ಉಪದೇಶವಾಗಲಿ ಎಂಬುದು ನನ್ನ ಇಚ್ಛೆ. ಅನುಭವದಿಂದ ಕೂಡಿದ ಉಪದೇಶ ಹೃದಯಕ್ಕೆ ಮುಟ್ಟುತ್ತದೆ. ಅನುಭವದ ಜ್ಞಾನ ದೊಡ್ಡದು, ನೀವೇ ಇವರಿಗೆ ಉಪದೇಶವನ್ನು ಮಾಡಿರಿ ಎನ್ನುತ್ತಾನೆ ಶ್ರೀಕೃಷ್ಣ.

ಪರಮಾತ್ಮನಾದ ಶ್ರೀಕೃಷ್ಣನ ಮಾತಿಗೆ ಕಟ್ಟುಬಿದ್ದು ಭೀಷ್ಮ ಪಿತಾಮಹ ರಾಜನೀತಿಧರ್ಮವನ್ನು ಉಪದೇಶಿಸಲು ಶುರುಮಾಡುತ್ತಾನೆ. ಅವರ ಉಪದೇಶವು ಮೊದಲಿಗೆ ವಿಷ್ಣುಸಹಸ್ರನಾಮದಿಂದ ಪ್ರಾರಂಭವಾಗುತ್ತದೆ. ನಂತರ ರಾಜಧರ್ಮವನ್ನು ಬೋಧಿಸುತ್ತಾರೆ. ಯಾಕೆ ಭೀಷ್ಮಪಿತಾಮಹರು ಮೊದಲಿಗೆ ವಿಷ್ಣುಸಹಸ್ರನಾಮವನ್ನು ಹೇಳಿದರು. ಇದೊಂದು ಯಕ್ಷಪ್ರಶ್ನೆ. ಯಾಕೆಂದರೆ ಕೇಳಿದ್ದು ರಾಜಧರ್ಮನೀತಿ, ಆದರೆ ಹೇಳಿದ್ದು ವಿಷ್ಣುಸಹಸ್ರನಾಮ. ಇದೊಂದು ಅಪರೂಪದ ಸನ್ನಿವೇಶ. ಇಲ್ಲಿ ಶ್ರೀಕೃಷ್ಣನು ಪರಮಾತ್ಮನಾಗಿದ್ದಾನೆ. ಭೀಷ್ಮ ಪಿತಾಮಹನು ಅನುಭವದ ಗುರುವಾಗಿದ್ದಾನೆ. ರಾಜನಾದ ಯುಧಿಷ್ಠಿರ ಹಾಗೂ ಸೋದರರು ಶಿಷ್ಯರಾಗಿದ್ದಾರೆ. ಭೀಷ್ಮರು ಅವರಿಗೆ ವಿಷ್ಣು ಸಹಸ್ರನಾಮವನ್ನು ಬೋಧಿಸಿದ್ದಾರೆ.

ಈ ಪ್ರಸಂಗದ ಸೂಕ್ಷ್ಮತೆಯನ್ನು ಅರಿತುಕೊಳ್ಳಬೇಕು. ಯುಧಿಷ್ಠಿರ ಕುರುಕ್ಷೇತ್ರ ಯುದ್ಧದಲ್ಲಿ ತನ್ನ ಸಂಬಂಧಿಕರನ್ನು ಸೋಲಿಸಿ ಸಾಯಿಸಿದ್ದಾನೆ. ಸಂಬಂಧಿಕರಷ್ಟೇ ಅಲ್ಲ ಗುರುಗಳನ್ನು ಸಾಯಿಸಿದ್ದಾನೆ. ಇದೆಲ್ಲದಕ್ಕೂ ಕಾರಣ ರಾಜ್ಯವನ್ನು ಪಡೆಯಬೇಕೆಂಬ ಬಯಕೆ, ಆಸೆಯ ಹಸಿವು. ಅದೇ ಅಜ್ಞಾನ. ಯುಧಿಷ್ಠಿರ ಕರ್ಮದಲ್ಲಿದ್ದಾನೆ. ಈ ಅಜ್ಞಾನದಿಂದ ಹೊರಬರಬೇಕಾದರೆ ಏನು ಮಾಡಬೇಕು? ರಾಜ್ಯಕ್ಕಾಗಿ ಯುದ್ಧ ಮಾಡಿದ್ದಾಯಿತು, ಸಾವುನೋವುಗಳಾಯಿತು. ಆದರೆ ಸಕಲ ಜೀವರಾಶಿಗಳನ್ನು ಸಮಭಾವದಿಂದ ನೋಡುವುದೇ ರಾಜಧರ್ಮ.

ಅನುಕ್ಷಣವೂ ಪರಮಾತ್ಮನು ಪಕ್ಕದಲ್ಲೇ ಇದ್ದರೂ ನಿಶ್ಚಲವಾದ ಮನಸ್ಸಿನಿಂದ ಗಮನಿಸಲಿಲ್ಲ. ಈಗ ಗುರುವಿನ ಹತ್ತಿರ ಬಂದಾಗ ಯುಧಿಷ್ಠಿರನಿಗೆ ಪರಮಾತ್ಮನ ಮಹತ್ವ ತಿಳಿಯಿತು. ಮನಸ್ಸನ್ನು ಸ್ಥಿರವಾಗಿ ನಿಲ್ಲಿಸಿ ವಿಷ್ಣುಸಹಸ್ರನಾಮವನ್ನು ಪಠಿಸುವ ಜ್ಞಾನ ಪ್ರಾಪ್ತವಾಯಿತು. ಈ ಜ್ಞಾನದಿಂದ ಯುಧಿಷ್ಠಿರ ರಾಜ್ಯಭಾರವನ್ನು ಶ್ರದ್ಧೆಯಿಂದ ಮಾಡಿ, ಮೋಕ್ಷವನ್ನು ಪಡೆದ.

kaivara tatayya ಕೈವಾರ ತಾತಯ್ಯ

ಹೃದಯದ ಭಾವನೆ ದೊಡ್ಡದು

ವಿಷ್ಣುಸಹಸ್ರನಾಮ ಪಠಿಸುವಾಗ ಮನಸ್ಸನ್ನು ನಿಶ್ಚಲವಾಗಿ, ಸ್ಥಿರವಾಗಿ ನಿಲ್ಲಿಸಿ ಪ್ರತಿಯೊಂದು ನಾಮಕ್ಕೂ ತುಳಸೀದಳಗಳನ್ನು ಮಾನಸಿಕವಾಗಿ ಪರಮಾತ್ಮನ ಪಾದಗಳಿಗೆ ಸಲ್ಲಿಸಬೇಕು. ಹೀಗಾದಾಗ ಮಾತ್ರ ನಮ್ಮ ಅಜ್ಞಾನ ತೊಲಗುತ್ತದೆ. ನಿಶ್ಚಲವಾಗಿ ಮನಸ್ಸನ್ನು ನಿಲ್ಲಿಸದೆ ಕೇವಲ ಬಾಯಿಪಾಠ ಮಾಡಿಕೊಂಡು ಹೇಳಿದರೆ ಅದರಿಂದ ಪ್ರಯೋಜನವಿಲ್ಲ. ಬಾಯಿಪಾಠಕ್ಕಿಂತಲೂ, ನಿರ್ಮಲ ಹೃದಯದ ಭಾವನೆ ದೊಡ್ಡದು. ಇದನ್ನು ಗುರುವಿನ ಬಳಿಗೆ ಹೋಗುವ ಮುನ್ನ ಶಿಷ್ಯನು ಅರಿತುಕೊಳ್ಳಬೇಕಾದ ಬಹುದೊಡ್ಡ ಪಾಠ.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ವರದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ

ನಿರ್ಮಲ ಹೃದಯವಂತನಾಗಬೇಕು

ತಾತಯ್ಯನವರು ತಾರಕ ಬ್ರಹ್ಮಾನಂದ ದ್ವಯಕಂದ ಶತಕದ ಒಂದು ಪದ್ಯದಲ್ಲಿ ಈ ರೀತಿಯ ಉಪದೇಶವನ್ನು ಮಾಡಿದ್ದಾರೆ;
ಶಾಸ್ತ್ರಮು ಲೆನ್ನಿ ಚದಿವಿನನ್
ನಿರ್ಮಲ ಹೃದಯುಂಡು ಕಾಡು ನೀಚಾತ್ಮಕುಡೈ
ಸಂಸಾರ ಜಲಧಿಲೋ ಬಡಿ
ಪೋರ್ಲುಚು ಕೊನ್ನಾಳುವುಂಡಿ ಚನು ದುರ್ಗತಿನ್ ||

ಆತ್ಮಶುದ್ಧಿಯಿಲ್ಲದವರು ಎಷ್ಟು ಶಾಸ್ತ್ರಗಳನ್ನು ಅಭ್ಯಾಸಮಾಡಿ ಪಾಂಡಿತ್ಯವನ್ನು ಪಡೆದುಕೊಂಡಿದ್ದರೂ ನಿರ್ಮಲ ಹೃದಯವುಳ್ಳವನಾಗುವುದಿಲ್ಲ. ಅಂತಹವರು ನೀಚಾತ್ಮಕರಾಗಿಯೇ ಸಂಸಾರವೆಂಬ ಸಾಗರದಲ್ಲಿ ಬಿದ್ದು ಹೊರಳಾಡುತ್ತಾ ಕೆಲವು ದಿನಗಳು ಬದುಕಿ ಕೊನೆಗೆ ದುರ್ಗತಿಗೆ ಸಲ್ಲುವರು ಎಂಬ ತತ್ವವನ್ನು ತಾತಯ್ಯನವರು ಬೋಧಿಸಿದ್ದಾರೆ.

ಶಾಸ್ತ್ರಗಳನ್ನು ಓದುತ್ತಾ, ಓದುತ್ತಾ ಅಹಂಕಾರ ನಾಶವಾಗಿ ಶುದ್ಧ ಮನಸ್ಸಿನಿಂದ ನಿರ್ಮಲ ಹೃದಯವಂತನಾಗಬೇಕು. ಆತ್ಮಶೋಧನೆ ಮಾಡದೆ ಶಾಸ್ತ್ರಗಳನ್ನು ಓದುವುದಷ್ಟೇ ಉದ್ದೇಶವಾಗಿರುವ ನೀಚಾತ್ಮನು ಸತ್ತಮೇಲೆ ಕರ್ಮಫಲಕ್ಕೆ ಅನುಸಾರವಾಗಿ ದುರ್ಗತಿಗೆ ಹೋಗುವನೇ ಹೊರತು ಮುಕ್ತನಾಗುವುದಿಲ್ಲವೆಂದು ತಾತಯ್ಯನವರು ಹೇಳಿದ್ದಾರೆ. ಮುಕ್ತನಾಗುವುದಕ್ಕೆ ನರಜನ್ಮ ಶ್ರೇಷ್ಠವಾದುದೆಂದು ತಾತಯ್ಯನವರು ಈ ರೀತಿಯಾಗಿ ಬೋಧಿಸಿದ್ದಾರೆ;
ನರಜನ್ಮಂಬುನ ಮೋಕ್ಷಮು
ಕನಕುಂಡಿನ ಲೇದು ಲೇದು ಯೇ ಜನ್ಮಮುನನ್
ಯಿದಿಗೋ ಇಪುö್ಪಡು ಸಮಯಮು
ನಿನು ನೀವೇ ತೆಲಿಯವಯ್ಯ ನಾರೇಯಣ ಕವಿ||

ಮಾನವ ಜನ್ಮದಲ್ಲಿ ಮೋಕ್ಷವನ್ನು ಪಡೆದುಕೊಳ್ಳದಿದ್ದರೆ ಬೇರೆ ಯಾವ ಜನ್ಮದಲ್ಲೂ ಮೋಕ್ಷವನ್ನು ಪಡೆಯಲು ಸಾಧ್ಯವಿಲ್ಲ ಎಂಬ ಸತ್ಯವನ್ನು ತಾತಯ್ಯನವರು ಘಂಟಾಘೋಷವಾಗಿ ಹೇಳಿದ್ದಾರೆ. ಈಗ ಸರಿಯಾದ ಸಮಯ ಬಂದಿದೆ, ಈಗ ನಿನ್ನನ್ನು ನೀನು ಅರಿತುಕೊಂಡು ಮೋಕ್ಷವನ್ನು ಸಂಪಾದಿಸಿಕೋ ಎಂದಿದ್ದಾರೆ. ಮಾನವರಾಗಿ ಹುಟ್ಟಿದ ಮೇಲೆ ಮೋಕ್ಷಕ್ಕೆ ಬೇಕಾದ ಬುತ್ತಿಯನ್ನು ಇಂದಿನಿಂದಲೇ ಸಿದ್ಧಪಡಿಸಿಕೊಳ್ಳೋಣ, ಜಾಗೃತವಾಗೋಣ.

ಲೇಖಕರು ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಕೈವಾರ

ಇದನ್ನೂ ಓದಿ : Kaivara Tatayya Jayanthi : ಜೀವಪರ ಸಂತ ಕೈವಾರ ತಾತಯ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಶಿವಮೊಗ್ಗ

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Shivamogga News: ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Siddhivinayaka Swami SrimanMaharathotsava in Ripponpet
Koo

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಆಭಿನವ ಚನ್ನಬಸವ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ, ಈ ವರ್ಷ ನಾಡಿಗೆ ಸಮೃದ್ಧ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ, ನೆಮ್ಮದಿಯನ್ನು ಕರುಣಿಸುವಂತಾಗಲಿ ಎಂದು ಸಿದ್ಧಿವಿನಾಯಕ ದೇವರಲ್ಲಿ ಶ್ರೀಗಳು ಪ್ರಾರ್ಥಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಮನ್ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಿವಮೊಗ್ಗದ ವಸಂತ ಭಟ್ ಮತ್ತು ಚಂದ್ರಶೇಖರ ಭಟ್ ಹಾಗೂ ಗುರುರಾಜ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್‌ಕ್ರೀಮ್, ಕುಡಿಯುವ ನೀರಿನ ವ್ಯವಸ್ಥೆಯನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗಿತ್ತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್. ಸತೀಶ್, ಗಣೇಶ್ ಎನ್. ಕಾಮತ್, ಎಂ.ಡಿ. ಇಂದ್ರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ತುಳೋಜಿರಾವ್, ಸ್ವಾಮಿ ದೊಡ್ಡಿನಕೊಪ್ಪ, ವೈ.ಜೆ. ಕೃಷ್ಣ, ಉಮೇಶ್ ಆರ್., ಮಂಜನಾಯ್ಕ್, ಎಂ.ಬಿ. ಮಂಜುನಾಥ, ಎಂ. ಸುರೇಶ್‌ ಸಿಂಗ್, ಸುಧೀರ್ ಪಿ., ರವೀಂದ್ರ ಕೆರೆಹಳ್ಳಿ, ನಾಗರತ್ನ ದೇವರಾಜ್, ಎಸ್.ಎನ್. ಬಾಲಚಂದ್ರ, ಕುಸುಮಾ ಬಾಲಚಂದ್ರ, ಪದ್ಮಾ ಸುರೇಶ್, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷ್ಮಿ ಮೋಹನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading

ಧಾರ್ಮಿಕ

Ballari News: ಬಾಯಿಯೊಳಗೆ ತ್ರಿಶೂಲ; ಬೆನ್ನಿಗೆ ಕೊಕ್ಕೆ ಕಟ್ಟಿಕೊಂಡು ಕಾರು, ರಿಕ್ಷಾ ಎಳೆದ ಭಕ್ತರು!

Ballari News: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ ಜರುಗಿತು. ಹರಕೆ ತೀರಿಸುವ ಭಕ್ತರ ಆಚರಣೆಗಳು ಗಮನ ಸೆಳೆದವು.

VISTARANEWS.COM


on

Kalamma Devi Pooja Mahotsava in Kampli
Koo

ಕಂಪ್ಲಿ: ಕಂಪ್ಲಿ ಕೋಟೆಯ ಮೀನುಗಾರರ ಕಾಲೋನಿಯಲ್ಲಿ ಮೀನುಗಾರ ಸಮುದಾಯದ ಆರಾಧ್ಯ ದೈವ ಶ್ರೀ ಕಾಳಮ್ಮ ದೇವಿಯ ಪೂಜಾ ಮಹೋತ್ಸವವು ಮಂಗಳವಾರ ಅದ್ಧೂರಿಯಾಗಿ (Ballari News) ಜರುಗಿತು.

ಸೋಮವಾರ ಸಂಜೆ ಗಂಗೆಸ್ಥಳ ಮತ್ತು ಅಗ್ನಿ ಕುಂಭೋತ್ಸವ ಸೇರಿದಂತೆ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ಜರುಗಿದವು. ಮೆರವಣಿಗೆಯಲ್ಲಿ ಮೂವರು ಭಕ್ತಾದಿಗಳು ಬಾಯಿಗೆ 12 ಅಡಿ ಉದ್ದದ ತ್ರಿಶೂಲ ಅಸ್ತ್ರವನ್ನು ಹಾಕಿಸಿಕೊಂಡು ಕಲ್ಲುಗುಂಡು, ಇಬ್ಬರು ಭಕ್ತಾದಿಗಳು ಆಟೋರಿಕ್ಷಾ, ಇಬ್ಬರು ಭಕ್ತರು ಕಾರುಗಳನ್ನು ತಮ್ಮ ಬೆನ್ನುಗಳಿಗೆ ಹಾಕಿದ್ದ ಕಬ್ಬಿಣದ ಕೊಕ್ಕೆಗಳಿಂದ ಎಳೆದು ತಮ್ಮ ಹರಕೆ ತೀರಿಸಿದರು. ಟ್ರ್ಯಾಕ್ಟರ್‌ಗೆ ಹಾಕಲಾಗಿದ್ದ ಬೊಂಬುಗಳಿಗೆ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ಜೋತು ಬೀಳುವ ಮೂಲಕ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

ಮೆರವಣಿಗೆಯು ಶ್ರೀ ಕಾಳಮ್ಮ ದೇವಸ್ಥಾನದಿಂದ ಶ್ರೀ ಸುಂಕಲಮ್ಮ ದೇವಸ್ಥಾನದ ವರೆಗೂ ಜರುಗಿತು. ಭಕ್ತಾದಿಗಳು ರಸ್ತೆಯುದ್ದಕ್ಕೂ ತಮ್ಮ ಬೆನ್ನಿಗೆ ಹಾಕಲಾಗಿದ್ದ ಕೊಕ್ಕೆಯಿಂದ ತಮ್ಮ ಹರಕೆಯಂತೆ ಸುಡು ಬಿಸಿಲ ಮಧ್ಯೆಯು ಗುಂಡು, ಆಟೋ, ಕಾರುಗಳನ್ನು ಎಳೆದೊಯ್ದು ಭಕ್ತಿ ಸಮರ್ಪಿಸಿದರು.

ಪಟ್ಟಣದ ಸೇರಿದಂತೆ ತಾಲೂಕಿನ ವಿವಿಧೆಡೆಗಳಿಂದ ಆಗಮಿಸಿದ್ದಂತಹ ಭಕ್ತರು ವಿಶೇಷ ಆಚರಣೆಯನ್ನು ನೋಡಿ ಕಣ್ ತುಂಬಿಕೊಳ್ಳುವ ಮೂಲಕ ಆಶ್ಚರ್ಯ ಚಕಿತರಾದರು. ಕಾರ್ಯಕ್ರಮದ ಪೌರೋಹಿತ್ಯವನ್ನು ಮಾರೆಪ್ಪ ಪೂಜಾರಿ ವಹಿಸಿದ್ದರು.

ಇದನ್ನೂ ಓದಿ: Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

ಈ ಸಂದರ್ಭದಲ್ಲಿ ಮೀನುಗಾರ ಸಹಕಾರ ಸಂಘದ ಅಧ್ಯಕ್ಷ ಚೆನ್ನರಾಜು, ಉಪಾಧ್ಯಕ್ಷ ಷಣ್ಮುಖಪ್ಪ, ಮುಖಂಡರಾದ ಮಾರೆಪ್ಪ ಪೂಜಾರಿ, ಸ್ವಾಮಿ ದೊರೆ, ಎ. ಗಣೇಶ್, ಎಸ್.ಜಿ.ಪೂಜಾರಿ, ಗುರುಮೂರ್ತಿ, ಪಣಿಯಪ್ಪ, ಆರ್. ಕೃಷ್ಣ ಪೂಜಾರಿ, ಎಸ್.ಆರ್. ಸುರೇಶ್ ಸೇರಿದಂತೆ ಸರ್ವ ಸಮುದಾಯಗಳ ಸದ್ಭಕ್ತರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Sadhguru Jaggi Vasudev: ಮೆದುಳಿನ ಶಸ್ತ್ರಚಿಕಿತ್ಸೆಯ ತಿಂಗಳ ಬಳಿಕ ಕಾಂಬೋಡಿಯಾಗೆ ಸದ್ಗುರು ಪ್ರವಾಸ

Sadhguru Jaggi Vasudev: ಕಾಂಬೋಡಿಯಾದ ಸಾಂಸ್ಕೃತಿಕ ಮತ್ತು ಅಧ್ಯಾತ್ಮಿಕತೆಯ ಅನ್ವೇಷಣೆಗಾಗಿ ಸದ್ಗುರು ಜಗ್ಗಿ ವಾಸುದೇವ್‌ ಅವರು ತೆರಳಿದ್ದಾರೆ. ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸದ್ಗುರುಗಳ ಮೊದಲ ಪ್ರಯಾಣವಾಗಿದೆ.

VISTARANEWS.COM


on

Sadhguru Jaggi Vasudev
Koo

ಸೀಮ್‌ ರೀಪ್‌(ಕಾಂಬೋಡಿಯಾ): ಮೆದುಳಿನ ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಆಳದ ಅನ್ವೇಷಣೆಗಾಗಿ ಆಧ್ಯಾತ್ಮಿಕ ಗುರು ಹಾಗೂ ಈಶ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್‌ (Sadhguru Jaggi Vasudev) ಅವರು ಕಾಂಬೋಡಿಯಾಗೆ ತೆರಳಿದ್ದಾರೆ. ಕಾಂಬೋಡಿಯಾ ಪ್ರವಾಸೋದ್ಯಮ ಸಚಿವ ಎಚ್.ಇ. ಎಸ್ಒಕೆ ಸೋಕೆನ್ ಅವರು ಸೀಮ್ ರೀಪ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸದ್ಗುರುಗಳನ್ನು ಆತ್ಮೀಯತೆಯಿಂದ ಸ್ವಾಗತಿಸಿದರು.

ಗಮನಾರ್ಹ ಆತಿಥ್ಯದ ಜತೆಗೆ ಸಚಿವರು, ಕಾಂಬೋಡಿಯಾದ ಪ್ರಧಾನ ಮಂತ್ರಿಯವರ ವೈಯಕ್ತಿಕ ಪತ್ರವನ್ನು ಸದ್ಗುರುಗಳಿಗೆ ಪ್ರಸ್ತುತಪಡಿಸಿದರು. ಸಚಿವರೊಂದಿಗೆ ಅವರ ಪತ್ನಿ, ಕಾಂಬೋಡಿಯಾದ ಪ್ರವಾಸೋದ್ಯಮ ಸಚಿವಾಲಯದ ಅಧಿಕಾರಿಗಳು ಮತ್ತು ಭಾರತದ ಕಾನ್ಸುಲೇಟ್ ಜನರಲ್ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಇದು ಶಸ್ತ್ರಚಿಕಿತ್ಸೆಯ ಒಂದು ತಿಂಗಳ ನಂತರ ತಮ್ಮ ಚಟುವಟಿಕೆಗಳಿಗೆ ಮರಳಿರುವ ಸದ್ಗುರುಗಳ ಮೊದಲ ಪ್ರಯಾಣ. ಅಲ್ಲಿ ಅವರು ಸ್ಥಳೀಯ ಸಂಸ್ಕೃತಿ ಮತ್ತು ದೇವಾಲಯಗಳ ಹಿಂದಿನ ವಿಜ್ಞಾನವನ್ನು ಅನ್ವೇಷಿಸಲಿದ್ದಾರೆ. ಅವರ ಕಾರ್ಯಕ್ರಮವು ಏಪ್ರಿಲ್ 30 ರವರೆಗೆ ಜರುಗಲಿದ್ದು, ಈ ಸಮಯದಲ್ಲಿ ಅಲ್ಲಿನ ಸ್ಥಳೀಯ ಸಂಸ್ಕೃತಿಯಲ್ಲಿ ಮಿಂದೇಳುವುದರ ಜತೆಗೆ, ಕಾಂಬೋಡಿಯಾದ ಸೀಮ್ ರೀಪ್‌ನಲ್ಲಿರುವ ಬೇಯಾನ್ ಮತ್ತು ಅಂಕೋರ್ ವಾಟ್ ದೇವಾಲಯಗಳಿಗೆ ಭೇಟಿ ನೀಡಲಿದ್ದಾರೆ.

ಯಾವುದೇ ಬೋಧನೆ, ತತ್ವಶಾಸ್ತ್ರ, ಮತಧರ್ಮ ಅಥವಾ ನಂಬಿಕೆಯ ವ್ಯವಸ್ಥೆಗಳಿಗೆ ಒಳಗಾಗದ ಸದ್ಗುರುಗಳು, ತಮ್ಮ ಆಧ್ಯಾತ್ಮಿಕ ಮತ್ತು ಸಾಮಾಜಿಕ ಪ್ರಯತ್ನಗಳು, ಪರಿಸರ ಕಾರ್ಯಗಳು, ಗ್ರಾಮೀಣ ಶಿಕ್ಷಣ ಮತ್ತು ಇನ್ನೂ ಹೆಚ್ಚಿನವುಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಜನರನ್ನು ತಲುಪಿದ್ದಾರೆ. ಪ್ರಪಂಚದಾದ್ಯಂತ ಮೂವತ್ತು ಲಕ್ಷ ಜನರು ಅವರ ಪ್ರಮುಖ ಕಾರ್ಯಕ್ರಮವಾದ ಇನ್ನರ್ ಎಂಜಿನಿಯರಿಂಗ್ ಕಾರ್ಯಕ್ರಮದ ಪ್ರಯೋಜನ ಪಡೆದಿದ್ದಾರೆ. ಆ ಮೂಲಕ ಜನರು ತಮ್ಮ ಜೀವನದ ಗ್ರಹಿಕೆಯಲ್ಲಿ ಹೆಚ್ಚಿನ ಸಮತೋಲನ ಮತ್ತು ಗಮನಾರ್ಹ ಸ್ಪಷ್ಟತೆಯನ್ನು ಪಡೆದುಕೊಂಡಿದ್ದಾರೆ.

ಇದನ್ನೂ ಓದಿ | Prerane : ಗೆಲುವಿಗೆ ಸೂತ್ರಗಳಿವೆಯೇ? ಸದ್ಗುರು ಹೀಗೆನ್ನುತ್ತಾರೆ!

2023 ರಲ್ಲಿ ಸದ್ಗುರುಗಳ ಸಾಮಾಜಿಕ ಮಾಧ್ಯಮವು 4.37 ಶತಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಪಡೆದಿತ್ತು. ಈ ಹಿನ್ನೆಲೆಯಲ್ಲಿ ಕಾಂಬೋಡಿಯಾದ ಅವರ ಅನ್ವೇಷಣೆಯು, ಆ ದೇಶದ ಬಗೆಗಿನ ಅವರ ಒಳನೋಟಗಳಿಂದ ಪ್ರಯೋಜನ ಪಡೆಯಲು ಜಗತ್ತಿಗೆ ಒಂದು ವಿಶಿಷ್ಟ ಅವಕಾಶವನ್ನು ಒದಗಿಸಲಿದೆ.

Continue Reading

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading
Advertisement
assault case in bengaluru
ಬೆಂಗಳೂರು18 mins ago

Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ

Prajwal Revanna Case site inspection by SIT team in HD Revanna Basavanagudi residence
ಕ್ರೈಂ29 mins ago

Prajwal Revanna Case: ಪ್ರಜ್ವಲ್‌ ಅತ್ಯಾಚಾರ ಕೇಸ್‌; ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

No Diet Day 2024
ಆರೋಗ್ಯ46 mins ago

No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

pakistan team
ಕ್ರೀಡೆ47 mins ago

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Gold Rate Today
ಕರ್ನಾಟಕ52 mins ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Puttakkana makkalu sahana dead
ಕಿರುತೆರೆ59 mins ago

Puttakkana Makkalu: ಸಹನಾಳ ಸಾವಿನ ಸುದ್ದಿ ಕೇಳಿ ಮುಗಿಲುಮುಟ್ಟಿತು ಪುಟ್ಟಕ್ಕನ ಆಕ್ರಂದನ

Rekha Jhunjhunwala
ವಾಣಿಜ್ಯ1 hour ago

Rekha Jhunjhunwala: ಷೇರು ಮಾರುಕಟ್ಟೆಯಲ್ಲಿ ರೇಖಾ ಜುಂಜುನ್‌ವಾಲಾಗೆ 805 ಕೋಟಿ ರೂ. ನಷ್ಟ; ಕಾರಣವೇನು?

viral news
ಕ್ರಿಕೆಟ್1 hour ago

Viral News: ಕ್ರಿಕೆಟ್‌ ಆಡುವಾಗ ಖಾಸಗಿ ಭಾಗಕ್ಕೆ ಚೆಂಡು ಬಡಿದು ಬಾಲಕ ದಾರುಣ ಸಾವು; ವಿಡಿಯೊ ಇದೆ

Sunita Williams
ವಿದೇಶ2 hours ago

Sunita Williams: 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸುನೀತಾ ವಿಲಿಯಮ್ಸ್‌ ಸಜ್ಜು

Namma Metro
ಬೆಂಗಳೂರು2 hours ago

Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್‌ ಡಾಂಗ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ20 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ21 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ22 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌