Amritpal Singh: 80 ಸಾವಿರ ಪೊಲೀಸರು ಏನು ಮಾಡುತ್ತಿದ್ದಾರೆ? ಪಂಜಾಬ್‌ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ - Vistara News

ದೇಶ

Amritpal Singh: 80 ಸಾವಿರ ಪೊಲೀಸರು ಏನು ಮಾಡುತ್ತಿದ್ದಾರೆ? ಪಂಜಾಬ್‌ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

Amritpal Singh: ಕಳೆದ ಶನಿವಾರದಿಂದಲೂ ಅಮೃತ್‌ಪಾಲ್‌ ಸಿಂಗ್‌ ಬಂಧನಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದರೂ, ಇದುವರೆಗೆ ಏಕೆ ಬಂಧಿಸಲು ಸಾಧ್ಯವಾಗಿಲ್ಲ? ಇದು ಸಂಪೂರ್ಣ ಗುಪ್ತಚರ ವೈಫಲ್ಯ ಎಂಬುದಾಗಿ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

VISTARANEWS.COM


on

What are 80k cops doing, Punjab and Haryana court slammed the AAP government
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂಡೀಗಢ: ಖಲಿಸ್ತಾನಿಗಳ ಪರ ನಾಯಕ, ಪಂಜಾಬ್‌ನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿರುವ ಅಮೃತ್‌ಪಾಲ್‌ ಸಿಂಗ್‌ (Amritpal Singh) ಬಂಧನಕ್ಕಾಗಿ ಕಾರ್ಯಾಚರಣೆಯು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಆತನನ್ನು ಬಂಧಿಸಲು ರಾಜ್ಯದ ಪೊಲೀಸರು ಹರಸಾಹಸಪಡುತ್ತಿದ್ದರೂ ಇದುವರೆಗೆ ಬಂಧನ ಸಾಧ್ಯವಾಗಿಲ್ಲ. ಆತನ ಆಪ್ತರ ಬಂಧನ, ಕಾರು ವಶ, ಶಸ್ತ್ರಾಸ್ತ್ರಗಳ ಜಪ್ತಿ ಮಾತ್ರ ಸಾಧ್ಯವಾಗಿದೆ. ಇನ್ನು ಬಂಧನ ಕಾರ್ಯಾಚರಣೆ ಕುರಿತು ಪಂಜಾಬ್‌ ಹಾಗೂ ಹರಿಯಾಣ ಹೈಕೋರ್ಟ್‌ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, “ಪಂಜಾಬ್‌ನ 80 ಸಾವಿರ ಪೊಲೀಸರು ಏನು ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿದೆ.

ಅಮೃತ್‌ಪಾಲ್‌ ಸಿಂಗ್‌ನನ್ನು ಕಾನೂನುಬಾಹಿರವಾಗಿ ಬಂಧಿಸಲಾಗಿದೆ. ಆತನನ್ನು ಬಿಡುಗಡೆ ಮಾಡಬೇಕು ಎಂಬುದಾಗಿ ವಾರಿಸ್‌ ದೇ ಪಂಜಾಬ್‌ ಮುಖ್ಯಸ್ಥನ ಕಾನೂನು ಸಲಹೆಗಾರ ಹೈಕೋರ್ಟ್‌ಗೆ ಹೇಬಿಯಸ್‌ ಕಾರ್ಪಸ್‌ ಸಲ್ಲಿಸಿದ್ದಾರೆ. ಇದೇ ಪ್ರಕರಣದ ಅರ್ಜಿಯ ವಿಚಾರಣೆ ವೇಳೆ, ರಾಜ್ಯ ಸರ್ಕಾರದ ವಿರುದ್ಧ ನ್ಯಾಯಮೂರ್ತಿ ಎನ್‌.ಎಸ್‌.ಶೇಖಾವತ್‌ ನೇತೃತ್ವದ ನ್ಯಾಯಪೀಠವು ಅಸಮಾಧಾನ ವ್ಯಕ್ತಪಡಿಸಿದೆ. ಇದು ಸಂಪೂರ್ಣ ಗುಪ್ತಚರ ವೈಫಲ್ಯ ಎಂದು ಜರಿದಿದೆ.

ರಾಜ್ಯ ಸರ್ಕಾರದ ಅಡ್ವೋಕೇಟ್‌ ಜನರಲ್‌ ವಿನೋದ್‌ ಘಾಯ್‌ ಅವರು ರಾಜ್ಯ ಸರ್ಕಾರದ ಕ್ರಮಗಳ ಕುರಿತು ಹೈಕೋರ್ಟ್‌ಗೆ ಮಾಹಿತಿ ನೀಡಿದರು. “ಅಮೃತ್‌ಪಾಲ್‌ ಸಿಂಗ್‌ನನ್ನು ಬಂಧಿಸಿಲ್ಲ. ಆತ ಪೊಲೀಸ್‌ ಕಸ್ಟಡಿಯಲ್ಲಿ ಇಲ್ಲ. ಇದುವರೆಗೆ ಆತನ 120 ಆಪ್ತರನ್ನು ಬಂಧಿಸಲಾಗಿದೆ. ಅವನ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧನಕ್ಕೆ ಕಾರ್ಯಾಚರಣೆ ಮುಂದುವರಿದಿದೆ. ಆದಾಗ್ಯೂ, ಕೋರ್ಟ್‌ನಲ್ಲಿ ಮುಕ್ತವಾಗಿ ಒಂದಷ್ಟು ಅಂಶಗಳನ್ನು ಬಹಿರಂಗಪಡಿಸಲು ಆಗುವುದಿಲ್ಲ” ಎಂದರು.

ಆಗ ನ್ಯಾಯಾಲಯವು, “ಅಮೃತ್‌ಪಾಲ್‌ ಸಿಂಗ್‌ ವಿರುದ್ಧ 5-6 ಎಫ್‌ಐಆರ್ ದಾಖಲಾಗಿದೆ ಎಂದು ಹೇಳುತ್ತಿದ್ದೀರಿ. ಆತನ ವಿರುದ್ಧ 5-6 ಕ್ರಿಮಿನಲ್‌ ಕೇಸ್‌ ದಾಖಲಿಸಿದ್ದೀರಿ. ಜಿ-20 ಸಭೆಯ ಹಿನ್ನೆಲೆಯಲ್ಲಿ ಅಷ್ಟೊಂದು ಬಿಗಿ ಭದ್ರತೆ ಇದ್ದರೂ ಅಮೃತ್‌ಪಾಲ್‌ ಸಿಂಗ್‌ ಪರಾರಿಯಾಗಲು ಹೇಗೆ ಸಾಧ್ಯ? ಇದುವರೆಗೆ ಅಮೃತ್‌ಪಾಲ್‌ ಹೊರತಾಗಿ ಆತನ 120 ಆಪ್ತರನ್ನು ಬಂಧಿಸಿದ್ದೀರಿ. ಅಷ್ಟಕ್ಕೂ ರಾಜ್ಯದಲ್ಲಿರುವ 80 ಸಾವಿರ ಪೊಲೀಸರು ಏನು ಮಾಡುತ್ತಿದ್ದಾರೆ” ಎಂದು ಪ್ರಶ್ನಿಸಿತು. ಆದಾಗ್ಯೂ, ರಾಜ್ಯ ಸರ್ಕಾರದ ಹಿತಕ್ಕೆ ಧಕ್ಕೆ ತರುವವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಭಗವಂತ್‌ ಮಾನ್‌ ಹೇಳಿದ್ದಾರೆ.

ʼವಾರಿಸ್‌ ಪಂಜಾಬ್‌ ದೇʼ ಸಂಘಟನೆಯ ನಾಯಕನಾಗಿದ್ದ ಅಮೃತ್‌ಪಾಲ್‌, ಆನಂದ್‌ಪುರ್‌ ಖಾಲ್ಸಾ ಫೋರ್ಸ್‌ (AKF) ಎಂಬ ಹೆಸರಿನ ತನ್ನದೇ ಸೈನ್ಯವನ್ನು ಕಟ್ಟಲು ಯತ್ನಿಸಿದ್ದ. ಇದು ಖಲಿಸ್ತಾನಿ ಟೈಗರ್‌ ಫೋರ್ಸ್‌ (KTF) ಎಂಬ ಈ ಹಿಂದಿನ ಉಗ್ರ ಸಂಘಟನೆಯ ರೀತಿಯಲ್ಲಿತ್ತು. ಜತೆಗೆ ಒಂದು ಮಾನವ ಬಾಂಬ್‌ ಸ್ಕ್ವಾಡ್‌ ಅನ್ನೂ ಸಿದ್ಧಪಡಿಸುತ್ತಿದ್ದ ಎಂದು ತಿಳಿದುಬಂದಿದೆ. ಅಮೃತ್‌ಪಾಲ್‌ ಸಿಂಗ್‌ ಮಾದಕದ್ರವ್ಯ ವ್ಯಸನ ತಡೆ ಶಿಬಿರಗಳನ್ನು ಹಾಗೂ ಗುರುದ್ವಾರಗಳನ್ನು ತನ್ನ ಆಯುಧ ಸಂಗ್ರಹಕ್ಕೆ ಬಳಸಿಕೊಳ್ಳುತ್ತಿದ್ದಾನೆ. ಆತ್ಮಹತ್ಯಾ ಬಾಂಬ್‌ ದಾಳಿಗೆ ಯುವಕರನ್ನು ಸಿದ್ಧಗೊಳಿಸುತ್ತಿದ್ದಾನೆ ಎಂದು ಮಾಹಿತಿಯನ್ನು ಬೇಹುಗಾರಿಕೆ ಸಂಸ್ಥೆಗಳು ನೀಡಿವೆ.

ಇದನ್ನೂ ಓದಿ: Amritpal Singh: ಖಲಿಸ್ತಾನಿ ಉಗ್ರ ಅಮೃತ್‌ಪಾಲ್‌ ಸಿಂಗ್‌ ಬಳಿ ಸ್ವಂತ ಮಿಲಿಟರಿ, ಬಾಂಬ್‌ ಸ್ಕ್ವಾಡ್!‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Amit Shah: ತೆಲಂಗಾಣದಲ್ಲಿ ಗೃಹಸಚಿವ ಅಮಿತ್ ಶಾ ವಿರುದ್ಧ FIR ದಾಖಲು

Amit Shah:ಮೇ 1ರಂದು ಅಮಿತ್‌ ಶಾ ಚುನಾವಣಾ ಪ್ರಚಾರ ಕಾರ್ಯಕ್ರಮದ ವೇದಿಕೆಯಲ್ಲಿ, ಕೆಲವು ಮಕ್ಕಳು ಕಾಣಿಸಿಕೊಂಡಿದ್ದರು. ಅಲ್ಲದೇ ರ್ಯಾಲಿಯಲ್ಲಿ ಮಗುವೊಂದು ಬಿಜೆಪಿಯ ಲೋಗೋವನ್ನು ಕೈಯಲ್ಲಿ ಹಿಡಿದಿತ್ತು. ಆ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಟಿಪಿಸಿಸಿ ಉಪಾಧ್ಯಕ್ಷ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

VISTARANEWS.COM


on

Amith Shah
Koo

ತೆಲಂಗಾಣ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ(Code of Conduct) ಆರೋಪದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ(Amit Shah) ವಿರುದ್ಧ ತೆಲಂಗಾಣದಲ್ಲಿ ಕೇಸ್‌ ದಾಖಲಾಗಿದೆ. ಮುಖ್ಯ ಚುನಾವಣಾಧಿಕಾರಿಗೆ(EC) ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಸಮಿತಿ(TPCC) ಉಪಾಧ್ಯಕ್ಷ ನಿರಂಜನ್‌ ರೆಡ್ಡಿ (Niranjan Reddy) ಅಮಿತ್‌ ಶಾ ವಿರುದ್ಧ ದೂರು ದಾಖಲಿಸಿದ್ದರು. ಮೇ 1ರಂದು ಅಮಿತ್‌ ಶಾ ಚುನಾವಣಾ ಪ್ರಚಾರ ಕಾರ್ಯಕ್ರಮದ ವೇದಿಕೆಯಲ್ಲಿ, ಕೆಲವು ಮಕ್ಕಳು ಕಾಣಿಸಿಕೊಂಡಿದ್ದರು. ಅಲ್ಲದೇ ರ್ಯಾಲಿಯಲ್ಲಿ ಮಗುವೊಂದು ಬಿಜೆಪಿಯ ಲೋಗೋವನ್ನು ಕೈಯಲ್ಲಿ ಹಿಡಿದಿತ್ತು. ಆ ಮೂಲಕ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

ಇ-ಮೇಲ್‌ ಮೂಲಕ ರೆಡ್ಡಿ ತೆಲಂಗಾಣ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದು, ಚುನಾವಣಾ ಪ್ರಚಾರ ಕಾರ್ಯದಲ್ಲಿ , ರ್ಯಾಲಿಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳಬಾರದು ಎಂದು ಖಡಕ್‌ ಸೂಚನೆ ನೀಡಿದೆ. ಇದೀಗ ಸ್ವತಃ ಕೇಂದ್ರ ಗೃಹ ಸಚಿವರೇ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ನಿತಂಜನ್‌ ರೆಡ್ಡಿಯವರ ದೂರನ್ನು ಚುನಾವಣಾಧಿಕಾರಿ ಹೈದರಾಬಾದ್‌ ಪೊಲೀಸರು ರವಾನಿಸಿದ್ದು, ಪೊಲೀಸರು ಅಮಿತ್‌ ಶಾ ವಿರುದ್ಧ ಎಫ್‌ ಐಆರ್‌ ದಾಖಲಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ ಟಿ. ಯಮುನಾ ಸಿಂಗ್‌, ಶಾಸಕ ರಾಜಾ ಸಿಂಗ್‌ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ. ಸೆಕ್ಷನ್‌ 188 (ಸರ್ಕಾರಿ ಅಧಿಕಾರಿಗಳ ಆದೇಶ ಉಲ್ಲಂಘನೆ)ಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ಮತ್ತೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಕಲಿ ವಿಡಿಯೊಗೆ ಸಂಬಂಧಿಸಿದಂತೆ ತೆಲಂಗಾಣ ಪೊಲೀಸರು ಗುರುವಾರ ರಾಜ್ಯ ಕಾಂಗ್ರೆಸ್ ಐಟಿ ಸೆಲ್‌ (Congress IT Cell)ನ ಐವರು ಸದಸ್ಯರನ್ನು ಬಂಧಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ನಡೆಸುತ್ತಿರುವ ದೆಹಲಿ ಪೊಲೀಸರ ತಂಡವೂ ಈ ತೆಲಂಗಾಣದಲ್ಲಿದೆ. ಈ ಹಿಂದೆ ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​ಫಾರ್ಮ್​​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ತೆಲಂಗಾಣ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಮುಖಂಡ ರೇವಂತ್ ರೆಡ್ಡಿ ಅವರಿಗೆ ಸಮನ್ಸ್ ನೀಡಿದ್ದರು.

ಇದನ್ನೂ ಓದಿ:Viral Video: ರೆಸ್ಟೋರೆಂಟ್‌ನಲ್ಲಿ ಪತ್ನಿಯನ್ನು ಹೊಡೆದು ಕೊಂದ ಮಾಜಿ ಸಚಿವ; ಶಾಕಿಂಗ್‌ ವಿಡಿಯೋ ಎಲ್ಲೆಡೆ ವೈರಲ್‌

ರೇವಂತ್ ರೆಡ್ಡಿ ಪರ ವಕೀಲರು ಬುಧವಾರ ದೆಹಲಿ ಪೊಲೀಸರ ಮುಂದೆ ಹಾಜರಾಗಿ, ಅಮಿತ್ ಶಾ ಅವರ ಭಾಷಣದ ನಕಲಿ ವಿಡಿಯೊ ರಚಿಸುವಲ್ಲಿ ಅಥವಾ ಪೋಸ್ಟ್ ಮಾಡುವುದರ ಹಿಂದೆ ರೇವಂತ್ ರೆಡ್ಡಿ ಅವರ ಯಾವುದೇ ಪಾತ್ರವಿಲ್ಲ ಎಂದು ಹೇಳಿದ್ದರು. ವಿಡಿಯೊವನ್ನು ಹಂಚಿಕೊಂಡ ಆರೋಪದ ಮೇಲೆ ವಿವಿಧ ವಿರೋಧ ಪಕ್ಷಗಳ ಇನ್ನೂ ಐದು ಮಂದಿಗೂ ನೋಟಿಸ್ ನೀಡಲಾಗಿದೆ. ರೇವಂತ್ ರೆಡ್ಡಿ ಮತ್ತು ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ)ಯ ನಾಲ್ವರು ಸದಸ್ಯರಾದ ಶಿವಕುಮಾರ್ ಅಂಬಾಲಾ, ಅಸ್ಮಾ ತಸ್ಲೀಮ್, ಸತೀಶ್ ಮನ್ನೆ ಮತ್ತು ನವೀನ್ ಪೆಟ್ಟೆಮ್ ಅವರಿಗೆ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 91 ಮತ್ತು 160ರ ಅಡಿಯಲ್ಲಿ ಸಮನ್ಸ್ ನೀಡಲಾಗಿದೆ.

Continue Reading

ಕ್ರೀಡೆ

Brij Bhushan: ಮಗನ ನಾಮನಿರ್ದೇಶನದ ವೇಳೆ 10 ಸಾವಿರಕ್ಕೂ ಅಧಿಕ ಬೆಂಬಲಿಗರೊಂದಿಗೆ ಶಕ್ತಿ ಪ್ರದರ್ಶಿಸಿದ ಬ್ರಿಜ್ ಭೂಷಣ್

Brij Bhushan: ಕರಣ್ ಭೂಷಣ್ ಸಿಂಗ್ ಅವರು ಉತ್ತರ ಪ್ರದೇಶದಿಂದ ಸತತ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಕಿರಿಯ ಪುತ್ರ . 2019 ರ ಲೋಕಸಭಾ ಚುನಾವಣೆಯಲ್ಲಿ, ಬ್ರಿಜ್ ಭೂಷಣ್ ಅವರು ಕೈಸರ್‌ಗಂಜ್‌ನಿಂದ ಚುನಾವಣೆಯಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. ಕರಣ್ ಭೂಷಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ.

VISTARANEWS.COM


on

Brij Bhushan
Koo

ಉತ್ತರ ಪ್ರದೇಶ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಕೈಸರ್‌ಗಂಜ್‌ನ(Kaiserganj ) ಹಾಲಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್(Brij Bhushan) ಅವರನ್ನು ಬಿಜೆಪಿ ಈ ಬಾರಿಯ ಲೋಕಸಭಾ ಚುನಾವಣೆಯಿಂದ(Lok Sabha polls) ಕೈಬಿಟ್ಟು, ಅವರ ಪುತ್ರ ಕರಣ್(Karan) ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮಗನ ನಾಮನಿರ್ದೇಶನ ಮಾಡುವ ಮೊದಲು ಕೈಸರ್‌ಗಂಜ್‌ನಲ್ಲಿ ಭರ್ಜರಿ ಶಕ್ತಿ ಪ್ರದರ್ಶನ ಮಾಡಿದ್ದಾರೆ.

500 ಅಧಿಕ 700 ಎಸ್‌ಯುವಿ ಕಾರುಗಳ ಮೂಲಕ ರ‍್ಯಾಲಿ ಮತ್ತು ನಾಮನಿರ್ದೇಶನ ಸಭೆಯಲ್ಲಿ 10,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಇದರಲ್ಲಿ ಶಾಸಕರು, ಎಂಎಲ್‌ಸಿಗಳು, ಜಿಲ್ಲಾ ಪಂಚಾಯತ್ ಮುಖ್ಯಸ್ಥರು, ಹತ್ತಿರದ ಜಿಲ್ಲೆಗಳ ಬಿಜೆಪಿಯ ಸ್ಥಳೀಯ ನಾಯಕರು, ಅಯೋಧ್ಯೆಯ ಪ್ರಮುಖ ಧಾರ್ಮಿಕ ಮುಖಂಡರು ಸೇರಿದ್ದರು.

ಕರಣ್ ಭೂಷಣ್ ಸಿಂಗ್ ಅವರು ಉತ್ತರ ಪ್ರದೇಶದಿಂದ ಸತತ ಮೂರು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಬ್ರಿಜ್ ಭೂಷಣ್ ಸಿಂಗ್ ಅವರ ಕಿರಿಯ ಪುತ್ರ . 2019 ರ ಲೋಕಸಭಾ ಚುನಾವಣೆಯಲ್ಲಿ, ಬ್ರಿಜ್ ಭೂಷಣ್ ಅವರು ಕೈಸರ್‌ಗಂಜ್‌ನಿಂದ ಚುನಾವಣೆಯಲ್ಲಿ ಎರಡು ಲಕ್ಷ ಮತಗಳಿಂದ ಗೆದ್ದಿದ್ದರು. ಕರಣ್ ಭೂಷಣ್ ಸಿಂಗ್ ಉತ್ತರ ಪ್ರದೇಶದ ಕುಸ್ತಿ ಸಂಘದ ಅಧ್ಯಕ್ಷರಾಗಿದ್ದಾರೆ. ಗೊಂಡಾದ ನವಾಬ್‌ಗಂಜ್‌ನಲ್ಲಿರುವ ಸಹಕಾರಿ ಗ್ರಾಮಾಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷರಾಗಿಯೂ ಜನ ಸಂಪರ್ಕ ಹೊಂದಿದ್ದಾರೆ. ಐದನೇ ಹಂತದಲ್ಲಿ ಮೇ 20 ರಂದು ಕೈಸರ್‌ಗಂಜ್‌ನಲ್ಲಿ ಮತದಾನ ನಡೆಯಲಿದೆ.

ಹಳದಿ ಕುರ್ತಾ, ಕಿತ್ತಳೆ ಬಣ್ಣದ ಸ್ಕಾರ್ಫ್ ಮತ್ತು ಧೋತಿ ಧರಿಸಿದ್ದ ಬ್ರಿಜ್ ಭೂಷಣ್, ಉತ್ಸಾಹಭರಿತ ಕಾರ್ಯಕರ್ತರ ನಡುವೆ ಕೈಯಲ್ಲಿ ಮೈಕ್ರೊಫೋನ್ನೊಂದಿಗೆ ಎಲ್ಲ ವ್ಯವಸ್ಥೆಗಳನ್ನು ನಿರ್ವಹಿಸುತ್ತಿದ್ದರು. ತಾನು ಚುನಾವಣ ಕಣದಲ್ಲಿ ಇಲ್ಲದಿದ್ದರೂ ಕೂಡ ಈ ಕ್ಷೇತ್ರದಲ್ಲಿ ತಮ್ಮ ಪ್ರಾಬಲ್ಯ ಇನ್ನೂ ಕೂಡ ಇದೆ ಎನ್ನುವುದನ್ನು ಈ ಶಕ್ತ ಪ್ರದರ್ಶನದ ಮೂಲಕ ತೋರಿಸಿಕೊಟ್ಟಿದ್ದಾರೆ. ಆದ್ಯಾಗೂ, ಬ್ರಿಜ್​ ಭೂಷಣ್​ ಕಾರ್ಯಕ್ರಮದ ಉದ್ದಕ್ಕೂ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅಥವಾ ಅವರ ಮಗನ ಬಳಿ ಹೋಗಲಿಲ್ಲ. ಗಣ್ಯರು ಮತ್ತು ಧಾರ್ಮಿಕ ಮುಖಂಡರನ್ನು ಭೇಟಿ ಮಾಡುವುದರಲ್ಲಿ ನಿರತರಾಗಿದ್ದರು. ಮಗನ ನಾಮಪತ್ರ ಸಲ್ಲಿಕೆಗೂ ಹೋಗಿರಲಿಲ್ಲ.

ನಾಮಪತ್ರ ಸಲ್ಲಿಕೆಗೆ ಮಗನ ಜತೆ ಏಕೆ ಹೋಗಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಬ್ರಿಜ್​ ಭೂಷಣ್​​, “ಐದು ಜನರಿಗೆ ಮಾತ್ರ ಹೋಗಲು ಅನುಮತಿಸಲಾಗಿದೆ. ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಸಂದರ್ಭದಲ್ಲಿ ನಾನು ಇಲ್ಲಿನ ವ್ಯವಸ್ಥೆಗಳನ್ನು ನೋಡಿಕೊಳ್ಳುತ್ತಿದ್ದೆ” ಎಂದು ಹೇಳಿದರು.

Continue Reading

ದೇಶ

Mallikarjuna Kharge: ಪ್ರಧಾನಿ ಮೋದಿ ವಡೋದರಾ ಬಿಟ್ಟು ವಾರಣಾಸಿಗೆ ಓಡಲಿಲ್ಲವೇ?; ಖರ್ಗೆ ಕಿಡಿ

Mallikarjuna Kharge:ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿರುವ ರಾಹುಲ್‌ ಗಾಂಧಿ ಇದೀಗ ರಾಯ್‌ ಬರೇಲಿಯಿಂದಲೂ ಸ್ಪರ್ಧಿಸುತ್ತಿದ್ದಾರೆ. ಎರಡು ಕ್ಷೇತ್ರಗಳಿಂದ ಕಣಕ್ಕಿಳಿದಿರುವ ಬಗ್ಗೆ ಪ್ರಧಾನಿ ಮೋದಿ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, 2014ರಲ್ಲಿ ಸ್ವತಃ ಪ್ರಧಾನಿ ಮೋದಿಯೇ ವಡೋದರಾ ಮತ್ತು ವಾರಣಾಸಿ ಕ್ಷೇತ್ರಗಳಿಂದ ಸ್ಪರ್ಧಿಸಿರಲಿಲ್ಲವೇ? ಬಳಿಕ ವಡೋಧರಾ ಕ್ಷೇತ್ರದಿಂದ ವಾರಣಾಸಿಗೆ ಓಡಿ ಹೋಗಿರಲಿಲ್ಲವೇ ಎಂದು ಟಾಂಗ್‌ ಕೊಟ್ಟರು. ಪ್ರಧಾನಿ ಮೋದಿ ಕೂಡ ಭಯದಿಂದಲೇ ವಾರಣಾಸಿಗೆ ಓಡಿ ಹೋಗಿದ್ದೇ? ಒಬ್ಬ ಪ್ರಧಾನಿಯಾಗಿ ಇಂತಹ ಟೀಕೆಗಳು ಅವರಿಗೆ ಶೋಭೆ ತರುವುದಿಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.

VISTARANEWS.COM


on

Mallikarjuna Kharge
Koo

ನವದೆಹಲಿ: ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ(Rahul Gandhi) ಅಮೇಥಿ ಕ್ಷೇತ್ರ ಬಿಟ್ಟು ರಾಯ್‌ ಬರೇಲಿ(Rae bareli)ಯಲ್ಲಿ ಕಣಕ್ಕಿಳಿದಿರುವ ವಿಚಾರವನ್ನೇ ಮುಂದಿಟ್ಟುಕೊಂಡು ಬಿಜೆಪಿ(BJP) ವಾಗ್ದಾಳಿ ನಡೆಸುತ್ತಿದೆ. ಇನ್ನು ರಾಹುಲ್‌ ಗಾಂಧಿ ಭಯಪಟ್ಟು ಅಮೇಥಿ ಬಿಟ್ಟು ಓಡಿದ್ದಾರೆ ಎಂದು ಟೀಕಿಸಿದ್ದ ಪ್ರಧಾನಿ ನರೇಂದ್ರ ಮೋದಿ(Narendra Modi) ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjuna Kharge) ಕಿಡಿ ಕಾರಿದ್ದಾರೆ. ಬಿಜೆಪಿ ಹಿರಿಯ ನಾಯಕರಾದ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಮತ್ತು ಲಾಲ್‌ ಕೃಷ್ಣ ಆಡ್ವಾಣಿ ಎರಡೆರಡು ಕ್ಷೇತ್ರಗಳಿಂದ ಸ್ಪರ್ಧಿಸಿರಲಿಲ್ಲವೇ? ಎಂದು ವಾಗ್ದಾಳಿ ನಡೆಸಿದ್ದಾರೆ.

ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿರುವ ರಾಹುಲ್‌ ಗಾಂಧಿ ಇದೀಗ ರಾಯ್‌ ಬರೇಲಿಯಿಂದಲೂ ಸ್ಪರ್ಧಿಸುತ್ತಿದ್ದಾರೆ. ಎರಡು ಕ್ಷೇತ್ರಗಳಿಂದ ಕಣಕ್ಕಿಳಿದಿರುವ ಬಗ್ಗೆಯೂ ಪ್ರಧಾನಿ ಮೋದಿ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ, 2014ರಲ್ಲಿ ಸ್ವತಃ ಪ್ರಧಾನಿ ಮೋದಿಯೇ ವಡೋದರಾ ಮತ್ತು ವಾರಣಾಸಿ ಕ್ಷೇತ್ರಗಳಿಂದ ಸ್ಪರ್ಧಿಸಿರಲಿಲ್ಲವೇ? ಬಳಿಕ ವಡೋಧರಾ ಕ್ಷೇತ್ರದಿಂದ ವಾರಣಾಸಿಗೆ ಓಡಿ ಹೋಗಿರಲಿಲ್ಲವೇ ಎಂದು ಟಾಂಗ್‌ ಕೊಟ್ಟರು. ಪ್ರಧಾನಿ ಮೋದಿ ಕೂಡ ಭಯದಿಂದಲೇ ವಾರಣಾಸಿಗೆ ಓಡಿ ಹೋಗಿದ್ದೇ? ಒಬ್ಬ ಪ್ರಧಾನಿಯಾಗಿ ಇಂತಹ ಟೀಕೆಗಳು ಅವರಿಗೆ ಶೋಭೆ ತರುವುದಿಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ʼʼರಾಹುಲ್​ ಗಾಂಧಿ ಅಮೇಥಿ ಬಿಟ್ಟು ರಾಯ್​ಬರೇಲಿಗೆ ಓಡಿದ್ದಾರೆ. ಭಯ ಪಡಬೇಡಿ, ಓಡಬೇಡಿʼʼ ಎಂದು ತಮಾಷೆ ಮಾಡಿದ್ದಾರೆ. ವಯನಾಡಿನಲ್ಲಿ ಮತದಾನ ಮುಗಿದ ತಕ್ಷಣ ರಾಹುಲ್‌ ಗಾಂಧಿ ಬೇರೆ ಕ್ಷೇತ್ರವನ್ನು ಹುಡುಕಲಿದ್ದಾರೆ ಎಂದು ತಾವು ಹಿಂದೆ ಹೇಳಿದ್ದನ್ನು ನೆನಪಿಸಿಕೊಂಡ ಮೋದಿ, ʼʼವಯನಾಡಿನಲ್ಲಿ ರಾಹುಲ್‌ ಗಾಂಧಿ ಸೋಲುತ್ತಾರೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಮತದಾನ ಮುಗಿದ ತಕ್ಷಣ ಅವರು ಬೇರೆ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದೆ. ಅದು ನಿಜವಾಗಿದೆ. ಅಮೇಥಿಯಲ್ಲಿ ಸೋಲಾಗುತ್ತದೆ ಎನ್ನುವ ಭೀತಿಯಿಂದ ರಾಯ್‌ ಬರೇಲಿಗೆ ಪಲಾಯನ ಮಾಡಿದ್ದಾರೆ. ಹೆದರಬೇಡಿ, ಓಡಬೇಡಿʼʼ ಎಂದು ಹೇಳಿದ್ದಾರೆ.

ನಿರಂತರವಾಗಿ ಆಯ್ಕೆಯಾಗುತ್ತಿದ್ದ ರಾಯ್‌ ಬರೇಲಿ ಕ್ಷೇತ್ರವನ್ನು ಬಿಟ್ಟು ರಾಜ್ಯಸಭೆಯತ್ತ ಮುಖ ಮಾಡಿದ ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ನಡೆಯನ್ನೂ ಮೋದಿ ಟೀಕಿಸಿದ್ದಾರೆ. ʼʼಕಾಂಗ್ರೆಸ್‌ನ ಹಿರಿಯ ನಾಯಕಿ ಚುನಾವಣೆಯಲ್ಲಿ ಸ್ಪರ್ಧಿಸಲು ಭಯಪಡುತ್ತಾರೆ ಮತ್ತು ಕಣದಿಂದ ಓಡಿ ಹೋಗುತ್ತಾರೆ ಎನ್ನುವ ವಿಚಾರವನ್ನು ನಾನು ಮೊದಲೇ ಪಾರ್ಲಿಮೆಂಟ್‌ನಲ್ಲಿ ಹೇಳಿದ್ದೆ. ಅದರಂತೆ ಅವರು (ಸೋನಿಯಾ ಗಾಂಧಿ) ರಾಯ್‌ ಬರೇಲಿಯಿಂದ ರಾಜ್ಯಸಭೆಗೆ ಪಲಾಯನ ಮಾಡಿದ್ದಾರೆʼʼ ಎಂದು ಪ್ರಧಾನಿ ವಾಗ್ದಾಳಿ ನಡೆಸಿದ್ದಾರೆ. ರಾಯ್‌ ಬರೇಲಿ ಮತ್ತು ಅಮೇಥಿಯಲ್ಲಿ ಮೇ 20ರಂದು ಮತದಾನ ನಡೆಯಲಿದೆ.

ಇದನ್ನೂ ಓದಿ: Viral News: ಹೆರಿಗೆಯಾದ ಮೂರು ಗಂಟೆಗಳಲ್ಲೇ ಅಪಾರ್ಟ್‌ಮೆಂಟ್‌ ಮೇಲಿಂದ ಮಗುವನ್ನೇ ಎಸೆದ್ಳಾ?

ರಾಯ್‌ ಬರೇಲಿ ಮತ್ತು ಅಮೇಥಿ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರಾಗುತ್ತಾರೆ ಎನ್ನುವ ವಿಚಾರ ದೇಶಾದ್ಯಂತ ಚರ್ಚೆ ಹುಟ್ಟು ಹಾಕಿತ್ತು. ಕೊನೆಗೂ ಇಂದು ಕಾಂಗ್ರೆಸ್‌ ಪಟ್ಟಿ ಬಿಡುಗಡೆ ಮಾಡಿತ್ತು. ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಖಾಲಿಯಾಗಿರುವ ರಾಯ್‌ ಬರೇಲಿ ಕ್ಷೇತ್ರದಿಂದ ಮೊದಲಿಗೆ ಪ್ರಿಯಾಂಕಾ ಗಾಂಧಿ ವಾಧ್ರಾ ಹಾಗೂ ಅಮೇಥಿಯಿಂದ ರಾಹುಲ್‌ ಗಾಂಧಿ ಕಣಕ್ಕಿಳಿಯುತ್ತಾರೆ ಎಂಬ ವಿಚಾರ ಹರಿದಾಡುತ್ತಿತ್ತು. ಇದೀಗ ಕುತೂಹಲಕ್ಕೆ ತೆರೆ ಬಿದ್ದಿದೆ. ಇತ್ತ ರಾಯ್‌ ಬರೇಲಿಯಲ್ಲಿ ರಾಹುಲ್‌ ಗಾಂಧಿ ವಿರುದ್ಧ ಬಿಜೆ ದಿನೇಶ್‌ ಪ್ರತಾಪ್‌ ಅವರನ್ನು ಕಣಕ್ಕಿಳಿಸಿದೆ.

Continue Reading

ವೈರಲ್ ನ್ಯೂಸ್

Rahul Gandhi: ರಾಹುಲ್‌ ಗಾಂಧಿಗೆ “ಮೊದಲು ರಾಯ್‌ಬರೇಲಿಯಿಂದ ಗೆಲ್ಲಿ…” ಎಂದ ಚೆಸ್‌ ದಂತಕಥೆ ಗ್ಯಾರಿ ಕಾಸ್ಪರೋವ್!

Rahul Gandhi: ಇತ್ತೀಚೆಗಷ್ಟೇ, ಲೋಕಸಭಾ ಚುನಾವಣಾ ಪ್ರಚಾರದ ವೇಳೆ ರಾಹುಲ್‌ ಗಾಂಧಿ ತಮ್ಮ ಮೊಬೈಲ್ ಫೋನ್‌ನಲ್ಲಿ ಚೆಸ್ ಆಡುತ್ತಿರುವ ವೀಡಿಯೊವನ್ನು ಕಾಂಗ್ರೆಸ್ ಪೋಸ್ಟ್ ಮಾಡಿತ್ತು. ಈ ವಿಡಿಯೋವನ್ನು ಬಳಕೆದಾರರೊಬ್ಬರು ಕಾಸ್ಪರೋವ್‌ಗೆ ಟ್ಯಾಗ್‌ ಮಾಡಿದ್ದರು. ವೀಡಿಯೊದಲ್ಲಿ ರಾಹುಲ್‌, ಕಾಸ್ಪರೋವ್ ಅವರನ್ನು ತಮ್ಮ ನೆಚ್ಚಿನ ಚೆಸ್ ಆಟಗಾರ ಎಂದು ಹೇಳಿದ್ದರು. ಚೆಸ್‌ ಆಟ ಮತ್ತು ರಾಜಕೀಯದ ನಡುವಿರುವ ಸಾಮ್ಯತೆಗಳ ಬಗ್ಗೆ ಮಾತಾಡಿದ್ದರು.

VISTARANEWS.COM


on

rahul gandhi gary Kasparov
Koo

ಹೊಸದಿಲ್ಲಿ: ಖ್ಯಾತ ಚೆಸ್ ಆಟಗಾರ (Chess legend) ಗ್ಯಾರಿ ಕಾಸ್ಪರೋವ್ (Gary Kasparov) ಅವರು “ಚೆಸ್‌ನಲ್ಲಿ ಅಗ್ರಸ್ಥಾನಕ್ಕೆ ಸವಾಲು ಹಾಕುವ ಮೊದಲು ರಾಯ್ ಬರೇಲಿಯನ್ನು *Rae Bareli) ಮೊದಲು ಗೆಲ್ಲಿರಿ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಹೇಳಿದ್ದಾರೆ. ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ (Social Media X) ಬಳಕೆದಾರರ ಜೊತೆ ನಡೆದ ಒಂದು ಚಾಟ್‌ ವೇಳೆ ಅವರ ಈ ಮಾತು ಬಂತು.

2005ರಲ್ಲಿ ಸ್ಪರ್ಧಾತ್ಮಕ ಚೆಸ್‌ನಿಂದ ನಿವೃತ್ತರಾದ ರಷ್ಯಾದ ಚೆಸ್‌ ದಂತಕಥೆ ಎನಿಸಿದ ಕಾಸ್ಪರೋವ್‌, ಶುಕ್ರವಾರ ಎಕ್ಸ್‌ನಲ್ಲಿ ಬಳಕೆದಾರರ ಪೋಸ್ಟ್‌ಗೆ ಪ್ರತಿಕ್ರಿಯಿಸುತ್ತಿದ್ದರು. ಕಾಸ್ಪರೋವ್‌ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಕಟು ವಿಮರ್ಶಕರಾಗಿದ್ದು, ಇದಕ್ಕಾಗಿ ಆಡಳಿತದ ಆಕ್ರೋಶ ಎದುರಿಸಿ ದೇಶದಿಂದ ಪಲಾಯನ ಮಾಡಿ ಕ್ರೊಯೇಷಿಯಾದಲ್ಲಿ ನೆಲೆಸಿದ್ದಾರೆ.

ಇತ್ತೀಚೆಗಷ್ಟೇ, ಲೋಕಸಭಾ ಚುನಾವಣಾ ಪ್ರಚಾರದ ವೇಳೆ ರಾಹುಲ್‌ ಗಾಂಧಿ ತಮ್ಮ ಮೊಬೈಲ್ ಫೋನ್‌ನಲ್ಲಿ ಚೆಸ್ ಆಡುತ್ತಿರುವ ವೀಡಿಯೊವನ್ನು ಕಾಂಗ್ರೆಸ್ ಪೋಸ್ಟ್ ಮಾಡಿತ್ತು. ಈ ವಿಡಿಯೋವನ್ನು ಬಳಕೆದಾರರೊಬ್ಬರು ಕಾಸ್ಪರೋವ್‌ಗೆ ಟ್ಯಾಗ್‌ ಮಾಡಿದ್ದರು. ವೀಡಿಯೊದಲ್ಲಿ ರಾಹುಲ್‌, ಕಾಸ್ಪರೋವ್ ಅವರನ್ನು ತಮ್ಮ ನೆಚ್ಚಿನ ಚೆಸ್ ಆಟಗಾರ ಎಂದು ಹೇಳಿದ್ದರು. ಚೆಸ್‌ ಆಟ ಮತ್ತು ರಾಜಕೀಯದ ನಡುವಿರುವ ಸಾಮ್ಯತೆಗಳ ಬಗ್ಗೆ ಮಾತಾಡಿದ್ದರು.

“…ಒಮ್ಮೆ ನೀವು ಆಟದಲ್ಲಿ ಸ್ವಲ್ಪ ಉತ್ತಮಗೊಂಡರೆ, ಎದುರಾಳಿಯ ಕಾಯಿಗಳು ವಾಸ್ತವವಾಗಿ ನಿಮ್ಮ ಇಚ್ಛೆಯಂತೆಯೇ ಕಾರ್ಯನಿರ್ವಹಿಸುತ್ತವೆ” ಎಂದು ರಾಹುಲ್‌ ಗಾಂಧಿ ಚದುರಂಗ ಮತ್ತು ರಾಜಕೀಯವನ್ನು ಹೋಲಿಸಿದ್ದರು.

ಈ ವಿಡಿಯೋಗೆ ಉತ್ತರಿಸಿದ ಕಾಸ್ಪರೋವ್, “ನೀವು ಅಗ್ರಸ್ಥಾನಕ್ಕಾಗಿ ಸವಾಲು ಹಾಕುವ ಮೊದಲು ಮೊದಲು ರಾಯ್‌ಬರೇಲಿಯಿಂದ ಗೆಲ್ಲಬೇಕು ಎಂದು ಸಾಂಪ್ರದಾಯಿಕವಾಗಿ ಅಪೇಕ್ಷಿಸಲಾಗುತ್ತದೆ” ಎಂದಿದ್ದರು. ನಂತರ ಮತ್ತೊಂದು ಪೋಸ್ಟ್‌ ಹಾಕಿ, ತಮ್ಮ ಸಣ್ಣ ಜೋಕ್‌ ರಾಜಕೀಯ ಪರಿಣತಿಯದ್ದಲ್ಲ ಎಂದಿದ್ದಾರೆ.

“ನನ್ನ ಈ ಚಿಕ್ಕ ಜೋಕ್‌, ಭಾರತೀಯ ರಾಜಕೀಯದಲ್ಲಿ ಪರಿಣತಿಯಿಂದ ಬಂದಿದ್ದಲ್ಲ. ಆದರೆ ಹಿಂದೊಮ್ಮೆ ನನ್ನನ್ನು “ಸಾವಿರ ಕಣ್ಣುಗಳ ದೈತ್ಯ” ಎಂದು ಹೆಸರಿಸಲಾಗಿತ್ತು. ಆ ಹಿನ್ನೆಲೆಯಲ್ಲಿ, ರಾಜಕಾರಣಿಯೊಬ್ಬರು ನನ್ನ ಪ್ರೀತಿಯ ಆಟದಲ್ಲಿ ತೊಡಗುವುದನ್ನು ನೋಡಲು ನನಗೆ ಸಂತೋಷವಾಗುತ್ತದೆ” ಎಂದಿದ್ದಾರೆ ಅವರು.

“@Kasparov63 ಮತ್ತು @vishy64theking ಅವರು ಬೇಗನೆ ನಿವೃತ್ತರಾದರು ಮತ್ತು ನಮ್ಮ ಕಾಲದ ಶ್ರೇಷ್ಠ ಚೆಸ್ ಪ್ರತಿಭೆಯನ್ನು ಎದುರಿಸಬೇಕಾಗಿಲ್ಲ” ಎಂದು X ಬಳಕೆದಾರರು ಋಾಹುಲ್‌ ಗಾಂಧಿಯವರ ಪೋಸ್ಟ್‌ಗೆ ಕಾಮೆಂಟ್‌ನಲ್ಲಿ ಹೇಳಿದ್ದರು.

ರಾಹುಲ್‌ ಗಾಂಧಿ ಶುಕ್ರವಾರ ಉತ್ತರ ಪ್ರದೇಶದ ರಾಯ್ ಬರೇಲಿಯಿಂದ ನಾಮಪತ್ರ ಸಲ್ಲಿಸಿದರು. ಅವರು ಕೇರಳದ ವಯನಾಡಿನಿಂದಲೂ ಸ್ಪರ್ಧಿಸುತ್ತಿದ್ದಾರೆ. ಮಾಜಿ ವಿಶ್ವ ನಂಬರ್ ಒನ್ ಮತ್ತು ವಿಶ್ವ ಚಾಂಪಿಯನ್ ಚೆಸ್‌ ಆಟಗಾರ ಕಾಸ್ಪರೋವ್ 1985ರಲ್ಲಿ 22ನೇ ವಯಸ್ಸಿನಲ್ಲಿ ಅತ್ಯಂತ ಕಿರಿಯ ವಿಶ್ವ ಚಾಂಪಿಯನ್ ಆದರು. ಈಗ ರಾಜಕೀಯ ಕಾರ್ಯಕರ್ತರಾಗಿದ್ದಾರೆ.

ಅಪ್ರತಿಮ ಆಟಗಾರ, ಭಾರತೀಯ ಶ್ರೇಷ್ಠ ವಿಶ್ವನಾಥನ್ ಆನಂದ್ ಅವರ ಸಮಕಾಲೀನರು. ಇತ್ತೀಚೆಗೆ, 17 ವರ್ಷದ ಡಿ. ಗುಕೇಶ್ ಅವರು ವಿಶ್ವ ಪ್ರಶಸ್ತಿಗೆ ಅತಿ ಕಿರಿಯ ಚಾಲೆಂಜರ್ ಎಂಬ ಕಾಸ್ಪರೋವ್ ಅವರ ದಾಖಲೆಯನ್ನು ಮೀರಿಸಿದರು. ಆಗ ಕಾಸ್ಪರೋವ್‌ ಅವರು Xನಲ್ಲಿ ಗುಕೇಶ್‌ಗೆ ಅಭಿನಂದನಾ ಪೋಸ್ಟ್ ಹಾಕಿದ್ದರು. ಅವರು ಗುಕೇಶನನ್ನು “ಭಾರತೀಯ ಭೂಕಂಪ” ಎಂದು ಬಣ್ಣಿಸಿದ್ದರು.

ಇದನ್ನೂ ಓದಿ: Rahul Gandhi : ಮಹಾತ್ಮ ರಾಹುಲ್​, ಕುತಂತ್ರಿ ಗಾಂಧೀಜಿ; ಚರ್ಚೆಗೆ ಗ್ರಾಸವಾಯ್ತು​ ಕಾಂಗ್ರೆಸ್​ ನಾಯಕನ ಹೇಳಿಕೆ

Continue Reading
Advertisement
Vettaiyan Movie Rajinikanth And Amitabh Bachchan Poses Together
ಸಿನಿಮಾ2 mins ago

Vettaiyan Movie: ಸೂಟು ಬೂಟು ಹಾಕಿಕೊಂಡು ಸ್ಟೈಲಿಶ್‌ ಆಗಿ ಪೋಸ್‌ ಕೊಟ್ಟ ರಜನಿ!

Accident news
ಮಳೆ6 mins ago

Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

cm siddaramaiah
ಕ್ರೈಂ19 mins ago

CM Siddaramaiah: ಸಿಎಂ ಸಿದ್ದರಾಮಯ್ಯ ಬಗ್ಗೆ ಪೋಸ್ಟ್:‌ ಮಹೇಶ್‌ ವಿಕ್ರಂ ಹೆಗ್ಡೆ, ವಸಂತ್‌ ಗಿಳಿಯಾರ್ ಬಂಧನವಿಲ್ಲ

Urfi Javed magical butterflies dress Samantha reacts
ಬಾಲಿವುಡ್21 mins ago

Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

IPL 2024
ಕ್ರೀಡೆ31 mins ago

IPL 2024: ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಗೆಲುವು ಸಾಧಿಸಿದ ಕೆಕೆಆರ್​

Drama Artist
ಕರ್ನಾಟಕ32 mins ago

Drama Artist: ಶಕುನಿಯಾಗಿ ಗರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

Amith Shah
ದೇಶ43 mins ago

Amit Shah: ತೆಲಂಗಾಣದಲ್ಲಿ ಗೃಹಸಚಿವ ಅಮಿತ್ ಶಾ ವಿರುದ್ಧ FIR ದಾಖಲು

Porbandar Tour
ಪ್ರವಾಸ47 mins ago

Porbandar Tour: ಪೋರ್ ಬಂದರಿನಲ್ಲಿ ನೋಡಲೇಬೇಕಾದ ಅದ್ಭುತ ಸ್ಥಳಗಳಿವು

hd revanna prajwal revanna case
ಪ್ರಮುಖ ಸುದ್ದಿ1 hour ago

Prajwal Revanna Case: ಕಾಣದಂತೆ ಮಾಯವಾದ ಎಚ್‌ಡಿ ರೇವಣ್ಣ ! ಇಂದು ಜಾಮೀನು ಸಿಗದೇ ಹೋದರೆ….

Cocoa Price
ಕೃಷಿ1 hour ago

Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ19 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌