tatayya thathvamrutam a column by dr m r jayaram about saint kaivara narayanappa ತಾತಯ್ಯ ತತ್ವಾಮೃತಂ : ಶಿಷ್ಯನು ಸಿಗುವುದು ಗುರುವಿನ ಪರಮಭಾಗ್ಯ! - Vistara News

ಧಾರ್ಮಿಕ

ತಾತಯ್ಯ ತತ್ವಾಮೃತಂ : ಶಿಷ್ಯನು ಸಿಗುವುದು ಗುರುವಿನ ಪರಮಭಾಗ್ಯ!

ಅರ್ಹ ಶಿಷ್ಯನಿಗೆ ಮಾತ್ರ ಸೂಕ್ತ ಗುರು ದೊರೆಯುತ್ತಾರೆ, ಮಾರ್ಗದರ್ಶನ ನೀಡುತ್ತಾರೆ ಎನ್ನುತ್ತಾರೆ ಶ್ರೀ ಕ್ಷೇತ್ರ ಕೈವಾರದ ಧರ್ಮಾಧಿಕಾರಿ ಡಾ. ಎಂ.ಆರ್‌. ಜಯರಾಮ್‌. ತಾತಯ್ಯರ ವಚನಗಳ ಒಳಾರ್ಥವನ್ನು ತಿಳಿಸುವ ಅವರ ಅಂಕಣ ಬರಹ ʻತಾತಯ್ಯ ತತ್ವಾಮೃತಂʼ ಇಲ್ಲಿದೆ.

VISTARANEWS.COM


on

guru shishya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಾಧಕ ಶಿಷ್ಯನ ಲಕ್ಷಣಗಳೇನಾಗಿರಬೇಕು? ಇದು ನಮ್ಮ ಮುಂದಿರುವ ಪ್ರಶ್ನೆ. ಗುರುಗಳ ಬಗ್ಗೆ ಹಲವಾರು ಚಿಂತನೆಗಳಿವೆ. ಆದರೆ ಗುರುವಿನ ಜ್ಞಾನವನ್ನು ಪಡೆಯುವ ಶಿಷ್ಯನ ಗುಣಗಳೇನಾಗಿರಬೇಕು. ಹೇಗಾದರೆ ಹೊಲವನ್ನು ಚೆನ್ನಾಗಿ ಉಳುಮೆ ಮಾಡಿ, ಕಳೆ ತೆಗೆದು ಬಿತ್ತನೆಯನ್ನು ಹಾಕಬೇಕೋ, ಅದೇ ರೀತಿಯಾಗಿ ಗುರುವಿನ ಬಳಿಗೆ ಹೋಗಲು ಶಿಷ್ಯನು ಸಿದ್ಧತೆಯನ್ನು ಮಾಡಿಕೊಳ್ಳಬೇಕು.

ಸಾಧನೆಯ ಮೂಲಕ ಕರ್ಮಗಳನ್ನು ನಾಶಮಾಡಿಕೊಂಡು, ಮನಸ್ಸನ್ನು ಸ್ಥಿರವಾಗಿ ನಿಲ್ಲಿಸುವ ಜ್ಞಾನವಂತನಾದೆ. ಇದರ ಮುಂದೆ ಇನ್ನೇನು? ಅಷ್ಟಕ್ಕೆ ಗುರು ನಿನ್ನ ಬಳಿಗೆ ಬರುತ್ತಾನೆಯೇ? ಇಲ್ಲ. ಕರ್ಮಗಳನ್ನು ನಾಶಮಾಡಿಕೊಳ್ಳುವುದು ಒಂದು ಹಂತ. ಇದರಿಂದ ಮನಸ್ಸಿನಲ್ಲಿರುವ ಭಯವು ನಿರ್ಮೂಲವಾಗಿ, ಧೈರ್ಯ ಬರುತ್ತದೆ. ಇದಾದ ನಂತರ ಸುಮ್ಮನೆ ಗುರುಗಳು ನಿನ್ನ ಬಳಿಗೆ ಬಂದು ಬಿಡುವುದಿಲ್ಲ.

ಗುರುಗಳು ನಿನ್ನ ಬಳಿಗೆ ಬರಬೇಕಾದರೆ ಕೆಲವು ನಿಯಮಗಳನ್ನು, ಕರ್ತವ್ಯಗಳನ್ನು ಶಿಷ್ಯನು ಅನುಸರಿಸಬೇಕು. ಗುರುಗಳು ನಿನ್ನ ಬಳಿಗೆ ಬರಬೇಕಾದರೆ, ಅವರ ಒಲವನ್ನು ಪಡೆಯಬೇಕಾದರೆ ಕೆಲವು ಮರ್ಮಗಳನ್ನು ಅರಿವು ಮಾಡಿಕೊಳ್ಳಬೇಕು. ಇದಕ್ಕಾಗಿ ಶಿಷ್ಯನು ಕೆಲವು ಗುಣಗಳನ್ನು ಹೊಂದಿರಬೇಕು, ಅವುಗಳನ್ನು ಒಂದೊಂದಾಗಿ ತಿಳಿದುಕೊಳ್ಳೋಣ.

ಗುರುಸೇವೆಯ ಬಗ್ಗೆ ತಿಳಿಯಿರಿ

ಗುರುಸೇವೆ ಎಂದರೆ ತಾಯಿ, ತಂದೆ, ಗುರು, ದೇವರು ಎಲ್ಲವೂ ನೀನೇ ಎಂದು ಮಾನಸಿಕವಾಗಿ ಗುರುಗಳಿಗೆ ತನ್ನನ್ನು ತಾನು ಅರ್ಪಿಸಿಕೊಳ್ಳಬೇಕು. ತಾತಯ್ಯನವರು ತಮ್ಮ ಕೀರ್ತನೆಗಳಲ್ಲಿ ಹೀಗೆ ಬೋಧಿಸಿದ್ದಾರೆ.
“ತಲ್ಲಿತಂಡ್ರಿವೂ ನೀವೇ, ದಾತದೈವಮು ನೀವೇ
ಇಷ್ಟಾರ್ಥಮುಲೊಸಗು ವೀರನಾರೇಯಣ”

ತಾಯಿ, ತಂದೆ, ದಾತ, ದೈವ ಎಲ್ಲವೂ ನೀವೇ ಇಷ್ಟಾರ್ಥಗಳನ್ನು ನೆರವೇರಿಸು ಎಂದು ಪ್ರಾರ್ಥಿಸಿದ್ದಾರೆ.

“ತಲ್ಲಿತಂಡ್ರಿ ಗುರುವು ದೈವಮು
ನಾರೇಯಣಸ್ವಾಮಿ ನಾಕು ನಾತಿರೋ ವಿನವೇ”

ನಾರೇಯಣಸ್ವಾಮಿಯಾದ ಪರಮಾತ್ಮನೊಬ್ಬನೇ ತಾಯಿಯೂ, ತಂದೆಯೂ, ಗುರುವೂ ಆಗಿದ್ದಾರೆ ಎಂದಿದ್ದಾರೆ.

ನಾವು ನೋಡುತ್ತಿರುವುದೆಲ್ಲಾ ಮಾಯಾ ಪ್ರಪಂಚ, ಶಾಶ್ವತವಾಗಿರುವುದು ಗುರುವೊಬ್ಬನೇ ಎಂದು ತಿಳಿದುಕೊಂಡು ಗುರುಗಳ ಸೇವೆಯನ್ನು ನಿರ್ವಂಚನೆಯಿಂದ ಮಾಡಬೇಕು. ಅಂತರಂಗದಲ್ಲಿ ಮಾನಸಿಕವಾಗಿ ಗುರುವೇ ಸರ್ವಸ್ವ ಎಂದು ಹೇಳಿಕೊಳ್ಳಬೇಕು ಹಾಗೂ ಲೌಕಿಕ ಮಾಯಾ ಪ್ರಪಂಚವನ್ನು ಮರೆಯಬೇಕು. ಆಗ ಗುರು ನಿನ್ನನ್ನು ಒಪ್ಪಿಕೊಳ್ಳುತ್ತಾನೆ. ಇದು ಶಿಷ್ಯನು ಮಾಡಬೇಕಾದ ಮೊದಲ ಕರ್ತವ್ಯ. ಇಂತಹ ಶಿಷ್ಯನಿಗೆ ಗುರು ಬಂದು ಉಪದೇಶವನ್ನು ಮಾಡುತ್ತಾನೆ. ಇದನ್ನೇ ತಾತಯ್ಯನವರು ಹೀಗೆ ಹೇಳಿದ್ದಾರೆ;
“ಗುರುಡೇ ತನ ದೈವಮನಿ ಗುರಿಜೇಸಿ ಯೇವೇಳ
ಸೇವಜೇಸಿನ ಮಹಾ ಶ್ರೇಷ್ಠುನಕುನು”
ಗುರುದೇವನೇ ತನ್ನ ದೈವವೆಂದು ಲಕ್ಷ್ಯವಿಟ್ಟುಕೊಂಡು ಅನುಕ್ಷಣವೂ ಸೇವೆ ಮಾಡಿಕೊಂಡಿರುವ ಮಹಾ ಶ್ರೇಷ್ಠನಾಗಿರುವ ಶಿಷ್ಯನಿಗೆ ಗುರು ಬಂದು ಉಪದೇಶವನ್ನು ನೀಡುತ್ತಾನೆ ಎಂದಿದ್ದಾರೆ.

ಆಚಾರ ವೈರಾಗ್ಯ

ಆಚಾರ ವೈರಾಗ್ಯವೆಂದರೇ ಮಾಡುವ ಕೆಲಸ ಕಾರ್ಯಗಳಲ್ಲಿ ವೈರಾಗ್ಯವೆಂದರ್ಥವಲ್ಲ. ಆಚಾರ ವೈರಾಗ್ಯದಲ್ಲಿ ಎರಡು ವಿಧ. ಒಂದು ನಮ್ಮ ಸಂಪ್ರದಾಯಗಳು, ಇನ್ನೊಂದು ನಾವು ಆಚರಿಸುವ ಸ್ವಧರ್ಮ ವೈರಾಗ್ಯ. ಶ್ರೀಕೃಷ್ಣ ಅರ್ಜುನನಿಗೆ ಹೇಳುತ್ತಾನೆ “ಅರ್ಜುನ, ನೀನು ಕ್ಷತ್ರಿಯನಿದ್ದೀಯಾ, ನಿನ್ನ ಸ್ವಧರ್ಮದ ವೈರಾಗ್ಯವನ್ನು ಅನುಸರಿಸು. ಮಾಯೆಗೆ ಕಟ್ಟುಬೀಳಬೇಡ. ಹೋಗು ಯುದ್ಧ ಮಾಡು ಎಂದು ಎಚ್ಚರಿಸುತ್ತಾನೆ. ಇದು ಆಚಾರ ವೈರಾಗ್ಯ. ಇನ್ನು ಸುಲಭವಾಗಿ ಹೇಳಬೇಕಾದರೆ ಒಬ್ಬ ಶಿಕ್ಷಕ ತನ್ನ ಶಿಷ್ಯರಿಗೆ ಯಾವುದೇ ಭೇದಭಾವ ಮಾಡದೆ ತನ್ನಲ್ಲಿರುವ ಜ್ಞಾನವನ್ನೆಲ್ಲಾ ನಿಷ್ಕಾಮವಾಗಿ ಧಾರೆಯೆರೆಯಬೇಕು.

ಯಾವ ಶಿಷ್ಯನಲ್ಲಿಯೂ ಭೇದ ತೊರದೆ ಈ ಕಾರ್ಯವನ್ನು ಮಾಡಿದರೆ ಅದು ಆಚಾರ ವೈರಾಗ್ಯವೆನಿಸುತ್ತದೆ. ಯಾವಾಗಾದರೇ ಈ ರೀತಿಯ ಆಚಾರ ವೈರಾಗ್ಯ ಬರುತ್ತದೋ ಆಗ ಗುರು ನಿನ್ನನ್ನು ಮೆಚ್ಚುತ್ತಾನೆ. ತಾತಯ್ಯನವರು ಹೀಗೆ ಹೇಳುತ್ತಾರೆ;
“ಆಚಾರಕ್ರಿಯಲನ್ನಿ ಅಬ್ಧಿಲೋ ಬಡವೈಚಿ
ಹರಿಭಜನಲೋವುನ್ನ ಅಧಿಕುನಕುನು”

ಕಾಮ್ಯಫಲಪ್ರಾಪ್ತಿಗಾಗಿ ಸಾಂಪ್ರದಾಯಿಕವಾಗಿ ಆಚರಿಸುವ ಸಕಾಮಕರ್ಮವರ್ಗದ ಆಚಾರ ಕ್ರಿಯೆಗಳೆಲ್ಲವನ್ನೂ ಸಮುದ್ರಕ್ಕೆ ಎಸೆದು ಹರಿಭಜನೆಯಲ್ಲಿಯೇ ಮಗ್ನನಾಗಿರುವ ಭಕ್ತಿ ವಿಶೇಷವುಳ್ಳ ಅಧಿಕನಿಗೆ ಗುರು ಉಪದೇಶವನ್ನು ನೀಡುತ್ತಾನೆ ಎನ್ನುತ್ತಿದ್ದಾರೆ ತಾತಯ್ಯನವರು. ಕಾಮ್ಯಫಲಗಳಿಗೋಸ್ಕರ, ಫಲಾಪೇಕ್ಷೆಯಿಂದ ಕರ್ಮಾಸಕ್ತನಾಗಬಾರದು. ಆಚಾರಗಳನ್ನು ಬಿಟ್ಟು, ಅನುಕ್ಷಣವೂ ಹರಿಭಜನೆಯಲ್ಲಿ ತಲ್ಲೀನನಾಗಿರುವಂತಹ ಶಿಷ್ಯನು ಶ್ರೇಷ್ಠನು.

kaivara-tatayya

ಹರಿಭಜನೆ ಮಾಡಬೇಕು

ಹರಿಭಜನೆ ಎಂದರೆ ಜಪ, ಮಾನಸಿಕ ಪೂಜೆ, ಭಗವಂತನ ಭಜನೆ. ಹರಿಭಜನೆಯನ್ನು ಹೇಗೆ ಮಾಡಬೇಕು? ಏಕಾಗ್ರಚಿತ್ತವಾಗಿ ಮಾನಸಿಕವಾಗಿ ಹರಿಭಜನೆ ಮಾಡಬೇಕು. ಮನಸ್ಸನ್ನು ಸ್ಥಿರವಾಗಿ ನಿಲ್ಲಿಸಿ ಹರಿಭಜನೆ ಮಾಡಬೇಕು. ತಾತಯ್ಯನವರು ಹೇಳುತ್ತಾರೆ;
ಮಾಯಾ ಸಂಸಾರಮುನ ಮಗ್ನುಡೈವುನ್ನಾನು
ಕಡತೇರ್ಚು ಭವರೋಗ ವೈದ್ಯ ನಾರೇಯಣ..
.
ಗುರುಗಳು ನಮಗೆ ಹೇಳಿಕೊಡುತ್ತಿದ್ದಾರೆ. ಮಾಯಾ ಸಂಸಾರದಲ್ಲಿ ಮುಳುಗಿ ಹೋಗಿದ್ದೇನೆ, ನನ್ನನ್ನು ಭವರೋಗದಿಂದ ಪಾರುಮಾಡಿ ಗುರಿ ಸೇರಿಸುವ ವೈದ್ಯನು ನೀನು ನಾರೇಯಣ…. ಎಂದು ಪ್ರಾರ್ಥಿಸಬೇಕು.

ನನ್ನಲ್ಲಿರುವ ಶತ್ರುಗಳನ್ನು ನಾನು ಓಡಿಸಲು ಸಾಧ್ಯವಿಲ್ಲ, ಬಲಭದ್ರನಾಗಿರುವ ಗುರುವೇ, ನಿನ್ನ ಬಾಣದಿಂದ ನನ್ನ ಅಂತರಂಗದಲ್ಲಿರುವ ಪ್ರಬಲವಾದ ಶತ್ರುಗಳನ್ನು ಓಡಿಸಿ ಭಗ್ನ ಮಾಡು ಎಂದು ಪ್ರಾರ್ಥಿಸಬೇಕು. ಈ ರೀತಿಯಾಗಿ ನಿರಂತರವಾಗಿ ಏಕಾಗ್ರತೆಯಿಂದ ಮನಸ್ಸನ್ನು ಸ್ಥಿರವಾಗಿ ನಿಲ್ಲಿಸಿ ಮಾನಸಿಕವಾಗಿ ಹರಿಭಜನೆಯನ್ನು ಮಾಡಿದರೆ ಗುರು ಶಿಷ್ಯನ ಮೇಲೆ ಒಲವನ್ನು ತೋರುತ್ತಾನೆ.

ಸ್ತ್ರೀವ್ಯಾಮೋಹ ಬಿಡಬೇಕು!

ಸಾಧಕ ಶಿಷ್ಯನು ಬ್ರಹ್ಮಚರ್ಯವನ್ನು ಪಾಲಿಸುತ್ತಾ, ಸ್ತ್ರೀ ವ್ಯಾಮೋಹವನ್ನು ಬಿಡುವುದು ಬಹಳ ಮುಖ್ಯವಾದುದು. ಇದನ್ನು ಬಿಡುವುದು ಬಹಳ ಕಷ್ಟ. ಯಾರಾದರೇ ಬ್ರಹ್ಮಚರ್ಯವನ್ನು ಪಾಲಿಸುತ್ತಾನೋ ಅವನನ್ನು ತಾತಯ್ಯನವರು “ವಿಕ್ರಮ” ಎಂದಿದ್ದಾರೆ. ಬ್ರಹ್ಮಚರ್ಯ ಪಾಲನೆಯ ಮನಸ್ಸು ಯಾವಾಗಬರುತ್ತದೆಯೆಂದರೆ ಮೇಲೆ ಹೇಳಿರುವ ಮೂರು ಅಂಶಗಳನ್ನು ಪರಿಪೂರ್ಣವಾಗಿ ಅನುಸರಿಸಿದರೆ ಬ್ರಹ್ಮಚರ್ಯವು ಸಿದ್ಧಿಸುತ್ತದೆ. ತಾತಯ್ಯನವರು ಹೀಗೆ ಹೇಳುತ್ತಾರೆ;
“ಕಾಮಿನುಲಪೈ ಆಶ ಕಾಲ್ಚಿಕಡಕು ವೇಸಿ
ನಿಷ್ಕಳಂಕುಂಡೈನ ನಿರ್ಮಲುನಕು”

ಸ್ತ್ರೀ ವ್ಯಾಮೋಹ ಸಲ್ಲದು. ಯೋಗ ಸಾಧನೆಯಲ್ಲಿ ಬ್ರಹ್ಮಚರ್ಯವೇ ಸಾಧಕನ ಮುಖ್ಯ ಬಲ. ಕಾಮಿನಿಯರ ಸಂಸರ್ಗದ ವ್ಯಾಮೋಹವನ್ನು ಸುಟ್ಟುಹಾಕಿ, ನಿಷ್ಕಲಂಕನಾದ ಬ್ರಹ್ಮಚಾರಿಯು ಶಿಷ್ಯತ್ವಕ್ಕೆ ಅರ್ಹನು ಎನ್ನುತ್ತಿದ್ದಾರೆ. ಕಾಂತೆಯರನ್ನು ಕಂಡಾಗ ಕಣ್ಣಿನ ಕೆಟ್ಟ ನೋಟದ ಫಲವಾಗಿ ಮನಸ್ಸಿನಲ್ಲೂ ಪಾಪದೃಷ್ಠಿ ಬರುವ ಮುನ್ನವೇ ಮಾತೆಗೆ ಸಮಾನವೆಂದು ಭಾವಿಸುವವನೇ ತತ್ವನಿಷ್ಠನಾದ ಯೋಗಿ ಎಂದಿದ್ದಾರೆ ತಾತಯ್ಯನವರು.

ಧಾರ್ಮಿಕ ಮತ್ತು ಆಧ್ಯಾತ್ಮಿಕ ಲೇಖನ, ವರದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ

ಭೇದ ಭಾವವಿಲ್ಲದ ಮಾರ್ಗ

ತಾತಯ್ಯನವರು ಶ್ರೀಕೃಷ್ಣಚರಿತಾಮೃತಯೋಗಸಾರಮು ಎಂಬ ಉಪನಿಷತ್ ವಾಕ್ಯಗಳಿಂದ ಕೂಡಿರುವ ಗ್ರಂಥವನ್ನು ರಚಿಸಿದ್ದಾರೆ. ಅದರಲ್ಲಿ ಆತ್ಮಸಾಮರಸ್ಯ ಮತ್ತು ಸಮಭಾವನೆಯ ಬಗ್ಗೆ ತಿಳಿಸಿದ್ದಾರೆ. ಪ್ರಸ್ತುತ ಇಡೀ ಪ್ರಪಂಚವೇ ಕುಲದ ಮಾಯೆಯಲ್ಲಿ ಬಿದ್ದಿದೆ. ಕುಲದ ಅಹಂಕಾರ ವಿಜೃಂಭಿಸುತ್ತಿದೆ. ಇಂತಹ ಸಂದರ್ಭದಲ್ಲಿ ತಾತಯ್ಯನವರು “ನಾನು ಅಮರನಾರೇಯಣಸ್ವಾಮಿ ಕುಲಕ್ಕೆ ಸೇರಿದ್ದೇನೆ” ಎಂದು ಪರಮಾತ್ಮನಿಗೆ ಸಮರ್ಪಿಸಿಕೊಂಡು ಹೇಳಿರುವ ಬೋಧನೆಯನ್ನು ಅರ್ಥಮಾಡಿಕೊಳ್ಳಬೇಕು. ಯಾವುದೇ ಜೀವಿಯಲ್ಲಿಯೂ ಭೇದಭಾವ ತೋರದಂತಹ ಮನಸ್ಥಿತಿ ನಿರ್ಮಾಣವಾಗಬೇಕು. ಈ ಮನಸ್ಥಿತಿ ಬಂದರೆ ಗುರು ನಿನ್ನನ್ನು ಮೆಚ್ಚುತ್ತಾನೆ.

ತಾತಯ್ಯನವರು ಹೀಗೆ ಹೇಳಿದ್ದಾರೆ;
“ಸಕಲ ಜೀವುಲನೊಕ್ಕ ಸಮಮುಗಾ
ಭಾವಿಂಚು ಸತ್ಯಾತ್ಮುಡೈನ ಸಂಪನ್ನುನಕು”

ಎಲ್ಲರನ್ನೂ, ಎಲ್ಲ ಜೀವಿಗಳನ್ನೂ ಮೇಲು-ಕೀಳುಗಳೆಣಿಸದೆ, ಉಚ್ಚ-ನೀಚದ ತಾರತಮ್ಯವಿಲ್ಲದೆ, ಭೇದಭಾವದ ಭಿನ್ನತೆಯಿಲ್ಲದೆ ಅವರೊಡನೆ ಸಮಭಾವದಿಂದ ವರ್ತಿಸುವ, ಎಲ್ಲ ಜೀವಿಗಳಲ್ಲೂ ವಾಸಿಸಿರುವ ಪರಮಾತ್ಮನು ಒಬ್ಬನೇ ಆಗಿರುವನು ಎಂಬ ದೃಢಭಾವವುಳ್ಳ ಸತ್ಯಾತ್ಮ ಸಂಪನ್ನನಾದ ಸಮದರ್ಶಿತ್ವವುಳ್ಳ ಶಿಷ್ಯನಿಗೆ ಗುರುವು ಉಪದೇಶವನ್ನು ನೀಡುತ್ತಾನೆ ಎಂದಿದ್ದಾರೆ. ಇಂತಹ ಶಿಷ್ಯನು ಸಿಗುವುದು ಗುರುವಿನ ಪರಮಭಾಗ್ಯವೂ ಹೌದು.

ಈ ಐದು ಗುಣಗಳನ್ನು ಯಾರಾದರೇ ಸಾಧಿಸುತ್ತಾರೋ ಅಂತಹ ಶಿಷ್ಯನ ಬಳಿಗೆ ಗುರು ಬಂದು ʻʻಮಗು, ಅಂಜಬೇಡʼʼ ಎಂದು ಹೇಳಿ ಅಭಯವನ್ನು ಕೊಟ್ಟು ಮುಕ್ತಿಯ ದಾರಿಯನ್ನು ತೋರಿಸಿ ಕೈಹಿಡಿದು ಕರೆದುಕೊಂಡು ಹೋಗಿ ಗುರಿಯನ್ನು ಸೇರಿಸಿ ಮುಕ್ತನನ್ನಾಗಿ ಮಾಡುತ್ತಾನೆ. ಇದು ಸತ್ಯ, ಸತ್ಯ, ಸತ್ಯ.

ಲೇಖಕರು ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಕೈವಾರ

ಇದನ್ನೂ ಓದಿ: ತಾತಯ್ಯ ತತ್ವಾಮೃತಂ : ಗುರುವಿನ ಕೃಪೆಯಿರಲು ಮಾಯೆ ಮಾಯವಾದೀತು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru Karaga: ವೈಭವದ ಕರಗ ಮಹೋತ್ಸವ ಸಂಪನ್ನ; ಲಕ್ಷಾಂತರ ಭಕ್ತರ ನಡುವೆ ಮಸ್ತಾನ್ ಸಾಬ್ ದರ್ಗಾಗೆ ಭೇಟಿ

Bengaluru Karaga: ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು.

VISTARANEWS.COM


on

bengaluru karaga in darga
Koo

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru karaga Festival) ಮಂಗಳವಾರ ರಾತ್ರಿ ಅದ್ಧೂರಿಯಾಗಿ ನೆರವೇರಿತು. ನಗರ್ತಪೇಟೆಯಲ್ಲಿ ಧರ್ಮರಾಯಸ್ವಾಮಿ (Dharmaraya swamy) ರಥೋತ್ಸವ ಬಳಿಕ ರಾತ್ರಿ 2 ಗಂಟೆಗೆ ಕರಗ ಶಕ್ತ್ಸೋತ್ಸವಕ್ಕೆ (Bangalore Karaga) ಚಾಲನೆ ನೀಡಲಾಯಿತು. ಮುಂಜಾನೆ ಹಾಜಿ ಮಸ್ತಾನ್‌ ಸಾಬ್‌ ದರ್ಗಾಗೂ (Haji Mastan Saab Darga) ಭೇಟಿ ಕೊಟ್ಟು 5.45ರ ವೇಳೆಗೆ ಧರ್ಮರಾಯ ಸ್ವಾಮಿ ದೇವಸ್ಥಾನದೊಳಗೆ ಕರಗ ಸೇರಿಕೊಂಡಿತು. ವೈಭವದ ಕರಗ ಕಣ್ತುಂಬಿಕೊಳ್ಳಲು ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು.

ನಿನ್ನೆ ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ, ಶಾಸಕ ಹ್ಯಾರಿಸ್‌, ಕಾಂಗ್ರೆಸ್‌ ಅಭ್ಯರ್ಥಿ ಸೌಮ್ಯ ರೆಡ್ಡಿ ಮುಂತಾದವರು ಭೇಟಿ ನೀಡಿದರು. ಬೆಳಗ್ಗೆಯಿಂದಲೇ ತಾಯಿಗೆ ಬಳೆ ಶಾಸ್ತ್ರ, ತಾಳಿ ಶಾಸ್ತ್ರ, ಹೂ ಶಾಸ್ತ್ರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಂಗಳವಾರ ರಾತ್ರಿ 10.30ಕ್ಕೆ ಕಲ್ಯಾಣಿಗೆ ಹೋಗಿ ಪೂಜೆ ಸಲ್ಲಿಸಲಾಯಿತು. ಅಲ್ಲಿಂದ ವಾಪಸ್ ಬಂದು ಧರ್ಮರಾಯ ದೇವಸ್ಥಾನದಲ್ಲಿ ಪೂಜೆ ಮಾಡಲಾಯಿತು. ರಥೋತ್ಸವದ ಬಳಿಕ ಭಕ್ತರ ಗೋವಿಂದ… ಗೋವಿಂದ… ಎಂಬ ಘೋಷಣೆಗಳ ನಡುವೆ ಅರ್ಚಕ ಜ್ಞಾನೇಂದ್ರ ಅವರು ಕರಗ ಹೊತ್ತು ಸಾಗಿದರು.

ಮುಖ್ಯ ರಥ ಧರ್ಮರಾಯಸ್ವಾಮಿ ರಥದಲ್ಲಿ ಅರ್ಜುನ‌ ಮತ್ತು ದ್ರೌಪದಿ ದೇವಿ ವಿರಾಜಮಾನರಾಗಿದ್ದರು. ಚಿಕ್ಕ ರಥದಲ್ಲಿ ಗ್ರಾಮದೇವಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು. ಪಾಂಡವರ ಮೂರ್ತಿಗಳು ಸೇರಿ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಲ್ಲಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ರಥಗಳು ಮುಂದೆ ಸಾಗುತ್ತಿದ್ದಂತೆ ದೇಗುಲದಿಂದ ದ್ರೌಪದಿ ದೇವಿ ಕರಗ ಹೊರಬಂದಿತು.

ಕರಗ ಸಾಗುವ ರಾಜಬೀದಿಗಳೆಲ್ಲಾ ಬಣ್ಣ ಬಣ್ಣದ ಲೈಟಿಂಗ್‌ ಹಾಗೂ ಜನರಿಂದ ಕಂಗೊಳಿಸಿದವು. ಸಾಂಪ್ರದಾಯಿಕವಾಗಿ ಎ. ಜ್ಞಾನೇಂದ್ರ 14ನೇ ಬಾರಿ ಕರಗ ಹೊತ್ತರು. ಒಂದು ರಥದಲ್ಲಿ ಮುತ್ಯಾಲಮ್ಮ ಮೂರ್ತಿ ಪ್ರತಿಷ್ಠಾಪನೆಯಾಗಿದ್ದು, ಪಾಂಡವರ ಮೂರ್ತಿಗಳು ಸೇರಿದಂತೆ ಒಟ್ಟು ಒಂಬತ್ತು ಮೂರ್ತಿಗಳಿಗೆ ವೀರಕುಮಾರರಿಂದ ಪೂಜೆ ಸಂದಿತು. ಪೂಜೆ ನಂತರ ಮತ್ತೊಂದು ರಥದಲ್ಲಿ ದ್ರೌಪದಿ ಮತ್ತು ಅರ್ಜುನ ಮೂರ್ತಿ ಪ್ರತಿಷ್ಠಾಪನೆಯಾಯಿತು. ನಂತರ ರಥಗಳ ಮೆರವಣಿಗೆ ಆರಂಭವಾಯಿತು. ಖಡ್ಗಗಳನ್ನು ಹಿಡಿದು ನೂರಾರು ವೀರಕುಮಾರರು ಮೆರವಣಿಗೆಯಲ್ಲಿ ತೆರಳಿದರು. ರಥಗಳು ಮುಂದೆ ಸಾಗುತ್ತಿದ್ದಂತೆ ದ್ರೌಪದಿ ದೇವಿ ಕರಗ ದೇಗುಲದಿಂದ ಹೊರ ಬಂದಿದ್ದು, ಅದನ್ನು ಕಂಡು ಭಕ್ತರು ಹರ್ಷೋದ್ಗಾರ ಮಾಡಿದರು.

ಸಂಪ್ರದಾಯದಂತೆ ಹಜರತ್ ತವಕಲ್ ಮಸ್ತಾನ್ ಷಾ ದರ್ಗಕ್ಕೆ ಕರಗ ಭೇಟಿ ನೀಡಿತು. ಹಜರತ್ ತವಕಲ್‌ ಮಸ್ತಾನ್ ಷಾನಲ್ಲಿ ಕರಗದ ಆಗಮನಕ್ಕಾಗಿ ಸಕಲ‌ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ವಿದ್ಯುತ್ ದೀಪಗಳಿಂದ ಕಂಗೊಳಿಸಿತು. ದರ್ಗದಲ್ಲಿ ಕರಗಕ್ಕೆ ‌ಪೂಜೆ ಸಲ್ಲಿಸಲಾಗಿದ್ದು, ನಂತರ ದರ್ಗಾವನ್ನು ಪ್ರದಕ್ಷಿಣೆ ಮಾಡಿ ಅಣ್ಣಮ್ಮ ದೇವಸ್ಥಾನದತ್ತ ತೆರಳಿತು. ಒಟ್ಟು 11-12 ಕಿಲೋಮೀಟರ್ ಕರಗದ ಮೆರವಣಿಗೆ ಸಾಗಿದೆ.

ಕರಗ ಮೆರವಣಿಗೆ ಮಾರ್ಗ

ರಥೋತ್ಸವದ ನಂತರ ಮಧ್ಯರಾತ್ರಿ 1 ಗಂಟೆಯಿಂದ ಕರಗ ಮಹೋತ್ಸವದ ಮೆರವಣಿಗೆ ಸಾಗಿತು. ನಗರ್ತಪೇಟೆಯ ಧರ್ಮರಾಯಸ್ವಾಮಿ ದೇವಸ್ಥಾನದಿಂದ ಕರಗ ಮೆರವಣಿಗೆ ಆರಂಭವಾಗಿ ಕಬ್ಬನ್​ಪೇಟೆ, ಗಾಣಿಗರಪೇಟೆ, ಅವೆನ್ಯೂ ರಸ್ತೆ ಮೂಲಕ ಸಾಗಿ ನಂತರ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇಗುಲಕ್ಕೆ ತೆರಳಿತು. ಬಳಿಕ ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ರಾಣಾಸಿಂಗ್​ಪೇಟೆ, ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ, ಮಸ್ತಾನ್ ಸಾಹೇಬ್ ದರ್ಗಾ, ಬಳೆಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್​ಪಿ ರಸ್ತೆ ಮೂಲಕ ಸಾಗಿ ಅಣ್ಣಮ್ಮ ದೇಗುಲಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸಾಯಿತು. ಬೆಳಗ್ಗೆ 5.45 ಗಂಟೆಗೆ ಧರ್ಮರಾಯಸ್ವಾಮಿ ದೇವಾಲಯ ಸೇರಿತು. ಬೆಳಗ್ಗೆ 8 ಗಂಟೆಗೆ ತಾಯಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ಕರಗಕ್ಕೆ ತೆರೆ ಬೀಳಲಿದೆ.

ಇದನ್ನೂ ಓದಿ | Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Continue Reading

ಬೆಂಗಳೂರು

Bengaluru Karaga 2024: ಬೆಂಗಳೂರು ಕರಗ ಶಕ್ತ್ಸೋತ್ಸವಕ್ಕೆ ಕೌಂಟ್‌ ಡೌನ್‌; 8 ಲಕ್ಷ ಜನ ಭಾಗಿ!

Bengaluru Karaga 2024 : ಚೈತ್ರ ಹುಣ್ಣಿಮೆಯ ದಿನದಂದು ನಡೆಯುವ ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಕ್ಷಣ ಗಣನೆ ಶುರುವಾಗಿದೆ. ಸೋಮವಾರ ಮಧ್ಯರಾತ್ರಿ ಪೊಂಗಲ್‌ ಸೇವೆ ನೆರವೇರಿದ್ದು, ಮಂಗಳವಾರ ಮಧ್ಯರಾತ್ರಿ 12:30ರ ಸುಮಾರಿಗೆ ಕರಗ ಮೆರವಣಿಗೆ ನಡೆಯಲಿದೆ.

VISTARANEWS.COM


on

By

Bengaluru Karaga 2024
Koo

ಬೆಂಗಳೂರು: ರಾಜಧಾನಿಯ ಪಾರಂಪರಿಕ ಹಾಗೂ ಐತಿಹಾಸಿಕ ಹಿನ್ನೆಲೆ ಹೊಂದಿರುವ ಬೆಂಗಳೂರು ಕರಗ ಉತ್ಸವ ಚೈತ್ರ ಮಾಸದ ಹುಣ್ಣಿಮೆಯಂದು ಮಂಗಳವಾರ ರಾತ್ರಿ ವೈಭವದಿಂದ (Bengaluru Karaga 2024) ನಡೆಯಲಿದೆ. ಮಲ್ಲಿಗೆಯಿಂದ ಅಲಂಕೃತಗೊಂಡ ಕರಗ ನೋಡಲು ಭಕ್ತರು ಕಾತುರದಿಂದ ಕಾಯುತ್ತಿದ್ದಾರೆ. ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜಧಾನಿ ಹಾಗೂ ಸುತ್ತಮುತ್ತಲ ಜಿಲ್ಲೆಗಳಿಂದ ಆರು ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಈಗಾಗಲೇ ತಿಗಳರಪೇಟೆ, ಚಿಕ್ಕಪೇಟೆ, ಕಾರ್ಪೋರೇಷನ್‌ ಸೇರಿದಂತೆ ಹಳೇ ಬೆಂಗಳೂರು ಪ್ರದೇಶವೆಲ್ಲವೂ ಸಿಂಗಾರಗೊಂಡಿದೆ. ಏ.23ರ ಚೈತ್ರ ಹುಣ್ಣಿಮೆಯ ದಿನದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ಮಹಾರಥೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಕರಗ ಹೊರುವ ಪೂಜಾರಿ ಜ್ಞಾನೇಂದ್ರ ಮಂಗಳವಾರ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಇಂದು ಮಧ್ಯರಾತ್ರಿ 12:30ಕ್ಕೆ ಪೂಜಾ ಕೈಂಕರ್ಯಗಳು ಹಾಗೂ ಕಣ ಪೂಜೆ ಬಳಿಕ ಧರ್ಮರಾಯಸ್ವಾಮಿ ದೇಗುಲದಿಂದ ಹೊರಡುವ ಕರಗ ರಾಜಬೀದಿಗಳಲ್ಲಿ ಸಂಚಾರಿಸಲಿದೆ.

ಕರಗ ಸಾಗುವ ಮಾರ್ಗ ಹೀಗಿದೆ..

ಮೊದಲಿಗೆ ಧರ್ಮರಾಯ ಸ್ವಾಮಿ ದೇವಸ್ಥಾನ ಪ್ರದಕ್ಷಿಣೆ ಹಾಕಿ ದ್ರೌಪದಮ್ಮ ಕರಗ ಹೊರಡಲಿದೆ. ಕುಂಬಾರಪೇಟೆ ರಸ್ತೆ ಮೂಲಕ ಸಾಗಿ ಕೆ.ಆರ್‌.ಮಾರುಕಟ್ಟೆ ನಂತರ ಕೋಟೆ ಆಂಜನೇಯ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸ್ವೀಕರಿಸಲಿದೆ. ಕೆ.ಆರ್‌. ಮಾರುಕಟ್ಟೆ ವೃತ್ತಕ್ಕೆ ವಾಪಾಸಾಗಿ ಕಾಟನ್‌ಪೇಟೆ ಪೊಲೀಸ್‌ ಠಾಣೆ ರಸ್ತೆಯಲ್ಲಿ ತೆರಳಿ, ಅಲ್ಲಿನ ಮಸ್ತಾನ್‌ಸಾಬ್‌ ದರ್ಗಾಕ್ಕೆ ತೆರಳಿ ಪೂಜೆ ಸ್ವೀಕರಿಸಿ, ಬಳೇಪೇಟೆ ವೃತ್ತದ ಮೂಲಕ ಅಣ್ಣಮ್ಮ ದೇವಿ ದೇವಸ್ಥಾನಕ್ಕೆ ಹೋಗಿ ಧರ್ಮರಾಯ ಸ್ವಾಮಿ ದೇವಸ್ಥಾನಕ್ಕೆ ವಾಪಸ್‌ ಮರಳಲಿದೆ.

ಮಸ್ತಾನ್ ಸಾಬ್ ದರ್ಗಾದಲ್ಲಿ ಕರಗ ವೈಭವ

ಸಂಪ್ರದಾಯದಂತೆ ಬೆಂಗಳೂರು ಕರಗವು ಅಕ್ಕಿಪೇಟೆಯಲ್ಲಿರುವ ಮಸ್ತಾನ್ ಸಾಬ್ ದರ್ಗಾಕ್ಕೆ ಹೋಗಿ ಬರಲಿದ್ದು, ಧಾರ್ಮಿಕ ಭಾವೈಕ್ಯತೆಗೆ ಸಾಕ್ಷಿಯಾಗಲಿದೆ. ಮುಸ್ಲಿಂ ಭಾಂದವರು ಸಹ ದರ್ಗಾದ ಧಾರ್ಮಿಕ ಸಂಪ್ರದಾಯದಂತೆ ಕರಗಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಇದನ್ನು ಫಾತಿಯಾ ಎಂದು ಕರೆಯಲಾಗುತ್ತದೆ. ಕರಗದ ಮೆರವಣಿಗೆ ಗಣಪತಿ ದೇವಸ್ಥಾನದಲ್ಲಿ ಮೊದಲ ಪೂಜೆ, ಗ್ರಾಮ ದೇವತೆ ಮುತ್ಯಾಲಮ್ಮನಿಗೆ ಎರಡನೇ ನಮಸ್ಕಾರ ಸಲ್ಲಿಸಿ ಇಲ್ಲಿಂದ ರಾಜಬೀದಿಗಳಲ್ಲಿ ಸಂಚಾರಿಸಿ, ನಂತರ ನಗರ ದೇವತೆ ಅಣ್ಣಮ್ಮ ದೇವಸ್ಥಾನಕ್ಕೆ ಹೋಗಿ ವಾಪಸ್‌ ಧರ್ಮರಾಯಸ್ವಾಮಿ ದೇವಸ್ಥಾನಕ್ಕೆ ಬರಲಿದೆ.

13ನೇ ಬಾರಿ ಕರಗ ಹೊರುತ್ತಿರುವ ಜ್ಞಾನೇಂದ್ರ

ಏಪ್ರಿಲ್ 15ರಿಂದ ಕರಗ ಮಹೋತ್ಸವ ಶುರುವಾಗಿದ್ದು, ಏ. 23 ರಂದು ಕೊನೆಗೊಳ್ಳಲಿದೆ. ಈ ಬಾರಿಯೂ ಕರಗವನ್ನು ಕರಗದ ಪೂಜಾರಿ ಎ. ಜ್ಞಾನೇಂದ್ರ ಹೊರಲಿದ್ದಾರೆ. ಈ ಮೂಲಕ ಜ್ಞಾನೇಂದ್ರ 13ನೇ ಬೆಂಗಳೂರು ಕರಗ ಹೊರುತ್ತಿದ್ದಾರೆ. ಇನ್ನೂ ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕಿಡಿಗೇಡಿಗಳು ಕರಗದ ಪೂಜಾರಿ ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿದ್ದರು. ಆ ಮೂಲಕ ಕರಗ ಮಹೋತ್ಸವಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು. ಆದರೂ ಕರಗದ ಪೂಜಾರಿ ಜ್ಞಾನೇಂದ್ರ ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿಯಲ್ಲಿ ಉತ್ಸವ ಮುಗಿಸಿದರು. ಹಿಂದಿನ ಘಟನೆಯನ್ನು ಮರುಕಳಿಸಬಾರೆಂದು ಈ ಬಾರಿ ಹೆಚ್ಚಿನ ಭದ್ರತೆಯನ್ನು ನೀಡಲಾಗಿದೆ.

ಕರಗ ಮಹೋತ್ಸವ ಹಿನ್ನೆಲೆ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವ (Bengaluru Karaga 2024) ಹಿನ್ನೆಲೆಯಲ್ಲಿ ಏ.23ರಂದು ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ. ಹಲಸೂರು ಗೇಟ್, ಎಸ್ಆರ್ ನಗರ, ವಿಲ್ಸನ್ ಗಾರ್ಡನ್, ಎಸ್‌ಜೆ ಪಾರ್ಕ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಆಯುಕ್ತ ದಯಾನಂದ ಆದೇಶ ಹೊರಡಿಸಿದ್ದಾರೆ. ಬೆಂಗಳೂರು ಕರಗ ಮಹೋತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗುತ್ತಾರೆ. ಈ ವೇಳೆ ಕೆಲವು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗುವ ಸಾಧ್ಯತೆ ಇದೆ. ಇದು ಸಾರ್ವಜನಿಕರ ಶಾಂತಿಗೆ‌ ಭಂಗ ಉಂಟು ಮಾಡುವ ಸಂಭವವಿದೆ.

ಹೀಗಾಗಿ ಮುನ್ನೆಚ್ಚರಿಕೆ ಸಲುವಾಗಿ ಏ.23ರ ಬೆಳಗ್ಗೆ 6ಗಂಟೆಯಿಂದ ಮರುದಿನ 24ರ ಬೆಳಗ್ಗೆ 10ರವರೆಗೆ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ನಾಲ್ಕು ಠಾಣಾ ವ್ಯಾಪ್ತಿಯ ಬಾರ್ ರೆಸ್ಟೋರೆಂಟ್, ಮದ್ಯದ ಅಂಗಡಿಗಳು, ವೈನ್ ಶಾಪ್,‌ ಪಬ್‌ಗಳನ್ನು ಮುಚ್ಚಲು ಆದೇಶಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ.

ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ (Bengaluru Karaga Festival) ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Traffic restriction) ಹೇರಲಾಗಿದ್ದು, ಪರ್ಯಾಯ (Alternate roads) ರಸ್ತೆಗಳಲ್ಲಿ ಸಾಗುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು (Bangalore traffic police) ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ರಾಫಿಕ್‌ ಪೊಲೀಸರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ: ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂದು ತಿಳಿಸಿದೆ.

ಮೆರವಣಿಗೆ ಸಾಗುವ ಮಾರ್ಗ

ಮೆರವಣಿಗೆಯು ನಗರ್ತಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭಗೊಂಡು ಕಬ್ಬನ್‌ಪೇಟೆ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ ಮೂಲಕ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಬಂದು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ಮೂಲಕ ರಾಣಾಸಿಂಗ್ ಪೇಟೆ,‌ ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ , ಮಸ್ತಾನ್ ಸಾಹೇಬ್ ದರ್ಗಾ, ಬಳೇಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್.ಪಿ.ರಸ್ತೆ ಮೂಲಕ ಅಣ್ಣಮ್ಮ ದೇವಾಲಯಕ್ಕೆ ಬರುತ್ತದೆ. ಪುನಃ ಅದೇ ಮಾರ್ಗವಾಗಿ ಸಂಚರಿಸಿ, ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ , ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್‌ಪೇಟೆ ಮೂಲಕ ದಿ: 24/04/2024 ರಂದು ಬೆಳಗ್ಗೆ 6-00 ಘಂಟೆಗೆ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಸೇರುತ್ತದೆ.

ಸಂಚಾರ ನಿರ್ಬಂಧಿಸಲಾದ ರಸ್ತೆಗಳು

ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ವೃತ್ತದವರೆಗೆ ಎಲ್ಲ ಮಾದರಿಯ ವಾಹನ ಸಂಚಾರ ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆ ಅವೆನ್ಯೂ ರಸ್ತೆ ಪ್ರವೇಶಿಸುತ್ತಿದ್ದಂತೆ, ಎ.ಎಸ್.ಚಾರ್ ರಸ್ತೆಯಿಂದ ಸಿಟಿ ಮಾರುಕಟ್ಟೆ ವೃತ್ತದ ಕಡೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಎಸ್.ಜೆ.ಪಿ ರಸ್ತೆಯಿಂದ ಎನ್.ಆರ್ ವೃತ್ತದ ಕಡೆಗೆ ಹೋಗಲು ಪಿ.ಕೆ. ಲೇನ್ ಬಳಿ ಎಡ ತಿರುವು ಪಡೆಯುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆಯು ಅವೆನ್ಯೂ ರಸ್ತೆಯನ್ನು ಪ್ರವೇಶಿಸುತ್ತಿದಂತೆ ಮೆಡಿಕಲ್ ಕಾಲೇಜು
ಕಡೆಯಿಂದ ಮಾರ್ಕೆಟ್ ವೃತ್ತದ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ. ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಎಸ್‌ಜೆಪಿ ರಸ್ತೆ -ಟೌನ್‌ಹಾಲ್, ಕೆಂಪೇಗೌಡ ರಸ್ತೆ ಮಾರ್ಗವಾಗಿ ತೆರಳಬಹುದು. ಮೈಸೂರು ರಸ್ತೆಯ ಎ.ಎಸ್.ಎಚ್ ರಸ್ತೆಯಲ್ಲಿ ಬಲ ತಿರುವು ರಾಯನ್ ವೃತ್ತದ‌ ಮೂಲಕ ಸಂಚರಿಸಬಹುದು. ಚಾಮರಾಜಪೇಟೆ ಕಡೆಯಿಂದ ಬರುವ ವಾಹನಗಳು ಪ್ರೊ. ಶಿವಶಂಕರ ವೃತ್ತದ ಮೂಲಕ ಜೆ.ಸಿ ರಸ್ತೆಯನ್ನು ಪ್ರವೇಶಿಸಿ ಟೌನ್‌ಹಾಲ್ ಕಡೆಗೆ ಸಂಚರಿಸಬಹುದು.

ವಾಹನಗಳ ಪಾರ್ಕಿಂಗ್ ಸ್ಥಳಗಳು

ಕರಗ ಉತ್ಸವಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಬನ್ನಪ್ಪ ಪಾರ್ಕ್ ಹಾಗೂ‌ ಪುರಭವನ, ಬಿ.ಬಿ.ಎಂ.ಪಿ ಮಾರ್ಕೆಟ್ ಕಾಂಪ್ಲೆಕ್ಸ್, ಇಲ್ಲಿ ನಿಲುಗಡೆ ಮಾಡಬಹುದಾಗಿರುತ್ತದೆ.

ಪಾರ್ಕಿಂಗ್ ನಿರ್ಬಂಧಿಸಲಾದ ಸ್ಥಳಗಳು

ಪಿ.ಕೆ ಲೈನ್, ಓ.ಟಿ.ಸಿ ರಸ್ತೆ, ಎಸ್ಪಿ ರಸ್ತೆ , ಕಬ್ಬನ್‌ಪೇಟೆ ರಸ್ತೆ, ಸುಣ್ಣಕಲ್ ಪೇಟೆ ರಸ್ತೆ, ಎಸ್.ಜೆ.ಪಿ. ಸಿಟಿ ಮಾರ್ಕೆಟ್ ಸರ್ಕಲ್, ಎಸ್.ಜೆ.ಪಿ ರಸ್ತೆ, ಅವೆನ್ಯೂ ರಸ್ತೆ , ಎ.ಎಸ್.ಚಾರ್ ಸ್ಟ್ರೀಟ್ ನಿಂದ ಮಾರ್ಕೆಟ್ ಸರ್ಕಲ್‌ವರೆಗೆ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಲೈಫ್‌ಸ್ಟೈಲ್

Vastu Tips: ಸುಖ, ಶಾಂತಿ, ಸಮೃದ್ಧಿಗಾಗಿ ಹೀಗಿರಲಿ ಮನೆಯ ಕಿಟಕಿ, ಬಾಗಿಲು

Vastu Tips: ನಮ್ಮ ಪೂರ್ವಜರು ಕೂಡ ಮನೆಯ ಪ್ರತಿಯೊಂದು ಭಾಗವನ್ನು ವಾಸ್ತುವಿನ ದೃಷ್ಟಿಕೋನದಿಂದಲೇ ನೋಡುತ್ತಿದ್ದರು. ಕ್ರಮೇಣ ನಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿದೆವು. ಆದರೆ ಈಗ ಮತ್ತೆ ವಾಸ್ತುವಿಗೆ (Vastu Tips) ಪ್ರಾಮುಖ್ಯತೆ ಹೆಚ್ಚಾಗುತ್ತಿದೆ. ಮನೆಗೆ ಕಿಟಕಿ ಬಾಗಿಲು ಅಳವಡಿಸುವುದಕ್ಕೂ ವಾಸ್ತು ಪಾಲನೆ ಮಾಡುವುದು ಮುಖ್ಯ. ಇದರಿಂದ ಮನೆಯೊಳಗೆ ಧನಾತ್ಮಕ ಶಕ್ತಿ ವೃದ್ಧಿಯಾಗಿಸಬಹುದು.

VISTARANEWS.COM


on

By

Vastu Tips
Koo

ಮನೆಯೊಳಗೆ (home) ಸುಖ, ಶಾಂತಿ, ನೆಮ್ಮದಿ ಇರಬೇಕಾದರೆ ಧನಾತ್ಮಕ ಶಕ್ತಿ (Positive energy) ವೃದ್ಧಿಸಿಕೊಳ್ಳುವುದು ಬಹು ಮುಖ್ಯ. ಇದಕ್ಕಾಗಿ ವಾಸ್ತು ಅಂಶಗಳನ್ನು ನಾವು ಪರಿಗಣಿಸಿಬೇಕು. ನಮ್ಮ ಪೂರ್ವಜರು ಕೂಡ ಮನೆಯ ಪ್ರತಿಯೊಂದು ಭಾಗವನ್ನು ವಾಸ್ತುವಿನ ದೃಷ್ಟಿಕೋನದಿಂದಲೇ ನೋಡುತ್ತಿದ್ದರು. ಕ್ರಮೇಣ ನಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾಯಿಸಿದೆವು. ಆದರೆ ಈಗ ಮತ್ತೆ ವಾಸ್ತುವಿಗೆ (Vastu Tips) ಪ್ರಾಮುಖ್ಯತೆ ಹೆಚ್ಚಾಗುತ್ತಿದೆ.

ಮನೆಯಾದ್ಯಂತ ಧನಾತ್ಮಕ ಶಕ್ತಿಯನ್ನು ವೃದಿಸುವುದು ಸುಲಭವಲ್ಲ. ವಾಸ್ತು ಪ್ರಕಾರ ಮನೆಗೆ ಬಾಗಿಲು (door) ಮತ್ತು ಕಿಟಕಿಗಳನ್ನು (window) ಅಳವಡಿಸಿದರೆ ಮನೆಯೊಳಗೆ ಧನಾತ್ಮಕ ಶಕ್ತಿಯನ್ನು ವೃದ್ಧಿಸಿಕೊಳ್ಳಬಹುದು.

ವಾಸ್ತು ಪ್ರಕಾರ ಬಾಗಿಲು ಮತ್ತು ಕಿಟಕಿಗಳನ್ನು ಅಳವಡಿಸಿದರೆ ಮುಚ್ಚಿರುವ ಜಾಗದಲ್ಲೂ ಧನಾತ್ಮಕ ಶಕ್ತಿ ಪುನರುತ್ಪಾದನೆಯಾಗುತ್ತದೆ. ಈ ಬಾಗಿಲು ಮತ್ತು ಕಿಟಕಿಗಳ ಮೂಲಕ ಶಕ್ತಿಗಳು ಮನೆಯ ಒಳ ಮತ್ತು ಹೊರಗೆ ಹರಿಯುತ್ತವೆ. ಆರೋಗ್ಯಕರ ಮತ್ತು ಶ್ರೀಮಂತ ಜೀವನಶೈಲಿಯ ವೃದ್ಧಿಗಾಗಿ ಇವುಗಳನ್ನು ಇಡಲು ನಿರ್ದಿಷ್ಟ ಜಾಗಗಳಿವೆ ಎನ್ನುತ್ತಾರೆ ತಜ್ಞರು.

ಇದನ್ನೂ ಓದಿ: Vastu Tips: ನಿಮ್ಮ ಮನೆಯಲ್ಲಿ ಸಂತೋಷ ವೃದ್ಧಿಸಬೇಕೆ? ಈ ಸಲಹೆಗಳನ್ನು ಪಾಲಿಸಿ

ಬಾಗಿಲು, ಕಿಟಕಿಗಳಿಗೆ ವಾಸ್ತು ಪಾಲನೆ ಯಾಕೆ?

ಮನೆ ನಿರ್ಮಿಸಲು ಉತ್ಸುಕರಾಗಿರುವ ಮನೆ ಮಾಲೀಕರು ಹಲವಾರು ಕಾರಣಗಳಿಗಾಗಿ ಬಾಗಿಲು ಮತ್ತು ಕಿಟಕಿಗಳನ್ನು ಇಡುವ ಸ್ಥಾನ, ದಿಕ್ಕು ಮತ್ತು ಬಳಸುವ ವಸ್ತುಗಳ ಬಗ್ಗೆ ವಿಶೇಷ ಗಮನವನ್ನು ನೀಡಬೇಕು. ಅವು ಗಾಳಿ ಮತ್ತು ಸೂರ್ಯನ ಬೆಳಕಿಗೆ ಪೂರಕವಾಗಿದೆಯೇ ಎಂಬುದನ್ನು ನೋಡಿಕೊಳ್ಳಬೇಕು. ಇದರಿಂದಲೇ ಮನೆಯೊಳಗೇ ಧನಾತ್ಮಕ ಶಕ್ತಿ ವೃದ್ಧಿಯಾಗುತ್ತದೆ ಮತ್ತು ನಕಾರಾತ್ಮಕ ಶಕ್ತಿ ಮನೆಯೊಳಗೆ ಪ್ರವೇಶಿಸುವುದನ್ನು ತಡೆಯುತ್ತದೆ.
ಹೊಸ ಮನೆಯನ್ನು ನಿರ್ಮಿಸುತ್ತಿದ್ದರೆ ಅಥವಾ ಹಳೆ ಮನೆಯನ್ನು ನವೀಕರಿಸುತ್ತಿದ್ದರೆ ಬಾಗಿಲು ಮತ್ತು ಕಿಟಕಿಗಳ ವಾಸ್ತು ಬಗ್ಗೆ ತಿಳಿದುಕೊಳ್ಳಿ.


ಸರಿಯಾದ ಮುಖ್ಯ ಬಾಗಿಲು

ಮನೆಯ ಮುಖ್ಯ ಬಾಗಿಲು ದೊಡ್ಡ ಬಾಗಿಲಾಗಿರಬೇಕು. ಉತ್ತರ, ಪೂರ್ವ ಅಥವಾ ಈಶಾನ್ಯ ದಿಕ್ಕಿನಲ್ಲಿ ಇಡಬೇಕು. ಒಳಗೆ ತೆರೆದುಕೊಳ್ಳುವ ಎರಡು ಕವಾಟದ ಬಾಗಿಲು ಮಂಗಳಕರ. ಪ್ರಕಾಶಮಾನವಾದ ದೀಪಗಳು ಮತ್ತು ಉತ್ತಮ ಬಣ್ಣಗಳೊಂದಿಗೆ ಮುಖ್ಯ ಬಾಗಿಲಿನ ಮೇಲೆ ಸುಂದರವಾದ ವಿನ್ಯಾಸಗಳನ್ನು ಅಳವಡಿಸಿಕೊಳ್ಳಿ. ನೀರಸವಾದ ಮುಖ್ಯ ಬಾಗಿಲು ಮನೆಗೆ ಶೋಭೆಯಲ್ಲ.

ಬಾಗಿಲುಗಳ ಸರಿಯಾದ ಸಂಖ್ಯೆ

ಸಕಾರಾತ್ಮಕತೆಯು ಸಹ ಸಮ ಸಂಖ್ಯೆಗಳಲ್ಲಿ ಬರುತ್ತದೆ. ಮನೆಯಲ್ಲಿ ಬಾಗಿಲು ಮತ್ತು ಕಿಟಕಿಗಳ ಸಂಖ್ಯೆ ಯಾವಾಗಲೂ ಸಮವಾಗಿರಬೇಕು. ಎರಡು, ನಾಲ್ಕು, ಆರು ಹೀಗೆ ಎರಡರ ಗುಣಕಗಳಲ್ಲಿರಬೇಕು ಎನ್ನುತ್ತಾರೆ ವಾಸ್ತು ತಜ್ಞರು.


ಬಾಗಿಲಿನ ಗಾತ್ರದಲ್ಲಿ ಸ್ಥಿರತೆ

ಮುಂಭಾಗದ ಬಾಗಿಲನ್ನು ಹೊರತುಪಡಿಸಿ ಮನೆಯಲ್ಲಿ ಎಲ್ಲಾ ಆಂತರಿಕ ಬಾಗಿಲುಗಳ ಗಾತ್ರದಲ್ಲಿ ಒಂದೇ ಆಗಿರಬೇಕು. ವಿಭಿನ್ನ ಬಾಗಿಲು ಗಾತ್ರಗಳು ಮನೆಗೆ ಒಳ್ಳೆಯದಲ್ಲ. ಎದ್ದು ಕಾಣಬೇಕಾದ ಏಕೈಕ ಬಾಗಿಲು ಮುಖ್ಯ ಬಾಗಿಲು. ಮನೆಯೊಳಗೆ ಕೆಲವು ಬಾಗಿಲುಗಳನ್ನು ದೊಡ್ಡದಾಗಿ ಮಾಡಲು ಬಯಸಿದರೆ ಅವುಗಳನ್ನು ಉತ್ತರ ಅಥವಾ ಪೂರ್ವಕ್ಕೆ ಬದಲಾಗಿ ದಕ್ಷಿಣ ಅಥವಾ ಪಶ್ಚಿಮ ದಿಕ್ಕಿನಲ್ಲಿ ಇರಿಸಬೇಕು.

ದೋಷರಹಿತವಾಗಿರಲಿ ಮನೆ ಬಾಗಿಲು

ಮನೆಯಲ್ಲಿ ಬಾಗಿಲುಗಳ ಕಾರ್ಯವಿಧಾನದ ವಿಷಯಕ್ಕೆ ಬಂದರೆ ಬಾಗಿಲು ತೆರೆಯುವಾಗ ಅಥವಾ ಮುಚ್ಚುವಾಗ ಕೀಲು ಬಾಗಿಲುಗಳನ್ನು ಹಾಕುವುದು ಉತ್ತಮ. ಮನೆಯಲ್ಲಿ ಬಾಗಿಲುಗಳು ಮತ್ತು ಕಿಟಕಿಗಳೊಂದಿಗೆ ಹೆಚ್ಚು ಜಗಳಗಳು ಇರುತ್ತದೆ. ಸ್ಮೂತ್ ಕೀಲುಗಳು ಮನೆಯಲ್ಲಿ ಉತ್ತಮ ಸಂಬಂಧಗಳನ್ನು ಪ್ರತಿಬಿಂಬಿಸುತ್ತವೆ. ಸ್ವಯಂ-ಮುಚ್ಚುವ ಬಾಗಿಲುಗಳನ್ನು ತಪ್ಪಿಸುವುದು ಒಳ್ಳೆಯದು.

ಕಿಟಕಿಗಳು

ಎಲ್ಲಾ ಕಿಟಕಿಗಳು ಸರಿಯಾದ ಆಕಾರ ಮತ್ತು ಸಮವಾದ ಎತ್ತರವನ್ನು ಹೊಂದಿರಬೇಕು. ಕಿಟಕಿಗಳು ತಾಜಾ ಗಾಳಿ ಮತ್ತು ಸೂರ್ಯನ ಬೆಳಕಿನ ಮೂಲವಾಗಿರುತ್ತದೆ. ಅವುಗಳಿಗೆ ಯಾವಾಗಲೂ ಎದುರು ಬಾಗಿಲುಗಳನ್ನು ಇಡಬೇಕು. ಮನೆಯಲ್ಲಿ ಗರಿಷ್ಠ ವಾತಾಯನವಿದೆ ಎಂದು ಇದು ಖಚಿತಪಡಿಸುತ್ತದೆ. ಮನೆಯಲ್ಲಿರುವ ಕಿಟಕಿಗಳ ಸಂಖ್ಯೆಯೂ ಸಮ ಸಂಖ್ಯೆಯಲ್ಲಿರಬೇಕು. ಕಿಟಕಿಗಳಿಗೆ ಸಾಮಾನ್ಯವಾಗಿ ನೈಋತ್ಯ ದಿಕ್ಕನ್ನು ತಪ್ಪಿಸಿ. ಉತ್ತರ, ಪೂರ್ವ ಅಥವಾ ಈಶಾನ್ಯ ದಿಕ್ಕಿನಲ್ಲಿ ಕಿಟಕಿಗಳು ದೊಡ್ಡದಾಗಿದ್ದರೆ ಉತ್ತಮ. ಉತ್ತರವು ಸಮೃದ್ಧಿಯನ್ನು ತರುತ್ತದೆ ಆದರೆ ಪೂರ್ವವು ಪ್ರಗತಿ ಮತ್ತು ಆರೋಗ್ಯವನ್ನು ತರುತ್ತದೆ.

ಬಾಗಿಲಿಗೆ ಬಳಸುವ ವಸ್ತುಗಳು

ಬಾಗಿಲುಗಳಿಗೆ ವಸ್ತುಗಳನ್ನು ಎಚ್ಚರಿಕೆಯಿಂದ ಆರಿಸುವುದು ಮುಖ್ಯ. ಏಕೆಂದರೆ ಇದು ಎಷ್ಟು ಮಂಗಳಕರ ಎಂಬುದನ್ನು ನಿರ್ಧರಿಸುತ್ತದೆ. ಬಾಗಿಲುಗಳಿಗೆ ವಸ್ತುಗಳನ್ನು ಆಯ್ಕೆಮಾಡುವಾಗ ಮರದ ಬಾಗಿಲು ಯಾವಾಗಲೂ ಅತ್ಯುತ್ತಮ ಆಯ್ಕೆಯಾಗಿದೆ. ಇದಲ್ಲದೆ ಉತ್ತರ ದಿಕ್ಕಿನ ಬಾಗಿಲುಗಳಿಗೆ ಲೋಹ ಅಥವಾ ಕಬ್ಬಿಣದಂತಹ ಬೆಳ್ಳಿಯನ್ನು ಹೊಂದಿರುವ ಬಾಗಿಲುಗಳನ್ನು ಆಯ್ಕೆ ಮಾಡಿಕೊಳ್ಳಿ. ದಕ್ಷಿಣಕ್ಕೆ ಮರದ ಮತ್ತು ಲೋಹದ ಅಂಶಗಳನ್ನು ಹೊಂದಿರುವ ಬಾಗಿಲುಗಳು ಸೂಕ್ತವಾಗಿದೆ. ಪೂರ್ವ ದಿಕ್ಕಿಗೆ ಮರದಿಂದ ಮಾಡಿದ ಬಾಗಿಲು ಉತ್ತಮ. ಪಶ್ಚಿಮಕ್ಕೆ ಕಬ್ಬಿಣದಂತಹ ಲೋಹದಿಂದ ಪ್ರಧಾನವಾಗಿ ಮಾಡಿದ ಬಾಗಿಲನ್ನು ಆಯ್ಕೆ ಮಾಡಿಕೊಳ್ಳಿ.

ಬಾಗಿಲುಗಳು ಮತ್ತು ಕಿಟಕಿಗಳ ಬಣ್ಣ

ಗಾಢವಾದ ಬಣ್ಣಗಳು ಮನೆಯೊಳಗೆ ಹರ್ಷಚಿತ್ತ ಮತ್ತು ಶಕ್ತಿಯುತ ಮನಸ್ಥಿತಿಗೆ ಕಾರಣವಾಗುತ್ತವೆ. ಆದ್ದರಿಂದ ಮುಂಭಾಗದ ಬಾಗಿಲುಗಳಿಗೆ ಹಳದಿ ಮತ್ತು ನೀಲಿ ಬಣ್ಣಗಳನ್ನು ಆರಿಸಿ.

ಅಲಂಕಾರಿಕ ವಸ್ತುಗಳು

ಬಾಗಿಲಿನ ಮುಂದೆ ಹನುಮಾನ್ ಅಥವಾ ಗಣೇಶನ ವಿಗ್ರಹವನ್ನು ಇರಿಸುವುದರಿಂದ ದುಷ್ಟ ಶಕ್ತಿಗಳನ್ನು ದೂರವಿರಿಸಬಹುದು ಎಂದು ನಂಬಲಾಗಿದೆ. ಹಿತ್ತಾಳೆಯ ಬಟ್ಟಲಿನಲ್ಲಿ ನೀರನ್ನು ಇಟ್ಟುಕೊಳ್ಳುವುದು ಮನೆಯಲ್ಲಿ ನಕಾರಾತ್ಮಕತೆಯನ್ನು ತಡೆಯಲು ಸಹಾಯ ಮಾಡುತ್ತದೆ. ಅದೃಷ್ಟ ಮತ್ತು ಸಂಪತ್ತನ್ನು ಆಕರ್ಷಿಸಲು ಬುದ್ಧನ ಪ್ರತಿಮೆ ಅಥವಾ ಗಾಳಿಯ ಚೈಮ್ ಅನ್ನು ಪ್ರವೇಶದ್ವಾರದ ಬಳಿ ಇರಿಸಬಹುದು.


ವಾಸ್ತು ಪರಿಣಾಮ

ಉತ್ತರ ಅಥವಾ ಈಶಾನ್ಯ ದಿಕ್ಕಿನಲ್ಲಿ ಬಾಗಿಲು, ಕಿಟಕಿಗಳು ತಾಜಾ ಗಾಳಿ ಮತ್ತು ಬೆಳಿಗ್ಗೆ ಒಳ್ಳೆಯದು. ದಿನದ ಆರಂಭದಲ್ಲಿ ಇದು ಮನೆಯ ಶುದ್ಧೀಕರಣ ಪ್ರಕ್ರಿಯೆಯನ್ನು ನಡೆಸುತ್ತದೆ.

ದಕ್ಷಿಣ ದಿಕ್ಕು ಎಲ್ಲಾ ಉತ್ತಮ ಶಕ್ತಿಗಳ ಕೇಂದ್ರ ಎಂದು ಪರಿಗಣಿಸಲಾಗಿದೆ. ದಕ್ಷಿಣಕ್ಕೆ ಎದುರಾಗಿ ನಿಖರವಾಗಿ ಮತ್ತು ಮಧ್ಯದಲ್ಲಿ ಬಾಗಿಲು, ಕಿಟಕಿಗಳನ್ನು ಇರಿಸಿದರೆ ಮನೆಯೊಳಗೆ ಉತ್ತಮ ಶಕ್ತಿ ಸಂಚಾರವಾಗುತ್ತದೆ.

ಪೂರ್ವ ಎಲ್ಲಕ್ಕಿಂತ ಹೆಚ್ಚು ಶಕ್ತಿಶಾಲಿಯಾಗಿದೆ. ಇಲ್ಲಿ ಪ್ರವೇಶದ್ವಾರಗಳು ಸಮೃದ್ಧಿ, ಶಕ್ತಿ ಮತ್ತು ಸಂಪತ್ತನ್ನು ಆಕರ್ಷಿಸುತ್ತದೆ.

ಪಶ್ಚಿಮ ದಿಕ್ಕು ಸೂರ್ಯಾಸ್ತಮಾನವನ್ನು ಆನಂದಿಸುವ ಮನೆಮಾಲೀಕರಿಗೆ ಸೂಕ್ತವಾಗಿದೆ. ಈ ದಿಕ್ಕು ಸಂಪತ್ತು ಮತ್ತು ಸಮೃದ್ಧಿಯನ್ನು ಉತ್ತೇಜಿಸುತ್ತದೆ.

ಏನು ಮಾಡಬೇಕು?

ಮನೆಯ ಮುಖ್ಯ ಬಾಗಿಲು ಹೊಸ್ತಿಲನ್ನು ಹೊಂದಿರಬೇಕು. ಮನೆಗೆ ಸಂಪತ್ತನ್ನು ಆಕರ್ಷಿಸಲು ನಿರ್ದಿಷ್ಟ ಸಂಖ್ಯೆಯಲ್ಲಿ ಹೊಸ್ತಿಲಿನ ಎದುರು ಮೆಟ್ಟಿಲುಗಳನ್ನು ಇರಿಸಬೇಕು.

ಮುಖ್ಯ ಬಾಗಿಲು ಯಾವಾಗಲೂ ನೆಲದ ಮಟ್ಟಕ್ಕಿಂತ ಮೇಲಿರಬೇಕು. ಮಲಗುವ ಕೋಣೆಯ ಬಾಗಿಲುಗಳು ಮುಖ್ಯ ಬಾಗಿಲಿಗಿಂತ ಚಿಕ್ಕದಾಗಿರಬೇಕು. ಮುಖ್ಯ ಬಾಗಿಲನ್ನು ಮನೆಯಲ್ಲಿ ದೊಡ್ಡದಾಗಿಸಬೇಕು. ಎಲ್ಲಾ ಬಾಗಿಲುಗಳು ಪ್ರದಕ್ಷಿಣಾಕಾರವಾಗಿ ತೆರೆದಿರುವುದನ್ನು ಖಚಿತಪಡಿಸಿಕೊಳ್ಳಿ.


ಏನು ಮಾಡಬಾರದು?

ಮುಖ್ಯ ಬಾಗಿಲು ಮತ್ತು ನಿರ್ಗಮನ ಬಾಗಿಲು ಎದುರಾಗಿ ಇರಬಾರದು. ಮುಖ್ಯ ಬಾಗಿಲುಗಳು ಮನೆಯ ಆಯಾವನ್ನು ಬಿಟ್ಟು ಹೊರಗೆ ಇರಬಾರದು. ಮುಖ್ಯ ಬಾಗಿಲನ್ನು ಭೂಗತ ಟ್ಯಾಂಕ್ ಅಥವಾ ಸೆಪ್ಟಿಕ್ ಟ್ಯಾಂಕ್‌ಗಳ ಕೆಳಗೆ ಇಡುವುದನ್ನು ತಪ್ಪಿಸಿ.

ಮುಖ್ಯ ಬಾಗಿಲಿನ ಮುಂದೆ ಶೂ ಅಥವಾ ಕಸವನ್ನು ಇಡಬೇಡಿ. ಮುಖ್ಯ ಬಾಗಿಲಿನ ಮುಂಭಾಗದಲ್ಲಿ ಕಂಬ, ಮರ, ತಂತಿ ಸೇರಿದಂತೆ ಅಡೆತಡೆಗಳನ್ನು ತಪ್ಪಿಸಿ.

ಬಾಗಿಲು ಅಥವಾ ನಿರ್ಗಮನ ಬಾಗಿಲಿನ ಹೊರ ಭಾಗದಲ್ಲಿ ದೇವರ ಚಿತ್ರಗಳನ್ನು ಪ್ರದರ್ಶಿಸಬೇಡಿ. ಬಾಗಿಲಿನ ವಾಸ್ತು ಪ್ರಕಾರ ಇದು ದುಃಖಕ್ಕೆ ಕಾರಣವಾಗಬಹುದು.

ಮನೆಯಲ್ಲಿ ಹೆಚ್ಚಿನ ಮಹಡಿಗಳಿದ್ದರೆ ಪ್ರತಿ ಮಹಡಿಯಲ್ಲಿ ಒಂದರ ಮೇಲೊಂದು ಬಾಗಿಲು ಹಾಕದಂತೆ ನೋಡಿಕೊಳ್ಳಿ.

Continue Reading

ಬೆಂಗಳೂರು

Bengaluru Karaga: ಇಂದು ರಾತ್ರಿ ಕರಗ ಮಹೋತ್ಸವ; ವಾಹನ ಸವಾರರೇ ಬೇರೆ ದಾರಿ ಕಂಡುಕೊಳ್ಳಿ

ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ (Bengaluru Karaga) ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ

VISTARANEWS.COM


on

Bengaluru Karaga
Koo

ಬೆಂಗಳೂರು: ಇಂದು ಮಧ್ಯರಾತ್ರಿ ಐತಿಹಾಸಿಕ ಬೆಂಗಳೂರು ಕರಗ (Bengaluru Karaga Festival) ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ (Traffic restriction) ಹೇರಲಾಗಿದ್ದು, ಪರ್ಯಾಯ (Alternate roads) ರಸ್ತೆಗಳಲ್ಲಿ ಸಾಗುವಂತೆ ಬೆಂಗಳೂರು ನಗರ ಸಂಚಾರ ಪೊಲೀಸರು (Bangalore traffic police) ಮನವಿ ಮಾಡಿದ್ದಾರೆ.

ಈ ಸಂಬಂಧ ಟ್ರಾಫಿಕ್‌ ಪೊಲೀಸರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ: ದಿನಾಂಕ: 23.04.2024ರಿಂದ ದಿನಾಂಕ: 24.04.2024ರ ಬೆಳಗ್ಗೆ 06:00 ಗಂಟೆಯವರೆಗೆ ಇತಿಹಾಸ ಪ್ರಸಿದ್ಧ ಶ್ರೀ ಧರ್ಮರಾಯ ಸ್ವಾಮಿ ಬೆಂಗಳೂರು ಕರಗದ ಉತ್ಸವ ನಡೆಯುತ್ತಿದ್ದು, ಈ ಉತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿರುವುದರಿಂದ ತಿಗಳರ ಪೇಟೆಯಲ್ಲಿರುವ ಧರ್ಮರಾಯ ಸ್ವಾಮಿ ದೇವಸ್ಥಾನದ ಸುತ್ತಮುತ್ತ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿರುತ್ತದೆ ಎಂದು ತಿಳಿಸಿದೆ.

ಮೆರವಣಿಗೆ ಸಾಗುವ ಮಾರ್ಗ

ಮೆರವಣಿಗೆಯು ನಗರ್ತಪೇಟೆಯ ಧರ್ಮರಾಯ ಸ್ವಾಮಿ ದೇವಸ್ಥಾನದಿಂದ ಪ್ರಾರಂಭಗೊಂಡು ಕಬ್ಬನ್‌ಪೇಟೆ, ಗಾಣಿಗರ ಪೇಟೆ, ಅವೆನ್ಯೂ ರಸ್ತೆ ಮೂಲಕ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಆಂಜನೇಯ ದೇವಾಲಯಕ್ಕೆ ಬಂದು ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ರಸ್ತೆಯ ಮೂಲಕ ರಾಣಾಸಿಂಗ್ ಪೇಟೆ,‌ ಅಕ್ಕಿಪೇಟೆ, ಅರಳಿಪೇಟೆ, ಒಟಿಸಿ ರಸ್ತೆ , ಮಸ್ತಾನ್ ಸಾಹೇಬ್ ದರ್ಗಾ, ಬಳೇಪೇಟೆ ಮುಖ್ಯ ರಸ್ತೆ, ಕೆ.ಜಿ.ರಸ್ತೆ, ಎಸ್.ಪಿ.ರಸ್ತೆ ಮೂಲಕ ಅಣ್ಣಮ್ಮ ದೇವಾಲಯಕ್ಕೆ ಬರುತ್ತದೆ. ಪುನಃ ಅದೇ ಮಾರ್ಗವಾಗಿ ಸಂಚರಿಸಿ, ಕಿಲ್ಲಾರಿ ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಅವೆನ್ಯೂ ರಸ್ತೆ ಕ್ರಾಸ್, ಆರ್.ಟಿ.ರಸ್ತೆ , ಕುಂಬಾರಪೇಟೆ, ಗೊಲ್ಲರಪೇಟೆ, ತಿಗಳರಪೇಟೆ, ಸುಣಕಲ್‌ಪೇಟೆ ಮೂಲಕ ದಿ: 24/04/2024 ರಂದು ಬೆಳಗ್ಗೆ 6-00 ಘಂಟೆಗೆ ಧರ್ಮರಾಯ ಸ್ವಾಮಿ ದೇವಾಲಯಕ್ಕೆ ಸೇರುತ್ತದೆ.

ಸಂಚಾರ ನಿರ್ಬಂಧಿಸಲಾದ ರಸ್ತೆಗಳು

ಸಿಟಿ ಮಾರುಕಟ್ಟೆ ವೃತ್ತದಿಂದ ಅವೆನ್ಯೂ ರಸ್ತೆಯ ಮೂಲಕ ಮೈಸೂರು ಬ್ಯಾಂಕ್ ವೃತ್ತದವರೆಗೆ ಎಲ್ಲ ಮಾದರಿಯ ವಾಹನ ಸಂಚಾರ ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆ ಅವೆನ್ಯೂ ರಸ್ತೆ ಪ್ರವೇಶಿಸುತ್ತಿದ್ದಂತೆ, ಎ.ಎಸ್.ಚಾರ್ ರಸ್ತೆಯಿಂದ ಸಿಟಿ ಮಾರುಕಟ್ಟೆ ವೃತ್ತದ ಕಡೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಎಸ್.ಜೆ.ಪಿ ರಸ್ತೆಯಿಂದ ಎನ್.ಆರ್ ವೃತ್ತದ ಕಡೆಗೆ ಹೋಗಲು ಪಿ.ಕೆ. ಲೇನ್ ಬಳಿ ಎಡ ತಿರುವು ಪಡೆಯುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಉತ್ಸವದ ಮೆರವಣಿಗೆಯು ಅವೆನ್ಯೂ ರಸ್ತೆಯನ್ನು ಪ್ರವೇಶಿಸುತ್ತಿದಂತೆ ಮೆಡಿಕಲ್ ಕಾಲೇಜು
ಕಡೆಯಿಂದ ಮಾರ್ಕೆಟ್ ವೃತ್ತದ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿರ್ಬಂಧಿಸಿದೆ. ನಿರ್ಬಂಧಿಸಲಾದ ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗ ಎಸ್‌ಜೆಪಿ ರಸ್ತೆ -ಟೌನ್‌ಹಾಲ್, ಕೆಂಪೇಗೌಡ ರಸ್ತೆ ಮಾರ್ಗವಾಗಿ ತೆರಳಬಹುದು. ಮೈಸೂರು ರಸ್ತೆಯ ಎ.ಎಸ್.ಎಚ್ ರಸ್ತೆಯಲ್ಲಿ ಬಲ ತಿರುವು ರಾಯನ್ ವೃತ್ತದ‌ ಮೂಲಕ ಸಂಚರಿಸಬಹುದು. ಚಾಮರಾಜಪೇಟೆ ಕಡೆಯಿಂದ ಬರುವ ವಾಹನಗಳು ಪ್ರೊ. ಶಿವಶಂಕರ ವೃತ್ತದ ಮೂಲಕ ಜೆ.ಸಿ ರಸ್ತೆಯನ್ನು ಪ್ರವೇಶಿಸಿ ಟೌನ್‌ಹಾಲ್ ಕಡೆಗೆ ಸಂಚರಿಸಬಹುದು.

ವಾಹನಗಳ ಪಾರ್ಕಿಂಗ್ ಸ್ಥಳಗಳು

ಕರಗ ಉತ್ಸವಕ್ಕೆ ಬರುವ ಸಾರ್ವಜನಿಕರು ತಮ್ಮ ವಾಹನಗಳನ್ನು ಬನ್ನಪ್ಪ ಪಾರ್ಕ್ ಹಾಗೂ‌ ಪುರಭವನ, ಬಿ.ಬಿ.ಎಂ.ಪಿ ಮಾರ್ಕೆಟ್ ಕಾಂಪ್ಲೆಕ್ಸ್, ಇಲ್ಲಿ ನಿಲುಗಡೆ ಮಾಡಬಹುದಾಗಿರುತ್ತದೆ.

ಪಾರ್ಕಿಂಗ್ ನಿರ್ಬಂಧಿಸಲಾದ ಸ್ಥಳಗಳು

ಪಿ.ಕೆ ಲೈನ್, ಓ.ಟಿ.ಸಿ ರಸ್ತೆ, ಎಸ್ಪಿ ರಸ್ತೆ , ಕಬ್ಬನ್‌ಪೇಟೆ ರಸ್ತೆ, ಸುಣ್ಣಕಲ್ ಪೇಟೆ ರಸ್ತೆ, ಎಸ್.ಜೆ.ಪಿ. ಸಿಟಿ ಮಾರ್ಕೆಟ್ ಸರ್ಕಲ್, ಎಸ್.ಜೆ.ಪಿ ರಸ್ತೆ, ಅವೆನ್ಯೂ ರಸ್ತೆ , ಎ.ಎಸ್.ಚಾರ್ ಸ್ಟ್ರೀಟ್ ನಿಂದ ಮಾರ್ಕೆಟ್ ಸರ್ಕಲ್‌ವರೆಗೆ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳ ನಿಲುಗಡೆಯನ್ನು ನಿರ್ಬಂಧಿಸಿದೆ.

ಇದನ್ನೂ ಓದಿ: Karnataka Weather : ಬೆಂಗಳೂರು ಕರಗಕ್ಕೆ ಅಡ್ಡಿಯಾಗುತ್ತಾ ಮಳೆ; ಮತ್ತೆ ಬಿಸಿ ಗಾಳಿ ಎಚ್ಚರಿಕೆ ಕೊಟ್ಟ ತಜ್ಞರು

Continue Reading
Advertisement
Prajwal Revanna Pen Drive Case Prajwal Revanna accused of sex scandal No interference in SIT probe says Parameshwara
Lok Sabha Election 20245 mins ago

Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ರಾಜಕೀಯ17 mins ago

Lok Sabha election 2024: ದಿಲ್ಲಿಯಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಯಲ್ಲಿ ಒಡಕು; ರಾಜ್ಯಾಧ್ಯಕ್ಷ ರಾಜೀನಾಮೆ

777 Charlie
ಸ್ಯಾಂಡಲ್ ವುಡ್18 mins ago

777 Charlie: ಜಪಾನಿನಲ್ಲಿ `777 ಚಾರ್ಲಿ ಹವಾ’: ವರ್ಲ್ಡ್​​ ಟೂರ್‌ಗೆ ಧರ್ಮ ಹಾಗೂ ಚಾರ್ಲಿ ರೆಡಿ!

Food Poisoning
ಪ್ರಮುಖ ಸುದ್ದಿ28 mins ago

Food Poisoning : ಹೃದಯ ವಿದ್ರಾವಕ ಘಟನೆ; ವಿಷ ಆಹಾರ ಸೇವಿಸಿ ಇಬ್ಬರು ಮಕ್ಕಳ ಸಾವು, ಮೂವರು ಅಸ್ವಸ್ಥ

Manjummel Boys
ಮಾಲಿವುಡ್60 mins ago

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

girl Saved Mother
ಪ್ರಮುಖ ಸುದ್ದಿ1 hour ago

Girl Saved Mother: ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯ ಜೀವ ಕಾಪಾಡಿತು ಪುತ್ರಿ ಶಾಲೆಯಲ್ಲಿ ಕಲಿತ ಪಾಠ!

ವಿದೇಶ1 hour ago

TikTok star: ಇರಾಕ್‌ನಲ್ಲಿ ಗುಂಡಿಕ್ಕಿ ಟಿಕ್‌ಟಾಕ್‌ ಸ್ಟಾರ್‌ನ ಭೀಕರ ಹತ್ಯೆ

Sahil Khan Arrested in Mahadev Betting App Case
ಬಾಲಿವುಡ್2 hours ago

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ2 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ದೇಶ2 hours ago

Usman Ghani: ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಉಚ್ಚಾಟಿತ ನಾಯಕ ಅರೆಸ್ಟ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ2 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ6 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202419 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ23 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

ಟ್ರೆಂಡಿಂಗ್‌