ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೊ ತೋರಿಸಿ, ಅನುಚಿತವಾಗಿ ಸ್ಪರ್ಶಿಸುತ್ತಿದ್ದ ಶಿಕ್ಷಕ ಬಂಧನ - Vistara News

ಕ್ರೈಂ

ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೊ ತೋರಿಸಿ, ಅನುಚಿತವಾಗಿ ಸ್ಪರ್ಶಿಸುತ್ತಿದ್ದ ಶಿಕ್ಷಕ ಬಂಧನ

ಶಿಕ್ಷಕನ ಕಾಮುಕತನದಿಂದ ಬೇಸತ್ತ ಹುಡುಗಿಯರು, ಈ ವಿಷಯವನ್ನು ಮೊದಲು ತಮ್ಮ ಪಾಲಕರಿಗೆ ಹೇಳಿಕೊಂಡಿದ್ದರು. ಪಾಲಕರು ಶಾಲೆಗೆ ಬಂದು ಪ್ರಾಂಶುಪಾಲರಿಗೆ ದೂರು ಕೊಟ್ಟಿದ್ದರು.

VISTARANEWS.COM


on

Teacher Arrested For Showing Obscene Videos to students in Maharashtra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೊ ತೋರಿಸಿದ 52 ವರ್ಷದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಶಾಲೆಯೊಂದರಲ್ಲಿ ನಡೆದಿದೆ. ಸದ್ಯ ಆ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಮತ್ತು ಐಪಿಸಿಯ ಕೆಲವು ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಈತ ಶಾಲೆಯಲ್ಲಿ ಸಹಾಯಕ ಶಿಕ್ಷಕನಾಗಿದ್ದಾನೆ. ಐದನೇ ತರಗತಿಯಲ್ಲಿ ಓದುತ್ತಿರುವ ಸುಮಾರು ಎಂಟು ಹುಡುಗಿಯರಿಗೆ ಶಿಕ್ಷಕ ಅಶ್ಲೀಲ ವಿಡಿಯೊ ತೋರಿಸಿದ್ದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಅಷ್ಟೇ ಅಲ್ಲ, ಆ ಹುಡುಗಿಯರನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆಂದೂ ಹೇಳಲಾಗಿದೆ. ಹುಡುಗಿಯರು ಮೊದಲು ತಮ್ಮ ಪಾಲಕರಿಗೆ ಹೇಳಿದ್ದರು. ಪಾಲಕರು ಶಾಲೆಗೆ ಬಂದು ಪ್ರಾಂಶುಪಾಲರನ್ನು ಭೇಟಿಯಾಗಿ ವಿಷಯ ತಿಳಿಸಿದ್ದರು. ಬ್ಲಾಕ್​ ಶಿಕ್ಷಣಾಧಿಕಾರಿ ಕೂಡ ಶಿಕ್ಷಕನನ್ನು ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ಈ ಕೇಸ್​ ಠಾಣೆ ಮೆಟ್ಟಿಲೇರಿದೆ. ಶಿಕ್ಷಕನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದ ಬೀದಿ ನಾಯಿಗಳನ್ನು ಅಸ್ಸಾಂಗೆ ಕಳಿಸಿ, ಅವರು ಕೊಂದು ತಿಂತಾರೆ ಎಂದ ಶಾಸಕ; ಸಿಡಿಮಿಡಿಗೊಂಡ ಪ್ರಾಣಿಗಳ ಹಕ್ಕು ರಕ್ಷಕರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಸೋಮವಾರ ರೇವಣ್ಣ ಜಾಮೀನು ಅರ್ಜಿ ವಿಚಾರಣೆ: SIT ವಾದ ಏನು? ವಕೀಲ ನಾಗೇಶ್‌ ಕೌಂಟರ್‌ ಏನು?

Prajwal Revanna Case: ಸಂತ್ರಸ್ತೆ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಬಂಧನವಾಗಿರುವ ಎಚ್‌.ಡಿ. ರೇವಣ್ಣ ಅವರಿಗೆ ಜಾಮೀನು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ಸೋಮವಾರಕ್ಕೆ ಬರಲಿದೆ. ಗುರುವಾರ ನಡೆದಿದ್ದ ಕೋರ್ಟ್‌ ಕಲಾಪದ ವೇಳೆ ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು ತನಿಖೆಯ ಹಲವಾರು ಲೂಪ್‌ ಹೋಲ್ಸ್‌ಗಳನ್ನು ಕೋರ್ಟ್‌ ಮುಂದೆ ತೆರೆದಿಟ್ಟಿದ್ದಾರೆ. ಅಲ್ಲದೆ, ಎಸ್‌ಐಟಿ ನಡೆಯನ್ನು ಪ್ರಶ್ನೆ ಮಾಡಿದ್ದಾರೆ? ತನಿಖೆ ಹಾದಿ ಸರಿ ಇಲ್ಲ ಎಂದೂ ಹೇಳಿದ್ದಾರೆ. ಜತೆಗೆ ಸುಪ್ರೀಂ ಕೋರ್ಟ್‌ನ ಹಲವು ತೀರ್ಪುಗಳನ್ನು ಉಲ್ಲೇಖ ಮಾಡಿದ್ದಾರೆ. ಇದಕ್ಕೆ ಎಸ್‌ಐಟಿ ಪರ ವಕೀಲ ಜಯ್ನಾ ಕೊಠಾರಿ, ಆಕ್ಷೇಪ ವ್ಯಕ್ತಪಡಿಸಿದ್ದು, ರೇವಣ್ಣಗೆ ಜಾಮೀನು ಕೊಟ್ಟರೆ ಸಾಕ್ಷಿ ನಾಶದ ಭಯ ಇದೆ, ಇನ್ನೂ ಪ್ರಮುಖ ಆರೋಪಿ ಪ್ರಜ್ವಲ್‌ ರೇವಣ್ಣ ಸಿಕ್ಕಿಲ್ಲ. ಇವರೂ ತಪ್ಪಿಸಿಕೊಂಡರೇ ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರದ ವಿಚಾರಣೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

VISTARANEWS.COM


on

Prajwal Revanna Case Revanna bail plea to be heard on Monday What is SIT argument
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೈಸೂರಿನ ಕೆ.ಆರ್.‌ ನಗರದ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಮಾಜಿ ಸಚಿವ ಎಚ್‌.ಡಿ. ರೇವಣ್ಣ (HD Revanna) ಅವರಿಗೂ ಗುರುವಾರ ಸಹ ಜಾಮೀನು ಸಿಕ್ಕಿಲ್ಲ. ಸಾಕಷ್ಟು ವಾದ – ಪ್ರತಿವಾದದ ಬಳಿಕ ಜನಪ್ರತಿನಿಧಿಗಳ ಕೋರ್ಟ್, ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಲಾಗಿದೆ. ಆದರೆ, ಕೋರ್ಟ್‌ ಕಲಾಪದ ವೇಳೆ ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು ತನಿಖೆಯ ಹಲವಾರು ಲೂಪ್‌ ಹೋಲ್ಸ್‌ಗಳನ್ನು ಕೋರ್ಟ್‌ ಮುಂದೆ ತೆರೆದಿಟ್ಟಿದ್ದಾರೆ. ಅಲ್ಲದೆ, ಎಸ್‌ಐಟಿ ನಡೆಯನ್ನು ಪ್ರಶ್ನೆ ಮಾಡಿದ್ದಾರೆ? ತನಿಖೆ ಹಾದಿ ಸರಿ ಇಲ್ಲ ಎಂದೂ ಹೇಳಿದ್ದಾರೆ. ಜತೆಗೆ ಸುಪ್ರೀಂ ಕೋರ್ಟ್‌ನ ಹಲವು ತೀರ್ಪುಗಳನ್ನು ಉಲ್ಲೇಖ ಮಾಡಿದ್ದಾರೆ. ಇದಕ್ಕೆ ಎಸ್‌ಐಟಿ ಪರ ವಕೀಲ ಜಯ್ನಾ ಕೊಠಾರಿ, ಆಕ್ಷೇಪ ವ್ಯಕ್ತಪಡಿಸಿದ್ದು, ರೇವಣ್ಣಗೆ ಜಾಮೀನು ಕೊಟ್ಟರೆ ಸಾಕ್ಷಿ ನಾಶದ ಭಯ ಇದೆ, ಇನ್ನೂ ಪ್ರಮುಖ ಆರೋಪಿ ಪ್ರಜ್ವಲ್‌ ರೇವಣ್ಣ ಸಿಕ್ಕಿಲ್ಲ. ಇವರೂ ತಪ್ಪಿಸಿಕೊಂಡರೇ ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರದ ವಿಚಾರಣೆ ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಗುರುವಾರ ನಡೆದ ಜಾಮೀನು ಅರ್ಜಿ ವಿಚಾರಣೆ ವೇಳೆ ಏನೇನು ವಾದವಾಗಿದೆ? ರೇವಣ್ಣ ಪರ ವಕೀಲರ ವಾದ ಏನಿತ್ತು? ಎಸ್‌ಐಟಿ ಪರ ವಕೀಲರು ಹೇಳಿದ್ದೇನು? ಅವರು ಕೋರ್ಟ್‌ ಬಳಿ ಸಮಯಾವಕಾಶವನ್ನು ಕೇಳಿದ್ದು ಏಕೆ? ಎಂಬಿತ್ಯಾದಿ ಸಮಗ್ರ ವಿವರವನ್ನು ಇಲ್ಲಿ ಕೊಡಲಾಗಿದೆ.

ಎಚ್.ಡಿ. ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್, ಸೋಮವಾರ ಬೆಳಗ್ಗೆ 11.30ಕ್ಕೆ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸುವುದಾಗಿ ಮುಂದೂಡಿದೆ. ಕೋರ್ಟ್‌ಗೆ ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಸೋಮವಾರ ಸಮಯ ವ್ಯರ್ಥ ಮಾಡದೆ ಮಾಹಿತಿ ನೀಡುತ್ತೇವೆ. ಸೋಮವಾರದವರೆಗೆ ವಿಚಾರಣೆ ಮುಂದೂಡಬೇಕೆಂದು ವಿಶೇಷ ಸಾರ್ವಜನಿಕ ಅಭಿಯೋಜಕರು (ಎಸ್‌ಪಿಪಿ) ನ್ಯಾಯಾಧೀಶರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಿ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಆದೇಶವನ್ನು ನೀಡಿದ್ದಾರೆ.

ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಮಾಡಿದ್ದು, ನಾವು ಆಕ್ಷೇಪಣೆ ಸಲ್ಲಿಸಿದ್ದೇವೆ, ವಿಳಂಬದ ಉದ್ದೇಶವಿಲ್ಲ. ನಾವು ವಾದ ಮಂಡಿಸಲು ಸ್ವಲ್ಪ ಸಮಯಾವಕಾಶ ಬೇಕಾಗಿದೆ ಎಂದು ಕೋರ್ಟ್‌ ಮುಂದೆ ಕೋರಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ನೀವು ಹಿರಿಯ ವಕೀಲರು ಇದ್ದೀರಿ, ವಿಳಂಬ ಮಾಡಬೇಡಿ
ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು. ಅದಕ್ಕೆ ಒಪ್ಪಿದ ಜಯ್ನಾ ಕೊಠಾರಿ, ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಯಾವುದೇ ಕಾರಣಕ್ಕೂ ಸೋಮವಾರ ‌ಸಮಯ ವ್ಯರ್ಥ ಮಾಡಲ್ಲ ಎಂದು ಮನವಿ ಮಾಡಿದರು.

ಇದಕ್ಕೂ ಮೊದಲು ವಾದ ಮಂಡಿಸಿದ ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್, ನನ್ನ 56 ವರ್ಷಗಳ ವಕೀಲ ವೃತ್ತಿಯಲ್ಲಿ ತಪ್ಪು ಮಾಹಿತಿ ನೀಡಿಲ್ಲ. ಬೇಲ್ ಅರ್ಜಿ ಊರ್ಜಿತವಲ್ಲವೆಂದು ಎಸ್‌ಪಿಪಿ ವಾದ ಮಂಡಿಸಿದ್ದಾರೆ. ಇದು ಹೇಗೆ ಸಾಧ್ಯ? ಎಂದು ‘ಸುಪ್ರೀಂ’ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದರು. 2023ರ ತೀಸ್ತಾ ಸೆಟಲ್ ವಾಡ್‌ ಪ್ರಕರಣದ ಬಗ್ಗೆ ಪ್ರಸ್ತಾಪ ಮಾಡಿದ ನಾಗೇಶ್‌, ಸೆಟಲ್ ವಾಡ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ನಿರಂಜನ್ ಸಿಂಗ್ ಕೇಸ್‌ನಲ್ಲಿಯೂ ಜಾಮೀನು ಉಲ್ಲೇಖವಿದೆ. 22 ತೀರ್ಪುಗಳಲ್ಲಿ ನಿರಂಜನ್ ಕೇಸ್‌ ಅನ್ನು ಅನುಸರಿಸಲಾಗಿದೆ. ಕಸ್ಟಡಿಯಲ್ಲಿದ್ದಾಗಲೂ ಜಾಮೀನು ನೀಡಿರುವ ಉಲ್ಲೇಖವಿದೆ. ಒಂದೊಂದು ದಿನ ಒಬ್ಬೊಬ್ಬರನ್ನು ಎಸ್‌ಪಿಪಿಯಾಗಿ ನೇಮಕ ಮಾಡಲಾಗುತ್ತಿದೆ. ಮೊದಲು ಜಗದೀಶ್ ಇದ್ದರು, ಈಗ ಜಯ್ನಾ ಕೊಠಾರಿ ಇದ್ದಾರೆ. ಎಸ್‌ಪಿಪಿ ನೇಮಕಕ್ಕೂ ಕಾನೂನಿನಲ್ಲಿ ಕೆಲ ಕ್ರಮಗಳಿವೆ ಎಂದು ವಾದಿಸಿದರು.

ಈ ವೇಳೆ ವಾದ ಮಂಡನೆಗೆ ಜಯ್ನಾ ಕೊಠಾರಿ ಕಾಲಾವಕಾಶ ಕೋರಿದರು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಡ್ಜ್‌, ಈಗಾಗಲೇ ಆಕ್ಷೇಪಣೆಗೆ 3 ಬಾರಿ ಸಮಯ ನೀಡಲಾಗಿದೆ. ಇನ್ನೂ ಹೆಚ್ಚು ಸಮಯ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

ಎಸ್‌ಐಟಿ ಕಾರ್ಯವೈಖರಿಗೆ ತೀವ್ರ ಆಕ್ಷೇಪ

ಈ ವೇಳೆ ವಾದ ಮುಂದುವರಿಸಿದ ನಾಗೇಶ್‌, ಪ್ರಕರಣದಲ್ಲಿ ಹಾಕಿದ ಸೆಕ್ಷನ್‌ಗಳ ಬಗ್ಗೆ ಉಲ್ಲೇಖಿದರು. ಸಂತ್ರಸ್ತೆ ಎಲ್ಲಿದ್ದಾರೆ, ಸಂತ್ರಸ್ತೆಗೆ ಏನಾದರೂ ಗಾಯವಾಗಿದೆಯಾ? ಸಂತ್ರಸ್ತೆಯ ಪರಿಸ್ಥಿತಿಯ ಬಗ್ಗೆ ಎಸ್‌ಐಟಿ ಮಾತನಾಡುತ್ತಿಲ್ಲ. ಸಂತ್ರಸ್ತೆ ಪತ್ತೆಯಾಗದ ಕಾರಣ ನಿರೀಕ್ಷಣಾ ಜಾಮೀನು ರಿಜೆಕ್ಟ್ ಆಗಿತ್ತು. ಮಹಿಳೆಯ ಸುರಕ್ಷತೆ ಸಂಬಂಧ ನಿರೀಕ್ಷಣಾ ಜಾಮೀನು ನಿರಾಕರಣೆ ಮಾಡಲಾಗಿತ್ತು. 364(a), 365 ಅಡಿ ಕೇಸ್ ದಾಖಲಿಸುವ ಅಗತ್ಯವೇ ಇರಲಿಲ್ಲ ಎಂದು ವಕೀಲರಾದ ನಾಗೇಶ್‌ ಅವರು ಎಸ್‌ಐಟಿ ಕಾರ್ಯವೈಖರಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ವಿಮಾನ ಹೈಜಾಕ್ ಪ್ರಕರಣದ ಉಲ್ಲೇಖ

ಈ ವೇಳೆ ವಿಮಾನ ಹೈಜಾಕ್ ಪ್ರಕರಣವನ್ನು ಉಲ್ಲೆಖಿಸಿದ ಹಿರಿಯ ವಕೀಲ ಸಿ.ವಿ. ನಾಗೇಶ್, ಈ ಹಿಂದೆ ವಿಮಾನ ಹೈಜಾಕ್ ಮಾಡಿ ಉಗ್ರನ ಬಿಡುಗಡೆಗೆ ಕೋರಿದ್ದರು. ವಿಮಾನ ಹೈಜಾಕ್ ಸಮಯದಲ್ಲಿ ಜಸ್ವಂತ್ ಸಿಂಗ್ ಮಂತ್ರಿ ಆಗಿದ್ದರು. ಆಗ ಉಗ್ರರನ್ನು ಬಿಟ್ಟು ವಿಮಾನದಲ್ಲಿದ್ದ ಪ್ರಯಾಣಿಕರನ್ನು ಬಿಡಿಸಿದ್ದರು. ಇದಾದ ಬಳಿಕವೇ ಸೆಕ್ಷನ್ 364(a) ಸೇರಿಸಲಾಯಿತು. ಇಲ್ಲಿ ಇಂತಹ ಘಟನೆ ನಡೆದಿಲ್ಲವಾದರೂ ಸೆಕ್ಷನ್ 364(a) ಸೇರಿಸಲಾಗಿದೆ. ನಮ್ಮ ಕಕ್ಷಿದಾರ ರೇವಣ್ಣ ವಿರುದ್ಧ 364(a) ದಾಖಲು ಮಾಡಿದ್ದಾರೆ. ಕಿಡ್ನ್ಯಾಪ್ ಪ್ರಕರಣದಲ್ಲಿ ಸಂತ್ರಸ್ತೆಯ 21 ವರ್ಷದ ಮಗ ದೂರು ನೀಡಿದ್ದಾನೆ ಎಂದು ವಾದ ಮಂಡಿಸಿದರು.

ಸಿಎಂ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಲು ‌ಸಾಧ್ಯವೇ?

ಮಹಿಳೆಯನ್ನು ಅಪಹರಿಸಿ ವಿದೇಶಕ್ಕೆ ಕರೆದೊಯ್ದರೆ ಈ ಸೆಕ್ಷನ್‌ಗಳು ಅಪ್ಲೇ ಆಗುತ್ತವೆ. ಪ್ರಕರಣದಲ್ಲಿ ರೇವಣ್ಣ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನ ಸಾರಾಂಶ ಉಲ್ಲೇಖಿಸಿದ ನಾಗೇಶ್‌, ದೂರುದಾರ ಮಗನಿಗೆ ಸುಳ್ಳು ಹೇಳಿ ಕರೆದುಕೊಂಡು ಹೋಗಿದ್ದಾರೆಂದು ಹೇಳಿದ್ದಾರೆ. ದೂರುದಾರನಿಗೆ ಸುಳ್ಳು ಹೇಳಿ ಕರೆದುಕೊಂಡು ಹೋಗಿದ್ದರೆ ಆಕ್ಷೇಪಣೆ ಸಲ್ಲಿಸಬಹುದು. ದೂರಿನಲ್ಲಿ ಇರುವ ಸತೀಶ್ ಬಾಬು ಹೇಳಿಕೆಯನ್ನು ಗಮನಿಸೋಣ. ಅದರಲ್ಲಿ “ನಿನ್ನ ತಾಯಿ ಮೇಲೆ ಪೊಲೀಸ್ ಕೇಸ್ ಆಗುತ್ತದೆ. ರೇವಣ್ಣ ಕರೆದಿದ್ದಾರೆಂದು ಹೇಳಿ ಕರೆದುಕೊಂಡು ಹೋದರು” ಎಂದು ಆರೋಪ ಮಾಡಲಾಗಿದೆ. ಹಾಗಾದರೆ, ಸಿಎಂ ಹೇಳಿದ್ದಾರೆ ಎಂದು ಕರೆದೊಯ್ದರೆ ಸಿಎಂ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಲು ‌ಸಾಧ್ಯವೇ? ರೇವಣ್ಣ ಸಾಹೇಬರು ಹೇಳಿದ್ದಾರೆ ಎಂದು ಕರೆದೊಯ್ದರೆ ಅದು ಅಪಹರಣವೇ? ಇದರಲ್ಲಿ ಮೋಸವಿದೆಯೇ? ಬಲ ಪ್ರಯೋಗವಿದೆಯೇ? ಹೀಗಾಗಿ ಇಲ್ಲಿ ಅಪಹರಣದ ಯಾವುದೇ ಅಂಶಗಳು ಅನ್ವಯವಾಗುವುದಿಲ್ಲ ಎಂದು ವಾದ ಮಂಡಿಸಿದರು.

ಪೊಲೀಸರು ಹಲ್ಲಿಲ್ಲದ ಹಾವುಗಳು

ಈ ಪ್ರಕರಣದಲ್ಲಿ ಅಪಹರಣಕ್ಕೊಳಗಾದವರೇ ಆಕ್ಷೇಪಣೆ ಸಲ್ಲಿಸಬೇಕು. ಬೇರೆ ಯಾರೂ ಆಕ್ಷೇಪಣೆ ಸಲ್ಲಿಸಲಾಗುವುದಿಲ್ಲ. 365 ಅಕ್ರಮ ಬಂಧನ‌ ಸೆಕ್ಷನ್ ಕೂಡ ಅನ್ವಯ ಆಗುವುದಿಲ್ಲ. ಇಲ್ಲಿ ಏನು ಡಿಮ್ಯಾಂಡ್ ಇದೆ? ಅಪಹರಣವೂ ಇಲ್ಲ,‌ ಅಕ್ರಮ ಬಂಧನವೂ ಇಲ್ಲ. ನಾಳೆ‌ ಯಾರಿಂದಲಾದರೂ ಹೇಳಿಕೆ ಪಡೆದು ಸಾಕ್ಷ್ಯ ಸೃಷ್ಟಿಸಬಹುದು. ಏಕೆಂದರೆ ಪೊಲೀಸರು ಹಲ್ಲಿಲ್ಲದ ಹಾವುಗಳು. ಪೊಲೀಸರಿಗೆ ಸೆಕ್ಷನ್ 161 ಹೇಳಿಕೆ ಎಂಬ ಅಸ್ತ್ರ ಇದೆ. ಇನ್ನು ಎಚ್.ಡಿ.ರೇವಣ್ಣ ರಾಜಕೀಯ ಪಕ್ಷದಲ್ಲಿದ್ದಾರೆ ಎಂದು ನಾಗೇಶ್‌ ವಾದಿಸಿದರು.

ಇದನ್ನೂ ಓದಿ: Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

ಪ್ರಚೋದನೆಯಿಂದ ಕೂಡಿದ ಕೇಸ್‌ ಇದು

ಏಪ್ರಿಲ್ 29ರಂದು ಕಿಡ್ನ್ಯಾಪ್ ಆಗುತ್ತೆ, 4 ದಿನ ಬಿಟ್ಟು ಎಫ್‌ಐಆರ್‌ ದಾಖಲು ಮಾಡಲಾಗುತ್ತದೆ. ಏ.29ಕ್ಕೆ ಘಟನೆ ನಡೆದಿದೆ ಎಂದು ಉಲ್ಲೇಖಿಸಿದ್ದು, ಮೇ 2ರಂದು ಕೇಸ್ ದಾಖಲು ಮಾಡಲಾಗಿದೆ. ಮೊದಲು ಹೊಳೆನರಸೀಪುರ ಠಾಣೆಯಲ್ಲಿ ‌ಕೇಸ್ ದಾಖಲಾಗಿತ್ತು. ಅಲ್ಲಿ ಎಲ್ಲವೂ ಜಾಮೀನು ನೀಡಬಹುದಾದ ಸೆಕ್ಷನ್‌ಗಳು ಇತ್ತು. ನಂತರ ಪೊಲೀಸರು 41A ಅಡಿ ನೋಟಿಸ್ ಜಾರಿ ಮಾಡಿದ್ದಾರೆ. ಮೇ 3ರಂದು ನೋಟಿಸ್ ನೀಡಿ ಮೇ 4ರಂದು ವಿಚಾರಣೆಗೆ ಬರಲು ಹೇಳಿದ್ದಾರೆ. ರೇವಣ್ಣ ವಿರುದ್ಧ ದಾಖಲಾದ ಕೇಸ್ ಪ್ರಚೋದನೆಯಿಂದ ಆಗಿದೆ. ಪ್ರಚೋದನೆಯಿಂದ ಕೇಸ್ ಹಾಕಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ರೇವಣ್ಣಗೆ ಜಾಮೀನು ನೀಡಬೇಕೆಂದು ಸಿ.ವಿ.ನಾಗೇಶ್ ಬಲವಾಗಿ ವಾದ ಮಂಡಿಸಿದರು.

ಸುಪ್ರೀಂ ಕೋರ್ಟ್‌ ಏನು ಹೇಳಿದೆ?

ತನಿಖೆಗೆ ಸಹಕರಿಸುತ್ತಿಲ್ಲ ಅಂತಾರೆ, ಯಾವ ರೀತಿ ಸಹಕರಿಸಬೇಕು. ಎಚ್.ಡಿ. ರೇವಣ್ಣ ಅವರ ತನಿಖೆ ಬಹುತೇಕ ಮುಗಿದಿದೆ. ಸುಪ್ರೀಂ ಕೋರ್ಟ್ ಒಂದು ಪ್ರಕರಣದಲ್ಲಿ ಆದೇಶವನ್ನು ನೀಡಿದೆ. ಕಸ್ಟಡಿಯಲ್ಲಿದ್ದಾಗ ತನಿಖೆ ಮುಗಿದಿದ್ದರೆ ಬೇಲ್ ನೀಡಬಹುದೆಂದು ಹೇಳಿದೆ. ರೇವಣ್ಣರನ್ನು ಕಸ್ಟಡಿಗೆ ತೆಗೆದುಕೊಂಡು ಹೇಳಿಕೆ ಪಡೆದಿದ್ದಾರೆ. ಎಸ್‌ಐಟಿ ಏನೆಲ್ಲ ಸಾಕ್ಷಿ ಸಂಗ್ರಹಿಸಿದೆ ಎಂದು ಹೇಳಬೇಕು.

ಸಂತ್ರಸ್ತೆಯನ್ನು ಎಲ್ಲಿಂದ ಕರೆದುಕೊಂಡು ಬಂದರು? ಯಾವುದನ್ನು ನಂಬಬೇಕು?

ಕಿಡ್ನ್ಯಾಪ್ ಸಂತ್ರಸ್ತೆಗೆ ಏನಾದರೂ ಗಾಯಗಳಾಗಿವೆಯಾ? ಕಿಡ್ನ್ಯಾಪ್ ಸಂತ್ರಸ್ತೆಗೆ ಯಾವುದೇ ಚಿಕಿತ್ಸೆಯನ್ನು ಕೊಡಿಸಿಲ್ಲ. ಸಂತ್ರಸ್ತೆಯನ್ನು ನ್ಯಾಯಾಧೀಶರ ಮುಂದೆಯೂ ಹಾಜರುಪಡಿಸಿಲ್ಲ. 164 ಅಡಿಯಲ್ಲಿ ಹೇಳಿಕೆಯೂ ದಾಖಲಿಸಿಲ್ಲ. ಇಷ್ಟು ದಿನವಾದ್ರು ಯಾಕೆ 164 ಸ್ಟೇಟ್ಮೆಂಟ್ ಮಾಡಿಸಿಲ್ಲ. ಎಸ್‌ಐಟಿಯವರು ಕಳೆದ 6 ದಿನಗಳಿಂದ ಏನ್ ಮಾಡುತ್ತಿದ್ದಾರೆ? ಸಂತ್ರಸ್ತೆ ಪತ್ತೆಯಾದ ಸ್ಥಳದ ಕಂದಾಯ ದಾಖಲೆ ಪಡೆಯಬೇಕಂತಾರೆ. ಮುಂದಿನ ತನಿಖೆ ನಡೆಸಲಾಗುವುದು ಎಂದು ಹೇಳುತ್ತಾರೆ, ಇದರರ್ಥವೇನು? ಸಂತ್ರಸ್ತೆ ಕೂಡಿಹಾಕಿದ್ದ ಸ್ಥಳ ಪರಿಶೀಲಿಸಬೇಕು ಎಂದು ಹೇಳುತ್ತಾರೆ. ಹಾಗಾದರೆ ಇವರು ಸಂತ್ರಸ್ತೆಯನ್ನು ಎಲ್ಲಿಂದ ಕರೆದುಕೊಂಡು ಬಂದರು? ಸಂತ್ರಸ್ತೆಯನ್ನು ಕರೆದೊಯ್ದ ವಾಹನ ಪತ್ತೆ ಹಚ್ಚಬೇಕು ಎಂದು ಹೇಳುತ್ತಾರೆ. ವಾಹನ ಸೀಜ್ ಮಾಡಬೇಕಿದೆ ಎಂದು ಕೂಡ ಹೇಳಿದ್ದಾರೆ. ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಗಾಡಿ ಸೀಜ್ ಬಗ್ಗೆ ತಿಳಿಸಿದ್ದಾರೆ. ಇವರು ಎಷ್ಟು ವಾಹನಗಳನ್ನು ಸೀಜ್ ಮಾಡಬೇಕು? ಆರೋಪಿ ಕೃತ್ಯಕ್ಕೆ ಬಳಸಿದ ಬೈಕ್, ಮೊಬೈಲ್ ಸೀಜ್ ಆಗಿದೆ ಎಂದು ಎಸ್‌ಐಟಿಯವರು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. ಒಂದು ಕಡೆ ಸೀಜ್ ಮಾಡಬೇಕು ಎಂದು ಹೇಳಿಕೆ ಕೊಡುತ್ತಾರೆ. ಮತ್ತೊಂದು ಕಡೆ ವಾಹನ ಸೀಜ್ ಮಾಡಿರುವುದಾಗಿ ಅವರು ಹೇಳುತ್ತಾರೆ. ಯಾವುದನ್ನು ನಂಬಬೇಕು ಎಂದು ಹಿರಿಯ ವಕೀಲ ಸಿ.ವಿ. ನಾಗೇಶ್ ಪ್ರಶ್ನೆ ಮಾಡಿದರು.

ಈ ವಿಷಯದಲ್ಲಿ ರೇವಣ್ಣ ಅವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಅನ್ಯಾಯಕ್ಕೂ ಒಂದು ಮಿತಿ ಇರಬೇಕು. ತನಿಖಾಧಿಕಾರಿಗಳು ನಾಲ್ಕು ದಿನಗಳಿಂದ ಏನು ಮಾಡುತ್ತಿದ್ದಾರೆ. ಎಸ್‌ಐಟಿಯವರು ಸ್ಥಳ ಮಹಜರು ಮಾಡಬೇಕು ಎಂದು ಹೇಳುತ್ತಾರೆ. ಆರೋಪಿ ಸತೀಶ್ ಬಾಬಣ್ಣ ಸಂತ್ರಸ್ತೆಯನ್ನು ಕರೆದೊಯ್ದ ಸ್ಥಳ, ಸಂತ್ರಸ್ತೆಯನ್ನ ಕೂಡಿಹಾಕಿದ ಸ್ಥಳ ಮಹಜರು ಮಾಡಬೇಕಂತಾರೆ. ಹಾಗಾದರೆ ಸ್ಥಳೀಯ ಪೊಲೀಸರು ಏನು ಮಾಡುತ್ತಾರೆ? ಸ್ಥಳೀಯ ಪೊಲೀಸರಿಂದ ಒಂದು ಸಲ ಸ್ಥಳ ಮಹಜರು, ಎಸ್‌ಐಟಿ ಒಂದು ಸಲ ಸ್ಥಳ ಮಹಜರು ಮಾಡಬೇಕಾ? ಎಸ್ಐಟಿ ಯಾವ ಕಾರಣಕ್ಕೆ ಪೊಲೀಸ್ ಕಸ್ಟಡಿಗೆ ಕೇಳಿತ್ತು ಎಂದು ರಿಮ್ಯಾಂಡ್ ಅರ್ಜಿಯನ್ನು ವಕೀಲ ಸಿ.ವಿ.ನಾಗೇಶ್ ಓದಿ ಹೇಳಿದರು. ಪೊಲೀಸರು ನೀಡಿದ್ದ ಕಾರಣಗಳನ್ನು ಇದೇ ವೇಳೆ ಪ್ರಶ್ನಿಸಿದರು.

ಸಂತ್ರಸ್ತೆಯಿಂದ‌ 164 ಹೇಳಿಕೆ‌ ದಾಖಲಿಸಬೇಕಿದೆ ಎಂದು ಎಸ್ಐಟಿ ಹೇಳಿದೆ. ಸಂತ್ರಸ್ತೆಯನ್ನು ರಕ್ಷಿಸಿದ ಎಸ್‌ಐಟಿ ಇಷ್ಟು ದಿನ ಏನು ಮಾಡುತ್ತಲಿದೆ? ಎಂದು ನಾಗೇಶ್‌ ಪ್ರಶ್ನೆ ಮಾಡಿದರು.

ಇಡೀ ಪ್ರಕರಣದ ಟೈಂ ಲೈನ್‌ ಹೇಳಿದ ಜಯ್ನಾ ಕೊಠಾರಿ

ಆಗ ಎಸ್ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡಿಸಿ, ಎಚ್‌.ಡಿ. ರೇವಣ್ಣಗೆ ಜಾಮೀನು ನೀಡಲು ಎಸ್‌ಪಿಪಿಯಿಂದ ಆಕ್ಷೇಪವಿದೆ. ಸಂತ್ರಸ್ತೆ ಪುತ್ರನಿಗೆ ಮೊದಲು ಸಂತ್ರಸ್ತೆ ವಿಡಿಯೊ ಬಗ್ಗೆ ತಿಳಿಯುತ್ತದೆ. ಸಾಕಷ್ಟು ಮಹಿಳೆಯರೊಂದಿಗಿರುವ ಅಶ್ಲೀಲ ವಿಡಿಯೊಗಳೂ ಕಾಣುತ್ತದೆ. ಅದಾದ ಬಳಿಕ ‌ಮಹಿಳಾ ‌ಆಯೋಗಕ್ಕೆ ದೂರು ನೀಡುತ್ತಾರೆ. ಹೊಳೆನರಸೀಪುರ ಠಾಣೆಯಲ್ಲಿ ಒಂದು ‌ಪ್ರಕರಣ ದಾಖಲಾಗುತ್ತದೆ. ಬಳಿಕ ಸರ್ಕಾರದಿಂದ ಎಸ್‌ಐಟಿ ರಚನೆಯಾಗಿದೆ ಎಂದು ಇಡೀ ಪ್ರಕರಣದ ಟೈಂ ಲೈನ್‌ ಅನ್ನು ಹೇಳಿದರು.

ಸಂತ್ರಸ್ತೆಯ ಅಶ್ಲೀಲ ವಿಡಿಯೊ ಇದೆ

ಸಂತ್ರಸ್ತೆ ಆರೋಪಿ ಮನೆಯಲ್ಲಿ 6 ವರ್ಷದಿಂದ ಕೆಲಸ ಮಾಡುತ್ತಿದ್ದರು. ಏಪ್ರಿಲ್ 28ರ ರಾತ್ರಿ ಸಂತ್ರಸ್ತೆಯನ್ನು ಬಲವಂತವಾಗಿ ಕರೆದೊಯ್ದಿದ್ದಾರೆ. ಅದಾದ ಬಳಿಕ ಆಕೆ ಪತ್ತೆಯಾಗಿರಲಿಲ್ಲ. ಸಂತ್ರಸ್ತೆ ಪುತ್ರ ಹಲವರಿಗೆ ಕರೆ ಮಾಡಿ ತಾಯಿ ಬಗ್ಗೆ ಮಾಹಿತಿ ಕೇಳಿದ್ದಾರೆ. ಬಳಿಕ‌ ತನ್ನ ತಾಯಿ‌ ‌ತೊಂದರೆಯಲ್ಲಿದ್ದಾಳೆಂದು ದೂರು ನೀಡಿದ್ದಾರೆ. ಅಶ್ಲೀಲ‌ ವಿಡಿಯೋಗಳಲ್ಲಿ ಸಂತ್ರಸ್ತೆ ಗುರುತು ಸಿಗುವಂತೆ ರೆಕಾರ್ಡ್ ಆಗಿದೆ. ಬಳಿಕ ತನಿಖೆ ಕೈಗೊಂಡ ಬಳಿಕ ಎಸ್‌ಐಟಿ ಸಂತ್ರಸ್ತೆಯನ್ನು ರಕ್ಷಣೆ ಮಾಡಿದೆ. ಸಂತ್ರಸ್ತೆಯನ್ನು ಅಪಹರಿಸಿ 40 ಕಿ.ಮೀ. ದೂರದಲ್ಲಿ ಕೂಡಿ ಹಾಕಲಾಗಿತ್ತು. ಸಂತ್ರಸ್ತೆಯನ್ನು ಕೂಡಿಹಾಕಿದ್ದ ಸ್ಥಳ ಆರೋಪಿ ಸಂಬಂಧಿಗೆ ಸೇರಿದ್ದಾಗಿದೆ. ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತೆಯ ಅಶ್ಲೀಲ ವಿಡಿಯೊ ಇದೆ ಎಂದು ಜಯ್ನಾ ಕೊಠಾರಿ ವಾದ ಮಂಡಿಸಿದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು

ಸಿಆರ್‌ಪಿಸಿ 161 ಅಡಿ ಹೇಳಿಕೆ ದಾಖಲಿಸಲಾಗಿದೆ. ಸಾಕ್ಷಿಗಳ ಹೇಳಿಕೆಯಲ್ಲೂ ರೇವಣ್ಣ ಹೆಸರು ಉಲ್ಲೇಖವಾಗಿದೆ. ಇದು ಸ್ಪಷ್ಟವಾಗಿ ಕಿಡ್ನ್ಯಾಪ್, ಒತ್ತೆಯಾಳಾಗಿಟ್ಟುಕೊಂಡ ಪ್ರಕರಣವಾಗಿದೆ. ಸಂತ್ರಸ್ತೆಯ ಪುತ್ರ ನೀಡಿರುವ ದೂರಿನಲ್ಲಿ ಹೇಳಿರೋದು ಸತ್ಯ. ಎಚ್.ಡಿ.ರೇವಣ್ಣ ವಿರುದ್ಧ ಸೆಕ್ಷನ್ 364(a) ಅನ್ವಯವಾಗುತ್ತದೆ. 364(a) ಅಡಿಯಲ್ಲಿ ದಾಖಲಾಗಿರೋ ಕೆಲ‌ ಪ್ರಕರಣಗಳಲ್ಲಿ ಶಿಕ್ಷೆಯಾಗಿದೆ. ಹೀಗಾಗಿ ನಾವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಪ್ರಕರಣದ ತೀವ್ರತೆಯೂ ಜಾಸ್ತಿ ಇದೆ. ಆರೋಪಿಯ ತಪ್ಪು ಕಂಡುಬಂದಾಗ ಬಹುತೇಕ ಈ ಸೆಕ್ಷನ್‌ಗಳನ್ನೇ ಹಾಕಲಾಗುತ್ತದೆ ಎಂದು ಜಯಾ ಕೊಠಾರಿ ಹೇಳಿದರು.

ರೇವಣ್ಣ ನಾಪತ್ತೆಯಾದರೆ? ಸಂತ್ರಸ್ತೆಯರ ಕಿಡ್ನ್ಯಾಪ್‌ ಮಾಡಿಸಿದರೆ?

ಆರೋಪಿಯ ಪುತ್ರ ಪ್ರಜ್ವಲ್‌ ರೇವಣ್ಣ ನಾಪತ್ತೆಯಾಗಿದ್ದಾರೆ. ಆರೋಪಿ ಪುತ್ರನ ಪತ್ತೆಗೆ ಬ್ಲೂಕಾರ್ನರ್ ನೋಟಿಸ್ ನೀಡಲಾಗಿದೆ. ಆದರೂ ಇಲ್ಲಿಯವರೆಗೆ ಆರೋಪಿ ಪುತ್ರ ಎಲ್ಲಿದ್ದಾರೆಂದು ಪತ್ತೆಯಾಗಿಲ್ಲ. ಈವರೆಗೆ ವಾಪಸ್ ಕೂಡ ಬಂದಿಲ್ಲ. ಈ ಆರೋಪಿಯೂ ನಾಪತ್ತೆಯಾದರೆ ಏನು ಮಾಡುವುದು? ಅದಲ್ಲದೆ, ಆರೋಪಿ‌ ರೇವಣ್ಣ ತುಂಬಾನೇ ಪ್ರಭಾವಿಯಾಗಿದ್ದಾರೆ. ಈ ಹಂತದಲ್ಲಿ ಜಾಮೀನು ನೀಡಿದ್ರೆ ಸಾಕ್ಷ್ಯ ಹಾಳು‌ ಮಾಡುತ್ತಾರೆ. ಜಾಮೀನು‌ ನೀಡಿದರೆ ಸಂತ್ರಸ್ತೆ ಜೀವಕ್ಕೆ ಯಾರು ಗ್ಯಾರಂಟಿ ನೀಡ್ತಾರೆ? ಜಾಮೀನು ಪಡೆದು ಬೇರೆ ಮಹಿಳೆಯರನ್ನು ಕಿಡ್ನ್ಯಾಪ್‌ ಮಾಡಬಹುದು ಎಂದು ಜಯಾ ಕೊಠಾರಿ ಆತಂಕ ವ್ಯಕ್ತಪಡಿಸಿದರು.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

ತನ್ನ ತಾಯಿಯನ್ನು ಕಾಪಾಡುವಂತೆ ಸಂತ್ರಸ್ತೆ ಮಗ ದೂರು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಆರೋಪಿಗೆ ಜಾಮೀನು ನೀಡಬಾರದು. ಎಚ್.ಡಿ.ರೇವಣ್ಣ ವಿರುದ್ದ ಎರುಡು ಎಫ್ಐಆರ್ ದಾಖಲಾಗಿವೆ. ರೇವಣ್ಣ ವಿರುದ್ಧ ಲೈಂಗಿಕ‌ ದೌರ್ಜನ್ಯವೆಸಗಿರುವ ಆರೋಪವೂ ಇದೆ. ಲೈಂಗಿಕ‌ ದೌರ್ಜನ್ಯವೆಸಗುವ ಆರೋಪಿಗಳಿಗೆ ಸಂದೇಶ ರವಾನೆಯಾಗಬೇಕು. ಹೀಗಾಗಿ ಆರೋಪಿಗೆ ಜಾಮೀನು ನೀಡಬಾರದು. ಕೋರ್ಟ್‌ಗೆ ಮತ್ತಷ್ಟು ಮಹತ್ವದ ಮಾಹಿತಿಯನ್ನು ನೀಡಬೇಕಾಗಿದೆ. ಹೀಗಾಗಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿ ಎಂದು ಜಯಾ ಕೊಠಾರಿ ಮನವಿ ಮಾಡಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಸೋಮವಾರ ವರದಿ ಸಲ್ಲಿಸಲು ಸೂಚಿಸಿದ್ದಲ್ಲದೆ, ಮತ್ತೆ ಸಮಯ ವ್ಯರ್ಥ ಮಾಡದಂತೆ ಸೂಚಿಸಿ ಸೋಮವಾರಕ್ಕೆ ವಿಚಾರಣೆಯನ್ನು ಮುಂದೂಡಿದರು.

Continue Reading

ಕರ್ನಾಟಕ

Absence Video: ಅಶ್ಲೀಲ ವಿಡಿಯೋ ಶೇರ್‌, ಅಪ್ಲೋಡ್‌ ಮಾಡುತ್ತಿದ್ದ ಪ್ರಜ್ವಲ್‌ ಮೇಲೆ ಕುದುರೆಮುಖದಲ್ಲಿ ಕೇಸ್‌ ದಾಖಲು!

Absence Video: ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೊ, ವಿಡಿಯೊಗಳನ್ನು ಅಪ್ಲೋಡ್ ಮಾಡುತ್ತಿದ್ದ ಆರೋಪ ಈಗ ಪ್ರಜ್ವಲ್‌ ಮೇಲಿದೆ. ಈತ ಅಶ್ಲೀಲ ವಿಡಿಯೊಗಳನ್ನು ಹಾಗೂ ಫೋಟೊಗಳನ್ನು ಟೆಲಿಗ್ರಾಂ, ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ ಪೇಜ್‌ಗಳಲ್ಲಿ ಟ್ರೋಲ್‌ ದುಶ್ಯಾಸನ ಎಂಬ ಖಾತೆ ಮೂಲಕ ಅಪ್ಲೋಡ್‌ ಮಾಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

VISTARANEWS.COM


on

Absence Video Case registered against Prajwal for sharing and uploading obscene video in Kudremukh
Koo

ಚಿಕ್ಕಮಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಚಿಕ್ಕಮಗಳೂರಿನ ಕಳಸ ತಾಲೂಕಿನ ಕಾಂಗ್ರೆಸ್‌ ಕಾರ್ಯಕರ್ತನೊಬ್ಬ ಸೋಷಿಯಲ್‌ ಮೀಡಿಯಾಗಳಲ್ಲಿ ಅಶ್ಲೀಲ ವಿಡಿಯೊಗಳನ್ನು (Absence Video) ಶೇರ್ ಮಾಡುತ್ತಿದ್ದಾನೆ ಎಂಬ ದೂರು ಬಂದಿದೆ.

ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಫೋಟೊವನ್ನು ಅಪ್ಲೋಡ್‌ ಮಾಡಿದ ಹಿನ್ನೆಲೆಯಲ್ಲಿ ಕಳಸ ತಾಲೂಕಿನ ಸಂಸೆ ಮೂಲದ ಪ್ರಜ್ವಲ್ ಎಂಬಾತನ ಮೇಲೆ ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೊ, ವಿಡಿಯೊಗಳನ್ನು ಅಪ್ಲೋಡ್ ಮಾಡುತ್ತಿದ್ದ ಆರೋಪ ಈಗ ಪ್ರಜ್ವಲ್‌ ಮೇಲಿದೆ. ಈತ ಅಶ್ಲೀಲ ವಿಡಿಯೊಗಳನ್ನು ಹಾಗೂ ಫೋಟೊಗಳನ್ನು ಟೆಲಿಗ್ರಾಂ, ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ ಪೇಜ್‌ಗಳಲ್ಲಿ ಟ್ರೋಲ್‌ ದುಶ್ಯಾಸನ ಎಂಬ ಖಾತೆ ಮೂಲಕ ಅಪ್ಲೋಡ್‌ ಮಾಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಳು ಕೇಸ್‌ ಹಾಕಲು ಮಹಿಳೆಯನ್ನು SIT ಸಂಪರ್ಕ ಮಾಡಿಲ್ಲ; ಕಾಟ ಕೊಟ್ಟವನನ್ನು ಬಿಡಲ್ಲ!

ಬೆಂಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ (Physical abuse) ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna case) ವಿರುದ್ಧ ಸುಳ್ಳು ಕೇಸ್ (Fake case) ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (National Commission for Women) ಮಹಿಳೆಯೊಬ್ಬರು ನೀಡಿರುವ ದೂರು ಹೊಸ ತಿರುವನ್ನು ಪಡೆದುಕೊಂಡಿದೆ. ಎಸ್‌ಐಟಿಯಿಂದ ಯಾರೂ ಆಕೆಯನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಆದರೆ, ಸಂಪರ್ಕ ಮಾಡಿದವರ ಬಗ್ಗೆ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.

ಸಂತ್ರಸ್ತ ಮಹಿಳೆಗೆ ಎಸ್ಐಟಿ ಅಧಿಕಾರಿ ಎಂದು ಕರೆ ಮಾಡಿ ತೊಂದರೆ ಮಾಡಿರುವ ಆರೋಪ ವಿಚಾರವಾಗಿ ಎಸ್ಐಟಿ ಉನ್ನತ ಮೂಲಗಳು ಸ್ಪಷ್ಟನೆ ನೀಡಿದೆ. ಅಲ್ಲದೆ, ಎನ್‌ಸಿಡಬ್ಲ್ಯು ದೂರನ್ನು ಎಸ್‌ಐಟಿಗೆ ರವಾನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‌ಐಟಿ, ಗುರುವಾರವಷ್ಟೇ ಈ ಮಹಿಳೆಯ ಬಗ್ಗೆ ಎಸ್‌ಐಟಿಗೆ ತಿಳಿದುಬಂದಿದೆ.

ಎಸ್‌ಐಟಿಯಿಂದ ಯಾರೂ ಆಕೆಯನ್ನು ಈ ಹಿಂದೆ ಸಂಪರ್ಕಿಸಿಲ್ಲ. ಮಹಿಳಾ ಆಯೋಗಕ್ಕೆ ದೂರು ನೀಡಿದ ಮಹಿಳೆಯು ನಮಗೆ ಯಾವುದೇ ದೂರು ನೀಡಿಲ್ಲ. ಮಹಿಳೆಗೆ ಕರೆ ಮಾಡಿದ ವ್ಯಕ್ತಿಯ ಗುರುತು ತಿಳಿಯಲು ಎಸ್‌ಐಟಿ ವಿಚಾರಣೆ ಆರಂಭಿಸಿದೆ. ಅಂತಹವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತೆ ಕೋರಿ ಮಹಿಳಾ ಆಯೋಗಕ್ಕೆ ಪತ್ರ ಬರೆದಿರುವ ಮಹಿಳೆ

ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ ರೇವಣ್ಣ (HD revanna jailed) ಅವರ ವಿರುದ್ಧ ರಾಜಕೀಯ ಪ್ರೇರಿತ ಸುಳ್ಳು ದೂರುಗಳನ್ನು ದಾಖಲಿಸಲಾಗುತ್ತಿದೆ ಎಂದು ಜೆಡಿಎಸ್‌ ಪ್ರತಿಭಟನೆ ನಡೆಸುತ್ತಿರುವುದರ ಹಿನ್ನೆಲೆಯಲ್ಲಿ ಈ ದೂರು ಮಹತ್ವ ಪಡೆದುಕೊಂಡಿದೆ. ಸೂಕ್ತ ಭದ್ರತೆಗೆ ಕೋರಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆಯೊಬ್ಬರು ಪತ್ರ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣ ವಿರುದ್ಧ ದೂರು ನೀಡುವಂತೆ ನನಗೆ ಒತ್ತಡ ಹಾಕಲಾಗುತ್ತಿದೆ. ಮೂವರು ಸಿವಿಲ್ ಡ್ರೆಸ್‌ನಲ್ಲಿ ಬಂದವರು ಒತ್ತಡ ಹಾಕಿದ್ದು, ಇಲ್ಲದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಬೆದರಿಕೆ ಹಾಕಿದ್ದಾರೆ. ನನ್ನ ಕುಟುಂಬಕ್ಕೆ ಸೂಕ್ತ ಭದ್ರತೆ ನೀಡಿ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ಪತ್ರ ಬರೆದಿದ್ದಾರೆ.

ಮಹಿಳೆ ಪತ್ರ ಬರೆದಿರುವ ಬಗ್ಗೆ ವಿಸ್ತಾರ ನ್ಯೂಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಮಾಹಿತಿ ನೀಡಿದೆ. ಹಾಸನ ಮೂಲದ ಮಹಿಳೆ ಪತ್ರ ಬರೆದಿದ್ದು, ಪತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ. ದೂರಿನ ಪ್ರತಿ ಹಾಗೂ ಸೂಕ್ತ ಭದ್ರತೆಗೆ ಮನವಿ ಮಾಡಲಾಗಿದೆ.

ಇದನ್ನೂ ಓದಿ: Lok Sabha Election 2024: ಲೋಕಸಭಾ ಪ್ರಚಾರಕ್ಕೆ 26 ಸಾವಿರ ಕಿಲೋ ಮೀಟರ್ ಸಂಚಾರ, ದಿನಕ್ಕೆ ಸರಾಸರಿ 14-18 ಗಂಟೆ ಸಿಎಂ ಪ್ರಚಾರ!

ಪ್ರಜ್ವಲ್ ಕೇಸ್‌ನಲ್ಲಿ ಮಹಿಳೆಗೆ ದೂರು ನೀಡುವಂತೆ ಒತ್ತಡ ಹಾಕಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಆಯೋಗದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಗೆ ಇಂದು ಮತ್ತೆ ಪತ್ರ ಬರೆಯುತ್ತೇವೆ. ಆಯೋಗದ ಅಧಿಕಾರಿಗಳು ಪತ್ರ ಬರೆದ ಮಹಿಳೆಯನ್ನು ಭೇಟಿ ಮಾಡುತ್ತೇವೆ ಎಂದು ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ.

Continue Reading

ಕ್ರೈಂ

Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

Road Accident : ಪ್ರತ್ಯೇಕ ಕಡೆಗಳಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ. ಮತ್ತೊಂದು ಕಡೆ ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

VISTARANEWS.COM


on

By

Road Accident
Koo

ಶಿವಮೊಗ್ಗ/ಕೋಲಾರ : ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಬಳಿ ಭೀಕರ ಅಪಘಾತ (Road Accident) ಸಂಭವಿಸಿದ್ದು, ಸ್ಥಳದಲ್ಲೇ ಓರ್ವ ದುರ್ಮರಣ ಹೊಂದಿದ್ದಾರೆ. ನಿಂತಿರುವ ಟಿಪ್ಪರ್‌ ವಾಹನಕ್ಕೆ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಎರಡು ವಾಹನಗಳ ಮುಂಭಾಗ ಜಖಂಗೊಂಡಿದ್ದು, ಅದರಡಿ ಸಿಲುಕಿದ ಸಲ್ಮಾನ್ ಎಂಬಾತ ಮೃತಪಟ್ಟಿದ್ದಾನೆ.

ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿ ನಿವಾಸಿ ಸಲ್ಮಾನ್ ದಾರುಣವಾಗಿ ಮೃತಪಟ್ಟರೆ ಇತ್ತ ಟಿಪ್ಪರ್ ವಾಹನ ಚಾಲಕ ಗಂಭೀರಗೊಂಡಿದ್ದಾರೆ. ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಆಗುಂಬೆಯಿಂದ ತೀರ್ಥಹಳ್ಳಿಗೆ ಬರುವ ವೇಳೆ ದುರ್ಘಟನೆ ನಡೆದಿದೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೋಲಾರದಲ್ಲಿ ಬೈಕ್‌ಗೆ ಲಾರಿ ಡಿಕ್ಕಿ, ಸವಾರ ಸಾವು

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಬಳಿ ನಡೆದಿದೆ. ಗುಲ್ಲಹಳ್ಳಿ ಗ್ರಾನದ (25) ಮಧು ಮೃತ ದುರ್ದೈವಿ.

ಕಾಮಸಮುದ್ರದಿಂದ ಬೂದಿಕೋಟೆ ಕಡೆ ಬರುತ್ತಿದ್ದ ಲಾರಿಯು ವೇಗವಾಗಿ ಬಂದು ಬೈಕ್‌ ಡಿಕ್ಕಿ ಹೊಡೆದಿದೆ. ಬಳಿಕ ಚಾಲಕ ಲಾರಿ ನಿಲ್ಲಿಸದೇ ಪರಾರಿಯಾಗಿದ್ದಾನೆ. ಬೂದಿಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Self Harming : ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಪ್ರೇಮಿ ನೇಣಿಗೆ ಶರಣು

ಕೊಪ್ಪಳದಲ್ಲಿ ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಸಾವು

ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತಪಟ್ಟಿದ್ದಾರೆ. ಈರಪ್ಪ ಕುರಿ (55) ಮೃತ ದುರ್ದೈವಿ. ಕಟ್ಟಿಗೆ ತರಲು ಹೋದಾಗ ಅವಘಡ ನಡೆದಿದೆ. ರೆನ್ಯೂ ವಿಂಡ್ ಪವರ್ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ಆಗಮಿಸಿದ ಕುಕನೂರು ಪೊಲೀಸರು ಪರಿಶೀಲಿಸಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ. ಕುಕನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಡಗು

Self Harming : ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಪ್ರೇಮಿ ನೇಣಿಗೆ ಶರಣು

Murder Case: ತನ್ನ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿತ್ತು. ಬಾಲಕಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ.

VISTARANEWS.COM


on

By

Self Harming Murder case In kodagu
Koo

ಕೊಡಗು: ಯುವಕನೊಬ್ಬ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ (Murder Case) ಮಾಡಿದ್ದ. ಈ ಘಟನೆಯಿಂದ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದರು. ಮೀನಾ ಎಂಬಾಕೆಯನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಇದೇ ವೇಳೆ ಆರೋಪಿ ಪ್ರಕಾಶ್‌ ತನ್ನ ಮನೆಯ ಸಮೀಪದಲ್ಲೆ ನೇಣಿಗೆ (Self Harming) ಶರಣಾಗಿದ್ದಾನೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಮ್ಮಿಯಾಲದಲ್ಲಿ ಘಟನೆ ನಡೆದಿದೆ.

ಬಾಲಕಿಯ ಹತ್ಯೆ ಪ್ರಕರಣದ ಆರೋಪಿ ಪ್ರಕಾಶ್‌ ರುಂಡ ಸಮೇತ ನಾಪತ್ತೆಯಾಗಿದ್ದ. ಆದರೆ ಶುಕ್ರವಾರ ಆತನ ಮನೆಯ ಸಮೀಪದಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹವು ಪತ್ತೆಯಾಗಿದೆ. ಆದರೆ ಪ್ರಕಾಶ್ ತೆಗೆದುಕೊಂಡು ಹೋಗಿದ್ದ ಬಾಲಕಿಯ ರುಂಡ ಪತ್ತೆಯಾಗಿಲ್ಲ. ಸದ್ಯ ಬಾಲಕಿಯ ರುಂಡ ಪತ್ತೆಗೆ ಪೊಲೀಸರು ಶೋಧ ಆರಂಭಿಸಿದ್ದಾರೆ. ಜತೆಗೆ ಆರೋಪಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Murder case : ತೃತೀಯ ಲಿಂಗಿಯನ್ನು ಕೊಂದ ಮಹಿಳೆ; ಮಗನಿಗೆ ನಾಯಿ ಚೈನ್‌ ಹಾಕಿ ಎಳೆಯುವಾಗ ಸಾವು

ಏನಿದು ಘಟನೆ?

ಮೀನಾ ಇನ್ನೂ ಹತ್ತನೇ ಕ್ಲಾಸ್‌ ಓದುತ್ತಿದ್ದ ಅಪ್ರಾಪ್ತೆ ಆಗಿದ್ದಳು. ಹೀಗಾಗಿ ಗುರುವಾರ ಮಧ್ಯಾಹ್ನ ಪೊಲೀಸರ ಸಮ್ಮುಖದಲ್ಲಿ ಮದುವೆ ನಿಶ್ಚಿತಾರ್ಥ ರದ್ದಾಗಿತ್ತು. ಸಂಜೆ ವೇಳೆ ಆಕೆಯ ಮನೆಗೆ ನುಗ್ಗಿದ ಆರೋಪಿ ಪ್ರಕಾಶ್‌ ಮೀನಾಳನ್ನು ಎಳೆದೊಯ್ದು ಕತ್ತು ಕೊಯ್ದಿದ್ದ. ನಂತರ ದೇಹವನ್ನು ಬಿಸಾಡಿ ರುಂಡ ಕೊಂಡೊಯ್ದಿದ್ದ. ಭೀಕರ ಘಟನೆಯು ಸುತ್ತಲಿನ ಜನರನ್ನು ಬೆಚ್ಚಿ ಬೀಳಿಸಿತ್ತು.

ಆಕೆ ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆದು ಗುರುವಾರವಷ್ಟೇ ಫಲಿತಾಂಶ ಪ್ರಕಟಗೊಂಡಿತ್ತು. ಇದೇ ವೇಳೆ ನಿಶ್ಚಿತಾರ್ಥ ನಿಗದಿಯಾಗಿತ್ತು. ಅಪ್ರಾಪ್ತ ವಯಸ್ಸಿನವಳಾಗಿದ್ದ ಕಾರಣ ಮೀನಾ ಮದುವೆ ನಿಶ್ಚಿತಾರ್ಥವನ್ನು ರದ್ದು ಮಾಡಲಾಗಿತ್ತು. ಪೊಲೀಸರೇ ಮುಂದೆ ನಿಂತು ಮದುವೆಯನ್ನು ಕೊನೆಗೊಳಿಸಿದ್ದರು. ಆದರೆ ಸಂಜೆ ವೇಳೆಗೆ ಆಕೆಯನ್ನು ಎಳೆದೊಯ್ದು ಪ್ರಕಾಶ್‌ ಕೊಲೆ ಮಾಡಿದ್ದ.

ಬಾಲಕಿಯನ್ನು ಆರೋಪಿ ಪ್ರಕಾಶ್‌ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ, ಅವರ ಮದುವೆಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಬಾಲಕಿಗೆ ಮದುವೆಯ ಕಾನೂನುಬದ್ಧ ವಯಸ್ಸಾಗದ ಕಾರಣ ಪೊಲೀಸರು ಅದಕ್ಕೆ ತಡೆಯೊಡ್ಡಿದ್ದರು ಎನ್ನಲಾಗಿದೆ. ಇದರಿಂದ ಆರೋಪಿ ಕೆರಳಿದ್ದ. ಸಂಜೆ ವೇಳೆ ಬಾಲಕಿಯ ಮನೆಗೆ ನುಗ್ಗಿದ ಆತ ಅಲ್ಲಿಂದ ಎಳೆದೊಯ್ದಿದ್ದ. ಬಳಿಕ ಕತ್ತು ಕತ್ತರಿಸಿ ಕೊಲೆ ಮಾಡಿ ರುಂಡವನ್ನು ತೆಗೆದುಕೊಂಡು ಹೋಗಿದ್ದ.

ಎಸ್​ಎಸ್​ಎಲ್​ಸಿ ಪಾಸಾಗಿದ್ದ ಬಾಲಕಿ

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಗುರುವಾರವಷ್ಟೇ ಫಲಿತಾಂಶ ಪ್ರಕಟಿಸಿತ್ತು. ಅಂತೆಯೇ ಸುರ್ಲಬ್ಬಿ ಸರ್ಕಾರಿ ಹೈಸ್ಕೂಲ್​ನ ಏಕೈಕ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಮೀನಾ ಪರೀಕ್ಷೆಯಲ್ಲಿ ಪಾಸಾಗಿದ್ದರು. ಆಕೆ ತೇರ್ಗಡೆಗೊಂಡಿರುವ ಸಂಗತಿ ಶಾಲಾ ಅಧ್ಯಾಪಕರಿಗೆ ಸಂತಸ ತಂದಿದ್ದು. ಅಲ್ಲದೆ ಶಾಲೆಯಲ್ಲಿ ಶೇಕಡಾ 100 ಫಲಿತಾಂಶ ಬಂದಿತ್ತು. ಆದರೆ ಸಂಜೆಯ ವೇಳೆಗೆ ಬಾಲಕಿ ಭಯಾನಕವಾಗಿ ಕೊಲೆಯಾಗಿದ್ದಳು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Rahul Dravid
Latest10 mins ago

Rahul Dravid : ವಿಶ್ವ ಕಪ್​ ಬಳಿಕ ದ್ರಾವಿಡ್​ ಭಾರತದ ಕೋಚ್ ಅಗಿರುವುದಿಲ್ಲ; ಮುಂದೆ ಯಾರು?

karnataka Weather Forecast
ಮಳೆ10 mins ago

Karnataka Weather : ಬಿರುಗಾಳಿ ಸಹಿತ ಭಾರಿ ಮಳೆ; ಸಿಡಿಲು ಬಡಿದು ಮಹಿಳೆ ಸೇರಿ ಶ್ವಾನ ಸಾವು‌, ಮತ್ತೊಬ್ಬ ಗಂಭೀರ

Mango Facepack
ಫ್ಯಾಷನ್13 mins ago

Mango Facepack: ಆಕರ್ಷಕ ತ್ವಚೆಗಾಗಿ ಸೀಸನ್‌ ಮ್ಯಾಂಗೋ ಫೇಸ್‌ಪ್ಯಾಕ್‌

Manisha Koirala
ಸಿನಿಮಾ13 mins ago

Manisha Koirala: ಕ್ಯಾನ್ಸರ್‌ ವಿರುದ್ಧ ಹೋರಾಡಿದ್ದು ಹೇಗೆ? ಅನುಭವ ಹಂಚಿಕೊಂಡ ಮನೀಶಾ ಕೊಯಿರಾಲ

New Tata Ace EV 1000 launched by Tata Motors
ವಾಣಿಜ್ಯ20 mins ago

Tata Motors: Tata Ace EV 1000 ಬಿಡುಗಡೆ ಮಾಡಿದ ಟಾಟಾ ಮೋಟರ್ಸ್‌; ಏನಿದರ ವಿಶೇಷತೆ? ದರ ಎಷ್ಟು?

Brij Bhushan
Latest26 mins ago

Brij Bhushan : ಡಬ್ಲ್ಯುಎಫ್​ಐ ಮಾಜಿ ಅಧ್ಯಕ್ಷ ಬ್ರಿಜ್​ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಲು ಕೋರ್ಟ್​ ಆದೇಶ

Dates Benefits
ಆರೋಗ್ಯ28 mins ago

Dates Benefits: ಲೈಂಗಿಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ದಿನಕ್ಕೊಂದು ಖರ್ಜೂರ ತಿಂದರೆ ಸಾಕು!

Sanatan Sanstha
ದೇಶ37 mins ago

Sanatan Sanstha: ದಾಭೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು: ಚೇತನ್ ರಾಜಹಂಸ

Prajwal Revanna Case Revanna bail plea to be heard on Monday What is SIT argument
ಕ್ರೈಂ45 mins ago

Prajwal Revanna Case: ಸೋಮವಾರ ರೇವಣ್ಣ ಜಾಮೀನು ಅರ್ಜಿ ವಿಚಾರಣೆ: SIT ವಾದ ಏನು? ವಕೀಲ ನಾಗೇಶ್‌ ಕೌಂಟರ್‌ ಏನು?

US Officer
ವಿದೇಶ50 mins ago

ಮನೆಗೆ ನುಗ್ಗಿ ತಮ್ಮದೇ ದೇಶದ ಕಪ್ಪುವರ್ಣೀಯ ಸೇನಾಧಿಕಾರಿಯನ್ನು ಕೊಂದ ಅಮೆರಿಕ ಪೊಲೀಸರು; Video ಇದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ5 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ6 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ7 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ14 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ21 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ22 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ23 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌