read your daily horoscope predictions for march 24-2023 Horoscope Today : ಮೀನ ರಾಶಿಯವರಿಗೆ ಉದ್ಯೋಗದಲ್ಲಿ ಶುಭ ಫಲ; ನಿಮ್ಮ ಭವಿಷ್ಯ ಹೇಗಿದೆ? - Vistara News

ಪ್ರಮುಖ ಸುದ್ದಿ

Horoscope Today : ಮೀನ ರಾಶಿಯವರಿಗೆ ಉದ್ಯೋಗದಲ್ಲಿ ಶುಭ ಫಲ; ನಿಮ್ಮ ಭವಿಷ್ಯ ಹೇಗಿದೆ?

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ತದಿಗೆಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Horoscope Today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (24-03-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷ.

ತಿಥಿ: ತದಿಗೆ 16:59 ವಾರ: ಶುಕ್ರವಾರ
ನಕ್ಷತ್ರ: ಅಶ್ವಿನಿ 13:21 ಯೋಗ: ವೈಧೃತಿ 25:41
ಕರಣ: ಗರಜ 16:59 ಇಂದಿನ ವಿಶೇಷ: ಮತ್ಸ್ಯ ಜಯಂತಿ, ವಿಶ್ವ ಕ್ಷಯರೋಗ ದಿನ.
ಅಮೃತಕಾಲ: ಬೆಳಗ್ಗೆ 06 ಗಂಟೆ 30 ನಿಮಿಷದಿಂದ 11 ಗಂಟೆ 03 ನಿಮಿಷದವರೆಗೆ.

ಸೂರ್ಯೋದಯ : 06:21 ಸೂರ್ಯಾಸ್ತ : 06:31

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ಹೊಸ ಆಲೋಚನೆಗಳನ್ನು ಮಾಡುವಿರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು. ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕಿ ಪ್ರಶಂಸೆ ಪಡೆಯುವಿರಿ. ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಆಗಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು. ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ. ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು. ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ. ಸಂಗಾತಿಯೊಂದಿಗೆ ಹೂಡಿಕೆ ಕುರಿತಾಗಿ ಚರ್ಚೆಮಾಡುವಿರಿ. ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ. ಆರ್ಥಿಕವಾಗಿ ಲಾಭ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ತಾಳ್ಮೆಯಿಂದ ಸಹಕರಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ. ಆತುರದಿಂದ ಆಡುವ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು, ಎಚ್ಚರಿಕೆ ಇರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ. ಆಪ್ತರಿಂದ ಆಮಂತ್ರಣ ಸಿಗಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ ಮಾಡುವಿರಿ. ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವುದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ. ನಗುವಿನ ಮೂಲಕ ಪರಿಸ್ಥಿತಿ ತಿಳಿಗೊಳಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ವೃತಾ ಸಮಯ, ವ್ಯರ್ಥ ಪ್ರಯತ್ನ, ಮಾಡಬೇಡಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ. ಕುಟುಂಬದ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ. ಸಂಗಾತಿಯ ಮಧುರ ಪ್ರೀತಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಹಣಕಾಸಿನ ವ್ಯವಹಾರದಿಂದ ನಿರೀಕ್ಷಿಸಿದಷ್ಟು ಲಾಭ ಸಾಧ್ಯವಿಲ್ಲ. ಅತಿಥಿಗಳ ಆಗಮನದಿಂದ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ. ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳುವುದು ಬೇಡ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ. ಪ್ರೀತಿ ಪಾತ್ರರೊಂದಿಗೆ ಆಡುವ ಬಿರುಸು ಮಾತಿನಿಂದ ಸಂಬಂಧ ಹಳಸುವ ಸಾಧ್ಯತೆ. ಯಾರೊಂದಿಗಾದರೂ ನಿಧಾನಿಸಿ, ಯೋಚಿಸಿ ಮಾತನಾಡಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಕರ: ಬಹಳ ದಿನಗಳ ಕನಸು ನನಸಾಗುವ ಕಾಲ. ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ. ಸ್ನೇಹಿತರ ಕಷ್ಟಕ್ಕೆ ಸ್ಪಂದಿಸುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಅತಿಯಾದ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ. ತಾಳ್ಮೆಯಿಂದ ವರ್ತಿಸಿ. ಆತುರದಲ್ಲಿ ಏನೇನೋ ಮಾತನಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿನ ಒತ್ತಡ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮೀನ: ಕೋಪದಿಂದ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ, ಕಾಳಜಿ ವಹಿಸುವುದು ಸೂಕ್ತ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಫಲ. ದಿನದ ಮಟ್ಟಿಗೆ ಖರ್ಚು. ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ: Ugadi Horoscope 2023 : ಯುಗಾದಿ ಭವಿಷ್ಯ; ಹೊಸ ಸಂವತ್ಸರದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

Narendra Modi: Narendra Modi: ರಾಮಲಲ್ಲಾ ದರ್ಶನ ಪಡೆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರೋಡ್‌ ಶೋ ಕೈಗೊಳ್ಳುತ್ತಿದ್ದಾರೆ. ಸುಗ್ರೀವ ಕೋಟೆಯಿಂದ ಪ್ರಾರಂಭವಾಗಿ ಲತಾ ಚೌಕ್‌ವರೆಗೆ ಮೋದಿ ರೋಡ್‌ ಶೋ ಕೈಗೊಂಡರು. ನರೇಂದ್ರ ಮೋದಿ ಅವರು ಸಾಗುವ ದಾರಿಯುದ್ದಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಎಲ್ಲೆಡೆ ಜೈಶ್ರೀರಾಮ್‌ ಎಂಬ ಘೋಷಣೆಗಳು ಮೊಳಗಿದವು.

VISTARANEWS.COM


on

Narendra Modi
Koo

ಅಯೋಧ್ಯೆ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರ, ದೇಶಾದ್ಯಂತ ಸಾಲು ರ‍್ಯಾಲಿಗಳ ಭರಾಟೆಯ ಮಧ್ಯೆಯೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಗೆ ತೆರಳಿ, ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಕಳೆದ ಜನವರಿ 22ರಂದು ರಾಮಮಂದಿರದಲ್ಲಿ (Ram Mandir) ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ್ದ ನರೇಂದ್ರ ಮೋದಿ ಅವರೀಗ ಮತ್ತೆ ಅಯೋಧ್ಯೆಗೆ ತೆರಳಿ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ಇದೇ ವೇಳೆ ಅವರು ರಾಮಲಲ್ಲಾನಿಗೆ ವಿಶೇಷ ಪೂಜೆ ಸಲ್ಲಿಸುವ ಜತೆಗೆ ದೀರ್ಘದಂಡ ನಮಸ್ಕಾರ ಹಾಕಿದರು.

ಕಳೆದ ಜನವರಿ 22ರಂದು ನರೇಂದ್ರ ಮೋದಿ ಅವರು ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ಮಾಡಿದ ಬಳಿಕ ಮಾಡಿದ ಬಳಿಕ ರಾಮಮಂದಿರಕ್ಕೆ ಮೊದಲ ಬಾರಿ ಭೇಟಿ ನೀಡಿದರು.

ರಾಮನಗರಿ ಅಯೋಧ್ಯೆಯಲ್ಲಿ ಭರ್ಜರಿ ರೋಡ್‌ ಶೋ ಕೈಗೊಳ್ಳುವ ಮೊದಲು ಮೋದಿ ಅವರು ರಾಮಲಲ್ಲಾನಿಗೆ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಿದರು. ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಮಮಂದಿರದ ಸುತ್ತ ಬಿಗಿ ಬಂದೋಬಸ್ತ್‌ ಏರ್ಪಡಿಸಲಾಗಿತ್ತು.

ಅಯೋಧ್ಯೆ ಭೇಟಿ ನೀಡುವ ಮೊದಲು ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ದೌರಾಹ್ರ ಲೋಕಸಭೆ ಕ್ಷೇತ್ರದಲ್ಲಿ ನಡೆದ ಬೃಹತ್‌ ಸಮಾವೇಶದಲ್ಲಿ ಪಾಲ್ಗೊಂಡರು.

ರಾಮಲಲ್ಲಾ ದರ್ಶನದ ಬಳಿಕ ಮೋದಿ ಅವರು ಅಯೋಧ್ಯೆಯಲ್ಲಿ ಸುಮಾರು ಎರಡು ಕಿಲೋಮೀಟರ್‌ವರೆಗೆ ರೋಡ್‌ ಶೋ ನಡೆಸಿದರು. ಮಾರ್ಗದುದ್ದಕ್ಕೂ ನೆರೆದಿದ್ದ ಜನ ಹೂಮಳೆ ಸುರಿಸಿ ಅಭಿಮಾನ ಮೆರೆದರು.

ರೋಡ್‌ ಶೋಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಕೂಡ ಸಾಥ್‌ ನೀಡಿದ್ದಾರೆ. ಇನ್ನು, ರೋಡ್‌ ಶೋ ಉದ್ದಕ್ಕೂ ಜನ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದರು.

ಉತ್ತರ ಪ್ರದೇಶದಲ್ಲಿ ಮೂರನೇ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದ್ದು, 10 ಲೋಕಸಭಾ ಕ್ಷೇತ್ರದಲ್ಲಿ ಮೇ 7 ಮತದಾನ ನಡೆಯಲಿದೆ. ಅಯೋಧ್ಯೆಯಲ್ಲಿ ಮೇ 20ರಂದು ಐದನೇ ಹಂತದಲ್ಲಿ ಮತದಾನ ನಡೆಯಲಿದೆ.

ಇದನ್ನೂ ಓದಿ: Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Continue Reading

ಪ್ರಮುಖ ಸುದ್ದಿ

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

IPL 2024: ಐಪಿಎಲ್​​ನ ಕನ್ಕಷನ್ ಬದಲಿ ಇತಿಹಾಸವನ್ನು ಹಿಂತಿರುಗಿ ನೋಡಿದರೆ, ಯುಧ್ವೀರ್ ಎರಡನೇ ಆಟಗಾರರಾದರು. ಮುಂಬೈ ಇಂಡಿಯನ್ಸ್ ವಿಕೆಟ್ ಕೀಪರ್ ವಿಷ್ಣು ವಿನೋದ್ ಈ ಪಟ್ಟಿಯಲ್ಲಿ ಮೊದಲಿಗರು. ಐಪಿಎಲ್ 2023 ರ ಎರಡನೇ ಕ್ವಾಲಿಫೈಯರ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಇಶಾನ್ ಕಿಶನ್ ಬದಲಿಗೆ ವಿನೋದ್ ಆಡಿದ್ದರು.

VISTARANEWS.COM


on

IPL 2024
Koo

ಲಖನೌ : ಐಪಿಎಲ್​ 2024ನೇ (IPL 2024) ಆವೃತ್ತಿಯ ಮೊದಲ ಕನ್​ಕಷನ್​​ (ಗಾಯಗೊಂಡ ಆಟಗಾರನಿಗೆ ಬದಲಿ) ಆಟಗಾರ ಎಂಬ ಖ್ಯಾತಿಗೆ ಯದ್ವೀರ್​ ಸಿಂಗ್ (Yudhvir Singh) ಪಾತ್ರರಾಗಿದ್ದಾರೆ. ಎಲ್ಎಸ್​ಜಿ ಮತ್ತು ಕೆಕೆಆರ್ ನಡುವಿನ ಐಪಿಎಲ್ ಪಂದ್ಯದಲ್ಲಿ, ಲಕ್ನೊ ಪರ ಅವರು ಆಡಲು ಇಳಿದರು. ಲಕ್ನೊ ವೇಗಿ ಮೊಹ್ಸಿನ್ ಖಾನ್ ಥರ್ಡ್​ ಮ್ಯಾನ್​ ಪ್ರದೇಶದಲ್ಲಿ ಫೀಲ್ಡಿಂಗ್ ಮಾಡುವಾಗ ತಲೆಗೆ ಗಾಯವಾಗಿತ್ತು. ಚಿಕಿತ್ಸೆಗಾಗಿ ಮೈದಾನವನ್ನು ತೊರೆಯಬೇಕಾಯಿತು. ಹೀಗಾಗಿ ಯಧ್ವೀರ್ ಸಿಂಗ್​ ಆಡಲು ಬರಬೇಕಾಯಿತು.

ಮೊಹ್ಸಿನ್ ಖಾನ್ ತಲೆಗೆ ಪೆಟ್ಟು ಬಿದ್ದ ನಂತರ ನೆಲದ ಮೇಲೆ ಮಲಗಿ ಹೆಣಗಾಡುತ್ತಿರುವುದು ಕಂಡುಬಂತು. ನರೈನ್ ಬ್ಯಾಟಿಂಗ್ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೊಹ್ಸಿನ್​ ಖಾನ್ ಚೆಂಡನ್ನು ಹಿಡಿಯಲು ಓಡಿದ್ದರು. ಆದರೆ ದುರದೃಷ್ಟವಶಾತ್ ಅವರ ತಲೆ ಮೊದಲು ನೆಲಕ್ಕೆ ಅಪ್ಪಳಿಸಿತ್ತು. ಪರಿಣಾಮವಾಗಿ 16 ನೇ ಓವರ್ ಪ್ರಾರಂಭವಾಗುವ ಮೊದಲು ಮೊಹ್ಸಿನ್ ಖಾನ್ ಬದಲಿಗೆ ಯುಧ್ವೀರ್ ಸಿಂಗ್ ಅವರನ್ನು ಕನ್ಕಷನ್ ಬದಲಿಯಾಗಿ ಕಳುಹಿಸಲಾಯಿತು.

ಯುಧ್ವೀರ್ ಸಿಂಗ್ ಚರಕ್ ಐಪಿಎಲ್ 2024 ರ ಮೊದಲ ಕನ್ಕಷನ್ ಬದಲಿ ಆಟಗಾರರಾದರು. ಇದು ಮಾತ್ರವಲ್ಲ, ಅವರು ತಮ್ಮ ಮೊದಲ ಓವರ್​​ನಲ್ಲಿ ಕೆಕೆಆರ್​​ನ ಆಂಗ್ರಿಶ್ ರಘುವಂಶಿ ಅವರನ್ನು ತಮ್ಮ ಮೊದಲ ಓವರ್​ನಲ್ಲಿ ಔಟ್ ಮಾಡಿದರು.

ಐಪಿಎಲ್​​ನ ಕನ್ಕಷನ್ ಬದಲಿ ಇತಿಹಾಸವನ್ನು ಹಿಂತಿರುಗಿ ನೋಡಿದರೆ, ಯುಧ್ವೀರ್ ಎರಡನೇ ಆಟಗಾರರಾದರು. ಮುಂಬೈ ಇಂಡಿಯನ್ಸ್ ವಿಕೆಟ್ ಕೀಪರ್ ವಿಷ್ಣು ವಿನೋದ್ ಈ ಪಟ್ಟಿಯಲ್ಲಿ ಮೊದಲಿಗರು. ಐಪಿಎಲ್ 2023 ರ ಎರಡನೇ ಕ್ವಾಲಿಫೈಯರ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಇಶಾನ್ ಕಿಶನ್ ಬದಲಿಗೆ ವಿನೋದ್ ಆಡಿದ್ದರು.

ಕಂಕಷನ್ ಬದಲಿ ಆಟಗಾರರ ವಿವರ

ಇಶಾನ್ ಕಿಶನ್ ಮುಂಬೈ ಇಂಡಿಯನ್ಸ್ ವಿಷ್ಣು ವಿನೋದ್
ಮೊಹ್ಸಿನ್ ಖಾನ್ ಲಕ್ನೋ ಸೂಪರ್ ಜೈಂಟ್ಸ್: ಯುಧ್ವೀರ್ ಸಿಂಗ್

ಪಂದ್ಯದಲ್ಲಿ ಏನಾಯಿತು?

ಲಖನೌ: ಬ್ಯಾಟಿಂಗ್​ ಹಾಗೂ ಬೌಲಿಂಗ್​ನಲ್ಲಿ ಅಸಾಮಾನ್ಯ ಪ್ರದರ್ಶನ ನೀಡಿದ ಕೋಲ್ಕೊತಾ ನೈಟ್​ ರೈಡರ್ಸ್​ ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 54ನೇ ಪಂದ್ಯದಲ್ಲಿ ಲಕ್ನೊ ಸೂಪರ್​ ಜೈಂಟ್ಸ್​ ವಿರುದ್ಧ 98 ರನ್​ಗಳ ಬೃಹತ್​ ಅಂತರದ ಗೆಲುವು ಸಾಧಿಸಿದೆ. ಇದರೊಂದಿಗೆ ಆಡಿರುವ 11 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 16 ಅಂಕಗಳನ್ನು ಸಂಪಾದಿಸಿರುವ ಶ್ರೇಯಸ್​ ಅಯ್ಯರ್ ನೇತೃತ್ವದ ಕೋಲ್ಕೊತಾ ಬಳಗ ಪ್ಲೇಆಫ್​ ಹಂತಕ್ಕೆ ಬಹುತೇಕ ತೇರ್ಗಡೆ ಗೊಂಡಿದೆ. ಇದೇ ವೇಳೆ 11 ಪಂದ್ಯಗಳಲ್ಲಿ 5ನೇ ಸೋಲಿಗೆ ಒಳಗಾಗಿದ್ದು 12 ಅಂಕಗಳ ಸಮೇತ ಐದನೇ ಸ್ಥಾನದಲ್ಲಿ ಉಳಿದಿದೆ.

ಇದನ್ನೂ ಓದಿ: Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

ಇಲ್ಲಿನ ಶ್ರೀ ಭಾರತ ರತ್ನ ಅಟಲ್​ ಬಿಹಾರಿ ವಾಜಪೇಯಿ ಏಕನಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಅರ್​ ಬಳಗ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 235 ರನ್​ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಪ್ರತಿಯಾಗಿ ಆಡಿದ ತವರಿನ ತಂಡ 16.1 ಓವರ್​ಗಳಲ್ಲಿ 137 ರನ್​ಗಳಿಗೆ ಆಲ್​ಔಟ್​ ಆಗಿ ಹೀನಾಯ ಸೋಲಿಗೆ ಒಳಗಾಯಿತು.

Continue Reading

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

Prajwal Revanna Case: ಅಶ್ಲೀಲ ವಿಡಿಯೊಗಳನ್ನು ಹಂಚಿಕೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ (Prajwal Revanna Case) ಸಂಬಂಧಿಸಿದಂತೆ ಯಾವುದೇ ವಿಡಿಯೊಗಳನ್ನು ಯಾರೇ ಆಗಲಿ ವಾಟ್ಸ್‌ಆ್ಯಪ್‌, ಫೇಸ್‌ಬುಕ್‌ ಸೇರಿ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಶೇರ್‌ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ಎಚ್ಚರಿಕೆ ನೀಡಿದೆ.

ಅಶ್ಲೀಲ ವಿಡಿಯೊಗಳನ್ನು ಹಂಚಿಕೆ ಮಾಡುವುದು ಮಾಹಿತಿ ತಂತ್ರಜ್ಞಾನ ಕಾಯ್ದೆ ಕಲಂ 67(ಎ) ಐಟಿ ಆಕ್ಟ್ ಹಾಗೂ ಕಲಂ 228ಎ(1), 292 ಐಪಿಸಿ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಖಾಸಗಿ ಮೆಸೇಜಿಂಗ್ ಆ್ಯಪ್‌ಗಳ ಮುಖಾಂತರ ಹಂಚುವುದನ್ನೂ ಪತ್ತೆ ಹಚ್ಚುವುದು ಸಾಧ್ಯವಿದ್ದು, ಅಂತಹವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ವಿಡಿಯೋ ಹಂಚಿಕೆ ಸಂತ್ರಸ್ತ ಮಹಿಳೆಯರ ಘನತೆ ಹಾಗೂ ಗೌಪ್ಯತೆಗೆ ಕುಂದುಂಟು ಮಾಡುವುದಾಗಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದೆ.

ಈ ಪ್ರಕರಣದ ಯಾವುದೇ ಸಂತ್ರಸ್ತ ವ್ಯಕ್ತಿಯು ಈಗಾಗಲೇ ಆರಂಭಿಸಲಾಗಿರುವ ನಮ್ಮ ಹೆಲ್ಸ್ ಲೈನ್ ನಂ.
6360938947 ಅನ್ನು ಬೆಳಗ್ಗೆ 8ರಿಂದ ರಾತ್ರಿ 8ರ ನಡುವೆ ಯಾವಾಗ ಬೇಕಾದರೂ ಸಂಪರ್ಕಿಸಬಹುದಾಗಿದೆ. ಈ ನಂಬರಿಗೆ ಕರೆ ಮಾಡುವ ಯಾವುದೇ ವ್ಯಕ್ತಿಯ ಗುರುತನ್ನು ಗೌಪ್ಯವಾಗಿಡಲಾಗುವುದು. ಅವರು ಎಸ್‌ಐಟಿ ಕಚೇರಿಗೆ ಬರುವ ಅಗತ್ಯವೂ ಇಲ್ಲ. ಸಂತ್ರಸ್ತರಿಗೆ ಅಗತ್ಯವಿರುವ ನೆರವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದೆ.

ಯಾವುದೇ ಸಂತ್ರಸ್ತರ ಗುರುತನ್ನು ಬಹಿರಂಗಪಡಿಸುವ ಕೆಲಸವನ್ನು ಮಾಧ್ಯಮ ಸಂಸ್ಥೆಗಳು, ವ್ಯಕ್ತಿಗಳು ಅಥವಾ ಸಂಘ ಸಂಸ್ಥೆಗಳು ಅಥವಾ ಇನ್ಯಾರೇ ಆದರೂ ಮಾಡಬಾರದು. ತಪ್ಪಿದರೆ ಈ ವಿಚಾರದಲ್ಲಿ ಅಗತ್ಯ ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು.

ಇದನ್ನೂ ಓದಿ | Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

ಯಾವುದೇ ಲೈಂಗಿಕ ಹಿಂಸೆ ಅಥವಾ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧವೆಸಗಿದ ವ್ಯಕ್ತಿ ನಾಚಿಕೆ, ಹಿಂಜರಿಕೆ, ಅವಮಾನ ಪಡಬೇಕೇ ಹೊರತು, ಶೋಷಣೆಗೆ ಒಳಗಾದ ವ್ಯಕ್ತಿ ಅಲ್ಲ ಎಂಬುದನ್ನು ಅರಿಯಬೇಕು. ಸೂಕ್ತ ಸಂವೇದನೆಯಿಂದ ಪ್ರವರ್ತಿಸುವುದು ಸಮಾಜದ ಆರೋಗ್ಯದ ದೃಷ್ಟಿಯಿಂದ ಬಹಳ ಮುಖ್ಯ. ಈ ವಿಚಾರದಲ್ಲಿ ಎಸ್‌ಐಟಿಯು ಅತ್ಯಂತ ಹೆಚ್ಚಿನ ಸಂವೇದನೆಯಿಂದ ನಡೆದುಕೊಳ್ಳಲಿದೆ. ಈಗಾಗಲೇ ಇದಕ್ಕೆ ಅಗತ್ಯವಿರುವ ವೃತ್ತಿಪರ ಕೌನ್ಸೆಲರ್‌, ವೈದ್ಯರು ಇಂತಹ ಕಾರ್ಯದಲ್ಲಿ ಅನುಭವವಿರುವ ಸಂಸ್ಥೆಗಳ ನೆರವನ್ನು ಎಸ್‌ಐಟಿ ಪಡೆದುಕೊಂಡಿದೆ. ಸಾರ್ವಜನಿಕರೂ ಈ ವಿಚಾರದಲ್ಲಿ ಸ್ಪಂದಿಸುವುದು ಅಗತ್ಯ ಎಂದು ಸಿಐಡಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥರು ತಿಳಿಸಿದ್ದಾರೆ.

Continue Reading

ಕ್ರೀಡೆ

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

IPL 2024: ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಅರ್​ ಬಳಗ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 235 ರನ್​ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಪ್ರತಿಯಾಗಿ ಆಡಿದ ತವರಿನ ತಂಡ 16.1 ಓವರ್​ಗಳಲ್ಲಿ 137 ರನ್​ಗಳಿಗೆ ಆಲ್​ಔಟ್​ ಆಗಿ ಹೀನಾಯ ಸೋಲಿಗೆ ಒಳಗಾಯಿತು.

VISTARANEWS.COM


on

IPL 2024
Koo

ಲಖನೌ: ಬ್ಯಾಟಿಂಗ್​ ಹಾಗೂ ಬೌಲಿಂಗ್​ನಲ್ಲಿ ಅಸಾಮಾನ್ಯ ಪ್ರದರ್ಶನ ನೀಡಿದ ಕೋಲ್ಕೊತಾ ನೈಟ್​ ರೈಡರ್ಸ್​ ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 54ನೇ ಪಂದ್ಯದಲ್ಲಿ ಲಕ್ನೊ ಸೂಪರ್​ ಜೈಂಟ್ಸ್​ ವಿರುದ್ಧ 98 ರನ್​ಗಳ ಬೃಹತ್​ ಅಂತರದ ಗೆಲುವು ಸಾಧಿಸಿದೆ. ಇದರೊಂದಿಗೆ ಆಡಿರುವ 11 ಪಂದ್ಯಗಳಲ್ಲಿ 8 ಗೆಲುವಿನೊಂದಿಗೆ 16 ಅಂಕಗಳನ್ನು ಸಂಪಾದಿಸಿರುವ ಶ್ರೇಯಸ್​ ಅಯ್ಯರ್ ನೇತೃತ್ವದ ಕೋಲ್ಕೊತಾ ಬಳಗ ಪ್ಲೇಆಫ್​ ಹಂತಕ್ಕೆ ಬಹುತೇಕ ತೇರ್ಗಡೆ ಗೊಂಡಿದೆ. ಇದೇ ವೇಳೆ 11 ಪಂದ್ಯಗಳಲ್ಲಿ 5ನೇ ಸೋಲಿಗೆ ಒಳಗಾಗಿದ್ದು 12 ಅಂಕಗಳ ಸಮೇತ ಐದನೇ ಸ್ಥಾನದಲ್ಲಿ ಉಳಿದಿದೆ.

ಇಲ್ಲಿನ ಶ್ರೀ ಭಾರತ ರತ್ನ ಅಟಲ್​ ಬಿಹಾರಿ ವಾಜಪೇಯಿ ಏಕನಾ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್​ ಗೆದ್ದ ಲಕ್ನೊ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಕೆಕೆಅರ್​ ಬಳಗ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 235 ರನ್​ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಪ್ರತಿಯಾಗಿ ಆಡಿದ ತವರಿನ ತಂಡ 16.1 ಓವರ್​ಗಳಲ್ಲಿ 137 ರನ್​ಗಳಿಗೆ ಆಲ್​ಔಟ್​ ಆಗಿ ಹೀನಾಯ ಸೋಲಿಗೆ ಒಳಗಾಯಿತು.

ಇದನ್ನೂ ಓದಿ: Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

ಬ್ಯಾಟಿಂಗ್​ಗೆ ಆಹ್ವಾನ ಪಡೆದ ಕೆಕೆಆರ್ ತಂಡ ಅದ್ಭುತ್ ಪ್ರದರ್ಶನ ನೀಡಿತು. ಸುನೀಲ್​ ನರೈನ್​ (39 ಎಸೆತ 81 ರನ್​) ಅವರ ಸ್ಫೋಟಕ ಬ್ಯಾಟಿಂಗ್ ಮೂಲಕ ಅತ್ಯುತ್ತಮ ಆರಂಭ ಪಡೆಯಿತು. ಫಿಲ್​ ಸಾಲ್ಟ್​ ಕೂಡ 14 ಎಸೆತಕ್ಕೆ 32 ರನ್ ಬಾರಿಸಿ ಮಿಂಚಿದರು. ಈ ಜೋಡಿ ಮೊದಲ ವಿಕೆಟ್​ಗೆ 61 ರನ್ ಬಾರಿಸಿತು. ನಂತರ ಅಂಗ್​ಕ್ರಿಶ್​ ರಘವಂಶಿ 32 ರನ್ ಬಾರಿಸಿದರೆ ರಸೆಲ್ 12 ರನ್​ಗೆ ಔಟಾದರು. ರಿಂಕು ಸಿಂಗ್ ವೈಫಲ್ಯ ಅನುಭವಿಸಿ 16 ರನ್​ಗೆ ಸೀಮಿತಗೊಂಡರೆ ಕೊನೆಯಲ್ಲಿ ಶ್ರೇಯಸ್ ಅಯ್ಯರ್​2 23 ರನ್​ ಹಾಗೂ ರಮಣ್​ದೀಪ್​ ಸಿಂಗ್ 6 ಎಸೆತಕ್ಕೆ 25 ರನ್ ಬಾರಿಸಿ ದೊಡ್ಡ ಮೊತ್ತ ಬಾರಿಸಲು ನೆರವಾದರು. ಲಕ್ನೊ ಪರ ನವೀನ್ ಉಲ್ ಹಕ್​ 3 ವಿಕೆಟ್ ಪಡೆದರು.

ಬ್ಯಾಟಿಂಗ್ ವೈಫಲ್ಯ

ಗುರಿ ಬೆನ್ನಟ್ಟಲು ಆರಂಭಿಸಿದ ಲಕ್ನೊ ತಂಡ ಕೆಕೆಆರ್​ ಬೌಲರ್​ಗಳ ನಿಖರ ಎಸೆತಗಳಿಗೆ ಹಾಗೂ ಫೀಲ್ಡಿಂಗ್​ಗೆ ಬಲಿಯಾದರು. ಅರ್ಶಿನ್​ ಕುಲ್ಕರ್ಣಿ 9 ರನ್​ಗೆ ಸೀಮಿತಗೊಂಡರೆ ರಾಹುಲ್​ 21 ರನ್​ ಬಾರಿಸಿದರು. ಮಾರ್ಕಸ್​ ಸ್ಟೊಯ್ನಿಸ್​ 36 ರನ್​ ಗೆ ಔಟಾದಾಗ ಲಕ್ನೊ ಆಸೆ ಕರಗಿತು. ದೀಪಕ್ ಹೂಡ 6 ರನ್​ಗೆ ಸೀಮಿತಗೊಂಡರೆ ಪೂರನ್​ 10 ರನ್, ಬದೋನಿ 15 ರನ್​ ಹಾಗೂ ಆಸ್ಟನ್​ ಟರ್ನರ್​ 16 ರನ್ ಕೊಡುಗೆ ಕೊಟ್ಟರು. ಆದರೆ, ದೊಡ್ಡ ಮೊತ್ತದ ಸನಿಹಕ್ಕೆ ಹೋಗಲೂ ಸಾಧ್ಯವಾಗಲಿಲ್ಲ.

ಕೆಕೆಆರ್ ಬೌಲಿಂಗ್​ನಲ್ಲಿ ಹರ್ಷಿತ್​ ರಾಣಾ ಹಾಗೂ ವರುಣ್ ಚಕ್ರವರ್ತಿ ತಲಾ 3 ವಿಕೆಟ್ ಪಡೆದರೆ ಆ್ಯಂಡ್ರೆ ರಸೆಲ್​ 2 ವಿಕೆಟ್​ ಉರುಳಿಸಿದರು.

Continue Reading
Advertisement
Ramanagara News
ಕರ್ನಾಟಕ37 mins ago

Channapatna News: ಮದುವೆಯಲ್ಲಿ ಐಸ್ ಕ್ರೀಂ ತಿಂದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

Narendra Modi
ದೇಶ43 mins ago

Narendra Modi: ರಾಮಲಲ್ಲಾನಿಗೆ ಮೋದಿ ಸಾಷ್ಟಾಂಗ ನಮಸ್ಕಾರ; ಇಲ್ಲಿವೆ ಅಯೋಧ್ಯೆ ಭೇಟಿ Photos

IPL 2024
ಪ್ರಮುಖ ಸುದ್ದಿ49 mins ago

IPL 2024 : ಇವರೇ ನೋಡಿ ಐಪಿಎಲ್​ 2024ರ ಮೊದಲ ಕನ್​ಕಷನ್​ ಬದಲಿ ಆಟಗಾರ

Prajwal Revanna Case
ಪ್ರಮುಖ ಸುದ್ದಿ58 mins ago

Prajwal Revanna Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೊ ಶೇರ್‌ ಮಾಡಿದ್ರೆ ಕೇಸ್‌ ಗ್ಯಾರಂಟಿ; ಎಸ್‌ಐಟಿ ಎಚ್ಚರಿಕೆ

IPL 2024
ಕ್ರೀಡೆ1 hour ago

IPL 2024 : ಲಕ್ನೊ ವಿರುದ್ಧ ಕೆಕೆಆರ್​​ಗೆ 98 ರನ್​ಗಳ ಬೃಹತ್​ ಜಯ

Narendra Modi
ದೇಶ1 hour ago

Narendra Modi: ಮತಬ್ಯಾಂಕ್‌ ಗುತ್ತಿಗೆದಾರರ ಸ್ನೇಹಕ್ಕೆ ಮುಸ್ಲಿಮರು ವಿದಾಯ; ಕಾಂಗ್ರೆಸ್‌ಗೆ ಮೋದಿ ಟಾಂಗ್!

Prajwal Revanna Case
ಕರ್ನಾಟಕ1 hour ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

IPL 2024
ಪ್ರಮುಖ ಸುದ್ದಿ2 hours ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ2 hours ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Champions Trophy
Latest2 hours ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ5 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ6 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ7 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ20 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌