Womens Day 2023: ಎಲ್ಲ ಕ್ಷೇತ್ರಗಳಲ್ಲೂ ಸಾಧಿಸುವ ಸಾಮರ್ಥ್ಯ ಮಹಿಳೆಗಿದೆ: ಗೋಪಾಲ್ ಯಡಗೆರೆ - Vistara News

ಕರ್ನಾಟಕ

Womens Day 2023: ಎಲ್ಲ ಕ್ಷೇತ್ರಗಳಲ್ಲೂ ಸಾಧಿಸುವ ಸಾಮರ್ಥ್ಯ ಮಹಿಳೆಗಿದೆ: ಗೋಪಾಲ್ ಯಡಗೆರೆ

Womens Day 2023: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳೆಯರಿಗಾಗಿ ಮಹಿಳಾ ಕೇಂದ್ರಿತವಾದ ಮತ್ತೆ ಆಡೋಣ ಬನ್ನಿ ನಾಟಕ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

VISTARANEWS.COM


on

Womens Day shivamogga
ಮತ್ತೆ ಆಡೋಣ ಬನ್ನಿ ನಾಟಕ ಸ್ಪರ್ಧೆಯನ್ನು ಉದ್ಘಾಟಿಸಿದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: “ಮಹಿಳೆಯರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಸೃಜನಶೀಲತೆ (Creativity) ಹೆಚ್ಚಿಸಿಕೊಂಡರೆ ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಗಳಿಸಬಹುದು” ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ ಹೇಳಿದರು.

ಇಲ್ಲಿನ ಪತ್ರಿಕಾ ಭವನದಲ್ಲಿ ಶನಿವಾರ (ಮಾ.18) ಮನ್ವಂತರ ಮಹಿಳಾ ಮಂಡಳ, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಶಿವಮೊಗ್ಗ ಪ್ರೆಸ್‌ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಮಹಿಳೆಯರಿಗಾಗಿ ಮಹಿಳಾ ಕೇಂದ್ರಿತವಾದ “ಮತ್ತೆ ಆಡೋಣ ಬನ್ನಿ” ನಾಟಕ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

“ಕುಟುಂಬ ನಿರ್ವಹಣೆಯ ಜವಾಬ್ದಾರಿ ಹೊರುವ ಮಹಿಳೆ ಸಾಕಷ್ಟು ಒತ್ತಡ ಸನ್ನಿವೇಶಗಳನ್ನು ಎದುರಿಸುತ್ತಿದ್ದಾರೆ. ಕುಟುಂಬ ವೃತ್ತಿ ನಿರ್ವಹಣೆ ಜತೆಗೆ ಸಾಮಾಜಿಕ ಕಾರ್ಯದಲ್ಲೂ ಮಹಿಳೆ ಹೆಚ್ಚು ತೊಡಗಿಕೊಳ್ಳಬೇಕು. ಎಂಥದ್ದೇ ಕಠಿಣ ಸಂದರ್ಭಗಳನ್ನು ನಿಭಾಯಿಸುವಂತಹ ಸೃಜನಶೀಲತೆ ಮಹಿಳೆಯರಲ್ಲಿ ಅಗತ್ಯವಾಗಿದ್ದು, ಸಾಮರ್ಥ್ಯಕ್ಕೆ ಇಂಬು ನೀಡುವಂತೆ ಸಾಮಾನ್ಯ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಆಚಾರ್ ಗ್ರೂಪ್ ಆಫ್ ಕಂಪನಿಯ ಅಧ್ಯಕ್ಷ ಜೋಯ್ಸ್ ರಾಮಾಚಾರ್ ಮಾತನಾಡಿ, “ಸಮಾಜವನ್ನು ತಿದ್ದುವಲ್ಲಿ ಮಹಿಳೆಯರ ಪಾತ್ರ ಹಿರಿದಾಗಿದ್ದು, ಮಹಿಳೆಯರು ಹಿಂಜರಿಕೆ ತೊರೆದು ಧೈರ್ಯದಿಂದ ಮುನ್ನಡೆಯಬೇಕು” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮನ್ವಂತರ ಮಹಿಳಾ ಮಂಡಳ ಅಧ್ಯಕ್ಷೆ ಶ್ರೀರಂಜನಿ ದತ್ತಾತ್ರಿ ಮಾತನಾಡಿದರು. ಉದ್ಯಮಿ ವಾರಿಜಾ ರಾಮಾಚಾರ್, ಶಿವಮೊಗ್ಗ ಪ್ರೆಸ್‌ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ರಂಗಭೂಮಿ ಕಲಾವಿದ ಕಾಂತೇಶ್ ಕದರಮಂಡಲಗಿ, ರಂಗ ನಿರ್ದೇಶಕ ಹೊನ್ನಾಳಿ ಚಂದ್ರಶೇಖರ್, ಕಮಲ ನೆಹರು ಮಹಿಳಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಪ್ರೊ. ಕಿರಣ್ ದೇಸಾಯಿ ಉಪಸ್ಥಿತರಿದ್ದರು. ಲತಾ ಸೋಮಶೇಖರ್ ಸ್ವಾಗತಿಸಿದರು. ಜೋಯ್ಸ್ ರಾಮಾಚಾರ್ ದಂಪತಿಯನ್ನು ಸನ್ಮಾನಿಸಲಾಯಿತು.

ಇದನ್ನೂ ಓದಿ: Salman Khan: ಸಲ್ಮಾನ್ ಖಾನ್‌ನನ್ನು ಕೊಂದೇ ತೀರುತ್ತೇನೆ, ನನ್ನ ಜೀವನದ ಗುರಿ: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Hassan Pen Drive Case: 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ; ಪ್ರಜ್ವಲ್‌, ರೇವಣ್ಣಗೆ ಎಸ್‌ಐಟಿ ನೋಟಿಸ್‌

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣದ ತನಿಖೆಗಾಗಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿತ್ತು. ತನಿಖೆ ಆರಂಭಿಸಿರುವ ಎಸ್‌ಐಟಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌.ಡಿ.ರೇವಣ್ಣಗೆ ನೋಟಿಸ್‌ ನೀಡಿದ್ದಾರೆ.

VISTARANEWS.COM


on

Hassan Pen Drive case
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣ (Hassan Pen Drive Case) ದೇಶಾದ್ಯಂತ ಸದ್ದು ಮಾಡುತ್ತಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿವೆ. ಈ ನಡುವೆ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿತ್ತು. ಇದೀಗ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸಿಆರ್‌ಪಿಸಿ 41a ಅಡಿಯಲ್ಲಿ ಎಸ್‌ಐಟಿಯಿಂದ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಮಾಜಿ ಸಚಿವ ಎಚ್. ಡಿ. ರೇವಣ್ಣಗೆ ನೋಟಿಸ್ ನೀಡಲಾಗಿದೆ.

ಎಸ್ಐಟಿ ಸದಸ್ಯ, ತನಿಖಾಧಿಕಾರಿ ಎಸ್‌ಪಿ ಸೀಮಾ‌ ಲಾಟ್ಕರ್ ಅವರ ಮುಂದೆ ತುರ್ತು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಎಚ್‌.ಡಿ. ರೇವಣ್ಣ ನಿವಾಸಕ್ಕೆ ಎಸ್ಐಟಿ ತಂಡ ನೊಟೀಸ್ ತಲುಪಿಸಿದ್ದು, ಹೊಳೆನರಸೀಪುರದಲ್ಲಿ ದಾಖಲಾದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪ್ರಜ್ವಲ್‌ ರೇವಣ್ಣ ಮತ್ತು ಎಚ್‌.ಡಿ.ರೇವಣ್ಣ ವಿರುದ್ಧ ಏ.28ರಂದು ಹೊಳೆನರಸೀಪುರ ಠಾಣೆಯಲ್ಲಿ ಮನೆಗೆಲಸದಾಕೆ ದೂರು ನೀಡಿದ್ದಳು. ಈ ಸಂಬಂಧ ವಿಚಾರಣೆಗಾಗಿ ಇದೀಗ ನೋಟಿಸ್‌ ನೀಡಲಾಗಿದೆ.

ಪ್ರಜ್ವಲ್‌ ಕೇಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ; 3 ದಿನದಲ್ಲಿ ವರದಿ ಕೊಡಲು ಡಿಜಿಗೆ ಪತ್ರ

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಷ್ಟ್ರೀಯ ಮಹಿಳಾ ಆಯೋಗ (National Commission for Women) ಎಂಟ್ರಿ ಕೊಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರು ದಿನದೊಳಗೆ ವರದಿ ನೀಡುವಂತೆ ಕರ್ನಾಟಕ ಪೊಲೀಸ್‌ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಮಹಿಳಾ ಆಯೋಗವು ಸುಮೊಟೊ ಕೇಸ್‌ ದಾಖಲು ಮಾಡಿಕೊಂಡಿದೆ. ಜತೆಗೆ ಡಿಜಿಗೆ ಪತ್ರ ಬರೆದು ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಕೇಂದ್ರ ಮಹಿಳಾ ಆಯೋಗದ ಸದಸ್ಯರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಡಿಕೆಶಿ

ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತಮ್ಮ ಮೇಲೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ನಿರಾಕರಣೆ ಮಾಡಿದ್ದಾರೆ. ಪೆನ್‌ಡ್ರೈವ್‌ ಹೊರಬಿಡುವಂತಹ ಚಿಲ್ಲರೆ ಕೆಲಸವನ್ನು ನಾನಂತೂ ಮಾಡಲ್ಲ. ಚುನಾವಣೆಯಲ್ಲಿ ಫೇಸ್ ಮಾಡುತ್ತೇನೆ. ನಾನು ಪೆನ್ ಡ್ರೈವ್ ಇದೆ ಎಂದು ಹೆಸರಿಸುವುದಿಲ್ಲ. ಅಸೆಂಬ್ಲಿಗೆ ಬನ್ನಿ ಎಂದು ಕರೆದಿದ್ದೇನೆ‌ ಎಂದು ಸವಾಲು ಹಾಕಿದರು.

ಬೆಂಗಳೂರಿನಲ್ಲಿ ದಿಢೀರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾವು ನಮ್ಮ ಪೊಲಿಟಿಕಲ್ ಟೂರ್ ಬಗ್ಗೆ ಮೀಟಿಂಗ್ ಮಾಡಿದ್ದೇವೆ. ಯಾರು ಎಲ್ಲಿ ಪ್ರಚಾರ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಎಲ್ಲಿ ಭಾಗಿಯಾಗಬೇಕು, ನಾನು ಎಲ್ಲಿ ಭಾಗಿಯಾಗಬೇಕು ಎಂದು ಚರ್ಚೆ ಮಾಡಿದ್ದೇವೆಯೇ ವಿನಃ ಪೆನ್ ಡ್ರೈವ್ ವಿಚಾರದ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ನೆನಸಿಕೊಳ್ಳದೆ ಸ್ಫೂರ್ತಿ ಇರಲ್ಲ. ಕುಮಾರಸ್ವಾಮಿ ಅವರ ಭಾಷಣ ಕೇಳಿದ್ದೇನೆ. ಪ್ರಜ್ವಲ್‌ನನ್ನು ನನ್ನ ಮಗ ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಅವರ ಕುಟುಂಬದ ಕುಡಿ. ನೂಲಿನಂತೆ ಸೀರೆ ಎಂದು ಡಿಕೆಶಿ ವ್ಯಂಗ್ಯವಾಡಿದರು.

ಹಳೆ ವಿಡಿಯೋ ಎಂದು ಪ್ರಜ್ವಲ್‌ ತಂದೆ ಎಚ್‌.ಡಿ. ರೇವಣ್ಣ ಹೇಳಿದ್ದಾರೆ. ಅಂದರೆ ಅವರು ಒಪ್ಪಿಕೊಂಡಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಸಂಬಂಧ ದೇವರಾಜೇಗೌಡ ಅಮಿತ್ ಶಾಗೆ ಪತ್ರ ಬರೆದಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

10 ದಿನದ ಮುಂಚೆ ದೂರು ಕೊಡಬೇಕಿತ್ತು

ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಮಹಿಳೆಯರ ರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಉಡುಪಿಯಲ್ಲಿ ಪೋಟೊ ಹಿಡಿದು ಅಂತಾರಾಷ್ಟ್ರೀಯ ಮಹಿಳಾ ಆಯೋಗ ಕಳುಹಿಸಿದರು. ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ. ಅವರ ಕುಟುಂಬದವರು ಹೌದೋ ಇಲ್ಲವೋ ನೀವು ಹೇಳಬೇಕು. ವಾರ ಹತ್ತು ದಿನದ ಮುಂಚೆ ದೂರು ಕೊಟ್ಟಿದ್ದರೆ ಕ್ರಮ ತೆಗೆದುಕೊಳ್ಳುತ್ತಿದ್ದೆವು. ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಬಳಿಕ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಮಿತ್ ಶಾ ಅವರು ಮೈಸೂರಿಗೆ ಬಂದಾಗ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್ ಕೊಡಬೇಡಿ ಎಂದು ಹೇಳಿದ್ದರು. ಆದರೆ, ಕೊನೆಗೆ ಏಕೆ ಕೊಟ್ಟರು? ಅಮಿತ್‌ ಶಾ ಬೇಡವನ್ನೆಲು ಏನು ಕಾರಣ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಎಚ್‌ಡಿಕೆ ವಿರುದ್ಧ ಏಕವಚನ ಪ್ರಯೋಗ

ಪಕ್ಷದಿಂದ ವಜಾ ಮಾಡಲಿ, ಒಳಗೆ ಇಟ್ಟುಕೊಳ್ಳಲಿ‌. ಅದೆಲ್ಲ ಕಣ್ಣು ಒರೆಸುವ ನಾಟಕ. ಈ ಅಮಾನತಿನ ಬಗ್ಗೆ ರಾಜಕಾರಣದಲ್ಲಿ ನನಗೂ ಗೊತ್ತಿದೆ. ನನ್ನ ವಿರುದ್ಧ ಮೊದಲು ಪ್ರತಿಭಟನೆ ಮಾಡಲಿ. ಕುಮಾರಸ್ವಾಮಿ ಯಾವ ಕರೆ ಕೊಡುತ್ತೀಯೋ ಕೊಡು‌. ಕರೆ ಕೊಡಬೇಕು ನೀನು‌. ನೀನು ಕೊಡಲಿ ಅಂತನೇ ಹೇಳುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಎಚ್‌.ಡಿ. ಎಂದರೆ ಏನು? ಕುಟಂಬ ಅಲ್ಲವೆಂದರೆ ಹೇಗೆ?

ಈಗ ಪ್ರಜ್ವಲ್‌ ರೇವಣ್ಣ ಅವರು ತಮ್ಮ ಕುಟುಂಬ ಅಲ್ಲ ಅಂತ ಹೇಳಿದರೆ ಹೇಗೆ ಒಪ್ಪಲು ಆಗುತ್ತದೆ? ಎಚ್‌.ಡಿ. ಎಂದರೆ ಏನು? ಎಚ್ ಡಿ ರೇವಣ್ಣ ಎಂದರೆ ಹೊಳೆನರಸೀಪುರ ದೇವೇಗೌಡರ‌ ಮಗ ಎಂದಲ್ಲವೇ? ಎಚ್.ಡಿ. ಕುಮಾರಸ್ವಾಮಿ ಅಂದರೂ ಹಾಗೇ ಎಂದು ಡಿಕೆಶಿ ಹೇಳಿದರು.

ಭಗವಂತ ಇದನ್ನು ಕ್ಷಮಿಸಲ್ಲ

ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಮರ್ಯಾದೆ ಹೋಗುತ್ತದೆ. ಇವರ ಚಟಕ್ಕೆ ವಿಡಿಯೊ ಮಾಡಿಕೊಂಡು ಪದೇ ಪದೆ ಬರಬೇಕು ಎಂದು ಪೀಡಿಸುತ್ತಾರೆ. ಭಗವಂತ ಇದನ್ನು ಕ್ಷಮಿಸಲ್ಲ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಯಾರು ಜತೆಗೆ ಇದ್ದರು? ಯಾರು ಯಾರಿಗೆ ಕರೆ ಮಾಡಿದರು ಎಂದು ಅವರನ್ನೇ ಕೇಳಿ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Hassan Pen Drive Case: ಲೈಂಗಿಕ ದೌರ್ಜನ್ಯ ಕೇಸ್;‌ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಬಿಜೆಪಿಯವರ ಸ್ಟ್ಯಾಂಡ್ ಹೇಳಲಿ

ಈ ವಿಚಾರದಲ್ಲಿ ಬಿಜೆಪಿಯವರ ಸ್ಟ್ಯಾಂಡ್ ಹೇಳಬೇಕು. ಪ್ರಲ್ಹಾದ್‌ ಜೋಶಿ, ಸುನೀಲ್ ಕುಮಾರ್, ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ ಯಾಕೆ ಮಾತನಾಡುತ್ತಿಲ್ಲ. ಅವರ ಪಾರ್ಟಿಯವರು ನೋಡಿಕೊಳ್ಳುತ್ತಾರೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್ ಹೇಳುತ್ತಾರೆ. ಅಶೋಕ್ ಬೆನ್ನು ಮೂಳೆ ಇಲ್ಲದ ನಾಯಕ ಎಂದು ಡಿ.ಕೆ. ಶಿವಕುಮಾರ್‌ ಕಿಡಿಕಾರಿದರು.

ಬಿಜೆಪಿಯವರು ಸ್ವಲ್ಪ ಪ್ರಾಬ್ಲಮ್ ಇದೆ ಎಂದು ಹೇಳಿದ್ದರು ಬ್ರದರ್. ಐ ವಿಲ್ ಟೇಕ್ ಕೇರ್ ಎಂದು ದೊಡ್ಡವರು ಹೇಳಿದ್ದಾರೆ ಬ್ರದರ್ ಎಂಬುದಾಗಿ ಹೇಳಿದ್ದಾರೆ ಎಂದು ಕುಮಾರಸ್ವಾಮಿ ಶೈಲಿಯಲ್ಲೇ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

Continue Reading

ಕರ್ನಾಟಕ

Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

Sharavathi Project: ಶರಾವತಿ ಹೈಡ್ರೋ ಎಲೆಕ್ಟ್ರಿಕಲ್ ಯೋಜನೆ ಟೆಂಡರ್ ಪ್ರಕ್ರಿಯೆ ರದ್ದು ಕೋರಿ ಎಲ್ & ಟಿ ಕಂಪನಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಇತ್ತೀಚೆಗೆ ಹೈಕೋರ್ಟ್‌ ವಜಾ ಮಾಡಿತ್ತು. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಕಂಪನಿಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೆ, ವಿಚಾರಣೆ ಬಳಿಕ ಅಲ್ಲಿಯೂ ಅರ್ಜಿ ವಜಾಗೊಂಡಿದೆ.

VISTARANEWS.COM


on

Sharavathi Project
Koo

ನವದೆಹಲಿ/ಬೆಂಗಳೂರು: ಕರ್ನಾಟಕದ ಪ್ರತಿಷ್ಠಿತ ಶರಾವತಿ ಪಂಪ್ಡ್ ಸ್ಟೋರೇಜ್ ಪ್ರಾಜೆಕ್ಟ್‌ (Sharavathi Project) ಟೆಂಡರ್ ಪ್ರಕ್ರಿಯೆಯನ್ನು ಪ್ರಶ್ನಿಸಿ ಎಲ್ & ಟಿ (L&T) ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಸುದೀರ್ಘ ವಿಚಾರಣೆಯ ನಂತರ ಎಸ್‌ಎಲ್‌ಪಿಯನ್ನು ವಜಾಗೊಳಿಸಿತು.

ರಾಜ್ಯವು ಸಾಕಷ್ಟು ಸಮಯವನ್ನು ನೀಡಿದೆ ಮತ್ತು ಇನ್ನೂ ಎಲ್ ಆ್ಯಂಡ್‌ ಟಿ ಬಿಡ್ ಸಲ್ಲಿಸಲು ಸಾಧ್ಯವಾಗಲಿಲ್ಲ. ಎಲ್ & ಟಿ ಭಾಗವಹಿಸಲು ಅರ್ಹತೆ ಹೊಂದಿಲ್ಲ. ಎಲೆಕ್ಟ್ರೋ-ಮೆಕ್ಯಾನಿಕಲ್ ಮತ್ತು ಹೈಡ್ರೋ-ಮೆಕ್ಯಾನಿಕಲ್ ಕೆಲಸಗಳಲ್ಲಿ ಅನುಭವದ ಕೊರತೆಯಿದೆ ಎಂದು ಪ್ರಕರಣದಲ್ಲಿ ವಿವರಿಸಲಾಗಿತ್ತು.

ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರನ್ನೊಳಗೊಂಡ ವಿಭಾಗೀಯ ಪೀಠದ ಆದೇಶವನ್ನು ಎಲ್ & ಟಿ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಉಚ್ಚ ನ್ಯಾಯಾಲಯವು ಎಲ್ & ಟಿ ಅರ್ಜಿಯಲ್ಲಿ ವಾಣಿಜ್ಯ ಹಿತಾಸಕ್ತಿ ಹೊಂದಿದೆ ಎಂದು ತಿಳಿಸಿ ಸಲ್ಲಿಕೆಯಾದ ಮೇಲ್ಮನವಿಯನ್ನು ವಜಾಗೊಳಿಸಿತ್ತು.

ಪ್ರಸ್ತುತ ಕೆಪಿಸಿಎಲ್ ಕೈಗೊಂಡಿರುವ ನಡೆಸುತ್ತಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ (Sharavathi Pumped Storage power Project) ಟೆಂಡರ್‌ನ್ನು ಎಂಇಐಎಲ್ ಕಡಿಮೆ ದರ ನಮೂದಿಸುವ ಮೂಲಕ ತನ್ನದಾಗಿಸಿಕೊಂಡಿದೆ.

8 ಸಾವಿರ ಕೋಟಿ ರೂ. ಯೋಜನೆ ಟೆಂಡರ್‌ ಊರ್ಜಿತ

ರಾಜ್ಯದ ವಿದ್ಯುತ್ ಸಮಸ್ಯೆ ನೀಗಲು ಸರ್ಕಾರವು 8 ಸಾವಿರ ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಲು ಮುಂದಾಗಿರುವ ‘ಶರಾವತಿ ಹೈಡ್ರೋ ಎಲೆಕ್ಟ್ರಿಕಲ್ ಯೋಜನೆಗೆ ಸಂಬಂಧಿಸಿರುವ ಟೆಂಡರ್ ಪ್ರಕ್ರಿಯೆಯನ್ನು ಏ.25ರಂದು ಹೈಕೋರ್ಟ್ ಊರ್ಜಿತಗೊಳಿಸಿತ್ತು.

ಯೋಜನೆಗೆ ಕರೆಯಲಾಗಿದ್ದ ಟೆಂಡರ್ ಪ್ರಕ್ರಿಯೆಯನ್ನು ಅನೂರ್ಜಿತಗೊಳಿಸುವಂತೆ ಎಲ್ & ಟಿ ಕಂಪನಿಯು ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯಪೀಠ ಈ ಅರ್ಜಿ ವಿಚಾರಣೆ ನಡೆಸಿ‌, ಮೇಲ್ಮನವಿ ವಜಾಗೊಳಿಸಿದ್ದರು.

ಟೆಂಡರ್‌ಗೆ 30 ದಿನಗಳ ಕಾಲಾವಕಾಶ ನೀಡಬೇಕು. ಆದರೆ, ಕೇವಲ 21 ದಿನ ನೀಡಲಾಗಿದೆ. ಕರ್ನಾಟಕ ವಿದ್ಯುತ್‌ ನಿಗಮ (ಕೆಪಿಸಿಎ) ಕೆಲ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ಟೆಂಡರ್ ರೂಪಿಸಿದೆ ಎಂದು ಅರ್ಜಿದಾರರು ವಾದ ಮಂಡಿಸಿದ್ದರು. ಅಲ್ಲದೆ, 5 ವರ್ಷ ಯೋಜನಾ ಅವಧಿಯ 8,000 ಕೋಟಿ ರೂ. ಮೊತ್ತದ ಬೃಹತ್ ಯೋಜನೆಗೆ ಕೇವಲ 21 ದಿನಗಳ ಟೆಂಡ‌ರ್ ಕೊನೆಗೊಳಿಸಲಾಗಿದೆ. ನೀತಿಸಂಹಿತೆಯಿಂದ ಪಾರಾಗಲು ತರಾತುರಿಯಲ್ಲಿ ಟೆಂಡರ್ ಕರೆಯಲಾಗಿದೆ. ತಮಗೆ ಟೆಂಡ‌ರ್ ಸಲ್ಲಿಕೆಗೆ 90 ದಿನ ಬೇಕಿತ್ತು. ಹೀಗಾಗಿ ಟೆಂಡರ್ ಅನೂರ್ಜಿತಗೊಳಿಸಬೇಕು ಎಂದು ಎಲ್ & ಟಿ ಕೋರಿತ್ತು.

ಇದನ್ನೂ ಓದಿ | Narendra Modi: ಪ್ರಧಾನಿ ಮೋದಿ ಅನರ್ಹತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

30 ದಿನಗಳ ಟೆಂಡರ್ ಅವಧಿಯನ್ನು ಕಡಿತಗೊಳಿಸಲು ಪ್ರಾಧಿಕಾರಕ್ಕೆ ಅಧಿಕಾರವಿದೆ. ಈಗಾಗಲೇ ಬಿಡ್ ತೆರೆಯಲಾಗಿದ್ದು, ಲೆಟರ್ ಆಫ್ ಅವಾರ್ಡ್ ಕೂಡ ನೀಡಲಾಗಿದೆ. ಪ್ರಕ್ರಿಯೆಗೆ ತಡೆ ನೀಡಬಾರದು ಎಂದು ಅಡ್ವೋಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಮನವಿ ಮಾಡಿದ್ದರು. ಹೀಗಾಗಿ ಟೆಂಡ‌ರ್ ಪ್ರಕ್ರಿಯೆಯನ್ನು ಹೈಕೋರ್ಟ್ ಊರ್ಜಿತಗೊಳಿಸುವ ಮೂಲಕ ಸರ್ಕಾರದ ಆದೇಶ ಎತ್ತಿ ಹಿಡಿದು, ಮೇಲ್ಮನವಿಯನ್ನು ವಜಾಗೊಳಿಸಿತ್ತು. ಪ್ರಸ್ತುತ ಟೆಂಡರ್ ಅನ್ನು ಕಡಿಮೆ ದರ ನಮೂದಿಸಿದ್ದ ಮೇಘ ಎಂಜಿನಿಯರಿಂಗ್ ಆ್ಯಂಡ್‌ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಪಡೆದುಕೊಂಡಿದೆ.

Continue Reading

ಕ್ರೈಂ

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊಗಳನ್ನು ಎಲ್‌ಇಡಿ ವಾಲ್‌ನಲ್ಲಿ ಪ್ರದರ್ಶನಕ್ಕೆ ಮುಂದಾಗಿದ್ದರೇ ಕಾರ್ತಿಕ್?

Hassan Pen Drive Case: ಈ ವಿಡಿಯೊಗಳ ಬಗ್ಗೆ ಕಾರ್ತಿಕ್‌ ಹೇಳಿಕೊಂಡಿರುವ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ತಮ್ಮ ಅಶ್ಲೀಲ ವಿಡಿಯೊಗಳನ್ನು ಲೀಕ್‌ ಮಾಡದಂತೆ ಪ್ರಜ್ವಲ್‌ ರೇವಣ್ಣ ಕೋರ್ಟ್‌ನಿಂದ ಕಾರ್ತಿಕ್‌ ವಿರುದ್ಧ ಸ್ಟೇ ತಂದಿದ್ದರು. ಆ ಸ್ಟೇ ವೆಕೇಟ್ ಆದಲ್ಲಿ ವಿಡಿಯೊ ಪ್ಲೇ ಮಾಡಲು ಕಾರ್ತಿಕ್‌ ಚಿಂತನೆ ನಡೆಸಿದ್ದ ಎಂದು ದೇವರಾಜೇಗೌಡ ಹೇಳಿದ್ದಾರೆ. ಅಲ್ಲದೆ, 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಶ್ರೇಯಸ್ ಜತೆ ಇದೇ ಕಾರ್ತಿಕ್ ಇದ್ದ. ಹಲವು ಹಳ್ಳಿಗಳಲ್ಲಿ ಕಾರ್ಯಕ್ರಮ ಮಾಡಿದ್ದ. ಈ ವಿಡಿಯೊವನ್ನು ನಾನು ಚುನಾವಣೆ ವೇಳೆ ಬಿಡುಗಡೆ ಮಾಡಿದ್ದರೆ ಬಿಜೆಪಿ ಅಭ್ಯರ್ಥಿಯಾಗಿದ್ದ ನಾನು ಗೆಲ್ಲುತ್ತಿದ್ದೆ. ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಎಚ್.ಡಿ. ರೇವಣ್ಣ ಸೋಲುತ್ತಿದ್ದರು. ಆದರೆ, ನಾನು ಆ ನೀಚ ಕೆಲಸ ಮಾಡಲಿಲ್ಲ. ನನ್ನದು ನ್ಯಾಯಯುತ ಹೋರಾಟವಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

Hassan Pen Drive Case Did Karthik offer to display Prajwal videos on LED wall in Public
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಜ್ವಲ್‌ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ಆ ವಿಡಿಯೊಗಳನ್ನು ಎಲ್‌ಇಡಿ ವಾಲ್‌ನಲ್ಲಿ ಸಾರ್ವಜನಿಕ ಪ್ರದರ್ಶನಕ್ಕಿಡುತ್ತಿದ್ದನಂತೆ ಎಂಬ ಸ್ಫೋಟಕ ಮಾಹಿತಿಯನ್ನು ವಕೀಲ ದೇವರಾಜೇಗೌಡ ಹೊರಹಾಕಿದ್ದಾರೆ.

ವಿಡಿಯೊ ಲೀಕ್‌ ಬಗ್ಗೆ ತಮ್ಮ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಮಾಧ್ಯಮದವರಿಗೆ ಸ್ಪಷ್ಟೀಕರಣ ನೀಡಿದ ದೇವರಾಜೇಗೌಡ, ಈ ವಿಡಿಯೊ ಬಗ್ಗೆ ಕಾರ್ತಿಕ್‌ ಹೇಳಿಕೊಂಡಿರುವ ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಹಿಂದೆ ತಮ್ಮ ಅಶ್ಲೀಲ ವಿಡಿಯೊಗಳನ್ನು ಲೀಕ್‌ ಮಾಡದಂತೆ ಪ್ರಜ್ವಲ್‌ ರೇವಣ್ಣ ಕೋರ್ಟ್‌ನಿಂದ ಕಾರ್ತಿಕ್‌ ವಿರುದ್ಧ ಸ್ಟೇ ತಂದಿದ್ದರು. ಆ ಸ್ಟೇ ವೆಕೇಟ್ ಆದಲ್ಲಿ ಹಾಗೂ ವಿಡಿಯೊದಲ್ಲಿರುವ ಹೆಣ್ಣು ಮಕ್ಕಳು ಅನುಮತಿ ಕೊಟ್ಟರೆ ಎಲ್ಲ ವಿಡಿಯೊಗಳನ್ನು ಎಲ್ಇಡಿ ವಾಲ್ ಹಾಕಿ ವಿಡಿಯೊ ಪ್ಲೇ ಮಾಡುತ್ತೇನೆ ಎಂದು ಕಾರ್ತಿಕ್‌ ನನ್ನ ಬಳಿ ಹೇಳಿಕೊಂಡಿದ್ದ ಎಂದು ತಿಳಿಸಿದರು.

ಕಾಂಗ್ರೆಸ್‌ನ ಶ್ರೇಯಸ್ ಜತೆ ಇದ್ದ ಕಾರ್ತಿಕ್

2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಶ್ರೇಯಸ್ ಜತೆ ಇದೇ ಕಾರ್ತಿಕ್ ಇದ್ದ. ಹಲವು ಹಳ್ಳಿಗಳಲ್ಲಿ ಕಾರ್ಯಕ್ರಮ ಮಾಡಿದ್ದ. ಈ ವಿಡಿಯೊವನ್ನು ನಾನು ಚುನಾವಣೆ ವೇಳೆ ಬಿಡುಗಡೆ ಮಾಡಿದ್ದರೆ ಬಿಜೆಪಿ ಅಭ್ಯರ್ಥಿಯಾಗಿದ್ದ ನಾನು ಗೆಲ್ಲುತ್ತಿದ್ದೆ. ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಎಚ್.ಡಿ. ರೇವಣ್ಣ ಸೋಲುತ್ತಿದ್ದರು. ಆದರೆ, ನಾನು ಆ ನೀಚ ಕೆಲಸ ಮಾಡಲಿಲ್ಲ. ನನ್ನದು ನ್ಯಾಯಯುತ ಹೋರಾಟವಾಗಿದೆ. ಆದರೆ, ಲೋಕಸಭೆ ಚುನಾವಣೆ ಹೊತ್ತಲ್ಲಿ ರಿಲೀಸ್ ಆಗಿದೆ. ಅದನ್ನು ದೇವರಾಜೇಗೌಡ ಮಾಡಿದ್ದಾನೆ ಎಂದು ಹೇಳುತ್ತಾರೆ. ನಾನು ಲೀಕ್ ಮಾಡಿದ್ದಲ್ಲ,‌ ಬೇರೆಯವರಿಗೆ ಈ ವಿಡಿಯೊವನ್ನು ನೋಡುವುದಕ್ಕೂ ನಾನು ಕೊಟ್ಟಿಲ್ಲ ಎಂದು ದೇವರಾಜೇಗೌಡ ಸ್ಪಷ್ಟನೆ ನೀಡಿದರು.

ಕಾರ್ತಿಕ್‌ ನನಗೆ ಪೆನ್‌ ಡ್ರೈವ್‌ ಕೊಟ್ಟಿದ್ದ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ದೇಶಾದ್ಯಂತ ದೊಡ್ಡ ಸಂಚಲನ ಉಂಟು ಮಾಡುತ್ತಿದೆ. ಕಾರ್ತಿಕ್ 14-15 ವರ್ಷದಿಂದ ಪ್ರಜ್ವಲ್ ಹತ್ತಿರ ಕೆಲಸ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ. ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಸ್ಟೇ ಕೂಡ ತೆಗೆದುಕೊಂಡಿದ್ದಾರೆ. ತನ್ನ ಹೆಂಡತಿಯನ್ನು ಪ್ರಜ್ವಲ್‌ ಕಿಡ್ನಾಪ್‌ ಮಾಡಿ ಹಿಂಸೆ ಕೊಟ್ಟಿದ್ದ ಎಂದು ಸಹ ಕಾರ್ತಿಕ್‌ ಹೇಳಿಕೊಂಡಿದ್ದ. ಕಾಂಗ್ರೆಸ್‌ನವರ ಹತ್ತಿರ ಹೋಗಿದ್ದೆ. ನ್ಯಾಯ ಸಿಗಲಿಲ್ಲ ಅಂತಾ ಹೇಳಿದ್ದ. ನಾನು ವಕೀಲನಾಗಿ ಸತ್ಯಾಸತ್ಯತೆ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಕ್ಕೆ ಪೆನ್ ಡ್ರೈವ್ ಕೊಟ್ಟಿದ್ದ. ನಾನು ಯಾರಿಗೂ ಇದನ್ನು ಕೊಡಲ್ಲ, ಕೋರ್ಟ್‌ನಲ್ಲಿ ಜಡ್ಜ್ ಮುಂದೆ ಕೊಡುತ್ತೇನೆ ಎಂದು ಹೇಳಿದ್ದೆ ಎಂದು ಸ್ಪಷ್ಟೀಕರಣ ನೀಡಿದರು.

ಆದರೆ, ಅಶ್ಲೀಲ ವಿಡಿಯೊ ಕಾರ್ತಿಕ್ ಕೈಗೆ ಹೇಗೆ ಬಂತು? ಡೌನ್‌ಲೋಡ್ ಮಾಡಿದವರು ಯಾರು? ಪೆನ್ ಡ್ರೈವ್ ಎಲ್ಲಿಂದ ಬಂತು? ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಇದ್ದ ವಿಡಿಯೊಗಳು ಕಾರ್ತಿಕ್‌ಗೆ ಸಿಕ್ಕಿದ್ದಾದರೂ ಹೇಗೆ? ಎಂದು ಪ್ರಶ್ನೆ ಮಾಡಿದ ದೇವರಾಜೇಗೌಡ, ದೃಶ್ಯ ಮತ್ತು ಪ್ರಿಂಟ್ ಮೀಡಿಯಾ ಮೇಲೆ ಇಂಜೆಕ್ಷನ್ ತಂದರು. ಆದರೆ, ಕಾರ್ತಿಕ್‌ನನ್ನು ಅಲ್ಲಿ ಪಾರ್ಟಿ ಮಾಡಿಲ್ಲ ಎಂದು ಹೇಳಿದರು.

ಇದನ್ನೂ ಓದಿ: Hassan Pen Drive Case: ನಾನು ವಿಡಿಯೊ ಕೊಟ್ಟಿದ್ದು ದೇವರಾಜೇಗೌಡರಿಗೆ ಮಾತ್ರ; ಅವರೇ ಲೀಕ್‌ ಮಾಡಿರಬೇಕು ಎಂದ ಕಾರ್ತಿಕ್!

ಕಾರ್ತಿಕ್‌ ಹೇಳಿದ್ದೆಲ್ಲವೂ ಸತ್ಯ, ಆದರೆ..!

ವಿಡಿಯೊವನ್ನು ಬಿಜೆಪಿಯವರು ಯಾಕೆ ಲೀಕ್ ಮಾಡುತ್ತಾರೆ? ಇನ್ನು ಜೆಡಿಎಸ್‌ನವರು ಅವರದ್ದನ್ನು ಲೀಕ್ ಮಾಡ್ತಾರಾ? ಇದರಿಂದ ಕಾಂಗ್ರೆಸ್‌ನವರಿಗೆ ಲಾಭ‌. ಕಾರ್ತಿಕ್ ಮೊದಲೇ ಹೇಳಿದ್ದ ಕಾಂಗ್ರೆಸ್‌ನಿಂದ ನ್ಯಾಯ ಸಿಕ್ಕಿಲ್ಲ ಅಂದಿದ್ದ. ಕಾರ್ತಿಕ್ ಹೇಳಿದ್ದು ಎಲ್ಲವೂ ಸತ್ಯ. ಆದರೆ, ನಾನು ಲೀಕ್‌ ಮಾಡಿರಬಹುದು ಎಂದು ಹೇಳಿದ್ದೊಂದು ಬಿಟ್ಟು ಎಂದು ದೇವರಾಜೇಗೌಡ ಹೇಳಿದರು.

ಇದು ನಮ್ಮ ಜಿಲ್ಲೆ, ರಾಜ್ಯದ ಹೆಣ್ಣು ಮಕ್ಕಳ ಮಾನ ಗೌರವದ ಪ್ರಶ್ನೆ. ಅವರ ಗೌರವಕ್ಕೆ ನಾನು ಧಕ್ಕೆ ತರಲ್ಲ‌. ಎಸ್ಐಟಿ ನನಗೆ ನೋಟಿಸ್ ಕೊಡಲಿ ಅಂತಾ ಕಾಯ್ತಾ ಇದ್ದೇನೆ. ನನ್ನ ಬಳಿ ಕೆಲವು ದಾಖಲೆಗಳು ಇವೆ ಕೊಡುತ್ತೇನೆ. ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಲಿ. ಇಲ್ಲದೇ ಇದ್ದರೆ ಹೈಕೋರ್ಟ್‌ನಲ್ಲಿ ರಿಟ್ ಹಾಕುತ್ತೇನೆ. ಸಿಬಿಐಗೆ ವಹಿಸಬೇಕು ಅಂತಾ ಕೊರುತ್ತೇನೆ ಎಂದು ದೇವರಾಜೇಗೌಡ ಹೇಳಿದರು.

Continue Reading

ರಾಜಕೀಯ

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಕಾರ್ತಿಕ್‌ಗೆ ಹೇಗೆ ಸಿಕ್ತು? ಡೌನ್ಲೋಡ್‌ ಮಾಡಿದ್ದು ಯಾರು? ಈ ಬಗ್ಗೆ ದೇವರಾಜೇಗೌಡ ಹೇಳಿದ್ದೇನು?

Hassan Pen Drive Case: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ದೇಶಾದ್ಯಂತ ದೊಡ್ಡ ಸಂಚಲನ ಉಂಟು ಮಾಡುತ್ತಿದೆ. ಕಾರ್ತಿಕ್ 14-15 ವರ್ಷದಿಂದ ಪ್ರಜ್ವಲ್ ಹತ್ತಿರ ಕೆಲಸ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ. ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಸ್ಟೇ ಕೂಡ ತೆಗೆದುಕೊಂಡಿದ್ದಾರೆ. ತನ್ನ ಹೆಂಡತಿಯನ್ನು ಪ್ರಜ್ವಲ್‌ ಕಿಡ್ನಾಪ್‌ ಮಾಡಿ ಹಿಂಸೆ ಕೊಟ್ಟಿದ್ದ ಎಂದು ಸಹ ಕಾರ್ತಿಕ್‌ ಹೇಳಿಕೊಂಡಿದ್ದ. ಕಾಂಗ್ರೆಸ್‌ನವರ ಹತ್ತಿರ ಹೋಗಿದ್ದೆ. ನ್ಯಾಯ ಸಿಗಲಿಲ್ಲ ಅಂತಾ ಹೇಳಿದ್ದ. ನಾನು ವಕೀಲನಾಗಿ ಸತ್ಯಾಸತ್ಯತೆ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಕ್ಕೆ ಪೆನ್ ಡ್ರೈವ್ ಕೊಟ್ಟಿದ್ದ. ನಾನು ಯಾರಿಗೂ ಇದನ್ನು ಕೊಡಲ್ಲ, ಕೋರ್ಟ್‌ನಲ್ಲಿ ಜಡ್ಜ್ ಮುಂದೆ ಕೊಡುತ್ತೇನೆ ಎಂದು ಹೇಳಿದ್ದೆ ಎಂದು ದೇವರಾಜೇಗೌಡ ಸ್ಪಷ್ಟೀಕರಣ ನೀಡಿದ್ದಾರೆ.

VISTARANEWS.COM


on

Hassan Pen Drive Case How did Karthik get Prajwal video Devaraje Gowda questions
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ವಕೀಲ ದೇವರಾಜೇಗೌಡ ಸ್ಪಷ್ಟೀಕರಣ ನೀಡಿದ್ದಾರೆ. ವಿಡಿಯೊ ಲೀಕ್‌ ವಿಷಯವಾಗಿ ತಮ್ಮ ಮೇಲೆ ಬಂದ ಆರೋಪವನ್ನು ಅಲ್ಲಗಳೆದಿದ್ದಾರೆ. ಆದರೆ, ಅಶ್ಲೀಲ ವಿಡಿಯೊಗಳು ಕಾರ್ತಿಕ್ ಕೈಗೆ ಹೇಗೆ ಬಂತು? ಡೌನ್‌ಲೋಡ್ ಮಾಡಿದವರು ಯಾರು? ಪೆನ್ ಡ್ರೈವ್ ಎಲ್ಲಿಂದ ಬಂತು? ಎಂಬ ಪ್ರಶ್ನೆಯನ್ನಿಟ್ಟಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಕೀಲ ದೇವರಾಜೇಗೌಡ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ದೇಶಾದ್ಯಂತ ದೊಡ್ಡ ಸಂಚಲನ ಉಂಟು ಮಾಡುತ್ತಿದೆ. ಕಾರ್ತಿಕ್ 14-15 ವರ್ಷದಿಂದ ಪ್ರಜ್ವಲ್ ಹತ್ತಿರ ಕೆಲಸ ಮಾಡುತ್ತಿದ್ದೆ ಎಂದು ಹೇಳಿಕೊಂಡಿದ್ದಾನೆ. ಅಶ್ಲೀಲ ವಿಡಿಯೊಗೆ ಸಂಬಂಧಿಸಿದಂತೆ ಸ್ಟೇ ಕೂಡ ತೆಗೆದುಕೊಂಡಿದ್ದಾರೆ. ತನ್ನ ಹೆಂಡತಿಯನ್ನು ಪ್ರಜ್ವಲ್‌ ಕಿಡ್ನಾಪ್‌ ಮಾಡಿ ಹಿಂಸೆ ಕೊಟ್ಟಿದ್ದ ಎಂದು ಸಹ ಕಾರ್ತಿಕ್‌ ಹೇಳಿಕೊಂಡಿದ್ದ. ಕಾಂಗ್ರೆಸ್‌ನವರ ಹತ್ತಿರ ಹೋಗಿದ್ದೆ. ನ್ಯಾಯ ಸಿಗಲಿಲ್ಲ ಅಂತಾ ಹೇಳಿದ್ದ. ನಾನು ವಕೀಲನಾಗಿ ಸತ್ಯಾಸತ್ಯತೆ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಕ್ಕೆ ಪೆನ್ ಡ್ರೈವ್ ಕೊಟ್ಟಿದ್ದ. ನಾನು ಯಾರಿಗೂ ಇದನ್ನು ಕೊಡಲ್ಲ, ಕೋರ್ಟ್‌ನಲ್ಲಿ ಜಡ್ಜ್ ಮುಂದೆ ಕೊಡುತ್ತೇನೆ ಎಂದು ಹೇಳಿದ್ದೆ ಎಂದು ಸ್ಪಷ್ಟೀಕರಣ ನೀಡಿದರು.

ಆದರೆ, ಅಶ್ಲೀಲ ವಿಡಿಯೊ ಕಾರ್ತಿಕ್ ಕೈಗೆ ಹೇಗೆ ಬಂತು? ಡೌನ್‌ಲೋಡ್ ಮಾಡಿದವರು ಯಾರು? ಪೆನ್ ಡ್ರೈವ್ ಎಲ್ಲಿಂದ ಬಂತು? ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಇದ್ದ ವಿಡಿಯೊಗಳು ಕಾರ್ತಿಕ್‌ಗೆ ಸಿಕ್ಕಿದ್ದಾದರೂ ಹೇಗೆ? ಎಂದು ಪ್ರಶ್ನೆ ಮಾಡಿದ ದೇವರಾಜೇಗೌಡ, ದೃಶ್ಯ ಮತ್ತು ಪ್ರಿಂಟ್ ಮೀಡಿಯಾ ಮೇಲೆ ಇಂಜೆಕ್ಷನ್ ತಂದರು. ಆದರೆ, ಕಾರ್ತಿಕ್‌ನನ್ನು ಅಲ್ಲಿ ಪಾರ್ಟಿ ಮಾಡಿಲ್ಲ ಎಂದು ಹೇಳಿದರು.

ಕಾರ್ತಿಕ್‌ ಹೇಳಿದ್ದೆಲ್ಲವೂ ಸತ್ಯ, ಆದರೆ..!

ವಿಡಿಯೊವನ್ನು ಬಿಜೆಪಿಯವರು ಯಾಕೆ ಲೀಕ್ ಮಾಡುತ್ತಾರೆ? ಇನ್ನು ಜೆಡಿಎಸ್‌ನವರು ಅವರದ್ದನ್ನು ಲೀಕ್ ಮಾಡ್ತಾರಾ? ಇದರಿಂದ ಕಾಂಗ್ರೆಸ್‌ನವರಿಗೆ ಲಾಭ‌. ಕಾರ್ತಿಕ್ ಮೊದಲೇ ಹೇಳಿದ್ದ ಕಾಂಗ್ರೆಸ್‌ನಿಂದ ನ್ಯಾಯ ಸಿಕ್ಕಿಲ್ಲ ಅಂದಿದ್ದ. ಕಾರ್ತಿಕ್ ಹೇಳಿದ್ದು ಎಲ್ಲವೂ ಸತ್ಯ. ಆದರೆ, ನಾನು ಲೀಕ್‌ ಮಾಡಿರಬಹುದು ಎಂದು ಹೇಳಿದ್ದೊಂದು ಬಿಟ್ಟು ಎಂದು ದೇವರಾಜೇಗೌಡ ಹೇಳಿದರು.

ಇದು ನಮ್ಮ ಜಿಲ್ಲೆ, ರಾಜ್ಯದ ಹೆಣ್ಣು ಮಕ್ಕಳ ಮಾನ ಗೌರವದ ಪ್ರಶ್ನೆ. ಅವರ ಗೌರವಕ್ಕೆ ನಾನು ಧಕ್ಕೆ ತರಲ್ಲ‌. ಎಸ್ಐಟಿ ನನಗೆ ನೋಟಿಸ್ ಕೊಡಲಿ ಅಂತಾ ಕಾಯ್ತಾ ಇದ್ದೇನೆ. ನನ್ನ ಬಳಿ ಕೆಲವು ದಾಖಲೆಗಳು ಇವೆ ಕೊಡುತ್ತೇನೆ. ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಲಿ. ಇಲ್ಲದೇ ಇದ್ದರೆ ಹೈಕೋರ್ಟ್‌ನಲ್ಲಿ ರಿಟ್ ಹಾಕುತ್ತೇನೆ. ಸಿಬಿಐಗೆ ವಹಿಸಬೇಕು ಅಂತಾ ಕೊರುತ್ತೇನೆ ಎಂದು ದೇವರಾಜೇಗೌಡ ಹೇಳಿದರು.

ಇದನ್ನೂ ಓದಿ: Hassan Pen Drive Case: ನಾನು ವಿಡಿಯೊ ಕೊಟ್ಟಿದ್ದು ದೇವರಾಜೇಗೌಡರಿಗೆ ಮಾತ್ರ; ಅವರೇ ಲೀಕ್‌ ಮಾಡಿರಬೇಕು ಎಂದ ಕಾರ್ತಿಕ್!

ಕಾರ್ತಿಕ್‌ ವಿಡಿಯೊವನ್ನು ಎಲ್‌ಇಡಿ ವಾಲ್‌ನಲ್ಲಿ ಹಾಕುತ್ತಿದ್ದನಂತೆ!

ಸ್ಟೇ ವೆಕೇಟ್ ಆದಲ್ಲಿ, ವಿಡಿಯೊದಲ್ಲಿರುವ ಹೆಣ್ಣು ಮಕ್ಕಳು ಅನುಮತಿ ಕೊಟ್ಟರೆ ಎಲ್ಇಡಿ ವಾಲ್ ಹಾಕಿ ವಿಡಿಯೊ ಪ್ಲೇ ಮಾಡುತ್ತೇನೆ ಎಂದು ಕಾರ್ತಿಕ್‌ ಹೇಳಿದ್ದ. 2013ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಶ್ರೇಯಸ್ ಜತೆ ಇದೇ ಕಾರ್ತಿಕ್ ಇದ್ದ. ಹಲವು ಹಳ್ಳಿಗಳಲ್ಲಿ ಕಾರ್ಯಕ್ರಮ ಮಾಡಿದ್ದ. ಈ ವಿಡಿಯೊವನ್ನು ನಾನು ಚುನಾವಣೆ ವೇಳೆ ಬಿಡುಗಡೆ ಮಾಡಿದ್ದರೆ ಬಿಜೆಪಿ ಅಭ್ಯರ್ಥಿಯಾಗಿದ್ದ ನಾನು ಗೆಲ್ಲುತ್ತಿದ್ದೆ. ಜೆಡಿಎಸ್‌ ಅಭ್ಯರ್ಥಿಯಾಗಿದ್ದ ಎಚ್.ಡಿ. ರೇವಣ್ಣ ಸೋಲುತ್ತಿದ್ದರು. ಆದರೆ, ನಾನು ಆ ನೀಚ ಕೆಲಸ ಮಾಡಲಿಲ್ಲ. ನನ್ನದು ನ್ಯಾಯಯುತ ಹೋರಾಟವಾಗಿದೆ. ಆದರೆ, ಲೋಕಸಭೆ ಚುನಾವಣೆ ಹೊತ್ತಲ್ಲಿ ರಿಲೀಸ್ ಆಗಿದೆ. ಅದನ್ನು ದೇವರಾಜೇಗೌಡ ಮಾಡಿದ್ದಾನೆ ಎಂದು ಹೇಳುತ್ತಾರೆ. ನಾನು ಲೀಕ್ ಮಾಡಿದ್ದಲ್ಲ,‌ ಬೇರೆಯವರಿಗೆ ಈ ವಿಡಿಯೊವನ್ನು ನೋಡುವುದಕ್ಕೂ ನಾನು ಕೊಟ್ಟಿಲ್ಲ ಎಂದು ದೇವರಾಜೇಗೌಡ ಸ್ಪಷ್ಟನೆ ನೀಡಿದರು.

Continue Reading
Advertisement
Hassan Pen Drive case
ಪ್ರಮುಖ ಸುದ್ದಿ20 mins ago

Hassan Pen Drive Case: 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ; ಪ್ರಜ್ವಲ್‌, ರೇವಣ್ಣಗೆ ಎಸ್‌ಐಟಿ ನೋಟಿಸ್‌

Fact check
ಪ್ರಮುಖ ಸುದ್ದಿ24 mins ago

Fact Check : ಕರ್ನಾಟಕದವರು ಪಾಪಿಗಳು ಅಂಥ ಹೇಳಿದ್ರಾ ಮೋದಿ; ಕಾಂಗ್ರೆಸ್ ಮಾಡಿದ ಪೋಸ್ಟ್​ ಸುಳ್ಳಾ? ಇಲ್ಲಿದೆ ನಿಜಾಂಶ

Suhana Khan
ಬಾಲಿವುಡ್48 mins ago

Suhana Khan: ಬ್ರೇಕಪ್‌ ಬಗ್ಗೆ ಓಪನ್‌ ಆಗಿ ಮಾತನಾಡಿದ ಶಾರುಖ್‌ ಪುತ್ರಿ ಸುಹಾನಾ ಖಾನ್‌; ವಿಡಿಯೊ ಇಲ್ಲಿದೆ

Sharavathi Project
ಕರ್ನಾಟಕ51 mins ago

Sharavathi Project: ಶರಾವತಿ ಜಲವಿದ್ಯುತ್ ಯೋಜನೆ; ಟೆಂಡರ್‌ ಪ್ರಶ್ನಿಸಿ ಎಲ್ & ಟಿ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

Reliance launched a new campaign for Campa-Cola
ದೇಶ56 mins ago

Campa cola: ಕ್ಯಾಂಪಾ ಕೋಲಾ ಪ್ರಚಾರದ ಹೊಸ ವಿಡಿಯೊ ಬಿಡುಗಡೆ ಮಾಡಿದ ರಿಲಯನ್ಸ್

Hassan Pen Drive Case Did Karthik offer to display Prajwal videos on LED wall in Public
ಕ್ರೈಂ1 hour ago

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊಗಳನ್ನು ಎಲ್‌ಇಡಿ ವಾಲ್‌ನಲ್ಲಿ ಪ್ರದರ್ಶನಕ್ಕೆ ಮುಂದಾಗಿದ್ದರೇ ಕಾರ್ತಿಕ್?

Hassan Pen Drive Case How did Karthik get Prajwal video Devaraje Gowda questions
ರಾಜಕೀಯ1 hour ago

Hassan Pen Drive Case: ಪ್ರಜ್ವಲ್‌ ಅಶ್ಲೀಲ ವಿಡಿಯೊ ಕಾರ್ತಿಕ್‌ಗೆ ಹೇಗೆ ಸಿಕ್ತು? ಡೌನ್ಲೋಡ್‌ ಮಾಡಿದ್ದು ಯಾರು? ಈ ಬಗ್ಗೆ ದೇವರಾಜೇಗೌಡ ಹೇಳಿದ್ದೇನು?

IPL 2024
ಪ್ರಮುಖ ಸುದ್ದಿ2 hours ago

IPL 2024 : ಐಪಿಎಲ್ ಪ್ಲೇಆಫ್​ ಹಂತಕ್ಕೆ ಇಂಗ್ಲೆಂಡ್ ಆಟಗಾರರು ಅಲಭ್ಯ; ಇದಕ್ಕೂ ಒಂದು ಕಾರಣವಿದೆ

Multivitamin Pill
ಆರೋಗ್ಯ2 hours ago

Multivitamin Pill: ಮಲ್ಟಿವಿಟಮಿನ್‌ ಮಾತ್ರೆಗಳ ಮೊರೆ ಹೋಗದೆ, ನೈಸರ್ಗಿಕವಾಗಿ ಪೋಷಣೆ ಪಡೆಯುವುದು ಹೇಗೆ?

Kannada New Movie
ಸ್ಯಾಂಡಲ್ ವುಡ್2 hours ago

Kannada New Movie: ‘ಕನ್ನಡ ಮಾಧ್ಯಮ’ ಸಿನಿಮಾಕ್ಕೆ ಹಿರಿಯ ಸಾಹಿತಿ ದೊಡ್ಡರಂಗೇಗೌಡರ ಸಾಥ್; ಮೋಷನ್ ಪೋಸ್ಟರ್ ರಿಲೀಸ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ15 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌