Parenting Tips: ಮಕ್ಕಳಿಗೆ ಹುಟ್ಟುಹಬ್ಬದ ಸಂಭ್ರಮಾಚರಣೆ ಏಕೆ ಬೇಕು? - Vistara News

ಲೈಫ್‌ಸ್ಟೈಲ್

Parenting Tips: ಮಕ್ಕಳಿಗೆ ಹುಟ್ಟುಹಬ್ಬದ ಸಂಭ್ರಮಾಚರಣೆ ಏಕೆ ಬೇಕು?

ಪುಟ್ಟ ಮಕ್ಕಳ ಹುಟ್ಟುಹಬ್ಬಗಳ ಗಮ್ಮತ್ತು, ಸಂಭ್ರಮ, ಖುಷಿಗಳು ಬದುಕಿನ ಕೊನೆಯ ಗಳಿಗೆಯವರೆಗೂ ನೆನಪಿನಲ್ಲಿ ಇಡಬಹುದಾದ ಗಳಿಗೆಗಳೇ ಆದರೂ ಅದನ್ನೂ ಮೀರಿದ್ದು ಕೂಡಾ ಹುಟ್ಟುಹಬ್ಬದಲ್ಲಿದೆ. ಮಕ್ಕಳ ವ್ಯಕ್ತಿತ್ವ ವಿಕಸನದಲ್ಲೂ ಹುಟ್ಟುಹಬ್ಬದ ಆಚರಣೆಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಒಮ್ಮೆಯಾದರೂ ಯೋಚಿಸಿದ್ದೀರಾ?

VISTARANEWS.COM


on

birthday
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಮಕ್ಕಳ ಜೀವನದಲ್ಲಿ, ಚಾತಕ ಪಕ್ಷಿಯಂತೆ ಪ್ರತಿ ವರ್ಷ ಅವರನ್ನು ಕಾಯುವಂತೆ ಮಾಡುವ ಏಕೈಕ ದಿನವೆಂದರೆ ಅದು ಅವರ ಹುಟ್ಟುಹಬ್ಬ! ಮಕ್ಕಳಿಗೆ ಹುಟ್ಟುಹಬ್ಬ ಎಂದರೆ ನಿಜವಾಗಿಯೂ ಹಬ್ಬ, ಸಡಗರ, ಬದುಕಿನ ಒಂದು ಮೈಲಿಗಲ್ಲು. ಹದಿಹರೆಯಕ್ಕೆ ಬಂದ ಮಕ್ಕಳಲ್ಲೂ ಈ ಸಡಗರವೇನೂ ಕಡಿಮೆಯಾಗುವುದಿಲ್ಲ. ಹುಡುಗು ಬುದ್ಧಿ ಕಡಿಮೆಯಾಗಿ ನಿಧಾನವಾಗಿ ಒಂದೊಂದೇ ವರ್ಷ ಜಾರಿ ಮುಂದಡಿಯಿಡುತ್ತಿದ್ದರೆ, ಇಂತಹ ದಿನಗಳು ಸಹಜವಾಗತೊಗುತ್ತದೆ. ಆದರೆ ಬಹಳಷ್ಟು ಸಾರಿ, ಮಕ್ಕಳ ಹುಟ್ಟುಹಬ್ಬದ ಆಚರಣೆಯ ವಿಷಯದಲ್ಲಿ ಪೋಷಕರು ಗೊಂದಲಕ್ಕೆ ಬೀಳುವುದುಂಟು. ಹುಟ್ಟುಹಬ್ಬಕ್ಕೆ ಇಷ್ಟೆಲ್ಲ ಸಂಭ್ರಮ ಬೇಕಾ ಎಂದು ಯೋಚನೆ ಮೂಡುವುದುಂಟು.

ಮಕ್ಕಳ ಹುಟ್ಟುಹಬ್ಬದ ಪಾರ್ಟಿಗಳು ಕೇವಲ ಪಾರ್ಟಿಗಳಾಗಿರುವುದಿಲ್ಲ. ಈಗಿನ ಕಾಲದಲ್ಲಿ ಮಕ್ಕಳ ಹುಟ್ಟುಹಬ್ಬದ ಸಂಭ್ರಮಗಳು ಯಾವ ಮದುವೆಗೂ ಕಮ್ಮಿಯಿಲ್ಲದಂತೆ ಭರ್ಜರಿಯಾಗಿಯೇ ನಡೆಯುತ್ತವೆ. ತಮ್ಮ ತಮ್ಮ ಅನುಕೂಲಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಪೋಷಕರೂ ಮಕ್ಕಳ ಹುಟ್ಟುಹಬ್ಬವನ್ನು ಸಂತೋಷವಾಗಿ ಆಚರಿಸುತ್ತಾರೆ. ಪುಟ್ಟ ಮಕ್ಕಳ ಹುಟ್ಟುಹಬ್ಬಗಳ ಗಮ್ಮತ್ತು, ಸಂಭ್ರಮ, ಖುಷಿಗಳು ಬದುಕಿನ ಕೊನೆಯ ಗಳಿಗೆಯವರೆಗೂ ನೆನಪಿನಲ್ಲಿ ಇಡಬಹುದಾದ ಗಳಿಗೆಗಳೇ ಆದರೂ ಅದನ್ನೂ ಮೀರಿದ್ದು ಕೂಡಾ ಹುಟ್ಟುಹಬ್ಬದಲ್ಲಿದೆ. ಮಕ್ಕಳ ವ್ಯಕ್ತಿತ್ವ ವಿಕಸನದಲ್ಲೂ ಹುಟ್ಟುಹಬ್ಬದ ಆಚರಣೆಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಒಮ್ಮೆಯಾದರೂ ಯೋಚಿಸಿದ್ದೀರಾ? ಅದೇನೆಂದು ನೋಡೋಣ.

1. ಮಕ್ಕಳು, ಮುಖ್ಯವಾಗಿ ಮೂರ್ನಾಲ್ಕು ವರ್ಷಕ್ಕಿಂತ ಹೆಚ್ಚು ಪ್ರಾಯದ ಮಕ್ಕಳು ಹುಟ್ಟುಹಬ್ಬವೆಂದರೆ ಹಬ್ಬದಂತೆ ಸಂಭ್ರಮಿಸುತ್ತಾರೆ. ಅವರ ವಯಸ್ಸಿನ ಮಕ್ಕಳೊಂದಿಗೆ ಕುಣಿದು ಕುಪ್ಪಳಿಸಲು ಸಿಗುವ ಅಮೋಘ ಅವಕಾಶವಿದು. ಆ ವಯಸ್ಸು ದಾಟಿದ ಮೇಲೆ ಬೇಕೆಂದರೂ ಸಿಗದ ಖುಷಿಯಿದು.

2. ಇದು ಆತ್ಮವಿಶಾಸವನ್ನು ಹೆಚ್ಚಿಸುತ್ತದೆ. ಎಲ್ಲರ ಬಾಯಿಯಿಂದ ಶುಭಾಶಯಗಳನ್ನು ಕೇಳುತ್ತಾ, ಎಲ್ಲರ ಮುಖ್ಯ ಆಕರ್ಷಣೆಯ ಬಿಂದುವಾಗಿ ಓಡಾಡುವುದು ಖಂಡಿತವಾಗಿ ಆತ್ಮವಿಶಾವಸವನ್ನು ಹೆಚ್ಚಿಸುತ್ತದೆ. ಮಕ್ಕಳಿಗೆ ಇದು ಹೊಸ ಹುರುಪನ್ನೂ, ಎಂದೂ ಸಿಕ್ಕದ ಆನಂದವನ್ನೂ, ಎಲ್ಲರ ಮುಂದೆ ಸ್ಟಾರ್‌ ಆಗಿ ಕಂಗೊಳಿಸುವುದು ಬೇರೆಯದೇ ಅನುಭವ ನೀಡುತ್ತದೆ. ಎಲ್ಲರೆದುರು ಕೇಕ್‌ ಕತ್ತರಿಸುವುದರಿಂದ ಹಿಡಿದು, ಎಲ್ಲರಿಗಿಂತ ಚೆಂದದ ಹೊಸ ಬಟ್ಟೆ ಧರಿಸಿ, ಆಟಗಳಲ್ಲಿ ಭಾಗಿಯಾಗುವುದು, ಎಲ್ಲರ ಗಮನ ತನ್ನತ್ತ ಸೆಳೆಯುವುದು ಖಂಡಿತವಾಗಿಯೂ ಮಕ್ಕಳೊಳಗಿನ ಆತ್ಮಸ್ಥೈರ್ಯವನ್ನು ಹೆಚ್ಚಿಸುತ್ತದೆ.

3. ಈಗಿನ ಬ್ಯುಸಿ ಜೀವನದಲ್ಲಿ ಯಾರಿಗೂ ಯಾವುದಕ್ಕೂ ಸಮಯ ಇರುವುದಿಲ್ಲ. ಕುಟುಂಬಗಳೆಲ್ಲ ಒಡೆದು ಪುಟ್ಟ ಪುಟ್ಟ ಗೂಡುಗಳಾಗಿವೆ. ಹೀಗಾಗಿ, ಬಂಧುಮಿತ್ರರೊಡನೆ ಸೇರುವುದು ಕೂಡಾ ಅಪರೂಪವಾಗಿರುತ್ತದೆ. ಹಾಗಾಗಿ ಹುಟ್ಟುಹಬ್ಬಗಳು ಕುಟುಂಬದೊಳಗಿನ ಸಾಮರಸ್ಯವನ್ನು ಹೆಚ್ಚಿಸುವ ಒಂದು ಸೇತುವೆ. ಮಕ್ಕಳ ಹುಟ್ಟುಹಬ್ಬವೆಂದರೆ ಅದು ಕೇವಲ ಮಕ್ಕಳ ವಯಸ್ಸಿನ ಗೆಳೆಯ ಗೆಳತಿಯರು ಸೇರುವ ಸಂಭ್ರಮವಲ್ಲ. ಅಲ್ಲಿ ಅಜ್ಜ, ಅಜ್ಜಿ, ಅತ್ತೆ ಮಾವ, ಚಿಕ್ಕಪ್ಪ, ಚಿಕ್ಕಮ್ಮ, ಅವರ ಮಕ್ಕಳು ಎಲ್ಲರೂ ಸೇರಿ ಸಂಭ್ರಮ ಮನೆಮಾಡುತ್ತದೆ. ಹುಟ್ಟುಹಬ್ಬವೆಂಬ ನೆಪ ಎಲ್ಲರನ್ನೂ ಒಟ್ಟುಸೇರುವಂತೆ ಮಾಡುತ್ತದೆ. ಆ ಮೂಲಕ ಕುಟುಂಬದ ಸದಸ್ಯರಲ್ಲಿ, ಬಾಂಧವ್ಯವೊಂದು ಸದಾ ಕಾಲ ಉಳಿಯುತ್ತದೆ. ಮಕ್ಕಳಿಗೂ ಎಳವೆಯಲ್ಲಿಯೇ ಬಂಧುಬಳಗದ ಬಗೆಗೆ, ತಮ್ಮ ಕುಟುಂಬಸ್ಥರ ಬಗೆಗೆ ತಿಳುವಳಿಕೆ ಮೂಡಿ ಕುಟುಂಬ ಪ್ರೀತಿ ಬೆಳೆಯುತ್ತದೆ.

ಇದನ್ನೂ ಓದಿ: Parenting Tips: ಮಕ್ಕಳ ಆತ್ಮವಿಶ್ವಾಸಕ್ಕೆ ಪ್ರೇರಕ ಶಕ್ತಿಯಾಗುವ ಹೆತ್ತವರಾಗಿ!

4. ಇಂತಹ ಹಬ್ಬಗಳು ಸಾಮಾಜಿಕ ಸಂಬಂಧಗಳನ್ನು ಬೆಳೆಸುತ್ತದೆ. ಇತರರು ನಮ್ಮ ಮನೆಗೆ ಬರುವುದು, ಆದರಿಸುವುದು, ಚೆನ್ನಾಗಿ ನೋಡಿಕೊಳ್ಳುವುದು, ಸಣ್ಣ ಗೆಟ್‌ ಟುಗೆದರ್‌ ಆದರೂ ನಾವು ಇತರರ ಜೊತೆಗೆ ಬೆರೆಯುವುದು ಹೇಗೆ ಮತ್ತಿತರ ಸಾಮಾನ್ಯ ನಡವಳಿಕೆಗಳನ್ನು ರೂಪುಗೊಳಿಸುವಲ್ಲಿ ಇಂತಹ ಹುಟ್ಟುಹಬ್ಬದ ಪಾರ್ಟಿಗಳು ನೆರವಾಗುತ್ತದೆ. ಇದರಿಂದ ಸಾಮಾಜಿಕ ಸಂಬಂದ ಬೆಳೆಯುತ್ತದೆ. ಅಕ್ಕಪಕ್ಕದ ಮನೆಯವರ ಜೊತೆ ಬಾಂಧವ್ಯ ವೃದ್ಧಿಯಾಗುತ್ತದೆ.

5. ಚೆಂದದ ನೆನಪುಗಳನ್ನು ಕಲೆ ಹಾಕುವಲ್ಲಿ ಹುಟ್ಟುಹಬ್ಬಗಳು ಬಹುಮುಖ್ಯ ಪಾತ್ರ ವಹಿಸುತ್ತದೆ. ಮನೆಯನ್ನು ಹೇಗೆ ಅಲಂಕಾರ ಮಾಡಿದ್ದೆವು, ಯಾವ ಕೇಕ್‌, ಏನೆಲ್ಲ ತಿಂಡಿ ಮಾಡಿಸಿದ್ದೆವು ಇವೆಲ್ಲ ಕೇವಲ ನೆಪಗಳಾದರೂ, ಬಂಧು ಬಳಗ, ಗೆಳೆಯರ ಜೊತೆಗೂಡಿ ಕಳೆದ ಕ್ಷಣಗಳು ಬದುಕಿನಲ್ಲಿ ಎಂದೂ ಮರೆಯದ ಬಾಲ್ಯಕಾಲದ ನೆನಪುಗಳಾಗಿ ಉಳಿಯುತ್ತವೆ.

ಇದನ್ನೂ ಓದಿ: Parenting Tips: ನಿಮ್ಮ ಮಕ್ಕಳ ಮೇಲೆ ನಿಜವಾದ ಪ್ರೀತಿಯಿದ್ದರೆ ಈ 12 ತಪ್ಪು ಮಾಡಬೇಡಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದೇಶ

ದೇಶದ ಪ್ರಧಾನಿಗೆ ಕೈಯಾರ ಚುರುಮುರಿ ಕೊಟ್ಟರೂ ಇಲ್ಲ ಖುಷಿ! ಆ ತಪ್ಪು ಮಾಡಬಾರದಿತ್ತು ಅಂದ ವ್ಯಾಪಾರಿ

VISTARANEWS.COM


on

ಪಶ್ಚಿಮ ಬಂಗಾಳದ ಜಾರ್ಗ್ರಾಮ್‌ನಲ್ಲಿ ಚುರುಮುರಿ (ಝಲ್ಮುರಿ) ವ್ಯಾಪಾರ ಮಾಡುವ ವಿಕ್ರಮ್ ಶಾ ಅವರ ಬದುಕಿನಲ್ಲಿ ಮರೆಯಲಾಗದ ಘಟನೆಯೊಂದು ನಡೆದಿದೆ. ಚುನಾವಣಾ ಪ್ರಚಾರದ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಅಚಾನಕ್ಕಾಗಿ ವಿಕ್ರಮ್ ಅವರ ಪುಟ್ಟ ಅಂಗಡಿಯ ಮುಂದೆ ಬಂದು ನಿಂತಿದ್ದರು. ದೇಶದ ಪ್ರಧಾನಿಯೇ ತಮ್ಮ ಅಂಗಡಿಗೆ ಬಂದಿದ್ದನ್ನು ಕಂಡು ವಿಕ್ರಮ್ ಮೊದಲು ಗಾಬರಿಯಾದರೂ, ಮೋದಿ ಅವರು ಅತ್ಯಂತ ಸರಳವಾಗಿ ಮಾತುಕತೆ ನಡೆಸಿ ವಿಕ್ರಮ್ ಕೈಯಾರೆ ಸಿದ್ಧಪಡಿಸಿದ ಚುರುಮುರಿಯನ್ನು ಇಷ್ಟಪಟ್ಟು ಸವಿದರು.

ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕೇವಲ ವಿಕ್ರಮ್ ಕೊಟ್ಟ ತಿಂಡಿ ತಿಂದಿದ್ದಲ್ಲದೇ ಅವರ ಕುಟುಂಬ ಮತ್ತು ಜೀವನದ ಬಗ್ಗೆಯೂ ವಿಚಾರಿಸಿದರು. ಬಡತನದ ಕಾರಣ 9ನೇ ತರಗತಿಗೆ ಓದು ಬಿಟ್ಟಿದ್ದ ವಿಕ್ರಮ್, ಪ್ರಧಾನಿಯವರ ಆತ್ಮೀಯತೆಗೆ ಮನಸೋತರು. ತಿಂಡಿ ತಿಂದ ನಂತರ ಮೋದಿ ಅವರು ಹಠ ಹಿಡಿದು ಹಣ ಪಾವತಿಸಿ ವಿಕ್ರಮ್ ಅವರ ಪ್ರಾಮಾಣಿಕತೆಯನ್ನು ಮೆಚ್ಚಿಕೊಂಡರು. ಪ್ರಧಾನಿಯವರ ಈ ಸರಳತೆಯನ್ನು ಕಂಡು ಅಲ್ಲಿದ್ದ ಜನಸಮೂಹ ಚಪ್ಪಾಳೆ ತಟ್ಟಿ ಸಂಭ್ರಮಿಸಿತು.

ಆದರೆ, ಈ ಇಡೀ ಘಟನೆಯಲ್ಲಿ ವಿಕ್ರಮ್ ಶಾ ಅವರಿಗೆ ಒಂದು ಸಣ್ಣ ವಿಷಾದ ಉಳಿದುಬಿಟ್ಟಿದೆ. ಪ್ರಧಾನಿ ತಮ್ಮ ಮುಂದೆಯೇ ಅಷ್ಟು ಹೊತ್ತು ನಿಂತಿದ್ದರೂ, ಆತಂಕದ ನಡುವೆ ಅವರಿಂದ ಒಂದು ಹಸ್ತಾಕ್ಷರ (Autograph) ಪಡೆಯಲು ಅವರಿಗೆ ಸಾಧ್ಯವಾಗಲಿಲ್ಲ. “ಒಂದು ವೇಳೆ ನಾನು ಅವರ ಸಹಿ ಕೇಳಿದ್ದರೆ ಅದು ನನ್ನ ಜೀವನದ ದೊಡ್ಡ ಆಸ್ತಿಯಾಗಿರುತ್ತಿತ್ತು” ಎಂದು ವಿಕ್ರಮ್ ಈಗ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಆದರೂ, ದೇಶದ ಪ್ರಧಾನಿ ತಮ್ಮ ಅಂಗಡಿಗೆ ಬಂದು ಚುರುಮುರಿ ತಿಂದ ಆ ಕ್ಷಣಗಳು ಮಾತ್ರ ವಿಕ್ರಮ್ ಅವರ ಬದುಕಿನ ಸುವರ್ಣ ನೆನಪಾಗಿ ಉಳಿದಿವೆ.

Continue Reading

ಬೆಂಗಳೂರು

Bengaluru News : 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

ಐದು ವರ್ಷದಿಂದ ಹೊಟ್ಟೆಯಲ್ಲೇ ಇದ್ದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಯಶಸ್ವಿಯಾಗಿ ಹೊರತೆಗೆದ ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ

VISTARANEWS.COM


on

Doctors at Fortis Hospital remove fish bone from man's stomach for 5 years

ಬೆಂಗಳೂರು: ಕಳೆದ ಐದು ವರ್ಷದಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಬೆಂಗಳೂರಿನ (Bengaluru News) ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.

ಈ ಕುರಿತು ಮಾತನಾಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ರಾಜೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಐದು ವರ್ಷದ ಹಿಂದೆ ಮೀನು ಸೇವಿಸಿದ್ದರು. ಆಗ ಗಂಟಲಿನಲ್ಲಿ ಮೀನಿನ ಮೂಳೆ ಸಿಲುಕಿ, ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನಕ್ಕೆ ಒಳಗಾಗುವ ಮೂಲಕ ಒಂದು ಮೂಳೆ ತೆಗೆಸಿಕೊಂಡಿದ್ದರು. ಮತ್ತೊಂದು ಮೂಳೆ ಇರುವುದು ಅವರಿಗೆ ತಿಳಿದಿರಲಿಲ್ಲ.

ಸಂಪೂರ್ಣ ಮೂಳೆ ತೆಗೆಯದ ಕಾರಣ, 2 ಸೆಂ.ಮೀ ಉದ್ದದ ಮೀನಿನ ಮೂಳೆ ಹೊಟ್ಟೆಯಲ್ಲೇ ಉಳಿದಿತ್ತು. ಇದು ಅವರ ಗಮನಕ್ಕೂ ಬಂದಿಲ್ಲ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸುತ್ತಿದ್ದರು. ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರೂ ಈ ಮೂಳೆ ಕಾಣಿಸಿಕೊಂಡಿಲ್ಲ. ಈ ಮೂಳೆಯಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿದೆ.

Doctors at Fortis Hospital remove fish bone from man's stomach for 5 years

ನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಈ ಮೂಳೆ ಇರುವುದು ಕಂಡು ಬಂದಿತು. ಐದು ವರ್ಷಗಳ ಹಿಂದಿನಿಂದಲೂ ಈ ಮೂಳೆ ಒಂದಿಲ್ಲೊಂದು ರೀತಿಯಲ್ಲಿ ನೋವು ನೀಡುತ್ತಿರುವುದು ರೋಗಿಗೂ ಆಗಲೇ ತಿಳಿದಿದ್ದು. ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮೂಳೆಯನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಈ ಶಸ್ತ್ರಚಿಕಿತ್ಸೆ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ತಿಳಿದು ಬಂತು. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Continue Reading

ಬೆಂಗಳೂರು

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Breast cancer : ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಬೈಕಥಾನ್‌ ಆಯೋಜನೆ ಮಾಡಲಾಗಿತ್ತು.

VISTARANEWS.COM


on

Breast Cancer Awareness Month celebrated through bikethon

ಬೆಂಗಳೂರು: ಸ್ತನಕ್ಯಾನ್ಸರ್‌ (Breast cancer) ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಬೆಂಗಳೂರು ಎಚ್‌ಸಿಜಿ ಕ್ಯಾನ್ಸರ್‌ ಸೆಂಟರ್‌ ವತಿಯಿಂದ ಪಿಂಕ್‌ ವುಮೆನ್ಸ್‌ ಶೀರ್ಷಿಕೆಯಡಿ ಬೈಕಥಾನ್‌ ಆಯೋಜಿಸಿತ್ತು. ಸ್ತನಕ್ಯಾನ್ಸರ್‌ ಜಾಗೃತಿ ಮಾಸದ ಅಂಗವಾಗಿ ನಡೆದ ಈ ಬೈಕಥಾನ್‌ ಕೆ.ಆರ್‌. ರಸ್ತೆಯ ಎಚ್‌ಸಿಜಿ ಕ್ಯಾನ್ಸರ್ ಕೇಂದ್ರದಿಂದ ಸೋಮವಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭಗೊಂಡು, ಎಂ.ಜಿ. ರಸ್ತೆ, ಟ್ರಿನಿಟಿ ಸರ್ಕಲ್‌, ವಿಧಾನಸೌಧದ ಮುಂಭಾಗದಿಂದ ಹಾದು 10 ಕಿಲೋಮೀಟರ್ ದೂರದವರೆಗೆ ಸಾಗಿತು.

Breast Cancer Awareness Month celebrated through bikethon

180ಕ್ಕೂ ಹೆಚ್ಚು ಮಹಿಳಾ ಬೈಕರ್ಸ್‌ಗಳು ಈ ಬೈಕಥಾನ್‌ನಲ್ಲಿ ಪಾಲ್ಗೊಂಡು, ಸ್ತನಕ್ಯಾನ್ಸರ್‌ನ ಬಗ್ಗೆ ಹಾಗೂ ಆರಂಭಿಕ ತಪಾಸಣೆಗೆ ಆದ್ಯತೆ ನೀಡುವ ಕುರಿತು ಜಾಗೃತಿ ಮೂಡಿಸಿದರು. ಇದಷ್ಟೇ ಅಲ್ಲದೆ, ಬೈಕಥಾನ್‌ಗೂ ಮುನ್ನ, ಜುಂಬಾ ಸೆಷನ್‌, ಮೈಕಲ್‌ ಜಾಕ್ಸನ್‌ ಅವರ “ಡೇಂಜರಸ್‌” ಪ್ರೇರಿತಗೊಂಡ ಸ್ಟೆಪ್ಸ್‌ ಹಾಕುವ ಮೂಲಕ ಸ್ತನ ಕ್ಯಾನ್ಸರ್‌ ಆರಂಭಿಕ ಪತ್ತೆಯ ಬಗ್ಗೆ “ಬೀಟ್ ಇಟ್” ಶೀರ್ಷಿಕೆಯ ಫಲಕಗಳನ್ನು ಹಿಡಿದು ವಿಭಿನ್ನವಾಗಿ ಜಾಗೃತಿ ಮೂಡಿಸಿದರು.

ಎಚ್‌ಸಿಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನೀಶಾ ಕುಮಾರ್, ಮೆಡಿಕಲ್‌ ಆಂಕೊಲಾಜಿಸ್ಟ್ ಡಾ. ರೋಶನಿ ದಾಸ್‌ಗುಪ್ತ, ಸರ್ಜಿಕಲ್ ಆಂಕೊಲಾಜಿಸ್ಟ್ ಡಾ ಮಹೇಶ್ ಬಂಡೇಮೆಗಲ್ ಈ ಬೈಕಥಾನ್‌ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಮನೀಶಾ ಕುಮಾರ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಹೆಚ್ಚಾಗಿ ಸ್ತನಕ್ಯಾನ್ಸರ್‌ ಕಾಡುತ್ತಿರುವುದು ಆತಂಕಕಾರಿ ಬೆಳವಣಿಗೆ. ಆರಂಭದಲ್ಲಿಯೇ ಈ ಕ್ಯಾನ್ಸರ್‌ನನ್ನು ಪತ್ತೆ ಹಚ್ಚಿದರೆ ಸುಲಭವಾಗಿ ಚಿಕಿತ್ಸೆ ಮೂಲಕ ಗುಣಪಡಿಸಬಹುದು. ನಾವಷ್ಟೇ ಜಾಗೃತರಾದೆ ಸಾಲದು, ನಮ್ಮ ಸುತ್ತಮುತ್ತ ಹಾಗೂ ಗ್ರಾಮೀಣ ಭಾಗದ ಮಹಿಳೆಯರಿಗೂ ಕೂಡ ಈ ಬಗ್ಗೆ ಅರಿವು ಮೂಡಿಸಬೇಕು. ಆಗಷ್ಟೇ ಎಲ್ಲರಿಗೂ ಸ್ತನಕ್ಯಾನ್ಸರ್‌ನ ಬಗ್ಗೆ ಜಾಗೃತಿ ಮೂಡಲಿದೆ. ಮಹಿಳಾ ಬೈಕರ್ಸ್‌ಗಳು ವಿಶೇಷವಾಗಿ ಬೈಕ್‌ ಸವಾರಿ ಮೂಲಕ ಈ ಬಗ್ಗೆ ಜಾಗೃತಿ ಮೂಡಿಸಿದ್ದು ಪ್ರಶಂಸನೀಯ ಎಂದರು.

ಮೆಡಿಕಲ್‌ ಆಂಕೊಲಾಜಿಸ್ಟ್ ಡಾ ರೋಶನಿ ದಾಸ್‌ಗುಪ್ತ ಮಾತನಾಡಿ, ಸ್ತನಕ್ಯಾನ್ಸರ್‌ ಬಗ್ಗೆ ಜಾಗೃತಿ ಮೂಡಿಸಿದಷ್ಟೂ ಈ ಬಗ್ಗೆ ಭಯಗೊಳ್ಳುವವರ ಸಂಖ್ಯೆಯೂ ಕಡಿಮೆಯಾಗಲಿದೆ. ಜನರು ಈ ಕ್ಯಾನ್ಸರ್‌ನ ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿ, ಅದಕ್ಕೆ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಈ ರೋಗದಿಂದ ಮುಕ್ತಿಗೊಂಡು ಎಂದಿನಂತೆ ಜೀವನ ನಡೆಸಬಹುದು, ಹೀಗಾಗಿ ಜನರು ಈ ಬಗ್ಗೆ ಹೆಚ್ಚು ಜಾಗೃತರಾಗುವುದು ಒಳಿತು ಎಂದು ಸಲಹೆ ನೀಡಿದರು.

ಸರ್ಜಿಕಲ್ ಆಂಕೊಲಾಜಿಸ್ಟ್ ಡಾ. ಮಹೇಶ್ ಬಂಡೇಮೆಗಲ್ ಮಾತನಾಡಿ, “ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳಂದು ಪಿಂಕ್ ಮಹಿಳಾ ಬೈಕ್‌ಥಾನ್ 2024 ನಂತಹ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುವ ಅವಶ್ಯಕತೆ ಹೆಚ್ಚಿದೆ. ಇದರಿಂದಲಾದರೂ ಮಹಿಳೆಯರು ಎಚ್ಚೆತ್ತುಕೊಳ್ಳುತ್ತಾರೆ ಎಂದು ಹೇಳಿದರು.

Continue Reading

ಬೆಂಗಳೂರು

Aplastic anemia : ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ ಆಫ್ರಿಕಾ ಮೂಲದ ಬಾಲಕನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

Aplastic anemia : ಆಫ್ರಿಕಾ ಮೂಲದ ಬಾಲಕ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆಯಿಂದ ಬಳಲುತ್ತಿದ್ದ. ಆತನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನೀಡಿದೆ.

VISTARANEWS.COM


on

African boy successfully undergoes surgery for rare aplastic anemia
ಸಾಂದರ್ಭಿಕ ಚಿತ್ರ

ಬೆಂಗಳೂರು: ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾಗಿದ್ದ ಕಾರಣ ಅತಿ ವಿರಳ ಕಾಯಿಲೆಯಾದ ಅಪ್ಲ್ಯಾಸ್ಟಿಕ್ ರಕ್ತ ಹೀನತೆಯಿಂದ ಬಳಲುತ್ತಿದ್ದ 16 ವರ್ಷದ ಬಾಲಕನಿಗೆ ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ (Aplastic anemia) ನೀಡಲಾಗಿದೆ.

ಫೋರ್ಟಿಸ್ ಆಸ್ಪತ್ರೆಯ ಮೆಡಿಕಲ್‌ ಮತ್ತು ಹೆಮಟೋ ಆಂಕೊಲಾಜಿಯ ಹಿರಿಯ ನಿರ್ದೇಶಕಿ ಡಾ. ನೀತಿ ರೈಜಾದಾ, ಹೆಮಟೋ ಆಂಕೊಲಾಜಿ ಸಮಾಲೋಚಕ ಡಾ ನಿಶಿತ್ ಓಜ್ಹಾ, ಪೀಡಿಯಾಟ್ರಿಕ್ ಹೆಮಟೋ ಆಂಕೊಲಾಜಿಯ ಸಲಹೆಗಾರರಾದ ಡಾ ತನುಶ್ರೀ ಪಾಲ್ ಅವರ ವೈದ್ಯ ತಂಡ ಈ ಬಾಲಕನಿಗೆ ಸಮಯೋಚಿತವಾಗಿ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ಬಾಲಕನ ಜೀವ ಉಳಿಸಲಾಗಿದೆ.

ಈ ಕುರಿತು ಮಾತನಾಡಿದ ಡಾ. ನೀತಿ ರೈಜಾದಾ, ಆಫ್ರೀಕಾ ಮೂಲದ 16 ವರ್ಷದ ಮೈಕೆಲ್ ಎಂಬಾತನಿಗೆ ಕಳೆದ ಎರಡು ತಿಂಗಳಿನಿಂದ ತೀವ್ರವಾದ ಜ್ವರ, ಆಯಾಸ, ದೌರ್ಬಲ್ಯಗಳಿಂದ ಬಳಲುತ್ತಿದ್ದರು. ಅಷ್ಟೇ ಅಲ್ಲದೆ, ಆತನ ಬಲ ಕಿವಿಯಿಂದ ರಕ್ತಸ್ತ್ರಾವವಾಗಲು ಪ್ರಾರಂಭಗೊಂಡಿತ್ತು. ಇದರಿಂದ ಭಯಭೀತಗೊಂಡ ಅವರ ಕುಟುಂಬ ಆಫ್ರಿಕಾದಲ್ಲಿರುವ ಎಲ್ಲಾ ಆಸ್ಪತ್ರೆಗಳಿಗೆ ತೋರಿಸಿದರೂ, ಬಾಲಕನ ಆರೋಗ್ಯ ಸಮಸ್ಯೆ ಏನೆಂದು ತಿಳಿಯಲಿಲ್ಲ. ಹೀಗಾಗಿ ಅವರು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು.

African boy successfully undergoes surgery for rare aplastic anemia

ಬಾಲಕನ ಸಂಪೂರ್ಣ ತಪಾಸಣೆ ಬಳಿಕ, ಆ ಬಾಲಕನಿಗೆ ಅತಿ ವಿರಳ ಅಪ್ಲ್ಯಾಸ್ಟಿಕ್‌ ರಕ್ತ ಹೀನತೆ ಆಗಿರುವುದು ತಿಳಿದುಬಂತು. ಇದು ಅಸ್ಥಿಮಜ್ಜೆಯು ರಕ್ತಕಣಗಳನ್ನು ಉತ್ಪಾದಿಸುವಲ್ಲಿ ವಿಫಲವಾದ ಕಾರಣ ಆ ಬಾಲಕ ರಕ್ತ ಹೀನತೆಗೆ ಒಳಗಾಗಿದ್ದ. ಹೀಗಾಗಿ ಆತನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿ ಮಾಡುವ ಅವಶ್ಯಕತೆ ಅನಿವಾರ್ಯವಾಗಿತ್ತು. ಆದರೆ, ಬಾಲಕನ ರಕ್ತದ ಗುಂಪಿಗೆ ಹೊಂದುವಂತೆ ಸ್ಟೆಮ್‌ಸೆಲ್‌ ಸಿಗದೇ ಸಮಸ್ಯೆ ಎದುರಾಗಿತ್ತು.

ಈ ಮಧ್ಯೆ ಬಾಲಕನ ಹಿರಿಯ ಸಹೋದರಿಯೇ ತನ್ನ ತಮ್ಮನಿಗೆ ಹ್ಯಾಪ್ಲೊಂಡೆಂಟಿಕಲ್‌ ದಾನ ಮಾಡಲು ಮುಂದಾದರು. ಆದರೆ, ಬಾಲಕನಿಗೆ ಬಲಕಿವಿ ಸೋಂಕಿನಿಂದ ಸೋರುತ್ತಿದ್ದ ಕಾರಣ, ಮೊದಲು ಕಿವಿ ಶಸ್ತ್ರಚಿಕಿತ್ಸೆ ಮುಂದಾಗಬೇಕಾಯಿತು. ಬಾಲಕನ ಬಲ ಕಾರ್ಟಿಕಲ್‌ ಮಾಸ್ಟೊಡೆಕ್ಟಮಿ (ಕಿವಿ ಸುತ್ತ ಇರುವ ಸೋಂಕಿನ ಅಂಗಾಂಶ) ತೆಗೆದು ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಯಿತು. ಇದಾದ ಬಳಿಕ ಬಾಲಕನಿಗೆ ಹ್ಯಾಪ್ಲೋಡೆಂಟಿಕಲ್‌ ಸ್ಟೆಮ್‌ ಸೆಲ್‌ ಕಸಿಯನ್ನು ಯಶಸ್ವಿಯಾಗಿ ನಡೆಸಲಾಯಿತು. ಇದೀಗ ಬಾಲಕ ಗುಣಮುಖರಾಗುತ್ತಿದ್ದಾನೆ ಎಂದು ವಿವರಿಸಿದರು.

Continue Reading
Advertisement
HD Revanna
Latest11 hours ago

ಸಚಿವ ಜಮೀರ್‌ರಿಂದ ಸಾಕಷ್ಟು ಅನುಭವಿಸಿದ್ದೇನೆ, ಅವರನ್ನು ಮತ್ತೆ ಜೆಡಿಎಸ್‌ಗೆ ಸೇರಿಸಿಕೊಳ್ಳಲ್ಲ; ಕುಮಾರಸ್ವಾಮಿ ಸ್ಪಷ್ಟೋಕ್ತಿ

Latest12 hours ago

ಮತದಾನಕ್ಕೆ ಕ್ಯೂನಲ್ಲಿ ನಿಂತರೂ ಕಷ್ಟ; ನಿಲ್ಲದಿದ್ದರೂ ಕಷ್ಟ: ಹಾಗಾದ್ರೆ ನಟ ಕಮಲ್‌ ಹಾಸನ್‌ ಏನು ಮಾಡಬೇಕಿತ್ತು?

Latest12 hours ago

ವಿಜಯ್ ಪಕ್ಷಕ್ಕೆ ಮತ ಚಲಾಯಿಸಲು ಸಾಧ್ಯವಾಗದೆ ಬಿಕ್ಕಿ ಬಿಕ್ಕಿ ಅತ್ತ ಯುವತಿ! ವಿಡಿಯೋ ವೈರಲ್

Latest12 hours ago

ಸಮಂತಾ ಕೇಳಿದ ಪ್ರಶ್ನೆಗೆ ದಿಗಂತ್ ಶಾಕ್! ‘ದೂದ್ ಪೇಡ’ ಅಂದ್ರೆ ಯಾರು ಎಂದಿದ್ದಕ್ಕೆ ‘ಚಾಕೊಲೇಟ್ ಹೀರೊ’ ನೀಡಿದ ರಿಯಾಕ್ಷನ್ ಹೇಗಿತ್ತು?

Latest12 hours ago

ಮಹಿಳಾ ಮೀಸಲಾತಿ: ಡಿಎಂಕೆ ಹುನ್ನಾರಕ್ಕೆ ರಾಜ್ಯ ಬಲಿ ಕೊಡುತ್ತಿರುವ ಸಿಎಂ ಸಿದ್ದರಾಮಯ್ಯ: ಬಸವರಾಜ ಬೊಮ್ಮಾಯಿ ಆರೋಪ

Latest13 hours ago

ಬೆಸ್ಕಾಂ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಚಾಲನೆ; ಹೆಚ್‌ಟಿ ಗ್ರಾಹಕರಿಗೆ ಅನುಕೂಲ

Latest13 hours ago

ಟ್ರಂಪ್ ಸೋಷಿಯಲ್ ಮೀಡಿಯಾದಲ್ಲಿ ಭಾರತಕ್ಕೆ ಅವಮಾನ: ಭಾರತ-ಚೀನಾ ‘ನರಕ’ ಎಂದ ಮೈಕೆಲ್ ಸ್ಯಾವೇಜ್ ಪೋಸ್ಟ್ ಹಂಚಿಕೊಂಡ ಅಧ್ಯಕ್ಷ

HD DeveGowda Wont celebrate 92nd birthday
Latest13 hours ago

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಬಸವ ಶ್ರೀ, ಗುರುರಾಜ ಕರ್ಜಗಿ ಅವರಿಗೆ ವಚನ ಸಾಹಿತ್ಯಶ್ರೀ ಪ್ರಶಸ್ತಿ

Latest13 hours ago

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ; ಥಳಿಸಿದ ಗ್ರಾಮಸ್ಥರು

Latest13 hours ago

ಪಂಚರಾಜ್ಯ ಚುನಾವಣೆ ನಂತರ,ಪೆಟ್ರೋಲ್‌,ಡೀಸೆಲ್‌ ದರ ಏರಿಕೆ ಇಲ್ಲ : ಕೇಂದ್ರದ ಸ್ಪಷ್ಟನೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌