Two detained for entering restricted zone during PM Modi's roadshow in DavanagereModi in Karnataka: ಮೋದಿ ರೋಡ್ ಶೋ ವೇಳೆ ಭದ್ರತಾ ವೈಫಲ್ಯ; ನಿಷೇಧಿತ ಪ್ರದೇಶಕ್ಕೆ ನುಗ್ಗಿದ ಇಬ್ಬರು ವಶಕ್ಕೆ - Vistara News

ಕರ್ನಾಟಕ

Modi in Karnataka: ಮೋದಿ ರೋಡ್ ಶೋ ವೇಳೆ ಭದ್ರತಾ ವೈಫಲ್ಯ; ನಿಷೇಧಿತ ಪ್ರದೇಶಕ್ಕೆ ನುಗ್ಗಿದ ಇಬ್ಬರು ವಶಕ್ಕೆ

Modi in Karnataka: ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್‌ ಶೋ ವೇಳೆ ಬ್ಯಾರಿಕೇಡ್ ಹಾರಿ ಬಂದ ಯುವಕ ಹಾಗೂ ನಿಷೇಧಿತ ಪ್ರದೇಶದಲ್ಲಿ ನುಗ್ಗಿದ ಎನ್‌ಸಿಸಿ ಅಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Modi in Karnataka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ (Modi in Karnataka) ಅವರ ರೋಡ್‌ ಶೋ ವೇಳೆ ಭದ್ರತಾ ವೈಫಲ್ಯ ಉಂಟಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದುಪೊಲೀಸರು ವಿಚಾರಣೆ ನಡೆಸಿದ್ದಾರೆ. ರೋಡ್‌ ಶೋ ವೇಳೆ ಬ್ಯಾರಿಕೇಡ್ ಹಾರಿ ಬಂದ ಯುವಕ ಹಾಗೂ ನಿಷೇಧಿತ ಪ್ರದೇಶದಲ್ಲಿ ನುಗ್ಗಿದ ಎನ್‌ಸಿಸಿ ಅಧಿಕಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಪ್ಪಳ ಮೂಲದ ಯುವಕ ಬಸವರಾಜ್ (29) ಹಾಗೂ ಎನ್‌ಸಿಸಿ ಅಧಿಕಾರಿ ರಾಜ್ ಗೌರವ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶನಿವಾರ ದಾವಣಗೆರೆಯಲ್ಲಿ ನಡೆದ ಬಿಜೆಪಿಯ ಬೃಹತ್‌ ಸಮಾವೇಶದ ಸಂದರ್ಭದಲ್ಲೂ ಪ್ರಧಾನಿ ಮೋದಿ ಅವರು ಬೃಹತ್‌ ಪೆಂಡಾಲ್‌ನ ಸುತ್ತ ವಾಹನದಲ್ಲಿ ರೋಡ್‌ ಶೋ ನಡೆಸುತ್ತಿದ್ದರೆ ಯುವಕ ಬಸವರಾಜ್ ಬ್ಯಾರಿಕೇಡ್​ ಹಾರಿ ಮೋದಿ ಅವರಿದ್ದ ವಾಹನದತ್ತ ದೌಡಾಯಿಸಿದ್ದ. ಕೂಡಲೇ ಎಚ್ಚೆತ್ತ ಗಾಂಧಿನಗರ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ | Modi in Karnataka: ದಾವಣಗೆರೆ ಮಹಾ ಸಂಗಮದ ಆವರಣದಲ್ಲೇ ಮೋದಿ ರೋಡ್‌ ಶೋ ನಡೆಸಿದ್ದೇಕೆ?

ಇನ್ನು ರೋಡ್‌ ಶೋಗೂ ಮೊದಲು ಸಂಗಮದಲ್ಲಿ ಪ್ರಧಾನ ಮಂತ್ರಿ ಆಗಮನದ ವೇಳೆ ಡಿ ಜೋನ್‌ನಲ್ಲಿ ಪ್ರವೇಶ ಮಾಡಿದ್ದ ಎನ್‌ಸಿಸಿ ಅಧಿಕಾರಿ ರಾಜ್ ಗೌರವ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. 17 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ಈಗ ಎನ್‌ಸಿಸಿ ಅಧಿಕಾರಿಯಾಗಿರುವ ರಾಜ್ ಗೌರವ್‌ ಮೋದಿ ಅವರ ಜತೆ ಪೋಟೊ ತೆಗೆಸಿಕೊಳ್ಳಲು ಎನ್‌ಸಿಸಿ ನುಗ್ಗಿದ್ದಾರೆ ಎನ್ನಲಾಗಿದೆ. ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಬಳಿಕ ಬಿಟ್ಟು ಕಳುಹಿಸಿದ್ದಾರೆ.

ರಾಜ್ಯಾದ್ಯಂತ ನಡೆದ ಬಿಜೆಪಿಯ ವಿಜಯ ಸಂಕಲ್ಪ ರಥಯಾತ್ರೆಯ ಸಮಾರೋಪ ಸಮಾರಂಭ ದಾವಣಗೆರೆಯಲ್ಲಿ ಆಯೋಜನೆಯಾಗಿತ್ತು. ಅಲ್ಲಿ ಸುಮಾರು 2 ಲಕ್ಷ ಜನರಿಗೆ ಕುಳಿತುಕೊಳ್ಳಲು ಅವಕಾಶ ನೀಡಲಾಗಿತ್ತು. ಅವರ ಮಧ್ಯೆ ಪ್ರಧಾನಿಯವರು ವಾಹನದ ಮೂಲಕ ರೋಡ್‌ ಶೋ ನಡೆಸಿದರು. ಈ ವೇಳೆ ಭದ್ರತಾ ಲೋಪ ಕಂಡುಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

DK Shivakumar: ಬಿಎಸ್‌ವೈ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿಕೆಶಿ ಆರೋಪ

DK Shivakumar: ಬಿಜೆಪಿಯ ಅಕ್ರಮಗಳನ್ನು ತನಿಖೆ ಮಾಡುತ್ತೇವೆ. ಅಕ್ರಮಗಳ ಹಿಂದೆ ಇದ್ದ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳ ಬಗ್ಗೆ ಜನರಿಗೆ ತಿಳಿಸುತ್ತೇವೆ ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: “ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿ ರೂ.ಗಳಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ 87 ಕೋಟಿ ರೂ., ಎಪಿಎಂಸಿಯ 47 ಕೋಟಿ ರೂ., 2019ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ 22 ಕೋಟಿ ರೂ., ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ಅಲ್ಲಿನ ಹಣ ಜೂನ್ 2018 ರಲ್ಲಿ 5 ಕೋಟಿ ರೂ., ದೇವರಾಜ್ ಅರಸು ನಿಗಮದ 47 ಕೋಟಿ ರೂ., ಮಾಲಿನ್ಯ ನಿಯಂತ್ರಣ ಮಂಡಲಿಯ 10 ಕೋಟಿ ರೂ. ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ” ಎಂದು ಆರೋಪಿಸಿದರು.

ಬಿಜೆಪಿಯ ಅಕ್ರಮಗಳನ್ನು ತನಿಖೆ ನಡೆಸುವಿರಾ ಎಂದು ಪ್ರಶ್ನಿಸಿದಾಗ “ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಆದರೆ ಎಲ್ಲವೂ ದಾಖಲೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು ಮಾಡುತ್ತೇವೆ. ಅಕ್ರಮಗಳ ಹಿಂದೆ ಇರುವ ಯಾವ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳು ಇದ್ದರು ಎಂದು ಜನರಿಗೆ ತಿಳಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ | Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

“ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ ರೂ., ಮಂತ್ರಿ ಸ್ಥಾನಕ್ಕೆ 100 ಕೋಟಿ ರೂ. ನೀಡಬೇಕು ಎನ್ನುವ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪ ಹಾಗೂ ಭೋವಿ ನಿಗಮದ ಅಕ್ರಮದ ಬಗ್ಗೆ ಗೂಳಿಹಟ್ಟಿ ಶೇಖರ್ ಮಾಡಿದ ಆರೋಪಗಳ ಮೇಲೆ ಏಕೆ ಬಿಜೆಪಿ ತನಿಖೆ ನಡೆಸಲಿಲ್ಲ” ಎಂದು ಮರುಪ್ರಶ್ನಿಸಿದರು.

“ಯಾವುದೇ ಭ್ರಷ್ಟಾಚಾರದ ಮೇಲೆ ತನಿಖೆ ನಡೆಯುತ್ತಿದ್ದರೆ ಆ ವಿಚಾರದಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ. ಆದರೆ ನಾವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆ ಅವಕಾಶ ಮಾಡಿಕೊಟ್ಟಿದ್ದೇವೆ. ಅಕ್ರಮ ಎಸಗಿದ್ದರೆ ಯಾವುದೇ ಅಧಿಕಾರಿ, ಮಂತ್ರಿ, ಶಾಸಕ, ಯಾರೇ ಆಗಿರಲಿ ಅವರನ್ನು ರಕ್ಷಿಸುವ ಉದ್ದೇಶ ನಮಗಿಲ್ಲ” ಎಂದು ಹೇಳಿದರು.

ಇದನ್ನೂ ಓದಿ | Sameer Nigam: 25,000 ಜನರಿಗೆ ಉದ್ಯೋಗ ಕೊಟ್ಟಿದ್ದೇನೆ, ನನ್ನ ಮಕ್ಕಳು ರಾಜ್ಯದಲ್ಲಿ ಕೆಲಸ ಮಾಡಬಾರದಾ?: ಫೋನ್‌ಪೇ ಸಿಇಒ ಆಕ್ರೋಶ

“ವಾಲ್ಮೀಕಿ ನಿಗಮದ 86 ಕೋಟಿ ರೂ. ಹಣ ತೆಲಂಗಾಣಕ್ಕೆ ಅಕ್ರಮವಾಗಿ ವರ್ಗಾವಣೆಯಾದ ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡಿದ್ದೇವೆ. ತನಿಖಾ ತಂಡವು ಸುಮಾರು 36 ಕೋಟಿ ರೂ.ಗಳಷ್ಟು ಹಣವನ್ನು ವಶಕ್ಕೆ ಪಡೆದುಕೊಂಡಿದೆ. ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಕೋಟ್ಯಂತರ ರೂಪಾಯಿ ಸಾಲ ಮಂಜೂರು ಮಾಡಿದ್ದಾನೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲು ಆಗುತ್ತದೆಯೇ? ನಾವು ಪ್ರತಿಪಕ್ಷಗಳಿಗೆ ಈ ವಿಚಾರವಾಗಿ ಉತ್ತರ ಕೊಡಬೇಕಾಗಿದೆ” ಎಂದು ಖಾರವಾಗಿ ತಿಳಿಸಿದರು.

Continue Reading

ಮಳೆ

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain : ಬೆಳಗಾವಿಯಲ್ಲೂ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆಗೆ ಮನೆ ಬಿದ್ದು ತುಂಬು ಗರ್ಭಿಣಿ ಹೈರಣಾದ ದುರಂತ ನಡೆದಿದೆ. ಬೆಳಗಾವಿಯಲ್ಲಿ ಸೇತುವೆಗಳು ಮುಳುಗಡೆಯಾಗಿ, ಕೊಡಗಿನಲ್ಲಿ ಕೆರೆ ಕೋಡಿ ಬಿದ್ದು ರಸ್ತೆಗಳೆಲ್ಲವೂ ಜಲಾವೃತಗೊಂಡಿದೆ.

VISTARANEWS.COM


on

By

karnataka Rain
Koo

ಬೆಳಗಾವಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು (Karnataka Rain) ಜನರ ಬದುಕನ್ನೇ ಬೀದಿಗೆ ತರುತ್ತಿದೆ. ರಾತೋರಾತ್ರಿ ಸುರಿದ ಮಳೆಗೆ, ಮನೆ ಕುಸಿದು ಬಿದ್ದು, 9 ತಿಂಗಳ ತುಂಬು ಗರ್ಭಿಣಿ ಹೈರಾಣಾದರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಮಳಗಿ ಗ್ರಾಮದಲ್ಲಿ ಘಟನೆ ನಡೆದಿದೆ.

ನಿರಂತರ ಮಳೆಗೆ ಸಾವಂತ್ ತೇಗೂರು ಎಂಬುವವರ ಮನೆ ಕುಸಿದು ಬಿದ್ದಿದೆ. ಸಾವಂತ್‌ ಅವರು ಮಗಳನ್ನು ಹೆರಿಗೆಗೆ ಎಂದು ಮನೆಗೆ ಕರೆತಂದಿದ್ದರು. ಹೆರಿಗೆಗೆ 4 ದಿನ ಇರುವಾಗಲೇ ಮಳೆಗೆ ಮನೆಯು ಕುಸಿದಿದೆ. ಮಗಳ ಹೆರಿಗೆಯ ನಿರೀಕ್ಷೆಯಲ್ಲಿದ್ದ ಅಪ್ಪ- ಅಮ್ಮನಿಗೆ ಬರಸಿಡಿಲು ಬಡಿದಂತಾಗಿದೆ. ತುರ್ತಾಗಿ ಬೇರೆಲ್ಲೂ ಮನೆ ಸಿಗದೇ ಇರುವುದರಿಂದ ತುಂಬು ಗರ್ಭಿಣಿ ಜತೆಗೆ ಕುಸಿದು ಬಿದ್ದಿರುವ ಮನೆಯಲ್ಲಿಯೇ ವಾಸಿಸುವ ದುಸ್ಥಿತಿ ನಿರ್ಮಾಣವಾಗಿದೆ.

ಬೆಳಗಾವಿಯಲ್ಲಿ ಸೇತುವೆಗಳು ಮುಳುಗಡೆ

ಮಹಾರಾಷ್ಟ್ರ ಘಟ್ಟ ಪ್ರದೇಶದಲ್ಲಿ ಮುಂದುವರೆದ ಮಳೆ ಅಬ್ಬರಕ್ಕೆ ಅಪಾಯದ ಮಟ್ಟ ಮೀರಿ ವೇದಗಂಗಾ ನದಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಜತ್ರಾಟ-ಭೀವಶಿ ಸೇತುವೆ ಜಲಾವೃತಗೊಂಡಿದೆ. ಸೇತುವೆ ಎರಡು ಬದಿಯಲ್ಲಿ ಬ್ಯಾರಿಕೇಡ್ ಹಾಕಿ ಸಂಚಾರ ನಿಷೇಧಿಸಲಾಗಿದೆ. ಅಕ್ಕಪಕ್ಕದ ಜಮೀನುಗಳಿಗೂ ನೀರು ನುಗ್ಗಿದೆ.

ಇತ್ತ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಮತ್ತೆರಡು ಸೇತುವೆ ಮುಳುಗಡೆಯಾಗಿದೆ. ವೇದಗಂಗಾ ನದಿಗೆ ಅಡ್ಡಲಾಗಿ ಕಟ್ಟಿದ ಅಕ್ಕೋಳ-ಸಿದ್ನಾಳ ಮತ್ತು ಜತ್ರಾಟ-ಭೀವಶಿ ನಡುವಿನ ಸೇತುವೆ ಜಲಾವೃತಗೊಂಡಿದೆ. ಈವರೆಗೂ ಐದು ಸಂಪರ್ಕ ಸೇತುವೆಗಳು ಜಲಾವೃತಗೊಂಡಿವೆ. ನದಿ ಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಬೆಳಗಾವಿಯ ಖಾನಾಪುರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು, ಅಪಾಯದ ಮಟ್ಟ ಮೀರಿ ಸಾತ್ನಳ್ಳಿ ಹಳ್ಳ ಹರಿಯುತ್ತಿದೆ. ಸಂಜೆ ಏಕಾಏಕಿ ಹಳ್ಳ ಬಂದು ಶಾಲಾ ಮಕ್ಕಳ ಪರದಾಡಬೇಕಾಯಿತು. ಈ ವೇಳೆ ಮಕ್ಕಳನ್ನು ಹೊತ್ತುಕೊಂಡು ಹಳ್ಳ ದಾಟಿಸಬೇಕಾಯಿತು.

ನಿರಂತರ ಮಳೆಗೆ ಬೆಳಗಾವಿಯಲ್ಲಿ ಮನೆ ಕುಸಿತ ಪ್ರಕರಣಗಳು ಮುಂದುವರಿದಿದೆ. ಭೂರಣಕಿ ಗ್ರಾಮದಲ್ಲಿ ಮತ್ತೊಂದು ಮನೆ ಕುಸಿದಿದ್ದು, ಅದೃಷ್ಟವಷಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಭೂರಣಕಿ ಗ್ರಾಮದ ಪರಶುರಾಮ್ ನಾರಾಯಣ ರಾಮಗಾನ್ ಎಂಬುವವರ ಮನೆ ಕುಸಿದು ಬಿದ್ದಿದೆ. ಕಳೆದ ರಾತ್ರಿ ಮನೆಯ ಸದಸ್ಯರು ಮನೆಯಲ್ಲಿರುವಾಗಲೇ ಗೋಡೆ ಕುಸಿದಿದೆ. ಈ ವೇಳೆ ಎಲ್ಲರೂ ಹೊರಗಡೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ.

ಇದನ್ನೂ ಓದಿ: Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

ಕೊಡಗಿನಲ್ಲಿ ಕೆರೆ ಕೋಡಿ ಬಿದ್ದು ಅವಾಂತರ

ಕೊಡಗು ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿದ್ದು, ಕೊಡಗಿನ ಕುಶಾಲನಗರದ ರೊಂಡೆ ಕೆರೆ ಕೋಡಿ ಬಿದ್ದಿದೆ. ಪರಿಣಾಮ ಕೆರೆಯ ನೀರು ನುಗ್ಗಿ ಬಡಾವಣೆಯ ಕೆಲ ಮನೆಗಳು ಜಲಾವೃತಗೊಂಡಿದೆ. ಕುಶಾಲನಗರ ಬಳಿಯ ಗೊಂದಿಬಸವನಹಳ್ಳಿಯಲ್ಲಿ ಘಟನೆ ನಡೆದಿದೆ. ಜನವಸತಿ ಪ್ರದೇಶ ಅಲ್ಲದೆ ಕೃಷಿ ಪ್ರದೇಶಕ್ಕೂ ನೀರು ಹರಿದು ಅವಾಂತರವೇ ಸೃಷ್ಟಿಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ – ಚೆಟ್ಟಳ್ಳಿ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಇದರಿಂದಾಗಿ ಮಡಿಕೇರಿ – ಚೆಟ್ಟಳ್ಳಿ ಗ್ರಾಮೀಣ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸಣ್ಣ ಪ್ರಮಾಣದ ಗುಡ್ಡ ಕುಸಿತ ಹಿನ್ನಲೆ ಅನಾಹುತ ತಪ್ಪಿದೆ. ಮಣ್ಣು ತೆರವು ಬಳಿಕವಷ್ಟೇ ವಾಹನ ಸಂಚಾರ ಸಾಧ್ಯ. ಹೀಗಾಗಿ ಮಣ್ಣು ತೆರವು ಕಾರ್ಯ ಮುಂದುವರಿದಿದೆ.

ಮಳೆಗೆ ಸೋರುತ್ತಿದೆ ಐತಿಹಾಸಿಕ ಮಧುಕೇಶ್ವರ ದೇವಸ್ಥಾ‌ನ

ಭಾರಿ ಮಳೆ ಐತಿಹಾಸಿಕ ಮಧುಕೇಶ್ವರ ದೇವಸ್ಥಾ‌ನದ ಚಾವಣಿ ಸೋರುತ್ತಿದೆ. ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕದಂಬರ ರಾಜಧಾನಿ ಬನವಾಸಿಯ ಶ್ರೀ ಮಧುಕೇಶ್ವರ ದೇವಸ್ಥಾನವು ಭಾರೀ ಮಳೆಗೆ ಸೋರುತ್ತಿದೆ. ಹೀಗಾಗಿ ದೇವಸ್ಥಾನದ ಮೇಲ್ಭಾಗಕ್ಕೆ ಟಾರ್ಪಲ್ ಅಳವಡಿಕೆ ಮಾಡಲಾಗಿದೆ. ಪುರಾತತ್ವ ಇಲಾಖೆಯ ವ್ಯಾಪ್ತಿಯಲ್ಲಿರುವ ಮಧುಕೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರು, ಪ್ರವಾಸಿಗರಿಗೆ ತೊಂದರೆ ಆಗುತ್ತಿದೆ.

ಧಾರಾಕಾರ ಮಳೆಗೆ ಶಿರಸಿಯ ಗುಡ್ನಾಪುರ ಬಂಗಾರೇಶ್ವರ ದೇವಸ್ಥಾನ ಜಲಾವೃತಗೊಂಡಿತ್ತು. ನಿರಂತರ ಮಳೆಯಿಂದಾಗಿ ಮೈದುಂಬಿಕೊಂಡ ಗುಡ್ನಾಪುರ ಕೆರೆಗೆ ಹೊಂದಿಕೊಂಡೇ ಇರುವ ಬಂಗಾರೇಶ್ವರ ದೇವಸ್ಥಾನದ ಸುತ್ತ ನೀರು ಆವರಿಸಿಕೊಂಡಿತ್ತು. ನೀರಲ್ಲಿ ತೆರಳಿ ಬಂಗಾರೇಶ್ವರನಿಗೆ ಜನರು ಪೂಜೆ ಸಲ್ಲಿಸಿದರು.

ಹೆದ್ದಾರಿ ಬಂದ್‌

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಶಿರೂರು ಬಳಿ ಗುಡ್ಡ ಕುಸಿತ ಹಿನ್ನೆಲೆಯಲ್ಲಿ ಹೆದ್ದಾರಿ ಬಂದ್ ಮಾಡಲಾಗಿದೆ. ಹೀಗಾಗಿ ಮಂಗಳೂರಿನಿಂದ ಧಾರವಾಡಕ್ಕೆ ತೆರಳಬೇಕಾದ ಟ್ಯಾಂಕರ್ ಟ್ರಕ್‌ಗಳು ಟೋಲ್ ಗೇಟ್‌ನಲ್ಲೇ ಉಳಿಯುವಂತಾಗಿದೆ. ರಾಷ್ಟ್ರೀಯ ಹೆದ್ದಾರಿ 66 ಬೈಂದೂರು ತಾಲೂಕಿನ ಶಿರೂರು ಐಆರ್‌ಬಿ ಟೋಲ್ ಗೇಟ್ ಬಳಿ ಮೊಕ್ಕಾಂ ಹೂಡಿದ್ದಾರೆ.

ಕಳೆದ ಮೂರು ದಿನಗಳಿಂದ ಟ್ರಕ್ ಚಾಲಕರು ಇಲ್ಲಿಯೇ ಕಾಯುತ್ತಿದ್ದು, ಟ್ರಕ್‌ನಲ್ಲಿರುವ ರೇಷನ್ ಬಳಸಿ ಅಡುಗೆ ತಯಾರಿಸುತ್ತಿದ್ದಾರೆ. ಶೌಚ ಮತ್ತು ಸ್ನಾನಕ್ಕೆ ವ್ಯವಸ್ಥೆ ಸರಿಯಾಗಿಲ್ಲದೆ ದಿನದೂಡುತ್ತಿದ್ದಾರೆ. ಕೇವಲ ಎರಡು ದಿನಗಳಿಗೆ ಆಗುವಷ್ಟು ರೇಷನ್ ತಂದಿದ್ದರು. ಮಂಗಳೂರಿನಿಂದ ಎಲ್‌ಪಿಜಿ ಗ್ಯಾಸ್ ತುಂಬಿಸಿಕೊಂಡು ಅಂಕೋಲ ಮಾರ್ಗವಾಗಿ ಧಾರವಾಡ ತಲುಪ ಬೇಕಾಗಿರುವ ಟ್ಯಾಂಕರ್‌ಗಳು ನಿಂತಲ್ಲೇ ನಿಲ್ಲುವಂತಾಗಿದೆ. ಅಂಕೋಲಾ ಗುಡ್ಡ ಕುಸಿತ ಹಿನ್ನೆಲೆಯಲ್ಲಿ ಮುಖ್ಯ ಹೆದ್ದಾರಿ ಸಂಪೂರ್ಣ ಬಂದ್‌ ಆಗಿದೆ.

ಬಂಟ್ವಾಳ-ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆ ಸ್ಥಗಿತ

ದಕ್ಷಿಣ ಕನ್ನಡದ ಬಂಟ್ವಾಳದ ಅಜಿಲಮೊಗರು ಬಳಿ ನೇತ್ರಾವತಿ ನದಿ ಉಕ್ಕಿ ಹರಿದು ಮುಖ್ಯ ರಸ್ತೆಗೆ ಹರಿದು ಬಂದಿದೆ. ಅಜಿಲಮೊಗರು ಬಳಿ ರಸ್ತೆ ಜಲಾವೃತಗೊಂಡಿದ್ದು, ವಾಹನ ಸಂಚಾರ ಬಂದ್ ಆಗಿದೆ. ಹೀಗಾಗಿ ಬಂಟ್ವಾಳ-ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

Karnataka Job Reservation: ಕನ್ನಡಿಗರಿಗೆ ಮೀಸಲಾತಿ ಕಾಯ್ದೆಗೆ ಫೋನ್‌ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಫೋನ್ ಪೇ ಕಂಪನಿಗೆ ಬಿಸಿ ತಟ್ಟಿದೆ. ಸಾಮಾಜಿಕ ಜಾಲತಾಣದಲ್ಲಿ ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರುವಾಗಿದೆ.

VISTARANEWS.COM


on

Koo

ಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಾಯ್ದೆ (Karnataka Job Reservation) ಜಾರಿಗೆ ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕನ್ನಡ ಪರ ಸಂಘಟನೆಗಳಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಕಾಯ್ದೆ ಜಾರಿ ಮಾಡುವುದಾಗಿ ಹೇಳಿದ ಬೆನ್ನಲ್ಲೇ ನಿರ್ಧಾರ ಹಿಂಪಡೆದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಮತ್ತೊಂದೆಡೆ ಕನ್ನಡಿಗರಿಗೆ ಮೀಸಲಾತಿ ಕಾಯ್ದೆಗೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ʼಫೋನ್ ಪೇʼ ಬಾಯ್ಕಾಟ್ ಅಭಿಯಾನ (‘PhonePe’ boycott campaign) ಶುರುವಾಗಿದೆ.

ಖಾಸಗಿ ಕಂಪನಿಗಳ ಒತ್ತಡಕ್ಕೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಮಣಿಯಬಾರದು. ಶೀಘ್ರವೇ ಮಸೂದೆ ಜಾರಿಗೊಳಿಸಬೇಕೆಂದು ಕನ್ನಡಪರ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆದಿದೆ. ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈಗೆ ಕನ್ನಡದ ನೆಲ, ಜಲ ಬೇಕು. ಆದರೆ, ಕನ್ನಡಿಗರಿಗೆ ನೌಕರಿ ಕೊಡಿ ಎಂದರೆ ಇವರಿಗೆ ತೊಂದರೆ. ನಾವು ಮುಂದಿನ ದಿನಗಳಲ್ಲಿ ಅವರ ಕಂಪನಿಗಳಿಗೆ ಮುತ್ತಿಗೆ ಹಾಕುತ್ತೇವೆ. ಸಿಎಂ ಮಸೂದೆ ಜಾರಿಗೆ ತರದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಕರವೇ ಪ್ರವೀಣ್ ಶೆಟ್ಟಿ ಹೇಳಿದರು.

ಈ ವೇಳೆ ಕಿರಣ್ ಮಜುಂದಾರ್ ಶಾ, ಮೋಹನ್‌ ದಾಸ್‌ ಪೈ ಭಾವಚಿತ್ರ ಹಿಡಿದು ಕಾರ್ಯಕರ್ತರು ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

ಫೋನ್ ಪೇ ಬಾಯ್ಕಾಟ್ ಮಾಡುವಂತೆ ಅಭಿಯಾನ ಆರಂಭ

ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರಕ್ಕೆ ಫೋನ್ ಪೇ ಸಿಇಒ ಸಮೀರ್ ನಿಗಮ್ ಅಸಮಾಧಾನ ಹೊರಹಾಕಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. ಕನ್ನಡಿಗರ ವಿಷಯದಲ್ಲಿ ಫೋನ್ ಪೇ ಸಿಇಒ ಸಮೀರ್ ನಿಗಮ್ ಉದ್ಧಟತನ ತೋರಿದ್ದಾರೆ. ಹೀಗಾಗಿ ಫೋನ್‌ ಪೇ ಆ್ಯಪ್ ಅನ್ನು ಯಾರೂ ಬಳಸಬೇಡಿ. 1 ರೇಟಿಂಗ್ ನೀಡಿದ ಬಳಿಕ ಆ್ಯಪ್ ಡಿಲಿಟ್ ಮಾಡುವಂತೆ ಅಭಿಯಾನ ಶುರು ಮಾಡಲಾಗಿದೆ.

ಇನ್ನು ಕೆಲ ನೆಟ್ಟಿಗರು, ಯಾರಾದರೂ ನನ್ನ ಹೆಸರಲ್ಲಿ ಫೋನ್ ಪೇ ಮಾಡಿ ಎಂದರೆ ಯಾರು ಮಾಡಬೇಡಿ. ಯಾಕೆಂದರೆ ನನ್ನ ಹತ್ತಿರ ಫೋನ್ ಪೇ ಇಲ್ಲ. ಕನ್ನಡಿಗರಿಗೆ ಕೆಲಸದಲ್ಲಿ ಮೀಸಲಾತಿ ಕೊಡುವುದಕ್ಕೆ ಎದುರು ಮಾಡಿರುವ ಫೋನ್‌ಪೇ ಸಿಇಒಗೆ ಬುದ್ಧಿ ಕಲಿಸಲು ಫೋನ್‌ಪೇ ಅನ್‌ಇನ್ಸ್ಟಾಲ್ ಮಾಡಿ. ಕನ್ನಡಿಗರ ಬಲ ತೋರಿಸಿ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

25,000 ಜನರಿಗೆ ಉದ್ಯೋಗ ಕೊಟ್ಟಿದ್ದೇನೆ, ನನ್ನ ಮಕ್ಕಳು ರಾಜ್ಯದಲ್ಲಿ ಕೆಲಸ ಮಾಡಬಾರದಾ?: ಫೋನ್‌ಪೇ ಸಿಇಒ

Sameer Nigam

ಬೆಂಗಳೂರು: ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ. 50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ. 75 ಮೀಸಲಾತಿ (Karnataka Jobs Reservation) ನಿಗದಿಪಡಿಸುವ ಕರಡು ಮಸೂದೆಗೆ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ. ಸದ್ಯ ಈ ಬಗ್ಗೆ ಪರ-ವಿರೋಧ ಅಬಿಪ್ರಾಯ ವ್ಯಕ್ತವಾಗುತ್ತಿದೆ. ಈ ಮಧ್ಯೆ ಫೋನ್‌ಪೇ (PhonePe) ಸಿಇಒ ಮತ್ತು ಸಹ ಸಂಸ್ಥಾಪಕ ಸಮೀರ್ ನಿಗಮ್ (Sameer Nigam) ಅವರು ಕರ್ನಾಟಕ ಸರ್ಕಾರದ ಖಾಸಗಿ ಉದ್ಯೋಗ ಕೋಟಾ ಮಸೂದೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Karnataka Jobs Reservation: ಉರಿವ ಮನೆಯಿಂದ ಗಳ ಹಿರಿದ ಆಂಧ್ರಪ್ರದೇಶ; ʼನಮ್ಮಲ್ಲಿಗೇ ಬನ್ನಿʼ ಎಂದು ಖಾಸಗಿ ಉದ್ಯಮಗಳಿಗೆ ಭಿಕ್ಷಾಪಾತ್ರೆ ಒಡ್ಡಿದ ಸಚಿವ

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ನನಗೆ 46 ವರ್ಷ ವಯಸ್ಸು. ನಾನು ಯಾವುದೇ ರಾಜ್ಯದಲ್ಲಿ 15 ವರ್ಷಕ್ಕೂ ಹೆಚ್ಚು ಕಾಲ ವಾಸಿಸಿಲ್ಲ. ನನ್ನ ತಂದೆ ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ದೇಶಾದ್ಯಂತ ಕಾರ್ಯ ನಿರ್ವಹಿಸಿದ್ದಾರೆ. ಅವರ ಮಕ್ಕಳು ಕರ್ನಾಟಕದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ? ನಾನು ಕಂಪನಿಗಳನ್ನು ಸ್ಥಾಪಿಸಿ ಭಾರತದಾದ್ಯಂತ 25,000+ ಉದ್ಯೋಗಗಳನ್ನು ಸೃಷ್ಟಿಸಿದ್ದೇನೆ. ಹಾಗಾದರೆ ನನ್ನ ಮಕ್ಕಳು ತಮ್ಮ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ?ʼʼ ಎಂದು ಪ್ರಶ್ನಿಸಿದ್ದಾರೆ. ಸರ್ಕಾರ ಈ ಮಸೂದೆಯನ್ನು ತಡೆಹಿಡಿಯುವ ಮೊದಲ ಅವರು ಈ ಅಭಿಪ್ರಾಯ ಹಂಚಿಕೊಂಡಿದ್ದರು.

Continue Reading

ಉತ್ತರ ಕನ್ನಡ

Uttara Kannada Landslide: 6 ಜನರ ಶವ ಪತ್ತೆ, ಇನ್ನೂ ನಾಲ್ವರಿಗಾಗಿ ಶೋಧ; ಭಾರಿ ಮಳೆ ನಡುವೆ ಮಣ್ಣು ತೆರವು

Uttara Kannada Landslide: ನಿನ್ನೆ ಸಂಜೆ ವೇಳೆಗೆ ಅಂಕೋಲಾ ತಾಲೂಕಿನ ಬೆಳಂಬಾರ ಕಡಲತೀರದಲ್ಲಿ ಛಿದ್ರಗೊಂಡಿದ್ದ ದೇಹವೊಂದು ಪತ್ತೆಯಾಗಿದ್ದು, ಅದು ಇಲ್ಲಿಂದ ಕೊಚ್ಚಿಕೊಂಡು ಹೋದ ವ್ಯಕ್ತಿಯ ಶವವಿರಬಹುದು ಎಂದು ಶಂಕಿಸಲಾಗಿದೆ. ಇನ್ನೂ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ.

VISTARANEWS.COM


on

Uttara kannada landslide 3
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ (Uttara Kannada Landslide) ಅಂಕೋಲಾ- ಶಿರೂರು ಗುಡ್ಡಕುಸಿತ (Ankola Shiruru landslide) ಪ್ರಕರಣದಲ್ಲಿ ಹೆದ್ದಾರಿಯ ಮೇಲೆ ಬಿದ್ದಿರುವ ಮಣ್ಣು ತೆಗೆಯುವ ಕಾರ್ಯಾಚರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ದುರಂತದಲ್ಲಿ ನಾಪತ್ತೆಯಾದ 10 ಜನರಲ್ಲಿ ನಿನ್ನೆಯವರೆಗೆ 6 ಮಂದಿಯ ಶವ ಪತ್ತೆಯಾಗಿದೆ. ಇನ್ನೂ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಈ ನಡುವೆ ನಿನ್ನೆ ಸಂಜೆ ವೇಳೆಗೆ ಅಂಕೋಲಾ ತಾಲೂಕಿನ ಬೆಳಂಬಾರ ಕಡಲತೀರದಲ್ಲಿ ಛಿದ್ರಗೊಂಡಿದ್ದ ದೇಹವೊಂದು ಪತ್ತೆಯಾಗಿದ್ದು, ಅದು ಇಲ್ಲಿಂದ ಕೊಚ್ಚಿಕೊಂಡು ಹೋದ ವ್ಯಕ್ತಿಯ ಶವವಿರಬಹುದು ಎಂದು ಶಂಕಿಸಲಾಗಿದೆ. ಇನ್ನೂ ಗುರುತು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಜಿಲ್ಲಾಡಳಿತದ ಮಾಹಿತಿಯಂತೆ ಇಲ್ಲಿ 10 ಮಂದಿ ಕಣ್ಮರೆಯಾಗಿದ್ದಾರೆ; ಇವರಲ್ಲಿ 6 ಮಂದಿಯ ಶವಗಳು ಸಿಕ್ಕಿವೆ ಹಾಗೂ ಇನ್ನೂ ನಾಲ್ವರಿಗಾಗಿ ಶೋಧ ನಡೆಯುತ್ತಿದೆ.

ಮತ್ತೆ ಗುಡ್ಡ ಕುಸಿತದ ಆತಂಕ

ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಣ್ಣು ತೆರವು ಕಾರ್ಯಕ್ಕೆ ಅಡ್ಡಿಯಾಗಿದೆ. ಧಾರಾಕಾರ ಮಳೆಯ ನಡುವೆಯೂ ಮಣ್ಣು ತೆರವು ಭರದಿಂದ ಸಾಗಿದ್ದು, ಐಆರ್‌ಬಿ ಸಿಬ್ಬಂದಿ ತೆರವು ಮಾಡುತ್ತಿದ್ದಾರೆ. ಎನ್‌ಡಿಆರ್‌ಎಫ್‌, ಪೊಲೀಸ್ ತಂಡಗಳು ಶೋಧ ಕಾರ್ಯ ಮುನ್ನಡೆಸಿವೆ. ಮಳೆಯಿಂದಾಗಿ ಗುಡ್ಡದಿಂದ ಝರಿಯಂತೆ ನೀರು ಹರಿದುಬರುತ್ತಿದ್ದು, ಮತ್ತೆ ಗುಡ್ಡ ಕುಸಿತ ಭೀತಿ ತಲೆದೋರಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಾಚರಣೆ ಪ್ರದೇಶದಲ್ಲಿ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ವಿಸ್ತಾರ ನ್ಯೂಸ್‌ಗೆ ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಪ್ರತಿಕ್ರಿಯೆ ನೀಡಿದ್ದು, ಇನ್ನೂ 40 ಮೀಟರ್ ಕೆಲಸ ಬಾಕಿ ಇದೆ, ಇಂದು ಪೂರ್ಣಗೊಳ್ಳಬಹುದು ಎಂದಿದ್ದಾರೆ. ಆದರೆ ಇಲ್ಲಿನ ಇನ್ನೊಂದು ಬದಿ ಕುಸಿಯುವ ಆತಂಕ ಎದುರಾಗಿದೆ. ನಿನ್ನೆ ಅಲ್ಪ ಪ್ರಮಾಣದಲ್ಲಿದ್ದ ಬಿರುಕು ಇಂದು ಹೆಚ್ಚಾಗಿದೆ. ಅದೂ ಕುಸಿದರೆ ಮತ್ತೆ ಕಾರ್ಯಾಚರಣೆಗೆ ಹಿನ್ನಡೆಯಾಗಬಹುದು ಎಂದಿದ್ದಾರೆ.

ಗಂಗಾವಳಿ ನದಿಯಲ್ಲಿ ಮಣ್ಣಿನ ದಿಬ್ಬಗಳು ನಿರ್ಮಾಣವಾಗಿವೆ. ಇದರಿಂದ ನದಿಯ ಹರಿವು ರಸ್ತೆಗೆ ಕೊರೆತ ಉಂಟುಮಾಡುವ ಸಾಧ್ಯತೆಯಿದೆ. ಈ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಗುಡ್ಡ ಕುಸಿತದಿಂದ ಉಳುವರೆ ಗ್ರಾಮದ ಮನೆಗಳಿಗೆ ಹಾನಿಯಾದ ವಿಚಾರದಲ್ಲಿ, ಆಸ್ಪತ್ರೆಗೆ ದಾಖಲಾಗಿದ್ದ 15 ಮಂದಿಗೆ ಬಾಡಿಗೆ ಮನೆ ಮಾಡಿ ಇರಿಸಲು ಚಿಂತನೆ ನಡೆಸಲಾಗಿದೆ. ಗುಡ್ಡ ಕುಸಿತದಿಂದ ಮನೆ ಕಳೆದುಕೊಂಡಿರುವ ಉಳುವರೆ ಗ್ರಾಮದ ನಿವಾಸಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕಾಳಜಿ ಕೇಂದ್ರದ ಬದಲು ಬಾಡಿಗೆ ಮನೆ ವ್ಯವಸ್ಥೆ ಮಾಡಲಾಗುತ್ತಿದೆ. ಮನೆ ನಿರ್ಮಾಣವಾಗುವವರೆಗೆ ಬಾಡಿಗೆ ಮನೆ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ.

ಗ್ಯಾಸ್‌ ಟ್ಯಾಂಕರ್‌ನ ಅನಿಲ

ಮಣ್ಣು ಕುಸಿತದ ವೇಳೆ ನದಿಯಲ್ಲಿ ತೇಲಿಹೋಗಿದ್ದ ಗ್ಯಾಸ್ ಟ್ಯಾಂಕರ್‌ನಿಂದ ತಜ್ಞರ ತಂಡ ಅನಿಲ ಟ್ಯಾಂಕರ್ ಖಾಲಿ ಮಾಡುವ ಕಾರ್ಯ ಮಾಡುತ್ತಿದೆ. ಉಳಿದ ಅನಿಲ ಇಂದು ಖಾಲಿ ಮಾಡುತ್ತೇವೆ. ಭಾರೀ ಮಳೆ ಹಾಗೂ ಗಾಳಿ‌ ಇರುವುದರಿಂದ ಅನಿಲ ಖಾಲಿ ಮಾಡಲು ಯಾವುದೇ ತೊಂದರೆ ಇಲ್ಲ ಎಂದು ಸತೀಶ್‌ ಸೈಲ್‌ ತಿಳಿಸಿದ್ದಾರೆ.

ನದಿಯಲ್ಲಿ ತೇಲಿಹೋಗಿದ್ದ ಟ್ಯಾಂಕರ್‌ ಅನ್ನು ಸದ್ಯ ಸಗಡಗೇರಿ‌ ಬಳಿ ನೌಕಾನೆಲೆ, NDRF ತಂಡಗಳು ತಡೆದು ನಿಲ್ಲಿಸಿದ್ದವು. ನಿನ್ನೆ ಶೇ.60ರಷ್ಟು ಗ್ಯಾಸ್ ಅನ್ನು ಗಂಗಾವಳಿ ನದಿಗೆ ಬಿಟ್ಟಿದ್ದ ಹೆಚ್‌ಪಿಎಲ್ ಕಂಪೆನಿ ತಜ್ಞರು, ಇಂದು ಮತ್ತೆ ಶೇ.40ರಷ್ಟು ಗ್ಯಾಸ್ ನೀರಿಗೆ ಬಿಡಲಿದ್ದಾರೆ. ಸ್ಥಳದಲ್ಲಿ ಅಗ್ನಿಶಾಮಕದಳ, SDRF, NDRF, ಪೊಲೀಸರು, ವೈದ್ಯಾಧಿಕಾರಿಗಳ ತಂಡ ಮೊಕ್ಕಾಂ ಹೂಡಿದೆ. ಎರಡು ಆ್ಯಂಬುಲೆನ್ಸ್ ಸ್ಥಳದಲ್ಲಿ ನಿಯೋಜನೆಯಾಗಿದೆ. ಗ್ರಾಮದ 34 ಮನೆಗಳ ಜನರನ್ನು ಜಿಲ್ಲಾಡಳಿತ ಕಾಳಜಿ ಕೇಂದ್ರಕ್ಕೆ ಸ್ಥಳಾಂತರ ಮಾಡಿದೆ. ಟ್ಯಾಂಕರ್ ಒಟ್ಟು 18 ಕ್ವಿಂಟಾಲ್ ಗ್ಯಾಸ್ ಹೊಂದಿತ್ತು.

ಇದನ್ನೂ ಓದಿ: Uttara Kannada Landslide: ಭೂಕುಸಿತದ ಜಾಗದ ಬಳಿಯೇ ʼಸುನಾಮಿʼ ಎಫೆಕ್ಟ್‌; ನೀರಿನ ರಭಸಕ್ಕೆ ಕೊಚ್ಚಿಹೋದ ಮಹಿಳೆ

Continue Reading
Advertisement
DK Shivakumar
ಕರ್ನಾಟಕ53 seconds ago

DK Shivakumar: ಬಿಎಸ್‌ವೈ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿಕೆಶಿ ಆರೋಪ

Virat Kohli
ಕ್ರೀಡೆ12 mins ago

Virat Kohli: ಬಿಸಿಸಿಐ ಅಧಿಕಾರಿಗಳನ್ನು ಸಂಪರ್ಕಿಸಿ ಕೋಚ್​ ಗಂಭೀರ್​ ವಿಚಾರದಲ್ಲಿ ಕೊಹ್ಲಿ ಕೊಟ್ಟ ಆಶ್ವಾಸನೆ ಏನು?

karnataka Rain
ಮಳೆ19 mins ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

ಪ್ರಮುಖ ಸುದ್ದಿ33 mins ago

Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

Kanwar Yatra
ದೇಶ38 mins ago

Kanwar Yatra: ಕನ್ವರ್‌ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ: ಯೋಗಿ ಆದಿತ್ಯನಾಥ್

Uttara kannada landslide 3
ಉತ್ತರ ಕನ್ನಡ51 mins ago

Uttara Kannada Landslide: 6 ಜನರ ಶವ ಪತ್ತೆ, ಇನ್ನೂ ನಾಲ್ವರಿಗಾಗಿ ಶೋಧ; ಭಾರಿ ಮಳೆ ನಡುವೆ ಮಣ್ಣು ತೆರವು

England vs West Indies
ಕ್ರೀಡೆ59 mins ago

England vs West Indies: ವೇಗದ ಅರ್ಧಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್

Karnataka Rain
ಮಳೆ1 hour ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Vaibhavi Jagdish Bold Photo shoot
ಸ್ಯಾಂಡಲ್ ವುಡ್1 hour ago

Vaibhavi Jagdish: ಬೋಲ್ಡ್‌ ಫೋಟೊ ಹಂಚಿಕೊಂಡು ಕಮೆಂಟ್‌ ಸೆಕ್ಷನ್‌ ಆಫ್‌ ಮಾಡಿದ ಜೈ ಜಗದೀಶ್ ಪುತ್ರಿ!

Kannada Actress Many opportunities for this actress before the release Back Benchers'!
ಸ್ಯಾಂಡಲ್ ವುಡ್1 hour ago

Kannada Actress: `ಬ್ಯಾಕ್‍ ಬೆಂಚರ್ಸ್’ ಬಿಡುಗಡೆಗೂ ಮುನ್ನವೇ ಹಲವು ಅವಕಾಶಗಳು ಈ ನಟಿಗೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ19 mins ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ1 hour ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ21 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ22 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌