Rahul Gandhi Disqualified: 'ನಾನು ಎಲ್ಲದಕ್ಕೂ ಸಿದ್ಧ', ಅನರ್ಹತೆ ಬಳಿಕ ರಾಹುಲ್‌ ಗಾಂಧಿ ಹೇಳಿದ್ದೇನು? - Vistara News

ದೇಶ

Rahul Gandhi Disqualified: ‘ನಾನು ಎಲ್ಲದಕ್ಕೂ ಸಿದ್ಧ’, ಅನರ್ಹತೆ ಬಳಿಕ ರಾಹುಲ್‌ ಗಾಂಧಿ ಹೇಳಿದ್ದೇನು?

Rahul Gandhi Disqualified: ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಹಿನ್ನೆಲೆಯಲ್ಲಿ ಲೋಕಸಭೆಯಿಂದ ಅನರ್ಹಗೊಂಡ ಬೆನ್ನಲ್ಲೇ ರಾಹುಲ್ ಗಾಂಧಿ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. “ದೇಶದ ಜನರಿಗಾಗಿ ನಾನು ಎಲ್ಲ ತ್ಯಾಗಕ್ಕೂ ಸಿದ್ಧ” ಎಂದು ಹೇಳದ್ದಾರೆ.

VISTARANEWS.COM


on

Ready To Pay Any Price, Rahul Gandhi First Reaction after disqualification
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಕಾರಣ ಅವರು ಲೋಕಸಭೆಯಿಂದ (Rahul Gandhi Disqualified) ಅನರ್ಹಗೊಂಡಿದ್ದಾರೆ. ಇದರ ಬೆನ್ನಲ್ಲೇ, ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಅಂತ್ಯ ಎಂದೇ ಹೇಳುತ್ತಿದ್ದಾರೆ. ಕಾಂಗ್ರೆಸ್‌ ಹೊರತಾಗಿ ಬೇರೆ ಪಕ್ಷಗಳು ಕೂಡ ರಾಹುಲ್‌ ಗಾಂಧಿ ಪರ ಮಾತನಾಡುತ್ತಿವೆ. ಇದರ ಮಧ್ಯೆಯೇ, ರಾಹುಲ್‌ ಗಾಂಧಿ ಅವರು ಅನರ್ಹತೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದು, “ನಾನು ಎಲ್ಲದಕ್ಕೂ ಸಿದ್ಧ” ಎಂಬ ಸಂದೇಶ ರವಾನಿಸಿದ್ದಾರೆ.

ಎರಡು ಸಾಲಿನ ಟ್ವೀಟ್‌ ಮಾಡಿರುವ ಅವರು, “ನಾನು ಭಾರತೀಯರ ಧ್ವನಿ ಪರವಾಗಿ ಹೋರಾಡುತ್ತಿದ್ದೇನೆ. ನಾನು ಎಲ್ಲದಕ್ಕೂ ಸಿದ್ಧ” ಎಂದು ಹೇಳಿದ್ದಾರೆ. ಆ ಮೂಲಕ ಮುಂಬರುವ ಎಲ್ಲ ಸವಾಲುಗಳನ್ನು ಸಮರ್ಥವಾಗಿ ಎದುರಿಸುತ್ತೇನೆ ಎಂಬ ಸಂದೇಶವನ್ನು ಬಿಜೆಪಿಗೆ ರವಾನಿಸಿದ್ದಾರೆ. ಗುರುವಾರ ಸೂರತ್‌ ಜಿಲ್ಲಾ ನ್ಯಾಯಾಲಯವು ತೀರ್ಪು ನೀಡಿದ ಬಳಿಕವೂ ಪ್ರತಿಕ್ರಿಯಿಸಿದ್ದ ರಾಹುಲ್‌ ಗಾಂಧಿ, “ಸತ್ಯವೇ ಗೆಲ್ಲುತ್ತದೆ” ಎಂದು ಹೇಳಿದ್ದರು. ಹಾಗೆಯೇ, ಮಹಾತ್ಮ ಗಾಂಧೀಜಿಯವರ ಹೇಳಿಕೆಯನ್ನು ಉಲ್ಲೇಖಿಸಿದ್ದರು.

ರಾಹುಲ್‌ ಗಾಂಧಿ ಟ್ವೀಟ್‌

ಪ್ರಿಯಾಂಕಾ ವಾದ್ರಾ ಹೇಳಿದ್ದೇನು?

ರಾಹುಲ್‌ ಗಾಂಧಿ ಅನರ್ಹತೆ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕಾ ವಾದ್ರಾ, ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ನೀರವ್‌ ಮೋದಿ 14 ಸಾವಿರ ಕೋಟಿ ರೂ. ಲೂಟಿ ಮಾಡಿದ್ದಾರೆ. ಲಲಿತ್‌ ಮೋದಿ 425 ಕೋಟಿ ರೂ. ಹಾಗೂ ಮೆಹುಲ್‌ ಚೋಕ್ಸಿ 13,500 ಕೋಟಿ ರೂ. ಲೂಟಿ ಮಾಡಿದ್ದಾರೆ. ಆದರೂ ಏಕೆ ಬಿಜೆಪಿ ಇವರನ್ನು ರಕ್ಷಿಸುತ್ತಿದೆ? ಏಕೆ ಪಕ್ಷವು ತನಿಖೆಯಿಂದ ದೂರ ಓಡುತ್ತಿದೆ” ಎಂದು ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ಹಲವು ನಾಯಕರು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2019ರ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪ್ರಚಾರ ಮಾಡುತ್ತ ‘ಎಲ್ಲ ಕಳ್ಳರ ಹೆಸರುಗಳ ಉಪನಾಮ ಮೋದಿ ಎಂದೇ ಇರುತ್ತದೆ ಎಂಬ ಬಗ್ಗೆ ನನಗೆ ಅಚ್ಚರಿಯಾಗುತ್ತದೆ’ ಎಂದು ಹೇಳಿದ್ದರು. ರಾಹುಲ್ ಗಾಂಧಿ ಈ ಹೇಳಿಕೆ ವಿರುದ್ಧ ಗುಜರಾತ್​ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ ದೂರು ನೀಡಿದ್ದರು. ಹಾಗೇ, ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ವಿಚಾರಣೆ ನಡೆಸಿದ್ದ ಸೂರತ್​ ಕೋರ್ಟ್ ಮಾ.23ರಂದು ತೀರ್ಪು ನೀಡಿ ರಾಹುಲ್ ಗಾಂಧಿ ದೋಷಿ ಎಂದು ಹೇಳಿತ್ತು. ಅಷ್ಟೇ ಅಲ್ಲ, 15 ಸಾವಿರ ರೂಪಾಯಿ ದಂಡ ವಿಧಿಸಿತ್ತು. 30 ದಿನಗಳ ಜಾಮೀನು ನೀಡಿತ್ತು. ಅಷ್ಟರೊಳಗೆ ರಾಹುಲ್ ಗಾಂಧಿ ಪರ ಕಾಂಗ್ರೆಸ್​​ನ ಯಾರಾದರೂ ಮೇಲ್ಮನವಿ ಸಲ್ಲಿಸಿ, ಅವರಿಗೆ ನೀಡಿರುವ ಶಿಕ್ಷೆಯನ್ನು ರದ್ದುಗೊಳಿಸಬಹುದು ಎಂದು ಹೇಳಿದೆ.

ಇದನ್ನೂ ಓದಿ: Rahul Gandhi Disqualified: ರಾಹುಲ್‌ ಗಾಂಧಿ ಅನರ್ಹಕ್ಕೆ ಕನ್ನಡಿಗರೊಬ್ಬರೂ ಕಾರಣ, ಯಾರಿವರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಕ್ಷಿಪಣಿ ಬಲದಿಂದ ನಮ್ಮ ನೌಕಾಪಡೆ ‘ಸ್ಮಾರ್ಟ್‌’ ಜತೆಗೆ ಇನ್ನಷ್ಟು ಬಲಿಷ್ಠ

ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಸ್ಮಾರ್ಟ್‌ ಕ್ಷಿಪಣಿಯ ಪರೀಕ್ಷೆಯನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿದೆ. ಜಲಾಂತರ್ಗಾಮಿ ನೌಕೆಗಳನ್ನು ನಿಗ್ರಹಿಸುವ, ವೈರಿಗಳ ಮೇಲೆ ಹದ್ದಿನ ಕಣ್ಣಿಡುವ ಇದು ಗೇಮ್‌ ಚೇಂಜರ್‌ ಎಂದೇ ಹೇಳಲಾಗುತ್ತಿದೆ.

VISTARANEWS.COM


on

SMART Missile
Koo

ಭಾರತದ ರಕ್ಷಣಾ ಕ್ಷೇತ್ರಕ್ಕೆ ಬಲ ನೀಡುವ, ಜಲಾಂತರ್ಗಾಮಿ ನೌಕೆಗಳನ್ನು ನಿಗ್ರಹಿಸುವ (Anti-Submarine Missile System) ಸಾಮರ್ಥ್ಯದ ಸೂಪರ್‌ಸಾನಿಕ್‌ ಮಿಸೈಲ್‌ ಅಸಿಸ್ಟೆಡ್‌ ರಿಲೀಸ್‌ ಆಫ್‌ ಟಾರ್ಪೆಡೊ (SMART Missile) ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ. ಇದು ಭಾರತದ ನೌಕಾಪಡೆಯ ಬಲವನ್ನು ಇನ್ನಷ್ಟು ಹೆಚ್ಚಿಸಲಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (DRDO) ದೇಶೀಯವಾಗಿ ಸ್ಮಾರ್ಟ್‌ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಿದೆ. ಇದರಿಂದ ಸಾಗರ ಪ್ರದೇಶದಲ್ಲಿ ನೌಕಾಪಡೆಯು ವೈರಿಗಳ ಮೇಲೆ ಇನ್ನಷ್ಟು ನಿಗಾ ಇರಿಸಲು, ಕ್ಷಿಪ್ರವಾಗಿ ಕಾರ್ಯಾಚರಣೆ ಕೈಗೊಳ್ಳಲು, ಪ್ರತಿದಾಳಿ ನಡೆಸಲು ನೆರವಾಗಲಿದೆ. ಇದು ಎರಡನೇ ಪರೀಕ್ಷಾರ್ಥ ಉಡಾವಣೆ. ಇದು ಕ್ಯಾನಿಸ್ಟರ್‌ ಆಧಾರಿತ, 643 ಕಿ.ಮೀ ದೂರದ ಗುರಿಗಳನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯ ಹೊಂದಿದ್ದು, ಸಾಗರ ಪ್ರದೇಶದಲ್ಲಿ ಯಾವುದೇ ತುರ್ತು ಪರಿಸ್ಥಿತಿ ಎದುರಾದಾಗ ಕ್ಷಿಪ್ರ ಕಾರ್ಯಾಚರಣೆ ನಡೆಸಲಿದೆ. ಆಗಸದಲ್ಲಿಯೇ ಶತ್ರುನೌಕೆಗಳನ್ನು ಡಿಟೆಕ್ಟ್‌ ಮಾಡುವ ತಂತ್ರಜ್ಞಾನ ಹೊಂದಿದೆ.

ಭಾರತದ ವಾಯುಪಡೆ, ನೌಕಾಪಡೆ ಹಾಗೂ ಭೂಸೇನೆಗಳು ಮೂರೂ ಕಳೆದ ಒಂದು ದಶಕದಲ್ಲಿ ಸಾಕಷ್ಟು ಹೊಸ ಶಸ್ತ್ರಾಸ್ತ್ರಗಳನ್ನು ಪಡೆದಿವೆ. ಭಾರತದ ನೌಕಾಪಡೆ ಈಗ ಸಾಕಷ್ಟು ಯುದ್ಧನೌಕೆಗಳು, ಐಎನ್‌ಎಸ್‌ ವಿಕ್ರಮಾದಿತ್ಯದಂಥ ಜೆಟ್‌ಫೈಟರ್‌ ಕ್ಯಾರಿಯರ್‌ಗಳು, ಅರಿಹಂತ್‌ನಂತ ಸಬ್‌ಮರೀನ್‌ಗಳನ್ನು ಹೊಂದಿದೆ. ಪ್ರಸ್ತುತ ಇದು ಜಗತ್ತಿನ 7ನೇ ಅತಿ ಪ್ರಬಲ ನೌಕಾಪಡೆಯೆನಿಸಿದೆ. ಈ ಪ್ರಾಬಲ್ಯ ಭಾರತವನ್ನು ಸುತ್ತುವರಿದ ಸಾಗರ ಪ್ರದೇಶವನ್ನು ರಕ್ಷಿಸುವುದಷ್ಟೇ ಅಲ್ಲ, ಇಲ್ಲ ಓಡಾಡುವ ಮಿತ್ರದೇಶಗಳ ನೌಕೆಗಳ ರಕ್ಷಣೆಗೂ ನೆರವಾಗಿದೆ ಎನ್ನುವುದು ನಮ್ಮ ಹೆಮ್ಮೆ. ಇತ್ತೀಚೆಗೆ ನಮ್ಮ ನೌಕಾದಳ ಬಲ್ಗೇರಿಯಾ ಹಾಗೂ ಇರಾನ್‌ನ ಹಡಗುಗಳನ್ನು ಕಡಲ್ಗಳ್ಳರಿಂದ ರಕ್ಷಿಸಿದುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಇತ್ತೀಚೆಗೆ ಬಂಗಾಳ ಕೊಲ್ಲಿಯಲ್ಲಿ ನಮ್ಮ ಸ್ವಾಮ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ನೆಲೆಯಿಂದ ಲಕ್ಷದ್ವೀಪದಲ್ಲಿ ನೌಕಾಪಡೆಯು ʼಐಎನ್‌ಎಸ್‌ಜಟಾಯುʼ ಹೆಸರಿನ ಮತ್ತೊಂದು ನೆಲೆಯನ್ನು ನಿರ್ಮಿಸುವ ವ್ಯೂಹಾತ್ಮಕ ಹಾಗೂ ರಕ್ಷಣಾತ್ಮಕ ಹೆಜ್ಜೆ ಇರಿಸಿದೆ. ಈಗಾಗಲೇ ಅಂಡಮಾನ್‌ನಲ್ಲಿ ಐಎನ್‌ಎಸ್‌ ಬಾಜ್‌ ಎಂಬ ನೌಕಾನೆಲೆ ಇದೆ. ಲಕ್ಷದ್ವೀಪದ ಕವರಟ್ಟಿಯಲ್ಲೇ ದ್ವೀಪ್ರಕಾಶಕ ಎಂಬ ನೌಕಾನೆಲೆ ಇದೆ. ಪಶ್ಚಿಮ ಅರಬ್ಬೀ ಸಮುದ್ರದಲ್ಲಿ ವೈರಿಗಳ ಮೇಲೆ ಹೆಚ್ಚಿನ ನಿಗಾ ಇರಿಸುವುದು, ಸಾಗರ ಪ್ರದೇಶದಲ್ಲಿ ಭಯೋತ್ಪಾದನೆ- ಅಪರಾಧ ತಡೆಗಟ್ಟುವುದು, ಸಮುದ್ರ ಪ್ರದೇಶದಲ್ಲಿ ಮಾದಕವಸ್ತು ಅಕ್ರಮ ಸಾಗಣೆ ನಿಯಂತ್ರಣ ಸಾಧ್ಯ. ಹೊಸ ಟಾರ್ಪೆಡೊ (SMART Missile) ಕ್ಷಿಪಣಿ ಕೂಡ ಇದಕ್ಕೆ ಪೂರಕ.

ಇತ್ತೀಚೆಗೆ ನಮ್ಮ ಕ್ಷಿಪಣಿ ಬಲ ಇನ್ನಷ್ಟು ಮೈದುಂಬಿಕೊಳ್ಳುತ್ತಿದೆ. ದೇಶೀಯವಾಗಿ ಅಭಿವೃದ್ಧಿಪಡಿಸಿದ, ಹಲವು ಪರಮಾಣು ಬಾಂಬ್‌ಗಳನ್ನು (Nuclear warhead) ಏಕಕಾಲಕ್ಕೆ ಕೊಂಡೊಯ್ಯಬಲ್ಲ ಸಾಮರ್ಥ್ಯದ ಅಗ್ನಿ-ವಿ (Agni-V) ಬಹು ಸಿಡಿತಲೆ ಕ್ಷಿಪಣಿಯ ಇತ್ತೀಚಿನ ಹಾರಾಟ ಪರೀಕ್ಷೆ ಇಲ್ಲಿ ಉಲ್ಲೇಖನೀಯ. ಇದೊಂದು ಬಹು ಸ್ವತಂತ್ರವಾಗಿ ಕಾರ್ಯಾಚರಿಸಬಲ್ಲ, ರೀ-ಎಂಟ್ರಿ ತಂತ್ರಜ್ಞಾನ ಹೊಂದಿರುವ ಕ್ಷಿಪಣಿ. ಇದರ ಸಿಡಿತಲೆಯು ಬಾಹ್ಯಾಕಾಶದಲ್ಲಿ ಬೇರ್ಪಟ್ಟು, ಬೆಂಕಿಯ ಚೆಂಡುಗಳು ವಾತಾವರಣವನ್ನು ಮರು ಪ್ರವೇಶಿಸುತ್ತವೆ. ಪ್ರತಿಯೊಂದು ಸಿಡಿತಲೆಯೂ ವಿಭಿನ್ನ ವೇಗದಲ್ಲಿ ಕೆಳಗಿಳಿದು ನೆಲಕ್ಕೆ ಅಪ್ಪಳಿಸುತ್ತದೆ. MIRVಯ ಮುಖ್ಯ ಸಾಮರ್ಥ್ಯವೇ ಮರು-ಪ್ರವೇಶ. ಪ್ರತಿ ಸಿಡಿತಲೆಯೂ ವಿಭಿನ್ನ ವೇಗಗಳು ಮತ್ತು ಪ್ರತ್ಯೇಕ ಗುರಿಗಳನ್ನು ಹೊಂದಿರುವುದರಿಂದ, ಕ್ಷಿಪಣಿ ವಿರೋಧಿ ಗುರಾಣಿಗಳಿಂದ ಅಗ್ನಿ-V ಅನ್ನು ಪ್ರತಿಬಂಧಿಸಲು ಸಾಧ್ಯವಿಲ್ಲ. ಇದನ್ನು ʼಮಿಷನ್‌ ದಿವ್ಯಾಸ್ತ್ರʼ ಎಂದು ಕರೆಯಲಾಗಿದೆ.

ಏಷ್ಯಾ ಉಪಖಂಡದಲ್ಲಿ ಆ ಮೂಲಕ ಶಸ್ತ್ರಾಸ್ತ್ರ ಪೈಪೋಟಿ ಸೃಷ್ಟಿಸುವುದು ನಮ್ಮ ಉದ್ದೇಶವಲ್ಲ. ಜಗತ್ತಿನಲ್ಲಿಯೇ ಅತಿ ದೊಡ್ಡದಾದ ಪ್ರಜಾಪ್ರಭುತ್ವ ದೇಶದ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮ್ಮ ಉದ್ದೇಶ. ನಾವು ಬಲಿಷ್ಟರಾದಾಗ ನಮ್‌ ಮಸುತ್ತಮುತ್ತಲಿನವರೂ ನಮ್ಮನ್ನು ಗೌರವದಿಂದ ಕಾಣುತ್ತಾರೆ. ಅಮೆರಿಕದಂಥ ಬಲಿಷ್ಠ ರಾಷ್ಟ್ರಗಳೂ ʼಭಾರತ ನಮ್ಮ ಮಿತ್ರʼ ಎಂದು ಹಾಡಿ ಹೊಗಳುತ್ತವೆ. ಇಸ್ರೇಲ್‌, ಆಸ್ಟ್ರೇಲಿಯದಂಥ ದೇಶಗಳು ನಮ್ಮೊಂದಿಗೆ ರಕ್ಷಣಾ ಕೊಡುಕೊಳ್ಳುವಿಕೆಗಳನ್ನು ನಡೆಸುತ್ತವೆ. ಫ್ರಾನ್ಸ್‌ನಂಥ ದೇಶಗಳೇ ರಫೇಲ್‌ನಂಥ ಅದ್ಭುತ ಯುದ್ಧಸಾಮರ್ಥ್ಯವನ್ನು ಹೊಂದಿರುವ ಫೈಟರ್‌ ಜೆಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಳ್ಳುತ್ತವೆ. ʼಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಶಾಶ್ವತ ಸ್ಥಾನಮಾನ ನೀಡಬೇಕುʼ ಎಂದು ಬ್ರಿಟನ್‌ ಪ್ರತಿಪಾದಿಸುತ್ತದೆ. ಇದೆಲ್ಲವೂ ಸ್ವಸಾಮರ್ಥ್ಯ ಇದ್ದಾಗ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಭಾರತ ನಡೆ ಬಲಿಷ್ಠತೆಯತ್ತ ಸಹಜವಾಗಿ ಮುಂದುವರಿದಿದೆ.

ಇದನ್ನೂ ಓದಿ: SMART Missile: ನೌಕೆಗಳನ್ನು ಧ್ವಂಸ ಮಾಡುವ ಸ್ಮಾರ್ಟ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ; ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

Continue Reading

ದೇಶ

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Love Jihad: ರಾಜಸ್ಥಾನದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ರಶೀದ್‌ ಖಾನ್‌ ಎಂಬಾತನು ಹಿಂದು ಯುವತಿಯ ಸ್ನೇಹ ಸಂಪಾದಿಸಿದ್ದಾನೆ. ತಾನು ಕೂಡ ಹಿಂದು ಎಂಬುದಾಗಿ ನಕಲಿ ಹೆಸರು ಹೇಳಿದ್ದಾನೆ. ಇದಾದ ಬಳಿಕ ಈತನ ಪ್ರೇಮ ನಿವೇದನೆಯನ್ನು ಯುವತಿ ಒಪ್ಪಿದ್ದಾಳೆ. ಆದರೆ, ಈತನು ಅತ್ಯಾಚಾರ ಎಸಗಿರುವ ಕುರಿತು ಯುವತಿಯು ದೂರು ದಾಖಲಿಸಿದ್ದು, ಲವ್‌ ಜಿಹಾದ್‌ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Love Jihad
Koo

ಜೈಪುರ: ರಾಜಸ್ಥಾನದಲ್ಲಿ (Rajasthan) ಮುಸ್ಲಿಂ ಯುವಕನೊಬ್ಬ ಹಿಂದು ಯುವತಿಗೆ ತಾನು ಕೂಡ ಹಿಂದು ಎಂಬುದಾಗಿ ನಂಬಿಸಿ, ಮದುವೆಯಾಗುವುದಾಗಿ ಭರವಸೆ ನೀಡಿ, ಈಗ ಕೊನೆಗೆ ಆಕೆಯ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಹಾಗಾಗಿ, ಪ್ರಕರಣದಲ್ಲಿ ಲವ್‌ ಜಿಹಾದ್‌ (Love Jihad) ಶಂಕೆ ವ್ಯಕ್ತವಾಗಿದೆ. ಹಿಂದು ಯುವತಿ ದಾಖಲಿಸಿದ ದೂರಿನ ಅನ್ವಯ ಪೊಲೀಸರು ಮುಸ್ಲಿಂ ಯುವಕನ ವಿರುದ್ಧ ಕೇಸ್‌ ದಾಖಲಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ರಾಜಸ್ಥಾನದ ದೌಸಾ ಪ್ರದೇಶದಲ್ಲಿ ಉತ್ತರ ಪ್ರದೇಶ ಮೂಲದ ರಶೀದ್‌ ಖಾನ್‌ ಎಂಬುವನು ಹಿಂದು ಯುವತಿ ಜತೆ ಸ್ನೇಹ ಸಂಪಾದಿಸಿದ್ದಾನೆ. ತಾನು ಕೂಡ ಹಿಂದು ಎಂದು ಆಕೆಯನ್ನು ನಂಬಿಸಿದ್ದಾನೆ. ಕೊನೆಗೆ ಒಂದು ದಿನ ಯುವತಿಯ ಎದುರು ಪ್ರೇಮ ನಿವೇದನೆ ಮಾಡಿದ್ದು, ಮದುವೆಯಾಗುವುದಾಗಿ ನಂಬಿಸಿದ್ದಾನೆ. ಆದರೆ, ಕಳೆದ 7 ತಿಂಗಳಿಂದ ಯುವತಿ ಮೇಲೆ ರಶೀದ್‌ ಖಾನ್‌ ಅತ್ಯಾಚಾರ ಎಸಗಿದ್ದು, ಆತನ ಬಂಧನದಿಂದ ಬಿಡಿಸಿಕೊಂಡು ಬಂದ ಯುವತಿಯು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ರಶೀದ್‌ ಖಾನ್‌, ಮದುವೆಯಾಗುವುದಾಗಿ ನಂಬಿಸಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾನೆ. ನಾನೀಗ ಗರ್ಭಿಣಿಯಾಗಿದ್ದು, ಗರ್ಭಪಾತ ಮಾಡಿಸಿಕೊ ಎಂದು ಒತ್ತಾಯಿಸುತ್ತಿದ್ದಾನೆ. ಹಾಗಾಗಿ, ರಶೀದ್‌ ಖಾನ್‌ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂಬುದಾಗಿ ಸೀತಾ ಯಾದವ್‌ ಎಂಬ ಯುವತಿಯು ದೂರು ದಾಖಲಿಸಿದ್ದಾರೆ. ರಶೀದ್‌ ಖಾನ್‌ ವಿರುದ್ಧ ಐಪಿಸಿಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

physical abuse women

ಹೋಟೆಲ್‌ನಲ್ಲಿ ಹಿಂದು ಯುವತಿ ಶವ ಪತ್ತೆ

ಒಂದು ದಿನದ ಹಿಂದಷ್ಟೇ, ಮಧ್ಯಪ್ರದೇಶದಲ್ಲಿ ಹೋಟೆಲ್‌ ರೂಮ್‌ನಲ್ಲಿ ಹಿಂದು ಯುವತಿ ಶವ ಪತ್ತೆಯಾಗಿದ್ದ, ಲವ್‌ ಜಿಹಾದ್‌ ಶಂಕೆ ವ್ಯಕ್ತವಾಗಿದೆ. ಹೊಟೇಲ್‌ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಹಿಂದೂ ಯುವತಿಯ ಮೃತದೇಹ ಪತ್ತೆಯಾಗಿದ್ದು, ಆಕೆ ಪ್ರಿಯಕರ ಜುನೈದ್‌ ಎಂಬಾತನ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಮಧ್ಯಪ್ರದೇಶದ ಧಾರ್‌ ಜಿಲ್ಲೆಯಲ್ಲಿ ಈ ಘಟನೆ ನಡೆಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಬಹಳ ಸುದ್ದಿ ಮಾಡುತ್ತಿದೆ. ಪೊಲೀಸ್‌ ಮಾಹಿತಿ ಪ್ರಕಾರ, ಜುನೈದ್‌ ಎಂಬಾತನ ಹೆಸರಿನಲ್ಲಿ ಬುಕ್‌ ಆಗಿದ್ದ ಹೊಟೇಲ್‌ ರೂಂನಲ್ಲಿ ಹಿಂದೂ ಯುವತಿಯ(24) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ. ಇದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಟಿಕಾ ಎಂಬ ಹೊಟೇಲ್‌ನಲ್ಲಿ ಈ ಘಟನೆ ನಡೆದಿದ್ದು, ಮೃತ ಯುವತಿ ಎರಡು ದಿನಗಳಿಂದ ಆರೋಪಿ ಜುನೈದ್‌ ಜೊತೆ ಹೊಟೇಲ್‌ನಲ್ಲಿ ತಂಗಿದ್ದಳು. ಅನುಮಾನಗೊಂಡ ಹೊಟೇಲ್‌ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬಾಗಿಲು ಒಡೆದು ನೋಡಿದಾಗ ಆಕೆಯ ದೇಹ ಸೀಲಿಂಗ್‌ ಫ್ಯಾನ್‌ನಲ್ಲಿ ನೇತಾಡುತ್ತಿತ್ತು.

ಇದನ್ನೂ ಓದಿ: Maria Alam Khan: “ಜಿಹಾದ್‌ಗಾಗಿ ಮತ ನೀಡಿ..”ಮಾಜಿ ಕೇಂದ್ರ ಸಚಿವರ ಸೊಸೆಯಿಂದ ಭಾರೀ ಎಡವಟ್ಟು

Continue Reading

ದೇಶ

ಪಾಕ್‌ ಯುವತಿಗೆ ಭಾರತದ ಹಿಂದು ವ್ಯಕ್ತಿ ಹೃದಯದ ಕಸಿ; ತಕರಾರು ತೆಗೆದ ನೆರೆ ರಾಷ್ಟ್ರದ ಇಸ್ಲಾಂ ಧರ್ಮಗುರು!

ಕಾಲೇಜು ವಿದ್ಯಾರ್ಥಿನಿಯಾಗಿರುವ ಆಯೇಷಾ ರೆಶಾನ್‌ ಅವರು ಕಳೆದ 10 ವರ್ಷಗಳಿಂದ ಹೃದ್ರೋಗದಿಂದ ಬಳಲುತ್ತಿದ್ದರು. ಅವರಿಗೆ ಹಾರ್ಟ್‌ ಪಂಪ್‌ ಡಿವೈಸ್‌ ಅಳವಡಿಸಬೇಕಾಗಿತ್ತು. ಇದಕ್ಕಾಗಿ ಅವರು ತಮಿಳುನಾಡಿಗೆ ಆಗಮಿಸಿದ್ದರು. ಚೆನ್ನೈನಲ್ಲಿ ಅವರಿಗೆ ಬೇರೆ ವ್ಯಕ್ತಿಯ ಹೃದಯವನ್ನು ಕಸಿ ಮಾಡಲಾಗಿತ್ತು. ಇದಾದ ಬಳಿಕ ಆಯೇಷಾ, ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ್ದರು.

VISTARANEWS.COM


on

Pakistan Teen
Koo

ಇಸ್ಲಾಮಾಬಾದ್:‌ ಜಗತ್ತಿನ ಯಾವುದೇ ಧರ್ಮಗಳು, ಧರ್ಮ ಗ್ರಂಥಗಳು ಹಿಂಸೆ, ದ್ವೇಷವನ್ನು ಬೆಂಬಲಿಸುವುದಿಲ್ಲ. ಶಾಂತಿ, ಸಹಬಾಳ್ವೆ, ಮಾನವೀಯತೆಯನ್ನೇ ಪ್ರತಿಯೊಂದು ಧರ್ಮವು ಬೋಧಿಸುತ್ತದೆ. ಆದರೆ, ಧರ್ಮಪಾಲಕರ ಎಡವಟ್ಟುಗಳಿಂದಾಗಿ ಧರ್ಮಗಳ ಸಾರಕ್ಕೇ ಕೆಲವೊಮ್ಮೆ ಕೆಟ್ಟ ಹೆಸರು ಬರುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಪಾಕಿಸ್ತಾನದಿಂದ (Pakistan) ಭಾರತಕ್ಕೆ ಬಂದು, ಚೆನ್ನೈ ಆಸ್ಪತ್ರೆಯಲ್ಲಿ ಹೃದಯದ ಕಸಿ ಮಾಡಿಸಿಕೊಂಡ ಪಾಕಿಸ್ತಾನದ ಯುವತಿಯೊಬ್ಬಳನ್ನು ಅಲ್ಲಿನ ಧರ್ಮಗುರುವೊಬ್ಬ (Pakistani Imam) ಟೀಕಿಸಿದ್ದಾನೆ.

ಯುವತಿಯು ಹೃದಯದ ಕಸಿ ಮಾಡಿಸಿಕೊಂಡಿರುವ ಯುಟ್ಯೂಬರ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದ ಇಮಾಮ್‌, “ಯುವತಿಗೆ ಹೃದಯ ದಾನ ಮಾಡಿದವನು ಸತ್ತಿದ್ದಾನೆ. ಅವನು ಖಂಡಿತವಾಗಿಯೂ ನಾಸ್ತಿಕನೇ ಆಗಿರುತ್ತಾನೆ. ಅಂತಹ ಹಿಂದುವಿನ ಹೃದಯವನ್ನು ಕಸಿ ಮಾಡಿಸಿಕೊಂಡು ಬಂದ ಪಾಕಿಸ್ತಾನದ ಯುವತಿಯ ಧೈರ್ಯವನ್ನು ಮೆಚ್ಚಬೇಕು. ಆದರೆ, ಹಿಂದುವಿನ ಹೃದಯ ಹೊಂದಿರುವ ಆಯೇಷಾ ಈಗ ಅಲ್ಲಾನ ಎದುರು ತಲೆ ಬಾಗಿ ನಿಲ್ಲಬೇಕು. ಆಗ ಆಕೆಯ ಧೈರ್ಯವನ್ನು ಮೆಚ್ಚುತ್ತೇನೆ” ಎಂಬುದಾಗಿ ಇಮಾಮ್‌ ಹೇಳಿದ್ದಾನೆ. “ಮುಸ್ಲಿಮರು ಅಂಗಾಂಗ ಹಾಗೂ ರಕ್ತವನ್ನು ದಾನ ಮಾಡುವುದು ತಪ್ಪು” ಎಂದು ಕೂಡ ಹೇಳಿದ್ದಾನೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದ್ದು, ಇಮಾಮ್‌ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೃದಯದ ಸಮಸ್ಯೆಯಿಂದಾಗಿ ಭಾರತಕ್ಕೆ ಬಂದಿದ್ದ ಪಾಕಿಸ್ತಾನದ ಆಯೇಷಾ ರೆಶಾನ್‌ (19) ಎಂಬ ಯುವತಿಗೆ ಚೆನ್ನೈನಲ್ಲಿರುವ ಎಂಜಿಎಂ ಹೆಲ್ತ್‌ಕೇರ್‌ ಆಸ್ಪತ್ರೆ ವೈದ್ಯರು ಉಚಿತವಾಗಿ ಹೃದಯದ ಕಸಿ ಮಾಡುವ ಮೂಲಕ ನೆರೆ ರಾಷ್ಟ್ರದ ಯುವತಿಯ ಬಾಳಿಗೆ ಬೆಳಕಾಗಿದ್ದಾರೆ. ಭಾರತೀಯರೊಬ್ಬರ ಹೃದಯವನ್ನು ಪಾಕಿಸ್ತಾನದ ಯುವತಿಗೆ ಕಸಿ ಮಾಡುವ ಮೂಲಕ, ಆಕೆ ಮತ್ತೆ ಬದುಕು ಕಟ್ಟಿಕೊಳ್ಳಲು ಅಪೂರ್ವ ಅವಕಾಶ ನೀಡುವ ಮೂಲಕ ಔದಾರ್ಯ ಮೆರೆದಿದ್ದಾರೆ. ಇದಕ್ಕಾಗಿ ಆಯೇಷಾ ರೆಶಾನ್‌ ಭಾರತಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

ಆಯೇಷಾ ರೆಶಾನ್‌ಗೆ ಏನಾಗಿತ್ತು?

ಕಾಲೇಜು ವಿದ್ಯಾರ್ಥಿನಿಯಾಗಿರುವ ಆಯೇಷಾ ರೆಶಾನ್‌ ಅವರು ಕಳೆದ 10 ವರ್ಷಗಳಿಂದ ಹೃದ್ರೋಗದಿಂದ ಬಳಲುತ್ತಿದ್ದರು. ಅವರಿಗೆ ಹಾರ್ಟ್‌ ಪಂಪ್‌ ಡಿವೈಸ್‌ ಅಳವಡಿಸಬೇಕಾಗಿತ್ತು. ಇದಕ್ಕಾಗಿ ಅವರು ತಮಿಳುನಾಡಿಗೆ ಆಗಮಿಸಿದ್ದರು. ಆದರೆ, ಹಾರ್ಟ್‌ ಪಂಪ್‌ ಅಳವಡಿಸಿದ ಬಳಿಕ ಶಸ್ತ್ರಚಿಕಿತ್ಸೆಯು ವಿಫಲವಾಗಿತ್ತು. ಇದರಿಂದಾಗಿ ಆಯೇಷಾ ರೆಶಾನ್‌ ಅವರ ಪ್ರಾಣಕ್ಕೆ ಕುತ್ತು ಬಂದಿತ್ತು. ಆಗ, ಆಸ್ಪತ್ರೆಯ ಸರ್ಜನ್‌ಗಳು ದಾನಿಯೊಬ್ಬರ ಹೃದಯವನ್ನು ಆಯೇಷಾ ರೆಷಾನ್‌ ಅವರಿಗೆ ಅಳವಡಿಸುವ ಮೂಲಕ ಆಕೆಯ ಪ್ರಾಣ ಉಳಿಸಿದ್ದಾರೆ.

ಹೃದಯದ ಕಸಿ ಮಾಡಲು ಸುಮಾರು 35 ಲಕ್ಷ ರೂ. ಖರ್ಚಾಗುತ್ತದೆ. ಆದರೆ, ಚೆನ್ನೈನ ಐಶ್ವರ್ಯನ್‌ ಟ್ರಸ್ಟ್‌ ಹಾಗೂ ಆಸ್ಪತ್ರೆ ವೈದ್ಯರೇ ಖರ್ಚು ಭರಿಸಿ, ಉಚಿತವಾಗಿ ಕಸಿ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ದೆಹಲಿ ಮೂಲದ ದಾನಿಯಿಂದ ಹೃದಯ ಪಡೆದ ವೈದ್ಯರು, ಆಯೇಷಾಗೆ ಅಳವಡಿಸಿದ್ದಾರೆ. “ಹೃದಯ ಕಸಿ ಬಳಿಕ ನಾನೀಗ ಆರೋಗ್ಯದಿಂದ ಇದ್ದೇನೆ. ಚೆನ್ನೈ ವೈದ್ಯರಿಂದಾಗಿ ನಾನು ಉಸಿರಾಡುತ್ತಿದ್ದೇನೆ. ನನ್ನ ಜೀವ ಉಳಿಸಿದ ವೈದ್ಯರಿಗೆ ಕೃತಜ್ಞತೆಗಳು. ಪಾಕಿಸ್ತಾನಕ್ಕೆ ತೆರಳಿ ನಾನು ಪದವಿ ಪಡೆಯುತ್ತೇನೆ” ಎಂಬುದಾಗಿ ಆಯೇಷಾ ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ರಾಹುಲ್‌ ಗಾಂಧಿಯನ್ನು ಹೊಗಳಿದ ಪಾಕ್‌ ಮಾಜಿ ಸಚಿವ; ತಿರುಗೇಟು ಕೊಟ್ಟ ಬಿಜೆಪಿ

Continue Reading

ದೇಶ

Rahul Gandhi: ರಾಹುಲ್‌ ಗಾಂಧಿಯನ್ನು ಹೊಗಳಿದ ಪಾಕ್‌ ಮಾಜಿ ಸಚಿವ; ತಿರುಗೇಟು ಕೊಟ್ಟ ಬಿಜೆಪಿ

Rahul Gandhi: ಕಾಂಗ್ರೆಸ್‌ ನಾಯಕರ ರಾಹುಲ್‌ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ, ರಾಮಮಂದಿರ ಉದ್ಘಾಟನೆ, ಮುಕೇಶ್‌ ಅಂಬಾನಿ ಸೇರಿ ಹಲವು ವಿಷಯಗಳ ಕುರಿತು ಟೀಕಿಸಿ ಮಾತನಾಡಿದ್ದಾರೆ. ರಾಹುಲ್‌ ಗಾಂಧಿ ಭಾಷಣವನ್ನು ಪಾಕಿಸ್ತಾನದ ಮಾಜಿ ಸಚಿವ ಫವಾದ್‌ ಹುಸೇನ್‌ ಮೆಚ್ಚಿಕೊಂಡಿದ್ದಾರೆ. ಇದಕ್ಕೆ ಬಿಜೆಪಿಯು ತಿರುಗೇಟು ನೀಡಿದೆ.

VISTARANEWS.COM


on

Rahul Gandhi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಪ್ರತಿಯೊಂದು ವಿಷಯವೂ ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರ ಮಧ್ಯೆ ವಾಗ್ಯುದ್ಧ, ವಾಗ್ದಾಳಿ, ಮಾತಿನ ಚಕಮಕಿ, ಆಕ್ರೋಶ, ಆರೋಪಗಳಿಗೆ ಕಾರಣವಾಗುತ್ತಿದೆ. ಇದರ ಬೆನ್ನಲ್ಲೇ, ರಾಹುಲ್‌ ಗಾಂಧಿ ಭಾಷಣವನ್ನು ಪಾಕಿಸ್ತಾನದ (Pakistan) ಮಾಜಿ ಸಚಿವ ಫವಾದ್‌ ಹುಸೇನ್‌ (Ch Fawad Hussain) ಮೆಚ್ಚಿಕೊಂಡಿದ್ದು, ಇದಕ್ಕೆ ಬಿಜೆಪಿ ಟಾಂಗ್‌ ಕೊಟ್ಟಿದೆ. “ಪಾಕಿಸ್ತಾನ ಹಾಗೂ ಕಾಂಗ್ರೆಸ್‌ ಮಧ್ಯೆ ಎಷ್ಟೊಂದು ಸ್ನೇಹ ಸಂಬಂಧ ಇದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ” ಎಂದು ಬಿಜೆಪಿ (BJP) ತಿರುಗೇಟು ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ, ಅವರ ಸರ್ಕಾರದ ನೀತಿಗಳ ಬಗ್ಗೆ, ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಗಣ್ಯರು ಮಾತ್ರ ಪಾಲ್ಗೊಂಡಿದ್ದರ ಬಗ್ಗೆ ರಾಹುಲ್‌ ಗಾಂಧಿ ಅವರು ಆಕ್ರೋಶಭರಿತರಾಗಿ ಮಾತನಾಡಿದ ವಿಡಿಯೊ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ. ಇದನ್ನು ಶೇರ್‌ ಮಾಡಿದ ಪಾಕ್‌ ಮಾಜಿ ಸಚಿವ ಫವಾದ್‌ ಹುಸೇನ್‌, “ರಾಹುಲ್‌ ಗಾಂಧಿ ಬೆಂಕಿಯುಂಡೆಯ ಕಾವಿನಂತೆ ಮಾತನಾಡುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನು ಬಿಜೆಪಿ ನಾಯಕರು ತರಾಟೆಗೆ ತೆಗೆದುಕೊಂಡಿದ್ದಾರೆ.

ಪಾಕ್‌ ಮಾಜಿ ಸಚಿವನ ಪ್ರತಿಕ್ರಿಯೆಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್‌ ಪೂನಾವಾಲ ತಿರುಗೇಟು ನೀಡಿದ್ದಾರೆ. “ಪಾಕಿಸ್ತಾನದ ಫವಾದ್‌ ಹುಸೇನ್‌ ರಾಹುಲ್‌ ಗಾಂಧಿ ಅವರನ್ನು ಹೊಗಳುತ್ತಿದ್ದಾರೆ ಎಂದರೆ, ಅವರ ಸಂಬಂಧ ಹೇಗಿದೆ ಎಂಬುದಕ್ಕೆ ಕೈಗನ್ನಡಿಯಾಗಿದೆ. ಕಾಂಗ್ರೆಸ್‌ನ ಕೈ ಪಾಕಿಸ್ತಾನದ ಹೆಗಲ ಮೇಲಿದೆ ಎಂಬುದಕ್ಕೆ ಇದಕ್ಕಿಂತ ಒಳ್ಳೆಯ ನಿದರ್ಶನ ಬೇಕಾಗಿಲ್ಲ. ಕಾಂಗ್ರೆಸ್‌ ಪ್ರಣಾಳಿಕೆಯು ಮುಸ್ಲಿಂ ಲೀಗ್‌ನಂತೆಯೇ ಇದೆ” ಎಂದು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಇದಕ್ಕೂ ಮೊದಲು ನನಗೆ ಕಾಂಗ್ರೆಸ್‌ ಪಕ್ಷ ಫೇವರಿಟ್‌ ಎಂದು ಉಗ್ರ ಹಫೀಜ್‌ ಸಯೀದ್‌ ಹೇಳಿದ್ದ. ಮಣಿಶಂಕರ್‌ ಅಯ್ಯರ್‌ ಅವರು ನರೇಂದ್ರ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಪಾಕಿಸ್ತಾನಕ್ಕೆ ಹೋಗಿದ್ದರು. ಕಾಂಗ್ರೆಸ್‌ ನಾಯಕರಿಂದಲೇ ಪಾಕಿಸ್ತಾನ ಜಿಂದಾಬಾದ್‌ ಎಂಬ ಘೋಷಣೆ ಕೇಳಿಬಂದಿದ್ದವು. ಬಿ.ಕೆ. ಹರಿಪ್ರಸಾದ್‌ ಅವರು ಬಹಿರಂಗವಾಗಿಯೇ ಪಾಕ್‌ ಪರ ಮಾತನಾಡಿದ್ದಾರೆ. ಪಾಕಿಸ್ತಾನದ ಉಗ್ರರನ್ನೂ ಕಾಂಗ್ರೆಸ್‌ ನಾಯಕರು ಬೆಂಬಲಿಸಿದ್ದರು. ಈಗ ಸಂಬಂಧ ಹೇಗಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ” ಎಂದು ಕುಟುಕಿದ್ದಾರೆ.

ಇದನ್ನೂ ಓದಿ: Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Continue Reading
Advertisement
karnataka Weather Forecast
ಮಳೆ37 mins ago

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Vastu Tips
ಲೈಫ್‌ಸ್ಟೈಲ್46 mins ago

Vastu Tips: ಮನೆ ಹೊರಗಿನ ಉದ್ಯಾನದಲ್ಲಿ ವಾಸ್ತು ಪಾಲಿಸಿ; ಮನೆಯೊಳಗಿನ ನೆಮ್ಮದಿ ವೃದ್ಧಿಸಿ

SMART Missile
ಸಂಪಾದಕೀಯ1 hour ago

ವಿಸ್ತಾರ ಸಂಪಾದಕೀಯ: ಕ್ಷಿಪಣಿ ಬಲದಿಂದ ನಮ್ಮ ನೌಕಾಪಡೆ ‘ಸ್ಮಾರ್ಟ್‌’ ಜತೆಗೆ ಇನ್ನಷ್ಟು ಬಲಿಷ್ಠ

Aloe Vera face mask
ಆರೋಗ್ಯ1 hour ago

Aloe Vera Benefits: ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಲೋಳೆಸರದ ಮಾಸ್ಕ್‌ ಬಳಸಿ

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

Benefits of Tender Coconut
ಆರೋಗ್ಯ2 hours ago

Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

Bhajanotsava
ಬೆಂಗಳೂರು5 hours ago

Bhajanotsava: ಓಂಕಾರ ಆಶ್ರಮದಲ್ಲಿ ನಿರಂತರ ಭಜನೋತ್ಸವ ಸಂಪನ್ನ

Shata Chandika Yaga
ಚಿಕ್ಕಬಳ್ಳಾಪುರ6 hours ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ7 hours ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ7 hours ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌