Cows Death: ವಿಜಯ ಸಂಕಲ್ಪ ಯಾತ್ರೆಯ ತ್ಯಾಜ್ಯ ಸೇವಿಸಿ 7 ಹಸುಗಳ ಸಾವು - Vistara News

ರಾಯಚೂರು

Cows Death: ವಿಜಯ ಸಂಕಲ್ಪ ಯಾತ್ರೆಯ ತ್ಯಾಜ್ಯ ಸೇವಿಸಿ 7 ಹಸುಗಳ ಸಾವು

ಸುಮಾರು 1 ಸಾವಿರಕ್ಕಿಂತ ಹೆಚ್ಚಿನ ಕಾರ್ಯಕರ್ತರಿಗೆ ಭೋಜನ ನೀಡಲಾಗಿದ್ದು, ಕಾರ್ಯಕರ್ತರ ಭೋಜನ ಬಳಿಕ ಉಳಿದ ಆಹಾರ ಒಂದೆಡೆ ರಾಶಿ ಹಾಕಲಾಗಿತ್ತು. ಈ ತ್ಯಾಜ್ಯ ಆಹಾರ ತಿಂದು 7 ಹಸುಗಳು ಸಾವಿಗೀಡಾಗಿದ್ದು, ಇನ್ನೂ 8 ಹಸುಗಳು ಅಸ್ವಸ್ಥಗೊಂಡಿವೆ.

VISTARANEWS.COM


on

cows death
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಯಚೂರು: ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ತ್ಯಾಜ್ಯ ಆಹಾರ ಸೇವಿಸಿ 7ಕ್ಕೂ ಹೆಚ್ಚು ಹಸುಗಳು ಸಾವಿಗೀಡಾದ ಘಟನೆ ರಾಯಚೂರು ಹೊರವಲಯದ ಗುಂಜಳ್ಳಿ ಗ್ರಾಮದಲ್ಲಿ ನಡೆದಿದೆ.

ಕಳೆದ 10ನೇ ತಾರೀಕಿನಿಂದು ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆದಿತ್ತು. ತಿಪ್ಪರಾಜ್ ಹವಾಲ್ದಾರ್ ಪರ ಬಿಜೆಪಿ ನಾಯಕರು ಪ್ರಚಾರ ನಡೆಸಿದ್ದರು. ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿ. ಶ್ರೀರಾಮುಲು ಸಹ ಭಾಗಿಯಾಗಿದ್ದರು. ಗುಂಜಳ್ಳಿ ಗ್ರಾಮದಲ್ಲಿ ಕಾರ್ಯಕರ್ತರಿಗಾಗಿ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಸುಮಾರು 1 ಸಾವಿರಕ್ಕಿಂತ ಹೆಚ್ಚಿನ ಕಾರ್ಯಕರ್ತರಿಗೆ ಭೋಜನ ನೀಡಲಾಗಿದ್ದು, ಕಾರ್ಯಕರ್ತರ ಭೋಜನ ಬಳಿಕ ಉಳಿದ ಆಹಾರ ಒಂದೆಡೆ ರಾಶಿ ಹಾಕಲಾಗಿತ್ತು.

ಈ ತ್ಯಾಜ್ಯ ಆಹಾರ ತಿಂದು 7 ಹಸುಗಳು ಸಾವಿಗೀಡಾಗಿದ್ದು, ಇನ್ನೂ 8 ಹಸುಗಳು ಅಸ್ವಸ್ಥಗೊಂಡಿವೆ. ಹೊಟ್ಟೆ ಉಬ್ಬರಿಸಿಕೊಂಡು ಸರಣಿಯಾಗಿ ಸಾವನ್ನಪ್ಪಿವೆ. ಈ ಹಸುಗಳನ್ನು ಸಾಕುತ್ತಿದ್ದವರು ಯಾತ್ರೆ ಆಯೋಜಕರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟಾದರೂ ಬಿಜೆಪಿ ನಾಯಕರು ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿಲ್ಲ; ಇನ್ನೊಂದೆಡೆ ಪಶುವೈದ್ಯರು ಕೂಡ ಗ್ರಾಮಕ್ಕೆ ಭೇಟಿ ನೀಡದೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಸಂತ್ರಸ್ತರು ಕಿಡಿ ಕಾರಿದ್ದಾರೆ.

ಇದನ್ನೂ ಓದಿ: Vijayapura Road Accident: ವಿಜಯ ಸಂಕಲ್ಪ ಯಾತ್ರೆಯಲ್ಲಿ ಸರಣಿ ಕಾರು ಅಪಘಾತ; ದಾವಣಗೆರೆಯಲ್ಲಿ ಖಾಸಗಿ ಬಸ್ ಪಲ್ಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Food Poisoning : ಹೃದಯ ವಿದ್ರಾವಕ ಘಟನೆ; ವಿಷ ಆಹಾರ ಸೇವಿಸಿ ಇಬ್ಬರು ಮಕ್ಕಳ ಸಾವು, ಮೂವರು ಅಸ್ವಸ್ಥ

Food Poisoning: ಆರತಿ (7).ಪ್ರಿಯಾಂಕ್ (9) ಮೃತಪಟ್ಟ ಮಕ್ಕಳು. ಹುಸೇನಮ್ಮ (35).ಮಾರುತಿ (40) ಲಕ್ಷ್ಮಣ್ (60) ಅಸ್ವಸ್ಥರಾಗಿದ್ದಾರೆ. ಕೂಲಿ ಕೆಲಸಕ್ಕೆಂದು ವಡ್ಲೂರು ಗ್ರಾಮಕ್ಕೆ ಬಂದಿದ್ದ ಕುಟುಂಬವು ವಿಷಾಹಾರ ಸೇವನೆಯಿಂದ ಸಂಕಷ್ಟಕ್ಕೆ ಬಿದ್ದಿದೆ.

VISTARANEWS.COM


on

Food Poisoning
Koo

ರಾಯಚೂರು: ವಿಷ ಆಹಾರ ಸೇವನೆಯಿಂದಾಗಿ (Food Poisoning) ಅಸ್ವಸ್ಥಗೊಂಡ ಒಂದೇ ಕುಟುಂಬಕ್ಕೆ ಸೇರಿದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಮೂವರು ಸಂಪೂರ್ಣ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದಾರೆ. ರಾಯಚೂರು ತಾಲೂಕಿನ ವಡ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಅಸ್ವಸ್ಥಗೊಂಡಿರುವ ಮೂವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಆರತಿ (7).ಪ್ರಿಯಾಂಕ್ (9) ಮೃತಪಟ್ಟ ಮಕ್ಕಳು. ಹುಸೇನಮ್ಮ (35).ಮಾರುತಿ (40) ಲಕ್ಷ್ಮಣ್ (60) ಅಸ್ವಸ್ಥರಾಗಿದ್ದಾರೆ. ಕೂಲಿ ಕೆಲಸಕ್ಕೆಂದು ವಡ್ಲೂರು ಗ್ರಾಮಕ್ಕೆ ಬಂದಿದ್ದ ಕುಟುಂಬವು ವಿಷಾಹಾರ ಸೇವನೆಯಿಂದ ಸಂಕಷ್ಟಕ್ಕೆ ಬಿದ್ದಿದೆ.
ಅವರೆಲ್ಲರೂ ಮೂಲತ ಲಿಂಗಸಗೂರು ತಾಲೂಕಿನ ಕಮಲದಿನ್ನಿ ಗ್ರಾಮದ ನಿವಾಸಿಗಳು. ಇಟ್ಟಿಗೆ ತಯಾರಿಕೆಯಲ್ಲಿ ಕೂಲಿ ಕಾರ್ಮಿಕರಾಗಿ ವಡ್ಲೂರಿಗೆ ಬಂದಿದ್ದರು. ರಜೆ ನಿಮಿತ್ತ ಪೋಷಕರ ಬಳಿ ಇಬ್ಬರೂ ಮಕ್ಕಳು ಬಂದಿದ್ದರು.

ಅವರೆಲ್ಲರೂ ರಾತ್ರಿ ಊಟಕ್ಕೆ ಚಪಾತಿ. ಹೆಸರಕಾಳು. ಅನ್ನ.ಸಾಂಬಾರು ಸೇವಿಸಿದ್ದರು. ಆ ಬಳಿಕ ಅವರೆಲ್ಲರ ಆರೋಗ್ಯದಲ್ಲಿ ಏರುಪೇರಾಗಿದೆ. ಮಕ್ಕಳು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಯಮವೇಗದಲ್ಲಿ ಬಂದ ಇನೋವಾ ಕಾರು ಪಲ್ಟಿ, ಯುವತಿ ಸಾವು

ಉಡುಪಿ: ಅತಿ ವೇಗದಲ್ಲಿ ಸಾಗುತ್ತಿದ್ದ ಇನೋವಾ ಕಾರು ಪಲ್ಟಿಯಾಗಿ ಯುವತಿಯೊಬ್ಬಳು ಮೃತಪಟ್ಟ (Car Accident) ಘಟನೆ ನಡೆದಿದೆ. ಕುಂದಾಪುರ ಸಮೀಪದ ಹುಣ್ಸೆಮಕ್ಕಿ ಬಳಿಯ ಗುಡ್ಡೆಯಂಗಡಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚೆನ್ನಪಟ್ಟಣ ಮೂಲದ ಯುವತಿ ಕೀರ್ತಿ ಎಂಬುವರು ಅಪಘಾತದಲ್ಲಿ ಮೃತಪಟ್ಟವರು.

ಚೆನ್ನಪಟ್ಟಣ ಮೂಲದ ಅವರು ಧರ್ಮಸ್ಥಳಕ್ಕೆ ಬಂದಿದ್ದರು. ಅಲ್ಲಿಂದ ಅವರು ಮುರುಡೇಶ್ವರಕ್ಕೆ ಹೊರಟಿದ್ದರು. ಅತಿ ವೇಗದಲ್ಲಿ ಸಾಗುತ್ತಿದ್ದ ಕಾರು ಹುಣ್ಸೆಮಕ್ಕಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗೆ ಡಿಕ್ಕಿ ಹೊಡೆದಿದೆ. ಬಳಿಕ ಬಳಿಕ ರಸ್ತೆ ಬದಿಯ ಮರಕ್ಕೂ ಢಿಕ್ಕಿ ಹೊಡೆದು ಇನ್ನೋವಾ ಮಾತು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ತೀವ್ರತೆಗೆ ಕಾರಿನಲ್ಲಿದ್ದ 5 ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ. ಅಲ್ಲದೆ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಕೋಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka Weather : ಹುಷಾರ್‌.. ನಾಲ್ಕೈದು ದಿನ ಮತ್ತಷ್ಟು ಏರಲಿದೆ ಉರಿ ಬಿಸಿಲು; ಎಚ್ಚರ ತಪ್ಪಿದ್ರೆ ಅಪಾಯ ಗ್ಯಾರಂಟಿ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಏರಿಕೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜನ-ಸಾಮಾನ್ಯರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ. ಸಾಮಾನ್ಯಕ್ಕಿಂತ 2-3 ಡಿ.ಸೆ ಹೆಚ್ಚಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ (Dry Weather) ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ (heat Wave) ಪ್ರಭಾವ ಇರಲಿದೆ.

ಪ್ರಮುಖವಾಗಿ ಉತ್ತರ ಒಳನಾಡಿ ಬೀದರ್, ಕಲಬುರಗಿ, ವಿಯಜಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಹಾಗೂ ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಜತೆಗೆ ಹೀಟ್‌ ವೇವ್‌ ಹೆಚ್ಚಾಗುವ ಸಾಧ್ಯತೆ ಇದೆ.

ಬಿಸಿ ಗಾಳಿ ಎಚ್ಚರಿಕೆ

ಏಪ್ರಿಲ್ 27 ರಿಂದ ಮೇ 1ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 23 ಡಿ.ಸೆ ಇರುವ ಸಾಧ್ಯತೆ ಇದೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸೂರ್ಯನ ತಾಪವು ಜನರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಬೇವರಿಸುವ ಸೂರ್ಯನ ಶಾಖವು ಜನರು ಆರೋಗ್ಯದ ಮೇಲೂ ಪರಿಣಾಮ (Health Tips) ಬೀರುತ್ತಿದೆ. ಸಾರ್ವಜನಿಕರು ಏನು ಮಾಡಬೇಕು ಏನು ಮಾಡಬಾರದು ಎಂಬ ಮಾಹಿತಿ ಇಲ್ಲದೆ.

ತಾಪಮಾನದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳೇನು?

ಸಾಮಾನ್ಯವಾಗಿ ದೇಹದ ಉಷ್ಣತೆಯು 36.4 ಡಿ.ಸೆ ನಿಂದ 37.2 ಡಿ.ಸೆ ಇರಲಿದೆ. ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ ಉಷ್ಣತೆಯಿಂದಾಗಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ. ಸಾಧಾರಣದಿಂದ ತೀವ್ರ ಜ್ವರ, ಗಂಧೆಗಳು (prickly heat), ಊತಗಳು ( ಕೈ-ಕಾಲುಗಳು ಹಾಗೂ ಮೊಣಕಾಲು), ಉಷ್ಣತೆಯಿಂದ ಸೆಳೆತ (ಸ್ನಾಯುಗಳ ಸೆಳೆತ), ಪ್ರಜ್ಞೆ ತಪ್ಪುವುದು, ಸುಸ್ತಾಗುವುದು ಹಾಗೂ ಪಾಶ್ವವಾಯು ಉಂಟಾಗಲಿದೆ. ಕೆಲವೊಮ್ಮೆ ಅತಿಯಾದ ಉಷ್ಣತೆಯಿಂದಾಗಿ ಹೃದ್ರೋಗ, ಉಸಿರಾಟದ ಸಮಸ್ಯೆಗಳು ಹಾಗೂ ಕಿಡ್ನಿ ಸಮಸ್ಯೆಗಳು ಹೆಚ್ಚಾಗುತ್ತದೆ. ಅತಿಯಾದ ಬಾಯಾರಿಕೆ, ವಾಕರಿಕೆ ಅಥವಾ ವಾಂತಿಯಾಗುವುದು, ತಲೆನೋವು ಹಾಗೂ ಮೂತ್ರ ವಿಸರ್ಜನೆ ಪ್ರಮಾಣದಲ್ಲಿ ಕಡಿಮೆಯಾಗುವುದು ಹಾಗೂ ಹಳದಿ ಬಣ್ಣದ ಮೂತ್ರ, ಏರು ಗತಿಯ ಉಸಿರಾಟ ಹಾಗೂ ಹೃದಯದ ಬಡಿತ ಹೆಚ್ಚಾಗಲಿದೆ.

ಏನು ಮಾಡಬೇಕು?
-ತಕ್ಷಣವೇ ತಂಪಾದ ಸ್ಥಳಕ್ಕೆ ತೆರಳಿ ಮತ್ತು ದ್ರವಾಹಾರವನ್ನು ಸೇವಿಸಿ. ನೀರಿನ ಸೇವನೆ ಅತ್ಯುತ್ತಮ.
-ಹೆಚ್ಚು ನೀರು ಕುಡಿಯುವುದು. ಬಾಯಾರಿಕೆ ಇಲ್ಲದಿದ್ದರೂ ಆಗಾಗ ನೀರು ಸೇವಿಸಿ. ಜತೆಗೆ ನಿಂಬೆ ಹಣ್ಣಿನ ಶರಬತ್ತು, ಮಜ್ಜಿಗೆ, ಲಸ್ಸಿ ಹಾಗು ಹಣ್ಣಿನ ಜ್ಯೂಸ್‌ಗಳನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಸೇವಿಸುವುದು ಉತ್ತಮ.
-ಈ ಋತುಮಾನದಲ್ಲಿ ಲಭ್ಯವಿರುವ ಹಾಗೂ ಹೆಚ್ಚು ನೀರಿನ ಅಂಶವನ್ನು ಹೊಂದಿರುವ ಹಣ್ಣು ಹಾಗೂ ತರಕಾರಿಗಳಾದ ಕಲ್ಲಂಗಡಿ, ಕರಬೂಜ, ಕಿತ್ತಳೆ, ದ್ರಾಕ್ಷಿ, ಅನಾನಸ್, ಸೌತೆಕಾಯಿ, ಲೆಟೂಸ್, ಎಳನೀರುಗಳನ್ನು ಹೆಚ್ಚಾಗಿ ಸೇವಿಸಬೇಕು.
-ತಿಳಿ ಬಣ್ಣದ, ಅಳಕವಾದ (loose fitting) ಹತ್ತಿಯ ಬಟ್ಟೆಯನ್ನು ಧರಿಸುವುದು ಉತ್ತಮ.
-ಬಿಸಿಲಿನಲ್ಲಿ ಹೊರ ಹೋಗುವ ಸಂದರ್ಭಗಳಲ್ಲಿ ಛತ್ರಿ, ಟೋಪಿ/ಹ್ಯಾಟ್, ಟವೆಲ್ ಅಥವಾ ಇನ್ನಾವುದೇ ಸಾಂಪ್ರದಾಯಿಕ ಪದ್ಧತಿಯನ್ನು ಅನುಸರಿಸಿ ಬಿಸಿಲಿನಿಂದ ರಕ್ಷಣೆ ಪಡೆಯಿರಿ.
-ಬಿಸಿಲಿನಲ್ಲಿ ನಡೆಯುವ ಸಂದರ್ಭದಲ್ಲಿ ಪಾದರಕ್ಷೆ / ಚಪ್ಪಲಿ ಅಥವಾ ಶೂಸ್‌ಗಳನ್ನು ಧರಿಸಬೇಕು.
-ಸಾಧ್ಯವಾದಷ್ಟು ಒಳಾಂಗಣದಲ್ಲಿದ್ದು, ಉತ್ತಮ ಗಾಳಿ ಬೀಸುವ ಹಾಗೂ ತಣ್ಣಗಿರುವ ಪ್ರದೇಶದಲ್ಲಿರಿ. ನೇರವಾಗಿ ಸೂರ್ಯನ ಬೆಳಕು ಹಾಗೂ ಬಿಸಿ ಗಾಳಿಯು ಮನೆಯ ಒಳಗೆ ಬರದಂತೆ ತಡೆಯಲು ಹಗಲು ಹೊತ್ತಿನಲ್ಲಿ ಕಿಟಕಿಗಳನ್ನು ಪರದೆಗಳಿಂದ ಮುಚ್ಚಿ.

ಈ ಕೆಲಸವನ್ನು ಮಾಡಬಾರದು

-ಬಿಸಿಲಿನಲ್ಲಿ ಅಂದರೆ ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಹೊರಹೋಗುವುದನ್ನು ತಪ್ಪಿಸಿ.
-ಮಧ್ಯಾಹ್ನದ ಸಮಯದಲ್ಲಿ ಶ್ರಮದಾಯಕ ಹೊರಾಂಗಣ ಚಟುವಟಿಕೆಗಳನ್ನು ಕೈಗೊಳ್ಳಬಾರದು. ಚಪ್ಪಲಿ ಧರಿಸದೆ ಹೊರಹೋಗುವ ಅಭ್ಯಾಸವನ್ನು ತಪ್ಪಿಸಿ.
-ಮಧ್ಯಾಹ್ನ ಅಡುಗೆ ಮಾಡುವುದು ತಪ್ಪಿಸಿ. ಅಡುಗೆ ಸಿದ್ಧಪಡಿಸುವ ಪ್ರದೇಶದಲ್ಲಿ ಕಿಟಕಿ ಹಾಗೂ ಬಾಗಿಲುಗಳನ್ನು ತೆರೆದಿಡಿ.
-ಮಧ್ಯಪಾನ, ಟೀ, ಕಾಫಿ ಮತ್ತು ಕಾರ್ಬೋನೇಟೆಡ್ ಪಾನೀಯಗಳು ಅಥವಾ ಹೆಚ್ಚು ಸಕ್ಕರೆ ಅಂಶವನ್ನು ಹೊಂದಿದ ಪಾನೀಯಗಳಿಂದ ದೂರವಿರಿ. ಇಂತಹ ಪಾನೀಯಗಳು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ ಅಥವಾ ಹೊಟ್ಟೆ ನೋವನ್ನು ಉಂಟುಮಾಡುತ್ತವೆ.
-ಹೆಚ್ಚು ಪ್ರೊಟೀನ್ ಭರಿತವಾದ ಹಾಗೂ ಹಳೆಯದಾದ ಆಹಾರ ಪದಾರ್ಥಗಳನ್ನು ಸೇವಿಸಬೇಡಿ.
-ಮಕ್ಕಳು ಅಥವಾ ಸಾಕು ಪ್ರಾಣಿಗಳನ್ನು ನಿಲುಗಡೆ ಮಾಡಿರುವ ವಾಹನಗಳಲ್ಲಿ ಬಿಡಬೇಡಿ. ವಾಹನಗಳ ಒಳಾಂಗಣದಲ್ಲಿನ ಹೆಚ್ಚಿನಾಪಮಾನವು ಅಪಾಯಕಾರಿಯಾಗಬಹುದು.
-ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆಯ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಗ್ಲಾಸ್‌ ಅಥವಾ ಅದಕ್ಕಿಂತ ಹೆಚ್ಚಿನ ನೀರು ಕುಡಿಬೇಕು

Heat wave

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ದೂರ ಸರಿದ ಮಳೆ; ಬೆಂಗಳೂರಲ್ಲಿ 39ರ ಗಡಿದಾಟಲಿದೆ ಗರಿಷ್ಠ ಉಷ್ಣಾಂಶ! 15 ಜಿಲ್ಲೆಗಳಿಗೆ ಅಲರ್ಟ್‌

Temperature Warning: ಈ ವರ್ಷ ಬೆಂಗಳೂರು ತನ್ನೆಲ್ಲ ಹಳೆಯ ದಾಖಲೆಗಳನ್ನು ಮುರಿಯುತ್ತಾ ಬಂದಿದ್ದು, ಗರಿಷ್ಠ ತಾಪಮಾನವು ಮತ್ತಷ್ಟು ದುಪ್ಪಟ್ಟು ಆಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ನಡುವೆ 15 ಜಿಲ್ಲೆಗಳಿಗೆ ಹೀಟ್‌ ವೇವ್‌ ಅಲರ್ಟ್‌ (Heat Wave alert) ನೀಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಮಳೆಯು ದೂರ ಸರಿದಿದ್ದು, ಒಣಹವೆ (Karnataka Weather forecast) ಆವರಿಸಿದೆ. ರಾಜಧಾನಿ ಬೆಂಗಳೂರಲ್ಲಿ (temperature rising) ದಾಖಲೆಯ ಪ್ರಮಾಣದಲ್ಲಿ ಗರಿಷ್ಠ ಉಷ್ಣಾಂಶ ಏರಿಕೆ ಆಗುತ್ತಿದೆ. ಮಾರ್ಚ್‌ನಲ್ಲಿ ಹಳೆಯ ಎಲ್ಲ ದಾಖಲೆ ಮುರಿದಿದ್ದ ಬೆಂಗಳೂರಲ್ಲಿ ಇದೀಗ ಏಪ್ರಿಲ್‌ 28ರಂದು ಗರಿಷ್ಠ ಉಷ್ಣಾಂಶವು 39 ಡಿ.ಸೆಗೆ ಏರಿಕೆ ಆಗಲಿದೆ ಎಂದು ಹವಾಮಾನ ಇಲಾಖೆ (Bengaluru weather) ಮಾಹಿತಿ ನೀಡಿದೆ. ತಾಪಮಾನ (Bengaluru temperature) ಏರಿಕೆಯಿಂದ ಜನರು ಪರಿತಪಿಸುವಂತಾಗಿದೆ

ಕೂಲ್‌ ಸಿಟಿ (Cool city Bengaluru) ಎಂದು ಕರೆಸಿಕೊಳ್ಳುವ ಬೆಂಗಳೂರು ಹಾಟ್‌ ಸಿಟಿಯಾಗಿ (Bengaluru temperature) ಬದಲಾಗುತ್ತಿದೆ. ಬೆಂಗಳೂರಿನಲ್ಲೀಗ ದಾಖಲೆಯಲ್ಲಿ ಹೆಚ್ಚುತ್ತಿರುವ ತಾಪಮಾನದಿಂದ (Temperature Warning) ಸಿಟಿ ಜನರು ತತ್ತರಿಸಿ ಹೋಗಿದ್ದಾರೆ. ಬಿಸಿಲನಾಡು ಎಂದು ಕರೆಸಿಕೊಳ್ಳುವ ಉತ್ತರ ಒಳನಾಡಿನ ಜಿಲ್ಲೆಗಳಿಗೂ ರಾಜಧಾನಿ ಬೆಂಗಳೂರು ಅಕ್ಷರಶಃ ಸೆಡ್ಡು ಹೊಡೆಯುತ್ತಿದೆ.

ಮಾರ್ಚ್‌ ಬಳಿಕ ಏಪ್ರಿಲ್‌ ಮೊದಲ ವಾರದಲ್ಲೇ ಬೆಂಗಳೂರಿನಲ್ಲಿ ದಾಖಲೆಯ ಮಟ್ಟದಲ್ಲಿ ಗರಿಷ್ಠ ತಾಪಮಾನವು (Bengaluru heatwave) ದಾಖಲಾಗಿತ್ತು. ಇದೀಗ ಏಪ್ರಿಲ್‌ ಅಂತ್ಯದಲ್ಲೂ ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಹಗಲಿನಲ್ಲಿ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಕಂಡಿದೆ. ಇದರಿಂದಾಗಿ ಬಿಸಿಲ ಬೇಗೆಗೆ ತೇವಾಂಶದ ಕೊರತೆಯಿಂದಾಗಿ ಒಣ ಹವೆ (Bengaluru heat) ಮುಂದುವರಿದಿದೆ. ಇಷ್ಟೊಂದು ತಾಪಮಾನದಲ್ಲಿ ಜನರು ತಿರುಗಾಡಿದರೆ ಖಂಡಿತವಾಗಿಯೂ ಅನಾರೋಗ್ಯಕ್ಕೆ ತುತ್ತಾಗಲಿದ್ದಾರೆ.

ಇದನ್ನೂ ಓದಿ: Home Remedy For Cracked Heels: ಒಡೆದ ಹಿಮ್ಮಡಿಗಳಿಗೆ ಕರ್ಪೂರದ ಎಣ್ಣೆ ಪರಿಣಾಮಕಾರಿ

ಹೀಟ್‌ ವೇವ್‌ ಶಾಕ್‌

ರಾಜ್ಯದಲ್ಲಿ ಏ.28ರಂದು ಒಣಹವೆ ಮುಂದುವರಿಯಲಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹೀಟ್‌ ವೇವ್‌ ಹೆಚ್ಚಾಗಲಿದೆ. ಹೀಗಾಗಿ ಈ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಮುನ್ನೆಚ್ಚರಿಕೆಯನ್ನು ವಹಿಸುವಂತೆ ಸೂಚಿಸಲಾಗಿದೆ. ಜತೆಗೆ ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗುವ ಸಾಧ್ಯತೆ ಇದೆ.

ಇನ್ನೂ ಶುಕ್ರವಾರದಂದು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇತ್ತು. ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.2 ಡಿ.ಸೆ ದಾಖಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Food Poisoning: ಹಾಸ್ಟೆಲ್‌ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥ

Food Poisoning: ನಿನ್ನೆ ಮಧ್ಯಾಹ್ನದ ಊಟಕ್ಕೆ ಹಾಸ್ಟೆಲ್‌ ಸಿಬ್ಬಂದಿ ಚಪಾತಿ, ಅನ್ನ ಮತ್ತು ಸಾಂಬಾರು ವಿತರಿಸಿದ್ದರು. ಊಟವಾದ ನಂತರ ಹೊಟ್ಟೆ ನೋವು, ತಲೆ ಸುತ್ತುವಿಕೆಯಿಂದ ವಿದ್ಯಾರ್ಥಿನಿಯರು ಬಳಲುತ್ತಿದ್ದಾರೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ತಡರಾತ್ರಿಯೇ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

VISTARANEWS.COM


on

food poisoning raichur news
Koo

ರಾಯಚೂರು: ಹಾಸ್ಟೆಲ್‌ನಲ್ಲಿ ತಯಾರಿಸಲಾದ ಊಟ ಸೇವಿಸಿ 24ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ (Food poisoningw) ಘಟನೆ ರಾಯಚೂರು (Raichur news) ಜಿಲ್ಲೆಯ ಸಿಂಧನೂರು ಬಿಸಿಎಂ ಹಾಸ್ಟೆಲ್‌ನಲ್ಲಿ ನಡೆದಿದೆ.

ನಿನ್ನೆ ಮಧ್ಯಾಹ್ನದ ಊಟವನ್ನು ಸೇವಿಸಿದ ಬಳಿಕ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ನಿನ್ನೆ ಮಧ್ಯಾಹ್ನದ ಊಟಕ್ಕೆ ಹಾಸ್ಟೆಲ್‌ ಸಿಬ್ಬಂದಿ ಚಪಾತಿ, ಅನ್ನ ಮತ್ತು ಸಾಂಬಾರು ವಿತರಿಸಿದ್ದರು. ಊಟವಾದ ನಂತರ ಹೊಟ್ಟೆ ನೋವು, ತಲೆ ಸುತ್ತುವಿಕೆಯಿಂದ ವಿದ್ಯಾರ್ಥಿನಿಯರು ಬಳಲುತ್ತಿದ್ದಾರೆ. ಅಸ್ವಸ್ಥ ವಿದ್ಯಾರ್ಥಿನಿಯರನ್ನು ತಡರಾತ್ರಿಯೇ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಆದರೆ ತಾಲೂಕು ಆಸ್ಪತ್ರೆಯಲ್ಲಿ ರಾತ್ರಿ ವೈದ್ಯರು ಇಲ್ಲದ ಕಾರಣ ಅಸ್ವಸ್ಥ ವಿದ್ಯಾರ್ಥಿನಿಯರು ಪರದಾಟ ಅನುಭವಿಸಬೇಕಾಯಿತು. ಬಳಿಕ ಟಿಎಚ್‌ಓಗೆ ಕರೆ ಮಾಡಿ ಹಾಸ್ಟೆಲ್ ಸಿಬ್ಬಂದಿ ಮಾಹಿತಿ ತಿಳಿಸಿದ್ದರು. ಒಂದು ಗಂಟೆ ತಡವಾಗಿ ವಿದ್ಯಾರ್ಥಿನಿಯರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 240ಕ್ಕೂ ಹೆಚ್ಚು ಪದವಿಧರ ವಿದ್ಯಾರ್ಥಿನಿಯರು ಇರುವ ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್ ಇದಾಗಿದೆ.

ಮತದಾನ ಮುಗಿಸಿ ತೆರಳುತ್ತಿದ್ದಾಗ ಅಪಘಾತ, ಇಬ್ಬರು ಸಾವು

ಮೈಸೂರು: ಮತದಾನ ಮಾಡಿ ತೆರಳುತ್ತಿದ್ದ ವೇಳೆ ಅಪಘಾತ (Bike Accident) ನಡೆದು ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನಂಜನಗೂಡು ತಾಲೂಕಿನ ತಾಂಡವಪುರ ಬಳಿ ನಡೆದಿದೆ. ಪಾದಚಾರಿಗೆ ಬೈಕ್‌ ಡಿಕ್ಕಿ ಹೊಡೆದಿದ್ದರಿಂದ ಪಾದಚಾರಿ ಮತ್ತು ಬೈಕ್‌ ಸವಾರ ಮೃತಪಟ್ಟಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.

ಶಿವಣ್ಣ (40) ಹಾಗೂ ಬೈಕ್ ಸವಾರ ಮಿಥುನ್(19) ಮೃತ ದುರ್ದೈವಿಗಳು. ಮತ್ತೊಬ್ಬ ಸವಾರ ಅನಿಲ್ ಪಟೇಲ್ ಗಾಯಾಳು. ಶಿವಣ್ಣ ಮತ ಚಲಾಯಿಸಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ವೇಗವಾಗಿ ಬಂದ ಯುವಕರು, ನಡೆದು ತೆರಳುತ್ತಿದ್ದ ಶಿವಣ್ಣಗೆ ಡಿಕ್ಕಿ ಹೊಡೆದಿದ್ದರಿಂದ ಶಿವಣ್ಣ ಹಾಗೂ ಮಿಥುನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Road Accident: ಕಾರು ಟಯರ್‌ ಬ್ಲಾಸ್ಟ್ ಆಗಿ ಬೈಕ್‌ಗೆ ಡಿಕ್ಕಿ; ಇಬ್ಬರು ಸವಾರರ ದುರ್ಮರಣ

ಚುನಾವಣೆ ಗಲಾಟೆ, ವಾಟರ್ ಮ್ಯಾನ್ ಅನುಮಾನಾಸ್ಪದ ಸಾವು

ತುಮಕೂರು: ಚುನಾವಣೆ (Lok sabha Election 2024) ಸಂಬಂಧಿತ ಗಲಾಟೆ ಸಂಭವಿಸಿದ ಬಳಿಕ ವಾಟರ್ ಮ್ಯಾನ್ (Water man) ಒಬ್ಬರು ಅನುಮಾನಾಸ್ಪದವಾಗಿ (UDR Case, unnatural death) ಸಾವಿಗೀಡಾಗಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕು ಕಿಚ್ಚೇವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಚಂದ್ರಪ್ಪ (56) ಮೃತ ವಾಟರ್ ಮ್ಯಾನ್. ಹುಲಿಯೂರುದುರ್ಗ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಿನ್ನೆ ರಾತ್ರಿ ಕಾಂಗ್ರೆಸ್ ಕಾರ್ಯಕರ್ತರು “ನೀನು ಬಿಜೆಪಿ ಪರವಾಗಿ ಕೆಲಸ‌ ಮಾಡ್ತಿಯಾ?” ಎಂದು ಈತನ ಮೇಲೆ ಹಲ್ಲೆ (Assault case) ಮಾಡಿದ್ದರು ಎನ್ನಲಾಗಿದೆ. ಇಂದು ಬೆಳಗ್ಗೆ ನೇಣು ಬಿಗಿದ (Self Harming) ಸ್ಥಿತಿಯಲ್ಲಿ ಚಂದ್ರಪ್ಪ ಶವ ಪತ್ತೆಯಾಗಿದೆ. ಕಾಂಗ್ರೆಸ್ ಕಾರ್ಯಕರ್ತರಾದ ನಟೇಶ್, ರವೀಶ್, ವೆಂಕಟೇಶ, ಸಂತೋಷ ನಿನ್ನೆ ಗಲಾಟೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಮುಸ್ಲಿಮ್ ಯುವಕರಿಂದ ಬಸ್​ ಚಾಲಕನ ಮೇಲೆ ಹಲ್ಲೆ, ನೌಕರರಿಂದ ​ ಧರಣಿ

ಬೈಲಹೊಂಗಲ: ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಮುಸ್ಲಿಂ ಯುವಕರು ಹಲ್ಲೆ ಮಾಡಿದ ಘಟನೆ (Bus driver Attacked) ನಡೆದಿದೆ. ಆಕ್ರೋಶಗೊಂಡ ಸಾರಿಗೆ ನೌಕರರು ಬೈಲಹೊಂಗಲ ಪೊಲೀಸ್ ಠಾಣೆಯ ಮುಂದೆ ಧರಣಿ ಕುಳಿತರು. ಚಾಲಕ ಬಸ್ ನಿಲ್ಲಿಸಲಿಲ್ಲ ಎಂದು ಹಲ್ಲೆ ಮಾಡಿದ ಆರೋಪ ಕೇಳಿ ಬಂದಿದೆ.

ಧಾರವಾಡದಿಂದ ಬೈಲಹೊಂಗಕ್ಕೆ ಮುಸ್ಲಿಂ ಯುವಕರು ಬಂದಿದ್ದರು. ಬಸ್​​ ಬೈಲಹೊಂಗಲದಿಂದ ಧಾರವಾಡಕ್ಕೆ ಹೊರಟಿತ್ತು. ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಗುಂಪುಕಟ್ಟಿ ಹಲ್ಲೆ ನಡೆಸಿದ್ದರು. ಬೇಸತ್ತ ಚಾಲಕರು ವೃತ್ತಿಯ ವೇಳೆ ಸುರಕ್ಷತೆ ನೀಡಿ ಧರಣಿ ಮಾಡಿದ್ದರು. ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿರುವ ಸಾರಿಗೆ ಮೇಲಧಿಕಾರಿಗಳು ಬಂದು ಮಾತು ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ.

ಇದನ್ನೂ ಓದಿ: Drunken Driving: ಎರ‍್ರಾಬಿರ‍್ರಿ ಟಿಪ್ಪರ್ ಚಲಾಯಿಸಿ ಪಾದಚಾರಿಯನ್ನು ಕೊಂದ ಪಾನಮತ್ತ

Continue Reading
Advertisement
love jihad
ಕರ್ನಾಟಕ2 hours ago

Love Jihad Case: ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್; ಬಾಲಕಿಯನ್ನು ಪುಸಲಾಯಿಸಿ ಕರೆತಂದ ಅನ್ಯಕೋಮಿನ ಯುವಕ!

BUS
ಕರ್ನಾಟಕ2 hours ago

ಚಿಕ್ಕಮಗಳೂರಿನ ದತ್ತಪೀಠದಲ್ಲಿ 100 ಅಡಿ ಆಳಕ್ಕೆ ಬಿದ್ದ ಪ್ರವಾಸಿ ಬಸ್;‌ ಬಾಲಕ ಸಾವು, 29 ಮಂದಿಗೆ ಗಾಯ

ತುಮಕೂರು2 hours ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ2 hours ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ3 hours ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 20243 hours ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ3 hours ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ3 hours ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ3 hours ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ4 hours ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20249 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202412 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202413 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202414 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ17 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ21 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ3 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌