Stop criticism, Indian team will win the World Cup, says former head coachWorld Cup 2023 : ಟೀಕೆ ನಿಲ್ಲಿಸಿ, ವಿಶ್ವ ಕಪ್ ಗೆಲ್ಲಲಿದೆ ಭಾರತ ತಂಡ ಎಂದಿದ್ದಾರೆ ಮಾಜಿ ಹೆಡ್​​ ಕೋಚ್​ - Vistara News

ಕ್ರಿಕೆಟ್

World Cup 2023 : ಟೀಕೆ ನಿಲ್ಲಿಸಿ, ವಿಶ್ವ ಕಪ್ ಗೆಲ್ಲಲಿದೆ ಭಾರತ ತಂಡ ಎಂದಿದ್ದಾರೆ ಮಾಜಿ ಹೆಡ್​​ ಕೋಚ್​

ಭಾರತ ತಂಡ ಮುಂದಿನ ಏಕ ದಿನ ವಿಶ್ವ ಕಪ್​ನಲ್ಲಿ ಕಪ್​ ಗೆಲ್ಲುವುದು ಗ್ಯಾರಂಟಿ ಎಂದು ರವಿ ಶಾಸ್ತ್ರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Stop criticism, Indian team will win the World Cup, says former head coach
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಆಸ್ಟ್ರೇಲಿಯಾ ವಿರುದ್ಧದ ಏಕ ದಿನ ಸರಣಿಯಲ್ಲಿ ಭಾರತ ತಂಡ 1-2 ಅಂತರದಿಂದ ಸೋಲು ಕಂಡಿದೆ. ಹೀಗಾಗಿ ಅಭಿಮಾನಿಗಳೆಲ್ಲರೂ ಟೀಮ್ ಇಂಡಿಯಾದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಒಬ್ಬೊಬ್ಬರ ಪ್ರದರ್ಶನವನ್ನು ತುಲನೆ ಮಾಡಿಕೊಂಡು ಸೋಲಿಗೆ ಏನು ಕಾರಣ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ. ಕೆಲವರು ಬುಮ್ರಾ ತಂಡದಲ್ಲಿ ಇಲ್ಲದೇ ಹೋದದ್ದು ಸೋಲಿಗೆ ಕಾರಣ ಎಂದರೆ ಇನ್ನು ಕೆಲವರು ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯದ ಹಿನ್ನೆಲೆ ಎಂದು ಹೇಳುತ್ತಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಮಾತನಾಡಿರುವ ಭಾರತ ತಂಡದ ಮಾಜಿ ಹೆಡ್​ ಕೋಚ್​ ರವಿ ಶಾಸ್ತಿ, ಸದ್ಯಕ್ಕೆ ಎಲ್ಲರೂ ಸುಮ್ಮನಿರಿ, ಭಾರತ ತಂಡ ಮುಂಬರುವ ಏಕ ದಿನ ವಿಶ್ವ ಕಪ್​ (World Cup 2023) ಗೆದ್ದು ತೋರಿಸಲಿದೆ ಎಂದು ಭರವಸೆ ನೀಡಿದ್ದಾರೆ.

ಇನ್ನೀಗ ಐಪಿಎಲ್​ ಹಂಗಾಮ. ಅದು ಮುಗಿದ ಬಳಿಕ ಭಾರತ ತಂಡದ ಆಟಗಾರರು ಅಂತಾರಾಷ್ಟ್ರೀಯ ಪಂದ್ಯಕ್ಕಾಗಿ ಕಣಕ್ಕೆ ಇಳಿಯಲಿದ್ದಾರೆ. ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್​ ಫೈನಲ್​ ಮುಗಿದ ಬಳಿಕ ಮತ್ತೆ ಏಕ ದಿನ ವಿಶ್ವ ಕಪ್​ಗೆ ತಯಾರಿ ನಡೆಯಲಿದೆ. ಬಿಸಿಸಿಐ ಆ ಬಳಿಕವೇ ವಿಶ್ವ ಕಪ್​ಗೆ ತಂಡವನ್ನು ಘೋಷಿಸಲಿದೆ. ಅದೇ ರೀತಿ ವಿಶ್ವ ಕಪ್​ಗೆ ಮೊದಲು ಪಾಕಿಸ್ತಾನದ ಆತಿಥ್ಯದಲ್ಲಿ ಏಷ್ಯಾ ಕಪ್​ ಕೂಡ ಆಯೋಜನೆಗೊಂಡಿದೆ.

ಕ್ರೀಡಾ ಚಾನೆಲ್ ಒಂದರ ಜತೆ ಮಾತನಾಡಿದ ರವಿ ಶಾಸ್ತ್ರಿ, ಭಾರತ ತಂಡ ಕಳೆದ 10 ವರ್ಷದಿಂದ ಐಸಿಸಿ ಟ್ರೋಫಿ ಗೆಲ್ಲುವಲ್ಲಿ ವಿಫಲಗೊಂಡಿದೆ. ಹೀಗಾಗಿ ಮತ್ತೆ ಟ್ರೋಫಿ ಗೆಲ್ಲುವ ಅವಕಾಶ ಸೃಷ್ಟಿಯಾಗಿದೆ. ಅಲ್ಲಿಯ ತನಕ ಜನರು ತಾಳ್ಮೆ ಕಾಪಾಡಿಕೊಳ್ಳಬೇಕು. ವೃತ್ತಿ ಜೀವನದಲ್ಲಿ ವಿಶ್ವ ಕಪ್​ ಗೆಲ್ಲುವುದಕ್ಕೆ ಲಿಯೋನೆಲ್​ ಮೆಸ್ಸಿ ಹಲವು ವರ್ಷ ಕಾದಿದ್ದರು. ಅದೇ ರೀತಿ ಸಚಿನ್ ತೆಂಡೂಲ್ಕರ್ ಆರು ವಿಶ್ವಕಪ್​ನಲ್ಲಿ ಪಾಲ್ಗೊಂಡಿದ್ದರು. ಅಂತೆಯೇ ಭಾರತ ತಂಡವೂ ಸಾಕಷ್ಟು ವರ್ಷಗಳ ಕಾಲ ಕಾದಿದೆ. ಹೀಗಾಗಿ ಮತ್ತೆ ಗೆಲ್ಲುವ ಅವಕಾಶ ಸೃಷ್ಟಿಯಾಗಿದೆ ಎಂದು ರವಿ ಶಾಸ್ತ್ರಿ ಹೇಳಿದ್ದಾರೆ.

ಇದನ್ನೂ ಓದಿ : IND VS AUS: ಸಿಕ್ಸರ್​ ಬಾರಿಸಿ ರವಿ ಶಾಸ್ತ್ರಿ ದಾಖಲೆ ಮುರಿದ ವೇಗಿ ಉಮೇಶ್​ ಯಾದವ್​​

ಭಾರತ ತಂಡ ಸತತವಾಗಿ ಐಸಿಸಿ ಟ್ರೋಫಿಯ ಸೆಮಿ ಫೈನಲ್ಸ್​ ಹಂತಕ್ಕೆ ತಲುಪುತ್ತಿದೆ. ಹೀಗಾಗಿ ಸ್ಥಿರ ಪ್ರದರ್ಶನ ನೀಡುತ್ತಿದೆ ಎಂದು ಹೇಳಬಹುದು. ಹೀಗಾಗಿ ಮುಂದಿನ ವಿಶ್ವ ಕಪ್​ನಲ್ಲಿ ಗೆಲ್ಲುವ ಅವಕಾಶವಿದೆ ಎಂದು ಹೇಳಿದರು.

ಸಚಿನ್​ ತೆಂಡೂಲ್ಕರ್​ 24 ವರ್ಷ ಕಾಲ ಕ್ರಿಕೆಟ್ ಆಡಿದ್ದರೂ ಕೊನೇ ಹಂತದಲ್ಲಿ ವಿಶ್ವ ಕಪ್​ಗೆ ಭಾಜನರಾದರು. ಅದೇ ರೀತಿ ಲಿಯೋನೆಲ್ ಮೆಸ್ಸಿ ಹಲವಾರು ವರ್ಷಗಳ ಕಾಲ ಅರ್ಜೆಂಟೀನಾ ತಂಡಕ್ಕೆ ಆಡಿದ್ದರು. ಕಳೆದ ವರ್ಷ ಅವರು ಕೋಪಾ ಅಮೆರಿಕ ಹಾಗೂ ವಿಶ್ವ ಕಪ್​ ಗೆದ್ದರು. ಅಂತೆಯೇ ಭಾರತ ತಂಡದ ಆಟಗಾರರೂ ಸಾಧನೆ ಮಾಡಲಿದ್ದಾರೆ. ಕ್ರಿಕೆಟ್​ ಅಭಿಮಾನಿಗಳು ಆ ಸಂದರ್ಭಕ್ಕೆ ಕಾಯಬೇಕು ಎಂದು ರವಿ ಶಾಸ್ತ್ತಿ ನುಡಿದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

RCB vs GT: ಕಳೆದ ಪಂದ್ಯದಲ್ಲಿ ಆಮೆ ಗತಿಯ ಬ್ಯಾಟಿಂಗ್​ ನಡೆಸಿ ಟೀಕೆಗೆ ಗುರಿಯಾಗಿದ್ದ ವಿರಾಟ್​ ಕೊಹ್ಲಿ ಈ ಪಂದ್ಯದಲ್ಲಿ ಬ್ಯಾಟಿಂಗ್​ ಜೋಶ್​ ತೋರ್ಪಡಿಸಿದರು. ಅಜ್ಮತುಲ್ಲಾ ಒಮರ್ಜಾಯ್ ಎಸೆದ ಮೊದಲ ಓವರ್​ನಲ್ಲಿ ರನ್​ ಗಳಿಸಲು ಪರದಾಡಿದ ಕೊಹ್ಲಿ ಆ ಬಳಿಕ ಸಿಡಿದು ನಿಂತರು. 44 ಎಸೆತಗಳಿಂದ 70(6 ಬೌಂಡರಿ ಮತ್ತು 3 ಸಿಕ್ಸರ್​) ರನ್​ ಬಾರಿಸಿದರು.

VISTARANEWS.COM


on

RCB vs GT
Koo

ಅಹಮದಾಬಾದ್​: ವಿಲ್​ ಜ್ಯಾಕ್ಸ್ ​(100*) ಅವರ ಶತಕ ಮತ್ತು ವಿರಾಟ್​ ಕೊಹ್ಲಿಯ(70*) ಅರ್ಧಶತಕದ ಸೊಗಸಾದ ಬ್ಯಾಟಿಂಗ್​ ನೆರವಿನಿಂದ ರಾಯಲ್​ ಜಾಲೆಂಜರ್ಸ್​ ಬೆಂಗಳೂರು(RCB vs GT) ತಂಡ ಗುಜರಾತ್​ ಟೈಟಾನ್ಸ್​ ವಿರುದ್ಧ ಭರ್ಜರಿ 9 ವಿಕೆಟ್​ಗಳ ಗೆಲುವು ಸಾಧಿಸಿದೆ. ಇದು ಆರ್​ಸಿಬಿಗೆ 10 ಪಂದ್ಯಗಳಲ್ಲಿ ಒಲಿದ ಕೇವಲ ಮೂರನೇ ಗೆಲುವಾಗಿದೆ. ಗೆಲುವು ಕಂಡರೂ ಕೂಡ 6 ಅಂಕದೊಂದಿಗೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲೇ ಮುಂದುವರಿದಿದೆ.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಗುಜರಾತ್​ ಟೈಟಾನ್ಸ್​ ಸಾಯಿ ಸುದರ್ಶನ್​(84*) ಮತ್ತು ಶಾರೂಖ್​ ಖಾನ್​(58) ಅರ್ಧಶತಕದ ಉಪಯುಕ್ತ ಬ್ಯಾಟಿಂಗ್​ ನೆರವಿನಿಂದ 20 ಓವರ್​ಗೆ 3 ವಿಕೆಟ್​ ಕಳೆದುಕೊಂಡು ಭರ್ತಿ 200 ರನ್​ ಪೇರಿಸಿತು. ಜವಾಬಿತ್ತ ಆರ್​ಸಿಬಿ ಫುಲ್​ ಬ್ಯಾಟಿಂಗ್​ ಜೋಶ್​ನೊಂದಿಗೆ ಕೇವಲ 16 ಓವರ್​ಗಳಲ್ಲಿ 1 ವಿಕೆಟ್​ನಷ್ಟಕ್ಕೆ 206 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು.

ಕೊಹ್ಲಿ-ಜ್ಯಾಕ್ಸ್ ಬೊಂಬಾಟ್​ ಅರ್ಧಶತಕ


ಕಳೆದ ಪಂದ್ಯದಲ್ಲಿ ಆಮೆ ಗತಿಯ ಬ್ಯಾಟಿಂಗ್​ ನಡೆಸಿ ಟೀಕೆಗೆ ಗುರಿಯಾಗಿದ್ದ ವಿರಾಟ್​ ಕೊಹ್ಲಿ ಈ ಪಂದ್ಯದಲ್ಲಿ ಬ್ಯಾಟಿಂಗ್​ ಜೋಶ್​ ತೋರ್ಪಡಿಸಿದರು. ಅಜ್ಮತುಲ್ಲಾ ಒಮರ್ಜಾಯ್ ಎಸೆದ ಮೊದಲ ಓವರ್​ನಲ್ಲಿ ರನ್​ ಗಳಿಸಲು ಪರದಾಡಿದ ಕೊಹ್ಲಿ ಆ ಬಳಿಕ ಸಿಡಿದು ನಿಂತರು. ಅಘಫಾನಿಸ್ತಾನದ ಸಿನ್ನರ್​ಗಳಾದ ರಶೀದ್​ ಖಾನ್​, ನೂರ್​ ಅಹ್ಮದ್​ಗೆ ಸತತ ಸಿಕ್ಸರ್​ ಮತ್ತು ಬೌಂಡರಿಗಳ ರುಚಿ ತೋರಿಸಿದರು. ಇವರಿಗೆ ಮತ್ತೊಂದು ತುದಿಯಲ್ಲಿ ಉತ್ತಮ ಸಾಥ್​ ನೀಡಿದ ವಿಲ್​ ಜಾಕ್ಸ್​ ವಿಸ್ಫೋಟಕ ಬ್ಯಾಟಿಂಗ್​ ನಡೆಸಿ ಅಜೇಯ ಶತಕ ಬಾರಿಸಿ ಮಿಂಚಿದರು. ಗೆಲುವಿನ ರನ್​ ಮತ್ತು ಶತಕವನ್ನು ಸಿಕ್ಸರ್​ ಮೂಲಕ ಪೂರ್ತಿಗೊಳಿಸಿದರು.

ಇದನ್ನೂ ಓದಿ IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

ವಿರಾಟ್​ ಕೊಹ್ಲಿ 44 ಎಸೆತಗಳಿಂದ 70(6 ಬೌಂಡರಿ ಮತ್ತು 3 ಸಿಕ್ಸರ್​) ರನ್​ ಬಾರಿಸಿದರು. ವಿಲ್​ ಜಾಕ್ಸ್​ 41 ಎಸೆತಗಳಿಂದ ಬರೋಬ್ಬರಿ 10 ಸಿಕ್ಸರ್​ ಮತ್ತು 5 ಬೌಂಡರಿ ಬಾರಿಸಿ ಭರ್ತಿ 100 ರನ್​ ಪೇರಿಸಿದರು. ಇದು ಅವರ ಚೊಚ್ಚಲ ಐಪಿಎಲ್​ ಶತಕವಾಗಿದೆ. ಆರ್​ಸಿಬಿ ಇದೇ ಆಟವನ್ನು ಆರಂಭಿಕ ಹಂತದಲ್ಲಿ ತೋರ್ಪಡಿಸುತ್ತಿದ್ದರೆ ಇಂದು ಪ್ಲೇ ಆಫ್​ ಸನಿಹಕ್ಕೆ ಬಂದು ನಿಲ್ಲುತ್ತಿತ್ತು. ಗುಜರಾತ್​ ಪರ ರಶೀದ್​ ಖಾನ್​ 51 ರನ್​ ಬಿಟ್ಟುಕೊಟ್ಟರೆ, ಮೋಹಿತ್​ ಶರ್ಮ ಕೇವಲ 2 ಓವರ್​ಗೆ 41 ರನ್​ ಚಚ್ಚಿಸಿಕೊಂಡರು.

ಸಾಯಿ -ಶಾರೂಖ್ ಜತೆಯಾಟ ವ್ಯರ್ಥ


ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಗುಜರಾತ್​ ತಂಡಕ್ಕೆ ಸಿನ್ನರ್​ಗಳಾದ ಸ್ವಪ್ನಿಲ್ ಸಿಂಗ್ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ಆರಂಭದಲ್ಲೇ ಆಘಾತವಿಕ್ಕಿದರು. ಸ್ವಪ್ನಿಲ್ ಸಿಂಗ್ ಅವರು ವೃದ್ಧಿಮಾನ್​ ಸಾಹಾ(5) ವಿಕೆಟ್​ ಕಡೆವಿದರೆ, ಮ್ಯಾಕ್ಸ್​ವೆಲ್ ನಾಯಕ ಶುಭಮನ್​ ಗಿಲ್​(16) ವಿಕೆಟ್​ ಕಿತ್ತರು. ಆರಂಭಿಕ ಆಘಾತ ಕಂಡ ಗುಜತಾರ್​ ತಂಡವನ್ನು ಮೇಲೆತ್ತಿದ್ದು ತಮಿಳುನಾಡು ಮೂಲಕದ ಆಟಗಾರರಾದ ಸಾಯಿ ಸುದರ್ಶನ್​ ಮತ್ತು ಶಾರೂಖ್​ ಖಾನ್​.

ಉಭಯ ಆಟಗಾರರು ಆರ್​ಸಿಬಿ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸಿ ನಿಂತು ಅರ್ಧಶತಕ ಪೂರ್ತಿಗೊಳಿಸಿದರು. ಜತೆಗೆ ತಂಡದ ಮೊತ್ತವನ್ನು ಹಿಗ್ಗಿಸಿದರು. ಈ ಜೋಡಿ ಮೂರನೇ ವಿಕೆಟ್​ಗೆ ಅತ್ಯಮೂಲ್ಯ 86 ರನ್​ ಜತೆಯಾಟ ನಡೆಸಿತು. ಅರ್ಧಶತಕ ಪೂರ್ತಿಗೊಂಡು ಅಪಾಯಕಾರಿಯಾಗಿ ಗೋಚರಿಸಿದ್ದ ಶಾರೂಖ್​ ಖಾನ್​ ಮೊಹಮ್ಮದ್​ ಸಿರಾಜ್​ ಅವರ ಯಾರ್ಕರ್​ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಒಟ್ಟು 30 ಎಸೆತ ಎದುರಿಸಿ 5 ಸಿಕ್ಸರ್​ ಮತ್ತು 3 ಬೌಂಡರಿ ನೆರವಿನಿಂದ 58 ರನ್​ ಬಾರಿಸಿದರು. ಪಂದ್ಯ ಸೋತ ಕಾರಣ ಉಭಯ ಆಟಗಾರರ ಈ ಉತ್ತಮ ಜತೆಯಾಟ ವ್ಯರ್ಥಗೊಂಡಿತು.

ಶಾರೂಖ್ ವಿಕೆಟ್​ ಪತನದ ಬಳಿಕ ಆಡಲಿಳಿದ ಡೇವಿಡ್​ ಮಿಲ್ಲರ್ ಕೂಡ ಅಂತಿಮ ಹಂತದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ಅಜೇಯ 26 ರನ್​ ಬಾರಿಸಿದರು. ಸಾಯಿ ಸುದರ್ಶನ್ ಬರೋಬ್ಬರಿ 8 ಬೌಂಡರಿ ಮತ್ತು 4 ಸಿಕ್ಸರ್​ ನೆರವಿನಿಂದ 84 ರನ್​ ಗಳಿಸಿ ಅಜೇಯರಾಗಿ ಉಳಿದರು. ಆರ್​ಸಿಬಿ ಪರ ಸಿರಾಜ್​, ಸ್ವಪ್ನಿಲ್ ಸಿಂಗ್ ಮತ್ತು ಗ್ಲೆನ್​ ಮ್ಯಾಕ್ಸ್​ವೆಲ್​ ತಲಾ ಒಂದು ವಿಕೆಟ್​ ಪಡೆದರು. ಗ್ರೀನ್​ ಮೂರು ಓವರ್​ಗೆ 42 ರನ್​ ಬಿಟ್ಟುಕೊಟ್ಟು ದುಬಾರಿಯಾಗಿ ಕಂಡುಬಂದರು.

Continue Reading

ಕ್ರಿಕೆಟ್

KKR vs DC: ಮೊದಲ ಸೋಲಿಗೆ ಸೇಡು ತೀರಿಸಿಕೊಂಡೀತೇ ಡೆಲ್ಲಿ?; ಕೆಕೆಆರ್​ ಎದುರಾಳಿ

KKR vs DC: ಈಡನ್‌ ಗಾರ್ಡನ್ಸ್‌ನ(Eden Gardens) ಪಿಚ್​ ಸೀಮರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಇಲ್ಲಿ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಿನ ಅವಕಾಶ ಏಕೆಂದರೆ ರಾತ್ರಿಯ ವೇಳೆ ಇಲ್ಲಿ ಇಬ್ಬಿನಿ ಸಮಸ್ಯೆ ಕಾಡಲಿದೆ. ಇದು ಬೌಲರ್​ಗಳಿಗೆ ಕಷ್ಟಕರವಾಗಲಿದೆ. ಕೈಯಲ್ಲಿ ಸರಿಯಾಗಿ ಚೆಂಡು ನಿಲ್ಲದೆ ನಿರ್ದಿಷ್ಟ ಗುರಿಗೆ ಬೌಲಿಂಗ್​ ಮಾಡಲು ಸಾಧ್ಯವಾಗುವುದಿಲ್ಲ. ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡರೆ ಉತ್ತಮ.

VISTARANEWS.COM


on

KKR vs DC
Koo

ಕೋಲ್ಕತ್ತಾ: ಆರಂಭಿಕ ಹಂತದಲ್ಲಿ ಸತತ ಸೋಲಿಗೆ ತುತ್ತಾಗಿದ್ದ ಡೆಲ್ಲಿ ಕ್ಯಾಪಿಟಲ್ಸ್(KKR vs DC)​ ಇದೀಗ ಬಲಿಷ್ಠ ತಂಡಗಳಿಗೆ ಸೋಲುಣಿಸುವ ಮೂಲಕ ಅಂಕಪಟ್ಟಿಯಲ್ಲಿ ಮೇಲೇರಿದೆ. ಸೋಮವಾರದ ಮಹತ್ವದ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಆಡಲಿದೆ. ಈ ಪಂದ್ಯವನ್ನು ಗೆದ್ದು ಮೊದಲ ಸುತ್ತಿನ ಸೋಲಿಗೆ ಸೇಡು ತೀರಿಸಿಕೊಂಡರೆ ಪಂತ್​ ಬಳಗದ ಪ್ಲೇ ಆಫ್ ಮೇಲೆ ಒಂದು ಹಂತದ ತನಕ ನಿರೀಕ್ಷೆ ಇರಿಸಿಕೊಳ್ಳಬಹುದು. ಸದ್ಯ ಹತ್ತರಲ್ಲಿ 5 ಪಂದ್ಯಗಳನ್ನಷ್ಟೇ ಜಯಿಸಿರುವ ಡೆಲ್ಲಿ ಉಳೆದೆಲ್ಲ ಪಂದ್ಯಗಳನ್ನು ದೊಡ್ಡ ಅಂತರದಿಂದ ಜಯಿಸಿದರೆ ಪ್ಲೇ ಆಫ್​ ಟಿಕೆಟ್​ ಖಚಿತಗೊಳ್ಳಲಿದೆ.

ಈ ಬಾರಿಯ ಟೂರ್ನಿಯ ಮೊದಲ ಹಂತದ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಡೆಲ್ಲಿ 106 ರನ್​ ಅಂತರದ ಹೀನಾಯ ಸೋಲು ಕಂಡಿತ್ತು. ಈ ಸೋಲನ್ನೇ ಡೆಲ್ಲಿ ಚಾಲೆಂಜ್‌ ಆಗಿ ಸ್ವೀಕರಿಸಿ ನಾಳಿನ ಪಂದ್ಯದಲ್ಲಿ ಸೇಡು ತೀರಿಸಿಕೊಂಡೀತೇ ಎನ್ನುವುದು ಪಂದ್ಯದ ಕುತೂಹಲ. ಎದುರಾಳಿ ಯಾರೇ ಆಗಿರಲಿ ದಂಡಿಸುವುದೊಂದೆ ಎನ್ನ ಗುರಿ ಎಂದು ಬ್ಯಾಟಿಂಗ್​ ನಡೆಸುತ್ತಿರುವ 22ರ ಪೋರ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್ ಈ ಪಂದ್ಯದ ಪ್ರಮುಖ ಹೈಲೆಟ್ಸ್​. ಈಗಾಗಲೇ ಅವರು ಜಸ್​ಪ್ರೀತ್​ ಬುಮ್ರಾ ಸೇರಿ ವಿಶ್ವದ ಘಾತಕ ಬೌಲರ್​ಗಳಿಗೆ ಸತತ ಸಿಕ್ಸರ್​ ರುಚಿ ತೋರಿಸಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿಯೂ ಡೆಲ್ಲಿ ಇವರ ಮೇಲೆ ಹೆಚ್ಚಿನ ಬರವಸೆ ಇರಿಸಿದೆ.

ಆರಂಭಿಕ ಪಂದ್ಯಗಳಲ್ಲಿ ಸತತವಾಗಿ ಗೆದ್ದು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದ್ದ ಕೆಕೆಆರ್​ ಆ ಬಳಿಕ ಸೋಲಿನ ಹಾದಿ ಹಿಡಿದಿದೆ. ಅದರಲ್ಲೂ ಕಳೆದ ಪಂಜಾಬ್​ ವಿರುದ್ಧದ ಪಂದ್ಯದಲ್ಲಿ 260 ಗಡಿ ದಾಡಿಯೂ ಈ ಮೊತ್ತವನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಗಿ ಹೀನಾಯ ಸೋಲು ಕಂಡಿತ್ತು. ದಾಖಲೆಯ 24 ಕೋಟಿ ವೀರ ಮಿಚೆಲ್​ ಸ್ಟಾರ್ಕ್​ ಸಂಪೂರ್ಣ ವಿಫಲರಾಗಿದ್ದಾರೆ. ಅನ್​ಕ್ಯಾಪ್ಡ್​ ಬ್ಯಾಟರ್​ಗಳು ಸಹ ಇವರಿಗೆ ಸಿಕ್ಸರ್​ ಮೂಲಕ ದಂಡಿಸುತ್ತಿದ್ದಾರೆ.

ಇದನ್ನೂ ಓದಿ IPL 2024: 41ನೇ ವಯಸ್ಸಿನಲ್ಲೂ ದಾಖಲೆ ಬರೆದ ಅಮಿತ್ ಮಿಶ್ರಾ

ಪಿಚ್​ ರಿಪೋರ್ಟ್​

ಉಭಯ ತಂಡಗಳು ಇದುವರೆಗಿನ ಐಪಿಎಲ್​ನಲ್ಲಿ 33 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಕೆಕೆಆರ್​ 17 ಪಂದ್ಯ ಗೆದ್ದರೆ, ಡೆಲ್ಲಿ 15 ಪಂದ್ಯ ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಈಡನ್‌ ಗಾರ್ಡನ್ಸ್‌ನ(Eden Gardens) ಪಿಚ್​ ಸೀಮರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಇಲ್ಲಿ ಚೇಸಿಂಗ್​ ನಡೆಸುವ ತಂಡಕ್ಕೆ ಹೆಚ್ಚಿನ ಅವಕಾಶ ಏಕೆಂದರೆ ರಾತ್ರಿಯ ವೇಳೆ ಇಲ್ಲಿ ಇಬ್ಬಿನಿ ಸಮಸ್ಯೆ ಕಾಡಲಿದೆ. ಇದು ಬೌಲರ್​ಗಳಿಗೆ ಕಷ್ಟಕರವಾಗಲಿದೆ. ಕೈಯಲ್ಲಿ ಸರಿಯಾಗಿ ಚೆಂಡು ನಿಲ್ಲದೆ ನಿರ್ದಿಷ್ಟ ಗುರಿಗೆ ಬೌಲಿಂಗ್​ ಮಾಡಲು ಸಾಧ್ಯವಾಗುವುದಿಲ್ಲ. ಟಾಸ್​ ಗೆದ್ದ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡರೆ ಉತ್ತಮ.

ಸಂಭಾವ್ಯ ತಂಡಗಳು


ಡೆಲ್ಲಿ ಕ್ಯಾಪಿಟಲ್ಸ್​: ಜೇಕ್ ಫ್ರೇಸರ್-ಮೆಕ್‌ಗುರ್ಕ್, ಕುಮಾರ್ ಕುಶಾಗ್ರಾ, ಶಾಯ್ ಹೋಪ್, ರಿಷಬ್ ಪಂತ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಭಿಷೇಕ್ ಪೊರೆಲ್, ಅಕ್ಷರ್​ ಪಟೇಲ್, ಕುಲದೀಪ್ ಯಾದವ್, ಲಿಜಾದ್ ವಿಲಿಯಮ್ಸ್, ಮುಖೇಶ್ ಕುಮಾರ್, ಖಲೀಲ್ ಅಹ್ಮದ್.

ಕೆಕೆಆರ್:​ ಫಿಲಿಪ್ ಸಾಲ್ಟ್, ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ದುಷ್ಮಂತ ಚಮೀರಾ/ ವಿಚೆಲ್​ ಸ್ಟಾರ್ಕ್​, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ.

Continue Reading

ಕ್ರೀಡೆ

Ishan Kishan: ಐಪಿಎಲ್​ ನೀತಿ ಸಂಹಿತೆ ಉಲ್ಲಂಘನೆ; ಇಶಾನ್​ ಕಿಶನ್​ಗೆ ಬಿತ್ತು ದಂಡದ ಬರೆ

Ishan Kishan: ಶನಿವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ(DC vs MI) ವಿರುದ್ಧದ ಪಂದ್ಯದಲ್ಲಿ ಇಶಾನ್​ ಐಪಿಎಲ್‌ನ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ ಲೆವೆಲ್ 1 ಅಪರಾಧ ಎಸಗಿದ್ದಾರೆ. ಐಪಿಎಲ್ ನೀತಿ ಸಂಹಿತೆಯ ಹಂತ 1 ಉಲ್ಲಂಘನೆಗಳಿಗೆ ಅವರಿಗೆ ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

VISTARANEWS.COM


on

Ishan Kishan
Koo

ನವದೆಹಲಿ: ಮುಂಬೈ ಇಂಡಿಯನ್ಸ್​(Mumbai Indians) ತಂಡದ ಯುವ ಎಡಗೈ ಬ್ಯಾಟರ್​ ಇಶಾನ್​ ಕಿಶನ್(Ishan Kishan)​ ಅವರಿಗೆ ದಂಡದ ಬರೆ ಬಿದ್ದಿದೆ. ಡೆಲ್ಲಿ ಕ್ಯಾಪಿಟಲ್ಸ್(Delhi Capitals) ವಿರುದ್ಧದ ಪಂದ್ಯದಲ್ಲಿ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಬಿಸಿಸಿಐ(BCCI) ಕಿಶನ್​ಗೆ ಪಂದ್ಯ ಶುಲ್ಕದ ಶೇ 10ರಷ್ಟು ದಂಡ ವಿಧಿಸಲಾಗಿದೆ.

ಶನಿವಾರ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಡೆಲ್ಲಿ(DC vs MI) ವಿರುದ್ಧದ ಪಂದ್ಯದಲ್ಲಿ ಇಶಾನ್​ ಐಪಿಎಲ್‌ನ ನೀತಿ ಸಂಹಿತೆಯ ಆರ್ಟಿಕಲ್ 2.2 ರ ಅಡಿಯಲ್ಲಿ ಲೆವೆಲ್ 1 ಅಪರಾಧ ಎಸಗಿದ್ದಾರೆ. ಐಪಿಎಲ್ ನೀತಿ ಸಂಹಿತೆಯ ಹಂತ 1 ಉಲ್ಲಂಘನೆಗಳಿಗೆ ಅವರಿಗೆ ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಕಿಶನ್​ ಯಾವ ತಪ್ಪು ಮಾಡಿದ್ದಾರೆ ಎನ್ನುವ ವಿಚಾರವನ್ನು ಬಿಸಿಸಿಐ ನಿರ್ದಿಷ್ಟವಾಗಿ ತಿಳಿಸಿಲ್ಲ.

ಆರ್ಟಿಕಲ್ 2.2 ನೀತಿ ಸಂಹಿತೆಯ ಅಡಿಯಲ್ಲಿ ಆಟಗಾರರು ಪಂದ್ಯದ ವೇಳೆ ಅತಿರೇಕದ ವರ್ತನೆ, ವಿಕೆಟ್​ಗಳಿಗೆ ಬ್ಯಾಟ್​ನಿಂದ ಹೊಡೆಯುವುದು ಅಥವಾ ಒದೆಯುವುದು, ಉದ್ದೇಶಪೂರ್ವಕವಾಗಿ ಜಾಹೀರಾತು ಫಲಕಗಳು, ಗಡಿ ಬೇಲಿಗಳು, ಡ್ರೆಸ್ಸಿಂಗ್ ಕೋಣೆಯ ಬಾಗಿಲುಗಳು, ಕನ್ನಡಿಗಳು, ಕಿಟಕಿಗಳು, ಬೌಂಡರಿ ಗೆರೆಗೆ ಬ್ಯಾಟ್​ನಿಂದ ಬಡಿದು ಹಾನಿ ಮಾಡಿದರೆ ಅಂತಹ ಆಟಗಾರರಿಗೆ ಈ ನಿಯಮದಡಿಯಲ್ಲಿ ವಾಗ್ದಂಡನೆ ವಿಧಿಸಲಾಗುತ್ತದೆ.

ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಇಶಾನ್​ ಕಿಶನ್​ 14 ಎಸೆತಗಳಿಂದ 20 ರನ್​ ಬಾರಿಸಿದ್ದರು. ಈ ಬಾರಿಯ ಐಪಿಎಲ್​ನಲ್ಲಿ ಇಶಾನ್​ ಅಷ್ಟಾಗಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಯಶಸ್ಸು ಕಂಡಿಲ್ಲ. ಆಯ್ಕೆ ಸಮಿತಿ ಮತ್ತು ಹೆಡ್​ ಕೋಚ್​ ಸೂಚನೆಯನ್ನು ಕಡೆಗಣಿಸಿ ದೇಶೀಯ ಕ್ರಿಕೆಟ್​ ಆಡಲು ನೀರಾಕರಿಸಿದ ಕಾರಣ ಇಶಾನ್​ ಅವರನ್ನು ಬಿಸಿಸಿಐ ಆಟಗಾರರ ಕೇಂದ್ರ ಗುತ್ತಿಗೆ ಪಟ್ಟಿಯಿಂದ ಕೈಬಿಡಲಾಗಿತ್ತು.

ಇದನ್ನೂ ಓದಿ IPL 2024 Points Table: ಲಕ್ನೋ, ಮುಂಬೈ ಸೋಲಿನ ಬಳಿಕ ಅಂಕಪಟ್ಟಿ ಹೇಗಿದೆ?

ಡೆಲ್ಲಿಗೆ 10 ರನ್​ ಗೆಲುವು


ಮುಂಬೈ ವಿರುದ್ಧದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ 10 ರನ್​ ಗೆಲುವು ಸಾಧಿಸಿತು. ಇಲ್ಲಿನ ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬಯಿ ಇಂಡಿಯನ್ಸ್ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್​ ಮಾಡಿದ ಆತಿಥೇಯ ಡೆಲ್ಲಿ ಕ್ಯಾಪಿಟಲ್ಸ್ ಬಳಗ ನಿಗದಿತ 20 ಓವರ್​​ಗಳಲ್ಲಿ 4 ವಿಕೆಟ್​ಗೆ 257 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಮುಂಬಯಿ ತನ್ನೆಲ್ಲ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್​ ನಷ್ಟಕ್ಕೆ 247 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ದೊಡ್ಡ ಮೊತ್ತವನ್ನು ಬೆನ್ನಟ್ಟಲು ಹೊರಟ ಮುಂಬೈ ತಂಡಕ್ಕೆ ಅದಕ್ಕೆ ಪೂರಕವಾಗಿರುವ ಆರಂಭ ದೊರಕಲಿಲ್ಲ. ರೋಹಿತ್ ಶರ್ಮಾ 8 ರನ್​ಗೆ ಔಟಾದರೆ ಇಶಾನ್ ಕಿಶನ್​ 20 ರನ್​ಗಳಿಗೆ ವಿಕೆಟ್​ ಒಪ್ಪಿಸಿದರು. 45 ರನ್​ಗೆ 2 ವಿಕೆಟ್​ ನಷ್ಟ ಮಾಡಿಕೊಂಡ ಮುಂಬೈಗೆ ಆತಂಕ ಎದುರಾಯಿತು. ಈ ವೇಳೆ ಆಡಲು ಬಂದ ಸೂರ್ಯಕುಮಾರ್ ಯಾದವ್​ 13 ಎಸೆತಕ್ಕೆ 26 ರನ್ ಬಾರಿಸಿ ಮಿಂಚುವ ಸೂಚನೆ ಕೊಟ್ಟರು. ಆದರೆ ಸೂರ್ಯನ ಆಟ ಹೆಚ್ಚು ಹೊತ್ತು ನಡೆಯಲಿಲ್ಲ. ಆದರೆ, ಮತ್ತೊಂದು ಬದಿಯಲ್ಲಿ ತಿಲಕ್ ವರ್ಮಾ ಗಟ್ಟಿಯಾಗಿ ನಿಂತು ಡೆಲ್ಲಿ ಬೌಲರ್​ಗಳನ್ನು ದಂಡಿಸಿದರು. ಅದೇ ರೀತಿ ಹಾಲಿ ಆವೃತ್ತಿಯಲ್ಲಿ ಮೊದಲ ಬ್ಯಾರಿಗೆ ಬ್ಯಾಟಿಂಗ್​ನಲ್ಲಿ ಮಿಂಚಿದ ಹಾರ್ದಿಕ್ ಪಾಂಡ್ಯ 24 ಎಸೆತಕ್ಕೆ 46 ರನ್ ಬಾರಿಸಿದರು. ಡೆಲ್ಲಿ ಪರ ರಸಿಕ್​ ಸಲಾಂ ಹಾಗೂ ಮುಖೇಶ್ ಕುಮಾರ್​ ತಲಾ 3 ವಿಕೆಟ್​ ಉರುಳಿಸಿ ತಂಡ ಗೆಲುವಿಗೆ ನೆರವಾದರು.

Continue Reading

ಕ್ರಿಕೆಟ್

Pakistan Cricket: ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್ ಪಾಕ್​ ತಂಡಕ್ಕೆ ನೂತನ ಕೋಚ್​

Pakistan Cricket: ಗ್ಯಾರಿ ಕರ್ಸ್ಟನ್(Gary Kirsten) ಮತ್ತು ಆಸ್ಟ್ರೇಲಿಯಾದ ಮಾಜಿ ವೇಗಿ ಜೇಸನ್ ಗಿಲ್ಲೆಸ್ಪಿ(Jason Gillespie) ಅವರು ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್(Pakistan Cricket Team) ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಗ್ಯಾರಿ ಕರ್ಸ್ಟನ್ ವೈಟ್-ಬಾಲ್ ವ್ಯವಹಾರಗಳನ್ನು ಮಾತ್ರ ನಿರ್ವಹಿಸಲಿದ್ದಾರೆ. ಜೇಸನ್ ಗಿಲ್ಲೆಸ್ಪಿ ಟೆಸ್ಟ್​ ತಂಡಕ್ಕೆ ಕೋಚ್​ ಆಗಿದ್ದಾರೆ

VISTARANEWS.COM


on

Pakistan Cricket
Koo

ಕರಾಚಿ: ಭಾರತದ ಮಾಜಿ ಮುಖ್ಯ ಕೋಚ್, 2011ರಲ್ಲಿ ಏಕದಿನ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್(Gary Kirsten) ಮತ್ತು ಆಸ್ಟ್ರೇಲಿಯಾದ ಮಾಜಿ ವೇಗಿ ಜೇಸನ್ ಗಿಲ್ಲೆಸ್ಪಿ(Jason Gillespie) ಅವರು ಪಾಕಿಸ್ತಾನ ರಾಷ್ಟ್ರೀಯ ಕ್ರಿಕೆಟ್(Pakistan Cricket Team) ತಂಡದ ಮುಖ್ಯ ಕೋಚ್ ಆಗಿ ನೇಮಕಗೊಂಡಿದ್ದಾರೆ. ಗ್ಯಾರಿ ಕರ್ಸ್ಟನ್ ವೈಟ್-ಬಾಲ್ ವ್ಯವಹಾರಗಳನ್ನು ಮಾತ್ರ ನಿರ್ವಹಿಸಲಿದ್ದಾರೆ. ಜೇಸನ್ ಗಿಲ್ಲೆಸ್ಪಿ ಟೆಸ್ಟ್​ ತಂಡಕ್ಕೆ ಕೋಚ್​ ಆಗಿದ್ದಾರೆ. ಅಜರ್ ಮಹಮೂದ್ ಮೂರು ಮಾದರಿಯ ಕ್ರಿಕೆಟ್​ಗೆ ಸಹಾಯಕ ಕೋಚ್​ ಆಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

​ಇದೇ ಜೂನ್​ 1ರಿಂದ 29ರ ತನಕ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ ಗ್ಯಾರಿ ಕರ್ಸ್ಟನ್​ಗೆ ಮೊದಲ ಸವಾಲಾಗಿದೆ. ಗ್ಯಾರಿ ಕರ್ಸ್ಟನ್​ ಅವರು 2008ರಿಂದ 2011ರವರೆಗೆ ಭಾರತ ತಂಡದ ಮುಖ್ಯ ಕೋಚ್​ ಆಗಿದ್ದರು. ಇವರ ಮಾರ್ಗದರ್ಶನದಲ್ಲೇ ಭಾರತ 2011ರ ಏಕದಿನ ವಿಶ್ವಕಪ್​ ಗೆದ್ದಿತ್ತು. 56 ವರ್ಷದ ಕರ್ಸ್ಟನ್​ ಪ್ರಸಕ್ತ ಐಪಿಎಲ್​ನಲ್ಲಿ ಗುಜರಾತ್​ ಟೈಟಾನ್ಸ್​ ತಂಡದ ಬ್ಯಾಟಿಂಗ್​ ಕೋಚ್​ ಮತ್ತು ಮೆಂಟರ್​ ಆಗಿದ್ದಾರೆ. ಐಪಿಎಲ್​ನಲ್ಲಿಯೂ ಇವರ ನೇತೃತ್ವದಲ್ಲಿ ಗುಜರಾತ್​ ಚೊಚ್ಚಲ ಪ್ರಯತ್ನದಲ್ಲೇ ಕಪ್​ ಗೆದ್ದು ಸಂಭ್ರಮಿಸಿತ್ತು. ಕಳೆದ ಬಾರಿ ತಂಡ ಫೈನಲ್​ ಕೂಡ ಪ್ರವೇಶಿಸಿತ್ತು. ಇದೀಗ ಪಾಕ್​ ತಂಡ ಕೂಡ ಇದೇ ವರ್ಷ ನಡೆಯುವ ಟಿ20 ವಿಶ್ವಕಪ್​ ಮೇಲೆ ಕಣ್ಣಿಟ್ಟಿದ್ದಾರೆ.

ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಿನ ಹೈ-ವೋಲ್ಟೇಜ್ ಪಂದ್ಯ ಜೂನ್ 9 ರಂದು ನಡೆಯಲಿದೆ.

ಲಾಹೋರ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ ತಂಡದ ನೂತನ ಕೋಚ್​ಗಳ ಹೆಸರನ್ನು ಘೋಷಣೆ ಮಾಡಿದರು. “ರಾಷ್ಟ್ರೀಯ ತಂಡಕ್ಕೆ ಉನ್ನತ ಶ್ರೇಣಿಯ ಸಂಪನ್ಮೂಲಗಳು ಮತ್ತು ಸೌಲಭ್ಯಗಳನ್ನು ಒದಗಿಸುವ ತನ್ನ ಬದ್ಧತೆಯಲ್ಲಿ ಪಿಸಿಬಿ ಅಚಲವಾಗಿದೆ. ನೂತನ ಕೋಚ್​ಗಳ ಅವಧಿಯಲ್ಲಿ ಆಟಗಾರರ ಸಂಪೂರ್ಣ ಸಾಮರ್ಥ್ಯವನ್ನು ಹೊರತೆಗೆಯಲು ಮತ್ತು ಹಲವು ಪ್ರಯೋಗ ನಡೆಸಲು ಪಿಸಿಬಿ ಮುಕ್ತವಾದ ಬೆಂಗಲ ನೀಡಲಿದೆ” ಎಂದು ನಖ್ವಿ ಹೇಳಿದರು.

ಇದನ್ನೂ ಓದಿ Pakistan Cricket : ಪಾಕಿಸ್ತಾನ ಟಿ20 ತಂಡದಲ್ಲಿ ನಿಷೇಧಿತ ಆಟಗಾರನಿಗೂ ಸ್ಥಾನ!

ಏಕದಿನ ಮತ್ತು ಟಿ20 ಕ್ರಿಕೆಟ್​ಗೆ ಮರು ನೇಮಕಗೊಂಡ ನಾಯಕ ಬಾಬರ್ ಅಜಂ ನೇತೃತ್ವದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡವು ಸೇನೆಯೊಂದಿಗೆ ಇತ್ತೀಚೆಗೆ ತರಬೇತಿ ನಡೆಸಿತ್ತು. ಆರ್ಮಿ ತರಬೇತಿಯ ಅನುಭವ ಹಂಚಿಕೊಂಡ ಆಟಗಾರರು ಇದೇ ರೀತಿಯ ಅಭ್ಯಾಸ ನಡೆಸಿದರೆ ನಮ್ಮ ತಂಡ ಕೂಡ ಫುಲ್​ ಫಿಟ್​ ಆಗಲಿದೆ ಎಂದರು. ಕಳೆದ ವರ್ಷ ಏಕದಿನ ವಿಶ್ವಕಪ್​ ವೇಳೆ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದಿದ್ದ ವೇಗಿ ನಸೀಮ್ ಶಾ ಅವರು ಹಿಂದೆಂದು ಕೂಡ ಈ ರೀತಿಯ ಫಿಟ್​ನೆಸ್​ ತರಬೇತಿ ನಡೆಸಿಲ್ಲ ಎಂದಿದ್ದರು. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಸೈಯದ್ ಮೊಹ್ಸಿನ್ ರಜಾ ನಖ್ವಿ(Syed Mohsin Naqvi) ಅವರ ನೇತೃತ್ವದಲ್ಲಿ ಈ ಪ್ರಯೋಗ ನಡೆಸಲಾಗಿತ್ತು. ನ್ಯೂಜಿಲ್ಯಾಂಡ್​ ವಿರುದ್ಧ ತವರಿನಲ್ಲೇ ನಡೆದ ಟಿ20 ಸರಣಿಯನ್ನು 2-2 ಅಂತರದಿಂದ ಡ್ರಾ ಮಾಡಿಕೊಂಡಿತ್ತು.

Continue Reading
Advertisement
Jatra Rathotsava Two killed and one serious after being hit by wheel of a chariot at Indi Kamarimath
ಕರ್ನಾಟಕ15 mins ago

Jatra Rathotsava: ಇಂಡಿಯ ಕಮರಿಮಠದ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ಇಬ್ಬರು ದುರ್ಮರಣ; ಮತ್ತೊಬ್ಬ ಗಂಭೀರ

Karnataka Weather
ಕರ್ನಾಟಕ20 mins ago

Karnataka Weather: ರಾಜ್ಯದಲ್ಲಿ ಮೇ 2ರವರೆಗೆ ಬಿಸಿಗಾಳಿ ತೀವ್ರತೆ ಹೆಚ್ಚಳ; ಆರೆಂಜ್‌ ಅಲರ್ಟ್‌ ಘೋಷಣೆ

Amrita Pandey
ಸಿನಿಮಾ29 mins ago

Amrita Pandey: ಭೋಜ್‌ಪುರಿ ಜನಪ್ರಿಯ ನಟಿ ಅಮೃತಾ ಪಾಂಡೆ ಆತ್ಮಹತ್ಯೆ; ಸಾವಿಗೆ ಮುನ್ನ ಬರೆದ ವಾಟ್ಸಾಪ್ ಸ್ಟೇಟಸ್‌ನಲ್ಲಿ ಏನಿದೆ?

PM Narendra Modi
ಕರ್ನಾಟಕ34 mins ago

PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

Narendra Modi
Lok Sabha Election 202454 mins ago

Narendra Modi: ನಿಮ್ಮ ಸೇವೆಗೆಂದೇ ಭಗವಂತ ನನ್ನನ್ನು ಈ ಭೂಮಿಗೆ ಕಳುಹಿಸಿದ್ದಾನೆ, ಈ ಜೀವ ದೇಶಕ್ಕಾಗಿ ಎಂದ ಮೋದಿ

RCB vs GT
ಕ್ರೀಡೆ1 hour ago

RCB vs GT: ವಿಲ್​ ಜ್ಯಾಕ್ಸ್ ಅಜೇಯ ಶತಕ; ಆರ್​ಸಿಬಿಗೆ 9 ವಿಕೆಟ್​ ಭರ್ಜರಿ ಗೆಲುವು

PM Narendra Modi
ಕರ್ನಾಟಕ1 hour ago

PM Narendra Modi: ನೇಹಾ ಹಿರೇಮಠ ಹತ್ಯೆ ಆತಂಕಕಾರಿ; ಹೊಸಪೇಟೆಯಲ್ಲಿ ಕಾಂಗ್ರೆಸ್‌ಗೆ ಮೋದಿ ಚಾಟಿ!

Hassan Pen Drive Case
ಕರ್ನಾಟಕ2 hours ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾದ ಸೆಕ್ಷನ್‌ಗಳು ಏನು ಹೇಳುತ್ತವೆ? ಆರೋಪ ಸಾಬೀತಾದ್ರೆ ಶಿಕ್ಷೆ ಏನು?

KKR vs DC
ಕ್ರಿಕೆಟ್2 hours ago

KKR vs DC: ಮೊದಲ ಸೋಲಿಗೆ ಸೇಡು ತೀರಿಸಿಕೊಂಡೀತೇ ಡೆಲ್ಲಿ?; ಕೆಕೆಆರ್​ ಎದುರಾಳಿ

Karnataka Drought Relief HDK accuses Congress government of lying says HD Kumarswamy
ರಾಜಕೀಯ2 hours ago

Karnataka Drought: ಬರ ಪರಿಹಾರ ಬಗ್ಗೆ ಸುಳ್ಳು ಹೇಳಿದ ಕಾಂಗ್ರೆಸ್‌; ಯುಪಿಎ ಕೊಟ್ಟಿದ್ದು ಅತಿ ಕಡಿಮೆ ಎಂದ ಎಚ್‌ಡಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20243 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20246 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20248 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20248 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ11 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌