Karnataka Elections : ಬಾಗೇಪಲ್ಲಿಯಲ್ಲಿ ಜೆಡಿಎಸ್‌- ಬಿಜೆಪಿ ಗಿಫ್ಟ್‌ ವಾರ್‌, ಯುಗಾದಿ ನೆಪದಲ್ಲಿ ಉಡುಗೊರೆ ಸುರಿಮಳೆ! - Vistara News

ಕರ್ನಾಟಕ

Karnataka Elections : ಬಾಗೇಪಲ್ಲಿಯಲ್ಲಿ ಜೆಡಿಎಸ್‌- ಬಿಜೆಪಿ ಗಿಫ್ಟ್‌ ವಾರ್‌, ಯುಗಾದಿ ನೆಪದಲ್ಲಿ ಉಡುಗೊರೆ ಸುರಿಮಳೆ!

ಬಾಗೇಪಲ್ಲಿ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಅಭ್ಯರ್ಥಿಗಳು ದೊಡ್ಡ ಮಟ್ಟದಲ್ಲಿ ಗಿಫ್ಟ್‌ ಹಂಚುವುದರಲ್ಲಿ ನಿರತರಾಗಿದ್ದಾರೆ. ಯುಗಾದಿ ಎನ್ನುವುದು ಇವರಿಗೆ ನೆಪ.

VISTARANEWS.COM


on

Bagepalli gift politics
ಬಾಗೇಪಲ್ಲಿ ಕ್ಷೇತ್ರದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌ ಜೋರಾಗಿದೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ (Karnataka Elections) ಗಿಫ್ಟ್‌ ಪಾಲಿಟಿಕ್ಸ್‌ (Gift politics) ಜೋರಾಗಿದೆ. ವಿಧಾನಸಭಾ ಚುನಾವಣೆ ಮತ್ತು ಯುಗಾದಿ ನೆಪದಲ್ಲಿ ಮನೆ ಮನೆಗೆ ಉಡುಗೊರೆಗಳನ್ನು ನೀಡಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ಜೆಡಿಎಸ್ ಮತ್ತು ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ನಡುವೆ ಗಿಫ್ಟ್ ವಾರ್‌ ನಡೆಯುತ್ತಿದೆ.

ಬಾಗೇಪಲ್ಲಿ ಕ್ಷೇತ್ರದಲ್ಲಿ ಪ್ರಸಕ್ತ ಕಾಂಗ್ರೆಸ್‌ ಶಾಸಕರಿದ್ದಾರೆ. 2018ರಲ್ಲಿ ಕಾಂಗ್ರೆಸ್‌ನ ಸುಬ್ಬಾರೆಡ್ಡಿ ಅವರು 14000ಕ್ಕೂ ಅಧಿಕ ಮತಗಳಿಂದ ಗೆದ್ದಿದ್ದರು. ಎರಡನೇ ಸ್ಥಾನದಲ್ಲಿದ್ದುದುದು ಸಿಪಿಎಂ ಅಭ್ಯರ್ಥಿಯಾಗಿದ್ದ ಜಿ.ವಿ. ಶ್ರೀರಾಮ ರೆಡ್ಡಿ (ಈಗ ನಿಧನರಾಗಿದ್ದಾರೆ),

ಈ ಬಾರಿ ಇಲ್ಲಿ ಕಾಂಗ್ರೆಸ್‌ ಸುಬ್ಬಾರೆಡ್ಡಿ ಅವರಿಗೇ ಟಿಕೆಟ್‌ ನೀಡುವ ಸಾಧ್ಯತೆ ಇದೆ. ಇತ್ತ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ ರಾಮಲಿಂಗಪ್ಪ ಅವರು. ಅವರು ದೊಡ್ಡ ಮಟ್ಟದಲ್ಲಿ ಯುಗಾದಿ ಹಬ್ಬದ ಉಡುಗೊತೆ ಹಂಚುತ್ತಿದ್ದಾರೆ.

ಬಿಜೆಪಿಯಿಂದ ಮನೆ ಮನೆಗೆ ಗಿಫ್ಟ್‌

ರಾಮಲಿಂಗಪ್ಪ ಮತ್ತು ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಮನೆಗೆ ಮನೆಗೆ ಹೋಗಿ ಪ್ರಚಾರ ಮಾಡುವುದರ ಜತೆಗೆ ಬೆಳ್ಳಿ ದೀಪ, ಪಂಚೆ, ಸೀರೆ, ತಟ್ಟೆ ಲೋಟ ಹಂಚುತ್ತಿದ್ದಾರೆ.

ಬಿಜೆಪಿ ಜಿಲ್ಲಾದ್ಯಕ್ಷರೂ ಆಗಿರುವ ರಾಮಲಿಂಗಪ್ಪ ಅವರು ಬಾಗೇಪಲ್ಲಿ ತಾಲ್ಲೂಕಿನ ಚಾಕವೇಲು ಗ್ರಾಮದಲ್ಲಿ ಗಿಫ್ಟ್ ಹಂಚಿದ ದೃಶ್ಯಗಳು ವೈರಲ್‌ ಆಗಿವೆ. ಪ್ರಚಾರಕ್ಕೆ ಹೋದವರು ಬೋಲೋ ಭಾರತ್‌ ಮಾತಾಕಿ ಜೈ ಎಂಬ ಘೋಷಣೆಗಳನ್ನು ಕೂಗಿದ್ದಾರೆ. ಜತೆಗೆ ಪ್ರಧಾನಿ ಮೋದಿ ಅವರ ಹೆಸರು ಹೇಳುತ್ತಿದ್ದಾರೆ.

ಜೆಡಿಎಸ್‌ನಿಂದಲೂ ಗಿಫ್ಟ್‌

ರಾಮಲಿಂಗಪ್ಪ ಅವರು ಉಡುಗೊರೆ ಹಂಚಿದ ಜತೆಜತೆಯಲ್ಲೇ ದೇ ಚಾಕಲವೇಲು ಗ್ರಾಮದಲ್ಲಿ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಿಂದ ಕೂಡಾ ಗಿಫ್ಟ್‌ ಹಂಚಿವೆ. ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಯಾಗಿರುವ ನಾಗರಾಜ ರೆಡ್ಡಿ ವರು, ಚಾಕಲವೇಲು ಗ್ರಾಮದ ಮನೆಮನೆಗೂ ಸೀರೆ. ಪಂಚೆ ಮತ್ತು ಕ್ಯಾಲೆಂಡರ್ ಹಂಚಿದ್ದಾರೆ. ಜತೆಗೆ ಅರಶಿನ ಕುಂಕುಮವೂ ಇದೆ.

ಜೆಡಿಎಸ್‌ ಗಿಫ್ಟ್‌

ಇಬ್ಬರೂ ಟಿಕೆಟ್‌ ಆಕಾಂಕ್ಷಿಗಳ ಗಿಫ್ಟ್‌ ಪಾಲಿಟಿಕ್ಸ್‌ನಿಂದ ಚಾಕಲವೇಲು ಗ್ರಾಮದಲ್ಲಿ ಜನರಿಗೆ ಖುಷಿಯೋ ಖುಷಿ. ಎರಡೂ ತಂಡಗಳ ಮಾತಿಗೆ ತಲೆದೂಗಿ ಗಿಫ್ಟ್‌ ಸ್ವೀಕರಿಸುತ್ತಿದ್ದಾರೆ.

ಶೃಂಗೇರಿಯಲ್ಲಿ ಗಿಫ್ಟ್‌ ಹಂಚಿಕೆ

ಶೃಂಗೇರಿ: ಶಾರದಾಂಬೆ ನೆಲೆವೀಡಾದ ಶೃಂಗೇರಿಯಲ್ಲಿ ಕಾಂಗ್ರೆಸ್‌ ಶಾಸಕರಾದ ಟಿ.ಡಿ. ರಾಜೇಗೌಡ ಅವರ ಭಾವಚಿತ್ರ ಇರುವ ಕುಕ್ಕರ್‌ ವಿತರಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಕಾರ್ಯಕರ್ತರು ಮನೆ ಮನೆಗೆ ಕುಕ್ಕರ್‌ ವಿತರಿಸುತ್ತಿರುವುದು ಕಂಡುಬಂದಿದೆ.

ಕಾಂಗ್ರೆಸ್ ಮುಖಂಡ ಬೇಗಾರು ರಮೇಶ್ ನೇತೃತ್ವದಲ್ಲಿ ಶೃಂಗೇರಿ ಕ್ಷೇತ್ರದಲ್ಲಿ ಮನೆ-ಮನೆಗೆ ಕುಕ್ಕರ್ ವಿತರಣೆ ನಡೆಯುತ್ತಿದೆ. ಇದರ ಜತೆಗೇ ಹಾಲಿ ಶಾಸಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶವೂ ಕಾಣಿಸಿಕೊಂಡಿದೆ.

ಶಾಸಕರು ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಅಭಿವೃದ್ಧಿ ಕೆಲಸ ಮಾಡುವ ಬದಲು ಕುಕ್ಕರ್ ಕೊಟ್ಟು ಮತ ಕೇಳುತ್ತಿದ್ದಾರೆ ಎಂದು ಲೇವಡಿ ಮಾಡಲಾಗುತ್ತಿದೆ.

ಶೃಂಗೇರಿ ಕ್ಷೇತ್ರದಾದ್ಯಂತ ಒಂದು ಲಕ್ಷಕ್ಕೂ ಅಧಿಕ ಕುಕ್ಕರ್ ವಿತರಣೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಇದರ ಬಗ್ಗೆ ಮಾಹಿತಿಗಳು ಸ್ಪಷ್ಟವಾಗಿಲ್ಲ.

ಬೆಳಗಾವಿ, ತುಮಕೂರು, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಲ್ಲಿ ಪಕ್ಷ ಬೇಧವಿಲ್ಲದೆ ಕುಕ್ಕರ್‌ ಹಂಚಿಕೆ ಅವ್ಯಾಹತವಾಗಿ ನಡೆಯುತ್ತಿರುವುದು ಕಂಡುಬಂದಿದೆ. ಚುನಾವಣೆ ಷೋಷಣೆಗೆ ಮುನ್ನ ನಾನಾ ಕಾರಣಗಳನ್ನು ಇಟ್ಟುಕೊಂಡು ಜನರ ಮತ ಸೆಳೆಯಲು ಈ ಪ್ರಯತ್ನ ನಡೆದಿದೆ.

ಇದನ್ನೂ ಓದಿ : Karnataka Election | ಲಕ್ಷ್ಮಿ ಹೆಬ್ಬಾಳ್ಕರ್‌ ಕ್ಷೇತ್ರದಲ್ಲಿ ಗಿಫ್ಟ್‌ ಪಾಲಿಟಿಕ್ಸ್‌ ಬಳಿಕ ಈಗ ಆಣೆ ಪ್ರಮಾಣ ರಾಜಕೀಯ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಪ್ರಜ್ವಲ್‌ ರೇವಣ್ಣ ವಿಡಿಯೋ ಡ್ರೈವರ್‌ ಮೊಬೈಲ್‌ಗೆ ಲೀಕ್‌ ಆಗಿದ್ದು ಹೀಗೆ!

Prajwal Revanna Case: ಪ್ರಜ್ವಲ್‌ ರೇವಣ್ಣ ನಡೆಸಿದ ಪ್ರತಿಯೊಂದು ಲೈಂಗಿಕ ಸಾಹಸವನ್ನೂ ಮೊಬೈಲ್‌ನಲ್ಲಿ ಸೆಲ್ಫ್‌ ವಿಡಿಯೋ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಆದರೆ ಎಲ್ಲೂ ಹಂಚಿಕೊಂಡಿರಲಿಲ್ಲ. ಇವು ಪ್ರಜ್ವಲ್ ಮೊಬೈಲ್‌ನಿಂದ ಲೀಕ್ ಆಗಿದ್ದೇ ರೋಚಕ ಎಪಿಸೋಡ್.‌ ಪ್ರಜ್ವಲ್‌ಗೂ ಗೊತ್ತಾಗದಂತೆ ಅವರ ಮೊಬೈಲ್‌ನಿಂದ ವಿಡಿಯೋಗಳನ್ನು ಕಾರ್ತಿಕ್ ಎಗರಿಸಿದ್ದ.

VISTARANEWS.COM


on

prajawal revanna case driver karthik phone
Koo

ಹಾಸನ: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ (Prajwal Revanna Case) ಅಶ್ಲೀಲ ವೀಡಿಯೋ (Obscene video) ಹೊಂದಿದ ಪೆನ್‌ಡ್ರೈವ್ (pendrive) ವೈರಲ್ (viral video) ಆಗಿರುವ ಪ್ರಕರಣದಲ್ಲಿ, ಖತರ್‌ನಾಕ್‌ ಡ್ರೈವರ್‌ ಕಾರ್ತಿಕ್‌ ಬಗ್ಗೆ ಇನ್ನಷ್ಟು ವಿವರಗಳು ಹೊರಬೀಳುತ್ತಿವೆ. ಪ್ರಜ್ವಲ್‌ ರೇವಣ್ಣ ಮಾಡಿಕೊಂಡಿದ್ದ ಅಶ್ಲೀಲ ವಿಡಿಯೋಗಳು ಡ್ರೈವರ್‌ ಕಾರ್ತಿಕ್‌ ಮೊಬೈಲ್‌ಗೆ ದಾಟಿಕೊಂಡದ್ದು ಹೇಗೆ ಅನ್ನುವುದೇ ರೋಚಕವಾದ ಸಂಗತಿಯಾಗಿದೆ.

ಪ್ರಜ್ವಲ್‌ ರೇವಣ್ಣ ನಡೆಸಿದ ಪ್ರತಿಯೊಂದು ಲೈಂಗಿಕ ಸಾಹಸವನ್ನೂ ಮೊಬೈಲ್‌ನಲ್ಲಿ ಸೆಲ್ಫ್‌ ವಿಡಿಯೋ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಆದರೆ ಎಲ್ಲೂ ಹಂಚಿಕೊಂಡಿರಲಿಲ್ಲ. ಇವು ಪ್ರಜ್ವಲ್ ಮೊಬೈಲ್‌ನಿಂದ ಲೀಕ್ ಆಗಿದ್ದೇ ರೋಚಕ ಎಪಿಸೋಡ್.‌ ಪ್ರಜ್ವಲ್‌ಗೂ ಗೊತ್ತಾಗದಂತೆ ಅವರ ಮೊಬೈಲ್‌ನಿಂದ ವಿಡಿಯೋಗಳನ್ನು ಕಾರ್ತಿಕ್ ಎಗರಿಸಿದ್ದ.

ಕಾರ್ತಿಕ್ ಮತ್ತು ಪ್ರಜ್ವಲ್ ಸ್ನೇಹಿತರ ರೀತಿ ಇದ್ದರು. ಪ್ರಜ್ವಲ್ ಮೊಬೈಲ್‌ನಲ್ಲಿ ಈ ಅಶ್ಲೀಲ ವಿಡಿಯೋಗಳು ಇರುವುದು ಕಾರ್ತಿಕ್‌ಗೆ ಗೊತ್ತಿತ್ತು. ಇವನ್ನು ಕದಿಯಲು ಕಾರ್ತಿಕ್‌ ಖತರ್‌ನಾಕ್‌ ಪ್ಲಾನ್‌ ಮಾಡಿಕೊಂಡಿದ್ದ. ಅದಕ್ಕಾಗಿಯೇ ಹೊಸ ಮೊಬೈಲ್ ಖರೀದಿ ಮಾಡಿದ್ದ. 1.45 ಲಕ್ಷ ರೂ. ಕೊಟ್ಟು ಆಪಲ್ ಮೊಬೈಲ್ ಖರೀದಿಸಿ ಏರ್ ಡ್ರಾಪ್ ಮೂಲಕ ಸೆಂಡ್ ಮಾಡಿಕೊಂಡಿದ್ದ.

ನಂತರ ಪ್ರಜ್ವಲ್ ಮೊಬೈಲ್ ಪಾಸ್‌ವರ್ಡ್ ತಿಳಿದುಕೊಂಡಿದ್ದ. ʼBOSS’ ಎಂಬುದನ್ನು ಹೋಲುವ 8055 ಕೊನೆಯ ನಂಬರ್ ಇಟ್ಟುಕೊಂಡಿದ್ದ ಪ್ರಜ್ವಲ್ ರೇವಣ್ಣ ತಮ್ಮ ಮೊಬೈಲ್‌ ಜೊತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ, ಕಾರಿನಲ್ಲಿಯೇ ನಿದ್ರೆಗೆ ಜಾರಿದಾಗ ಅದರಿಂದ ವಿಡಿಯೋಗಳನ್ನು ತನ್ನ ಹೊಸ ಮೊಬೈಲ್‌ಗೆ ಕಾರ್ತಿಕ್‌ ಬ್ಲೂಟೂತ್‌ ಮೂಲಕ ಸೆಂಡ್ ಮಾಡಿಕೊಂಡಿದ್ದ ಎಂದು ಗೊತ್ತಾಗಿದೆ.

ಎಲ್ಲಿದ್ದಾನೆ ಕಾರ್ತಿಕ್?‌

ಈ ನಡುವೆ ವೈರಲ್ ವೀಡಿಯೋದ ಮೂಲ ವ್ಯಕ್ತಿ, ಡ್ರೈವರ್ ಕಾರ್ತಿಕ್ ನಾಪತ್ತೆಯಾಗಿದ್ದಾನೆ. ಪ್ರಜ್ವಲ್ ರೇವಣ್ಣ ಸಂಸದ ಆಗುವ ಮೊದಲಿನಿಂದಲೂ ಸುಮಾರು 13 ವರ್ಷ ಈತ ಅವರ ಕಾರು ಚಾಲಕನಾಗಿದ್ದ. ಹೊಳೆನರಸೀಪುರ ತಾಲ್ಲೂಕಿನ ಕಡುವಿನಕೋಟೆ‌ ಗ್ರಾಮದ ಕಾರ್ತಿಕ್, ಎರಡು ದಿನಗಳ ಹಿಂದೆಯೇ ಎಸ್ಐಟಿ ಮುಂದೆ ಹಾಜರಾಗುವುದಾಗಿ ಹೇಳಿರುವ ವೀಡಿಯೋ ಬಿಡುಗಡೆ ಮಾಡಿದ್ದ. ಹೀಗಾಗಿ ಎಸ್‌ಐಟಿ ಕೂಡ ಆತನನ್ನು ಟ್ರೇಸ್‌ ಮಾಡಲು ಮುಂದಾಗಿರಲಿಲ್ಲ.

ತಾನೇ ಖುದ್ದು ಎಸ್ಐಟಿ ಮುಂದೆ ಹಾಜರಾಗುವ ಹೇಳಿಕೆ ನೀಡಿದ ಬಳಿಕ ಕಾರ್ತಿಕ್‌ ನಾಪತ್ತೆಯಾಗಿದ್ದಾನೆ. ವೀಡಿಯೋ ಇದ್ದ ಪೆನ್ ಡ್ರೈವ್ ವಕೀಲ ದೇವರಾಜೇ ಗೌಡಗೆ ಕೊಟ್ಟಿದ್ದು ನಾನೇ ಎಂದಿದ್ದ ಕಾರ್ತಿಕ್. ವೀಡಿಯೋಗಳ ಮೂಲ ವ್ಯಕ್ತಿ ನಾನೇ ಅಂದರೂ ಇನ್ನು ಆತನನ್ನು ವಿಚಾರಣೆಗೆ ಒಳಪಡಿಸಿಲ್ಲ. ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್‌ಗೆ ನೊಟೀಸ್ ಅನ್ನೂ ಎಸ್ಐಟಿ ನೀಡಿರಲಿಲ್ಲ.

ಇದೀಗ ಕಾರ್ತಿಕ್ ಮಲೇಷ್ಯಾಗೆ ತೆರಳಿದ್ದಾನೆ; ಈತನ ನಾಪತ್ತೆ ಹಿಂದೆ ಪ್ರಭಾವಿಗಳ ಕೈವಾಡ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಅವರು ʼರಾಮನಗರ ಬ್ರದರ್ಸ್‌ʼ ಕಡೆ ಕೈತೋರಿಸಿದ್ದಾರೆ. ಎರಡನೇ ಹಂತದ ಚುನಾವಣೆ ಮುಗಿಯುವವರೆಗೂ ಪ್ರಕರಣದ ಬಿಸಿಯನ್ನು ಚಾಲ್ತಿಯಲ್ಲಿಡಲು ಪ್ರಯತ್ನಿಸಲಾಗುತ್ತಿದೆ ಎನ್ನಲಾಗುತ್ತಿದೆ. ಎಸ್ಐಟಿ ಮುಂದೆ ಹಾಜರಾಗುವುದಾಗಿ ಹೇಳಿಕೆ ನೀಡಿ ಎಸ್ಕೇಪ್ ಆಗಿರುವ ಬಗ್ಗೆ ಹಲವು ಅನುಮಾನ ಮೂಡಿದ್ದು, ಕಾರ್ತಿಕ್‌ ಇವರೆಲ್ಲರ ದಾರಿ ತಪ್ಪಿಸಿದನೇ ಅಥವಾ ಇದರ ಹಿಂದಿನ ಮಾಸ್ಟರ್‌ ಮೈಂಡ್‌ಗಳು ಬೇರೆ ಯಾರಾದರೂ ಇದ್ದಾರಾ ಎಂದು ಅನುಮಾನ ಮೂಡಿದೆ.

ಈ ನಡುವೆ ಎಸ್ಐಟಿ ತನಿಖೆ ಚುರುಕುಗೊಳಿಸಿದೆ ಎಂದು ಹೇಳಲಾಗಿದ್ದು, ದೂರುದಾರ ಸಂತ್ರಸ್ತ ಮಹಿಳೆಯರು ಹಾಗೂ ವಿಡಿಯೋಗಳಲ್ಲಿ ಇರುವ ಸಂತ್ರಸ್ತ ಮಹಿಳೆಯರ ವಿಚಾರಣೆ ಮುಂದುವರಿದಿದೆ. ಆದರೆ ದೂರುದಾರೆ ಹೊರತುಪಡಿಸಿ ಇತರ ಮಹಿಳೆಯರು, ತಮ್ಮನ್ನು ತನಿಖೆಗೆ ಬಲವಂತಪಡಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ತಮ್ಮ ಗುರುತು ಪರಿಚಯ ಬಹಿರಂಗಪಡಿಸಿದರೆ ತಮ್ಮ ಕುಟುಂಬಕ್ಕೆ ಸಮಸ್ಯೆಯಾಗಲಿದ್ದು, ಹೀಗಾಗಿ ತನಿಖೆಗೆ ಬರುವುದಿಲ್ಲ ಎಂದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ವಿಡಿಯೋ ಬಿಟ್ಟ ಕಾರ್ತಿಕ್‌ನನ್ನು ಮಲೇಷ್ಯಾಕ್ಕೆ ಕಳಿಸಿದವರು ಯಾರು?

Continue Reading

ಬೆಂಗಳೂರು ಗ್ರಾಮಾಂತರ

Road Accident : ಚಲಿಸುತ್ತಿರುವಾಗಲೇ ಬಸ್‌ನಿಂದ ಕಳಚಿಕೊಂಡ ಚಕ್ರಗಳು; ಗಲಿಬಿಲಿಗೊಂಡ ಪ್ರಯಾಣಿಕರು

Road Accident : ಕೆಎಸ್‌ಆರ್‌ಟಿಸಿ ಬಸ್‌ (KSRTC Bus) ಚಲಿಸುತ್ತಿರುವಾಗಲೇ ಅದರ ಹಿಂಬದಿ ಚಕ್ರ ಕಳಚಿ ಬಿದ್ದಿದೆ. ಇದರಿಂದಾಗಿ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಕೆಲ ಸಮಯದವರೆಗೆ ಆತಂಕಕ್ಕೀಡಾಗಿದ್ದರು.

VISTARANEWS.COM


on

By

Road Accident in anekal
Koo

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ (Anekal News) ತಾಲೂಕಿನ ಸಮಂದೂರು ಬಳಿ ಚಲಿಸುತ್ತಿದ್ದ ಸಾರಿಗೆ ಬಸ್‌ನ (KSRTC Bus) ಚಕ್ರ ಕಳಚಿಕೊಂಡು (road Accident) ಬಿದ್ದಿದೆ. ಇದರಿಂದಾಗಿ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ.

ಚಾಲಕ ಸಮಯಪ್ರಜ್ಞೆ ಮೆರೆದು ತಕ್ಷಣವೇ ವಾಹನ ನಿಲ್ಲಿಸಿದ್ದಾರೆ. ಬಸ್‌ ತುಂಬಾ ವೇಗವಾಗಿಯೇನೂ ಹೋಗುತ್ತಿರಲಿಲ್ಲ. ಒಂದೊಮ್ಮೆ ವೇಗವಾಗಿ ಸಾಗುತ್ತಿದ್ದರೆ ಕಳಚಿಕೊಂಡ ಚಕ್ರ, ವೇಗವಾಗಿ ಹೋಗಿ ಯಾವುದೋ ವಾಹನಕ್ಕೆ ಅಥವಾ ಪಾದಚಾರಿಗಳಿಗೆ ಬಡಿದು ದೊಡ್ಡ ಅನಾಹುತ ಸಂಭವಿಸುವ ಅಪಾಯವಿತ್ತು. ಅದೃಷ್ಟವಶಾತ್‌ ಅಂತ ಅವಘಡ ಸಂಭವಿಸಿಲ್ಲ. ಬಸ್ಸಿನ ಹಿಂಬದಿ ಒಮ್ಮೆಗೇ ನೆಲಕ್ಕೆ ಬಡಿದಿದ್ದರಿಂದ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿತ್ತು.

ಆನೇಕಲ್ ಘಟಕಕ್ಕೆ ಸೇರಿದ ಕೆಎಸ್ಆರ್‌ಟಿಸಿ ಬಸ್ ಆನೇಕಲ್ ಕಡೆಯಿಂದ ಸಮಂದೂರು ಮಾರ್ಗವಾಗಿ ಹೊರಟಿತ್ತು. ಸಮಂದೂರು ಸಮೀಪ ಬರುತ್ತಿದ್ದಾಗ ಏಕಾಏಕಿ ಟೈರ್‌ಗಳು ಕಳಚಿಕೊಂಡಿವೆ. ಕೂಡಲೇ ಚಾಲಕ ಬಸ್ ನಿಲ್ಲಿಸಿದ್ದಾರೆ. ಚಾಲಕನು ಏಕಾಏಕಿ ಬ್ರೇಕ್‌ ಹಾಕಿದ ಕಾರಣ ಜನ ಗಲಿಬಿಲಿಗೊಂಡರು. ಕೂಡಲೇ ಕೆಳಗಿಳಿದು ನೋಡಿದಾಗ ಬಸ್‌ ಚಕ್ರ ಬಿದ್ದಿದ್ದನ್ನು ಕಂಡು ಮತ್ತಷ್ಟು ಗಾಬರಿಗೊಂಡರು. ಅಬ್ಬಾ ಯಾವುದೇ ಅಪಾಯ ಎದುರಾಗಲಿಲ್ಲ ಎಂದು ನಿಟ್ಟುಸಿರುಬಿಟ್ಟರು. ‌

ಕಂಡಿಷನ್‌ ಇಲ್ಲದ ಬಸ್‌ಗಳನ್ನು ರಸ್ತೆಗಿಳಿಸುವ ಡಿಪೋ ಅಧಿಕಾರಿಗಳ ಬೇಜವಬ್ದಾರಿತನಕ್ಕೆ ಕಿಡಿಕಾರಿದರು. ಪ್ರಯಾಣಿಕರ ಜೀವದ ಜತೆ ಚೆಲ್ಲಾಟವಾಡುವ, ಬಸ್ ಚಾಲಕ ಹಾಗೂ ನಿರ್ವಾಹಕರ ಜೀವಕ್ಕೂ ಗ್ಯಾರಂಟಿ ಇಲ್ಲದಂತಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ: SSLC Result 2024: ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ದಿನ ಫಿಕ್ಸ್

ಅಸಾದುದ್ದೀನ್‌ ಓವೈಸಿಯ ಭರ್ಜರಿ ಬೈಕ್‌ ರೈಡ್‌;ವಿಡಿಯೋ ವೈರಲ್‌

ಹೈದರಾಬಾದ್‌: ಎಐಎಂಐಎಂ ಅಧ್ಯಕ್ಷ, ಸಂಸದ ಅಸಾದುದ್ದೀನ್‌ ಓವೈಸಿ(Asaduddin Owaisi) ಭರ್ಜರಿಯಾಗಿ ಬೈಕ್‌ ರೈಡಿಂಗ್‌(Bike ride) ಮಾಡುತ್ತಾ ಪ್ರಚಾರ ನಡೆಸಿದ್ದಾರೆ. ಹೈದರಾಬಾದ್‌(Hyderabad) ಕ್ಷೇತ್ರದಲ್ಲಿ ನೀಲಿ ಬಣ್ಣದ ಕುರ್ತಾ ಮತ್ತು ಬಿಳಿ ಪೈಜಾಮಾ ಧರಿಸಿ ತಮ್ಮ ಟ್ರಿಯಂಫ್‌ ಬೊನ್ನೆವಿಲ್ಲೆ(Triumph Bonneville) ಬೈಕ್‌ನಲ್ಲಿ ಸಾರ್ವಜನಿಕ ಸಭೆಗೆ ಆಗಮಿಸುವ ಮೂಲಕ ಓವೈಸಿ ಎಲ್ಲರ ಗಮನ ಸೆಳೆದಿದ್ದಾರೆ. ಓವೈಸಿ ಅವರು ತಮ್ಮ ಬೆಂಬಲಿಗರೊಂದಿಗೆ ಬೈಕ್‌ ರೈಡ್‌ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಬರೋಬ್ಬರಿ ನಾಲ್ಕು ಬಾರಿ ಹೈದರಾಬಾದ್‌ ಕ್ಷೇತ್ರವನ್ನು ಪ್ರತಿನಿಧಿಸಿರುವ ಓವೈಸಿ, ಮೇ 13ರಂದು ನಡೆಯಲಿರುವ ನಡೆಯಲಿರುವ ನಾಲ್ಕನೇ ಹಂತದ ಚುನಾವಣೆಗೆ ಮನೆ ಮನೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ನಾಲ್ಕನೇ ಹಂತದಲ್ಲಿ ತೆಲಂಗಾಣದ ಎಲ್ಲಾ 17ಲೋಕಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ. ಇನ್ನು ಓವೈಸಿ ಎದುರು ಬಿಜೆಪಿಯ ಮಾಧವಿ ಲತಾ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ ಓವೈಸಿ ಬಿಜೆಪಿಯ ಭಗವಂತ್‌ ರಾವ್‌ ಅವರನ್ನು 2.5 ಲಕ್ಷ ಮತಗಳಿಂದ ಸೋಲಿಸಿದ್ದರು. ಹೈದರಾಬಾದ್‌ ಲೋಕಭಾ ಕ್ಷೇತ್ರ ಬಹದ್ದೂರ್‌ಪುರ, ಚಂದ್ರಯಾನ್‌ಗುಟ್ಟಾ. ಚಾರ್‌ಮಿನಾರ್‌, ಘೋಷಮಹಲ್‌, ಕಾರ್ವಾನ್‌, ಮಲಕಪೇಟೆ ಮತ್ತು ಯಾಕತ್‌ಪುರ ಸೇರಿದ್ದಂತೆ ಒಟ್ಟು 7ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿದೆ.

ಎರಡು ದಿನಗಳ ಹಿಂದೆ ಉತ್ತರಪ್ರದೇಶದ ಅಮೇಠಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡ ಸ್ಕೂಟರ್‌ನಲ್ಲಿ ತೆರಳಿ ಭರ್ಜರಿ ಪ್ರಚಾರ ಕೈಗೊಂಡಿದ್ದರು. ಸ್ಕೂಟರ್‌ ರೈಡ್‌ ಮಾಡಿಕೊಂಡು ತಮ್ಮ ಕ್ಷೇತ್ರಕ್ಕೆ ಬಂದಿದ್ದ ತಮ್ಮ ನೆಚ್ಚಿನ ನಾಯಕಿಯನ್ನು ಕಂಡು ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದರು. ಅವರ ಜೊತೆ ಸೆಲ್ಫಿ, ಫೊಟೋಗೆ ಪೋಸ್‌ ಕೊಟ್ಟರು. ಅಲ್ಲದೇ ಸ್ಥಳೀಯ ಬಿಜೆಪಿ ನಾಯಕರೊಂದಿಗೆ ಪ್ರಸ್ತು ಸ್ಥಿತಿಗತಿ ಬಗ್ಗೆ ಚರ್ಚಿಸಿದ್ದರು.

ಕಾಂಡೋಮ್‌ಗಳನ್ನು ಮುಸ್ಲಿಮರೇ ಹೆಚ್ಚು ಬಳಸ್ತಾರೆ

ಎರಡು ದಿನಗಳ ಹಿಂದೆ ಹೈದರಾಬಾದ್‌ನಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಓವೈಸಿ,ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಓವೈಸಿ, ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ. ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ. ನಮ್ಮ ಧರ್ಮ ಬೇರೆ ಆಗಿರಬಹುದು ಆದರೆ, ನಾವು ಕೂಡ ಈ ದೇಶದ ನಿವಾಸಿಗಳು ಎಂದಿದ್ದಾರೆ.
ಯಾಕೆ ದ್ವೇಷದ ಗೋಡೆ ಕಟ್ಟುತ್ತಿದ್ದೀರಿ?. ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೊಂದುತ್ತಾರೆ ಎಂಬ ಭಯವನ್ನು ಏಕೆ ಹರಡಲು ಪ್ರಯತ್ನಿಸುತ್ತಿದ್ದೀರಿ? ಮೋದಿ ಸರ್ಕಾರದ ಅಂಕಿ ಅಂಶಗಳ ಪ್ರಕಾರ, ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ದರ ಕುಸಿದಿದೆ ಎಂದಿದೆ. ಯಾಕೆಂದರೆ ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚಾಗಿ ಬಳಸುತ್ತಾರೆ. ಇದನ್ನು ಹೇಳಲು ನನಗೆ ಮುಜುಗರವಿಲ್ಲ ಎಂದು ಕಿಡಿಕಾರಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Rahul Gandhi: ಇಂದು ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ; ಪ್ರಜ್ವಲ್‌ ರೇವಣ್ಣ ವಿಚಾರ ತೆಗೀತಾರಾ?

Rahul Gandhi: ಕಾಂಗ್ರೆಸ್‌ನ ಚುನಾವಣೆ ಪ್ರಚಾರ ಸಭೆಗಳಲ್ಲಿ ಈಗ ಪ್ರಜ್ವಲ್ ಲೈಂಗಿಕ ಹಗರಣ ಹಾಟ್ ಟಾಪಿಕ್ ಆಗಿದೆ. ಪ್ರಜ್ವಲ್ ವಿಚಾರವನ್ನೆ ಬಹುದೊಡ್ಡ ಅಸ್ತ್ರವಾಗಿ ಎಐಸಿಸಿ ಪ್ರಯೋಗಿಸುತ್ತಿದೆ. ರಾಹುಲ್ ಗಾಂಧಿ ಇಂದಿನ ಭಾಷಣದಲ್ಲಿಯೂ ಪ್ರಜ್ವಲ್ ದೌರ್ಜನ್ಯ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಕಳೆದ ಸೋಮವಾರವಷ್ಟೇ ಪ್ರಜ್ವಲ್ ರೇವಣ್ಣ ವಿಚಾರವನ್ನು ಪ್ರಿಯಾಂಕಾ ಗಾಂಧಿ ಪ್ರಸ್ತಾಪ ಮಾಡಿದ್ದರು.

VISTARANEWS.COM


on

Rahul Gandhi
Koo

ಶಿವಮೊಗ್ಗ: ಶಿವಮೊಗ್ಗ (Shivamogga) ನಗರಕ್ಕೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭೇಟಿ ನೀಡಿ ಲೋಕಸಭೆ ಚುನಾವಣೆ (Lok sabha Election 2024) ಪ್ರಚಾರ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಶಿವಮೊಗ್ಗದ ಕೈ ಅಭ್ಯರ್ಥಿ ಪರ ಮತಯಾಚನೆ ನಡೆಸಲಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ (Prajwal revanna case) ಹಗರಣದ ವಿಚಾರವನ್ನು ನಿನ್ನೆ ಸೋಶಿಯಲ್‌ ಮೀಡಿಯಾದಲ್ಲಿ ಎತ್ತಿರುವ ರಾಹುಲ್‌ ಗಾಂಧಿ, ಇಂದು ಸಾರ್ವಜನಿಕ ಭಾಷಣದಲ್ಲಿಯೂ ಪ್ರಸ್ತಾಪಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ.

ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ (congress candidate) ಗೀತಾ ಶಿವರಾಜ್ ಕುಮಾರ್ (Geetha Shiv rajkumar) ಪರ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದು, ಅವರ ಜೊತೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಭಾಗವಹಿಸಲಿದ್ದಾರೆ.

ಶಿವಮೊಗ್ಗ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಕ್ಷೇತ್ರ ಗೆಲ್ಲಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಕುಟುಂಬದ ಮಗಳನ್ನು ಕಣಕ್ಕಿಳಿಸಿದ್ದು, ಪ್ರಚಾರಕ್ಕೆ ಜನಪ್ರಿಯ ಸ್ಟಾರ್‌ ಶಿವರಾಜ್‌ಕುಮಾರ್‌ ಕೂಡ ಆಗಮಿಸಿ ಪತ್ನಿಯ ಪರ ಬಿರುಗಾಳಿಯಂತೆ ಪ್ರಚಾರ ನಡೆಸುತ್ತಿದ್ದಾರೆ. ಸ್ವತಃ ಸಚಿವ ಮಧು ಬಂಗಾರಪ್ಪ, ತಮ್ಮ ಸೋದರಿಯ ಗೆಲುವಿಗಾಗಿ ಟೊಂಕ ಕಟ್ಟಿ ನಿಂತುಬಿಟ್ಟಿದ್ದಾರೆ. ಇನ್ನೊಂದು ಕಡೆ ಬಿಜೆಪಿಯ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಈಶ್ವರಪ್ಪನವರ ಬಂಡಾಯದಿಂದಾಗಿ ಸಂಕಷ್ಟ ಅನುಭವಿಸುತ್ತಿದ್ದಾರೆ.

ಮತ್ತೊಂದು ಕಡೆ ಪ್ರಜ್ವಲ್‌ ರೇವಣ್ಣ ಅವರ ಪ್ರಕರಣದಿಂದಾಗಿ ಬಿಜೆಪಿ ಹಾಗೂ ಜೆಡಿಎಸ್‌ ಮುಜುಗರ ಅನುಭವಿಸುತ್ತಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಹೋದಲ್ಲಿ ಬಂದಲ್ಲಿ ಈ ವಿಚಾರ ಎತ್ತಿ ಅಣಕಿಸುತ್ತಿದ್ದಾರೆ. ರಾಹುಲ್ ರಾಜ್ಯಕ್ಕೆ ಬಂದಾಗ ಪ್ರಚಾರದ ಕಣದಲ್ಲಿ ಈ ವಿಚಾರವನ್ನು ಎತ್ತಿ ಟೀಕಿಸಲಿದ್ದಾರೆಯೇ ಎಂಬ ಕುತೂಹಲ ಮೂಡಿದೆ. ಕಾಂಗ್ರೆಸ್‌ನ ಚುನಾವಣೆ ಪ್ರಚಾರ ಸಭೆಗಳಲ್ಲಿ ಈಗ ಪ್ರಜ್ವಲ್ ಲೈಂಗಿಕ ಹಗರಣ ಹಾಟ್ ಟಾಪಿಕ್ ಆಗಿದೆ. ಪ್ರಜ್ವಲ್ ವಿಚಾರವನ್ನೆ ಬಹುದೊಡ್ಡ ಅಸ್ತ್ರವಾಗಿ ಎಐಸಿಸಿ ಪ್ರಯೋಗಿಸುತ್ತಿದೆ. ರಾಹುಲ್ ಗಾಂಧಿ ಇಂದಿನ ಭಾಷಣದಲ್ಲಿಯೂ ಪ್ರಜ್ವಲ್ ದೌರ್ಜನ್ಯ ಬಗ್ಗೆ ಪ್ರಸ್ತಾಪ ಮಾಡುವ ಸಾಧ್ಯತೆ ಇದೆ. ಕಳೆದ ಸೋಮವಾರವಷ್ಟೇ ಪ್ರಜ್ವಲ್ ರೇವಣ್ಣ ವಿಚಾರವನ್ನು ಪ್ರಿಯಾಂಕಾ ಗಾಂಧಿ ಪ್ರಸ್ತಾಪ ಮಾಡಿದ್ದರು. ಪ್ರಜ್ವಲ್ ಪ್ರಕರಣ ಪ್ರಸ್ತಾಪ ‌ಮಾಡುವ ಮೂಲಕ ಪಿಎಂ ಮೋದಿಗೆ ಕುಟುಕಿದ್ದರು.

ಅಲ್ಲದೆ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಮೋದಿಯವರನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದರು. “ಕರ್ನಾಟಕದಲ್ಲಿ ಮಹಿಳೆಯರ ವಿರುದ್ಧ ನಡೆದ ಘೋರ ಅಪರಾಧಗಳ ಬಗ್ಗೆ ನರೇಂದ್ರ ಮೋದಿ ಮೌನ ವಹಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಪ್ರಧಾನಿ ಉತ್ತರಿಸಬೇಕು. ಎಲ್ಲ ಗೊತ್ತಿದ್ದರೂ ಕೇವಲ ಮತಕ್ಕಾಗಿ ನೂರಾರು ಹೆಣ್ಣು ಮಕ್ಕಳನ್ನು ಶೋಷಿಸುವ ರಾಕ್ಷಸನ ಪರ ಪ್ರಚಾರ ಮಾಡಿದ್ದು ಯಾಕೆ? ಅಷ್ಟಕ್ಕೂ, ಇಷ್ಟು ದೊಡ್ಡ ಕ್ರಿಮಿನಲ್ ದೇಶದಿಂದ ಹೇಗೆ ಸುಲಭವಾಗಿ ಹೇಗೆ ತಪ್ಪಿಸಿಕೊಂಡ? ಕೈಸರ್‌ಗಂಜ್‌ನಿಂದ ಕರ್ನಾಟಕದವರೆಗೆ, ಉನ್ನಾವೊದಿಂದ ಉತ್ತರಾಖಂಡದವರೆಗೆ ಹೆಣ್ಣು ಮಕ್ಕಳ ಪೀಡಕರಿಗೆ ಬೆಂಬಲ ನೀಡಲಾಗುತ್ತಿದೆ. ಪ್ರಧಾನಿ ಮೌನ ಬೆಂಬಲ ನೀಡುತ್ತಿರುವುದು ದೇಶಾದ್ಯಂತ ಅಪರಾಧಿಗಳಿಗೆ ಧೈರ್ಯ ತುಂಬಿದಂತಾಗುತ್ತಿದೆ. ಮೋದಿಯವರ ʼರಾಜಕೀಯ ಕುಟುಂಬದ’ ಭಾಗವಾಗುವುದು ಅಪರಾಧಿಗಳಿಗೆ ʼಭದ್ರತೆಯ ಖಾತರಿ’ ಆಗಿದೆಯೇ?” ಎಂದು ರಾಗಾ ಪ್ರಶ್ನಿಸಿದ್ದರು.

ಇಂದು ನಗರದ ಪ್ರೀಡಂ ಪಾರ್ಕ್‌ನ ಅಲ್ಲಮಪ್ರಭು ಮೈದಾನದಲ್ಲಿ ಕಾಂಗ್ರೆಸ್‌ನ ಬೃಹತ್ ಪ್ರಜಾಧ್ವನಿ ಸಮಾವೇಶ ನಡೆಯಲಿದೆ. ಸಚಿವ ಮಧು ಬಂಗಾರಪ್ಪ ಉಸ್ತುವಾರಿಯಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಶಿವಮೊಗ್ಗ ನಗರದಲ್ಲಿ ಇಂದು ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಯಲಿದೆ. ಗೀತಾರನ್ನು ಗೆಲ್ಲಿಸಲು ಪಣ ತೊಟ್ಟಿರುವ ನಟ ಶಿವರಾಜ್ ಕುಮಾರ್, ಮಧು ಬಂಗಾರಪ್ಪ ಕ್ಷೇತ್ರದ ತುಂಬಾ ಓಡಾಡಿ ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.

ಇಂದು ರಾಹುಲ್‌ ಗಾಂಧಿ ಭಾಗವಹಿಸಲಿರುವ ಪ್ರಜಾ ಧ್ವನಿ ಯಾತ್ರೆ ನಗರದ ಅಲ್ಲಮ ಪ್ರಭು ಮೈದಾನದಲ್ಲಿ ಬೆಳಿಗ್ಗೆ 11:30ರಿಂದ ಶುರುವಾಗಲಿದೆ. ಕಾರ್ಯಕ್ರಮದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸುವ ಸಾಧ್ಯತೆ ಇದೆ. ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಬೃಹತ್ ವೇದಿಕೆ ನಿರ್ಮಾಣ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: Congress Candidate List: ಅಮೇಥಿ, ರಾಯ್‌ ಬರೇಲಿಯಿಂದ ರಾಹುಲ್‌, ಪ್ರಿಯಾಂಕಾ ಸ್ಪರ್ಧಿಸುತ್ತಾರಾ? ಕುತೂಹಲಕ್ಕೆ ಇಂದು ತೆರೆ

Continue Reading

ಉದ್ಯೋಗ

Job Alert: ಗಮನಿಸಿ; ಹಟ್ಟಿ ಚಿನ್ನದ ಗಣಿ ಕಂಪನಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

Job Alert: ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿ ಅಸಿಸ್ಟಂಟ್‌ ಫಾರ್‌ಮನ್‌, ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ನಾಳೆ (ಮೇ 3) ಕೊನೆಯ ದಿನ. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿ (Hutti Gold Mines Company Limited)ಯು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (HGML Recruitment 2024). ಅಸಿಸ್ಟಂಟ್‌ ಫಾರ್‌ಮನ್‌, ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳಿವೆ. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ನಾಳೆ (ಮೇ 3). ಹೀಗಾಗಿ ಬೇಗ ಅಪ್ಲೈ ಮಾಡಿ (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟೆಂಟ್ ಫಾರ್‌ಮನ್‌ (ಗಣಿ)- 16 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಟಲರ್ಜಿ)- 7 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಲ್ಯಾಬ್ ಅಸಿಸ್ಟೆಂಟ್- 1 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಜಿಯಾಲಜಿ)- 3 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಡೈಮಂಡ್ ಡ್ರಿಲ್ಲಿಂಗ್ / ಅಂಡರ್ ಗ್ರೌಂಡ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಕ್ಯಾನಿಕಲ್)- 19 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಐಟಿಐ ಫಿಟ್ಟರ್ (ಗಣಿಗಾರಿಕೆ)- 56 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಫಿಟ್ಟರ್ (ಮೆಟಲ್)- 26 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಎಲೆಕ್ಟ್ರಿಕಲ್- 4 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಎಲೆಕ್ಟ್ರಿಕಲ್
ಅಸಿಸ್ಟೆಂಟ್ ಫಾರ್‌ಮನ್‌ (ಸಿವಿಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಎಲೆಕ್ಟ್ರಿಕಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಸೆಕ್ಯುರಿಟಿ ಇನ್ಸ್‌ಪೆಕ್ಟರ್‌- 6 ಹುದ್ದೆ, ವಿದ್ಯಾರ್ಹತೆ: ಪದವಿ
ಐಟಿಐ ಫಿಟ್ಟರ್ (ಸರ್ವೆ)- 2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಸೆಕ್ಯುರಿಟಿ ಗಾರ್ಡ್- 24 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ- 1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಮತ್ತು ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕರು / ಪಿಡಬ್ಲ್ಯುಡಿ ಅಭ್ಯರ್ಥಿಗಳು 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 20,920 ರೂ. – 48,020 ರೂ. ಮಾಸಿಕ ವೇತನ ಸಿಗಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (ಉಳಿಕೆ ಮೂಲ / ಸ್ಥಳೀಯೇತರ ವೃಂದ).

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದ).

ಅರ್ಜಿ ಸಲ್ಲಿಸಲು ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಫೋನ್‌ ನಂಬರ್‌, ಇಮೇಲ್‌ ವಿಳಾಸ ನೀಡಿ ಹೆಸರು ನೋಂದಾಯಿಸಿ.
  • HGML Assistant Foreman, ITI Fitter Apply Online ಲಿಂಕ್‌ ಕ್ಲಿಕ್‌ ಮಾಡಿ
  • ಅಗತ್ಯ ಮಾಹಿತಿಗಳನ್ನು ಎಚ್ಚರಿಕೆಯಿಂದ ತುಂಬಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲವೂ ಸರಿಯಾಗಿದೆ ಎನ್ನುವುದನ್ನು ಮತ್ತೊಮ್ಮೆ ಖಚಿತ ಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆ ಖಾಲಿ ಇದೆ; ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading
Advertisement
T20 World Cup
ಕ್ರಿಕೆಟ್6 mins ago

T20 World Cup: ಟಿ20 ವಿಶ್ವಕಪ್​ ತಂಡ ಸೇರಲು ರಾಹುಲ್​ಗೆ ಇನ್ನೂ ಇದೆ ಅವಕಾಶ

Health Tips
ಆರೋಗ್ಯ11 mins ago

Health Tips: ಕಿಡ್ನಿಕಲ್ಲಿನ ಸಮಸ್ಯೆ ನಿವಾರಣೆಗೆ ಬಾಳೆ ದಿಂಡನ್ನು ಹೀಗೆ ಬಳಸಿ…

Gangster Goldy Brar
ವಿದೇಶ18 mins ago

Gangster Goldy Brar:”ಶೂಟೌಟ್‌ನಲ್ಲಿ ಸತ್ತಿದ್ದು ಗ್ಯಾಂಗ್‌ಸ್ಟರ್‌ ಗೋಲ್ಡಿ ಬ್ರಾರ್‌ ಅಲ್ಲ”…ವದಂತಿಗೆ ತೆರೆ

prajawal revanna case driver karthik phone
ಕ್ರೈಂ21 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ವಿಡಿಯೋ ಡ್ರೈವರ್‌ ಮೊಬೈಲ್‌ಗೆ ಲೀಕ್‌ ಆಗಿದ್ದು ಹೀಗೆ!

Ilaiyaraaja Issues Legal Notice to Rajinikanth Coolie
ಕಾಲಿವುಡ್21 mins ago

Ilaiyaraaja Issues Legal Notice: ರಜನಿಕಾಂತ್‌ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ!

Road Accident in anekal
ಬೆಂಗಳೂರು ಗ್ರಾಮಾಂತರ36 mins ago

Road Accident : ಚಲಿಸುತ್ತಿರುವಾಗಲೇ ಬಸ್‌ನಿಂದ ಕಳಚಿಕೊಂಡ ಚಕ್ರಗಳು; ಗಲಿಬಿಲಿಗೊಂಡ ಪ್ರಯಾಣಿಕರು

Puttakkana Makkalu Serial puttakka daughter Sahana left home
ಕಿರುತೆರೆ1 hour ago

Puttakkana Makkalu Serial: ಅವ್ವನಂತೆ ಯಾರ ಹಂಗಿಲ್ಲದೆ ಬದುಕಲು ಮನೆ ಬಿಟ್ಟು ಹೊರಟೇ ಬಿಟ್ಟಳು ಸಹನಾ!

Mosquito controle
ಲೈಫ್‌ಸ್ಟೈಲ್1 hour ago

Mosquito control: ಸೊಳ್ಳೆ ಕಾಟಕ್ಕೆ ಬೇಸತ್ತಿದ್ದೀರಾ? ಹಾಗಿದ್ರೆ ಈ ಮನೆಮದ್ದನ್ನು ಟ್ರೈ ಮಾಡಿ ನೋಡಿ!

Health Plan
ಮನಿ-ಗೈಡ್1 hour ago

Money Guide: ಕಾರ್ಪೊರೇಟ್- ವೈಯಕ್ತಿಕ ಆರೋಗ್ಯ ವಿಮೆಯ ನಡುವಿನ ವ್ಯತ್ಯಾಸ ತಿಳಿದಿರಲಿ

New Food Rules
ಪ್ರಮುಖ ಸುದ್ದಿ1 hour ago

New Food Rules: ಆಹಾರ ಪದಾರ್ಥಗಳ ಬೆಲೆ ಏರಿಕೆಗೆ ಪಾಕ್‌ ಹೈರಾಣ-ಹೊಸ ಭಕ್ಷ್ಯ ನೀತಿ ಜಾರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌