Kidney problem in people infected with coronavirus, risk guaranteed if ignoredkidney disease: ಕೊರೊನಾ ಕಾಣಿಸಿಕೊಂಡವರಲ್ಲಿ ಕಾಡುತ್ತಿದೆ ಕಿಡ್ನಿ ಸಮಸ್ಯೆ; ನಿರ್ಲಕ್ಷ್ಯ ಮಾಡಿದ್ರೆ ಅಪಾಯ ಗ್ಯಾರಂಟಿ - Vistara News

ಆರೋಗ್ಯ

kidney disease: ಕೊರೊನಾ ಕಾಣಿಸಿಕೊಂಡವರಲ್ಲಿ ಕಾಡುತ್ತಿದೆ ಕಿಡ್ನಿ ಸಮಸ್ಯೆ; ನಿರ್ಲಕ್ಷ್ಯ ಮಾಡಿದ್ರೆ ಅಪಾಯ ಗ್ಯಾರಂಟಿ

ಕೊರೊನಾ ಸೋಂಕು (Covid Virus) ಹರಡುವಿಕೆ ಕಡಿಮೆ ಆಯಿತು ಎಂದು ನಿಟ್ಟುಸಿರು ಬಿಡುವಾಗಲೇ ಮತ್ತೊಂದು ಸಮಸ್ಯೆ ಬೆನ್ನಿಗೆ ಬಿದ್ದಿದೆ. ಕೋವಿಡ್‌ ಸೋಂಕು ವಾಸಿಯಾದವರಲ್ಲಿ ಕಿಡ್ನಿ ಸಮಸ್ಯೆ (kidney disease) ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಎಚ್ಚರದಿಂದ ಇರುವಂತೆ ವೈದ್ಯರು ಸಲಹೆ ನೀಡಿದ್ದಾರೆ.

VISTARANEWS.COM


on

Kidney problem in people infected with coronavirus, risk guaranteed if ignored
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇತ್ತೀಚೆಗೆ ಜನರಲ್ಲಿ ಕಿಡ್ನಿ ಸಮಸ್ಯೆಗಳು (kidney disease) ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಕೋವಿಡ್‌ಗೆ ತುತ್ತಾದವರಲ್ಲಿ ಕಿಡ್ನಿ ಸಮಸ್ಯೆ ಹೆಚ್ಚಾಗಿದೆ ಎಂಬುದು ತಿಳಿದುಬಂದಿದೆ. ದೇಶದಲ್ಲಿ ಶೇ. 10ರಷ್ಟು ಜನರಿಗೆ ತೀವ್ರತರವಾದ ಕಿಡ್ನಿ ಸಮಸ್ಯೆ ಕಾಡುತ್ತಿದ್ದು, ಹಲವರು ಮೃತಪಡುತ್ತಿದ್ದಾರೆ.

ಬಹುತೇಕರಿಗೆ ಕಿಡ್ನಿ ಸಮಸ್ಯೆ ಇರುವುದೇ ತಿಳಿಯದಂತಾಗಿದೆ. ಕೊರೊನಾ ಮುನ್ನ ಇಷ್ಟೊಂದು ಪ್ರಮಾಣದಲ್ಲಿ ಕಿಡ್ನಿ ಸಮಸ್ಯೆ ಇರಲಿಲ್ಲ. ಆದರೆ ಕೊರೊನಾ ನಂತರ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತಿವೆ ಎಂಬ ವಿಷಯ ತಿಳಿದುಬಂದಿದೆ.

ಕಿಡ್ನಿ ಸಮಸ್ಯೆಯ ಲಕ್ಷಣಗಳು ಏನು?

ಹೆಚ್ಚು ಆಯಾಸವಾಗುವುದು, ನಿದ್ರೆಯ ಕೊರತೆಯುಂಟಾಗುವುದು, ತುರಿಕೆ ಶುರುವಾಗುವುದು ಹಾಗೂ ಮೂತ್ರದ ಬಣ್ಣದಲ್ಲಿ ಬದಲಾವಣೆ ಆಗುವುದನ್ನು ಗಮನಿಸಬಹುದು. ಮುಖ ಮತ್ತು ಕಾಲುಗಳಲ್ಲಿ ಊತ ಕಾಣಿಸಿಕೊಳ್ಳುವುದು ಸೇರಿ ಸ್ನಾಯು ಸೆಳೆತದೊಂದಿಗೆ ಉಸಿರಾಟದ ತೊಂದರೆಯುಂಟಾಗುತ್ತದೆ.

ಇದನ್ನೂ ಓದಿ: Lorry strike: ಬೆಂಗಳೂರಲ್ಲಿ ಮಾ. 17ರಿಂದ ಹಾಲು-ತರಕಾರಿ ಇಲ್ಲ? ಇದು ಲಾರಿ ಚಾಲಕರ ಮುಷ್ಕರ ಎಫೆಕ್ಟ್‌

ಮುಂಜಾಗ್ರತಾ ಕ್ರಮ ವಹಿಸುವುದು ಹೇಗೆ?

ಪ್ರತಿನಿತ್ಯ ನಿಮ್ಮ ದೇಹಕ್ಕೆ ಅಗತ್ಯವಾದಷ್ಟು ನೀರು ಸೇವಿಸಬೇಕು. ವೈದ್ಯರ ಸಲಹೆ ಇಲ್ಲದೆ ಪ್ರೋಟಿನ್‌ಯುಕ್ತ ಆಹಾರ ತಿನ್ನಬಾರದು. ಹೆಚ್ಚು ನೋವು ನಿವಾರಕ ಮಾತ್ರೆಗಳನ್ನು ಬಳಸಬಾರದು. ಧೂಮಪಾನ, ಮದ್ಯಪಾನದಿಂದ ದೂರವಿರಬೇಕು. ಮೂತ್ರ ಸಮಸ್ಯೆ ಕಂಡು ಬಂದಾಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಕಿಡ್ನಿ ಸಮಸ್ಯೆ ಕುರಿತು ಸ್ವಲ್ಪ ಯಾಮಾರಿದರೂ ದುಬಾರಿ ಬೆಲೆ ತೆರಬೇಕಾಗುತ್ತದೆ ಎಂದು ತಜ್ಞ ವೈದ್ಯರು ಎಚ್ಚರಿಕೆ ನೀಡುತ್ತಿದ್ದಾರೆ.

ರಾಜ್ಯದ ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಆರೋಗ್ಯ

Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

Bood Pressure: ಅತ್ಯಂತ ಅಪಾಯಕಾರಿ ಕಾಯಿಲೆಯಾಗಿ ಪ್ರಸ್ತುತ ರಕ್ತದೊತ್ತಡ ಕಾಣಿಸುತ್ತಿದೆ. ಇದನ್ನು ನಿಯಂತ್ರಿಸಲು ಆಹಾರ ಕ್ರಮದೊಂದಿಗೆ ಜೀವನ ಶೈಲಿಯನ್ನೂ ಬದಲಾಯಿಸಬೇಕಿದೆ. ಯಾವ ಆಹಾರಗಳನ್ನು, ತರಕಾರಿಗಳನ್ನು ಸೇವಿಸಿದರೆ ರಕ್ತದೊತ್ತಡ ಕಡಿಮೆ ಮಾಡಬಹುದು? ಈ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

Blood Pressure
Koo

ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿ ಎಲ್ಲರಲ್ಲೂ ಕಂಡು ಬರುತ್ತಿರುವ ಕಾಯಿಲೆ (Illness) ಮಧುಮೇಹ (diabetes) ಮತ್ತು ಅಧಿಕ ರಕ್ತದೊತ್ತಡ (Blood Pressure). ಇವೆರಡನ್ನೂ ನಿರ್ಲಕ್ಷಿಸಿದರೆ ಅಪಾಯ ಹೆಚ್ಚು. ಅದರಲ್ಲೂ ಅಧಿಕ ರಕ್ತದೊತ್ತಡವು (HIGH bp) ಸಾಮಾನ್ಯವಾಗಿ ನಾವು ಯೋಚಿಸುವುದಕ್ಕಿಂತ ಹೆಚ್ಚು ಅಪಾಯಕಾರಿಯಾಗಿರುತ್ತದೆ. ಅನಿಯಂತ್ರಿತ ರಕ್ತದೊತ್ತಡವು ಅಪಧಮನಿಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೃದ್ರೋಗದ ಅಪಾಯವನ್ನು ಹೆಚ್ಚಿಸುತ್ತದೆ.


ಇಂದಿನ ಜೀವನಶೈಲಿ, ಅನಾರೋಗ್ಯಕರ ಆಹಾರ ಪದ್ಧತಿ, ಅತಿಯಾದ ಒತ್ತಡ ಮತ್ತು ದೈಹಿಕ ನಿಷ್ಕ್ರಿಯತೆಯು ಅಧಿಕ ರಕ್ತದೊತ್ತಡಕ್ಕೆ ಮುಖ್ಯ ಕಾರಣವಾಗುತ್ತದೆ. ಆರೋಗ್ಯಕರ ರಕ್ತದೊತ್ತಡದ ಸಂಖ್ಯೆಯನ್ನು ಕಾಪಾಡಿಕೊಳ್ಳಲು ಸಮತೋಲಿತ ಆಹಾರದಿಂದ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಬಹುಮುಖ್ಯ. ಹಲವಾರು ಸರಳ ಬದಲಾವಣೆಗಳು ರಕ್ತದೊತ್ತಡವನ್ನು ನೈಸರ್ಗಿಕವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೂ ನೈಸರ್ಗಿಕವಾಗಿ ರಕ್ತದೊತ್ತಡವನ್ನು ಕಡಿಮೆ ಮಾಡಲು ಏನು ತಿನ್ನಬೇಕು ಎನ್ನುವುದು ಹೆಚ್ಚಿನವರಿಗೆ ತಿಳಿದಿಲ್ಲ.

ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿರುವ ತರಕಾರಿಗಳನ್ನು ನಮ್ಮ ದೈನಂದಿನ ಆಹಾರಕ್ರಮದಲ್ಲಿ ಸೇರಿಸಿಕೊಳ್ಳುವುದರಿಂದ ರಕ್ತದೊತ್ತಡದ ನಿಯಂತ್ರಿಸಿಕೊಳ್ಳಬಹುದು. ಅವುಗಳು ಯಾವುದು ಗೊತ್ತೇ?


ಬೀಟ್ರೂಟ್

ಅಧ್ಯಯನಗಳ ಪ್ರಕಾರ ಬೀಟ್ರೂಟ್ ನಲ್ಲಿರುವ ನೈಟ್ರೇಟ್ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೀಟ್ರೂಟ್ ರಸವನ್ನು ಕುಡಿಯುವುದು ಅಥವಾ ಸಲಾಡ್, ಸೂಪ್ ಅಥವಾ ಮೇಲೋಗರಗಳಿಗೆ ಸೇರಿಸುವುದು ರಕ್ತದೊತ್ತಡವನ್ನು ನಿಯಂತ್ರಿಸಲು ಪ್ರಯೋಜನಕಾರಿಯಾಗಿದೆ.


ಹಸಿರು ಸೊಪ್ಪು ತರಕಾರಿಗಳು

ಹಸಿರು ಸೊಪ್ಪು ತರಕಾರಿಗಳು ಹೆಚ್ಚು ಪೌಷ್ಟಿಕಾಂಶವನ್ನು ಹೊಂದಿವೆ. ಸೊಪ್ಪು ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಒಟ್ಟಾರೆ ಹೃದಯರಕ್ತನಾಳದ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆ ತೋರಿಸಿದೆ. ಪಾಲಕ್, ಹಸಿರು ಬಾಳೆ ಮತ್ತು ಸಾಸಿವೆ ಗ್ರೀನ್ಸ್ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.


ಬೆಳ್ಳುಳ್ಳಿ

ಆಂಟಿಫಂಗಲ್ ಮತ್ತು ಆ್ಯಂಟಿಬಯೋಟಿಕ್ ಗುಣಗಳಿರುವ ಬೆಳ್ಳುಳ್ಳಿ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬೆಳ್ಳುಳ್ಳಿ ಕೂಡ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ.


ಸಿಹಿ ಆಲೂಗಡ್ಡೆ

ಫೈಬರ್, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಹೇರಳವಾಗಿರುವ ಸಿಹಿ ಆಲೂಗಡ್ಡೆ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.


ಬ್ರೊಕೊಲಿ

ಬ್ರೊಕೊಲಿಯನ್ನು ಆಹಾರದಲ್ಲಿ ಸೇರಿಸುವುದು ಅಧಿಕ ಬಿಪಿಯನ್ನು ನಿಯಂತ್ರಿಸಲು ಪರಿಣಾಮಕಾರಿ ಮಾರ್ಗವಾಗಿದೆ. ಕೋಸುಗಡ್ಡೆಯು ಉತ್ಕರ್ಷಣ ನಿರೋಧಕಗಳು, ವಿಟಮಿನ್ ಸಿ, ಪೊಟ್ಯಾಸಿಯಮ್, ವಿಟಮಿನ್ ಕೆ, ಪ್ರೋಟೀನ್ ಮತ್ತು ಫೈಬರ್‌ನಿಂದ ಕೂಡಿದೆ.


ಆಲೂಗಡ್ಡೆ

ಆಲೂಗಡ್ಡೆ ಪೊಟ್ಯಾಸಿಯಮ್‌ನ ರಕ್ತದೊತ್ತಡ ನಿಯಂತ್ರಿಸಲು ಉತ್ತಮ ಮಾರ್ಗವಾಗಿದೆ. ಆಲೂಗಡ್ಡೆಯನ್ನು ಆಹಾರದಲ್ಲಿ ಹಲವಾರು ವಿಧದಲ್ಲಿ ಸೇರಿಸಿ ರಕ್ತದೊತ್ತಡವನ್ನು ದೂರವಿಡಬಹುದು.


ಇದನ್ನೂ ಓದಿ: Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

ಕ್ಯಾರೆಟ್

ದೃಷ್ಟಿಯ ಸಮಸ್ಯೆಯನ್ನು ನಿವಾರಿಸುವ ಕ್ಯಾರೆಟ್ ಹಲವಾರು ಪ್ರಯೋಜನಕಾರಿ ಸಸ್ಯ-ಆಧಾರಿತ ಸಂಯುಕ್ತಗಳನ್ನು ಹೊಂದಿರುತ್ತದೆ. ಇದು ನಿಯಂತ್ರಿತ ರಕ್ತದೊತ್ತಡ ಸೇರಿದಂತೆ ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.
ಅಧಿಕ ರಕ್ತದೊತ್ತಡ ಹೊಂದಿದ್ದರೆ ಇದಕ್ಕೆ ಕೇವಲ ಆಹಾರ ಮಾತ್ರ ಸಹಾಯ ಮಾಡುವುದಿಲ್ಲ. ದೈಹಿಕವಾಗಿ ಸಕ್ರಿಯವಾಗಿರುವುದು ಕೂಡ ಅಷ್ಟೇ ಅಗತ್ಯವಾಗಿದೆ. ಉಪ್ಪು ಸೇವನೆ, ಕೆಫೀನ್ ಅನ್ನು ಕಡಿಮೆ ಮಾಡುವುದು ಮತ್ತು ಒತ್ತಡದ ಮಟ್ಟವನ್ನು ನಿರ್ವಹಿಸುವುದು ಕೂಡ ಅತ್ಯಗತ್ಯ. ದೀರ್ಘಕಾಲದ ಅಧಿಕ ರಕ್ತದೊತ್ತಡ ಹೊಂದಿದ್ದರೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆಯುವುದು ಮುಖ್ಯ.

Continue Reading

ಆರೋಗ್ಯ

Summer Health Tips: ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

ವಿಟಮಿನ್‌ ಸಿ ಅಂಶವನ್ನು ಹೇರಳವಾಗಿ ತುಂಬಿಕೊಂಡಿರುವ ಬೆಟ್ಟದ ನೆಲ್ಲಿಕಾಯಿಗಳನ್ನು ಹಲವು ರೀತಿಯಲ್ಲಿ ಸೇವಿಸುವುದರಿಂದ ಬಿಸಿಲ ದಿನಗಳಲ್ಲಿ ದೇಹ ನಿತ್ರಾಣಗೊಳ್ಳದಂತೆ ಮತ್ತು ರೋಗನಿರೋಧಕ ಶಕ್ತಿ ಕುಂಠಿತವಾಗದಂತೆ ಕಾಪಾಡಿಕೊಳ್ಳಬಹುದು. ಬಿಸಿಲಿನ ದಿನಗಳಿಗೆ ಪೂರಕವಾಗುವಂತೆ ನೆಲ್ಲಿಕಾಯಿಯನ್ನು ಬಳಸುವುದು ಹೇಗೆ? ಈ (summer Health Tips) ಲೇಖನ ಓದಿ.

VISTARANEWS.COM


on

Summer Health Tips
Koo

ದೇಹದ ಪ್ರತಿರೋಧಕ ಶಕ್ತಿಯನ್ನು ಕುಂದಿಸುವಂಥ ಹವಾಮಾನ ಯಾವುದೇ ದಿನಗಳಲ್ಲೂ ಎದುರಾಗಬಹುದು. ಅದಕ್ಕೇನು ಮಳೆಯೇ ಬೇಕು. ಚಳಿಯೇ ಇರಬೇಕು ಎಂದಿಲ್ಲ. ಈ ಬಿರು ಬೇಸಿಗೆಯಲ್ಲೂ ಕಾಟ ಕೊಡುವ ವೈರಸ್‌ಗಳು ತಪ್ಪುವುದಿಲ್ಲ. ಇದಕ್ಕಾಗಿ ಭದ್ರವಾದ ಪ್ರತಿರೋಧಕ ವ್ಯವಸ್ಥೆಯನ್ನ ನಮ್ಮ ದೇಹ ಹೊಂದಬೇಕಾಗುತ್ತದೆ. ಅದಿಲ್ಲದಿದ್ದರೆ ಬಿಸಿಲಾಘಾತ, ನಿರ್ಜಲೀಕರಣದಿಂದಲೂ ತಪ್ಪಿಸಿಕೊಳ್ಳುವುದಕ್ಕೆ ದೇಹ ಸೋಲುತ್ತದೆ. ಇಂಥ ದಿನಗಳಲ್ಲಿ ನಮ್ಮ ನೆರವಿಗೆ ಬರುವುದು ಹುಳಿ-ಸಿಹಿಯ ಬೆಟ್ಟದ ನೆಲ್ಲಿಕಾಯಿ. ವಿಟಮಿನ್‌ ಸಿ ಅಂಶವನ್ನು ಹೇರಳವಾಗಿ ತುಂಬಿಕೊಂಡಿರುವ ಈ ಪುಟ್ಟ ಕಾಯಿಗಳನ್ನು ಹಲವು ರೀತಿಯಲ್ಲಿ ಸೇವಿಸುವುದರಿಂದ ಬಿಸಿಲ ದಿನಗಳಲ್ಲಿ ದೇಹ ನಿತ್ರಾಣಗೊಳ್ಳದಂತೆ ಮತ್ತು ರೋಗನಿರೋಧಕ ಶಕ್ತಿ ಕುಂಠಿತವಾಗದಂತೆ (summer Health Tips) ಕಾಪಾಡಿಕೊಳ್ಳಬಹುದು. ಬಿಸಿಲಿನ ದಿನಗಳಿಗೆ ಪೂರಕವಾಗುವಂತೆ ನೆಲ್ಲಿಕಾಯಿಯನ್ನು ಬಳಸುವುದು ಹೇಗೆ?

pudina gooseberry juice

ಪುದೀನಾ-ನೆಲ್ಲಿ ಪಾನಕ

ವಿಟಮಿನ್‌ ಸಿ, ಇ ಮತ್ತು ಎ, ನಾರು ಹಾಗೂ ವಿಟಮಿನ್‌ ಬಿ1 ಸತ್ವಗಳನ್ನು ಈ ಪಾನಕ ಭರಪೂರ ತುಂಬಿಕೊಂಡಿರುತ್ತದೆ. ಬೇಸಿಗೆಯಲ್ಲಿ ಕಾಡುವ ಜೀರ್ಣಾಂಗಗಳ ಸಮಸ್ಯೆಯಿಂದ ಮುಕ್ತಿ ನೀಡುವಂಥ ಪೇಯವಿದು. ಬೆಟ್ಟದ ನೆಲ್ಲಿಕಾಯಿಗೆ ಚಿಟಿಕೆ ಉಪ್ಪು ಮತ್ತು ಪುದೀನಾ ಎಲೆಗಳನ್ನು ಸೇರಿಸಿ ರುಬ್ಬಿ, ರಸ ತೆಗೆಯಿರಿ. ಇದಕ್ಕೆ ರುಚಿಗೆ ತಕ್ಕಷ್ಟು ಬೆಲ್ಲ ಸೇರಿಸಿ ಅಥವಾ ಹಾಗೆಯೇ ಕುಡಿಯುವವರು ಅಂತೆಯೇ ಕುಡಿಯಬಹುದು.

ನೆಲ್ಲಿ ಸ್ಮೂದಿ

ಇದಕ್ಕಾಗಿ ಮೊಸರು, ಬಾಳೆಹಣ್ಣು, ಕೊಂಚ ಪಾಲಕ್‌ ಎಲೆಗಳು ಮತ್ತು ನೆಲ್ಲಿಕಾಯಿಯನ್ನು ಬ್ಲೆಂಡರ್‌ಗೆ ಹಾಕಿ ತಿರುಗಿಸಿ. ಇದರನ್ನು ಸೋಸಬಾರದು. ಎಲ್ಲ ನಾರಿನಂಶ ಇರುವಂತೆಯೇ ಸೇವಿಸಬೇಕು. ಇದರಿಂದ ಬಾಳೆಹಣ್ಣಿನಲ್ಲಿರುವ ಶರ್ಕರಪಿಷ್ಟಗಳು, ಮೊಸರಿನಲ್ಲಿರುವ ಕೊಬ್ಬು ಮತ್ತು ಪ್ರೊಬಯಾಟಿಕ್‌ ಅಂಶಗಳು, ಪಾಲಕ್‌ನಲ್ಲಿರುವ ಖನಿಜಗಳು ಎಲ್ಲವೂ ನೆಲ್ಲಿ ಕಾಯಿಯ ಜೊತೆಗೆ ಹೊಟ್ಟೆ ಸೇರುತ್ತವೆ. ತೂಕ ಇಳಿಸುವವರು ಇದನ್ನು ಬೆಳಗಿನ ಉಪಹಾರವಾಗಿಯೂ ಸೇವಿಸಬಹುದು.

ನೆಲ್ಲಿ ಸಲಾಡ್‌

ಬೇಸಿಗೆಯಲ್ಲಿ ತಂಪಾದ ಸಲಾಡ್‌ಗಳು ಎಲ್ಲರಿಗೂ ಇಷ್ಟವಾಗುವಂಥವು. ಅದರಲ್ಲೂ ಹುಳಿ-ಸಿಹಿ ರುಚಿಯ ಸಲಾಡ್‌ಗಳು ಮತ್ತೂ ಇಷ್ಟವಾಗುತ್ತವೆ. ಇದಕ್ಕಾಗಿ ನೆಲ್ಲಿಕಾಯಿಯ ಜೊತೆ ಸೌತೇಕಾಯಿ, ದಾಳಿಂಬೆ, ಸೇಬು ಮತ್ತು ಮೊಳಕೆ ಬರಿಸಿದ ಹೆಸರು ಕಾಳುಗಳನ್ನು ತೆಗೆದುಕೊಳ್ಳಿ ಇದಕ್ಕೆ ರುಚಿಗೆ ತಕ್ಕಷ್ಟು ಉಪ್ಪು, ಬೇಕಿದ್ದರೆ ಕೊಂಚ ಕಾಳುಮೆಣಸಿನ ಪುಡಿ ಸೇರಿಸಿ. ನಿಮ್ಮ ರುಚಿಕರ ಸಲಾಡ್‌ ಸಿದ್ಧ.

Image Of Gooseberry Benefits

ನೆಲ್ಲಿ ಪಾಪ್ಸಿಕಲ್‌

ತಂಪಾದ ಏನನ್ನು ಕೊಟ್ಟರೂ ಕೈಯೊಡ್ಡುವಂಥ ಸ್ಥಿತಿ ಈ ಬೇಸಿಗೆಯಲ್ಲಿ. ಅದರಲ್ಲೂ ಫ್ರೋಜನ್‌ ತಿಂಡಿಗಳು ಮತ್ತೂ ಇಷ್ಟವಾಗುತ್ತವೆ. ಪಾಪ್ಸಿಕಲ್‌ ರೂಪದಲ್ಲಿ ನಮಗೆ ಪ್ರಿಯವಾದ್ದನ್ನು ಸವಿಯುವುದು ಬೇರೆಯದೇ ಸೊಗಸನ್ನು ನೀಡುತ್ತದೆ. ನೆಲ್ಲಿಕಾಯನ್ನು ರುಬ್ಬಿ ರಸ ತೆಗೆಯಿರಿ. ಇದಕ್ಕೆ ಕೊಂಚ ಜೇನುತುಪ್ಪ ಮತ್ತು ಸಿಹಿ ಮೊಸರು ಬೆರೆಸಿ. ಈ ಮಿಶ್ರಣವನ್ನು ಪಾಪ್ಸಿಕಲ್‌ ಅಚ್ಚಿಗೆ ಸುರಿಯಿರಿ. ಫ್ರೀಜ್‌ ಮಾಡಿ ತೆಗೆದು ಬಾಯಿ ಚಪ್ಪರಿಸಿದರಾಯಿತು.

ಡಿಟಾಕ್ಸ್‌ ನೀರು

ಬರೀ ನೀರು ಕುಡಿಯುವುದಕ್ಕೆ ಸಾಧ್ಯವಿಲ್ಲ ಎನಿಸಿದರೆ, ಐದು ಲೀ ಪಾತ್ರೆಯಲ್ಲಿ ಹತ್ತಿಪ್ಪತ್ತು ಪುದೀನಾ ಎಲೆಗಳು, ಸೌತೆಕಾಯಿ ಗಾಲಿಗಳು ಮತ್ತು ನೆಲ್ಲಿಯ ತುಂಡುಗಳನ್ನು ಧಾರಾಳವಾಗಿ ಸೇರಿಸಿ. ಒಂದೆರಡು ತಾಸು ಹಾಗೆಯೇ ಬಿಡಿ. ನಂತರ ದಿನವಿಡೀ ಈ ನೀರು ಕುಡಿದು ಸಂತೃಪ್ತಿಯಿಂದಿರಿ. ಇದರಿಂದ ಜೀರ್ಣಾಂಗಗಳ ಕ್ಷಮತೆ ಹೆಚ್ಚುತ್ತದೆ.

indian gooseberry

ನೆಲ್ಲಿ ಐಸ್‌ ಟೀ

ಆರೆಂಟು ಪುದೀನಾ ಚಿಗುರುಗಳ ಜೊತೆಗೆ ನೆಲ್ಲಿ ಕಾಯಿಯ ತುಣುಕುಗಳನ್ನು ನೀರಿಗೆ ಹಾಕಿ ಚೆನ್ನಾಗಿ ಕುದಿಸಿ. ಇದು ಆರಿದ ಮೇಲೆ ಕೊಂಚ ಜೇನುತುಪ್ಪ ಸೇರಿಸಿ, ಫ್ರಿಜ್‌ನಲ್ಲಿಡಿ. ಬೇಕಾದಾಗ ಈ ಈ ಪೇಯವನ್ನು ತೆಗೆದು, ಕುಡಿದು ಸಂಭ್ರಮಿಸಿ. ನೆಲ್ಲಿಕಾಯಿಯನ್ನು ಅತಿಯಾಗಿ ಸೇವಿಸುವುದೂ ಸಮಸ್ಯೆಗಳನ್ನು ತರಬಹುದು. ಈಗಾಗಲೇ ತೂಕ ಕಡಿಮೆ ಇರುವವರು ಇನ್ನೂ ತೂಕ ಇಳಿದ ನಿದಾರ್ಶನಗಳಿವೆ. ಹಾಗಾಗಿ ತೂಕ ಇಳಿಸುವವರು ಇದನ್ನು ಸೇವಿಸಿದಷ್ಟು, ಕಡಿಮೆ ತೂಕದವರಿಗೆ ಬೇಕಾಗುವುದಿಲ್ಲ.

ಇದನ್ನೂ ಓದಿ: Weight Loss Tips: ಸುಸ್ಥಿರವಾಗಿ ತೂಕ ಇಳಿಸಬೇಕೆ?; ಇಲ್ಲಿದೆ ದಾರಿ!

Continue Reading

ಆರೋಗ್ಯ

Drinking Water Before Meals: ಊಟಕ್ಕಿಂತ ಎಷ್ಟು ಮೊದಲು ನೀರು ಕುಡಿದರೆ ಒಳ್ಳೆಯದು?

ನೀರು ಶರೀರಕ್ಕೆ ದೊರೆತಷ್ಟೂ ಒಳ್ಳೆಯದು. ಹಾಗೆಂದು ಹೊಟ್ಟೆ ತುಂಬಾ ನೀರು ಕುಡಿದು ಊಟ ಮಾಡಬಹುದೇ? ಆಹಾರ ಸೇವಿಸಿದ ತಕ್ಷಣ ಚೊಂಬುಗಟ್ಟಲೆ ನೀರು ಕುಡಿಯುವ (Drinking Water) ಅಭ್ಯಾಸ ಸರಿಯೇ? ಇಂಥ ಹಲವು ಪ್ರಶ್ನೆಗಳು ನಮ್ಮ ಮನದಲ್ಲಿರಬಹುದು. ಒಂದಿಷ್ಟು ಪ್ರಶ್ನೆಗಳಿಗೆ (Drinking water before meals) ಇಲ್ಲಿದೆ ಉತ್ತರ.

VISTARANEWS.COM


on

Drinking Water Before Meals
Koo

ಬೇಸಿಗೆಯ ಬಿರುಸಿಗೆ ದಿನವಿಡೀ ನೀರು (Health Tips Kannada) ಕುಡಿಯುತ್ತಲೇ ಇರುತ್ತೇವೆ. ಬಿಸಿಲಿನ ದಿನಗಳಲ್ಲಿ ಆರೋಗ್ಯವನ್ನು ಕ್ಷೇಮವಾಗಿ ಇರಿಸಿಕೊಳ್ಳಲು ನೀರು ಕುಡಿಯುವುದು (Drinking Water) ಅಗತ್ಯ. ಆದರೆ ಕುಡಿಯುವ ಸಮಯ ಯಾವುದು ಎಂಬುದು ಕೆಲವೊಮ್ಮೆ ಮುಖ್ಯವಾಗುತ್ತದೆ. ಅಂದರೆ ದಿನವಿಡೀ ಗುಟುಕರಿಸುತ್ತಲೇ ಇರುತ್ತೇವೆ ಎಂಬುದು ಹೌದಾದರೂ, ಊಟಕ್ಕಿಂತ ಎಷ್ಟು ಮೊದಲು-ನಂತರ ಕುಡಿಯಬಹುದು, ಊಟ ಮಾಡುವಾಗಲೂ ಬಾಯಾರಿಕೆ ಎನಿಸಿದರೆ ಆಗೇನು ಮಾಡಬಹುದೆಂಬ ಅನುಮಾನ ಕೆಲವರಿಗಾದರೂ ಬಂದೀತು. ಇನ್ನೇನು ಊಟದ ಹೊತ್ತು ಎನ್ನುವಾಗ ಚೆನ್ನಾಗಿ ನೀರು ಕುಡಿದರೆ ಪಚನಕ್ರಿಯೆಗೆ ಅಡ್ಡಿಯಾಗುತ್ತದೆ. ಇದರಿಂದ ಸತ್ವಗಳನ್ನು ಸರಿಯಾಗಿ ಹೀರಿಕೊಳ್ಳಲಾಗದು ದೇಹಕ್ಕೆ. ಹಾಗಾದರೆ ಬೇಸಿಗೆಯಾದರೂ ನೀರು ಕುಡಿಯುವ ಹೊತ್ತುಗಳನ್ನು ನಿರ್ವಹಿಸುವುದು ಹೇಗೆ? ಈ ಮೂಲಕ ಜೀರ್ಣಕ್ರಿಯೆ ಹೆಚ್ಚು-ಕಡಿಮೆ ಆಗದಂತೆ ಕಾಪಾಡಿಕೊಳ್ಳುವುದು ಹೇಗೆ?

drinking water

ಊಟದ ಮುನ್ನ

ಆಹಾರ ತೆಗೆದುಕೊಳ್ಳುವ ಮುನ್ನ ನೀರು ಕುಡಿಯುವ ಬಗ್ಗೆಯೂ ತಜ್ಞರಲ್ಲಿ ಒಮ್ಮತ ಇದೆ. ಬೆಳಗಿನ ತಿಂಡಿಯ ವಿಷಯಕ್ಕೆ ಬಂದರೆ, ಎದ್ದ ತಕ್ಷಣ ಒಂದೆರಡು ಗ್ಲಾಸ್‌ ನೀರು ಕುಡಿಯುವುದು ಸರಿಯಾದ ಕ್ರಮ. ಕೇವಲ ನೀರೆಂದಲ್ಲ, ಡಿಟಾಕ್ಸ್‌ ಪೇಯಗಳು, ಬಿಸಿ-ತಣ್ಣೀರು ಯಾವುದಾದರೂ ಸರಿ. ಇದನ್ನು ಕುಡಿದ ನಂತರ 45 ನಿಮಿಷಗಳು ಬಿಟ್ಟು ಉಪಾಹಾರ ಸೇವಿಸುವುದು ಒಳ್ಳೆಯದು. ಇದರಿಂದ ಜೀರ್ಣಕ್ರಿಯೆಗೆ ಸರಿಯಾದ ವಾತಾವರಣ ಹೊಟ್ಟೆಯಲ್ಲಿ ನಿರ್ಮಾಣ ಆಗುತ್ತದೆ. ಸತ್ವಗಳನ್ನು ಹೀರಿಕೊಳ್ಳಲು, ಅದನ್ನು ಜೀರ್ಣಿಸಿಕೊಳ್ಳಲು ಪಚನಾಂಗಗಳಿಗೆ ನೆರವಾಗುತ್ತದೆ. ಉಳಿದೆರಡು ಹೊತ್ತಿನ ಊಟಗಳ ವಿಷಯದಲ್ಲಿ ಸ್ವಲ್ಪ ವ್ಯತ್ಯಾಸ ಬೇಕು. 30 ನಿಮಿಗಳ ಮೊದಲು ಬೇಕಾದಷ್ಟು ನೀರು ಕುಡಿಯುವುದು ಹಲವು ರೀತಿಯಲ್ಲಿ ಒಳ್ಳೆಯದು. ಮೊದಲನೇದಾಗಿ, ಊಟ ಮಾಡುವ ಮುನ್ನ ನೀರು ಕುಡಿಯುವುದರಿಂದ ಜೀರ್ಣಕ್ರಿಯೆಗೆ ತೊಂದರೆಯಾಗುವುದು ತಪ್ಪುತ್ತದೆ. ಎರಡನೇದಾಗಿ, ಹೊಟ್ಟೆ ಅತಿಯಾಗಿ ಹಸಿದಿದ್ದರೆ ಸಿಕ್ಕಾಪಟ್ಟೆ ತಿನ್ನುವಂತಾಗುತ್ತದೆ. ಇದೀಗ ಹೊಟ್ಟೆ ಅತಿಯಾಗಿ ಹಸಿದಂತೆಯೂ ಅನಿಸದೆ, ಅಗತ್ಯಕ್ಕಿಂತ ಹೆಚ್ಚು ತಿನ್ನುವುದರ ಮೇಲೆ ಕಡಿವಾಣ ಹಾಕಿದಂತಾಗುತ್ತದೆ. ಹಾಗಾಗಿ ಊಟಕ್ಕಿಂತ 30 ನಿಮಿಷ ಮುನ್ನ ಬೇಕಾದಷ್ಟು ನೀರು ಕುಡಿಯುವುದು ಸರಿಯಾದ ಕ್ರಮ.

ಊಟ ಮಾಡುವಾಗ

ತಿಂಡಿ-ಊಟ ಮಾಡುವಾಗ ನೀರಿಟ್ಟುಕೊಳ್ಳುವುದು ಬಹಳಷ್ಟು ಜನರ ಪದ್ಧತಿ. ʻನೀರಿಲ್ಲದಿದ್ದರೆ ತುತ್ತು ಗಂಟಲಲ್ಲಿ ಇಳಿಯುವುದೇ ಇಲ್ಲʼ ಎನ್ನುವವರೂ ಇದ್ದಾರೆ. ಊಟ ಮಾಡುವಾಗ ನೀರು ಕುಡಿಯುವುದು ತಪ್ಪಲ್ಲದಿದ್ದರೂ, ಅತಿಯಾಗಿ ಕುಡಿಯುವುದು ಸರಿಯಲ್ಲ. ಹಾಗಾಗಿ ಬೇಕಾದಾಗ ಒಂದೊಂದೇ ಗುಟುಕು ಕುಡಿಯುವುದು ಒಳ್ಳೆಯದು. ಊಟದ ನಡುವೆ ಅಲ್ಪ ಪ್ರಮಾಣದ ನೀರು ಕುಡಿಯುವುದು ಒಳ್ಳೆಯದೇ ಎನ್ನುತ್ತಾರೆ ಕೆಲವು ಪೋಷಕಾಂಶ ತಜ್ಞರು. ಇದರಿಂದ ಆಹಾರವನ್ನು ನುಚ್ಚುನುರಿ ಮಾಡುವುದಕ್ಕೆ, ಅನ್ನನಾಳದಲ್ಲಿ ಸರಾಗವಾಗಿ ಕೆಳಗಿಳಿಯುವುದಕ್ಕೆ ಅನುಕೂಲವಾಗುತ್ತದೆ. ಈ ಮೂಲಕ ಪಚನವಾಗುವುದಕ್ಕೂ ಸುಲಭವಾಗುತ್ತದೆ. ಆದರೆ ಲೋಟಗಟ್ಟಲೆ ಕುಡಿಯುವ ಬದಲು ಸ್ವಲ್ಪ ಕುಡಿದರೆ ಒಳ್ಳೆಯದು.

drink water

ಊಟದ ನಂತರ

ಊಟವಾದ ನಂತರ ಸಿಕ್ಕಾಪಟ್ಟೆ ನೀರು ಕುಡಿಯುವ ಅಭ್ಯಾಸವಿದ್ದರೆ, ಅದನ್ನು ದೂರ ಮಾಡುವುದು ಕ್ಷೇಮ. ಕಾರಣ, ಆಹಾರ ಹೊಟ್ಟೆ ಸೇರಿದ ಕೂಡಲೆ ಚೊಂಬುಗಟ್ಟಲೆ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಏರುಪೇರಾಗುತ್ತದೆ. ಅಜೀರ್ಣ, ಹೊಟ್ಟೆಯುಬ್ಬರದಂಥ ತೊಂದರೆಗಳು ಕಾಣಬಹುದು. ಬದಲಿಗೆ, ಆಹಾರ ಸೇವನೆಯ ನಂತರ ಅಗತ್ಯವಿರುವಷ್ಟೇ ನೀರು ಕುಡಿಯಿರಿ. ಅಲ್ಲಿಂದ 30-60 ನಿಮಿಷಗಳ ವಿರಾಮ ನೀಡಿ. ಆನಂತರ ಬೇಕಾದಷ್ಟು ನೀರು ಕುಡಿಯಿರಿ. ಇದರಿಂದ ಪಚನಕ್ರಿಯೆ ಸುಲಲಿತವಾಗಿ ನೆರವೇರುತ್ತದೆ. ಊಟದ ನಂತರ ಅತಿಯಾಗಿ ನೀರು ಕುಡಿಯುವುದು ಸಲ್ಲದಿದ್ದರೂ, ನೀರನ್ನಂತೂ ಕುಡಿಯಲೇ ಬೇಕು. ಇದರಿಂದ ಹೊಟ್ಟೆ ಚೆನ್ನಾಗಿ ತುಂಬಿದ ಅನುಭವ ದೊರೆಯುತ್ತದೆ. ಹಾಗಾಗಿ ನಡುವೆ ಚುಟುಕು ತಿನಿಸುಗಳನ್ನು ಬಾಯಾಡುವ ಬಯಕೆಗೆ ಕಡಿವಾಣ ಹಾಕುವುದು ಸುಲಭವಾಗುತ್ತದೆ. ಆದರೆ ಆಹಾರದ ನಂತರ ಔಷಧ ತೆಗೆದುಕೊಳ್ಳುವುದಿದ್ದರೆ, ಯಾವುದಾದರೂ ಆರೋಗ್ಯ ಸಮಸ್ಯೆಗಳಿದ್ದರೆ ಅವರ ಅಗತ್ಯಕ್ಕೆ ತಕ್ಕಂತೆ ನೀರು ಕುಡಿಯುವುದು ಸೂಕ್ತ.

ಇದನ್ನೂ ಓದಿ: Weight Loss Tips: ಸುಸ್ಥಿರವಾಗಿ ತೂಕ ಇಳಿಸಬೇಕೆ?; ಇಲ್ಲಿದೆ ದಾರಿ!

8-8 ನಿಯಮ

ಬೇಸಿಗೆಯಲ್ಲಿ ಮಾತ್ರವೇ ಅಲ್ಲ, ಎಲ್ಲಾ ದಿನಗಳಲ್ಲೂ 8 ಔನ್ಸ್‌ ಗ್ಲಾಸಿನ ತುಂಬಾ 8 ಬಾರಿ ನೀರು ಕುಡಿಯಲೇ ಬೇಕು ಎನ್ನುತ್ತಾರೆ ಆಹಾರ ತಜ್ಞರು. ದೇಹಕ್ಕೆ ಸಾಕಷ್ಟು ನೀರುಣಿಸುವುದರಿಂದ ಜೀರ್ಣಾಂಗಗಲ್ಲಿರುವ ಬ್ಯಾಕ್ಟೀರಿಯಗಳ ಸಮತೋಲನವನ್ನು ಕಾಪಾಡಿಕೊಳ್ಳಬಹುದು. ಇದರಿಂದ ಜೀರ್ಣಕ್ರಿಯೆ ಸರಾಗ ಆಗಿ, ಮಲಬದ್ಧತೆ ದೂರವಾಗಿ, ದೇಹ-ಮನಸ್ಸುಗಳಿಗೆ ಚೈತನ್ಯ ದೊರೆತು, ಪ್ರತಿರೋಧಕ ಶಕ್ತಿ ಪ್ರಬಲವಾಗುತ್ತದೆ. ಹಾಗಾಗಿ ಸಾಕಷ್ಟು ನೀರು ಕುಡಿಯಿರಿ.

Continue Reading

ಆರೋಗ್ಯ

World Laughter Day 2024: ಇಂದು ವಿಶ್ವ ನಗುವಿನ ದಿನ; ನಗುನಗುತ ಬಾಳೋಣ

ನಗುವುದರಿಂದ ಆರೋಗ್ಯ ಎಷ್ಟೊಂದು ಲಾಭವಿದೆ ಗೊತ್ತೇ. ಇದನ್ನು ತಿಳಿಸಲೆಂದೇ ವಿಶ್ವದಾದ್ಯಂತ ಮೇ ತಿಂಗಳ ಮೊದಲ ಭಾನುವಾರ ವಿಶ್ವ ನಗುವಿನ ದಿನವನ್ನು (Laughter Day 2024) ಆಚರಿಸಲಾಗುತ್ತದೆ.

VISTARANEWS.COM


on

By

World Laughter Day
Koo

ಎಲ್ಲ ಕಾಯಿಲೆಗಳನ್ನು (illness) ದೂರ ಮಾಡುವ ಶಕ್ತಿ ನಗುವಿಗೆ ಇದೆ. ನಗು ನಮ್ಮ ದೇಹಾರೋಗ್ಯವನ್ನು ಮಾತ್ರವಲ್ಲ ಮನಸ್ಸಿನ ಆರೋಗ್ಯವನ್ನು (mental health) ಉತ್ತಮ ಗೊಳಿಸುತ್ತದೆ. ಹೀಗಾಗಿಯೇ ನಗುವಿನ ಪ್ರಾಮುಖ್ಯತೆಯನ್ನು ಸಾರಲು ವಿಶ್ವದಾದ್ಯಂತ ಮೇ (may) ತಿಂಗಳ ಮೊದಲ ಭಾನುವಾರ ವಿಶ್ವ ನಗುವಿನ ದಿನವನ್ನು (World Laughter Day) ಆಚರಿಸಲಾಗುತ್ತದೆ.


ಮೇ 5ರಂದು ಈ ಬಾರಿ ವಿಶ್ವ ನಗುವಿನ ದಿನವನ್ನು ಆಚರಿಸಲಾಗುತ್ತಿದೆ. ಈ ದಿನವು ಬಹಳಷ್ಟು ಪ್ರಾಮುಖ್ಯತೆಯನ್ನು ಹೊಂದಿದೆ. ಯಾಕೆಂದರೆ ಇದು ನಗುವಿನ ಅನೇಕ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವ ಗುರಿಯನ್ನು ಹೊಂದಿದೆ.

ವಿಶ್ವ ನಗು ದಿನವನ್ನು ಮೊದಲ ಬಾರಿಗೆ 1998ರಲ್ಲಿ ಡಾ. ಮದನ್ ಕಟಾರಿಯಾ ಅವರು ಆಚರಿಸಬೇಕು ಎನ್ನುವುದನ್ನು ಪ್ರಸ್ತಾಪಿಸಿದರು. ಇದರ ಮುಖ್ಯ ಉದ್ದೇಶ ಜಾಗತಿಕ ಏಕತೆ ಮತ್ತು ಸ್ನೇಹದ ಭಾವವನ್ನು ಬೆಳೆಸುವುದಾಗಿತ್ತು. ಆದರೆ ಇದು ಮಾನಸಿಕ ಒತ್ತಡವನ್ನು ಕಡಿಮೆ ಮಾಡುವುದರಿಂದ ಮಾನಸಿಕ ಮತ್ತು ಭಾವನಾತ್ಮಕ ಆರೋಗ್ಯವನ್ನು ಸುಧಾರಿಸಲು ಪ್ರಯೋಜನಕಾರಿಯಾಗಿದೆ ಎಂಬುದು ಸಂಶೋಧನೆಗಳಿಂದ ಸಾಬೀತಾದ ಬಳಿಕ ವಿಶ್ವ ನಗುವಿನ ದಿನಾಚರಣೆಯ ಮಹತ್ವ ಮತ್ತಷ್ಟು ಹೆಚ್ಚಾಗಿದೆ.

ನಗುವಿನ ಪ್ರಯೋಜನಗಳೇನು?

ದಕ್ಷತೆ ಸುಧಾರಣೆ

ಸಂತೋಷದ ಸ್ವಭಾವ ಮತ್ತು ನಗು ಸರಳತೆಯ ಭಾವನೆಯನ್ನು ಪ್ರೋತ್ಸಾಹಿಸುವ ಮೂಲಕ ಉತ್ತಮ ಕೆಲಸದ ವಾತಾವರಣವನ್ನು ನಿರ್ಮಿಸಿ ಕೆಲಸದ ದಕ್ಷತೆಯನ್ನು ಹೆಚ್ಚಿಸುತ್ತದೆ.

ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ

ಒತ್ತಡವನ್ನು ಕಡಿಮೆ ಮಾಡುವ ಮೂಲಕ ನಗುವು ದೇಹದಲ್ಲಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲ ಪಡಿಸುತ್ತದೆ. ರೋಗಗಳನ್ನು ದೂರವಿರಿಸುತ್ತದೆ. ಸಂತೋಷವನ್ನು ಸ್ವೀಕರಿಸುವ ಮನಸ್ಥಿತಿ ಇದ್ದರೆ ಜೀವನದ ಕಷ್ಟಗಳನ್ನು ಸುಲಭವಾಗಿ ನಿಭಾಯಿಸಲು ಮಾನಸಿಕವಾಗಿ ನಾವು ಸದೃಢರಾಗುತ್ತೇವೆ.

ಉತ್ತಮ ಹಾರ್ಮೋನು ಬಿಡುಗಡೆ

ನಗು ಎಂಡಾರ್ಫಿನ್‌ಗಳ ಆಗಮನವನ್ನು ಪ್ರಚೋದಿಸುತ್ತದೆ ಮತ್ತು ಅಡ್ರಿನಾಲಿನ್ ಮತ್ತು ಕಾರ್ಟಿಸೋಲ್‌ನಂತಹ ಒತ್ತಡದ ಹಾರ್ಮೋನ್‌ಗಳನ್ನು ಕಡಿಮೆ ಮಾಡುತ್ತದೆ. ಇದು ನೋವನ್ನು ನಿವಾರಿಸುತ್ತದೆ, ಕ್ಯಾಲೊರಿಗಳನ್ನು ಸುಡುತ್ತದೆ ಮತ್ತು ದೇಹದಲ್ಲಿನ ಅಂಗಗಳನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಧನಾತ್ಮಕ ಚಿಂತನೆಗೆ ಪ್ರೇರಣೆ

ನಗು ಮನಸ್ಸು ಮತ್ತು ದೇಹವನ್ನು ಧನಾತ್ಮಕವಾಗಿ ಚಿಂತಿಸಲು ಪ್ರೇರಣೆ ನೀಡುತ್ತದೆ. ತೃಪ್ತಿ ಮತ್ತು ಆಸಕ್ತಿಯ ಭಾವನೆಯು ಖಿನ್ನತೆ, ಒತ್ತಡ ಮತ್ತು ಆತಂಕದಂತಹ ಮಾನಸಿಕ ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡುತ್ತದೆ. ಇದು ಧನಾತ್ಮಕ ದೈಹಿಕ ಮತ್ತು ಭಾವನಾತ್ಮಕ ಬದಲಾವಣೆಗಳ ಮೇಲೆ ಮನಸ್ಸಿನ ಹಿಡಿತ ಸಾಧಿಸುವಂತೆ ಮಾಡುತ್ತದೆ.


ಆತ್ಮವಿಶ್ವಾಸ ವೃದ್ಧಿ

ನಗುವುದು ಮತ್ತು ಸಂತೋಷವನ್ನು ಅಳವಡಿಸಿಕೊಳ್ಳುವುದು ಸರಳ ಜೀವನಕ್ಕೆ ದಾರಿಯಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಇದು ಸಹಾಯ ಮಾಡುತ್ತದೆ. ಪ್ರ ಆತ್ಮವಿಶ್ವಾಸವನ್ನು ವೃದ್ಧಿಸಿ ಶಾಂತ ಮನೋಭಾವವನ್ನು ಬೆಳೆಸುತ್ತದೆ.

ಅಸ್ವಸ್ಥತೆ ದೂರ

ನಗುವಿನಿಂದ ದೇಹದಲ್ಲಿ ಪ್ರತಿರಕ್ಷಣಾ ವ್ಯವಸ್ಥೆ ವೃದ್ಧಿಯಾಗಿ ಮಾನಸಿಕ ಅಸ್ವಸ್ಥತೆಯಿಂದ ನಮ್ಮನ್ನು ದೂರವಿರಿಸುತ್ತದೆ. ಒತ್ತಡದಂತಹ ಋಣಾತ್ಮಕ ಪರಿಣಾಮಗಳಿಂದ ನಮ್ಮನ್ನು ರಕ್ಷಿಸುತ್ತದೆ. ಒಳ್ಳೆಯ ನಗು ನಿಮ್ಮ ಮನಸ್ಸು ಮತ್ತು ದೇಹದ ನಡುವೆ ಸಾಮರಸ್ಯ ಉಂಟು ಮಾಡುತ್ತದೆ.

ಇದನ್ನೂ ಓದಿ: Covaxin: ಕೊವ್ಯಾಕ್ಸಿನ್‌ ಸುರಕ್ಷಿತ ಲಸಿಕೆ ಎಂದ ಭಾರತ್‌ ಬಯೋಟೆಕ್;‌ ಸೈಡ್‌ ಎಫೆಕ್ಟ್‌ ಆರೋಪದ ಬೆನ್ನಲ್ಲೇ ಸ್ಪಷ್ಟನೆ!

ಭಾವನೆಗಳ ಸಮತೋಲನ

ನಗು ನಮ್ಮಲ್ಲಿ ಭರವಸೆಯನ್ನು ಹುಟ್ಟುಹಾಕುತ್ತದೆ. ನಗು ನಮ್ಮನ್ನು ಇತರರೊಂದಿಗೆ ಸುಲಭವಾಗಿ ಹೊಂದಿಕೊಂಡು ಹೋಗಲು ಸಹಾಯ ಮಾಡುತ್ತದೆ. ಇದರಿಂದ ಆಕ್ರೋಶ ಕಡಿಮೆಯಾಗುತ್ತದೆ. ಕ್ಷಮೆಯ ಗುಣವನ್ನು ಉತ್ತೇಜಿಸುತ್ತದೆ.

ಸಂಬಂಧಗಳನ್ನು ಬಲಪಡಿಸುತ್ತದೆ

ನಗು ಸಂಬಂಧಗಳಲ್ಲಿ ಇರುವ ಹಲವಾರು ಸಮಸ್ಯೆಗಳನ್ನು ಪರಿಹರಿಸಲು, ಸಂಬಂಧಗಳನ್ನು ಬಲಪಡಿಸಲು ಮತ್ತು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

Continue Reading
Advertisement
Shreyas Talpade hints his heart attack side effect of Covid vaccine
ಬಾಲಿವುಡ್3 mins ago

Shreyas Talpade: ಶ್ರೇಯಸ್‌ ತಲ್ಪಾಡೆ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್‌ ಕಾರಣವಂತೆ! ನಟ ಹೇಳಿದ್ದೇನು?

IPL 2024 Points Table
ಕ್ರಿಕೆಟ್11 mins ago

IPL 2024 Points Table: 7ನೇ ಸ್ಥಾನಕ್ಕೇರಿದ ಆರ್​ಸಿಬಿ; ಮುಂಬೈಗೆ ಕೊನೆಯ ಸ್ಥಾನ

Blood Pressure
ಆರೋಗ್ಯ13 mins ago

Blood Pressure: ರಕ್ತದೊತ್ತಡ ನಿಯಂತ್ರಿಸಲು ಈ ಆಹಾರಗಳು ಸೂಕ್ತ

Prajwal Revanna Case
ಕರ್ನಾಟಕ14 mins ago

Prajwal Revanna Case: ದುಬೈ ವಿಮಾನದಲ್ಲೂ ರಾಜ್ಯಕ್ಕೆ ಬಾರದ ಸಂಸದ ಪ್ರಜ್ವಲ್ ರೇವಣ್ಣ

Tips To Prevent Curd
ಆಹಾರ/ಅಡುಗೆ25 mins ago

Tips To Prevent Curd: ಮೊಸರು ಹುಳಿಯಾಗದೇ ಇರಲು ಈ ಟಿಪ್ಸ್ ಪಾಲಿಸಿ

Terrorist attack
ದೇಶ44 mins ago

Terrorist Attack: ಪೂಂಚ್​​ನಲ್ಲಿ ಭಯೋತ್ಪಾದಕರ ದಾಳಿ; ಓರ್ವ ಯೋಧ ಹುತಾತ್ಮ, ಐವರ ಸ್ಥಿತಿ ಗಂಭೀರ

HD Revanna
ಕರ್ನಾಟಕ51 mins ago

HD Revanna: ತಡರಾತ್ರಿವರೆಗೂ ರೇವಣ್ಣರನ್ನು ವಿಚಾರಣೆ ನಡೆಸಿದ ಎಸ್‌ಐಟಿ ಅಧಿಕಾರಿಗಳು

Prawal Revanna Case
ಕರ್ನಾಟಕ1 hour ago

Prajwal Revanna Case: ಕುಮಾರಸ್ವಾಮಿಯನ್ನು ಭೇಟಿಯಾಗಲು ಒಪ್ಪದ ಅಮಿತ್ ಶಾ; ಹೋಟೆಲ್‌ಗೆ ಬಂದು ವಾಪಸ್ ಹೋದ ಎಚ್ ಡಿ ಕೆ

Summer Health Tips
ಆರೋಗ್ಯ2 hours ago

Summer Health Tips: ಬಿಸಿಲ ಬೇಗೆ ತಣಿಸಿಕೊಳ್ಳಲು ಬೇಕು ನೆಲ್ಲಿಕಾಯಿ!

karnataka Weather Forecast
ಮಳೆ2 hours ago

Karnataka Weather : ಮುಕ್ಕಾಲು ಕರ್ನಾಟಕಕ್ಕೆ ಸುಡು ಬಿಸಿಲು; ಉಳಿದೆಡೆ ಗುಡುಗು ಸಹಿತ ಮಳೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ1 day ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20246 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20246 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

ಟ್ರೆಂಡಿಂಗ್‌