Land For Job Case: ತೇಜಸ್ವಿ ಯಾದವ್‌, ಸಂಬಂಧಿಕರ ನಿವಾಸದಲ್ಲಿ 70 ಲಕ್ಷ ರೂ., 1.5 ಕೆ.ಜಿ ಚಿನ್ನ ಪತ್ತೆ - Vistara News

ದೇಶ

Land For Job Case: ತೇಜಸ್ವಿ ಯಾದವ್‌, ಸಂಬಂಧಿಕರ ನಿವಾಸದಲ್ಲಿ 70 ಲಕ್ಷ ರೂ., 1.5 ಕೆ.ಜಿ ಚಿನ್ನ ಪತ್ತೆ

Land For Job Case: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಲವೆಡೆ ದಾಳಿ ನಡೆಸಿದ್ದು, ಲಕ್ಷಾಂತರ ರೂ. ನಗದು, ಚಿನ್ನ ಪತ್ತೆಯಾಗಿದೆ. ಆದಾಗ್ಯೂ, ಪತ್ನಿಯ ಅನಾರೋಗ್ಯದ ಕಾರಣ ತೇಜಸ್ವಿ ಯಾದವ್‌ ಅವರು ಶನಿವಾರ (ಮಾರ್ಚ್‌ 11) ಇ.ಡಿ ವಿಚಾರಣೆಗೆ ಹಾಜರಾಗಿಲ್ಲ.

VISTARANEWS.COM


on

₹70 lakh cash, 1.5 kg gold jewellery found during raids on Tejashwi Yadav, sisters
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಬಿಹಾರದಲ್ಲಿ ನಡೆದಿದೆ ಎನ್ನಲಾದ ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ (Land For Job Case) ಸಂಬಂಧಿಸಿದಂತೆ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರ ದೆಹಲಿ ನಿವಾಸ, ತೇಜಸ್ವಿ ಯಾದವ್‌ ಸಹೋದರಿಯರ ನಿವಾಸಗಳು ಸೇರಿ ಹಲವೆಡೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನಡೆಸಿದ ದಾಳಿ ವೇಳೆ 70 ಲಕ್ಷ ರೂ. ನಗದು, ಒಂದೂವರೆ ಕೆ.ಜಿ ಚಿನ್ನ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಲಾಲು ಪ್ರಸಾದ್‌ ಯಾದವ್‌ ಪುತ್ರ ತೇಜಸ್ವಿ ಯಾದವ್‌, ಪುತ್ರಿಯರಾದ ರಾಗಿಣಿ, ಚಂದಾ, ಹೇಮಾ ಯಾದವ್‌, ರಾಗಿಣಿ ಪತಿ ಜಿತೇಂದ್ರ ಯಾದವ್ ಹಾಗೂ ಲಾಲು ಆಪ್ತ ಅಬು ದೊಜಾನ ಅವರಿಗೆ ಸೇರಿದ ನಿವಾಸ, ಕಚೇರಿ ಸೇರಿ 24 ಕಡೆ ಇ.ಡಿ ದಾಳಿ ನಡೆಸಿದೆ. ರಾಷ್ಟ್ರ ರಾಜಧಾನಿ ಪ್ರದೇಶ (NCR), ದೆಹಲಿ, ಪಟನಾ, ಮುಂಬೈ ಸೇರಿ ಹಲವು ನಗರಗಳಲ್ಲಿ ಇ.ಡಿ ದಾಳಿ ನಡೆಸಿದೆ. ದಾಳಿ ವೇಳೆ, ನಗದು, ಚಿನ್ನದ ಜತೆಗೆ 900 ಡಾಲರ್‌ ಕೂಡ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ವಿಚಾರಣೆಗೆ ತೇಜಸ್ವಿ ಯಾದವ್‌ ಗೈರು

ತೇಜಸ್ವಿ ಯಾದವ್‌ ಅವರ ಪತ್ನಿಯು ಅನಾರೋಗ್ಯಕ್ಕೀಡಾದ ಕಾರಣ ತೇಜಸ್ವಿ ಯಾದವ್‌ ಶನಿವಾರ ಇ.ಡಿ ವಿಚಾರಣೆಗೆ ಹಾಜರಾಗಿಲ್ಲ. ರಾಜಶ್ರೀ ಯಾದವ್‌ ಅವರು ಗರ್ಭಿಣಿಯಾಗಿದ್ದು, ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ದೆಹಲಿಯ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ, ತೇಜಸ್ವಿ ಗೈರಾಗಿದ್ದಾರೆ ಎಂದು ತಿಳಿದುಬಂದಿದೆ.

ಲಾಲು ಪ್ರಸಾದ್‌ ಯಾದವ್‌ ಅವರು 2004-09ರ ಅವಧಿಯ ಯುಪಿಎ ಸರ್ಕಾರದಲ್ಲಿ ರೈಲ್ವೆ ಸಚಿವರಾಗಿದ್ದಾಗ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಸಂಬಂಧಿಕರು ಸೇರಿ ಹಲವರಿಂದ ಕಡಿಮೆ ಹಣಕ್ಕೆ ಜಮೀನು ಖರೀದಿಸಿದ ಪ್ರಕರಣ ಇದಾಗಿದೆ. ಪ್ರಕರಣದಲ್ಲಿ ಈಗಾಗಲೇ ಲಾಲು ಪ್ರಸಾದ್‌ ಯಾದವ್‌ ಅವರನ್ನೂ ವಿಚಾರಣೆ ನಡೆಸಲಾಗಿದೆ.

ಇದನ್ನೂ ಓದಿ: Land For Job Case : ದಿಲ್ಲಿಯ ತೇಜಸ್ವಿ ಯಾದವ್ ಮನೆ ಶೋಧ, ಸಿಬಿಐ ವಿರುದ್ಧ ಸಹೋದರಿ ವಾಗ್ದಾಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Crime News: ಶಾಕಿಂಗ್‌: ಕುಟುಂಬದ 7 ಮಂದಿಯನ್ನು ಕೊಚ್ಚಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ಕಾರಣ ನಿಗೂಢ

Crime News: ಮಧ್ಯಪ್ರದೇಶದಲ್ಲಿ ಇಡೀ ದೇಶವೇ ಬೆಚ್ಚಿ ಬೀಳಿಸುವ ಭೀಕರ ಹತ್ಯಾಕಾಂಡವೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅವಿಭಕ್ತ ಕುಟುಂಬದ 7 ಮಂದಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

VISTARANEWS.COM


on

Crime News
Koo

ಭೋಪಾಲ್‌: ಮಧ್ಯಪ್ರದೇಶದಲ್ಲಿ ಇಡೀ ದೇಶವೇ ಬೆಚ್ಚಿ ಬೀಳಿಸುವ ಭೀಕರ ಹತ್ಯಾಕಾಂಡವೊಂದು ನಡೆದಿದೆ. ವ್ಯಕ್ತಿಯೊಬ್ಬ ತನ್ನ ಅವಿಭಕ್ತ ಕುಟುಂಬದ 7 ಮಂದಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ನಂತರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ಚಿಂದ್ವಾರಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ (Crime News).

ಬೋಡಾಲ್ ಕಛರ್ ಗ್ರಾಮದಲ್ಲಿ ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದೆ ಎಂದು ಮಹುಲ್ಜಿರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ʼʼಘಟನೆ ಕಾರಣ ಇದುವರೆಗೆ ತಿಳಿದು ಬಂದಿಲ್ಲ. ತನಿಖೆ ಆರಂಭಿಸಲಾಗಿದೆʼʼ ಎಂದು ಅವರು ಹೇಳಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 100 ಕಿ.ಮೀ. ದೂರದಲ್ಲಿರುವ ಈ ಗ್ರಾಮಕ್ಕೆ ಚಿಂದ್ವಾರಾ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಧಾವಿಸಿದ್ದಾರೆ.

ಆರೋಪಿ ಮಾನಸಿಕ ಅಸ್ವಸ್ಥ?

ʼʼಮಾನಸಿಕ ಅಸ್ವಸ್ಥನಾಗಿದ್ದ ಕುಟುಂಬದ ಸದಸ್ಯನೊಬ್ಬ ಈ ಕೊಲೆ ಮಾಡಿದ್ದಾನೆʼʼ ಎಂದು ಚಿಂದ್ವಾರದ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಖತ್ರಿ ಅಂದಾಜಿಸಿದ್ದಾರೆ. ʼʼತನ್ನ ಕುಟುಂಬ ಸದಸ್ಯರನ್ನು ಕೊಲೆ ಮಾಡಿದ ನಂತರ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆʼʼ ಎಂದು ಅವರು ತಿಳಿಸಿದ್ದಾರೆ. ʼʼಮಾನಸಿಕ ಸ್ಥೀಮಿತ ಕಳೆದುಕೊಂಡಿದ್ದ ಆತ ಮಂಗಳವಾರ ರಾತ್ರಿ ತನ್ನ ಕುಟುಂಬದ ಮೇಲೆ ದಾಳಿ ನಡೆಸಿ, ತನ್ನ ಸಹೋದರ, ಅತ್ತಿಗೆ, ಪತ್ನಿ, ಚಿಕ್ಕ ಮಗು ಮತ್ತಿತರರನ್ನು ಕೊಂದಿದ್ದಾನೆ. ಬಳಿಕ ಆತ ಗ್ರಾಮದಿಂದ ಸುಮಾರು 100 ಮೀಟರ್ ದೂರದಲ್ಲಿರುವ ಚರಂಡಿಯ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆʼʼ ಎಂದು ಘಟನೆಯ ಭೀಕರತೆಯನ್ನು ತೆರೆದಿಟ್ಟಿದ್ದಾರೆ. ಈ ಪೈಕಿ ಮಗುವೊಂದು ಬದುಕುಳಿದಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಪ್ರದೇಶದಲ್ಲಿಯೂ ನಡೆದಿತ್ತು

ಇದೇ ಮಾದರಿಯ ಘಟನೆ ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದಲ್ಲಿಯೂ ನಡೆದಿತ್ತು. ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಪಾಲಾಪುರದಲ್ಲಿ ವ್ಯಕ್ತಿಯೊಬ್ಬ ತನ್ನ ಕುಟುಂಬದ 5 ಸದಸ್ಯರನ್ನು ಕ್ರೂರವಾಗಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದ. ಮಾನಸಿಕ ಅಸ್ವಸ್ಥನಾಗಿದ್ದ ಆರೋಪಿ ಮೊದಲು ಗುಂಡಿಕ್ಕಿ ತನ್ನ ತಾಯಿಯನ್ನು ಕೊಂದಿದ್ದ. ಬಳಿಕ ಚೂರಿ ಇರಿದು ಪತ್ನಿಯನ್ನು ಹತ್ಯೆ ಮಾಡಿದ್ದ. ನಂತರ ತನ್ನ ಮೂವರು ಮಕ್ಕಳನ್ನು ಟೆರೇಸ್‌ನಿಂದ ಎಸೆದು ಕೊಂದಿದ್ದ. ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದರು.

ಇದನ್ನೂ ಓದಿ: Crime News: ಪತ್ನಿಯನ್ನು ಕೊಂದು ಶವದ ಫೋಟೊ ಸಂಬಂಧಿಕರಿಗೆ ಕಳುಹಿಸಿ ನೇಣಿಗೆ ಶರಣಾದ ಪತಿ; ಅನಾಥವಾಯ್ತು ಹೆಣ್ಣು ಮಗು

ತಾಯಿ, ಮಗಳು, ಮೊಮ್ಮಗನ ಅನುಮಾನಾಸ್ಪದ ಸಾವು

ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಗ್ರಾಮದಲ್ಲಿ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಮಂಗಳವಾರ ವರದಿಯಾಗಿತ್ತು. ಮನೆಯಲ್ಲಿಯೇ ತಾಯಿ, ಮಗಳು ಹಾಗೂ ಮೊಮ್ಮಗನ ಮೃತದೇಹಗಳು‌ ಪತ್ತೆಯಾಗಿದ್ದವು. ರಾಜೇಶ್ವರಿ (45), ವಸಂತಾ (22) ಹಾಗೂ ಸಾಯಿ (4) ಮೃತ ದುರ್ದೈವಿಗಳು.

ಹಂತಕರು ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಸೋಮವಾರ ರಾತ್ರಿ ತಾಯಿ ರಾಜೇಶ್ವರಿಗೆ ಮತ್ತೊಬ್ಬ ಮಗಳು ಫೋನ್ ಮಾಡಿದ್ದಾಳೆ. ಆದರೆ ಯಾರು ಫೋನ್‌ ರಿಸೀವ್ ಮಾಡಿರಲಿಲ್ಲ, ಮನೆಯ ಬಾಗಿಲು ತೆಗೆದಿರಲಿಲ್ಲ. ಹೀಗಾಗಿ ಅನುಮಾನಗೊಂಡು ಮುಂಜಾನೆ ಬಂದು ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಬೆಡ್ ರೂಮ್‌ನಲ್ಲಿ ಮಲಗಿದ್ದಲ್ಲಿ ಅಜ್ಜಿ ಮತ್ತು ಮೊಮ್ಮಗನ ಶವಗಳು ಪತ್ತೆಯಾದರೆ, ಮಗಳು ವಸಂತಾಳ ಶವ ಅಡುಗೆ ಮನೆಯಲ್ಲಿತ್ತು.

Continue Reading

ಉದ್ಯೋಗ

Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Job Alert: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್ ಪ್ರೊಫೆಸರ್, ಟ್ರೈನಿಂಗ್ ಆಫೀಸರ್, ಎಂಜಿನಿಯರ್ ಮತ್ತು ಶಿಪ್ ಸರ್ವೇಯರ್ ಕಮ್ ಡೆಪ್ಯೂಟಿ ಡೈರೆಕ್ಟರ್ ಜನರಲ್ ಸೇರಿ ಸುಮಾರು 312 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 13.

VISTARANEWS.COM


on

Job Alert
Koo

ನವದೆಹಲಿ: ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್ ಪ್ರೊಫೆಸರ್, ಟ್ರೈನಿಂಗ್ ಆಫೀಸರ್, ಎಂಜಿನಿಯರ್ ಮತ್ತು ಶಿಪ್ ಸರ್ವೇಯರ್ ಕಮ್ ಡೆಪ್ಯೂಟಿ ಡೈರೆಕ್ಟರ್ ಜನರಲ್ ಸೇರಿ ಸುಮಾರು 312 ಹುದ್ದೆಗಳಿವೆ (UPSC Specialist Grade III, Assistant Director Grade-II & Other Recruitment 2024). ಪದವಿ, ಡಿಪ್ಲೋಮಾ ಅರ್ಹತೆ ಇರುವವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 13. ಅಪ್ಲಿಕೇಶನ್‌ ಪ್ರಿಂಟ್ ತೆಗೆದುಕೊಳ್ಳಲು ಕೊನೆಯ ದಿನಾಂಕ ಜೂನ್‌ 14 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಪ ಅಧೀಕ್ಷಕ ಪುರಾತತ್ವ ರಸಾಯನ ಶಾಸ್ತ್ರಜ್ಞ – 4 ಹುದ್ದೆ, ವಿದ್ಯಾರ್ಹತೆ- ಪದವಿ / ಸ್ನಾತಕೋತ್ತರ ಪದವಿ (ರಸಾಯನ ಶಾಸ್ತ್ರ)
ಉಪ ಅಧೀಕ್ಷಕ ಪುರಾತತ್ವ ಶಾಸ್ತ್ರಜ್ಞ – 67 ಹುದ್ದೆ, ವಿದ್ಯಾರ್ಹತೆ- ಪಿಜಿ (ಪುರಾತತ್ವಶಾಸ್ತ್ರ / ಭಾರತೀಯ ಇತಿಹಾಸ)
ಸಿವಿಲ್ ಹೈಡ್ರೋಗ್ರಾಫಿಕ್ ಆಫೀಸರ್, ಇಂಟಿಗ್ರೇಟೆಡ್ ಹೆಡ್‌ಕ್ವಾರ್ಟಸ್‌ (ನೌಕಾಪಡೆ) – 4 ಹುದ್ದೆ, ವಿದ್ಯಾರ್ಹತೆ: ಪದವಿ / ಪಿಜಿ (ಸಂಬಂಧಿತ ಎಂಜಿನಿಯರಿಂಗ್)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಫೋರೆನ್ಸಿಕ್ ಮೆಡಿಸಿನ್) – 6 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಜನರಲ್ ಮೆಡಿಸಿನ್) – 61 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಜನರಲ್ ಸರ್ಜರಿ) – 39 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಪೀಡಿಯಾಟ್ರಿಕ್ ನೆಫ್ರಾಲಜಿ) 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್ 3 ಅಸಿಸ್ಟೆಂಟ್ ಪ್ರೊಫೆಸರ್ (ಪೀಡಿಯಾಟ್ರಿಕ್ಸ್) – 23 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ (ಸಂಬಂಧಪಟ್ಟ ವಿಷಯಗಳಲ್ಲಿ)
ಸ್ಪೆಷಲಿಸ್ಟ್ ಗ್ರೇಡ್-3 (ಅನಸ್ತೇಶಿಯಾಲಜಿ) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಡರ್ಮಟಾಲಜಿ, ವೆನೆರಿಯಾಲಜಿ ಮತ್ತು ಕುಷ್ಠರೋಗ) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಜನರಲ್ ಮೆಡಿಸಿನ್) – 4 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಜನರಲ್ ಸರ್ಜರಿ) – 7 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪ್ರಸೂತಿ ಮತ್ತು ಜ್ಞಾನಶಾಸ್ತ್ರ) – 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ನೇತ್ರಶಾಸ್ತ್ರ) – 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಆರ್ಥೋಪೆಡಿಕ್ಸ್) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 ಓಟೊ-ರೈನೋ-ಲಾರಿಂಗಲಜಿ (ಕಿವಿ, ಮೂಗು ಮತ್ತು ಗಂಟಲು) – 3 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪೀಡಿಯಾಟ್ರಿಕ್ಸ್) – 2 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಪ್ಯಾಥಾಲಜಿ) – 4 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಸ್ಪೆಷಲಿಸ್ಟ್ ಗ್ರೇಡ್-3 (ಸೈಕಿಯಾಟ್ರಿ) – 1 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್ / ಪಿಜಿ ಡಿಪ್ಲೊಮಾ / ಪಿಜಿ (ಸಂಬಂಧಪಟ್ಟ ಸ್ಪೆಷಾಲಿಟಿ)
ಡೆಪ್ಯುಟಿ ಸೆಂಟ್ರಲ್ ಇಂಟೆಲಿಜೆನ್ಸ್ ಆಫೀಸರ್ (ಟೆಕ್ನಿಕಲ್) (ಡಿಸಿಐಒ / ಟೆಕ್) 9 ಹುದ್ದೆ, ವಿದ್ಯಾರ್ಹತೆ: ಪದವಿ / ಪಿಜಿ (ಸಂಬಂಧಿತ ಎಂಜಿನಿಯರಿಂಗ್)
ಸಹಾಯಕ ನಿರ್ದೇಶಕರು (ತೋಟಗಾರಿಕೆ) 4 ಹುದ್ದೆ, ವಿದ್ಯಾರ್ಹತೆ ಎಂಎಸ್‌ಸಿ ತೋಟಗಾರಿಕೆ
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಕೆಮಿಕಲ್) 5 ಹುದ್ದೆ, ವಿದ್ಯಾರ್ಹತೆ: ಡಿಪದವಿ (ಸಂಬಂಧಿತ ವಿಭಾಗ)/ ಪಿಜಿ (ರಸಾಯನಶಾಸ್ತ್ರ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಆಹಾರ) 19 ಹುದ್ದೆ, ವಿದ್ಯಾರ್ಹತೆ: ಪದವಿ (ಫುಡ್ ಟೆಕ್ನಾಲಜಿ)/ ಪಿಜಿ ಡಿಪ್ಲೋಮಾ (ಫ್ರೂಟ್ಸ್ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಹೊಸೇರಿ) 12 ಹುದ್ದೆ, ವಿದ್ಯಾರ್ಹತೆ: ಪದವಿ (ಟೆಕ್ಸ್ ಟೈಲ್ ಟೆಕ್ನಾಲಜಿ ಅಥವಾ ಹೋಸಿಯರಿ ಟೆಕ್ನಾಲಜಿ ಅಥವಾ ನೈಟಿಂಗ್‌ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಲೆದರ್ & ಪಾದರಕ್ಷೆ) – 8 ಹುದ್ದೆ, ವಿದ್ಯಾರ್ಹತೆ: ಪದವಿ (ಲೆದರ್ ಟೆಕ್ನಾಲಜಿ)
ಅಸಿಸ್ಟೆಂಟ್ ಡೈರೆಕ್ಟರ್ ಗ್ರೇಡ್-2 (ಐಇಡಿಎಸ್) (ಮೆಟಲ್ ಫಿನಿಶಿಂಗ್) – 2 ಹುದ್ದೆ, ವಿದ್ಯಾರ್ಹತೆ: ಪದವಿ (ಕೆಮಿಕಲ್)
ಟೆಕ್ನಾಲಜಿ ಅಥವಾ ಕೆಮಿಕಲ್ ಎಂಜಿನಿಯರಿಂಗ್) / ಪಿಜಿ (ಕೆಮಿಸ್ಟ್ರಿ)
ಎಂಜಿನಿಯರ್ ಮತ್ತು ಹಡಗು ಸರ್ವೇಯರ್ ಕಮ್-ಡೆಪ್ಯುಟಿ ಡೈರೆಕ್ಟರ್ ಜನರಲ್ (ಟೆಕ್ನಿಕಲ್) – 2 ಹುದ್ದೆ, ವಿದ್ಯಾರ್ಹತೆ: ಮೆರೈನ್ ಎಂಜಿನಿಯರ್ ಆಫೀಸರ್ ಕ್ಲಾಸ್ -1ರ ಪ್ರಮಾಣ ಪತ್ರ
ತರಬೇತಿ ಅಧಿಕಾರಿ (ಮಹಿಳಾ ತರಬೇತಿ)- ಉಡುಪು ತಯಾರಿಕೆ – 5 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ)
ತರಬೇತಿ ಅಧಿಕಾರಿ (ಮಹಿಳಾ ತರಬೇತಿ) – ಎಲೆಕ್ಟ್ರಾನಿಕ್ ಮಕಾನಿಕ್ – 3 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನ)
ಅಸಿಸ್ಟೆಂಟ್‌ ಫೊಫೆಸರ್‌ – 1 ಹುದ್ದೆ, ವಿದ್ಯಾರ್ಹತೆ: ಎಂ.ಸಿ.ಎಚ್. ಯುರಾಲಜಿ ಅಥವಾ ಡಿಎನ್‌ಬಿ (ಯುರಾಲಜಿ)

ಅರ್ಜಿ ಶುಲ್ಕ ಮತ್ತು ವಯೋಮಿತಿ

ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗ ಅಭ್ಯರ್ಥಿಗಳಿ 25 ರೂ. ಪಾವತಿಸಬೇಕು. ಮೀಸಲಾತಿ ಹೊಂದಿರುವವರಿಗೆ ಅರ್ಜಿ ಶುಲ್ಕವಿಲ್ಲ. ಇನ್ನು ಒಂದೊಂದು ಹುದ್ದೆಗೆ ಒಂದೊಂದು ರೀತಿಯ ವಯೋಮಾನ ನಿಗದಿಪಡಿಸಲಾಗಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡಲು ಮೇ 31 ಕೊನೆಯ ದಿನ

Continue Reading

ದೇಶ

Mani Shankar Aiyar: ಮಣಿಶಂಕರ್‌ ಅಯ್ಯರ್ ಮತ್ತೊಂದು ವಿವಾದ;‌ ಪಾಕ್‌ ಬಳಿಕ ಚೀನಾ ಪರ ಬ್ಯಾಟಿಂಗ್‌!

Mani Shankar Aiyar: ʼ1962ರಲ್ಲಿ ಚೀನಾ ಭಾರತದ ಮೇಲೆ ಆಕ್ರಮಣ ನಡೆಸಿದ ಆರೋಪವಿದೆʼ ಎಂದು ಉಲ್ಲೇಖಿಸುವ ಮೂಲಕ ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಮಣಿಶಂಕರ್‌ ಅಯ್ಯರ್‌, ಖಾಸಗಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಭಾರತ ಪಾಕಿಸ್ತಾನಕ್ಕೆ ಗೌರವ ಕೊಡಬೇಕು ಎಂದು ಹೇಳುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು.

VISTARANEWS.COM


on

Mani Shankar Aiyar
Koo

ನವದೆಹಲಿ: ಕಾಂಗ್ರೆಸ್ (Congress) ಹಿರಿಯ ನಾಯಕ ಮತ್ತು ಕೇಂದ್ರದ ಮಾಜಿ ಸಚಿವ ಮಣಿಶಂಕರ್ ಅಯ್ಯರ್ (Mani Shankar Aiyar) ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ʼ1962ರಲ್ಲಿ ಚೀನಾ ಭಾರತದ ಮೇಲೆ ಆಕ್ರಮಣ ನಡೆಸಿದ ಆರೋಪವಿದೆʼ ಎಂದು ಉಲ್ಲೇಖಿಸುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಮಂಗಳವಾರ ವಿದೇಶಿ ಕರೆಸ್ಪಾಂಡೆಂಟ್ಸ್ ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಣಿಶಂಕರ್ ಅಯ್ಯರ್ ನೀಡಿದ ಈ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಅಗುತ್ತಿದ್ದಂತೆ ಕಾಂಗ್ರೆಸ್‌ ಎಚ್ಚೆತ್ತುಕೊಂಡು ಸ್ಪಷ್ಟನೆ ನೀಡಲು ಮುಂದಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಈ ಬಗ್ಗೆ ಮಾತನಾಡಿ, ಮಣಿಶಂಕರ್‌ ಅಯ್ಯರ್‌ ಕ್ಷಮೆಯಾಚಿಸಿದ್ದಾರೆ ಎಂದು ತಿಳಿಸಿದ್ದಾರೆ. ʼʼಮಣಿಶಂಕರ್ ಅಯ್ಯರ್ ಅವರು ʼಆಕ್ರಮಣದ ಆರೋಪʼ ಎಂಬ ಪದವನ್ನು ತಪ್ಪಾಗಿ ಬಳಸಿದ್ದಕ್ಕಾಗಿ ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ ಮತ್ತು ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲʼʼ ಎಂದು ಹೇಳಿದ್ದಾರೆ.

ಜತೆಗೆ ಜೈರಾಮ್ ರಮೇಶ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 2020ರ ಮೇಯಲ್ಲಿ ನಡೆದ ಚೀನೀಯರ ಅತಿಕ್ರಮಣಕ್ಕೆ ಸಂಬಂಧಿಸಿ ನರೇಂದ್ರ ಮೋದಿ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಜತೆಗೆ “ಅಯ್ಯರ್ ಅವರು ವಯಸ್ಸಿನ ಕಾರಣದಿಂದ ಈ ರೀತಿಯ ಹೇಳಿಕೆ ನೀಡಿದ್ದಾರೆʼʼ ಎಂದೂ ಸ್ಪಷ್ಟನೆ ನೀಡಿದ್ದಾರೆ.

ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ, ‘Nehru’s First Recruits’ ಪುಸ್ತಕ ಬಿಡುಗಡೆ ಸಮಾರಂಭದ ವಿಡಿಯೊದಲ್ಲಿ ಮಣಿಶಂಕರ್ ಅಯ್ಯರ್ ʼʼ1962ರ ಅಕ್ಟೋಬರ್‌ನಲ್ಲಿ ಚೀನೀಯರು ಭಾರತದ ಮೇಲೆ ಆಕ್ರಮಣ ಮಾಡಿದ್ದರು ಎಂಬ ಆರೋಪವಿದೆʼʼ ಎಂದು ಹೇಳಿರುವುದು ಕಂಡು ಬಂದಿದೆ. ಬಳಿಕ ಅವರು ಈ ಬಗ್ಗೆ ಮಾತನಾಡಿ, “ವಿದೇಶಿ ಕರೆಸ್ಪಾಂಡೆಂಟ್ಸ್ ಕ್ಲಬ್‌ನಲ್ಲಿ ‘ಚೀನಾದ ಆಕ್ರಮಣ’ಕ್ಕೆ ಮೊದಲು ‘ಆಪಾದಿತ’ ಎಂಬ ಪದವನ್ನು ತಪ್ಪಾಗಿ ಬಳಸಿದ್ದಕ್ಕಾಗಿ ನಾನು ಮುಕ್ತವಾಗಿ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆʼʼ ಎಂದು ಬರೆದುಕೊಂಡಿದ್ದಾರೆ.

ಬಿಜೆಪಿ ಹೇಳಿದ್ದೇನು?

ಇನ್ನು ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ಬಿಜೆಪಿ ಕಿಡಿ ಕಾರಿದೆ. ಅಯ್ಯರ್ ಹೇಳಿಕೆಗೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ತಿರುಗೇಟು ನೀಡಿ, ‘ʼNehru’s First Recruits’ ಪುಸ್ತಕದ ಬಿಡುಗಡೆಯ ಸಂದರ್ಭದಲ್ಲಿ ಮಾತನಾಡಿದ ಮಣಿಶಂಕರ್‌ ಅಯ್ಯರ್‌ ಅವರು, 1962ರಲ್ಲಿ ನಡೆದ ಚೀನಾದ ಆಕ್ರಮಣವನ್ನು ‘ಆಪಾದಿತ’ ಎಂದು ಉಲ್ಲೇಖಿಸಿದ್ದಾರೆ. ಇದು ನಾಚಿಕೆಗೇಡಿನ ಹೇಳಿಕೆ” ಎಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಯುಎನ್ಎಸ್‌ಸಿಯಲ್ಲಿನ ಶಾಶ್ವತ ಸ್ಥಾನದ ಮೇಲಿನ ಭಾರತದ ಹಕ್ಕನ್ನು ನೆಹರೂ ಚೀನೀಯರ ಪರವಾಗಿ ಬಿಟ್ಟುಕೊಟ್ಟದ್ದರು. ರಾಹುಲ್ ಗಾಂಧಿ ಚೀನಾ ಜತೆಗಿನ ರಹಸ್ಯ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ರಾಜೀವ್ ಗಾಂಧಿ ಫೌಂಡೇಶನ್ ಚೀನಾದ ರಾಯಭಾರ ಕಚೇರಿಯಿಂದ ಹಣವನ್ನು ಸ್ವೀಕರಿಸಿದೆ ಮತ್ತು ಚೀನೀ ಕಂಪನಿಗಳಿಗೆ ಮಾರುಕಟ್ಟೆ ಪ್ರವೇಶವನ್ನು ಶಿಫಾರಸು ಮಾಡುವ ವರದಿಗಳನ್ನು ಪ್ರಕಟಿಸಿದೆ. ಇದರ ಆಧಾರದ ಮೇಲೆ ಸೋನಿಯಾ ಗಾಂಧಿ ಅವರ ಯುಪಿಎ ಸರ್ಕಾರ ಚೀನಾದ ಸರಕುಗಳಿಗೆ ಭಾರತೀಯ ಮಾರುಕಟ್ಟೆಯನ್ನು ತೆರೆದಿತ್ತು. ಈಗ ಕಾಂಗ್ರೆಸ್ ನಾಯಕ ಅಯ್ಯರ್ ಚೀನಾದ ಆಕ್ರಮಣ ಕೇವಲ ಆರೋಪ ಎಂದು ಕರೆಯುತ್ತಿದ್ದಾರೆʼʼ ಎಂದು ಅಮಿತ್ ಮಾಳವೀಯ ದೂರಿದ್ದಾರೆ. ʼʼಕಾಂಗ್ರೆಸ್‌ಗೆ ಚೀನಾದ ಮೇಲೇಕೆ ಇಷ್ಟೊಂದು ಪ್ರೀತಿ?ʼʼ ಎಂದೂ ಪ್ರಶ್ನಿಸಿದ್ದಾರೆ.

ಇದಕ್ಕೆ ಜೈರಾಮ್‌ ರಮೇಶ್‌ ಪ್ರತಿಕ್ರಿಯಿಸಿ, “1962ರಲ್ಲಿ ನಿಜವಾಗಿಯೂ ಚಿನಾದಿಂದ ಆಕ್ರಮಣ ನಡೆದಿದೆ. ಇದು ಕೇವಲ ಆರೋಪವಲ್ಲ. 1962ರ ಅಕ್ಟೋಬರ್ 20ರಂದು ಭಾರತದ ಮೇಲೆ ಚೀನಾದ ಆಕ್ರಮಣ ಆರಂಭವಾಗಿತ್ತು. 2020ರ ಮೇ ಆರಂಭದಲ್ಲಿಯೂ ಲಡಾಖ್‌ನಲ್ಲಿ ಚೀನಾದ ಅತಿಕ್ರಮಣ ಮತ್ತೆ ನಡೆಯಿತು. ಇದರಲ್ಲಿ ನಮ್ಮ 40 ಸೈನಿಕರು ಹುತಾತ್ಮರಾಗಿದ್ದರು” ಎಂದು ರಮೇಶ್ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಮಣಿಶಂಕರ್‌ ಅಯ್ಯರ್‌, ಖಾಸಗಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಭಾರತ ಪಾಕಿಸ್ತಾನಕ್ಕೆ ಗೌರವ ಕೊಡಬೇಕು ಎಂದು ಹೇಳುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದರು. ʼʼಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕುʼʼ ಎಂದು ಹೇಳಿದ್ದರು.

ಇದನ್ನೂ ಓದಿ: Mani Shankar Aiyar: ಪಾಕಿಸ್ತಾನವನ್ನು ಕೆಣಕಿದರೆ ಅಣು ಬಾಂಬ್ ಬೀಳಬಹುದು ಹುಷಾರ್! ಮೋದಿಗೆ ಮಣಿಶಂಕರ್ ಅಯ್ಯರ್ ಎಚ್ಚರಿಕೆ!

Continue Reading

ಪ್ರಮುಖ ಸುದ್ದಿ

Prajwal Revanna Case : ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ

Prajwal Revanna Case: ಮೇ 31ಕ್ಕೆ ಬೆಂಗಳೂರಿಗೆ ತಲುಪುವ ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಪ್ರಜ್ವಲ್ ಟಿಕೆಟ್ ಬುಕಿಂಗ್ ಮಾಡಿದ್ದಾರೆ. ವಿಮಾನದ ಬ್ಯುಸಿನೆಸ್​ ಕ್ಲಾಸ್​ ವರ್ಗದಲ್ಲಿ ಅವರು ತಮ್ಮ ಟಿಕೆಟ್ ಕಾಯ್ದಿರಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಭಾರತ ಬಿಟ್ಟು ಪರಾರಿಯಾಗಿದ್ದ ಅವರು ವಾಪಸ್​ ಬರಲು ನಿರ್ಧರಿಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪೆನ್​ಡ್ರೈವ್ ಮೂಲಕ ಪ್ರಸರಣಗೊಂಡ ಅಶ್ಲೀಲ ವಿಡಿಯೊಗಳ ಪ್ರಕರಣದ (Prajwal Revanna Case) ಪ್ರಮುಖ ಆರೋಪಿ, ಸಂಸದ ಪ್ರಜ್ವಲ್ ರೇವಣ್ಣ ಜರ್ಮನಿಯಿಂದ ವಾಪಸ್​ ಬರಲು ವಿಮಾನ ಟಿಕೆಟ್ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಏರ್​ ಟಿಕೆಟ್​ ಬುಕ್ ಮಾಡಿದ ವಿವರ ‘ವಿಸ್ತಾರನ್ಯೂಸ್​’ಗೆ ಲಭ್ಯವಾಗಿದೆ. ಪ್ರಕರಣದ ತನಿಖೆ ನಡೆಸುವ ಎಸ್​ಐಟಿ ಪ್ರಜ್ವಲ್ ರೇವಣ್ಣಗಾಗಿ ಕಾಯುತ್ತಿದ್ದು ಭಾರತಕ್ಕೆ ಬಂದ ತಕ್ಷಣ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಗಳಿವೆ. ಪ್ರಜ್ವಲ್ ರೇವಣ್ಣ ಜರ್ಮನಿಯ ಮ್ಯೂನಿಚ್​ನಿಂದ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೇರ ಟಿಕೆಟ್​ ಬುಕ್​ ಮಾಡಿಕೊಂಡಿದ್ದು ಅಲ್ಲಿಂದಲೇ ಅವರನ್ನು ಎಸ್​ಐಟಿ ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಲಿದ್ದಾರೆ.

ಮೇ 31ಕ್ಕೆ ಬೆಂಗಳೂರಿಗೆ ತಲುಪುವ ಲುಫ್ತಾನ್ಸಾ ಸಂಸ್ಥೆಯ ವಿಮಾನದಲ್ಲಿ ಪ್ರಜ್ವಲ್ ಟಿಕೆಟ್ ಬುಕಿಂಗ್ ಮಾಡಿದ್ದಾರೆ. ವಿಮಾನದ ಬ್ಯುಸಿನೆಸ್​ ಕ್ಲಾಸ್​ ವರ್ಗದಲ್ಲಿ ಅವರು ತಮ್ಮ ಟಿಕೆಟ್ ಕಾಯ್ದಿರಿಸಿದ್ದಾರೆ. ಕಳೆದ ಒಂದು ತಿಂಗಳಿಂದ ಭಾರತ ಬಿಟ್ಟು ಪರಾರಿಯಾಗಿದ್ದ ಅವರು ವಾಪಸ್​ ಬರಲು ನಿರ್ಧರಿಸಿದ್ದಾರೆ. ಎಸ್​ಐಟಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸುವುದಕ್ಕಿಂತ ಮೊದಲೇ ಅವರು ಭಾರತದಿಂದ ಹೊರಟ್ಟಿದ್ದರು. ಪ್ರಕರಣ ಕಾವು ಪಡೆದು ಪ್ರತಿಭಟನೆ ಹಾಗೂ ಧರಣಿಗಳು ನಡೆಯುವ ಸಂದರ್ಭದಲ್ಲಿ ದೇಶದಿಂದ ದೂರವಿದ್ದರು. ಎಸ್​ಐಟಿ ಪೊಲೀಸರು ಪ್ರಜ್ವಲ್​ ವಶಕ್ಕೆ ಪಡೆಯಲು ನಾನಾ ರಾಜತಾಂತ್ರಿಕ ಸಮಸ್ಯೆ ಎದುರಾದ ಕಾರಣ ಕಾಯಬೇಕಾಯಿತು. ಅಂತಿಮವಾಗಿ ಕೇಂದ್ರ ಸರ್ಕಾರ ಸೇರಿದಂತೆ ಎಲ್ಲರ ಒತ್ತಾಯ ಹಾಗೂ ತಮಗೆ ಹಾಜರಾಗಲು ನೀಡಿದ ನೋಟಿಸ್​ನ ಗಡುವು ಮುಗಿದ ಕಾರಣ ಜರ್ಮನಿಯಿಂದ ಬರಲಿದ್ದಾರೆ.

ಪ್ರಜ್ವಲ್‌ ರೇವಣ್ಣ ಮೇ 31ರ ಮೊದಲು ಬರಲೇಬೇಕು! ಕಾರಣ ಇಲ್ಲಿದೆ

ಅಶ್ಲೀಲ ವಿಡಿಯೋ ವೈರಲ್ (pen drive case video viral) ಪ್ರಕರಣದಲ್ಲಿ ವಿಶೇಷ ತನಿಖಾ ತಂಡಕ್ಕೆ ಬೇಕಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan MP Prajwal Revanna Case) ನಾಪತ್ತೆಯಾಗಿ ಒಂದು ತಿಂಗಳ ಬಳಿಕ ಹೊಸ ವಿಡಿಯೋ ಮೂಲಕ ಪ್ರತ್ಯಕ್ಷವಾಗಿದ್ದಾರೆ. ಆದರೆ ಅವರು ದೇಶದೊಳಗೇ ಇದ್ದುಕೊಂಡೇ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದರೇ ಎಂಬ ಸಂಶಯವೂ ವ್ಯಕ್ತವಾಗಿದೆ.

ಇದನ್ನೂ ಓದಿ: Prajwal Revanna Case: ಎರಡು ಎಫ್ಐಆರ್ ರದ್ದು ಕೋರಿ ಹೈಕೋರ್ಟ್‌ಗೆ ಎಚ್.ಡಿ.ರೇವಣ್ಣ ಅರ್ಜಿ

ನಿನ್ನೆ ಹೊಸ ವಿಡಿಯೋ ಮಾಡಿ ಹರಿಬಿಟ್ಟಿರುವ ಪ್ರಜ್ವಲ್‌, ಶುಕ್ರವಾರ, ಮೇ 31ರಂದು ಎಸ್‌ಐಟಿ (SIT) ಮುಂದೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಸದ್ಯ ವಿಡಿಯೋವನ್ನು ಎಸ್‌ಐಟಿ ಕೂಲಂಕಷವಾಗಿ ಪರಿಶೀಲನೆ ನಡೆಸುತ್ತಿದೆ. ವಿಡಿಯೋದ ಮೂಲ ಯಾವುದು, ಯಾವ ಐಪಿ ಅಡ್ರೆಸ್‌ನಿಂದ ಆಪ್‌ಲೋಡ್ ಆಗಿದೆ ಎಂಬುದರ ಪತ್ತೆಗೆ‌ ಎಸ್‌ಐಟಿ ಮುಂದಾಗಿದೆ. ವಿಡಿಯೋ ಮೊದಲು ತಲುಪಿದ್ದು ಯಾರಿಗೆ, ಎಲ್ಲಿಂದ, ವಿಡಿಯೋ ಮಾಡಿರುವ ಮದರ್ ಡಿವೈಸ್ ಮಾಹಿತಿ ಪತ್ತೆಗೆ ಎಸ್‌ಐಟಿ ಯತ್ನಿಸುತ್ತಿದೆ. ಶುಕ್ರವಾರ ಪ್ರಜ್ವಲ್‌ ಎಸ್ಐಟಿ ಮುಂದೆ ಹಾಜರಾಗದಿದ್ದಲ್ಲಿ ಮದರ್ ಡಿವೈಸ್ ಲೋಕೆಷನ್ ಪತ್ತೆಗೆ ಯತ್ನಿಸುವ ಸಂಭವ ಇದೆ. ಸದ್ಯ ಪ್ರಜ್ವಲ್ ರೇವಣ್ಣ ಬರುವವರೆಗೂ ಕಾಯಲು ಇಷ್ಟವಿಲ್ಲದ ಎಸ್ಐಟಿ, ಅದಕ್ಕೂ ಮುನ್ನವೇ ಪತ್ತೆ ಮಾಡಿ ಬಂಧಿಸುವ ಚಿಂತನೆ ನಡೆಸಿದೆ.

ಯಾಕೆ ಮೇ 31 ?

ಮೇ 31ರಂದು ಪ್ರಜ್ವಲ್‌ ರೇವಣ್ಣ ಅವರ ಕಳೆದ ಬಾರಿಯ ಸಂಸದ ಸ್ಥಾನ ಅವಲಂಬಿಸಿ ನೀಡಲಾದ ರಾಜತಾಂತ್ರಿಕ ಪಾಸ್‌ಪೋರ್ಟ್‌ನ (Diplomatic passport) ಅವಧಿ ಅಂತ್ಯವಾಗಲಿದೆ. ಈ ಸಲ ಚುನಾಯಿತರಾದರೆ ಅವರು ಹೊಸದಾಗಿ ರಾಜತಾಂತ್ರಿಕ ಪಾಸ್‌ಪೋರ್ಟ್‌ ಮಾಡಿಸಿಕೊಳ್ಳಬೇಕಿದೆ. ಹೀಗಾಗಿ ಹಳೆಯ ಪಾಸ್‌ಪೋರ್ಟ್‌ನಲ್ಲಿ ಓಡಾಡಲು ಸಾಧ್ಯವಿಲ್ಲ. ಇದೇ ಕಾರಣಕ್ಕಾಗಿ ಪ್ರಜ್ವಲ್‌ ಮೇ 31ನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ಪ್ರಜ್ವಲ್ ರೇವಣ್ಣ ವಿರುದ್ಧದ ಎಸ್ಐಟಿ ತನಿಖೆ ಮಹತ್ವದ ಹಂತ ತಲುಪಿದೆ. ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಲಾಗಿದೆ. ಪ್ರಜ್ವಲ್ ರೇವಣ್ಣ ಬಂದ ಬಳಿಕ ತನಿಖೆ ಮಾಡಬೇಕಿದೆ. ಅಶ್ಲೀಲ ವಿಡಿಯೋಗಳನ್ನು ಮಾಡಲಾದ ಡಿವೈಜ್ ಅನ್ನು ಪತ್ತೆಹಚ್ಚಬೇಕಿದೆ. ಅಶ್ಲೀಲ ವಿಡಿಯೋಗಳ ಕುರಿತು ಫಾರೆನ್ಸಿಕ್ ರಿಪೋರ್ಟ್‌ಗಾಗಿ ಎಸ್ಐಟಿ ಕಾಯುತ್ತಿದೆ. FSL ರಿಪೋರ್ಟ್ ಎಸ್ಐಟಿ ಕೈ ಸೇರಿದ ಕೂಡಲೇ ಚಾರ್ಜ್‌ಶೀಟ್‌ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ. ಪ್ರಜ್ವಲ್ ರೇವಣ್ಣ ಹೇಳಿಕೆ ದಾಖಲಿಸಿ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಬೇಕಿದೆ.

ಜೂನ್ ಮೊದಲ ವಾರದಲ್ಲಿ ಪ್ರಜ್ವಲ್ ಬಂದಿದ್ದೇ ಆದಲ್ಲಿ ತನಿಖೆ ನಡೆಸಿ ಸ್ಟೇಟ್ಮೆಂಟ್ ದಾಖಲಿಸಲಿದ್ದಾರೆ. ಒಂದು ವೇಳೆ ಪ್ರಜ್ವಲ್ ಜೂನ್‌ನಲ್ಲಿ ವಾಪಸ್ ಬರದೇ ಇದ್ದಲ್ಲಿ, ಆರೋಪಿ ತಲೆ ಮರೆಸಿಕೊಂಡಿದ್ದಾನೆ ಎಂದು ನ್ಯಾಯಾಲಯಕ್ಕೆ ಅಬ್‌ಸ್ಕಾಂಡ್‌ ಚಾರ್ಜ್‌ಶೀಟ್ ಸಲ್ಲಿಸಬೇಕಿದೆ.

ಗೃಹ ಸಚಿವರು ಏನೆಂದರು?

ಪ್ರಜ್ವಲ್ ವಿಡಿಯೋ ರಿಲೀಸ್ ವಿಚಾರದಲ್ಲಿ ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ (home minister G Parameshwara) ಹೇಳಿಕೆ ನೀಡಿದ್ದಾರೆ. “ಮೇ 31ರಂದು ಪ್ರಜ್ವಲ್‌ ಸಂಸದ ಸ್ಥಾನ ಅಂತ್ಯವಾಗಲಿದೆ. ಆಗ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಸೀಜ್ ಆಗುತ್ತದೆ. ಇದೆಲ್ಲವನ್ನು ತಿಳಿದುಕೊಂಡು ಬರಲು ಯೋಚನೆ ಮಾಡಿದ್ದಾರೆ ಅನ್ಸುತ್ತೆ” ಎಂದಿದ್ದಾರೆ.

“ದೇಶದೊಳಗೆ ಏನು ಪ್ರಯತ್ನ ‌ಮಾಡಬೇಕು ನಾವು ಮಾಡಿದ್ದೇವೆ. ಕೇಂದ್ರ ಸರ್ಕಾರಕ್ಕೆ ಬರೆದಿದ್ದೇವೆ, ಕೇಂದ್ರ ಗೃಹ ಇಲಾಖೆಗೆ ವಾರೆಂಟ್ ಬಗ್ಗೆ ತಿಳಿಸಿದ್ದೇವೆ. ಬ್ಲೂ ಕಾರ್ನರ್ ನೋಟೀಸ್ (blue corner notice) ಇಶ್ಯೂ ಆಗಿದೆ. ಪ್ರಜ್ವಲ್‌ ಬರದೇ ಹೋದರೆ ಇಂಟರ್‌ಪೋಲ್‌ನವರು (Interpol) ಲೊಕೇಶನ್‌ ತಿಳಿದುಕೊಂಡು ನಮಗೆ ಮಾಹಿತಿ ನೀಡುವುದು ಎಂದಿತ್ತು. ಇಂತಹ ಸಂದರ್ಭದಲ್ಲಿ ನಾನು ಬರ್ತೇನೆ ಎಂದು ವಿಡಿಯೋ ಮೂಲಕ ತಿಳಿಸಿದ್ದಾರೆ. ಕಾನೂನಿನಿಂದ ತಪ್ಪಿಸಿಕೊಳ್ಳಲು ಯಾರಿಗೂ ಸಾಧ್ಯವಿಲ್ಲ” ಎಂದಿದ್ದಾರೆ.

ಈ ಸಲ ಸುಮ್ಮನಿರೋಲ್ಲ ಎಸ್‌ಐಟಿ

ಪ್ರಜ್ವಲ್ ರೇವಣ್ಣ ವಿಡಿಯೋ ಬಿಟ್ಟ ಬೆನ್ನಲ್ಲೇ ಎಸ್ಐಟಿ ಅಲರ್ಟ್ ಆಗಿದೆ. ವಿಡಿಯೋ ಬಿಟ್ಟಿದ್ದು ಎಲ್ಲಿಂದ, ಯಾವ ದೇಶದಿಂದ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಆದರೆ ಕಳೆದ ಬಾರಿ ಕೂಡ ಪ್ರಜ್ವಲ್ ರೇವಣ್ಣ ಇದೇ ರೀತಿ ಕಾಲಾವಕಾಶ ಕೋರಿದ್ದರು. ಹೇಳಿದಂತೆ ವಿಚಾರಣೆಗೆ ಹಾಜರಾಗದೆ ದೂರ ಉಳಿದಿದ್ದರು. ಈ ಬಾರಿಯೂ ಹಾಗೆಯೇ ಮಾಡುವ ಸಾಧ್ಯತೆ ಕೂಡ ಇದೆ. ಹೀಗಾಗಿ ಈಗಲೇ ಪ್ರಜ್ವಲ್ ರೇವಣ್ಣ ಕಾಂಟ್ಯಾಕ್ಟ್‌ಗೆ ಎಸ್‌ಐಟಿ ಮುಂದಾಗಿದೆ.

ಕೇಂದ್ರ ತನಿಖಾ ಸಂಸ್ಥೆಗಳಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಇಂಟರ್‌ಪೋಲ್‌ಗೂ ಎಸ್‌ಐಟಿ ಮಾಹಿತಿ ಕೋರಲಿದೆ. ಈಗಾಗಲೇ ಪ್ರಜ್ವಲ್‌ ವಿರುದ್ಧ ಲುಕ್‌ಔಟ್‌ ನೋಟೀಸ್‌ (lookout notice) ಹಾಗೂ ಬ್ಲೂ ಕಾರ್ನರ್‌ ನೋಟೀಸ್‌ ಜಾರಿ ಮಾಡಲಾಗಿದೆ. ಆತನ ವಿರುದ್ಧ ಆರೆಸ್ಟ್ ವಾರಂಟ್ ಕೂಡ ಇದೆ. ಹೀಗಾಗಿ ಎಸ್‌ಐಟಿ ಒಂದು ತಿಂಗಳಿಂದ ಏರ್‌ಪೋರ್ಟ್‌ನಲ್ಲೇ ಠಿಕಾಣಿ ಹೂಡಿದೆ. ಏರ್‌ಪೋರ್ಟ್‌ನಿಂದ ಹೊರಕ್ಕೆ ಕಾಲಿಡುವ ಮೊದಲೇ ಇಮಿಗ್ರೇಶನ್‌ ಅಧಿಕಾರಿಗಳು ಪ್ರಜ್ವಲ್‌ ರೇವಣ್ಣನನ್ನು ವಶಕ್ಕೆ ಪಡೆದು ಎಸ್‌ಐಟಿಗೆ ಒಪ್ಪಿಸಲಿದ್ದಾರೆ.

Continue Reading
Advertisement
Crime News
ಕ್ರೈಂ2 mins ago

Crime News: ಶಾಕಿಂಗ್‌: ಕುಟುಂಬದ 7 ಮಂದಿಯನ್ನು ಕೊಚ್ಚಿ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ಕಾರಣ ನಿಗೂಢ

belluru assault case
ಕ್ರೈಂ4 mins ago

Assault Case: ಬೆಳ್ಳೂರು ಹಿಂದೂ ಯುವಕನ ಮೇಲೆ ಹಲ್ಲೆ; ದೂರು ಸ್ವೀಕರಿಸದ ಪಿಎಸ್‌ಐ ಸಸ್ಪೆಂಡ್‌

Shilpa Shetty Visiting Nanjundeshwara Temple
ಸಿನಿಮಾ4 mins ago

Shilpa Shetty: ಮೈಸೂರಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ನಟಿ ಶಿಲ್ಪಾ ಶೆಟ್ಟಿ ಧ್ಯಾನ

Viral Video
ವೈರಲ್ ನ್ಯೂಸ್20 mins ago

Viral Video: “ನೀವು ಅಲ್ಲಿಂದ ದಾಳಿ ಮಾಡಿ..ನಾವು ಇಲ್ಲಿಂದ ಅಟ್ಯಾಕ್‌ ಮಾಡ್ತೇವೆ..ಪಾಕ್‌ ಧ್ವಂಸ ಆಗೋದು ಪಕ್ಕಾ”-ಆಫ್ಗನ್‌ ವೃದ್ಧನ ಈ ವಿಡಿಯೋ ಫುಲ್‌ ವೈರಲ್‌

India Highest Paid Item Girl not Malaika Nora, Katrina, Sunny
ಸಿನಿಮಾ25 mins ago

India Highest Paid Item Girl : ಅತಿ ಹೆಚ್ಚು ಸಂಭಾವನೆ ಪಡೆಯುವ ಐಟಂ ಗರ್ಲ್ ಯಾರು? ಮಲೈಕಾ, ಸನ್ನಿ, ನೋರಾ ಅಲ್ವೇ ಅಲ್ಲ!

Job Alert
ಉದ್ಯೋಗ45 mins ago

Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

love jihad kasaragod 2
ಕ್ರೈಂ50 mins ago

Love Jihad: ನಾಪತ್ತೆಯಾದ ಹಿಂದೂ ಯುವತಿ ಮುಸ್ಲಿಂ ಯುವಕನ ಮದುವೆಯಾಗಿ ಪತ್ತೆ; ಮುಸ್ಲಿಂ ಲೀಗ್‌ ನಾಯಕನ ಕುಮ್ಮಕ್ಕು?

Kannada New Movie Aditya Shashikumar Kaadaadi Movie Lyrical song out
ಸ್ಯಾಂಡಲ್ ವುಡ್1 hour ago

Kannada New Movie: ಶಶಿಕುಮಾರ್ ಪುತ್ರನ ‘ಕಾದಾಡಿ’ ಸಿನಿಮಾದ ಲಿರಿಕಲ್ ಸಾಂಗ್ ಔಟ್‌!

Viral Video
ವೈರಲ್ ನ್ಯೂಸ್1 hour ago

Viral Video: ಭಾರತ-ಚೀನಾ ಯೋಧರ ನಡುವೆ ಹಗ್ಗಜಗ್ಗಾಟ; ಗೆದ್ದವರು ಯಾರು? ವಿಡಿಯೊ ನೋಡಿ!

Aditi Prabhudeva is returning to reality show judge
ಕಿರುತೆರೆ1 hour ago

Aditi Prabhudeva: ತಾಯಿಯಾದ ಬಳಿಕ ಮತ್ತೆ ಕಿರುತೆರೆಗೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ16 hours ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 day ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ3 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು3 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ6 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌