GOOD NEWS: ತಾಳೆ ಎಣ್ಣೆ, ಸೂರ್ಯಕಾಂತಿ, ಸೋಯಾಬೀನ್‌ ತೈಲ ದರ ಲೀಟರ್‌ಗೆ 15 ರೂ. ತನಕ ಇಳಿಕೆ - Vistara News

ಪ್ರಮುಖ ಸುದ್ದಿ

GOOD NEWS: ತಾಳೆ ಎಣ್ಣೆ, ಸೂರ್ಯಕಾಂತಿ, ಸೋಯಾಬೀನ್‌ ತೈಲ ದರ ಲೀಟರ್‌ಗೆ 15 ರೂ. ತನಕ ಇಳಿಕೆ

ಅಡುಗೆ ಎಣ್ಣೆಯ ಬೆಲೆಗಳು ಇಳಿಕೆಯಾಗುತ್ತಿವೆ. ತಾಳೆ, ಸೂರ್ಯಕಾಂತಿ, ಸೋಯಾ ಎಣ್ಣೆಗಳ ದರದಲ್ಲಿ ಲೀಟರ್‌ಗೆ 15 ರೂ. ತನಕ ಇಳಿಕೆಯಾಗಿರುವುದು ಆಹಾರ ವಸ್ತುಗಳ ಬೆಲೆ ಇಳಿಸುವ ನಿಟ್ಟಿನಲ್ಲಿ ಸಹಕಾರಿ.

VISTARANEWS.COM


on

palm oil
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ತಾಳೆ ಎಣ್ಣೆ, ಸೂರ್ಯಕಾಂತಿ ಮತ್ತು ಸೋಯಾಬೀನ್‌ ತೈಲದ ದರದಲ್ಲಿ ಪ್ರತಿ ಲೀಟರ್‌ಗೆ 15 ರೂ. ತನಕ ಇಳಿಕೆಯಾಗಿದೆ.

ಅಂತಾರಾಷ್ಟ್ರೀಯ ದರದಲ್ಲಿ ಇಳಿಕೆಯಾಗಿರುವುದರಿಂದ ದೇಶೀಯ ಮಾರುಕಟ್ಟೆಯಲ್ಲಿ ಕೂಡ ತಗ್ಗಿದೆ. ಪಾಮ್‌ ಆಯಿಲ್‌ ಅಥವಾ ತಾಳೆ ಎಣ್ಣೆ ದರದಲ್ಲಿ ಲೀಟರ್‌ಗೆ 7-8 ರೂ. ಕಡಿತವಾಗಿದೆ. ಸೂರ್ಯಕಾಂತಿ ಎಣ್ಣೆ ದರದಲ್ಲಿ ಲೀಟರ್‌ಗೆ 10-15 ರೂ. ತಗ್ಗಿದೆ. ಸೋಯಾಬೀನ್‌ ತೈಲ ದರದಲ್ಲಿ ಲೀಟರ್‌ಗೆ 5 ರೂ. ಕಡಿತವಾಗಿದೆ.

ದರ ಇಳಿಕೆಯಾಗುತ್ತಿರುವುದರಿಂದ ವಿತರಕರು ಕೂಡ ದಾಸ್ತಾನು ಹೆಚ್ಚಿಸುವ ನಿರೀಕ್ಷೆ ಇದೆ. ಮಾರುಕಟ್ಟೆಯಲ್ಲಿ ಬೇಡಿಕೆ ಸುಧಾರಿಸುವ ಸಾಧ್ಯತೆ ಇದೆ. ಆಹಾರ ವಸ್ತುಗಳ ಬೆಲೆ ಇಳಿಸುವ ನಿಟ್ಟಿನಲ್ಲಿ ಈ ಖಾದ್ಯ ತೈಲಗಳ ದರ ಇಳಿಕೆ ನಿರ್ಣಾಯಕ. ಕಳೆದ ಒಂದು ವರ್ಷದಿಂದ ಅಡುಗೆ ಎಣ್ಣೆ ದರ ಸತತವಾಗಿ ಏರಿಕೆಯಾಗಿತ್ತು ಎಂದು ಇಂಡಿಯನ್‌ ವೆಜಿಟೇಬಲ್‌ ಆಯಿಲ್‌ ಪ್ರೊಡ್ಯೂಸರ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಸುಧಾರಕರ್‌ ರಾವ್‌ ತಿಳಿಸಿದ್ದಾರೆ.

ಹೈದರಾಬಾದ್‌ ಮೂಲದ ಜೆಮಿನಿ ಈಡೆಬಲ್ಸ್‌ ಆಂಡ್‌ ಫ್ಯಾಟ್ಸ್‌ ಕಂಪನಿಯು ತನ್ನ ಫ್ರೀಡಂ ಸನ್‌ಫ್ಲವರ್‌ ತೈಲ ದರದಲ್ಲಿ ಲೀಟರ್‌ಗೆ 15 ರೂ. ಕಡಿತಗೊಳಿಸಿದೆ. ಈಗ ದರ ಒಂದು ಲೀಟರ್‌ ಪ್ಯಾಕೇಟ್‌ನ ದರ 220 ರೂ. ಆಗಿದೆ. ಈ ವಾರ 200 ರೂ.ಗೆ ತಗ್ಗಿಸಲಿದೆ.

ಇಂಡೊನೇಷ್ಯಾ ತೈಲ ರಫ್ತಿನ ಮೇಲೆ ವಿಧಿಸಿದ್ದ ರಫ್ತು ನಿಷೇಧ ತೆರವುಗೊಳಿಸಿರುವುದರಿಂದ ಮುಂಬರುವ ದಿನಗಳಲ್ಲಿ ಆಮದು ಹೆಚ್ಚಳ ನಿರೀಕ್ಷಿಸಲಾಗಿದೆ. ಇಂಡೊನೇಷ್ಯಾದ ನಿಷೇಧ ಇದ್ದಾಗ ಆಮದು ಇಳಿದಿತ್ತು.

ಜಗತ್ತಿನಲ್ಲಿಯೇ ಭಾರತ ಅತಿ ಹೆಚ್ಚು ತಾಳೆ ಎಣ್ಣೆ ಆಮದು ಮಾಡುವ ದೇಶವಾಗಿದೆ. ಇಂಡೊನೇಷ್ಯಾ ಮತ್ತು ಮಲೇಷ್ಯಾವನ್ನು ಅವಲಂಬಿಸಿದೆ. ಭಾರತ ಪ್ರತಿ ವರ್ಷ ೧.೩೫ ಟನ್‌ ಖಾದ್ಯ ತೈಲವನ್ನು ಆಮದು ಮಾಡುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ. ಈ ಎಂಟು ಅದ್ಭುತ ಹಳ್ಳಿಗಳ ಪರಿಚಯ ಇಲ್ಲಿದೆ.

VISTARANEWS.COM


on

Summer Tour
Koo

ಪ್ರವಾಸಗಳನ್ನು ಇಷ್ಟಪಡುವ ಮಂದಿಯಲ್ಲಿ ಎರಡು ಬಗೆಯ ಮಂದಿಯಿರುತ್ತಾರೆ. ಒಂದು ಬಗೆಯವರಿಗೆ ಪ್ರವಾಸವನ್ನು ಎಂಜಾಯ್‌ ಮಾಡಿ, ತಮ್ಮ ಪ್ರೀತಿಪಾತ್ರರ ಜೊತೆಗೆ ಸಂತೋಷವಾಗಿ ಕಾಲ ಕಳೆದು, ಐಷಾರಾಮಿ ಹೊಟೇಲುಗಳಲ್ಲಿ ಇದ್ದು, ರಿಲ್ಯಾಕ್ಸ್‌ ಆಗಿ ಸಮಯ ಕಳೆದುಕೊಂಡು ಮಜಾ ಮಾಡಿಕೊಂಡು ಬರುವವರಾದರೆ, ಇನ್ನೊಂದು ವರ್ಗ, ಜನಜಂಗುಳಿಯಿಂದ ದೂರವಿದ್ದು, ಶಾಂತವಾದ ನದೀತೀರದಲ್ಲೋ, ಬೆಟ್ಟದ ತಪ್ಪಲಲ್ಲೋ, ಪರ್ವತದ ಮೇಲಿನ ಒಂದು ಹಳ್ಳಿಯಲ್ಲೋ, ಒಂದಿಷ್ಟು ಸಮಾನ ಮನಸ್ಕರೊಂದಿಗೆ ಚಾರಣ ಮಾಡಿಯೋ ಸಮಯ ಕಳೆಯಲು ಇಷ್ಟ ಪಡುವ ಮಂದಿ. ಈ ಎರಡನೇ ವರ್ಗದ ಪ್ರವಾಸ ಪ್ರಿಯರಿಗೆ ಶಾಂತವಾಗಿ ಸಮಯ ಕಳೆಯಲು ಭಾರತದಲ್ಲಿ ಬೇಕಾದಷ್ಟು ಸ್ಥಳಗಳಿವೆ. ಹಿಮಾಲಯದ ತಪ್ಪಲಿನ ಹಳ್ಳಿಗಳು ತಮ್ಮ ಪ್ರಕೃತಿ ಸೌಂದರ್ಯದಿಂದಲೂ, ಶಾಂತವಾದ ವಾತಾವರಣದಿಂದಲೂ ಇಂತಹ ಪ್ರವಾಸಿಗರನ್ನು ತಮ್ಮತ್ತ ಕೈಬೀಸಿ ಕರೆಯುತ್ತವೆ. ಬನ್ನಿ, ಯಾವೆಲ್ಲ ಮುದ್ದಾದ ಹಳ್ಳಿಗಳಿಗೆ ನೀವು ಈ ಬೇಸಿಗೆಯ ಬಿರುಬಿಸಿಲಿನಲ್ಲೂ ಪ್ರವಾಸ ಮಾಡಿ ತಂಪಾಗಿ, ಹಿತವಾಗಿ ಸಮಯ ಕಳೆಯಬಹುದು (Summer Tour) ಎಂಬುದನ್ನು ನೋಡೋಣ.

Sikkim

ಝುಲುಕ್, ಸಿಕ್ಕಿಂ

ಪೂರ್ವ ಸಿಕ್ಕಿಂನ ಝುಲುಕ್‌ ಎಂಬ ಹಳ್ಳಿ ಭಾರತದ ಅತ್ಯಂತ ಪುರಾತನವಾದ ಸಿಲ್ಕ್‌ ರೂಟ್‌ ಹಾದಿಯಲ್ಲಿ ಸಿಗುವ ಹಳ್ಳಿಗಳಲ್ಲಿ ಒಂದು. ಮೇ ತಿಂಗಳಲ್ಲಿ ಆಗಸವೂ ತಿಳಿಯಾಗಿದ್ದು, ಹಿತವಾದ ಚಳಿಯೂ ಆವರಿಸಿರುವ, ಪ್ರವಾಸಕ್ಕೆ ಅತ್ಯಂತ ಯೋಗ್ಯವಾದ ಸಮಯ. ಸಾಲು ಸಾಲು ಹಿಮಬೆಟ್ಟಗಳಿಂದ ಆವೃತವಾದ ಹಿಮಾಲಯದ ಮನಮೋಹಕ ದೃಶ್ಯಗಳನ್ನು ಈ ಹಳ್ಳಿಯಲ್ಲಿದ್ದುಕೊಂಡು ಆಸ್ವಾದಿಸುತ್ತಾ ಸಮಯ ಕಳೆಯಬಹುದು.

Chitkool, Himachal Pradesh

ಚಿತ್ಕೂಲ್‌, ಹಿಮಾಚಲ ಪ್ರದೇಶ

ಭಾರತ ಚೀನಾ ಗಡಿಯಲ್ಲಿರುವ ಜನರ ವಸತಿಯಿರುವ ಕೊನೆಯ ಹಳ್ಳಿ ಚಿತ್ಕೂಲ್‌. ಕಿನೌರ್‌ ಜಿಲ್ಲೆಯ ಅತ್ಯಂತ ಸುಂದರವಾದ ಹಿಮಾಲಯದ ದೃಶ್ಯಗಳನ್ನು ಕಣ್ತುಂಬಿಕೊಳ್ಳಬಹುದಾದ ಜಾಗವಿದು. ಹಿಮಾಚಲ ಪ್ರದೇಶದ ಸಾಂಪ್ರದಾಯಿಕ ಆಚರಣೆಗಳು, ಅಲ್ಲಿನ ಜನಜೀವನ, ಆಹಾರ ಇತ್ಯಾದಿಗಳೆಲ್ಲವುಗಳ ಪರಿಚಯ ಮಾಡಿಕೊಂಡು, ಅದ್ಭುತ ದೃಶ್ಯಗಳನ್ನೂ ಕಂಡು ಆನಂದಿಸಬಹುದು.

Naggar, Himachal Pradesh

ನಗ್ಗರ್‌, ಹಿಮಾಚಲ ಪ್ರದೇಶ

ಹಳೆಯ ದೇವಸ್ಥಾನಗಳು, ಅರಮನೆಗಳು, ಕಟ್ಟಡಗಳು ಇತ್ಯಾದಿಗಳಿರುವ ನಗ್ಗರ್‌ ಎಂಬ ಹಳ್ಳಿ ಮನಾಲಿಯಂತಹ ಕಿಕ್ಕಿರಿದು ತುಂಬಿರುವ ಪ್ರವಾಸಿಗಳಿಂದ ಮುಕ್ತವಾಗಿದೆ. ಜೊತೆಗೆ ಇಲ್ಲಿಂದ ಕಾಣುವ ಹಿಮಾಲಯದ ಪರ್ವತಶ್ರೇಣಿಗಳ ಸುಂದರ ದೃಶ್ಯ ನೆಮ್ಮದಿಯನ್ನು ಅರಸಿ ಬರುವ ಮಂದಿಗೆ ಹೇಳಿ ಮಾಡಿಸಿದ್ದು.

Pelling, Sikkim

ಪೆಲ್ಲಿಂಗ್‌, ಸಿಕ್ಕಿಂ

ಕಾಂಚನಜುಂಗಾದ ಅದ್ಭುತ ದೃಶ್ಯಗಳನ್ನು ಕಣ್ತುಂಬಿಕೊಳ್ಳಲು ಪೆಲ್ಲಿಂಗ್‌ ಎಂಬ ಸಿಕ್ಕಿಂನ ಪುಟ್ಟ ಊರು ಒಳ್ಳೆಯ ತಾಣ. ಶಾಂತಿಯುತವಾದ ಜಾಗವನ್ನರಸಿ ಬರುವ ಮಂದಿಗೆ ಪೆಲ್ಲಿಂಗ್‌ ಬಹಳ ಇಷ್ಟವಾಗಬಹುದು.

Malana, Himachal Pradesh

ಮಲಾನಾ, ಹಿಮಾಚಲ ಪ್ರದೇಶ

ಮಲಾನಾ ಎಂಬ ಪುಟ್ಟ ಹಳ್ಳಿ ಹಿಮಾಚಲ ಪ್ರದೇಶದ ಕಸೋಲ್‌ ಸಮೀಪದಲ್ಲಿರುವ ಹಳ್ಳಿ. ಇದು ತನ್ನ ವಿಶಿಷ್ಟ ಸಂಸೃತಿ ಹಾಗೂ ಆಚರಣೆಯ ವಿಶೇಷತೆಗಳನ್ನು ಹೊಂದಿರುವ ಸುಂದರ ತಾಣ. ಪಾರ್ವತಿ ಕಣಿವೆಯ ಮನಮೋಹಕ ಹಿಮಾಲಯದ ಸೌಂದರ್ಯವನ್ನು ಇದು ತನ್ನಲ್ಲಿ ಬಚ್ಚಿಟ್ಟುಕೊಂಡಿದೆ.

Zero, Arunachal Pradesh

ಝೀರೋ, ಅರುಣಾಚಲ ಪ್ರದೇಶ

ಅತ್ಯದ್ಭುತ ಪ್ರಕೃತಿ ಸೌಂದರ್ಯ, ಭತ್ತದ ಗದ್ದೆಗಳು, ಹಳೆಯ ಮರದ ಮನೆಗಳು ಇತ್ಯಾದಿಗಳಿಂದ ಮನಮೋಹಕವಾಗಿ ಕಾಣುವ ಝೀರೋ ಎಂಬ ಅರುಣಾಚಲ ಪ್ರದೇಶದ ಹಳ್ಳಿ ಪರಿಸರ ಪ್ರಿಯರು ಖಂಡಿತ ಇಷ್ಟಪಡಬಹುದಾದ ಹಾಗಿದೆ.

Mawlynnong, Meghalaya

ಮಾವ್ಲಿನಾಂಗ್‌, ಮೇಘಾಲಯ

ಪೂರ್ವ ಖಾಸಿ ಬೆಟ್ಟ ಪ್ರದೇಶಗಳಲ್ಲಿರುವ ಮೇಘಾಲಯದ ಈ ಪುಟ್ಟ ಹಳ್ಳಿಯ ಅಪರೂಪದ ಸಂಸ್ಕೃತಿ, ಶಿಸ್ತುಬದ್ಧ ಜೀವನ, ಸ್ವಚ್ಛತೆ ಎಲ್ಲವನ್ನೂ ನೋಡಲೇಬೇಕು. ನಗರದ ಮಂದಿ ಖಂಡಿತವಾಗಿಯೂ ಈ ಹಳ್ಳಿಯ ಜನರಿಂದ ಕಲಿಯಬೇಕಾದ್ದು ಬಹಳಷ್ಟಿದೆ. ಬೇರಿನಿಂದ ಮಾಡಲ್ಪಟ್ಟ ಸೇತುವೆಗಳು ಇಲ್ಲಿನ ವಿಶೇಷತೆ.

ಇದನ್ನೂ ಓದಿ: Summer Travel Fashion Tips: ಬೇಸಿಗೆ ಪ್ರವಾಸದ ವೇಳೆ ಯುವತಿಯರು ಗಮನಿಸಲೇಬೇಕಾದ 5 ಸಂಗತಿಗಳು

Continue Reading

ಪ್ರಮುಖ ಸುದ್ದಿ

Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

VISTARANEWS.COM


on

Lok Sabha Election
Koo

ನವದೆಹಲಿ: ಹಿಂದಿನ ಕಾಂಗ್ರೆಸ್​ ಸರ್ಕಾರಗಳು ಪಾಕಿಸ್ತಾನದ ಭಯೋತ್ಪಾದನೆಯನ್ನು ನಿಗ್ರಹಿಸಲು ಯಾವುದೇ ಪ್ರಯತ್ನ ಮಾಡುತ್ತಿರಲಿಲ್ಲ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಹಿಂದಿನ ಸರ್ಕಾರಗಳು ಶಾಂತಿಯ ಭರವಸೆಯೊಂದಿಗೆ ಪಾಕಿಸ್ತಾನಕ್ಕೆ “ಪ್ರೇಮ ಪತ್ರಗಳನ್ನು” ಕಳುಹಿಸುತ್ತಿದ್ದವು. ಪ್ರತಿಯಾಗಿ ಅವರು ಹೆಚ್ಚಿನ ಭಯೋತ್ಪಾದಕರನ್ನು ಕಳುಹಿಸುತ್ತಿದ್ದರು ಎಂದು ಅವರು ಲೇವಡಿ ಮಾಡಿದರು. ಮುಂದುವರಿದ ಮೋದಿ. ಈ ಚುನಾವಣೆಯಲ್ಲಿ (Lok Sabha Election ) ರಾಹುಲ್ ಪ್ರಧಾನಿಯಾಗಬೇಕು ಎಂದು ಪಾಕಿಸ್ತಾನ ಬಯಸುತ್ತಿದೆ. ಆದರೆ, ಬಲಿಷ್ಠ ಭಾರತ ಬಲವಾದ ಸರ್ಕಾರ ಬಯಸಿದೆ ಎಂದು ನುಡಿದಿದ್ದಾರೆ.

ಜಾರ್ಖಂಡ್​​ನ ಪಲಮುದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಹಿಂದಿನ ಸರ್ಕಾರಗಳ ಅವಧಿಯಲ್ಲಿ ಭಯೋತ್ಪಾದಕರು ನಮ್ಮ ದೇಶದ ಮುಗ್ಧರನ್ನು ಮುಕ್ತವಾಗಿ ಕೊಲ್ಲುತ್ತಿದ್ದರು. ಪ್ರತಿಯಾಗಿ ಇಲ್ಲಿನ ಸರ್ಕಾರವು ಪಾಕಿಸ್ತಾನಕ್ಕೆ ಪ್ರೇಮ ಪತ್ರಗಳನ್ನು ಬರೆಯುತ್ತಿತ್ತು. ಆದರೆ ಪಾಕಿಸ್ತಾನವು ಪತ್ರಗಳಿಗೆ ಪ್ರತಿಕ್ರಿಯೆಯಾಗಿ ಇನ್ನಷ್ಟು ಭಯೋತ್ಪಾದಕರನ್ನು ಕಳುಹಿಸುತ್ತಿತ್ತು. ಆದರೆ ನಾವು ನಿಮ್ಮ ಒಂದು ಮತದ ಶಕ್ತಿಯಿಂದ ಬದಲಾವಣೆ ತರುತ್ತೇವೆ ಎಂದು ಭರವಸೆ ನೀಡಿದ್ದೆವು. ಅಂತೆಯೇ ನವಭಾರತ ಪಾಕ್​ಗೆ ನುಗ್ಗಿ ಹೊಡೆಯುತ್ತಿದೆ ಎಂದು ಹೇಳಿದರು.

ನಮ್ಮ ರಾಷ್ಟ್ರವನ್ನು ರಕ್ಷಿಸಲು ಹೋಗುತ್ತಿದ್ದ ಜಾರ್ಖಂಡ್ ಮತ್ತು ಬಿಹಾರದ ಜನರು ಗಡಿಯಲ್ಲಿ ಸಾಯುತ್ತಿದ್ದ ಸಮಯವಿತ್ತು. ಅದೊಂದು ನಾಚಿಕೆಯ ವಿಷಯವಾಗಿತ್ತು. ಕಾಂಗ್ರೆಸ್​ನ ಹೇಡಿ ಸರ್ಕಾರಗಳು ಜಗತ್ತಿನ ಮುಂದೆ ಇದರ ಬಗ್ಗೆ ಅಳುತ್ತಿದ್ದವು” ಎಂದು ಪ್ರಧಾನಿ ಲೇವಡಿ ಮಾಡಿದರು.

ಸರ್ಜಿಕಲ್ ಮತ್ತು ಬಾಲಕೋಟ್ ದಾಳಿಗಳು ಪಾಕಿಸ್ತಾನವನ್ನು ಬೆಚ್ಚಿಬೀಳಿಸಿದೆ. ಈಗ ವಿಶ್ವಾದ್ಯಂತ ಸಹಾಯವನ್ನು ಕೋರುತ್ತಿದೆ ಮತ್ತು “ಬಚಾವೋ, ಬಚಾವೋ (ಕಾಪಾಡಿ ಕಾಪಾಡಿ )” ಎಂದು ಕೂಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

ಪಾಕಿಸ್ತಾನದ ನಾಯಕರು ಕಾಂಗ್ರೆಸ್​​ನ ಶೆಹಜಾದಾ (ರಾಹುಲ್ ಗಾಂಧಿ) ಪ್ರಧಾನಿಯಾಗಬೇಕೆಂದು ಪ್ರಾರ್ಥಿಸುತ್ತಿದ್ದಾರೆ. ಆದರೆ ಬಲಿಷ್ಠ ಭಾರತವು ಈಗ ಬಲವಾದ ಸರ್ಕಾರವನ್ನು ಬಯಸುತ್ತದೆ” ಎಂದು ಅವರು ಹೇಳಿದರು.

ಮೋದಿ ಜತೆಗಾರರಿಗೆ ಅವರ ಬಗ್ಗೆಯೇ ಭಯವಿದೆ: ಪ್ರಿಯಾಂಕಾ ಗಾಂಧಿ

ಇದಕ್ಕೂ ಮುನ್ನ ಶನಿವಾರ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಧಾನಿ ಮೋದಿಯವರನ್ನು “ಅರಮನೆಯಲ್ಲಿ ವಾಸಿಸುವ ಚಕ್ರವರ್ತಿ” ಎಂದು ಕರೆದಿದ್ದಾರೆ. “ಪ್ರಧಾನಿ ಮೋದಿ ನನ್ನ ಸಹೋದರನನ್ನು (ರಾಹುಲ್​) ರಾಜಕುಮಾರ ಎಂದು ಕರೆಯುತ್ತಾರೆ. ನನ್ನ ಸಹೋದರ 4,000 ಕಿಲೋಮೀಟರ್ ನಡೆದು, ದೇಶದ ಜನರನ್ನು ಭೇಟಿಯಾಗಿದ್ದಾರೆ. ಅವರ ಸಮಸ್ಯೆಗಳೇನು ಎಂದು ಆಲಿಸಿದ್ದಾರೆ ಎಂದು ನಾನು ನಿಮಗೆ ಹೇಳಲು ಬಯಸುತ್ತೇನೆ. ಮತ್ತೊಂದೆಡೆ, ಚಕ್ರವರ್ತಿ ನರೇಂದ್ರ ಮೋದಿ ಅರಮನೆಗಳಲ್ಲಿ ಬೀಡು ಬಿಡುತ್ತಾರೆ. ರೈತರು ಮತ್ತು ಮಹಿಳೆಯರ ಅಸಹಾಯಕತೆಯನ್ನು ಅವರು ಹೇಗೆ ಅರ್ಥಮಾಡಿಕೊಳ್ಳಲು ಸಾಧ್ಯವಾಗುತ್ತದೆ?” ಎಂದು ಅವರು ಗುಜರಾತ್​ನ ಬನಸ್ಕಥಾದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಹೇಳಿದರು

“ನರೇಂದ್ರ ಮೋದಿ ಅಧಿಕಾರದಿಂದ ಮೆರೆಯುತ್ತಿದ್ದಾರೆ. ಅವನ ಸುತ್ತಲಿನ ಜನರು ಅವರಿಗೆ ಹೆದರುತ್ತಾರೆ. ಯಾರೂ ಅವನಿಗೆ ಏನನ್ನೂ ಹೇಳುವುದಿಲ್ಲ. ಯಾರಾದರೂ ಧ್ವನಿ ಎತ್ತಿದರೆ ಆ ಧ್ವನಿಯನ್ನೇ ನಿಗ್ರಹಿಸಲಾಗುತ್ತದೆ ಎಂದು ಅವರು ಹೇಳಿದರು.

Continue Reading

ಕರ್ನಾಟಕ

Prajwal Revanna Case: ಪ್ರಜ್ವಲ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್;‌ ರೇವಣ್ಣ ಪಿಎ ಮನೆಯಲ್ಲಿ ಸಂತ್ರಸ್ತೆಯ ರಕ್ಷಣೆ!

Prajwal Revanna Case: ಎಚ್‌.ಡಿ.ರೇವಣ್ಣ ಅವರ ಜಾಮೀನು ಅರ್ಜಿಯ ಕುರಿತು ಕೋರ್ಟ್‌ ತೀರ್ಪು ಕಾಯ್ದಿರಿಸಿರುವ ಮಧ್ಯೆಯೇ ಸಂತ್ರಸ್ತೆಯನ್ನು ರಕ್ಷಣೆ ಮಾಡಿರುವುದು ಪ್ರಕರಣದಲ್ಲಿ ಸಿಕ್ಕ ಮಹತ್ವದ ಮುನ್ನಡೆ ಎಂದೇ ಹೇಳಲಾಗುತ್ತಿದೆ. ಸಂತ್ರಸ್ತೆಯು ದೂರು ದಾಖಲಿಸಿದರೆ ಪ್ರಕರಣವು ಇನ್ನಷ್ಟು ಗಂಭೀರ ಸ್ವರೂಪ ಪಡೆಯಲಿದೆ. ಮಹಿಳೆ ದೂರು ದಾಖಲಿಸಬಾರದು ಎಂಬ ಕಾರಣಕ್ಕಾಗಿಯೇ ಅವರನ್ನು ಅಪಹರಣ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

VISTARANEWS.COM


on

Prajwal Revanna Case
Koo

ಮೈಸೂರು: ಕರ್ನಾಟಕ ಸೇರಿ ದೇಶಾದ್ಯಂತ ಸುದ್ದಿಯಾಗಿರುವ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ (Prajwal Revanna Case) ಪ್ರಕರಣದಲ್ಲಿ ಪೊಲೀಸರಿಗೆ ಮಹತ್ವದ ಮುನ್ನಡೆ ಸಿಕ್ಕಿದೆ. ಪ್ರಕರಣದಲ್ಲಿ ಅಪಹರಣಕ್ಕೀಡಾಗಿದ್ದ ಸಂತ್ರಸ್ತೆಯನ್ನು ಎಸ್‌ಐಟಿ ಅಧಿಕಾರಿಗಳು ಮೈಸೂರಿನಲ್ಲಿ ರಕ್ಷಣೆ ಮಾಡಿದ್ದಾರೆ. ಎಚ್‌.ಡಿ.ರೇವಣ್ಣ (HD Revanna) ಆಪ್ತ ಸಹಾಯಕ ರಾಜಶೇಖರ್‌ ತೋಟದ ಮನೆಯಲ್ಲಿದ್ದ ಸಂತ್ರಸ್ತೆಯನ್ನು ಅಧಿಕಾರಿಗಲು ರಕ್ಷಣೆ ಮಾಡಿದ್ದಾರೆ. ಇದು ಈಗ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಂತಾಗಿದೆ.

ಏಪ್ರಿಲ್‌ 29ರಂದು ಕೆ.ಆರ್.ನಗರದ ಮನೆಯಿಂದ ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ಎಚ್‌.ಡಿ.ರೇವಣ್ಣ ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆಯ ಪುತ್ರ ದೂರು ದಾಖಲಿಸಿದ್ದ. ಈಗ ಅಧಿಕಾರಿಗಳು ಹುಣಸೂರು ತಾಲೂಕಿನ ಕಾಳೇನಹಳ್ಳಿಯಲ್ಲಿ ಸಂತ್ರಸ್ತೆಯನ್ನು ರಕ್ಷಣೆ ಮಾಡಿದ್ದಾರೆ. ಮಹಿಳೆಯನ್ನು ರಾಜಶೇಖರ್‌ ಕೂಡಿ ಹಾಕಿದ್ದ ಎಂದು ತಿಳಿದುಬಂದಿದೆ.

Prajwal Revanna Case Revanna withdraws anticipatory bail plea

ಏಪ್ರಿಲ್‌ 29ರಿಂದಲೂ ಆಗಿಂದಲೂ ಹುಣಸೂರು ತಾಲೂಕಿನ ಕಾಳೇನಳ್ಳಿಯ ರೇವಣ್ಣ ಆಪ್ತ ಸಹಾಯಕ ರಾಜಶೇಖರ್ ತೋಟದಲ್ಲಿ ಇರಿಸಲಾಗಿತ್ತು. ರೇವಣ್ಣ ಸಂಬಂಧಿ ಸತೀಶ್ ಬಾಬು ಎಂಬಾತ ಮಹಿಳೆಯನ್ನು ಕರೆದೊಯ್ದಿದ್ದ. ಸಂತ್ರಸ್ತೆಯ ಪತ್ತೆಯೊಂದಿಗೆ ಪೊಲೀಸರು ನಿಟ್ಟುಸಿರು ಬಿಟ್ಟಿದ್ದು, ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಿದ್ದಾರೆ. ಇದಾದ ಬಳಿಕ ಮಹಿಳೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ, ಮಹಿಳೆಯನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಅವರು ವಿದೇಶಕ್ಕೆ ಹಾರಿದ್ದಾರೆ. ಇದರ ಬೆನ್ನಲ್ಲೇ, ಪ್ರಜ್ವಲ್‌ ರೇವಣ್ಣನಿಂದ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯನ್ನು ಅವರ ಮನೆಯಿಂದಲೇ ಅಪಹರಣ ಮಾಡಲಾಗಿತ್ತು. ಸಿನಿಮೀಯ ರೀತಿಯಲ್ಲಿ ಅಪಹರಣ ಮಾಡಲಾಗಿತ್ತು. ಇದೇ ಪ್ರಕರಣದಲ್ಲಿ ಎಚ್.ಡಿ.ರೇವಣ್ಣ ಅವರಿಗೆ ಎಸ್‌ಐಟಿ ನೋಟಿಸ್‌ ನೀಡಿದ್ದು, ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಅವರು ಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಎಚ್‌.ಡಿ.ರೇವಣ್ಣ ಅವರ ಜಾಮೀನು ಅರ್ಜಿಯ ಕುರಿತು ಕೋರ್ಟ್‌ ತೀರ್ಪು ಕಾಯ್ದಿರಿಸಿರುವ ಮಧ್ಯೆಯೇ ಸಂತ್ರಸ್ತೆಯನ್ನು ರಕ್ಷಣೆ ಮಾಡಿರುವುದು ಪ್ರಕರಣದಲ್ಲಿ ಸಿಕ್ಕ ಮಹತ್ವದ ಮುನ್ನಡೆ ಎಂದೇ ಹೇಳಲಾಗುತ್ತಿದೆ. ಸಂತ್ರಸ್ತೆಯು ದೂರು ದಾಖಲಿಸಿದರೆ ಪ್ರಕರಣವು ಇನ್ನಷ್ಟು ಗಂಭೀರ ಸ್ವರೂಪ ಪಡೆಯಲಿದೆ. ಮಹಿಳೆ ದೂರು ದಾಖಲಿಸಬಾರದು ಎಂಬ ಕಾರಣಕ್ಕಾಗಿಯೇ ಅವರನ್ನು ಅಪಹರಣ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ: Prajwal Revanna Case: ಜರ್ಮನಿ ಆಯ್ತು, ದುಬೈ ಬಿಟ್ಟಾಯ್ತು; ಮತ್ತೊಂದು ದೇಶಕ್ಕೆ ಹಾರಿದ ಪ್ರಜ್ವಲ್‌ ರೇವಣ್ಣ!

Continue Reading

ಕ್ರಿಕೆಟ್

IPL 2024 : ಹಾರ್ದಿಕ್​ ಪಾಂಡ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಇರ್ಫಾನ್ ಪಠಾಣ್​​

IPL 2024: ವಾಂಖೆಡೆಯಲ್ಲಿ 12 ವರ್ಷಗಳ ನಂತರ ಕೋಲ್ಕತಾ ನೈಟ್ ರೈಡರ್ಸ್ ಆತಿಥೇಯ ತಂಡದ ವಿರುದ್ಧ 24 ರನ್​ಗಳ ಭರ್ಜರಿ ಗೆಲುವು ದಾಖಲಿಸಿದ ನಂತರ, ಇರ್ಫಾನ್ ಪಠಾಣ್ ಹಾರ್ದಿಕ್ ಪಾಂಡ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಾಂಡ್ಯ ಅವರನ್ನು ಟೀಕಿಸುವ ವೀಡಿಯೊ ವೈರಲ್ ಆಗುವ ಮೊದಲು, ಭಾರತದ ಮಾಜಿ ಆಲ್ರೌಂಡರ್​ ಎಕ್ಸ್​ನಲ್ಲಿ ಸರಣಿ ಟ್ವೀಟ್​ಗಳನ್ನು ಮಾಡಿದ್ದರು.

VISTARANEWS.COM


on

Hardik Pandya
Koo

ನವದೆಹಲಿ: ಐಪಿಎಲ್​ ಪಂದ್ಯದಲ್ಲಿ (IPL 2024) ಕೆಕೆಆರ್ ವಿರುದ್ಧ 24 ರನ್​ಗಳ ಸೋಲಿನ ಹಿನ್ನೆಲೆಯಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಅವರ ಕಳಪೆ ನಾಯಕತ್ವಕ್ಕಾಗಿ ಭಾರತದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದಾರೆ. ಕೋಲ್ಕತಾ ನೈಟ್ ರೈಡರ್ಸ್ 12 ವರ್ಷಗಳ ನಂತರ ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ತವರಿನಲ್ಲಿ ಮೊದಲ ಗೆಲುವನ್ನು ಪಡೆಯಲು ಹೆಚ್ಚು ದೃಢನಿಶ್ಚಯದಿಂದ ಆಡಿದ ತಂಡದಂತೆ ಕಾಣುತ್ತಿತ್ತು. ಮೊದಲ ಇನ್ನಿಂಗ್ಸ್​ನಲ್ಲಿ ಉತ್ತಮ ಆರಂಭ ಪಡೆದ ನಂತರ ಲಾಭ ಪಡೆಯಲು ಸಾಧ್ಯವಾಗದ ಕಾರಣ ಮುಂಬೈ ಸೋಲಿಗೆ ಹೆಚ್ಚಿನ ದೂಷಣೆ ಹಾರ್ದಿಕ್ ಪಾಂಡ್ಯ ಅವರತ್ತ ತಿರುಗಿದೆ.

ವಾಂಖೆಡೆಯಲ್ಲಿ ಕೆಕೆಆರ್ ಮೊದಲು ಬ್ಯಾಟಿಂಗ್ ಮಾಡಿದಾಗ, ಹಾರ್ದಿಕ್ ಪಾಂಡ್ಯ ಮತ್ತು ಇತರ ಎಂಐ ಬೌಲರ್​ಗಳು ಪವರ್​​ಪ್ಲೇನಲ್ಲಿ ಕೆಕೆಆರ್ ತಂಡ ರನ್ ಹರಿವನ್ನು ನಿಯಂತ್ರಿಸಲು ಅದ್ಭುತವಾಗಿ ಕೆಲಸ ಮಾಡಿದರು. ಮೊದಲ ಓವರ್​ನ 4 ನೇ ಎಸೆತದಲ್ಲಿ ಫಿಲ್ ಸಾಲ್ಟ್ ಅವರನ್ನು ಕೇವಲ 5 ರನ್​​ಗಳಿಗೆ ಔಟ್ ಮಾಡುವ ಮೂಲಕ ತುಸಾರಾ ಉತ್ತಮ ಅರಂಭ ತಂದರು. ತಮ್ಮ ಮುಂದಿನ ಓವರ್ನಲ್ಲಿ, ತುಸಾರ 3 ನೇ ಕ್ರಮಾಂಕದ ಬ್ಯಾಟ್ಸ್ಮನ್ ಆಂಗ್ರಿಶ್ ರಘುವಂಶಿ ಅವರ ವಿಕೆಟ್ ಅನ್ನು 13 ರನ್​ಗಳಿಗೆ ಪಡೆದರು, 4 ಎಸೆತಗಳ ನಂತರ, ಅವರು ಶ್ರೇಯಸ್ ಅಯ್ಯರ್ ಅವರನ್ನು 4 ಎಸೆತಗಳಲ್ಲಿ 6 ರನ್​ಗಳಿಗೆ ಔಟ್ ಮಾಡಿದರು.

ಹಾರ್ದಿಕ್ ಪಾಂಡ್ಯ 8 ಎಸೆತಗಳಲ್ಲಿ 8 ರನ್ ಗಳಿಸಿದ್ದ ಸುನಿಲ್ ನರೈನ್ ಅವರನ್ನು ಕ್ಲೀನ್ ಬೌಲ್ ಮಾಡಿದರೆ, ಅನುಭವಿ ಪಿಯೂಷ್ ಚಾವ್ಲಾ 9 ರನ್ ಗಳಿಸಿ ಡೇಂಜರ್ ಮ್ಯಾನ್ ರಿಂಕು ಸಿಂಗ್ ಅವರನ್ನು ಔಟ್​​ ಮಾಡಿದರು. 7ನೇ ಓವರ್​​ನ ಮೊದಲ ಎಸೆತದ ವೇಳೆಗೆ ಕೋಲ್ಕತಾ 5 ವಿಕೆಟ್ ನಷ್ಟಕ್ಕೆ 57 ರನ್ ಗಳಿಸಿತ್ತು. ಆದರೆ ಆ ಬಳಿಕ ಅನನುಭವಿ ನಮನ್ ಧೀರ್ ಅವರನ್ನು ಬೌಲಿಂಗ್​ಗೆ ಕರೆತರುವ ಪಾಂಡ್ಯ ಅವರ ನಿರ್ಧಾರ ಕೈಕೊಟ್ಟಿತು. ವೆಂಕಟೇಶ್ ಅಯ್ಯರ್ ಮತ್ತು ಮನೀಶ್ ಪಾಂಡೆ ಅವರಿಗೆ 83 ರನ್​ಗಳ ಜೊತೆಯಾಟವನ್ನು ನೀಡಿತು.

57/5 ಸ್ಕೋರ್ ಮಾಡಿದ್ದ ನೈಟ್ ರೈಡರ್ಸ್ ಅಂತಿಮವಾಗಿ 169 ರನ್ ಗಳಿಸಿತು. ನಂತರ ಗುರಿ ಬೆನ್ನಟ್ಟಲು ವಿಫಲವಾದ ಮುಂಬೈ 18.5 ಓವರ್​ಗಳಲ್ಲಿ 145 ರನ್​ಗಳಿಗೆ ಆಲೌಟ್ ಆಯಿತು.

ನಿರಾಶೆ ವ್ಯಕ್ತಪಡಿಸಿದ ಇರ್ಫಾನ್ ಪಠಾಣ್

ವಾಂಖೆಡೆಯಲ್ಲಿ 12 ವರ್ಷಗಳ ನಂತರ ಕೋಲ್ಕತಾ ನೈಟ್ ರೈಡರ್ಸ್ ಆತಿಥೇಯ ತಂಡದ ವಿರುದ್ಧ 24 ರನ್​ಗಳ ಭರ್ಜರಿ ಗೆಲುವು ದಾಖಲಿಸಿದ ನಂತರ, ಇರ್ಫಾನ್ ಪಠಾಣ್ ಹಾರ್ದಿಕ್ ಪಾಂಡ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಾಂಡ್ಯ ಅವರನ್ನು ಟೀಕಿಸುವ ವೀಡಿಯೊ ವೈರಲ್ ಆಗುವ ಮೊದಲು, ಭಾರತದ ಮಾಜಿ ಆಲ್ರೌಂಡರ್​ ಎಕ್ಸ್​ನಲ್ಲಿ ಸರಣಿ ಟ್ವೀಟ್​ಗಳನ್ನು ಮಾಡಿದ್ದರು. ಮುಂಬೈ ಇಂಡಿಯನ್ಸ್ ನಾಯಕನ ಪೆದ್ದ ನಡೆಗಳನ್ನು ಪ್ರಶ್ನಿಸಿದ್ದರು.

ಇರ್ಫಾನ್ ಪಠಾಣ್ ಅವರು ಮುಂಬೈನ ಪ್ರಯಾಣವು ಕೊನೆಗೊಂಡಿದೆ. ಅವರು ಹೊರಗಡೆ ಎಷ್ಟು ಪ್ರಬಲವಾಗಿ ಕಾಣುತ್ತಿದ್ದರೂ ತಂಡವನ್ನು ಉತ್ತಮವಾಗಿ ನಿರ್ವಹಿಸಿಲ್ಲ ಎಂದು ಹೇಳುವ ಮೂಲಕ ವೀಡಿಯೊವನ್ನು ಪ್ರಾರಂಭಿಸಿದರು. ಹಾರ್ದಿಕ್ ಪಾಂಡ್ಯ ವಿರುದ್ಧದ ಪ್ರಶ್ನೆಗಳು ಮತ್ತು ಟೀಕೆಗಳು ಸರಿಯಾಗಿವೆ ಎಂದು ಹೇಳಿದರು.

“ಮುಂಬೈ ಇಂಡಿಯನ್ಸ್​ ಕಥೆ ಇಲ್ಲಿಗೆ ಕೊನೆಗೊಳ್ಳುತ್ತದೆ. ಈ ತಂಡವು ಕಾಗದದ ಮೇಲೆ ತುಂಬಾ ಉತ್ತಮವಾಗಿತ್ತು, ಆದರೆ ಅದನ್ನು ನಿರ್ವಹಿಸಲಾಗಲಿಲ್ಲ. ಹಾರ್ದಿಕ್ ಪಾಂಡ್ಯ ನಾಯಕತ್ವದ ಬಗ್ಗೆ ಎದ್ದ ಪ್ರಶ್ನೆಗಳು ಸಂಪೂರ್ಣವಾಗಿ ಸರಿಯಾಗಿವೆ. ನೀವು ಕೆಕೆಆರ್ ಅನ್ನು 57/5 ಕ್ಕೆ ಸೀಮಿತಗೊಳಿಸಿದಾಗ, ನೀವು ನಮನ್ ಧಿರ್​ಗೆ ಸತತ ಮೂರು ಓವರ್​ಗಳನ್ನು ನೀಡಿದ ತಪ್ಪು ಮಾಡಿದ್ದೀರಿ. ನೀವು ನಿಮ್ಮ ಮುಖ್ಯ ಬೌಲರ್​ಗಳನ್ನು ಇಳಿಸಬೇಕಾಗಿತ್ತು. ಆರನೇ ಬೌಲರ್​ಗೆ ಮೂರು ಓವರ್​​ ನೀಡಿದ್ದೀರಿ” ಎಂದು ಇರ್ಫಾನ್ ಪಠಾಣ್ ಹೇಳಿದ್ದಾರೆ.

ತಂಡದ ಮರು ರಚನೆಗೆ ಸಲಹೆ

ಮುಂಬೈ ಇಂಡಿಯನ್ಸ್ ತಂಡದ ಮ್ಯಾನೇಜ್ಮೆಂಟ್​​ ಇರ್ಫಾನ್ ಪಠಾಣ್ ನೀಡಿದ ಅತ್ಯುತ್ತಮ ಸಲಹೆಯೆಂದರೆ, ಹಾರ್ದಿಕ್ ಪಾಂಡ್ಯ ತಮ್ಮ ನಾಯಕ ಎಂದು ಆಟಗಾರರನ್ನು ಒಪ್ಪಿಕೊಳ್ಳುವಂತೆ ಮಾಡುವುದು. 2007 ರ ಐಸಿಸಿ ಟಿ 20 ವಿಶ್ವಕಪ್ ಫೈನಲ್​​ನ ಮ್ಯಾನ್ ಆಫ್ ದಿ ಮ್ಯಾಚ್ ವಿನ್ನರ್ ಮುಂಬೈ ಇಂಡಿಯನ್ಸ್ ತಂಡವನ್ನು ಒಟ್ಟಾಗಿ ಕರೆಯೊಯ್ಯುತ್ತಿಲ್ಲ. ಇದು ಅವರು ಮುಂದೆ ಸುಧಾರಿಸಬೇಕಾದ ವಿಷಯವಾಗಿದೆ ಎಂದು ಹೇಳಿದ್ದಾರೆ.

“ನಾಯಕತ್ವವು ಆಟದಲ್ಲಿ ದೊಡ್ಡ ಪರಿಣಾಮ ಬೀರುತ್ತದೆ. ಮುಂಬೈ ಇಂಡಿಯನ್ಸ್ ಸಂಘಟಿತ ತಂಡದಂತೆ ಕಾಣುತ್ತಿಲ್ಲ, ಮ್ಯಾನೇಜ್ಮೆಂಟ್ ಇದನ್ನು ಪರಿಗಣಿಸಬೇಕಾಗಿದೆ. ಆಟಗಾರರು ನಾಯಕನನ್ನು ಗೌರವಿಸಬೇಕು ಮತ್ತು ಸ್ವೀಕರಿಸಬೇಕು. ನಾವು ಅದನ್ನು ಮೈದಾನದಲ್ಲಿ ನೋಡಲಿಲ್ಲ” ಎಂದು ಪಠಾಣ್ ಮುಕ್ತಾಯಗೊಳಿಸಿದರು.

Continue Reading
Advertisement
Summer Tour
ಪ್ರವಾಸ7 mins ago

Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

Prajwal Revanna Case
ಕರ್ನಾಟಕ10 mins ago

Prajwal Revanna Case: ಹೊಳೆನರಸೀಪುರ ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಸ್ಥಳ ಮಹಜರು; ಸಂತ್ರಸ್ತೆ ಹೇಳಿಕೆ ದಾಖಲು

Lok Sabha Election
ಪ್ರಮುಖ ಸುದ್ದಿ20 mins ago

Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

Prajwal Revanna Case
ಕರ್ನಾಟಕ42 mins ago

Prajwal Revanna Case: ಪ್ರಜ್ವಲ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್;‌ ರೇವಣ್ಣ ಪಿಎ ಮನೆಯಲ್ಲಿ ಸಂತ್ರಸ್ತೆಯ ರಕ್ಷಣೆ!

Hardik Pandya
ಕ್ರಿಕೆಟ್44 mins ago

IPL 2024 : ಹಾರ್ದಿಕ್​ ಪಾಂಡ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಇರ್ಫಾನ್ ಪಠಾಣ್​​

karnataka weather Forecast
ಮಳೆ47 mins ago

Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

Zameer Ahmed Khan
ಕರ್ನಾಟಕ57 mins ago

Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

Mobile Side Effect
ಆರೋಗ್ಯ60 mins ago

Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

Suchitra Krishnamoorthi Reveals Her Face Swelled Like A Balloon
ಬಾಲಿವುಡ್1 hour ago

Suchitra Krishnamoorthi: ಶಾರುಖ್ ಖಾನ್ ಜತೆ ನಟಿಸಿರುವ ನಟಿಯ ಮುಖ ಬಲೂನ್‌ನಂತೆ ಊದಿಕೊಂಡಿದ್ದು ಏಕೆ?

Wedding Season Hair Fashion
ಫ್ಯಾಷನ್1 hour ago

Wedding Season Hair Fashion: ವೆಡ್ಡಿಂಗ್‌ ಸೀಸನ್‌ನಲ್ಲಿ ಎಂಟ್ರಿ ನೀಡಿದ ಆರ್ಟಿಫಿಶಿಯಲ್‌ ಹೇರ್‌ ಎಕ್ಸ್‌ಟೆನ್ಷನ್ಸ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌