F&O trading : ಷೇರು ಮಾರುಕಟ್ಟೆಯಲ್ಲಿ ಫ್ಯೂಚರ್‌ & ಆಪ್ಷನ್ಸ್‌ ಟ್ರೇಡಿಂಗ್‌ಗೆ ತೆರಿಗೆ ಹೆಚ್ಚಳ - Vistara News

ಪ್ರಮುಖ ಸುದ್ದಿ

F&O trading : ಷೇರು ಮಾರುಕಟ್ಟೆಯಲ್ಲಿ ಫ್ಯೂಚರ್‌ & ಆಪ್ಷನ್ಸ್‌ ಟ್ರೇಡಿಂಗ್‌ಗೆ ತೆರಿಗೆ ಹೆಚ್ಚಳ

ಷೇರು ಮಾರುಕಟ್ಟೆಯಲ್ಲಿ ಫ್ಯೂಚರ್‌ & ಆಪ್ಷನ್ಸ್‌ ಟ್ರೇಡಿಂಗ್‌ಗೆ (F&O trading) ಸೆಕ್ಯುರಿಟಿ ಟ್ರಾನ್ಸಕ್ಷನ್‌ ತೆರಿಗೆಯನ್ನು ಏರಿಸಲಾಗಿದೆ. ಹಣಕಾಸು ವಿಧೇಯಕಕ್ಕೆ ತಿದ್ದುಪಡಿ ಮೂಲಕ ಈ ಏರಿಕೆ ಮಾಡಲಾಗಿದೆ.

VISTARANEWS.COM


on

stock invest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಷೇರು ಮಾರುಕಟ್ಟೆಯಲ್ಲಿ ಫ್ಯೂಚರ್‌ & ಆಪ್ಷನ್ಸ್‌ ಟ್ರೇಡಿಂಗ್‌ಗೆ ಸೆಕ್ಯುರಿಟೀಸ್‌ ಟ್ರಾನ್ಸಕ್ಷನ್‌ ತೆರಿಗೆಯನ್ನು (Securities transaction tax -STT) ಏರಿಸಲಾಗಿದೆ. (F&O trading) ಆಪ್ಷನ್‌ ಸೇಲ್‌ ಮೇಲೆ ತೆರಿಗೆಯನ್ನು 0.05%ರಿಂದ 0.062%ಕ್ಕೆ ಹಾಗೂ ಫ್ಯೂಚರ್‌ ವಹಿವಾಟಿನ ಮೇಲೆ 0.017%ರಿಂದ 0.021%ಕ್ಕೆ ಏರಿಸಲಾಗಿದೆ.

ಹಣಕಾಸು ವಿಧೇಯಕ 2023ಕ್ಕೆ ತಿದ್ದುಪಡಿ ಮಾಡಿರುವ ಪ್ರಕಾರ, ಆಪ್ಷನ್‌ ಸೇಲ್ಸ್‌ನಲ್ಲಿ 1 ಕೋಟಿ ರೂ.ಗಿಂತ ಹೆಚ್ಚಿನ ವಹಿವಾಟಿನ ಮೇಲೆ ಮೇಲ್ತೆರಿಗೆಯನ್ನು 1,700 ರೂ.ಗಳಿಂದ 2,100 ರೂ.ಗೆ ಏರಿಸಲಾಗಿದೆ. ಫ್ಯೂಚರ್‌ ವಹಿವಾಟಿನಲ್ಲಿ ಎಸ್‌ಟಿಟಿಯನ್ನು 1,000 ರೂ.ಗಳಿಂದ 1,250 ರೂ.ಗೆ ಏರಿಸಲಾಗಿದೆ.

2023ರಲ್ಲಿ ಮಾರ್ಚ್‌ ವೇಳೆಗೆ ಎಸ್‌ಟಿಟಿ ಸಂಗ್ರಹದಿಂದ ಸರ್ಕಾರದ ಬೊಕ್ಕಸಕ್ಕೆ 20,000 ಕೋಟಿ ರೂ. ದೊರೆಯುವ ನಿರೀಕ್ಷೆ ಇದೆ. ಇದು ಈ ಹಿಂದಿನ ಆರ್ಥಿಕ ವರ್ಷಕ್ಕೆ ಹೋಲಿಸಿದರೆ 60% ಹೆಚ್ಚಳವಾಗಿದೆ. 2020-21ರಲ್ಲಿ 16,927 ಕೋಟಿ ರೂ. ಎಸ್‌ಟಿಟಿ ಸಂಗ್ರಹವಾಗಿತ್ತು. 2004ರಲ್ಲಿ ಎಸ್‌ಟಿಟಿಯನ್ನು ಜಾರಿಗೊಳಿಸಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ; ವಿಡಿಯೊ ಇದೆ

IPL 2024: ವಿರಾಟ್ ಕೊಹ್ಲಿ ಏಪ್ರಿಲ್ 28 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದೊಂದಿಗೆ ಆರ್​ಸಿಬಿ ಫ್ರಾಂಚೈಸಿಗಾಗಿ ತಮ್ಮ ಪಾತ್ರವನ್ನು ಪುನರಾವರ್ತಿಸಲಿದ್ದಾರೆ. ಸ್ಪರ್ಧೆಗೆ ಒಂದು ದಿನ ಮುಂಚಿತವಾಗಿ ಅವರು ಮತ್ತು ಅವರ ಉಳಿದ ಆಟಗಾರರ ಜತೆ ಹೋಟೆಲ್​ಗೆ ಆಗಮಿಸಿದರು. ಈ ಮೂಲಕ ಅವರು ಅಹಮದಾಬಾದ್​ನಲ್ಲಿ ತಮ್ಮ ಇರುವಿಕೆಯನ್ನು ಗುರುತಿಸಿಕೊಂಡರು.

VISTARANEWS.COM


on

Virat Kohli
Koo

ಬೆಂಗಳೂರು: ಮುಂಬರುವ ಐಪಿಎಲ್ 2024 ರಲ್ಲಿ (IPL 2024) ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡದ ಇತರ ಆಟಗಾರರು ಅಹಮದಾಬಾದ್​ಗೆ ಆಗಮಿಸಿದ್ದಾರೆ. ಬಹುನಿರೀಕ್ಷಿತ ಮುಖಾಮುಖಿಗೆ ಒಂದು ದಿನ ಮೊದಲು ಬಂದ ಆರ್​ಸಿಬಿ ಪಡೆಗಳಿಗೆ ತಂಡದ ಹೋಟೆಟ್​ನಲ್ಲಿ ಭವ್ಯ ಸ್ವಾಗತ ದೊರೆಯಿತು.

ಹೋಟೆಲ್​ನಲ್ಲಿ ಸಿಕ್ಕಿರುತ ಆತ್ಮೀಯ ಸ್ವಾಗತವನ್ನು ಸ್ವೀಕರಿಸಿದವರಲ್ಲಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಸೇರಿದ್ದಾರೆ. ಅದರ ತುಣುಕುಗಳು ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ.

ವಿರಾಟ್ ಕೊಹ್ಲಿ ಏಪ್ರಿಲ್ 28 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆತಿಥೇಯ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದೊಂದಿಗೆ ಆರ್​ಸಿಬಿ ಫ್ರಾಂಚೈಸಿಗಾಗಿ ತಮ್ಮ ಪಾತ್ರವನ್ನು ಪುನರಾವರ್ತಿಸಲಿದ್ದಾರೆ. ಸ್ಪರ್ಧೆಗೆ ಒಂದು ದಿನ ಮುಂಚಿತವಾಗಿ ಅವರು ಮತ್ತು ಅವರ ಉಳಿದ ಆಟಗಾರರ ಜತೆ ಹೋಟೆಲ್​ಗೆ ಆಗಮಿಸಿದರು. ಈ ಮೂಲಕ ಅವರು ಅಹಮದಾಬಾದ್​ನಲ್ಲಿ ತಮ್ಮ ಇರುವಿಕೆಯನ್ನು ಗುರುತಿಸಿಕೊಂಡರು.

ಐಪಿಎಲ್ 2024 ರ ಸ್ಟಾರ್ ಆಕರ್ಷಣೆಗಳಲ್ಲಿ ಒಬ್ಬರಾದ ಕೊಹ್ಲಿ ಏಪ್ರಿಲ್ 27 ರಂದು ತಂಡದ ಹೋಟೆಲ್​ಗೆ ಹೋಗುವ ವೇಳೆ ಭವ್ಯ ಸ್ವಾಗತ ಪಡೆದರು.

ಆರೆಂಜ್ ಕ್ಯಾಪ್ ವೀರ ಕೊಹ್ಲಿ

ವಿರಾಟ್ ಕೊಹ್ಲಿ ಪ್ರಸ್ತುತ ಐಪಿಎಲ್ 2024 ರ ಋತುವಿನಲ್ಲಿ ‘ಆರೆಂಜ್ ಕ್ಯಾಪ್’ ಹೊಂದಿದ್ದಾರೆ. ಕ್ರಿಕೆಟಿಗ ಈಗಾಗಲೇ ಕೇವಲ ಒಂಬತ್ತು ಇನಿಂಂಗ್ಸ್​​​ಗಳಲ್ಲಿ 61 ಕ್ಕೂ ಹೆಚ್ಚು ಸರಾಸರಿಯಲ್ಲಿ 430 ರನ್ ಗಳಿಸಿದ್ದಾರೆ/ ಎರಡನೇ ಸ್ಥಾನದಲ್ಲಿರುವ ಸುನಿಲ್ ನರೈನ್ ಅವರನ್ನು 73 ರನ್​ಗಳಿಂದ ಮುನ್ನಡೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: IPL 2024 : ಪಂದ್ಯದ ನಡುವೆ ಮೈದಾನದಲ್ಲೇ ಗಾಳಿಪಟ ಹಾರಿಸಿದ ಪಂತ್​, ರೋಹಿತ್! ಇಲ್ಲಿದೆ ವಿಡಿಯೊ

ಕೊಹ್ಲಿ ಇತ್ತೀಚೆಗೆ ಹೈದರಾಬಾದ್​ನಲ್ಲಿ ನಡೆದ ಎಸ್ಆರ್​​ಎಚ್​ ತಂಡದ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದರು. ಈ ಗೆಲುವು ಒಂದು ತಿಂಗಳಲ್ಲಿ ಆರ್​ಸಿಬಿಯ ಮೊದಲ ಗೆಲುವು ಮತ್ತು ಋತುವಿನ ಒಟ್ಟಾರೆ ಎರಡನೇ ಗೆಲುವು.

ಒಂಬತ್ತು ಲೀಗ್ ಪಂದ್ಯಗಳಲ್ಲಿ ಕೇವಲ ಎರಡು ಗೆಲುವುಗಳನ್ನು ಗಳಿಸಿರುವ ಫಾಫ್ ಡು ಪ್ಲೆಸಿಸ್ ನೇತೃತ್ವದ ಆರ್ಸಿಬಿ ಗುಂಪು ಐಪಿಎಲ್ 2024 ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದೆ. ಏಣಿಯನ್ನು ಏರುವ ಪ್ರಯತ್ನದಲ್ಲಿ ಅವರು ಪಂದ್ಯಾವಳಿಯ ಈ ಹಂತದಲ್ಲಿ ಗುಜರಾತ್ ಟೈಟಾನ್ಸ್ ಅನ್ನು ಸೋಲಿಸಬೇಕಾಗಿದೆ.

Continue Reading

ಕರ್ನಾಟಕ

Narendra Modi: ಇಂದು ರಾತ್ರಿಯೇ ರಾಜ್ಯಕ್ಕೆ ಮೋದಿ ಆಗಮನ; ನಾಳೆಯಿಂದ ಅಬ್ಬರದ ಪ್ರಚಾರ, ವಿವರ ಇಲ್ಲಿದೆ

Narendra Modi: ಕರ್ನಾಟಕದಲ್ಲಿ ಎರಡನೇ ಹಂತದ ಮತದಾನದತ್ತ ಎಲ್ಲ ರಾಜಕೀಯ ಪಕ್ಷಗಳೂ ಗಮನ ಹರಿಸುತ್ತಿವೆ. ಇದರ ಭಾಗವಾಗಿಯೇ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾತ್ರಿ ಕರ್ನಾಟಕಕ್ಕೆ ಆಗಮಿಸಲಿದ್ದು, ಭಾನುವಾರ ಹಾಗೂ ಸೋಮವಾರ ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ. ಮೋದಿ ಭೇಟಿಯ ಕಾರ್ಯಕರ್ಮಗಳ ವಿವರ ಇಂತಿದೆ.

VISTARANEWS.COM


on

Narendra Modi
Koo

ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಎರಡನೇ ಹಂತದ ಮತದಾನವು ಮೇ 7ರಂದು ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್‌ ಸೇರಿ ಎಲ್ಲ ಪಕ್ಷಗಳು ಉತ್ತರ ಕರ್ನಾಟಕ ಭಾಗದ ಕಡೆ ಹೆಚ್ಚು ಒತ್ತು ಕೊಡುತ್ತಿವೆ. ಪಕ್ಷಗಳ ಬಹುತೇಕ ನಾಯಕರು ಉತ್ತರ ಕರ್ನಾಟಕದಲ್ಲಿಯೇ ಬೀಡುಬಿಟ್ಟಿದ್ದಾರೆ. ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಭಾನುವಾರ (ಏಪ್ರಿಲ್‌ 28) ಹಾಗೂ ಸೋಮವಾರ (ಏಪ್ರಿಲ್‌ 29) ರಾಜ್ಯದಲ್ಲಿ ನರೇಂದ್ರ ಮೋದಿ (Narendra Modi) ಅವರು ಅಬ್ಬರದ ಪ್ರಚಾರ ಕೈಗೊಳ್ಳಲಿದ್ದಾರೆ.

ನರೇಂದ್ರ ಮೋದಿ ಅವರು ಶನಿವಾರ (ಏಪ್ರಿಲ್‌ 27) ರಾತ್ರಿಯೇ ಬೆಳಗಾವಿಗೆ ಆಗಮಿಸಲಿದ್ದು, ಕುಂದಾ ನಗರಿಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಶನಿವಾರ ರಾತ್ರಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲು ಲೋಕಸಭೆ ಕ್ಷೇತ್ರದ ವ್ಯಾಪ್ತಿಯ 15 ಮಂದಿಗೆ ಸ್ವಾಗತ ಕೋರಲು ಅವಕಾಶ ನೀಡಲಾಗಿದೆ. ಬಾಳೇಶ್ ಚವ್ವನ್ನವರ್, ರಾಜೇಶ್ವರಿ ಒಡೆಯರ್, ಸುಭಾಷ್ ಸಣ್ಣ ವೀರಪ್ಪನವರ್ ಸೇರಿ ಬೆಳಗಾವಿಯ 15 ಹಲವು ಸಮುದಾಯಗಳ ಮುಖಂಡರಿಗೆ ಮೋದಿ ಅವರನ್ನು ಸ್ವಾಗತಿಸಲು ಅವಕಾಶ ಮಾಡಿಕೊಡಲಾಗಿದೆ. ಅವಕಾಶ ಪಡೆದ ಮುಖಂಡರು ಸಂತಸ ವ್ಯಕ್ತಪಡಿಸಿದ್ದಾರೆ.

Karnataka Election: PM Modi Roadshow Ends In Bengaluru, Here are some photos

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಇವಿಎಂ ಧ್ವಂಸ; ಚಾಮರಾಜನಗರದ ಇಂಡಿಗನತ್ತ ಗ್ರಾಮದಲ್ಲಿ ಏಪ್ರಿಲ್‌ 29ರಂದು ಮರು ಮತದಾನ!

Continue Reading

ಬೆಂಗಳೂರು

Namma Metro: ಟಿಸಿಎಸ್‌ ಮ್ಯಾರಥಾನ್‌ ಹಿನ್ನೆಲೆ ಭಾನುವಾರ ಮುಂಜಾನೆ 3.35ರಿಂದಲೇ ಮೆಟ್ರೋ ರೈಲು ಸೇವೆ

Namma Metro: ಸಾಮಾನ್ಯವಾಗಿ ಪ್ರತಿದಿನ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ. ಆದರೆ, ಟಿಸಿಎಸ್‌ ಮ್ಯಾರಥಾನ್‌ ಪ್ರಯುಕ್ತ ಬೆಂಗಳೂರಿನಲ್ಲಿ ಏ.28ರಂದು ಮುಂಜಾನೆ 3:35ರಿಂದ 4.25ರವರೆಗೆ ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ ಎಂದು ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

Namma Metro
Koo

ಬೆಂಗಳೂರು: ನಗರದಲ್ಲಿ ಏಪ್ರಿಲ್​ 28ರಂದು ಭಾನುವಾರ ಬೆಳಗ್ಗೆ ಆಯೋಜಿಸಿರುವ ಟಿಸಿಎಸ್‌ ವರ್ಲ್ಡ್ 10K ಮ್ಯಾರಥಾನ್‌ನಲ್ಲಿ ಭಾಗವಹಿಸುವವರಿಗೆ ನಮ್ಮ ಮೆಟ್ರೋ (Namma Metro) ಸಿಹಿ ಸುದ್ದಿ ನೀಡಿದೆ. ನಗರದ ಫೀಲ್ಡ್ ಮಾರ್ಷಲ್ ಸ್ಯಾಮ್ ಮಾಣೆಕ್​ ಷಾ ಪರೇಡ್ ಮೈದಾನದಲ್ಲಿ ಟಿಸಿಎಸ್‌ ವರ್ಲ್ಡ್ 10K ಮ್ಯಾರಥಾನ್ (TCS World 10K Bengaluru 2024) ಶುರುವಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲು ನಮ್ಮ ಮೆಟ್ರೋ ರೈಲು ಸೇವೆ ಮುಂಜಾನೆ 3.35ರಿಂದಲೇ ಆರಂಭವಾಗಲಿದೆ.

ಸಾಮಾನ್ಯವಾಗಿ ಪ್ರತಿದಿನ ಬೆಳಗ್ಗೆ 7 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ. ಆದರೆ, ಟಿಸಿಎಸ್‌ ಮ್ಯಾರಥಾನ್‌ ಪ್ರಯುಕ್ತ ಮುಂಜಾನೆ 3:35ರಿಂದ 4.25ರವರೆಗೆ ಮೆಟ್ರೋ ರೈಲುಗಳು ಸಂಚಾರ ಮಾಡಲಿವೆ.

ಮೆಟ್ರೊ ರೈಲಿನ ಎಲ್ಲ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರದಿಂದ ರೇಷ್ಮೆ ಸಂಸ್ಥೆ. ಚಲ್ಲಘಟ್ಟದಿಂದ ವೈಟ್ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳ ವರೆಗೆ ರೈಲುಗಳು ಸಂಚರಿಸಲಿವೆ. ಮುಂಜಾನೆ 3.35 ರಿಂದ 4.25 ಗಂಟೆಯ ಸಮಯದಲ್ಲಿ 10 ನಿಮಿಷಗಳ ಆವರ್ತನದಲ್ಲಿ ರೈಲು ಸಂಚರಿಸಲಿದೆ ಎಂದು ನಮ್ಮ ಮೆಟ್ರೊ ಮಾಹಿತಿ ನೀಡಿದೆ.

ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಂ.ಜಿ ರಸ್ತೆ ಕಡೆಗೆ ಮೊದಲ ರೈಲು ಸೇವೆಯು ಬೆಳಗ್ಗೆ 4.10 ಗಂಟೆಗೆ ಪ್ರಾರಂಭವಾಗಲಿದೆ. ನಂತರ 10 ನಿಮಿಷಗಳ ಅಂತರದಿಂದ ಬೆಳಿಗ್ಗೆ 5.00 ಗಂಟೆಯವರೆಗೆ ರೈಲುಗಳು ಸಂಚರಿಸಲಿದೆ. ಆ ನಂತರ ರೈಲುಗಳು ಜನರ ದಟ್ಟಣೆಯ ಅನುಗುಣವಾಗಿ ಚಲಿಸುತ್ತವೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Namma Metro : ನಮ್ಮ ಮೆಟ್ರೊ ವಿಸ್ತೃತ ನೇರಳೆ ಮಾರ್ಗ ಲೋಕಾರ್ಪಣೆ ಮಾಡಿದ ಮೋದಿ; ಏನಿದರ ವಿಶೇಷತೆ?

10K ಓಟದಲ್ಲಿ ಭಾಗವಹಿಸಲು ಸೌಲಭ್ಯವನ್ನು ಬಳಸಿಕೊಳ್ಳುವಂತೆ ಮೆಟ್ರೊ ಅಧಿಕಾರಿಗಳು ವಿನಿಂತಿ ಮಾಡಿದ್ದಾರೆ. ಸಾರ್ವಜನಿಕರು ನಗದು ರಹಿತ QR ಟಿಕೆಟ್‌ಗಳನ್ನು ಖರೀದಿಸಿ ಪ್ರಯಾಣಿಸುವಂತೆ ಬಿ.ಎಂ.ಆರ್.ಸಿ.ಎಲ್ ಹೇಳಿದೆ.

ಏ.28ರಂದು ಬೆಳಗ್ಗೆ ರಾಜಧಾನಿಯ ಈ ಮಾರ್ಗಗಳಲ್ಲಿ ಸಂಚಾರ ನಿರ್ಬಂಧ

ಬೆಂಗಳೂರು: ನಗರದಲ್ಲಿ ಏಪ್ರಿಲ್ 28ರಂದು ಟಿಸಿಎಸ್ ವರ್ಲ್ಡ್ 10ಕೆ ಮ್ಯಾರಥಾನ್‌ (TCS World 10K Bengaluru 2024) ನಡೆಯುವ ಹಿನ್ನೆಲೆಯಲ್ಲಿ ರಾಜಧಾನಿಯ ಪ್ರಮುಖ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಬೆಳಗ್ಗೆ 4 ಗಂಟೆಯಿಂದ 10 ಗಂಟೆಯವರೆಗೆ ಮ್ಯಾರಥಾನ್‌ ನಡೆಯಲಿದ್ದು, ಸುಮಾರು 25,000 ಜನರು ಭಾಗವಹಿಸಲಿದ್ದಾರೆ. ಮ್ಯಾರಥಾನ್ ಸಲುವಾಗಿ ವಾಹನಗಳ ಸುಗಮ ಸಂಚಾರಕ್ಕಾಗಿ ಹಲವೆಡೆ ವಾಹನ ನಿಲುಗಡೆ ನಿರ್ಬಂಧ ಹಾಗೂ ಮಾರ್ಗ ಬದಲಾವಣೆ (Traffic Restrictions) ಮಾಡಿದ್ದು, ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಿಕೊಳ್ಳಬೇಕು ಎಂದು ಬೆಂಗಳೂರು ಸಂಚಾರ ಪೊಲೀಸ್‌ ವಿಭಾಗ ಮಾಹಿತಿ ನೀಡಿದೆ.

ವಾಹನ ಸಂಚಾರ ನಿರ್ಬಂಧಿಸಲಾಗಿರುವ ರಸ್ತೆಗಳು

  1. ವಿಧಾನಸೌಧದ ಕಡೆಗೆ ಸಂಚರಿಸುವ ವಾಹನಗಳನ್ನು ಕೆ.ಆರ್ ಸರ್ಕಲ್‌ನಲ್ಲಿ ಮಾರ್ಗ ಬದಲಾಯಿಸಿ ಪೊಲೀಸ್ ಕಾರ್ನರ್ ಕಡೆಗೆ ಚಲಿಸಲು ಅವಕಾಶ ಕಲ್ಪಿಸಲಾಗಿದೆ ಹಾಗೂ ವಿಧಾನಸೌಧದ ಕಡೆಗೆ ಯಾವುದೇ ವಾಹನಗಳ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.(ಬೆಳಗ್ಗೆ 4 ರಿಂದ 8 ರವರೆಗೆ)
  2. ಬಾಳೇಕುಂದ್ರಿ ವೃತ್ತದಿಂದ ವಿಧಾನಸೌಧದ ಕಡೆಗೆ ಬರುವ ವಾಹನಗಳನ್ನು ಬಾಳೇಕುಂದ್ರಿ ಜಂಕ್ಷನ್‌ನಲ್ಲಿ ಮಾರ್ಗ ಬದಲಾಯಿಸಿ ಕನ್ನಿಂಗ್‌ಹ್ಯಾಮ್ ರಸ್ತೆ ಕಡೆಗೆ ಚಲಿಸಲು ಅವಕಾಶ ಕಲ್ಪಿಸಲಾಗಿದೆ. (ಬೆಳಗ್ಗೆ 4 ರಿಂದ 8 ವರೆಗೆ)
  3. ಕಬ್ಬನ್‌ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಯಿಂದ ಸಿ.ಟಿ.ಓ. ವೃತ್ತದವರೆಗೆ ಎರಡೂ ಕಡೆಯಲ್ಲೂ ವಾಹನ
    ಸಂಚಾರ ನಿರ್ಬಂಧಿಸಿದೆ.(ಬೆಳಗ್ಗೆ 4 ರಿಂದ 10:30 ರವರೆಗೆ)
  4. ಕಾಫಿಬೋರ್ಡ್ ನಿಂದ ಬರುವ ಎಲ್ಲಾ ವಾಹನಗಳು ಸಿ.ಟಿ.ಓ ಸರ್ಕಲ್ ಕಡೆಗೆ ಚಲಿಸಲು ಅವಕಾಶವಿರುವುದಿಲ್ಲ. ಟ್ರಾಫಿಕ್ ಹೆಡ್‌ಕ್ವಾರ್ಟರ್ ಜಂಕ್ಷನ್‌ನಿಂದ ನೇರವಾಗಿ ಚಲಿಸುವುದು.(ಬೆಳಗ್ಗೆ 4 ರಿಂದ 10:00)

ಈ ಕೆಳಕಂಡಲ್ಲಿ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ

  1. ಇಂದಿರಾನಗರ, ಕೆ.ಆರ್.ಪುರಂ, ವೈಟ್ ಪೀಲ್ಡ್‌ನಿಂದ ಬರುವ ವಾಹನಗಳ ಸಂಚಾರವನ್ನು ಆಂಜನೇಯ ಜಂಕ್ಷನ್‌ನಲ್ಲಿ ಹಲಸೂರು ಲೇಕ್ ಕಡಗೆ ಬಲತಿರುವನ್ನು ನಿಷೇಧಿಸಲಾಗಿರುತ್ತದೆ.
  2. ಸಿಂಧಿ ಕಾಲೋನಿ ಜಂಕ್ಷನ್‌ನಲ್ಲಿ ಅಸ್ಸಾಯೇ ರಸ್ತೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ವೀಲರ್ಸ್ ರಸ್ತೆ, ಸೆಂಟ್‌ಜಾನ್ಸ್ ಚರ್ಚ್ ರಸ್ತೆ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
  3. ಕೀರ್ತಿ ಸಾಗರ್ ಜಂಕ್ಷನ್‌ನಲ್ಲಿ ಅಸ್ಸಾಯೆ ರಸ್ತೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ವೀಲರ್ಸ್ ರಸ್ತೆ, ಸೆಂಟ್‌ಜಾನ್ಸ್ ಚರ್ಚ್ ರಸ್ತೆ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.
  4. ಥಾಮ್ಸ್ ಬೇಕರಿ ಜಂಕ್ಷನ್‌ನಲ್ಲಿ ಅಸ್ಸಾಯೆ ರಸ್ತೆ ಮತ್ತು ನಾಗಾ ಜಂಕ್ಷನ್ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ವೀಲರ್ಸ್ ರಸ್ತೆ, ಸೆಂಟ್ ಜಾನ್ಸ್ ಚರ್ಚ್ ರಸ್ತೆ ಮುಖಾಂತರ ವಾಹನಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.
    ನಾಗಾ ಜಂಕ್ಷನ್‌ನಲ್ಲಿ ಸೆಂಟ್ ಜಾನ್ಸ್ ರಸ್ತೆಗೆ ಮತ್ತು ಹಲಸೂರು ಕೆರೆ ಕಡೆಗೆ ಹೋಗುವ ವಾಹನಗಳನ್ನು ನಿರ್ಬಂಧಿಸಿ ಸೆಂಟ್ ಜಾನ್ಸ್ ಚರ್ಚ್ ರಸ್ತೆ ಹಾಗೂ ಪ್ರೊಮೈಡ್ ರಸ್ತೆ ಮುಖಾಂತರ ವಾಹನಗಳ ಸಂಚಾರಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ.
  5. ಲಾವಣ್ಯ ಜಂಕ್ಷನನಲ್ಲಿ ಶ್ರೀ ಸರ್ಕಲ್ ಕಡೆಗೆ ಹೋಗುವ ಎಲ್ಲಾ ರೀತಿಯ ವಾಹನಗಳನ್ನು ನಿರ್ಬಂಧಿಸಿ ಎಸ್.ಸಿ. ಗಾರ್ಡನ್ ಮುಖಾಂತರ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಭಾರೀ ವಾಹನಗಳ ಮಾರ್ಗ ಬದಲಾವಣೆ

  • ಓಲ್ಡ್ ಏರ್‌ಪೋರ್ಟ್ ರಸ್ತೆಯಿಂದ ಬರುವ ವಾಹನಗಳನ್ನು ಎ.ಎಸ್.ಸಿ ಸೆಂಟರ್‌ನಿಂದ ಇಂಡಿಯಾ ಗ್ಯಾರೇಜ್ ಮೂಲಕ ರಿಚ್‌ ಮಂಡ್ ಸರ್ಕಲ್ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.
  • ಹಲಸೂರು ಮತ್ತು ಟ್ರಿನಿಟಿ ಕಡೆಯಿಂದ ಬರುವ ವಾಹನಗಳನ್ನು ಟ್ರಿನಿಟಿ ವೃತ್ತದಲ್ಲಿ ಹಾಸ್ಕೆಟ್ ಜಂಕ್ಷನ್ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗುವುದು.

ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಿರುವ ಸ್ಥಳಗಳು

  1. ಮ್ಯಾರಥಾನ್‌ನಲ್ಲಿ ಭಾಗವಹಿಸಲು ಬರುವ ವಾಹನಗಳಿಗೆ:
  2. ಕಂಠೀರವ ಕ್ರೀಡಾಂಗಣ
  3. ಒನ್ ಎಂ.ಜಿ ಮಾಲ್
  4. ಗರುಡಾ ಮಾಲ್
  5. ಆರ್ಮಿ ಪಬ್ಲಿಕ್ ಸ್ಕೂಲ್ (ಹಿರಿಯ ನಾಗರೀಕರ ಮತ್ತು ಬಸ್ಸುಗಳಿಗಾಗಿ)
  6. ಮಣಿಪಾಲ್ ಸೆಂಟರ್ (ಮಾಧ್ಯಮದ ವಾಹನಗಳಿಗೆ)

ಇದನ್ನೂ ಓದಿ | Namma Metro: ಅಡಚಡಣೆಗಾಗಿ ಕ್ಷಮಿಸಿ; ಮೆಟ್ರೋ ಕಾಮಗಾರಿಗಾಗಿ ಈ ರೂಟ್‌ನಲ್ಲಿ 1 ವರ್ಷ ವಾಹನ ಓಡಾಟವಿಲ್ಲ

ವಾಹನ ಪಾರ್ಕಿಂಗ್‌ ನಿರ್ಬಂಧಿತ ಸ್ಥಳಗಳು

  1. ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ
  2. ಕೆ.ಬಿ. ರಸ್ತೆ
  3. ನೃಪತುಂಗ ರಸ್ತೆ
  4. ಕ್ಲೀನ್ಸ್ ರಸ್ತೆ
  5. ರಾಜಭವನ ರಸ್ತೆ
  6. ಮ್ಯೂಸಿಯಂ ರಸ್ತೆ
  7. ಕಬ್ಬನ್ ರಸ್ತೆ,
  8. ಡಾ. ಬಿ.ಆ‌ರ್. ಅಂಬೇಡ್ಕರ್ ರಸ್ತೆ
  9. ಗೋಪಾಲಗೌಡ ವೃತ್ತ
  10. ಡಿಸ್ಪೆನ್ಸರಿ ರಸ್ತೆ
  11. ಡಿಕೆನ್ಸನ್ ರಸ್ತೆ
  12. ಸೆಂಟ್ ಜಾನ್ಸ್ ರಸ್ತೆ
  13. ಅಜಂತಾ ರಸ್ತೆ
  14. ಅಣ್ಣಾಸ್ವಾಮಿ ಮೊದಲಿಯಾರ್ ರಸ್ತೆ
    ಎಂ.ಜಿ.ರಸ್ತೆ
  15. ಕಮೀಷರಿಯೇಟ್ ರಸ್ತೆ
  16. ಮಗರತ್ ರಸ್ತೆ,
  17. ಬ್ರಿಗೇಡ್ ರಸ್ತೆ
  18. ಎ.ಎಸ್.ಸಿ ಸೆಂಟರ್‌ನಿಂದ ರಿಚ್ ಮಂಡ್ ಸರ್ಕಲ್
    ವರೆಗೆ
  19. ವೆಬ್ ಜಂಕ್ಷನ್‌ನಿಂದ ಅಡಿಗಾಸ್ ವರೆಗೆ
  20. ಭಾಸ್ಕರನ್ ರಸ್ತೆ
  21. ಗಂಗಾಧರ್ ಚೆಟ್ಟಿ ರಸ್ತೆ.
  22. ವಾರ್ ಮೆಮೋರಿಯಲ್ ರಸ್ತೆ,
  23. ರೆಸಿಡೆನ್ಸಿ ರಸ್ತೆ
  24. ಎ.ವಿ.ಎಂ. ರಸ್ತೆ
  25. ಗುರುದ್ವಾರ ರಸ್ತೆ
Continue Reading

ಕ್ರೀಡೆ

IPL 2024 : ಪಂದ್ಯದ ನಡುವೆ ಮೈದಾನದಲ್ಲೇ ಗಾಳಿಪಟ ಹಾರಿಸಿದ ಪಂತ್​, ರೋಹಿತ್! ಇಲ್ಲಿದೆ ವಿಡಿಯೊ

IPL 2024: ರಿಷಭ್ ಪಂತ್ ಮತ್ತು ಅವರ ತಂಡದ ವಿರುದ್ಧ 258 ರನ್​ಗಳ ಬೃಹತ್ ಗುರಿ ಬೆನ್ನಟ್ಟಲು ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಆರಂಭಿಕರಾಗಿ ಮುಂಬಯಿ ಪರ ಆಡಲು ಬಂದಾಗ ಈ ಘಟನೆ ಸಂಭವಿಸಿದೆ. ಮೊದಲ ಓವರ್​ನಲ್ಲಿ ಲಿಜಾದ್ ವಿಲಿಯಮ್ಸ್ ಬೌಲಿಂಗ್ ಮಾಡುತ್ತಿದ್ದಾಗ, ಎಲ್ಲಿಂದಲೋ ಗಾಳಿಪಟ ಹಾರಿ ಬಂತು. ರೋಹಿತ್ ಅದನ್ನು ಎತ್ತಿಕೊಂಡು ರಿಷಭ್ ಪಂತ್​ಗೆ ನೀಡಿದರು, ಅವರು ಅದನ್ನು ಲೆಗ್ ಅಂಪೈರ್ ನೀಡುವ ಮೂಲಕ ಅದನ್ನು ಹೊರಕ್ಕ ಕಳುಹಿಸಿದರು. ಇದು ಅವರಿಬ್ಬರೂ ಗಾಳಿಪಟ ಆಡುತ್ತಿದ್ದಾರೆ ಎಂಬಂತ ಸಂದರ್ಭವನ್ನು ಸೃಷ್ಟಿಸಿತು.

VISTARANEWS.COM


on

ipl 2024
Koo

ಬೆಂಗಳೂರು: ಐಪಿಎಲ್​ ಪಂದ್ಯ ನಡೆಯುವ ಕ್ರಿಕೆಟ್ ಮೈದಾನಗಳು ಗುಣಮಟ್ಟದ ಬ್ಯಾಟಿಂಗ್ ಮತ್ತು ಅದ್ಭುತ ಬೌಲಿಂಗ್​ಗಾಗಿ ಬೆರಗುಗೊಳಿಸುತ್ತವೆ. ಆದರೆ ಕೆಲವೊಮ್ಮೆ, ಬೇರೆ ಖುಷಿಯೂ ಸಿಗುತ್ತಿರುತ್ತವೆ. ಎಲ್ಲಿಂದಲೂ ಉಂಟಾಗುವ ಸಮಸ್ಯೆಗಳು ನೋಡುಗರ ಪಾಲಿಗೆ ಖುಷಿಯ ವಿಷಯವಾಗುತ್ತದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶನಿವಾರ ಮಧ್ಯಾಹ್ನ ನಡೆದ ಐಪಿಎಲ್ 2024 ರ (IPL 2024) 43ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ಇದೇ ರೀತಿಯ ಘಟನೆ ನಡೆಯಿತು. ಗಾಳಿಪವೊಂದು ತೂರಿಕೊಂಡು ಬಂದು ಮೈದಾನಕ್ಕೆ ಬಿದ್ದ ಬಳಿಕ ನಡೆದ ಈ ಪ್ರಸಂಗ ನೆಟ್ಟಿಗರ ಗಮನ ಸೆಳೆಯಿತು.

ರಿಷಭ್ ಪಂತ್ ಮತ್ತು ಅವರ ತಂಡದ ವಿರುದ್ಧ 258 ರನ್​ಗಳ ಬೃಹತ್ ಗುರಿ ಬೆನ್ನಟ್ಟಲು ರೋಹಿತ್ ಶರ್ಮಾ ಮತ್ತು ಇಶಾನ್ ಕಿಶನ್ ಆರಂಭಿಕರಾಗಿ ಮುಂಬಯಿ ಪರ ಆಡಲು ಬಂದಾಗ ಈ ಘಟನೆ ಸಂಭವಿಸಿದೆ. ಮೊದಲ ಓವರ್​ನಲ್ಲಿ ಲಿಜಾದ್ ವಿಲಿಯಮ್ಸ್ ಬೌಲಿಂಗ್ ಮಾಡುತ್ತಿದ್ದಾಗ, ಎಲ್ಲಿಂದಲೋ ಗಾಳಿಪಟ ಹಾರಿ ಬಂತು. ರೋಹಿತ್ ಅದನ್ನು ಎತ್ತಿಕೊಂಡು ರಿಷಭ್ ಪಂತ್​ಗೆ ನೀಡಿದರು, ಅವರು ಅದನ್ನು ಲೆಗ್ ಅಂಪೈರ್ ನೀಡುವ ಮೂಲಕ ಅದನ್ನು ಹೊರಕ್ಕ ಕಳುಹಿಸಿದರು. ಇದು ಅವರಿಬ್ಬರೂ ಗಾಳಿಪಟ ಆಡುತ್ತಿದ್ದಾರೆ ಎಂಬಂತ ಸಂದರ್ಭವನ್ನು ಸೃಷ್ಟಿಸಿತು.

ಇದಕ್ಕೂ ಮುನ್ನ ಡೆಲ್ಲಿ 4 ವಿಕೆಟ್ ನಷ್ಟಕ್ಕೆ 257 ರನ್ ಗಳಿಸಿದ್ದು, ಜೇಕ್ ಫ್ರೇಸರ್-ಮೆಕ್ಗುರ್ಕ್ 27 ಎಸೆತಗಳಲ್ಲಿ 84 ರನ್ ಗಳಿಸಿ ಗರಿಷ್ಠ ಸ್ಕೋರರ್​ ಎನಿಸಿಕೊಂಡರು. ಟ್ರಿಸ್ಟಾನ್ ಸ್ಟಬ್ಸ್, ಶಾಯ್ ಹೋಪ್ ಮತ್ತು ಪಂತ್ ಉತ್ತಮ ಕೊಡುಗೆ ನೀಡಿ ತಂಡವನ್ನು 250 ರನ್​ಗಳ ಗಡಿ ದಾಟಿಸಿದರು.

ಇಶಾನ್​ ಕಿಶನ್ ಕಳಪೆ ಆಟ ಮುಂದುವರಿಕೆ

ಇಶಾನ್ ಕಿಶನ್ ಭಾರತೀಯ ಕ್ರಿಕೆಟ್​​ನ ಅತ್ಯಂತ ಪ್ರತಿಭಾವಂತ ವಿಕೆಟ್ ಕೀಪರ್ ಬ್ಯಾಟರ್​ಗಳಲ್ಲಿ ಒಬ್ಬರು. ಆದರೆ ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2024 ರಲ್ಲಿ ಫಾರ್ಮ್ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆಡಿರುವ 9 ಪಂದ್ಯಗಳಲ್ಲಿ 23.56ರ ಸರಾಸರಿಯಲ್ಲಿ ಕೇವಲ 212 ರನ್ ಗಳಿಸಿದ್ದಾರೆ. ಡಿಸಿ ಮತ್ತು ಎಂಐ ನಡುವಿನ ಋತುವಿನ 43 ನೇ ಪಂದ್ಯದಲ್ಲಿ, ಅವರು ಮತ್ತೊಮ್ಮೆ ಪ್ರದರ್ಶನ ನೀಡಲು ವಿಫಲರಾದರು ಮತ್ತು ಕೇವಲ 14 ಎಸೆತಗಳಲ್ಲಿ 20 ರನ್ ಗಳಿಸಿ ನಿರ್ಗಮಿಸಿದರು.

ಇದನ್ನೂ ಓದಿ: IPL 2024 : ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವುದೇ ಸಿಎಸ್​ಕೆ?

ಐದನೇ ಓವರ್ನ ಮೊದಲ ಎಸೆತದಲ್ಲಿ ಅವರು ಔಟಅದರು. ಅದು ಮುಖೇಶ್ ಕುಮಾರ್ ಅವರ ಬ್ಯಾಕ್ ಆಫ್ ಲೆಂಗ್ತ್ ಎಸೆತವಾಗಿತ್ತು. ಇಶಾನ್ ಕಿಶನ್ ಸ್ವಲ್ಪ ಸ್ಥಳಾವಕಾಶ ಕಲ್ಪಿಸಿ ಪಿಚ್​ನಿಂದ ಹೊರಕ್ಕೆ ಹೋಗಿ ಅದನ್ನು ಹೊಡೆಯಲು ಮುಂದಾದರು, ಚೆಂಡು ಗಾಳಿಯಲ್ಲಿ ಹಾರಿತು. ಅಲ್ಲಿ ಅಕ್ಷರ್ ಪಟೇಲ್ ಸುಲಭ ಕ್ಯಾಚ್ ಪಡೆದರು. ಇಶಾನ್ ಕಿಶನ್ ಮತ್ತೊಂದು ಆರಂಭವನ್ನು ಎಸೆದ ನಂತರ ನಿರಾಶೆಯಿಂದ ಹಿಂತಿರುಗಿದರು.

ಟಿ 20 ವಿಶ್ವಕಪ್ 2024 ರ ತಂಡದ ಆಯ್ಕೆಯು ಹತ್ತಿರದಲ್ಲಿದೆ. ಕಡಿಮೆ ಸ್ಕೋರ್​ಗಳು ಇಶಾನ್ ಕಿಶನ್ ಅವರ ಉದ್ದೇಶಕ್ಕೆ ಸಹಾಯ ಮಾಡುತ್ತಿಲ್ಲ. ಪ್ರಸ್ತುತ ರೇಸ್​ನಲ್ಲಿ ಮುಂದಿರುವ ರಿಷಭ್ ಪಂತ್ ಮತ್ತು ಸಂಜು ಸ್ಯಾಮ್ಸನ್ ಅವರಗೆಇ ಸ್ಪರ್ಧೆಯೊಡ್ಡುತ್ತಿದ್ದಾರೆ. ಗಿದೆ

Continue Reading
Advertisement
Gold Seized
ಕ್ರೈಂ8 mins ago

Gold Seized: ದುಬೈನಿಂದ ಬಂದ ಪ್ರಯಾಣಿಕನ ಗುದದ್ವಾರದಲ್ಲಿತ್ತು 70 ಲಕ್ಷ ಮೌಲ್ಯದ ಚಿನ್ನ!

Virat Kohli
ಪ್ರಮುಖ ಸುದ್ದಿ20 mins ago

IPL 2024 : ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ; ವಿಡಿಯೊ ಇದೆ

Illegal Cattle Trafficking 9 Accused Arrested in gangavathi
ಕರ್ನಾಟಕ21 mins ago

Koppala News: ಅಕ್ರಮ ಜಾನುವಾರು ಸಾಗಾಟ: 9 ಜನ ಆರೋಪಿಗಳ ಬಂಧನ

Congress leader B K Hariprasad latest statement In Gangavathi
ಕೊಪ್ಪಳ22 mins ago

Lok Sabha Election 2024: ಬಿಜೆಪಿಯವರು 10 ವರ್ಷದಲ್ಲಿ ಏನು ಮಾಡಿದ್ದೀರಿ ಹೇಳಿ ಎಂದ ಬಿ.ಕೆ. ಹರಿಪ್ರಸಾದ್

Kalaburagi Lok Sabha Constituency Congress candidate Radhakrishna Doddamani election campaign
ಯಾದಗಿರಿ26 mins ago

Lok Sabha Election 2024: ಚುನಾವಣೆಯಲ್ಲಿ ಹೆಚ್ಚಿನ ಮತಗಳಿಂದ ಗೆಲ್ಲಿಸಿ, ನಿಮ್ಮೆಲ್ಲರ ಧ್ವನಿಯಾಗಿ ಕೆಲಸ ಮಾಡುವೆ: ರಾಧಾಕೃಷ್ಣ ದೊಡ್ಡಮನಿ

Narendra Modi
ಕರ್ನಾಟಕ39 mins ago

Narendra Modi: ಇಂದು ರಾತ್ರಿಯೇ ರಾಜ್ಯಕ್ಕೆ ಮೋದಿ ಆಗಮನ; ನಾಳೆಯಿಂದ ಅಬ್ಬರದ ಪ್ರಚಾರ, ವಿವರ ಇಲ್ಲಿದೆ

Namma Metro
ಬೆಂಗಳೂರು42 mins ago

Namma Metro: ಟಿಸಿಎಸ್‌ ಮ್ಯಾರಥಾನ್‌ ಹಿನ್ನೆಲೆ ಭಾನುವಾರ ಮುಂಜಾನೆ 3.35ರಿಂದಲೇ ಮೆಟ್ರೋ ರೈಲು ಸೇವೆ

ipl 2024
ಕ್ರೀಡೆ43 mins ago

IPL 2024 : ಪಂದ್ಯದ ನಡುವೆ ಮೈದಾನದಲ್ಲೇ ಗಾಳಿಪಟ ಹಾರಿಸಿದ ಪಂತ್​, ರೋಹಿತ್! ಇಲ್ಲಿದೆ ವಿಡಿಯೊ

Viral News
ವೈರಲ್ ನ್ಯೂಸ್1 hour ago

Viral News: ಸೈಕಲ್‌ ಸವಾರನಿಗೆ ಡಿಕ್ಕಿ ಹೊಡೆದು 2 ಕಿ.ಮೀ. ಎಳೆದೊಯ್ದ ಪಿಕ್‌ಅಪ್‌; ಶಾಕಿಂಗ್‌ ವಿಡಿಯೊ ಇಲ್ಲಿದೆ

WhatsApp color
ತಂತ್ರಜ್ಞಾನ1 hour ago

WhatsApp colour: ವಾಟ್ಸ್ಆ್ಯಪ್​ನ ಬಣ್ಣ ಬದಲಾಗಿದ್ದು ಯಾಕೆ? ಏನಿದರ ಗುಟ್ಟು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20243 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ8 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ15 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌