450 school bags made to be distributed among voters seized, BJP minister KC Narayanagowda's photograph on bagGST Raid: ಮತದಾರರಿಗೆ ಹಂಚಲು ತಯಾರಿಸಿದ್ದ 450 ಶಾಲಾ ಬ್ಯಾಗ್‌ ವಶ; ಚೀಲದ ಮೇಲೆ ಸಚಿವ ನಾರಾಯಣಗೌಡ ಚಿತ್ರ - Vistara News

ಕರ್ನಾಟಕ

GST Raid: ಮತದಾರರಿಗೆ ಹಂಚಲು ತಯಾರಿಸಿದ್ದ 450 ಶಾಲಾ ಬ್ಯಾಗ್‌ ವಶ; ಚೀಲದ ಮೇಲೆ ಸಚಿವ ನಾರಾಯಣಗೌಡ ಚಿತ್ರ

GST Raid: ಬೆಂಗಳೂರಿನ ಚಾಮರಾಜಪೇಟೆಯ 3ನೇ ಕ್ರಾಸ್‌ನ ಗೋದಾಮಿನ ಮೇಲೆ ಜಿಎಸ್‌ಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

VISTARANEWS.COM


on

450 school bags made to be distributed among voters seized, BJP minister KC Narayanagowda's photograph on bag
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಾಮರಾಜಪೇಟೆಯ 3ನೇ ಕ್ರಾಸ್‌ನ ಗೋದಾಮಿನ ಮೇಲೆ ಜಿಎಸ್‌ಟಿ ಅಧಿಕಾರಿಗಳು ದಾಳಿ (GST Raid) ನಡೆಸಿ, ಮತದಾರರಿಗೆ ಉಡುಗೊರೆಯಾಗಿ ಹಂಚಲು ಸಂಗ್ರಹಿಸಿಟ್ಟಿದ್ದ 450 ಶಾಲಾ ಬ್ಯಾಗ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಬ್ಯಾಗ್‌ಗಳ ಮೇಲೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಬಿಜೆಪಿ ಶಾಸಕ ಹಾಗೂ ಸಚಿವ ಕೆ. ಸಿ. ನಾರಾಯಣಗೌಡ ಅವರ ಭಾವಚಿತ್ರ ಕಂಡುಬಂದಿದೆ.

ಮತದಾರರಿಗೆ ಹಂಚಲು ಬ್ಯಾಗ್‌ಗಳನ್ನು ತಯಾರಿಸಲಾಗುತ್ತಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಚಾಮರಾಜಪೇಟೆ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದಾಗ 450 ಬ್ಯಾಗ್‌ಗಳು ಕಂಡುಬಂದಿವೆ. ಸುಮಾರು 10 ಸಾವಿರ ಶಾಲಾ ಬ್ಯಾಗ್‌ಗಳು ಸಂಗ್ರಹಿಸಲಾಗಿದೆ ಎಂದು ಕೆಆರ್‌ಎಸ್‌ ಪಕ್ಷ ಆರೋಪಿಸಿತ್ತು. ಆದರೆ, ದಾಳಿ ವೇಳೆ ಸಿಕ್ಕ 450 ಬ್ಯಾಗ್‌ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು, ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೊಮ್ಮನಹಳ್ಳಿಯಲ್ಲಿ ಒಂದು ಲೋಡ್‌ ಕುಕ್ಕರ್‌ಗಳ ವಶ

ಬೆಂಗಳೂರು: ನಗರದ ಹೊರವಲಯದ ಬೊಮ್ಮನಹಳ್ಳಿ ಮತದಾರರಿಗೆ ಕುಕ್ಕರ್ ಹಂಚುತ್ತಿದ್ದಾಗ ಪೊಲೀಸರು ದಾಳಿ ನಡೆಸಿ, ವಾಹನ ಸಮೇತ ಒಂದು ಲೋಡ್‌ ಕುಕ್ಕರ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಪುಟ್ಟೇನಹಳ್ಳಿಯ ಸ್ಟಾರ್ ಕನ್ವೆನ್ಷನ್ ಹಾಲ್‌ನಲ್ಲಿ ಮತದಾರರಿಗೆ ಕುಕ್ಕರ್ ಹಂಚಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದು ಪುಟ್ಟೇನಹಳ್ಳಿ ಪೊಲೀಸರು ದಾಳಿ ನಡೆಸಿದ್ದಾರೆ.

ಪುಟ್ಟೇನಹಳ್ಳಿ ಕಾಂಗ್ರೆಸ್ ಮುಖಂಡರು ಮತದಾರರಿಗೆ ಕುಕ್ಕರ್ ಹಂಚುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಪೊಲೀಸರು ಕುಕ್ಕರ್‌ಗಳನ್ನು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ವಾಹನವನ್ನು ಸೀಜ್ ಮಾಡದಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕುಕ್ಕರ್ ಹಂಚುತ್ತಿದ್ದವರ ನಡುವೆ ಮಾತಿನ ಚಕಮಕಿ ನಡೆದು ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.

ಇದನ್ನೂ ಓದಿ | GST Raid: ಜಿಎಸ್‌ಟಿ ಅಧಿಕಾರಿಗಳ ದಾಳಿ; ಬಿಜೆಪಿ ಆಕಾಂಕ್ಷಿಗೆ ಸೇರಿದ 3 ಕೋಟಿ ರೂಪಾಯಿ ಮೌಲ್ಯದ ವಸ್ತುಗಳು ವಶಕ್ಕೆ

ಕೋಲಾರದಲ್ಲಿ ರಂಜಾನ್‌ ಪ್ರಯುಕ್ತ ಹಂಚಲು ಸಾಗಿಸುತ್ತಿದ್ದ 1200 ಫುಡ್‌ ಕಿಟ್‌ ಜಪ್ತಿ

ಕೋಲಾರ: ನಗರದ ಸುಲ್ತಾನ್ ತಿಪ್ಪಸಂದ್ರ ಬಳಿ ರಂಜಾನ್ ಹಬ್ಬದ ಪ್ರಯುಕ್ತ ಹಂಚಲು ತೆಗೆದುಕೊಂಡು ಹೋಗುತ್ತಿದ್ದ ಫುಡ್ ಕಿಟ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನಾಯತ್ ಎಂಬುವರಿಗೆ ಸೇರಿದ 1200 ಫುಡ್ ಕಿಟ್‌ಗಳನ್ನು ಕೋಲಾರ ನಗರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ. ರಂಜಾನ್ ಹಬ್ಬದ ಪ್ರಯುಕ್ತ ಮತದಾರರಿಗೆ ಆಹಾರ ಸಾಮಗ್ರಿ ಕಿಟ್‌ ಹಂಚಿಕೆ ಮಾಡಲು ಯೋಜನೆ ಮಾಡಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಫುಡ್‌ ಕಿಟ್‌ಗಳನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ 90 ಕುಕ್ಕರ್ ವಶಕ್ಕೆ

ವಿಜಯಪುರ: ಜಿಲ್ಲೆಯ ದೇವಣಗಾಂವ್ ಚೆಕ್ ಪೋಸ್ಟ್‌ನಲ್ಲಿ ಪರಿಶೀಲನೆ ವೇಳೆ 90 ಕುಕ್ಕರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾವುದೇ ದಾಖಲೆಗಳಿಲ್ಲದ ಕುಕ್ಕರ್‌ಗಳನ್ನು ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ಕುಕ್ಕರ್‌ಗಳನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಲಬುರಗಿ

Assault Case : ಹಣಕ್ಕಾಗಿ ಕಿಡ್ನ್ಯಾಪ್‌; ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್‌!

Assault Case : ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಕ್ಷೇತ್ರದಲ್ಲೇ ಹೇಯ ಕೃತ್ಯವೊಂದು ನಡೆದಿದೆ. ಹಣಕ್ಕಾಗಿ ಕಾರು ವ್ಯಾಪಾರಿ ಸೇರಿ ಮತ್ತಿಬ್ಬರನ್ನು ಮನೆಯೊಂದರಲ್ಲಿ ಕೂಡಿ ಹಾಕಿದ ದುರ್ಷಮಿಗಳು, ಅವರನ್ನು ಬೆತ್ತಲೆ ಮಾಡಿ, ಕರೆಂಟ್‌ ಶಾಕ್‌ ಕೊಟ್ಟು ಹಲ್ಲೆ ಮಾಡಿ ಟಾರ್ಚರ್‌ ಮಾಡಿದ್ದಾರೆ.

VISTARANEWS.COM


on

By

Assault case in kalaburagi
ಆರು ಮಂದಿ ಬಂಧಿತ ಆರೋಪಿಗಳು ಹಾಗೂ ಮಧ್ಯ ಭಾಗದಲ್ಲಿ ಕಿಡ್ನ್ಯಾಪ್‌ ಆಗಿದ್ದ ಅರ್ಜುನ್‌
Koo

ಕಲಬುರಗಿ: ಹಣಕ್ಕಾಗಿ‌ ಸೆಕೆಂಡ್‌ ಹ್ಯಾಂಡ್‌ ಕಾರು ವ್ಯಾಪಾರಿ ಮತ್ತು ಆತನ ಸ್ನೇಹಿತರಿಬ್ಬರನ್ನು ಅಪಹರಿಸಿರುವ (Kidnap Case) ಘಟನೆ ನಡೆದಿದೆ. ರೂಮಿನಲ್ಲಿ ಮೂವರನ್ನು ಕೂಡಿ ಹಾಕಿ ಬೆತ್ತಲೆ ಮಾಡಿ ಮರ್ಮಾಂಗಕ್ಕೆ ವಿದ್ಯುತ್ ಶಾಕ್ ಕೊಟ್ಟು ಟಾರ್ಚರ್ ನೀಡಿ, ಹಣವನ್ನು ಲಪಟಾಯಿಸಿರುವ ಘಟನೆ (Assault Case) ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರ ಗ್ರಾಮದ ನಿವಾಸಿ ಅರ್ಜುನ್‌ ಮಡಿವಾಳ ಎಂಬಾತನಿಗೆ ಹಲ್ಲೆ ನಡೆಸಲಾಗಿದೆ. ಅರ್ಜುನ್‌ ಬೆಂಗಳೂರಿನಿಂದ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ತಂದು ಮಾರಾಟ ಮಾಡುತ್ತಿದ್ದರು. ಮೇ 5ರಂದು ಪರಿಚಯಸ್ಥನಾಗಿದ್ದ ರಮೇಶ್ ಎಂಬಾತನಿಗೆ ಸೆಕೆಂಡ್ ಹ್ಯಾಂಡ್ ಕಾರು ತೋರಿಸಲು ಅರ್ಜುನ್‌ ತನ್ನಿಬ್ಬರು ಸ್ನೇಹಿತರಾದ ಎಂ.ಡಿ ಸಮೀರೊದ್ದಿನ್, ಅಬ್ದುಲ್ ರಹೇಮಾನ್ ಜತೆಗೆ ಹೋಗಿದ್ದರು.

ಇದನ್ನೂ ಓದಿ: Murder case : ಕೊಟ್ಟ ಹಣ ಕೇಳಿದ್ದಕ್ಕೆ ಗೆಳೆಯನನ್ನೇ ಕೊಂದಿದ್ದ ದ್ರೋಹಿ ಅರೆಸ್ಟ್‌

ಈ ವೇಳೆ ಆರೋಪಿ ರಮೇಶ್‌ ಕಾರಿನ ಟೆಸ್ಟ್‌ ಡ್ರೈವ್‌ ಮಾಡಿ, ಕಾರಿಗೆ ಹಣ ನೀಡುವವರು ಕಲಬುರಗಿ ನಗರದ ಹಾಗರಗಾ ಕ್ರಾಸ್ ಬಳಿ ಇದ್ದಾರೆ. ಅಲ್ಲಿಗೆ ಹೋಗೋಣಾ ಎಂದು ಮೂವರನ್ನು ಕರೆದುಹೋಗಿದ್ದಾರೆ. ನಂತರ ಯಾವುದೋ ಮನೆ ಬಳಿ ಕಾರು ನಿಲ್ಲಿಸಿದಾಗ ಸುಮಾರು ಹತ್ತಾರು ಮಂದಿ ಅರ್ಜುನ್‌ ಹಾಗೂ ಮತ್ತಿಬ್ಬರನ್ನು ಬಲವಂತದಿಂದ ಎಳೆದುಹೋಗಿ ಕೂಡಿ ಹಾಕಿ ಹಲ್ಲೆ ನಡೆಸಿದ್ದಾರೆ. ರಮೇಶ್‌ ಸೇರಿ ಇಮ್ರಾನ್ ಪಟೇಲ್, ಮಹಮ್ಮದ್ ಮತೀನ್ ಸೇರಿ ಹಲವರು ಹಲ್ಲೆ ನಡೆಸಿದ್ದಾರೆ.

ಕಿರಾತಕರು ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಹಲ್ಲೆ ನಡೆಸಿದ್ದಾರೆ. ಕರೆಂಟ್ ಶಾಕ್ ಬಳಿಕ ಬಡಿಗೆಯಿಂದ ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ ಹಲ್ಲೆ ಮಾಡುವ ದೃಶ್ಯವನ್ನು ವಿಡಿಯೊ ಮಾಡಿಕೊಂಡಿದ್ದಾರೆ. ಹಲ್ಲೆ ಮಾಡಿ ಹಣ ಹಾಕಿಸಿಕೊಂಡು, ಬಳಿಕ ಪ್ರತಿ ಬಾರಿ ಕಾರು ಮಾರಾಟ ಮಾಡಿದಾಗ ಕಮಿಷನ್‌ ರೂಪದಲ್ಲಿ ಒಂದು ಲಕ್ಷ ರೂ. ಹಣ ಕೊಡಬೇಕು ಎಂದಿದ್ದಾರೆ. ಕೊಡದೆ ಹೋದರೆ ಮನೆಗೆ ನುಗ್ಗಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಸದ್ಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಹಲ್ಲೆ ಮಾಡಿದ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Prajwal Revanna Case: ದೇವರಾಜೇಗೌಡ ಹುಚ್ಚುನಾಯಿ, ನಕಲಿ ವಕೀಲ ಎಂದ ಶಿವರಾಮೇಗೌಡ

Prajwal Revanna Case: ಏಪ್ರಿಲ್‌ 29 ಹಾಗೂ 30ರಂದು ನಾವು ಭೇಟಿ ಮಾಡಿ ಮಾತನಾಡಿದ್ದೇವೆ. ಏಪ್ರಿಲ್‌ 29ಕ್ಕೂ ಮೊದಲು ನಾನು ಭೇಟಿ ಮಾಡಿಲ್ಲ. ಏಪ್ರಿಲ್‌ 29ರ ಬಳಿಕ 30ನೇ ತಾರೀಖಿನಂದೂ ಅವನೇ ಬಂದು ಭೇಟಿ ಮಾಡಿದ್ದಾನೆ. ಆ ಎರಡು ಸಭೆ ಹೊರತುಪಡಿಸಿ ನಾನು ಅವನ ಜತೆ ಮಾತನಾಡಿಲ್ಲ. ಅವನೊಬ್ಬ ಹುಚ್ಚುನಾಯಿ ಎಂದು ಮಾಜಿ ಸಂಸದ ಎಲ್‌.ಆರ್.ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣವು (Prajwal Revanna Case) ದೇಶಾದ್ಯಂತ ಸಂಚಲನ ಮೂಡಿಸಿದೆ. ಇದೇ ಪ್ರಕರಣದಲ್ಲಿ ಜೆಡಿಎಸ್‌ ನಾಯಕ ಎಚ್‌.ಡಿ.ರೇವಣ್ಣ ಜೈಲುಪಾಲಾಗಿದ್ದಾರೆ. ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇನ್ನು, ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ದೇವರಾಜೇಗೌಡ (Devaraje Gowda) ಹಾಗೂ ಮಾಜಿ ಸಂಸದ ಎಲ್‌.ಆರ್.ಶಿವರಾಮೇಗೌಡ (L R Shivarame Gowda) ನಡುವಿನ ವಾಕ್ಸಮರವೂ ಜೋರಾಗಿದೆ. ಇದಕ್ಕೆ ನಿದರ್ಶನ ಎಂಬಂತೆ, “ದೇವರಾಜೇಗೌಡ ಹುಚ್ಚು ನಾಯಿ ಇದ್ದಂತೆ. ಆತ ನಕಲಿ ವಕೀಲ” ಎಂದು ಎಲ್‌.ಆರ್.ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ.

“ಏಪ್ರಿಲ್‌ 29 ಹಾಗೂ 30ರಂದು ನಾವು ಭೇಟಿ ಮಾಡಿ ಮಾತನಾಡಿದ್ದೇವೆ. ಏಪ್ರಿಲ್‌ 29ಕ್ಕೂ ಮೊದಲು ನಾನು ಭೇಟಿ ಮಾಡಿಲ್ಲ. ಏಪ್ರಿಲ್‌ 29ರ ಬಳಿಕ 30ನೇ ತಾರೀಖಿನಂದೂ ಅವನೇ ಬಂದು ಭೇಟಿ ಮಾಡಿದ್ದಾನೆ. ಆ ಎರಡು ಸಭೆ ಹೊರತುಪಡಿಸಿ ನಾನು ಅವನ ಜತೆ ಮಾತನಾಡಿಲ್ಲ. ಅವನೊಬ್ಬ ಹುಚ್ಚುನಾಯಿ, ನಕಲಿ ವಕೀಲ. ಅಲ್ಲದೆ, ಆತನೊಬ್ಬರ ರೋಲ್‌ ಕಾಲ್‌ ಮಾಸ್ಟರ್‌ ಆಗಿದ್ದಾನೆ. ಅವನ ಹಣಕಾಸಿನ ವ್ಯವಹಾರದ ಬಗ್ಗೆ ಎಸ್‌ಐಟಿ ತನಿಖೆ ನಡೆಸಬೇಕು” ಎಂದು ಮಾಜಿ ಸಂಸದ ‘ವಿಸ್ತಾರ ನ್ಯೂಸ್‌’ಗೆ ತಿಳಿಸಿದ್ದಾರೆ.

ಕಾರ್ತಿಕ್‌, ದೇವರಾಜೇಗೌಡ ಪೆನ್‌ಡ್ರೈವ್‌ ರೂವಾರಿಗಳು

“ಪೆನ್‌ಡ್ರೈವ್‌ ರಿಲೀಸ್‌ ಮಾಡಿರುವುದರ ಹಿಂದೆ ಕಾರು ಚಾಲಕ ಕಾರ್ತಿಕ್‌ ಹಾಗೂ ದೇವರಾಜೇಗೌಡ ಇದ್ದಾರೆ. ಏಟ್ರಿಯಾ ಹೋಟೆಲ್‌ನಲ್ಲಿ ಮಾತನಾಡುವಾಗ ನನ್ನ ವಿರುದ್ಧ ತನಿಖೆ ಮಾಡಬೇಕು ಅಂತಿದ್ದಾರೆ ಎಂದ. ಡಿ.ಕೆ.ಶಿವಕುಮಾರ್‌ ಹಾಗೂ ಮುಖ್ಯಮಂತ್ರಿ ಬಗ್ಗೆ ಪದೇಪದೆ ಮಾತನಾಡಬೇಡ ಎಂದೆ. ನಿನ್ನದು ನೀನು ಸರಿಮಾಡಿಕೊ. ಉಳಿದ ಉಸಾಬರಿ ನಿನಗೆ ಬೇಡ ಎಂಬುದಾಗಿ ಹೇಳಿದ್ದೆ” ಎಂದು ತಿಳಿಸಿದರು.

“ದೇವರಾಜೇಗೌಡ ಖದೀಮ ಇದ್ದಾನೆ. ಪ್ರಚಾರ ಪ್ರಿಯನಾದ ಅವನಿಗೆ ಮಾಧ್ಯಮಗಳು ಆದ್ಯತೆ ನೀಡಬಾರದು. ಸಿಎಂ ಹಾಗೂ ಡಿಸಿಎಂ ಮೇಲೆ ನಂಬಿಕೆ ಇಲ್ಲ ಎಂದ. ನೀನು ಅವರನ್ನು ಬಿಡು, ಇವತ್ತಿನಿಂದ ಕೇಸ್‌ ಬಗ್ಗೆ ಹೋರಾಡ ಮಾಡಿಲ್ಲ ಎಂದು ಹೇಳು ಅಂದೆ. ಅಷ್ಟಕ್ಕೂ, ಅವನು ಬ್ಲ್ಯಾಕ್‌ಮೇಲ್‌ ಮಾಡಿ ದುಡ್ಡು ಮಾಡಿದ್ದಾನೆ. ಅವನು ವಕೀಲಿಕೆ ಮಾಡಲ್ಲ. ಇಷ್ಟಾದರೂ ಹೇಗೆ ದುಡ್ಡು ಬರುತ್ತದೆ? ವಿಧಾನಸಭೆ ಚುನಾವಣೆಯಲ್ಲಿ ದುಡ್ಡು ಇಟ್ಟುಕೊಂಡು ಸುಮ್ಮನಾದ. ಅವನ ಬಾಡಿಯಲ್ಲಿ ಯಾವಾಗಲೂ ಕ್ಯಾಮೆರಾ (ಬಾಡಿ ಕ್ಯಾಮ್)‌ ಇರುತ್ತದೆ. ನಾವು ಕೂತಾಗ ಒಂದೂ ಮಾತಾಡಲ್ಲ. ನನಗೆ ಅವನ ಬಗ್ಗೆ ಭಯ ಇಲ್ಲ. ಎಸ್‌ಐಟಿ ಅವರು ಕರೆದುಕೊಂಡು ಹೋಗಿ ವಿಚಾರಣೆ ಮಾಡಿದರೆ ಎಲ್ಲವೂ ಬಯಲಾಗುತ್ತದೆ” ಎಂದು ಹೇಳಿದರು.

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸ್ಫೋಟಕ ಆಡಿಯೊ ಹೊರಬಿದ್ದಿದೆ. ಇತ್ತೀಚೆಗೆ ಈ ಹಗರಣದಲ್ಲಿ ಡಿಸಿಎಂ ಡಿಕೆಶಿ ಕೈವಾಡ ಎಂದು ಆರೋಪಿಸಿದ್ದ ವಕೀಲ ದೇವರಾಜೇಗೌಡ, ಮತ್ತೊಂದು ಆಡಿಯೊ ಬಾಂಬ್‌ ಹಾಕಿದ್ದಾರೆ. ದೇವರಾಜೇಗೌಡ-ಶಿವರಾಮೇಗೌಡ ನಡುವಿನ ಮಾತುಕತೆಯ 36 ಸೆಕೆಂಡ್ಸ್‌ ಆಡಿಯೊ ವೈರಲ್‌ ಆಗಿದೆ. ಇದರ ಬೆನ್ನಲ್ಲೇ ವಕೀಲ ದೇವರಾಜೇಗೌಡ ಅವರನ್ನು ಹಿರಿಯೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆಡಿಯೊ ಬಯಲಾದ ಬೆನ್ನಲ್ಲೇ ಈಗ ಶಿವರಾಮೇಗೌಡ ಸುದ್ದಿಗೋಷ್ಠಿ ನಡೆಸಿ ಹಲವು ಆರೋಪ ಮಾಡಿದ್ದಾರೆ.

ಇದನ್ನೂ ಓದಿ: Prajwal Revanna Case: ಸ್ಫೋಟಕ ಆಡಿಯೊ ರಿಲೀಸ್‌ ಮಾಡಿದ ಬೆನ್ನಲ್ಲೇ ವಕೀಲ ದೇವರಾಜೇಗೌಡ ವಶಕ್ಕೆ

Continue Reading

ಕರ್ನಾಟಕ

Hassan Pen Drive Case: ಅಶ್ಲೀಲ ವಿಡಿಯೊ ಪ್ರಕರಣ; ಪೆನ್‌ಡ್ರೈವ್ ಲೀಕ್‌ ಮಾಡಿದವರಿಗೂ ಸಂಕಷ್ಟ?

Hassan Pen Drive Case: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಸಂಬಂಧ ಈಗಾಗಲೇ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಬಂಧನವಾಗಿದೆ. ಪ್ರಜ್ವಲ್‌ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಈ ಮಧ್ಯೆ ವಿಡಿಯೊ ಲೀಕ್‌ ಮಾಡಿದವರಿಗೂ ಸಂಕಷ್ಟ ಎದುರಾಗಿದೆ. ಪೆನ್‌ಡ್ರೈವ್‌ ಲೀಕ್‌ ಪ್ರಕರಣದಲ್ಲಿ ಈಗಾಗಲೇ ಪ್ರಜ್ವಲ್‌ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ಗೌಡ ಅವರಿಗೆ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಹೀಗಾಗಿ ಕಾರ್ತಿಕ್ ಸೇರಿ ನಾಲ್ವರಿಗೆ ಬಂಧನ ಭೀತಿ ಎದುರಾಗಿದೆ.

VISTARANEWS.COM


on

Hassan Pen Drive Case
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಮಹತ್ವದ ಬೆಳವಣಿಗೆ ನಡೆದಿದೆ. ಪೆನ್‌ಡ್ರೈವ್‌ ಲೀಕ್‌ ಮಾಡಿದವರಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಪೆನ್‌ಡ್ರೈವ್‌ ಲೀಕ್‌ ಪ್ರಕರಣದಲ್ಲಿ ಈಗಾಗಲೇ ಪ್ರಜ್ವಲ್‌ ಅವರ ಮಾಜಿ ಕಾರು ಚಾಲಕ ಕಾರ್ತಿಕ್‌ ಗೌಡ ಅವರಿಗೆ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಹೀಗಾಗಿ ಕಾರ್ತಿಕ್ ಸೇರಿ ನಾಲ್ವರಿಗೆ ಬಂಧನ ಭೀತಿ ಎದುರಾಗಿದೆ. ಕಾರ್ತಿಕ್ ಬಳಿ ಇದ್ದ ವಿಡಿಯೊವನ್ನು ಹರಿಬಿಟ್ಟವರು ಯಾರು ಎನ್ನುವ ಬಗ್ಗೆ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಕಲೆ ಹಾಕಿರುವ ಸಾಕ್ಷಿಗಳ ಆಧರಿಸಿ ನಾಲ್ವರ ಮೇಲೆ‌ ಎಸ್ಐಟಿಗೆ ಅನುಮಾನ ಮೂಡಿದ್ದು, ಕಾರ್ತಕ್‌ ಗೌಡ ಜತೆಗೆ ನವೀನ್ ಗೌಡ, ಪುಟ್ಟರಾಜ್ ಹಾಗೂ ಚೇತನ್ ವಿರುದ್ಧ ಕೇಸ್ ದಾಖಲಾಗಿದೆ. ಈಗಾಗಲೇ ಈ ನಾಲ್ವರ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ವಜಾ ಆಗಿದೆ. ಹೀಗಾಗಿ ಈ ನಾಲ್ವರು ವಿಚಾರಣೆಗೆ ಕರೆದು ಅರೆಸ್ಟ್ ಮಾಡುವ ಭಯದಲ್ಲಿದ್ದಾರೆ.

ಅಶ್ಲೀಲ ವಿಡಿಯೊ ಶೇರ್‌: ಕುದುರೆಮುಖದಲ್ಲಿ ಕೇಸ್‌ ದಾಖಲು!

ಚಿಕ್ಕಮಗಳೂರು: ಕಳಸ ತಾಲೂಕಿನ ಕಾಂಗ್ರೆಸ್‌ ಕಾರ್ಯಕರ್ತನೊಬ್ಬ ಸೋಷಿಯಲ್‌ ಮೀಡಿಯಾಗಳಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ಗೆ ಸಂಬಂಧಿಸಿದ ಅಶ್ಲೀಲ ವಿಡಿಯೊಗಳನ್ನು ಶೇರ್ ಮಾಡುತ್ತಿದ್ದಾನೆ ಎಂಬ ದೂರು ಬಂದಿದೆ. ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಫೋಟೊವನ್ನು ಅಪ್ಲೋಡ್‌ ಮಾಡಿದ ಹಿನ್ನೆಲೆಯಲ್ಲಿ ಕಳಸ ತಾಲೂಕಿನ ಸಂಸೆ ಮೂಲದ ಪ್ರಜ್ವಲ್ ಎಂಬಾತನ ಮೇಲೆ ಕಳಸ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೊ, ವಿಡಿಯೊಗಳನ್ನು ಅಪ್ಲೋಡ್ ಮಾಡುತ್ತಿದ್ದ ಆರೋಪ ಈಗ ಪ್ರಜ್ವಲ್‌ ಮೇಲಿದೆ. ಈತ ಅಶ್ಲೀಲ ವಿಡಿಯೊಗಳನ್ನು ಹಾಗೂ ಫೋಟೊಗಳನ್ನು ಟೆಲಿಗ್ರಾಂ, ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ ಪೇಜ್‌ಗಳಲ್ಲಿ ಟ್ರೋಲ್‌ ದುಶ್ಯಾಸನ ಎಂಬ ಖಾತೆ ಮೂಲಕ ಅಪ್ಲೋಡ್‌ ಮಾಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಕುದುರೆಮುಖ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಟ ಕೊಟ್ಟವನನ್ನು ಬಿಡಲ್ಲ!

ಬೆಂಗಳೂರು: ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸುಳ್ಳು ಕೇಸ್ ಹಾಕಲು ತನಗೆ ಒತ್ತಾಯಿಸಲಾಗುತ್ತಿದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆಯೊಬ್ಬರು ನೀಡಿರುವ ದೂರು ಹೊಸ ತಿರುವನ್ನು ಪಡೆದುಕೊಂಡಿದೆ. ಎಸ್‌ಐಟಿಯಿಂದ ಯಾರೂ ಆಕೆಯನ್ನು ಸಂಪರ್ಕಿಸಿಲ್ಲ ಎಂದು ಸ್ಪಷ್ಟನೆ ನೀಡಲಾಗಿದೆ. ಆದರೆ, ಸಂಪರ್ಕ ಮಾಡಿದವರ ಬಗ್ಗೆ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.

ಸಂತ್ರಸ್ತ ಮಹಿಳೆಗೆ ಎಸ್ಐಟಿ ಅಧಿಕಾರಿ ಎಂದು ಕರೆ ಮಾಡಿ ತೊಂದರೆ ಮಾಡಿರುವ ಆರೋಪ ವಿಚಾರವಾಗಿ ಎಸ್ಐಟಿ ಉನ್ನತ ಮೂಲಗಳು ಸ್ಪಷ್ಟನೆ ನೀಡಿದೆ. ಅಲ್ಲದೆ, ಎನ್‌ಸಿಡಬ್ಲ್ಯು ದೂರನ್ನು ಎಸ್‌ಐಟಿಗೆ ರವಾನಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಸ್‌ಐಟಿ, ಗುರುವಾರವಷ್ಟೇ ಈ ಮಹಿಳೆಯ ಬಗ್ಗೆ ಎಸ್‌ಐಟಿಗೆ ತಿಳಿದುಬಂದಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ!

Continue Reading

ಕೊಪ್ಪಳ

SSLC Student Missing : ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌ ಆದ ಬಾಲಕ ನಾಪತ್ತೆ!

SSLC Student : ಕೊಪ್ಪಳದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ (Missing Case) ನಾಪತ್ತೆಯಾಗಿದ್ದಾನೆ. ಪರೀಕ್ಷೆ ಬರೆದಿದ್ದ ಬಾಲಕ ಫಲಿತಾಂಶ ಬರುವ ಮುನ್ನವೇ ನಾಪತ್ತೆಯಾಗಿದ್ದು, ಪೊಲೀಸರು (SSLC Student Missing) ಆತಂಕಗೊಂಡಿದ್ದಾರೆ.

VISTARANEWS.COM


on

By

SSLC Student missing In Kopala
Koo

ಕೊಪ್ಪಳ: ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Student) ಬರೆದಿದ್ದ ಬಾಲಕನೊರ್ವ ನಾಪತ್ತೆಯಾಗಿದ್ದಾನೆ. ಎಸ್ಎಸ್ಎಲ್‌ಸಿ ಪರೀಕ್ಷೆಯ (SSLC Student Missing) ಫಲಿತಾಂಶ ಬರುವ ಮುನ್ನವೇ (Missing Case) ಕಾಣೆಯಾಗಿದ್ದಾನೆ.

ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದ ಬಾಲಕ ಜಗದೀಶ್‌ ಎಂಬಾತ ಮೇ 7 ರಂದು ಮನೆಯಿಂದ ಹೊರ ಹೋದವನು ವಾಪಸ್‌ ಬಂದಿಲ್ಲ. ರಾತ್ರಿಯಾದರೂ ಬಾರದೆ ಇದ್ದಾಗ ಪೋಷಕರು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಇನ್ನೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿರುವ ಬಾಲಕ ಫಲಿತಾಂಶಕ್ಕೂ ಮುನ್ನವೇ ನಾಪತ್ತೆಯಾಗಿದ್ದಾನೆ. ಇತ್ತ ಬಾಲಕನನ್ನು ಯಾರಾದರೂ ಅಪಹರಿಸಿರಬಹುದು ಎಂದು ಪಾಲಕರು ಶಂಕಿಸಿದ್ದಾರೆ.

ಸದ್ಯ ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಕಾಣೆಯಾಗಿರುವ ಬಗ್ಗೆ ಪೋಷಕರು ದೂರು ನೀಡಿದ್ದಾರೆ. ಪೋಷಕರು ನೀಡಿದ ದೂರಿನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದ, ತನಿಖೆಯನ್ನು ನಡೆಸುತ್ತಿದ್ದಾರೆ. ಮನೆಯಿಂದ ಹೊರಟ ಬಾಲಕ ಎಲ್ಲಿ ಹೋಗಿದ್ದಾನೆ ಎಂಬುದನ್ನು ತಿಳಿಯಲು ಪೊಲೀಸರು ಸಿಸಿಟಿವಿ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: Murder case : ಕೊಟ್ಟ ಹಣ ಕೇಳಿದ್ದಕ್ಕೆ ಗೆಳೆಯನನ್ನೇ ಕೊಂದಿದ್ದ ದ್ರೋಹಿ ಅರೆಸ್ಟ್‌

ಎಸ್‌ಎಸ್‌ಎಲ್‌ಸಿ ಫೇಲ್‌, ಸರಣಿ ಸಾವಿಗೆ ಮತ್ತೊಂದು ಸೇರ್ಪಡೆ

ಬೆಂಗಳೂರು: ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ (SSLC Result 2024) ಬಂದ ಬಳಿಕ ಫೇಲ್ (SSLC fail) ಆದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ (Student self harming) ಮಾಡಿಕೊಳ್ಳುತ್ತಿರುವ ಸುದ್ದಿಗಳು ಆತಂಕ ಮೂಡಿಸುತ್ತಿವೆ. ಫೇಲ್‌ ಆದದ್ದರಿಂದ ನೊಂದುಕೊಂಡು ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಚಿಕ್ಕಬಳ್ಳಾಪುರ (chikkaballapur news) ತಾಲ್ಲೂಕಿನ ಗಂಗರೇಕಾಲುವೆ ಗ್ರಾಮದ ಜಿ.ಎನ್ ವೈಷ್ಣವಿ (15) ಮೃತ ವಿದ್ಯಾರ್ಥಿನಿ.

ವೈಷ್ಣವಿ ಮಂಚನಬೆಲೆ ಗ್ರಾಮದ ಬಿಜಿಎಸ್ ಶಾಲೆಯಲ್ಲಿ ಎಸ್ಎಸ್ಎಲ್‌ಸಿ ಓದುತ್ತಿದ್ದಳು. ನಿನ್ನೆ ಎಸ್ಎಸ್ಎಲ್‌ಸಿ ಫಲಿತಾಂಶ ಬಂದಿತ್ತು. ಫಲಿತಾಂಶ ನೋಡಿ ತಾನು ಫೇಲ್ ಆಗಿದ್ದಕ್ಕೆ ನೊಂದುಕೊಂಡಿದ್ದಳು ಎಂದು ಗೊತ್ತಾಗಿದೆ. ನಂತರ ಮನೆಯಲ್ಲೇ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಈಗಾಗಲೇ ಎಸ್‌ಎಸ್‌ಎಲ್‌ಸಿ 1, 2, 3ರ ಹೊಸ ಪರೀಕ್ಷಾ ಮಾದರಿಯನ್ನು ಪರಿಚಯಿಸಿದೆ. ಇದರ ಕ್ರಮವಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ರಲ್ಲಿ ಅನುತೀರ್ಣರಾಗಿದ್ದರೆ ಅಥವಾ ಕಡಿಮೆ ಅಂಕ ಪಡೆದು ಜಸ್ಟ್‌ ಪಾಸ್‌ ಆಗಿದ್ದರೆ ಅಂತಹ ವಿದ್ಯಾರ್ಥಿಗಳು ಪರೀಕ್ಷೆ 2ರಲ್ಲಿ ಅಂಕವನ್ನು ಸರಿದೂಗಿಸಿಕೊಳ್ಳಬಹುದಾಗಿದೆ. ಕೇವಲ ಫೇಲ್‌ ಆದವರು, ಕಡಿಮೆ ಅಂಕ ಬಂದವರು ಮಾತ್ರವಲ್ಲ ಹೆಚ್ಚು ಅಂಕ ಗಳಿಸಲು ಯಾವುದೇ ವಿದ್ಯಾರ್ಥಿಯಾದರು ಪರೀಕ್ಷೆ 2 ಹಾಗೂ 3ರಲ್ಲಿ ಹಾಜರಾಗಬಹುದು. ಇದಕ್ಕಾಗಿ ಶಿಕ್ಷಣ ಇಲಾಖೆಯಿಂದಲೇ ಮುಂದಿನ 1 ತಿಂಗಳಲ್ಲಿ ಪರಿಹಾರ ಬೋಧನೆಯನ್ನು ಆಯೋಜಿಸಲಾಗುತ್ತದೆ. ಇದರಿಂದಾಗಿ ಪರೀಕ್ಷೆ 2-3ಕ್ಕೆ ಉತ್ತಮವಾಗಿ ಸಿದ್ಧರಾಗಲು ಸಹಾಯವಾಗುತ್ತದೆ. ಇಷ್ಟನ್ನು ಮನದಟ್ಟು ಮಾಡಿಸಿದ್ದರೂ ಕೆಲವು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕ ಮೂಡಿಸಿದೆ.

ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

SSLC Result 2024 Failed in SSLC Exam Student suicide in mandya

ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್‌ ಆದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿಖಿಲ್ (16) ನೇಣಿಗೆ ಶರಣಾದ ವಿದ್ಯಾರ್ಥಿ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿಖಿಲ್, ಫಲಿತಾಂಶ ನೋಡಿ 3 ವಿಷಯದಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಹೊಲಕ್ಕೆ ತೆರಳಿ ಮರವೊಂದಕ್ಕೆ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಪಾಸಾದರೂ ನೇಣು ಹಾಕಿಕೊಂಡು ವಿದ್ಯಾರ್ಥಿನಿ

SSLC Result 2024

ಮಂಡ್ಯ: ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ್ದಾಳೆ. ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಮೃತ ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಅಮೃತ ಶೇ.57 ಅಂಕ ಪಡೆದು ತೇರ್ಗಡೆ ಹೊಂದಿದ್ದಳು.

ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗಿಬಿಟ್ಟೆ ಎಂದು ತಿಳಿದು ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.

ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಬೆಳಗಾವಿ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತಿರ್ಣಗೊಂಡ ವಿದ್ಯಾರ್ಥಿನಿಯೋರ್ವಳು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಜರುಗಿದೆ. ಸೃಷ್ಟಿ ಕಲ್ಲಪ್ಪ ಚೌವ್ಹಾಣ್ (16) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯಾಗಿದ್ದಾಳೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Assault case in kalaburagi
ಕಲಬುರಗಿ3 mins ago

Assault Case : ಹಣಕ್ಕಾಗಿ ಕಿಡ್ನ್ಯಾಪ್‌; ಮೂವರನ್ನು ಬೆತ್ತಲೆ ಮಾಡಿ ಮರ್ಮಾಂಗಕ್ಕೆ ಕರೆಂಟ್ ಶಾಕ್ ಕೊಟ್ಟು ಟಾರ್ಚರ್‌!

Election Commission
ದೇಶ14 mins ago

Election Commission: ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆಗೆ ಅಡ್ಡಿಪಡಿಸುವ ಪ್ರಯತ್ನ; ಖರ್ಗೆ ಪತ್ರಕ್ಕೆ EC ತಿರುಗೇಟು

Prajwal Revanna Case
ಕರ್ನಾಟಕ19 mins ago

Prajwal Revanna Case: ದೇವರಾಜೇಗೌಡ ಹುಚ್ಚುನಾಯಿ, ನಕಲಿ ವಕೀಲ ಎಂದ ಶಿವರಾಮೇಗೌಡ

Hassan Pen Drive Case
ಕರ್ನಾಟಕ25 mins ago

Hassan Pen Drive Case: ಅಶ್ಲೀಲ ವಿಡಿಯೊ ಪ್ರಕರಣ; ಪೆನ್‌ಡ್ರೈವ್ ಲೀಕ್‌ ಮಾಡಿದವರಿಗೂ ಸಂಕಷ್ಟ?

SSLC Student missing In Kopala
ಕೊಪ್ಪಳ44 mins ago

SSLC Student Missing : ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌ ಆದ ಬಾಲಕ ನಾಪತ್ತೆ!

Rahul Gandhi
ದೇಶ51 mins ago

Rahul Gandhi: ನರೇಂದ್ರ ಮೋದಿ ಪ್ರಧಾನಿಯಲ್ಲ, ಮಹಾರಾಜ ಎಂದ ರಾಹುಲ್ ಗಾಂಧಿ

Murder Case in Bengaluru
ಬೆಂಗಳೂರು1 hour ago

Murder case : ಕೊಟ್ಟ ಹಣ ಕೇಳಿದ್ದಕ್ಕೆ ಗೆಳೆಯನನ್ನೇ ಕೊಂದಿದ್ದ ದ್ರೋಹಿ ಅರೆಸ್ಟ್‌

Prajwal Revanna Case
ಕರ್ನಾಟಕ1 hour ago

Prajwal Revanna Case: ಪ್ರಜ್ವಲ್ ರೇವಣ್ಣ ಹುಡುಕಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ!

Food Poisoning
ಚಿತ್ರದುರ್ಗ2 hours ago

Food Poisoning: ಮದುವೆ ಮನೆ ಊಟ ತಿಂದವರಿಗೆ ವಾಂತಿ, ಭೇದಿ; ನೂರಾರು ಮಂದಿ ಅಸ್ವಸ್ಥ

Gold Rate Today
ಕರ್ನಾಟಕ2 hours ago

Gold Rate Today: ಚಿನ್ನದ ಮಾರುಕಟ್ಟೆ ಇಳಿಮುಖ; 22 ಮತ್ತು 24 ಕ್ಯಾರಟ್‌ ಬಂಗಾರದ ದರಗಳಲ್ಲಿ ಇಳಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ22 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ24 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ1 day ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ1 day ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ2 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ2 days ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

ಟ್ರೆಂಡಿಂಗ್‌