Albert Einstein Birthday : ವಿಜ್ಞಾನ ಎಂದರೆ ತಟ್ಟನೆ ನೆನಪಾಗುವ ಅಕ್ಕರೆಯ ವಿಜ್ಞಾನಿ ಆಲ್ಬರ್ಟ್ ಐನ್‌ಸ್ಟೀನ್‌ - Vistara News

ವಿಜ್ಞಾನ

Albert Einstein Birthday : ವಿಜ್ಞಾನ ಎಂದರೆ ತಟ್ಟನೆ ನೆನಪಾಗುವ ಅಕ್ಕರೆಯ ವಿಜ್ಞಾನಿ ಆಲ್ಬರ್ಟ್ ಐನ್‌ಸ್ಟೀನ್‌

ಇಂದು ಮಹಾ ವಿಜ್ಞಾನಿ ಆಲ್ಬರ್ಟ್‌ ಐನ್‌ಸ್ಟೀನ್‌ ಅವರ ಹುಟ್ಟುಹಬ್ಬ (Albert Einstein Birthday). ಈ ವಿಜ್ಞಾನಿಯ ಸಾಧನೆ, ವ್ಯಕ್ತಿತ್ವವನ್ನು ಪರಿಚಯಿಸುವ ಲೇಖನ ಇಲ್ಲಿದೆ.

VISTARANEWS.COM


on

Everything to know about the father of modern physics
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
albert einstein

ಡಾ. ಡಿ.ಸಿ.ರಾಮಚಂದ್ರ
ಐನ್‌ಸ್ಟೀನ್‌ ಹೆಸರು ವಿಜ್ಞಾನ ಲೋಕದಲ್ಲಿ ಎಲ್ಲರಿಗೂ ಪ್ರೇರಣೆ ನೀಡುವಂತಹದ್ದು. ಇಂದು ಅವರ ಹುಟ್ಟು ಹಬ್ಬ (Albert Einstein Birthday). ಶಾಲೆಯ ನಾಲ್ಕುಗೋಡೆಗಳ ನಡುವೆ ಶಿಕ್ಷಣ ಕಲಿಯದ ಬಾಲಕ ಹೊರ ಪ್ರಪಂಚದ ಅನುಭವದಿಂದಲೇ ವಿಜ್ಞಾನಿಯಾಗಿ ಬೆಳೆದು ವಿಜ್ಞಾನ ಲೋಕವೇ ಬೆರಗುಗೊಳಿಸುವಂತ ಸಾಧನೆ ಮಾಡಿದ ಮಹಾನ್ ವಿಜ್ಞಾನಿ. ಇವರು ಮಂಡಿಸಿದ ವೈಜ್ಞಾನಿಕ ಅನ್ವೇಷಣೆಗಳು ಇಂದಿಗೂ ಮನುಕುಲಕ್ಕೆ ಮಹಾ ಉಪಯೋಗ ನೀಡುತ್ತಾ ಬಂದಿವೆ.

1879 ರ ಮಾರ್ಚ್ 14 ರಂದು ಆಲ್ಬರ್ಟ್‌ ಐನ್‌ಸ್ಟೀನ್‌ ಜರ್ಮನ್ ಸಾಮ್ರಾಜ್ಯದ ಒಂದು ಭಾಗವಾದ ಉಲ್ಮನ್‌ ನಲ್ಲಿ ಜನಿಸಿದರು. ಅವರತಂದೆ ಹರ್ಮನ್‌ ಐನ್‌ಸ್ಟೀನ್‌ ಅವರು ಎಂಜಿನಿಯರ್‌ ಆಗಿದ್ದರು. ಅವರ ತಾಯಿ ಪಾಲಿನ್ ಐನ್ ಸ್ಟೀನ್‌. ಉಲ್ಮನ್‌ ಪಟ್ಟಣವು ಕೇವಲ 120,000ಕ್ಕಿಂತ ಹೆಚ್ಚು ಜನ ಸಂಖ್ಯೆಯನ್ನು ಹೊಂದಿದೆ. ಅವರ ಮನೆ ನಿಂತಿದ್ದ ಒಂದು ಸಣ್ಣ ಸ್ಮರಣಾರ್ಥ ಫಲಕವಿದೆ (ಇದು ಎರಡನೆಯ ಮಹಾಯುದ್ಧದ ಸಮಯದಲ್ಲಿ ನಾಶವಾಗಿದೆ). ಐನ್‌ಸ್ಟೀನ್‌ ಜನನದ ಸ್ವಲ್ಪ ಸಮಯದ ನಂತರ ಕುಟುಂಬವು ಮ್ಯೂನಿಚ್‌ಗೆ ಸ್ಥಳಾಂತರಗೊಂಡಿತು ನಂತರ ಇಟಲಿಗೆ ಹೋದಾಗ ಅವರ ತಂದೆ ತನ್ನ ಸ್ವಂತ ವ್ಯವಹಾರವನ್ನು ನಡೆಸುವಲ್ಲಿ ಸಮಸ್ಯೆಗಳನ್ನು ಎದುರಿಸಿದರು.

ಐನ್‌ಸ್ಟೀನ್‌ತಂದೆ ಹರ್ಮನ್‌ ಎಲೆಕ್ಟ್ರೋ ಕೆಮಿಕಲ್‌ ಕಾರ್ಖಾನೆಯನ್ನು ನಡೆಸುತ್ತಿದ್ದರು ಮತ್ತು ಅವರ ತಾಯಿ ಪಾಲಿನ್ ಆಲ್ಬರ್ಟ್ ಮತ್ತು ಅವರ ತಂಗಿ ಮಾರಿಯಾಳನ್ನು ನೋಡಿಕೊಂಡಿದ್ದರು. ಐನ್‌ಸ್ಟೀನ್‌ ತನ್ನ ಕೆಲವು ಶಿಕ್ಷಕರ ಸರ್ವಾಧಿಕಾರಿ ಧೋರಣೆಯ ವಿರುದ್ಧ ದಂಗೆ ಎದ್ದು, ಹದಿನಾರನೇ ವಯಸ್ಸಿನಲ್ಲಿ ಶಾಲೆಯಿಂದ ಹೊರಗುಳಿದನು. ನಂತರ ಅವನು ಜುರಿಚ್‌ನ ಸ್ವಿಸ್ ಫೆಡರಲ್ ಪಾಲಿಟೆಕ್ನಿಕ್ ಶಾಲೆಗೆ ಪ್ರವೇಶ ಪರೀಕ್ಷೆಯನ್ನು ತೆಗೆದುಕೊಂಡನು. ಭೌತಶಾಸ್ತ್ರ ಮತ್ತು ಗಣಿತದಲ್ಲಿ ಅವನ ಪ್ರದರ್ಶನಗಳು ಅತ್ಯುತ್ತಮವಾಗಿದ್ದರೂ, ಅವನ ಅಂಕಗಳು ಇತರ ಪ್ರದೇಶಗಳು ಸಬ್‌ಪಾರ್‌ ಆಗಿದ್ದವು ಮತ್ತು ಅವನು ಪರೀಕ್ಷೆಯಲ್ಲಿ ಉತ್ತೀರ್ಣನಾಗಿರಲಿಲ್ಲ.

ಬಾಲ್ಯದಲ್ಲೇ ಆವಿಷ್ಕಾರ

ಆಲ್ಬರ್ಟ್ ಐನ್‌ಸ್ಟೀನ್‌ ವಿದ್ವಾಂಸ ಹ್ಯಾನ್ಸ್-ಜೋಸೆಫ್‌ಕೊಪ್ಪರ್‌ ಅವರ ಪ್ರಕಾರ, ಐನ್‌ಸ್ಟೀನ್‌ ಜೀವನದಲ್ಲಿ ಎರಡು “ಅದ್ಭುತಗಳು” ನಡೆದಿವೆ. ಅವರು ಐದನೇ ವಯಸ್ಸಿನಲ್ಲಿರುವಾಗ ಬಾಹ್ಯ ಒತ್ತಡಗಳು ಸೂಜಿಯನ್ನು ತಿರುಗಿಸ ಬಲ್ಲವು ಎಂಬುದನ್ನು ಮನವರಿಕೆ ಮಾಡಿಕೊಂಡರು. ಇದು ಅವರು ಕಾಣದ ವಿಷಯಗಳ ಕುರಿತು ಕುತೂಹಲಿಯಾಗಲು ಕಾರಣವಾಯಿತು. ಇನ್ನು 12ನೇ ವಯಸ್ಸಿನಲ್ಲಿರುವಾಗಲೇ ಅವರು ಜ್ಯಾಮಿತಿಯ ಸೂತ್ರಗಳನ್ನು ಕಂಡು ಕೊಂಡರು. ಇದು ಅವರ ಜೀವನದಲ್ಲಿ ಮಹತ್ವದ ಘಟ್ಟ.

ಐನ್‌ಸ್ಟೀನ್‌ ಒಟ್ಟಾರೆ ತಮ್ಮ ಜೀವಿತಾವಧಿಯಲ್ಲಿ ಮುನ್ನೂರಕ್ಕು ಹೆಚ್ಚು ಸಂಶೋಧನಾ ಪ್ರಬಂಧಗಳು ಮತ್ತು ಇತರ 150 ಕ್ಕೂ ಹೆಚ್ಚು ಪ್ರಬಂಧಗಳನ್ನು ಬರೆದಿದ್ದಾರೆ. ಭಾರತದ ಸತ್ಯೇಂದ್ರನಾಥ್ ಬೋಸ್‌ ಜೊತೆಗೂಡಿ ನೀಡಿದ ‘ಬೋಸ್-ಐನ್ ಸ್ಟೀನ್‌ ಸ್ಟಾಟಿಸ್ಟಿಕ್ಸ್’ ಸೇರಿದಂತೆ ‘ಐನ್ ಸ್ಟೀನ್‌ ರೆಫ್ರಿಜರೇಟರ್’, ‘ಐನ್ ಸ್ಟೀನ್‌-ಕಾರ್ಟನ್ ಸಿದ್ಧಾಂತ’, ‘ಐನ್‌ಸ್ಟೀನ್‌ -ಇನ್ಫೆಲ್ಡ್-ಹಾಫ್ಮನ್‌ ಇಕ್ವೇಷನ್ಸ್’, ‘ಐನ್ ಸ್ಟೀನ್‌ -ಪೊಡೊಲೊಸ್ಕಿ-ರೋಸೆನ್ ಪ್ಯಾರಾಡಾಕ್ಸ್’ ಇವುಗಳಲ್ಲಿ ಪ್ರಮುಖವಾದವು. ಇರ್ವಿನ್ ಶ್ರೋಡಿಂಗರ್’ಗೆ ಸಂಶೋಧನೆಗೆ ಸೂಚಿಸಿದ್ದು ಐನ್‌ಸ್ಟೀನ್‌ ಹಿರಿಮೆಗಳಲ್ಲೊಂದು.

ನೊಬೆಲ್ ಸಮಿತಿಗೂ ಅರ್ಥವಾಗಿರಲಿಲ್ಲ !

ತಮ್ಮ ಅದ್ಭುತ ಸಂಶೋಧನೆಯ ಹೊರತಾಗಿಯೂ ಐನ್‌ಸ್ಟೀನ್‌ಗೆ ಸಾಪೇಕ್ಷ ಸಿದ್ಧಾಂತಕ್ಕೆ ನೊಬೆಲ್ ಪ್ರಶಸ್ತಿ ಸಿಗಲೇ ಇಲ್ಲ. ಏಕೆಂದರೆ ಸಾಪೇಕ್ಷ ಸಿದ್ಧಾಂತ ನೊಬೆಲ್ ಸಮಿತಿಯವರಿಗೂ ಅರ್ಥವಾಗಿರಲಿಲ್ಲ. ಇದರ ಬದಲಾಗಿ ಇದರ ಮುಂದೆ ಚಿಲ್ಲರೆ ಎನಿಸಬಹುದಾದ ‘ಫೋಟೋ ಎಲೆಕ್ಟ್ರಿಕ್‌ ಎಫೆಕ್ಟ್’ಗೆ ಅದೂ 16 ವರ್ಷ ಬಿಟ್ಟು, 1921ರಲ್ಲಿ ನೊಬೆಲ್ ಪ್ರಶಸ್ತಿ ನೀಡಲಾಯಿತು. ವಿಚಿತ್ರ ಎಂದರೆ ಅವರ ಕೆಲವು ಥಿಯರಿಗಳು ಸಾಕ್ಷವಿಲ್ಲದೇ ಹಾಗೇ ಉಳಿದುಕೊಂಡಿದ್ದವು. ಅವು ಸತ್ಯವೋ ಸುಳ್ಳೋ ಎಂದು ಹೇಳಲು ಸಾಮಾನ್ಯರು ಬಿಡಿ ವಿಶ್ವದಯಾವ ಘಟಾನುಘಟಿ ವಿಜ್ಞಾನಿಗಳಿಗೂ ಸಾಧ್ಯವಾಗಿರಲಿಲ್ಲ.

ಐನ್‌ಸ್ಟೀನ್‌ ಅವರ ಜನಪ್ರಿಯ ಚಿತ್ರವೆಂದರೆ ಅವರು ತಮ್ಮ ನಾಲಗೆಯನ್ನು ಹೊರಗೆಚಾಚಿ ಪೋಸು ನೀಡಿದ್ದು. ಐನ್‌ಸ್ಟೀನ್‌ ಚಿಕ್ಕ ಹುಡುಗನಂತೆ ವರ್ತಿಸಿದ್ದ ಈ ಚಿತ್ರತೆಗೆದಿದ್ದು ಐನ್ ಸ್ಟೀನ್‌ 72ನೇ ಹುಟ್ಟುಹಬ್ಬ ದಂದು. ಐನ್‌ಸ್ಟೀನ್‌ಗೆ ಗೌರವ ಸೂಚಿಸಲು ಪ್ರಿನ್ಸ್‌ಸ್ಟ್‌ ಕ್ಲಬ್‌ನಲ್ಲಿ ಸಮಾರಂಭ ಆಯೋಜನೆಯಾಗಿತ್ತು. ಅವತ್ತು ಸ್ನೇಹಿತರು, ಸಹೋದ್ಯೋಗಿಗಳೆಲ್ಲಾ ಜಮಾಯಿಸಿದ್ದರು. ಅಲ್ಲಿಯೇ ಸಾಕಷ್ಟು ಪೋಟೊಗಳಿಗೆ ಪೋಸ್ ನೀಡಿ ನಕ್ಕು ನಕ್ಕು ವಿಜ್ಞಾನಿಗೆ ಸುಸ್ತಾಗಿತ್ತು. ಪಾರ್ಟಿ ಮುಗಿದ ಬಳಿಕ ಮನೆಗೆ ಹೊರಡಲು ಸ್ನೇಹಿತರೊಬ್ಬರ ಕಾರು ಹತ್ತಿದ ಮೇಧಾವಿಯನ್ನು ಫೋಟೊಗ್ರಾಫರ್‌ಗಳು ಬಿಡಲಿಲ್ಲ. ಮತ್ತಷ್ಟು ಫೋಟೊತೆಗೆಯಲು ಮುಂದಾದಾಗ ನಕ್ಕು ಸುಸ್ತಾಗಿದ್ದ ಐನ್‌ಸ್ಟೀನ್‌ ನಾಲಗೆಯನ್ನು ಹೊರಗೆಚಾಚಿ ಪೋಸು ನೀಡಿದರು.

Everything to know about the father of modern physics

ಸಾಕ್ಸ್ ಹಾಕಲೇ ಇಲ್ಲ !

ಐನ್‌ಸ್ಟೀನ್‌ ಅವರ ವಿಚಿತ್ರ ಡೆಸ್ಸಿಂಗ್ ಅವರ ಹೈಲೆಟ್‌ ಆಗಿತ್ತು. ಆದರೆ ಅವರ ಕೆದರಿದ ಕೂದಲೂ ಕೂಡ ಜನರನ್ನು ಆಕರ್ಷಿಸಿದೆ. ಅಷ್ಟೇ ಅಲ್ಲ ಅವರು ಎಂದೂಕೂಡ ಶೂ ಧರಿಸುವಾಗ ಸಾಕ್ಸ್ ಹಾಕುತ್ತಿರಲಿಲ್ಲವಂತೆ…ಅದೂ ಕೂಡ ಹೆಚ್ಚಿನವರನ್ನು ಆಕರ್ಷಿಸಿದೆ. ವಿಜ್ಞಾನಿ ಐನ್‌ಸ್ಟೀನ್‌ ಅವರಿಗೆ ಸಾಕ್ಸ್ಎಂದರೆ ಕಿರಿಕಿರಿ ಮಾಡುವ ಮತ್ತು ನೋವುಂಟು ಮಾಡುವ ವಸ್ತುವಾಗಿತ್ತು.

ಐನ್‌ಸ್ಟೀನ್‌ ಅವರ ತಾಯಿ ಸಂಗೀತಗಾರ್ತಿ. ಆಕೆ ತನ್ನ ಮಗ ಮ್ಯೂಸಿಕ್‌ನ್ನು ಇಷ್ಟಪಡಬೇಕು ಮತ್ತು ಕಲಿಯಬೇಕು ಎಂದು ಬಯಸಿದ್ದರು. ಅಲ್ಬರ್ಟ್ ಐನ್‌ಸ್ಟೀನ್‌ ಚಿಕ್ಕವರಿದ್ದಾಗ ವಾಯಲಿನ್ ಕಲಿಯುವುದನ್ನು ಇಷ್ಟಪಡಲೇ ಇಲ್ಲ. ಆದರೆ ಟೀನೇಜ್‌ಗೆ ಕಾಲಿಟ್ಟ ಮೇಲೆ ಅವರು ವಯಲಿನ್ ಕಲಿತದ್ದು ಮಾತ್ರವಲ್ಲ ಹಾಡುವುದೂ ಕೂಡ ತಿಳಿದಿತ್ತು. ಸಿಕ್ ಅನ್ನು ಬಹಳವಾಗಿ ಇಷ್ಟಪಟ್ಟರು. ಐನ್‌ಸ್ಟೀನ್‌ ಗೆ ವಯೋಲಿನ್ ಮತ್ತು ಸಂಗೀತ ಎಂದರೆ ಅತೀವ ಮೋಹ. ಒಂದೊಮ್ಮೆ ನಾನು ವಿಜ್ಞಾನಿಯಾಗದಿದ್ದರೆ ಸಂಗೀತಗಾರ ನಾಗುತ್ತಿದ್ದೆ ಎಂದು ಸ್ವತಃ ಐನ್‌ಸ್ಟೀನ್‌ ಹೇಳಿಕೊಂಡಿದ್ದರು.

ನೌಕಾಯಾನ ಅಂದರೆ ಐನ್ ಸ್ಟೀನ್‌ ಅವರಿಗೆ ಇಷ್ಟವಾಗುತ್ತಿತ್ತು. ಹಾಗಂತ ಅವರು ಅಷ್ಟೇನು ಉತ್ತಮ ನಾವಿಕರಾಗಿರಲಿಲ್ಲ. ದೋಣಿ ಹಾಳಾದರೆ ಅಕ್ಕಪಕ್ಕದವರು ಅದನ್ನು ಸರಿಪಡಿಸಿಕೊಡ ಬೇಕಿತ್ತು. ಅಷ್ಟೇ ಅಲ್ಲ ಅವರು ತಮ್ಮ ಜೀವನದುದ್ದಕ್ಕೂ ಈಜುವುದನ್ನು ಕಲಿಯಲೇ ಇಲ್ಲವಂತೆ. ಹಾಗಂತ ಅವರು ನೌಕಾಯಾನ ಕೈಗೊಳ್ಳುವುದನ್ನು ತಡೆಯುವುದಕ್ಕೆ ಸಾಧ್ಯವಾಗಿಲ್ಲ.

ರೆಫ್ರಿಜರೇಟರ್ ಸಂಶೋಧನೆ

ಐನ್‌ಸ್ಟೀನ್‌ ಅವರ ಸೀನಿಯರ್ ಆಗಿದ್ದ ಲಿಯೋ ಸಿಜಾರ್ಡ್ ಅವರ ಜೊತೆಗೆ ರೆಫ್ರಿಜರೇಟರ್‌ ಅನ್ನು ಕೂಡ ಸಂಶೋಧನೆ ಮಾಡಿದ್ದರು. ಎರಡು ದಶಕಗಳ ನಂತರ ಅವರಥಿಯರಿಯನ್ನು ಅವರು ಪ್ರಕಟಿಸಿದರು. 1930 ರಲ್ಲಿ ಈ ರೆಪ್ರಿಜರೇಟರ್‌ ಅನ್ನು ಪೇಟೆಂಟ್ ಪಡೆಯಲಾಯಿತು ಮತ್ತು ಕೂಡಲೇ ಅದರ ಅಪ್‌ಡೇಟ್‌ ಆಗಿರುವ ವರ್ಷನ್‌ ಕೂಡ ಬಂತು.

ಇಸ್ರೆಲ್‌ನ ಮೊದಲ ಅಧ್ಯಕ್ಷ ಚೈಮ್ ವಿಜ್ಮನ್‌ ಅವರು 1952 ನವೆಂಬರ್ 9 ರಂದು ಮೃತಪಟ್ಟ ನಂತರ ಇಸ್ರೆಲ್‌ನ ಎರಡನೇ ಅಧ್ಯಕ್ಷರಾಗುವಂತೆ ಆಲ್ಬರ್ಟ್ ಐನ್‌ಸ್ಟೀನ್‌ ಆಫರ್‌ ಬಂದಿತ್ತು. ಆದರೆ 73 ವರ್ಷದವರಾಗಿದ್ದ ಐನ್‌ಸ್ಟೀನ್‌ ನಾಜೂಕಿ ನಿಂದಲೇ ಅವರಿಗೆ ಬಂದ ಆಫರ್‌ನ್ನು ನಿರಾಕರಿಸಿದ್ದರು. ಅದಕ್ಕೆ ಕಾರಣವನ್ನು ಕೇಳಿದಾಗ ಅವರು “ದೈಹಿಕ ಯೋಗ್ಯತೆಯ ಕೊರತೆ ಮತ್ತು ಜನರನ್ನು ಸರಿಯಾಗಿ ನಿಭಾಯಿಸುವ ತಾಕತ್ತು ಇಲ್ಲದೇ ಇರುವುರು” ಎಂದು ತಿಳಿಸಿದ್ದರು. ಅಂದರೆ ನನಗೆ ವಯಸ್ಸಾಗಿದೆ, ನಾನು ಅಧ್ಯಕ್ಷನಾಗುವುದು ಸೂಕ್ತವಲ್ಲ ಎಂದು ಹೇಳಿದ್ದರು.

ಬ್ರಿಲಿಯೆಂಟ್‌ ಬ್ರೈನ್‌

ಐನ್‌ಸ್ಟೀನ್‌ ಅವರ ಹೆಸರನ್ನೇ ತೆಗೆದುಕೊಳ್ಳಿ. ಇಂಗ್ಲೀಷ್‌ನಲ್ಲಿ ಅವರ ಹೆಸರಿನ ʻAlbert Einsteinʼ ನಲ್ಲಿರುವ ಅಕ್ಷರಗಳನ್ನು ಆಚೀಚೆ ಮಾಡಿ ಪುನಃ ಜೋಡಿಸಿದರೆ ‘Ten elite brains’ ಎಂದು ಕೂಡ ಮಾಡಬಹುದು. ಇದರರ್ಥ 10 ಶ್ರೇಷ್ಠ ಮೆದುಳುಗಳು ಎಂದಾಗುತ್ತದೆ. ಇದಷ್ಟು ಸಮಂಜಸವಾಗಿಲ್ಲವೇ ಐನ್‌ಸ್ಟೀನ್‌ ಅವರಿಗೆ ನೀವೇ ಹೇಳಿ!

ಇದನ್ನೂ ಓದಿ : Bal Puarskar: ಬೆಂಗಳೂರಿನ 8 ವರ್ಷದ ಬಾಲಕ ರಿಷಿಗೆ ರಾಷ್ಟ್ರೀಯ ಬಾಲ ಪುರಸ್ಕಾರ, ಈತನ ಐಕ್ಯು ಐನ್‌ಸ್ಟೀನ್‌ಗಿಂತ ಹೆಚ್ಚು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

Covishield Vaccine: ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ತನ್ನ ಕೋವಿಡ್ ಲಸಿಕೆ ಕೋವಿಶೀಲ್ಡ್‌ ಅಪರೂಪವಾಗಿ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ಒಪ್ಪಿಕೊಂಡಿದೆ. ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್ ಎಣಿಕೆಗೆ ಕಾರಣವಾಗುವ ಸ್ಥಿತಿಯನ್ನು ಉಂಟುಮಾಡಬಹುದು ಎಂದು ಲಸಿಕೆ ತಯಾರಕರು ನ್ಯಾಯಾಲಯದಲ್ಲಿ ಹೇಳಿದ್ದಾರೆ.

VISTARANEWS.COM


on

Covishield Vaccine
Koo

ಹೊಸದಿಲ್ಲಿ: ಕೊರೊನಾ (coronavirus, Covid 19) ಎದುರಿಸಲು ನಾವು ನೀವೆಲ್ಲ ತೆಗೆದುಕೊಂಡ ಕೋವಿಶೀಲ್ಡ್‌ ಲಸಿಕೆ (Covishield Vaccine) ಅಡ್ಡ ಪರಿಣಾಮವನ್ನು (Side effects) ಹೊಂದಿದೆ ಎಂದು ಸ್ವತಃ ಅದನ್ನು ತಯಾರಿಸಿದ ಕಂಪನಿಯೇ ಇದೀಗ ಒಪ್ಪಿಕೊಂಡಿದೆ. ಇದರೊಂದಿಗೆ, ಕೊರೊನಾ ನಂತರದ ದಿನಗಳ ಅಸ್ವಸ್ಥತೆ, ಹೃದಯಾಘಾತಗಳ ಬಗ್ಗೆ ಮೂಡಿದ್ದ ಆತಂಕಕ್ಕೆ ಇನ್ನಷ್ಟು ಆಧಾರ ದೊರೆತಿದೆ.

ಬ್ರಿಟಿಷ್ ಫಾರ್ಮಾ ದೈತ್ಯ ಅಸ್ಟ್ರಾಜೆನೆಕಾ (AstraZeneca) ತನ್ನ ಕೋವಿಡ್ ಲಸಿಕೆ ಕೋವಿಶೀಲ್ಡ್‌ ಅಪರೂಪವಾಗಿ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ಒಪ್ಪಿಕೊಂಡಿದೆ. ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ಪ್ಲೇಟ್‌ಲೆಟ್ ಎಣಿಕೆಗೆ ಕಾರಣವಾಗುವ ಸ್ಥಿತಿಯನ್ನು ಉಂಟುಮಾಡಬಹುದು ಎಂದು ಲಸಿಕೆ ತಯಾರಕರು ನ್ಯಾಯಾಲಯದಲ್ಲಿ ಹೇಳಿದ್ದಾರೆ.

ಸಾಂಕ್ರಾಮಿಕ ಸಮಯದಲ್ಲಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಿಂದ ಅಭಿವೃದ್ಧಿಪಡಿಸಲಾದ ಕೋವಿಶೀಲ್ಡ್ ಅನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಉತ್ಪಾದಿಸಿತು ಮತ್ತು ದೇಶದಲ್ಲಿ ವ್ಯಾಪಕವಾಗಿ ನೀಡುತ್ತಿದೆ. AstraZeneca ಯುಕೆಯಲ್ಲಿ ತನ್ನ ಲಸಿಕೆಯು ಹಲವಾರು ಪ್ರಕರಣಗಳಲ್ಲಿ ಸಾವುಗಳು ಮತ್ತು ತೀವ್ರ ಅಸ್ವಸ್ಥತೆಗೆ ಕಾರಣವಾಯಿತು ಎಂಬ ಆರೋಪದ ಮೇಲೆ ಕ್ಲಾಸ್ ಆಕ್ಷನ್ ಮೊಕದ್ದಮೆಯನ್ನು ಎದುರಿಸುತ್ತಿದೆ. ಯುಕೆ ಹೈಕೋರ್ಟ್‌ನಲ್ಲಿ 51 ಪ್ರಕರಣಗಳಲ್ಲಿ ಸಂತ್ರಸ್ತರು 100 ಮಿಲಿಯನ್ ಪೌಂಡ್‌ಗಳವರೆಗೆ ನಷ್ಟ ಪರಿಹಾರ ಬಯಸಿದ್ದಾರೆ.

ಪ್ರಕರಣದ ಮೊದಲ ದೂರುದಾರರಾದ ಜೇಮೀ ಸ್ಕಾಟ್ ಅವರು ಏಪ್ರಿಲ್ 2021ರಲ್ಲಿ ಲಸಿಕೆಯನ್ನು ಪಡೆದಿದ್ದೇನೆ. ಇದು ರಕ್ತ ಹೆಪ್ಪುಗಟ್ಟುವಿಕೆಯ ನಂತರ ಶಾಶ್ವತ ಮಿದುಳಿನ ಗಾಯಕ್ಕೆ ಕಾರಣವಾಯಿತು. ಇದು ಮೆದುಳು ಚುರುಕಾಗಿರುವುದನ್ನು ತಡೆಯಿತು. ಆಸ್ಪತ್ರೆಯು ನಾನು ಸಾಯುತ್ತೇನೆ ಎಂದು ನನ್ನ ಹೆಂಡತಿಗೆ ಮೂರು ಬಾರಿ ಹೇಳಿದೆ ಎಂದು ಅವರು ಆರೋಪಿಸಿದ್ದಾರೆ.

ಅಸ್ಟ್ರಾಜೆನೆಕಾ ಈ ಪ್ರಕರಣಗಳನ್ನು ವಿರೋಧಿಸಿದೆ. ಆದರೆ ಫೆಬ್ರವರಿಯಲ್ಲಿ ನ್ಯಾಯಾಲಯದ ದಾಖಲೆಗಳಲ್ಲಿ ಒಂದರಲ್ಲಿ “ಕೋವಿಶೀಲ್ಡ್ ಅಪರೂಪದ ಸಂದರ್ಭಗಳಲ್ಲಿ, ಟಿಟಿಎಸ್‌ಗೆ ಕಾರಣವಾಗಬಹುದು” ಎಂದು ಹೇಳಿದೆ. TTS (ಥ್ರಂಬೋಸಿಸ್ ವಿತ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್) ಮಾನವರಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಕಡಿಮೆ ರಕ್ತದ ಪ್ಲೇಟ್‌ಲೆಟ್ ಎಣಿಕೆಗೆ ಕಾರಣವಾಗುತ್ತದೆ.

“AZ ಲಸಿಕೆಯು ಬಹಳ ಅಪರೂಪದ ಸಂದರ್ಭಗಳಲ್ಲಿ TTSಗೆ ಕಾರಣವಾಗಬಹುದು ಎಂದು ಒಪ್ಪಿಕೊಳ್ಳಲಾಗಿದೆ. ಇದಕ್ಕೆ ಕಾರಣ ಏನೆಂದು ತಿಳಿದಿಲ್ಲ. ಇದಲ್ಲದೆ, AZ ಲಸಿಕೆ (ಅಥವಾ ಯಾವುದೇ ಲಸಿಕೆ) ಅನುಪಸ್ಥಿತಿಯಲ್ಲಿ TTS ಸಹ ಸಂಭವಿಸಬಹುದು. ಯಾವುದೇ ವ್ಯಕ್ತಿಯಲ್ಲಿ ಅಸ್ವಸ್ಥತೆಯ ಕಾರಣವನ್ನು ತಜ್ಞರು ನೀಡುವ ಪುರಾವೆಗಳಿಂದ ದೃಢೀಕರಿಸಬೇಕಿದೆ” ಎಂದು ಅಸ್ಟ್ರಾಜೆನೆಕಾ ಹೇಳಿದೆ.

ಅಸ್ಟ್ರಾಜೆನೆಕಾ ಸ್ಕಾಟ್ಲೆಂಡ್‌ನಲ್ಲಿ ಈ ಕೇಸುಗಳನ್ನು ಎದುರಿಸುತ್ತಿದೆ. ಸಂತ್ರಸ್ತರಿಗೆ ಅದು ಪಾವತಿ ಮಾಡಬೇಕಾಗಬಹುದು. ಇತ್ತೀಚಿನ ಕಂಪನಿಯ ನಿಲುವು 2023ರ ಅದರ ನಿಲುವಿಗೆ ವಿರುದ್ಧವಾಗಿದೆ. ಅದರಲ್ಲಿ ಜೇಮೀ ಸ್ಕಾಟ್ ಅವರ ವಕೀಲರಿಗೆ “ಟಿಟಿಎಸ್ ಸಾಮಾನ್ಯ ಮಟ್ಟದಲ್ಲಿ ಲಸಿಕೆಯಿಂದ ಉಂಟಾಗುತ್ತದೆ ಎಂದು ನಾವು ಒಪ್ಪಿಕೊಳ್ಳುವುದಿಲ್ಲ” ಎಂದು ಹೇಳಿತ್ತು. ಲಸಿಕೆಯು “ದೋಷಯುಕ್ತ” ಮತ್ತು ಅದರ ಪರಿಣಾಮಕಾರಿತ್ವವು “ಅಗಾಧವಾಗಿ ಅತಿಯಾಗಿ ಹೇಳಲ್ಪಟ್ಟಿದೆ” ಎಂಬ ವಕೀಲರ ಮಾತುಗಳನ್ನು ಅಸ್ಟ್ರಾಜೆನೆಕಾ ನಿರಾಕರಿಸಿದೆ.

ಕೋವಿಡ್‌ ನಂತರದ ದಿನಗಳಲ್ಲಿ ಯುವಜನರಲ್ಲಿಯೂ ವಿವರಿಸಲಾಗದ ತೀವ್ರ ಅಸ್ವಸ್ಥತೆ, ಹೃದಯಸ್ತಂಭನ ಮುಂತಾದವುಗಳು ಕಂಡುಬಂದಿವೆ. ಭಾರತದಲ್ಲಿಯೂ ಹಲವಾರು ಪ್ರಕರಣಗಳು ನಡೆದಿದ್ದು, ಕೋವಿಡ್‌ ಹಾಗೂ ಅದರ ಲಸಿಕೆಯ ಬಗ್ಗೆ ಅನುಮಾನ ಮೂಡಿಸಿದ್ದವು.

ಇದನ್ನೂ ಓದಿ: Guarantee Scheme: ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ 50 ಸಾವಿರ ರೂ. ಕೊಡಲೂ ಸರ್ಕಾರದಲ್ಲಿ ಹಣವಿಲ್ಲ?

Continue Reading

ದೇಶ

Samsung: ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ 2ನೇ ಆವೃತ್ತಿ ಪ್ರಾರಂಭಿಸಿದ ಸ್ಯಾಮ್‌ಸಂಗ್ ಇಂಡಿಯಾ

Samsung: ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಯುವಜನತೆಯ ಕೌಶಲ್ಯ ಹೆಚ್ಚಿಸಲು ವಿನ್ಯಾಸ ಮಾಡಲಾದ ರಾಷ್ಟ್ರೀಯ ಕೌಶಲ ಕಾರ್ಯಕ್ರಮ ಸ್ಯಾಮ್‌ಸಂಗ್ ಇನ್ನೋವೇಷನ್ ಕ್ಯಾಂಪಸ್ ನ ಎರಡನೇ ಆವೃತ್ತಿಯನ್ನು ಸ್ಯಾಮ್‌ಸಂಗ್ ಇಂಡಿಯಾ ಪ್ರಾರಂಭಿಸಿದೆ.

VISTARANEWS.COM


on

Samsung India launched the 2nd edition of Samsung Innovation Campus
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆದ ಸ್ಯಾಮ್‌ಸಂಗ್ (Samsung) ಎಐ, ಐಒಟಿ, ಬಿಗ್ ಡೇಟಾ, ಮತ್ತು ಕೋಡಿಂಗ್ ಮತ್ತು ಪ್ರೋಗ್ರಾಮಿಂಗ್ ಮುಂತಾದ ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಯುವಜನತೆಯ ಕೌಶಲ ಹೆಚ್ಚಿಸಲು ವಿನ್ಯಾಸ ಮಾಡಲಾದ ತನ್ನ ರಾಷ್ಟ್ರೀಯ ಕೌಶಲ್ಯ ಕಾರ್ಯಕ್ರಮ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ ಎರಡನೇ ಆವೃತ್ತಿಯನ್ನು ಪ್ರಾರಂಭಿಸಿದೆ.

ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್ ಕಾರ್ಯಕ್ರಮವು 18-25 ವರ್ಷ ವಯಸ್ಸಿನ ಯುವಜನತೆಗೆ ಭವಿಷ್ಯದ ತಂತ್ರಜ್ಞಾನಗಳ ಕೌಶಲ ಒದಗಿಸುವ ಮತ್ತು ಆ ಮೂಲಕ ಅವರಿಗೆ ಉದ್ಯೋಗಾವಕಾಶ ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಯುವಜನತೆಗೆ ಸರಿಯಾದ ಅವಕಾಶಗಳನ್ನು ಸೃಷ್ಟಿ ಮಾಡಲು ರೂಪಿಸಲಾಗಿರುವ ಭಾರತ ಸರ್ಕಾರದ ಸ್ಕಿಲ್ ಇಂಡಿಯಾ ಮತ್ತು ಡಿಜಿಟಲ್ ಇಂಡಿಯಾದಂತಹ ಉಪಕ್ರಮಗಳನ್ನು ಬೆಂಬಲಿಸಲು ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: Sachin Tendulkar Birthday: ಎಐ ತಂತ್ರಜ್ಞಾನದ ಮೂಲಕ ತೆಂಡೂಲ್ಕರ್​ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಐಸಿಸಿ

ಭಾರತದಾದ್ಯಂತ ಇರುವ 3,500 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ತಿಳುವಳಿಕೆ ಒಪ್ಪಂದಕ್ಕೆ ಈ ವಾರದ ಆರಂಭದಲ್ಲಿ ಸ್ಯಾಮ್‌ಸಂಗ್ ಮತ್ತು ಎಲೆಕ್ಟ್ರಾನಿಕ್ಸ್ ಸೆಕ್ಟರ್ ಸ್ಕಿಲ್ಸ್ ಕೌನ್ಸಿಲ್ ಆಫ್ ಇಂಡಿಯಾ (ಇಎಸ್‌ಎಸ್‌ಸಿಐ) ನಡುವೆ ಸಹಿ ಮಾಡಲಾಗಿದೆ.

ಈ ವರ್ಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ ಒದಗಿಸುವುದರ ಜತೆಗೆ ಇನ್ನೂ ಹೆಚ್ಚಿನ ಆಸಕ್ತಿಕರ ಅಂಶಗಳು ಸೇರ್ಪಡೆಗೊಂಡಿವೆ. ಪ್ರತಿ ಕ್ಷೇತ್ರದಲ್ಲಿ ರಾಷ್ಟ್ರೀಯ ಟಾಪರ್‌ ಸ್ಥಾನ ಪಡೆಯುವವರು ದೆಹಲಿ/ಎನ್‌ಸಿಆರ್‌ನಲ್ಲಿರುವ ಸ್ಯಾಮ್‌ಸಂಗ್ ಘಟಕಗಳಿಗೆ ಭೇಟಿ ನೀಡುವ ಅವಕಾಶ ಪಡೆಯುತ್ತಾರೆ. ಜತೆಗೆ ರೂ. 1 ಲಕ್ಷದ ನಗದು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಈ ಘಟಕಗಳಿಗೆ ಭೇಟಿ ನೀಡುವ ವಿದ್ಯಾರ್ಥಿಗಳು ಸ್ಯಾಮ್‌ಸಂಗ್‌ನ ನಾಯಕತ್ವದ ತಂಡಗಳೊಂದಿಗೆ ಸಂವಹನ ನಡೆಸುವ ಮತ್ತು ಅವರಿಂದ ಮಾರ್ಗದರ್ಶನ ಪಡೆಯುವ ಅವಕಾಶ ಹೊಂದಲಿದ್ದಾರೆ. ರಾಷ್ಟ್ರ ಮಟ್ಟದ ಕೋರ್ಸ್ ಟಾಪರ್‌ಗಳು ಸ್ಯಾಮ್‌ಸಂಗ್ ಗ್ಯಾಲಕ್ಸಿ ಬಡ್ಸ್ ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಮಾರ್ಟ್‌ವಾಚ್‌ಗಳಂತಹ ಅತ್ಯಾಕರ್ಷಕ ಸ್ಯಾಮ್‌ಸಂಗ್ ಉತ್ಪನ್ನಗಳನ್ನು ಸಹ ಪಡೆಯಲಿದ್ದಾರೆ.

ಈ ಕುರಿತು ಮಾತನಾಡಿದ ಸ್ಯಾಮ್‌ಸಂಗ್ ನೈಋತ್ಯ ಏಷ್ಯಾದ ಅಧ್ಯಕ್ಷ ಮತ್ತು ಸಿಇಓ ಜೆಬಿ ಪಾರ್ಕ್, ಸ್ಯಾಮ್‌ಸಂಗ್ ಭಾರತದಲ್ಲಿ ಕಳೆದ 28 ವರ್ಷಗಳಿಂದ ತನ್ನ ಅಸ್ತಿತ್ವ ಹೊಂದಿದ್ದು, ಈ ಎಲ್ಲಾ ವರ್ಷಗಳಲ್ಲಿ ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಿದೆ. ನಮ್ಮ ದೃಷ್ಟಿಕೋನವು ಯುವಜನರಿಗೆ ಕೌಶಲ್ಯ ಒದಗಿಸುವ ಮತ್ತು ಅವರಿಗೆ ವೃತ್ತಿಪರ ಬೆಳವಣಿಗೆಯ ಅವಕಾಶಗಳನ್ನು ಒದಗಿಸಿ ಅವರನ್ನು ಸಬಲೀಕರಣಗೊಳಿಸುವ ಭಾರತ ಸರ್ಕಾರದ ಉದ್ದೇಶಗಳೊಂದಿಗೆ ಸರಿಯಾಗಿ ಹೊಂದಿಕೆಯಾಗುತ್ತದೆ.

ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ ಮೂಲಕ, ನಾವು ಯುವಜನತೆಯ ಕೌಶಲ್ಯವನ್ನು ವೃದ್ಧಿಸುವ ಕೌಶಲ್ಯ ಆಧಾರಿತ ಕಲಿಕೆಯ ವೇದಿಕೆಯನ್ನು ನಿರ್ಮಿಸುತ್ತಿದ್ದೇವೆ. ಅದರಿಂದ ಯುವಕರು ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯಬಹುದಾಗಿದೆ ಮತ್ತು ಅರ್ಥಪೂರ್ಣ ಬದಲಾವಣೆ ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 2nd PUC Exam: ಏ.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಪ್ರವೇಶ ಪತ್ರ ಬಿಡುಗಡೆ

ಇಎಸ್‌ಎಸ್‌ಸಿಐ ಸಂಸ್ಥೆಯು ಕೌಶಲಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಉದ್ಯಮ ಸಂಘಗಳಿಂದ ಉತ್ತೇಜಿಸಲ್ಪಟ್ಟ ರಾಷ್ಟ್ರೀಯ ಮಟ್ಟದ ಕೌಶಲ ಒದಗಿಸುವ ಸಂಸ್ಥೆಯಾಗಿದೆ ಮತ್ತು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ಅಡಿಯಲ್ಲಿ ಸೆಕ್ಟರ್ ಸ್ಕಿಲ್ ಕೌನ್ಸಿಲ್ (ವಲಯ ಕೌಶಲ್ಯ ಮಂಡಳಿ) ಆಗಿ ಕಾರ್ಯನಿರ್ವಹಿಸುತ್ತದೆ. ಇದು ತನ್ನ ರಾಷ್ಟ್ರವ್ಯಾಪಿ ಇರುವ ಅನುಮೋದಿತ ತರಬೇತಿ ಮತ್ತು ಶಿಕ್ಷಣ ಪಾಲುದಾರರ ನೆಟ್‌ವರ್ಕ್ ಮೂಲಕ ಸ್ಥಳೀಯ ಮಟ್ಟದಲ್ಲಿ ತರಬೇತಿಯನ್ನು ನೀಡುತ್ತದೆ. ಇಎಸ್‌ಎಸ್‌ಸಿಐ ಸಂಸ್ಥೆಯು ಭಾರತದ ಸಣ್ಣ ಪಟ್ಟಣಗಳಲ್ಲಿ ಎಲ್ಲೆಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನ ಶಿಕ್ಷಣದ ಲಭ್ಯತೆ ಇಲ್ಲವೋ ಅಲ್ಲೆಲ್ಲಾ ಯುವಜನತೆಗೆ ಕೋರ್ಸ್‌ಗಳನ್ನು ಒದಗಿಸುವ ಅವಕಾಶಗಳನ್ನು ಕೂಡ ಎದುರು ನೋಡುತ್ತದೆ.

ಈ ಕುರಿತು ಇಎಸ್‌ಎಸ್‌ಸಿಐ ಚೀಫ್ ಆಫರೇಟಿಂಗ್ ಆಫೀಸರ್ (Officiating CEO) ಡಾ. ಅಭಿಲಾಷಾ ಗೌರ್ ಮಾತನಾಡಿ, ದೇಶದಲ್ಲಿ ಕೌಶಲ ಒದಗಿಸುವ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಸಿಎಸ್‌ಆರ್‌ ಉಪಕ್ರಮಕ್ಕಾಗಿ ಸ್ಯಾಮ್‌ಸಂಗ್ ಜತೆಗೆ ಪಾಲುದಾರಿಕೆ ಹೊಂದಲು ಇಎಸ್‌ಎಸ್‌ಸಿಐ ಸಂತೋಷ ಪಡುತ್ತದೆ. ನಮ್ಮ ಉದ್ದೇಶಕ್ಕೆ ಅನುಗುಣವಾಗಿ ರಾಷ್ಟ್ರದ ಯುವಜನರಿಗೆ ಅದರಲ್ಲೂ ವಿಶೇಷವಾಗಿ ಕಡಿಮೆ ಸವಲತ್ತು ಹೊಂದಿರುವ ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನದ ಕ್ಷೇತ್ರಗಳಲ್ಲಿ ಕೌಶಲ ಮತ್ತು ಅಗತ್ಯ ಜ್ಞಾನವನ್ನು ಒದಗಿಸಲು ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ ಅನ್ನು ವಿನ್ಯಾಸಗೊಳಿಸಲಾಗಿದೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ ಒದಗಿಸುತ್ತದೆ ಮತ್ತು ಅವರನ್ನು ಉದ್ಯೋಗಕ್ಕೆ ಸಿದ್ಧಗೊಳಿಸುತ್ತದೆ ಎಂಬ ಭರವಸೆ ನಮಗಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ದಾಖಲಾದ ಯುವಜನತೆ ತರಗತಿ ಮೂಲಕ ಮತ್ತು ಆನ್‌ಲೈನ್ ತರಬೇತಿ ಪಡೆಯುತ್ತಾರೆ ಹಾಗೂ ಎಐ, ಐಒಟಿ, ಬಿಗ್ ಡೇಟಾ ಮತ್ತು ಕೋಡಿಂಗ್ ಆಂಡ್ ಪ್ರೋಗ್ರಾಮಿಂಗ್‌ನಲ್ಲಿ ತಮ್ಮ ಆಯ್ದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕ್ಯಾಪ್‌ಸ್ಟೋನ್ ಪ್ರಾಜೆಕ್ಟ್ ಅನ್ನು ಪೂರ್ಣಗೊಳಿಸುತ್ತಾರೆ.

ಅವರ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸಲು ಸಾಫ್ಟ್ ಸ್ಕಿಲ್ಸ್ ತರಬೇತಿಯನ್ನೂ ನೀಡಲಾಗುವುದು. ಭಾಗವಹಿಸುವವರು ಭಾರತದಾದ್ಯಂತ ಇರುವ ಇಎಸ್‌ಎಸ್‌ಸಿಐಯ ತರಬೇತಿದಾರರು ಮತ್ತು ಶಿಕ್ಷಣ ಪಾಲುದಾರರ ಮೂಲಕ ಸಿದ್ಧಗೊಳಿಸಲಾಗುತ್ತದೆ. ಈ ಕಾರ್ಯಕ್ರಮವು ಆಫ್‌ಲೈನ್ ಮತ್ತು ಆನ್‌ಲೈನ್ ಕಲಿಕೆ, ಹ್ಯಾಕಥಾನ್‌ಗಳು ಮತ್ತು ಕ್ಯಾಪ್‌ಸ್ಟೋನ್ ಪ್ರಾಜೆಕ್ಟ್‌ಗಳು ಮತ್ತು ಸ್ಯಾಮ್‌ಸಂಗ್ ಉದ್ಯೋಗಿಗಳು ಒದಗಿಸುವ ಪರಿಣಿತ ಮಾರ್ಗದರ್ಶನವನ್ನು ಒಳಗೊಂಡಿರುತ್ತದೆ.

ಈ ಕಾರ್ಯಕ್ರಮವು ನಾಲ್ಕು ರಾಜ್ಯಗಳಲ್ಲಿ ಎಂಟು ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಯುತ್ತದೆ. ದೇಶದ ಉತ್ತರ ಭಾಗದಲ್ಲಿ, ದೆಹಲಿ ಎನ್‌ಸಿಆರ್‌ನಲ್ಲಿರುವ ಎರಡು ಕೇಂದ್ರಗಳ ಜತೆಗೆ ಲಕ್ನೋ ಮತ್ತು ಗೋರಖ್‌ಪುರದಲ್ಲಿ ಎರಡು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ದಕ್ಷಿಣ ಭಾರತದಲ್ಲಿ, ತಮಿಳುನಾಡಿನ ಚೆನ್ನೈ ಮತ್ತು ಶ್ರೀಪೆರಂಬದೂರಿನಲ್ಲಿ 2 ಕೇಂದ್ರಗಳು ಮತ್ತು ಕರ್ನಾಟಕದ ಬೆಂಗಳೂರಿನಲ್ಲಿ ಎರಡು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ಗೆ ಉಸೇನ್‌ ಬೋಲ್ಟ್ ಬ್ರ್ಯಾಂಡ್‌ ಅಂಬಾಸಿಡರ್

ಕಾರ್ಯಕ್ರಮವು ಏಪ್ರಿಲ್ 2024 ರಲ್ಲಿ ಪ್ರಾರಂಭವಾಗಲಿದೆ ಮತ್ತು ವಿಶೇಷವಾಗಿ ವಿನ್ಯಾಸಗೊಳಿಸಲಾದ ಆರು ತಿಂಗಳ ಕೋರ್ಸ್ ಅಕ್ಟೋಬರ್ 2024ರಲ್ಲಿ ಕೊನೆಗೊಳ್ಳುತ್ತದೆ. ನವೆಂಬರ್ 2024ರಲ್ಲಿ ಕೋರ್ಸ್ ಟಾಪರ್‌ಗಳ ಹೆಸರನ್ನು ಘೋಷಿಸಲಾಗುತ್ತದೆ ಎಂದು ತಿಳಿಸಿದೆ.

Continue Reading

ದೇಶ

Sunita Williams: ಸುನೀತಾ ವಿಲಿಯಮ್ಸ್‌ 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸಜ್ಜು

Sunita Williams: ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಯುನೈಟೆಡ್ ಲಾಂಚ್ ಅಲಯನ್ಸ್ ಅಟ್ಲಾಸ್ ವಿ ರಾಕೆಟ್‌ನಲ್ಲಿ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಮೇಲಕ್ಕೆ ತೆರಳಿ ಕಕ್ಷೆಯ ಪ್ರಯೋಗಾಲಯದಲ್ಲಿ ತಂಗಲಿದ್ದಾರೆ. ಅಲ್ಲಿ ಅವರು ಸುಮಾರು ಒಂದು ವಾರ ಉಳಿಯುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

VISTARANEWS.COM


on

Sunita Williams
Koo

ನ್ಯೂಯಾರ್ಕ್‌: ಭಾರತೀಯ ಮೂಲದ ವಿಖ್ಯಾತ ಗಗನಯಾತ್ರಿ (Astronaut) ಸುನೀತಾ ಎಲ್. ವಿಲಿಯಮ್ಸ್ (Sunita Williams), ತಮ್ಮ ಮೂರನೇ ಬಾಹ್ಯಾಕಾಶ ಯಾತ್ರೆಯನ್ನು (Space mission) ನಡೆಸಲು ಸಜ್ಜಾಗಿದ್ದಾರೆ. ಅಮೆರಿಕದ ನಾಸಾ (NASA) ಸಂಸ್ಥೆಯ ಗಗನಯಾತ್ರಿಯಾದ ಸುನೀತಾ, ಪ್ರಸ್ತುತ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಕ್ರ್ಯೂ ಫ್ಲೈಟ್ ಟೆಸ್ಟ್ ಮಿಷನ್‌ನ ಪೈಲಟ್ ಆಗಲು ತರಬೇತಿ ಪಡೆಯುತ್ತಿದ್ದಾರೆ. ಇದು ಆ ವಾಹನದ ಮೊದಲ ಸಿಬ್ಬಂದಿ ವಿಮಾನ. ಮತ್ತು ಸುನೀತಾಗೆ ಇದು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಮೂರನೇ ಕಾರ್ಯಾಚರಣೆಯಾಗಿದೆ.

“ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಏಜೆನ್ಸಿಯ ಬೋಯಿಂಗ್ ಕ್ರೂ ಫ್ಲೈಟ್ ಪರೀಕ್ಷೆಯ ತಯಾರಿಗಾಗಿ NASA ಎರಡು ಉಡಾವಣೆಗಳನ್ನು ಆಯೋಜಿಸಿದೆ. ಏಪ್ರಿಲ್ 25ರಂದು EDTನಲ್ಲಿ ಹಾಗೂ ಮೇ 6ರಂದು ಫ್ಲೋರಿಡಾದ ಕೇಪ್ ಕ್ಯಾನವೆರಲ್ ಬಾಹ್ಯಾಕಾಶ ಪಡೆ ನಿಲ್ದಾಣದಲ್ಲಿ ಬಾಹ್ಯಾಕಾಶ ಉಡಾವಣಾ ಸಂಕೀರ್ಣ-41ರಿಂದ.”

ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಯುನೈಟೆಡ್ ಲಾಂಚ್ ಅಲಯನ್ಸ್ ಅಟ್ಲಾಸ್ ವಿ ರಾಕೆಟ್‌ನಲ್ಲಿ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಮೇಲಕ್ಕೆ ತೆರಳಿ ಕಕ್ಷೆಯ ಪ್ರಯೋಗಾಲಯದಲ್ಲಿ ತಂಗಲಿದ್ದಾರೆ. ಅಲ್ಲಿ ಅವರು ಸುಮಾರು ಒಂದು ವಾರ ಉಳಿಯುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಬಾಹ್ಯಾಕಾಶ ಸಂಸ್ಥೆಯ ವಾಣಿಜ್ಯ ಸಿಬ್ಬಂದಿ ಕಾರ್ಯಕ್ರಮದ ಭಾಗವಾಗಿ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಸಿಬ್ಬಂದಿ ವಿಮಾನದ ಉಡಾವಣೆ, ಡಾಕಿಂಗ್ ಮತ್ತು ಭೂಮಿಗೆ ಹಿಂತಿರುಗುವುದು ಸೇರಿದಂತೆ ಸ್ಟಾರ್‌ಲೈನರ್ ಸಿಸ್ಟಮ್‌ನ ಸಾಮರ್ಥ್ಯಗಳನ್ನು ಪರೀಕ್ಷಿಸಲಾಗಿದೆ.

ಸುನಿತಾ ವಿಲಿಯಮ್ಸ್ ಅವರ ಪರಿಣತಿ

ಸುನಿತಾ ವಿಲಿಯಮ್ಸ್ ಅವರ ಬಾಹ್ಯಾಕಾಶ ಹಾರಾಟದ ಮೊದಲ ಅನುಭವವು ಡಿಸೆಂಬರ್ 9, 2006ರಿಂದ ಜೂನ್ 22, 2007ರವರೆಗೆ ನಡೆಯಿತು. ʼಎಕ್ಸ್‌ಪೆಡಿಶನ್ 14/15ʼನೊಂದಿಗೆ ಪ್ರಾರಂಭವಾಯಿತು. ಅವರು STS-116ನ ಸಿಬ್ಬಂದಿಯೊಂದಿಗೆ ಸಾಗಿ ಫ್ಲೈಟ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದರು. ಅವರು ಒಟ್ಟು 29 ಗಂಟೆ 17 ನಿಮಿಷಗಳ ನಾಲ್ಕು ಬಾಹ್ಯಾಕಾಶ ನಡಿಗೆಯೊಂದಿಗೆ ಮಹಿಳೆಯರ ದಾಖಲೆಯನ್ನು ಸ್ಥಾಪಿಸಿದರು. ಜೂನ್ 2007ರಲ್ಲಿ ಯಾನ ಮುಗಿಸಿ STS-117 ಸಿಬ್ಬಂದಿಯೊಂದಿಗೆ ಭೂಮಿಗೆ ಮರಳಿದರು.

ಜುಲೈ 14ರಿಂದ ನವೆಂಬರ್ 18, 2012ರವರೆಗೆ ಅವರ ಎರಡನೇ ಬಾಹ್ಯಾಕಾಶ ಯಾನ, ಎಕ್ಸ್‌ಪೆಡಿಶನ್ 32/33. ಅವರು ರಷ್ಯಾದ ಸೋಯುಜ್ ಕಮಾಂಡರ್ ಯೂರಿ ಮಾಲೆನ್‌ಚೆಂಕೊ ಮತ್ತು ಜಪಾನ್ ಏರೋಸ್ಪೇಸ್ ಎಕ್ಸ್‌ಪ್ಲೋರೇಶನ್ ಏಜೆನ್ಸಿಯ ಫ್ಲೈಟ್ ಇಂಜಿನಿಯರ್ ಅಕಿಹಿಕೊ ಹೊಶೈಡ್ ಅವರೊಂದಿಗೆ ಕಝಾಕಿಸ್ತಾನ್‌ನ ಬೈಕೊನೂರ್ ಕಾಸ್ಮೊಡ್ರೋಮ್‌ನಿಂದ ಜುಲೈ 2012ರಂದು ಹೋದರು. ಕಕ್ಷೆಯ ಪ್ರಯೋಗಾಲಯದಲ್ಲಿ ಸಂಶೋಧನೆ ಮತ್ತು ಪರಿಶೋಧನೆ ನಡೆಸುತ್ತ ನಾಲ್ಕು ತಿಂಗಳು ಕಳೆದಳು.

ಈ ಕಾರ್ಯಾಚರಣೆಗಳ ಸಮಯದಲ್ಲಿ ಅವರು ಹಲವು ಸಂಶೋಧನೆ ನಡೆಸಿದರು. ಬಾಹ್ಯಾಕಾಶ ನಡಿಗೆಗಳನ್ನು ನಡೆಸಿದರು ಮತ್ತು ಬಾಹ್ಯಾಕಾಶದ ಪರಿಶೋಧನೆಗೆ ಗಮನಾರ್ಹವಾಗಿ ಕೊಡುಗೆ ನೀಡಿದರು. ಸುನೀತಾ ವಿಲಿಯಮ್ಸ್ 50 ಗಂಟೆಗಳು ಮತ್ತು 40 ನಿಮಿಷಗಳ ಸಮಯದೊಂದಿಗೆ ದಾಖಲೆ ಸಮಯದ ಬಾಹ್ಯಾಕಾಶ ನಡಿಗೆ ದಾಖಲೆ ಮಾಡಿದ್ದಾರೆ.

ಪ್ರಶಸ್ತಿಗಳು ಮತ್ತು ಗೌರವಗಳು

ಅವರಿಗೆ ಅನೇಕ ಪ್ರಶಸ್ತಿಗಳು ಮತ್ತು ಗೌರವ ಸಂದಿವೆ. ಅವರು US ನೌಕಾಪಡೆಯ ನಿವೃತ್ತ ಕ್ಯಾಪ್ಟನ್. ಅವರಿಗೆ ಎರಡು ಬಾರಿ ರಕ್ಷಣಾ ಉನ್ನತ ಸೇವಾ ಪದಕ, ಲೀಜನ್ ಆಫ್ ಮೆರಿಟ್, ನೌಕಾಪಡೆಯ ಪ್ರಶಂಸಾ ಪದಕ ಎರಡು ಬಾರಿ, ನೌಕಾಪಡೆ ಮತ್ತು ಮೆರೈನ್ ಕಾರ್ಪ್ಸ್ ಸಾಧನೆ ಪದಕ ಮತ್ತು ಮಾನವೀಯ ಸೇವಾ ಪದಕ ನೀಡಲಾಗಿದೆ. ಪ್ರಸ್ತುತ ವಿಲಿಯಮ್ಸ್ ಬೋಯಿಂಗ್‌ನ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಕ್ರ್ಯೂ ಫ್ಲೈಟ್ ಟೆಸ್ಟ್ ಮಿಷನ್‌ನ ಪೈಲಟ್ ಆಗಲು ತರಬೇತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಚಂದ್ರನ ಅಂಗಳದಲ್ಲಿ ಭಾರತೀಯನನ್ನು ಇಳಿಸುವ ತನಕ ಬಿಡಲ್ಲ; ಇಸ್ರೋ ಅಧ್ಯಕ್ಷ ಮಹತ್ವದ ಘೋಷಣೆ

Continue Reading

ಪ್ರಮುಖ ಸುದ್ದಿ

Female Doctors: ವೈದ್ಯೆಯರಿಂದ ಚಿಕಿತ್ಸೆ ಪಡೆದ ರೋಗಿಗಳು ಬದುಕುಳಿಯುವ ಸಾಧ್ಯತೆ ಹೆಚ್ಚಂತೆ! ಅಧ್ಯಯನ ವರದಿ

Female Doctors: 2016ರಿಂದ 2019ರವರೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ 4,58,100 ಮಹಿಳಾ ರೋಗಿಗಳು ಮತ್ತು 3,18,800 ಪುರುಷ ರೋಗಿಗಳು ಸೇರಿದಂತೆ 7,76,000 ಮಂದಿಯನ್ನು ಇದರಲ್ಲಿ ಅಧ್ಯಯನ ಮಾಡಲಾಗಿದೆ. “ಮಹಿಳಾ ವೈದ್ಯರು ಚಿಕಿತ್ಸೆ ನೀಡಿದಾಗ ರೋಗಿಗಳಲ್ಲಿ ಕಡಿಮೆ ಮರಣ ಮತ್ತು ರಿಅಡ್ಮಿಶನ್‌ ಕಂಡುಬಂದಿದೆ” ಎಂದು ಅಧ್ಯಯನವು ಹೇಳಿದೆ.

VISTARANEWS.COM


on

female doctors
Koo

ಹೊಸದಿಲ್ಲಿ: ಮಹಿಳಾ ವೈದ್ಯರಿಂದ (female Doctors) ಚಿಕಿತ್ಸೆ ಪಡೆದ ರೋಗಿಗಳು (Patients) ಸಾಯುವ (death) ಅಥವಾ ಪುನಃ ಅಡ್ಮಿಟ್‌ ಆಗುವ ಸಾಧ್ಯತೆ ಕಡಿಮೆ ಎಂದು ಹೊಸ ಅಧ್ಯಯನವೊಂದು (study) ಹೇಳಿದೆ. ಆನಲ್ಸ್ ಆಫ್ ಇಂಟರ್ನಲ್ ಮೆಡಿಸಿನ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪುರುಷ ವೈದ್ಯರಿಂದ (Male doctors) ಚಿಕಿತ್ಸೆ ಪಡೆದ ರೋಗಿಗಳಿಗಿಂತ, ಮಹಿಳಾ ವೈದ್ಯರಿಂದ ಚಿಕಿತ್ಸೆ ಪಡೆದ ರೋಗಿಗಳ ಮರಣದ ಸಂಖ್ಯೆ ಕಡಿಮೆ ಮತ್ತು ಹೆಚ್ಚು ಉಪಶಮನ ಹೊಂದಿದ್ದಾರೆ.

2016ರಿಂದ 2019ರವರೆಗೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ 4,58,100 ಮಹಿಳಾ ರೋಗಿಗಳು ಮತ್ತು 3,18,800 ಪುರುಷ ರೋಗಿಗಳು ಸೇರಿದಂತೆ 7,76,000 ಮಂದಿಯನ್ನು ಇದರಲ್ಲಿ ಅಧ್ಯಯನ ಮಾಡಲಾಗಿದೆ. “ಮಹಿಳಾ ವೈದ್ಯರು ಚಿಕಿತ್ಸೆ ನೀಡಿದಾಗ ರೋಗಿಗಳಲ್ಲಿ ಕಡಿಮೆ ಮರಣ ಮತ್ತು ರಿಅಡ್ಮಿಶನ್‌ ಕಂಡುಬಂದಿದೆ” ಎಂದು ಅಧ್ಯಯನವು ಹೇಳಿದೆ. ಮಹಿಳಾ ರೋಗಿಗಳ ಮರಣ ಪ್ರಮಾಣವು ವೈದ್ಯೆಯರಿಂದ ಚಿಕಿತ್ಸೆ ಪಡೆದಾಗ 8.15%ರಷ್ಟಿದ್ದರೆ, ಪುರುಷ ವೈದ್ಯರಿಂದ ಚಿಕಿತ್ಸೆ ಪಡೆದಾಗ 8.38%ರಷ್ಟಿತ್ತು. ಪುರುಷರ ಮರಣ ಪ್ರಮಾಣವು ಮಹಿಳಾ ವೈದ್ಯರಿಂದ ಚಿಕಿತ್ಸೆ ಪಡೆದಾಗ 10.15%ರಷ್ಟು ಹಾಗೂ ಪುರುಷ ವೈದ್ಯರಿಂದ ಚಿಕಿತ್ಸೆ ಪಡೆದಾಗ 10.23%ರಷ್ಟಿತ್ತು.

ಈ ಶೇಕಡಾವಾರು ವ್ಯತ್ಯಾಸವನ್ನು ವೈದ್ಯಕೀಯವಾಗಿ ಅರ್ಥಪೂರ್ಣ ಎಂದು ಪರಿಗಣಿಸಲಾಗುತ್ತದೆ. “ಮಹಿಳಾ ವೈದ್ಯರು ಉತ್ತಮ ಗುಣಮಟ್ಟದ ಆರೈಕೆಯನ್ನು ಒದಗಿಸುತ್ತಾರೆ ಎಂಬುದನ್ನು ಗಮನಿಸುವುದು ಮುಖ್ಯ. ಆದ್ದರಿಂದ ಹೆಚ್ಚಿನ ಮಹಿಳಾ ವೈದ್ಯರು ರೋಗಿಗಳ ಸಾಮಾಜಿಕ ದೃಷ್ಟಿಕೋನದಿಂದ ಪ್ರಯೋಜನ ಪಡೆಯುತ್ತಾರೆ” ಎಂದು ಸಮೀಕ್ಷೆಯ ನಾಯಕಿ ಯುಸುಕೆ ತ್ಸುಗಾವಾ ತಿಳಿಸಿದ್ದಾರೆ.

ಮಹಿಳಾ ವೈದ್ಯರು ತಮ್ಮ ರೋಗಿಗಳೊಂದಿಗೆ ಹೆಚ್ಚು ಸಮಯ ಮಾತನಾಡುತ್ತಾರೆ. ಅವರ ದಾಖಲೆಗಳನ್ನು ನೋಡುತ್ತಾರೆ ಮತ್ತು ಡಯಾಗ್ನೋಸಿಸ್‌ ಮಾಡುತ್ತಾರೆ ಎಂದು ತಜ್ಞರು ಹೇಳಿದ್ದಾರೆ. ಮಹಿಳಾ ವೈದ್ಯರು ಬಹುಶಃ ಉತ್ತಮ ಸಂವಹನ ಕೌಶಲ್ಯಗಳನ್ನು ಹೊಂದಿರುತ್ತಾರೆ ಮತ್ತು ಮಹಿಳಾ ರೋಗಿಗಳಿಗೆ ಬಂದಾಗ ಹೆಚ್ಚು ರೋಗಿಕೇಂದ್ರಿತ ವಿಧಾನವನ್ನು ಹೊಂದಿರುತ್ತಾರೆ. ವೈದ್ಯೆಯರಿಂದ ಚಿಕಿತ್ಸೆ ಪಡೆಯುವುದರಿಂದ ಸೂಕ್ಷ್ಮ ಪರೀಕ್ಷೆಗಳ ಸಮಯದಲ್ಲಿ ಮಹಿಳಾ ರೋಗಿಗಳಿಗೆ ಉಂಟಾಗಬಹುದಾದ ಮುಜುಗರ ತಪ್ಪುತ್ತದೆ; ಸಾಮಾಜಿಕ ಮತ್ತು ಸಾಂಸ್ಕೃತಿಕ ನಿಷೇಧಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ.

“ವೈದ್ಯಕೀಯ ಕ್ಷೇತ್ರದಲ್ಲಿ ಪುರುಷ ಮತ್ತು ಮಹಿಳಾ ವೈದ್ಯರ ಆರೈಕೆ ಮಾದರಿಯಲ್ಲಿ ವ್ಯತ್ಯಾಸಗಳಿವೆ. ವೈದ್ಯೆಯರು ರೋಗಿಗಳೊಂದಿಗೆ ಹೆಚ್ಚು ಸಮಯ ಕಳೆಯುತ್ತಾರೆ. ಪುರುಷರಿಗಿಂತ ವೈದ್ಯಕೀಯ ನಿರ್ಧಾರ ಮತ್ತು ಪಾಲುದಾರಿಕೆ ಚರ್ಚೆಗಳಲ್ಲಿ ಹೆಚ್ಚು ಸಮಯ ಕಳೆಯುತ್ತಾರೆ” ಎಂದು ಅಧ್ಯಯನದ ಸಹ-ಲೇಖಕಿ ಮತ್ತು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಮತ್ತು ವೈದ್ಯಕೀಯ ನಿರ್ದೇಶಕರಾದ ಡಾ. ಸ್ಯಾನ್ ಫ್ರಾನ್ಸಿಸ್ಕೋ ತಿಳಿಸಿದರು.

“ಇದರಲ್ಲಿ ಆಶ್ಚರ್ಯವೇನಿಲ್ಲ. ಮಹಿಳೆಯರು ಮತ್ತು ಪುರುಷರು ವಿಭಿನ್ನವಾಗಿ ವೈದ್ಯಕೀಯ ಅಭ್ಯಾಸ ಮಾಡುತ್ತಾರೆ. ಸಂವಹನ ಶೈಲಿಗಳು ಮತ್ತು ಮಾರ್ಗಸೂಚಿಗಳ ಅನುಸರಣೆಯಲ್ಲಿ ನಿರ್ದಿಷ್ಟ ವ್ಯತ್ಯಾಸಗಳಿವೆ. ಈ ವ್ಯತ್ಯಾಸಗಳು ರೋಗಿಗಳ ಫಲಿತಾಂಶದಲ್ಲಿ ಕಾಣಿಸುತ್ತದೆ. ಎರಡನೆಯದಾಗಿ, ಸಮಾಜದಲ್ಲಿ, ನಿಸ್ಸಂಶಯವಾಗಿ ವೈದ್ಯಕೀಯದಲ್ಲಿ ಮಹಿಳೆಯರು ಪುರುಷರಿಗಿಂತ ಹೆಚ್ಚಿನ ಗುಣಮಟ್ಟವನ್ನು ಹೊಂದಿದ್ದಾರೆ. ಇದು ಶಸ್ತ್ರಚಿಕಿತ್ಸೆಯಲ್ಲಿಯೂ ಕಾಣುವ ವಿದ್ಯಮಾನವಾಗಿದೆ,” ಎಂದು ಟೊರೊಂಟೊ ವಿಶ್ವವಿದ್ಯಾಲಯದ ಮೂತ್ರಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕ್ರಿಸ್ಟೋಫರ್ ವಾಲಿಸ್ ಹೇಳಿದ್ದಾರೆ.

ಮಹಿಳೆಯರು ಪುರುಷರಿಗಿಂತ ಹಾಗೂ ಅಲ್ಪಸಂಖ್ಯಾತರು ಶ್ವೇತವರ್ಣೀಯರಿಗಿಂತ ಕೆಟ್ಟ ವೈದ್ಯಕೀಯ ಆರೈಕೆಯನ್ನು ಏಕೆ ಪಡೆಯುತ್ತಾರೆ ಎಂಬುದನ್ನು ಪರಿಶೀಲಿಸುವ ಉದ್ದೇಶವನ್ನು ಹೊಸ ಸಂಶೋಧನೆಯು ಹೊಂದಿದೆ. ಜನವರಿ 2024ರಲ್ಲಿ JAMA ಇಂಟರ್ನಲ್ ಮೆಡಿಸಿನ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, “ಮಹಿಳೆಯರು ಮತ್ತು ಅಲ್ಪಸಂಖ್ಯಾತ ರೋಗಿಗಳು ಬಿಳಿ ಪುರುಷರಿಗಿಂತ 30%ರಷ್ಟು ತಪ್ಪಾದ ರೋಗನಿರ್ಣಯ ಪಡೆಯುವ ಸಾಧ್ಯತೆಯಿದೆ.” 2002ರ ಇನ್ನೊಂದು ಅಧ್ಯಯನದಲ್ಲಿ, ವೈದ್ಯರಿಗೆ ಹೋಲಿಸಿದರೆ ವೈದ್ಯೆಯರು ರೋಗಿಗಳೊಂದಿಗೆ ಸರಾಸರಿ 23 ನಿಮಿಷ ಕಳೆಯುತ್ತಾರೆ ಎಂದು ಕಂಡುಬಂದಿದೆ.

ಇದನ್ನೂ ಓದಿ: Money Guide: ವೈದ್ಯಕೀಯ ತುರ್ತು ಪರಿಸ್ಥಿತಿ ವೇಳೆ ಸಾಲದ ಸುಳಿಗೆ ಸಿಲುಕದಿರಲು ಹೀಗೆ ಮಾಡಿ…

Continue Reading
Advertisement
Weight Loss Tips
ಆರೋಗ್ಯ15 mins ago

Weight Loss Tips: ಸುಸ್ಥಿರವಾಗಿ ತೂಕ ಇಳಿಸಬೇಕೆ?; ಇಲ್ಲಿದೆ ದಾರಿ!

saddam hussain pocso case culprit hubli
ಕ್ರೈಂ16 mins ago

Physical Abuse: ದಲಿತ ಯುವತಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸದ್ದಾಂ ಹುಸೇನ್‌ ಕಾಲಿಗೆ ಗುಂಡೇಟು

Karnataka Weather Forecast
ಮಳೆ45 mins ago

Karnataka Weather: ಯೆಲ್ಲೋ ಅಲರ್ಟ್‌; ಬೆಂಗಳೂರು ಸೇರಿ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

Pakistan PM
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಪಾಕಿಸ್ತಾನ ಮೊದಲು ತನ್ನ ತಟ್ಟೆಯಲ್ಲಿ ಬಿದ್ದಿರುವ ನೊಣ ತೆಗೆಯಲಿ, ಪಾಠ ಕಲಿಯಲಿ

Tips For Healthy Skin
ಆರೋಗ್ಯ1 hour ago

Tips For Healthy Skin: ಕಡಲೆಹಿಟ್ಟೆಂಬ ಶತಮಾನಗಳ ಹಳೆಯ ಸೌಂದರ್ಯವರ್ಧಕ!

Dina Bhavishya
ಭವಿಷ್ಯ2 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Rain News
ಕರ್ನಾಟಕ7 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ನವ ವಿವಾಹಿತ ಸಾವು, ಕಾರ್ಮಿಕನ ಸ್ಥಿತಿ ಗಂಭೀರ

ಪ್ರಮುಖ ಸುದ್ದಿ8 hours ago

IPL 2024 : ಮುಂಬೈ ವಿರುದ್ಧ ಕೆಕೆಆರ್​ಗೆ 24 ರನ್​ ಗೆಲುವು; ಪಾಂಡ್ಯಾ ಬಳಗಕ್ಕೆ ಮತ್ತೊಂದು ಆಘಾತ

Nijjar Killing
ವಿದೇಶ8 hours ago

Nijjar Killing: ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯ ಆರೋಪಿಗಳನ್ನು ಬಂಧಿಸಿದ ಕೆನಡಾ ಪೊಲೀಸರು; ಯಾರಿವರು?

Rohith Vemula
ದೇಶ8 hours ago

Rohith Vemula: ರೋಹಿತ್‌ ವೇಮುಲ ದಲಿತನಲ್ಲ ಎಂದ ಪೊಲೀಸರು; ಮರು ತನಿಖೆಗೆ ‘ಕೈ’ ಸರ್ಕಾರ ಆದೇಶ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ15 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌