ಲಾಭ ಗಳಿಕೆಯಷ್ಟೇ ಅಲ್ಲ, ಹವಾಮಾನ ವೈಪರೀತ್ಯದ ನಷ್ಟ ತಗ್ಗಿಸುವ ಕೆಲಸವೂ ಆಗಬೇಕು: ಉದ್ಯಮಿಗಳಿಗೆ ರಿಕಿ ಕೇಜ್ ಕಿವಿಮಾತು - Vistara News

ಪರಿಸರ

ಲಾಭ ಗಳಿಕೆಯಷ್ಟೇ ಅಲ್ಲ, ಹವಾಮಾನ ವೈಪರೀತ್ಯದ ನಷ್ಟ ತಗ್ಗಿಸುವ ಕೆಲಸವೂ ಆಗಬೇಕು: ಉದ್ಯಮಿಗಳಿಗೆ ರಿಕಿ ಕೇಜ್ ಕಿವಿಮಾತು

ಪರಿಸರ ರಕ್ಷಿಸುವ ನವೋದ್ಯಮಗಳ ಇಕೋ ಯೂತ್ ಸ್ಟಾರ್ಟ್ ಅಪ್ ಸ್ಪರ್ಧೆ ಹಾಗೂ ಶೃಂಗಸಭೆ ಆ.19-20ರಂದು ಆಯೋಜಿಸಲಾಗಿದೆ.

VISTARANEWS.COM


on

Grammy Award winner Ricky Kej harassed by Lenskart! What is the issue?
ಗ್ರ್ಯಾಮಿ ಪ್ರಶಸ್ತಿ ವಿಜೇತ ರಿಕಿ ಕೇಜ್
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ರಾಕೃತಿಕ ಸಮಸ್ಯೆಗಳಿಗೆ ಪರಿಹಾರ ಸೂಚಿಸಿ, ಸುಸ್ಥಿರ ಅಭಿವೃದ್ಧಿಗೆ ಪೂರಕವಾಗುವ ನವೋದ್ಯಮಗಳನ್ನು ಉತ್ತೇಜಿಸುವ ಜತೆಗೆ ತಾಂತ್ರಿಕ, ಬಂಡವಾಳದ ವಿಚಾರದಲ್ಲಿ ನೆರವಾಗಲು ಇಕೋ ಯೂತ್ ಸ್ಟಾರ್ಟ್-ಅಪ್ ಶೃಂಗಸಭೆ ಮತ್ತು ಸ್ಪರ್ಧೆ ಆಯೋಜಿಸಲಾಗಿದೆ.

ಇದನ್ನೂ ಓದಿ | Explainer: Cannes Film Festival ಮಿಂಚುತ್ತಿರುವ ಭಾರತ, ಏನಿದರ ವಿಶೇಷತೆ?

ಪರ್ಯಾವರಣ ಗತಿವಿಧಿ, ಸಿ.ಎಂ.ಆರ್ ಯೂನಿವರ್ಸಿಟಿ ಹಾಗೂ ರೈನ್-ಮ್ಯಾಟರ್ ಫೌಂಡೇಶನ್ ನೇತೃತ್ವದಲ್ಲಿ ಆಯೋಜಿಸಲಾಗಿರುವ ಈ ಶೃಂಗಸಭೆ ಕುರಿತ ಪತ್ರಿಕಾಗೋಷ್ಠಿಯಲ್ಲಿ ಗ್ರ್ಯಾಮಿ ಪ್ರಶಸ್ತಿ ವಿಜೇತ ಸಂಗೀತ ಸಂಯೋಜಕ ರಿಕಿ ಕೇಜ್ ಹಾಗೂ ಜಿರೋಧಾ ಸಹ ಸಂಸ್ಥಾಪಕ ನಿಖಿಲ್ ಕಾಮತ್ ಭಾಗವಹಿಸಿದ್ದರು.

ಲಾಭ ಗಳಿಕೆಯ ಜತೆಗೆ ಹವಾಮಾನ ವೈಪರೀತ್ಯದ ನಷ್ಟ ತಗ್ಗಿಸುವ ಪ್ರಯತ್ನ ಉದ್ಯಮಿಗಳದ್ದಾಗಬೇಕು ಎಂದು ರಿಕಿ ಕೇಜ್ ಹೇಳಿದರೆ, ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಕೊಡುಗೆ ನೀಡಬೇಕೆಂದು ನಿಖಿಲ್ ಕಾಮತ್ ನುಡಿದರು.

ಆಗಸ್ಟ್ 19-20ರಂದು ಶೃಂಗಸಭೆ ನಡೆಯಲಿದ್ದು, ಅಂದೇ ಅಂತಿಮ ಸ್ಪರ್ಧೆ ನಡೆಯಲಿದೆ. ಜೂನ್ 15ರಿಂದ ಜುಲೈ 31 ರವರೆಗೆ ಆನ್-ಲೈನ್ ಅರ್ಜಿ ಸಲ್ಲಿಸಲು ಸ್ಪರ್ಧಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಪ್ಲಾಸ್ಟಿಕ್ ಗೆ ಪರ್ಯಾಯಗಳು, ಇಂಧನ, ತ್ಯಾಜ್ಯ ನಿರ್ವಹಣೆ, ವಸ್ತುಗಳ ಪುನರ್‌ ಬಳಕೆ, ನೀರಿನ ಸದ್ಬಳಕೆ ಸೇರಿದಂತೆ ಇಂತಹ ಇತರೆ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರು ಅರ್ಜಿ ಸಲ್ಲಿಸಬಹುದು.

ಇಲ್ಲಿ ಪರಿಸರ ಕಾಳಜಿ ಮೆರೆಯುವ ವಿನೂತನ ಪ್ರಾಜೆಕ್ಟ್‌ಗಳನ್ನು ಆಯ್ಕೆ ಮಾಡಿ, ಗೆದ್ದ ಸ್ಪರ್ಧಿಗಳಿಗೆ ಉಚಿತ ಇನ್ಕ್ಯೂಬೇಶನ್ ಸ್ಪೇಸ್, ಬಂಡವಾಳದಾರರ, ಉದ್ಯಮಿಗಳ ಸಂಪರ್ಕ ಹಾಗು ವೆಂಚರ್ ಕ್ಯಾಪಿಟಲಿಸ್ಟ್‌ಗಳೊಂದಿಗೆ 3 ತಿಂಗಳ ತರಬೇತಿ ಹಾಗು ಮಾರ್ಗದರ್ಶನ ಪಡೆಯುವ ಉತ್ತಮ ಅವಕಾಶವಿದೆ. ಅಭಿವೃದ್ಧಿಯ ನಾಗಾಲೋಟದಲ್ಲಿ ಮೈಮರೆತಿರುವ ಕಂಪನಿಗಳು ಆದರಿಂದ ಆಗುತ್ತಿರುವ ನೈಸರ್ಗಿಕ ಹಾನಿಯ ಕುರಿತು ಜವಾಬ್ದಾರಿ ಹೊತ್ತುಕೊಳ್ಳಬೇಕು ಎಂಬುದು ಮುಖ್ಯ ಉದ್ದೇಶ.‌

ಇದನ್ನೂ ಓದಿ | ಟೆಸ್ಲಾದಲ್ಲಿ 10,000 ಉದ್ಯೋಗ ಕಡಿತಕ್ಕೆ ಸಿಇಒ ಎಲಾನ್‌ ಮಸ್ಕ್‌ ಚಿಂತನೆ, ಅಮೆರಿಕದ ಆರ್ಥಿಕತೆ ಹದಗೆಟ್ಟಿದೆ ಎಂದ ಉದ್ಯಮಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಪರಿಸರ

Samyukta Hornad: ಸಿಂಚನ ಎಂಬ ಹುಲಿಯನ್ನೂ ದತ್ತು ಪಡೆದ ಸಂಯುಕ್ತ ಹೊರನಾಡು

Samyukta Hornad: ಸಂಯುಕ್ತ ಹೊರನಾಡು ಅವರು ಟೆಕೆಯಾನ್ ಸಂಸ್ಥೆ ಜೊತೆಗೂಡಿ 28 ತಿಂಗಳ ಸಿಂಚನ ಎಂಬ ಹೆಣ್ಣು ಹುಲಿ‌ ಮರಿಯನ್ನು ದತ್ತು ಪಡೆದಿದ್ದಾರೆ. ಇದರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ.

VISTARANEWS.COM


on

Samyukta Hornad
Koo

ಸಿನಿಮಾಗಳ ಹೊರತಾಗಿ ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ನಟಿ ಸಂಯುಕ್ತ ಹೊರನಾಡು (Samyukta Hornad). ಪ್ರಾಣ ಅನಿಮಲ್ ಫೌಂಡೇಶನ್ ಅಡಿಯಲ್ಲಿ ಪ್ರಾಣಿಗಳ ರಕ್ಷಣೆಗೆ ಅಂಬುಲೆನ್ಸ್ ಸೇವೆ ಒದಗಿಸುವ ಮೂಲಕ ಪ್ರಾಣಿ ಪ್ರಿಯರ ಮೆಚ್ಚುಗೆ ಪಡೆದವರು ಈ ನಟಿ. ಸಂಯುಕ್ತಾ ಕೂಡ ಪ್ರಾಣಿ ಪ್ರಿಯೆ. ನಾಯಿ, ಮೊಲ ಎಂದರೆ ಸಂಯುಕ್ತಾ ಹೊರನಾಡುಗೆ ಎಲ್ಲಿಲ್ಲದ ಪ್ರೀತಿ. ಇಂತಿಪ್ಪ ಸಂಯುಕ್ತ ಹೊರನಾಡು ತಮ್ಮದೇ ಪ್ರಾಣ ಹಾಗೂ ಟೆಕೆಯಾನ್ ಸಹಯೋಗದಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿಯನ್ನು ದತ್ತು ಪಡೆದಿದ್ದಾರೆ.

Samyukta Hornad

28 ತಿಂಗಳ ಸಿಂಚನ ಎಂಬ ಹೆಣ್ಣು ಹುಲಿ‌ ಮರಿಯನ್ನು ದತ್ತು ಪಡೆದಿದ್ದಾರೆ. ಇದು ನರದೌರ್ಬಲ್ಯ ಸಮಸ್ಯೆ ಎದುರಿಸುತ್ತಿರುವುದರಿಂದ ಕಾಡಿನಲ್ಲಿ ಸ್ವಾತಂತ್ರ್ಯವಾಗಿ ವಾಸಿಸಲು ಕಷ್ಟ ಸಾಧ್ಯವಾಗಿರುವುದರಿಂದ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಂರಕ್ಷಣಾ ಕೇಂದ್ರ ಕಾಳಜಿ ವಹಿಸಲಾಗುತ್ತಿದೆ. ದತ್ತು ಸ್ವೀಕೃತಿಯಲ್ಲಿ ಅದರ ದಿನನಿತ್ಯದ ಆಹಾರ, ನಿರ್ವಹಣೆ ಮತ್ತು ಪಶು ಚಿಕಿತ್ಸಾವನ್ನು ಭರಿಸಲಾಗುತ್ತದೆ. ಟೆಕೆಯಾನ್ ಸಂಸ್ಥೆ ಮುಖ್ಯಸ್ಥ ರಾಣಾ ರೊಬಿಲ್ಡ್ ಮಾತನಾಡಿ, ಪ್ರಾಣ ಅನಿಮಲ್ ಫೌಂಡೇಶನ್ ಹಾಗೈ ಬನ್ನೇರುಘಟ್ಟ ಜೈವಿಕ‌ ಉದ್ಯಾನದ ಅಧಿಕಾರಿಗಳಿಗೆ ಈ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು. ಆರೋಗ್ಯ, ಶಿಕ್ಷಣ ಹಾಗೂ ಸಮಾನತೆ ಮತ್ತು ಸುಸ್ಥಿರತೆ CSR ಮೂಲ ಉದ್ದೇಶ ಎಂದರು.

Samyukta Hornad adopted a tiger

ಸಂಯುಕ್ತ ಹೊರನಾಡು ಮಾತನಾಡಿ, ಟೆಕೆಯಾನ್ ಜೊತೆ ಕೈ ಜೋಡಿಸಿರುವುದು ಖುಷಿ ಕೊಟ್ಟಿದೆ. ತೊಂದರೆ ಒಳಗಾದ ಪ್ರಾಣಿಗಳನ್ನು ದತ್ತು ಸ್ವೀಕರಿಸದಕ್ಕೆ ಟೆಕೆಯಾನ್ ಗೆ ಧನ್ಯವಾದ ಎಂದರು. ಟೆಕೆಯಾನ್ ಸಂಸ್ಥೆ ಮುಖ್ಯಸ್ಥ ರಾಣಾ ರೊಬಿಲ್ಡ್ ಮಾತನಾಡಿ, ಪ್ರಾಣ ಅನಿಮಲ್ ಫೌಂಡೇಶನ್ ಹಾಗೂ ಬನ್ನೇರುಘಟ್ಟ ಜೈವಿಕ‌ ಉದ್ಯಾನವನದ ಅಧಿಕಾರಿಗಳಿಗೆ ಈ ಅವಕಾಶ ಕೊಟ್ಟಿದ್ದಕ್ಕೆ ಧನ್ಯವಾದಗಳು. ಆರೋಗ್ಯ, ಶಿಕ್ಷಣ ಹಾಗೂ ಸಮಾನತೆ ಮತ್ತು ಸುಸ್ಥಿರತೆ CSR ಮೂಲ ಉದ್ದೇಶ ಎಂದರು.

ಸಂಯುಕ್ತ ಹೊರನಾಡು ಮಾತನಾಡಿ, ಟೆಕೆಯಾನ್ ಜೊತೆ ಕೈ ಜೋಡಿಸಿರುವುದು ಖುಷಿ ಕೊಟ್ಟಿದೆ. ತೊಂದರೆ ಒಳಗಾದ ಪ್ರಾಣಿಗಳನ್ನು ದತ್ತು ಸ್ವೀಕರಿಸದಕ್ಕೆ ಟೆಕೆಯಾನ್ ಗೆ ಧನ್ಯವಾದ ಎಂದರು. ಉಪ ಅರಣ್ಯಾಧಿಕಾರಿ ಎವಿ ಸೂರ್ಯಸೆನ್ ಮಾತನಾಡಿ, ಡೈಮ್ಯಾಂಡ್ ಕ್ಲಾಸ್ ವಿಭಾಗದಲ್ಲಿ ಟೆಕೆಯಾನ್ ಮತ್ತು ಪ್ರಾಣ ಸಂಸ್ಥೆ ಅತಿ ಹೆಚ್ಚು ವೆಚ್ಚದಲ್ಲಿ ಪ್ರಾಣಿಗಳನ್ನು ದತ್ತು ಪಡೆದಿದೆ. ಅವರ ಕೆಲಸ ಇತರರಿಗೂ ಮಾದರಿ ಎಂದು ತಿಳಿಸಿದರು. ಟೆಕೆಯಾನ್ ಹಾಗೂ ಪ್ರಾಣ ಸಂಸ್ಥೆ ಜೊತೆಗೂಡಿ ದಿನದ 24 ಘಂಟೆ ಪ್ರಾಣಿಗಳ ರಕ್ಷಣೆಗೆ ಆಂಬ್ಯುಲೆನ್ಸ್ ಸೇವೆ ಒದಗಿಸಿದೆ. ಇದೂವರೆಗೆ 500 ಪ್ರಾಣಿಗಳನ್ನು ಈ ಸಂಸ್ಥೆ ರಕ್ಷಣೆ ಮಾಡಿವೆ. ಕನಕಪುರ ರಸ್ತೆಯಲ್ಲಿ ಟೆಕೆಯಾನ್ ಸಂಸ್ಥೆ ಪ್ರಾಣಿ ರಕ್ಷಣೆಗೆ ಪುನರ್ ವಸತಿ ಕೇಂದ್ರ ಸ್ಥಾಪಿಸಿಕೊಟ್ಟಿದೆ.

Continue Reading

ಪರಿಸರ

Areca Nut Price: ವಿದೇಶಿ ಅಕ್ರಮ ಅಡಿಕೆ ಸಾಗಾಣಿಕೆಯಿಂದ ದೇಶಿಯ ಅಡಿಕೆ ದರ ಕುಸಿತ; ರೈತರಲ್ಲಿ ಆತಂಕ

Domestic Areca Nut Price: ಕಳೆದ ಮೂರು ವರ್ಷಗಳ ಈ ವಿದೇಶಿ ಕಳ್ಳ ಸಾಗಾಣಿಕೆಯ ಸಂಖ್ಯೆ ಮತ್ತು ತೂಕದ ಪ್ರಮಾಣ ಗಮನಿಸಿದರೆ ಅದು ಸ್ಟಾಕ್ ಮಾರ್ಕೇಟ್‌ನ ಏರು ಗತಿಯ ಗ್ರಾಫ್‌ ನಂತೆಯೇ ಇದೆ! ಅಂದರೆ ದಿನದಿಂದ ದಿನಕ್ಕೆ ವಿದೇಶಿ ಕಳಪೆ ಗುಣ ಮಟ್ಟದ ಕಳ್ಳ ಅಡಿಕೆ ದೇಶದ ಒಳಗೆ ಬರುತ್ತಲೇ ಇದೆ. ದೇಶೀಯ ಅಡಿಕೆ ಜತೆ ಈ ಅಡಿಕೆಯನ್ನು ಮಿಶ್ರಣ ಮಾಡಿ ಮಾರುವ ಪ್ರಕ್ರಿಯೆ ಎಡಬಿಡದೆ ನೆಡೆಯುತ್ತಿದೆ. ಅಡಿಕೆ ಬೆಳೆಗಾರರನ್ನು ಇದು ಕಂಗಾಲು ಮಾಡಿದೆ.

VISTARANEWS.COM


on

Areca nut
Koo

-ಅರವಿಂದ ಸಿಗದಾಳ್, ಮೇಲುಕೊಪ್ಪ
ಇದು ಪ್ರತೀ ಅಡಿಕೆ ಬೆಳೆಗಾರನೂ ಗಂಭೀರವಾಗಿ ಚಿಂತಿಸಬೇಕಾದ ವಿಚಾರ. ಡಾ. ವೀರೇಂದ್ರ ಹೆಗ್ಗಡೆಯವರು ಸಂಸದ್‌ನಲ್ಲಿ ಕೇಳಿ ಪಡೆದ ಅಧಿಕೃತ ಮಾಹಿತಿ ಪ್ರಕಾರ ಮೂರು ತಿಂಗಳಲ್ಲಿ 184 ಪ್ರಕರಣಗಳಲ್ಲಿ ವಿದೇಶಿ ಅಡಿಕೆ ಕಳ್ಳ ದಾರಿಯಲ್ಲಿ ದೇಶದ ಒಳಗೆ ಬಂದು ಉದುರಿದೆ! ಮೂರು ತಿಂಗಳ ಹಿಂದಕ್ಕೆ ಹೋಗಿ ಕಳೆದ ಮೂರು ವರ್ಷಗಳ ಈ ವಿದೇಶಿ ಕಳ್ಳ ಸಾಗಾಣಿಕೆಯ ಸಂಖ್ಯೆ ಮತ್ತು ತೂಕದ ಪ್ರಮಾಣ ಗಮನಿಸಿದರೆ ಅದು ಸ್ಟಾಕ್ ಮಾರ್ಕೇಟ್‌ನ ಏರು ಗತಿಯ ಗ್ರಾಫ್‌ ನಂತೆಯೇ ಇದೆ! ಅಂದರೆ ದಿನದಿಂದ ದಿನಕ್ಕೆ ವಿದೇಶಿ ಕಳಪೆ ಗುಣ ಮಟ್ಟದ ಕಳ್ಳ ಅಡಿಕೆ ದೇಶದ (Areca Nut Price) ಒಳಗೆ ಬರುತ್ತಲೇ ಇದೆ. ದೇಶೀಯ ಅಡಿಕೆ ಜತೆ ಈ ಅಡಿಕೆಯನ್ನು ಮಿಶ್ರಣ ಮಾಡಿ ಮಾರುವ ಪ್ರಕ್ರಿಯೆ ಎಡಬಿಡದೆ ನೆಡೆಯುತ್ತಿದೆ.

184 ಪ್ರಕರಣಗಳು ಎನ್ನುವುದು ಸೆರೆ ಸಿಕ್ಕ ದಾಖಲಾದ ಪ್ರಕರಣಗಳು. ದಾಖಲಾಗದ ಪ್ರಕರಣಗಳು ಇದರ ಹತ್ತರಷ್ಟಿವೆಯೋ? ನೂರರಷ್ಟಿವೆಯೋ! ವಿದೇಶಿ ಅಕ್ರಮ ಅಡಿಕೆ ಆಮದಿನ ವಿಚಾರದಲ್ಲಿ ಸ್ಪಷ್ಟವಾದ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಮುಂದಾಗಿಲ್ಲ ಎನ್ನುವುದು ಪ್ರಕರಣಗಳು ಹೆಚ್ಚುತ್ತಿರುವ ಮಾಹಿತಿಯಿಂದ ಸ್ಪಷ್ಟ. ವಿದೇಶಿ ಅಧಿಕೃತ ನೇರ ಆಮದು ಸಾಧ್ಯವೇ ಇಲ್ಲ. ಯಾಕೆಂದರೆ, ಆಮದು ದರ ₹.351 + 100% (₹.752 ಪ್ರತಿ ಕೆಜಿ) ಆಮದು ಸುಂಕ ಇರುವುದರಿಂದ ಯಾರೂ ವಿದೇಶಿ ಅಡಿಕೆಯನ್ನು ಅಷ್ಟು ದುಬಾರಿಯಲ್ಲಿ ಕೊಟ್ಟು ಖರೀಧಿಸುತ್ತಾರೆ? ಪರಿಣಾಮ ಅಕ್ರಮ ವಿದೇಶಿ ಅಡಿಕೆ ಆಮದು ಕಳ್ಳರು ಹುಟ್ಟಿಕೊಂಡಿರುವುದು. ಅವರ ಮೇಲೆ ಯಾವುದೇ ಕಠಿಣ ಕಾನೂನು ಕ್ರಮ ಇಲ್ಲದಿರುವುದು ಮತ್ತು ಆ ಅಡಿಕೆ ಬರುತ್ತಿರುವ ಕಳ್ಳ ದಾರಿ ಗೆ ನಿಯಂತ್ರಣದ ಚಕ್ ಪೋಸ್ಟ್ ಇಲ್ಲದಿರುವುದು.

arecanut price

ಅಕ್ರಮ ವಿದೇಶಿ ಅಡಿಕೆ ಆಮದು ಕಳ್ಳರ ಮೇಲೆ FIR, ವಿಚಾರಣೆ, ಜೈಲೂಟ, ಪ್ರಾಸಿಕ್ಯುಷನ್ ತನಿಖೆ ಅನುಮತಿ, ತನಿಖೆ ಆದೇಶ, ಜಾಮೀನು, ವಿಚಾರಣೆಗೆ ನೋಟೀಸು, ಪ್ರಕರಣ ಸಿವಿಲ್ ಕೋರ್ಟ್‌‌ನಿಂದ ಹೈ ಕೋರ್ಟಿಗೆ-ಸುಪ್ರೀಮ್ ಕೋರ್ಟ್‌ಗೆ, ಕಠಿಣ ಜೈಲು ಶಿಕ್ಷೆ…….. ಉಹೂಂ ಒಂದೇ ಒಂದು ಪ್ರಕರಣದ ಸುದ್ದಿ ಪತ್ರಿಕೆಗಳಲ್ಲಿ ಬಂದಿಲ್ಲ, ಟಿವಿಯಲ್ಲಿ ‘ದರ್ಶನ’ ವಾಗಿಲ್ಲ. ಎಷ್ಟು ‘ಶೆಡ್‌ಗಳಲ್ಲಿ’ ಈ ವಿದೇಶಿ ಅಕ್ರಮ ಅಡಿಕೆಯನ್ನು ಸಂಗ್ರಹಿಸಿಟ್ಟಿದ್ದರ ಮೇಲೆ ದಾಳಿ ಆದ ಸುದ್ದಿಗಳಿಲ್ಲ! ಎಲ್ಲದರ ಪರಿಣಾಮ ಕಳಪೆ ಗುಣಮಟ್ಟದ ಅಡಿಕೆ ಮಂಗಳೂರಿನಲ್ಲಿ ಬೇಕಾಬಿಟ್ಟಿಯಾಗಿ ದೊರೆಯುತ್ತದೆ ಎಂದು ಹೇಳಲಾಗುತ್ತಿದೆ. ಅದನ್ನು ತಂದು ದೇಶೀಯ ರೈತರ ಅಡಿಕೆ ಜೊತೆ ಹದವಾಗಿ ಮಿಶ್ರಣ ಮಾಡಿ ಅಡಿಕೆ ಮಾರುಕಟ್ಟೆಗೆ ಬಿಡಲಾಗುತ್ತಿದೆ. ಮಾಧ್ಯಮಗಳಲ್ಲಿ ಆಗಾಗ ಪ್ರಕಟವಾಗಿ, ಅಲ್ಲೇ ಸೈಲಂಟ್ ಆಗುವ ಉಡುಪಿ, ಮಂಗಳೂರು, ಶಿವಮೊಗ್ಗ, ಬೆಂಗಳೂರು ಕಾಲೇಜ್‌ಗಳಲ್ಲಿನ ವಿದೇಶಿ ಡ್ರಗ್ಸ್ ದಂದೆಯಂತೆ, ಈ ವಿದೇಶಿ ಕಳಪೆ ಅಡಿಕೆ ಸುಲಭವಾಗಿ ದೊರೆಯುವಂತಾಗಿದೆ ಎನ್ನುವುದು ಸ್ಪಷ್ಟ. ವಿದೇಶಿ ಡ್ರಗ್ಸ್ ಮತ್ತು ವಿದೇಶಿ ಕಳ್ಳ ಅಡಿಕೆ ಅಮದು ನಿಲ್ಲಿಸಲು ಕೇಂದ್ರ ತನ್ನ ಭೀಮ ಶಕ್ತಿಯನ್ನು ಪ್ರಯೋಗಿಸಬೇಕಿದೆ. ಇಲ್ಲದೇ ಇದ್ದರೆ, ಅಡಿಕೆ ದರ ಇನ್ನಷ್ಟು ನೆಲ ಕಚ್ಚುವುದು ನಿಶ್ಚಿತ. ಮಲೆನಾಡು, ಕರಾವಳಿಯ ಎಲ್ಲ ಸಂಸದರು ಅಡಿಕೆ ಬೆಳೆಗಾರರ ಪರವಾಗಿ ಒಂದು ದಿಟ್ಟ ಕ್ರಮದ ಹೆಜ್ಜೆಗೆ ಮುಂದಾಗಬಹುದಾ?

ಇದನ್ನೂ ಓದಿ: Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

Continue Reading

ಪರಿಸರ

Wildlife: ಹುಟ್ಟಿದ ತಕ್ಷಣ ತಾಯಿಯನ್ನೇ ಕೊಂದು ತಿನ್ನುವ ಜೀವಿ ಇದು!

ಪ್ರತಿಯೊಂದು ಜೀವಿಗೂ (wildlife) ತಾಯಿಯೇ ದೇವರಾಗಿರುತ್ತದೆ. ತಾಯಿಯ ಆಶ್ರಯ ಇಲ್ಲದೆ ಬೆಳೆಯುವ ಜೀವಿಗಳು ಅಪರೂಪವೆಂದೇ ಹೇಳಬಹುದು. ಆದರೆ ಇದೊಂದು ಜೀವಿ ಮಾತ್ರ ಹುಟ್ಟಿದ ಕ್ಷಣವೇ ತಾಯಿಯನ್ನು ಕೊಂದು ತಿನ್ನುತ್ತದೆ ಎಂದರೆ ಎಲ್ಲರಿಗೂ ಅಚ್ಚರಿಯಾಗಬಹುದು. ಈ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Wildlife
Koo

ಭೂಮಿ ಮೇಲೆ ಅಸಂಖ್ಯಾತ ಜೀವಿಗಳಿವೆ. ಕಣ್ಣಿಗೆ ಕಾಣದ ಜೀವಿಗಳಿಂದ (wildlife) ಹಿಡಿದು ಬೃಹತ್ ಗಾತ್ರದವರೆಗಿನ ಜೀವರಾಶಿಗಳು ತಮ್ಮದೇ ಆದ ಜೀವನಶೈಲಿ (Lifestyle), ಆಹಾರ ಶೈಲಿಯನ್ನು (food style) ಹೊಂದಿದೆ. ಭೂಮಿ (earth) ಮೇಲೆ ಇರುವ ಎಲ್ಲ ಜೀವರಾಶಿಗಳ ಪರಿಚಯ ಮಾನವನಿಗೆ ಇನ್ನೂ ಆಗಿಲ್ಲ. ಕೆಲವು ಜೀವಿಗಳ ಪರಿಚಯವಿದ್ದರೆ ಇನ್ನು ಕೆಲವು ನಮಗೆ ತಿಳಿದೇ ಇಲ್ಲ. ನಾವು ಗುರುತಿಸಬಲ್ಲ ಅನೇಕ ಜೀವಿಗಳ ಬಗ್ಗೆ ನಮಗೆ ಇನ್ನೂ ಸ್ಪಷ್ಟತೆ ಇಲ್ಲ.

ಪ್ರತಿಯೊಂದು ಜೀವಿಗೂ ತಾಯಿಯೇ ದೇವರಾಗಿರುತ್ತದೆ. ತಾಯಿಯ ಆಶ್ರಯ ಇಲ್ಲದೆ ಬೆಳೆಯುವ ಜೀವಿಗಳು ಅಪರೂಪವೆಂದೇ ಹೇಳಬಹುದು. ಆದರೆ ಇದೊಂದು ಜೀವಿ ಮಾತ್ರ ಹುಟ್ಟಿದ ಕ್ಷಣವೇ ತಾಯಿಯನ್ನು ಕೊಂದು ತಿನ್ನುತ್ತದೆ ಎಂದರೆ ಎಲ್ಲರಿಗೂ ಅಚ್ಚರಿಯಾಗಬಹುದು.

Wildlife
Wildlife


ಹುಟ್ಟಿದ ಕ್ಷಣದಿಂದ ತಾಯಿಗೇ ಅಪಾಯವನ್ನುಂಟು ಮಾಡುವ ಜೀವಿಯೆಂದರೆ ಚೇಳು (scorpions). ಅತ್ಯಂತ ಪ್ರಬಲ ವಿಷವನ್ನು ಹೊಂದಿರುವ ಚೇಳಿನ ಸಣ್ಣ ಪ್ರಮಾಣ ವಿಷವೂ ಮನುಷ್ಯನಿಗೆ ಅಪಾಯ ತರಬಹುದು. ಚಿಕಿತ್ಸೆ ನೀಡದೆ ಬಿಟ್ಟರೆ ಚೇಳು ಕಡಿತವು ಮರಣದ ಅಪಾಯವನ್ನು ಹೆಚ್ಚಿಸುತ್ತದೆ.

ಚೇಳುಗಳು ಸಾಮಾನ್ಯವಾಗಿ ಸಣ್ಣ ಜೀವಿಗಳನ್ನು ಬೇಟೆಯಾಡುತ್ತವೆ. ಕುಟುಕು ಮೂಲಕ ತಮ್ಮ ವಿಷವನ್ನು ಉಣಿಸುತ್ತದೆ. ಈ ವಿಷವು ಪಾರ್ಶ್ವವಾಯುವಿಗೆ ಕಾರಣವಾಗುತ್ತದೆ. ಚೇಳು ತನ್ನ ಬೇಟೆಯನ್ನು ಜೀವಂತವಾಗಿ ಸೇವಿಸಲು ಅನುವು ಮಾಡಿಕೊಡುತ್ತದೆ. ಇದಲ್ಲದೆ ಹೆಣ್ಣು ಚೇಳುಗಳು ಒಂದೇ ಬಾರಿಗೆ ಸರಿಸುಮಾರು 100 ಮರಿಗಳಿಗೆ ಜನ್ಮ ನೀಡುತ್ತವೆ. ಅವುಗಳು ಸೇರಿ ಅಂತಿಮವಾಗಿ ತಾಯಿಯನ್ನೇ ತಿನ್ನುತ್ತದೆ. ಆಶ್ಚರ್ಯಕರ ಸಂಗತಿಯೆಂದರೆ ತಾಯಿ ಚೇಳು ತನ್ನ ಮರಿಗಳನ್ನು ಪೋಷಿಸುತ್ತದೆ ಮತ್ತು ರಕ್ಷಿಸುತ್ತದೆ.


ಹೆಣ್ಣು ಚೇಳು ಮರಿಗಳನ್ನು ಬೆನ್ನಿನ ಮೇಲೆ ಇರಿಸಿ ಸಾಕುತ್ತದೆ. ಕ್ರಮೇಣ ಅವುಗಳು ತಾಯಿಯನ್ನೇ ಸಂಪೂರ್ಣವಾಗಿ ತಿನ್ನುತ್ತವೆ. ಮರಿಗಳು ಜನನದ ಅನಂತರ ತಕ್ಷಣವೇ ತಾಯಿಯ ಬೆನ್ನಿಗೆ ಅಂಟಿಕೊಳ್ಳುತ್ತವೆ. ತಾಯಿ ಕ್ಷೀಣಿಸಿ ನಾಶವಾಗುವವರೆಗೆ ಅದರ ಮಾಂಸವನ್ನು ತಿನ್ನುತ್ತವೆ. ತಾಯಿಯ ಎಲ್ಲಾ ಮಾಂಸವನ್ನು ಕಬಳಿಸಿದ ಅನಂತರವೇ ಚೇಳುಗಳು ಬೆನ್ನಿನಿಂದ ಬೇರ್ಪಟ್ಟು ಸ್ವತಂತ್ರವಾಗಿ ಬದುಕಲು ಪ್ರಾರಂಭಿಸುತ್ತವೆ!

ಇದನ್ನೂ ಓದಿ: Mosquito Repellent Plants: ನಿಮಗೆ ಗೊತ್ತೆ? ಈ 5 ಬಗೆಯ ಗಿಡಗಳು ಸೊಳ್ಳೆಗಳನ್ನು ಓಡಿಸುತ್ತವೆ!


ಚೇಳುಗಳು ಸಾಮಾನ್ಯವಾಗಿ ಕೀಟಗಳು ಮತ್ತು ಇತರ ಅಕಶೇರುಕಗಳನ್ನು ಬೇಟೆಯಾಗಿ ಗುರಿಯಾಗಿಸಿಕೊಳ್ಳುತ್ತವೆ. ಆದರೆ ಕೆಲವು ಪ್ರಭೇದಗಳು ಕಶೇರುಕಗಳನ್ನು ಬೇಟೆಯಾಡುತ್ತವೆ. ಅವುಗಳ ವಿಷಕಾರಿ ಕುಟುಕು ಆಕ್ರಮಣಕಾರಿ ಮತ್ತು ರಕ್ಷಣಾತ್ಮಕ ಉದ್ದೇಶಗಳಿಗಾಗಿ ಕಾರ್ಯನಿರ್ವಹಿಸುತ್ತದೆ.

ಪ್ರಣಯದ ಸಮಯದಲ್ಲಿ ಗಂಡು ಮತ್ತು ಹೆಣ್ಣು ಚೇಳುಗಳು ನೃತ್ಯದಲ್ಲಿ ತೊಡಗುತ್ತವೆ. ಎಲ್ಲಾ ಪ್ರಭೇದದ ಚೇಳುಗಳು ಮರಿಗಳಿಗೆ ಜನ್ಮ ನೀಡುತ್ತವೆ.

Continue Reading

ಪರಿಸರ

International Cat Day: ಇಂದು ಬೆಕ್ಕಿನ ದಿನ; ಇದರ ಆಯುಷ್ಯ, ನಿದ್ದೆ, ಶೃಂಗಾರ ಇತ್ಯಾದಿ ಸಂಗತಿಗಳು ಕುತೂಹಲಕರ!

International Cat Day: ನಿರ್ಭೀತ ಮತ್ತು ಸ್ನೇಹ ಮನೋಭಾವದಿಂದ ಮನೆಯಲ್ಲಿ ಎಲ್ಲರನ್ನೂ ಆಕರ್ಷಿಸುವ ಬೆಕ್ಕುಗಳ ಕುರಿತ ಹಲವು ಸಂಗತಿಗಳು ಕುತೂಹಲಕರ. ಮಾನವನ ಬದುಕಿನಲ್ಲಿ ಬೆಕ್ಕುಗಳು ವಿಶೇಷ ಸ್ಥಾನವನ್ನು ಪಡೆದಿವೆ. ಸ್ನೇಹಿತನಂತೆ ಒಲವು ತೋರುವ ಬೆಕ್ಕುಗಳು ಬೇಗನೆ ಹೊಂದಿಕೊಂಡು, ಮಾನವನ ಭಾಷೆಯನ್ನು ಅರ್ಥೈಸಿಕೊಳ್ಳುತ್ತವೆ. ಇಂದು ಅಂತಾರಾಷ್ಟ್ರೀಯ ಬೆಕ್ಕು ದಿನಾಚರಣೆ (International Cat Day). ಈ ವಿಶೇಷ ಸಂದರ್ಭದಲ್ಲಿ ಬೆಕ್ಕುಗಳ ಕುರಿತು ಹಲವು ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ.

VISTARANEWS.COM


on

By

International Cat Day
Koo

ನಾವು ಸಾಕುವ ಮುದ್ದಿನ ಪ್ರಾಣಿಗಳಲ್ಲಿ ಬೆಕ್ಕು (cat) ಕೂಡ ಒಂದಾಗಿದೆ. ವಿಶ್ವದಾದ್ಯಂತ ಇಂದು ಬೆಕ್ಕಿನ ದಿನವನ್ನು (International Cat Day) ಆಚರಿಸಲಾಗುತ್ತದೆ. ಪ್ರತಿ ವರ್ಷ ಆಗಸ್ಟ್ 8ರಂದು ಆಚರಿಸಲಾಗುವ ಈ ದಿನದಂದು ಮಾನವನ ಅತ್ಯಂತ ಹಳೆಯ ಮತ್ತು ಪ್ರೀತಿಯ ಪ್ರಾಣಿ ಸಹಚರರಲ್ಲಿ ಒಂದಾದ ಬೆಕ್ಕನ್ನು ಗೌರವಿಸಲಾಗುತ್ತದೆ.

ಮಾನವನ ಬದುಕಿನಲ್ಲಿ ಬೆಕ್ಕುಗಳು ವಿಶೇಷ ಸ್ಥಾನವನ್ನು ಪಡೆದಿವೆ. ಸ್ನೇಹಿತನಂತೆ ಒಲವು ತೋರುವ ಬೆಕ್ಕುಗಳು ಕೂಡ ಬೇಗನೆ ಹೊಂದಿಕೊಂಡು, ಮಾನವನ ಭಾಷೆಯನ್ನು ಅರ್ಥೈಸಿಕೊಳ್ಳುತ್ತವೆ. ಪ್ರಾಚೀನ ಈಜಿಪ್ಟ್‌ನಲ್ಲಿ ಬೆಕ್ಕುಗಳನ್ನು ದೈವಿಕ ಜೀವಿಯಾಗಿ ಪೂಜಿಸಲಾಗುತ್ತಿತ್ತು. ಅವುಗಳು ತಮ್ಮ ಸ್ವಾತಂತ್ರ್ಯ, ಕುತೂಹಲ ಮತ್ತು ನಿರ್ಭೀತ ಮನೋಭಾವದಿಂದ ಎಲ್ಲರನ್ನೂ ಆಕರ್ಷಿಸುತ್ತವೆ. ಅವುಗಳ ಸೊಗಸಾದ ದೈಹಿಕ ಲಕ್ಷಣಗಳು ಮತ್ತು ಸಣ್ಣಪುಟ್ಟ ಗಾಯ, ಆರೋಗ್ಯ ಸಮಸ್ಯೆಗಳನ್ನು ಸ್ವಯಂ ಗುಣಪಡಿಸುವ ಸಾಮರ್ಥ್ಯವು ಅವುಗಳನ್ನು ವಿಶೇಷವನ್ನಾಗಿ ಮಾಡಿವೆ.

ಅಂತಾರಾಷ್ಟ್ರೀಯ ಬೆಕ್ಕು ದಿನಾಚರಣೆಯ ಈ ಸಂದರ್ಭದಲ್ಲಿ ಬೆಕ್ಕುಗಳ ಕುರಿತು ಹಲವು ಆಸಕ್ತಿದಾಯಕ ಸಂಗತಿಗಳನ್ನು ತಿಳಿಯೋಣ.


ಬೆಕ್ಕುಗಳ ವಯಸ್ಸು ಎಷ್ಟು?

ಸಾಮಾನ್ಯವಾಗಿ ಬೆಕ್ಕುಗಳು ಮಾನವನ ವಯಸ್ಸಿಗೆ ಹೋಲಿಸಿದರೆ 116 ವರ್ಷಗಳ ಕಾಲ ಬದುಕುತ್ತವೆ. ಅವುಗಳ ಜೀವನವು ಆರು ಹಂತಗಳನ್ನು ಹೊಂದಿರುತ್ತದೆ. ಅದರಲ್ಲಿ ಆರು ತಿಂಗಳವರೆಗೆ ಅದು ಮಗುವಾಗಿರುತ್ತದೆ. ಬಳಿಕ 7 ತಿಂಗಳಿನಿಂದ 2 ವರ್ಷಗಳವರೆಗೆ ಜೂನಿಯರ್, 3ರಿಂದ 6 ವರ್ಷಗಳವರೆಗೆ ವಯಸ್ಕ, 7 ರಿಂದ 10 ವರ್ಷಗಳವರೆಗೆ ಪ್ರಬುದ್ಧ, 11ರಿಂದ 14 ವರ್ಷಗಳವರೆಗೆ ಹಿರಿಯ, 15 ರಿಂದ 25 ವರ್ಷಗಳವರೆಗೆ ಬಹು ಹಿರಿಯ ವಯಸ್ಕ ಆಗಿರುತ್ತದೆ.


ವಿಶೇಷ ಸಾಮರ್ಥ್ಯ

ಬೆಕ್ಕುಗಳು ಹೆಚ್ಚು ಪ್ರಭಾವಶಾಲಿ ಕಿವಿಗಳ ಸಾಮರ್ಥ್ಯವನ್ನು ಹೊಂದಿವೆ. ಅವುಗಳು ತಮ್ಮ ಕಿವಿಗಳನ್ನು 180 ಡಿಗ್ರಿಗಳಷ್ಟು ತಿರುಗಿಸಬಲ್ಲವು! ಪ್ರತಿ ಕಿವಿಯಲ್ಲಿ 32 ಸ್ನಾಯುಗಳಿವೆ. ಮಾನವನಲ್ಲಿ ಕೇವಲ ಆರು ಕಿವಿ ಸ್ನಾಯುಗಳಿವೆ. ಅವುಗಳು ಮನುಷ್ಯರಂತೆ ಶಬ್ದಗಳ ಮೂಲವನ್ನು ನಿಖರವಾಗಿ ಗುರುತಿಸುತ್ತವೆ.

ಅತ್ಯುತ್ತಮ ದೃಷ್ಟಿಯ ಹೊರತಾಗಿ ಬೆಕ್ಕುಗಳು ಉತ್ತಮ ಗ್ರಹಿಕಾ ಸಾಮರ್ಥ್ಯ ಹೊಂದಿರುತ್ತವೆ. ಬೇಟೆಯು ಸಮೀಪಿಸಿದಾಗ ಅವುಗಳ ವಾಸನೆಯ ಪ್ರಜ್ಞೆ ಜಾಗೃತವಾಗುತ್ತದೆ. ಅವುಗಳ ವಾಸನೆಯ ಅಸಾಧಾರಣ ಪ್ರಜ್ಞೆಯಿಂದ 200 ವಿಭಿನ್ನ ಪರಿಮಳಗಳನ್ನು ನೆನಪಿಸಿಕೊಳ್ಳುತ್ತವೆ.


ಬೆಕ್ಕುಗಳು ಕಾಲ್ಬೆರಳುಗಳ ಸಂಖ್ಯೆಯಲ್ಲಿ ವ್ಯತ್ಯಾಸಗಳಿರುತ್ತವೆ. ಕೆಲವು ಹೆಚ್ಚುವರಿ ಕಾಲ್ಬೆರಳುಗಳನ್ನು ಹೊಂದಿರುತ್ತವೆ. ಒಂದು ಬೆಕ್ಕಿನ ಮೇಲೆ ಅತಿ ಹೆಚ್ಚು ಕಾಲ್ಬೆರಳುಗಳ ದಾಖಲೆ 32 ಆಗಿದೆ.

ದಿನಚರಿ ಏನು?

ಸಾಕು ಬೆಕ್ಕುಗಳು ತಮ್ಮ ದಿನದಲ್ಲಿ ಶೇ. 70ರಷ್ಟು ಸಮಯವನ್ನು ನಿದ್ದೆಯಲ್ಲಿ ಕಳೆಯುತ್ತವೆ. ಶೇ. 15ರಷ್ಟು ಸಮಯವನ್ನು ಶೃಂಗಾರದಲ್ಲಿ ಕಳೆಯುತ್ತವೆ. ಮನೆಯಲ್ಲಿ ಬೇಟೆಯಾಡದೇ ಇದ್ದರೂ ಬೇಟೆಗಾಗಿ ತಮ್ಮನ್ನು ತಾವು ಸಜ್ಜುಗೊಳಿಸುತ್ತವೆ ಮತ್ತು ಶಕ್ತಿಯನ್ನು ಉಳಿಸುತ್ತದೆ. ವಯಸ್ಕ ಬೆಕ್ಕುಗಳು ದಿನಕ್ಕೆ 16- 20 ಗಂಟೆಗಳ ಕಾಲ ನಿದ್ರಿಸುತ್ತವೆ. ವಯಸ್ಸಾದ ಬೆಕ್ಕುಗಳು ಸುಮಾರು 24 ಗಂಟೆಗಳ ಕಾಲ ಮಲಗುವುದೂ ಉಂಟು!


ತಳಿಗಳು

ಬೆಕ್ಕುಗಳಲ್ಲಿ ಸೈಬೀರಿಯನ್, ರಾಗ್ಡಾಲ್, ಮೈನೆ ಕೂನ್ ಮತ್ತು ಬ್ರಿಟಿಷ್ ಶೋರ್ಥೈರ್‌ನಂತಹ ಪ್ರಮುಖ ತಳಿಗಳಿವೆ. ದೊಡ್ಡ ಗಂಡು ಬೆಕ್ಕುಗಳು ಸುಮಾರು 20 ಪೌಂಡ್ ತೂಗುತ್ತವೆ. ಈ ತಳಿಗಳು ತಮ್ಮ ದೊಡ್ಡ ಗಾತ್ರ ಮತ್ತು ಸ್ನೇಹಪರ ವ್ಯಕ್ತಿತ್ವಗಳಿಗೆ ಹೆಸರುವಾಸಿಯಾಗಿದೆ.


ಸಂವಹನ ಹೇಗೆ?

ಮಿಯಾಂವ್ ಎನ್ನುವುದು ಬೆಕ್ಕುಗಳಿಗೆ ಸಹಜ ಭಾಷೆಯಲ್ಲ. ಅವು ಮನುಷ್ಯರೊಂದಿಗೆ ಸಂವಹನ ನಡೆಸಲು ಇದನ್ನು ಅಭಿವೃದ್ಧಿಪಡಿಸಲಾಯಿತು. ಕಾಡಿನಲ್ಲಿ ವಯಸ್ಕ ಬೆಕ್ಕುಗಳು ವಾಸನೆ, ಮುಖದ ಅಭಿವ್ಯಕ್ತಿ, ದೇಹ ಭಾಷೆ ಮತ್ತು ಸ್ಪರ್ಶದಂತಹ ವಿವಿಧ ಮೌಖಿಕ ಸೂಚನೆಗಳೊಂದಿಗೆ ಸಂವಹನ ನಡೆಸುತ್ತವೆ. ಆದರೆ ಸಾಕು ಬೆಕ್ಕುಗಳು ತಮ್ಮ ಅಗತ್ಯಗಳನ್ನು ಮನುಷ್ಯರಿಗೆ ತಿಳಿಸಲು ಮಿಯಾಂವ್ ಶಬ್ದದ ಬಳಕೆ ಮಾಡುತ್ತವೆ.


ನಂಬಿಕೆ

ಅನೇಕ ಸಂಸ್ಕೃತಿ ಮತ್ತು ಪುರಾಣಗಳಲ್ಲಿ ಬಿಳಿ ಬೆಕ್ಕುಗಳು ಶುದ್ಧತೆ ಮತ್ತು ಸಂತೋಷವನ್ನು ಸಂಕೇತಿಸುತ್ತವೆ. ಬಿಳಿ ಬೆಕ್ಕಿನ ಕನಸು ಬಿದ್ದರೆ ಅದೃಷ್ಟವನ್ನು ತರುತ್ತದೆ ಎಂದು ನಂಬಲಾಗುತ್ತದೆ.

ಇದನ್ನೂ ಓದಿ:International Tiger Day 2024: 150 ವರ್ಷಗಳಲ್ಲಿ ಹುಲಿಗಳ ಸಂಖ್ಯೆ ಶೇ. 95ರಷ್ಟು ಕುಸಿತ!

ಇದರ ಬಳಕೆ ಹೇಗೆ?

ಬೆಕ್ಕುಗಳನ್ನು ಸಂಚಾರ ಮತ್ತು ಸಂವಹನಕ್ಕೆ ಮಾರ್ಗದರ್ಶಿಯಾಗಿ ಬಳಸಲಾಗುತ್ತದೆ. ವಿಶೇಷ ಕೂದಲುಗಳಿರುವ ಬೆಕ್ಕುಗಳು ಇತರ ಪ್ರಾಣಿಗಳು ಮತ್ತು ಮನುಷ್ಯರಿಗೆ ಸಂದೇಶಗಳನ್ನು ರವಾನಿಸಲು ಅನುವು ಮಾಡಿಕೊಡುತ್ತದೆ. ಉದಾಹರಣೆಗೆ ಬೆಕ್ಕಿನ ಮೀಸೆಯನ್ನು ಮುಂದಕ್ಕೆ ತೋರಿಸಿದಾಗ ಅದು ಆತ್ಮವಿಶ್ವಾಸ ಮತ್ತು ನಿರಾಳತೆಯ ಭಾವನೆಯನ್ನು ಸೂಚಿಸುತ್ತದೆ. ವ್ಯತಿರಿಕ್ತವಾಗಿ, ಅವುಗಳನ್ನು ಹಿಂದಕ್ಕೆ ಎಳೆದರೆ ಅದು ಹೆದರಿಕೆ ಅಥವಾ ಬೆದರಿಕೆಯನ್ನು ಅನುಭವಿಸುತ್ತಿದೆ ಎಂಬುದು ಅರ್ಥ.

ಬೆಕ್ಕುಗಳ ಗುಂಪನ್ನು “ಕ್ಲೋಡರ್” ಎಂದು ಕರೆಯಲಾಗುತ್ತದೆ ಮತ್ತು ಗಂಡು ಬೆಕ್ಕನ್ನು ಸಾಮಾನ್ಯವಾಗಿ “ಟಾಮ್” ಎಂದು ಕರೆಯಲಾಗುತ್ತದೆ. ಆದರೆ ಹೆಣ್ಣು ಬೆಕ್ಕನ್ನು ಸಾಮಾನ್ಯವಾಗಿ ʼರಾಣಿʼ ಎಂದು ಕರೆಯಲಾಗುತ್ತದೆ.

Continue Reading
Advertisement
Use nandini ghee compulsorily in temple prasadam Order of the Department of Religious Endowments
ಕರ್ನಾಟಕ11 ಗಂಟೆಗಳು ago

Nandini ghee: ದೇವಸ್ಥಾನಗಳ ಪ್ರಸಾದದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸಿ; ಧಾರ್ಮಿಕ ದತ್ತಿ ಇಲಾಖೆ ಆದೇಶ

Temporary additional coaches to be attached to 34 trains for Dasara 2024
ಬೆಂಗಳೂರು12 ಗಂಟೆಗಳು ago

Dasara 2024: ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ

Theft case
ಬೆಂಗಳೂರು12 ಗಂಟೆಗಳು ago

Theft case : ಮಧ್ಯರಾತ್ರಿಯಲ್ಲಿ ವಕೀಲನಿಗೆ ಚಾಕು ತೋರಿಸಿ ಸುಲಿಗೆ ಮಾಡಿ ಬೆದರಿಕೆ ಹಾಕಿದ ಖದೀಮರು

Also test the prasadam of the holy places of the state Pralhad Joshi urges state government
ಬೆಂಗಳೂರು15 ಗಂಟೆಗಳು ago

Tirupati laddu Row : ತಿರುಪತಿ ಲಡ್ಡು ಬಳಿಕ ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದವನ್ನೂ ಪರೀಕ್ಷೆಗೊಳಪಡಿಸಿ; ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ

Road Accident
ಬೆಂಗಳೂರು16 ಗಂಟೆಗಳು ago

Road Accident : ಚಾಲಕ ಕಾರಿನೊಳಗೆ ಮಲಗಿದ್ದಾಗಲೇ ನಡುರಾತ್ರಿ ಹೊತ್ತಿ ಉರಿದ ಕಾರು! ಅಗ್ನಿ ಅವಘಡಕ್ಕೆ ಕಾರಣ ನಿಗೂಢ!

Road Accident
ಕೋಲಾರ16 ಗಂಟೆಗಳು ago

Road Accident: ಅಪರಿಚಿತ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರನ ತಲೆಯೇ ಕಟ್‌! ಭೀಕರ ದೃಶ್ಯಕ್ಕೆ ಬೆಚ್ಚಿ ಬಿದ್ದ ಜನರು

Good news for the children of yellow board drivers Do this to get a scholarship under Vidyanidhi
ಬೆಂಗಳೂರು ಟೆಕ್ ಸಮ್ಮಿಟ್17 ಗಂಟೆಗಳು ago

Students Scholarship : ಯೆಲ್ಲೋ ಬೋರ್ಡ್‌ ವಾಹನ ಚಾಲಕರ ಮಕ್ಕಳಿಗೆ ಗುಡ್‌ ನ್ಯೂಸ್‌; ವಿದ್ಯಾನಿಧಿಯಡಿ ಸ್ಕಾಲರ್‌ಶಿಪ್‌ ಪಡೆಯಲು ಹೀಗೆ ಮಾಡಿ

allegations of rape honeytrap Mla Munirathna arrested again by Kaggalipura police as soon as he came out of jail
ರಾಜಕೀಯ17 ಗಂಟೆಗಳು ago

MLA Muniratna: ಅತ್ಯಾಚಾರ, ಹನಿಟ್ರ್ಯಾಪ್‌ ಆರೋಪ; ಜೈಲಿನಿಂದ ಹೊರಬರುತ್ತಿದ್ದಂತೆ ಶಾಸಕ ಮುನಿರತ್ನ ಮತ್ತೆ ಅರೆಸ್ಟ್‌

Dina Bhavishya
ಭವಿಷ್ಯ24 ಗಂಟೆಗಳು ago

Dina Bhavishya : ಈ ರಾಶಿಯವರು ಇಂದು ದೊಡ್ಡ ಯೋಜನೆಯತ್ತ ಗಮನ ಹರಿಸುವಿರಿ

MCC Seat Retention, Opportunity to Cancel KEA Seat Deadline to Cancel Seats by 11 AM on September 20
ಬೆಂಗಳೂರು1 ದಿನ ago

KEA : ಎಂಸಿಸಿ ಸೀಟು ಉಳಿಸಿಕೊಂಡು, ಕೆಇಎ ಸೀಟು ರದ್ದತಿಗೆ ಅವಕಾಶ; ಸೀಟು ರದ್ದು ಪಡಿಸಿಕೊಳ್ಳಲು ನಾಳೆವರೆಗೂ ಗಡುವು

Kannada Serials
ಕಿರುತೆರೆ11 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ11 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್3 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್3 ವಾರಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ4 ವಾರಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ1 ತಿಂಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 ತಿಂಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 ತಿಂಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌