Ajay Banga : ವಿಶ್ವಬ್ಯಾಂಕ್‌ ಅಧ್ಯಕ್ಷ ಹುದ್ದೆಗೆ ಅಜಯ್‌ ಬಾಂಗಾ ಅಮೆರಿಕ ಅಭ್ಯರ್ಥಿ, ಚೀನಾ ಆಕ್ಷೇಪ - Vistara News

ಪ್ರಮುಖ ಸುದ್ದಿ

Ajay Banga : ವಿಶ್ವಬ್ಯಾಂಕ್‌ ಅಧ್ಯಕ್ಷ ಹುದ್ದೆಗೆ ಅಜಯ್‌ ಬಾಂಗಾ ಅಮೆರಿಕ ಅಭ್ಯರ್ಥಿ, ಚೀನಾ ಆಕ್ಷೇಪ

ವಿಶ್ವಬ್ಯಾಂಕ್‌ ಅಧ್ಯಕ್ಷ ಹುದ್ದೆಗೆ ಅಮೆರಿಕದ ಅಭ್ಯರ್ಥಿಯಾಗಿ ಭಾರತೀಯ ಮೂಲದ ಅಜಯ್‌ ಬಾಂಗಾ ಅವರನ್ನು ಕಣಕ್ಕಿಳಿಸಲಾಗಿದೆ. ಆದರೆ ಚೀನಾ ಬೇರೆ ಅಭ್ಯರ್ಥಿಗೆ ಬೆಂಬಲಿಸಲು ಆಸಕ್ತಿ ವಹಿಸಿದೆ. (Ajay Banga) ಏಕೆ? ಇಲ್ಲಿದೆ ವಿವರ.

VISTARANEWS.COM


on

Indian-Origin Ajay Banga Set To Become World Bank President
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ವಿಶ್ವಬ್ಯಾಂಕ್‌ನ ಅಧ್ಯಕ್ಷ ಹುದ್ದೆಗೆ ಭಾರತೀಯ ಮೂಲದ ಅಜಯ್‌ ಬಾಂಗಾ ಅವರನ್ನು ಅಮೆರಿಕದ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ನಾನಾ ದೇಶಗಳ ಬೆಂಬಲ ಗಳಿಸಲು ಬಾಂಗಾ ಇದೀಗ ಹೊರಟಿದ್ದು, ಭಾರತದಲ್ಲಿ ಪ್ರಧಾನಿ ನರೇಂದ್ರ ಮೋದಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Ajay Banga) ಮೊದಲಾದವರನ್ನು ಭೇಟಿಯಾಗುತ್ತಿದ್ದಾರೆ. ಈಗಾಗಲೇ ಆಫ್ರಿಕಾ, ಯುರೋಪ್‌ ಪ್ರವಾಸವನ್ನು ಪೂರೈಸಿದ್ದಾರೆ.

ವಿಶ್ವಬ್ಯಾಂಕ್‌, ಜಾಗತಿಕ ಅಭಿವೃದ್ಧಿ ಕುರಿತ ಸವಾಲುಗಳು, ಭಾರತದ ಆದ್ಯತೆಗಳ ಬಗ್ಗೆ ಅಜಯ್‌ ಬಾಂಗಾ ಅವರು ಪ್ರಧಾನಿ ಮೋದಿ ಜತೆ ಚರ್ಚಿಸಲಿದ್ದಾರೆ. ಭಾರತವು ಅಜಯ್‌ ಬಾಂಗಾ ಅವರನ್ನು ಬೆಂಬಲಿಸಿದೆ. ಬಾಂಗ್ಲಾದೇಶ, ಕೊಲಂಬಿಯಾ, ಈಜಿಪ್ತ್‌, ಫ್ರಾನ್ಸ್‌, ಜರ್ಮನಿ, ಘಾನಾ, ಇಟಲಿ, ಜಪಾನ್‌, ಕೀನ್ಯಾ, ಸೌದಿ ಅರೇಬಿಯಾ, ಕೊರಿಯಾ, ಬ್ರಿಟನ್‌ ಈಗಾಗಲೇ ಬಾಂಗಾ ಅವರನ್ನು ಬೆಂಬಲಿಸಿದೆ.

ಅಜಯ್‌ ಬಾಂಗಾ (63) 1959ರಲ್ಲಿ ಪುಣೆಯಲ್ಲಿ ಜನಿಸಿದರು. ಐಐಎಂ ಅಹಮದಾಬಾದ್‌ನಲ್ಲಿ ಎಂಬಿಎ ಮಾಡಿರುವ ಅವರು, 2010-2021 ರ ಅವಧಿಯಲ್ಲಿ ಮಾಸ್ಟರ್‌ ಕಾರ್ಡ್‌ ಕಂಪನಿಯ ಸಿಇಒ ಆಗಿದ್ದರು.

ಚೀನಾ ಆಕ್ಷೇಪ

China Flag

ವಿಶ್ವಬ್ಯಾಂಕ್‌ ಅಧ್ಯಕ್ಷ ಹುದ್ದೆಗೆ ಅಜಯ್‌ ಬಾಂಗಾ ಬದಲಿಗೆ ಬೇರೆ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಚೀನಾ ಹೇಳಿದೆ. ಅಮೆರಿಕದ ಜತೆಗೆ ಚೀನಾದ ಸಂಬಂಧ ಬಿಗಡಾಯಿಸುತ್ತಿರುವುದನ್ನೂ ಇದು ಬಿಂಬಿಸಿದೆ. ಮೆರಿಟ್‌ ಆಧಾರದಲ್ಲಿ ಬೇರೆ ಅಭ್ಯರ್ಥಿಯನ್ನು ಬೆಂಬಲಿಸಲು ಬಯಸಿರುವುದಾಗಿ ಚೀನಾ ಹೇಳಿದೆ.

ವಿಶ್ವಬ್ಯಾಂಕ್‌ ಜಾಗತಿಕ ಮಟ್ಟದಲ್ಲಿ ಪ್ರಭಾವಿ ಹಣಕಾಸು ಸಂಸ್ಥೆಯಾಗಿದ್ದು, ಜಾಗತಿಕ ಬಡತನ ನಿರ್ಮೂಲನೆ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡುತ್ತದೆ. ಹಣಕಾಸು ನೆರವು ನೀಡುತ್ತದೆ. ಇದರಲ್ಲಿ ಇದುವರೆಗೆ ಅಮೆರಿಕ ಮೂಲದವರೇ ಅಧ್ಯಕ್ಷರಾಗಿದ್ದಾರೆ. ಅಜಯ್‌ ಬಾಂಗಾ ಭಾರತೀಯ ಮೂಲದವರಾಗಿದ್ದರೂ, ಈಗ ಅಮೆರಿಕದ ನಾಗರಿಕರಾಗಿದ್ದಾರೆ. ಈ ಅಮೆರಿಕದ ಪ್ರಾಬಲ್ಯವನ್ನು ಅಂತ್ಯಗೊಳಿಸಲು ಚೀನಾ ಬಯಸುತ್ತಿದೆ.

ತಾಂತ್ರಿಕವಾಗಿ ವಿಶ್ವಬ್ಯಾಂಕ್‌ ಮಂಡಳಿಯ 25 ಕಾರ್ಯಕಾರಿ ನಿರ್ದೇಶಕರು ಅಧ್ಯಕ್ಷರನ್ನು ಆಯ್ಕೆ ಮಾಡುತ್ತಾರೆ. ನಾಮ ನಿರ್ದೇಶನ ಪ್ರಕ್ರಿಯೆ ಮಾರ್ಚ್‌ 29ಕ್ಕೆ ಮುಕ್ತಾಯವಾಗುತ್ತಿದೆ. ಜರ್ಮನಿ ಮಹಿಳಾ ಬ್ಯಾಂಕ್‌ ಅಧ್ಯಕ್ಷರನ್ನು ಬಯಸಿದೆ.

ಭಾರತೀಯ ಮೂಲದವರಿಂದ ದೇಶಕ್ಕೆ ಲಾಭವಾಗಿದೆಯೇ?

ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌, ಅಜಯ್‌ ಬಾಂಗಾ, ಸುಂದರ್‌ ಪಿಚೈ, ಸತ್ಯ ನಾಡೆಳ್ಳಾ, ಪರಾಗ್‌ ಅಗ್ರವಾಲ್‌, ಇಂದ್ರಾ ನೂಯಿ ಮೊದಲಾದವರು ಭಾರತೀಯ ಮೂಲದವರದರೂ, ಭಾರತೀಯರಲ್ಲ. ದ್ವಿಪೌರತ್ವಕ್ಕೆ ಭಾರತ ಅವಕಾಶ ನೀಡುವುದಿಲ್ಲ. ಹೀಗಿದ್ದರೂ ಅವರನ್ನು ಭಾರತದ ಮಕ್ಕಳೆಂದು ಭಾರತೀಯರು ಆದರಿಸುತ್ತಾರೆ. ಆದರೆ ಅವರಿಂದ ಭಾರತಕ್ಕೆ ಏನಾದರೂ ಲಾಭವಾಗಿದೆಯೇ, ಇಲ್ಲಿ ಉದ್ಯೋಗಗಳನ್ನು ಸೃಷ್ಟಿಸಿದ್ದಾರೆಯೇ ಎಂದರೆ ಉತ್ತರ ಸಿಗುವುದಿಲ್ಲ. ಬದಲಿಗೆ ನಿರಾಸೆಯಾಗುತ್ತದೆ. ಆದ್ದರಿಂದ ಭಾರತ ತನ್ನದೇ ನಾಗರಿಕರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಬೇಕು. ಪ್ರೋತ್ಸಾಹಿಸಬೇಕು ಎನ್ನುತ್ತಾರೆ ವಿಶ್ಲೇಷಕರು.

ಚೀನಾ ಮಾದರಿ: ಚೀನಾ ತನ್ನದೇ ನಾಗರಿಕರನ್ನು ಅಂತಾರಾಷ್ಟ್ರೀಯ ಸಂಸ್ಥೆಗಳ ಉನ್ನತ ಹುದ್ದೆಗೆ ಆಯ್ಕೆ ಮಾಡಿಸುವಲ್ಲಿ ಯಶಸ್ವಿಯಾಗಿದೆ. ಉದಾಹರಣೆಗೆ ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ ಪ್ರಧಾನ ನಿರ್ದೇಶಕರಾಗಿ ಚೀನಾದ ಕ್ಯೂ ಡೊಂಗ್ಯು ನೇಮಕವಾಗಿದ್ದಾರೆ. ಇಂಟರ್‌ ನ್ಯಾಶನಲ್‌ ಸಿವಿಲ್‌ ಏವಿಯೇಶನ್‌ ಆರ್ಗನೈಸೇಶನ್‌ ಅಧ್ಯಕ್ಷರಾಗಿ ಫಾಂಗ್‌ ಲಿಯು, ಇಂಟರ್‌ ನ್ಯಾಶನಲ್ ಟೆಲಿಕಮ್ಯುನಿಕೇಶನ್‌ ಯೂನಿಯನ್‌ ಕಾರ್ಯದರ್ಶಿಯಾಗಿ ಹುಲಿನ್‌ ಜಾವೊ, ಇಂಡಸ್ಟ್ರಿಯಲ್‌ ಡೆವಲಪ್‌ಮೆಂಟ್‌ ಆರ್ಗನೈಸೇಶನ್‌ ಕಾರ್ಯಕಾರಿ ನಿರ್ದೇಶಕರಾಗಿ ಇ ಯಂಗ್‌ ಚೀನಾ ಪ್ರಜೆಗಳಾಗಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಪ್ರಧಾನ ನಿರ್ದೇಶಕಿ ಮಾರ್ಗರೇಟ್‌ ಚಾನ್‌ ಅವರು ಹಾಂಕಾಂಗ್‌ ಮೂಲದವರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕಳೆದ ಕೆಲವು ವರ್ಷಗಳಲ್ಲಿ ಭಾರತದಿಂದ ರಫ್ತಾಗುವ ಹಲವು ಸಾಮಗ್ರಿಗಳಲ್ಲಿ ಕೀಟನಾಶಕಗಳ ಅಂಶ ನಿಗದಿತ ಮಿತಿ ಮೀರಿದೆ ಎಂದು ಕಾರಣ ನೀಡಿ ತಿರಸ್ಕರಿಸಲಾಗಿದೆ. ಅಮೆರಿಕದಲ್ಲಿ ನಮ್ಮ ಬಾಸ್ಮತಿ ಅಕ್ಕಿ, ಪಾಲಿಶ್ಡ್‌ ಅಕ್ಕಿ, ಬೆಂಡೆಕಾಯಿ ಹಾಗೂ ಕ್ಯಾಪ್ಸಿಕಂ, ಯುರೋಪಿನಲ್ಲಿ ಬಾಸ್ಮತಿ ಅಕ್ಕಿ, ಜಪಾನ್‌ನಲ್ಲಿ ಸಿಗಡಿ ಸೇರಿದಂತೆ ಹಲವು ಉತ್ಪನ್ನಗಳನ್ನು ಎತೋಕ್ಸಿಕ್ವಿನ್‌, ಆಕ್ಸಿಟೆಟ್ರಾಸೈಕ್ಲಿನ್‌, ಸಲ್ಫೈಟ್‌, ನೈಟ್ರೋಫರಾನ್‌, ಕ್ಲೋರಾಂಫೆನಿಕಾಲ್‌ ಮುಂತಾದ ಕೀಟನಾಶಕ ಅಂಶಗಳ ಕಾರಣದಿಂದ ತಿರಸ್ಕರಿಸಲಾಗಿತ್ತು. ಇದು ಆತಂಕಕಾರಿ

VISTARANEWS.COM


on

Vistara Editorial
Koo

ಭಾರತದಲ್ಲಿ ತಯಾರಾಗುವ ಒಟ್ಟು 527 ಆಹಾರ ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲಿನ್‌ ಆಕ್ಸೈಡ್‌ (Ethylene oxide) ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಯುರೋಪಿಯನ್ ಯೂನಿಯನ್ ಆಹಾರ ಸುರಕ್ಷತಾ ಅಧಿಕಾರಿಗಳು ಹೇಳಿದ್ದಾರೆ. 572 ಉತ್ಪನ್ನಗಳ ಪೈಕಿ 87 ಉತ್ಪನ್ನಗಳ ರಫ್ತನ್ನು ಈಗಾಗಲೇ ಗಡಿಯಲ್ಲಿ ರದ್ದುಗೊಳಿಸಲಾಗಿದೆ. ಎಂಡಿಎಚ್, ಎವರೆಸ್ಟ್ ಮಸಾಲೆ ಸೇರಿದಂತೆ ಜನಪ್ರಿಯ ಕಂಪನಿಗಳ ಆಹಾರ ಪದಾರ್ಥಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಹೆಚ್ಚಿನ ಮಟ್ಟದಲ್ಲಿದೆಯಂತೆ. ಇದರ ಬೆನ್ನಲ್ಲೇ ಎರಡು ಕಂಪನಿಗಳ ಉತ್ಪನ್ನಗಳನ್ನು ಈಗಾಗಲೇ ಹಾಂಗ್ ಕಾಂಗ್ (Hong Kong) ಮತ್ತು ಸಿಂಗಾಪುರ (Singapore)ದಲ್ಲಿ ಸಂಪೂರ್ಣವಾಗಿ ಬ್ಯಾನ್‌ ಮಾಡಲಾಗಿದೆ. ಎಳ್ಳು ಬೀಜಗಳು, ಗಿಡಮೂಲಿಕೆಗಳು, ಮಸಾಲೆಗಳು ಮತ್ತು ಇತರ ಆಹಾರ ಪದಾರ್ಥಗಳಲ್ಲೂ ಅಪಾಯಕಾರಿ ಕೆಮಿಕಲ್‌ಗಳು ಕಂಡು ಬಂದಿವೆ. ಇದು ಭಾರತದ ರಫ್ತು ವಲಯದ ಮಟ್ಟಿಗೆ ಆತಂಕಕಾರಿ ಸಂಗತಿ.

ಹೀಗಾಗುತ್ತಿರುವುದು ಇದೇ ಮೊದಲ ಬಾರಿ ಅಲ್ಲ. ಕಳೆದ ಕೆಲವು ವರ್ಷಗಳಲ್ಲಿ ಭಾರತದಿಂದ ರಫ್ತಾಗುವ ಹಲವು ಸಾಮಗ್ರಿಗಳಲ್ಲಿ ಕೀಟನಾಶಕಗಳ ಅಂಶ ನಿಗದಿತ ಮಿತಿಯನ್ನು ಮೀರಿದೆ ಎಂದು ಕಾರಣ ನೀಡಿ ತಿರಸ್ಕರಿಸಲಾಗಿದೆ. ಅಮೆರಿಕದಲ್ಲಿ ನಮ್ಮ ಬಾಸ್ಮತಿ ಅಕ್ಕಿ, ಪಾಲಿಶ್ಡ್‌ ಅಕ್ಕಿ, ಬೆಂಡೆಕಾಯಿ ಹಾಗೂ ಕ್ಯಾಪ್ಸಿಕಂ, ಯುರೋಪಿನಲ್ಲಿ ಬಾಸ್ಮತಿ ಅಕ್ಕಿ, ಜಪಾನ್‌ನಲ್ಲಿ ಸಿಗಡಿ ಸೇರಿದಂತೆ ಹಲವು ಉತ್ಪನ್ನಗಳನ್ನು ಎತೋಕ್ಸಿಕ್ವಿನ್‌, ಆಕ್ಸಿಟೆಟ್ರಾಸೈಕ್ಲಿನ್‌, ಸಲ್ಫೈಟ್‌, ನೈಟ್ರೋಫರಾನ್‌, ಕ್ಲೋರಾಂಫೆನಿಕಾಲ್‌ ಮುಂತಾದ ಕೀಟನಾಶಕ ಅಂಶಗಳ ಕಾರಣದಿಂದ ತಿರಸ್ಕರಿಸಲಾಗಿತ್ತು. ಅಮೆರಿಕದಲ್ಲಿ ಭಾರತದ ಮಾವು, ಜರ್ಮನಿಯಲ್ಲಿ ಭಾರತದ ಡಾರ್ಜಲಿಂಗ್‌ ಟೀ, ಯುಎಇಯಲ್ಲಿ ನಮ್ಮ ಮಾವು ಹಾಗೂ ತರಕಾರಿ ತಿರಸ್ಕಾರಕ್ಕೊಳಗಾಗಿದ್ದವು. ಇದೀಗ ಮಸಾಲೆ ಉತ್ಪನ್ನಗಳಲ್ಲಿ ಕ್ಯಾನ್ಸರ್‌ಕಾರಕ ಎಥಿಲೀನ್ ಆಕ್ಸೈಡ್ ಅತಿಯಾಗಿ ಕಂಡುಬಂದಿದೆ. ಎಥಿಲೀನ್ ಆಕ್ಸೈಡ್ ಅನ್ನು ಮೂಲತಃ ವೈದ್ಯಕೀಯ ಸಾಧನಗಳನ್ನು ಸ್ವಚ್ಛಗೊಳಿಸುವ ಕ್ರಿಮಿನಾಶಕವಾಗಿ ಬಳಸಲಾಗುತ್ತದೆ. ಈ ರಾಸಾಯನಿಕ ದೇಹಕ್ಕೆ ಸೇರಿದರೆ ಲಿಂಫೋಮಾ ಮತ್ತು ಲ್ಯುಕೇಮಿಯಾ ಸೇರಿದಂತೆ ವಿವಿಧ ಕ್ಯಾನ್ಸರ್‌ಗಳು ಬರುವ ಸಾಧ್ಯತೆ ಹೆಚ್ಚಿದೆ. ಇದು ಈ ಹಿಂದೆ ಕೆಮ್ಮಿನ ಸಿರಪ್‌ಗಳಲ್ಲೂ ಪತ್ತೆಯಾಗಿತ್ತು. ಇದರಿಂದ ಆಫ್ರಿಕಾದ ಕೆಲವು ದೇಶಗಳಲ್ಲಿ ಸಾವಿಗೆ ಕಾರಣವಾಗಿತ್ತು.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

ಇದಕ್ಕೆ ಕಾರಣ, ನಮ್ಮವರು ಬೆಳೆಯುವ ಬೆಳೆಗೆ ಬಳಸುವ ಕೀಟನಾಶಕ ಹಾಗೂ ರಸಗೊಬ್ಬರದ ಪ್ರಮಾಣದಲ್ಲಿ ಲಂಗುಲಗಾಮೇ ಇಲ್ಲದಿರುವುದು. ಕೀಟನಾಶಕಗಳು ಹಾಗೂ ರಸಗೊಬ್ಬರಗಳಿಗೆ ಅತಿ ಭಾರೀ ಪ್ರಮಾಣದಲ್ಲಿ ಸಬ್ಸಿಡಿಯನ್ನು ಕೊಡುವ ದೇಶವೂ ನಮ್ಮದೇ. ಹೀಗಾಗಿ ಇವು ಅತ್ಯಂತ ಅಗ್ಗವಾಗಿ ಸಿಗುತ್ತವೆ. ಅಮೆರಿಕ ಬಹಳಷ್ಟು ಸಾರಿ ನಮ್ಮಲ್ಲಿ ನೀಡಲಾಗುತ್ತಿರುವ ರಸಗೊಬ್ಬರ ಸಬ್ಸಿಡಿಯ ಬಗ್ಗೆ ತಗಾದೆ ಎತ್ತಿದೆ. ಇದರಲ್ಲಿ ಅಮೆರಿಕದ ಹಿತಾಸಕ್ತಿಯೂ ಇದೆ ಎನ್ನೋಣ. ಆದರೆ ಅಮೆರಿಕದ ಆಕ್ಷೇಪದಲ್ಲಿ ಸತ್ಯವೂ ಇದೆ. ಅಮೆರಿಕ, ಮುಂದುವರಿದ ಯುರೋಪ್ ದೇಶಗಳು, ಸಿಂಗಾಪುರ ಮುಂತಾದೆಡೆಗಳಲ್ಲಿ ಆಹಾರ ವಸ್ತುಗಳ ಗುಣಮಟ್ಟದ ಬಗ್ಗೆ ಕಟ್ಟುನಿಟ್ಟಾದ ನಿಯಮಗಳಿವೆ. ಈ ನಿಯಮ ಮೀರಿದ ಉತ್ಪನ್ನಗಳನ್ನು ಅವು ಸ್ವೀಕರಿಸುವುದಿಲ್ಲ. ಹೀಗಾಗಿ ರಫ್ತಿನ ಮಟ್ಟಿಗೆ ನಾವೂ ಕಠಿಣ ನಿಯಮಗಳನ್ನು ಪಾಲಿಸಬೇಕಾದುದು ಅತ್ಯವಶ್ಯಕ.

ದೇಶದಿಂದ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತಿನ ಪ್ರಾಮುಖ್ಯತೆ ಹಾಗೂ ಅದರ ಗುಣಮಟ್ಟ ಕಾಪಾಡಿಕೊಳ್ಳಬೇಕಾದ ಅಗತ್ಯ ಅರಿತುಕೊಂಡ ಕೇಂದ್ರ ಸರ್ಕಾರ 1986ರಲ್ಲಿ ವಾಣಿಜ್ಯ ಸಚಿವಾಲಯದ ಅಡಿಯಲ್ಲಿ ಸಂಸತ್ತಿನ ಕಾಯಿದೆಯ ಮೂಲಕ ಕೃಷಿ ಮತ್ತು ಸಂಸ್ಕರಿಸಿದ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರವನ್ನು (APEDA) ಸ್ಥಾಪಿಸಿತು. ರಫ್ತು ಮಾಡಬೇಕಾದ ಸರಕುಗಳ ಕಡ್ಡಾಯ ಗುಣಮಟ್ಟದ ನಿಯಂತ್ರಣ ಮತ್ತು ಪೂರ್ವ-ರವಾನೆ ತಪಾಸಣೆಯ ಉದ್ದೇಶಕ್ಕಾಗಿ ರಫ್ತು (ಗುಣಮಟ್ಟ ನಿಯಂತ್ರಣ ಮತ್ತು ತಪಾಸಣೆ) ಕಾಯಿದೆ, 1963ರ ಸೆಕ್ಷನ್ 3ರ ಅಡಿಯಲ್ಲಿ ಭಾರತ ಸರ್ಕಾರದಿಂದ ರಫ್ತು ಪರಿಶೀಲನಾ ಮಂಡಳಿ (EIC) ಅನ್ನು ಸ್ಥಾಪಿಸಲಾಯಿತು. ಇದು 1000ಕ್ಕೂ ಹೆಚ್ಚು ಸರಕುಗಳನ್ನು ತಪಾಸಿಸುತ್ತದೆ. ಆಹಾರ ಮತ್ತು ಕೃಷಿ, ಮೀನುಗಾರಿಕೆ, ಖನಿಜಗಳು, ಸಾವಯವ ಮತ್ತು ಅಜೈವಿಕ ರಾಸಾಯನಿಕಗಳು, ರಬ್ಬರ್ ಉತ್ಪನ್ನಗಳು, ಸೆರಾಮಿಕ್ ಉತ್ಪನ್ನಗಳು, ಕೀಟನಾಶಕಗಳು, ಲಘು ಎಂಜಿನಿಯರಿಂಗ್, ಉಕ್ಕಿನ ಉತ್ಪನ್ನಗಳು, ಸೆಣಬು ಉತ್ಪನ್ನಗಳು, ತೆಂಗಿನಕಾಯಿ ಉತ್ಪನ್ನಗಳು, ಪಾದರಕ್ಷೆಗಳು ಇವನ್ನೆಲ್ಲ ಪರಿಶೀಲಿಸುತ್ತದೆ. ಇದಕ್ಕಾಗಿಯೇ ದೊಡ್ಡ ಸಂಖ್ಯೆಯ ಲ್ಯಾಬ್‌ಗಳಿವೆ. ಹೀಗಿದ್ದರೂ ಕಣ್ತಪ್ಪಿಸಿ ವಿಷಕಾರಕ ಅಂಶಗಳಿರುವ ಉತ್ಪನ್ನಗಳು ವಿದೇಶಕ್ಕೆ ಹೋಗುತ್ತವೆ ಎಂದರೇನರ್ಥ?

ಸದ್ಯ ಈ ತಪಾಸಣೆಯನ್ನು ಬಿಗಿ ಮಾಡಬೇಕಿದೆ. ವಿಷಕಾರಕ ಅಂಶಗಳನ್ನು ಹೊಂದಿರುವ ಉತ್ಪನ್ನಗಳನ್ನು ಹಿಂದೆಗೆದುಕೊಳ್ಳುವ, ಪರೀಕ್ಷಿಸುವ, ದೇಶಕ್ಕೆ ಕೆಟ್ಟ ಹೆಸರು ತರುವ ಉತ್ಪನ್ನಗಳ ನಿರ್ಬಂಧಕ್ಕೆ ಕಠಿಣ ಕ್ರಮ ಆಗಬೇಕಿದೆ. ಯಾಕೆಂದರೆ ಇದು ಭಾರತದ ಘನತೆಯನ್ನು ಜಾಗತಿಕವಾಗಿ ಉಳಿಸುವ ಅಥವಾ ನಾಶಮಾಡುವ ಸಂಗತಿಯಾಗಿದೆ.

Continue Reading

ಪ್ರಮುಖ ಸುದ್ದಿ

IPL 2024 : ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ, ಪ್ಲೇಆಫ್​ ಹೊಸ್ತಿಲಲ್ಲಿ ಸಂಜು ಬಳಗ

VISTARANEWS.COM


on

IPL 2024
Koo

ಲಖನೌ: ಸಂಜು ಸ್ಯಾಮ್ಸನ್ ಬಾರಿಸಿದ ಅಜೇಯ 71 ರನ್​ (ಅರ್ಧ ಶತಕ) ಹಾಗೂ ಧ್ರುವ್ ಜುರೆಲ್​ ಬಾರಿಸಿದ ಅಜೇಯ 52 ರನ್​ (ಅರ್ಧ ಶತಕ) ನೆರವಿನಿಂದ ಮಿಂಚಿದ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್​ನ 44ನೇ ಪಂದ್ಯದಲ್ಲಿ (IPL 2024) ಲಕ್ನೊ ಸೂಪರ್​ ಜೈಂಟ್ಸ್ ವಿರುದ್ಧ 7 ವಿಕೆಟ್​ ಭರ್ಜರಿ ವಿಜಯ ದಾಖಲಿಸಿದೆ. ಈ ಮೂಲಕ ರಾಜಸ್ಥಾನ್ ತಂಡ ಹಾಲಿ ಆವೃತ್ತಿಯಲ್ಲಿ 8ನೇ ವಿಜಯವನ್ನು ತನ್ನದಾಗಿಸಿಕೊಂಡಿದೆ. ಒಟ್ಟು 16 ಅಂಕಗಳನ್ನು ಪಡೆದಿರುವ ರಾಜಸ್ಥಾನ್ ಬಳಗ ಬಹುತೇಕ ಪ್ಲೇ ಆಫ್ ಹಂತಕ್ಕೇರಿದೆ. ಆದರೆ, ಅದಿನ್ನೂ ಅಧಿಕೃತಗೊಂಡಿಲ್ಲ. ಅತ್ತ ಲಕ್ನೊ ತಂಡ ಸತತ ಎರಡು ಗೆಲುವಿನ ಬಳಿಕ ಸೋಲಿಗೆ ಸಿಲುಕಿದೆ. ಇದು ಆ ತಂಡಕ್ಕೆ ಒಟ್ಟು 9 ಪಂದ್ಯಗಳಲ್ಲಿ 4ನೇ ಸೋಲು. ಆದಾಗ್ಯೂ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿ ಉಳಿದಿದೆ.

ಇಲ್ಲಿನ ಶ್ರೀ ಅಟಲ್​ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಪಂದ್ಯ ನಡೆಯಿತು. ಟಾಸ್ ಗೆದ್ದ ರಾಜಸ್ಥಾನ್ ಆಯ್ಕೆ ಮಾಡಿಕೊಂಡರೆ ಮೊದಲು ಬ್ಯಾಟ್​ ಮಾಡಿದ ಲಕ್ನೊ ಬಳಗ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 196 ರನ್ ಬಾರಿಸಿತು. ಪ್ರತಿಯಾಗಿ ಆಡಿದ ಉದ್ಘಾಟನಾ ಆವೃತ್ತಿಯ ಚಾಂಪಿಯನ್ ತಂಡ ಇನ್ನೂ 6 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್​ಗೆ 199 ರನ್ ಬಾರಿಸಿ ಭರ್ಜರಿಗೆ ಗೆಲವು ತನ್ನದಾಗಿಸಿಕೊಂಡಿತು.

ಇದನ್ನೂ ಓದಿ: KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

ಸಂಜು ಉತ್ತಮ ಬ್ಯಾಟಿಂಗ್​

ದೊಡ್ಡ ಗುರಿಯನ್ನು ಬೆನ್ನಟ್ಟಲು ಆರಂಭಿಸಿದ ರಾಜಸ್ಥಾನ್ ತಂಡ ರನ್ ಗಳಿಸುತ್ತಲೇ ಸಾಗಿತು. ಯಶಸ್ವಿ ಜೈಸ್ವಾಲ್​ 24 ರನ್ ಬಾರಿಸಿದರೆ ಜೋಸ್​ ಬಟ್ಲರ್​​ 34 ರನ್​ಗಳ ಕೊಡುಗೆ ಕೊಟ್ಟರು. ಆ ಬಳಿಕ ಬಂದ ಸಂಜು ಸ್ಯಾಮ್ಸನ್ ವಿಕೆಟ್​ ಉರುಳದಂತೆ ನೋಡಿಕೊಂಡ ಜತೆಗೆ 33 ಎಸೆತಗಳಲ್ಲಿ 71 ರನ್ ಬಾರಿಸಿದರು. ಆದರೆ, ನಾಲ್ಕನೇ ಕ್ರಮಾಂಕದಲ್ಲಿ ಆಡಿದ ರಿಯಾನ್ ಪರಾಗ್​ 14 ರನ್​ಗೆ ಸೀಮಿತಗೊಂಡರು. ಆದರೆ ಐದನೇ ಕ್ರಮಾಂಕದಲ್ಲಿ ಆಡಿದ ಧ್ರುವ್ ಜುರೆಲ್​ ಅಮೋಘ ಇನಿಂಗ್ಸ್ ಆಡಿದರು. ಅವರು 34 ಎಸೆತಕ್ಕೆ 52 ರನ್​ ಕೊಡುಗೆ ಕೊಟ್ಟರು. ಇದು ಹಾಲಿ ಅವೃತ್ತಿಯಲ್ಲಿ ಅವರ ಮೊದಲ ಅರ್ಧ ಶತಕವಾಗಿದೆ.

ಕಳಪೆ ಆರಂಭ

ಹಿಂದಿನ ಗೆಲುವಿನ ಉತ್ಸಾಹದೊಂದಿಗೆ ಬ್ಯಾಟಿಂಗ್ ಆರಂಭಿಸಿದ ಲಕ್ನೊ ತಂಡಕ್ಕೆ ಕ್ವಿಂಟನ್ ಡಿ ಕಾಕ್​ 8 ರನ್​ಗೆ ಔಟಾಗುವ ಮೂಲಕ ಹಿನ್ನಡೆ ಉಂಟಾಯಿತು. ಕೆ. ಎಲ್ ರಾಹುಲ್ 76 ರನ್​ ಬಾರಿಸುವ ಮೂಲಕ ತಂಡವನ್ನು ಕಾಪಾಡಿದರು. ಆದರೆ, ಹಿಂದಿನ ಪಂದ್ಯದ ಹೀರೊ ಮಾರ್ಕಸ್​ ಸ್ಟೊಯ್ನಿಸ್​ ಶೂನ್ಯಕ್ಕೆ ಔಟಾಗಿ ಹಿನ್ನಡೆ ಉಂಟು ಮಾಡಿದರು. ದೀಪಕ್ ಹೂಡ 50 ರನ್​ ಬಾರಿಸಿದರು. ಕೊನೆಯ ಬ್ಯಾಟರ್​ಗಳ ಸಣ್ಣ ಪುಟ್ಟ ರನ್​ಗಳ ಕೊಡುಗೆಗಳೊಂದಿಗೆ ಸ್ಪರ್ಧಾತ್ಮ ಮೊತ್ತ ಪೇರಿಸಿತು.

Continue Reading

ಪ್ರಮುಖ ಸುದ್ದಿ

Hassan Pen Drive Case: ಎಸ್‌ಐಟಿ ತನಿಖೆ ಆದೇಶಕ್ಕೂ ಮುನ್ನವೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ!

Hassan Pen Drive Case: ಹಾಸನದ ಅಶ್ಲೀಲ ವಿಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆಗೆ ಆದೇಶ ಹೊರಡಿಸಿದೆ. ಇದಕ್ಕೂ ಮೊದಲೇ ಸಂಸದ ವಿದೇಶಕ್ಕೆ ಹೋಗಿದ್ದಾರೆ.

VISTARANEWS.COM


on

Hassan Pen Drive Case
Koo

ದೇವನಹಳ್ಳಿ: ಹಾಸನದ ಅಶ್ಲೀಲ ವಿಡಿಯೊ ತುಣುಕು ಪ್ರಕರಣ ತನಿಖೆಗಾಗಿ ರಾಜ್ಯ ಸರ್ಕಾರ ಶನಿವಾರ ರಾತ್ರಿ ಎಸ್‌ಐಟಿ ರಚನೆಗೆ ಆದೇಶ ಹೊರಡಿಸಿದೆ. ಆದರೆ, ಇದಕ್ಕೂ ಮೊದಲೇ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan Pen Drive Case) ಅವರು ವಿದೇಶಕ್ಕೆ ಹೋಗಿರುವುದು ಕಂಡುಬಂದಿದೆ. ಶನಿವಾರ ಮುಂಜಾನೆ ಮೂರು ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ.

LH 755 ಲುಫ್ತಾನ್ಸಾ (Lufthansa airlines) ಏರ್‌ಲೈನ್ಸ್ ಮೂಲಕ ಕೆಐಎಎಲ್‌ನಿಂದ ಜರ್ಮನಿಯ ಫ್ರಾಂಕ್ ಫರ್ಟ್‌ಗೆ ಪ್ರಜ್ವಲ್‌ ರೇವಣ್ಣ ಅವರು ಹೋಗಿದ್ದಾರೆ ಎಂದು ತಿಳಿದುಬಂದಿದೆ. ಸರ್ಕಾರವು ಎಸ್‌ಐಟಿ ತನಿಖೆಗೆ ಆದೇಶ ಮಾಡುವ ಮುಂಚೆಯೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿದ್ದಾರೆ.

ಜೆಡಿಎಸ್‌ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರು ಸ್ಪರ್ಧಿಸಿರುವ ಹಾಸನ ಸೇರಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆದಿತ್ತು. ಚುನಾವಣೆ ಮುಗಿದ ಹಿನ್ನೆಲೆಯಲ್ಲಿ ಅವರು ವಿದೇಶಕ್ಕೆ ಹೋಗಿರಬಹುದು ಎನ್ನಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಪ್ರಕರಣದ ತನಿಖೆಗೆ ಸರ್ಕಾರ ಎಸ್​ಐಟಿ ತಂಡ ರಚಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹಲವಾರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಹೇಳಲಾಗಿರುವ ಪೆನ್​ಡ್ರೈವ್ (Hasan pen drive cas) ಒಂದು ಬಹಿರಂಗಗೊಂಡಿದೆ. ಅದರ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ. ಈ ಕುರಿತು ಸಿಎಂ ಶನಿವಾರ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರದಿಂದ ತೀರ್ಮಾನ ಮಾಡಲಾಗಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಹಿನ್ನಲೆಯಲ್ಲಿ ಸರ್ಕಾರ ವಿಶೇಷ ತನಿಖಾ ತಂಡ ರಚಿಸುವ ತೀರ್ಮಾನ ಕೈಗೊಂಡಿದೆ ಎಂದು ಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಮಧ್ಯೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಸಂಚಲನ ಮೂಡಿಸಿದ್ದ ಪೆನ್​ ಡ್ರೈವ್ ಪ್ರಕರಣ

ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್​ ರೇವಣ್ಣ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಕೆಲವು ದಿನಗಳ ಹಿಂದೆ ಬಹಿರಂಗೊಂಡಿತ್ತು. ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು ಈ ಕುರಿತು ಸಾಕಷ್ಟು ಊಹಾಪೋಹಗಳು ಎದ್ದಿವೆ. ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಲಾಗುತ್ತಿದೆ. ವಿಡಿಯೊ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಾಗಿದೆ.

ಇದನ್ನೂ ಓದಿ: Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಕೊನೇ ಹಂತದಲ್ಲಿ ರಾಸಲೀಲೆಯ ವಿಡಿಯೋಗಳು ಬಹಿರಂಗಗೊಂಡಿವೆ. ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಮೌನಕ್ಕೆ ಶರಣಾಗಿದ್ದರು. ಇದೀಗ ಸಿಎಂ ತನಿಖೆಗೆ ಆದೇಶ ನೀಡಿದ್ದಾರೆ.

ಮಹಿಳಾ ಆಯೋಗದ ಪತ್ರ ಇಲ್ಲಿದೆ

ಈ ಪೆನ್‌ಡ್ರೈನಲ್ಲಿ ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಪ್ರಜ್ವಲ್​ ಅವರು ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಅಲ್ಲದೆ, ಲೈಂಗಿಕ ಕ್ರಿಯೆಯ ವಿಡಿಯೊಗಳನ್ನು ಮಾಡಿಟ್ಟುಕೊಳ್ಳುತ್ತಿದ್ದರು ಎಂದು ಹೇಳಲಾಗಿದೆ. ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ.

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆ ವಿಡಿಯೋಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

Continue Reading

ಕ್ರಿಕೆಟ್

KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

KL Rahul: ರಾಹುಲ್ ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಋತುವಿನಲ್ಲಿ ಎಲ್ಎಸ್​​ಜಿ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದಾರೆ. ಏಕೆಂದರೆ ಅವರು ತಮ್ಮ ಫ್ರಾಂಚೈಸಿಗಾಗಿ ಅತಿ ಹೆಚ್ಚು ರನ್ ಗಳಿಸಿದವರು. ಕರ್ನಾಟಕದ ಬ್ಯಾಟರ್​ ಎಂಟು ಪಂದ್ಯಗಳಲ್ಲಿ 39.62 ಸರಾಸರಿಯಲ್ಲಿ 317* ರನ್ ಗಳಿಸಿದ್ದಾರೆ.

VISTARANEWS.COM


on

KL Rahul
Koo

ಲಕ್ನೋ: ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) ಶನಿವಾರ ರಾಜಸ್ಥಾನ್ ರಾಯಲ್ಸ್ (Rajasthan Royals) ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ನಾಯಕ ಸ್ಥಿರ ಪ್ರದರ್ಶನ ಮುಂದವರಿಸಿದ್ದಾರೆ. ಅವರು ಆವೇಶ್​ ಖಾನ್ ಎಸೆತಕ್ಕೆ ಟ್ರೆಂಟ್ ಬೌಲ್ಟ್​ ಹಿಡಿದ ಕ್ಯಾಚ್​ಗೆ ಬಲಿಯಾಗುವ ಮೊದಲು ಪಂದ್ಯಾವಳಿಯಲ್ಲಿ ಆರಂಭಿಕನಾಗಿ 4000 ರನ್​ಗಳ ದಾಖಲೆ ಪೂರೈಸಿದ್ದಾರೆ. ಅವರು ಪಂದ್ಯದಲ್ಲಿ 76 ರನ್ ಗಳಿಸಿದ್ದಾರೆ.

ಲಕ್ನೊ ತಂಡ ಆರಂಭಿಕ ಆಟಗಾರ ಕ್ವಿಂಟನ್ ಡಿ ಕಾಕ್ ಮತ್ತು ಅಗ್ರ ಕ್ರಮಾಂಕದ ಬ್ಯಾಟರ್​ ಮಾರ್ಕಸ್ ಸ್ಟೊಯಿನಿಸ್ ಅವರನ್ನು ಬೇಗನೆ ಕಳೆದುಕೊಂಡರೂ ಎಲ್ಎಸ್ಜಿ ಪಂದ್ಯದಲ್ಲಿ ತನ್ನ ಹಿಡಿತವನ್ನು ಉಳಿಸಿಕೊಂಡಿತು. ರಾಹುಲ್​ 31 ಎಸೆತಗಳಲ್ಲಿ ಅರ್ಧಶತಕ ತಲುಪಿದರು. ಈ ವೇಳೆ ಅವರು ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಐದನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಈ ಸಾಧನೆಯನ್ನು ಸಾಧಿಸಲು ಅವರು 94 ಇನ್ನಿಂಗ್ಸ್ ಗಳನ್ನು ತೆಗೆದುಕೊಂಡರು.

ಶಿಖರ್ ಧವನ್ (6362), ಡೇವಿಡ್ ವಾರ್ನರ್ (5909), ಕ್ರಿಸ್ ಗೇಲ್ (4480) ಮತ್ತು ವಿರಾಟ್ ಕೊಹ್ಲಿ (4041) ಎಲೈಟ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕಾಕತಾಳೀಯವೆಂಬಂತೆ ರಾಹುಲ್ ಪ್ರಸ್ತುತ ನಡೆಯುತ್ತಿರುವ ಐಪಿಎಲ್ ಋತುವಿನಲ್ಲಿ ಎಲ್ಎಸ್​​ಜಿ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದಾರೆ. ಏಕೆಂದರೆ ಅವರು ತಮ್ಮ ಫ್ರಾಂಚೈಸಿಗಾಗಿ ಅತಿ ಹೆಚ್ಚು ರನ್ ಗಳಿಸಿದವರು. ಕರ್ನಾಟಕದ ಬ್ಯಾಟರ್​ ಎಂಟು ಪಂದ್ಯಗಳಲ್ಲಿ 39.62 ಸರಾಸರಿಯಲ್ಲಿ 317* ರನ್ ಗಳಿಸಿದ್ದಾರೆ. ಪ್ರಸಕ್ತ ಋತುವಿನಲ್ಲಿ ಅವರು 137.82 ರ ಯೋಗ್ಯ ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ಒಟ್ಟಾರೆಯಾಗಿ, ರಾಹುಲ್ 127 ಐಪಿಎಲ್ ಪಂದ್ಯಗಳನ್ನು ಆಡಿದ್ದಾರೆ, 46.57 ಸರಾಸರಿಯಲ್ಲಿ 4517* ರನ್ ಗಳಿಸಿದ್ದಾರೆ. ಲಾಭದಾಯಕ ಪಂದ್ಯಾವಳಿಯಲ್ಲಿ ಅವರು ನಾಲ್ಕು ಶತಕಗಳು ಮತ್ತು 36 ಅರ್ಧಶತಕಗಳನ್ನು ಹೊಂದಿದ್ದಾರೆ.

ಅಭ್ಯಾಸದ ಮಧ್ಯೆ ಮೊಬೈಲ್​ನಲ್ಲೇ ಡೆಲ್ಲಿ ವರ್ಸಸ್​​ ಮುಂಬೈ ಮ್ಯಾಚ್ ನೋಡಿದ ಕೊಹ್ಲಿ

ಅಹಮದಾಬಾದ್: ಐಪಿಎಲ್ 2024ರ (IPL 2024) 43 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲಿಸಿದೆ. ಈ ಪಂದ್ಯ ಸಿಕ್ಕಾಪಟ್ಟೆ ಕುತೂಹಲಕಾರಿಯಾಗಿತ್ತು. ಅಂತೆಯೇ ಅರ್​ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ((Virat Kohli) ) ಏಪ್ರಿಲ್ 27ರಂದು ತಂಡದ ಹೋಟೆಲ್​ನಲ್ಲಿ ಇರುವಾಗಲೇ ಪಂದ್ಯವನ್ನು ವೀಕ್ಷಿಸಿದ್ದಾರೆ. ಈ ವಿಡಿಯೊ ವೈರಲ್ ಆಗಿದೆ.

ಗುಜರಾತ್ ಜೈಂಟ್ಸ್ ವಿರುದ್ಧದ ಆರ್​ಸಿಬಿ ಪಂದ್ಯದ ಹಿನ್ನೆಲೆಯಲ್ಲಿ ಕೊಹ್ಲಿ ಸತತವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಅದರ ನಡುವೆಯೂ ಅವರು ಮೊಬೈಲ್​ನಲ್ಲಿ ಮ್ಯಾಚ್ ನೋಡಿ ಖುಷಿ ಪಟ್ಟಿದ್ದಾರೆ. ಆರ್​ಸಿಬಿಯ ತರಬೇತಿ ಅವಧಿಗೆ ಮುಂಚಿತವಾಗಿ ಕ್ರಿಕೆಟಿಗ ಊಟ ಮಾಡುತ್ತಿದ್ದಾಗಲೂ ಆಟವನ್ನು ವೀಕ್ಷಿಸುತ್ತಿದ್ದರು. ಹೋಟೆಲ್​​ನಲ್ಲಿ ಹಾದು ಹೋಗಿರುವ ವ್ಯಕ್ತಿಯೊಬ್ಬರು ಅದನ್ನು ರೆಕಾರ್ಡ್ ಮಾಡಿದ್ದಾರೆ. ಏಪ್ರಿಲ್ 25 ರಂದು ಹೈದರಾಬಾದ್​ನಲ್ಲಿ ನಡೆದ ಸನ್​ರೈಸರ್ಸ್​ ಹೈದರಾಬಾದ್ (ಎಸ್​ಆರ್​​ಎಚ್​​) ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಮ್ಯಾಚ್ ವಿನ್ನಿಂಗ್ ಅರ್ಧಶತಕ ಬಾರಿಸಿದ್ದರು.

ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ

ಬೆಂಗಳೂರು: ಮುಂಬರುವ ಐಪಿಎಲ್ 2024 ರಲ್ಲಿ (IPL 2024) ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡದ ಇತರ ಆಟಗಾರರು ಅಹಮದಾಬಾದ್​ಗೆ ಆಗಮಿಸಿದ್ದಾರೆ. ಬಹುನಿರೀಕ್ಷಿತ ಮುಖಾಮುಖಿಗೆ ಒಂದು ದಿನ ಮೊದಲು ಬಂದ ಆರ್​ಸಿಬಿ ಪಡೆಗಳಿಗೆ ತಂಡದ ಹೋಟೆಟ್​ನಲ್ಲಿ ಭವ್ಯ ಸ್ವಾಗತ ದೊರೆಯಿತು.

Continue Reading
Advertisement
Swiggy fined
ಬೆಂಗಳೂರು12 mins ago

Swiggy fined: ಐಸ್‌ ಕ್ರೀಂ ಡೆಲಿವರಿ ಮಾಡಲು ವಿಫಲ; ಸ್ವಿಗ್ಗಿಗೆ 5000 ರೂ. ದಂಡ ವಿಧಿಸಿದ ಕೋರ್ಟ್!

Vistara Editorial
ಪ್ರಮುಖ ಸುದ್ದಿ23 mins ago

ವಿಸ್ತಾರ ಸಂಪಾದಕೀಯ: ಭಾರತದ ಉತ್ಪನ್ನಗಳ ರಫ್ತಿಗೆ ಕುಖ್ಯಾತಿ ಅಂಟದಿರಲಿ

ಕರ್ನಾಟಕ33 mins ago

Modi in Karnataka: ಬೆಳಗಾವಿ ಹೋಟೆಲ್‌ನಲ್ಲಿ 36 ಬಗೆಯ ಭಕ್ಷ್ಯ ಭೋಜನ ಇದ್ರೂ ಎಳನೀರು ಮಾತ್ರ ಸೇವಿಸಿದ ಮೋದಿ!

IPL 2024
ಪ್ರಮುಖ ಸುದ್ದಿ40 mins ago

IPL 2024 : ಲಕ್ನೊ ವಿರುದ್ಧ ರಾಜಸ್ಥಾನ್​ಗೆ 7 ವಿಕೆಟ್​ ಭರ್ಜರಿ ಜಯ, ಪ್ಲೇಆಫ್​ ಹೊಸ್ತಿಲಲ್ಲಿ ಸಂಜು ಬಳಗ

CBI Raid
ದೇಶ47 mins ago

CBI Raid: ಸಂದೇಶ್‌ಖಾಲಿ ಟಿಎಂಸಿ ನಾಯಕನ ಆಪ್ತನ ಮನೆಯಿಂದ ವಶಪಡಿಸಿಕೊಂಡ ಶಸ್ತ್ರಾಸ್ತ್ರದ ಮೂಲ ಪತ್ತೆ

Hassan Pen Drive Case
ಪ್ರಮುಖ ಸುದ್ದಿ1 hour ago

Hassan Pen Drive Case: ಎಸ್‌ಐಟಿ ತನಿಖೆ ಆದೇಶಕ್ಕೂ ಮುನ್ನವೇ ವಿದೇಶಕ್ಕೆ ತೆರಳಿದ ಪ್ರಜ್ವಲ್ ರೇವಣ್ಣ!

KL Rahul
ಕ್ರಿಕೆಟ್1 hour ago

KL Rahul : ಐಪಿಎಲ್​ನಲ್ಲಿ ಆರಂಭಿಕನಾಗಿ 4000 ರನ್ ಪೂರೈಸಿದ ಕೆಎಲ್ ರಾಹುಲ್; ಈ ಪಟ್ಟಿಯಲ್ಲಿ ಯಾರೆಲ್ಲ ಇದ್ದಾರೆ?

Modi in Karnataka
ಪ್ರಮುಖ ಸುದ್ದಿ2 hours ago

Modi in Karnataka: ಬೆಳಗಾವಿಗೆ ಆಗಮಿಸಿದ ಪ್ರಧಾನಿ‌ ಮೋದಿ; ಐಟಿಸಿ ವೆಲ್‌ಕಮ್‌ ಹೋಟೆಲ್‌ನಲ್ಲಿ ವಾಸ್ತವ್ಯ

Hasan pen drive case
ಹಾಸನ2 hours ago

Hassan Pen Drive Case: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಗೆ ಸಿದ್ದರಾಮಯ್ಯ ಆದೇಶ

Air Force Chopper
ದೇಶ2 hours ago

Air Force Chopper: ಉತ್ತರಾಖಂಡದಲ್ಲಿ ಕಾಡಿನ ಬೆಂಕಿ ನಂದಿಸಲು ವಾಯು ಪಡೆಯ ಹೆಲಿಕಾಪ್ಟರ್‌ ಬಳಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20248 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ12 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ19 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌