Viral Post: ಕಳೆದು ಕೊಂಡ ಕಣ್ಣನ್ನೇ ಹೆಡ್‌ಲ್ಯಾಂಪಾಗಿಸಿ ಬೆಳಕು ಪಡೆದವನೀತ! - Vistara News

ವೈರಲ್ ನ್ಯೂಸ್

Viral Post: ಕಳೆದು ಕೊಂಡ ಕಣ್ಣನ್ನೇ ಹೆಡ್‌ಲ್ಯಾಂಪಾಗಿಸಿ ಬೆಳಕು ಪಡೆದವನೀತ!

33ರ ಹರೆಯದ ಯುಎಸ್‌ ನಿವಾಸಿ ಬ್ರಿಯಾನ್‌ ಸ್ಟ್ಯಾನ್ಲಿ ಎಂಬಾತ ಕ್ಯಾನ್ಸರ್‌ ಕಾಯಿಲೆಯಿಂದಾಗಿ ತನ್ನ ಒಂದು ಕಣ್ಣನ್ನು ಕಳೆದುಕೊಂಡಿದ್ದ. ಆದರೆ, ಈತ ಕಳೆದುಕೊಂಡ ಕಣ್ಣನ್ನೇ ಈತ ಬೆಳಕಾಗಿಸಿದ್ದಾನೆ. ದೃಷ್ಟಿ ಹೋದ ಅದೇ ಕಣ್ಣನ್ನು ಆತ ಫ್ಲ್ಯಾಷ್‌ಲೈಟಾಗಿ ಬದಲಾಯಿಸಿಕೊಂಡಿದ್ದಾನೆ!

VISTARANEWS.COM


on

flashlight viral post
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂಥದ್ದೊಂದು ಐಡಿಯಾ ಯಾರಿಗೆ ಹೊಳೆದಿದೆಯೋ ಗೊತ್ತಿಲ್ಲ! ಆದರೆ ಈತ ಮಾತ್ರ ಐಡಿಯಾವನ್ನು ಕಾರ್ಯರೂಪಕ್ಕೆ ತಂದಿದ್ದಾನೆ. ನಾವೆಲ್ಲ ಕತ್ತಲಲ್ಲಿ ನಡೆದಾಡಲು ಮೊಬೈಲ್‌ ಟಾರ್ಚನ್ನೋ ಅಥವಾ ಇನ್ನೇನನ್ನೋ ಬಳಸಿ ಬೆಳಕು ಕಾಣುವಂತೆ ಮಾಡಿಕೊಂಡರೆ, ಈತ ಕತ್ತಲಾದ ತನ್ನ ಕಣ್ಣನ್ನೇ ಬೆಳಕಾಗಿ ಪರಿವರ್ತಿಸಿದ್ದಾನೆ!

ಕಣ್ಣುಗಳೆರಡು ದೀಪದಂತೆ ಎಂಬ ಕವಿವಾಣಿಯನ್ನು ಈತ ಅಕ್ಷರಶಃ ಪಾಲಿಸಿದ್ದಾನೆ. ತನ್ನ ಕಣ್ಣೇ ಈತನಿಗೆ ಕತ್ತಲಲ್ಲಿ ದಾರಿ ತೋರಿ ನಡೆಸುವ ಬೆಳಕು. ಕಣ್ಣು ಹೋದರೇನಂತೆ, ಇನ್ನೊಂದು ಇದೆಯಲ್ಲ ಎಂದುಕೊಂಡು, ಒಂದು ಕಣ್ಣಿಗೆ ಕತ್ತಲಲ್ಲಿ ಬೆಳಕು ನೀಡುವ ಕಾರ್ಯವನ್ನು ಸಾಧಿಸಿದ್ದಾನೆ.

ಅರ್ಥವಾಗಲಿಲ್ಲವೇ? ಏನಿದು ಎಂದು ತಲೆಕೆಡಿಸಿಕೊಂಡಿರಾ? ಹಾಗಾದರೆ ಇಲ್ಲಿ ಕೇಳಿ. 33ರ ಹರೆಯದ ಯುಎಸ್‌ ನಿವಾಸಿ ಬ್ರಿಯಾನ್‌ ಸ್ಟ್ಯಾನ್ಲಿ ಎಂಬಾತ ಕ್ಯಾನ್ಸರ್‌ ಕಾಯಿಲೆಯಿಂದಾಗಿ ತನ್ನ ಒಂದು ಕಣ್ಣನ್ನು ಕಳೆದುಕೊಂಡಿದ್ದ. ಆದರೆ, ಈತ ಕಳೆದುಕೊಂಡ ಕಣ್ಣನ್ನೇ ಈತ ಬೆಳಕಾಗಿಸಿದ್ದಾನೆ. ದೃಷ್ಟಿ ಹೋದ ಅದೇ ಕಣ್ಣನ್ನು ಆತ ಫ್ಲ್ಯಾಷ್‌ಲೈಟಾಗಿ ಬದಲಾಯಿಸಿಕೊಂಡಿದ್ದಾನೆ! ಹೇಗೆ ಅಂತೀರಾ? ಹಾಗಾದರೆ ಇಲ್ಲಿ ಕೇಳಿ.

ಎಂಜಿನಿಯರ್‌ ವೃತ್ತಿಯಲ್ಲಿರುವ ಈತನಿಗೆ ಯಾವಾಗಲೂ ಹೊಸತನ್ನು ಅನ್ವೇಷಿಸುತ ತುಡಿತ. ಇನ್ನು ಪ್ರಯೋಜನಕ್ಕೆ ಬಾರದೆಂಬ ಸತ್ಯದ ಅರಿವಿದ್ದ ತನ್ನ ಕಣ್ಣನ್ನು ಹೇಗೆ ಪ್ರಯೋಜನಕಾರಿಯಾಗಿ ಬಳಸಿಕೊಳ್ಳಬಹುದು ಎಂದು ಯೋಚಿಸಿದಾಗ ಈತನಿಗೆ ಈ ಐಡಿಯಾ ಹೊಳೆದಿದೆ. ಅದರ ಫಲವಾಗಿ, ಪ್ರಕೃತಿ ಸಹಜವಾಗಿ ಬೆಳಕಾಗಬೇಕಿದ್ದ ಕಣ್ಣನ್ನು ಕೃತಕವಾಗಿ ಬೆಳಕು ನೀಡುವ ಅಂಗವಾಗಿಯೇ ಬದಲಾಯಿಸಿಕೊಂಡಿದ್ದಾನೆ. ಈತನ ತನ್ನ ಕಣ್ಣುಗುಡ್ಡೆಯನ್ನು ಹೆಡ್‌ಲ್ಯಾಂಪ್‌ ಆಗಿ ಬದಲಾಯಿಸಿಕೊಂಡಿದ್ದಾನೆ. ಬ್ಯಾಟರಿ ಚಾಲಿತ ಈ ಲೈಟನ್ನು ಕಾಂಟಾಕ್ಟ್‌ ಲೆನ್ಸ್‌ ಧರಿಸುವ ಮಾದರಿಯಲ್ಲಿ ಕಣ್ಣಿನೊಳಗೆ ಧರಿಸಿಕೊಂಡರೆ ಆಯಿತು. ಕಣ್ಣುಗುಡ್ಡೆಯೇ ಬೆಳಕು ನೀಡಿದಂತೆ ಝಗಮಗಿಸುತ್ತದೆ. ಕತ್ತಲಲ್ಲಿ ಯಾವ ಟಾರ್ಚಿಗೂ ಕಮ್ಮಿಯಿಲ್ಲವೆಂಬಂತೆ ಪ್ರಕಾಶವಾಗಿ ಬೆಳಗುತ್ತದೆ. ಪುಸ್ತಕ ಓದಲೂ ಸಾಕಾಗುವಷ್ಟು ಬೆಳಕನ್ನು ಇದು ನೀಡುತ್ತದಂತೆ!

ಈತ ತನ್ನ ಕಣ್ಣುಗುಡ್ಡೆಗೆ ಅಳವಡಿಸಿಕೊಂಡ ಈ ಹೆಡ್‌ಲ್ಯಾಂಪ್‌ ಕೆಲಸ ಮಾಡುವ ವಿದಾನವನ್ನು ವಿಡಿಯೋ ಮಾಡಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ಇದು ವೈರಲ್‌ ಆಗಿದೆ. ಕೇವಲ ಎರಡು ದಿನಗಳಲ್ಲಿ ಒಂದು ಮಿಲಿಯನ್‌ಗೂ ಹೆಚ್ಚು ಮಂದಿಯಿಂದ ವೀಕ್ಷಣೆ ಕಂಡಿದ್ದು ಹಲವರು ಈತನ ಈ ಐಡಿಯಾಕ್ಕೆ ಮನಸೋತಿದ್ದಾರೆ. ಇದೊಂದು ಗ್ರೇಟ್‌ ಐಡಿಯಾ ಎಂದು ಹೊಗಳಿದ್ದಾರೆ.

ಸ್ಟ್ಯಾನ್ಲಿ ಹೇಳುವ ಪ್ರಕಾರ ಈ ಟೈಟಾನಿಯಂ ಸ್ಕಲ್‌ ಲ್ಯಾಂಪ್‌ ಕತ್ತಲಲ್ಲಿ ಓದಲು ಕೂಡಾ ಈತನಿಗೆ ನೆರವಾಗುತ್ತದೆ. ಇದರ ಬ್ಯಾಟರಿ ಲೈಫ್‌ 20 ಗಂಟೆಗಳಾಗಿದ್ದು, ಇದು ಸತತವಾಗಿ ಉರಿದರೆ ಬಿಸಿಯೂ ಆಗುವುದಿಲ್ಲ ಎಂದಿದ್ದಾನೆ. ಸ್ಟ್ಯಾನ್ಲಿ ಇದೇ ಮೊದಲು ಹೀಗೆ ಕಣ್ಣಿಗೆ ಸೈಬೋರ್ಗ್‌ ಐ ಮಾಡಿಕೊಂಡಿಲ್ಲ. ಈ ಮೊದಲೂ ಈತ ಈ ಪ್ರಯೋಗಕ್ಕೆ ಕೈ ಹಾಕಿದ್ದು, ಅದು ಟರ್ಮಿನೇಟರ್‌ ಸಿನಿಮಾದಲ್ಲಿ ನಟ ಅರ್ನಾಲ್ಡ್‌ಗೆ ಬಳಸಲಾದಂಥದ್ದೇ ಬೆಳಕನ್ನು ಹೊಂದಿತ್ತು.

ಇದನ್ನೂ ಓದಿ: Viral Post: ಹೆಂಡತಿಯೇ ತಂಗಿ! ಮದುವೆಯಾಗಿ ಆರು ವರ್ಷಗಳ ಬಳಿಕ ಸತ್ಯ ಬಯಲಾದದ್ದು ಹೇಗೆ?

ಈತ ಪೋಸ್ಟ್‌ ಮಾಡಿದ ಈ ವಿಡಿಯೋಗೆ ಕೆಲವರು, ʻಕ್ಯಾಂಪಿಂಗ್‌ ವೇಳೆಯಲ್ಲಿ ಈ ಐಡಿಯಾ ಅದ್ಭುತವಾಗಿ ಉಪಯೋಗಕ್ಕೆ ಬರಬಹುದಲ್ಲವೇ ಎಂದು ನಾನು ಯೋಚಿಸುತ್ತಿದ್ದೇನೆ!ʼ ಎಂದು ಕಾಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻಇದರ ಉಪಯೋಗ ಎಂದರೆ, ಕತ್ತಲಲ್ಲಿ ಬೆಳಕಿಗೆ ನಾವು ಬೇರೆಯವರನ್ನು ಆಶ್ರಯಿಸಬೇಕಾಗಿಲ್ಲ. ಆದರೆ, ತೊಂದರೆ ಎಂದರೆ, ಎಂಥ ಭಯದ ಸಂದರ್ಭ ಬಂದರೆ, ಜನರೆಲ್ಲ, ಲೈಟಿನ ಕಣ್ಣಿನವನಾದ ನಿಮ್ಮನ್ನೇ ಮುಂದೆ ತಳ್ಳಬಹುದುʼ ಎಂದು ನಗೆಯಾಡಿದ್ದಾರೆ!

ಈ ಗ್ಯಾಜೆಟ್‌ ಪ್ರೇಮಿ, ತಾನೇ ಇದನ್ನು ಸಿದ್ಧಪಡಿಸಿದ್ದಾಗಿ ಹೇಳಿಕೊಂಡಿದ್ದು, ಇದಕ್ಕಾಗಿ ಸಾಲಿಡ್‌ ಟೈಟಾನಿಯಂ ಬಿಲ್ಲೆಟ್‌ ಬಳಸಿಕೊಂಡಿದ್ದಾಗಿ ಹೇಳಿದ್ದಾನೆ. ಕಳೆದೆರಡು ವರ್ಷಗಳಿಂದ ಇದನ್ನು ಬಳಸುತ್ತಿದ್ದು, ನನಗಿದು ಬಹಳ ಉಪಯೋಗಕ್ಕೆ ಬಂದಿದೆ. ಹಾಗೂ ಈವರೆಗೂ ಯಾವುದೇ ತೊಂದರೆ ಕೊಟ್ಟಿಲ್ಲ. ನನ್ನ ಮೂಗು ಹಾಗೂ ಹುಬ್ಬುಗಳು ಈ ಬೆಳಕಿನಿಂದ ನನ್ನ ಇನ್ನೊಂದು ಕಣ್ಣಿಗೆ ರಕ್ಷಣೆಯನ್ನೂ ನೀಡುತ್ತವೆ.

ಇದನ್ನೂ ಓದಿ: Viral Post: ಜ್ಯೂಸ್‌ ಕುಡಿಯಿರಿ, ಯುಟ್ಯೂಬ್‌ ಚಾನಲ್‌ ಸಬ್‌ಸ್ಕ್ರೈಬ್‌ ಮಾಡಿ ರಿಯಾಯಿತಿ ಪಡೆಯಿರಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಹೊಟೇಲ್‌ ಮಾಲೀಕನನ್ನು ಮುಖಾಮೂತಿ ನೋಡದೆ ಚಚ್ಚಿದ ಶಾಸಕ; ವಿಡಿಯೋ ಫುಲ್‌ ವೈರಲ್‌

Viral Video:ಕೋಲ್ಕತ್ತಾದಲ್ಲಿ ಈ ಘಟನೆ ನಡೆದಿದ್ದು, ಮಾಜಿ ನಟ, ಟಿಎಂಸಿ ಶಾಸಕ ಸೋಹಮ್‌ ಚಕ್ರವರ್ತಿ ರೆಸ್ಟೋರೆಂಟ್‌ ಮಾಲಿಕರ ಮೇಲೆ ಹಲ್ಲೆ ನಡೆಸಿದ್ದಾರೆ. ಕೋಲ್ಕತ್ತಾ ಡಿಲೈಟ್‌ ಎಂಬ ರೆಸ್ಟೋರೆಂಟ್‌ ಮಾಲೀಕ ಅನಿಸುರ್‌ ಆಲಂ ಮತ್ತು ಶಾಸಕ ಸೋಹಮ್‌ ನಡುವೆ ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ ನಡೆದಿತ್ತು. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಈ ವೇಳೆ ಆಲಂ ಟಿಎಂಸಿ ಪಕ್ಷ ಪ್ರಧಾನ ಕಾರ್ಯದರ್ಶಿ ಅಭಿಷೇಕ್‌ ಬ್ಯಾನರ್ಜಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆಂಬ ಕಾರಣಕ್ಕೆ ಸೋಹಮ್‌ ಆತನಿಗೆ ಕಪಾಳ ಮೋಕ್ಷ ಮಾಡಿ ಥಳಿಸಿದ್ದಾರೆ.

VISTARANEWS.COM


on

Viral Video
Koo

ಕೋಲ್ಕತ್ತಾ: ಎರಡು ದಿನಗಳ ಹಿಂದೆ ಭದ್ರತಾ ಸಿಬ್ಬಂದಿ ನೂತನ ಸಂಸದೆ ಕಂಗನಾ ರಣಾವತ್‌(Kangana Ranaut)ಗೆ ಕಪಾಳಮೋಕ್ಷ ಮಾಡಿರುವ ಸುದ್ದಿ ಮಾಸುವ ಮುನ್ನವೇ ಶಾಸಕನೋರ್ವ ಇದೀಗ ಸುದ್ದಿಯಾಗಿದ್ದಾರೆ. ಪಶ್ಚಿಮ ಬಂಗಾಳ(West Bengal)ದ ತೃಣಮೂಲ ಕಾಂಗ್ರೆಸ್‌(TMC) ಶಾಸಕ ರೆಸ್ಟೋರೆಂಟ್‌ವೊಂದರ ಮಾಲಿಕರಿಗೆ ಕಪಾಳಮೋಕ್ಷ ಮಾಡುವ ಮೂಲಕ ದಾಂಧಲೆ ಎಬ್ಬಿಸಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌(Viral Video) ಆಗುತ್ತಿದೆ.

ವೈರಲ್‌ ವಿಡಿಯೋದಲ್ಲೇನಿದೆ?

ಕೋಲ್ಕತ್ತಾದಲ್ಲಿ ಈ ಘಟನೆ ನಡೆದಿದ್ದು, ನಟ, ಟಿಎಂಸಿ ಶಾಸಕ ಸೋಹಮ್‌ ಚಕ್ರವರ್ತಿ ರೆಸ್ಟೋರೆಂಟ್‌ ಮಾಲಿಕರ ಮೇಲೆ ಹಲ್ಲೆ ನಡೆಸಿದ್ದಾರೆ. ಕೋಲ್ಕತ್ತಾ ಡಿಲೈಟ್‌ ಎಂಬ ರೆಸ್ಟೋರೆಂಟ್‌ ಮಾಲೀಕ ಅನಿಸುರ್‌ ಆಲಂ ಮತ್ತು ಶಾಸಕ ಸೋಹಮ್‌ ನಡುವೆ ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ ನಡೆದಿತ್ತು. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿತ್ತು. ಈ ವೇಳೆ ಆಲಂ ಟಿಎಂಸಿ ಪಕ್ಷ ಪ್ರಧಾನ ಕಾರ್ಯದರ್ಶಿ ಅಭಿಷೇಕ್‌ ಬ್ಯಾನರ್ಜಿಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆಂಬ ಕಾರಣಕ್ಕೆ ಸೋಹಮ್‌ ಆತನಿಗೆ ಕಪಾಳ ಮೋಕ್ಷ ಮಾಡಿ ಥಳಿಸಿದ್ದಾರೆ.

ನ್ಯೂಟೌನ್ ಪ್ರದೇಶದಲ್ಲಿರುವ ಈ ಕೋಲ್ಕತ್ತಾ ಡಿಲೈಟ್‌ ರೆಸ್ಟೋರೆಂಟ್‌ನ ಪಾರ್ಕಿಂಗ್‌ ಪ್ರದೇಶದಲ್ಲಿ ಶಾಸಕರ ಬೆಂಬಲಿಗನೊಬ್ಬ ತನ್ನ ವಾಹನ ನಿಲ್ಲಿಸಿದ್ದ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಆಲಂ ಆ ವಅಹನವನ್ನು ತೆರವುಗೊಳಿಸುವಂತೆ ಹಾಗೂ ಅದು ತಮ್ಮ ಗ್ರಾಹಕರಿಗೆ ಮೀಸಲಿಟ್ಟಿರುವ ಪಾರ್ಕಿಂಗ್‌ ಜಾಗ ಎಂದು ಹೇಳಿದ್ದ. ಆಗ ಆತ ತಾನು ಶಾಸಕನ ಸ್ನೇಹಿತ ಎಂದು ಹೇಳಿದ್ದಾನೆ. ಅದಕ್ಕೆ ಆಲಂ ನೀನು ಯಾರಾದರೆ ನನಗೇನು? ಪ್ರಧಾನಿಯ ಸ್ನೇಹಿತನಾಗಿದ್ದರೂ ವಾಹನ ತೆರವುಗೊಳಿಸಲೇಬೇಕು ಎಂದು ಹೇಳಿದ್ದಾನೆ. ಆಗ ಸ್ಥಳಕ್ಕೆ ಬಂದ ಶಾಸಕ ಸೋಹಮ್‌ ಆಲಂ ಮುಖಾಮೂತಿ ನೋಡದೇ ಚಚ್ಚಿದ್ದಾರೆ ಎನ್ನಲಾಗಿದೆ.

ಇದಕ್ಕೆ ಪ್ರತಿಕ್ರಿಯಿಸಿರುವಸೋಹಮ್‌, ರೆಸ್ಟೋರೆಂಟ್‌ ಮಾಲೀಕನ ಮೇಲೆ ಹಲ್ಲೆ ನಡೆಸಿರುವುದು ನಿಜ. ಕೆಳಗೆ ಮಾರಾಮಾರಿ ಸದ್ದು ಕೇಳಿ ಧಾವಿಸಿ ಬಂದೆ. ಮಾಲೀಕರು ನನ್ನ ಸಿಬ್ಬಂದಿಯನ್ನು ನಿಂದಿಸುತ್ತಿರುವುದನ್ನು ನಾನು ನೋಡಿದೆ. ಅವರು ನನ್ನನ್ನು ಮತ್ತು ಅಭಿಷೇಕ್ ಬ್ಯಾನರ್ಜಿಯನ್ನು ನಿಂದಿಸಿದ್ದಾರೆ. ನಾನು ನನ್ನ ತಾಳ್ಮೆ ಕಳೆದುಕೊಂಡೆ ಮತ್ತು ಅವನಿಗೆ ಕಪಾಳಮೋಕ್ಷ ಮಾಡಿದ್ದೇನೆ ಎಂದು ಹೇಳಿದರು.

ಇನ್ನು ಸೋಹಮ್‌ ಒಬ್ಬ ಸೋಶಿಯಲ್‌ ಮೀಡಿಯಾ ಇನ್‌ಫ್ಲೂವೆನ್ಶಿಯಲ್‌. ಅವರು ಶೂಟಿಂಗ್‌ಗಾಗಿ ಹೊಟೇಲ್‌ಗೆ ಬಂದಿದ್ದಾಗ ಈ ಘಟನೆ ನಡೆದಿದೆ. ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ್ದ ಹೆಚ್ಚುವರಿ ಕಾರುಗಳನ್ನು ತೆಗೆಯುವಂತೆ ಆಲಂ ಹೇಳಿದ ನಂತರ ಸೋಹಮ್ ನಮ್ಮ ಮಾಲೀಕರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ಸೆಕ್ಯುರಿಟಿಯವರು ಕೂಡ ನಮ್ಮನ್ನು ಥಳಿಸಿದ್ದಾರೆ. ನಾವು ಇನ್ನೂ ಪೊಲೀಸರಿಗೆ ದೂರು ನೀಡಿಲ್ಲ ಎಂದು ಹೊಟೇಲ್‌ ಮ್ಯನೇಜರ್‌ ಹೇಳಿದ್ದಾರೆ.

ಇದನ್ನೂ ಓದಿ: Narendra Modi: ಮೋದಿ ಪ್ರಮಾಣವಚನಕ್ಕೆ 7 ವಿದೇಶಿ ನಾಯಕರು; 8000 ಅತಿಥಿಗಳು

Continue Reading

ಚಾಮರಾಜನಗರ

Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

Self Harming : ದುಷ್ಟನೊಬ್ಬ ಮಗಳ ನಗ್ನ ಫೋಟೋ ತೋರಿಸಿ ಬೆದರಿಸುತ್ತಿದ್ದ ಎಂದು ಹೆದರಿ ಮರ್ಯಾದೆಗೆ ಅಂಜಿದ ಕುಟುಂಬವೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಘಟನೆಯಲ್ಲಿ ಕುಟುಂಬದ ಯಜಮಾನ ಮೃತಪಟ್ಟರೆ, ಉಳಿದ ಮೂವರು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

VISTARANEWS.COM


on

By

Self Harming
Koo

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ (MM Hills) ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Self Harming) ಯತ್ನಿಸಿದ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಚಂದಗಾಲು ಗ್ರಾಮದ ಮಹದೇವನಾಯಕ (65) ಅವರ ಪುತ್ರಿ ರಿಷಿಕಾ ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ಆದರೆ ಇತ್ತೀಚೆಗೆ ಆತನಿಂದ ಅಂತರ ಕಾಯ್ದುಕೊಂಡಾಗ ರಿಷಿಕಾಳ ಜತೆಗಿದ್ದ ನಗ್ನ ವಿಡಿಯೊ ಹಾಗೂ ಫೋಟೋ ಇಟ್ಟುಕೊಂಡು ಬೆದರಿಕೆ (Black mail Case) ಹಾಕುತ್ತಿದ್ದ ಎನ್ನಲಾಗಿದೆ.

ಈ ವಿಚಾರವಾಗಿ ಅನೇಕ ಬಾರಿ ಯುವಕನ ಹಾಗು ರಿಷಿಕಾ ಕುಟುಂಬದ ಜತೆ ಗಲಾಟೆ ಸಹ ಆಗಿದೆ. ಈತನ ಕಾಟಕ್ಕೆ ಬೇಸತ್ತ ಕುಟುಂಬ, ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ವಿಷ ಸೇವಿಸಿ ಅಸ್ವಸ್ಥಳಾಗಿದ್ದ ರಿಷಿಕಾಳನ್ನು ಹನೂರು ತಾಲೂಕಿನ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾಳೆ. ತಾಯಿ ಗೌರಮ್ಮ ಹಾಗೂ ಲೀಲಾವತಿಗೆ ಹೆಚ್ಚಿನ ಚಿಕಿತ್ಸೆಗೆಂದು ಕೊಳ್ಳೇಗಾಲದಿಂದ ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆಯಲ್ಲಿ ರಿಷಿಕಾ ತಂದೆ ಮಹದೇವನಾಯಕ ಅವರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Love‌ Torture : ಪ್ರೀತ್ಸೆ ಅಂತ ಪ್ರಾಣ ತಿಂದ; ಒಪ್ಪದೇ ಇದ್ದಾಗ ಯುವತಿಯ ಖಾಸಗಿ ಫೋಟೋ ಹರಿಬಿಟ್ಟ ಪಾಗಲ್‌ ಪ್ರೇಮಿ

MM Hills

ಮಾದಪ್ಪನ ದರ್ಶನ ಮಾಡಿ ವಿಷ ಸೇವಿಸಿದ ಕುಟುಂಬ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ (Self Harming) ಯತ್ನಿಸಿದ್ದಾರೆ. ನಾಲ್ವರು ವಿಷ ಸೇವಿಸಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟರೆ, ಮೂವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮಲೆಮಹದೇಶ್ವರ ಬೆಟ್ಟ (MM Hills) ವ್ಯಾಪ್ತಿಯ ತಾಳಬೆಟ್ಟದಲ್ಲಿ ಘಟನೆ ನಡೆದಿತ್ತು.

ಚಂದಗಾಲು ಗ್ರಾಮದ ಮಹದೇವನಾಯಕ (65) ಮೃತ ದುರ್ದೈವಿ. ಅಸ್ವಸ್ಥಗೊಂಡ ಮಹದೇವನಾಯಕನ ಪತ್ನಿ ಗೌರಮ್ಮ(60), ರಿಷಿತಾ (21), ಲೀಲಾವತಿ (45) ಎಂಬುವವರು ತೀವ್ರ ಅಸ್ವಸ್ಥಗೊಂಡಿದ್ದಾರೆ. ಮೈಸೂರಿನ ಕೆಆರ್‌ನಗರ ತಾಲೂಕಿನ ಚಂದಗಾಲು ಗ್ರಾಮಸ್ಥರು ಎಂದು ತಿಳಿದು ಬಂದಿದೆ.

ಮಹದೇಶ್ವರ ಬೆಟ್ಟಕ್ಕೆ ಬಂದು ದೇವರ ದರ್ಶನ ಪಡೆದು ವಾಪಸ್ ಬರುವಾಗ ತಾಳ ಬೆಟ್ಟದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಹದೇವನಾಯಕ ವಿಷ ಸೇವಿಸಿದ ಕೂಡಲೇ ಒದ್ದಾಡಿ ಮೃತಪಟ್ಟಿದ್ದಾರೆ. ಇತ್ತ ಗೌರಮ್ಮ, ಲೀಲಾವತಿ, ರಿಷಿತಾ ವಿಷ ಸೇವನೆ ಮಾಡಿದ್ದಾರೆ. ಆದರೆ ದೇಹದಲ್ಲಿ ಉರಿ ಕಾಣಿಸಿಕೊಂಡು ಜೋರಾಗಿ ಕೂಗಿಕೊಂಡು ನರಳಾಡಿದ್ದಾರೆ.

ಈ ವೇಳೆ ತಾಳ ಬೆಟ್ಟದಲ್ಲಿದ್ದ ಸ್ಥಳೀಯರು ಪರಿಶೀಲನೆ ನಡೆಸಿದಾಗ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವುದು ಕಂಡು ಬಂದಿದೆ. ಕೂಡಲೇ ಅಲ್ಲಿದ್ದವರು ನಾಲ್ವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಮಹದೇವನಾಯಕರಿಗೆ ವಿಷ ದೇಹದೊಳಗೆ ಸೇರಿದ್ದರಿಂದ ಅದಾಗಲೇ ಉಸಿರು ಚೆಲ್ಲಿದ್ದರು. ಸದ್ಯ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Assault Case : ಅರೆ ಬೆತ್ತಲಾಗಿ ಯುವಕನಿಗೆ ನಡು ರಸ್ತೆಯಲ್ಲೆ ಹಿಗ್ಗಾಮುಗ್ಗಾ ಥಳಿತ; ಹಲ್ಲೆಕೋರರು ಅರೆಸ್ಟ್‌

Assault Case : ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆಯು ವಿಕೋಪಕ್ಕೆ ತಿರುಗಿ ಸ್ನೇಹಿತರೇ ಹಲ್ಲೆಕೋರರಾಗಿದ್ದರು. ನಡುರಸ್ತೆಯಲ್ಲೇ ಸ್ನೇಹಿತನನ್ನು ಅರೆಬೆತ್ತಲೆ ಮಾಡಿ, ತಾವು ಅರೆ ಬೆತ್ತಲಾಗಿ ಹಿಗ್ಗಾಮುಗ್ಗಾ ಥಳಿಸಿದ್ದರು. ಕಳೆದ ತಿಂಗಳು ನಡೆದಿದ್ದ ಈ ಹಲ್ಲೆಯು ಇದೀಗ ವೈರಲ್‌ ಆಗಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

VISTARANEWS.COM


on

By

assault case
Koo

ಬೆಂಗಳೂರು: ಯುವಕರ ನಡುವೆ ಗಲಾಟೆಯೊಂದು ತಿಂಗಳ ಹಿಂದೆ (Assault Case) ನಡೆದಿತ್ತು. ಬೆಂಗಳೂರಿನ ಕಾಡುಗೋಡಿಯ ಬೆಳತ್ತೂರು ಕಾಲೋನಿಯಲ್ಲಿ ಧನಂಜಯ್ ಎಂಬಾತನನ್ನು ಆತನ ಸ್ನೇಹಿತರೇ ಹಿಗ್ಗಾಮುಗ್ಗಾ ಥಳಿಸಿದ್ದರು. ತಾವು ಅರೆ ಬೆತ್ತಲಾಗಿ ಧನಂಜಯ್‌ನನ್ನು ಅರೆ ಬೆತ್ತಲೆ ಮಾಡಿ ನಡುರಸ್ತೆಯಲ್ಲಿ ಸಿಕ್ಕ ಸಿಕ್ಕ ವಸ್ತುಗಳಿಂದ ಹಲ್ಲೆ ನಡೆಸಿದ್ದರು.

ಹಲ್ಲೆ ಮಾಡುವ ವಿಡಿಯೊವನ್ನು ಅಲ್ಲಿನ ಸ್ಥಳೀಯರು ಚಿತ್ರೀಕರಿಸಿದ್ದರು. ಆದರೆ ಇದೀಗ ಒಂದು ತಿಂಗಳ ನಂತರ ಸೋಷಿಯಲ್ ಮೀಡಿಯಾದಲ್ಲಿ ಹಲ್ಲೆ ವಿಡಿಯೊ ವೈರಲ್ ಆಗಿದೆ. ವಿಡಿಯೊ ವೈರಲ್ ಆಗುತ್ತಿದ್ದಂತೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು. ಬೆಂಗಳೂರು ಸೇಫ್‌ ಸಿಟಿಯಿಂದ ದೂರಾಗುತ್ತಿದೆ ಎಂದು ಕಿಡಿಕಾರಿದರು.

ವಿಡಿಯೋ ವೈರಲ್‌ ಆಗುತ್ತಿದ್ದಂತೆ ಪ್ರಕರಣ ದಾಖಲಿಸಿಕೊಂಡ ಕಾಡುಗೋಡಿ ಪೊಲೀಸರು, ವಿಡಿಯೊ ಅಧಾರಿಸಿ ಏಳು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದ ಧನಂಜಯ್‌ ಹಾಗೂ ಆರೋಪಿಗಳು ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಇದನ್ನೂ ಓದಿ: MM Hills : ಮಲೆಮಹದೇಶ್ವರ ಬೆಟ್ಟದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ; ಒಬ್ಬರು ಸಾವು, ಮೂವರು ಗಂಭೀರ

ಸದ್ಯ ಹೋಟೆಲ್‌ ಮ್ಯಾನೇಜರ್ ದೂರಿನ ಮೇರೆಗೆ ಸಂತೋಷ್, ಆಕಾಶ್, ಅಮರೇಶ್, ನವೀನ್, ವಿಶಾಲ್ ಜೋಷಿ ಹಾಗೂ ಸುರೇಂದ್ರ, ಮಂಜುನಾಥ್ ಎಂಬುವವರನ್ನು ಬಂಧಿಸಲಾಗಿದೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಕಾಡುಗೋಡಿ ಹಲ್ಲೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿರುವ ವೈಟ್ ಫಿಲ್ಡ್ ಡಿಸಿಪಿ ಶಿವಕುಮಾರ್, ಮೇ 8ರಂದು ಸಾಯಿಪ್ಯಾಲೆಸ್ ಹೊಟೇಲ್ ಮುಂದೆ ಈ ಘಟನೆ ನಡೆದಿದೆ. ಹಲ್ಲೆ ಮಾಡಿದ ಆರೋಪಿಗಳು ಹೋಟೆಲ್‌ ಮುಂದೆ ಮಧ್ಯಪಾನ ಮಾಡಿ ಗಲಾಟೆ ಮಾಡುತ್ತಿದ್ದರು. ಇದನ್ನೂ ಧನಂಜಯ್‌ ಪ್ರಶ್ನೆ ಮಾಡಿದ್ದಕ್ಕೆ ಸಿಟ್ಟಾದ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಧನಂಜಯ್‌ನನ್ನು ಕರೆಸಿ ನಮ್ಮ ಸಿಬ್ಬಂದಿ ದೂರು ತೆಗೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Viral News: ಅಯ್ಯೋ..ಇದೆಂಥಾ ಹುಚ್ಚಾಟ! ಬಿಜೆಪಿ ಗೆಲ್ಲಲ್ಲಿ ಎಂದು ಬೆರಳನ್ನೇ ಕತ್ತರಿಸಿಕೊಂಡ ಭೂಪ

Viral News: ಛತ್ತೀಸ್‌ಗಡದ ಬಾಲರಾಮ್‌ಪುರದಲ್ಲಿ ಈ ಘಟನೆ ನಡೆದಿದ್ದು, ದುರ್ಗೇಶ್‌ ಪಾಂಡೆ ಎಂಬಾತನೇ ಬಿಜೆಪಿ ಬೆಂಬಲಿಗ. ಜೂ.4ರಂದು ಚನಾವಣಾ ಫಲಿತಾಂಶ ಹೊರಬಿದ್ದಾಗ ಆರಂಭದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಿದ್ದಂತೆ ತೀವ್ರ ಬೇಸರಗೊಂಡಿದ್ದನಂತೆ. ಈ ಬಾರಿ ಅಧಿಕಾರ ಎನ್‌ಡಿಎ ಕೈ ತಪ್ಪಿ ಹೋಗುತ್ತದೆ ಎಂಬ ಆತಂಕಕ್ಕೆ ಬಿದ್ದ ದುರ್ಗೇಶ್‌, ಕಾಳಿ ಮಂದಿರಕ್ಕೆ ತೆರಳಿ ಬಿಜೆಪಿ ಗೆಲುವಿಗೆ ಪ್ರಾರ್ಥಿಸಿದ್ದಾನೆ. ಅಲ್ಲದೇ ತನ್ನ ಒಂದು ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ್ದಾನೆ.

VISTARANEWS.COM


on

Viral News
Koo

ಛತ್ತೀಸ್‌ಗಡ: ಚುನಾವಣೆ(Election) ಅಂದ್ರೆನೇ ಹಾಗೆಯೇ ಅದೊಂದು ತರಹ ಯುದ್ಧದ ರೀತಿಯೇ ಭಾಸವಾಗುತ್ತದೆ. ತಮ್ಮ ತಮ್ಮ ನೆಚ್ಚಿನ ಪಕ್ಷಗಳು, ನಾಯಕರ ಗೆಲುವಿಗೆ ನೂರಾರು ಕಾರ್ಯಕರ್ತರು, ಬೆಂಬಲಿಗರು ಹಂಬಲಿಸೋದು ಸಹಜ. ಕೆಲವೊಮ್ಮೆ ಕಾರ್ಯಕರ್ತರ ಪಕ್ಷದ ಬಗೆಗಿನ ಒಲವು ಅತಿರೇಕಕ್ಕೆ ತಿರುಗಿದಾಗ ಅನೇಕ ಅವಘಡಗಳು ಸಂಭವಿಸುತ್ತಿರುತ್ತವೆ. ಅಂತಹದ್ದೇ ಒಂದು ಘಟನೆ(Viral News) ಛತ್ತೀಸ್‌ಗಡದಲ್ಲಿ ನಡೆದಿದ್ದು, ಎನ್‌ಡಿಎ(NDA) ಬಹುಮತದೊಂದಿಗೆ ಗೆಲವು ಸಾಧಿಸಿರುವ ಹಿನ್ನೆಲೆ ವ್ಯಕ್ತಿಯೊಬ್ಬ ತನ್ನ ಬೆರಳು ಕತ್ತರಿಸಿ ಕಾಳಿ ದೇವಿಗೆ ಅರ್ಪಿಸಿದ್ದಾನೆ.

ಏನಿದು ಘಟನೆ?

ಛತ್ತೀಸ್‌ಗಡದ ಬಾಲರಾಮ್‌ಪುರದಲ್ಲಿ ಈ ಘಟನೆ ನಡೆದಿದ್ದು, ದುರ್ಗೇಶ್‌ ಪಾಂಡೆ ಎಂಬಾತನೇ ಬಿಜೆಪಿ ಬೆಂಬಲಿಗ. ಜೂ.4ರಂದು ಚನಾವಣಾ ಫಲಿತಾಂಶ ಹೊರಬಿದ್ದಾಗ ಆರಂಭದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಿದ್ದಂತೆ ತೀವ್ರ ಬೇಸರಗೊಂಡಿದ್ದನಂತೆ. ಈ ಬಾರಿ ಅಧಿಕಾರ ಎನ್‌ಡಿಎ ಕೈ ತಪ್ಪಿ ಹೋಗುತ್ತದೆ ಎಂಬ ಆತಂಕಕ್ಕೆ ಬಿದ್ದ ದುರ್ಗೇಶ್‌, ಕಾಳಿ ಮಂದಿರಕ್ಕೆ ತೆರಳಿ ಬಿಜೆಪಿ ಗೆಲುವಿಗೆ ಪ್ರಾರ್ಥಿಸಿದ್ದಾನೆ. ಅಲ್ಲದೇ ತನ್ನ ಒಂದು ಬೆರಳನ್ನೇ ಕತ್ತರಿಸಿ ದೇವಿಗೆ ಅರ್ಪಿಸಿದ್ದಾನೆ.

ಇನ್ನು ಬೆರಳು ಕತ್ತರಿಸಿಕೊಂಡ ದುರ್ಗೇಶ್‌ ಪಾಂಡೆ, ಬಟ್ಟೆಯನ್ನು ಕಟ್ಟಿ ಸುರಿಯುತ್ತಿದ್ದ ರಕ್ತವನ್ನು ತಡೆಯಲು ಯತ್ನಿಸಿದ್ದಾನೆ. ಆದರೆ ರಕ್ತ ಮಾತ್ರ ನಿಲ್ಲಲೇ ಇಲ್ಲ. ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆ ಆತನ ಕುಟುಂಬಸ್ಥರು ಆತನನ್ನು ತಕ್ಷಣ ಸಮಾರಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಆತನನ್ನು ಅಂಬಿಕಾಪುರದ ಮೆಡಿಕಲ್‌ ಕಾಲೇಜಿಗೆ ರವಾನಿಸಲಾಗಿತ್ತು. ಬಹಳ ಹೊತ್ತಾದ ಕಾರಣ ನಜ್ಜುಗುಜ್ಜಾಗಿದ್ದ ಆತನ ಬೆರಳನ್ನು ಮತ್ತೆಜೋಡಿಸಲು ಸಾಧ್ಯವಾಗಿಲ್ಲ. ಅದ್ಯ ಚಿಕಿತ್ಸೆ ಮುಂದುವರೆದಿದ್ದು, ಆತನ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ದುರ್ಗೇಶ್‌ ಪಾಂಡೆ, ಆರಂಭಿಕ ಟ್ರೆಂಡ್‌ಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುವುದನ್ನು ಕಂಡು ನಾನು ವಿಚಲಿತನಾದೆ. ಮತ್ತೊಂದೆಡೆ ಕಾಂಗ್ರೆಸ್ ಬೆಂಬಲಿಗರು ಕೂಡ ಉತ್ಸಾಹದಲ್ಲಿದ್ದರು. ಇಡೀ ಗ್ರಾಮವು ನಂಬಿರುವ ಕಾಳಿ ದೇವಸ್ಥಾನಕ್ಕೆ ನಾನು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಬಿಜೆಪಿ ಗೆಲುವಿಗೆ ಬೆರಳು ಕೊಡುವುದಾಗಿ ಪ್ರತಿಜ್ಞೆ ಮಾಡಿದ್ದೆ. ಅಂದು ಸಂಜೆ ಬಿಜೆಪಿ ಚುನಾವಣೆಯಲ್ಲಿ ಗೆದ್ದಾಗ, ನಾನು ದೇವಸ್ಥಾನಕ್ಕೆ ಹೋಗಿ, ನನ್ನ ಬೆರಳು ಕತ್ತರಿಸಿ ಅದನ್ನು ಅರ್ಪಿಸಿದೆ, ಬಿಜೆಪಿ ಈಗ ಸರ್ಕಾರ ರಚಿಸುತ್ತದೆ, ಆದರೆ ಅವರು (ಎನ್‌ಡಿಎ) 400 ರ ಗಡಿ ದಾಟಿದರೆ ನನಗೆ ಹೆಚ್ಚು ಸಂತೋಷವಾಗುತ್ತಿತ್ತು ಎಂದಿದ್ದಾನೆ.

ಇದನ್ನೂ ಓದಿ:Rahul Gandhi: ಷೇರುಪೇಟೆಯಲ್ಲಿ ಭಾರಿ ಹಗರಣವಾಗಿದೆ ಎಂದಿದ್ದ ರಾಹುಲ್ ಗಾಂಧಿಗೆ ಐದೇ ದಿನದಲ್ಲಿ 25 ಲಕ್ಷ ರೂ. ಲಾಭ!

ಕೆಲವು ದಿನಗಳ ಹಿಂದೆ ಆಪ್‌ ನಾಯಕ, ನವದೆಹಲಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ಸೋಮನಾಥ್‌ ಭಾರ್ತಿ, ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿಯಾದರೆ ನನ್ನ ತಲೆ ಬೋಳಿಸಿಕೊಳ್ಳುತ್ತೇನೆ” ಎಂದಿದ್ದರು. ಜೂನ್‌ 4ರಂದು ಎಲ್ಲ ಮತಗಟ್ಟೆ ಸಮೀಕ್ಷೆಗಳು ತಪ್ಪು ಎಂಬುದು ಸಾಬೀತಾಗಲಿದೆ. ಖಂಡಿತವಾಗಿಯೂ, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುವುದಿಲ್ಲ. ದೆಹಲಿಯ ಎಲ್ಲ 7 ಲೋಕಸಭೆ ಕ್ಷೇತ್ರಗಳಲ್ಲೂ ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಇನ್ನು, ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾದರೆ, ನಾನು ನನ್ನ ತಲೆಯನ್ನು ಬೋಳಿಸಿಕೊಳ್ಳುತ್ತೇನೆ” ಎಂಬುದಾಗಿ ಮತಗಟ್ಟೆ ಸಮೀಕ್ಷೆಗಳ ವರದಿಗಳ ಬಳಿಕ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು.

Continue Reading
Advertisement
IND vs PAK
ಕ್ರೀಡೆ6 mins ago

IND vs PAK: ಪಾಕ್​ ವಿರುದ್ಧದ ಪಂದ್ಯದಲ್ಲಿ ವಿಶ್ವ ದಾಖಲೆ ನಿರ್ಮಿಸಲು ಕೊಹ್ಲಿ ಸಜ್ಜು; ಯಾವುದು ಈ ದಾಖಲೆ?

Karnataka weather Forecast
ಮಳೆ29 mins ago

Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

ಬೆಂಗಳೂರು35 mins ago

Wheelchair Cricket Tournament: ವಿಶೇಷಚೇತನರ ಗಾಲಿಕುರ್ಚಿಯ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿದ ರವಿಶಂಕರ್ ಗುರೂಜಿ

Ambani Family Fashion
ಫ್ಯಾಷನ್48 mins ago

Ambani Family Fashion: ಅಂಬಾನಿ ಕುಟುಂಬದ ಮಹಿಳೆಯರ ಜ್ಯುವೆಲರಿ ಡಿಸೈನ್ಸ್ ಕಾಪಿ ಮಾಡಿ ಟ್ರೆಂಡಿಯಾದ ಜ್ಯುವೆಲರಿಗಳಿವು!

Narendra Modi
ದೇಶ51 mins ago

Narendra Modi: ನಾಳೆ 3ನೇ ಬಾರಿ ಮೋದಿಗೆ ಪ್ರಧಾನಿ ಗಾದಿ; ಇಲ್ಲಿದೆ ಅವರ ರಾಜಕೀಯದ ಹಾದಿ!

Norway Chess
ಕ್ರೀಡೆ59 mins ago

Norway Chess: 3ನೇ ಸ್ಥಾನಕ್ಕೆ ತೃಪ್ತಿಪಟ್ಟ ಪ್ರಜ್ಞಾನಂದ; ಸಹೋದರಿ ವೈಶಾಲಿಗೆ 4ನೇ ಸ್ಥಾನ

IND vs PAK
ಕ್ರೀಡೆ2 hours ago

IND vs PAK: ಭಾರತ-ಪಾಕ್​ ಪಂದ್ಯಕ್ಕೆ 4 ಹಂತದ ಭದ್ರತಾ ವ್ಯವಸ್ಥೆ; ಮೈದಾನಕ್ಕೆ ನುಗ್ಗಿದರೆ ಜೈಲೂಟ ಖಚಿತ!

Money Guide
ಮನಿ-ಗೈಡ್2 hours ago

Money Guide: ಈಗಿನ ಆರೋಗ್ಯ ವಿಮಾ ಪಾಲಿಸಿ ಬಗ್ಗೆ ಸಮಾಧಾನ ಇಲ್ಲವೆ? ಹೆಲ್ತ್ ಇನ್ಶೂರೆನ್ಸ್ ಪೋರ್ಟೆಬಿಲಿಟಿ ಬಳಸಿ

Niveditha Gowda chandan shetty age differance
ಸ್ಯಾಂಡಲ್ ವುಡ್2 hours ago

Niveditha Gowda: ಚಂದನ್‌ ಶೆಟ್ಟಿ-ನಿವೇದಿತಾ ನಡುವಿನ ವಯಸ್ಸಿನ ಅಂತರವೆಷ್ಟು?

Viral Video
ವೈರಲ್ ನ್ಯೂಸ್2 hours ago

Viral Video: ಹೊಟೇಲ್‌ ಮಾಲೀಕನನ್ನು ಮುಖಾಮೂತಿ ನೋಡದೆ ಚಚ್ಚಿದ ಶಾಸಕ; ವಿಡಿಯೋ ಫುಲ್‌ ವೈರಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ24 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ1 day ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌