ಇಬ್ಬರು ಹೆಂಡತಿಯರ ಗಂಡನ ಪೇಚಾಟ; ಮೂರುದಿನ ಒಬ್ಬಾಕೆ, ಮತ್ತೆ ಮೂರು ದಿನ ಇನ್ನೊಬ್ಬಾಕೆ, ಒಂದಿನ ಫ್ರೀ! - Vistara News

ದೇಶ

ಇಬ್ಬರು ಹೆಂಡತಿಯರ ಗಂಡನ ಪೇಚಾಟ; ಮೂರುದಿನ ಒಬ್ಬಾಕೆ, ಮತ್ತೆ ಮೂರು ದಿನ ಇನ್ನೊಬ್ಬಾಕೆ, ಒಂದಿನ ಫ್ರೀ!

ಕೇಸ್​ ಕೋರ್ಟ್​ ಮೆಟ್ಟಿಲೇರುತ್ತಿದ್ದಂತೆ ದಂಪತಿಗೆ ಕೌನ್ಸಿಲಿಂಗ್ ಮಾಡಿಸಲಾಗಿದೆ. ಕೌನ್ಸಿಲರ್​ ಹರೀಶ್​ ದೇವನ್​ ಎಂಬುವರು ಸೀಮಾ ಮತ್ತು ಆಕೆಯ ಪತಿಯನ್ನು ಕೂರಿಸಿಕೊಂಡು ಸಮಾಧಾನವಾಗಿ ಮಾತನಾಡಿದ್ದಾರೆ. ಸೀಮಾ ಕೇಸ್​ ವಾಪಸ್​ ಪಡೆದಿದ್ದಾರೆ.

VISTARANEWS.COM


on

Man Who Married two wives Make an agreement In Madhya Pradesh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗ್ವಾಲಿಯರ್​: ಇಬ್ಬರು ಪತ್ನಿಯರನ್ನು ಹೊಂದುವುದು ಕಾನೂನು ಪ್ರಕಾರ ತಪ್ಪಾಗಿದ್ದರೂ, ಕೆಲವರು ಎರಡು-ಮೂರು ಮದುವೆಯನ್ನು ಆಗಿಬಿಡುತ್ತಾರೆ. ಹಾಗೇ, ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ಯುವಕನೊಬ್ಬ ಇಬ್ಬರು ಯುವತಿಯರನ್ನು ಮದುವೆಯಾಗಿ, ಈಗ ಆ ಪತ್ನಿಯರಿಬ್ಬರ ಜತೆ ಕಳೆಯಲು ಶೆಡ್ಯೂಲ್​ ಹಾಕಿಕೊಂಡಿದ್ದಾನೆ..! ಒಬ್ಬಳಿಗೆ ಮೂರು ದಿನ, ಇನ್ನೊಬ್ಬಳಿಗೆ ಮೂರು ದಿನ ಎಂದು ಆ ಪತಿಯನ್ನು ಹಂಚಿಬಿಡಲಾಗಿದೆ..

ಮಧ್ಯಪ್ರದೇಶದ ಈ ವ್ಯಕ್ತಿ ಇಂಜಿನಿಯರ್​ ಆಗಿದ್ದು, ಗುರುಗಾಂವ್​​ನಲ್ಲಿ ಕೆಲಸ ಮಾಡುತ್ತಿದ್ದ. 2018ರಲ್ಲಿ ಸೀಮಾ ಎಂಬಾಕೆಯನ್ನು ಮದುವೆಯಾಗಿ, ಅವರಿಗೆ ಒಬ್ಬ ಗಂಡುಮಗ ಕೂಡ ಹುಟ್ಟಿದ. 2020ರಲ್ಲಿ ಕೊರೊನಾ ಶುರುವಾಗಿ ಲಾಕ್​ಡೌನ್​ ಆದಾಗ ಸೀಮಾ ತನ್ನ ಮಗುವೊಂದಿಗೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲೇ ಉಳಿದರು. ಈತ ಒಬ್ಬನೇ ಹರ್ಯಾಣದಲ್ಲಿ ಉಳಿದುಕೊಂಡು, ಕೆಲಸ ಮುಂದುವರಿಸಿದ್ದ.

ಈ ಮಧ್ಯೆ ಆ ಇಂಜಿನಿಯರ್​ಗೆ ತನ್ನ ಸಹೋದ್ಯೋಗಿ ಯುವತಿಯೊಂದಿಗೆ ಸಂಬಂಧ ಬೆಳೆಯಿತು. ಅವನಿಗೆ ಮದುವೆಯಾಗಿದೆ ಎಂದು ಗೊತ್ತಿದ್ದರೂ ಯುವತಿ ಆತನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಳು. ಬಳಿಕ ಆಕೆಯನ್ನೂ ಆತ ಮದುವೆಯಾದ. ಇವರಿಗೆ ಹೆಣ್ಣುಮಗು ಹುಟ್ಟಿತು.

ಇದನ್ನೂ ಓದಿ: RSS on Marriage : ಮದುವೆಯೆಂದರೆ ಸಂಸ್ಕಾರ, ಎಂಜಾಯ್ ಮಾಡುವ ಸಾಧನವಲ್ಲ; ದತ್ತಾತ್ರೆಯ ಹೊಸಬಾಳೆ

ಇತ್ತ ಸೀಮಾಳಿಗೆ ತನ್ನ ಪತಿ ಇನ್ನೊಂದು ಮದುವೆಯಾಗಿದ್ದು ಗೊತ್ತಾಗುತ್ತಿದ್ದಂತೆ ಆಕೆ ಕೋಪಗೊಂಡಳು. ಸೀದಾ ಪತಿಯಿದ್ದಲ್ಲೇ ಹೋಗಿ ಜಗಳ ಮಾಡಿದಳು. ವಾಪಸ್ ಗ್ವಾಲಿಯರ್​ಗೆ ಬಂದು ಪತಿ ವಿರುದ್ಧ ಕೇಸ್​ ದಾಖಲಿಸಿದರು. ತನ್ನ ಮಗನಿಗೆ ಪತಿಯಿಂದ ಹಣಕಾಸಿನ ನೆರವು ಬೇಕು ಎಂದೂ ಹೇಳಿದರು.

ಈ ಕೇಸ್​ ಕೋರ್ಟ್​ ಮೆಟ್ಟಿಲೇರುತ್ತಿದ್ದಂತೆ ದಂಪತಿಗೆ ಕೌನ್ಸಿಲಿಂಗ್ ಮಾಡಿಸಲಾಗಿದೆ. ಕೌನ್ಸಿಲರ್​ ಹರೀಶ್​ ದೇವನ್​ ಎಂಬುವರು ಸೀಮಾ ಮತ್ತು ಆಕೆಯ ಪತಿಯನ್ನು ಕೂರಿಸಿಕೊಂಡು ಸಮಾಧಾನವಾಗಿ ಮಾತನಾಡಿದ್ದಾರೆ. ಅಂತಿಮವಾಗಿ ದಂಪತಿ ಒಂದು ಇತ್ಯರ್ಥಕ್ಕೆ ಬಂದಿದ್ದಾರೆ. ಅದರ ಅನ್ವಯ ಸೀಮಾ ಮತ್ತು ಮಗನೊಂದಿಗೆ ಆತ ಮೂರು ದಿನ ಕಳೆಯಬೇಕು, ಮತ್ತೊಬ್ಬಳು ಪತ್ನಿ ಮತ್ತು ಮಗಳೊಂದಿಗೆ ಮೂರು ದಿನ ಕಳೆಯಬೇಕು. ಒಂದು ದಿನ ಫ್ರೀ…!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Narendra Modi: ಅಮೇಥಿ ಬದಲು ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ; ಓಡಬೇಡಿ ಎಂದು ವ್ಯಂಗ್ಯವಾಡಿದ ಮೋದಿ

Narendra Modi: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೇರಳದ ವಯನಾಡಿನ ಜತೆಗೆ ರಾಯ್‌ ಬರೇಲಿಯಲ್ಲಿಯೂ ಸ್ಪರ್ಧಿಸುತ್ತಿದ್ದಾರೆ. ಇದೇ ವಿಚಾರ ಮುಂದಿಟ್ಟುಕೊಂಡು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ʼʼವಯನಾಡಿನಲ್ಲಿ ರಾಹುಲ್‌ ಗಾಂಧಿ ಸೋಲುತ್ತಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಮತದಾನ ಮುಗಿದ ತಕ್ಷಣ ಅವರು ಬೇರೆ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದೆ. ಅದು ನಿಜವಾಗಿದೆ. ಅಮೇಥಿಯಲ್ಲಿ ಸೋಲಾಗುತ್ತದೆ ಎನ್ನುವ ಭೀತಿಯಿಂದ ರಾಯ್‌ ಬರೇಲಿಗೆ ಪಲಾಯನ ಮಾಡಿದ್ದಾರೆ. ಹೆದರಬೇಡಿ, ಓಡಬೇಡಿʼʼ ಎಂದು ಹೇಳಿದ್ದಾರೆ.

VISTARANEWS.COM


on

Narendra Modi
Koo

ಕೋಲ್ಕತ್ತಾ: ಕೊನೆಗೂ ಹಲವು ದಿನಗಳ ಕುತೂಹಲಕ್ಕೆ ತೆರೆ ಎಳೆದು ಶುಕ್ರವಾರ (ಮೇ 3) ಕಾಂಗ್ರೆಸ್‌ ರಾಯ್‌ ಬರೇಲಿ (Rae Bareli) ಕ್ಷೇತ್ರದ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ (Lok Sabha Election 2024). ಗಾಂಧಿ ಕುಟುಂಬದ ಭದ್ರಕೋಟೆಯಾಗಿರುವ ರಾಯ್‌ ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ(Rahul Gandhi) ಕಣಕ್ಕಿಳಿದಿದ್ದಾರೆ. ಕೇರಳದ ವಯನಾಡಿನಲ್ಲಿ ಸ್ಪರ್ಧಿಸಿರುವ ರಾಹುಲ್‌ ಗಾಂಧಿ ಇದೀಗ ಉತ್ತರ ಪ್ರದೇಶದಲ್ಲಿಯೂ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಈ ನಡೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಟೀಕಿಸಿದ್ದಾರೆ. ವಯನಾಡಿನಲ್ಲಿ ಸೋಲುವ ಭೀತಿಯಿಂದ ರಾಹುಲ್‌ ಗಾಂಧಿ ರಾಯ್‌ ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ʼʼರಾಹುಲ್​ ಗಾಂಧಿ ಅಮೇಥಿ ಬಿಟ್ಟು ರಾಯ್​ಬರೇಲಿಗೆ ಓಡಿದ್ದಾರೆ. ಭಯ ಪಡಬೇಡಿ, ಓಡಬೇಡಿʼʼ ಎಂದು ತಮಾಷೆ ಮಾಡಿದ್ದಾರೆ. ವಯನಾಡಿನಲ್ಲಿ ಮತದಾನ ಮುಗಿದ ತಕ್ಷಣ ರಾಹುಲ್‌ ಗಾಂಧಿ ಬೇರೆ ಕ್ಷೇತ್ರವನ್ನು ಹುಡುಕಲಿದ್ದಾರೆ ಎಂದು ತಾವು ಹಿಂದೆ ಹೇಳಿದ್ದನ್ನು ನೆನಪಿಸಿಕೊಂಡ ಮೋದಿ, ʼʼವಯನಾಡಿನಲ್ಲಿ ರಾಹುಲ್‌ ಗಾಂಧಿ ಸೋಲುತ್ತಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಮತದಾನ ಮುಗಿದ ತಕ್ಷಣ ಅವರು ಬೇರೆ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದೆ. ಅದು ನಿಜವಾಗಿದೆ. ಅಮೇಥಿಯಲ್ಲಿ ಸೋಲಾಗುತ್ತದೆ ಎನ್ನುವ ಭೀತಿಯಿಂದ ರಾಯ್‌ ಬರೇಲಿಗೆ ಪಲಾಯನ ಮಾಡಿದ್ದಾರೆ. ಹೆದರಬೇಡಿ, ಓಡಬೇಡಿʼʼ ಎಂದು ಹೇಳಿದ್ದಾರೆ.

ನಿರಂತರವಾಗಿ ಆಯ್ಕೆಯಾಗುತ್ತಿದ್ದ ರಾಯ್‌ ಬರೇಲಿ ಕ್ಷೇತ್ರವನ್ನು ಬಿಟ್ಟು ರಾಜ್ಯಸಭೆಯತ್ತ ಮುಖ ಮಾಡಿದ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ನಡೆಯನ್ನೂ ಮೋದಿ ಟೀಕಿಸಿದ್ದಾರೆ. ʼʼಕಾಂಗ್ರೆಸ್‌ನ ಹಿರಿಯ ನಾಯಕಿ ಚುನಾವಣೆಯಲ್ಲಿ ಸ್ಪರ್ಧಿಸಲು ಭಯಪಡುತ್ತಾರೆ ಮತ್ತು ಕಣದಿಂದ ಓಡಿ ಹೋಗುತ್ತಾರೆ ಎನ್ನುವ ವಿಚಾರವನ್ನು ನಾನು ಮೊದಲೇ ಪಾರ್ಲಿಮೆಂಟ್‌ನಲ್ಲಿ ಹೇಳಿದ್ದೆ. ಅದರಂತೆ ಅವರು (ಸೋನಿಯಾ ಗಾಂಧಿ) ರಾಯ್‌ ಬರೇಲಿಯಿಂದ ರಾಜ್ಯಸಭೆಗೆ ಪಲಾಯನ ಮಾಡಿದ್ದಾರೆʼʼ ಎಂದು ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ. ರಾಯ್‌ ಬರೇಲಿ ಮತ್ತು ಅಮೇಥಿಯಲ್ಲಿ ಮೇ 20ರಂದು ಮತದಾನ ನಡೆಯಲಿದೆ.

ಕುತೂಹಲ ಕೆರಳಿಸಿದ್ದ ಕ್ಷೇತ್ರಗಳು

ರಾಯ್‌ ಬರೇಲಿ ಮತ್ತು ಅಮೇಥಿ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವ ವಿಚಾರ ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು. ಕೊನೆಗೂ ಇಂದು ಕಾಂಗ್ರೆಸ್‌ ಪಟ್ಟಿ ಬಿಡುಗಡೆ ಮಾಡಿತ್ತು. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಖಾಲಿಯಾಗಿರುವ ರಾಯ್‌ ಬರೇಲಿ ಕ್ಷೇತ್ರದಿಂದ ಮೊದಲಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಹಾಗೂ ಅಮೇಥಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವಿಚಾರ ಹರಿದಾಡುತ್ತಿತ್ತು. ಇದೀಗ ಕುತೂಹಲಕ್ಕೆ ತೆರೆ ಬಿದ್ದಿದೆ. ಇತ್ತ ರಾಯ್‌ ಬರೇಲಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಬಿಜೆ ದಿನೇಶ್‌ ಪ್ರತಾಪ್‌ ಅವರನ್ನು ಕಣಕ್ಕಿಳಿಸಿದೆ.

ಇದನ್ನೂ ಓದಿ: Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

ಇನ್ನು ದಿನೇಶ್‌ ಪ್ರತಾಪ್‌ ಕಳೆದ ಬಾರೀ ಸೋನಿಯಾ ಗಾಂಧಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು. ಅಮೇಥಿಯಲ್ಲಿ 2004, 2009, 2014ರವರೆಗೆ ರಾಹುಲ್‌ ಗಾಂಧಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2019ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋಲನ್ನು ಅನುಭವಿಸಿದ್ದರು. ಈ ಬಾರಿ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್‌ ಅವರನ್ನು ಅಮೇಥಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಕಣಕ್ಕಿಳಿಸಿ ಕಾಂಗ್ರೆಸ್‌ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.

Continue Reading

ದೇಶ

Helicopter Crash: ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ ಪತನ;ವಿಡಿಯೋ ವೈರಲ್‌

Helicopter Crash: ಶಿವಸೇನೆ ನಾಯಕಿ ಸುಷ್ಮಾ ಆಂದಾರೆ ಪ್ರಯಾಣಿಸಬೇಕಾಗಿದ್ದ ಈ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ವೇಳೆ ಗಿರಕಿ ಹೊಡೆದು ನೆಲಕ್ಕಪ್ಪಳಿಸಿದೆ. ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

VISTARANEWS.COM


on

Helicopter Crash
Koo

ರಾಯ್‌ಗಢ: ಶಿವಸೇನೆ ನಾಯಕಿ(Shivsene Leader) ಪ್ರಯಾಣಕ್ಕೆಂದು ನಿಗದಿಯಾಗಿದ್ದ ಹೆಲಿಕಾಪ್ಟರ್‌(helicopter Crash)ವೊಂದು ಮಹಾರಾಷ್ಟ್ರ(Maharashtra)ದಲ್ಲಿ ಲ್ಯಾಂಡಿಂಗ್‌ ವೇಳೆ ಪತನಗೊಂಡಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸದೇ ಭಾರೀ ಅನಾಹುತವೊಂದು ತಪ್ಪಿದೆ. ಶಿವಸೇನೆ ನಾಯಕಿ ಸುಷ್ಮಾ ಆಂದಾರೆ (Sushma Andhare) ಪ್ರಯಾಣಿಸಬೇಕಾಗಿದ್ದ ಈ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ (Landing) ವೇಳೆ ಗಿರಕಿ ಹೊಡೆದು ನೆಲಕ್ಕಪ್ಪಳಿಸಿದೆ. ಈ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral Video) ಆಗಿದೆ.

ರಾಯ್‌ಗಢದ ಮಹಾದ್‌ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಯಾವುದೋ ಒಂದು ಬಯಲು ಪ್ರದೇಶದಲ್ಲಿ ಲ್ಯಾಂಡಿಂಗ್‌ಗೆ ಪ್ರಯತ್ನಿಸಿದ ಹೆಲಿಕಾಪ್ಟರ್‌ ಇದ್ದಕ್ಕಿದ್ದಂತೆ ನಿಯಂತ್ರಣ ತಪ್ಪಿತ್ತು. ಗಾಳಿಯಲ್ಲಿ ತೂಗಾಡುವಂತೆ ಕಾಣುತ್ತಿದ್ದ ಹೆಲಿಕಾಪ್ಟರ್‌ ಇದ್ದಕ್ಕಿದ್ದಂತೆ ನೆಲಕ್ಕೆ ಅಪ್ಪಳಿಸುತ್ತಿದೆ. ತಕ್ಷಣ ಆಸ್ಥಳದಲ್ಲಿ ಹೊಗೆ ಧೂಳು ತುಂಬಿಕೊಳ್ಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಇನ್ನು ಹೆಲಿಕಾಪ್ಟರ್‌ನಲ್ಲಿ ಪೈಲಟ್‌ ಹೇಗೂ ಅದರಿಂದ ಕೆಳಗೆ ಹಾರಿ ಪ್ರಾಣ ಉಳಿಸಿಕೊಂಡಿದ್ದಾನೆ. ಆತನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಹೆಲಿಕಾಪ್ಟರ್‌ ಸಂಪೂರ್ಣವಾಗಿ ಜಖಂ ಆಗಿದೆ.ಪೊಲೀಸರು ಮತ್ತು ರಕ್ಷಣಾ ತಂಡ ತಕ್ಷಣ ಸ್ಥಳಕ್ಕೆ ಧಾವಿಸಿ ತನಿಖೆ ನಡೆಸುತ್ತಿದೆ. ಇನ್ನು ತಾವು ಪ್ರಯಾಣಿಸಬೇಕಾಗಿದ್ದ ಹೆಲಿಕಾಪ್ಟರ್‌ ಪತನವಾಗಿರುವ ಬಗ್ಗೆ ಸುಷ್ಮಾ ಆತಂಕ ವ್ಯಕ್ತಪಡಿಸಿದ್ದಾರೆ. ಬಳಿಕ ತಮ್ಮ ಕಾರಿನಲ್ಲೇ ಪ್ರಚಾರ ಕಾರ್ಯಕ್ರಮ ನಿಗದಿಯಾಗಿದ್ದ ಸ್ಥಳಕ್ಕೆ ತೆರಳಿದ್ದಾರೆ.

ಇದನ್ನೂ ಓದಿ:United Nations: ಪಾಕಿಸ್ತಾನ ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದೆ; ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ

ಕಳೆದ ವರ್ಷ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೂಡ ಹೆಲಿಕಾಪ್ಟರ್‌ ದುರಂತದಿಂದ ಗ್ರೇಟ್‌ ಎಸ್ಕೇಪ್‌ ಆಗಿದ್ದರು. ಅವರು ಜಕ್ಕೂರಿನಿಂದ ಮುಳಬಾಗಿಲಿಗೆ ಹೆಲಿಕಾಪ್ಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರಣಹದ್ದು ಒಂದು ಹೆಲಿಕಾಪ್ಟರ್‌ನ ವಿಂಡ್‌ ಶೀಲ್ಡ್‌ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿತು. ವಿಂಡ್‌ ಶೀಲ್ಡ್‌ ಸಂಪೂರ್ಣ ಒಡೆದು ಅಪಾಯದ ಸ್ಥಿತಿ ತಲುಪಿತು. ಕೂಡಲೇ ಎಚ್‌ಎಎಲ್‌ ಹೆಲಿಕಾಪ್ಟರನ್ನು ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಇಳಿಸಲಾಯಿತು. ಈ ಮೂಲಕ ಭಾರಿ ಅಪಾಯದಿಂದ ಡಿ.ಕೆ. ಶಿವಕುಮಾರ್‌ ಪಾರಾಗಿದ್ದರು.  ಡಿಕೆ ಶಿವಕುಮಾರ್‌ ಅವರನ್ನು ಖಾಸಗಿ ಸುದ್ದಿ ವಾಹಿನಿಯ ವರದಿಗಾರ ಸಂದರ್ಶನ ನಡೆಸುವಾಗ ಈ ಅವಘಡ ಸಂಭವಿಸಿತ್ತು. ಕ್ಯಾಮೆರಾದಲ್ಲಿ ದೃಶ್ಯಗಳು ಸೆರೆಯಾಗಿತ್ತು. ರಣಹದ್ದು ಬಡಿದ ತಕ್ಷಣ ಹೆಲಿಕಾಪ್ಟರ್‌ ಗಾಜು ಪುಡಿಪುಡಿಯಾಗಿದ್ದು, ಒಂದು ಕ್ಷಣ ಡಿಕೆ ಶಿವಕುಮಾರ್‌ ಹಾಗೂ ವರದಿಗಾರನ ಮುಖದಲ್ಲಿ ಆತಂಕ ಆವರಿಸಿತ್ತು. ಜೊತೆಗಿದ್ದ ಛಾಯಾಗ್ರಾಹಕನಿಗೆ ಗಾಜಿನ ಚೂರು ಚುಚ್ಚಿದ್ದು, ಸಣ್ಣಪುಟ್ಟ ಗಾಯಗಳಾಗಿದ್ದವು.

Continue Reading

ತಂತ್ರಜ್ಞಾನ

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Bomber Drone: ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

VISTARANEWS.COM


on

bomber drone
Koo

ಬೆಂಗಳೂರು: ಭಾರತದ ಮೊತ್ತ ಮೊದಲ ಸ್ವದೇಶಿ ತಂತ್ರಜ್ಞಾನದ ಬಾಂಬರ್‌ ಡ್ರೋನ್‌ (Indigenous Bomber Drone) ಬೆಂಗಳೂರಿನಲ್ಲಿ ಅನಾವರಣಗೊಂಡಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಅನಾವರಣಗೊಂಡಿರುವ ಈ ಬಾಂಬರ್‌ ಡ್ರೋನ್‌ ಅನ್ನು ʼಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಟೆಕ್ನಾಲಜೀಸ್ʼ ಸಂಸ್ಥೆ ನಿರ್ಮಾಣ ಮಾಡಿದೆ. ಇದಕ್ಕೆ FWD-200B UAV ಎಂದು ಹೆಸರಿಡಲಾಗಿದೆ.

ಭಾರತದ ಮೊದಲ ಮಿಲಿಟರಿ ದರ್ಜೆಯ (Indian military) ಬಾಂಬರ್ ಡ್ರೋನ್ ಇದಾಗಿದೆ. ಡ್ರೋನ್‌ಗಿಂತ ಗಾತ್ರದಲ್ಲಿ ಸ್ವಲ್ಪ ದೊಡ್ಡದಾಗಿರುವ, ಹೆಲಿಕಾಪ್ಟರ್‌ಗಿಂತ ಚಿಕ್ಕದಾಗಿರುವ ಈ ವಾಹಕ, ಪೈಲಟ್‌ರಹಿತವಾಗಿ ಕಾರ್ಯಾಚರಿಸಿ ಬಾಂಬ್‌ಗಳನ್ನು ಹೊತ್ತೊಯ್ದು ವೈರಿನೆಲೆಗಳ ಮೇಲೆ ಉದುರಿಸಬಲ್ಲುದು ಎಂದು ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಸಂಸ್ಥಾಪಕ, ಸಿಇಒ ಸುಹಾಸ್ ತೇಜ ಸ್ಕಂದ ವಿವರಿಸಿದ್ದಾರೆ.

FWD-200B UAV ಎಂದು ತಾಮತ್ರಿಕವಾಗಿ ಕರೆಯಲಾಗುವ ಈ ಡ್ರೋನ್ ವಿಮಾನವನ್ನು ಇಂದು ಎಲೆಕ್ಟ್ರಾನಿಕ ಸಿಟಿಯಲ್ಲಿ ಫ್ಲೈಯಿಂಗ್ ವೆಡ್ಜ್ ಡಿಫೆನ್ಸ್ ಸಂಸ್ಥೆ ಅನಾವರಣ ಮಾಡಿದೆ. ರಕ್ಷಣಾ ಕ್ಷೇತ್ರದಲ್ಲಿ ವಿದೇಶಗಳ ಮೇಲಿನ ಅವಲಂಬನೆಗೆ ಬ್ರೇಕ್ ಹಾಕಲು ಸ್ವದೇಶಿ ಡ್ರೋನ್ ವಿಮಾನ‌ ತಯಾರಿಸಲಾಗಿದೆ. ಇದರೊಂದಿಗೆ ಸುಧಾರಿತ ಮಾನವರಹಿತ ಯುದ್ಧ ಡ್ರೋನ್ ಹೊಂದಿದ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಲಿದೆ. ಇದರ ಆರಂಬಿಕ ಟೆಸ್ಟ್‌ಗಳು ಆಗಿದ್ದು, ಅಡ್ವಾನ್ಸ್‌ಡ್‌ ಪರೀಕ್ಷೆಗಳು ಇನ್ನೆರಡು ತಿಂಗಳಲ್ಲಿ ನೆರವೇರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಇದರ ಉದ್ಘಾಟನೆ ಮಾಡಿಸುವ ಚಿಂತನೆಯನ್ನು ಸುಹಾಸ್ ಹಂಚಿಕೊಂಡಿದ್ದಾರೆ.

bomber drone flying vedge ceo suhas

ಭಾರತದಲ್ಲಿ ಸದ್ಯ ದಾಳಿ ಡ್ರೋನ್‌ಗಳು ಲಭ್ಯವಿಲ್ಲ. ಇರಾನ್‌ ಹಾಗೂ ರಷ್ಯಾಗಳು ಇದನ್ನು ಈಗಾಗಲೇ ಬಳಸುತ್ತಿವೆ. ಇಸ್ರೇಲ್‌ ಮೇಲೆ ದಾಳಿ ಮಾಡಲು ಕೂಡ ಪ್ಯಾಲೆಸ್ತೀನಿನ ಬಂಡುಕೋರರು ಸಣ್ಣ ಗಾತ್ರದ ಇಂಥದೇ ಡ್ರೋನ್‌ಗಳನ್ನು ಬಳಸಿದ್ದರು. ಈ ಬಗೆಯ ಡ್ರೋನ್‌ಗಳು ಆಧುನಿಕ ಯುದ್ಧದ ವೈಖರಿಯನ್ನೇ ಬದಲಿಸಲಿವೆ. ಕ್ಷಿಪಣಿಗಳು ದುಬಾರಿಯಾಗಿದ್ದು, ಅದಕ್ಕಿಂತ ಡ್ರೋನ್‌ಗಳು ಅಗ್ಗವಾಗಿವೆ. FWD-200B UAV ಸುಮಾರು 200 ಕಿಲೋದಷ್ಟು ಪೇಲೋಡ್‌ ಅನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ.

ಭಾರತ ಈಗ ಅಮೆರಿಕದ ಪ್ರಿಡೇಟರ್ ಡ್ರೋನ್‌ಗಳನ್ನು (Predator Drone) ತರಿಸುತ್ತಿದೆ. ಆದರೆ ಇದು 250 ಕೋಟಿಗಳಷ್ಟು ದುಬಾರಿಯಾಗಿದೆ. ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ದೇಶೀಯವಾಗಿ ತಯಾರಾದ FWD-200B ಭಾರತದಲ್ಲಿ ಸ್ವದೇಶಿ ತಂತ್ರಜ್ಞಾನದೊಂದಿಗೆ ಕೇವಲ 25ಯಿಂದ 50 ಕೋಟಿ ವೆಚ್ಚದಲ್ಲಿ ತಯಾರಾಗಲಿದೆ. ಭಾರತವನ್ನು ಜಾಗತಿಕ ಡ್ರೋನ್ ಉತ್ಪಾದನೆ ಮತ್ತು ತಂತ್ರಜ್ಞಾನದ ಕೇಂದ್ರವಾಗಿಸುವ ಗುರಿ ತಮ್ಮದು. ಇನ್ನು ಎರಡು ತಿಂಗಳಲ್ಲಿ ಇದು ಭಾರತದ ಮಿಲಿಟರಿಯನ್ನು ಸೇರುವ ಆಶಯ ಇದೆ. ಈ ಮೂಲಕ ನಮ್ಮ ರಾಷ್ಟ್ರದ ವಾಯು ರಕ್ಷಣಾ ವ್ಯವಸ್ಥೆಯನ್ನು ಸಶಕ್ತಗೊಳಿಸಲು ಸಂಸ್ಥೆ ಮುಂದಾಗಿದೆ ಎಂದು ಸುಹಾಸ್‌ ತಿಳಿಸಿದ್ದಾರೆ.

ಇದನ್ನೂ ಓದಿ: Tejas Aircraft: ಸ್ವದೇಶಿ ʼತೇಜಸ್ʼ ವಿಮಾನದಲ್ಲಿ ಮೋದಿ ಹಾರಾಟ: ಪಾಕಿಸ್ತಾನ, ಚೀನಾಗೆ ನಡುಕ!

Continue Reading

ವೈರಲ್ ನ್ಯೂಸ್

Viral Video: ಎಲ್ಲ ಖುಷಿಯನ್ನು ಯಾಕೆ ಮನುಷ್ಯ ಮಾತ್ರ ಅನುಭವಿಸಬೇಕು? ಸ್ಮಿಮ್ಮಿಂಗ್‌ ಪೂಲ್‌ಗೆ ಲಗ್ಗೆ ಇಟ್ಟ ಮಂಗಗಳು

Viral Video: ದೇಶದಲ್ಲಿ ಹೆಚ್ಚುತ್ತಿರುವ ಬಿಸಲಿ ಬೇಗೆಗೆ ಎಲ್ಲರೂ ಹೈರಾಣಾಗಿದ್ದಾರೆ. ಕೆಲವು ದಿನಗಳ ಹಿಂದೆ ಮಕ್ಕಳನ್ನು ಸೆಕೆಯಿಂದ ಪಾರು ಮಾಡಲು ತರಗತಿ ಕೋಣೆಗೆ ಎರಡು ಅಡಿ ನೀರು ತುಂಬಿಸಿ ಈಜುಕೊಳವನ್ನಾಗಿ ಪರಿವರ್ತಿಸಿದ ವಿಡಿಯೊ ವೈರಲ್‌ ಆಗಿತ್ತು. ಇದೀಗ ಸುಡುವ ಬಿಸಿಲಿನಿಂದ ಪಾರಾಗಲು ಮಂಗಗಳ ಗುಂಪು ಸ್ವಿಮ್ಮಿಂಗ್‌ ಪೂಲ್‌ಗೆ ಲಗ್ಗೆ ಇಟ್ಟಿರುವ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಈ ವಿಡಿಯೊವನ್ನು ನೀವೂ ನೋಡಿ.

VISTARANEWS.COM


on

Viral Video
Koo

ನವದೆಹಲಿ: ದೇಶದೆಲ್ಲೆಡೆ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದೆ. ಈ ವೇಳೆ ಕೊಳ, ನದಿ ಕಂಡರೆ ಸಾಕು ಹೋಗಿ ಈಜಾಡೋಣ ಎನಿಸುತ್ತದೆ. ಈ ಪರಿಯ ಬಿಸಿಲಿನ ಬೇಗೆಗೆ ಮನುಷ್ಯರು ಮಾತ್ರವಲ್ಲ ಪ್ರಾಣಿಗಳೂ ಕಂಗಾಲಾಗಿವೆ. ಈ ಮಧ್ಯೆ ಮನುಷ್ಯರು ಮಾತ್ರ ಯಾಕೆ ನಾವೂ ಸ್ವಿಮ್ಮಿಂಗ್‌ ಪೂಲ್‌ನಲ್ಲಿ ಈಜಾಡಿ ತಂಪು ಮಾಡಿಕೊಳ್ಳುತ್ತೇವೆ ಎಂಬಂತಿದೆ ಈ ಮಂಗಗಳ ವರ್ತನೆ. ಹೌದು, ಮುಂಬೈಯ ವಸತಿ ಸಂಕೀರ್ಣದ ಈಜುಕೊಳಕ್ಕೆ ಲಗ್ಗೆ ಇಟ್ಟ ಮಂಗಗಳ ಗುಂಪು ನೀರಾಟವಾಡುವ ಮೂಲಕ ಮೈ ಮನಸ್ಸು ಹಗುರ ಮಾಡಿಕೊಂಡಿವೆ. ಸದ್ಯ ಈ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ (Viral Video).

ಮುಂಬೈಯ ಬೋರಿವಾಲಿ ಪ್ರದೇಶದಲ್ಲಿರುವ ವಸತಿ ಸಂಕೀರ್ಣದೊಳಗೆ ಕಂಡುಬಂದ ಈ ದೃಶ್ಯವನ್ನು ಸೆರೆ ಹಿಡಿದು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಲಾಗಿದೆ. ಅದು ಪರಸ್ಪರ ಸಂಪರ್ಕ ಹೊಂದಿರುವ ಎರಡು ಈಜು ಕೊಳಗಳು. ಮೊದಲ ವಿಡಿಯೊದಲ್ಲಿ ಕೊಳದಲ್ಲಿ ಮಂಗಗಳು ಈಜುತ್ತಿರುವುದು ಕಂಡು ಬಂದರೆ ಎರಡನೇ ವಿಡಿಯೊದಲ್ಲಿ ಒಂದು ಕೊಳದಿಂದ ಇನ್ನೊಂದು ಕೊಳಕ್ಕೆ ಮಂಗಗಳು ನೆಗೆಯುತ್ತಿರುವುದು ಕಾಣಿಸುತ್ತಿದೆ. ʼಮಂಗಗಳು ಈಜು ಕೊಳಕ್ಕೆ ಮರಳಿವೆ. ಈ ಬೇಸಿಗೆಯ ದಿನವನ್ನು ಸಿಮ್ಮಿಂಗ್‌ ಪೂಲ್‌ನಲ್ಲಿ ಕಳೆಯುತ್ತಿವೆʼ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ.

ನೆಟ್ಟಿಗರು ಏನಂದ್ರು?

ಸದ್ಯ ಮಂಗಗಳ ಈ ನೀರಾಟ ನೆಟ್ಟಿಗರ ಗಮನ ಸೆಳೆದಿದೆ. ಈಗಾಗಲೇ ಸಾವಿರಾರು ಮಂದಿ ನೋಡಿ ಮನಸ್ಸು ಹಗುರ ಮಾಡಿಕೊಂಡಿದ್ದಾರೆ. ʼʼಈ ಬಿಸಿಲಿನ ಬೇಗೆಯಿಂದ ಪಾರಾಗಲು ಇದು ಅತ್ಯುತ್ತಮ ಮಾರ್ಗʼʼ ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ʼʼಸೂಪರ್‌. ಈ ಭೂಮಿ ಎಲ್ಲರಿಗಾಗಿ ಎನ್ನುವ ಮಾತನ್ನು ಈ ವಿಡಿಯೊ ನಿಜವಾಗಿಸಿದೆʼʼ ಎಂದು ಇನ್ನೊಬ್ಬರು ಹೇಳಿದ್ದಾರೆ. ʼʼವಾವ್‌. ಈ ಕೋತಿಗಳ ಆಟ ನೋಡಲು ಖುಷಿಯಾಗುತ್ತಿದೆʼʼ ಎಂದು ಮತ್ತೊಬ್ಬರು ಸಂತಸ ವ್ಯಕ್ತಪಡಿಸಿದ್ದಾರೆ. ʼʼಜೀವನ ಎಂದರೆ ಇದುʼʼ ಎನ್ನುವ ಉದ್ಘಾರ ಮಗದೊಬ್ಬರದ್ದು. ʼʼಈ ಕೋತಿಗಳು ಕೊಳದಲ್ಲಿ ಮಲ ವಿಸರ್ಜನೆ ಮಾಡದಿರುವವರೆಗೆ ಈಜುವುದು ಸ್ವೀಕಾರಾರ್ಹʼʼ ಎಂದು ಇನ್ನು ಕೆಲವರು ಹೇಳಿದ್ದಾರೆ. ಒಟ್ಟಿನಲ್ಲಿ ಈ ವಿಡಿಯೊ ದೇಶಾದ್ಯಂತ ಅನುಭವಕ್ಕೆ ಬರುತ್ತಿರುವ ಬಿಸಿಲಿನ ಝಳದ ಗಂಭೀರತೆಯನ್ನು ತೆರೆದಿಟ್ಟಿದೆ. ಜತೆಗೆ ನೋಡುಗರ ತುಟಿಯಂಚಿನಲ್ಲಿ ಕಿರುನಗೆ ಅರಳಿಸುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ: Viral News: ಸೆಕೆಯಿಂದ ಬಳಲುತ್ತಿರುವ ವಿದ್ಯಾರ್ಥಿಗಳನ್ನು ಕಾಪಾಡಲು ಶಿಕ್ಷಕರ ಸೂಪರ್‌ ಐಡಿಯಾ; ಇಲ್ಲಿದೆ ವಿಡಿಯೊ

ಮಂಗಗಳು ಈಜುಕೊಳದಲ್ಲಿ ಈ ರೀತಿ ನೀರಾಟವಾಡುತ್ತಿರುವ ಪ್ರಸಂಗ ಇದು ಮೊದಲೇನಲ್ಲ. ಹಿಂದೆಯೂ ಇದೇ ರೀತಿಯ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡಿತ್ತು. ಮನೆಯೊಂದರ ಬಾಲ್ಕನಿಯಲ್ಲಿ ಮಂಗವೊಂದು ಕುಳಿತಿರುತ್ತದೆ. ಸ್ವಲ್ಪ ಹೊತ್ತು ಆಚೆ-ಈಚೆ ನೋಡುವ ಅದು ಬಳಿಕ ಆ ಕಟ್ಟಡದ ಕೆಳಭಾಗದಲ್ಲಿರುವ ಸ್ವಿಮ್ಮಿಂಗ್‌ ಪೂಲ್‌ಗೆ ಜಿಗಿದು ಈಜಾಡುತ್ತದೆ. ʼಯಾಕೆ ಎಲ್ಲ ಸಂತೋಷವನ್ನು ಮನುಷ್ಯ ಮಾತ್ರ ಅನುಭವಿಸಬೇಕು? ಪ್ರಾಣಿಗಳಿಗೂ ಈಜಲು ಬರುತ್ತೆʼ ಎನ್ನುವ ಅರ್ಥಪೂರ್ಣ ಕ್ಯಾಪ್ಶನ್‌ ನೀಡಿ ಈ ವಿಡಿಯೊವನ್ನು ಶೇರ್‌ ಮಾಡಲಾಗಿತ್ತು. ಇದು ಕೂಡ ಲಕ್ಷಾಂತರ ಮಂದಿಯ ಗಮನ ಸೆಳೆದಿತ್ತು. ಮಂಗನ ಬುದ್ಧಿವಂತಿಕೆಗೆ ಹಲವರು ತಲೆದೂಗಿದ್ದರು.

Continue Reading
Advertisement
Prajwal Revanna Case Another case against Revanna transferred to SIT Notice to Bhavani
ಕ್ರೈಂ26 mins ago

Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

Narendra Modi
Lok Sabha Election 202433 mins ago

Narendra Modi: ಅಮೇಥಿ ಬದಲು ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ; ಓಡಬೇಡಿ ಎಂದು ವ್ಯಂಗ್ಯವಾಡಿದ ಮೋದಿ

Helicopter Crash
ದೇಶ41 mins ago

Helicopter Crash: ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ ಪತನ;ವಿಡಿಯೋ ವೈರಲ್‌

Murder case
ಕ್ರೈಂ49 mins ago

Murder case : ಹುಬ್ಬಳ್ಳಿ, ಬೆಂಗಳೂರಲ್ಲಿ ಅಪರಿಚಿತ ಶವ ಪತ್ತೆ; ಹಂತಕರ ಬೆನ್ನಿಗೆ ಬಿದ್ದ ಖಾಕಿ ಪಡೆ

Hockey India
ಕ್ರೀಡೆ1 hour ago

Hockey India: ಭಾರತ ಮಹಿಳಾ ಹಾಕಿ ತಂಡಕ್ಕೆ 22 ವರ್ಷದ ಸಲೀಮಾ ನೂತನ ನಾಯಕಿ

Prajwal Revanna Case Revanna withdraws anticipatory bail plea
ಕ್ರೈಂ1 hour ago

Prajwal Revanna Case: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ರೇವಣ್ಣ; ವಾಪಸ್‌ ಪಡೆಯಲು ಕೋರ್ಟ್‌ ಹೇಳಿದ್ದೇಕೆ?

Kannada Serials TRP puttakkana makkalu top the list
ಕಿರುತೆರೆ1 hour ago

Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

bomber drone
ತಂತ್ರಜ್ಞಾನ1 hour ago

Bomber Drone: ಭಾರತದ ಮೊದಲ ಬಾಂಬರ್ ಡ್ರೋನ್ ಅನಾವರಣ; ಇದರ ವಿಶೇಷತೆ ಹೀಗಿದೆ ನೋಡಿ

Viral Video
ವೈರಲ್ ನ್ಯೂಸ್1 hour ago

Viral Video: ಎಲ್ಲ ಖುಷಿಯನ್ನು ಯಾಕೆ ಮನುಷ್ಯ ಮಾತ್ರ ಅನುಭವಿಸಬೇಕು? ಸ್ಮಿಮ್ಮಿಂಗ್‌ ಪೂಲ್‌ಗೆ ಲಗ್ಗೆ ಇಟ್ಟ ಮಂಗಗಳು

United Nations
ವಿದೇಶ1 hour ago

United Nations: ಪಾಕಿಸ್ತಾನ ದುಷ್ಕೃತ್ಯಗಳ ಟ್ರ್ಯಾಕ್‌ ರೆಕಾರ್ಡ್‌ ಹೊಂದಿದೆ; ವಿಶ್ವಸಂಸ್ಥೆಯಲ್ಲಿ ಗುಡುಗಿದ ಭಾರತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ9 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ20 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌