Karwar News: ಜಗತ್ತಿನ ಯಾವುದೇ ದೇಶಗಳಿಗೆ ಆಹಾರ ಪೂರೈಸುವಷ್ಟರ ಮಟ್ಟಿಗೆ ಭಾರತ ಬೆಳೆದಿದೆ; ಈ ಏಳ್ಗೆಗೆ ರೈತರ ಶ್ರಮವೇ ಕಾರಣ - Vistara News

ಉತ್ತರ ಕನ್ನಡ

Karwar News: ಜಗತ್ತಿನ ಯಾವುದೇ ದೇಶಗಳಿಗೆ ಆಹಾರ ಪೂರೈಸುವಷ್ಟರ ಮಟ್ಟಿಗೆ ಭಾರತ ಬೆಳೆದಿದೆ; ಈ ಏಳ್ಗೆಗೆ ರೈತರ ಶ್ರಮವೇ ಕಾರಣ

Karwar News: ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ನಾವು ಯಾರು, ನಮ್ಮ ಶಕ್ತಿ, ಸಾಮರ್ಥ್ಯ ಏನು ಎನ್ನುವುದರ ಅರಿವಾಗುತ್ತಿದೆ ಎಂದಿದ್ದಾರೆ ವಿಶ್ವೇಶ್ವರ ಹೆಗಡೆ ಕಾಗೇರಿ.

VISTARANEWS.COM


on

Vishweshwar Hegde Kageri karwar
ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: “ಸ್ವಾತಂತ್ರ್ಯ ಬಳಿಕ ನಮ್ಮ ಹಿರಿಯರು ಮಾಡಿದ ಪರಿಶ್ರಮದ ಫಲವಾಗಿ 75 ವರ್ಷಗಳಲ್ಲಿ ನಾವು ಬಹಳ ದೊಡ್ಡ ಸಾಧನೆಯನ್ನು ಮಾಡಿದ್ದೇವೆ. ಈ ಸಂದರ್ಭದಲ್ಲಿ ವಿಶೇಷವಾಗಿ ರೈತರನ್ನು (Farmers) ಅಭಿನಂದಿಸಬೇಕಾಗಿದೆ” ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಆಯೋಜಿಸಲಾಗಿದ್ದ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿದ ಅವರು, “ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾಗಿವೆ. ಕರ್ನಾಟಕದಲ್ಲಿ ಆರೂವರೆ ಕೋಟಿ ಜನ ಸಂಖ್ಯೆಯಿದ್ದು, ದೇಶದಲ್ಲಿ ಇದು 140 ಕೋಟಿಗೇರಿದೆ. ಆದರೆ ಭಾರತ ಅಂದರೆ ಈ ಹಿಂದೆ ಇತರೆ ದೇಶಗಳು ಇದೊಂದು ಬಡವರ ದೇಶ, ಇಲ್ಲಿ ನಾಗರಿಕ ಜೀವನವೇ ಇಲ್ಲ, ಸೌಲಭ್ಯಗಳೇ ಇಲ್ಲ ಎನ್ನುವ ರೀತಿಯಲ್ಲಿ ನಮ್ಮನ್ನು ಪ್ರತಿಬಿಂಬಿಸುತ್ತಿದ್ದುದನ್ನು ನೋಡಿದ್ದೇವೆ. ಸ್ವಾತಂತ್ರ್ಯ ಬಂದ ಸಂದರ್ಭದಲ್ಲಿ ನಮಗೆ ಆಹಾರದ ಕೊರತೆ ಎದುರಾಗಿತ್ತು. ಈ ವೇಳೆ ಹೊರ ದೇಶಗಳಿಂದ ಆಹಾರ ವಸ್ತುಗಳನ್ನು ಆಮದು ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿತ್ತು. ಆದರೆ ಈಗಿನ ದಿನಮಾನದಲ್ಲಿ ಭಾರತ ತನ್ನ ಬಳಕೆಗೆ ಹೊರತುಪಡಿಸಿ ಜಗತ್ತಿನ ಯಾವುದೇ ದೇಶಗಳಿಗೆ ಅಗತ್ಯವಿದ್ದಲ್ಲಿ ಅವರಿಗೂ ಆಹಾರ ಪೂರೈಸುವಷ್ಟರ ಮಟ್ಟಿಗೆ ಸದೃಢವಾಗಿ ಬೆಳೆದಿದೆ. ಇದಕ್ಕೆ ರೈತರ ಪರಿಶ್ರಮವೇ ಕಾರಣ” ಎಂದರು.

“ಜಗತ್ತು ಕೊರೊನಾದಿಂದ ತತ್ತರಿಸಿ ಹೋದಂತಹ ಸಂದರ್ಭದಲ್ಲಿ ಅತ್ಯಂತ ಸಮರ್ಥವಾಗಿ ಎದುರಿಸಿರುವ ದೇಶ ನಮ್ಮದು. 30 ಕೋಟಿ ಜನ ಸಂಖ್ಯೆಯಿದ್ದು ಮುಂದುವರಿದ ರಾಷ್ಟ್ರ ಎಂದು ಅಮೆರಿಕಾ ಕರೆಸಿಕೊಳ್ಳುತ್ತದೆ. ಆದರೆ 140 ಕೋಟಿ ಜನ ಸಂಖ್ಯೆ ಇದ್ದು, ಕೊರೋನಾ ಲಾಕ್‌ಡೌನ್ ಜಾರಿಯಾಗಿದ್ದ ಸಂದರ್ಭದಲ್ಲಿ ಸಮರ್ಥವಾದ ಆಡಳಿತ ಕೊಟ್ಟು, ನೇತೃತ್ವ ವಹಿಸಿದ ನಮ್ಮ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತವೇ ಕಾರಣ” ಎಂದರು.

ಇದನ್ನೂ ಓದಿ: Weekend With Ramesh: ಮಾರ್ಚ್‌ 25ರಿಂದ ʻವೀಕೆಂಡ್ ವಿತ್ ರಮೇಶ್’; ಮೊದಲ ಗೆಸ್ಟ್‌ ಮೋಹಕ ತಾರೆ ರಮ್ಯಾ?

“ಸೈನಿಕರ ಸಾಧನೆಯನ್ನು ಎಷ್ಟು ಹೊಗಳಿದರೂ ಕಡಿಮೆಯೇ. ನಮ್ಮ ದೇಶದ ಸೈನಿಕರ ಶೌರ್ಯದ ಕಾರಣದಿಂದಾಗಿ ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ, ಚೀನಾದಂತಹ ದೇಶಗಳು ಭಾರತದತ್ತ ತಲೆ ಹಾಕಿ ನಿದ್ರಿಸುವ ಧೈರ್ಯವನ್ನೂ ಮಾಡದಂತಹ ಸ್ಥಿತಿ ನಿರ್ಮಾಣವಾಗಿದೆ. ಪುಲ್ವಾಮಾ, ಏರ್‌ಸ್ಟ್ರೈಕ್‌ ದಾಳಿಗಳನ್ನು ನೋಡಿದಾಗ ಭಾರತದಲ್ಲಿ ಯಾರೇ ಭಯೋತ್ಪಾದಕ ಕೃತ್ಯವನ್ನು ನಡೆಸಿದಲ್ಲಿ ಅದಕ್ಕೆ ಪ್ರತ್ಯುತ್ತರ ನೀಡಲು ನಮ್ಮ ದೇಶದ ಸೈನಿಕರು ಸನ್ನದ್ಧರಾಗಿದ್ದಾರೆ ಎನ್ನುವುದನ್ನು ತೋರಿಸಿಕೊಟ್ಟಿವೆ. ಶಿಕ್ಷಣ, ಕೈಗಾರಿಕಾ ಕ್ಷೇತ್ರದಲ್ಲಿ ಇಡೀ ದೇಶ ಸಾಕಷ್ಟು ಮುಂದುವರಿದಿದೆ” ಎಂದು ಹೇಳಿದರು.

ಇದನ್ನೂ ಓದಿ: Karnataka Elections : ಈಗಲೂ ಹೇಳುತ್ತೇನೆ, ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲ್ಲ, ಸ್ಪರ್ಧಿಸಲ್ಲ, ಸ್ಪರ್ಧಿಸಲ್ಲ; ಈಶ್ವರಪ್ಪ

“ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತವನ್ನು ಜಗತ್ತು ನೋಡುವ ದೃಷ್ಟಿಕೋನ ಬದಲಾಗಿದ್ದು, ಜಿ20 ದೇಶದ ನೇತೃತ್ವ ವಹಿಸಲು ಭಾರತವನ್ನು ಸೂಚಿಸುವಷ್ಟರ ಮಟ್ಟಿಗೆ ಭಾರತ ಪ್ರಬಲವಾಗಿ ಬೆಳೆದಿದೆ. ನರೇಂದ್ರ ಮೋದಿ ಅವರು ನಮ್ಮ ಪ್ರಧಾನಿಯಾದ ಮೇಲೆ ನಮಗೆ ನಾವು ಯಾರು, ನಮ್ಮ ಶಕ್ತಿ, ಸಾಮರ್ಥ್ಯ ಏನು ಎನ್ನುವುದರ ಅರಿವಾಗುತ್ತಿದೆ. ಯಾವ ಕ್ಷೇತ್ರವನ್ನು ತೆಗೆದುಕೊಂಡರೂ ಹೊಸದಾದ ದಾಖಲೆಯನ್ನು ಬರೆಯುವ ನಿಟ್ಟಿನಲ್ಲಿ ಭಾರತ ಹೆಜ್ಜೆ ಹಾಕುತ್ತಿದೆ. ಗುಡ್ಡಗಾಡಿನಲ್ಲಿ ಜೀವನ ನಡೆಸುತ್ತಿದ್ದಂತಹ ಮಹಿಳೆ ದ್ರೌಪದಿ ಮುರ್ಮು ದೇಶದ ರಾಷ್ಟ್ರಪತಿಯಾಗಿದ್ದಾರೆ. ರೈಲು ನಿಲ್ದಾಣದಲ್ಲಿ ಚಹಾ ಮಾರುತ್ತಿದ್ದ ಒಬ್ಬ ಯುವಕ ದೇಶದ ಪ್ರಧಾನಿಯಾಗುತ್ತಾನೆ ಎಂದರೆ ನಮ್ಮ ದೇಶದ ಸಂಸದೀಯ ಶಕ್ತಿ ಏನು ಎನ್ನುವುದನ್ನು ತೋರಿಸಿಕೊಡಲು ಸಾಧ್ಯವಾಗಿದೆ” ಎಂದರು.

ಇದನ್ನೂ ಓದಿ: Rain Alert: ಮುಂದಿನ 3 ದಿನ ದೇಶಾದ್ಯಂತ ಭಾರಿ ಮಳೆ, ಈಗಾಗಲೇ 10 ಜನ ಸಾವು, ಕಟಾವು ಬೇಡ ಎಂದ ಹವಾಮಾನ ಇಲಾಖೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Bheemanna Naik: ಶಿರಸಿ ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

Bheemanna Naik: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆಗೆ ತೆರಳಿದ್ದಾಗ ಶಾಸಕ ಭೀಮಣ್ಣ ನಾಯ್ಕ್‌ ಸೇರಿ ಹಲವರ ಮೇಲೆ ಜೇನು ನೊಣಗಳು ದಾಳಿ ಮಾಡಿವೆ.

VISTARANEWS.COM


on

Koo

ಕಾರವಾರ: ಗೂಡಿನ ಜೇನು ನೊಣಗಳು ದಾಳಿ ನಡೆಸಿದ್ದರಿಂದ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ್‌ ಅವರು (Bheemanna Naik) ಸೇರಿ ಹಲವರು ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ನಗರದ ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆಗೆ ತೆರಳಿದ್ದ ವೇಳೆ ಜೇನು ನೋಣಗಳು ದಾಳಿ ನಡೆಸಿವೆ.

ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆಗೆ ನಗರಸಭೆ ಪೌರಾಯುಕ್ತ ಕಾಂತರಾಜ ಜತೆ ಶಾಸಕ ಬುಧವಾರ ತೆರಳಿದ್ದರು. ಈ ವೇಳೆ ಸಮೀಪದಲ್ಲಿದ್ದ ಗೂಡಿನ ಜೇನು ನೊಣಗಳು ದಾಳಿ ನಡೆಸಿದ್ದರಿಂದ ಶಾಸಕ ಭೀಮಣ್ಣ ನಾಯ್ಕ್‌, ಪೌರಾಯುಕ್ತ ಕಾಂತರಾಜ, ಸದಸ್ಯ ಖಾದರ್ ಆನವಟ್ಟಿ ಮತ್ತಿತರರು ಗಾಯಗೊಂಡಿದ್ದಾರೆ. ಟಿಎಸ್‌ಎಸ್ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ | Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

ಜೇನುದಾಳಿಯಿಂದ ಶಾಸಕ ಭೀಮಣ್ಣ ನಾಯ್ಕ್‌ ಅವರು ತೀವ್ರವಾಗಿ ಗಾಯಗೊಂಡಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ನಗರಸಭೆ ಸದಸ್ಯ ಪ್ರದೀಪ ಶೆಟ್ಟಿ ಮಾಹಿತಿ ನೀಡಿದ್ದಾರೆ.

Continue Reading

ಮಳೆ

Karnataka Weather : ಬಿರುಗಾಳಿಯೊಂದಿಗೆ ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರಿಸಲಿದ್ದು, ವಿವಿಧ ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಘೋಷಿಸಲಾಗಿದೆ. ಮಳೆ ನಡುವೆಯೂ ಕೆಲವು ಜಿಲ್ಲೆಗಳಿಗೆ ಹೀಟ್‌ ವೇವ್‌ ವಾರ್ನಿಂಗ್‌ ಅನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಬಿರುಗಾಳಿ ಜತೆಗೆ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka weather Forecast) ಮುನ್ಸೂಚನೆಯನ್ನು ನೀಡಿದೆ.

ಮುಖ್ಯವಾಗಿ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನೂ ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ 40-50 ಕಿ.ಮೀ ಗಾಳಿಯೊಂದಿಗೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆ ಜತೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನೂ ಬೀದರ್, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆಯಿದೆ.

ಹೀಟ್‌ ವೇವ್‌ ವಾರ್ನಿಂಗ್‌

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜತೆಗೆ ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Lok Sabha Election 2024: ಅಭಿವೃದ್ಧಿ ಕಾರ್ಯಕ್ಕಾಗಿ ನೀತಿ ಸಂಹಿತೆ ಸಡಿಲಿಸಲು ಶಿವರಾಮ ಹೆಬ್ಬಾರ್ ಮನವಿ

Lok Sabha Election 2024: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳವಾರ ಶಾಸಕ ಶಿವರಾಮ ಹೆಬ್ಬಾರ್, ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಬೈಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

VISTARANEWS.COM


on

Yallapura MLA Shivaram Hebbar voting in Arabail village
Koo

ಯಲ್ಲಾಪುರ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮಂಗಳವಾರ ಶಾಸಕ ಶಿವರಾಮ ಹೆಬ್ಬಾರ್ ತಾಲೂಕಿನ ಇಡಗುಂದಿ ಗ್ರಾ.ಪಂ ವ್ಯಾಪ್ತಿಯ ಅರಬೈಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಇದನ್ನೂ ಓದಿ: Guava Leaves Benefits: ಕೇವಲ ಸೀಬೆ ಹಣ್ಣಲ್ಲ, ಎಲೆಯಿಂದಲೂ ಎಷ್ಟೊಂದು ಪ್ರಯೋಜನಗಳು!

ಬಳಿಕ ಮಾತನಾಡಿದ ಅವರು, ರಾಜ್ಯದೆಲ್ಲೆಡೆ ಶಾಂತಿಯುತವಾಗಿ ಮತದಾನ ನಡೆದಿರುವುದು ಸಂತಸದ ಸಂಗತಿಯಾಗಿದೆ. ಜಾತಿ, ಧರ್ಮ, ಭಿನ್ನಾಭಿಪ್ರಾಯಗಳ ಹೊರತಾಗಿ ರಾಜ್ಯದ ಜನತೆ ಸಾಂಘಿಕವಾದ ಚುನಾವಣೆ ನಡೆಯಲು ನಿರ್ಣಯಿಸಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಮನವಿ ಮಾಡಬಯಸುವುದೇನೆಂದರೆ, 3 ತಿಂಗಳುಗಳ ಸುದೀರ್ಘ ನೀತಿ ಸಂಹಿತೆ ಜಾರಿಯು ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗಿದೆ. ಕರಾವಳಿ ಮಲೆನಾಡು ಪ್ರದೇಶದಲ್ಲಿ 5 ತಿಂಗಳುಗಳ ಕಾಲ ವ್ಯಾಪಕ ಮಳೆಯಾಗುವುದರಿಂದ ಯಾವುದೇ ಕೆಲಸ ಕಾರ್ಯಗಳನ್ನು ಮಾಡಲಾಗುವುದಿಲ್ಲ. ಕರ್ನಾಟಕದ ಎಲ್ಲಾ ಕ್ಷೇತ್ರಗಳಲ್ಲಿ ಇಂದಿಗೆ ಚುನಾವಣೆ ಪೂರ್ಣಗೊಳ್ಳುವುದರಿಂದ, ಈ ಸಂದರ್ಭವನ್ನು ಪರಿಗಣಿಸಿ ನೀತಿ ಸಂಹಿತೆಯನ್ನು ಸಡಿಲಿಸಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಅನುವು ಮಾಡಿಕೊಡಬೇಕಿದೆ ಎಂದರು.

ಇದನ್ನೂ ಓದಿ: Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

ಈ ಸಂದರ್ಭದಲ್ಲಿ ಶಾಸಕರ ಪತ್ನಿ ವನಜಾಕ್ಷಿ ಹೆಬ್ಬಾರ್ ಸೇರಿದಂತೆ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Rain News : ಮೇ 7ರಂದು ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೊಂದು ವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಹಾಸನ/ಬೆಂಗಳೂರು: ಮಂಗಳವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಭಾರಿ ಆಲಿಕಲ್ಲು ಮಳೆಗೆ ಚಿಕ್ಕಮಗಳೂರು ನಗರ ನಿವಾಸಿಗಳು ಥಂಡಾ ಹೊಡೆದಿದ್ದಾರೆ. ಮಳೆಯಿಲ್ಲದೆ ಕಾದ ಕಾವಲಿಯಂತಾಗಿದ್ದ ಕಾಫಿನಾಡಿನಲ್ಲಿ ಕಳೆದೊಂದು ಗಂಟೆಯಿಂದ ಭಯಂಕರ ಮಳೆ ಸುರಿಯುತ್ತಿದೆ.

ರಸ್ತೆಯಲ್ಲಿ ಅರ್ಧ ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. 41 ಡಿಗ್ರಿ ತಲುಪುತ್ತಿದ್ದ ಬಿಸಿಲ ತಾಪಮಾನಕ್ಕೆ ಜನ ಹೈರಾಣಾಗಿದ್ದರು. ಧಾರಾಕಾರ ಮಳೆ ಕಂಡು ರೈತರು, ಬೆಳೆಗಾರರು ಸಂತಸಗೊಂಡರು. ಇನ್ನೂ ಆಲಿಕಲ್ಲು ಕೈಯಲ್ಲಿ ಹಿಡಿದು ಖುಷಿ ಪಟ್ಟರು.

Karnataka weather Forecast

ಹಾಸನದಲ್ಲೂ ಧಾರಾಕಾರ ಮಳೆ

ಹಾಸನ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಹಾಸನ, ಹೊಳೆನರಸೀಪುರ, ಅರಸೀಕೆರೆ ಭಾಗಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ. ಅರಸೀಕೆರೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಜೋರಾಗಿ ಆಲಿಕಲ್ಲು ಬೀಳುತ್ತಿರುವುದರಿಂದ ಸವಾರರು ಬೈಕ್‌ ನಿಲ್ಲಿಸಿ ರಸ್ತೆ ಬದಿ ನಿಲ್ಲುವಂತಾಯಿತು. ಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

ಮಂಗಳವಾರ ಸಂಜೆಗೆ ಲಘು ಮಳೆ ಎಚ್ಚರಿಕೆ

ಮೇ 7ರ ಸಂಜೆಗೆ ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ತುಮಕೂರು, ಉಡುಪಿಯಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಮುಂಜಾನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಗುಡುಗು ಮಿಂಚು ಜತೆಗೆ ಮಳೆಯಾಗಲಿದೆ. ಈ ವೇಳೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ಮತ್ತು 22 ಡಿ.ಸೆ ಇರಲಿದೆ.

ಇನ್ನೂ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿಮೀ) ಹಗುರದಿಂದ ಶುರುವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ವಿಜಯನಗರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pune
ದೇಶ2 hours ago

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಉತ್ತರ ಕನ್ನಡ2 hours ago

Bheemanna Naik: ಶಿರಸಿ ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

Kulgam
ದೇಶ2 hours ago

Kulgam: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಮತ್ತೊಬ್ಬ ಉಗ್ರನ ಎನ್‌ಕೌಂಟರ್‌, 2 ದಿನದಲ್ಲಿ 3ನೇ ಬಲಿ

ವಿಸ್ತಾರ ಗ್ರಾಮದನಿ Vistara Gramadaani
ಕರ್ನಾಟಕ3 hours ago

ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

LSG vs SRH
ಕ್ರೀಡೆ3 hours ago

LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

Hindu Girl
ದೇಶ3 hours ago

Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

Monty Panesar
ಕ್ರಿಕೆಟ್4 hours ago

Monty Panesar: ರಾಜಕೀಯಕ್ಕೆ ಎಂಟ್ರಿ ಕೊಟ್ಟು ಒಂದೇ ವಾರದಲ್ಲಿ ಗುಡ್​ ಬೈ ಹೇಳಿದ ಇಂಗ್ಲೆಂಡ್​ ಸ್ಪಿನ್ನರ್

Murder Case
ಕರ್ನಾಟಕ4 hours ago

Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Virat Kohli
ಕ್ರೀಡೆ4 hours ago

Virat Kohli: ಪಂಜಾಬಿ ಮಾತನಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Poonch Terrorists
ದೇಶ4 hours ago

Poonch Terrorists: ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ21 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌