Ramadan 2023 : ರಮ್ಜಾನ್ ಹಬ್ಬಕ್ಕೆ ದಿನಗಣನೆ: ಏನಿದರ ವಿಶೇಷತೆ? ಏಕಾಗಿ ಈ ಉಪವಾಸ? - Vistara News

ಧಾರ್ಮಿಕ

Ramadan 2023 : ರಮ್ಜಾನ್ ಹಬ್ಬಕ್ಕೆ ದಿನಗಣನೆ: ಏನಿದರ ವಿಶೇಷತೆ? ಏಕಾಗಿ ಈ ಉಪವಾಸ?

ರಮ್ಜಾನ್ ಹಬ್ಬಕ್ಕೆ (Ramadan 2023) ದಿನಗಣನೆ ಆರಂಭವಾಗಿದೆ. ಈ ಹಬ್ಬದ ವಿಶೇಷತೆ? ಆಚರಣೆಯ ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಹಿಂದೂಗಳು ಯುಗಾದಿ ಹಬ್ಬದ ಸಂಭ್ರಮದಲ್ಲಿದ್ದಾರೆ. ಅದೇ ರೀತಿ ಮುಸ್ಲಿಂ ಧರ್ಮದವರು ರಮ್ಜಾನ್ (Ramadan 2023) ಹಬ್ಬವನ್ನು ಎದುರು ನೋಡುತ್ತಿದ್ದಾರೆ. ಯುಗಾದಿ ದಿನವಾದ ಮಾ.22ರಂದೇ ರಮ್ಜಾನ್ ಕೂಡ ಆರಂಭವಾಗಲಿದ್ದು, ಅದಕ್ಕೆಂದು ಮುಸ್ಲಿಮರು ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾರಂಭಿಸಿದ್ದಾರೆ. ಹಾಗಾದರೆ ಈ ಹಬ್ಬದ ವಿಶೇಷತೆಯೇನು? ಈ ಸಮಯದಲ್ಲಿ ಉಪವಾಸವನ್ನು ಏಕಾಗಿ ಮಾಡಲಾಗುತ್ತದೆ? ಎನ್ನುವ ಹಲವು ಪ್ರಶ್ನೆಗಳು ನಿಮ್ಮಲ್ಲಿರಬಹುದು. ಅದೆಲ್ಲದಕ್ಕೂ ಉತ್ತರ ಇಲ್ಲಿದೆ ನೋಡಿ.

ಇದನ್ನೂ ಓದಿ: Attica Babu : ಅಟ್ಟಿಕಾ ಬಾಬು ತಂದಿಟ್ಟಿದ್ದ ಲೋಡ್‌ಗಟ್ಟಲೆ ರಂಜಾನ್‌-ಯುಗಾದಿ ಕಿಟ್‌ ಸೀಜ್‌ ಮಾಡಿದ ಪೊಲೀಸರು!

ಇಸ್ಲಾಂ ಕ್ಯಾಲೆಂಡರ್‌ ಪ್ರಕಾರ ವರ್ಷದ 9ನೇ ತಿಂಗಳು ರಮ್ಜಾನ್. ಇಸ್ಲಾಂ ಕ್ಯಾಲೆಂಡರ್‌ ಚಂದ್ರನ ಚಲನೆಯನ್ನು ಆಧರಿಸಿರುವುದರಿಂದಾಗಿ ಪ್ರತಿ ವರ್ಷ ರಮ್ಜಾನ್ ಬೇರೆ ಬೇರೆ ಸಮಯದಲ್ಲಿ ಬರುತ್ತದೆ. ಈ ವರ್ಷ ಮಾರ್ಚ್‌ 22ರಿಂದ ಏಪ್ರಿಲ್‌ 21ರವರೆಗೆ ರಮ್ಜಾನ್ ಇರಲಿದೆ.‌

ರಮ್ಜಾನ್‌ ತಿಂಗಳಲ್ಲಿ ಚಂದ್ರ ದರ್ಶನದ ಮಹತ್ವ

ಚಂದ್ರನ ದರ್ಶನವು ರಮ್ಜಾನ್ ತಿಂಗಳ ಆರಂಭ ಮತ್ತು ಅಂತ್ಯವನ್ನು ಸೂಚಿಸುತ್ತದೆ. ರಮ್ಜಾನ್ ಉಪವಾಸ ಆರಂಭವಾಗುವುದಕ್ಕೂ ಮೊದಲು ಮುಸ್ಲಿಮರು ಮತ್ತು ಅವರ ಧಾರ್ಮಿಕ ಗುರುಗಳು ರಾತ್ರಿ ವೇಳೆ ಅರ್ಧ ಚಂದ್ರನ ದರ್ಶನ ಮಾಡುತ್ತಾರೆ. ಇದು ಮುಸ್ಲಿಂ ಧರ್ಮದಲ್ಲಿ ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ. ರಮ್ಜಾನ್ ತಿಂಗಳಿಗೂ ಮೊದಲು ಬರುವುದು ಶಾಬಾನ್‌ ತಿಂಗಳು. ಶಾಬಾನ್‌ ತಿಂಗಳ 29ನೇ ದಿನದಂದು ಚಂದ್ರನನ್ನು ನೋಡುವ ಮೂಲಕ ರಮ್ಜಾನ್ ಆರಂಭಿಸಲಾಗುತ್ತದೆ.

ಉಪವಾಸ ಮಾಡುವುದು ಏಕೆ?

ರಮ್ಜಾನ್ ಎಂದಾಕ್ಷಣ ಅಲ್ಲಿ ಉಪವಾಸವಿರುತ್ತದೆ. ಈ ತಿಂಗಳಲ್ಲಿ ಮುಸ್ಲಿಮರು ಸೂರ್ಯೋದಯದ ನಂತರ ಮತ್ತು ಸೂರ್ಯ ಮುಳುಗುವುದಕ್ಕೂ ಮೊದಲು ಊಟವನ್ನಾಗಲೀ ಅಥವಾ ಪಾನೀಯವನ್ನಾಗಲೀ ಸೇವಿಸುವುದಿಲ್ಲ. ಈ ಉಪವಾಸವನ್ನು ದೇವರ ಬಗೆಗಿನ ಬಂಬಿಕೆಯ ಪ್ರತಿಬಿಂಬ ಎಂದು ನಂಬಲಾಗುತ್ತದೆ. ಹಾಗೆಯೇ ಹೀಗೆ ಮಾಡುವುದರಿಂದ ದೇವರ ಮೇಲಿನ ಭಕ್ತಿ ಇನ್ನಷ್ಟು ಹೆಚ್ಚುತ್ತದೆ ಎನ್ನಲಾಗುತ್ತದೆ. ಹಾಗೆಯೇ ಜೀವನದಲ್ಲಿ ಸಹಾನುಭೂತಿ, ತಾಳ್ಮೆ ಹೆಚ್ಚಿಸಿಕೊಳ್ಳಲು, ದಾನ ಕಾರ್ಯ ಹೆಚ್ಚಿಸಲು, ಕೆಟ್ಟ ಅಭ್ಯಾಸ ನಿಲ್ಲಿಸುವುದಕ್ಕೆ ಈ ಉಪವಾಸ ಒಂದು ರೀತಿಯ ಜ್ಞಾಪನೆಯಿದ್ದಂತೆ.

ಇದನ್ನೂ ಓದಿ: Ramadan 2023: ರಂಜಾನ್‌ ವೇಳೆ ಮಸೀದಿಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಅನುಮತಿ ಕೋರಿದ ಮುಸ್ಲಿಂ ಮುಖಂಡರು

ಪ್ರತಿ ದಿನ ಬೆಳಗ್ಗೆ ಸೂರ್ಯೋದಕ್ಕೂ ಮೊದಲು ಸುಹೂರ್‌ನಿಂದ ದಿನ ಆರಂಭವಾದರೆ ರಾತ್ರಿ ಸೂರ್ಯ ಮುಳುಗಿದ ನಂತರ ಇಫ್ತಾರ್‌ ಊಟದೊಂದಿಗೆ ದಿನ ಮುಗಿಸಲಾಗುತ್ತದೆ. ಇದು ರಮ್ಜಾನ್ ಹಬ್ಬದ ವಿಶೇಷತೆಯಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PM Narendra Modi: ವಿಡಿಯೋ ಸಂದೇಶ ಮೂಲಕ ಬಸವೇಶ್ವರ ಜಯಂತಿಗೆ ಶುಭ ಕೋರಿದ ಪಿಎಂ

PM Narendra Modi: ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ ಎಂದು ಮೋದಿ ಹೇಳಿದ್ದಾರೆ.

VISTARANEWS.COM


on

pm narendra modi basava jayanti 2024
Koo

ಹೊಸದಿಲ್ಲಿ: ಭಕ್ತಿ ಭಂಡಾರಿ, ಸಮಾಜ ಸುಧಾರಕ, ವಚನ ಚಳವಳಿಯ ಆದ್ಯ ಪೂಜ್ಯ ಶ್ರೀ ಬಸವೇಶ್ವರ ಜಯಂತಿ (Basava Jayanti 2024) ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ತಮ್ಮ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸೋಶಿಯಲ್‌ ಮೀಡಿಯಾ (Social media) ಎಕ್ಸ್‌ನಲ್ಲಿ ಪಠ್ಯ ಸಂದೇಶ ಹಾಗೂ ವಿಡಿಯೋ ಸಂದೇಶಗಳೆರಡನ್ನೂ ಅವರು ನೀಡಿದ್ದಾರೆ.

“ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ” ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

“ಭಗವಾನ್‌ ಬಸವೇಶ್ವರರ ಸಂದೇಶ ಹಾಗೂ ಅವರ ವಚನಗಳು ನನಗೆ ಹೊಸಹೊಸದಾಗಿ ಕಲಿಸುತ್ತಲೇ ಇರುತ್ತವೆ. ನಾವು ಅವರಿಂದ ಅವರ ದೈವೀಯ ಗುಣವನ್ನೂ ಕಲಿಯಬಹುದು; ಜೊತೆಗೆ ಅವರು ಉತ್ತಮ ಆಡಳಿತಗಾರ, ಸುಧಾರಕನೂ ಹೌದು. ಸಮಾಜ ಸುಧಾರಣೆಯ ಅವರ ಬದುಕು ನಮಗೆ ಪ್ರೇರಣೆಯಾಗುವಂಥದು. ಬಸವಣ್ಣನವರ ವಚನಗಳು ಹಾಗೂ ಸಂದೇಶಗಳು ಆಧ್ಯಾತ್ಮಿಕವೂ ಹೌದು, ಬದುಕಿನ ಪ್ರಾಯೋಗಿಕ ಮಾರ್ಗದರ್ಶಕ ಸೂತ್ರಗಳೂ ಹೌದು” ಎಂದು ಅವರು ಕೊಂಡಾಡಿದ್ದಾರೆ.

“ಅವರ ಉಪದೇಶಗಳು ನಮಗೆ ಉತ್ತಮ ಮಾನವರಾಗುವುದನ್ನು ಕಲಿಸುತ್ತವೆ. ಇನ್ನಷ್ಟು ದಯಾಳು, ಅಧಿಕ ಉದಾರಿ, ಹೆಚ್ಚಿನ ಮಾನವೀಯ ಸಂವೇದನೆಗಳನ್ನು ನಮ್ಮಲ್ಲಿ ತುಂಬುತ್ತದೆ. ಶತಮಾನಗಳಷ್ಟು ಮೊದಲೇ ಬಸವೇಶ್ವರರು ಸಾಮಾಜಿಕ ನ್ಯಾಯ, ಲಿಂಗ ಸಮಾನತೆಯಂಥ ಮಹತ್ವದ ಸಂಗತಿಗಳ ಬಗ್ಗೆ ಸಮಾಜಕ್ಕೆ ಬೋಧಿಸಿದ್ದರು. ನಾವು ಅವರ ವಚನಗಳು- ಆದರ್ಶಗಳನ್ನು ಜಾಗತಿಕವಾಗಿ ಪಸರಿಸಬೇಕು. ಜಗತ್ತನ್ನು ಆ ಮೂಲಕ ಇನ್ನಷ್ಟು ಸುಂದರಗೊಳಿಸೋಣ. ಈ ಶುಭಸಂದರ್ಭದಲ್ಲಿ ನಿಮಗೆಲ್ಲರಿಗೂ ಶುಭಕಾಮನೆಗಳು” ಎಂದು ಅವರು ಹಾರೈಸಿದ್ದಾರೆ.

ಇದನ್ನೂ ಓದಿ: Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

Continue Reading

ಪ್ರಮುಖ ಸುದ್ದಿ

Akshaya Tritiya 2024: ಇಂದು ಏನೇನು ಖರೀದಿಸಬಹುದು? ಚಿನ್ನ- ಬೆಳ್ಳಿ ಏಕೆ ಖರೀದಿಸಬೇಕು?

Akshaya Tritiya 2024: ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

VISTARANEWS.COM


on

Akshaya Tritiya 2024
Koo

ಅಕ್ಷಯ ತೃತೀಯ (Akshaya Tritiya 2024) ಅಂದರೆ ಚಿನ್ನ- ಬೆಳ್ಳಿ (gold, silver) ಖರೀದಿಸಬೇಕು ಎಂಬುದು ಸಾಮಾನ್ಯ ನಂಬಿಕೆ. ಆದರೆ ಇದು ಮಾತ್ರವಲ್ಲ. ಸಂಪತ್ತು ಎಂದು ಕರೆಸಿಕೊಳ್ಳುವ ಯಾವುದನ್ನೇ ಆದರೂ ಇಂದು ನೀವು ಖರೀದಿಸಬಹುದು ಅಥವಾ ಹೊಂದಬಹುದು. ಅದರಿಂದ ಆ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ. ಈ ಹಿಂದಿನ ಕಾಲದಲ್ಲಿ ಕೃಷಿಪ್ರಧಾನ ಸಮಾಜದಲ್ಲಿ ಅಕ್ಕಿ ರಾಗಿ ಗೋಧಿಯಂಥ ಧಾನ್ಯಗಳನ್ನು ಮನೆ ತುಂಬಿಸಿಕೊಳ್ಳುತ್ತಿದ್ದರು.

ಹಿಂದೂಗಳಿಗೆ ಸಂಪತ್ತಿನ ಪುಣ್ಯ ಫಲ ನೀಡುವ ಹಬ್ಬ. ಅಕ್ಷಯ ತೃತೀಯದಂದು (Akshaya Tritiya 2024) ಶುಭ, ಅಶುಭ ಮುಹೂರ್ತಗಳನ್ನು ನೋಡದೇ ಯಾವುದೇ ಕಾರ್ಯವನ್ನು ಪ್ರಾರಂಭಿಸಬಹುದು ಎಂಬ ಮಾತಿದೆ. ಉತ್ತರ ಭಾರತದಲ್ಲಿ ಅಖಾ ತೀಜ್ ಎಂದೂ ಕರೆಯಲ್ಪಡುವ ಈ ಮಂಗಳಕರ ದಿನ ಅಪಾರ ಪ್ರಾಮುಖ್ಯತೆ ಹೊಂದಿದೆ. ಈ ದಿನದಂದು ಪ್ರಾರಂಭಿಸಿದ ಯಾವುದೇ ಕಾರ್ಯ ಯಾವಾಗಲೂ ಯಶಸ್ವಿಯಾಗುತ್ತದೆ ಎಂಬ ನಂಬಿಕೆ. ಖರೀದಿಸಿದ ಸಂಪತ್ತು ಅಕ್ಷಯವಾಗುತ್ತದೆ ಎಂಬ ನಂಬಿಕೆ.

ಈ ದಿನವು ಅದೃಷ್ಟ, ಯಶಸ್ಸು ಮತ್ತು ಅದೃಷ್ಟದ ಲಾಭದ ಸಂಕೇತವಾಗಿದೆ. ಅಕ್ಷಯ ತೃತೀಯದಂದು ಸಂಪತ್ತಿನ ಅಧಿದೇವತೆ ಲಕ್ಷ್ಮಿಯನ್ನು ಮೆಚ್ಚಿಸಲು ಈ ದಿನ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಖರೀದಿಸುವುದು ವಾಡಿಕೆ. ಅಕ್ಷಯ ತೃತೀಯವನ್ನು ಭಾರತ ಮತ್ತು ನೇಪಾಳದ ಅನೇಕ ಪ್ರದೇಶಗಳಲ್ಲಿ ಹಿಂದೂಗಳು ಮತ್ತು ಜೈನರು ಹೊಸ ಉದ್ಯಮಗಳು, ಮದುವೆಗಳು, ದಾನ, ಮತ್ತು ಚಿನ್ನ ಅಥವಾ ಇತರ ಆಸ್ತಿಯಂತಹ ಹೂಡಿಕೆಗಳಿಗೆ ಮಂಗಳಕರವೆಂದು ಪರಿಗಣಿಸುತ್ತಾರೆ. ಅಂದು ಚಿನ್ನ, ಬೆಳ್ಳಿ, ವಾಹನ ಖರೀದಿಸಿ ತಂದರೆ ಸಂಪತ್ತು ಮತ್ತು ಸಮೃದ್ಧಿ ಬರುತ್ತದೆ ಎಂದು ಹಲವರು ನಂಬುತ್ತಾರೆ.

ಸಂಸ್ಕೃತದಲ್ಲಿ ಅಕ್ಷಯ ಪದವು “ಅಭ್ಯುದಯ, ಭರವಸೆ, ಸಂತೋಷ, ಯಶಸ್ಸು” ಎಂಬ ಅರ್ಥದಲ್ಲಿ “ಎಂದಿಗೂ ಕಡಿಮೆಯಾಗುವುದಿಲ್ಲ” ಎಂಬ ಅರ್ಥವನ್ನು ಸೂಚಿಸುತ್ತದೆ. ಈ ದಿನದಂದು ಸೂರ್ಯ ಮತ್ತು ಚಂದ್ರ ಇಬ್ಬರೂ ತಮ್ಮ ಗ್ರಹಗಳ ಅತ್ಯುತ್ತಮ ನೆಲೆಯಲ್ಲಿರುತ್ತಾರೆ ಎಂದು ನಂಬಲಾಗಿದೆ.

ಅಕ್ಷಯ ತೃತೀಯ ಆಚರಣೆಯ ಇತಿಹಾಸದ ಪ್ರಕಾರ ಅಕ್ಷಯ ತೃತೀಯ ದಿನದಂದು ನಾಲ್ಕು ಯುಗಗಳಲ್ಲಿ ಎರಡನೇ ಯುಗವಾದ ತ್ರೇತಾಯುಗವು ಪ್ರಾರಂಭವಾಯಿತು ಎಂದು ಹೇಳಲಾಗುತ್ತದೆ. ಭಗವಾನ್ ವಿಷ್ಣುವಿನ ಆರನೇ ಅವತಾರವಾದ ಪರಶುರಾಮನು ಅಕ್ಷಯ ತೃತೀಯ ದಿನದಂದು ಜನಿಸಿದರು ಎಂದು ಹೇಳಲಾಗುತ್ತದೆ. ಹೀಗಾಗಿ ಭಕ್ತರು ಅಕ್ಷಯ ತೃತೀಯವನ್ನು ಪರಶುರಾಮನ ಜನ್ಮ ದಿನವಾಗಿ ಆಚರಿಸುತ್ತಾರೆ. ಅಕ್ಷಯ ತೃತೀಯದ ಆಚರಣೆಗಳು ಅಕ್ಷಯ ತೃತೀಯದಂದು ಭಕ್ತರು ಪವಿತ್ರ ಸ್ನಾನ ಮಾಡುವ ಮೂಲಕ ಮತ್ತು ಹಳದಿ ವೇಷಭೂಷಣದಲ್ಲಿ ತಮ್ಮನ್ನು ತಾವು ಅಲಂಕರಿಸಿಕೊಳ್ಳುವುದರೊಂದಿಗೆ ದಿನವನ್ನು ಪ್ರಾರಂಭಿಸುತ್ತಾರೆ. ಈ ದಿನ ವಿಶೇಷವಾಗಿ ವಿಷ್ಣು ಸಹಸ್ರನಾಮ ಮತ್ತು ವಿಷ್ಣು ಚಾಲೀಸಾದ ಪಠಣಗಳೊಂದಿಗೆ ಭಗವಾನ್ ವಿಷ್ಣುವಿಗೆ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತದೆ.

ಚಿನ್ನ, ಬೆಳ್ಳಿ ಏಕೆ ಖರೀದಿಸಬೇಕು?

ದಂತಕಥೆಯ ಪ್ರಕಾರ, ಅಕ್ಷಯ ತೃತೀಯದಲ್ಲಿ, ಸಂಪತ್ತಿನ ದೇವತೆಯಾದ ಕುಬೇರನು ಭಗವಾನ್ ಶಿವ ಮತ್ತು ಬ್ರಹ್ಮನಿಂದ ಆಶೀರ್ವಾದವನ್ನು ಪಡೆದನು, ಅಲಕಾಪುರಿ ಎಂದು ಕರೆಯಲ್ಪಡುವ ಲೋಕವನ್ನು ಸ್ವಾಧೀನಪಡಿಸಿಕೊಂಡ. ಪರಿಣಾಮವಾಗಿ, ಈ ದಿನ ಕುಬೇರನ ಹೆಸರಿನಲ್ಲಿ ಚಿನ್ನದ ಆಭರಣಗಳು ಮತ್ತು ಆಸ್ತಿಗಳನ್ನು ಖರೀದಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಹೊಸ ವ್ಯಾಪಾರ, ಉದ್ಯಮಗಳು, ನಿರ್ಮಾಣ ಕಾರ್ಯಗಳನ್ನು ಈ ವಿಶೇಷ ದಿನದಂದು ಪ್ರಾರಂಭಿಸಲಾಗುತ್ತದೆ. ಉದ್ಯಮಿಗಳು ಮುಂದಿನ ಆರ್ಥಿಕ ವರ್ಷಕ್ಕೆ ಹೊಸ ಆಡಿಟ್ ಪುಸ್ತಕವನ್ನು ಪ್ರಾರಂಭಿಸುವ ಮೊದಲು ಅಕ್ಷಯ ತೃತೀಯ ದಿನದಂದು ಗಣೇಶ ಮತ್ತು ಲಕ್ಷ್ಮೀ ದೇವಿಯನ್ನು ಪೂಜಿಸುತ್ತಾರೆ. ಇದನ್ನು ಹಲ್ಖಾತಾ ಎಂದು ಕರೆಯುತ್ತಾರೆ.

ಇದಲ್ಲದೇ ಅಕ್ಕಿ ಕೊಳ್ಳುವವರು, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವವರು, ಯಾವುದೇ ರೀತಿಯ ಹೊಸ ವಸ್ತುಗಳು ಅಥವಾ ಪಾತ್ರೆಗಳನ್ನು ಖರೀದಿಸುವವರು- ದೇವಸ್ಥಾನಗಳಿಗೆ ಭೇಟಿ ನೀಡುವವರು, ಬಡವರಿಗೆ ಅನ್ನದಾನ ಅಥವಾ ವಿಶೇಷ ಕೊಡುಗೆಗಳನ್ನು ನೀಡುವವರು ಅಥವಾ ಬಡ ಮಕ್ಕಳಿಗೆ ಅವರ ಶಿಕ್ಷಣ ಶುಲ್ಕಕ್ಕಾಗಿ ಸಹಾಯ ಮಾಡುವವರಿಗೂ ಈ ದಿನ ಶುಭಕರ. ಹೀಗಾಗಿ ಚಿನ್ನ ಬೆಳ್ಳಿಗೆ ಸೀಮಿತವಾಗದೆ, ಧಾನ್ಯಗಳನ್ನು ಕೂಡ ಖರೀದಿಸಬಹುದು. ಬಡವರಿಗೆ ದಾನ ಮಾಡುವುದರಿಂದಲೂ ನಿಮ್ಮ ಸಂಪತ್ತು ಅಕ್ಷಯವಾಗುತ್ತದೆ.

ಇದನ್ನೂ ಓದಿ: Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

Continue Reading

ಧಾರ್ಮಿಕ

Akshaya Tritiya 2024: ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಅಕ್ಷಯ ತೃತೀಯ

ವೈಶಾಖ ಮಾಸದ – ಶುಕ್ಲ ಪಕ್ಷದ – ಮೂರನೇ ದಿನವೇ ‘ಅಕ್ಷಯ ತೃತೀಯ’ (Akshaya Tritiya 2024). ಹಿಂದುಗಳ ಪವಿತ್ರ ದಿನಗಳಲ್ಲಿ (Akshaya Tritiya 2024) ಅತ್ಯಂತ ಪವಿತ್ರವಾದ ನಾಲ್ಕು “ಪೂರ್ಣ ಮುಹೂರ್ತʼಗಳಲ್ಲಿ (ಯುಗಾದಿ, ಅಕ್ಷಯ ತೃತೀಯ, ವಿಜಯ ದಶಮಿ ಮತ್ತು ಬಲಿಪಾಡ್ಯಮಿ ಹಬ್ಬದ ದಿನಗಳು) ಇದು ಒಂದು. ಈ ದಿನಗಳಲ್ಲಿ ಒಳ್ಳೆಯ ಕೆಲಸ ಮಾಡಲು ಪಂಚಾಂಗ ನೋಡುವ ಅವಶ್ಯಕತೆ ಇರುವುದಿಲ್ಲ ಎಂದು ನಮ್ಮ ಹಿರಿಯರು ಹೇಳಿದ್ದಾರೆ.

VISTARANEWS.COM


on

Akshaya Tritiya 2024
Koo
Prof. Vidwan Navinashastri Ra. Puranika (writers, Sanskrit lecturers, culture thinkers and astrologers)

ಪ್ರೊ. ವಿದ್ವಾನ್ ನವೀನಶಾಸ್ತ್ರಿ ರಾ. ಪುರಾಣಿಕ
(ಲೇಖಕರು, ಸಂಸ್ಕೃತ ಉಪನ್ಯಾಸಕರು, ಸಂಸ್ಕೃತಿ ಚಿಂತಕರು ಹಾಗೂ ಜ್ಯೋತಿಷಿಗಳು)
ಭವ್ಯ ಭಾರತದ ಸಾಂಸ್ಕೃತಿಕ ಪರಂಪರೆಯ (Akshaya Tritiya 2024) ಶ್ರೇಷ್ಠತೆಯನ್ನು ಸಾರುವ ಮೂಲಕ ಈ ಹಬ್ಬ ಹರಿದಿನಗಳು ಮನುಷ್ಯರ ಮನಸ್ಸನ್ನೂ ಸದಾ ನೆಮ್ಮದಿ ಮತ್ತು ಸಂತೋಷವಾಗಿ ಇರಲೆಂದು, ಕಾಲಕಾಲಕ್ಕೆ ಬದಲಾಗುವ ಋತು ನಿಯಮಗಳಿಗೆ ಅನುಗುಣವಾಗಿ ನಮ್ಮ ಹಿರಿಯರು ಭಗವಂತನ ಪ್ರತಿರೂಪವನ್ನು ಸೃಷ್ಟಿಯಲ್ಲಿ ದೃಷ್ಟಿಯಿಟ್ಟು ಮಾನವ ಜನಾಂಗದ ಏಳಿಗೆಗೆ ಶ್ರಮಿಸಿದ್ದಾರೆ. ಪಂಚಭೂತಗಳಲ್ಲಿ ದೇವರನ್ನು ಹುಡುಕಿದ್ದಾರೆ.ಹಿಗಾಗಿ ಭಾರತ ಪ್ರತ್ಯಕ್ಷ ಸಂಸ್ಕೃತಿಯ ಜೀವಂತ ಸ್ವರ್ಗದ ಪ್ರತಿ ರೂಪ. ಭಾರತೀಯರು ಆಚರಿಸುವ ಯಾವುದೇ ಹಬ್ಬ-ಹರಿದಿನಗಳು, ಸಮಾರಂಭ, ಜಯಂತಿ, ಉತ್ಸವಗಳು, ಆರಾಧನೆ ಇತ್ಯಾದಿ ಸಾಮಾನ್ಯವಾಗಿ ಅಮರವಾಗಿ ಉಳಿದಿರುವ ಯಾವುದೋ ಗತ ವ್ಯಕ್ತಿಯ, ಶಕ್ತಿಯ ಅಥವಾ ಪ್ರಾಚೀನತೆಯ ಪ್ರತೀಕಗಳಾಗಿರುತ್ತವೆ. ನಮ್ಮ ಈ ಪುಣ್ಯ ಭೂಮಿ ಭಾರತದಲ್ಲಿ ಎಲ್ಲಾ ಜನರು ಅತ್ಯಂತ ಪ್ರೀತಿಯಿಂದ, ಸಂತೋಷದಿಂದ ಬೆಸೆದುಕೊಂಡು ಇರಲು ಮುಖ್ಯ ಕಾರಣವೇನೆಂದರೆ, ನಮ್ಮ ಪೂರ್ವಜರು ಹಾಕಿಕೊಟ್ಟಂತಹ ಸಂಸ್ಕೃತಿ, ಪರಂಪರೆ ಹಾಗೂ ಕಾಲಕಾಲಕ್ಕೆ ಆಚರಿಸುವ ಹಬ್ಬ – ಹರಿದಿನಗಳು.
ಭಾರತ ಸಂಪ್ರದಾಯವನ್ನು ಪಾಲಿಸುವ ಮತ್ತು ಧರ್ಮವನ್ನು ಗೌರವಿಸುವ ದೇಶ. ಇದು ಈ ನೆಲದ ಸಂಸ್ಕಾರ. ಇಲ್ಲಿಯ ಪ್ರತಿ ಹಬ್ಬಕ್ಕೂ ಒಂದೊಂದು ಬಗೆಯ ಮಹತ್ವವನ್ನು ಹಾಗೂ ಹಿರಿಯರು ಹಾಕಿಕೊಟ್ಟ ನಿಯಮಗಳನ್ನು ಇನ್ನೂ ಪಾಲಿಸುತ್ತಾ ಬರುತ್ತಿದ್ದೇವೆ ಎಂಬುದೇ ಸಂಪ್ರದಾಯ. ಹಬ್ಬಗಳೇ ನಮ್ಮ ಭಾರತದ ಉಸಿರು ಎಂದರೂ ತಪ್ಪಾಗಲಿಕ್ಕಿಲ್ಲ.
ಸನಾತನ ವೈದಿಕ ಹಿಂದೂ ಧರ್ಮದಲ್ಲಿ ಸಾಕಷ್ಟು ಹಬ್ಬ-ಹರಿದಿನಗಳು ಉತ್ಸವಗಳು ಆಚರಣೆಯಲ್ಲಿವೆ.
ವೈಶಾಖ ಮಾಸದ – ಶುಕ್ಲ ಪಕ್ಷದ – ಮೂರನೇ ದಿನವೇ ‘ಅಕ್ಷಯ ತೃತೀಯ’. ಹಿಂದುಗಳ ಪವಿತ್ರ ದಿನಗಳಲ್ಲಿ ಅತ್ಯಂತ ಪವಿತ್ರವಾದ ನಾಲ್ಕು “ಪೂರ್ಣ ಮುಹೂರ್ತ” ಗಳಲ್ಲಿ (ಯುಗಾದಿ, ಅಕ್ಷಯ ತೃತೀಯ, ವಿಜಯ ದಶಮಿ ಮತ್ತು ಬಲಿಪಾಡ್ಯಮಿ ಹಬ್ಬದ ದಿನಗಳು) ಇದು ಒಂದು. ಈ ದಿನಗಳಲ್ಲಿ ಒಳ್ಳೆಯ ಕೆಲಸ ಮಾಡಲು ಪಂಚಾಂಗ ನೋಡುವ ಅವಶ್ಯಕತೆ ಇರುವುದಿಲ್ಲ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಈ ದಿವಸ ಸಾಮಾನ್ಯವಾಗಿ ಯಾವುದೇ ಒಳ್ಳೆ ಕೆಲಸವನ್ನು ಮಾಡಿದರೆ, ಅಕ್ಷಯವಾಗಿ ಪರಿಣಮಿಸುವುದು. ಈ ದಿವಸ ಜೀವನದ ಹೊಸ ಉದ್ಯೋಗಗಳನ್ನು ಪ್ರಾರಂಭಿಸುವುದು ಶುಭಕರ. ಈ ತೃತೀಯ ತಿಥಿಯ ಜೊತೆ ರೋಹಿಣಿ ನಕ್ಷತ್ರವಿದ್ದರೆ, ಮಹಾ ಪುಣ್ಯಕರವೆಂದು ಪುರಾಣಗಳಲ್ಲಿ ಉಲ್ಲೇಖವಿದೆ.

Akshaya Tritium

ಶುಭ ಕಾರ್ಯಗಳಿಗೆ ಅತ್ಯಂತ ಪ್ರಶಸ್ತ

ಪಂಚಾಂಗದಲ್ಲಿ ಅಕ್ಷಯ ತೃತೀಯದಂದು ಸೂರ್ಯ ಮತ್ತು ಚಂದ್ರರು ಏಕಕಾಲದಲ್ಲಿ ತಮ್ಮ ತಮ್ಮ ಶಕ್ತಿಯುತಸ್ಥಾನ – ಉಚ್ಚರಾಶಿಯಲ್ಲಿ (ಸೂರ್ಯ-ಮೇಷರಾಶಿಯಲ್ಲಿ ಮತ್ತು ಚಂದ್ರ – ವೃಷಭರಾಶಿಯಲ್ಲಿ) ಇರುವದರಿಂದ ಎಲ್ಲಾ ಶುಭ ಕಾರ್ಯಗಳಿಗೆ ಅತ್ಯಂತ ಪ್ರಶಸ್ತವಾಗಿರುತ್ತದೆ. ಸೂರ್ಯನು ಆತ್ಮ ಮತ್ತು ದೇಹ ಪ್ರತಿಬಿಂಬಿಸಿದರೆ, ಚಂದ್ರನು ಮನಸ್ಸು ಮತ್ತು ಬುದ್ದಿ ಮೇಲೆ ಪ್ರಭಾವ ಬೀರುತ್ತಾನೆ. ಈ ರೀತಿಯಾಗಿ ದೇಹ ಮತ್ತು ಮನಸ್ಸು ಪರಿಪೂರ್ಣತೆಯನ್ನು ಪಡೆಯುವ ದಿನ ಎಂದು ಹೇಳುವರು. ಅಕ್ಷಯ ತೃತೀಯವು ಇಡೀ ವರ್ಷದಲ್ಲಿ ಬರುವ ಒಂದು ಅತ್ಯಂತ ಶುಭದಿನವಾಗಿದೆ.ಹಾಗಾಗಿ‌ ಮನೆಯಲ್ಲಿ ಪೂಜೆ ಹೋಮ ಹವನಾದಿಗಳನ್ನು ಮಾಡುವುದಾದರೆ ಅಥವಾ ಚಿನ್ನ ಖರೀದಿ ಮಾಡುವುದಾದರೆ ಇದು ಸೂಕ್ತವಾದ ದಿನ.ಇದರಿಂದ ಮತ್ತಷ್ಟು ನಮ್ಮಲ್ಲಿ ಸುಖ ಸಮೃದ್ದಿ ಸಂಪತ್ತು ಹೇರಳವಾಗುತ್ತದೆ.ಅಲ್ಲದೇ ಈ ದಿನದಂದು ವಿಷ್ಣು, ಲಕ್ಷ್ಮಿ ಹಾಗೂ ಕುಬೇರನನ್ನು ಜನರು ಭಕ್ತಿಯಿಂದ ಪೂಜಿಸುತ್ತಾರೆ. ಅಲ್ಲದೇ ಹಿಂದೂ ಪುರಾಣದ ಪ್ರಕಾರ ತ್ರೇತಾಯುಗವು ಆರಂಭವಾದದ್ದು ಈ ಅಕ್ಷಯ ತೃತೀಯದ ಶುಭದಿನದಂದೇ ಎನ್ನುವ ಉಲ್ಲೇಖವಿದೆ.

ಅಕ್ಷಯ ತೃತೀಯಕ್ಕೆ ಪುರಾಣದ ನಂಟು

ವೈಶಾಖ ಮಾಸಕ್ಕೆ ಸೂರ್ಯ ಅಭಿಮಾನಿ ದೇವತೆ. ಸೂರ್ಯನು ಬೆಳಕು ಮತ್ತು ಶಕ್ತಿಯ ಉಗಮ ಸ್ಥಾನ. ಸೂರ್ಯ ಜಗದ ಕಣ್ಣು. ಸೂರ್ಯ ಜಗವನ್ನು ಬೆಳಗುವವನು ಹೌದು. ಅವನ ಆಂತರ್ಯದಲ್ಲಿರುವುದೇ ಪ್ರಬಲವಾದ ಅಗ್ನಿ. ಅಗ್ನಿಯ ಮೊದಲ ಮಗನೇ ಹಿರಣ್ಯ (ಬಂಗಾರ). ಸೂರ್ಯ-ಅಗ್ನಿ-ಬಂಗಾರದ ಸಂಬಂಧ ಹೀಗಿದೆ. ಭಗವದ್ಗೀತೆಯಲ್ಲಿ ಶ್ರೀಕೃಷ್ಣನೇ ವೈಶ್ವಾನರಾಗ್ನಿಯ ರೂಪದಲ್ಲಿ ನಾನು ಎಲ್ಲರ ಹೃದಯದಲ್ಲಿರುತ್ತೇನೆ ಎಂದು. ವಿಸ್ತರಿಸಿ ಅರ್ಥೈಸುವುದಾದರೆ ನಾವು ಬಂಗಾರವನ್ನು ಧರಿಸಿಕೊಂಡಾಗ ನಮ್ಮ ಹೃದಯವಾಸಿಯಾದ ಅಗ್ನಿಯನ್ನು ಅವನ ಮಗ ಹಿರಣ್ಯ (ಬಂಗಾರ)ನಿಂದಲೇ ಅಲಂಕರಿಸದಂತಾಗುವುದು.
ಅಕ್ಷಯವೆಂದರೆ ಕ್ಷಯವಿಲ್ಲದ್ದು, ಕಡಿಮೆ ಇಲ್ಲದ್ದು, ಕ್ಷೀಣವಾಗದ್ದು, ಕೊನೆಯಿಲ್ಲದ್ದು, ನ್ಯೂನವಿಲ್ಲದ್ದು. ಇದು ಸಮದ್ಧಿಯ ಸಂಕೇತ, ಶುಭಾರಂಭದ ದ್ಯೋತಕ, ನಿರಂತತೆಯ ಪ್ರತೀಕ.ಧರ್ಮವು ಕರ್ತವ್ಯವನ್ನು, ಆಧ್ಯಾತ್ಮಿಕತೆಯನ್ನು ಅರ್ಥವು ಸಂಪತ್ತನ್ನು, ಕಾಮವು ಭೌತಿಕ ಸಂತೋಷವನ್ನು ಸೂಚಿಸುವ ಆಕಾಂಕ್ಷೆಗಳನ್ನು ಸಂಕೇತಿಸಿದರೆ, ಮೋಕ್ಷ ಈ ಭವಬಂಧನದಿಂದ ಮುಕ್ತವಾಗಿ ಏಕತ್ವದಲ್ಲಿ ಲೀನವಾಗುವುದರ ಸಂಕೇತವಾಗಿದೆ. ಈ ನಾಲ್ಕು ಪುರುಷಾರ್ಥಗಳ ಪೈಕಿ ಯಾವುದಾದರೊಂದರ ಆರಂಭ ಮಾಡುವುದಿದ್ದರೂ ಅದಕ್ಕೆ ಎಲ್ಲ ರೀತಿಯಿಂದಲೂ ಅನುಕೂಲಕರವಾದ ಶುಭ ದಿನವೇ ಈ ಅಕ್ಷಯ ತೃತೀಯ.

ಅಕ್ಷಯ ತೃತೀಯ ಮಹತ್ವ ಏನು?

ವಿಷ್ಣು ಅಲಂಕಾರ ಪ್ರಿಯ. ಆತನಿಗೆ ಪ್ರಿಯವಾದ ಹೇಮ (ಚಿನ್ನ) ರಜತಾದಿ ಒಡವೆಗಳನ್ನು ಖರೀದಿಸಿ ಅರ್ಪಿಸಿ ಕೃತಾರ್ಥರಾಗುವರು ಭಾರತೀಯ ಆಸ್ತಿಕರು. ವಿಷ್ಣು ಸಹಸ್ರನಾಮದಲ್ಲಿ ಹೇಳಿದಂತೆ ವಿಷ್ಣು ಸುವರ್ಣ ವರ್ಣದವನು. ಮಾತ್ರವಲ್ಲ, ಅಷ್ಟಶ್ವರ್ಯಗಳ ಅಧಿಪತಿ ಕುಬೇರ. ಈ ಒಂದು ದಿನ ಸ್ವತಃ ಐಶ್ವರ್ಯ ದೇವತೆ ಲಕ್ಷ್ಮಿಯನ್ನು ಪೂಜಿಸುತ್ತಾನೆ ಎಂದು ಲಕ್ಷ್ಮೀತಂತ್ರದಲ್ಲಿ ಉಲ್ಲೇಖಿಸಲಾಗಿದೆ. ಹೀಗಾಗಿ ದೈವಭಕ್ತರಿಗೆ ಇದೊಂದೇ ದಿನ ಕುಬೇರ ಲಕ್ಷ್ಮೀ ಪೂಜೆ ಮಾಡಲು ಅವಕಾಶ. ವಿಶೇಷವಾಗಿ ತುಪ್ಪದ ದೀಪ ಹಚ್ಚಿ ಪೂಜಿಸಲಾಗುತ್ತದೆ.

Akshaya Tritium photo

ಪುರಾಣ ಪುಣ್ಯ ಕಥೆಗಳಲ್ಲಿ ಅಕ್ಷಯ ತೃತೀಯದ ವಿಶೇಷತೆ

ಈ ದಿನ ಹಲವು ಮಹತ್ಕಾರ್ಯಗಳು ಶುರುವಾದ ದಿನ ಕೃತಯುಗ (ಸತ್ಯ ಯುಗ) ಶುರುವಾದ ದಿನ ಎಂದು ಹೇಳಲಾಗುತ್ತದೆ. ವೇದವ್ಯಾಸರು ಗಣಪತಿ ಆಶೀರ್ವಾದ ಪಡೆದು ಮಹಾಭಾರತ ಬರೆಯಲು ಪ್ರಾರಂಭಿಸಿದ ದಿನ. ಗಂಗಾ ಮಾತೆ ಕೈಲಾಸದಿಂದ ಭೂಮಿಗೆ ಇಳಿದ ದಿನ ಎಂದು ಹೇಳಲಾಗುತ್ತದೆ. ಈ ದಿನ ಹಲವು ಮಹಾತ್ಮರು ಹುಟ್ಟಿದ ದಿನ ಜಗಜ್ಯೋತಿ ಬಸವಣ್ಣ ಹುಟ್ಟಿದ ದಿನ. ಬಲರಾಮ ಜಯಂತಿ ಅನ್ನೂ ಇಂದು ಆಚರಿಸಲಾಗುತ್ತದೆ. ವಿಷ್ಣು ಪರಶುರಾಮನಾಗಿ ಅವತಾರವೆತ್ತಿದ ದಿನ. ಇನ್ನೂ ಹಲವು ಮಹತ್ ಘಟನೆಗಳು ಈ ದಿನ ನಡೆದಿವೆ ಎಂದು ಪುರಾಣಗಳು ಹೇಳುತ್ತವೆ. ಚಾಮುಂಡೇಶ್ವರಿ ರಾಕ್ಷಸರನ್ನು ಸಂಹರಿಸಿದ ದಿನ. ಪಾಂಡವರು ವನವಾಸದಲ್ಲಿದ್ದಾಗ ಕೃಷ್ಣನ ಆದೇಶದಂತೆ ಸೂರ್ಯನನ್ನು ಪ್ರಾರ್ಥಿಸಿ, ದ್ರೌಪದಿ ಅಕ್ಷಯ ಪಾತ್ರೆಯನ್ನು ಪಡೆದಿದ್ದು ಈ ಅಕ್ಷಯ ತೃತೀಯದ ದಿನವೇ. ಪಾಂಡವರು ತಮ್ಮ ವನವಾಸ, ಅಜ್ಞಾತವಾಸದ ನಂತರ ಶಸ್ತ್ರಾಸ್ತ್ರಗಳನ್ನು ಪುನಃ ಪಡೆದ ದಿನ.
ಈ ದಿನ ವಿಷ್ಣು ಮತ್ತು ಲಕ್ಷ್ಮಿ ಗಂಗಾಸ್ನಾನ ಮಾಡಿ, ಗಂಗೆಯನ್ನು ಪುಜಿಸಿದ್ದರೆಂದು. ಅಂದಿನಿಂದ ಗಂಗಾ ಸ್ನಾನ ಮಾಡಿದರೆ ಸಕಲ ದೋಷ ಪರಿಹಾರವಾಗುತ್ತದೆ ಎಂಬ ರೂಢಿ ಬಂದಿತು ಎಂದು ಹೇಳಲಾಗುತ್ತದೆ. ಕೃಷ್ಣನು ಕುಚೇಲನನ್ನು ಸತ್ಕರಿಸಿದ ಪುಣ್ಯ ದಿನ. ಈ ಎಲ್ಲ ವಿಶೇಷತೆಗಳು ನಡೆದದ್ದು ಈ ಅಕ್ಷಯ ತೃತೀಯ ದಿನದಂದೇ ಎಂದು ಪುರಾಣಗಳ ಕಥೆಗಳು ಹೇಳುತ್ತವೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

ಜ್ಯೋತಿಷ ಶಾಸ್ತ್ರದ ಮೂಲಕ ಅಕ್ಷಯ ತೃತೀಯ

ಅಕ್ಷಯ ತೃತೀಯ ಯಾವ ನಕ್ಷತ್ರದಲ್ಲಿ ಬಂದರೆ ಹೆಚ್ಚು ಶ್ರೇಷ್ಠ?
ಈ ಹಬ್ಬ ‘ತೃತೀಯ ತಿಥಿ’ (ತದಿಗೆಯ ದಿನ) ಯಲ್ಲಿ ಮತ್ತು ‘ವೃಷಭ ರಾಶಿ’ಯ ದಿನ ಆಚರಣೆ ಮಾಡುತ್ತಾರೆ. ಆದರೆ ಈ ವೃಷಭ ರಾಶಿ ಮತ್ತು ತೃತೀಯ ತಿಥಿ ಎರಡೂ ಜೊತೆಯಲ್ಲಿ ಬರುವಾಗ ಅಂದು ಮೂರು ನಕ್ಷತ್ರಗಳಲ್ಲಿ (ಕೃತಿಕಾ, ರೋಹಿಣಿ, ಮೃಗಶಿರ) ಯಾವುದಾದರೊಂದು ಬರುವ ಸಾಧ್ಯತೆ ಇದೆ. ಅಕ್ಷಯ ತೃತೀಯ, ಶುಕ್ಲ ಪಕ್ಷದ ಮೂರನೇ ದಿನ / ತೃತೀಯ ತಿಥಿ ಯಲ್ಲಿ ಬರುತ್ತದೆ.

7 ಗ್ರಹಗಳು 360 ಡಿಗ್ರಿ ವೃತ್ತದ ಯಾವ ಯಾವ ಡಿಗ್ರಿ ಯಲ್ಲಿ ಉಚ್ಚರಾಗಿರುತ್ತಾರೆ.
ಸೂರ್ಯ: ಮೇಷದ 19ನೇ ಡಿಗ್ರಿ (ಅಂದರೆ 18°00′ – 18°59′); (ಪೂರ್ಣ ವೃತ್ತದ 19ನೆ ಡಿಗ್ರಿ)
ಚಂದ್ರ: ವೃಷಭರಾಶಿಯ 3ನೇ ಡಿಗ್ರಿ; (ಪೂರ್ಣ ವೃತ್ತದ 33ನೆ ಡಿಗ್ರಿ);
ಗುರು: ಕಟಕ ರಾಶಿಯ 15ನೆ ಡಿಗ್ರಿ; (ಪೂರ್ಣ ವೃತ್ತದ 105ನೆ ಡಿಗ್ರಿ);
ಬುಧ: ಕನ್ಯಾ ರಾಶಿಯ 15ನೆ ಡಿಗ್ರಿ; (ಪೂರ್ಣ ವೃತ್ತದ 165ನೆ ಡಿಗ್ರಿ);
ಶನಿ: ತುಲಾ ರಾಶಿಯ 21ನೆ ಡಿಗ್ರಿ; (ಪೂರ್ಣ ವೃತ್ತದ 201ನೆ ಡಿಗ್ರಿ);
ಮಂಗಳ: ಮಕರ ರಾಶಿಯ 28ನೆ ಡಿಗ್ರಿ; (ಪೂರ್ಣ ವೃತ್ತದ 298ನೆ ಡಿಗ್ರಿ);
ಶುಕ್ರ: ಕುಂಭ ರಾಶಿಯ 27ನೆ ಡಿಗ್ರಿ; (ಪೂರ್ಣ ವೃತ್ತದ 327ನೆ ಡಿಗ್ರಿ);

ಡಿಗ್ರಿ ಲೆಕ್ಕಾಚಾರ

ಒಂದು ಪೂರ್ಣ ವೃತ್ತ = 360 ಡಿಗ್ರಿ. ಈ 360 ಡಿಗ್ರಿ ವೃತ್ತವನ್ನ 12 (ರಾಶಿಗಳು) ಭಾಗಗಳಾಗಿ ಮಾಡಿದಾಗ ಒಂದೊಂದು ರಾಶಿಗೆ 30 ಡಿಗ್ರಿ ಆಗುತ್ತದೆ. ಈ 360 ಡಿಗ್ರಿ ವೃತ್ತವನ್ನ 27 ನಕ್ಷತ್ರಗಳಿಗೆ ಹಂಚಿದರೆ ಒಂದೊಂದು ನಕ್ಷತ್ರಕ್ಕೆ 13° 20′ ಬರುತ್ತದೆ. 27 ನಕ್ಷತ್ರಗಳನ್ನ 12 ರಾಶಿಗಳಿಗೆ ಹಂಚಿದರೆ ಒಂದೊಂದು ರಾಶಿಗೆ ಎರಡೂವರೆ ನಕ್ಷತ್ರಗಳು ಬರುತ್ತವೆ. ಒಂದು ನಕ್ಷತ್ರದಲ್ಲಿ ನಾಲ್ಕು ಪಾದಗಳಿರುತ್ತವೆ ಹಾಗಾಗಿ ಒಂದೊಂದು ಪಾದ 3° 20′ ಜಾಗವನ್ನಾಕ್ರಮಿಸುತ್ತದೆ.
ಒಂದು ರಾಶಿಗೆ ಎರಡೂವರೆ ನಕ್ಷತ್ರಗಳಾದ್ದರಿಂದ ಮತ್ತು ಒಂದು ನಕ್ಷತ್ರಕ್ಕೆ 4 ಪಾದಗಳಾದ್ದರಿಂದ ಒಂದು ರಾಶಿಗೆ 9 ಪಾದಗಳು. ಇದು 13° 20′ ಆಗುತ್ತದೆ. ಉದಾಹರಣೆ: ಮೇಷರಾಶಿಯಲ್ಲಿನ 10 ಪಾದ (ಎರಡೂವರೆ ನಕ್ಷತ್ರ) ಗಳು = 4 ಅಶ್ವಿನಿ + 4 ಭರಣಿ + 2 ಕೃತ್ತಿಕಾ = 4×3° 20′ + 4×3° 20’+ 1×3° 20′ = 30ಡಿಗ್ರಿ

ಉದಾಹರಣೆಯಲ್ಲಿ ಹೇಳಿದಂತೆ

  • ಅಶ್ವಿನಿ ಭರಣಿ ಕೃತ್ತಿಕಾ ಪಾದಂ ಮೇಷಃ। ಎಂಬುದು ಹೀಗೆ ಏಲ್ಲಾ ನಕ್ಷತ್ರ ಹಾಗೂ ದ್ವಾದಶ ರಾಶಿಗಳಿಗೂ ಸಹ ಈ ರೀತಿಯಾದ ಶ್ಲೋಕಗಳು ಇವೆ.
  • ಮೇಷ ರಾಶಿಯಲ್ಲಿ ಅಶ್ವಿನಿ ನಕ್ಷತ್ರ, ಭರಣಿ ನಕ್ಷತ್ರ ಮತ್ತು ಕೃತ್ತಿಕಾದ ಮೊದಲ ಪಾದ ಬರುತ್ತವೆ. ವೃಷಭ ರಾಶಿಯಲ್ಲಿ ಕೃತಿಕಾ ನಕ್ಷತ್ರದ ಮೂರು ಮತ್ತು ನಾಲ್ಕನೇ ಪಾದಗಳು ಮತ್ತು ರೋಹಿಣಿ, ಮೃಗಶಿರ ನಕ್ಷತ್ರಗಳು ಬರುತ್ತವೆ. ನಾವು ಮಾತಿನಲ್ಲಿ ಸೂರ್ಯ ಮೇಷರಾಶಿಯಲ್ಲಿ ಉಚ್ಚನಾಗಿರುತ್ತಾನೆ ಅಂತ ಹೇಳಿದರೂ, ಇನ್ನೂ ಆಳಕ್ಕಿಳಿದು ನೋಡಿದರೆ ಈ ಸೂರ್ಯ ಮೇಷ ರಾಶಿಯ ಭರಣಿ ನಕ್ಷತ್ರ (13° 20′ ರಿಂದ 26° 40′) ದಲ್ಲಿ ಮಾತ್ರ ನಿಜವಾಗಿ ಉಚ್ಚ (19 ಡಿಗ್ರಿ – ಭರಣಿ 3 ನೆ ಪಾದ) ನಾಗಿರುತ್ತಾನೆ ಅಂತ ತಿಳಿಯುತ್ತದೆ.
  • ಸರಳೀಕರಿಸಿ ನಾವು ಚಂದ್ರನು ವೃಷಭರಾಶಿಯಲ್ಲಿ ಉಚ್ಚನಾಗಿರುತ್ತಾನೆ ಅಂತ ಹೇಳಿದರೂ ಸಹ, ಸರಿಯಾಗಿ ಲೆಕ್ಕ ಹಾಕಿದರೆ ಈ ಚಂದ್ರ ವೃಷಭ ರಾಶಿಯ ಕೃತಿಕಾ ನಕ್ಷತ್ರದ 3 ನೇ ಪಾದದಲ್ಲಿ ತನ್ನ ನಿಜ ಉಚ್ಚ ಸ್ಥಾನದಲ್ಲಿರುತ್ತಾನೆ.
  • ಇನ್ನೊಂದು ಪುರಾಣ ಕತೆಯ ಮೂಲಕ ಯೋಚನೆ ಮಾಡೋದಾದರೆ, ಚಂದ್ರನಿಗೆ 27 ಜನ ( ಇವೇ 27 ನಕ್ಷತ್ರಗಳು) ಹೆಂಡತಿಯರು ಅನ್ನುತ್ತಾರೆ. ಚಂದ್ರ ತನ್ನ ಪ್ರತಿ ಹೆಂಡತಿಯ ಜೊತೆ ಒಂದೊಂದು ದಿನ ಇರುತ್ತಾನೆ ಎನ್ನುವ ಕತೆ ಇದು. ಈ 27 ಹೆಂಡತಿಯರಲ್ಲಿ ರೋಹಿಣಿ ಚಂದ್ರನಿಗೆ ಪ್ರಿಯವಾದ ಹೆಂಡತಿ ಅಂತೆ. ಹಾಗಾಗಿ ಕೆಲ ಕತೆಗಳು ರೋಹಿಣಿ ನಕ್ಷತ್ರದ ದಿನ ಬಂದರೆ (ಅಂದರೆ ಚಂದ್ರ ರೋಹಿಣಿ ನಕ್ಷತ್ರದಲ್ಲಿದ್ದಾಗ) ಅಕ್ಷಯ ತೃತೀಯ ಹೆಚ್ಚು ಶ್ರೇಷ್ಠ ಅನ್ನುವ ನಂಬಿಕೆ ಹೊಂದಿದ್ದಾರೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯದಂದು ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವುದು?

ಮಾಡುವ ಕೆಲಸಕ್ಕೆ ಶುಭ ಫಲ

ಅಕ್ಷಯ ತೃತೀಯ ದಿನದಂದು ಈ ಶುಭ ಮುಹೂರ್ತದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡಿದರೆ ಅದರಿಂದ ನೀವು ಶುಭ ಫಲವನ್ನು ಪಡೆದುಕೊಳ್ಳುವಿರಿ. ಅಕ್ಷಯ ತೃತೀಯದಂದು ರೂಪುಗೊಳ್ಳುವ ಈ ಶುಭ ಸಂಯೋಗವು ನಿಮ್ಮ ಜೀವನದಲ್ಲಿ ಶುಭವನ್ನೇ ತರುತ್ತದೆ. ಅಕ್ಷಯ ತೃತೀಯದಂದು ಶುಭಕಾರ್ಯಗಳನ್ನು ಮಾಡಿದರೆ ಹಾಗೂ ದಾನ ಮಾಡಿದರೆ ಹೆಚ್ಚಿನ ಪ್ರತಿಫಲ ಉಂಟಾಗುವುದೆಂಬ ಪ್ರತೀತಿಯಿದೆ. ನಮ್ಮ ಹೆಣ್ಣುಮಕ್ಕಳು ಒಡವೆಯನ್ನು ಖರೀದಿಸಲು ತುಂಬಾ ಇಷ್ಟ ಪಡುತ್ತಾರೆ. ಏಕೆಂದರೆ ಅದು ಕೂಡ ಅಪತ್ಕಾಲಕ್ಕೆ ನೆರವಾಗುವ ಆಸ್ತಿಯಲ್ಲವೇ.!? ಹಾಗೇ ಹೆಣ್ಣಿನ ಸೌಂದರ್ಯದ ಮತ್ತು ಹೆಮ್ಮೆಯ ಪ್ರತೀಕ ಈ ಒಡವೆ. ಅಲ್ಲದೇ ಈ ನಂಬಿಕೆ ತಲಾಂತರಗಳಿಂದ ಇಷ್ಟು ಗಟ್ಟಿಯಾಗಿ ಜನರು ನಂಬಿಕೊಂಡು ಬಂದಿದ್ದಾರೆಂದರೆ ಏನು ಅರ್ಥ? ಆ ದಿನದ ಮಹಿಮೆಯಿಂದ ನಂಬಿದವರ ಜೀವನದಲ್ಲಿ ಒಳ್ಳೆಯದು ಆಗಿದೆ ಎಂದೇ ಅರ್ಥ, ಅಲ್ಲವೇ? ನಮ್ಮ ಭಾರತೀಯ ಪಂಚಾಂಗ ಸುಮ್ಮನೆ ಬಂದಿಲ್ಲ ಅದು ಒಂದು ವಿಜ್ಞಾನ ಎನ್ನುವುದಕ್ಕೆ ಇದು ಕೂಡ ಒಂದು ಸಾಕ್ಷಿ. ಈ ರೀತಿಯಾದ ವೈಜ್ಞಾನಿಕ ಸಂತ್ಯಾಂಶವುಳ್ಳ ಅಕ್ಷಯ ತೃತೀಯ ನಾಡಿನ ಜನತೆಗೆ ಮಾತ್ರವಲ್ಲದೆ ಇಡೀ ವಿಶ್ವಕ್ಕೆ ಉಜ್ವಲತೆಯನ್ನು, ಎಲ್ಲ ಜೀವಿಗಳಿಗೂ ಹಚ್ಚ ಹಸುರಾದ ಸುಖ ಶಾಂತಿಯನ್ನು ನೀಡುವಂತಹ ಪುಣ್ಯಮಯವಾದ ಮಹಾನ್ ಪರ್ವವಾಗಲಿ ಎಂದು ಪ್ರಾರ್ಥಿಸುತ್ತಾ ಈ ರೀತಿಯಾಗಿ ನಾವೇಲ್ಲರೂ
ಅಕ್ಷಯ ತೃತೀಯ ದಿನದ ನಿಜ ಅರ್ಥವನ್ನು ತಿಳಿದು ಆಚರಿಸೋಣ ಸಂಭ್ರಮಿಸೋಣ.
ಲೋಕಾಃ ಸಮಸ್ತಾಃ ಸುಖಿನೋ ಭವಂತು.

Continue Reading

ಧಾರ್ಮಿಕ

Basava Jayanti 2024: ಬದುಕಿನ ಪಾಠ ಕಲಿಸುವ ಬಸವಣ್ಣನ 10 ವಚನಗಳಿವು

12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಜನ್ಮ ದಿನದ (Basavanna jayanti) ಈ ಶುಭ ಸಂದರ್ಭದಲ್ಲಿ ಅವರ ಕೆಲವು ವಚನಗಳ ಸಾಲುಗಳ ಸಾರವನ್ನು ತಿಳಿದುಕೊಳ್ಳುವ, ಈ ಮೂಲಕ ಎಲ್ಲರ ಬದುಕಿನಲ್ಲೂ ಅಳವಡಿಸಿಕೊಳ್ಳಲು ಪ್ರೇರಣೆಯಾಗಲಿ ಎಂಬ ಉದ್ದೇಶ ಇಲ್ಲಿದೆ. ಬಸವಣ್ಣ ಅವರ ಹತ್ತು ವಚನಗಳು ಮತ್ತು ಅವುಗಳ ಸಾರ ಇಲ್ಲಿದೆ.

VISTARANEWS.COM


on

By

Basavanna jayanti
Koo

12ನೇ ಶತಮಾನದಲ್ಲಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದ ಸಮಾಜ ಸುಧಾರಕರೂ ಆಗಿದ್ದ ಬಸವಣ್ಣ (Basavanna jayanti) ಸಾವಿರಾರು ವಚನಗಳ (vachana) ಸೃಷ್ಟಿಕಾರರು. ಶಿವ ಕೇಂದ್ರೀಕೃತ ಭಕ್ತಿ ಚಳವಳಿ ನಡೆಸಿದ ಇವರು ತಮ್ಮ ವಚನಗಳ ಮೂಲಕ ಸಾಮಾಜಿಕ ಅರಿವನ್ನು ಮೂಡಿಸಿದರು.

1130ರಲ್ಲಿ ಕರ್ನಾಟಕದ ಈಗಿನ ಬಿಜಾಪುರ (bijapur) ಜಿಲ್ಲೆಯ ಬಸವನ ಬಾಗೇವಾಡಿ (basavana bagewadi) ಗ್ರಾಮದಲ್ಲಿ ಮಾದರಸ ಮತ್ತು ಮಾದಲಾಂಬಿಕೆ ದಂಪತಿಯ ಮಗನಾಗಿ ಜನಿಸಿದ ಬಸವಣ್ಣ ಶಿವನ ಭಕ್ತಿ ಮತ್ತು ಸಾಮಾಜಿಕ ಸಮಾನತೆಗೆ ಒತ್ತು ನೀಡಿರುವ ವಿಶಿಷ್ಟ ತತ್ತ್ವವನ್ನು ಸಾರಿದರು. ಇವರ ಹತ್ತು ಪ್ರಮುಖ ವಚನಗಳ ಸಾಲು ಮತ್ತು ಅದರ ಸಾರ ಇಲ್ಲಿದೆ.

ವಚನ 1: ತನಗೆ ಮುನಿವರಿಗೆ ತಾ ಮುನಿಯಲೇಕಯ್ಯಾ

ತನಗಾದ ಆಗೇನು ಅವರಿಗಾದ ಚೇಗೆಯೇನು

ತನುವಿನ ಕೋಪ ತನ್ನ ಹಿರಿತನದ ಕೇಡು

ಮನದ ಕೋಪ ತನ್ನ ಅರಿವಿನ ಕೇಡು,

ಮನೆಯೊಳಗಿನ ಕಿಚ್ಚು ಮನೆಯ ಸುಟ್ಟಲ್ಲದೆ

ನೆರೆಮನೆಯ ಸುಡದು ಕೂಡಲ ಸಂಗಮ ದೇವಾ.
ಸಾರ: ನಮ್ಮೊಂದಿಗೆ ಯಾರಾದರೂ ಮುನಿಸಿಕೊಂಡರೆ ನಾವೇಕೆ ಅವರೊಂದಿಗೆ ಮುನಿಸಿಕೊಳ್ಳಬೇಕು? ಇದರಿಂದ ಅವರಿಗೂ, ನಮಗೂ ಯಾವುದೇ ಲಾಭವಿಲ್ಲ. ಮನದ ಕೋಪ ನಮ್ಮ ವಿವೇಕವನ್ನು ಹಾಳು ಮಾಡುವುದು ಎಂಬುದು ಇದರ ಸಾರ.

ವಚನ 2. ಹಬ್ಬಕ್ಕೆ ತಂದ ಹರಕೆಯ ಕುರಿ

ತೋರಣಕ್ಕೆ ತಂದ ತಳಿರ ಮೇಯಿತ್ತು

ಕುಂಡ ಹರೆಂಬುದ ನರಿಯದ ಬೆಂದ ಒಡಲ

ಹೊರೆವುತ್ತಲದೆ ಅದಂದೆ ಹುಟ್ಟಿತ್ತು ಅದಂದೆ ಹೊಂದಿತ್ತು

ಕೊಂದವರುಳಿವರೇ ಕೊಡಲಸಂಗಮ ದೇವಾ.
ಸಾರ: ತಾನು ಶಾಶ್ವತ ಎಂಬ ಭ್ರಮೆಯಲ್ಲಿ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಅಮಾಯಕ ಜೀವವನ್ನು ಬಲಿ ಕೊಡುತ್ತಾನೆ. ಅದನ್ನು ಖಂಡಿಸಿರುವ ಅವರು ಹಿಂಸೆಯನ್ನು ವಿರೋಧಿಸಿ ಎಲ್ಲರೂ ಸಜ್ಜನರಾಗಬೇಕು.

ವಚನ 3: ಸಾರ ಸಜ್ಜನರ ಸಂಗ ಲೇಸು ಕಣಯ್ಯಾ

ದೂರ ದುರ್ಜನರ ಸಂಗವದು ಭಂಗವಯ್ಯಾ

ಸಂಘವೆರಡುಂಟು ಒಂದು ಹಿಡಿ ಒಂದು ಬಿಡು

ಮಂಗಳಮೂರ್ತಿ ನಮ್ಮ ಕೂಡಲ ಸಂಗನ ಶರಣರ
ಸಾರ: ಒಳ್ಳೆಯವರ ಸಹವಾಸ ಮಾಡಿದರೆ ಒಳ್ಳೆಯದು, ಕೆಟ್ಟವರ ಸಹವಾಸದಿಂದ ಅವಮಾನ ಸಿಗುತ್ತದೆ. ಈ ಎರಡರಲ್ಲಿ ನಮಗೇನು ಬೇಕು ಎಂಬುದನ್ನು ನಾವೇ ಆಯ್ಕೆ ಮಾಡಿಕೊಳ್ಳಬೇಕು.

ವಚನ 4. ಆಚಾರವರಿಯಿರಿ, ವಿಚಾರವರಿಯಿರಿ

ಜಂಗಮ ಸ್ಥಳ, ಲಿಂಗ ಕಾಣಿರಯ್ಯಾ,

ಜಾತಿ, ಭೇದವಿಲ್ಲ, ಸೂತಕವಿಲ್ಲ, ಅಜಾತಂಗೆ ಕುಲವಿಲ್ಲ,

ನುಡಿದಂತೆ ನಡೆಯದಿದ್ದರೆ ಕೂಡಲ ಸಂಗಮ ಮೆಚ್ಚ ಕಾಣಿರಯ್ಯಾ
ಸಾರ: ಒಳ್ಳೆಯ ಸಂಪ್ರದಾಯವನ್ನು ಅರಿತು ವಿವೇಕವನ್ನು ತಿಳಿಯಬೇಕು. ದೇವರಿಗೆ ಜಾತಿ ಭೇದ ಮೈಲಿಗೆಯ ಭೇದವಿಲ್ಲ. ಜನನ ಮರಣವಿಲ್ಲದ ದೇವರಿಗೆ ಕುಲವಿಲ್ಲ. ಮಾತನಾಡಿದಂತೆ ನಡೆಯದಿದ್ದರೆ ಅವನು ಮೆಚ್ಚುವುದಿಲ್ಲ ಎನ್ನುತ್ತಾರೆ ಬಸವಣ್ಣ .

ವಚನ 5: ಆಯುಷ್ಯ ತೀರಿದಲ್ಲದೆ ಮರಣವಿಲ್ಲ

ಭಾಷೆ ತಪ್ಪಿದಲ್ಲದೆ ದಾರಿದ್ರ್ಯವಿಲ್ಲ

ಅಂಜಲದೇಕೋ ಲೋಕ ವಿಗರ್ಭಣೆಗೆ

ಅಂಜಲದೇಕೋ ಕೊಡಲ ಸಂಗಮ ನಿಮ್ಮಾಳಾಗಿ
ಸಾರ: ಆಯುಷ್ಯ ಮುಗಿಯದೆ ಮರಣ ಬರುವುದಿಲ್ಲ, ಮಾತು ತಪ್ಪಿದರೆ ಮಾತ್ರ ದಾರಿದ್ರ್ಯ ಉಂಟಾಗುತ್ತದೆ. ದೇವರ ಸೇವಕನಾಗಿ ಲೋಕದ ಭಯೋತ್ಪಾದಕತೆಗೆ ನಾನೇಕೆ ಇಳಿಯಲಿ ಎಂಬ ಅರ್ಥವಿದೆ.


ವಚನ 6: ನೆಲಗೊಂದೆ ಹೊಲಗೇರಿ ಶಿವಾಲಯಕ್ಕೆ,

ಜಲವೊಂದೆ ಶೌಚಾಚಮನಕ್ಕೆ

ಕುಲವೊಂದೆ ತನ್ನತಾನರಿದವಂಗೆ

ಫಲವೊಂದೆ ಷಡುದರುಶನ ಮುಕ್ತಿಗೆ

ನಿಲವೊಂದೆ ನಿಮ್ಮನರಿದವಂಗೆ ಕೂಡಲಸಂಗಮ ದೇವಾ
ಸಾರ: ದೇವಸ್ಥಾನ ಮತ್ತು ಹೊಲಗೇರಿಯವರಿಗೆ ಭೂಮಿ ಒಂದೇ ಆಗಿದೆ. ಸ್ನಾನ ಮತ್ತು ತಪಸ್ಸು ಮಾಡಲು ನೀರು ಕೂಡ ಒಂದೇ ಆಗಿದೆ. ವಿಮೋಚನೆಯು ಎಲ್ಲಾ ಆಲೋಚನೆಗಳ ಅಂತಿಮ ಗುರಿಯಾಗಿದೆ. ಪ್ರಭುವನ್ನು ತಿಳಿದವನಿಗೆ ವಾಸಸ್ಥಾನ ಎಲ್ಲಿದ್ದರೂ ಒಂದೇ ಆಗಿರುತ್ತದೆ.

ವಚನ 7: ನುಡಿದರೆ ಮುತ್ತಿನ ಹಾರದಂತಿರಬೇಕು

ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು

ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು

ನುಡಿದರೆ ಲಿಂಗ ಮೆಚ್ಚಿ ಹೌದೌದು ಎನಬೇಕು

ನುಡಿಯೊಳಗಾಗಿ ನಡೆಯದಿದ್ದರೆ ಕೂಡಲ ಸಂಗಮ ಮನೆಂತೊಲಿವನಯ್ಯಾ ?
ಸಾರ: ನಾವಾಡುವ ಮಾತು ಸರಳ ಮತ್ತು ಸುಲಲಿತವಾಗಿರಬೇಕು. ಆಡಿದ ಮಾತಿನಂತೆ ನಡೆಯದಿದ್ದರೆ ದೇವರು ಮೆಚ್ಚುವುದಿಲ್ಲ ಎನ್ನುತ್ತಾರೆ ಬಸವಣ್ಣ.

ವಚನ 8: ಮಾರಿ ಮಸಣಿ ಎಂಬವು ಬೇರಿಲ್ಲ ಕಾಣಿರೋ

ಮಾರಿ ಎಂಬುದೇನು ಕಂಗಳು ತಪ್ಪಿ ನೋಡಿದರೆ

ಮಾರಿ ನಾಲಿಗೆ ತಪ್ಪಿ ನುಡಿದರೆ

ಮಾರಿ ನಮ್ಮ ಕೂಡಲ ಸಂಗಮ ದೇವರ ನೆನಹ

ಮರೆದಡೆ ಮಾರಿ ಕಾಣಿರೋ
ಸಾರ: ಮೃತ್ಯು, ರುದ್ರ ದೇವರೆಂಬುವವರು ಬೇರೆ ಯಾರೂ ಇಲ್ಲ. ಕೆಟ್ಟ ದೃಶ್ಯ, ಮಾತು, ದುರಾಚಾರ ಮಾಡಿದರೆ ಇದ್ದರೂ ಸತ್ತಂತೆಯೇ ಸರಿ.

ವಚನ 9: ಬೇವಿನ ಬೀಜವ ಬಿತ್ತಿ ಬೆಲ್ಲದ ಕಟ್ಟಿಯ ಕಟ್ಟಿ

ಆಕಳ ಹಾಲನೆರೆದು ಜೇನು ತುಪ್ಪವ ತೋಯ್ದೆಡೆ

ಸಿಹಿಯಾಗಬಲ್ಲುದೆ ಕಹಿಯಹುದಲ್ಲದೆ

ಶಿವಭಕ್ತರಲ್ಲದವರ ಕೊಡೆ ನುಡಿಯಲಾಗದು

ಕೂಡಲ ಸಂಗಮ ದೇವಾ
ಸಾರ: ಬೇವಿನ ಬೀಜವನ್ನು ಹಾಕಿ ಅದರಲ್ಲಿ ಸಿಹಿಯಾದ ಹಣ್ಣು ಸಿಗಬೇಕು ಎಂದು ಬಯಸಲು ಸಾಧ್ಯವಿದೆಯೇ ಎಂಬುದನ್ನು ಬಸವಣ್ಣನವರು ಇಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: Vijayanagara News: ಅಕ್ಷತ್ತದಿಗಿ ಅಮವಾಸ್ಯೆ; ಶ್ರೀ ಗುರು ಕೊಟ್ಟೂರೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು

ವಚನ 10: ವೇದವ ಓದಿದರೇನು ಶಾಸ್ತ್ರವ ಕೇಳಿದಡೇನಯ್ಯಾ

ಜಪವ ಮಾಡಿದಡೇನು ತಪವ ಮಾಡಿದಡೇನಯ್ಯಾ

ಏನು ಮಾಡಿದಡೇನು ನಮ್ಮ ಕೂಡಲ ಸಂಗಯ್ಯನ ಮನ ಮುಟ್ಟದನ್ನಕ್ಕ
ಸಾರ: ವೇದ ಓದಿ, ಶಾಸ್ತ್ರಗಳನ್ನು ಮಾಡಿ ದೇವರನ್ನೇ ಅದು ಮುಟ್ಟದಿದ್ದರೆ ಎಲ್ಲವೂ ವ್ಯರ್ಥ ಎಂಬುದನ್ನು ಹೇಳಿರುವ ಬಸವಣ್ಣ ನಮ್ಮ ಭಕ್ತಿ ಹೇಗಿರಬೇಕು ಎನ್ನುವುದನ್ನು ಹೇಳುತ್ತಾರೆ.

Continue Reading
Advertisement
K S Rajanna
ದೇಶ43 mins ago

K.S. Rajanna: ಛಲಬಿಡದ ಸಾಧಕನಿಗೆ ಪದ್ಮಶ್ರೀ ಗರಿ; ಅಂಗವೈಕಲ್ಯ ಮೆಟ್ಟಿನಿಂತ ಕನ್ನಡಿಗನಿಗೆ ದೇಶದ ನಮನ- ವೀಡಿಯೋ ವೈರಲ್‌

Viral News
ಕ್ರೈಂ60 mins ago

ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ; ಹಾಡ ಹಗಲೇ ಯುವತಿಗೆ ಅನ್ಯಕೋಮಿನ ಯುವಕರಿಂದ ಕಿರುಕುಳ

CAA
ದೇಶ2 hours ago

CAA: ಕೇಂದ್ರ ಸೂಚನೆ ಕೊಟ್ಟ ಕೂಡಲೇ ಮಧ್ಯಪ್ರದೇಶದಲ್ಲಿ ಸಿಎಎ ಜಾರಿ; ಸಿಎಂ ಮೋಹನ್‌ ಯಾದವ್‌

Heavy Rain
ಕರ್ನಾಟಕ2 hours ago

Heavy Rain: ಬೆಂಗಳೂರಿನಲ್ಲಿ ಮಳೆಯ ಅಬ್ಬರ; ಹಲವೆಡೆ ರಸ್ತೆಯಲ್ಲೇ ಹರಿದ ನೀರು, ಸಂಚಾರ ಅಸ್ತವ್ಯಸ್ತ

Dharwad News
ಕ್ರೈಂ2 hours ago

Dharwad News: ರಥೋತ್ಸವ ವೇಳೆ ದುರಂತ; ರಥದ ಚಕ್ರಕ್ಕೆ ಸಿಲುಕಿ ಭಕ್ತ ಸಾವು

cyber crime
ದೇಶ2 hours ago

Cyber crime: ದೇಶಾದ್ಯಂತ 28,000ಕ್ಕೂ ಹೆಚ್ಚು ಮೊಬೈಲ್‌ ಫೋನ್‌ಗಳು ಬ್ಲಾಕ್‌!

Murder Case
ಕ್ರೈಂ3 hours ago

Murder Case: ಕೊಡಗಿನಲ್ಲಿ ಬಾಲಕಿಯ ರುಂಡ ಕತ್ತರಿಸಿದ್ದ ಆರೋಪಿಯ ಬಂಧನ

karnataka Weather Forecast
ಮಳೆ4 hours ago

Karnataka Weather : ವಾರಾಂತ್ಯದಲ್ಲಿ ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಅಬ್ಬರ

Joe Biden
ಸಂಪಾದಕೀಯ4 hours ago

ವಿಸ್ತಾರ ಸಂಪಾದಕೀಯ: ಭಾರತದ ಚುನಾವಣೆಯಲ್ಲಿ ಅಮೆರಿಕದ ಹಸ್ತಕ್ಷೇಪ ಖಂಡನೀಯ

Cotton Candy
ಆರೋಗ್ಯ4 hours ago

Cotton Candy: ಕಾಟನ್‌ ಕ್ಯಾಂಡಿ ಯಾಕೆ ಎಷ್ಟೊಂದು ಅಪಾಯಕಾರಿ ಗೊತ್ತೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ20 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ21 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ23 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌