ಇಬ್ಬರು ಮಾಂಸದ ವ್ಯಾಪಾರಿಗಳ ಮೇಲೆ ಹಲ್ಲೆ, ಮುಖದ ಮೇಲೆ ಮೂತ್ರ ವಿಸರ್ಜನೆ; ಕೆಲಸ ಕಳೆದುಕೊಂಡ ಮೂವರು ಪೊಲೀಸ್​ - Vistara News

ಕ್ರೈಂ

ಇಬ್ಬರು ಮಾಂಸದ ವ್ಯಾಪಾರಿಗಳ ಮೇಲೆ ಹಲ್ಲೆ, ಮುಖದ ಮೇಲೆ ಮೂತ್ರ ವಿಸರ್ಜನೆ; ಕೆಲಸ ಕಳೆದುಕೊಂಡ ಮೂವರು ಪೊಲೀಸ್​

ಮುಸ್ತಫಾಬಾದ್​ ನಿವಾಸಿಯಾದ ನವಾಬ್​ ಘಾಜಿಪುರ ಕಸಾಯಿಖಾನೆಗೆ ಮಾಂಸ ಪೂರೈಕೆ ಮಾಡುತ್ತಿದ್ದ. ಮಾರ್ಚ್​ 7ರಂದು ಕೂಡ ಕಾರಿನಲ್ಲಿ ತನ್ನ ಕಸಿನ್​ ಶೋಯೆಬ್​ ಜತೆ ಹೋಗುತ್ತಿದ್ದ. ಕಾರಿನಲ್ಲಿ ಮಾಂಸವಿತ್ತು. ಆನಂದ್ ವಿಹಾರ್​ ಬಳಿ ನವಾಬ್ ಕಾರು ಒಂದು ಸ್ಕೂಟರ್​ಗೆ ಡಿಕ್ಕಿ ಹೊಡೆಯಿತು. ಆಗಲೇ ಪೊಲೀಸರು ಬಂದರು.

VISTARANEWS.COM


on

Seven Men Including Delhi Police Booked For Thrash Meat Vendors in Delhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೆಹಲಿ ಪೂರ್ವ ಭಾಗದಲ್ಲಿರುವ ಶಹದಾರ ಎಂಬಲ್ಲಿ ಇಬ್ಬರು ಮಾಂಸ ವ್ಯಾಪಾರಿಗಳ ಮೇಲೆ ಏಳು ಮಂದಿ ಸೇರಿ ಹಲ್ಲೆ ನಡೆಸಿದ್ದಲ್ಲದೆ, ಅವರ ಹಣವನ್ನೆಲ್ಲ ಲೂಟಿ ಮಾಡಿದ್ದಾರೆ. ಹೀಗೆ ಹಲ್ಲೆ ಮಾಡಿದವರಲ್ಲಿ ಮೂವರು ದೆಹಲಿ ಪೊಲೀಸರೂ ಸೇರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಮಾರ್ಚ್​ 7ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಇಬ್ಬರು ವ್ಯಾಪಾರಿಗಳು ಕಾರಿನಲ್ಲಿ ಹೋಗುತ್ತಿದ್ದವರು, ಸ್ಕೂಟರ್​ವೊಂದಕ್ಕೆ ಡಿಕ್ಕಿ ಹೊಡೆದರು. ಇದೇ ವೇಳೆ, ಅವರನ್ನು ಅಡ್ಡಟ್ಟಿದ ಏಳು ಮಂದಿ ತಮ್ಮನ್ನು ತಾವು ಗೋವು ರಕ್ಷಕರು ಎಂದು ಹೇಳಿಕೊಂಡು ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲ, ಆ ಇಬ್ಬರು ವ್ಯಾಪಾರಿಗಳ ಮುಖದ ಮೇಲೆ ಮೂತ್ರವನ್ನೂ ವಿಸರ್ಜನೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲ್ಲೆಗೆ ಒಳಗಾದ ಮಾಂಸದ ವ್ಯಾಪಾರಿಗಳು ಅಂದೇ ಪೊಲೀಸರಿಗೆ ದೂರು ಕೊಟ್ಟಿದ್ದರೂ, ಪ್ರಕರಣ ದಾಖಲಾಗಿದ್ದು ನಾಲ್ಕು ದಿನ ತಡವಾಗಿ. ಅದಾದ ಮೇಲೆ ಹಲ್ಲೆಯಲ್ಲಿ ಭಾಗಿಯಾದ ಒಬ್ಬ ಸಹಾಯಕ ಸಬ್​ ಇನ್​ಸ್ಪೆಕ್ಟರ್​ ಸೇರಿ ಮೂವರೂ ಪೊಲೀಸರನ್ನೂ ಅಮಾನತು ಮಾಡಲಾಗಿದೆ.

ಮುಸ್ತಫಾಬಾದ್​ ನಿವಾಸಿಯಾದ ನವಾಬ್​ ಘಾಜಿಪುರ ಕಸಾಯಿಖಾನೆಗೆ ಮಾಂಸ ಪೂರೈಕೆ ಮಾಡುತ್ತಿದ್ದ. ಮಾರ್ಚ್​ 7ರಂದು ಕೂಡ ಕಾರಿನಲ್ಲಿ ತನ್ನ ಕಸಿನ್​ ಶೋಯೆಬ್​ ಜತೆ ಹೋಗುತ್ತಿದ್ದ. ಕಾರಿನಲ್ಲಿ ಮಾಂಸವಿತ್ತು. ಆನಂದ್ ವಿಹಾರ್​ ಬಳಿ ನವಾಬ್ ಕಾರು ಒಂದು ಸ್ಕೂಟರ್​ಗೆ ಡಿಕ್ಕಿ ಹೊಡೆಯಿತು. ಆಗ ನವಾಬ್​ ಮತ್ತು ಶೋಯೆಬ್​​ನನ್ನು ಸ್ಕೂಟರ್ ಚಾಲಕ ತರಾಟೆಗೆ ತೆಗೆದುಕೊಂಡಿದ್ದಲ್ಲದೆ, 4000 ರೂಪಾಯಿ ಪರಿಹಾರಕ್ಕೆ ಆಗ್ರಹಿಸಿದ. ಅದೇ ಹೊತ್ತಿಗೆ ಅಲ್ಲಿಗೆ ಒಂದು ಪೊಲೀಸ್ ವಾಹನ ಬಂತು. ಅದರಲ್ಲಿದ್ದ ಮೂವರು ಪೊಲೀಸರಲ್ಲಿ ಒಬ್ಬರು, ನವಾಬ್​​ನಿಂದ 2500 ರೂಪಾಯಿ ತೆಗೆದುಕೊಂಡು ಸ್ಕೂಟರ್ ಚಾಲಕನಿಗೆ ನೀಡಿದರು.

ಇದನ್ನೂ ಓದಿ: Cow As National Animal: ಗೋಹತ್ಯೆ ನಿಷೇಧಿಸಿ, ರಾಷ್ಟ್ರೀಯ ಸಂರಕ್ಷಿತ ಪ್ರಾಣಿ ಎಂದು ಘೋಷಿಸಿ:‌ ಅಲಹಾಬಾದ್‌ ಹೈಕೋರ್ಟ್ ನ್ಯಾ. ಶಮೀಮ್‌ ಅಹ್ಮದ್‌ ಸಲಹೆ

ಆದರೆ ಅಷ್ಟಕ್ಕೆ ಸುಮ್ಮನಾಗದೆ ಪೊಲೀಸರು ನವಾಬ್​ ಮತ್ತು ಶೋಯೆಬ್​ಗೆ ಬೆದರಿಕೆ ಹಾಕಿದರು. ನೀವೀಗ 15 ಸಾವಿರ ರೂಪಾಯಿ ಕೊಡದೆ ಇದ್ದರೆ ನಿಮ್ಮನ್ನು ಕಸ್ಟಡಿಗೆ ಕರೆದೊಯ್ಯುತ್ತೇವೆ ಎಂದು ಹೇಳಿದರು. ಅಷ್ಟೇ ಅಲ್ಲ, ಅಲ್ಲಿಯೇ ಇದ್ದ ನಾಲ್ವರನ್ನು ಕರೆದರು. ನವಾಬ್​-ಶೋಯೇಬ್​ರನ್ನು ಈ ನಾಲ್ವರು ಮತ್ತು ಮೂವರು ಪೊಲೀಸರು ಸೇರಿ ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು, ಹಲ್ಲೆ ಮಾಡಿದ್ದಾರೆ. ನವಾಬ್​-ಶೋಯೆಬ್​ ಕೈ ಕತ್ತರಿಸಲು ಪ್ರಯತ್ನಿಸಿದ್ದಲ್ಲದೆ, ಮುಖದ ಮೇಲೆ ಮೂತ್ರ ವಿಸರ್ಜಿಸಿದ್ದಾರೆ. ‘ನೀವು ಗೋಹತ್ಯೆ ಮಾಡಿ, ಸಾಗಣೆ ಮಾಡುತ್ತಿದ್ದೀರಿ ಎಂದು ನವಾಬ್​​-ಶೋಯೆಬ್​ಗೆ ಹೇಳಿದ ಪೊಲೀಸರು, ಅವರಿಬ್ಬರನ್ನೂ ಕೊಂದು ಚರಂಡಿಗೆ ಎಸೆಯುವ ಬೆದರಿಕೆ ಹಾಕಿದ್ದಾರೆ. ಅಷ್ಟಲ್ಲದೆ, ಇಬ್ಬರಿಂದ 25,500 ರೂಪಾಯಿ ಸುಲಿಗೆ ಮಾಡಿದ್ದಾರೆ. ಅವರಿಗೆ ಅದ್ಯಾವುದೋ ಮಾದಕದ್ರವ್ಯ ಇರುವ ಚುಚ್ಚುಮದ್ದು ನೀಡಿ, ಖಾಲಿ ಪೇಪರ್​ ಮೇಲೆ ಸಹಿ ಹಾಕಿಸಿಕೊಂಡಿದ್ದಾರೆ ಎಂದು ಈಗ ಎಫ್​ಐಆರ್​ನಲ್ಲಿ ಉಲ್ಲೇಖವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

Hindu Girl: ಮುಂಬೈನ ಕಾಶಿಗಾಂವ್‌ ಪ್ರದೇಶದಲ್ಲಿ ಹೀನ ಕೃತ್ಯ ನಡೆದಿದೆ. ಇಬ್ರಾಹಿಂ ಖಾನ್‌ ಎಂಬಾತನೇ ಹೀನ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಬ್ರಾಹಿಂ ಖಾನ್‌ ವಿರುದ್ಧ ಐಪಿಸಿ ಹಾಗೂ ಪೋಕ್ಸೊ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

Hindu Girl
ಸಾಂದರ್ಭಿಕ ಚಿತ್ರ.
Koo

ಮುಂಬೈ: ಯಾವ ಧರ್ಮವೂ ಹಿಂಸೆಯನ್ನು, ಬಲವಂತದ ಮತಾಂತರವನ್ನು, ಲೈಂಗಿಕ ಕಿರುಕುಳ ಸೇರಿ ಯಾವುದೇ ಅನಾಚಾರವನ್ನು ಬೋಧಿಸುವುದಿಲ್ಲ. ಯಾವ ಧರ್ಮಗ್ರಂಥವೂ ಬೇರೆಯವರಿಗೆ ಕೆಡಕು ಮಾಡಿ ಎನ್ನುವುದಿಲ್ಲ. ಆದರೆ, ಧರ್ಮಪಾಲಕರ ಮೂಲಭೂತವಾದವು ಸಮಾಜಕ್ಕೆ ಮಾರಕವಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದಲ್ಲಿ (Maharashtra) ಮುಸ್ಲಿಂ ವ್ಯಕ್ತಿಯೊಬ್ಬ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯು ಇಸ್ಲಾಂಅನ್ನು ಅನುಸರಿಸಬೇಕು ಎಂದು ಒತ್ತಾಯಿಸುವ ಮೂಲಕ ಹೀನ ಕೃತ್ಯ ಎಸಗಿದ್ದಾನೆ.

ಮುಂಬೈನ ಕಾಶಿಗಾಂವ್‌ ಪ್ರದೇಶದಲ್ಲಿ ಹೀನ ಕೃತ್ಯ ನಡೆದಿದೆ. ಇಬ್ರಾಹಿಂ ಖಾನ್‌ ಎಂಬಾತನೇ ಹೀನ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಬ್ರಾಹಿಂ ಖಾನ್‌ ವಿರುದ್ಧ ಐಪಿಸಿ ಹಾಗೂ ಪೋಕ್ಸೊ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಇನ್ನು, ಕೃತ್ಯ ಬಯಲಾಗುತ್ತಲೇ ಇಬ್ರಾಹಿಂ ಖಾನ್‌ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Hubli

6 ತಿಂಗಳಿಂದ ನಿರಂತರ ಕಿರುಕುಳ

14 ವರ್ಷದ ಬಾಲಕಿ ಹಾಗೂ ಆಕೆಯ ಸಹೋದರಿಯ ತಂದೆ-ತಾಯಿ ತೀರಿಕೊಂಡ ಕಾರಣ 2023ರ ಕಾಶಿಗಾಂವ್‌ಗೆ ಇಬ್ಬರೂ ಸ್ಥಳಾಂತರಗೊಂಡಿದ್ದಾರೆ. ಸಂಬಂಧಿಕರ ಮನೆಯಲ್ಲಿ ಇಬ್ಬರೂ ಆಶ್ರಯ ಪಡೆದಿದ್ದಾರೆ. ಇದೇ ಕಾಶಿಗಾಂವ್‌ ನಿವಾಸಿಯಾದ ಇಬ್ರಾಹಿಂ ಖಾನ್‌, ಬಾಲಕಿಯನ್ನು ಗಮನಿಸಿದ್ದಾನೆ. ಪದೇಪದೆ ಬಾಲಕಿಯನ್ನು ಮಾತನಾಡಿಸುವುದು, ನಗುವುದು, ನೀನೇ ನನ್ನ ಜೀವನ ಎಂದು ಕಿಚಾಯಿಸುವುದು ಸೇರಿ ಹಲವು ರೀತಿಯಲ್ಲಿ ಆಕೆಯ ಮನವೊಲಿಸಲು ಯತ್ನಿಸಿದ್ದಾನೆ.

ಕೆಲ ತಿಂಗಳ ಹಿಂದೆ, ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಇಬ್ರಾಹಿಂ ಖಾನ್‌ ಬಾಲಕಿಯ ಮನೆಗೆ ನುಗ್ಗಿದ್ದಾನೆ. ಆಗ ಬಾಲಕಿಯ ಎದುರು ಪ್ರೇಮ ನಿವೇದನೆ ಮಾಡಿದ ಆತ, ಬಲವಂತವಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆಕೆಯ ಮನೆಗೆ ಹೋಗುವುದು, ಲೈಂಗಿಕ ದೌರ್ಜನ್ಯ ಎಸಗುವುದು ಹಾಗೂ ಇಸ್ಲಾಂ ರೀತಿ-ರಿವಾಜುಗಳನ್ನು ಅನುಸರಿಸಬೇಕು ಎಂಬುದಾಗಿ ಒತ್ತಾಯಿಸಿದ್ದಾನೆ. ಇಬ್ರಾಹಿಂ ಖಾನ್‌ನಿಂದ ನಿರಂತರವಾಗಿ ಕಿರುಕುಳಕ್ಕೊಳಗಾದ ಬಾಲಕಿಯು ಮೇ 3ರಂದು ಹಿರಿಯರೊಂದಿಗೆ ತೆರಳಿ ದೂರು ದಾಖಲಿಸಿದ್ದಾಳೆ. ಇದಾದ ಬಳಿಕ ಪೊಲೀಸರು ಕೇಸ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

“ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನುಗ್ಗುತ್ತಿದ್ದ ಆತ, ನನ್ನನ್ನು ಮದುವೆಯಾಗುತ್ತೇನೆ ಎಂಬುದಾಗಿ ಹೇಳು ಎಂದು ಒತ್ತಾಯಿಸುತ್ತಿದ್ದ. ನನಗೆ ನನ್ನ ತಂದೆ-ತಾಯಿ ಜತೆ ಇರಲು ಇಷ್ಟವಿಲ್ಲ. ನಿನ್ನೊಂದಿಗೆ ನಾನು ಬದುಕಲು ಇಷ್ಟ. ಇಬ್ಬರೂ ಬೇರೆ ಕಡೆ ಬಾಡಿಗೆ ಮನೆ ಮಾಡೋಣ. ಅಲ್ಲಿ ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ಇಬ್ಬರೂ ಜತೆಯಾಗಿರೋಣ ಎಂದು ಹೇಳಿದ. ಇದಕ್ಕೆ ನಾನು ಒಪ್ಪದಿದ್ದಾಗ ದೌರ್ಜನ್ಯ ಎಸಗಿದ” ಎಂಬುದಾಗಿ ಎಫ್‌ಐಆರ್‌ನಲ್ಲಿ ಬಾಲಕಿಯ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: PUBG Love: ಪಬ್ಜಿ ಆಡುವಾಗ ಸಿಕ್ಕ ಮುಸ್ಲಿಂ ಯುವಕನ ಜತೆ ಹಿಂದು ಯುವತಿ ಮದುವೆ; ಈಗ ಬಾಳೇ ನರಕ!

Continue Reading

ಕರ್ನಾಟಕ

Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Murder Case: ಶಿವಮೊಗ್ಗದಲ್ಲಿ ಮತ್ತೊಬ್ಬ ರೌಡಿ ಶೀಟರ್‌ ಮೇಲೆ ದಾಳಿ ಮಾಡಲು ಹೋಗಿದ್ದಾಗ, ಪ್ರತಿ ದಾಳಿ ನಡೆದು ಇಬ್ಬರ ಕೊಲೆ ಮಾಡಲಾಗಿದೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

VISTARANEWS.COM


on

Murder Case
Koo

ಶಿವಮೊಗ್ಗ: ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿದ್ದು, ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು , ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.

ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಹೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿದೆ. ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಹೆ‌ಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಇದನ್ನೂ ಓದಿ | Self Harming: ಅಪ್ಪನಿಗೆ ಗುಡ್ ಬೈ ಹೇಳಿಸಿ ಮಗುವನ್ನು ಕೊಂದ ತಾಯಿ!

ಯಾಸೀ‌ನ್‌ಗೆ ಚಾಕುವಿನಿಂದ ತಿವಿದ ಹಿನ್ನೆಲೆ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಸ್ಥಳದಲ್ಲಿ ಪೊಲೀಸ್ ಬೀಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಗಳ ಹಿಂದೆ ಬಿದ್ದಿದ್ದಕ್ಕೆ ಸಹೋದರರನ್ನೇ ಚಾಕುವಿನಿಂದ ಇರಿದು ಕೊಂದ ಫಕೀರಪ್ಪ!

Double Murder Fakirappa stabs brothers to death for falling behind daughter

ಬೆಳಗಾವಿ: ಪ್ರೀತಿಸುವಂತೆ ಬೆನ್ನು ಬಿದ್ದ ಯುವಕ ಹಾಗೂ ಆತನ ಸಹೋದರನ್ನು ಯುವತಿಯ ತಂದೆಯೇ ಬರ್ಬರವಾಗಿ ಹತ್ಯೆ (Double Murder) ಮಾಡಿದ್ದಾನೆ. ಚಾಕುವಿನಿಂದ ಇರಿದು ಇಬ್ಬರನ್ನೂ ಕೊಂದು ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕಾರಿಮನಿ ಗ್ರಾಮದಲ್ಲಿ ‌ನಡೆದಿದೆ.

ಕಾರಿಮನಿ ಗ್ರಾಮದ ಯಲ್ಲಪ್ಪ ಹಳೇಗೋಡಿ (22) ಮಾಯಪ್ಪ ಹಳೇಗೋಡಿ (22) ಕೊಲೆಯಾದವರು. ಸವದತ್ತಿ ತಾಲೂಕಿನ ದುಂಡನಕೊಪ್ಪ ಗ್ರಾಮದ ಫಕೀರಪ್ಪ ಭಾಂವಿಹಾಳ (50) ಎಂಬಾತ ಕೃತ್ಯ ಎಸಗಿದ್ದಾನೆ.

ಆರೋಪಿ ಫಕೀರಪ್ಪನ‌ ಪುತ್ರಿಯನ್ನು ಪ್ರೀತಿಸುವಂತೆ ಯಲ್ಲಪ್ಪ ಹಳೇಗೋಡಿ ಬೆನ್ನುಬಿದ್ದಿದ್ದ ಎಂದು ತಿಳಿದುಬಂದಿದೆ. ಆದರೆ, ಪುತ್ರಿಯ ತಂಟೆಗೆ ಬರಬೇಡ ಎಂದು ಯುವಕನಿಗೆ ವಾರ್ನ್ ಮಾಡಲು ಕಾರಿಮನಿಗೆ ಫಕೀರಪ್ಪ ಹೋಗಿದ್ದ ಎನ್ನಲಾಗಿದೆ. ಈ ವೇಳೆ ಫಕೀರಪ್ಪ ಹಾಗೂ ಯಲ್ಲಪ್ಪ ಹಳೇಗೋಡಿ ಮಧ್ಯೆ ವಾಗ್ವಾದ ನಡೆದಿದೆ. ಮಾತು ವಿಕೋಪಕ್ಕೆ ಹೋಗಿದೆ. ಆಗ ಯಲ್ಲಪ್ಪನಿಗೆ ಚಾಕುವಿನಿಂದ ‌ಫಕೀರಪ್ಪ ಇರಿದಿದ್ದಾನೆ.

ಯಲ್ಲಪ್ಪನನ್ನು‌ ಬಿಡಿಸಿಕೊಳ್ಳಲು ಬಂದ ಸಹೋದರ ಮಾಯಪ್ಪನಿಗೂ ಚಾಕುವಿನಿಂದ ‌ಫಕೀರಪ್ಪ ಚಾಕುವಿನಿಂದ ಇರಿದಿದ್ದಾಣೆ. ತೀವ್ರ ರಕ್ತಸ್ರಾವದಿಂದ ಯಲ್ಲಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಗಾಯಗೊಂಡ ‌ಮಾಯಪ್ಪನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ‌ಫಲಿಸದೇ ಮೃತಪಟ್ಟಿದ್ದಾನೆ.

ಇದನ್ನೂ ಓದಿ | Hanuman Flag: ಕೆರಗೋಡು ಹನುಮಧ್ವಜ ಪ್ರಕರಣದ 3 ಹೋರಾಟಗಾರರ ಮೇಲೆ ರೌಡಿಶೀಟ್

ಘಟನೆ ಬಳಿಕ ಫಕೀರಪ್ಪ ಭಾಂವಿಹಾಳ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಯ ಪತ್ತೆಗೆ ಮುಂದಾಗಿದ್ದಾರೆ. ಸ್ಥಳಕ್ಕೆ ‌ರಾಮದುರ್ಗ ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುರಗೋಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಕರ್ನಾಟಕ

Prajwal Revanna Case: ಎಸ್‌ಐಟಿ ಮೇಲೆ ಕೇಸ್‌ ಹಾಕ್ತೇನೆ, ಶೀಘ್ರವೇ ಪೆನ್‌ಡ್ರೈವ್‌ ಪ್ರೊಡ್ಯುಸರ್‌ ಹೆಸರು ಹೇಳ್ತೇನೆ ಎಂದ ದೇವರಾಜೇಗೌಡ

Prajwal Revanna Case: ರಾಜ್ಯಾದ್ಯಂತ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಬಹಳ ಚರ್ಚೆ ನಡೆಯುತ್ತಿದೆ. ಅಶ್ಲೀಲ ವಿಡಿಯೊ ಸೋರಿಕೆ ಮಾಡಿದವರ ರಕ್ಷಣೆಗೆ ನಾಲ್ವರು ಸಚಿವರು ಇದ್ದಾರೆ. ಇದರ ಹಿಂದೆ ಯಾರಿದ್ದಾರೆ ಎಂದು ಶೀಘ್ರದಲ್ಲೇ ಬಹಿರಂಗಪಡಿಸುವೆ ಎಂದು ವಕೀಲ ದೇವರಾಜೇಗೌಡ ಹೇಳಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ (Prajwal Revanna Case) ಎಚ್‌.ಡಿ.ರೇವಣ್ಣ ಅವರನ್ನು ಮಾತ್ರ ಬಂಧಿಸಿದ್ದಾರೆ. ಆದರೆ. ಪೆನ್‌ಡ್ರೈವ್‌ ಕೊಟ್ಟಿರುವ ಕಾರ್ತಿಕ್‌ ಗೌಡ ವಿರುದ್ಧ ಯಾವುದೇ ಕ್ರಮ ವಹಿಸಿಲ್ಲ. ಒಬ್ಬ ಆರೋಪಿ ತಮ್ಮ‌ ಮುಂದೆ ಇದ್ದಾಗಲೇ ಬಂಧಿಸದ ಎಸ್‌ಐಟಿ ವಿರುದ್ಧ ನಾಳೆ ಕೋರ್ಟ್‌ನಲ್ಲಿ ಕ್ರಿಮಿನಲ್ ಕೇಸ್ ದಾಖಲು ಮಾಡುತ್ತೇವೆ. ಎಸ್‌ಐಟಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಖಾಸಗಿ ದೂರು ನೀಡುತ್ತೇವೆ ಎಂದು ವಕೀಲ ದೇವರಾಜೇಗೌಡ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಜ್ಯಾದ್ಯಂತ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಬಹಳ ಚರ್ಚೆ ನಡೆಯುತ್ತಿದೆ. ಯಾವಾಗ ಹೆಸರುಗಳು ಹೊರಗೆ ಬಂತೋ ರಕ್ಷಣೆ ಮಾಡಿಕೊಳ್ಳುವ ಕೆಲಸ ಆಗುತ್ತಿದೆ. ನನ್ನ ವಿರುದ್ಧವೂ ದೂರು ನೀಡಲು ಆರಂಭಿಸದ್ದಾರೆ‌. ನಾನು ಸರ್ಕಾರಕ್ಕೆ ಸವಾಲು ಹಾಕುತ್ತೇನೆ, ನನ್ನ ಹಿಂದೆ ಸತ್ಯ, ನ್ಯಾಯ, ಧರ್ಮ ಇದೆ. ನಾನು ಯಾರಿಗೂ ಹೆದರಲ್ಲ ಎಂದು ತಿಳಿಸಿದರು.

ಪೆನ್‌ ಡ್ರೈವ್‌ ವಿಡಿಯೊ ಸೋರಿಕೆ ಮಾಡಿದವರ ರಕ್ಷಣೆಗೆ ನಾಲ್ವರು ಸಚಿವರು ಇದ್ದಾರೆ. ಪೆನ್ ಡ್ರೈವ್ ಪ್ರೊಡ್ಯುಸರ್ ಯಾರು? ಹಂಚಿಕೆದಾರರು ಯಾರು? ಎಂಬ ಮಾಹಿತಿ ಇದೆ. ಎಲ್ಲವನ್ನೂ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ | Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

ಮಹಿಳಾ ಆಯೋಗದ ಅಧ್ಯಕ್ಷರು ಸಿಎಂಗೆ ದೂರು ನೀಡಿದ್ದರು. 2,867 ವೀಡಿಯೊ ಇದ್ದು, ಇದು ಪ್ರಪಂಚದಲ್ಲಿ ಅತಿ ದೊಡ್ಡ ಲೈಂಗಿಕ ಹಗರಣ ಆಗಿದೆ. ವಿಡಿಯೊ ಮಾಡಿದವರನ್ನು ಬಂಧಿಸಿ ಎಂದು ಸರ್ಕಾರಕ್ಕೆ‌ ಮನವಿ ಮಾಡಿದ್ದಾರೆ. ವಿಡಿಯೊ ಮಾಡಿದವರು ಮತ್ತು ಹಂಚಿದವರ ವಿರುದ್ಧ ಕ್ರಮ‌ ಎಂದು ಎಸ್‌ಐಟಿ ಅಧಿಕಾರಿಗಳು ಹೇಳಿದರು. ಆದರೆ, ಪ್ರಕರಣದಲ್ಲಿ ಪೆನ್ ಡ್ರೈವ್ ಹರಿಬಿಟ್ಟವರ ವಿರುದ್ಧ ಕ್ರಮವಾಗಿಲ್ಲ. ನಾನು ಕೂಡ ಸಂತ್ರಸ್ತ, ನನಗೆ ವಿಡಿಯೊಕಾಲ್‌ ಮಾಡಿ ಹನಿ ಟ್ರ್ಯಾಪ್‌ ಮಾಡಲು ಯತ್ನಿಸಿ, ನನ್ನ ವಿರುದ್ಧ ಸುಳ್ಳು ದಾಖಲೆ ಸೃಷ್ಟಿ ಮಾಡಲು ಮುಂದಾದರು. ಈ ರೀತಿ ನನ್ನ ಕಟ್ಟಿಹಾಕಬಹುದು ಎಂದು ನೋಡಿದರೆ, ಎಲ್ಲ ರೀತಿಯ ಹೋರಾಟಕ್ಕೂ ಸಿದ್ಧ ಎಂದರು.

ನಾನು ವಕೀಲನಾಗಿ ಹೋರಾಟ‌ ಮಾಡುತ್ತಿದ್ದೇನೆ. ನವೀನ್ ಗೌಡ, ಕಾರ್ತಿಕ್ ವಿರುದ್ಧ ಎಫ್‌ಐಆರ್‌ ಆಗಿದೆ. ಪೆನ್ ಡ್ರೈವ್ ಹಂಚಿಕೆ‌ ವಿಚಾರವಾಗಿ ಎಸ್‌ಐಟಿ ರಚನೆ ಮಾಡಿದ್ದಾರೆ. ಆದರೆ, ಹೊಳೆನರಸೀಪುರ ಪ್ರಕರಣ ಮಾತ್ರ ಎಸ್‌ಐಟಿಗೆ ವರ್ಗಾವಣೆ ಮಾಡಿದ್ದಾರೆ. ಆದರೆ ಪೆನ್ ಡ್ರೈವ್ ಪ್ರಕರಣ ಮಾತ್ರ ವರ್ಗಾವಣೆ ಆಗಿಲ್ಲ. ಪೆನ್ ಡ್ರೈವ್ ವಿಚಾರವಾಗಿ ನನ್ನ ಸಾಕ್ಷಿಯಾಗಿ ಕರೆದಿದ್ದರು. ಆ ಕೇಸ್ ಪಡೆದಿಲ್ಲ ಅಂದ ಮೇಲೆ ನನ್ನನ್ನು ವಿಚಾರಣೆ ಮಾಡುವ ಅಗತ್ಯವಿರಲಿಲ್ಲ ಎಂದು ಹೇಳಿದರು.

ಈ ಹಿಂದೆ ದೇವರಾಜೇಗೌಡಗೆ ಪೆನ್ ಡ್ರೈವ್ ಕೊಟ್ಟಿದ್ದೆ, ಬೇರೆ ಇನ್ಯಾರಿಗೂ ಕೊಟ್ಟಿರಲಿಲ್ಲ. ಅವರೇ ಹಂಚಿದ್ದಾರೆ ಅಂತ ಕಾರ್ತಿಕ್‌ ಹೇಳಿದ್ದಾನೆ. ಮತ್ತೊಂದೆಡೆ ನಾನು ಕೊಟ್ಟಿರುವುದು ಪೆನ್ ಡ್ರೈವ್ ಅಲ್ಲ. ಮೆಮೊರಿ ಕಾರ್ಡ್ ಅಂತ ಹೇಳಿದ್ದಾನೆ. ಮತ್ತೊಂದೆಡೆ ನನ್ನ ವಿರುದ್ಧ ಬಾರ್ ಕೌನ್ಸಿಲ್ ಆಫ್ ಇಂಡಿಯಾದಲ್ಲಿ ದೂರು ನಿಡೀದ್ದಾರೆ. ಕಕ್ಷಿದಾರರು ಕೊಟ್ಟಿರುವ ಮಾಹಿತಿ ಗೌಪ್ಯವಾಗಿದೆ. ಅವರಿಂದಲೇ ಸಹಿ ಮಾಡಿಸಿ ಮುಚ್ಚಿಡಲಾಗಿದೆ. ಅದನ್ನು ನ್ಯಾಯಾಧೀಶರ ಮುಂದೆಯೇ ಓಪನ್ ಮಾಡಲಾಗುವುದು ಎಂದು ತಿಳಿಸಿದರು.

ಎಸ್‌ಐಟಿ ತನಿಖೆಗೆ ಹಾಜರಾಗಿದ್ದೆ ಅಂತ‌ ಕಾರ್ತಿಕ್ ಹೇಳಿಕೆ ನೀಡಿದ್ದಾನೆ. ಸರ್ಕಾರ ಒನ್ ಸೈಡ್ ತನಿಖೆ ಮಾಡುತ್ತಿದೆ. ನಾನೂ ಕಾಂಗ್ರೆಸ್‌ನಲ್ಲಿ ಇದ್ದವನು. ಅಲ್ಲಿ ಅವರ ಆಟ ನೋಡಿದ್ದೇನೆ. ಅಶ್ಲೀಲ ವಿಡಿಯೊ ಮಾಡಿದವರು ಮತ್ತು ವಿಡಿಯೊ ಹಂಚಿಕೆ ಮಾಡಿದವರ ವಿರುದ್ಧವೂ ಬಗ್ಗೆ ತನಿಖೆ ಮಾಡಬೇಕು. ಇಂದು ಕಾರ್ತಿಕ್ ಗೌಡನ ನಿರೀಕ್ಷಣಾ ಜಾಮೀನು ರಿಜೆಕ್ಟ್ ಆಗಿದೆ. ಈ ಪೆನ್ ಡ್ರೈವ್ ಹೊರಬರುತ್ತಿದ್ದಂತೆ ಸರ್ಕಾರ ತಲ್ಲಣ‌ ಆಗಿದೆ ಎಂದು ಹೇಳಿದರು.

ಅವನ ಬಳಿ ಹಣ ಇಲ್ಲ, ಅದಕ್ಕೆ ನಮ್ಮ‌ ಬಳಿ ಬಂದ ಅಂತ ಆ ಮಹಾನುಭಾವ ಕಾರ್ತಿಕ್ ಹೇಳಿಕೆ ನೀಡಿದ್ದಾನೆ. ನಾನು ಅವನಿಗೆ ಕರೆ ಮಾಡಿದ್ನಾ? ಅಥವಾ ಅವರು ಮಾಡಿದ್ರಾ ನೋಡಿ? ನನಗೆ ಶಿವರಾಮೇಗೌಡ ಯಾರು ಅಂತಲೇ ಗೊತ್ತಿರಲಿಲ್ಲ. ಅವರನ್ನ ಟಿವಿಯಲ್ಲಿ ನೋಡಿದ್ದೆ‌. ನನ್ನನ್ನ ಅವರೇ ಕರೆಸಿಕೊಂಡು ರೇವಣ್ಣ ಕುಟುಂಬದ ಬಗ್ಗೆ ಚರ್ಚೆ ಮಾಡಿದರು. ಒಂದು ಕುಟುಂಬ ಅವನತಿಗೆ ತರುವ ವಿಚಾರ ಗೊತ್ತಾದಾಗ ನಾನು ಕಾಲ್ ರೆಕಾರ್ಡ್ ಮಾಡಬೇಕಾಯಿತು ಎಂದು ತಿಳಿಸಿದರು.

ಇನ್ನೂ ಯಾವ ವಿಡಿಯೋ ಇದೆ ಗೊತ್ತಿಲ್ಲ. ಆದರೆ ಅವರ ಮರ್ಯಾದೆ ಹಾಳಾಗಬಾರದು. ವಕೀಲರ ಸಂಘ, ಬಿಜೆಪಿಯು ಸಂತ್ರಸ್ತ ಮಹಿಳೆಯರ ಪರ ಇರಲಿದೆ. ವಾದ ಮಂಡಿಸಲು ನಾವು ಇದ್ದೇವೆ. ಯಾರೂ ಪ್ರಾಣ ಕಳೆದುಕೊಳ್ಳುವುದು ಬೇಡ. ಪೆನ್ ಡ್ರೈವ್ ಹಂಚಿಕೆ ಮಾಡಿರುವುದು ಕಾರ್ತಿಕ್. ಪೆನ್ ಡ್ರೈವ್ ಸಿಕ್ಕವರು, ವಿಡಿಯೊ ನೋಡಿ, ಸಂತ್ರಸ್ತ ಮಹಿಳೆಯರಿಗೆ ಕರೆ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅಂತಹವರ ವಿರುದ್ಧ ಕ್ರಮಕ್ಕೆ ಎಸ್ಪಿಗೆ ದೂರು ನೀಡಿದ್ದಾರೆ ಎಂದು ಹೇಳಿದರು.

ಕಾರ್ತಿಕ್ ಗೌಡ ಯಾವ ರೆಸಾರ್ಟ್‌ನಲ್ಲಿ ಇದ್ದಾನೆ ಎಂಬ ಮಾಹಿತಿ ಇದೆ. ಶೀಘ್ರದಲ್ಲೇ ಎಲ್ಲಾ ದಾಖಲೆ‌ ಬಿಡುಗಡೆ ಮಾಡುವೆ. ಇನ್ನು ಹಾಸನ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಪಟೇಲ್, ನನಗೂ ಕಾರ್ತಿಕ್ ಗೌಡಗೂ ಸಂಬಂಧ ಇಲ್ಲ ಎನ್ನುತ್ತಾನೆ. ಆದರೆ ಒಂದು ಕಡೆ ಕಾರ್ತಿಕ್, ಮಧ್ಯದಲ್ಲಿ ಶ್ರೇಯಸ್ ಪಟೇಲ್, ಮತ್ತೊಂದು ಕಡೆ ಪುಟ್ಟರಾಜು ಇದ್ದಾರೆ ಎಂದು ಫೋಟೊ ತೋರಿಸಿದರು.

ಇದನ್ನೂ ಓದಿ | Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

ರಾಜಕೀಯದಲ್ಲಿ ನಾನಿಲ್ಲ ಎಂದು ಕಾರ್ತಿಕ್‌ ಹೇಳುತ್ತಾನೆ. ಆದರೆ, ಕಾರ್ತಿಕ್ ಮತ್ತು ಶ್ರೇಯಸ್ ಪಟೇಲ್ ರಾಜಕೀಯ ಸಭೆಯಲ್ಲಿ ವೇದಿಕೆ ಮೇಲೆ ಕುಳಿತಿದ್ದಾರೆ. ಊಟಕ್ಕೆ ಕುಳಿತಿರುವ ಫೋಟೊ ಇದೆ. ನಿಮ್ಮ ತಾತ ನಮ್ಮ ಗುರುಗಳು, ಅವರ ಮುಖಕ್ಕೆ ಮಸಿ ಬಳಿಯುವ ಕೆಲಸ ಮಾಡಬೇಡ, ಒಳ್ಳೆಯ ದಾರಿಯಲ್ಲಿ ಹೋಗು ಎಂದು ಶ್ರೇಯಸ್ ಪಟೇಲ್‌ಗೆ ಹೇಳಿದರು.

Continue Reading

ಕ್ರೈಂ

Prajwal Revanna Case: ಪೆನ್‌ಡ್ರೈವ್ ಹಂಚಿಕೆದಾರರ ಬಂಧಿಸಿ; ಸಿಎಂ, ಡಿಸಿಎಂ ವಿರುದ್ಧ ಮಹಿಳಾ ಜೆಡಿಎಸ್‌ ಗರಂ!

Prajwal Revanna Case: ಅಶ್ಲೀಲಗಳನ್ನು ಒಳಗೊಂಡ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಸಂಖ್ಯಾತ ಪೆನ್‌ಡ್ರೈವ್‌ಗಳ ಮುಖೇನ ರಾಜ್ಯದಾದ್ಯಂತ ಹಂಚಿರುವ ಷಡ್ಯಂತ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಹೆಸರುಗಳನ್ನು ಹೊಳೆನರಸಿಪುರದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರು ಸುದ್ದಿಗೋಷ್ಠಿಯಲ್ಲಿ ಸಾಕ್ಷಿ ಸಮೇತ ಬಹಿರಂಗ ಮಾಡಿದ್ದರು. ಇದನ್ನು ಎಸ್‌ಐಟಿ ಗಣನೆಗೆ ತೆಗೆದುಕೊಂಡಿಲ್ಲವೇ ಎಂದು ರಶ್ಮಿ ರಾಮೇಗೌಡ ಪ್ರಶ್ನಿಸಿದ್ದಾರೆ.

VISTARANEWS.COM


on

Prajwal Revanna Case JDS delegation moves Womens Commission to arrest pen drive allottees
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊಗಳುಳ್ಳ ಪೆನ್‌ಡ್ರೈವ್‌ಗಳನ್ನು ಅಪಾರ ಪ್ರಮಾಣದಲ್ಲಿ ಹಂಚುವ ಮೂಲಕ ಮಹಿಳೆಯರ ಮಾನಹಾನಿಗೆ ಕಾರಣವಾಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು. ಈ ಕುರಿತು ಎಲ್ಲ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಒತ್ತಾಯಿಸಿದರು.

ಈ ಬಗ್ಗೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಶ್ಮಿ ರಾಮೇಗೌಡ, ಅಶ್ಲೀಲ ವಿಡಿಯೊಗಳನ್ನು ಸೋರಿಕೆ ಮಾಡುವ ಮೂಲಕ ಸ್ತ್ರೀ ಕುಲಕ್ಕೆ ಅಪಚಾರ ಎಸಗಿರುವ ಕಿರಾತಕರನ್ನು ತಕ್ಷಣವೇ ಅರೆಸ್ಟ್ ಮಾಡಬೇಕು ಎಂದು ಆಗ್ರಹಿಸಿದರು.

ಸಚಿವರೇ ಈ ವಿಡಿಯೊಗಳ ವಿತರಣೆಯ ರೂವಾರಿ

ಸಚಿವ ಸಂಪುಟದ ಪ್ರಭಾವಿ ಸಚಿವರೇ ಈ ವಿಡಿಯೊಗಳ ವಿತರಣೆಯ ರೂವಾರಿ. ಹೀಗಾಗಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ದೊರಕಿಸುವುದು ಅಸಾಧ್ಯ. ಹರಿಬಿಟ್ಟಿರುವ ವಿಡಿಯೊಗಳಿಂದ ಸಂತ್ರಸ್ತೆಯರು ಅಪಾರ ನೋವು, ಅವಮಾನ ಮತ್ತು ಯಾತನೆಯನ್ನು ಅನುಭವಿಸುತ್ತಿದ್ದಾರೆ. ಇವರೊಂದಿಗೆ ಸಂತ್ರಸ್ತೆ ಕುಟುಂಬದವರ ಮೇಲೆ ಉಂಟಾಗಿರುವ ಹಾನಿ ಮತ್ತು ಅಪಮಾನ ವಿವರಿಸಲು ಅಸಾಧ್ಯ. ವಿಡಿಯೊದಲ್ಲಿರುವ ಮಹಿಳೆಯರ ಗುರುತು ಬಹಿರಂಗ ಆಗುವಂತೆ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ರಶ್ಮಿ ರಾಮೇಗೌಡ ಆಕ್ರೋಶ ಹೊರಹಾಕಿದರು.

ಎಸ್‌ಐಟಿಯಿಂದ ನೊಂದವರಿಗೆ ನ್ಯಾಯ ಸಿಗಲ್ಲ

ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಲು ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾದಳ ವಿಫಲವಾಗಿದೆ. ಈ ಹಿನ್ನಲೆಯಲ್ಲಿ ಸಂತ್ರಸ್ಥ ಮಹಿಳೆಯರಿಗೆ ಹಾಗೂ ಅವರ ಕುಟುಂಬದವರಿಗೆ ನ್ಯಾಯ ಒದಗಿಸುವಲ್ಲಿ ಎಸ್‌ಐಟಿ ವಿಫಲವಾಗಿದೆ. ಸಿಬಿಐ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದೆ ಎಂದು ರಶ್ಮಿ ರಾಮೇಗೌಡ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಿಎಂ, ಡಿಸಿಎಂ ಹೆಸರು ಬಂದಿದೆ

ಅಶ್ಲೀಲಗಳನ್ನು ಒಳಗೊಂಡ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಅಸಂಖ್ಯಾತ ಪೆನ್‌ಡ್ರೈವ್‌ಗಳ ಮುಖೇನ ರಾಜ್ಯದಾದ್ಯಂತ ಹಂಚಿರುವ ಷಡ್ಯಂತ್ರದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಹೆಸರುಗಳನ್ನು ಹೊಳೆನರಸಿಪುರದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರು ಸುದ್ದಿಗೋಷ್ಠಿಯಲ್ಲಿ ಸಾಕ್ಷಿ ಸಮೇತ ಬಹಿರಂಗ ಮಾಡಿದ್ದರು. ಇದನ್ನು ಎಸ್‌ಐಟಿ ಗಣನೆಗೆ ತೆಗೆದುಕೊಂಡಿಲ್ಲವೇ ಎಂದು ರಶ್ಮಿ ರಾಮೇಗೌಡ ಪ್ರಶ್ನಿಸಿದರು.

ವಿಡಿಐೊ ಹಂಚಿಕೆ ಶಿಕ್ಷಾರ್ಹ ಅಪರಾಧ

ಮಾಹಿತಿ ತಂತ್ರಜ್ಞಾನ ಕಾಯಿದೆ-2020ರ ಸೆಕ್ಷನ್ 66-ಇ, 67 ಮತ್ತು 67-ಎ ಮತ್ತು ಕಾಯ್ದೆ 228 (ಎ) ಐಪಿಸಿ ಪ್ರಕಾರ ಯಾವುದೇ ವ್ಯಕ್ತಿ ಎಲೆಕ್ಟ್ರಾನಿಕ್ ಸಂದೇಶಗಳನ್ನಾಗಲಿ ಅಥವಾ ಚಿತ್ರಿಕರಣವನ್ನಾಗಲಿ ತಯಾರಿಸುವುದು, ಸಂಗ್ರಹಿಸಿ ಇಡುವುದು ಹಾಗೂ ಬಿತ್ತರಿಸುವುದು, ಚಿತ್ರಿಸುವುದು ಸಂತ್ರಸ್ತೆಯರ ಹೆಸರನ್ನು ಕೋರ್ಟ್ ಅನುಮತಿಯಿಲ್ಲದೆ, ಸಂತ್ರಸ್ತೆಯರ ಅನುಮತಿಯಿಲ್ಲದೆ ಬಹಿರಂಗ ಪಡಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ಹಿನ್ನೆಲೆಯಲ್ಲಿ ವಿಡಿಯೊಗಳನ್ನು ಲೀಕ್ ಮಾಡಿರುವ ಕಿಡಿಗೇಡಿಗಳಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ರಶ್ಮಿ ರಾಮೇಗೌಡ ಆಗ್ರಹಿಸಿದರು.

ಇದನ್ನೂ ಓದಿ: Prajwal Revanna Case: ಎಸ್‌ಐಟಿ ಕೇಸ್‌ಗಳಿಗಾಗಿ ಇಬ್ಬರು ಹೆಚ್ಚುವರಿ ಎಸ್‌ಪಿಪಿ ನೇಮಕ; ರಾಜ್ಯ ಸರ್ಕಾರದ ಮಹತ್ವದ ಆದೇಶ

ಪೆನ್‌ಡ್ರೈವ್‌ಗಳನ್ನು ಹಾಸನದಲ್ಲಿ ವ್ಯಾಪಕವಾಗಿ ಹಂಚಿಕೆ ಮಾಡಲಾಗಿದೆ. ಈ ಬಗ್ಗೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಿದ್ದರೂ ಕ್ರಮ ಜರುಗಿಸಿರುವುದಿಲ್ಲ ಎಂದು ರಶ್ಮಿ ರಾಮೇಗೌಡ ಆರೋಪಿಸಿದರು.

ಇದೇ ವೇಳೆ ಅವರು ಮಹಿಳಾ ಆಯೋಗಕ್ಕೆ ಸಲ್ಲಿಸಿದ ದೂರಿನ ಪ್ರತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಬೆಂಗಳೂರು ಮಹಾನಗರ ಜನತಾದಳ ಮಹಿಳಾ ವಿಭಾಗದ ಅಧ್ಯಕ್ಷೆ ಶೈಲಾ ಎಸ್ ರಾವ್, ವಕ್ತಾರರಾದ ಪ್ರಶಾಂತಿ, ರಾಜಾಜಿನಗರ ಕ್ಷೇತ್ರದ ಮಹಿಳಾ ಅಧ್ಯಕ್ಷೆ ಕವಿತಾ, ರಾಜ್ಯ ಕಾರ್ಯದರ್ಶಿ ಮಂಗಳಮ್ಮ, ನಗರದ ಮಹಿಳಾ ವಿಭಾಗದ ಪದಾಧಿಕಾರಿಗಳು, ಮುಖಂಡರು ನಿಯೋಗದಲ್ಲಿ ಇದ್ದರು.

Continue Reading
Advertisement
Karnataka Weather
ಕರ್ನಾಟಕ50 mins ago

Karnataka Weather: ಇಂದು ಕೊಡಗು, ಹಾಸನ, ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ!

Sam Pitroda
ಪ್ರಮುಖ ಸುದ್ದಿ59 mins ago

ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

dina bhavishya read your daily horoscope predictions for May 09 2024
ಪ್ರಮುಖ ಸುದ್ದಿ2 hours ago

Dina Bhavishya: 12 ರಾಶಿಗಳ ಇಂದಿನ ಭವಿಷ್ಯ ಏನು? ಯಾರಿಗೆ ಪ್ಲಸ್‌? ಯಾರಿಗೆ ಮೈನಸ್!?

Pune
ದೇಶ7 hours ago

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಉತ್ತರ ಕನ್ನಡ8 hours ago

Bheemanna Naik: ಶಿರಸಿ ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

Kulgam
ದೇಶ8 hours ago

Kulgam: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಮತ್ತೊಬ್ಬ ಉಗ್ರನ ಎನ್‌ಕೌಂಟರ್‌, 2 ದಿನದಲ್ಲಿ 3ನೇ ಬಲಿ

ವಿಸ್ತಾರ ಗ್ರಾಮದನಿ Vistara Gramadaani
ಕರ್ನಾಟಕ8 hours ago

ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

LSG vs SRH
ಕ್ರೀಡೆ9 hours ago

LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

Hindu Girl
ದೇಶ9 hours ago

Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

Monty Panesar
ಕ್ರಿಕೆಟ್9 hours ago

Monty Panesar: ರಾಜಕೀಯಕ್ಕೆ ಎಂಟ್ರಿ ಕೊಟ್ಟು ಒಂದೇ ವಾರದಲ್ಲಿ ಗುಡ್​ ಬೈ ಹೇಳಿದ ಇಂಗ್ಲೆಂಡ್​ ಸ್ಪಿನ್ನರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ4 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌