Arshdeep Singh: Arshdeep Singh turned to county cricket Arshdeep Singh: ಕೌಂಟಿ ಕ್ರಿಕೆಟ್​ನತ್ತ ಮುಖ ಮಾಡಿದ ಎಡಗೈ ವೇಗಿ ಅರ್ಶ್​ದೀಪ್​ ಸಿಂಗ್‌ - Vistara News Arshdeep Singh: ಕೌಂಟಿ ಕ್ರಿಕೆಟ್​ನತ್ತ ಮುಖ ಮಾಡಿದ ಎಡಗೈ ವೇಗಿ ಅರ್ಶ್​ದೀಪ್​ ಸಿಂಗ್‌

ಕ್ರಿಕೆಟ್

Arshdeep Singh: ಕೌಂಟಿ ಕ್ರಿಕೆಟ್​ನತ್ತ ಮುಖ ಮಾಡಿದ ಎಡಗೈ ವೇಗಿ ಅರ್ಶ್​ದೀಪ್​ ಸಿಂಗ್‌

ಟೀಮ್​ ಇಂಡಿಯಾದ ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಅವರ ಸಲಹೆ ಮೇರೆಗೆ ಎಡಗೈ ವೇಗಿ ಅರ್ಶ್​ದೀಪ್​ ಸಿಂಗ್​ ಅವರು ಕೌಂಟಿ ಕ್ರಿಕೆಟ್​ ಆಡಲು ಮುಂದಾಗಿದ್ದಾರೆ.

VISTARANEWS.COM


on

Arshdeep Singh: Arshdeep Singh turned to county cricket
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಟೀಮ್​ ಇಂಡಿಯಾದ ಯುವ ವೇಗಿ ಅರ್ಶ್​ದೀಪ್​ ಸಿಂಗ್‌(Arshdeep Singh) ಅವರು ಮುಂಬರುವ ಇಂಗ್ಲಿಷ್‌ ಕೌಂಟಿ ಕ್ರಿಕೆಟ್‌ ಟೂರ್ನಿಯಲ್ಲಿ ಆಡಲಿದ್ದಾರೆ. ಅವರು ಕೆಂಟ್‌ ಕೌಂಟಿ(Kent Cricket) ಕ್ಲಬ್​ ಪರ ಕಣಕ್ಕಿಳಿಯಲಿದ್ದಾರೆ.

ಅರ್ಶ್​ದೀಪ್​ ಸಿಂಗ್​ ಅವರು ಕೌಂಟಿ ಆಡುವ ವಿಚಾರವನ್ನು ಕೆಂಟ್‌ ಕೌಂಟಿ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಕೌಂಟಿ ಆಡುವ ಬಗ್ಗೆ ಮಾಹಿತಿ ನೀಡಿದ ಅರ್ಶ್​ದೀಪ್​ ಸಿಂಗ್​, “ಇಂಗ್ಲಿಷ್‌ ಕೌಂಟಿಯಲ್ಲಿ ರೆಡ್‌ ಬಾಲ್‌ ಕ್ರಿಕೆಟ್‌ ಆಡಲು ಉತ್ಸುಕನಾಗಿದ್ದೇನೆ. ನನ್ನ ಬೌಲಿಂಗ್‌ ಕೌಶಲ ಹೆಚ್ಚಿಸಲು ಇದೊಂದು ಉತ್ತಮ ಅವಕಾಶ” ಎಂದು ಅವರು ಹೇಳಿದರು.

ಅರ್ಶ್​ದೀಪ್​ ಸಿಂಗ್​ ಅವರು ಕೌಂಟಿ ಆಡಲು ಟೀಮ್​ ಇಂಡಿಯಾದ ಕೋಚ್​ ರಾಹುಲ್​ ದ್ರಾವಿಡ್(Rahul Dravid)​ ಅವರ ಸಲಹೆ ಕಾರಣ. ಈ ವಿಚಾರವನ್ನು ಡ್ರಾವಿಡ್​ ಈಗಾಗಲೇ ಖಚಿತಪಡಿಸಿದ್ದಾರೆ. ಜತೆಗೆ ಇದೊಂದು ಅಮೋಘ ಇತಿಹಾಸವುಳ್ಳ ಕ್ರಿಕೆಟ್​ ಕ್ಲಬ್​ ಆಗಿದೆ ಎಂದು ಹೇಳಿದ್ದಾರೆ. ದ್ರಾವಿಡ್ ಕೂಡ ಕೌಂಟಿ ಕ್ರಿಕೆಟ್​ ಆಡಿದ್ದರು.

ಇದನ್ನೂ ಓದಿ IND VS AUS: ಭಾರತ-ಆಸ್ಟ್ರೇಲಿಯಾ ದ್ವಿತೀಯ ಏಕದಿನ ಪಂದ್ಯ ನಡೆಯುವುದು ಅನುಮಾನ; ಕಾರಣ ಏನು?

ಸತತ ಬ್ಯಾಟಿಂಗ್​ ವೈಫಲ್ಯ ಅನುಭವಿಸಿ ಟೀಕೆಗೆ ಗುರಿಯಾಗಿದ್ದ ಚೇತೇಶ್ವರ್​ ಪೂಜಾರ ಕಳೆದ ವರ್ಷ ಕೌಂಟಿ ಕ್ರಿಕೆಟ್​ ಆಡಿ ತಮ್ಮ ಬ್ಯಾಟಿಂಗ್​ ಲಯವನ್ನು ಕಂಡುಕೊಂಡಿದ್ದರು. ವಿಶ್ವದ ಹಲವು ಕ್ರಿಕೆಟ್​ ಆಟಗಾರರು ಕೂಡ ತಮ್ಮ ಕ್ರಿಕೆಟ್​ ಪ್ರದರ್ಶನ ಕುಂಠಿತಗೊಂಡಾಗ ಕೌಂಟಿ ಆಡಿ ಮತ್ತೆ ಫಾರ್ಮ್​ ಕಂಡುಕೊಂಡಿದ್ದಾರೆ. ಇದೀಗ ಅರ್ಶ್​ದೀಪ್​ ಸಿಂಗ್​ ಕೂಡ ಈ ಟೂರ್ನಿಯಲ್ಲಿ ಆಡುವ ಮೂಲಕ ತಮ್ಮ ಬೌಲಿಂಗ್​ ನ್ಯೂನತೆಗಳನ್ನು ಸರಿಪಡಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

IPL 2024: ಐಪಿಎಲ್​​ನ ಕನ್ಕಷನ್ ಬದಲಿ ಇತಿಹಾಸವನ್ನು ಹಿಂತಿರುಗಿ ನೋಡಿದರೆ, ಯುಧ್ವೀರ್ ಎರಡನೇ ಆಟಗಾರರಾದರು. ಮುಂಬೈ ಇಂಡಿಯನ್ಸ್ ವಿಕೆಟ್ ಕೀಪರ್ ವಿಷ್ಣು ವಿನೋದ್ ಈ ಪಟ್ಟಿಯಲ್ಲಿ ಮೊದಲಿಗರು. ಐಪಿಎಲ್ 2023 ರ ಎರಡನೇ ಕ್ವಾಲಿಫೈಯರ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಇಶಾನ್ ಕಿಶನ್ ಬದಲಿಗೆ ವಿನೋದ್ ಆಡಿದ್ದರು.

VISTARANEWS.COM


on

IPL 2024
Koo

ಲಖನೌ : ಐಪಿಎಲ್​ 2024ನೇ (IPL 2024) ಆವೃತ್ತಿಯ ಮೊದಲ ಕನ್​ಕಷನ್​​ (ಗಾಯಗೊಂಡ ಆಟಗಾರನಿಗೆ ಬದಲಿ) ಆಟಗಾರ ಎಂಬ ಖ್ಯಾತಿಗೆ ಯದ್ವೀರ್​ ಸಿಂಗ್ (Yudhvir Singh) ಪಾತ್ರರಾಗಿದ್ದಾರೆ. ಎಲ್ಎಸ್​ಜಿ ಮತ್ತು ಕೆಕೆಆರ್ ನಡುವಿನ ಐಪಿಎಲ್ ಪಂದ್ಯದಲ್ಲಿ, ಲಕ್ನೊ ಪರ ಅವರು ಆಡಲು ಇಳಿದರು. ಲಕ್ನೊ ವೇಗಿ ಮೊಹ್ಸಿನ್ ಖಾನ್ ಥರ್ಡ್​ ಮ್ಯಾನ್​ ಪ್ರದೇಶದಲ್ಲಿ ಫೀಲ್ಡಿಂಗ್ ಮಾಡುವಾಗ ತಲೆಗೆ ಗಾಯವಾಗಿತ್ತು. ಚಿಕಿತ್ಸೆಗಾಗಿ ಮೈದಾನವನ್ನು ತೊರೆಯಬೇಕಾಯಿತು. ಹೀಗಾಗಿ ಯಧ್ವೀರ್ ಸಿಂಗ್​ ಆಡಲು ಬರಬೇಕಾಯಿತು.

ಮೊಹ್ಸಿನ್ ಖಾನ್ ತಲೆಗೆ ಪೆಟ್ಟು ಬಿದ್ದ ನಂತರ ನೆಲದ ಮೇಲೆ ಮಲಗಿ ಹೆಣಗಾಡುತ್ತಿರುವುದು ಕಂಡುಬಂತು. ನರೈನ್ ಬ್ಯಾಟಿಂಗ್ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೊಹ್ಸಿನ್​ ಖಾನ್ ಚೆಂಡನ್ನು ಹಿಡಿಯಲು ಓಡಿದ್ದರು. ಆದರೆ ದುರದೃಷ್ಟವಶಾತ್ ಅವರ ತಲೆ ಮೊದಲು ನೆಲಕ್ಕೆ ಅಪ್ಪಳಿಸಿತ್ತು. ಪರಿಣಾಮವಾಗಿ 16 ನೇ ಓವರ್ ಪ್ರಾರಂಭವಾಗುವ ಮೊದಲು ಮೊಹ್ಸಿನ್ ಖಾನ್ ಬದಲಿಗೆ ಯುಧ್ವೀರ್ ಸಿಂಗ್ ಅವರನ್ನು ಕನ್ಕಷನ್ ಬದಲಿಯಾಗಿ ಕಳುಹಿಸಲಾಯಿತು.

ಯುಧ್ವೀರ್ ಸಿಂಗ್ ಚರಕ್ ಐಪಿಎಲ್ 2024 ರ ಮೊದಲ ಕನ್ಕಷನ್ ಬದಲಿ ಆಟಗಾರರಾದರು. ಇದು ಮಾತ್ರವಲ್ಲ, ಅವರು ತಮ್ಮ ಮೊದಲ ಓವರ್​​ನಲ್ಲಿ ಕೆಕೆಆರ್​​ನ ಆಂಗ್ರಿಶ್ ರಘುವಂಶಿ ಅವರನ್ನು ತಮ್ಮ ಮೊದಲ ಓವರ್​ನಲ್ಲಿ ಔಟ್ ಮಾಡಿದರು.

ಐಪಿಎಲ್​​ನ ಕನ್ಕಷನ್ ಬದಲಿ ಇತಿಹಾಸವನ್ನು ಹಿಂತಿರುಗಿ ನೋಡಿದರೆ, ಯುಧ್ವೀರ್ ಎರಡನೇ ಆಟಗಾರರಾದರು. ಮುಂಬೈ ಇಂಡಿಯನ್ಸ್ ವಿಕೆಟ್ ಕೀಪರ್ ವಿಷ್ಣು ವಿನೋದ್ ಈ ಪಟ್ಟಿಯಲ್ಲಿ ಮೊದಲಿಗರು. ಐಪಿಎಲ್ 2023 ರ ಎರಡನೇ ಕ್ವಾಲಿಫೈಯರ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಇಶಾನ್ ಕಿಶನ್ ಬದಲಿಗೆ ವಿನೋದ್ ಆಡಿದ್ದರು.

ಕಂಕಷನ್ ಬದಲಿ ಆಟಗಾರರ ವಿವರ

ಇಶಾನ್ ಕಿಶನ್ ಮುಂಬೈ ಇಂಡಿಯನ್ಸ್ ವಿಷ್ಣು ವಿನೋದ್
ಮೊಹ್ಸಿನ್ ಖಾನ್ ಲಕ್ನೋ ಸೂಪರ್ ಜೈಂಟ್ಸ್: ಯುಧ್ವೀರ್ ಸಿಂಗ್

ಪಂದ್ಯದಲ್ಲಿ ಏನಾಯಿತು?

ಲಖನೌ: ಬ್ಯಾಟಿಂಗ್​ ಹಾಗೂ ಬೌಲಿಂಗ್​ನಲ್ಲಿ ಅಸಾಮಾನ್ಯ ಪ್ರದರ್ಶನ ನೀಡಿದ ಕೋಲ್ಕೊತಾ ನೈಟ್​ ರೈಡರ್ಸ್​ ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 54ನೇ ಪಂದ್ಯದಲ್ಲಿ ಲಕ್ನೊ ಸೂಪರ್​ ಜೈಂಟ್ಸ್​ ವಿರುದ್ಧ 98 ರನ್​ಗಳ ಬೃಹತ್​ ಅಂತರದ ಗೆಲುವು ಸಾಧಿಸಿದೆ. ಇದರೊಂದಿಗೆ ಆಡಿರುವ 11 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 16 ಅಂಕಗಳನ್ನು ಸಂಪಾದಿಸಿರುವ ಶ್ರೇಯಸ್​ ಅಯ್ಯರ್ ನೇತೃತ್ವದ ಕೋಲ್ಕೊತಾ ಬಳಗ ಪ್ಲೇಆಫ್​ ಹಂತಕ್ಕೆ ಬಹುತೇಕ ತೇರ್ಗಡೆ ಗೊಂಡಿದೆ. ಇದೇ ವೇಳೆ 11 ಪಂದ್ಯಗಳಲ್ಲಿ 5ನೇ ಸೋಲಿಗೆ ಒಳಗಾಗಿದ್ದು 12 ಅಂಕಗಳ ಸಮೇತ ಐದನೇ ಸ್ಥಾನದಲ್ಲಿ ಉಳಿದಿದೆ.

ಇದನ್ನೂ ಓದಿ: Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

ಇಲ್ಲಿನ ಶ್ರೀ ಭಾರತ ರತ್ನ ಅಟಲ್​ ಬಿಹಾರಿ ವಾಜಪೇಯಿ ಏಕನಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಅರ್​ ಬಳಗ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 235 ರನ್​ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಪ್ರತಿಯಾಗಿ ಆಡಿದ ತವರಿನ ತಂಡ 16.1 ಓವರ್​ಗಳಲ್ಲಿ 137 ರನ್​ಗಳಿಗೆ ಆಲ್​ಔಟ್​ ಆಗಿ ಹೀನಾಯ ಸೋಲಿಗೆ ಒಳಗಾಯಿತು.

Continue Reading

ಕ್ರೀಡೆ

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

IPL 2024: ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಅರ್​ ಬಳಗ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 235 ರನ್​ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಪ್ರತಿಯಾಗಿ ಆಡಿದ ತವರಿನ ತಂಡ 16.1 ಓವರ್​ಗಳಲ್ಲಿ 137 ರನ್​ಗಳಿಗೆ ಆಲ್​ಔಟ್​ ಆಗಿ ಹೀನಾಯ ಸೋಲಿಗೆ ಒಳಗಾಯಿತು.

VISTARANEWS.COM


on

IPL 2024
Koo

ಲಖನೌ: ಬ್ಯಾಟಿಂಗ್​ ಹಾಗೂ ಬೌಲಿಂಗ್​ನಲ್ಲಿ ಅಸಾಮಾನ್ಯ ಪ್ರದರ್ಶನ ನೀಡಿದ ಕೋಲ್ಕೊತಾ ನೈಟ್​ ರೈಡರ್ಸ್​ ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 54ನೇ ಪಂದ್ಯದಲ್ಲಿ ಲಕ್ನೊ ಸೂಪರ್​ ಜೈಂಟ್ಸ್​ ವಿರುದ್ಧ 98 ರನ್​ಗಳ ಬೃಹತ್​ ಅಂತರದ ಗೆಲುವು ಸಾಧಿಸಿದೆ. ಇದರೊಂದಿಗೆ ಆಡಿರುವ 11 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 16 ಅಂಕಗಳನ್ನು ಸಂಪಾದಿಸಿರುವ ಶ್ರೇಯಸ್​ ಅಯ್ಯರ್ ನೇತೃತ್ವದ ಕೋಲ್ಕೊತಾ ಬಳಗ ಪ್ಲೇಆಫ್​ ಹಂತಕ್ಕೆ ಬಹುತೇಕ ತೇರ್ಗಡೆ ಗೊಂಡಿದೆ. ಇದೇ ವೇಳೆ 11 ಪಂದ್ಯಗಳಲ್ಲಿ 5ನೇ ಸೋಲಿಗೆ ಒಳಗಾಗಿದ್ದು 12 ಅಂಕಗಳ ಸಮೇತ ಐದನೇ ಸ್ಥಾನದಲ್ಲಿ ಉಳಿದಿದೆ.

ಇಲ್ಲಿನ ಶ್ರೀ ಭಾರತ ರತ್ನ ಅಟಲ್​ ಬಿಹಾರಿ ವಾಜಪೇಯಿ ಏಕನಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಅರ್​ ಬಳಗ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 235 ರನ್​ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಪ್ರತಿಯಾಗಿ ಆಡಿದ ತವರಿನ ತಂಡ 16.1 ಓವರ್​ಗಳಲ್ಲಿ 137 ರನ್​ಗಳಿಗೆ ಆಲ್​ಔಟ್​ ಆಗಿ ಹೀನಾಯ ಸೋಲಿಗೆ ಒಳಗಾಯಿತು.

ಇದನ್ನೂ ಓದಿ: Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

ಬ್ಯಾಟಿಂಗ್​ಗೆ ಆಹ್ವಾನ ಪಡೆದ ಕೆಕೆಆರ್ ತಂಡ ಅದ್ಭುತ್ ಪ್ರದರ್ಶನ ನೀಡಿತು. ಸುನೀಲ್​ ನರೈನ್​ (39 ಎಸೆತ 81 ರನ್​) ಅವರ ಸ್ಫೋಟಕ ಬ್ಯಾಟಿಂಗ್ ಮೂಲಕ ಅತ್ಯುತ್ತಮ ಆರಂಭ ಪಡೆಯಿತು. ಫಿಲ್​ ಸಾಲ್ಟ್​ ಕೂಡ 14 ಎಸೆತಕ್ಕೆ 32 ರನ್ ಬಾರಿಸಿ ಮಿಂಚಿದರು. ಈ ಜೋಡಿ ಮೊದಲ ವಿಕೆಟ್​ಗೆ 61 ರನ್ ಬಾರಿಸಿತು. ನಂತರ ಅಂಗ್​ಕ್ರಿಶ್​ ರಘವಂಶಿ 32 ರನ್ ಬಾರಿಸಿದರೆ ರಸೆಲ್ 12 ರನ್​ಗೆ ಔಟಾದರು. ರಿಂಕು ಸಿಂಗ್ ವೈಫಲ್ಯ ಅನುಭವಿಸಿ 16 ರನ್​ಗೆ ಸೀಮಿತಗೊಂಡರೆ ಕೊನೆಯಲ್ಲಿ ಶ್ರೇಯಸ್ ಅಯ್ಯರ್​2 23 ರನ್​ ಹಾಗೂ ರಮಣ್​ದೀಪ್​ ಸಿಂಗ್ 6 ಎಸೆತಕ್ಕೆ 25 ರನ್ ಬಾರಿಸಿ ದೊಡ್ಡ ಮೊತ್ತ ಬಾರಿಸಲು ನೆರವಾದರು. ಲಕ್ನೊ ಪರ ನವೀನ್ ಉಲ್ ಹಕ್​ 3 ವಿಕೆಟ್ ಪಡೆದರು.

ಬ್ಯಾಟಿಂಗ್ ವೈಫಲ್ಯ

ಗುರಿ ಬೆನ್ನಟ್ಟಲು ಆರಂಭಿಸಿದ ಲಕ್ನೊ ತಂಡ ಕೆಕೆಆರ್​ ಬೌಲರ್​ಗಳ ನಿಖರ ಎಸೆತಗಳಿಗೆ ಹಾಗೂ ಫೀಲ್ಡಿಂಗ್​ಗೆ ಬಲಿಯಾದರು. ಅರ್ಶಿನ್​ ಕುಲ್ಕರ್ಣಿ 9 ರನ್​ಗೆ ಸೀಮಿತಗೊಂಡರೆ ರಾಹುಲ್​ 21 ರನ್​ ಬಾರಿಸಿದರು. ಮಾರ್ಕಸ್​ ಸ್ಟೊಯ್ನಿಸ್​ 36 ರನ್​ ಗೆ ಔಟಾದಾಗ ಲಕ್ನೊ ಆಸೆ ಕರಗಿತು. ದೀಪಕ್ ಹೂಡ 6 ರನ್​ಗೆ ಸೀಮಿತಗೊಂಡರೆ ಪೂರನ್​ 10 ರನ್, ಬದೋನಿ 15 ರನ್​ ಹಾಗೂ ಆಸ್ಟನ್​ ಟರ್ನರ್​ 16 ರನ್ ಕೊಡುಗೆ ಕೊಟ್ಟರು. ಆದರೆ, ದೊಡ್ಡ ಮೊತ್ತದ ಸನಿಹಕ್ಕೆ ಹೋಗಲೂ ಸಾಧ್ಯವಾಗಲಿಲ್ಲ.

ಕೆಕೆಆರ್ ಬೌಲಿಂಗ್​ನಲ್ಲಿ ಹರ್ಷಿತ್​ ರಾಣಾ ಹಾಗೂ ವರುಣ್ ಚಕ್ರವರ್ತಿ ತಲಾ 3 ವಿಕೆಟ್ ಪಡೆದರೆ ಆ್ಯಂಡ್ರೆ ರಸೆಲ್​ 2 ವಿಕೆಟ್​ ಉರುಳಿಸಿದರು.

Continue Reading

ಪ್ರಮುಖ ಸುದ್ದಿ

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

IPL 2024 : ಐಪಿಎಲ್ 2024 ರಲ್ಲಿ ಸನ್​ರೈಸರ್ಸ್​​ ಹೈದರಾಬಾದ್ 277 ಮತ್ತು 287 ರನ್ ಗಳಿಸಿದ್ದರೆ, ಈ ಋತುವಿನಲ್ಲಿ ಹಲವು ತಂಡಗಳು 250 ಸ್ಕೋರ್​ಗಳ ಗಾಡಿ ಮೀರಿಸಿದೆ. ಇಂಪ್ಯಾಕ್ಟ್ ಪ್ಲೇಯರ್ ನಿಯಮವು ತಂಡಗಳಿಗೆ 8 ಬ್ಯಾಟರ್​ಗಳನ್ನು ಆಡುವ ಸ್ವಾತಂತ್ರ್ಯವನ್ನು ನೀಡಿದೆ. ಇದು ದೊಡ್ಡ ಮೊತ್ತಕ್ಕೆ ಸಹಾಯ ಮಾಡುತ್ತದೆ ಎಂಬುದು ಅಶ್ವಿನ್ ವಾದವಾಗಿದೆ.

VISTARANEWS.COM


on

IPL 2024
Koo

ನವದೆಹಲಿ: ಆಧುನಿಕ ಕ್ರಿಕೆಟ್​​ನಲ್ಲಿ ಪವರ್ ಹಿಟ್ಟಿಂಗ್ ಬ್ಯಾಟಿಂಗ್​ ಪ್ರವೃತ್ತಿಯು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಗಳ ಗಾತ್ರದ ಪ್ರಾಮುಖ್ಯತೆಯನ್ನು ಕುಗ್ಗಿಸುತ್ತದೆ ಎಂದು ರಾಜಸ್ಥಾನ್ ರಾಯಲ್ಸ್ (Rajastan Royals) ಪರ ಆಡುವ ಅನುಭವಿ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಹೇಳಿದ್ದಾರೆ. ಇದು ಆಟವನ್ನು ಹೆಚ್ಚು ಏಕಪಕ್ಷೀಯವಾಗಿಸಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಹಾಲಿ ಐಪಿಎಲ್​ನಲ್ಲಿ (IPL 2024) ಬೃಹತ್​​ ಮೊತ್ತಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅವರು ಈ ಮಾತನ್ನು ಉಲ್ಲೇಖಿಸಿದ್ದಾರೆ.

ಐಪಿಎಲ್ 2024 ರಲ್ಲಿ ಸನ್​ರೈಸರ್ಸ್​​ ಹೈದರಾಬಾದ್ 277 ಮತ್ತು 287 ರನ್ ಗಳಿಸಿದ್ದರೆ, ಈ ಋತುವಿನಲ್ಲಿ ಹಲವು ತಂಡಗಳು 250 ಸ್ಕೋರ್​ಗಳ ಗಾಡಿ ಮೀರಿಸಿದೆ. ಇಂಪ್ಯಾಕ್ಟ್ ಪ್ಲೇಯರ್ ನಿಯಮವು ತಂಡಗಳಿಗೆ 8 ಬ್ಯಾಟರ್​ಗಳನ್ನು ಆಡುವ ಸ್ವಾತಂತ್ರ್ಯವನ್ನು ನೀಡಿದೆ. ಇದು ದೊಡ್ಡ ಮೊತ್ತಕ್ಕೆ ಸಹಾಯ ಮಾಡುತ್ತದೆ ಎಂಬುದು ಅಶ್ವಿನ್ ವಾದವಾಗಿದೆ.

ಹಿಂದಿನ ದಿನಗಳಲ್ಲಿ ನಿರ್ಮಿಸಲಾದ ಕ್ರೀಡಾಂಗಣಗಳು ಆಧುನಿಕ ದಿನಗಳಲ್ಲಿ ಪ್ರಸ್ತುತವಲ್ಲ. ಆಗ ಬಳಸಲಾಗುತ್ತಿದ್ದ ಬ್ಯಾಟ್ ಗಳನ್ನು ಈಗ ಉಪಯೋಗಿಸುತ್ತಿಲ್ಲ. ಪ್ರಾಯೋಜಕರ ಎಲ್ಇಡಿ ಬೋರ್ಡ್​​ಗಳನ್ನು ಬಳಸುವುದರಿಂದ, ಬೌಂಡರಿ ಲೈನ್​ 10 ಗಜಗಳಷ್ಟು ಗಾತ್ರ ಚಿಕ್ಕದಾಗಿದೆ. ಹೀಗಾಗಿ ಬೌಲರ್​ಗಳು ದಂಡಿಸಿಕೊಳ್ಳುತ್ತಿದ್ದಾರೆ. ಅವರಿಗೆ ಮಾನಸಿಕ ಉತ್ತೇಜನದ ಅಗತ್ಯವಿದೆ ಎಂದು ಆರ್​ಆರ್​ ಪ್ರಚಾರ ಕಾರ್ಯಕ್ರಮದಲ್ಲಿ ಅಶ್ವಿನ್ ಹೇಳಿದರು.

ಪ್ರತಿಭಾವಂತ ಬೌಲರ್ ತನ್ನನ್ನು ತಾನು ಸ್ಥಾಪಿಸಿಕೊಳ್ಳುತ್ತಾನೆ. ತನ್ನ ಆವಿಷ್ಕಾರಗಳೊಂದಿಗೆ ಮೈದಾನದ ಉಳಿದ ಭಾಗಗಳಿಂದ ತನ್ನನ್ನು ಪ್ರತ್ಯೇಕಿಸಿಕೊಳ್ಳುತ್ತಾನೆ ಎಂದು ಅಶ್ವಿನ್ ಹೇಳಿದ್ದಾರೆ. ಇದೇ ವೇಳೆ ಅವರು ಚೆಂಡನ್ನು ಹೊಡೆಯುವ ಬ್ಯಾಟರ್​ಗಳ ಸಾಮರ್ಥ್ಯದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್​​ ಬೌಲಿಂಗ್ ದಾಳಿಯು ಇತರ ಕೆಲವು ತಂಡಗಳಂತೆ ತೊಂದರೆ ಅನುಭವಿಸಿಲ್ಲ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

ಬೌಲರ್​ಗಳು ರನ್ ಬಿಟ್ಟುಕೊಟ್ಟಿರುವ ಸರಾಸರಿ ರನ್​ ನೋಡಿದರೆ ಅಚ್ಚರಿಯಾಗುತ್ತದೆ. ಅದರಲ್ಲಿ ನಾವು (ರಾಜಸ್ಥಾನ್​ ಬೌಲರ್​ಗಳು) ಕಡಿಮೆ ರನ್ ನೀಡಿದ್ದೇವೆ. ಜೈಪುರದಲ್ಲಿ ನಡೆದ ಒಂದು ಪಂದ್ಯದಲ್ಲಿ ನಾವು 180 ರನ್ ಗಳನ್ನೂ ರಕ್ಷಿಸಿದ್ದೇವೆ. ಆದಾಗ್ಯೂ ದಿನದ ಕೊನೆಯಲ್ಲಿ, ಪ್ರೇಕ್ಷಕರು ಬೌಂಡರಿ ಮತ್ತು ಸಿಕ್ಸರ್ ಗಳನ್ನು ವೀಕ್ಷಿಸಲು ಬರುತ್ತಾರೆ ಎಂಬುದು ಸತ್ಯ. ಆದರೆ, ಬೌಲರ್​ಗಳ ದಂಡನೆ ನಿರಂತರ ಎಂದು ನುಡಿದಿದ್ದಾರೆ.

ಜೈಪುರದ ಮೈದಾನದ ಬೌಂಡರಿ ಲೈನ್​ ದೊಡ್ಡದಾಗಿದೆ. ಧ್ರುವ್ ಜುರೆಲ್ “ಇದು ತುಂಬಾ ದೊಡ್ಡದಾಗಿದೆ” ಎಂದು ಹೇಳಿದ್ದರು. ಅದರೆ, ನಾನು ಅದಾದರೂ ಇರಲಿ ಎಂದು ಹೇಳಿದೆ. ಈ ಕ್ರೀಡಾಂಗಣ ಸುತ್ತಲು ಬೈಸಿಕಲ್ ಬೇಕಾಗುತ್ತದೆ ಎಂದು ತಿಳಿದುಕೊಂಡೆ. ಅದರೆ, ಕೆಲವು ಕ್ರೀಡಾಂಗಣಗಳು ಚಿಕ್ಕದಾಗಿವೆ. ಚೂಯಿಂಗ್ ಗಮ್ ಜೋರಾಗಿ ಉಗಿದರೆ ಅದು ಬೌಂಡಿ ಲೈನ್​ಗಿಂತ ಆಚೆ ಹೋಗಿ ಬೀಳುತ್ತದೆ ಎಂದು ಹೇಳಿದರು.

Continue Reading

Latest

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Champions Trophy: ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 5) ನಡೆದ ಸಾಮಾನ್ಯ ಮಂಡಳಿ ಸಭೆಯ ಸಿದ್ಧತೆಯಲ್ಲಿ ಪಿಸಿಬಿ ಆರು ಪಿಎಸ್ಎಲ್ ಫ್ರಾಂಚೈಸಿ ಮಾಲೀಕರೊಂದಿಗೆ ಸಭೆ ನಡೆಸಿದ ನಂತರ ಈ ಬೆಳವಣಿಗೆ ಬೆಳಕಿಗೆ ಬಂದಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಏಪ್ರಿಲ್ 7 ರಿಂದ ಮೇ 20 ರವರೆಗೆ ನಡೆಯಲಿದೆ.

VISTARANEWS.COM


on

Champions Trophy
Koo

ಬೆಂಗಳೂರು: ಪಾಕಿಸ್ತಾನ ಸೂಪರ್ ಲೀಗ್ (PSL) ನ 2025 ರ ಆವೃತ್ತಿಯನ್ನು ನಡೆಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಏಪ್ರಿಲ್ 7 ರಿಂದ ಮೇ 20 ರವರೆಗೆ ಸಮಯವನ್ನು ನಿಗದಿಪಡಿಸಿದೆ. ಇದರರ್ಥ ಮುಂದಿನ ವರ್ಷದ ಪಿಎಸ್ಎಲ್ ಇಂಡಿಯನ್ ಪ್ರೀಮಿಯರ್ ಲೀಗ್ 2025 (IPL 2025) ಋತುವಿನೊಂದಿಗೆ ಸಂಘರ್ಷ ಹೊಂದುತ್ತದೆ. ಫೆಬ್ರವರಿ-ಮಾರ್ಚ್​​ನಲ್ಲಿ ಪಾಕಿಸ್ತಾನ ಆತಿಥ್ಯ ವಹಿಸಲಿರುವ 2025 ರ ಚಾಂಪಿಯನ್ಸ್ ಟ್ರೋಫಿಯಿಂದಾಗಿ (Champions Trophy) ಪಿಎಸ್ಎಲ್ 2025 ಅನ್ನು ವಿಳಂಬಗೊಳಿಸುವ ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಬಿಸಿಸಿಐಗೆ ತೊಂದರೆ ನೀಡಲು ಪಾಕಿಸ್ತಾನ ಸಂಚು ರೂಪಿಸಿದೆ.

ಚಾಂಪಿಯನ್ಸ್​ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಇದು ಶತ್ರು ರಾಷ್ಟ್ರವನ್ನು ಕೆರಳಿಸಿದೆ. ಮತ್ತೊಂದು ಬಾರಿ ಆಗಲಿರುವ ಮುಜುಗರವನ್ನು ತಪ್ಪಿಸಿಕೊಳ್ಳುವುದಕ್ಕೆ ಭಾರತ ಮತ್ತು ಬಿಸಿಸಿಐಗೆ ಕಾಟ ಕೊಡಲು ಮುಂದಾಗಿದೆ. ಅರದಂತೆ ಫೆಬ್ರವರಿ ವೇಳೆಯಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಸಿ ಬಳಿಕ ಪಿಎಸ್​ಎಲ್​ ನಡೆಸಲು ಮುಂದಾಗಿದೆ. ಇದರಿಂದ ಭಾರತಕ್ಕೆ ಐಪಿಎಲ್​ ನಡೆಸಲು ತೊಂದರೆ ಆಗಲಿ ಮತ್ತು ವಿದೇಶಿ ಆಟಗಾರರ ಲಭ್ಯತೆ ಕಡಿಮೆಯಾಗಲಿ ಎಂದು ಯೋಜನೆ ರೂಪಿಸಿದೆ.

ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 5) ನಡೆದ ಸಾಮಾನ್ಯ ಮಂಡಳಿ ಸಭೆಯ ಸಿದ್ಧತೆಯಲ್ಲಿ ಪಿಸಿಬಿ ಆರು ಪಿಎಸ್ಎಲ್ ಫ್ರಾಂಚೈಸಿ ಮಾಲೀಕರೊಂದಿಗೆ ಸಭೆ ನಡೆಸಿದ ನಂತರ ಈ ಬೆಳವಣಿಗೆ ಬೆಳಕಿಗೆ ಬಂದಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಏಪ್ರಿಲ್ 7 ರಿಂದ ಮೇ 20 ರವರೆಗೆ ನಡೆಯಲಿದೆ. ಕರಾಚಿ, ಲಾಹೋರ್, ಮುಲ್ತಾನ್ ಮತ್ತು ರಾವಲ್ಪಿಂಡಿ ಪಾಕಿಸ್ತಾನದಲ್ಲಿ ಪಂದ್ಯಗಳನ್ನು ಆಯೋಜಿಸಲಿದ್ದು, ಎರಡೂ ತಂಡಗಳು ತವರು ನೆಲದಲ್ಲಿ ಕನಿಷ್ಠ ಐದು ಪಂದ್ಯಗಳನ್ನು ಆಡಲಿವೆ.

“ಪಿಸಿಬಿ ಹೆಚ್ಚುವರಿ ಸ್ಥಳಗಳನ್ನು ಅನ್ವೇಷಿಸುವುದನ್ನು ಮುಂದುವರಿಸುತ್ತದೆ. ನಾಲ್ಕು ಪ್ಲೇಆಫ್​ಗಳನ್ನು ತಟಸ್ಥ ಸ್ಥಳದಲ್ಲಿ ನಡೆಸಲು ಪ್ರಸ್ತಾಪಿಸಲಾಗಿದೆ, “ಎಂದು ಪಿಸಿಬಿ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: IPL 2024 : ಧೋನಿಯನ್ನು ಬೌಲ್ಡ್​ ಮಾಡಿ ಸಂಭ್ರಮಿಸದ ಹರ್ಷಲ್​ ಪಟೇಲ್​; ಕಾರಣ ನೀಡಿದ ಬೌಲರ್​

ವಿದೇಶಿ ಆಟಗಾರರಿಗೆ ಸಮಸ್ಯೆ

2025 ರಲ್ಲಿ ಐಪಿಎಲ್ ಮತ್ತು ಪಿಎಸ್ಎಲ್ ದಿನಾಂಕಗಳ ನಡುವಿನ ಸಂಭಾವ್ಯ ಘರ್ಷಣೆಯು ಅನೇಕ ವಿದೇಶಿ ಆಟಗಾರರನ್ನು ಇಕ್ಕಟ್ಟಿಗೆ ಸಿಲುಕಿಸುತ್ತದೆ. ಏಕೆಂದರೆ ಅವರು ಎರಡು ಲೀಗ್​ಗಳ ನಡುವೆ ಒಂದನ್ನು ಮಾತ್ರ ಆರಿಸಬೇಕಾಗುತ್ತದೆ.

“ಎಂದಿನಂತೆ, ಪಾಕಿಸ್ತಾನ ಸೂಪರ್ ಲೀಗ್ 2025 ಗಾಗಿ ನಾವು ಫ್ರಾಂಚೈಸಿ ಮಾಲೀಕರೊಂದಿಗೆ ಬಹಳ ರೋಮಾಂಚಕಾರಿ ಮತ್ತು ಆಸಕ್ತಿದಾಯಕ ಸಭೆಯನ್ನು ನಡೆಸಿದ್ದೇವೆ. ಫ್ರಾಂಚೈಸಿ ಮಾಲೀಕರು 2025 ರ ಈವೆಂಟ್ ಮತ್ತು ಅದರಾಚೆಗೆ ಪಿಸಿಬಿ ಶಿಫಾರಸು ಮಾಡಿದ ವಿಂಡೋ ಮತ್ತು ಪ್ಲೇಆಫ್ ಸ್ಥಳಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ.

“ಈ ಸಭೆಯಲ್ಲಿ ಪಿಎಸ್ಎಲ್ 2025 ಮತ್ತು ಅದಕ್ಕಿಂತ ಹೆಚ್ಚಿನ ಸೂಕ್ತ ವಿಂಡೋಗೆ ಸಂಬಂಧಿಸಿದಂತೆ ಪಿಸಿಬಿ ಫ್ರಾಂಚೈಸಿ ಮಾಲೀಕರೊಂದಿಗೆ ಹೆಚ್ಚಿನ ಡೇಟಾ ಹಂಚಿಕೊಳ್ಳಲಿದೆ. ಇದರಿಂದ ಅವರು ತಮ್ಮೊಳಗೆ ಚರ್ಚಿಸಬಹುದು, ಹೆಚ್ಚು ಮಾಹಿತಿಯುತ ನಿರ್ಧಾರ ತೆಗೆದುಕೊಳ್ಳಬಹುದು ಮತ್ತು ಸಾಮಾನ್ಯ ಮಂಡಳಿ ಸಭೆಯಲ್ಲಿ ತಮ್ಮ ಆಲೋಚನೆಗಳು ಮತ್ತು ಆಲೋಚನೆಗಳನ್ನು ಹಂಚಿಕೊಳ್ಳಲಾಗಿದೆ ಎಂದು ಎಂದು ಪಿಸಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಲ್ಮಾನ್ ನಸೀರ್ ಹೇಳಿದ್ದಾರೆ.

ಪಾಕಿಸ್ತಾನದ ಅತಿದೊಡ್ಡ ಬ್ರಾಂಡ್​​ ಒಂದರ ಭವಿಷ್ಯಕ್ಕಾಗಿ ಸಮಯೋಚಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಫ್ರಾಂಚೈಸಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾವು ಎದುರು ನೋಡುತ್ತಿದ್ದೇವೆ ಎಂದು ಪಿಸಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಲ್ಮಾನ್ ನಸೀರ್ ಹೇಳಿದ್ದಾರೆ.

Continue Reading
Advertisement
Ramanagara News
ಕರ್ನಾಟಕ39 mins ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Narendra Modi
ದೇಶ44 mins ago

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

IPL 2024
ಪ್ರಮುಖ ಸುದ್ದಿ51 mins ago

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

Prajwal Revanna Case
ಪ್ರಮುಖ ಸುದ್ದಿ60 mins ago

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

IPL 2024
ಕ್ರೀಡೆ1 hour ago

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

Narendra Modi
ದೇಶ1 hour ago

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Prajwal Revanna Case
ಕರ್ನಾಟಕ1 hour ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

IPL 2024
ಪ್ರಮುಖ ಸುದ್ದಿ2 hours ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ2 hours ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Champions Trophy
Latest2 hours ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ5 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ6 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ7 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ20 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌