Bangalore-Mysore Expressway : ಅಪೂರ್ಣ ಹೆದ್ದಾರಿ ಉದ್ಘಾಟನೆ, 25000 ಕೋಟಿ ಟೋಲ್‌ ಸಂಗ್ರಹ ಗುರಿ ಎಂದ ಕಾಂಗ್ರೆಸ್‌ - Vistara News

ಕರ್ನಾಟಕ

Bangalore-Mysore Expressway : ಅಪೂರ್ಣ ಹೆದ್ದಾರಿ ಉದ್ಘಾಟನೆ, 25000 ಕೋಟಿ ಟೋಲ್‌ ಸಂಗ್ರಹ ಗುರಿ ಎಂದ ಕಾಂಗ್ರೆಸ್‌

ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಮಾ. 12) ಉದ್ಘಾಟಿಸಲಿರುವ ಬೆಂಗಳೂರು-ಮೈಸೂರು ಹೆದ್ದಾರಿಯ (Bangalore-Mysore Expressway) ಕಾಮಗಾರಿ ಅಪೂರ್ಣವಾಗಿದೆ. ಇದು ಕೇವಲ ಟೋಲ್‌ ಸಂಗ್ರಹದ ಗುರಿ ಹೊಂದಿದೆ ಎಂದು ಕಾಂಗ್ರೆಸ್‌ ಆಪಾದಿಸಿದೆ.

VISTARANEWS.COM


on

surjewala
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ (Bangalore-Mysore Expressway) ಇನ್ನೂ ಅಪೂರ್ಣವಾಗಿದ್ದರೂ ಅದನ್ನು ಉದ್ಘಾಟನೆ ಮಾಡುವ ಮೂಲಕ ಬಿಜೆಪಿ ಸಾರ್ವಜನಿಕರ ಜೀವವನ್ನು ಪಣಕ್ಕಿಟ್ಟಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಕರ್ನಾಟಕದಲ್ಲಿ ಅವನತಿಯ ಹಾದಿಯಲ್ಲಿ ಸಾಗುತ್ತಿರುವ ಬಿಜೆಪಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಪ್ರಚಾರಕ್ಕೆ ಹೆದ್ದಾರಿಯನ್ನು ಬಳಸಿಕೊಳ್ಳುತ್ತಿದೆ ಎಂದು ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆಪಾದಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್‌ 12ರಂದು (ಭಾನುವಾರ) ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇಯನ್ನು ಉದ್ಘಾಟಿಸುತ್ತಿರುವ ಹಿನ್ನೆಲೆಯಲ್ಲಿ ಈ ಕಾಂಗ್ರೆಸ್‌ ಆರೋಪಗಳ ಸುರಿಮಳೆಯನ್ನು ಸುರಿಸಿದೆ. ಅದರಲ್ಲೂ ಮುಖ್ಯವಾಗಿ ಕೇಂದ್ರದ ಮೋದಿ ಸರ್ಕಾರವು 25,000 ಕೋಟಿ ರೂ. ಟೋಲ್‌ ಸಂಗ್ರಹದ ಗುರಿಯನ್ನು ಹೊಂದಿದೆ ಎಂದು ದೂರಿದರು.

ಪ್ರಯಾಣಿಕರ ಜೀವವನ್ನು ಅಪಾಯಕ್ಕೆ ತಳ್ಳಿ ಅಪೂರ್ಣಗೊಂಡಿರುವ ಹೆದ್ದಾರಿ ಉದ್ಘಾಟನೆ ಮಾಡುತ್ತಿದ್ದು, ಟೋಲ್ ಹೆಸರಲ್ಲಿ ಕನ್ನಡಿಗರಿಂದ ಹಣ ಸಂಗ್ರಹಿಸಲು ಮುಂದಾಗಿರುವ ಬಿಜೆಪಿ ಅವೈಜ್ಞಾನಿಕ ರಸ್ತೆ ವಿನ್ಯಾಸ, ನೀರು ಸುಗಮವಾಗಿ ಹರಿದುಹೋಗಲು ಅವಕಾಶ ಕಲ್ಪಿಸಿಲ್ಲ. ಪ್ರವಾಹ ನಿಯಂತ್ರಣ ಮಾರ್ಗಸೂಚಿ ಅನುಸರಿಸಿಲ್ಲ. ಇನ್ನು ರೈತರು ತಮ್ಮ ಊರಿನಿಂದ ಪಟ್ಟಣಕ್ಕೆ ಹೋಗಲು ಸರಿಯಾದ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಿಲ್ಲ. ಈ ಎಲ್ಲ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಬಿಜೆಪಿ ಸರ್ಕಾರವು ಪ್ರಮುಖ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ.

ಸುರ್ಜೇವಾಲಾ ಹೇಳಿದ ವಾಸ್ತವಾಂಶಗಳು

1. 2002ರಲ್ಲಿ ಕಾಂಗ್ರೆಸ್ ಸರ್ಕಾರ ಎರಡು ಪಥದ ರಾಜ್ಯ ಹೆದ್ದಾರಿಯನ್ನು ನಾಲ್ಕು ಪಥದ ಹೆದ್ದಾರಿಯನ್ನಾಗಿ ಮಾಡಿ, ಟೋಲ್ ಮುಕ್ತ ಸಂಚಾರಕ್ಕೆ ಅನುವು ಮಾಡಿಕೊಟ್ಟಿತ್ತು.
ಮಾ. 04, 2014: ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಒತ್ತಾಯದ ಮೇರೆಗೆ ರಾಜ್ಯ ಹೆದ್ದಾರಿಯಾಗಿದ್ದ ಬೆಂಗಳೂರು-ಮೈಸೂರು ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ 275 ಆಗಿ ಅಧಿಸೂಚನೆ ಹೊರಡಿಸಿದರು.
ಅಕ್ಟೋಬರ್ 4, 2016ರ ವೇಳೆಗೆ: ರಾಜ್ಯದಲ್ಲಿದ್ದ ಕಾಂಗ್ರೆಸ್ ಸರ್ಕಾರ 4,400 ಕೋಟಿ ವೆಚ್ಚ ಮಾಡಿ 2500 ಎಕರೆ ಭೂಮಿ ಸ್ವಾಧೀನಪಡಿಸಿಕೊಂಡಿತು.
ಫೆಬ್ರವರಿ 13, 2018: ರಾಜ್ಯ ಕಾಂಗ್ರೆಸ್ ಸರ್ಕಾರ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ 6420 ಕೋಟಿ ಹಣವನ್ನು ಮಂಜೂರು ಮಾಡಿತ್ತು.
ಬೆಂಗಳೂರಿನಿಂದ ನಿಡಘಟ್ಟದ 56 ಕಿ.ಮೀ ಉದ್ದ ರಸ್ತೆಗೆ 3501 ಕೋಟಿ
ನಿಡಘಟ್ಟದಿಂದ ಮೈಸೂರಿನ 62 ಕಿ.ಮೀ ಉದ್ದದ ರಸ್ತೆಗೆ 2919 ಕೋಟಿ ನೀಡಿತ್ತು.
ಈಗ ಈ ರಸ್ತೆಯ ಒಟ್ಟು ವೆಚ್ಚ 10 ಸಾವಿರ ಕೋಟಿ ಅಂದಾಜು ಮಾಡಲಾಗಿದೆ.

ಮಾರ್ಚ್ 12, 2023ರಂದು: ಮೋದಿ ಹಾಗೂ ಬೊಮ್ಮಾಯಿ ಸರ್ಕಾರ ಅಪೂರ್ಣಗೊಂಡಿರುವ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನು ಉದ್ಘಾಟನೆ ಮಾಡುತ್ತಿದೆ. ಆ ಮೂಲಕ ಮುಂಬರುವ ಚುನಾವಣೆಯಲ್ಲಿ 40% ಕಮಿಷನ್ ಭ್ರಷ್ಟಾಚಾರದ ಹೊರತಾಗಿ ತಮ್ಮ ಸಾಧನೆ ಏನೂ ಇಲ್ಲದ ಕಾರಣ ಈ ಯೋಜನೆಯ ಪ್ರಚಾರ ಪಡೆಯಲು ಮುಂದಾಗಿದೆ ಎಂದು ಕಾಂಗ್ರೆಸ್‌ ಹೇಳಿದೆ.

ನರೇಂದ್ರ ಮೋದಿ ಮತ್ತು ಬೊಮ್ಮಾಯಿ ಸರಕಾರಕ್ಕೆ ಪ್ರಶ್ನೆಗಳು

1. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುಮಾರು 21 ಕಿ.ಮೀ (118 ಕಿ.ಮೀ ಪೈಕಿ) ಉದ್ದದಷ್ಟು ರಸ್ತೆ ವಿವಿಧ ಭಾಗಗಳಲ್ಲಿ ಅಪೂರ್ಣಗೊಂಡಿದೆ. ಈ ಕುರಿತ ಚಿತ್ರಗಳನ್ನು ಸೇರಿಸಲಾಗಿದೆ. ಅಪೂರ್ಣಗೊಂಡಿರುವ ಹೆದ್ದಾರಿಯನ್ನು ಪ್ರಧಾನಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದು ಚುನಾವಣೆ ಗಿಮಿಕ್ ಅಲ್ಲವೇ?

2. ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರು- ಮೈಸೂರು ರಸ್ತೆ ಅಪೂರ್ಣಗೊಂಡಿದ್ದು, ಈ ರಸ್ತೆಯ ಅನೇಕ ಕಾಮಗಾರಿಗಳು ಪೂರ್ಣಗೊಂಡಿಲ್ಲ.

  • 50 ಅಂಡರ್ ಪಾಸ್ ಗಳ ಪೈಕಿ ಕೇವಲ 22 ಅಂಡರ್ ಪಾಸ್ ಮಾತ್ರ ಪೂರ್ಣಗೊಂಡಿದೆ.
  • 12 ಓವರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣಗೊಂಡಿವೆ.
  • 12 ಹಗುರ ವಾಹನ ಅಂಡರ್ ಪಾಸ್ ಗಳ ಪೈಕಿ ಕೇವಲ 6 ಮಾತ್ರ ಪೂರ್ಣವಾಗಿವೆ.
  • 18 ಪಾದಚಾರಿ ಅಂಡರ್ ಪಾಸ್ ಗಳ ಪೈಕಿ ಕೇವಲ 8 ಮಾತ್ರ ಪೂರ್ಣಗೊಂಡಿವೆ

ಅಪೂರ್ಣಗೊಂಡಿರುವ, ಛಿದ್ರವಾಗಿರುವ ಹಾಗೂ ತೇಪೆಯಿಂದ ಕೂಡಿರುವ ರಾಷ್ಟ್ರೀಯ ಹೆದ್ದಾರಿಯನ್ನು ಪ್ರಧಾನ ಮಂತ್ರಿಗಳು ಉದ್ಘಾಟನೆ ಮಾಡುತ್ತಿರುವುದೇಕೆ?

3. 118 ಕಿ.ಮೀ ಉದ್ದದ ಹೆದ್ದಾರಿಯ ಎರಡೂ ಭಾಗಗಳಲ್ಲಿ ಸರ್ವೀಸ್ ರಸ್ತೆ ಅಪೂರ್ಣಗೊಂಡಿದೆ. ಪರಿಣಾಮ ಈ ಹೆದ್ದಾರಿಯ ಭಾಗದ ರೈತರಿಗೆ, ನಿವಾಸಿಗಳಿಗೆ ತೊಂದರೆಯಾಗಿದ್ದು, ಜನಜೀವನ ಹಾಗೂ ದಿನನಿತ್ಯದ ಚಟುವಟಿಕೆಗೆ ತೊಡಕಾಗಿದೆ. ಪ್ರಧಾನಮಂತ್ರಿಗಳು ಸರ್ವೀಸ್ ರಸ್ತೆ ಪೂರ್ಣಗೊಳಿಸದೇ ರೈತರು, ಜನಸಾಮಾನ್ಯರ ರಕ್ಷಣೆ ಪಣಕ್ಕಿಟ್ಟಿರುವುದೇಕೆ?

4. ಬೆಂಗಳೂರು ಮೈಸೂರು ಹೆದ್ದಾರಿಯನ್ನು ಇಂಡಿಯನ್ ರೋಡ್ ಕಾಂಗ್ರೆಸ್ (IRC) ಗುಣಮಟ್ಟದಲ್ಲಿ ನಿರ್ಮಾಣ ಮಾಡಿಲ್ಲ. ಹಲವೆಡೆಗಳಲ್ಲಿ ಈ ಹೆದ್ದಾರಿ ನಿರ್ಮಾಣ ಅವೈಜ್ಞಾನಿಕವಾಗಿದೆ. ಅಲ್ಲದೆ ಕಳಪೆ ಗುಣಮಟ್ಟದ ಸಾಮಗ್ರಿ ಬಳಸಿದ್ದು, ಒಟ್ಟಾರೆ ರಸ್ತೆಯ ನಿರ್ಮಾಣ ಯೋಜನೆ ಕಳಪೆಯಾಗಿದೆ.

5. 2022ರ ಅಕ್ಟೋಬರ್‌ನಿಂದ ಇಲ್ಲಿಯವರೆಗೆ 300ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 90 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 122 ಜನರಿಗೆ ಗಂಭೀರ ಗಾಯಗಳಾಗಿವೆ. ಆದರೂ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಯಾವುದೇ ಅಗತ್ಯ ಕ್ರಮ ಕೈಗೊಂಡಿಲ್ಲ. ಪ್ರಧಾನಮಂತ್ರಿಗಳಿಗೆ ಸಾರ್ವಜನಿಕರ ರಕ್ಷಣೆಯನ್ನು ಅಪಾಯಕ್ಕೆ ಸಿಲುಕಿರುವ ಹಾಗೂ ಅಮಾಯಕ ಜೀವಗಳನ್ನು ಬಲಿಯಾಗುತ್ತಿರುವ ಬಗ್ಗೆ ಅರಿವಿಲ್ಲವೇಕೆ?

6. ಸಂಚಾರಿ ಸಮೀಕ್ಷೆ ಪ್ರಕಾರ 2018ರಲ್ಲಿ ಈ ರಸ್ತೆಯಲ್ಲಿ 53 ಸಾವಿರ ಪ್ಯಾಸೆಂಜರ್ ಕಾರ್ ಯುನಿಟ್ (PCU) ನಷ್ಟಿದ್ದು ಇದು 2023ಕ್ಕೆ 90 ಸಾವಿರ ತಲುಪುವ ನಿರೀಕ್ಷೆ ಇದೆ. ಇದರ ಜತೆಗೆ ವಾಣಿಜ್ಯ ಉದ್ದೇಶಿತ ವಾಹನಗಳು ಸೇರ್ಪಡೆಯಾಗಲಿವೆ.

25,000 ಕೋಟಿ ರೂ. ಟೋಲ್‌ ಸಂಗ್ರಹದ ಉದ್ದೇಶ!

7. 118 ಕಿ.ಮೀ ರಸ್ತೆಯ ಟೋಲ್ (56 ಕಿ.ಮೀ.ಗೆ 135 ಹಾಗೂ 62 ಕಿ.ಮೀ.ಗೆ 165) ಒಂದು ಕಡೆಗೆ ಸಾಗಲು 300 ರೂ. ನಿಗದಿ ಮಾಡಿದ್ದು, ಎರಡೂ ಕಡೆ ಓಡಾಡಲು ಕಾರಿಗೆ 600 ರೂ. ನಿಗದಿ ಮಾಡಲಾಗಿದೆ. ಇನ್ನು ಭಾರಿ ವಾಹನ ಹಾಗೂ ವಾಣಿಜ್ಯ ವಾಹನಗಳಿಗೆ ಒಂದು ಕಡೆಗೆ 2 ಸಾವಿರದಂತೆ ಎರಡೂ ಕಡೆ ಸಾಗಲು 4 ಸಾವಿರ ನಿಗದಿ ಮಾಡಲಾಗಿದೆ.
ಈ ಲೆಕ್ಕಾಚಾರದಲ್ಲಿ 90 ಸಾವಿರ ಕಾರುಗಳಿಗೆ 600 ರೂ.ನಂತೆ ಪ್ರತಿನಿತ್ಯ 5,40,00,000 (5.40 ಕೋಟಿ) ರೂ. ಸಂಗ್ರಹವಾಗಲಿದೆ. ಆಮೂಲಕ ವರ್ಷದ 365 ದಿನಕ್ಕೆ 1971 ಕೋಟಿಯಿಂದ 2 ಸಾವಿರ ಕೋಟಿಯಷ್ಟು ಸಂಗ್ರಹವಾಗಲಿದೆ.

8. 10 ವರ್ಷ ಟೋಲ್ ಸಂಗ್ರಹಿಸಿದರೆ 20 ಸಾವಿರ ಕೋಟಿ ಸಂಗ್ರಹವಾಗಲಿದ್ದು, ಪ್ರತಿ ಎರಡು ವರ್ಷಕ್ಕೊಮ್ಮೆ ಟೋಲ್ ದರ ಹೆಚ್ಚಳ ಮಾಡಿದಾಗ 110 ವರ್ಷಗಳಲ್ಲಿ ಸುಮಾರು 25 ಸಾವಿರ ಕೋಟಿ ಹಣವನ್ನು ಟೋಲ್ ಮೂಲಕ ಸಂಗ್ರಹವಾಗಲಿದೆ. ಬೆಂಗಳೂರು- ಮೈಸೂರು ಹೆದ್ದಾರಿಯಿಂದ ಮೋದಿ ಸರ್ಕಾರ 15 ಸಾವಿರ ಕೋಟಿ ಲಾಭ ಮಾಡಲು ಮುಂದಾಗಿರುವುದೇಕೆ?

9. ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ವೆಚ್ಚ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 6420 ಕೋಟಿಯಷ್ಟಿತ್ತು. ಬಿಜೆಪಿ ಅವಧಿಯಲ್ಲಿ ಇದು 10 ಸಾವಿರ ಕೋಟಿಗೆ ಹೆಚ್ಚಾಗಿದೆ. ಈ ಹೆದ್ದಾರಿಯ ನಿರ್ಮಾಣದ ವೆಚ್ಚ ದುಪ್ಪಟ್ಟಾಗಲು ಕಾರಣವೇನು ಎಂದು ಪ್ರಧಾನಮಂತ್ರಿಗಳು ಉತ್ತರಿಸುವರೇ?

10. 2022ರ ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಗೆ ಬೆಂಗಳೂರು ಮೈಸೂರು ಹೆದ್ದಾರಿ ಬಳಿ ನೀರು ಸುಗಮವಾಗಿ ಹರಿದು ಹೋಗಲು ವ್ಯವಸ್ಥೆ ಕಲ್ಪಿಸದ ಕಾರಣ ಕುಂಬಳಗೋಡು, ಇನೋರು ಪಾಳ್ಯ ಟೋಲ್ ಹಗೇಟೆ, ಚನ್ನಪಟ್ಟಣ ಮತ್ತು ರಾಮನಗರದಲ್ಲಿ ಪ್ರವಾಹ ಉಂಟಾಗಿತ್ತು. ಇನ್ನು ಹೆದ್ದಾರಿಯ ಎರಡೂ ಬದಿಯಲ್ಲಿರುವ ರೈತರ ಕೃಷಿ ಭೂಮಿಗೆ ನೀರಾವರಿ ನೀರು ಹರಿಯಲು ಅಡ್ಡಿಯುಂಟಾಗಿದೆ. ಪರಿಣಾಮ ಪ್ರತಿ ಮಳೆಗಾಲದಲ್ಲೂ ಪ್ರವಾಹ ಪರಿಸ್ಥಿತಿ ಉದ್ಭವವಾಗಲಿದೆ. ಪ್ರವಾಹ ನಿಯಂತ್ರಣ ಮಾರ್ಗಸೂಚಿ ಅನುಸರಿಸದೇ, ಹೆದ್ದಾರಿಯ ಎರಡೂ ಬದಿಯ ರೈತರಿಗೆ ಸರಿಯಾದ ನೀರಾವರಿ ವ್ಯವಸ್ಥೆ ಕಲ್ಪಿಸದೇ ಪ್ರಧಾನಮಂತ್ರಿಗಳು ಈ ಹೆದ್ದಾರಿ ಉದ್ಘಾಟನೆ ಮಾಡುತ್ತಿರುವುದೇಕೆ?

11. ಬಿಜೆಪಿ ಸರ್ಕಾರದ ಈ ಮಾನವ ನಿರ್ಮಿತ ಪ್ರವಾಹ ಪರಿಸ್ಥಿತಿಯನ್ನು ಕಂಡರೂ ಕಾಣದಂತೆ ಮಂಡ್ಯ ಹಾಗೂ ಮೈಸೂರು ಭಾಗದ ಸಂಸದರು ವರ್ತಿಸುತ್ತಿದ್ದಾರೆ. ಪ್ರಧಾನಮಂತ್ರಿಗಳು ಹಾಗೂ ಮಂಡ್ಯ ಮತ್ತು ಮೈಸೂರಿನ ಸಂಸದರು ಪ್ರಯಾಣಿಕರು ಹಾಗೂ ರೈತರ ದುರಾವಸ್ಥೆಯನ್ನು ಕಂಡರೂ ಈ ಬಗ್ಗೆ ಅಸಡ್ಡೆ ತೋರುತ್ತಿರುವುದೇಕೆ?

ಇದನ್ನೂ ಓದಿ : Bangalore- Mysuru Express way : 1.5 ಕಿಮೀ ರೋಡ್‌ ಶೋಗೆ ಬಿಜೆಪಿ ರೆಡಿ, ಕ್ರೆಡಿಟ್‌ನಲ್ಲಿ ಪಾಲು ಕೇಳಿದ ಕಾಂಗ್ರೆಸ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೋಲಾರ

Blackmail Case: ಗ್ರಾಮ ಪಂಚಾಯಿತಿಯಲ್ಲೇ ಬಲವಂತದ ರೊಮ್ಯಾನ್ಸ್‌, ಬ್ಲ್ಯಾಕ್‌ಮೇಲ್‌ ಎಸಗಿದ ಬಿಲ್‌ ಕಲೆಕ್ಟರ್‌ ಬಂಧನ

Blackmail Case: ಒಂದೆಡೆ ರಾಜ್ಯಾದ್ಯಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದ್ದರೆ, ಇನ್ನೊಂದೆಡೆ ಈ ಬಿಲ್‌ ಕಲೆಕ್ಟರ್‌ ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ, ಕೆಲಸದ ಅವಧಿಯಲ್ಲೇ ರೊಮ್ಯಾನ್ಸ್‌ ನಡೆಸಿ ಅದನ್ನು ಚಿತ್ರೀಕರಿಸಿಕೊಂಡಿದ್ದ. ಅದನ್ನು ಹಂಚಿದ್ದ. ಈಗ ಮಹಿಳಾ ಉದ್ಯೋಗಿಯಿಂದ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿದೆ.

VISTARANEWS.COM


on

blackmail case kgf
Koo

ಕೋಲಾರ: ಕೆಜಿಎಫ್‌ನ ರಾಮಸಾಗರ ಗ್ರಾಮ ಪಂಚಾಯಿತಿ (gram Panchayat) ಕಚೇರಿಯಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಜತೆ ಖಾಸಗಿ ಕ್ಷಣಗಳನ್ನು (romance) ಚಿತ್ರೀಕರಿಸಿಕೊಂಡು, ಅದನ್ನು ಹಂಚಿ ಬ್ಲ್ಯಾಕ್‌ಮೇಲ್‌ (Blackmail Case) ಎಸಗಿದ ಆರೋಪ ಎದುರಿಸುತ್ತಿರುವ ಬಿಲ್‌ ಕಲೆಕ್ಟರ್‌ ಅರ್ಜುನ್‌ ಹರಿಕೃಷ್ಣ ಎಂಬಾತನನ್ನು ಬೇತಮಂಗಲ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ವಿರುದ್ಧ ಲೈಂಗಿಕ ಕಿರುಕುಳ (Physical Abuse), ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಗೆ ಮುಜುಗರ, ಖಾಸಗಿ ಕ್ಷಣಗಳ ಫೋಟೋ ಹಂಚಿಕೆ ಹಾಗೂ ಬೆದರಿಕೆ (threat) ಒಡ್ಡಿದ ಕುರಿತು ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ಗ್ರಾಮ ಪಂಚಾಯಿತಿಯ ಕಚೇರಿಯ ಮೊದಲ ಮಹಡಿಯ ಕೊಠಡಿಯಲ್ಲಿ ಸಿಸಿಟಿವಿ ಸಂಪರ್ಕ ಕಡಿತಗೊಳಿಸಿದ ಆರೋಪಿಯು ತಮ್ಮ ಖಾಸಗಿ ಕ್ಷಣಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದ. ಸಂತ್ರಸ್ತೆ ನೀಡಿದ ದೂರಿನ ಮೇಲೆ ಅರ್ಜುನ್ ವಿಚಾರಣೆ ನಡೆಸಿದ ಬೇತಮಂಗಲ ಪೊಲೀಸರು ನಂತರ ಆತನನ್ನು ಬಂಧಿಸಿ, ನ್ಯಾಯಾಲಯದ ಮುಂದೆ ಹಾಜರುಪಡಿಸಿದರು.

ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಹೋದಾಗ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ ನಡೆಯಿತು. ತನ್ನ ಮಗನನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಹೋಗದಂತೆ ಆರೋಪಿಯ ತಾಯಿ ಪೊಲೀಸರ ಜೀಪ್‌ ಮುಂದೆ ಅಡ್ಡಲಾಗಿ ಮಲಗಿ ತಡೆ ಒಡ್ಡಿದರು. ಕೊನೆಗೆ ಪೊಲೀಸರು ಅವರನ್ನು ಪಕ್ಕಕ್ಕೆ ಸರಿಸಿ ಆರೋಪಿಯನ್ನು ಕರೆದೊಯ್ದರು.

ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಮಸಾಗರ ಗ್ರಾಮ ಪಂಚಾಯಿತಿಯ 14 ಸದಸ್ಯರು ಮಂಗಳವಾರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಹರ್ತಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಆರೋಪಿ ಮತ್ತು ಸಂತ್ರಸ್ತೆಯನ್ನು ಸೇವೆಯಿಂದ ಅಮಾನತು ಮಾಡಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿರುವುದಾಗಿ ಹರ್ತಿ ತಿಳಿಸಿದ್ದಾರೆ. ಪ್ರಕರಣದ ತನಿಖೆಯನ್ನು ಸೈಬರ್ ಇನ್‌ಸ್ಪೆಕ್ಟರ್ ಲಕ್ಷ್ಮಿನಾರಾಯಣ ನಡೆಸುತ್ತಿದ್ದಾರೆ.

ಒಂದೆಡೆ ರಾಜ್ಯಾದ್ಯಂತ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದ್ದರೆ, ಇನ್ನೊಂದೆಡೆ ಈ ಬಿಲ್‌ ಕಲೆಕ್ಟರ್‌ ಗ್ರಾಮ ಪಂಚಾಯಿತಿ ಕಚೇರಿಯಲ್ಲಿಯೇ, ಕೆಲಸದ ಅವಧಿಯಲ್ಲೇ ರೊಮ್ಯಾನ್ಸ್‌ ನಡೆಸಿ ಅದನ್ನು ಚಿತ್ರೀಕರಿಸಿಕೊಂಡಿದ್ದ. ಅದನ್ನು ಹಂಚಿದ್ದ. ಈಗ ಮಹಿಳಾ ಉದ್ಯೋಗಿಯಿಂದ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಾಗಿದೆ.

ಪಂಚಾಯತಿ ಸಿಬ್ಬಂದಿಯ ಈ ಕಿಸ್ಸಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ಹಾಗೂ ಮಹಿಳಾ ಉದ್ಯೋಗಿ ಜೊತೆಗಿರುವ ಖಾಸಗಿ ಫೋಟೋಗಳು ವೈರಲ್ ಆಗಿವೆ. ಆರೋಪಿ ಅರ್ಜುನ್ ಹರಿಕೃಷ್ಣ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮೊದಲ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯ ಬಳಿ ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ವಿರೋಧಿಸಿದಾಗ, ನಿನ್ನ ಗಂಡನಿಗೆ ಗ್ರಾಮ ಪಂಚಾಯಿತಿಯಲ್ಲಿ ಜಲಗಾರ ಕೆಲಸ ಕೊಡಿಸುತ್ತೇನೆ. ಜೊತೆಗೆ ನಿಮಗೆ ವಾಸಕ್ಕೆಂದು ಪಂಚಾಯಿತಿಯಿಂದ ಉಚಿತ ಸರ್ಕಾರಿ ಮನೆ ಕಟ್ಟಿಸಿಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾನೆ. ತನಗೆ ಮುತ್ತಿಡುವುದಕ್ಕೆ ಬಲವಂತವಾಗಿ ಪ್ರೇರೇಪಿಸಿ ಅದನ್ನು ತನ್ನ ಮೊಬೈಲ್‌ನಲ್ಲಿ ಸೆಲ್ಫಿ ಫೋಟೋ ತೆಗೆದುಕೊಂಡಿದ್ದಾನೆ. ನಂತರದ ದಿನಗಳಲ್ಲಿ ಲೈಂಗಿಕವಾಗಿ ಸಹಕರಿಸುವಂತೆ, ಇಲ್ಲದಿದ್ದರೆ ಕೆಲಸದಿಂದ ತೆಗೆದುಹಾಕುತ್ತೇನೆ ಎಂದು ಬೆದರಿಸಿದ್ದಾನೆ. ಮುತ್ತು ಕೊಡುವ ಕ್ಷಣಗಳ ಫೋಟೋ ವೈರಲ್‌ ಮಾಡಡುತ್ತೇನೆ ಎಂದು ಬೆದರಿಸಿದ್ದಾನೆ. ಆತನ ಕಿರುಕುಳದಿಂದ ನನ್ನ ಸಂಸಾರ ಹಾಗೂ ಜೀವನಕ್ಕೆ ಮುಳುವಾಗಿದೆ. ಈಗ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Continue Reading

ರಾಜಕೀಯ

Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

Prajwal Revanna Case: ಸಂತ್ರಸ್ತರ ಪೋಟೊ, ವಿಡಿಯೊ ದಾಖಲಿಸಿ ಇಟ್ಟುಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಇದು ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಹಗರಣವೆಂದು ತಿಳಿಯುತ್ತದೆ. ಅಲ್ಲದೆ, ದೂರು ಕೊಡದಂತೆ ಬೆದರಿಕೆ ಹಾಕುವುದು, ಕಿಡ್ನ್ಯಾಪ್‌ ಮಾಡುವುದನ್ನೂ ಮಾಡಲಾಗಿದೆ. ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಹಾಗೂ ಚುನಾವಣೆಯ ಲಾಭಕ್ಕಾಗಿ ಇದನ್ನೆಲ್ಲ ಬಳಸಿಕೊಳ್ಳುತ್ತಿರುವುದು ಸಹ ಆಘಾತಕಾರಿ ಅಂಶವಾಗಿದೆ ಎಂದು ಸಾಹಿತಿಗಳು ಪತ್ರದಲ್ಲಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ ಎಂದೂ ಹೇಳಿದ್ದಾರೆ.

VISTARANEWS.COM


on

Prajwal Revanna Case Can women trust your government Writers open letter to Siddaramaiah
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಾಹಿತಿಗಳು, ಮಹಿಳಾ ಸಂಘಟನೆಗಳವರು ಬಹಿರಂಗ ಪತ್ರ ಬರೆದಿದ್ದಾರೆ. ಈ ಕೇಸ್‌ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಜತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ಬಗ್ಗೆಯೂ ಅಸಮಾಧಾನವನ್ನು ಹೊರಹಾಕಿದ್ದಾರೆ. ಇನ್ನು ಈ ಸಂಬಂಧ 16 ಬೇಡಿಕೆಗಳನ್ನು ಮುಂದಿಡಲಾಗಿದೆ.

ಹಿರಿಯ ಲೇಖಕರಾದ ಡಾ. ವಿಜಯಾ, ಸಾಹಿತಿಗಳಾದ ಡಾ. ಜಿ. ರಾಮಕೃಷ್ಣ, ವಸುಂಧರಾ ಭೂಪತಿ, ಮೀನಾಕ್ಷಿ ಬಾಳಿ, ಕೆ, ನೀಲಾ, ಕೆ.ಎಸ್ ವಿಮಲಾ, ಕುಂ ವೀರಭದ್ರಪ್ಪ,‌ ಮುಜಫರ್ ಅಸ್ಸಾದಿ ಸೇರಿದಂತೆ ಒಟ್ಟು 107 ಜನರಿಂದ ಈ ಪತ್ರವನ್ನು ಬರೆಯಲಾಗಿದೆ. ಪಜ್ಞಾವಂತ ನಾಗರಿಕರ ಬಹಿರಂಗ ಪತ್ರ ಎಂದು ಬರೆದುಕೊಳ್ಳಲಾಗಿದೆ.

ಸಂತ್ರಸ್ತರ ಪೋಟೊ, ವಿಡಿಯೊ ದಾಖಲಿಸಿ ಇಟ್ಟುಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ? ಇದು ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಹಗರಣವೆಂದು ತಿಳಿಯುತ್ತದೆ. ಅಲ್ಲದೆ, ದೂರು ಕೊಡದಂತೆ ಬೆದರಿಕೆ ಹಾಕುವುದು, ಕಿಡ್ನ್ಯಾಪ್‌ ಮಾಡುವುದನ್ನೂ ಮಾಡಲಾಗಿದೆ. ರಾಜಕೀಯ ನಾಯಕರು ತಮ್ಮ ಹಿತಾಸಕ್ತಿಗಾಗಿ ಹಾಗೂ ಚುನಾವಣೆಯ ಲಾಭಕ್ಕಾಗಿ ಇದನ್ನೆಲ್ಲ ಬಳಸಿಕೊಳ್ಳುತ್ತಿರುವುದು ಸಹ ಆಘಾತಕಾರಿ ಅಂಶವಾಗಿದೆ ಎಂದು ಪತ್ರದಲ್ಲಿ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ದೇವೇಗೌಡರ ಕುಟುಂಬದ ಬಗ್ಗೆ ಬೇಸರ

ಪ್ರಜಲ್ ರೇವಣ್ಣ ಅವರ ತಾತ, ತಂದೆ, ತಾಯಿ, ಚಿಕ್ಕಪ್ಪ, ಚಿಕ್ಕಮ್ಮ, ಅಣ್ಣ, ತಮ್ಮ ಎಲ್ಲರೂ ಪ್ರಜಾಪ್ರಭುತ್ವದ ಎಲ್ಲ ಹುದ್ದೆಗಳನ್ನು, ಸವಲತ್ತುಗಳನ್ನು ಪಡೆದುಕೊಂಡಿದ್ದಾರೆ. ಪ್ರಜ್ವಲ್ ರೇವಣ್ಣ ಮತ್ತು ಅವರ ಕುಟುಂಬವು ಪ್ರಜಾಪ್ರಭುತ್ವದ ಮುಸುಕಿನೊಳಗೆ ಪ್ರಜಾಪ್ರತಿನಿಧಿಗಳೆಂಬ ಧಿರಿಸು ಧರಿಸಿಕೊಂಡಿದ್ದಾರೆ. ಪ್ರಕರಣ ಹೊರ ಬಂದ ತಕ್ಷಣ ಚುನಾವಣಾ ಸ್ಪರ್ಧೆಗೆ ಅವಕಾಶ ನೀಡಬಾರದಾಗಿತ್ತು. ಹಗರಣ ಬಯಲಾಗಿ ಐದು ದಿನಗಳು ಆರೋಪಿಯನ್ನು ಸ್ವತಂತ್ರವಾಗಿ ಬಿಡಲಾಗಿದೆ. ಆತನ ಮೇಲೆ ಕಣ್ಗಾವಲನ್ನು ಹಾಕಿಲ್ಲ. ಸರ್ಕಾರದ ಮೇಲೆ ವಿಶ್ವಾಸವಿಟ್ಟು ಮಹಿಳೆಯರು ಸುರಕ್ಷಿತವಾಗಿರಲು ಸಾಧ್ಯವೇ ಎಂಬ ಪ್ರಶ್ನೆ ಮೂಡಿದೆ. ಸಂತ್ರಸ್ತರ ಕುಟುಂಬಗಳು ಮಾನಸಿಕ ಯಾತನೆಗಳಿಗೆ ಗುರಿಯಾಗಿವೆ. ಅಲ್ಲದೆ, ವಿಡಿಯೊಗಳು ಲಕ್ಷಾಂತರ ಜನರಿಗೆ ತಲುಪಿವೆ. ಇದರಿಂದ ಯುವಜನರು, ಕಾಮುಕರು, ಮಕ್ಕಳ ಮೇಲೆ ಪರಿಣಾಮ ಬೀರಬಹುದಾಗಿದೆ ಎಂದು ಸಾಹಿತಿಗಳು ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ಕಾಂಗ್ರೆಸ್‌ ಸರ್ಕಾರದಿಂದ ಪ್ರಜ್ವಲ್‌ ಕೇಸ್‌ ನಿಯಂತ್ರಣ; ಡೈವರ್ಟ್‌ ಮಾಡಲು ಬಿಜೆಪಿಗರ ಮೇಲೆ ದಾಳಿ ಎಂದ ಅಶೋಕ್‌!

ಸರ್ಕಾರಕ್ಕೆ ಸಲ್ಲಿಸಿದ ಪ್ರಮುಖ ಬೇಡಿಕೆಗಳು ಏನು?

  • ಆರೋಪಿಯನ್ನು ಕೂಡಲೇ ಬಂಧಿಸಬೇಕು,ಐಟಿ, ಐಪಿಸಿ ಕಾಯ್ದೆಗಳ ಅಡ್ಡಿಯಲ್ಲಿ ಮೊಕದ್ದಮೆ ಹೂಡಬೇಕು
  • ಸಂತ್ರಸ್ತ‌ ಮಹಿಳೆಯರು ಭೀತಿಯಿಲ್ಲದೆ ದೂರು ನೀಡುವ ವಾತಾವರಣ ನಿರ್ಮಾಣ ಮಾಡಬೇಕು
  • ತನಿಖೆ ಪೂರ್ಣಗೊಳ್ಳುವವರೆಗೆ ಎಚ್.ಡಿ. ರೇವಣ್ಣ ವಿಧಾನಸಭೆ ಸದಸ್ಯತ್ವ ತಾತ್ಕಾಲಿಕವಾಗಿ ರದ್ದು ಮಾಡಬೇಕು
  • ಆರೋಪ- ಪ್ರತ್ಯಾರೋಪಗಳಲ್ಲಿ ತೊಡಗಿರುವ ರಾಜಕೀಯ ನಾಯಕ ನಡವಳಿಕೆಗೆ ಕಡಿವಾಣ ಹಾಕಬೇಕು
  • ಎಸ್‌ಐಟಿ ತನಿಖೆಯು ಕಾಯ್ದೆ ಅನುಸಾರ ಕಾಲಮಿತಿಯೊಳಗೆ ನಡೆಯಬೇಕು
  • ಪ್ರಜ್ವಲ್ ಚಾಲಕ ಕಾರ್ತಿಕ್ ನನ್ನ ಕೂಡಲೇ ಬಂಧಿಸಬೇಕು
  • ಬಿಜೆಪಿ ಮುಖಂಡ ದೇವರಾಜೇಗೌಡ ವಿರುದ್ಧವೂ ಗಂಭೀರ ಪ್ರಕರಣಗಳು ದಾಖಲು ಮಾಡಬೇಕು
  • ವಿಡಿಯೊಗಳನ್ನು ಹಂಚಿದವರ ವಿರುದ್ಧ ಮಾನವ ಹಕ್ಕುಗಳಿಗೆ ಧಕ್ಕೆ, ಎಲೆಕ್ಷನ್ ಸ್ಯಾಬೊಟೇಜ್ ಮಾಡಲು ಸಂಚು ಮಾಡಿರುವ ಆರೋಪಗಳ ಮೇಲೆ ಕೇಸ್ ಹೂಡಬೇಕು
  • ಹಳೇ ವಿಡಿಯೊ ಎಂದು ರೇವಣ್ಣ ಹೇಳಿದ್ದಾರೆ, ವಿಕೃತಿ ಮುಂದುವರೆಯಲು ಬಿಟ್ಟಿರುವ ಕುಟುಂಬದ ಎಲ್ಲ ಸದಸ್ಯರನ್ನು Accomplice ಗಳೆಂದು ಪರಿಗಣಿಸಿ
  • ಅವರ ಕುಟುಂಬ ಸದಸ್ಯರ ವಿರುದ್ಧವೂ ಮೊಕದ್ದಮೆ ಹೂಡಬೇಕು
  • ಪ್ರಜ್ವಲ್ ದೇಶ ಬಿಟ್ಟು ಪರಾರಿಯಾಗಿರುವುದು ಗೃಹ ಇಲಾಖೆ ಮತ್ತು ಗುಪ್ತಚರ ಇಲಾಖೆಯ ವೈಫಲ್ಯ
  • ಗೃಹ ಇಲಾಖೆ, ಗುಪ್ತಚರ ಇಲಾಖೆ ಅಧಿಕಾರಿಗಳನ್ನು ವಜಾ ಮಾಡಬೇಕು
Continue Reading

ಹಾವೇರಿ

Ranebennur News: ಆಧುನಿಕ ವಿಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆ ಅಪಾರ; ವಿ. ನವೀನಶಾಸ್ತ್ರಿ ರಾ. ಪುರಾಣಿಕ

Ranebennur News: ಆಧುನಿಕ ವಿಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ ತಿಳಿಸಿದರು. ರಾಣೆಬೆನ್ನೂರು ನಗರದಲ್ಲಿ ಆಚಾರ್ಯ ಶಂಕರರ ಜಯಂತ್ಯುತ್ಸವದ 2ನೇ ದಿನದ ಅದ್ವೈತ ವೇದಾಂತದಲ್ಲಿ ಶಂಕರಾಚಾರ್ಯರು ತಿಳಿಸಿರುವ ಆಧುನಿಕ ವಿಜ್ಞಾನದ ಅಂಶಗಳು ಎಂಬ ವಿಷಯ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.

VISTARANEWS.COM


on

Acharya Shankara Jayanthyutsava programme at Ranebennur
Koo

ರಾಣೆಬೆನ್ನೂರು: ಆಧುನಿಕ ವಿಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ (Ranebennur News) ತಿಳಿಸಿದರು.

ನಗರದಲ್ಲಿ ಆಚಾರ್ಯ ಶಂಕರರ ಜಯಂತ್ಯುತ್ಸವದ 2ನೇ ದಿನದ ಅದ್ವೈತ ವೇದಾಂತದಲ್ಲಿ ಶಂಕರಾಚಾರ್ಯರು ತಿಳಿಸಿರುವ ಆಧುನಿಕ ವಿಜ್ಞಾನದ ಅಂಶಗಳು ಎಂಬ ವಿಷಯ ಕುರಿತು ಉಪನ್ಯಾಸ ನೀಡಿ ಅವರು ಮಾತನಾಡಿದರು.

ವಿಶ್ವ ಸೃಷ್ಟಿಯ ಕಾರಣದ ಹುಡುಕಾಟದಲ್ಲಿ ವೇದಾಂತವು ಬುದ್ಧಿ ಮತ್ತು ಪ್ರಜ್ಞೆಗಳನ್ನು ತೊಡಗಿಸುವುದಲ್ಲದೆ, ಸಮಸ್ತ ವಸ್ತು ಪ್ರಪಂಚವನ್ನೂ ಸೇರಿಸಿಕೊಳ್ಳುತ್ತದೆ. ವಸ್ತುವಿನ ಗುಣಧರ್ಮಗಳನ್ನು ಕಂಡುಹಿಡಿಯುವುದೇ ಭೌತವಿಜ್ಞಾನಿಯ ಪರಮಗುರಿ. ಆದ್ದರಿಂದ ವೇದಾಂತ ವಿಜ್ಞಾನ ಮತ್ತು ಭೌತ ವಿಜ್ಞಾನಗಳು ಒಂದನ್ನೊಂದು ಸಹಜವಾಗಿಯೇ ಅವಲಂಬಿಸಿವೆ. ಇದು ಕೇವಲ ತೋರಿಕೆಯದಾಗಿರದೆ ಯಾವುದೋ ಮೂಲಭೂತ ತತ್ವವನ್ನು ಆಧರಿಸಿದೆ ಎಂದರು.

ಇದನ್ನೂ ಓದಿ: Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

ಶಂಕರಾಚಾರ್ಯರಿಂದ ಪ್ರತಿಪಾದಿಸಲ್ಪಟ್ಟ ಪ್ರಬಲವಾಗಿ ಕಾಣುವ “ವಸ್ತು-ತಂತ್ರ” ಜ್ಞಾನ ತತ್ವವು ಅದ್ವೈತ ವೇದಾಂತದಲ್ಲಿ ಎಂತಹ ಪರಿಣಾಮ ಉಂಟುಮಾಡಿದೆ ಎಂಬ ವಿಚಾರಕ್ಕೆ ತೊಡಗಿದಾಕ್ಷಣ ಅದು ನಮ್ಮನ್ನು ಅಧ್ಯಾತ್ಮ ವಿದ್ಯೆ ಎಂಬ ಸಮುದ್ರದ ಆಳಕ್ಕೆ ಕೊಂಡೊಯ್ಯುತ್ತದೆ. ಭೌತಶಾಸ್ತ್ರದ “ವಸ್ತು ನಿಷ್ಠತೆಯ ತತ್ವ” ಮತ್ತು ವೇದಾಂತ ಶಾಸ್ತ್ರದ “ವಸ್ತು-ತಂತ್ರ” ಇವೆರಡೂ ವಸ್ತುವನ್ನು ಕುರಿತಾಗಿ ಇರುವ ನಮ್ಮ ಜ್ಞಾನದಿಂದ ವ್ಯಕ್ತಿ ನಿಷ್ಠ ಗುಣಧರ್ಮಗಳನ್ನು ಹೋಗಲಾಡಿಸಲು ರಚಿಸಲ್ಪಟ್ಟಿವೆ. ಅವೆರಡೂ ಒಂದೇ ವರ್ಗಕ್ಕೆ ಸೇರುತ್ತವೆ.

ಹೊರಜಗತ್ತಿನಲ್ಲಿ ಕಾಣುವ ಕೆಲವೊಂದು ಚಮತ್ಕಾರಗಳನ್ನು ವಿಜ್ಞಾನವು ಅಭ್ಯಾಸ ಮಾಡಿ ಹೇಗೆ ವರ್ಗಿಕರಿಸಿದೆಯೋ ಹಾಗೆಯೇ ತಮ್ಮ ಮೊದಲನೇ ಹಂತದ ಬೆಳವಣಿಗೆಯಲ್ಲಿ ನ್ಯಾಯ, ವೈಶೇಷಿಕ, ಸಾಂಖ್ಯ ಮುಂತಾದ ವೇದಾಂತ ಶಾಸ್ತ್ರಗಳೂ ಕೂಡ ತಮ್ಮ ಅಧ್ಯಯನದಲ್ಲಿ ವಸ್ತುವಿನ ಹೊರ ಆವರಣದ ಗುಣಧರ್ಮಗಳನ್ನೇ ಸೂಚಿಸುತ್ತವೆ. ಉದಾಹರಣೆಗೆ ವೈಶೇಷಿಕದ ಅಣುವಿಜ್ಞಾನ ಮತ್ತು ಸಾಂಖ್ಯದ ಪ್ರಕೃತಿಯ ಕಲ್ಪನೆ ಅಥವಾ ಮೂಲಪ್ರಕೃತಿಯ ಸ್ವಭಾವ ಇವೆರಡೂ ಮೂಲತಃ ವಸ್ತುವಿನ ಸ್ವಭಾವದ ಮೇಲೆ ಆಧಾರಿತವಾಗಿವೆ. ನ್ಯಾಯ, ವೈಶೇಷಿಕ ಮತ್ತು ಸಾಂಖ್ಯ ಮುಂತಾದ ದರ್ಶನ ಶಾಸ್ತ್ರಗಳು ತಮ್ಮ ಮುಂದಿನ ಬೆಳವಣಿಗೆಯ ಮಾರ್ಗದಲ್ಲಿ ಒಂದೇ ಆದ ಸಮಗ್ರ ವೇದಾಂತ ಶಾಸ್ತ್ರವಾಗಿ ತನ್ನ ಬೆಳವಣಿಗೆಯ ವಿವಿಧ ಹಂತವನ್ನು ದಾಟಿಹೋಗುವುದನ್ನು ನಾವು ನೋಡುತ್ತಿದ್ದೇವೆ. ಆದಿಶಂಕರರಿಂದ ವಸ್ತುನಿಷ್ಠತೆಯ ತತ್ವವು ತರ್ಕಬದ್ಧವಾದ ಅಂತಿಮ ಗುರಿಯ ಕಡೆಗೆ ಕೊಂಡೊಯಲ್ಪಟ್ಟಿತು ಎಂದು ಬ್ರಹ್ಮ ಸೂತ್ರದ ಅನೇಕ ಸೂತ್ರಗಳನ್ನು ಉದಾಹರಿಸಿ, ಶಂಕರರ ಶ್ರೀಚಕ್ರ ವಿವರಣೆಯನ್ನು ಅವರು ತಮ್ಮ ಉಪನ್ಯಾಸದಲ್ಲಿ ನೀಡಿದರು.

ಇದನ್ನೂ ಓದಿ: Facebook, Instagram Down: ಫೇಸ್‌ಬುಕ್‌, ಇನ್​ಸ್ಟಾಗ್ರಾಮ್​ ಸರ್ವರ್​ ಡೌನ್​; ಬಳಕೆದಾರರ ಪರದಾಟ

ಈ ಸಂದರ್ಭದಲ್ಲಿ ಅರುಣಕುಮಾರ ಮುದ್ರಿ, ಆನಂದ ನಾಯಕ, ಶ್ರೀನಿವಾಸ ಜೋಶಿ, ಗುರುರಾಜ ಕುಲಕರ್ಣಿ, ರವಿ ಕಾಶಿಕರ, ವೀಣಾ ಮುದ್ರಿ, ವೇದಾ ವರಗೇರಿ ಸೇರಿದಂತೆ ಶ್ರೀ ಶಂಕರ ಜಯಂತಿ ಉತ್ಸವ ಸಮಿತಿ ಪದಾಧಿಕಾರಿಗಳು ಹಾಗೂ ಶ್ರೀ ಶಾರದಾ ಶಂಕರ ಭಜನಾ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

ಧಾರವಾಡ ಮಾವಿನ ಮೇಳದಲ್ಲಿ 2.7 ಲಕ್ಷ ರೂ. ಮೌಲ್ಯದ ಮಾವು ಎಲ್ಲರ ಗಮನ ಸೆಳೆಯಿತು. ವಿಶ್ವದ ಮಾವಿನ ತಳಿಗಳಲ್ಲಿಯೇ ಅತೀ ದುಬಾರಿಯಾದ ಮೀಯಾಝಾಕಿ ತಳಿಯ ಮಾವು (Miyazaki Mango) ಅನ್ನು ಇಲ್ಲಿ ಪ್ರದರ್ಶನಕ್ಕಿಡಲಾಗಿದೆ. ಧಾರವಾಡದ ಪ್ರಮೋದ ಗಾಂವ್ಕರ್ ಎಂಬವರು ತಮ್ಮ ತೋಟದಲ್ಲಿ ಈ ಮಾವನ್ನು ಬೆಳೆದಿದ್ದಾರೆ.

VISTARANEWS.COM


on

Miyazaki Mango
Koo

ಧಾರವಾಡ: ಮಾವಿಗೆ ʼಹಣ್ಣುಗಳ ರಾಜʼ ಎನ್ನುವುದು ಸುಮ್ಮನೇ ಅಲ್ಲ. ಇದು ಯಾವತ್ತೂ ದುಬಾರಿಯೇ. ಆದರೆ ಧಾರವಾಡದಲ್ಲಿ (Dharwad news) ನಡೆಯುತ್ತಿರುವ ಮಾವು ಮೇಳದಲ್ಲಿ, ವಿಶ್ವದಲ್ಲಿಯೇ ಅತಿ ದುಬಾರಿಯಾದ ಮಾವಿನ ಹಣ್ಣು ಕಂಡುಬಂತು. ಜನ ಇದನ್ನು ನೋಡಿ (Miyazaki Mango) ನಿಬ್ಬೆರಗಾದರು.

ಧಾರವಾಡ ಮಾವಿನ ಮೇಳದಲ್ಲಿ 2.7 ಲಕ್ಷ ರೂ. ಮೌಲ್ಯದ ಮಾವು ಎಲ್ಲರ ಗಮನ ಸೆಳೆಯಿತು. ವಿಶ್ವದ ಮಾವಿನ ತಳಿಗಳಲ್ಲಿಯೇ ಅತೀ ದುಬಾರಿಯಾದ ಮೀಯಾಝಾಕಿ ತಳಿಯ ಮಾವು (Miyazaki Mango) ಅನ್ನು ಇಲ್ಲಿ ಪ್ರದರ್ಶನಕ್ಕಿಡಲಾಗಿದೆ. ಧಾರವಾಡದ ಪ್ರಮೋದ ಗಾಂವ್ಕರ್ ಎಂಬವರು ತಮ್ಮ ತೋಟದಲ್ಲಿ ಈ ಮಾವನ್ನು ಬೆಳೆದಿದ್ದಾರೆ.

ಧಾರವಾಡದ ತೋಟಗಾರಿಕೆ ಇಲಾಖೆ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಮಾವಿನ ಮೇಳದಲ್ಲಿ ಜಪಾನ್ ಮೂಲದ ಈ ವಿಶೇಷ ಮಾವಿನ ತಳಿ ನೋಡಿ ಜನ ಚಕಿತರಾದರು. ಮೀಯಾಝಾಕಿ ಹಣ್ಣಿನ ಪ್ರತಿ ಕೆಜಿಗೆ ಸುಮಾರು 2.7 ಲಕ್ಷ ರೂಪಾಯಿ ಬೆಲೆ ಇದೆ. ಕೇವಲ ಒಂದೇ ಒಂದು ಹಣ್ಣಿಗೆ ಸುಮಾರು 10 ಸಾವಿರ ರೂಪಾಯಿ ಬೆಲೆಬಾಳುತ್ತದೆ. ಈ ಮಾವನ್ನು ನೋಡಲೆಂದೇ ಮೇಳಕ್ಕೆ ವಿದ್ಯಾರ್ಥಿಗಳು, ಸಾರ್ವಜನಿಕರು ಆಗಮಿಸುತ್ತಿದ್ದಾರೆ.

Miyazaki Mango

ಮೀಯಾಝಾಕಿ ಪ್ರಭೇದವು ಮೂಲತಃ ಜಪಾನಿನ ತಳಿಯಾಗಿದೆ. ಅದರ ವಿಶಿಷ್ಟ ಸುವಾಸನೆ ಮತ್ತು ಔಷಧೀಯ ಮೌಲ್ಯಕ್ಕಾಗಿ ಇದು ವಿದೇಶಗಳಲ್ಲಿ ಭಾರಿ ಬೇಡಿಕೆಯನ್ನು ಹೊಂದಿದೆ. ಇವು ಚೆನ್ನಾಗಿ ಹಣ್ಣಾದಾಗ ಗಾಢ ಕೆಂಪು ಬಣ್ಣಕ್ಕೆ ತಿರುಗುತ್ತವೆ. ಜಪಾನಿಯರ ಪ್ರಕಾರ, ವಿಶ್ವದ ಅತ್ಯಂತ ದುಬಾರಿ ಮಾವಿನ ಮೂಲ ಹೆಸರು “ತೈಯೊ ನೋ ತಮಾಗೊ” (Taiyo no Tamago) ಅಥವಾ ಸೂರ್ಯನ ಮೊಟ್ಟೆ (Egg of the Sun).

ಇದಕ್ಕೆ ಹೆಸರಾಂತ ಜಪಾನಿನ ವಿಜ್ಞಾನಿ ಯಮಶಿತಾ ಮೀಯಾಝಾಕಿ ಅವರ ಹೆಸರನ್ನು ಇಡಲಾಗಿದೆ. ಇದರ ಅಭಿವೃದ್ಧಿ ಮತ್ತು ಕೃಷಿಗೆ ಅವರು ಗಮನಾರ್ಹವಾಗಿ ಕೊಡುಗೆ ನೀಡಿದ್ದರು. ಮೀಯಾಝಾಕಿ ಪ್ರಿಫೆಕ್ಚರ್‌ನಲ್ಲಿ ಇದರ ಕೃಷಿ ಮಾಡಲಾಗುತ್ತಿದೆ. ಹೀಗಾಗಿ ಜಗತ್ತು ಈ ರುಚಿಕರವಾದ ಮಾವಿನಹಣ್ಣುಗಳನ್ನು “ಮೀಯಾಝಾಕಿ” ಎಂದು ಕರೆಯಲು ಪ್ರಾರಂಭಿಸಿತು.

70 ರ ದಶಕದ ಕೊನೆಯಲ್ಲಿ ಮತ್ತು 80 ರ ದಶಕದ ಆರಂಭದಲ್ಲಿ ಈ ಮಿಯಾಜಾಕಿ ಮಾವಿನ ಉತ್ಪಾದನೆಯು ಮಿಯಾಜಾಕಿಯಲ್ಲಿ ಆರಂಭಿಸಲಾಯಿತು. ಈ ನಗರದ ಬೆಚ್ಚನೆಯ ವಾತಾವರಣ, ಅದರ ದೀರ್ಘಾವಧಿಯ ಸೂರ್ಯನ ಬೆಳಕು ಮತ್ತು ಹೇರಳವಾದ ಮಳೆಯಿಂದಾಗಿ ರೈತರು ಮಾವು ಕೃಷಿಗೆ ಆಕರ್ಷಣೆಗೊಳ್ಳಲು ಕಾರಣವಾಯಿತು. ಏಪ್ರಿಲ್ ಮತ್ತು ಆಗಸ್ಟ್ ನಡುವೆ ಈ ಮಾವಿನ ಸುಗ್ಗಿ ನಡೆಯುತ್ತದೆ.

ಇತ್ತೀಚೆಗೆ ಭಾರತದಲ್ಲೂ ಕೆಲವರು ಕೃಷಿಕರು ಇದನ್ನು ಬೆಳೆಯಲು ಯತ್ನಿಸುತ್ತಿದ್ದಾರೆ. ಆದರೆ ಇದು ಅತ್ಯಂತ ದುಬಾರಿಯಾದ ಆರೈಕೆ, ಒಳಸುರಿಗಳ ಪೂರೈಕೆಯನ್ನು ಬೇಡುತ್ತದೆ. ಈ ಮಾವಿನಹಣ್ಣುಗಳು ವ್ಯಾಪಕ ರೋಗ ನಿರೋಧಕ ಶಕ್ತಿಯನ್ನು ಹೊಂದಿವೆ. ಬೀಟಾ-ಕ್ಯಾರೋಟಿನ್ ಮತ್ತು ಫೋಲಿಕ್ ಆಮ್ಲವನ್ನು ಒಳಗೊಂಡಿವೆ. ಇದು ಕಣ್ಣಿನ ಆರೋಗ್ಯಕ್ಕೆ ಹೆಚ್ಚು ಉಪಯೋಗಕಾರಿಯಾಗಿದೆ. ದೃಷ್ಟಿ ಹೀನತೆಯನ್ನು ತಪ್ಪಿಸುವಲ್ಲಿ ಈ ಮಾವು ಪರಿಣಾಮಕಾರಿಯಾಗಿದೆ ಎಂದು ಹೇಳಲಾಗುತ್ತಿದೆ. ಮಿಯಾಜಾಕಿ ಮಾವನ್ನು ಭಾರತ, ಬಾಂಗ್ಲಾದೇಶ, ಥಾಯ್ಲೆಂಡ್ ಮತ್ತು ಫಿಲಿಪ್ಪಿನ್ಸ್‌ ರಾಷ್ಟ್ರಗಳಲ್ಲಿ ಕೆಲವೆಡೆ ಬೆಳೆಯಲಾಗುತ್ತದೆ. ಭಾರತದಲ್ಲಿ ಪಶ್ಚಿಮ ಬಂಗಾಳ ಮಾತ್ರವಲ್ಲದೇ, ಮಧ್ಯಪ್ರದೇಶದ ಜಬಲ್ಪುರ ನಗರದಲ್ಲಿ ಬೆಳೆಯಲಾಗಿದೆ ಎಂದು ಮಾಧ್ಯಮಗಳ ವರದಿಗಳು ಹೇಳುತ್ತವೆ.

ಇದನ್ನೂ ಓದಿ: Mango Season: ಮಾರುಕಟ್ಟೆಗೆ ಬಂತು ಉತ್ತರ ಕನ್ನಡದ ಪ್ರಸಿದ್ಧ ಕರಿಈಶಾಡು ಮಾವು; ಡಜನ್‌ಗೆ 700 ರೂ.!

Continue Reading
Advertisement
Rishabh Pant
ಕ್ರೀಡೆ7 mins ago

Rishabh Pant: ಬಿಸಿಸಿಐ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ರಿಷಭ್​ ಪಂತ್​

LIC
ವಾಣಿಜ್ಯ11 mins ago

LIC: ಎಲ್‌ಐಸಿಗೆ ಬಿಗ್‌ ರಿಲೀಫ್‌; ಸಾರ್ವಜನಿಕರ ಷೇರು ಪಾಲು ಶೇ. 10ಕ್ಕೆ ಹೆಚ್ಚಿಸಲು 3 ವರ್ಷ ಹೆಚ್ಚುವರಿ ಕಾಲಾವಕಾಶ

Mobile Phone Recharges:
ದೇಶ34 mins ago

Mobile Phone Recharges: ಮೊಬೈಲ್‌ ಗ್ರಾಹಕರಿಗೆ ಬಿಗ್‌ ಶಾಕ್‌! ಮತ್ತೆ ರಿಚಾರ್ಜ್‌ ಮೊತ್ತ ಏರಿಕೆ

IPL 2024
ಕ್ರೀಡೆ46 mins ago

IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

blackmail case kgf
ಕೋಲಾರ49 mins ago

Blackmail Case: ಗ್ರಾಮ ಪಂಚಾಯಿತಿಯಲ್ಲೇ ಬಲವಂತದ ರೊಮ್ಯಾನ್ಸ್‌, ಬ್ಲ್ಯಾಕ್‌ಮೇಲ್‌ ಎಸಗಿದ ಬಿಲ್‌ ಕಲೆಕ್ಟರ್‌ ಬಂಧನ

Madhuri Dixit birthday extend wishes
ಬಾಲಿವುಡ್1 hour ago

Madhuri Dixit: ಮಾಧುರಿ ದೀಕ್ಷಿತ್‌ಗೆ ಇಂದು ಜನುಮದಿನ ಸಂಭ್ರಮ; ಅವರ ಕುರಿತ ಕುತೂಹಲಕರ ಸಂಗತಿಗಳು ಇಲ್ಲಿವೆ

Prajwal Revanna Case Can women trust your government Writers open letter to Siddaramaiah
ರಾಜಕೀಯ1 hour ago

Prajwal Revanna Case: ನಿಮ್ಮ ಸರ್ಕಾರದ ಮೇಲೆ ಮಹಿಳೆಯರು ವಿಶ್ವಾಸ ಇಡಬಹುದೇ? ಸಿದ್ದರಾಮಯ್ಯಗೆ ಸಾಹಿತಿಗಳ ಬಹಿರಂಗ ಪತ್ರ!

Acharya Shankara Jayanthyutsava programme at Ranebennur
ಹಾವೇರಿ1 hour ago

Ranebennur News: ಆಧುನಿಕ ವಿಜ್ಞಾನಕ್ಕೆ ಶಂಕರಾಚಾರ್ಯರು ನೀಡಿದ ಕೊಡುಗೆ ಅಪಾರ; ವಿ. ನವೀನಶಾಸ್ತ್ರಿ ರಾ. ಪುರಾಣಿಕ

Miyazaki Mango
ಪ್ರಮುಖ ಸುದ್ದಿ2 hours ago

Miyazaki Mango: ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

Bomb Threat
ದೇಶ2 hours ago

Bomb Threat: ದೆಹಲಿ, ಅಹಮದಾಬಾದ್‌ ಬಳಿಕ ಕಾನ್ಪುರ ಶಾಲೆಗಳಿಗೂ ಬಾಂಬ್‌ ಬೆದರಿಕೆ; ಇಮೇಲ್‌ ಮೂಲಕ ಸಂದೇಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ8 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ10 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ20 hours ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 202423 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ1 day ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌