vistara top 10 news seer stops urigowda nanjegowda cinema to congress fourth guarantee and more newsವಿಸ್ತಾರ TOP 10 NEWS: ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್‌ನಿಂದ, ಕಾಂಗ್ರೆಸ್‌ 4ನೇ ಗ್ಯಾರಂಟಿ ಘೋಷಣೆವರೆಗಿನ ಪ್ರಮುಖ ಸುದ್ದಿಗಳಿವು - Vistara News

ಕರ್ನಾಟಕ

ವಿಸ್ತಾರ TOP 10 NEWS: ಉರಿಗೌಡ-ನಂಜೇಗೌಡ ಸಿನಿಮಾಕ್ಕೆ ಬ್ರೇಕ್‌ನಿಂದ, ಕಾಂಗ್ರೆಸ್‌ 4ನೇ ಗ್ಯಾರಂಟಿ ಘೋಷಣೆವರೆಗಿನ ಪ್ರಮುಖ ಸುದ್ದಿಗಳಿವು

ದೇಶ, ವಿದೇಶ, ರಾಜ್ಯದಲ್ಲಿ ದಿನಪೂರ್ತಿ ನಡೆದ ಘಟನಾವಳಿಗಳಲ್ಲಿ ಆಯ್ದ ಪ್ರಮುಖ ಸುದ್ದಿಗಳು ವಿಸ್ತಾರ TOP 10 NEWS ನಲ್ಲಿ.

VISTARANEWS.COM


on

vistara top 10 news seer stops urigowda nanjegowda cinema to congress fourth guarantee and more news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

1. Tippu sultan: ಉರಿಗೌಡ, ನಂಜೇಗೌಡ ಕುರಿತ ಚರ್ಚೆ ತಕ್ಷಣ ನಿಲ್ಲಿಸಿ: ನಿರ್ಮಲಾನಂದನಾಥ ಸ್ವಾಮೀಜಿ ಫರ್ಮಾನು
ಟಿಪ್ಪು ಸುಲ್ತಾನನನ್ನು ಕೊಂದಿದ್ದು ಉರಿ ಗೌಡ ಮತ್ತು ನಂಜೇಗೌಡರೆಂಬ (Uri gowda and Nanjegowda) ಒಕ್ಕಲಿಗ ಯೋಧರು ಎಂಬ ಬಿಜೆಪಿ ನಾಯಕರ ಪ್ರಚಾರಕ್ಕೆ ಹಿನ್ನಡೆಯುಂಟಾಗಿದೆ. ಇಂಥ ಕಾಲ್ಪನಿಕವಾದ, ಇದುವರೆಗೆ ಯಾವುದೇ ದಾಖಲೆಗಳು ಸಿಗದ ವಾದವನ್ನು ಮುಂದಿಟ್ಟುಕೊಂಡು ಒಕ್ಕಲಿಗ ಯೋಧರ ಹೆಸರಿನಲ್ಲಿ ರಾಜಕೀಯ ಮಾಡಬಾರದು ಎಂಬ ಸ್ಪಷ್ಟ ಸಂದೇಶವನ್ನು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾಗಿರುವ ಶ್ರೀ ನಿರ್ಮಲಾನಂದನಾಥ ಸ್ವಾಮಿ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.
ಹೆಚ್ಚಿನ ಓದಿಗಾಗಿ: Tipu sultan: ನನಗೆ ಮಾಜಿ ಪ್ರಧಾನಿ ದೇವೇಗೌಡ ಗೊತ್ತಿದೆ; ಉರಿಗೌಡ, ನಂಜೇಗೌಡ ಯಾರೆಂದು ಗೊತ್ತೇ ಇಲ್ಲ: ಡಾ.ಕೆ. ಸುಧಾಕರ್‌

2. Congress Guarantee: ಯುವಕರಿಗೆ ಕಾಂಗ್ರೆಸ್‌ನ 4 ನೇ ಗ್ಯಾರಂಟಿ: ಪದವೀಧರರಿಗೆ ʼಯುವ ನಿಧಿʼ; ಮಾಸಿಕ 3 ಸಾವಿರ ರೂ.
ಚುನಾವಣೆ ಸಮೀಪವಾಗುತ್ತಿರುವಂತೆ ತನ್ನ ನಾಲ್ಕನೇ ಗ್ಯಾರಂಟಿ ಯೋಜನೆಯನ್ನು (Congress Guarantee) ಕಾಂಗ್ರೆಸ್‌ ಘೋಷಣೆ ಮಾಡಿದೆ. ಯುವ ಕ್ರಾಂತಿ ಸಮಾವೇಶದಲ್ಲಿ ನಾಲ್ಕನೇ ಗ್ಯಾರಂಟಿ ಯೋಜನೆ ʼಯುವ ನಿಧಿʼಯನ್ನು ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಎಲ್ಲ ಕಾಂಗ್ರೆಸ್‌ ನಾಯಕರೂ ಘೋಷಿಸಿದರು. ಈ ಗ್ಯಾರಂಟಿ ಯೋಜನೆಯ ಪ್ರಕಾರ ಕರ್ನಾಟಕದ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ ಮಾಸಿಕ 1,500 ರೂ. ನೀಡುವುದಾಗಿ ಘೋಷಣೆ ಮಾಡಲಾಯಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

3. Public Exam : 5, 8ನೇ ತರಗತಿ ಪಬ್ಲಿಕ್‌ ಪರೀಕ್ಷೆ ಗ್ರೀನ್‌ ಸಿಗ್ನಲ್‌ ವಿರುದ್ಧ ಸುಪ್ರೀಂಗೆ ಮೇಲ್ಮನವಿ; 27ಕ್ಕೆ ವಿಚಾರಣೆ, ತಡೆ ನೀಡುವುದು ಡೌಟ್‌?
ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ರಾಜ್ಯ ಮಟ್ಟದ ಮೌಲ್ಯಾಂಕನ (ಪಬ್ಲಿಕ್‌ ಪರೀಕ್ಷೆ-Public Exam) ನಡೆಸಲು ಅವಕಾಶ ನೀಡಿರುವ ರಾಜ್ಯ ಹೈಕೋರ್ಟ್‌ನ ಆದೇಶದ ವಿರುದ್ಧ ಸುಪ್ರಿಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಸೋಮವಾರ ಸಲ್ಲಿಸಲಾದ ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರ ಪೀಠ ವಿಚಾರಣೆಗೆ ಸ್ವೀಕರಿಸಿದೆ. ಎರಡೂ ತರಗತಿಗಳಿಗೆ ಪರೀಕ್ಷೆ ಆರಂಭವಾಗಲಿರುವ ಮಾರ್ಚ್‌ 27ರಂದೇ ಇದರ ವಿಚಾರಣೆಯನ್ನೂ ನಿಗದಿ ಮಾಡಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

4. PM Narendra Modi: ಚೀನಿಯರಿಗೂ ಮೋದಿ ಇಷ್ಟ, ಅವರನ್ನು ಯಾವ ಅಡ್ಡ ಹೆಸರಿನಿಂದ ಕರೆಯುತ್ತಾರೆ?
ಜಾಗತಿಕ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ನರೇಂದ್ರ ಮೋದಿ(PM Narendra Modi) ಅವರು, ಚೀನಾದ ಜನರಿಗೂ ಇಷ್ಟ. ವಿಶೇಷವಾಗಿ ನೆಟಿಜನ್ಸ್‌ಗೆ ಮೋದಿ ಅಂದರೆ ಅಚ್ಚುಮೆಚ್ಚು. ಚೀನಾ ಮತ್ತು ಭಾರತದ ನಡುವೆ ಗಡಿ ಗಲಾಟೆಯ ನಡುವೆಯೂ ಚೀನಿ ನೆಟಿಜನ್ಸ್‌ಗೆ ಮೋದಿ ಇಷ್ಟವಾಗಿದ್ದಾರೆ. ಅಮೆರಿಕ ಮೂಲದ ಸ್ಟ್ರಾಟೆಜಿಕ್ ಅಫೇರ್ಸ್ ಮ್ಯಾಗ್‌ಜಿನ್ ದಿ ಡಿಪ್ಲೋಮ್ಯಾಟ್ (The Diplomat) ಪ್ರಕಟಿಸಿರುವ ವರದಿಯಲ್ಲಿ ಈ ಮಾಹಿತಿ ಇದೆ. ಚೀನಿ ನೇಚಿಜನ್ಸ್ ಅವರು ಮೋದಿ ಅವರನ್ನ ಮೋದಿ ಲಾವೋಕ್ಸಿಯನ್ (Modi Laoxian) ಎಂದು ಕರೆಯುತ್ತಾರೆ. ಅಂದರೆ, ಮೋದಿ ಅಮರ ಎಂದಾಗುತ್ತದೆ! ಇದು ಚೀನಿಯರು ಮೋದಿಗೆ ಇಟ್ಟಿರುವ ನಿಕ್ ನೇಮ್. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

5. Cyber Crime : ಯುಪಿಐ ಮೂಲಕ ಹಣ ಕಳಿಸಿ, ಬ್ಯಾಂಕ್‌ ಖಾತೆಗೇ ಕನ್ನ! ಹೊಸ ಮಾದರಿ ವಂಚನೆ ಬಗ್ಗೆ ಇರಲಿ ಎಚ್ಚರ
ಹೊಸ ಬಗೆಯ ಸೈಬರ್‌ ಅಪರಾಧ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಜನತೆ ಇದರ ಪರಿಣಾಮ ಲಕ್ಷಾಂತರ ರೂ. ಕಳೆದುಕೊಂಡು ಪರದಾಡುತ್ತಿದ್ದಾರೆ. ವಂಚಕರು ಮೊದಲಿಗೆ ನಿಮ್ಮ ಗೂಗಲ್‌ ಪೇ, ಫೋನ್‌ ಪೇ ಇತ್ಯಾದಿ ಯುಪಿಐ ಖಾತೆಗೆ ಹಣ ಕಳಿಸುತ್ತಾರೆ. ಬಳಿಕ ತಪ್ಪಾಗಿ ನಿಮ್ಮ ಖಾತೆಗೆ ಹಣ ಜಮೆಯಾಗಿದ್ದು, ಹಿಂತಿರುಗಿಸುವಂತೆ ಕೋರುತ್ತಾರೆ. ನೀವು ಅದನ್ನು ನಂಬಿ ನಿಮ್ಮ ಖಾತೆಯಿಂದ ಅವರು ಕಳಿಸಿದ ಲಿಂಕ್‌ ಒತ್ತಿ ಹಣ ಕಳಿಸಿದರೆ, ಕೆಲ ನಿಮಿಷಗಳಲ್ಲಿ ನಿಮ್ಮ ಬ್ಯಾಂಕ್‌ ಖಾತೆಯಿಂದಲೇ ಹಣ ವಿತ್‌ ಡ್ರಾ ಆಗುತ್ತದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

6. Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ
ಆಟೋ ಚಾಲಕರ ರ‍್ಯಾಲಿಗೆ ಪೊಲೀಸರು ಅವಕಾಶ ನೀಡದ ಕಾರಣಕ್ಕೆ ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶವನ್ನು ಹೊರಹಾಕಿದ್ದಾರೆ. ಅನಧಿಕೃತ ವೈಟ್‌ಬೋರ್ಡ್‌ ಬೈಕ್‌ ಟ್ಯಾಕ್ಸಿಯಿಂದಾಗಿ ಆಟೋರಿಕ್ಷಾ ಚಾಲಕರ (Auto Strike In Bengaluru) ದುಡಿಮೆಗೆ ಮಾರಕವಾಗಿದೆ ಎಂದು ಆಕ್ರೋಶ ಹೊರಹಾಕಿರುವ ಬೆಂಗಳೂರು ಆಟೋ ಚಾಲಕರ ಸಂಘಗಳ ಒಕ್ಕೂಟವು ಮಾ.20ರಂದು ಸೇವೆಯನ್ನು ಸ್ಥಗಿತಗೊಳಿಸಿ ಮುಷ್ಕರಕ್ಕೆ ಕರೆ ಕೊಟ್ಟಿದ್ದವು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

7. Attack on Indian Consulate: ಸ್ಯಾನ್‌ ಫ್ರಾನ್ಸಿಸ್ಕೋದ ಇಂಡಿಯನ್ ಕಾನ್ಸುಲೇಟ್ ಕಚೇರಿ ಮೇಲೆ ಖಲಿಸ್ತಾನಿಯರಿಂದ ದಾಳಿ
ಲಂಡನ್‌ನಲ್ಲಿರುವ ಇಂಡಿಯನ್ ಹೈ ಕಮಿಷನ್ ಕಟ್ಟಡದಲ್ಲಿನ ತ್ರಿವರ್ಣ ಧ್ವಜವನ್ನು ಖಲಿಸ್ತಾನಿ ಪರ ಹೋರಾಟಗಾರರು ಕೆಳಗಿಳಿಸಿದ ಬೆನ್ನಲ್ಲೇ ಅಮೆರಿಕದ ಸ್ಯಾನ್‌ ಫ್ರಾನ್ಸಿಸ್ಕೋದಲ್ಲಿರುವ (San Francisco) ಇಂಡಿಯನ್ ಕಾನ್ಸುಲೇಟ್(Indian Consulate) ಮೇಲೆ ದಾಳಿ ನಡೆಸುವ ವಿಡಿಯೋ ವೈರಲ್ ಆಗಿದೆ. ಜತೆಗೆ, ಕಟ್ಟಡದ ಗೋಡೆಯೊಂದರ ಮೇಲೆ ಅಮೃತ್‌ಪಾಲ್ ಬಿಡುಗಡೆ ಮಾಡಿ ಎಂದು ಗೀಚಲಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

8. KMF TUMUL Recruitment 2023 : ಹಾಲು ಒಕ್ಕೂಟದಲ್ಲಿ 219 ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ
ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ತುಮುಲ್) ಖಾಲಿ ಇರುವ (KMF TUMUL Recruitment 2023 ) ವಿವಿಧ 219 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

9. Viral News: ಕೇರಳಕ್ಕೀಗ ಮೊದಲನೇ ತೃತೀಯ ಲಿಂಗಿ ನ್ಯಾಯವಾದಿ; ಮಾಹಿತಿ ಹಂಚಿಕೊಂಡ ಸಚಿವರು
ದೇವರ ನಾಡು ಎಂದೇ ಪ್ರಖ್ಯಾತವಾಗಿರುವ ಕೇರಳ ಇದೀಗ ತನ್ನ ಮೊದಲನೇ ತೃತೀಯ ಲಿಂಗಿ ನ್ಯಾಯವಾದಿಯನ್ನು ಕಂಡಿದೆ. ತೃತೀಯ ಲಿಂಗಿಯಾಗಿರುವ ಪದ್ಮ ಲಕ್ಷ್ಮೀ ಅವರು ಬಾರ್‌ ಕೌನ್ಸಿಲ್‌ನಲ್ಲಿ ನ್ಯಾಯವಾದಿಯಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಈ ಮೂಲಕ ರಾಜ್ಯ ಹೆಮ್ಮೆ (Viral News) ಪಡುವಂತಾಗಿದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

10. Ugadi 2023: ಯುಗಾದಿ ಹಬ್ಬದಂದು ಬಾಯಿ ಚಪ್ಪರಿಸುವುದಕ್ಕೆ ಮಾಡಿ ಈ ವಿಶೇಷ ಅಡುಗೆ
ಯುಗಾದಿ ಹಬ್ಬ (Ugadi 2023) ಇನ್ನೇನು ಬಂದೇ ಬಿಟ್ಟಿತು. ಹಿಂದೂಗಳ ಹೊಸ ವರ್ಷವಾದ ಈ ದಿನ ಎಲ್ಲೆಡೆ ಮಾವಿನ ತೋರಣ ಕಟ್ಟಿ, ಬೇವು ಬೆಲ್ಲ ಸೇವಿಸಿ, ಜೀವನದಲ್ಲಿ ಸಿಹಿ ಕಹಿ ಎರಡನ್ನೂ ಸಮಾನವಾಗಿ ಎದುರಿಸೋಣ ಎನ್ನುತ್ತಾ ಖುಷಿಹಂಚಿಕೊಳ್ಳುವುದು ಸಂಪ್ರದಾಯ. ಹಿಂದೂಗಳ ಹಬ್ಬವೆಂದ ಮೇಲೆ ಅಲ್ಲಿ ತರೇವಾರು ತಿನಿಸುಗಳು ಇರಲೇಬೇಕು. ಸಂಭ್ರಮಕ್ಕೆ ಮೆರಗು ನೀಡುವುದೇ ನಮ್ಮ ವಿಶೇಷ ಊಟ. ಈ ಹಬ್ಬಕ್ಕೆ ವಿಶೇಷವಾಗಿ ಏನು ಮಾಡುವುದು ಎನ್ನುವ ಯೋಚನೆಯಲ್ಲಿ ನೀವಿದ್ದರೆ ಇಲ್ಲಿದೆ ನಿಮಗಾಗಿ ಸ್ಪೆಷಲ್‌ ಮೆನು.‌ ಯುಗಾದಿ ಕುರಿತ ಎಲ್ಲ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಮತ್ತಷ್ಟು ಪ್ರಮುಖ ಸುದ್ದಿಗಳಿವು

  1. KPSC Recruitment 2023 : ಹೈಕದ ಗ್ರೂಪ್‌ ಸಿ ಹುದ್ದೆಗಳಿಗೆ ಪರೀಕ್ಷೆ; ಕೀ ಉತ್ತರ ಪ್ರಕಟ
  2. Gold rate : ಬ್ಯಾಂಕಿಂಗ್‌ ಬಿಕ್ಕಟ್ಟಿನ ಪರಿಣಾಮ 60,000 ರೂ.ಗೆ ಜಿಗಿದ ಬಂಗಾರ ದರ, ಮತ್ತಷ್ಟು ಏರಿಕೆ ಸಂಭವ
  3. Aadhaar card : ಕಾರ್ಡ್‌ದಾರ ಮೃತಪಟ್ಟಾಗ ಆಧಾರ್‌ ಕೂಡ ನಿಷ್ಕ್ರಿಯ ಶೀಘ್ರ
  4. Ramadan 2023 : ರಮ್ಜಾನ್ ಹಬ್ಬಕ್ಕೆ ದಿನಗಣನೆ: ಏನಿದರ ವಿಶೇಷತೆ? ಏಕಾಗಿ ಈ ಉಪವಾಸ?
  5. Urfi Javed: ಬೀದಿ ನಾಯಿಯನ್ನು ಮುದ್ದಿಸಿದ ಉರ್ಫಿ, ವಿಚಿತ್ರ ಸ್ಟೈಲಿಂಗ್ ಮಾಡಲು ತಲೆ ಹೇಗೆ ವರ್ಕ್‌ ಆಗುತ್ತೆ ಅಂದ್ರು ನೆಟ್ಟಿಗರು?
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Hassan Pen Drive Case: ರಾಜ್ಯ ಮಹಿಳಾ ಆಯೋಗದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿಬಂದಿವೆ.

VISTARANEWS.COM


on

Hassan Pen Drive Case
ಸುಮನ್ ಡಿ ಪೆನ್ನೇಕರ್, ಎಡಿಜಿಪಿ ಬಿ.ಕೆ. ಸಿಂಗ್, ಸೀಮಾ ಲಾಟ್ಕರ್
Koo

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೊ ಪ್ರಕರಣದ (Hassan Pen Drive Case) ತನಿಖೆಗಾಗಿ ಎಸ್‌ಐಟಿ ರಚನೆಗೆ ಸಿಎಂ ಸಿದ್ದರಾಮಯ್ಯ ಅವರು ಶನಿವಾರ ಆದೇಶಿಸಿದ್ದರು. ಇದೀಗ ಅಧಿಕೃತವಾಗಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿದ್ದು, ಇದರಲ್ಲಿ ಇಬ್ಬರು ಮಹಿಳಾ ಐಪಿಎಸ್‌ ಅಧಿಕಾರಿಗಳು ಇದ್ದಾರೆ.

ಎಡಿಜಿಪಿ ಬಿ.ಕೆ. ಸಿಂಗ್ ಅವರು ಎಸ್‌ಐಟಿ ಮುಖ್ಯಸ್ಥರಾಗಿದ್ದು, ಎಸ್‌ಪಿ ಸುಮನ್ ಡಿ ಪನ್ನೇಕರ್, ಎಸ್‌ಪಿ ಸೀಮಾ ಲಾಟ್ಕರ್ ಸದಸ್ಯರಾಗಿದ್ದಾರೆ. ಸಿಐಡಿಯಲ್ಲಿ ಎಡಿಜಿಪಿಯಾಗಿರುವ ಬಿ.ಕೆ ಸಿಂಗ್ ಅವರು, ಈ ಹಿಂದೆ ಗೌರಿ ಲಂಕೇಶ್ ಕೊಲೆ ಕೇಸ್‌ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಹಾಸನ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕ್ರಮ ಜರುಗಿಸುವಂತೆ ರಾಜ್ಯ ಮಹಿಳಾ ಆಯೋಗ ದೂರು ನೀಡಿತ್ತು. ಅದೇ ರೀತಿ ಮಹಿಳೆಯೊಬ್ಬರು ಏ.28ರಂದು ನೀಡಿದ ದೂರಿನ ಅನ್ವಯ ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 107/2024 ಕಲಂ 354A, 354D, 506, 509 ಐಪಿಸಿ ಅಡಿ ದಾಖಲಾದ ಪ್ರಕರಣದ ತನಿಖೆಗಾಗಿ ಸಿಐಡಿಯ ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಲಾಗಿದೆ ಎಂದು ಒಳಾಡಳಿತ ಇಲಾಖೆಯ(ಅಪರಾಧಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಎಸ್‌.ಅಂಬಿಕಾ ಆದೇಶ ಹೊರಡಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೊ ಚಿತ್ರೀಕರಣವು ಮಾಧ್ಯಮಗಳಲ್ಲಿ ಪ್ರಚಾರವಾಗಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು ಮತ್ತು ಅದನ್ನು ಸಾರ್ವಜನಿಕ ಪಡಿಸಿದ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸುವ ಮೂಲಕ ಮಹಿಳೆಯರ ಘನತೆ ಹಾಗೂ ಅಸ್ತಿತ್ವಕ್ಕೆ ಹಾನಿ ಉಂಟು ಮಾಡುತ್ತಿರುವವರನ್ನು ಶೀಘ್ರವಾಗಿ ಪತ್ತೆಹಚ್ಚಲು ವಿಶೇಷ ತನಿಖಾ ತಂಡವನ್ನು ರಚಿಸಲು ಆದೇಶ ನೀಡಬೇಕೆಂದು ಹಾಗೂ ಆರೋಪಿಗಳ ವಿರುದ್ಧ ಕಠಿಣ ಕಾನೂನಾತ್ಮಕ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗ ಕೋರಿತ್ತು. ಈ ಹಿನ್ನೆಲೆ ಪ್ರಕರಣದ ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣದ ಸಮಗ್ರ ತನಿಖೆ ನಡೆಸಲು ರಚಿಸಿರುವ ಎಸ್‌ಐಟಿ ಮುಖ್ಯಸ್ಥರಾಗಿ ಸಿಐಡಿ ಅಪರ ಪೊಲೀಸ್ ಮಹಾ ನಿರ್ದೇಶಕ ಬಿಜಯ ಕುಮಾರ್ ಸಿಂಗ್, ಸದಸ್ಯರಾಗಿ ಪೊಲೀಸ್ ಪ್ರಧಾನ ಕಚೇರಿಯ ಸಹಾಯಕ ಪೊಲೀಸ್ ಮಹಾ ನಿರೀಕ್ಷಕರಾದ ಸುಮನ್ ಡಿ ಪೆನ್ನೇಕರ್, ಮೈಸೂರು ಪೊಲೀಸ್ ಅಧೀಕ್ಷಕರಾದ ಸೀಮಾ ಲಾಟ್ಕರ್ ಅವರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ | Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

ಈ ಪ್ರಕರಣದ ಕುರಿತು ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾದ, ದಾಖಲಾಗಬಹುದಾದ ಪ್ರಕರಣಗಳನ್ನು ಡಿಜಿ & ಐಜಿಪಿ ಅವರು, ಈ ವಿಶೇಷ ತನಿಖಾ ತಂಡ (Special Investigation Team) ಕ್ಕೆ ವರ್ಗಾಯಿಸಬೇಕು ಹಾಗೂ ತನಿಖೆಗಾಗಿ ಇತರೆ ಸದಸ್ಯರ ಅವಶ್ಯವಿದ್ದಲ್ಲಿ ಡಿಜಿ & ಐಜಿಪಿ ಅವರ ಅನುಮೋದನೆಯೊಂದಿಗೆ ತನಿಖಾ ತಂಡಕ್ಕೆ ಸೇರಿಸಿಕೊಳ್ಳಬೇಕು. ಸಿಐಡಿ ಪೊಲೀಸ್ ಮಹಾ ನಿರ್ದೇಶಕರ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡ (Special Investigation Team) ವು ಕಾರ್ಯನಿರ್ವಹಿಸಬೇಕು ಹಾಗೂ ಪ್ರಕರಣದ ಸಮಗ್ರ ತನಿಖೆಯನ್ನು ನಡೆಸಿ, ತನಿಖಾ ವರದಿಯನ್ನು ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾ ನಿರೀಕ್ಷಕರ ಮುಖಾಂತರ ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ಕೊನೆಗೂ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯಿಂದ ಬಂತು ದೂರು

ಹಾಸನ ಆಶ್ಲೀಲ ವಿಡಿಯೊ ಪ್ರಕರಣದಲ್ಲಿ ಕೊನೆಗೂ ಮಹಿಳಾ ಆಯೋಗಕ್ಕೆ ಸಂತ್ರಸ್ತೆಯಿಂದ ದೂರು ಬಂದಿದೆ ಎಂದು ರಾಜ್ಯ ಮಹಿಳಾ ಅಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ. ನಿನ್ನೆ ಸಂತ್ರಸ್ತೆಯೊಬ್ಬರು ಮಹಿಳಾ ಆಯೋಗಕ್ಕೆ ವಾಟ್ಸ್‌ಆ್ಯಪ್ ಮೂಲಕ ದೂರು ನೀಡಿದ್ದಾರೆ. ನನಗೆ ಜೀವ ಬೆದರಿಕೆ ಇದೆ ಎಂದು ಮಹಿಳೆ ಹೇಳಿದ್ದಾರೆ. ಅವರಿಗೆ ಪೊಲೀಸ್‌ ರಕ್ಷಣೆ ಒದಗಿಸಲಾಗಿದೆ. ಸಂತ್ರಸ್ತೆ ಅನೇಕ ವಿಚಾರಗಳನ್ನು ಹೇಳಿರುವುದಾಗಿ ತಿಳಿಸಿದ್ದಾರೆ.

ಸಾಕಷ್ಟು ಮಹಿಳೆಯರ ಅಶ್ಲೀಲ ವಿಡಿಯೊ ಚಿತ್ರೀಕರಣ ಮಾಡಲಾಗಿದೆ. ಪೆನ್‌ಡ್ರೈವ್‌ನಲ್ಲಿ ಲೈಂಹಿಕ ದೌರ್ಜನ್ಯದ ವಿಡಿಯೊಗಳಿವೆ. ಅಧಿಕಾರ ಹಾಗೂ ಸ್ಥಾನ ದೂರುಪಯೋಗ ಮಾಡಿಕೊಂಡು, ಅಸಹಾಯಕ ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಇದರಿಂದ ಸಾವಿರಾರು ಮಹಿಳೆಯರ ಭವಿಷ್ಯ ಹಾಗೂ ಜೀವನ ಹಾಳಾಗಿದೆ. ಇತಂಹ ಘಟನೆ ಮತ್ತೆ ಎಲ್ಲೂ ಮರಕಳಿಸಬಾರದು. ಹಾಸನ ಎಸ್‌ಪಿಗೆ ಸುಮೋಟೊ ಕೇಸ್ ದಾಖಲಿಸುವಂತೆ ಹೇಳಿದ್ದೆ, ಆದರೆ, ಕೇಸ್ ದಾಖಲಿಸಿಕೊಂಡಿಲ್ಲ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮಾಹಿತಿ ನೀಡಿದ್ದಾರೆ.

ಅಶ್ಲೀಲ ವಿಡಿಯೊ ಶೇರ್‌ ಮಾಡಬೇಡಿ

ವಿಡಿಯೊ ನೋಡಿದರೆ ನೊಂದ ಮಹಿಳೆಯರ ಬಗ್ಗೆ ಕನಿಕರ ಮೂಡುತ್ತದೆ. ಮಹಿಳೆಯರ ಕುಟುಂಬಸ್ಥರೇ ಈಗ ಅವರಿಗೆ ಧೈರ್ಯ ತುಂಬಬೇಕು. ತಪ್ಪು ಎಲ್ಲರೂ ಮಾಡುತ್ತಾರೆ, ಆದ್ರೆ ಇಲ್ಲಿ ನಡೆದಿರೋದು ಕೇವಲ ತಪ್ಪಲ್ಲ.
ಆರೋಪಿಯಾಗಿರೋ ಪ್ರಭಾವಿ ರಾಜಕಾರಣಿಯನ್ನು ರಕ್ಷಣೆ ಮಾಡೋ ಕೆಲಸ ಸಹಜವಾಗಿ ನಡೆಯುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಆರೋಪಿಸಿದ್ದಾರೆ.

ಇದನ್ನೂ ಓದಿ | Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ಅಧಿಕಾರಿಗಳನ್ನು ಬಳಸಿಕೊಂಡು ಪ್ರಕರಣದ ದಿಕ್ಕು ತಪ್ಪಿಸುವ ಯತ್ನ ನಡೆಯುತ್ತಿದೆ. ನಾನೂ ಒಬ್ಬ ವೈದ್ಯೆಯಾಗಿ ಆತನ ಹೀನಾಯ ಮನಸ್ಥಿತಿಯನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ದಯಮಾಡಿ ಜನರು ಆ ವಿಡಿಯೊಗಳನ್ನು ಹಂಚಬೇಡಿ. ನೊಂದ ಮಹಿಳೆಯರ ಜೀವ ಹಾಗೂ ಜೀವನದ ಮೇಲೆ ಅದು ಕೆಟ್ಟ ಪ್ರಭಾವ ಬೀರುತ್ತಿದೆ. ವಿಡಿಯೊ ಮಾಡಿರೋ ವ್ಯಕ್ತಿ ತನ್ನ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾನೆ. ಹೆದರಿಸಿ‌ ಬೆದರಿಸಿ ಒಪ್ಪಿಗೆ ಇಲ್ಲದಿದ್ದರೂ ಒತ್ತಡ ಹೇರಿದ್ದಾನೆ. ಆತನಿಗೆ ಕೋರ್ಟ್ ಕಡ್ಡಾಯವಾಗಿ ಶಿಕ್ಷೆ ನೀಡುವಂತೆ ಮಾಡಲಾಗುತ್ತದೆ. ಸಂತ್ರಸ್ತ ಮಹಿಳೆ ದೂರು ನೀಡಿದ್ದು, ಅವರಿಗೆ ಭದ್ರತೆ ನೀಡಲಾಗಿದೆ. ಕೋರ್ಟ್‌ನಲ್ಲಿ ಸಾಕ್ಷಿಗಳು ಬೇಕಿರುವುದರಿಂದ ನೊಂದ ಮಹಿಳೆಯರು ದೂರು ನೀಡುವಂತೆ ಕೋರುತ್ತೇವೆ. ಕೋರ್ಟ್ ಮೇಲೆ ನಂಬಿಕೆಯಿದೆ, ಆತನಿಗೆ ಶಿಕ್ಷೆ ಆಗುತ್ತದೆ ಎಂದು ನಂಬಿರುವುದಾಗಿ ಹೇಳಿದರು.

Continue Reading

Lok Sabha Election 2024

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi: ಈ ಕಾಂಗ್ರೆಸ್‌ನವರಿಗೆ ಯಾವುದರ ಮೇಲೂ ವಿಶ್ವಾಸ ಇಲ್ಲ. ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆಯಲ್ಲಿ ಸೋಲುತ್ತಲೇ ಬಂದಿದ್ದಾರೆ. ಮೋದಿ ಗೆದ್ದರೂ ಇವಿಎಂ ಎಂದು ಹೇಳುತ್ತಾರೆ. ಈಗಲೂ ಸೋಲುವ ಭೀತಿಯಿಂದ ಅವರು ಇವಿಎಂ ಬಗ್ಗೆ ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿದ್ದರು. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ಕಾಂಗ್ರೆಸ್‌ನವರಿಗೆ ಮುಖಭಂಗವಾಗಿದೆ. ಈಗ ಕಾಂಗ್ರೆಸ್‌ನವರು ಕಂಗಾಲಾಗಿ ಕುಳಿತಿದ್ದಾರೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

Congress fears defeat over EVMs Congress will not win a single seat in Karnataka says PM Narendra Modi
Koo

ದಾವಣಗೆರೆ: ಈ ಬಾರಿ ಕರ್ನಾಟಕದ ಜನತೆ ಕಾಂಗ್ರೆಸ್‌ನ ಪಾಪದ ಕೆಲಸಗಳಿಗೆ ತಕ್ಕ ಶಿಕ್ಷೆಯನ್ನು ನೀಡಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌ (Congress Karnataka) ಪಕ್ಷವೂ ಖಾತೆ ತೆರೆಯುವುದೇ ಅನುಮಾನವಾಗಿದೆ. ಇನ್ನು ಮುಂದೆ ಕಾಂಗ್ರೆಸ್‌ನ ಲೂಟಿ ಪ್ರಕರಣಗಳು ಒಂದೊಂದಾಗಿಯೇ ಹೊರ ಬರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದರು.

ದಾವಣಗೆರೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಪಾರ್ಟಿಯು ಬೇರೆ ಬೇರೆ ಲೂಟಿಯಲ್ಲಿ ತೊಡಗಿಕೊಂಡಿದೆ. ಈಗ ಒಳಗೊಳಗೆ ಯುದ್ಧ ನಡೆಯುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಲೂಟಿ ಪ್ರಕರಣಗಳು ಒಂದೊಂದಾಗಿ ಬಯಲಾಗುತ್ತದೆ ಎಂದು ಹೇಳಿದರು.

ಸೋಲುವ ಭೀತಿಯಿಂದ ಇವಿಎಂ ಪ್ರಸ್ತಾಪ

ಈ ಕಾಂಗ್ರೆಸ್‌ನವರಿಗೆ ಯಾವುದರ ಮೇಲೂ ವಿಶ್ವಾಸ ಇಲ್ಲ. ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆಯಲ್ಲಿ ಸೋಲುತ್ತಲೇ ಬಂದಿದ್ದಾರೆ. ಮೋದಿ ಗೆದ್ದರೂ ಇವಿಎಂ ಎಂದು ಹೇಳುತ್ತಾರೆ. ಈಗಲೂ ಸೋಲುವ ಭೀತಿಯಿಂದ ಅವರು ಇವಿಎಂ ಬಗ್ಗೆ ಸುಪ್ರೀಂ ಕೋರ್ಟ್‌ ಮೆಟ್ಟಿಲು ಹತ್ತಿದ್ದರು. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ಕಾಂಗ್ರೆಸ್‌ನವರಿಗೆ ಮುಖಭಂಗವಾಗಿದೆ. ಈಗ ಕಾಂಗ್ರೆಸ್‌ನವರು ಕಂಗಾಲಾಗಿ ಕುಳಿತಿದ್ದಾರೆ ಎಂದು ನರೇಂದ್ರ ಮೋದಿ ಕಿಡಿಕಾರಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 5 ವರ್ಷಕ್ಕೆ 5 ಪಿಎಂ!

ಬಿಜೆಪಿ ಸರ್ಕಾರ ದೇಶದಲ್ಲಿ ಅಭಿವೃದ್ಧಿ ಮಾಡುತ್ತಲೇ ಹೋಗುತ್ತಿದೆ. ಆದರೆ, ಬಿಜೆಪಿ ಸರ್ಕಾರದ ಕೆಲಸವನ್ನು ಕಾಂಗ್ರೆಸ್‌ ಹಾಳು ಮಾಡಲು ಪ್ರಯತ್ನ ಪಡುತ್ತಲೇ ಇದೆ. ಈಗ ಇಂಡಿ ಅಲೆಯನ್ಸ್‌ನವರು ಹೊಸ ಫಾರ್ಮೂಲಾವನ್ನು ಮಾಡಿಕೊಂಡು ರಾಜಕೀಯವನ್ನು ಮಾಡುತ್ತಿದ್ದಾರೆ. ಇಂಡಿ ಒಕ್ಕೂಟಕ್ಕೆ ಅಧಿಕಾರ ಸಿಕ್ಕರೆ ಒಂದೊಂದು ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿ ಆಗುತ್ತಾರೆ. ಮೊದಲ ವರ್ಷಕ್ಕೆ ಒಬ್ಬರು ಪ್ರಧಾನಿ, ಎರಡನೇ ವರ್ಷಕ್ಕೆ ಒಬ್ಬರು, ಮೂರನೇ ವರ್ಷಕ್ಕೆ, ನಾಲ್ಕನೇ ಹಾಗೂ ಐದನೇ ವರ್ಷಕ್ಕೆ ಒಬ್ಬೊಬ್ಬರು ಪ್ರಧಾನಿಯಾಗುತ್ತಾರೆ. ಹೀಗೆ 5 ವರ್ಷ ಕಾಲ ದೇಶವನ್ನು ಒಬ್ಬರ ಕೈಗೆ ಕೊಡುವಾಗ ನೀವು ಯೋಚನೆ ಮಾಡುತ್ತೀರಲ್ಲವೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಶಿಕ್ಷಣ ನೀತಿಯಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್‌ ರಾಜಕೀಯ

ಕಾಂಗ್ರೆಸ್‌ ಪಕ್ಷದವರಿಂದ ಜನಸಾಮಾನ್ಯರ ಜೀವನದಲ್ಲೂ ಆಟವಾಡಲಾಗುತ್ತಿದೆ. ಶಿಕ್ಷಣ ನೀತಿಯಲ್ಲಿ ಸಹ ಕರ್ನಾಟಕದಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ. ಯುವಕರು, ವಿದ್ಯಾರ್ಥಿಗಳ ಭವಿಷ್ಯದಲ್ಲಿಯೂ ಆಟವಾಡುತ್ತಿದೆ. ಆರೋಗ್ಯ, ನೀರಾವರಿ ಸೇರಿ ಎಲ್ಲ ಕ್ಷೇತ್ರದಲ್ಲಿಯೂ ಚೆಲ್ಲಾಟವಾಟುತ್ತಿದೆ. ದೇಶದ ಭವಿಷ್ಯವನ್ನು ಬರ್ಬಾದ್‌ ಮಾಡುವ ಕಾಂಗ್ರೆಸ್‌ ಪಕ್ಷವನ್ನು ನಂಬಲು ಆಗುತ್ತದೆಯೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ನಮ್ಮ ಸರ್ಕಾರ ಬಂದಾಗ ಭ್ರಷ್ಟಾಚಾರಕ್ಕೆ ಕಡಿವಾಣ

ಈ ಹಿಂದೆ ಕಾಂಗ್ರೆಸ್‌ನಿಂದ ಪ್ರಧಾನಿಯಾದವರೊಬ್ಬರು ಹೇಳಿಕೆ ಪ್ರಕಾರ, ದೇಶದಲ್ಲಿ ಒಂದು ರೂಪಾಯಿ ಬಿಡುಗಡೆ ಮಾಡಿದರೆ ಅದು ಫಲಾನುಭವಿಗೆ ತಲುಪುವ ಹೊತ್ತಿನಲ್ಲಿ 15 ಪೈಸೆ ಆಗುತ್ತಿತ್ತು. ಆದರೆ, ಈಗ ಪರಿಸ್ಥಿತಿ ಏನಾಗಿದೆ? ಸರ್ಕಾರ ಬಿಡುಗಡೆ ಮಾಡುವ 1 ರೂಪಾಯಿ ಪೂರ್ತಿಯಾಗಿ ಫಲಾನುಭವಿಯ ಖಾತೆಗೆ ಬೀಳುತ್ತಿದೆ. ಇದು ನಮ್ಮ ಭ್ರಷ್ಟಾಚಾರ ರಹಿತ ಆಡಳಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಯಾವುದೇ ಒಬ್ಬ ತಂದೆ – ತಾಯಿ ಏನು ಯೋಚನೆ ಮಾಡುತ್ತಾರೆ? ನಾವು ದುಡಿದಿದ್ದರಲ್ಲಿ ಸ್ವಲ್ಪ ಉಳಿಕೆ ಮಾಡಿ, ನಮ್ಮ ಕಾಲಾನಂತರ ಮಕ್ಕಳಿಗೆ ಸ್ವಲ್ಪ ಆದಾಯವನ್ನು, ಆಸ್ತಿಯನ್ನು ಮಾಡಿಡಬೇಕು ಎಂದು ಚಿಂತೆ ಮಾಡುತ್ತಾರಲ್ಲವೇ? ಆದರೆ, ಕಾಂಗ್ರೆಸ್‌ ಈಗ ಆ ಆಸ್ತಿ ಮೇಲೆ ಕಣ್ಣಿಟ್ಟಿದೆ. ನೀವು ಮಾಡುವ ಆಸ್ತಿಯಲ್ಲಿ ನಿಮ್ಮ ಮಕ್ಕಳಿಗೆ 55 ಪರ್ಸೆಂಟ್‌ ತೆರಿಗೆಯನ್ನು ಸರ್ಕಾರಕ್ಕೆ ಕಟ್ಟುವಂತೆ ನೀತಿ ನಿರೂಪಣೆ ಮಾಡಲು ಹೋಗಿದ್ದಾರೆ. ಇಂಥವರಿಗೆ ಪಾಠ ಕಲಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಯಾವುದಾದರೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೆ ಅಲ್ಲಿ ಹೂಡಿಕೆ ಮಾಡಲು ಯಾರಾದರೂ ಮುಂದೆ ಬರುತ್ತಾರಾ? ಯಾವುದಾದರೂ ಕೈಗಾರಿಕೆಗಳು ಬರುತ್ತದೆಯೋ? ಬಂಗ್ಲೆ, ದುಡ್ಡು ಎಷ್ಟೇ ಇದ್ದರೂ ಸುರಕ್ಷತೆ ಇಲ್ಲದಿದ್ದರೆ ಹೇಗೆ? ಅದೇ ರೀತಿಯಾಗಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಬೆಂಗಳೂರಲ್ಲಿ ಬಾಂಬ್‌ ಬ್ಲಾಸ್ಟ್‌ ಆಗಿದ್ದಾಗ ಮೊದಲು ಏನೆಂದರು? ಸಿಲಿಂಡರ್‌ ಸ್ಫೋಟ ಎಂದು ಹೇಳಿದರು. ಕೊನೆಗೆ ಬಾಂಬ್‌ ಬ್ಲಾಸ್ಟ್‌ ಆಯಿತು ಎಂದು ಗೊತ್ತಾಗುತ್ತಿದ್ದಂತೆ, ಬ್ಯುಸಿನೆಸ್‌ ವಿರೋಧಿಗಳ ಕೃತ್ಯ ಎಂದು ಹೇಳಿದರು. ಇದು ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ನೇಹಾ ಹತ್ಯೆ ಸಾಮಾನ್ಯವಲ್ಲ

ಪ್ರತಿ ತಂದೆ ತಾಯಿಯೂ ತಮ್ಮ ಮಕ್ಕಳ ಸುರಕ್ಷತೆಯನ್ನು ನೋಡುತ್ತಾರೆ. ಆದರೆ, ಶಾಲಾ -ಕಾಲೇಜುಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಲು ಪೋಷಕರು ಆತಂಕ ಪಡುತ್ತಿದ್ದಾರೆ. ಹುಬ್ಬಳ್ಳಿಯ ನೇಹಾ ಹತ್ಯೆ ಸಾಮಾನ್ಯವಲ್ಲ. ವೋಟ್‌ ಬ್ಯಾಂಕ್‌ ಮಾಡುತ್ತಿರುವ ಕಾಂಗ್ರೆಸ್‌ನ ಆಡಳಿತಕ್ಕೆ ಇದು ಸಾಕ್ಷಿ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ವೋಟ್‌ ಬ್ಯಾಂಕ್‌ ಚಿಂತೆಯಲ್ಲಿ ಕಾಂಗ್ರೆಸ್‌ ಇದೆ. ಇದು ಅತ್ಯಂತ ಅಪಾಯಕಾರಿ ಮನಃಸ್ಥಿತಿಯಾಗಿದೆ. ವಿದ್ವಂಸಕ ಸಂಘಟನೆಗಳು ದೇಶದ ಸ್ವಾಸ್ಥ್ಯವನ್ನು ಹಾಳು ಮಾಡಲು ಹೊರಟಿದೆ. ಹಾಗಾಗಿ ಸಂಘಟನೆಯೊಂದನ್ನು ನಾವು ನಿಷೇಧ ಮಾಡಿದ್ದೇವೆ. ಆದರೆ, ಅಂಥ ಸಂಘಟನೆಯನ್ನು ಓಲೈಕೆ ಮಾಡಲು ಕಾಂಗ್ರೆಸ್‌ ಮುಂದಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದ ಮೋದಿ, ಸುರಕ್ಷತೆಯ ಗ್ಯಾರಂಟಿ, ವಿಕಾಸದ ಗ್ಯಾರಂಟಿ ಎಂದರೆ ಮೋದಿ ಎಂದು ಹೇಳಿದರು.

ಇದನ್ನೂ ಓದಿ: PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

ನೀವು ಇಲ್ಲಿ ಕೊಡುವ ಪ್ರತಿಯೊಂದು ಮತವೂ ನರೇಂದ್ರ ಮೋದಿಗೆ ಸಲ್ಲುತ್ತದೆ. ನಿಮ್ಮ ಪ್ರತಿ ಮತವೂ ದೇಶದ ಅಭಿವೃದ್ಧಿಯನ್ನು ಮಾಡಲಿದೆ. ಈವರೆಗಿನ ರೆಕಾರ್ಡ್‌ ಬ್ರೇಕ್‌ ಮಾಡುವ ನಿಟ್ಟಿನಲ್ಲಿ ಈ ಬಾರಿ ನಿಮ್ಮ ಹಕ್ಕು ಚಲಾಯಿಸಿ ಎಂದು ನರೇಂದ್ರ ಮೋದಿ ಕರೆ ನೀಡಿದರು.

ಜೂನ್‌ 4ರಂದು ಕರ್ನಾಟಕದಲ್ಲಿ ಎಲ್ಲ ಕಡೆಯೂ ವಿಜಯೋತ್ಸವ

2014, 2019ರ ಚುನಾವಣೆಗಿಂತಲೂ ಹೆಚ್ಚಿನ ಜನ ಬೆಂಬಲ ಈ ಬಾರಿ ಇದೆ. ಈ ಬಾರಿಯ ಅಲೆಯೇ ಬೇರೆಯಾಗಿದೆ. ಕರ್ನಾಟಕದ ಎಲ್ಲಿ ಹೋದರೂ ಬಿಜೆಪಿ ಪರ ಅಲೆ ಎದ್ದು ಕಾಣುತ್ತಿದೆ. 10 ವರ್ಷ ಮೋದಿ ಮಾಡಿದ ಕೆಲಸಕ್ಕೆ ಜನರು ಮನ ಸೋತಿದ್ದಾರೆ. ಜೂನ್‌ 4ರಂದು ಕರ್ನಾಟಕದಲ್ಲಿ ಎಲ್ಲ ಕಡೆಯೂ ವಿಜಯೋತ್ಸವ, ಸಂಭ್ರಮ ಮನೆ ಮಾಡಿರುತ್ತದೆ. ಯಾರಿಗೆಲ್ಲ ನಾನು ಆಭಾರಿಯಾಗಲಿ ಎಂದು ಹೇಳಿಕೊಳ್ಳಲು ಆಗದು. ನಾನು ಯಾವತ್ತೂ ನಿಲ್ಲುವುದಿಲ್ಲ, ನನ್ನ ಕೆಲಸವೂ ನಿಲ್ಲುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

Lok Sabha Election 2024

PM Narendra Modi: ಬಾಂಬರ್‌ಗಳಿಗೆ ಕಾಂಗ್ರೆಸ್ ಕುಮ್ಮಕ್ಕು; ನಾವು NIA ಮೂಲಕ ದೇಶದ್ರೋಹಿಗಳನ್ನು ಬಗ್ಗುಬಡಿಯುತ್ತಿದ್ದೇವೆ ಎಂದ ಮೋದಿ

PM Narendra Modi: ಬರೀ ವೋಟಿನ ರಾಜಕಾರಣ ಮಾಡುವ ಕಾಂಗ್ರೆಸ್‌ನಿಂದ ಇಷ್ಟೆಲ್ಲ ಪ್ರಕರಣಗಳು ನಡೆಯುತ್ತಿವೆ ಕೆಲವು ಮತಾಂಧ ಸಂಘಟನೆಗಳನ್ನು ಬಳಸಿಕೊಳ್ಳುವುದು ಕಾಂಗ್ರೆಸ್‌ನ ಸಂಪ್ರದಾಯವಾಗಿದೆ. ಆದರೆ, ಬಿಜೆಪಿ ನಾಯಕರು ಯಾವತ್ತೂ ಈ ರೀತಿ ಆತಂಕಕಾರಿ ರಾಜಕಾರಣ ಮಾಡಲ್ಲ. ಹಿಂದೂಸ್ಥಾನ ಅಂದರೆ, ಭಯೋತ್ಪಾದನೆಯ ಮಾತು ಬಂದರೆ, ಅಂಥವರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.

VISTARANEWS.COM


on

Congress instigates bombers We are crushing traitors through NIA PM Narendra Modi
Koo

ಶಿರಸಿ (ಉತ್ತರ ಕನ್ನಡ): ಕಾಂಗ್ರೆಸ್‌ ಬಾಂಬರ್‌ಗಳಿಗೆ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ರಾಮೇಶ್ವರಂ ಕೆಫೆ ಸ್ಫೋಟವನ್ನು (Rameswaram cafe blast) ಮೊದಲು ಸಿಲಿಂಡರ್ ಸ್ಫೋಟವೆಂದು ಕಾಂಗ್ರೆಸ್ ಸರ್ಕಾರದವರು ಹೇಳಿದ್ದರು. ಆದರೆ, ಎನ್ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದರು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟದ ಘಟನೆ ಬಗ್ಗೆ ಗರಂ ಆಗಿ ಮಾತನಾಡಿದರು.

ಬರೀ ವೋಟಿನ ರಾಜಕಾರಣ ಮಾಡುವ ಕಾಂಗ್ರೆಸ್‌ನಿಂದ ಇಷ್ಟೆಲ್ಲ ಪ್ರಕರಣಗಳು ನಡೆಯುತ್ತಿವೆ ಕೆಲವು ಮತಾಂಧ ಸಂಘಟನೆಗಳನ್ನು ಬಳಸಿಕೊಳ್ಳುವುದು ಕಾಂಗ್ರೆಸ್‌ನ ಸಂಪ್ರದಾಯವಾಗಿದೆ. ಆದರೆ, ಬಿಜೆಪಿ ನಾಯಕರು ಯಾವತ್ತೂ ಈ ರೀತಿ ಆತಂಕಕಾರಿ ರಾಜಕಾರಣ ಮಾಡಲ್ಲ. ಹಿಂದೂಸ್ಥಾನ ಅಂದರೆ, ಭಯೋತ್ಪಾದನೆಯ ಮಾತು ಬಂದರೆ, ಅಂಥವರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದರು.

ಈ ಹಿಂದೆ ಮಂಗಳೂರಲ್ಲಿ ಸ್ಫೋಟ, ಬೆಂಗಳೂರಲ್ಲಿ ಸ್ಫೋಟ, ದೆಹಲಿಯಲ್ಲಿ ಸ್ಫೋಟ, ಸೂರತ್‌ನಲ್ಲಿ ಸ್ಫೋಟ ಹೀಗೆ ದೇಶದ ಎಲ್ಲ ಕಡೆ ಸ್ಫೋಟ.. ಸ್ಫೋಟವೆಂದು ನ್ಯೂಸ್ ಬರುತ್ತಿತ್ತು. ಆದರೆ, ಈಗ ಅಂದ್ರೆ 2014ರ ನಂತರ ಬಾಂಬ್‌ ಸ್ಫೋಟದ ಪ್ರಕರಣಗಳು ಆಗುತ್ತಾ ಇದೆಯಾ? ಕಾಂಗ್ರೆಸ್‌ ಪಕ್ಷದಿಂದ ಆ್ಯಂಟಿ ಸೋಷಿಯಲ್ ಹಾಗೂ ಆ್ಯಂಟಿ ನ್ಯಾಷನಲ್ ಕಾರ್ಯ ನಡೆಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದಲ್ಲಿ ಎಕ್ಸ್‌ರೇ ಮಾಡುತ್ತಾರಂತೆ. ನಿಮ್ಮ ಆಸ್ತಿ, ನಿಮ್ಮ ಜಮೀನು, ನಿಮ್ಮ ಚಿನ್ನವನ್ನು ಸರ್ವೆ ಮಾಡ್ತಾರಂತೆ. ಮಹಿಳೆಯರ ಮಂಗಳ ಸೂತ್ರವನ್ನು ಸರ್ವೆ ಮಾಡುತ್ತಾರಂತೆ. ಕಾಂಗ್ರೆಸ್ ಪಕ್ಷದವರು ಹಾಗೆ ಸರ್ವೆ ಮಾಡ್ತೀನಿ ಅಂತಾ ಹೋದರೆ ಸುಮ್ಮನೆ ಬಿಡುತ್ತೇನಾ? ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ವೆ, ಎಕ್ಸ್‌ರೇ ಕಾರ್ಯವನ್ನು ಮಾಡಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮ್ಮ ಸೇವೆ ಮಾಡುವುದಕ್ಕಾಗಿಯೇ ಪರಮಾತ್ಮ ನರೇಂದ್ರ ಮೋದಿಯನ್ನು ಕಳುಹಿಸಿದ್ದಾನೆ. ನಿಮ್ಮ ಕನಸೇ ಮೋದಿ ಸಂಕಲ್ಪ ಅಂತಾ ಇಡೀ ಜನಸಮೂಹಕ್ಕೆ ಭರವಸೆ ನೀಡುತ್ತೇನೆ. ನನ್ನ ಪ್ರತಿ ಕ್ಷಣವನ್ನೂ ದೇಶಕ್ಕಾಗಿ, ದೇಶದ ಜನರಿಗಾಗಿ ಮೀಸಲಿಟ್ಟು ಶ್ರಮಿಸುತ್ತೇನೆ. ದಿನದ 24 ಗಂಟೆಯೂ ಕೆಲಸ ಮಾಡುತ್ತಾ 2047ರ ವಿಕಸಿತ ಭಾರತಕ್ಕಾಗಿ ನನ್ನ ಸೇವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.

ಮುಸ್ಲಿಂ ದೊರೆಗಳ ದೌರ್ಜನ್ಯ ಹಾಗೂ ಅತ್ಯಾಚಾರಗಳ ಬಗ್ಗೆ ಕಾಂಗ್ರೆಸ್ ಸೊಲ್ಲಿಲ್ಲ. ವೋಟ್‌ ಬ್ಯಾಂಕ್ ಹಾಗೂ ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ಪಕ್ಷದಿಂದ ರಾಜಕಾರಣ ಮಾಡಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕದಂಬ ವಂಶಸ್ಥರು ಆಡಳಿತ ನಡೆಸಿ ಅಪಾರ ಕೊಡುಗೆ ನೀಡಿದ್ದಾರೆ. ಕದಂಬ ವಂಶಸ್ಥರು ಕನ್ನಡ ಅಭಿವೃದ್ಧಿಗೆ ನೀಡಿದ ಒತ್ತನ್ನು ಯಾರೂ ಮರೆಯಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದರು.

ಅಡಿಕೆ, ಸಿರಿಧಾನ್ಯ, ಮೀನುಗಾರಿಕೆ ಪ್ರಸ್ತಾಪಿಸಿ ಕೃಷಿಕರ ಮನ ಗೆದ್ದ ಮೋದಿ

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಅಡಿಕೆ (Arecanut), ಸಿರಿಧಾನ್ಯ (Millet) ಹಾಗೂ ಮೀನುಗಾರಿಕೆ (Fishing) ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ನಿಮ್ಮ ಅಡಿಕೆ ಬೆಳೆಗೆ ಜಿಐ ಟ್ಯಾಗ್‌ (GI Tag) ಅನ್ನು ಉತ್ತರ ಕನ್ನಡ ಜಿಲ್ಲೆಗೆ ನೀಡಿದ್ದು ನಮ್ಮ ಎನ್‌ಡಿಎ ಸರ್ಕಾರವಾಗಿದೆ ಎಂದು ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರವಾಗಿ ಮತಯಾಚನೆ ಮಾಡಿದ ಪ್ರಧಾನಿ ನರೇಂದ್ರ ಮೋದಿ, ನಮ್ಮ ಕರ್ನಾಟಕದಲ್ಲಿ ಸಿರಿ ಧಾನ್ಯಗಳಿಗೆ ಬೇಡಿಕೆ ಹಾಗೂ ಹೂಡಿಕೆ ಹೆಚ್ಚುವಂತೆ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಇದೇ ವೇಳೆ ಪ್ರಸ್ತಾಪ ಮಾಡಿದರು.

ಕರ್ನಾಟಕದ ಸಿರಿಧಾನ್ಯಕ್ಕೆ ಪ್ರೋತ್ಸಾಹ ಮಾಡಿ ಉತ್ತೇಜನ ಮಾಡಿದ್ದು ಎನ್‌ಡಿಎ ಸರ್ಕಾರವಾಗಿದೆ. ಸಿರಿ ಧಾನ್ಯ ಪ್ರಚಾರಕ್ಕೆ ಅಂತಾರಾಷ್ಟ್ರೀಯ ದಿನ ಮಾಡಿದ್ದು ನಮ್ಮದೇ ಸರ್ಕಾರ. ಸಿರಿ ಅನ್ನವೆಂದು ಸಿರಿ ಧಾನ್ಯ ಬಳಕೆ ಉತ್ತೇಜಿಸಲು ಕೇಂದ್ರದಿಂದಲೇ ಅಭಿಯಾನ ಮಾಡಿದ್ದೆವು. ಅಮೆರಿಕದ ಸಮಾರಂಭವೊಂದರಲ್ಲಿ ಆಹಾರದ ಮೆನುವಿನಲ್ಲಿ ಸಿರಿಧಾನ್ಯ ಫುಡ್ ಅನ್ನು ಹಾಕಲಾಗಿದೆ. ಕರ್ನಾಟಕ ಹಾಗೂ ಭಾರತದ ಅಸ್ಮಿತೆಯನ್ನು ಇಷ್ಟೆಲ್ಲ ಪ್ರಚಾರ ಮಾಡಿದ್ದೇ ನಮ್ಮ ಹೆಮ್ಮೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮೀನುಗಾರರಿಗೂ ಮೊದಲ ಬಾರಿಗೆ ಕಿಸಾನ್ ಕಾರ್ಡ್‌ ಕೊಡಿಸುದ್ದು ನಮ್ಮ ಸರ್ಕಾರವಾಗಿದೆ. 20 ಸಾವಿರ ಕೋಟಿ ರೂಪಾಯಿ ಕೊಟ್ಟು ಮತ್ಸ್ಯ ಸಂಪದ ಯೋಜನೆಯನ್ನು ರೂಪಿಸಿ ಎಲ್ಲ ರೀತಿ ಪ್ರೋತ್ಸಾಹವನ್ನು ನೀಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಕಾಂಗ್ರೆಸ್‌ ಶ್ರೀರಾಮನ ವಿರೋಧಿಯಾಗಿದೆ. 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಅಯೋಧ್ಯೆ ಶ್ರೀರಾಮ ಮಂದಿರ ಟ್ರಸ್ಟ್‌ನವರು ಕಾಂಗ್ರೆಸ್‌ ನಾಯಕರ ಮನೆ ಬಾಗಿಲಿಗೆ ಹೋಗಿ ಆಹ್ವಾನ ನೀಡಿದರೂ ಅವರು ಉದ್ಘಾಟನೆಗೆ ಬರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಶಿರಸಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಅಯೋಧ್ಯೆಯಲ್ಲಿ ಪ್ರಭು ರಾಮನ ಪ್ರತಿಷ್ಠಾಪನೆ ಮಾಡಲು 500 ವರ್ಷಗಳ ಕಾಲ ಹೋರಾಟ ನಡೆಸಿದರು. ಆದರೆ, ನಿಮ್ಮ ಎನ್‌ಡಿಎ ಸರ್ಕಾರ ಇಷ್ಟು ವರ್ಷಗಳ ಹೋರಾಟಕ್ಕೆ ಫಲ ನೀಡಿದೆ. ರಾಮ ಮಂದಿರವನ್ನು ನಿರ್ಮಾಣ ಮಾಡಿ ಶ್ರೀ ರಾಮಲಲ್ಲಾನ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಇದು ನಿಮ್ಮೆಲ್ಲರ ಮತಗಳಿಂದ ಮಾತ್ರ ಸಾಧ್ಯವಾಗಿದೆ. ಇದರಿಂದ ಈ ದೇಶಕ್ಕೆ ಪುಣ್ಯ ಸಿಗುವುದಿಲ್ಲವೇ? ಈ ಪುಣ್ಯದ ಹಕ್ಕುದಾರರು ಯಾರು? ನಮಗೆ ಮತಹಾಕಿದ ನೀವೇ ಇದಕ್ಕೆ ಹಕ್ಕುದಾರರಾಗಿದ್ದೀರಿ. ಹೀಗಾಗಿ ಇದರ ಪುಣ್ಯ ನಿಮಗೇ ಸಿಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಈ ರಾಮಮಂದಿರವನ್ನು ಸರ್ಕಾರದ ಖಜಾನೆಯಿಂದ ನಿರ್ಮಾಣ ಮಾಡಿದ್ದಲ್ಲ, ದೇಶದ ನಾಗರಿಕರ ತೆರಿಗೆ ಹಣದಿಂದ ಕಟ್ಟಿದ್ದಲ್ಲ. ಇದು ಹಿಂದುಸ್ತಾನದ ಪ್ರತಿಯೊಬ್ಬ ರಾಮ ಭಕ್ತ ನೀಡಿದ ದೇಣಿಗೆಯಿಂದ ಕಟ್ಟಲಾಗಿದೆ. ಇದಕ್ಕಾಗಿ ಕೆಲವರು 5 ರೂ., 100 ರೂ, ಲಕ್ಷಾಂತರ, ಕೋಟ್ಯಂತರ ರೂಪಾಯಿಗಳನ್ನು ದೇಣಿಗೆಯಾಗಿ ಕೊಟ್ಟಿದ್ದಾರೆ ಆದರೆ, ಕಾಂಗ್ರೆಸ್‌ ಪಕ್ಷ ಹಾಗೂ ಅವರ ಮಿತ್ರ ಪಕ್ಷಗಳು ರಾಮ ಮಂದಿರ ನಿರ್ಮಾಣವನ್ನು ತಡೆಯಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. 70 ವರ್ಷಗಳ ಕಾಲ ಮಂದಿರ ನಿರ್ಮಾಣಕ್ಕೆ ತಡೆಯೊಡ್ಡಿದ್ದರು. ಆದರೆ, ರಾಮಮಂದಿರ ಟ್ರಸ್ಟಿಗಳು ಅವರ ಈ ಎಲ್ಲ ಪಾಪಗಳನ್ನು ಕ್ಷಮಿಸಿ, ಅವರ ಮನೆಗಳಿಗೆ ಹೋಗಿ ಪ್ರಭು ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಬನ್ನಿ ಎಂದು ಆಹ್ವಾನವನ್ನು ಕೊಟ್ಟರು. ಆದರೆ, ಅವರು ಮಾಡಿದ್ದೇನು? ಕಾರ್ಯಕ್ರಮಕ್ಕೆ ಬರಲು ನಿರಾಕರಣೆ ಮಾಡಿದರು ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಶಿರಸಿಯ ಮೋದಿ ಸಮಾವೇಶದ ಲೈವ್‌ ವಿಡಿಯೊ ಇಲ್ಲಿದೆ

ವಿಕಸಿತ ಕರ್ನಾಟಕ ಹಾಗೂ ವಿಕಸಿತ ಭಾರತಕ್ಕೋಸ್ಕರ ನಿಮ್ಮೆಲ್ಲರ ಆಶೀರ್ವಾದವನ್ನು ಬೇಡಲು ಬಂದಿದ್ದೇನೆ. ನನಗೆ ಇಲ್ಲಿ ಬಂದ ಮೇಲೆ ಇಷ್ಟು ಪ್ರಮಾಣದಲ್ಲಿ ಮಾತೆಯರು ಸೇರಿರುವುದನ್ನು ನೋಡಿದರೆ ನನಗೆ ತಿಳಿಯುತ್ತಿದೆ. ನಿಮ್ಮ ಆಶೀರ್ವಾದ ನನ್ನ ಮೇಲೆ ಅವಶ್ಯವಾಗಿ ಇದೆ. ಇನ್ನು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ನನ್ನ ಸಂಪುಟದ ಸದಸ್ಯರಾದ ಪ್ರಲ್ಹಾದ್‌ ಜೋಶಿ ಅವರನ್ನು ಭಾರಿ ಅಂತರದಿಂದ ನೀವು ಗೆಲ್ಲಿಸಲಿದ್ದೀರಿ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನಿಮಗೆ ಮನೆ, ವಿದ್ಯುತ್‌, ನೀರಿನ ಸಂಪರ್ಕ ಕೊಡಲು ಎನ್‌ಡಿಎ ಸರ್ಕಾರ ಸಾಕಷ್ಟು ಕೆಲಸ ಮಾಡಿದೆ. ಧಾರವಾಡದಲ್ಲಿ ಐಐಟಿ ಮಾಡಿದ್ದೇವೆ, ಬಹುದೊಡ್ಡ ಸುಸಜ್ಜಿತ ರೈಲ್ವೆ ನಿಲ್ದಾಣವನ್ನು ಮಾಡಲಾಗಿದೆ. ಅಮೆರಿಕದಲ್ಲಿ ಸಹ ಭಾರತಕ್ಕೆ ಜೈಕಾರ ಸಿಗುತ್ತಿದೆ. ಯುರೋಪ್‌ನಲ್ಲಿ ಸಹ ಭಾರತಕ್ಕೆ ಗೌರವ ಸಿಗುತ್ತಿದೆ. ಹಿಂದುಸ್ತಾನದ ಯಾರು ವಿದೇಶದ ಯಾವುದೇ ಮೂಲೆಗೆ ಹೋದರೂ ಭಾರತವನ್ನು ಗುರುತಿಸುತ್ತಾರೋ ಇಲ್ಲವೋ? ಇದೆಲ್ಲ ಆಗಿದ್ದು ಯಾರಿಂದ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಈ ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡಿಲ್ಲ. ಇದನ್ನು ನಿಮ್ಮ ಪ್ರತಿ ಮತವು ಮಾಡಿದೆ. ಕಳೆದ 10 ವರ್ಷದಲ್ಲಿ ನೀವು ನೀಡಿದ ಮತಗಳು ಇದೆಲ್ಲವನ್ನೂ ಮಾಡಿವೆ. ನಿಮ್ಮ ಏಕೈಕ ಮತಗಳ ಶಕ್ತಿಯಿಂದ ಇದೆಲ್ಲವನ್ನೂ ಮಾಡಲು ಸಾಧ್ಯವಾಯಿತು. 140 ಕೋಟಿ ಭಾರತೀಯರು ನನ್ನ ಹಿಂದೆ ನಿಂತಿದ್ದೇ ಹೌದಾದರೆ ನಾವು ಏನನ್ನಾದರೂ ಸಾಧಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ನೇಹಾ ಕೊಲೆ ಪ್ರಕರಣ ಉಲ್ಲೇಖ

ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ಕೊಲೆ ಪ್ರಕರಣ ನಡೆದಿದೆ. ಹೆಣ್ಣು ಮಕ್ಕಳಿಗೆ ಈ ರಾಜ್ಯದಲ್ಲಿ ಈಗ ರಕ್ಷಣೆಯೇ ಇಲ್ಲವೇ? ಕರ್ನಾಟಕದಲ್ಲಿ ಪ್ರತಿಯೊಬ್ಬ ಪೋಷಕರಿಗೂ ತಮ್ಮ ಹೆಣ್ಣು ಮಗಳ ರಕ್ಷಣೆಯ ಭಯ ಕಾಡುತ್ತಿದೆ. ಈ ಕಾಂಗ್ರೆಸ್‌ನಿಂದ ನಿಮ್ಮ ಮಗಳನ್ನು ರಕ್ಷಣೆ ಮಾಡಲು ಆಗುವುದಿಲ್ಲವೇ? ಕರ್ನಾಟಕದಲ್ಲಿ ಈ ಸರ್ಕಾರದಿಂದ ಮಹಿಳೆಯರ ರಕ್ಷಣೆ ಗಂಭೀರ ಸವಾಲಾಗಿದೆ. ಕೆಟ್ಟ ಸರ್ಕಾರದ ಸಲುವಾಗಿ ಈ ರೀತಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ.

ಇದನ್ನೂ ಓದಿ: PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

ಕಾಂಗ್ರೆಸ್‌ ಸರ್ಕಾರ ಬರುತ್ತಿದ್ದಂತೆ ಬಾಂಬ್‌ ಸ್ಫೋಟ!

2014ರ ನಂತರ ಬೆಂಗಳೂರಲ್ಲಿ, ದಿಲ್ಲಿಯಲ್ಲಿ, ಗಾಂಧಿನಗರದಲ್ಲಿ, ಸೂರತ್‌ನಲ್ಲಿ, ಮುಂಬೈ ರೇಲ್ವೆ ನಿಲ್ದಾಣದಲ್ಲಿ ಬಾಂಬ್‌ ಸ್ಫೋಟ ಆಯಿತು ಎಂಬ ಸುದ್ದಿಯನ್ನು ನೀವು ಕೇಳಿದ್ದೀರಾ? ಆದರೆ, ಈಗ ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಏನಾಯಿತು? ಮಂಗಳೂರಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟವಾಯಿತು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಸ್ಫೋಟವಾಯಿತು ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಬಾಂಬರ್‌ಗಳಿಗೆ ಕಾಂಗ್ರೆಸ್‌ ಕುಮ್ಮಕ್ಕು ನೀಡುತ್ತಿದೆ. ನಾವು ಎನ್‌ಐಎ ಮೂಲಕ ಇಂಥ ದೇಶದ್ರೋಹಿಗಳನ್ನು ಬಗ್ಗುಬಡಿಯುವ ಕೆಲಸವನ್ನು ಮಾಡುತ್ತಿದ್ದೇವೆ. ಎಲ್ಲ ಕಡೆ ಕಟ್ಟೆಚ್ಚರವನ್ನು ವಹಿಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Continue Reading

ಕ್ರೀಡೆ

TCS World 10K : ಲಿಲಿಯನ್ ಕಸಾಯಿತ್, ಪೀಟರ್ ಮ್ವಾನಿಕಿ ಚಾಂಪಿಯನ್​

TCS World 10K: ಹಾಟ್ ಫೇವರಿಟ್ ಆಗಿ ರೇಸ್ ಗೆ ಬಂದ ಮ್ವಾನಿಕಿ ಸಾಮಾನ್ಯ ಆರಂಭ ಪಡೆದರು. 7.5 ಕಿ.ಮೀ ದೂರವನ್ನು ಕ್ರಮಿಸಿದ ಅವರು ಕೀನ್ಯಾದ ಹಿಲರಿ ಚೆಪ್ಕ್ವಾನಿ ಅವರೊಂದಿಗೆ ಸಮಬಲ ಸಾಧಿಸಿದರು. ಅಂತಿಮ ಸುತ್ತಿನಲ್ಲಿ ಮ್ವಾನಿಕಿ 28:15 ಸೆಕೆಂಡುಗಳಲ್ಲಿ ಗುರಿ ತಲುಪಿದರೆ, ಹಿಲರಿ ಚೆಪ್ಕ್ವಾನಿ (28:33) ನಂತರದ ಸ್ಥಾನ ಪಡೆದರು. 17ರ ಹರೆಯದ ಹಗೋಸ್ ಐಯೋಬ್ 28:39 ಸೆಕೆಂಡುಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆದರು.

VISTARANEWS.COM


on

TCS World 10K
Koo

ಬೆಂಗಳೂರು: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ವರ್ಲ್ಡ್ 10ಕೆ ಬೆಂಗಳೂರು (TCS World 10K) ಟೂರ್ನಿಯ 16ನೇ ಆವೃತ್ತಿಯಲ್ಲಿ ಕೀನ್ಯಾದ ಪೀಟರ್ ಮ್ವಾನಿಕಿ ಪುರುಷರ ಪ್ರಶಸ್ತಿ ಗೆದ್ದರೆ, ಲಿಲಿಯನ್ ಕಸಾಯಿತ್ ಮಹಿಳಾ ಪ್ರಶಸ್ತಿ ಗೆದ್ದಿದ್ದಾರೆ. ಭಾರತದ ಎಲೈಟ್ ಅಥ್ಲೀಟ್​ಗಳ ನಡುವಿನ ಸ್ಪರ್ಧೆಯಲ್ಲಿ ಕಿರಣ್ ಮಾತ್ರೆ ಅವರು 29:32 ನಿಮಿಷದೊಂದಿಗೆ ಮೊದಲ ಸ್ಥಾನ ಗೆದ್ದು ಈವೆಂಟ್ ದಾಖಲೆಯನ್ನು ಮುರಿದರು.

ಪ್ರತಿಷ್ಠಿತ ಮ್ಯಾರಾಥಾನ್​ ನಲ್ಲಿ ಅಥ್ಲೀಟ್​​ಗಳು 1.75 ಕೋಟಿ ರೂಪಾಯಿ (210,000 ಯುಎಸ್​​ ಡಾಲರ್​) ಬಹುಮಾನ ಪಡೆದುಕೊಂಡಿದ್ದಾರೆ. ಪೀಟರ್ ಮ್ವಾನಿಕಿ ಮತ್ತು ಲಿಲಿಯನ್ ಕಸಾಯಿತ್ ತಲಾ 21,68,476 ಲಕ್ಷ ರೂಪಾಯಿ (26,000 ಯುಎಸ್​ ಡಾಲರ್​​) ಸಮಾನ ಬಹುಮಾನದ ಚೆಕ್ ಪಡೆದರು. ಭಾರತೀಯ ಎಲೈಟ್ ವಿಭಾಗದಲ್ಲಿ ಕಿರಣ್ ಮಾತ್ರೆ ಮತ್ತು ಸಂಜೀವನಿ ಜಾಧವ್ ತಲಾ 2,75,000 ರೂ. ಇದಲ್ಲದೆ, ಈವೆಂಟ್ ದಾಖಲೆಯನ್ನು ಮುರಿದಿದ್ದಕ್ಕಾಗಿ ಕಿರಣ್ ಮಾತ್ರೆ 1,00,000 ರೂ.ಗಳ ಬೋನಸ್ ಪಡೆದರು.

ಹಾಟ್ ಫೇವರಿಟ್ ಆಗಿ ರೇಸ್ ಗೆ ಬಂದ ಮ್ವಾನಿಕಿ ಸಾಮಾನ್ಯ ಆರಂಭ ಪಡೆದರು. 7.5 ಕಿ.ಮೀ ದೂರವನ್ನು ಕ್ರಮಿಸಿದ ಅವರು ಕೀನ್ಯಾದ ಹಿಲರಿ ಚೆಪ್ಕ್ವಾನಿ ಅವರೊಂದಿಗೆ ಸಮಬಲ ಸಾಧಿಸಿದರು. ಅಂತಿಮ ಸುತ್ತಿನಲ್ಲಿ ಮ್ವಾನಿಕಿ 28:15 ಸೆಕೆಂಡುಗಳಲ್ಲಿ ಗುರಿ ತಲುಪಿದರೆ, ಹಿಲರಿ ಚೆಪ್ಕ್ವಾನಿ (28:33) ನಂತರದ ಸ್ಥಾನ ಪಡೆದರು. 17ರ ಹರೆಯದ ಹಗೋಸ್ ಐಯೋಬ್ 28:39 ಸೆಕೆಂಡುಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆದರು.

TCS World 10 K

ತನ್ನ ವಿಜಯದ ಬಗ್ಗೆ ಮಾತನಾಡಿದ ಲಿಲಿಯನ್ ಕಸಾಯಿತ್, “ಇದು ತುಂಬಾ ಆಕ್ರಮಣಕಾರಿ ಓಟವಾಗಿತ್ತು, ನಾವು ಆರಂಭದಿಂದಲೂ ವೇಗವಾಗಿದ್ದೆ ಎಂದು ಹೇಳಿದ್ದಾರೆ. ಆದಾಗ್ಯೂ ದಾಖಲೆ ಮುರಿಯಲು ಸಾಧ್ಯವಾಗದಿರುವುದಕ್ಕೆ ವಿಷಾದಿಸಿದರು. ನಾನು ಇಂದು ಕೋರ್ಸ್ ದಾಖಲೆ ಮುರಿಯಬಹುದಿತ್ತು ಎಂದು ನಾನು ಭಾವಿಸುತ್ತೇನೆ. ಓಟದ ಕೊನೆಯಲ್ಲಿ ನನ್ನಲ್ಲಿ ಇನ್ನೂ ಸಾಕಷ್ಟು ಶಕ್ತಿ ಇದೆ ಎಂದು ನಾನು ಭಾವಿಸಿದೆ ಎಂದು ಹೇಳಿದ್ದಾರೆ.

ಭಾರತೀಯ ಎಲೈಟ್​​ ಪುರುಷರ ರೇಸ್ ನಲ್ಲಿ ಮೊದಲ ನಾಲ್ಕು ಸ್ಥಾನಗಳು ಹಿಂದಿನ ಕೋರ್ಸ್ ದಾಖಲೆಗಿಂತ ಮುಂದಿವೆ. ಸಮಬಲದ ಹೋರಾಟದಲ್ಲಿ ಕಿರಣ್ ಮಾತ್ರೆ 29:32 ಸೆಕೆಂಡುಗಳಲ್ಲಿ ಗುರಿ ತಲುಪಿ ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡಿದರು. ರಂಜೀತ್ ಕುಮಾರ್ ಪಟೇಲ್ (29:35) ಮತ್ತು ಧರ್ಮೇಂದ್ರ (29:45) ಗುರಿ ತಲುಪಿದರು.
ಕಿರಣ್ ಮಾತ್ರೆ, ರಂಜೀತ್ ಕುಮಾರ್ ಪಟೇಲ್ ಮತ್ತು ಧರ್ಮೇಂದ್ರ ಅವರನ್ನೊಳಗೊಂಡ ತಂಡ ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರಿನ ಹಿಂದಿನ ಆವೃತ್ತಿಯಿಂದ ಕ್ರಮವಾಗಿ 12, 9 ಮತ್ತು 10ನೇ ಸ್ಥಾನ ಗಳಿಸಿತ್ತು.

ಇದನ್ನೂ ಓದಿ: KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

ಗೆಲುವಿನ ನಂತರ ಮಾತನಾಡಿದ ಕಿರಣ್ ಮಾತ್ರೆ, “4 ಮತ್ತು 8 ನೇ ಕಿಲೋಮೀಟರ್ ನಡುವೆ, ಓಟವು ನನಗೆ ಸಾಕಷ್ಟು ಸವಾಲಿನದ್ದಾಗಿತ್ತು, ಆದ್ದರಿಂದ ಫಲಿತಾಂಶದಿಂದ ನನಗೆ ತುಂಬಾ ಸಂತೋಷವಾಗಿದೆ. ಕಳೆದ ವರ್ಷ ನಾನು 12 ನೇ ಸ್ಥಾನವನ್ನು ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಸಂಜೀವಿನಿಗೆ ಮೂರನೇ ಗೆಲುವು

ಸಂಜೀವನಿ ಟಿಸಿಎಸ್ ವರ್ಲ್ಡ್ 10 ಕೆ ಬೆಂಗಳೂರಿನಲ್ಲಿ ನಡೆದ ಮಹಿಳಾ ವಿಭಾಗದಲ್ಲಿ ಪ್ರಾಬಲ್ಯ ಸಾಧಿಸಿ ಮೂರನೇ ಗೆಲುವು ಸಾಧಿಸಿದರು. ಅಂತರರಾಷ್ಟ್ರೀಯ ಮಹಿಳಾ ಸ್ಪರ್ಧೆಯಂತೆಯೇ, ಭಾರತೀಯ ಮಹಿಳಾ ಓಟದಲ್ಲಿ ಸೋನಮ್ (36:27) ಆರಂಭಿಕ ಮುನ್ನಡೆ ಸಾಧಿಸಿದರು. ಸಂಜೀವನಿ 34:03 ಸೆಕೆಂಡುಗಳಲ್ಲಿ ಗುರಿ ತಲುಪಿ ಮತ್ತೊಂದು ದಾಖಲೆ ನಿರ್ಮಿಸಿದರು. ಲಿಲ್ಲಿ ದಾಸ್ (34:13) ಎರಡನೇ ಸ್ಥಾನ ಪಡೆದರೆ, ಪ್ರೀತಿ ಯಾದವ್ (34:24) ಮೂರನೇ ಸ್ಥಾನ ಪಡೆದರು.

Continue Reading
Advertisement
Summer Fashion
ಫ್ಯಾಷನ್6 mins ago

Summer Fashion: ಬೇಸಿಗೆಯಲ್ಲಿ ಕ್ರಾಪ್‌ ಟೀ ಶರ್ಟ್‌ ಸ್ಟೈಲಿಂಗ್‌ಗೆ 3 ಐಡಿಯಾ

Drugs Smuggling
ದೇಶ11 mins ago

Drugs Smuggling: ಗುಜರಾತ್‌ನಲ್ಲಿ ಪಾಕ್‌ನ 14 ಜನರ ಬಂಧನ, 600 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ!

Shiva Rajkumar Graces Muhurtha Of Father Kannada Movie
ಸ್ಯಾಂಡಲ್ ವುಡ್11 mins ago

Shiva Rajkumar: ಸೆಟ್ಟೇರಿತು ಶಿವರಾಜ್‌ಕುಮಾರ್‌ – ಆರ್ ಚಂದ್ರು ಕಾಂಬಿನೇಷನ್‌ನ ಹೊಸ ಸಿನಿಮಾ!

Hassan Pen Drive Case
ಕರ್ನಾಟಕ19 mins ago

Hassan Pen Drive Case: ಹಾಸನ ಅಶ್ಲೀಲ ವಿಡಿಯೊ ಪ್ರಕರಣ; ಬಿ.ಕೆ.ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202423 mins ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ದೇಶ39 mins ago

Trinmool Congress: ಟಿಎಂಸಿ ಕಾರ್ಯಕರ್ತನ ಭೀಕರ ಹತ್ಯೆ; ಬಿಜೆಪಿ ನಾಯಕಿ ಮೇಲೆ ಡೆಡ್ಲಿ ಅಟ್ಯಾಕ್‌!

Crime News
ವೈರಲ್ ನ್ಯೂಸ್45 mins ago

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆಗೆ ಶರಣಾದ 12 ವರ್ಷದ ಬಾಲಕಿ

Pakistan Cricket
ಕ್ರಿಕೆಟ್49 mins ago

Pakistan Cricket: ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್ ಪಾಕ್​ ತಂಡಕ್ಕೆ ನೂತನ ಕೋಚ್​

Amit Shah
ದೇಶ51 mins ago

Amit Shah: ಬಿಜೆಪಿ ಗೆದ್ದರೆ ಮುಸ್ಲಿಮರ ಮೀಸಲಾತಿ ಒಬಿಸಿಗೆ; ಅಮಿತ್‌ ಶಾ ಘೋಷಣೆ

Samantha Ruth Prabhu announces new film Bangaram
ಟಾಲಿವುಡ್1 hour ago

Samantha Ruth Prabhu: ಜನ್ಮದಿನದಂದೇ ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟಿ ಸಮಂತಾ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202423 mins ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20245 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ8 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌