IND VS AUS: ಅಂತಿಮ ಏಕದಿನ ಪಂದ್ಯದಿಂದ ಸೂರ್ಯಕುಮಾರ್​ಗೆ ಕೊಕ್​ ಸಾಧ್ಯತೆ - Vistara News

ಕ್ರಿಕೆಟ್

IND VS AUS: ಅಂತಿಮ ಏಕದಿನ ಪಂದ್ಯದಿಂದ ಸೂರ್ಯಕುಮಾರ್​ಗೆ ಕೊಕ್​ ಸಾಧ್ಯತೆ

ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಕಳಪೆ ಬ್ಯಾಟಿಂಗ್​ ನಡೆಸಿದ ಸೂರ್ಯಕಯಮಾರ್​ ಯಾದವ್​ಗೆ ಅಂತಿಮ ಏಕದಿನ ಪಂದ್ಯದಲ್ಲಿ ಅವಕಾಶ ಸಿಗುವುದು ಅನುಮಾನ ಎನ್ನಲಾಗಿದೆ.

VISTARANEWS.COM


on

IND VS AUS: Suryakumar likely to miss out on final ODI
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಆಸ್ಟ್ರೇಲಿಯಾ(IND VS AUS) ವಿರುದ್ಧ ಆಡಿದ ಎರಡು ಏಕದಿನ ಪಂದ್ಯದಲ್ಲಿಯೂ ಶೂನ್ಯ ಸುತ್ತಿದ ಸೂರ್ಯಕುಮಾರ್​ ಯಾದವ್​((Suryakumar Yadav)) ಅವರನ್ನು ಅಂತಿಮ ಏಕದಿನ ಪಂದ್ಯದಿಂದ ಕೈ ಬಿಡಲಾಗುವುದು ಎಂದು ತಿಳಿದುಬಂದಿದೆ. ಭಾರತ ಮತ್ತು ಆಸೀಸ್​ ವಿರುದ್ಧದ ಅಂತಿಮ ಏಕದಿನ ಪಂದ್ಯ ಬುಧವಾರ(ಮಾರ್ಚ್​ 22) ಚೆನ್ನೈಯಲ್ಲಿ ನಡೆಯಲಿದೆ.

ಟ್ವಿ 20 ಕ್ರಿಕೆಟ್​ನಲ್ಲಿ ಸ್ಫೋಟಕ ಬ್ಯಾಟಿಂಗ್​ ಮೂಲಕ ಗಮನ ಸೆಳೆದಿದ್ದ ಸೂರ್ಯಕುಮಾರ್​ ಯಾದವ್​ ಆಸೀಸ್​ ವಿರುದ್ಧದ ಏಕದಿನ ಸರಣಿಯಲ್ಲಿ ಇನ್ನೂ ಖಾತೆ ತೆರೆಯುವಲ್ಲಿ ವಿಫಲರಾಗಿದ್ದಾರೆ. ಎರಡೂ ಪಂದ್ಯಗಳಲ್ಲಿಯೂ ಮಿಚೆಲ್​ ಸ್ಟಾರ್ಕ್​ ಅವರ ಬೌಲಿಂಗ್​ನಲ್ಲಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದಿದ್ದರು. ಇದೀಗ ಸರಣಿ ನಿರ್ಣಾಯಕ ಪಂದ್ಯದಲ್ಲಿ ಅವರನ್ನು ಆಡಿಸುವುದು ಅನುಮಾನ ಎನ್ನಲಾಗಿದೆ.

ಅಂತಿಮ ಪಂದ್ಯದಲ್ಲಿ ಸೂರ್ಯಕುಮಾರ್​ ಯಾದವ್​ ಬದಲು ಇಶಾನ್​ ಕಿಶನ್​​(Ishan Kishan) ಆಡುವ ಬಳಗದಲ್ಲಿ ಕಾಣಿಸಿಕೊಳ್ಳವುದು ಬಹುತೇಕ ಖಚಿತ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇನ್ನೊಂದೆಡೆ ಸ್ಪಿನ್ನರ್​ ಕುಲ್​ದೀಪ್​ ಯಾದವ್(Kuldeep Yadav)​​ ಬದಲು ಯಜುವೇಂದ್ರ ಚಹಲ್​(Yuzvendra Chahal) ಆಡುವ ಸಾಧ್ಯತೆ ಇದೆ. ಕುಲ್​ದೀಪ್ ಕಳೆದ ಎರಡು ಪಂದ್ಯಗಳಲ್ಲಿ ವಿಕೆಟ್​ ಕೀಳಲು ವಿಫಲವಾಗುವ ಜತೆಗೆ ಅತ್ಯಂತ ದುಬಾರಿಯಾಗಿ ಪರಿಣಮಿಸಿದ್ದರು.

ಭಾರತ ಈ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಒತ್ತಡಕ್ಕೆ ಸಿಲುಕಿದೆ. ಒಂದೊಮ್ಮೆ ಭಾರತ ಈ ಪಂದ್ಯದಲ್ಲಿ ಸೋತರೆ ಸರಣಿಯ ಜತೆಗೆ ಏಕದಿನ ಶ್ರೇಯಾಂಕದಲ್ಲಿ ನಂ.1 ಸ್ಥಾನ ಕಳೆದುಕೊಳ್ಳಲಿದೆ. ಹೀಹಾಗಿ ಭಾರತಕ್ಕೆ ಈ ಪಂದ್ಯ ಎರಡು ಕಾರಣಗಳಿಂದ ಮಹತ್ವದಾಗಿದೆ.

ಇದನ್ನೂ ಓದಿ IND VS AUS: ಭಾರತ-ಆಸ್ಟ್ರೇಲಿಯಾ ಅಂತಿಮ ಏಕದಿನ ಪಂದ್ಯದ ಪಿಚ್​ ರಿಪೋರ್ಟ್​, ಸಂಭಾವ್ಯ ತಂಡ

ಭಾರತ ಸಂಭಾವ್ಯ ತಂಡ

ಶುಭಮನ್ ಗಿಲ್, ರೋಹಿತ್​ ಶರ್ಮಾ(ನಾಯಕ), ವಿರಾಟ್ ಕೊಹ್ಲಿ, ಇಶಾನ್​ ಕಿಶನ್​, ಕೆ.ಎಲ್ ರಾಹುಲ್ (ವಿಕೆಟ್​ ಕೀಪರ್​), ಹಾರ್ದಿಕ್ ಪಾಂಡ್ಯ , ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್​, ಯಜುವೇಂದ್ರ ಚಹಲ್​, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರಿಕೆಟ್

KL Rahul: ಟಿ20 ವಿಶ್ವಕಪ್​ನಲ್ಲಿ ರಾಹುಲ್​ಗೆ ಅವಕಾಶ ಸಿಗದಿರಲು ಕಾರಣ ತಿಳಿಸಿದ ಮಾಜಿ ಆಟಗಾರ

KL Rahul: “ದುರದೃಷ್ಟವಶಾತ್ ರಾಹುಲ್​ ಐಪಿಎಲ್​ನಲ್ಲಿ ಆರಂಭಿಕನಾಗಿ ಆಡಿದ್ದೇ ಅವರಿಗೆ ಮುಳುವಾಯಿತು. ಹೀಗಾಗಿ ಅವರು ಟಿ20 ವಿಶ್ವಕಪ್​ಗೆ ಆಯ್ಕೆಯಾಗಿಲ್ಲ. ಒಂದೊಮ್ಮೆ ಏಕದಿನ ವಿಶ್ವಕಪ್​ನಂತೆ ಐಪಿಎಲ್​ನಲ್ಲಿಯೂ ಮಧ್ಯಮ ಕ್ರಮಾಂಕದಲ್ಲಿ ರಾಹುಲ್​ ಆಡುತ್ತಿದ್ದರೆ ಅವರಿಗೆ ಸ್ಥಾನ ಸಿಗುತ್ತಿತ್ತು” ಎಂದು ಇರ್ಫಾನ್​ ಪಠಾಣ್​ ಹೇಳಿದ್ದಾರೆ.

VISTARANEWS.COM


on

KL Rahul
Koo

ಮುಂಬಯಿ: ಭಾರತದ ಮಾಜಿ ವೇಗದ ಬೌಲರ್ ಇರ್ಫಾನ್ ಪಠಾಣ್(Irfan Pathan) ಭಾರತದ ಟಿ20 ವಿಶ್ವಕಪ್(T20 World Cup) ತಂಡದಿಂದ ಕೆ.ಎಲ್​ ರಾಹುಲ್(KL Rahul) ಅವರನ್ನು ಕೈಬಿಡಲು ಕಾರಣ ಏನೆಂಬುದನ್ನು ವಿವರಿಸಿದ್ದಾರೆ. ಅಹಮದಾಬಾದ್‌ನಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ನಡೆಸಿದ ಸಭೆಯ ಬಳಿಕ 15 ಸದಸ್ಯರ ತಂಡವನ್ನು ಪ್ರಕಟಿಸಲಾಯಿತು. ರಿಷಭ್​ ಪಂತ್​(Rishabh Pant) ಮೊದಲ ಆಯ್ಕೆಯ ಕೀಪರ್​ ಆಗಿದ್ದರೂ ಕೂಡ ರಾಹುಲ್​ ಅವರಿಗೆ ಅವಕಾಶ ಸಿಗಬಹುದೆಂದು ಎಲ್ಲರು ನಿರೀಕ್ಷೆ ಮಾಡಿದ್ದರು. ಆದರೆ ತಂಡ ಪ್ರಕಟಗೊಂಡಾಗ ಅವರ ಬದಲು ಸಂಜು ಸ್ಯಾಮ್ಸನ್​ ಹೆಸರಿತ್ತು. ಇದು ಎಲ್ಲರಿಗೂ ಅಚ್ಚರಿ ಮೂಡಿಸಿತ್ತು.

“ದುರದೃಷ್ಟವಶಾತ್ ರಾಹುಲ್​ ಐಪಿಎಲ್​ನಲ್ಲಿ ಆರಂಭಿಕನಾಗಿ ಆಡಿದ್ದೇ ಅವರಿಗೆ ಮುಳುವಾಯಿತು. ಹೀಗಾಗಿ ಅವರು ಟಿ20 ವಿಶ್ವಕಪ್​ಗೆ ಆಯ್ಕೆಯಾಗಿಲ್ಲ. ಒಂದೊಮ್ಮೆ ಏಕದಿನ ವಿಶ್ವಕಪ್​ನಂತೆ ಐಪಿಎಲ್​ನಲ್ಲಿಯೂ ಮಧ್ಯಮ ಕ್ರಮಾಂಕದಲ್ಲಿ ರಾಹುಲ್​ ಆಡುತ್ತಿದ್ದರೆ ಅವರಿಗೆ ಸ್ಥಾನ ಸಿಗುತ್ತಿತ್ತು” ಎಂದು ಇರ್ಫಾನ್​ ಪಠಾಣ್​ ಹೇಳಿದ್ದಾರೆ.

ಆರಂಭಿಕ ಸ್ಥಾನಕ್ಕೆ ರೋಹಿತ್​ ಶರ್ಮ ಜತೆ ಶುಭಮನ್​ ಗಿಲ್​ ಮತ್ತು ಜೈಸ್ವಾಲ್​ ರೇಸ್​ನಲ್ಲಿದ್ದರು. ಹೀಗಾಗಿ ರಾಹುಲ್​ಗೆ ಈ ಸ್ಥಾನ ಸಿಗುವು ಅನುಮಾನ ಎನ್ನುವುದು ಮೊದಲೇ ತಿಳಿದಿತ್ತು. ಬಿಸಿಸಿಐ ಮತ್ತು ಆಯ್ಕೆ ಸಮಿತಿ ರಿಷಭ್​ ಪಂತ್​ ಫಿಟ್​ ಆಗದಿದ್ದರೆ ಅವರ ಸ್ಥಾನದಲ್ಲಿ ಕೀಪಿಂಗ್​ ಜತೆಗೆ ಮಧ್ಯಮ ಕ್ರಮಾಂಕದಲ್ಲಿ ಆಡುವ ಆಟಗಾರ ಹುಡುಕಾಟದಲ್ಲಿತ್ತು. ರಾಹುಲ್​ ಐಪಿಎಲ್​ನಲ್ಲಿ ಆರಂಭಿಕನಾಗಿ ಆಡಿದರೆ, ಸಂಜು ವಿಕೆಟ್​ ಕೀಪಿಂಗ್​ ಜತೆಗೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್​ ಬೀಸುತ್ತಿದ್ದಾರೆ. ಇದೇ ಕಾರಣ ಸಂಜುಗೆ(Sanju Samson) ಅವಕಾಶ ಸಿಕ್ಕಿತು ಎಂದು ಇರ್ಫಾನ್​ ವಿವರಿಸಿದರು.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್​ 29ಕ್ಕೆ ಫೈನಲ್​ ಪಂದ್ಯ ಸಾಗಲಿದೆ.

Continue Reading

ಕ್ರಿಕೆಟ್

Viral Video: ಕಾಲಿನ ಗಾಯವನ್ನು ಲೆಕ್ಕಿಸದೆ ರೋಲರ್ ಓಡಿಸಿ ಪಿಚ್​ ಸಿದ್ಧಪಡಿಸಿದ ಮೊಹಮ್ಮದ್​ ಶಮಿ

Viral Video: 2 ವಾರ ಹಿಂದೆ ಶಮಿ ಅವರು 2 ಸ್ಟಿಕ್​ ವಾಕರ್​ಗಳೊಂದಿಗೆ ಗಾರ್ಡನ್​ನಲ್ಲಿ ನಿಂತಿರುವ ಫೋಟೊವನ್ನು ಹಂಚಿಕೊಂಡು, ‘ಮತ್ತೆ ಟ್ರ್ಯಾಕ್‌ಗೆ ಮರಳುವ ಹಸಿದಿದೆ. ಈ ಹಾದಿ ಕಠಿಣವಾಗಿರಬಹುದು, ಆದರೆ ಇದನ್ನೇಲ್ಲ ಎದುರಿಸಿ ಶೀಘ್ರದಲ್ಲೇ ಕ್ರಿಕೆಟ್​ಗೆ ಮರಳುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದರು.

VISTARANEWS.COM


on

Viral Video
Koo

ಲಕ್ನೋ: 2 ತಿಂಗಳ ಹಿಂದೆ ಲಂಡನ್​ನಲ್ಲಿ ಶಮಿ ಪಾದದ ಶಸ್ತ್ರಚಿಕಿತ್ಸೆಗೆ(mohammed shami injury update) ಒಳಗಾಗಿದ್ದ ಭಾರತ ಕ್ರಿಕೆಟ್​ ತಂಡದ ಪ್ರಧಾನ​ ವೇಗಿ ಮೊಹಮ್ಮದ್ ಶಮಿ(Mohammed Shami)ತಮ್ಮ ಕಾಲಿನ ಗಾಯದಿಂದ ಚೇತರಿಕೆ(Mohammed Shami injury update) ಕಾಣುತ್ತಿದ್ದಾರೆ. ಅಲ್ಲದೆ ಕ್ರಿಕೆಟ್​ಗೆ ಮರಳುವ ನಿಟ್ಟಿನಲ್ಲಿ ಪುನರ್ವಸತಿ ಆರಂಭಿಸಿದ್ದಾರೆ. ಇದೀಗ ಅವರು ತಮ್ಮ ನಿವಾಸದಲ್ಲೆ ನಿರ್ಮಾಣ ಮಾಡಿರುವ ಕ್ರಿಕೆಟ್​ ಪಿಚ್​ನಲ್ಲಿ ರೋಲರ್ ಓಡಿಸಿದ್ದಾರೆ. ಈ ವಿಡಿಯೊವನ್ನು ಅವರು ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ(Viral Video).

ಲಂಡನ್​ನಲ್ಲಿ ಶಮಿ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ವಿಶ್ರಾಂತಿಯಲ್ಲಿದ್ದ ಶಮಿ ಇದೀಗ ಮತ್ತೆ ಕ್ರಿಕೆಟ್​ಗೆ ಮರಳುವು ಸಿದ್ಧತೆಯಲ್ಲಿದ್ದಾರೆ. ನಿನ್ನೆಯಷ್ಟೇ(ಮಂಗಳವಾರ) ವಾಕಿಂಗ್​ ಸ್ಟಿಕ್​ಗಳೊಂದಿಗೆ ತಮ್ಮ ನಿವಾಸದಲ್ಲಿರುವ ಕಿಕೆಟ್​ ಪಿಚ್​ನಲ್ಲಿ ನಡೆದಾಡಿ ಕೆಲ ಕಾಲ ವ್ಯಾಯಾಮ ಕೂಡ ಮಾಡಿದ್ದರು. ಇದರ ಫೋಟೊ ಕೂಡ ಹಂಚಿಕೊಂಡಿದ್ದರು. ಇದೀಗ ಬುಧವಾರ ಪಿಚ್​ ಸಿದ್ಧತೆಯಲ್ಲಿ ತೊಡಗಿದ್ದಾರೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಬಳಿಕ ಶಮಿ ಯಾವುದೇ ಕ್ರಿಕೆಟ್​ ಆಡಿಲ್ಲ.

2 ವಾರ ಹಿಂದೆ ಶಮಿ ಅವರು 2 ಸ್ಟಿಕ್​ ವಾಕರ್​ಗಳೊಂದಿಗೆ ಗಾರ್ಡನ್​ನಲ್ಲಿ ನಿಂತಿರುವ ಫೋಟೊವನ್ನು ಹಂಚಿಕೊಂಡು, ‘ಮತ್ತೆ ಟ್ರ್ಯಾಕ್‌ಗೆ ಮರಳುವ ಹಸಿದಿದೆ. ಈ ಹಾದಿ ಕಠಿಣವಾಗಿರಬಹುದು, ಆದರೆ ಇದನ್ನೇಲ್ಲ ಎದುರಿಸಿ ಶೀಘ್ರದಲ್ಲೇ ಕ್ರಿಕೆಟ್​ಗೆ ಮರಳುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದರು. ಇದಕ್ಕೂ ಮುನ್ನ ಶಮಿ ತಮ್ಮ ಮನೆಯಲ್ಲಿ ಪಾದಕ್ಕೆ ಎಲೆಕ್ಟ್ರಿಕ್​ ಮಸಾಜ್​ ಮಾಡುತ್ತಿರುವ ಫೋಟೊವನ್ನು ಹಂಚಿಕೊಂಡಿದ್ದರು.

ಇದನ್ನೂ ಓದಿ Mohammed Shami: ಸ್ಟಿಕ್​ ವಾಕರ್ ಸಹಾಯದೊಂದಿಗೆ ವ್ಯಾಯಾಮ ಆರಂಭಿಸಿದ ಶಮಿ

ಚೇತರಿಕೆಯ ಹಾದಿಯಲ್ಲಿರುವ ಶಮಿ  ಈ ವರ್ಷದ ಕೊನೆಯಲ್ಲಿ ಬಾಂಗ್ಲಾದೇಶದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಗೆ ಪುನರಾಗಮನ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಗಾಯದಿಂದಾಗಿ ಶಮಿಗೆ ಈ ಬಾರಿ ಐಪಿಎಲ್​ ಸೇರಿ ಮಹತ್ವದ ಟಿ20 ವಿಶ್ವಕಪ್​ ಟೂರ್ನಿ ಕೈತಪ್ಪಿತು. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡಿದ್ದ ಶಮಿ, ಈ ಗಾಯವನ್ನು ಮರೆಮಾಚಿ ವಿಶ್ವಕಪ್​ನಲ್ಲಿ ಅಮೋಘ ಬೌಲಿಂಗ್​ ಪ್ರದರ್ಶನ ತೋರಿದ್ದರು.

ವಿಶ್ವಕಪ್​ ಟೂರ್ನಿಯಲ್ಲಿ ಶಮಿ ಅವರು ತಮ್ಮ ಮೊನಚಾದ ಬೌಲಿಂಗ್​ ದಾಳಿಯ ಮೂಲಕ ಟೂರ್ನಿಯಲ್ಲಿಯೇ ಅತ್ಯಧಿಕ ವಿಕೆಟ್​ ಪಡೆದ ಬೌಲರ್​ ಎನಿಸಿಕೊಂಡಿದ್ದರು. ಆಡಿದ 7 ಪಂದ್ಯಗಳಲ್ಲಿ 24 ವಿಕೆಟ್‌ ಉರುಳಿಸಿದ್ದರು. ಅವರ ಈ ಸಾಧನೆಯನ್ನು ಪರಿಗಣಿಸಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಕ್ರೀಡಾ ಗೌರವವಾದ ಅರ್ಜುನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಮೊಹಮ್ಮದ್ ಶಮಿ ಅರ್ಜುನ ಪ್ರಶಸ್ತಿ ಸ್ವೀಕರಿಸಿದ್ದರು. ಮೊಹಮ್ಮದ್ ಶಮಿ ಭಾರತ ಪರ 64 ಟೆಸ್ಟ್ ಪಂದ್ಯಗಳಲ್ಲಿ 229 ವಿಕೆಟ್ ಪಡೆದಿದ್ದಾರೆ. 101 ಏಕದಿನ ಪಂದ್ಯಗಳಲ್ಲಿ 195 ವಿಕೆಟ್ ಪಡೆದಿದ್ದಾರೆ. 23 ಟಿ20 ಪಂದ್ಯಗಳಲ್ಲಿ 24 ವಿಕೆಟ್ ಪಡೆದಿದ್ದಾರೆ.

Continue Reading

ಕ್ರೀಡೆ

Mayank Yadav: ಗಾಯಾಳು ಮಾಯಾಂಕ್‌ ಯಾದವ್‌ ಐಪಿಎಲ್​ನಿಂದ ಔಟ್​?

Mayank Yadav: ಮಯಾಂಕ್ ಗಾಯದ ಬಗ್ಗೆ ಮಾಹಿತಿ ನೀಡಿರುವ ತಂಡದ ಮುಖ್ಯ ಕೋಚ್​ ಜಸ್ಟೀನ್​ ಲ್ಯಾಂಗರ್​, ‘ಪರಿಪೂರ್ಣ ಪುನರ್ವಸತಿಗೆ ಒಳಗಾಗಿದ್ದರೂ, ಮಯಾಂಕ್​ಗೆ ಹೊಟ್ಟೆಯ ಕೆಳಭಾಗದಲ್ಲಿ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಸ್ಕ್ಯಾನಿಂಗ್​ಗೆ ಒಳಪಡಿಸಲಾಗಿದೆ. ಅವರಿಗೆ ಈ ನೋವಿನಿಂದ ಚೇತರಿಸಿಕೊಳ್ಳಲು ಕನಿಷ್ಠ ಮೂರು ವಾರಗಳ ವಿಶ್ರಾಂತಿ ಬೇಕಾಗಬಹುದು” ಎಂದು ಹೇಳಿದ್ದಾರೆ.

VISTARANEWS.COM


on

Mayank Yadav
Koo

ಲಕ್ನೋ: ಈ ಐಪಿಎಲ್‌ನಲ್ಲಿ(IPL 2024) ಶರವೇಗದ, ಅಷ್ಟೇ ನಿಖರ ಎಸೆತಗಳಿಂದ ಎದುರಾಳಿಯ ದಿಕ್ಕು ತಪ್ಪಿಸಿ ಗಂಟೆಗೆ 150 ಕಿಮೀ ವೇಗದಲ್ಲಿ ಚೆಂಡೆಸೆದು ಭಾರೀ ಸಂಚಲನ ಮೂಡಿಸುತ್ತಿದ್ದ ಲಕ್ನೋ ಸೂಪರ್‌ ಜೈಂಟ್ಸ್‌(Lucknow Super Giants) ತಂಡದ ವೇಗಿ ಮಾಯಾಂಕ್‌ ಯಾದವ್‌(Mayank Yadav) ಮತ್ತೆ ಗಾಯಗೊಂಡಿದ್ದು ಟೂರ್ನಿಯಿಂದ ಹೊರಬೀಳಲಿದ್ದಾರೆ ಎಂದು ತಿಳಿದುಬಂದಿದೆ.

ಈ ಬಾರಿಯ ಐಪಿಎಲ್​ ಆವೃತ್ತಿಯಲ್ಲಿ ಆರಂಭಿಕ ಮೂರು ಪಂದ್ಯಗಳನ್ನಾಡಿದ್ದ ಮಯಾಂಕ್​ ಗಾಯದಿಂದ ಆ ಬಳಿಕದ ಕೆಲವು ಪಂದ್ಯಗಳನ್ನಾಡಿರಲಿಲ್ಲ. ನಿನ್ನೆ(ಮಂಗಳವಾರ) ನಡೆದ ಮುಂಬೈ ಇಂಡಿಯನ್ಸ್​ ವಿರುದ್ಧದ ಪಂದ್ಯದ ಮೂಲಕ ಮತ್ತೆ ಮೈದಾನಕ್ಕಿಳಿದಿದ್ದರು. ಆದರೆ, ಪಂದ್ಯದ ವೇಳೆ ಮತ್ತೆ ಈ ಹಿಂದಿನ ಗಾಯಕ್ಕೆ ತುತ್ತಾಗಿ ಪಂದ್ಯದಿಂದ ಹೊರಗುಳಿದರು.

3.1 ಓವರ್‌ಗಳಲ್ಲಿ 31 ರನ್‌ಗಳಿಗೆ 1 ವಿಕೆಟ್‌ ಪಡೆದು ಗಾಯದಿಂದ ಪಂದ್ಯವನ್ನು ಅರ್ಧಕ್ಕೆ ಮೊಡಕುಗೊಳಿಸಿದ್ದರು. ಬಳಿಕ ಇವರ ಓವರನ್ನು ನವೀನ್​ ಉಲ್​ ಹಕ್​ ಪೂರ್ಣಗೊಳಿಸಿದ್ದರು. ಟೈಮ್ಸ್​ ಆಫ್​ ಇಂಡಿಯಾ ವರದಿಯ ಪ್ರಕಾರ ಮಯಾಂಕ್​ ಯಾದವ್​ ಇನ್ನುಳಿದ ಎಲ್ಲ ಪಂದ್ಯಗಳಿಗೂ ಅಲಭ್ಯರಾಗಲಿದ್ದು ಟೂರ್ನಿಯಿಂದ ಹೊರಗುಳಿಯಲಿದ್ದಾರೆ ಎಂದು ತಿಳಿಸಿದೆ.

ಮಯಾಂಕ್ ಗಾಯದ ಬಗ್ಗೆ ಮಾಹಿತಿ ನೀಡಿರುವ ತಂಡದ ಮುಖ್ಯ ಕೋಚ್​ ಜಸ್ಟೀನ್​ ಲ್ಯಾಂಗರ್​, ‘ಪರಿಪೂರ್ಣ ಪುನರ್ವಸತಿಗೆ ಒಳಗಾಗಿದ್ದರೂ, ಮಯಾಂಕ್​ಗೆ ಹೊಟ್ಟೆಯ ಕೆಳಭಾಗದಲ್ಲಿ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನು ಸ್ಕ್ಯಾನಿಂಗ್​ಗೆ ಒಳಪಡಿಸಲಾಗಿದೆ. ಅವರಿಗೆ ಈ ನೋವಿನಿಂದ ಚೇತರಿಸಿಕೊಳ್ಳಲು ಕನಿಷ್ಠ ಮೂರು ವಾರಗಳ ವಿಶ್ರಾಂತಿ ಬೇಕಾಗಬಹುದು” ಎಂದು ಹೇಳಿದ್ದಾರೆ. ಇವರ ಈ ಹೇಳಿಕೆ ನೋವುವಾಗ ಮಯಾಂಕ್​ ಟೂರ್ನಿಯಿಂದ ಹೊರಗುಳಿಯುವುದು ಬಹುತೇಖ ಖಚಿತಗೊಂಡಂತಿದೆ.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

ಮಯಾಂಕ್ ಲಿಸ್ಟ್​ ‘ಎ’ಯಲ್ಲಿ 17 ಪಂದ್ಯಗಳನ್ನಾಡಿ 34 ವಿಕೆಟ್​ ಪಡೆದಿದ್ದಾರೆ. ದೇಶೀಯ ಟಿ20 ಟೂರ್ನಿಯಲ್ಲಿ 12 ಪಂದ್ಯ ಆಡಿ 18 ವಿಕೆಟ್​ ಕೆಡೆವಿದ್ದಾರೆ. ಕಳೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ 4 ಓವರ್​ ಎಸೆದು 14 ರನ್​ ನೀಡಿ 3 ವಿಕೆಟ್​ ವಿಕೆಟ್​ ಕಬಳಿಸಿದ್ದರು. ಮಯಾಂಕ್ ಪ್ರಸ್ತುತ ಐಪಿಎಲ್​ನಲ್ಲಿ ಅತ್ಯಂತ ವೇಗದ ಎಸೆತವನ್ನು ಎಸೆದು ಗಮನಸೆಳೆದಿದ್ದಾರೆ. ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ 156.7 kmph ವೇಗದಲ್ಲಿ ಚೆಂಡೆಸಿದಿದ್ದರು. ಇದಕ್ಕೂ ಮುನ್ನ ನಡೆದಿದ್ದ ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 155.8 kmph ವೇಗದಲ್ಲಿ ಬೌಲಿಂಗ್​ ನಡೆಸಿದ್ದರು. ದೇಶೀಯ ಕ್ರಿಕೆಟ್‌ನಲ್ಲಿ ದಿಲ್ಲಿ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇವರ ಬೌಲಿಂಗ್​ ಶ್ರೇಯಸ್ಸಿಗೆ ಇಶಾಂತ್‌ ಶರ್ಮ, ನವದೀಪ್‌ ಸೈನಿ ನೀಡಿದ ಸಲಹೆಯೂ ಕೂಡ ಕಾರಣ. ಈ ವಿಚಾರವನ್ನು ಸ್ವತಃ ಯಾದವ್ ಅವರೇ ಹೇಳಿಕೊಂಡಿದ್ದರು. 

Continue Reading

ಕ್ರೀಡೆ

T20 World Cup 2024: ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಆರಂಭಿಸಿದ ಐಸಿಸಿ

T20 World Cup 2024: ಟಿ20 ವಿಶ್ವಕಪ್​ಗಾಗಿಯೇ ನ್ಯೂಯಾರ್ಕ್​ನಲ್ಲಿ ತಾತ್ಕಾಲಿಕವಾಗಿ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium) ನಿರ್ಮಾಣ ಮಾಡಲಾಗಿದೆ. 34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಇನ್ನು ಕೆಲವೇ ಇಂದು ತಿಂಗಳು ಮಾತ್ರ ಬಾಕಿ ಉಳಿದಿದೆ. ವಿಶ್ವಕಪ್​ ಪಂದ್ಯಾವಳಿಗಳು ಜೂನ್​ 1ರಿಂದ 29ರ ತನಕ ಸಾಗಲಿದೆ. ಟೂರ್ನಿಯಲ್ಲಿ ಪಾಲ್ಗೊಳ್ಳುವ ದೇಶಗಳು ಬಲಿಷ್ಠ ತಂಡವನ್ನು ಕೂಡ ಪ್ರಕಟಿಸುತ್ತಿವೆ. ಇದೇ ಮೊದಲ ಬಾರಿಗೆ ಅಮೆರಿಕ ಐಸಿಸಿ ಪಂದ್ಯಾವಳಿ ಆತಿಥ್ಯ ವಹಿಸಿಕೊಂಡಿದೆ. ಸುಸಜ್ಜಿತ ಪಿಚ್ ಇಲ್ಲದ ಕಾರಣ ಆಸ್ಟ್ರೇಲಿಯಾದಿಂದ ತರಿಸಿದ ಡ್ರಾಪ್ ಇನ್ ಪಿಚ್‌ಗಳನ್ನು(Drop-In Pitches) ಅಳವಡಿಸಲಾಗುತ್ತಿದೆ ಎಂದು ಐಸಿಸಿ ಬುಧವಾರ ತಿಳಿಸಿದೆ.

“ಟಿ20 ವಿಶ್ವಕಪ್‌ಗಾಗಿ ಸಿದ್ಧಪಡಿಸಲಾದ ಡ್ರಾಪ್-ಇನ್ ಪಿಚ್‌ಗಳನ್ನು ಫ್ಲೋರಿಡಾದಿಂದ ನ್ಯೂಯಾರ್ಕ್‌ಗೆ ಸೆಮಿ ಟ್ರೈಲರ್ ಟ್ರಕ್‌ಗಳಲ್ಲಿ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂಗೆ ತರಲಾಗಿದ್ದು, ಇದರ ಅಳವಡಿಕೆಯ ಕಾರ್ಯ ಇನ್ನೆರಡು ದಿನಗಳಲ್ಲಿ ಆರಂಭಗೊಳ್ಳಲಿದೆ’ ಎಂದು ಐಸಿಸಿ (ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್) ಬುಧವಾರ ತಿಳಿಸಿದೆ. ಡ್ರಾಪ್-ಇನ್ ಪಿಚ್​ ಫುಟ್‌ಬಾಲ್, ರಗ್ಬಿ ಮತ್ತು ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲು ಅನುವು ಮಾಡಿಕೊಡುತ್ತದೆ.

ನಸ್ಸೌ ಕ್ರೀಡಾಂಗಣದಲ್ಲಿ ನಾಲ್ಕು ಪಿಚ್‌ಗಳನ್ನು ಸ್ಥಾಪಿಸಲಾಗುವುದು, ನೆರೆಯ ಅಭ್ಯಾಸ ಸೌಲಭ್ಯಗಳಿಗಾಗಿ ಹೆಚ್ಚುವರಿ ಆರು ಪಿಚ್​ ಮಾಡಲಾಗುವುದು ಎಂದು ಐಸಿಸಿ ತಿಳಿಸಿದೆ. ಟಿ20 ವಿಶ್ವಕಪ್​ಗಾಗಿಯೇ ನ್ಯೂಯಾರ್ಕ್​ನಲ್ಲಿ ತಾತ್ಕಾಲಿಕವಾಗಿ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium) ನಿರ್ಮಾಣ ಮಾಡಲಾಗಿದೆ. ಬಹುತೇಕ ಇದರ ಕಾಮಗಾರಿ ಮುಕ್ತಾಯ ಕಂಡಿದೆ. ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಿನ ಹೈ-ವೋಲ್ಟೇಜ್ ಘರ್ಷಣೆ ಸೇರಿದಂತೆ ಭಾರತದ ಎಲ್ಲಾ ಗುಂಪು-ಹಂತದ ಪಂದ್ಯಗಳಿಗೆ ಈ ಕ್ರೀಡಾಂಗಣವು ಅಣಿಯಾಗಿದೆ. ಅಚ್ಚರಿ ಎಂದರೆ ಈ ಸ್ಟೇಡಿಯಂ ಅನ್ನು ನಿರ್ಮಾಣ ಮಾಡಿದ್ದೇ ಭಾರತ ಮತ್ತು ಪಾಕಿಸ್ತಾನ ಎದುರಿನ ಪಂದ್ಯಕ್ಕಾಗಿ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ; ಅನುಭವಿ ಸ್ಮಿತ್​ಗೆ ಅವಕಾಶವಿಲ್ಲ

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ.

ವಿಶ್ವಕಪ್ ಟೂರ್ನಿಗೆ ಅಮೆರಿಕದ ಮೂರು ಸ್ಟೇಡಿಯಂಗಳು ಆತಿಥ್ಯ ವಹಿಸಿವೆ. ಇಲ್ಲಿ 16 ಪಂದ್ಯಗಳು ನಡೆಯಲಿದೆ. ಈ ಮೈದಾನಕ್ಕೆ ಆಸ್ಟ್ರೇಲಿಯಾದಿಂದ ತರಿಸಲಾದ ಡ್ರಾಪ್ ಇನ್ ಪಿಚ್ ಬಳಸಗಾಗುತ್ತದೆ. ಪಿಚ್ ಸಂಪೂರ್ಣವಾಗಿ ಅಡಿಲೇಡ್‌ನಲ್ಲಿ ತಯಾರಿಸಲಾಗಿದ್ದು, ಅದನ್ನು ಹಡಗಿನಲ್ಲೇ 22,500 ಕಿಲೋಮೀಟರ್ ದೂರದ ಫ್ಲೋರಿಡಾ ಮೂಲಕ ನ್ಯೂಯಾರ್ಕ್‌ಗೆ ತರಲಾಗಿದೆ. ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

Continue Reading
Advertisement
Pakistan Teen
ದೇಶ5 mins ago

ಪಾಕ್‌ ಯುವತಿಗೆ ಭಾರತದ ಹಿಂದು ವ್ಯಕ್ತಿ ಹೃದಯದ ಕಸಿ; ತಕರಾರು ತೆಗೆದ ನೆರೆ ರಾಷ್ಟ್ರದ ಇಸ್ಲಾಂ ಧರ್ಮಗುರು!

Prajwal Revanna Case
ಕರ್ನಾಟಕ18 mins ago

Prajwal Revanna Case: ವಿಡಿಯೊ ಬಿಟ್ಟ ಕಾರ್ತಿಕ್‌ ಎಲ್ಲಿ? ಆತನನ್ನು ಮಲೇಷ್ಯಾಗೆ ಕಳುಹಿಸಿದ್ದು ಯಾರು?: ಎಚ್‌ಡಿಕೆ ಕಿಡಿ

KL Rahul
ಕ್ರಿಕೆಟ್52 mins ago

KL Rahul: ಟಿ20 ವಿಶ್ವಕಪ್​ನಲ್ಲಿ ರಾಹುಲ್​ಗೆ ಅವಕಾಶ ಸಿಗದಿರಲು ಕಾರಣ ತಿಳಿಸಿದ ಮಾಜಿ ಆಟಗಾರ

Rahul Gandhi
ದೇಶ1 hour ago

Rahul Gandhi: ರಾಹುಲ್‌ ಗಾಂಧಿಯನ್ನು ಹೊಗಳಿದ ಪಾಕ್‌ ಮಾಜಿ ಸಚಿವ; ತಿರುಗೇಟು ಕೊಟ್ಟ ಬಿಜೆಪಿ

BJP State Spokesperson Hariprakash konemane and leaders Election Campaign for BJP Candidate Vishweshwar Hegde Kageri in Yallapura
ಉತ್ತರ ಕನ್ನಡ2 hours ago

Lok Sabha Election 2024: ಹಿಂದಿನ ಚುನಾವಣೆಗಳಿಗಿಂತ ಈ ಬಾರಿ ಬಿಜೆಪಿಗೆ ಅಧಿಕ ಬಹುಮತ ನಿಶ್ಚಿತ: ಹರಿಪ್ರಕಾಶ್‌ ಕೋಣೆಮನೆ

MLA G Janardan Reddy latest statement in Gangavathi
ಕರ್ನಾಟಕ2 hours ago

Lok Sabha Election 2024: ಕಳೆದ ಚುನಾವಣೆಯಲ್ಲಿ ನನ್ನ ಜತೆ ಸ್ವತಃ ಸಿದ್ದರಾಮಯ್ಯ ಒಳ ಒಪ್ಪಂದ ಮಾಡಿಕೊಂಡಿದ್ದರು: ರೆಡ್ಡಿ ಸ್ಫೋಟಕ ಹೇಳಿಕೆ

Prajwal Revanna Case
ಕರ್ನಾಟಕ2 hours ago

Prajwal Revanna Case: ಸಿಂಗಾಪುರ ಮಾಧ್ಯಮಗಳಲ್ಲೂ ಪ್ರಜ್ವಲ್‌ ರೇವಣ್ಣ ಕೇಸ್‌ ಸದ್ದು!

Prajwal Revanna Case BJP will not be with those who do injustice to women says Amit Shah
ರಾಜಕೀಯ2 hours ago

Prajwal Revanna Case: ಮಹಿಳೆಗೆ ಅನ್ಯಾಯ ಮಾಡಿದ್ರೆ ಅಂಥವರ ಜತೆ ಬಿಜೆಪಿ ಇರಲ್ಲ; ಪ್ರಜ್ವಲ್‌ನನ್ನು ಬಿಟ್ಟಿದ್ದು ಕಾಂಗ್ರೆಸ್‌ ತಪ್ಪು ಎಂದ ಶಾ

Adhir Ranjan
ದೇಶ2 hours ago

Adhir Ranjan: ಟಿಎಂಸಿ ಬದಲು ಬಿಜೆಪಿಗೆ ಮತ ಹಾಕೋದೇ ಬೆಸ್ಟ್‌ ಎಂದ ಕಾಂಗ್ರೆಸ್‌ ನಾಯಕ!

Viral Video
ಕ್ರಿಕೆಟ್2 hours ago

Viral Video: ಕಾಲಿನ ಗಾಯವನ್ನು ಲೆಕ್ಕಿಸದೆ ರೋಲರ್ ಓಡಿಸಿ ಪಿಚ್​ ಸಿದ್ಧಪಡಿಸಿದ ಮೊಹಮ್ಮದ್​ ಶಮಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌