ಅಯ್ಯೋ ಆ ವ್ಯಕ್ತಿ ಕುಳಿತಲ್ಲೇ ತೀವ್ರ ಅಸ್ವಸ್ಥನಾಗಿದ್ದಾನೆ ಚೆಕ್ ಮಾಡಿ ಎಂದ ಮಹಿಳೆ; ಆಮೇಲಷ್ಟೇ ಆಕೆಗೆ ಗೊತ್ತಾಯ್ತು ತಾನು ಮೂರ್ಖಳಾದೆನೆಂದು! - Vistara News

ವಿದೇಶ

ಅಯ್ಯೋ ಆ ವ್ಯಕ್ತಿ ಕುಳಿತಲ್ಲೇ ತೀವ್ರ ಅಸ್ವಸ್ಥನಾಗಿದ್ದಾನೆ ಚೆಕ್ ಮಾಡಿ ಎಂದ ಮಹಿಳೆ; ಆಮೇಲಷ್ಟೇ ಆಕೆಗೆ ಗೊತ್ತಾಯ್ತು ತಾನು ಮೂರ್ಖಳಾದೆನೆಂದು!

ಟಿವಿ ಮತ್ತು ಸಿನಿಮಾ ಏಜೆಂಟ್ ಆಗಿರುವ ಎಮ್ಮಾ ಒಬಾಂಕಾ ಅವರ ಈ ಟ್ವೀಟ್​ಗೆ ನೆಟ್ಟಿಗರು ವಿವಿಧ ರೀತಿಯ ಕಮೆಂಟ್ ಮಾಡಿದ್ದಾರೆ. ಕೆಲವರು ಎಮ್ಮಾ ಕಾಲೆಳೆದಿದ್ದರೆ, ಇನ್ನೂ ಕೆಲವರು ನಿಮ್ಮ ಹೃದಯವಂತಿಕೆಗೆ ನಮ್ಮದೊಂದು ನಮನ ಎಂದಿದ್ದಾರೆ.

VISTARANEWS.COM


on

Passenger concerned About A unwell man and after She realized that is Statue
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂಗ್ಲೆಂಡ್​ನ ದಕ್ಷಿಣ ಭಾಗದ ಸರ್ರೆಯಲ್ಲಿರುವ ರೈಲ್ವೆ ಪ್ಲಾಟ್​ಫಾರ್ಮ್​​ನಲ್ಲಿ ತನಗಾದ ಒಂದು ವಿಚಿತ್ರ ಅನುಭವವನ್ನು ಎಮ್ಮಾ ಒಬಾಂಕ್​ ಎಂಬ ಮಹಿಳೆ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ. ಅದು ಹಳೇ ಟ್ವೀಟ್ ಆಗಿದ್ದು, ಮತ್ತೀಗ ವೈರಲ್ ಆಗುತ್ತಿದೆ. ಅಷ್ಟಕ್ಕೂ ಆಗಿದ್ದೇನು ಎಂಬುದರ ವಿವರ ಇಲ್ಲಿದೆ ನೋಡಿ.

2018ರಲ್ಲಿ ಒಮ್ಮೆ ಎಮ್ಮಾ ಒಬಾಂಕ್ ಅವರು ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಸರ್ರೆಯಲ್ಲಿರುವ ವೋಕಿಂಗ್ ರೈಲ್ವೆ ಸ್ಟೇಶನ್​ನಲ್ಲಿ ಆ ರೈಲು ನಿಂತಿತ್ತು. ರೈಲಿನಲ್ಲಿ ಕುಳಿತಿದ್ದ ಎಮ್ಮಾ ಕಣ್ಣಿಗೆ ಅಲ್ಲಿಯೇ ಪ್ಲಾಟ್​ಫಾರ್ಮ್​​ನ ಬೆಂಚ್​ ಮೇಲೆ ಒಬ್ಬ ವ್ಯಕ್ತಿ ಕುಳಿತಿದ್ದಂತೆ ಕಂಡಿತು. ಆತ ತಟಸ್ಥವಾಗಿ ಕುಳಿತುಕೊಂಡಿದ್ದಾನೆ, ಮೈಮೇಲೆಲ್ಲ ಅಲ್ಲಲ್ಲಿ ಹಿಮ ಬಿದ್ದಂತೆ ಕಾಣುತ್ತಿತ್ತು. ಅದನ್ನ ನೋಡಿದ ಎಮ್ಮಾ ಒಬಾಂಕ್​ ಅವರು, ಕೂಡಲೇ ಅದೇ ರೈಲ್ವೆ ನಿಲ್ದಾಣದ ಸಿಬ್ಬಂದಿಯನ್ನು ಟ್ಯಾಗ್​ ಮಾಡಿ ಟ್ವೀಟ್ ಮಾಡಿದ್ದರಂತೆ. ‘ಆ ವ್ಯಕ್ತಿಯನ್ನು ನೋಡಿ, ತೀವ್ರ ಅಸ್ವಸ್ಥನಾದಂತೆ ಕಾಣಿಸುತ್ತಾನೆ. ಇದ್ದಾನೋ, ಜೀವ ಹೋಗಿದೆಯೋ ಗೊತ್ತಾಗುತ್ತಿಲ್ಲ. ಚಳಿಗೆ ಅವನ ದೇಹ ಹೆಪ್ಪುಗಟ್ಟಿದಂತೆ ಕಾಣಿಸುತ್ತಿದೆ. ಯಾರಾದರೂ ಚೆಕ್ ಮಾಡುತ್ತೀರಾ’ ಎಂದು ಬರೆದಿದ್ದಾರೆ.

ಇದನ್ನೂ ಓದಿ: ರೈಲ್ವೆ ಸ್ಟೇಶನ್​​ ಟಿವಿ ಪರದೆ ಮೇಲೆ ಪ್ರಸಾರವಾದ ಅಶ್ಲೀಲ ವಿಡಿಯೊ; ಪ್ರಯಾಣಿಕರಿಗೆ ಮುಜುಗರ, ಅದನ್ನೂ ಚಿತ್ರೀಕರಿಸಿ ವೈರಲ್ ಮಾಡಿದ ಮಂದಿ!

ಅದಕ್ಕೆ ವೋಕಿಂಗ್ ರೈಲ್ವೆ ಸ್ಟೇಶನ್​​ನ ಸಿಬ್ಬಂದಿ ತಕ್ಷಣವೇ ಉತ್ತರ ಕೊಟ್ಟಿದ್ದಾರೆ ಮತ್ತು ಆ ಉತ್ತರ ಕೇಳಿ ಎಮ್ಮಾ ಒಂದು ಕ್ಷಣ ಬೆಪ್ಪಾದರಂತೆ. ‘ಎಮ್ಮಾ ಅವರೇ, ಏನೂ ಗಾಬರಿಯಾಗಬೇಡಿ. ಅದೊಂದು ಪ್ರತಿಮೆಯಷ್ಟೇ. ಈ ಪಟ್ಟಣದಲ್ಲಿ ಇಂಥ ಸ್ಟ್ಯಾಚ್ಯೂಗಳು ಹಲವು ಇವೆ. ಹಾಗೇ, ರೈಲ್ವೆ ಸ್ಟೇಶನ್​​ನಲ್ಲೂ ಇಂಥ ವಿವಿಧ ಪ್ರತಿಮೆಗಳಿವೆ ಎಂದು ಆ ರೈಲ್ವೆ ಸ್ಟೇಶನ್​ ಸಿಬ್ಬಂದಿ ಹೇಳಿದ್ದಾರೆ. ಅಂದರೆ, ಆ ಮನುಷ್ಯನ ಪ್ರತಿಮೆಯಲ್ಲಿ ಅಷ್ಟು ಜೀವತುಂಬಿದ ಕಳೆಯಿತ್ತು. ಥೇಟ್ ಮನುಷ್ಯನಂತೆ ಕಾಣುತ್ತಿತ್ತು. ಅದನ್ನು ನೋಡಿ ನಾನು ಮೂರ್ಖಳಾಗಿದ್ದೆ ಎಂದು ಎಮ್ಮಾ ತಿಳಿಸಿದ್ದಾರೆ.

ಟಿವಿ ಮತ್ತು ಸಿನಿಮಾ ಏಜೆಂಟ್ ಆಗಿರುವ ಎಮ್ಮಾ ಒಬಾಂಕಾ ಅವರ ಈ ಟ್ವೀಟ್​ಗೆ ನೆಟ್ಟಿಗರು ವಿವಿಧ ರೀತಿಯ ಕಮೆಂಟ್ ಮಾಡಿದ್ದಾರೆ. ಕೆಲವರು ಎಮ್ಮಾ ಕಾಲೆಳೆದಿದ್ದರೆ, ಇನ್ನೂ ಕೆಲವರು ನಿಮ್ಮ ಹೃದಯವಂತಿಕೆಗೆ ನಮ್ಮದೊಂದು ನಮನ ಎಂದಿದ್ದಾರೆ. ಇಂಥ ಮುಜುಗರದ ಸನ್ನಿವೇಶ ನಡೆದಾಗ ಅದೆಷ್ಟೋ ಜನರು ಹೇಳಿಕೊಳ್ಳುವುದೇ ಇಲ್ಲ, ಆದರೆ ನೀವು ಹೇಳಿಕೊಂಡಿರುವುದೇ ಖುಷಿ ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ಕತ್ತಿಯಿಂದ ಐವರ ಮೇಲೆ ಡೆಡ್ಲಿ ಅಟ್ಯಾಕ್‌; ದಾಳಿಕೋರನ ಅರೆಸ್ಟ್‌ ವಿಡಿಯೋ ಫುಲ್‌ ವೈರಲ್‌

Viral Video: ತಲ್ರೋ ಗಾರ್ಡನ್‌ ಬಳಿ ವಾಹನವೊಂದು ಏಕಾಏಕಿ ಕಟ್ಟಡಕ್ಕೆ ಗುದ್ದಿತ್ತು. ಅದರಲ್ಲಿದ್ದ ದುಷ್ಕರ್ಮಿ ಕೆಳಗಿಳಿದು ಕೈಯಲ್ಲಿ ಕತ್ತಿ ಹಿಡಿದುಕೊಂದು ಓಡಾಡುತ್ತಿದ್ದ. ಬಳಿಕ ಇದ್ದಕ್ಕಿದ್ದಂತೆ ಸಿಕ್ಕ ಸಿಕ್ಕವರ ಮೇಲೆ ಕತ್ತಿಯಿಂದ ದಾಳಿ ನಡೆಸಲು ಆರಂಭಿಸಿದ್ದ. ಎದುರಿಗೆ ಸಿಕ್ಕಿದ್ದ 14 ವರ್ಷದ ಬಾಲಕ ಸೇರಿದಂತೆ ಒಟ್ಟು ಐವರ ಮೇಲೆ ಕತ್ತಿಯಿಂದ ಚುಚ್ಚಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲೇ ಅಸುನೀಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು

VISTARANEWS.COM


on

Viral video
Koo

ಲಂಡನ್‌: ಹಾಡಹಗಲೇ ದುಷ್ಕರ್ಮಿಯೋರ್ವ ಕತ್ತಿಯಿಂದ ದಾಳಿ(Stabbed) ನಡೆಸಿದ್ದು, ಘಟನೆಯಲ್ಲಿ 14 ವರ್ಷದ ಬಾಲಕ ದಾರುಣವಾಗಿ ಮೃತಪಟ್ಟಿದ್ದಾನೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಲಂಡನ್‌(London)ನ ಹೈನಾಲ್ಟ್‌ನಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ. ತಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಆತನನ್ನು ಹೆಡೆಮುರಿ ಕಟ್ಟಿದ್ದಾರೆ. 36 ವರ್ಷದ ಆರೋಪಿ ಏಕಾಏಕಿ ಚಾಕು ದಾಳಿ ನಡೆಸಿ ಎಸ್ಕೇಪ್‌ ಆಗೋಕೆ ಯತ್ನಿಸುತ್ತಿರುವಾಗಲೇ ಆತನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

22 ಸೆಕೆಂಡ್ಸ್‌ ವಿಡಿಯೋದಲ್ಲಿ ಕೃತ್ಯದ ಬಳಿಕ ಓಡಿ ಹೋಗಲು ಯತ್ನಿಸುತ್ತಿದ್ದ ಹಳದಿ ಬಣ್ಣದ ಜ್ಯಾಕೆಟ್‌ ತೊಟ್ಟಿದ್ದ ದುಷ್ಕರ್ಮಿ ಬಳಿ ಮಹಿಳಾ ಪೊಲೀಸ್‌ ಸಿಬ್ಬಂದಿ ಪಿಸ್ತೂಲ್‌ ಹಿಡಿದು ಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಕೆಲವು ನಿಮಿಷಗಳ ಬಳಿ ಆರು ಜನ ಪೊಲೀಸರು ಆತನನ್ನು ಹಿಡಿಯುವಲ್ಲಿ ಯಶಸ್ವಿ ಆಗಿದ್ದಾರೆ. ಕೃತ್ಯಕ್ಕೂ ಮುನ್ನ ಆತನ ವಾಹನ ಕಟ್ಟಡವೊಂದಕ್ಕೆ ಡಿಕ್ಕಿ ಹೊಡೆದು, ಆತನಿಗೆ ಸ್ವಲ್ಪ ಮಟ್ಟ ಗಾಯಗಳಾಗಿವೆ. ಹೀಗಾಗಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನೆ ವಿವರ:

ತಲ್ರೋ ಗಾರ್ಡನ್‌ ಬಳಿ ವಾಹನವೊಂದು ಏಕಾಏಕಿ ಕಟ್ಟಡಕ್ಕೆ ಗುದ್ದಿತ್ತು. ಅದರಲ್ಲಿದ್ದ ದುಷ್ಕರ್ಮಿ ಕೆಳಗಿಳಿದು ಕೈಯಲ್ಲಿ ಕತ್ತಿ ಹಿಡಿದುಕೊಂದು ಓಡಾಡುತ್ತಿದ್ದ. ಬಳಿಕ ಇದ್ದಕ್ಕಿದ್ದಂತೆ ಸಿಕ್ಕ ಸಿಕ್ಕವರ ಮೇಲೆ ಕತ್ತಿಯಿಂದ ದಾಳಿ ನಡೆಸಲು ಆರಂಭಿಸಿದ್ದ. ಎದುರಿಗೆ ಸಿಕ್ಕಿದ್ದ 14 ವರ್ಷದ ಬಾಲಕ ಸೇರಿದಂತೆ ಒಟ್ಟು ಐವರ ಮೇಲೆ ಕತ್ತಿಯಿಂದ ಚುಚ್ಚಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲೇ ಅಸುನೀಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅದನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಆರೋಪಿ ಯಾವುದಾದರೂ ಉಗ್ರ ಸಂಘಟನೆ ಜೊತೆ ನಂಟು ಹೊಂದಿದ್ದಾನೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸಿದ್ದು, ಆ ಅನುಮಾನ ಸುಳ್ಳಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Godrej Group: ಶತಮಾನದ ಇತಿಹಾಸ ಹೊಂದಿರುವ ಗೋದ್ರೇಜ್‌ ಗ್ರೂಪ್‌ ಇಬ್ಬಾಗ; ಎರಡು ಕುಟುಂಬಗಳಲ್ಲಿ ಆಡಳಿತ ವಿಭಜನೆ

ಕಿಂಗ್‌ ಚಾರ್ಲ್ಸ್‌, ರಿಷಿ ಸುನಕ್‌ ಖಂಡನೆ

ಇನ್ನು ಘಟನೆಗೆ ಬ್ರಿಟನ್‌ ರಾಜ ಚಾರ್ಲ್ಸ್‌, ಪ್ರಧಾನಿ ರಿಷಿ ಸುನಕ್‌ ಖಂಡನೆ ವ್ಯಕ್ತಪಡಿಸಿದ್ದಾರೆ. ದುರ್ಘಟನೆಯಲ್ಲಿ ಮೃತಪಟ್ಟ ಬಾಲಕ ಕುಟುಂಬಕ್ಕೆ ಸಾಂತ್ವನ ಹೇಳಿರುವ ಚಾರ್ಲ್ಸ್‌, ಮೃತ ಬಾಲಕನ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ದಿಟ್ಟತನ ತೋರಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರನ್ನು ಶ್ಲಾಘಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನು ಇದೊಂದು ಆಘಾತಕಾರಿ ಘಟನೆ ಎಂದು ಕರೆದಿರುವ ರಿಷಿ ಸುನಕ್‌, ಇಂಥಹ ಘಟನೆಗಳು ದೇಶದಲ್ಲಿ ನಡೆಯಬಾರದು. ಮೃತ ಹಾಗೂ ಗಾಯಾಳುಗಳ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಪೊಲೀಸರನ್ನೂ ನಾನು ಪ್ರಶಂಸಿಸುತ್ತೇನೆ ಎಂದರು.

Continue Reading

ರಷ್ಯಾ-ಉಕ್ರೇನ್‌ ಕದನ

Russia-Ukraine War: ಯುದ್ಧ ಭೂಮಿಯಿಂದ ಪಾರಾಗಲು 10 ಕಿ.ಮೀ ನಡೆದ 98 ವರ್ಷದ ವೃದ್ಧೆ!

Russia-Ukraine War: ಹೆಚ್ಚು ಕಾಲ ಬದುಕುಳಿಯಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಯುದ್ಧ ವಾತಾವರಣದಲ್ಲಿ ಉಕ್ರೇನ್ ನ 98 ವರ್ಷದ ಮಹಿಳೆಯೊಬ್ಬರು ಸುಮಾರು 10 ಕಿ.ಮೀ ದೂರ ನಡೆದು ಬಂದಿದ್ದು ಸುರಕ್ಷಿತ ತಾಣ ತಲುಪಿದ್ದಾಳೆ.

VISTARANEWS.COM


on

By

Russia-Ukraine War
Koo

ಬದುಕಬೇಕು ಎನ್ನುವ ಛಲ ಇದ್ದರೆ ಎಂತಹ ಕಠಿಣ ಪರಿಸ್ಥಿತಿಯಾದರೂ ಸರಿ ನಾವು ಹೋರಾಡುತ್ತೇವೆ. ಇದಕ್ಕೆ ಒಂದು ಉತ್ತಮ ನಿದರ್ಶನ 98 ವರ್ಷ ವಯಸ್ಸಿನ ಉಕ್ರೇನಿಯನ್ ವೃದ್ಧೆ (Ukrainian woman). ಲಿಡಿಯಾ ಸ್ಟೆಪನಿವ್ನಾ ಎನ್ನುವ ವೃದ್ಧ ವೃದ್ಧೆ ರಷ್ಯಾ- ಉಕ್ರೇನ್ ಯುದ್ಧದ (Russia-Ukraine War) ಪರಿಸ್ಥಿತಿಯಲ್ಲಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸುಮಾರು 10 ಕಿ.ಮೀ. ದೂರ ನಡೆದುಕೊಂಡೇ ಹೋಗಿ ಬಚಾವಾಗಿದ್ದಾರೆ.

ರಷ್ಯಾ ಆಕ್ರಮಿಸಿಕೊಂಡಿರುವ ಡೊನೆಟ್ಸ್ಕ್ ನಲ್ಲಿರುವ ( Donetsk) ಓಚೆರೆಟೈನ್ (Ocheretyne) ಅನ್ನು ತೊರೆದು ಕೀವ್​​ (Kyiv) ನಿಯಂತ್ರಿಸುವ ಪ್ರದೇಶಗಳನ್ನು ತಲುಪಲು ಲಿಡಿಯಾ ಸ್ಟೆಪನಿವ್ನಾ ಸುಮಾರು 6 ಮೈಲು ದೂರ ನಡೆದಿದ್ದಾರೆ. ಈ ಕುರಿತು ಸೋಮವಾರ ಉಕ್ರೇನ್‌ನ ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಮನಗೆದ್ದಿರುವ ಈ ವಿಡಿಯೋದಲ್ಲಿ ಲಿಡಿಯಾ ಸ್ಟೆಪನಿವ್ನಾ, ತಾನು ಆಹಾರ ಅಥವಾ ನೀರಿಲ್ಲದೆ ನಡೆದುಕೊಂಡು ಬಂದಿದ್ದೇನೆ. ಹಲವಾರು ಬಾರಿ ಬಿದ್ದಿದ್ದೇನೆ. ಆದರೆ ನೀರಿಕ್ಷೆ ಕಳೆದುಕೊಳ್ಳಲಿಲ್ಲ. ಎದ್ದು ಮನ್ನಡೆದು ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: America Shootout: ಅಮೆರಿಕದಲ್ಲಿ ಮತ್ತೆ ಶೂಟೌಟ್‌; 4 ಪೊಲೀಸರು ಬಲಿ

ಮೂರನೇ ಯುದ್ದದಿಂದಲೂ ಬದುಕಿದೆ

ಎರಡನೇ ಮಹಾಯುದ್ದದಿಂದ ನಾನು ಬದುಕುಳಿದಿದ್ದೇನೆ. ಈಗ ಮತ್ತೆ ರಷ್ಯಾ- ಉಕ್ರೇನ್ ಯುದ್ಧದಿಂದಲೂ ಬದುಕುಳಿದಿದ್ದೇನೆ ಎಂದು ಸ್ಟೆಪನಿವ್ನಾ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ನಾನಿದ್ದ ಜಾಗಕ್ಕೆ ಶೆಲ್ ದಾಳಿಯಾದಾಗ ಕೋಲುಗಳ ಸಹಾಯದಿಂದ ನೆಲದ ಮೇಲೆ ಮಲಗಿದೆ. ಬಳಿಕ ಹಾಸಿಗೆಯ ಮೇಲೆ ಕುಳಿತು ಕೋಟ್ ಹಾಕಿಕೊಂಡೆ. ತಲೆಗೆ ಸ್ಕಾರ್ಫ್ ಕಟ್ಟಿದೆ. ಕೈಯಲ್ಲಿ ಮರದ ಕೋಲು ಬಿಟ್ಟರೆ ಬೇರೇನೂ ಉಳಿದಿರಲಿಲ್ಲ. ಕಾಲುಗಳ ಮೇಲೆ ಭರವಸೆ ಇಟ್ಟುಕೊಂಡು ನಡೆದುಕೊಂಡು ಬಂದೆ ಎಂದು ಅಜ್ಜಿ ಹೇಳಿಕೊಂಡಿದ್ದಾರೆ.


ಎರಡನೇ ಮಹಾಯುದ್ಧದಂತಿಲ್ಲ

ರಷ್ಯಾ ತನ್ನ ದೇಶದ ವಿರುದ್ಧ ನಡೆಸುತ್ತಿರುವ ಯುದ್ಧವು ಎರಡನೇ ಮಹಾಯುದ್ಧದಂತಿಲ್ಲ ಎಂದು ಹೇಳಿದ ಅವರು, ಮನೆಗಳು ಸುಟ್ಟು ಕರಕಲಾಗುತ್ತಿದ್ದು, ಮರಗಳು ಉರುಳುತ್ತಿವೆ ಎಂದು ತಿಳಿಸಿದ್ದಾರೆ.

ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

ಮಹಿಳೆಯ ಕುರಿತು ಉಕ್ರೇನ್‌ನ ಆಂತರಿಕ ಸಚಿವಾಲಯವು ತನ್ನ ವೆಬ್‌ಸೈಟ್‌ನಲ್ಲಿನ ಮಾಹಿತಿ ಹಂಚಿಕೊಂಡಿದೆ. ಮಹಿಳೆಯನ್ನು ಉಕ್ರೇನ್‌ನ ಮಿಲಿಟರಿ ಪತ್ತೆ ಹಚ್ಚಿದ್ದಾರೆ. ಬಳಿಕ ಅವರು ಪೊಲೀಸರಿಗೆ ಒಪ್ಪಿಸಿದರು. ಅವರು ಆಕೆಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದಾರೆ. ಮಹಿಳೆ ಯಾವಾಗ ಪತ್ತೆಯಾಗಿದ್ದಾಳೆ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಕಾನೂನು ಜಾರಿ ಅಧಿಕಾರಿಗಳು ಮಹಿಳೆಯ ಸಂಬಂಧಿಕರನ್ನು ಹುಡುಕುತ್ತಿದ್ದಾರೆ ಎಂದು ಸಚಿವಾಲಯ ಹೇಳಿದೆ.

ರಷ್ಯಾ- ಉಕ್ರೇನ್ ಯುದ್ಧವು ಮೂರನೇ ವರ್ಷವೂ ಮುಂದುವರಿದಿದೆ. ಈಗಾಗಲೇ ಸಾವಿರಾರು ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ. ಉಕ್ರೇನಿಯನ್ ನಗರಗಳು ಮತ್ತು ಹಳ್ಳಿಗಳು ಜನವಿಲ್ಲದೆ ಸ್ಮಶಾನದಂತಾಗಿದೆ. ಲಕ್ಷಾಂತರ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

Continue Reading

ವಿದೇಶ

Jai Shri Ram Slogan: ಪ್ಯಾಲೆಸ್ತೇನ್ ವಿರುದ್ಧ ಜೈಶ್ರೀರಾಮ್ ಘೋಷಣೆ ಕೂಗಿದ ಇಸ್ರೇಲ್ ಬೆಂಬಲಿಗರು!

Jai Shri Ram Slogan: ಅಮೆರಿಕದ ವಿವಿಧ ಕ್ಯಾಂಪಸ್‌ಗಳಲ್ಲಿ ನಡೆಯುತ್ತಿರುವ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಗಳು ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿವೆ. ಈ ಮಧ್ಯೆ ಇದಕ್ಕೆ ವಿರುದ್ಧವಾಗಿ ಲಾಸ್ ಏಂಜಲೀಸ್‌ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಇಸ್ರೇಲ್ ಬೆಂಬಲಿಗರು ಮೆರವಣಿಗೆ ನಡೆಸಿದ್ದಾರೆ. ಈ ಮೆರವಣಿಗೆಯಲ್ಲಿ ಇಸ್ರೇಲ್ ಬೆಂಬಲಿಗರು ಜೈ ಶ್ರೀ ರಾಮ್ ಎಂಬ ಘೋಷಣೆ ಕೂಗಿದ್ದಾರೆ. ಭಗವಾನ್ ರಾಮನಿಗೆ ಸಂಬಂಧಿಸಿದ ಈ ಘೋಷಣೆಯನ್ನು ಭಾರತ-ವಿರೋಧಿಗಳಿಗೆ ಪ್ರತಿಕ್ರಿಯೆಯಾಗಿ ಅಮೆರಿದಲ್ಲಿ ಬಳಸಲ್ಪಟ್ಟಿದ್ದು ವಿಶೇಷ.

VISTARANEWS.COM


on

Jai Shri Ram Slogan
Koo

ವಾಷಿಂಗ್ಟನ್‌: ಅಮೆರಿಕದ ವಿವಿಧ ಕ್ಯಾಂಪಸ್‌ಗಳಲ್ಲಿ ನಡೆಯುತ್ತಿರುವ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಗಳು ವ್ಯಾಪಕ ಚರ್ಚೆಯನ್ನೇ ಹುಟ್ಟು ಹಾಕಿವೆ. ಈ ಮಧ್ಯೆ ಇದಕ್ಕೆ ವಿರುದ್ಧವಾಗಿ ಲಾಸ್ ಏಂಜಲೀಸ್‌ನ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ (UCLA) ಇಸ್ರೇಲ್ ಬೆಂಬಲಿಗರು ಮೆರವಣಿಗೆ ನಡೆಸಿದ್ದಾರೆ. ಈ ಮೆರವಣಿಗೆಯಲ್ಲಿ ಇಸ್ರೇಲ್ ಬೆಂಬಲಿಗರು ಜೈ ಶ್ರೀ ರಾಮ್ ಎಂಬ ಘೋಷಣೆ (Jai Shri Ram Slogan) ಕೂಗಿದ್ದಾರೆ.

ವಾರಾಂತ್ಯದಲ್ಲಿ ಯುಸಿಎಲ್ಎಯಲ್ಲಿ ಪ್ಯಾಲೆಸ್ತೀನ್‌ ಪರ ಮತ್ತು ಇಸ್ರೇಲ್ ಪರ ಪ್ರತಿಭಟನಾಕಾರರ ನಡುವಿನ ಘರ್ಷಣೆಗಳು ತೀವ್ರಗೊಂಡಿದ್ದವು. ಬ್ಲೂಮಿಂಗ್ಟನ್‌ನ ಇಂಡಿಯಾನಾ ವಿಶ್ವವಿದ್ಯಾಲಯ, ಅರಿಜೋನಾ ಸ್ಟೇಟ್ ಯೂನಿವರ್ಸಿಟಿ ಮತ್ತು ಸೇಂಟ್ ಲೂಯಿಸ್‌ನ ವಾಷಿಂಗ್ಟನ್ ವಿಶ್ವವಿದ್ಯಾಲಯದಂತಹ ಇತರ ಕ್ಯಾಂಪಸ್‌ಗಳಲ್ಲಿಯೂ ಇದೇ ರೀತಿಯ ದೃಶ್ಯಗಳನ್ನು ಕಂಡು ಬಂದಿವೆ. ಇನ್ನು ಯುಸಿಎಲ್ಎಯಲ್ಲಿ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿತ್ತು.

ಈ ಗೊಂದಲದ ಮಧ್ಯೆ ಅಮೆರಿಕದ ರಾಷ್ಟ್ರೀಯವಾದಿಯೊಬ್ಬರು “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗುವ ಮೂಲಕ ಗಮನ ಸೆಳೆದಿದ್ದಾರೆ. ಸಾಮಾನ್ಯವಾಗಿ ಈ ಘೋಷಣೆಯನ್ನು ಭಾರತದಲ್ಲಿ ಹಿಂದುಗಳಿಗೆ ಸಂಬಂಧಿಸಿದ ಧಾರ್ಮಿಕ ಮೆರವಣಿಗೆ ಸಂದರ್ಭದಲ್ಲಿ ಕೂಗಲಾಗುತ್ತದೆ. ಭಗವಾನ್ ರಾಮನಿಗೆ ಸಂಬಂಧಿಸಿದ ಈ ಘೋಷಣೆಯನ್ನು ಭಾರತ-ವಿರೋಧಿಗಳಿಗೆ ಪ್ರತಿಕ್ರಿಯೆಯಾಗಿ ಅಮೆರಿದಲ್ಲಿ ಬಳಸಲ್ಪಟ್ಟಿದ್ದು ವಿಶೇಷ.

ಯುಸಿಎಲ್ಎಯ ಕಾರ್ಯತಂತ್ರದ ಸಂವಹನಗಳ ಉಪಕುಲಪತಿ ಮೇರಿ ಒಸಾಕೊ ಈ ಬಗ್ಗೆ ಮಾತನಾಡಿ, ʼʼಎರಡೂ ಕಡೆಯ ಪ್ರತಿಭಟನಾಕಾರರು ವಾಗ್ವಾದಗಳಲ್ಲಿ ತೊಡಗಿದ್ದರು. ಜತೆಗೆ ಘರ್ಷಣೆಯೂ ನಡೆಯಿತು. ಎರಡೂ ಕಡೆಯವರ ಘೋಷಣೆಗಳು ಮುಗಿಲು ಮುಟ್ಟಿದ್ದವುʼʼ ಎಂದು ವಿವರಿಸಿದ್ದಾರೆ. “ಯುಸಿಎಲ್ಎಯಲ್ಲಿ ಇದುವರೆಗೆ ಅನೇಕ ಶಾಂತಿಯುತ ಪ್ರತಿಭಟನೆ ನಡೆದಿದ್ದವು. ಆದರೆ ಇದೀಗ ಇಲ್ಲಿ ಭುಗಿಲೆದ್ದ ಹಿಂಸಾಚಾರ ತೀವ್ರ ನೋವುಂಟು ಮಾಡಿದೆʼʼ ಎಂದು ಹೇಳಿದ್ದಾರೆ.

ತೀವ್ರಗೊಂಡ ಪ್ರತಿಭಟನೆ

ಕಳೆದ ವಾರ ಅಮೆರಿಕದ ಕ್ಯಾಂಪಸ್‌ಗಳಲ್ಲಿ ವ್ಯಾಪಕವಾಗಿ ಪ್ಯಾಲೆಸ್ತೀನ್‌ ಪರ ಪ್ರತಿಭಟನೆಗಳು ನಡೆದವು. ಈ ಸಂಬಂಧ ಅನೇಕರನ್ನು ಬಂಧಿಸಲಾಗಿದೆ. ನ್ಯೂಯಾರ್ಕ್‌ನ ಕೊಲಂಬಿಯಾ ವಿಶ್ವವಿದ್ಯಾಲಯವೊಂದರಿಂದಲೇ 100ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಯೇಲ್ ವಿಶ್ವವಿದ್ಯಾಲದಿಂದಲೂ ಅನೇಕರನ್ನು ವಶಕ್ಕೆ ಪಡೆಯಲಾಗಿದೆ. ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಿಂದಲೂ ಪ್ರತಿಭಟನಾಕಾರರನ್ನು ಸೆರೆ ಹಿಡಿಯಲಾಗಿದೆ. ಆಸ್ಟಿನ್‌ನಲ್ಲಿರುವ ಟೆಕ್ಸಾಸ್ ವಿಶ್ವವಿದ್ಯಾಲಯದಲ್ಲಿನ ಪ್ರತಿಭನಾಕಾರರನ್ನು ಬಲವಂತವಾಗಿ ಚದುರಿಸಲು ಪೊಲೀಸರು ಮಧ್ಯ ಪ್ರವೇಶಿಸಬೇಕಾಯಿತು.

ಪ್ಯಾಲೆಸ್ತೀನ್‌ ವಿರುದ್ಧ ನಡೆಸುತ್ತಿರುವ ಯುದ್ಧವನ್ನು ಇಸ್ರೇಲ್ ನಿಲ್ಲಿಸಬೇಕು. ಇಸ್ರೇಲ್‌ಗೆ ಅಮೆರಿಕದ ಮಿಲಿಟರಿ ಸಹಾಯವನ್ನು ಕೊನೆಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಈ ರೀತಿಯ ಪ್ರತಿಭಟನೆಗಳು ಶಿಕ್ಷಣಕ್ಕೆ ಅಡ್ಡಿಪಡಿಸುತ್ತವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಹೆಚ್ಚುತ್ತಿರುವ ಪ್ರತಿಭಟನೆಗಳ ಮಧ್ಯೆ ಅಧ್ಯಕ್ಷ ಜೋ ಬೈಡನ್ ಈ ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Prakash Raj: ಕಾಶ್ಮೀರವನ್ನು ಪ್ಯಾಲೆಸ್ತೀನ್‌ಗೆ ಹೋಲಿಸಿದ ಪ್ರಕಾಶ್‌ ರಾಜ್;‌ ಕೆಂಡವಾದ ಜನ

“ಜೋ ಬೈಡನ್ ಶಾಂತಿಯುತ ಪ್ರತಿಭಟನೆಯನ್ನು ಗೌರವಿಸುತ್ತಾರೆ. ಜನರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮತ್ತು ತಮ್ಮ ದೃಷ್ಟಿಕೋನಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು ಎನ್ನುವುದು ಅವರ ಅಭಿಪ್ರಾಯ. ಆದರೆ ಅದು ಶಾಂತಿಯುತವಾಗಿರಬೇಕು. ಜತೆಗೆ ಯಹೂದಿ ವಿರೋಧಿ ಮತ್ತು ದ್ವೇಷ ಭಾಷಣವನ್ನು ಅವರು ಖಂಡಿಸುತ್ತಾರೆʼʼ ಎಂದು ಶ್ವೇತಭವನದ ರಾಷ್ಟ್ರೀಯ ಭದ್ರತಾ ವಕ್ತಾರ ಜಾನ್ ಕಿರ್ಬಿ ತಿಳಿಸಿದ್ದಾರೆ.

Continue Reading

ವಿದೇಶ

America Shootout: ಅಮೆರಿಕದಲ್ಲಿ ಮತ್ತೆ ಶೂಟೌಟ್‌; 4 ಪೊಲೀಸರು ಬಲಿ

America Shootout: ಅಮೆರಿಕದಲ್ಲಿ ಮತ್ತೆ ಶೂಟೌಟ್‌ ಆಗಿದ್ದು, ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ ನಾಲ್ವರು ಪೊಲೀಸ್‌ ಅಧಿಕಾರಿಗಳು ಬಲಿಯಾಗಿದ್ದು, ಮತ್ತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ

VISTARANEWS.COM


on

America Shootout
Koo

ಶಾರ್ಲೆಟ್‌: ಅಮೆರಿಕದಲ್ಲಿ ಮತ್ತೆ ಶೂಟೌಟ್‌(America Shootout) ಆಗಿದ್ದು, ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಗೆ ನಾಲ್ವರು ಪೊಲೀಸ್‌ ಅಧಿಕಾರಿಗಳು(Police officers) ಬಲಿಯಾಗಿದ್ದು, ಮತ್ತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ ಕೆರೋಲಿನಾ(North Carolina)ದ ಮನೆಯೊಂದಕ್ಕೆ ಬಂದೂಕುಧಾರಿ(ಯೊಬ್ಬ ನುಗ್ಗಿದ್ದ. ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆತನನ್ನು ಹಿಡಿಯ ಮುಂದಾದರು. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು, ನಾಲ್ವರು ಪೊಲೀಸರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆ ಬಗ್ಗೆ ಶಾರ್ಲೆಟ್‌-ಮೆಕ್ಲೆನ್‌ಬರ್ಗ್‌ ಪೊಲೀಸ್‌ ಅಧಿಕಾರಿ ಜಾನಿ ಜೆನ್ನಿಂಗ್ಸ್‌ ಮಾಹಿತಿ ನೀಡಿದ್ದು, ಅಮಾಯಕ ಜನರ ರಕ್ಷಣೆಗೆಂದು ಕೆಲವು ಪೊಲೀಸರು ಸ್ಥಳಕ್ಕೆ ತೆರಳಿದ್ದರು. ಈ ವೇಳೆ ದುಷ್ಕರ್ಮಿ ಇದ್ದಕ್ಕಿದ್ದಂತೆ ಗುಂಡು ಹಾರಿಸಲು ಶುರು ಮಾಡಿದ್ದಾನೆ. ದುರಾದೃಷ್ಟವಶಾತ್‌ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪ್ರಾಣದ ಹಂಗು ತೊರೆದು ಹೋರಾಡಿದ ನಮ್ಮ ನಾಲ್ವರು ಧೀರ ಪೊಲೀಸ್‌ ಅಧಿಕಾರಿಗಳನ್ನು ಕಳೆದುಕೊಂಡಿದ್ದೇವೆ. ಸತತ ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ಮನೆಯೊಳಗೆ ಪೊಲೀಸರಿಗೆ ನುಗ್ಗಲು ಸಾಧ್ಯವಾಗಿತ್ತು. ಮನೆಯ ಹೊರಗೆ ನಿಲ್ಲಿಸಿದ್ದ ಶಸ್ತ್ರ ಸಜ್ಜಿತ ಪೊಲೀಸ್‌ ವಾಹನಗಳು, ಮರ ಗಿಡಗಳು ಸಂಪೂರ್ಣವಾಗಿ ಗುಂಡಿನ ದಾಳಿಗೆ ಧ್ವಂಸಗೊಂಡಿದ್ದವು. ಕೊನೆಗೂ ದುಷ್ಕರ್ಮಿಯನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಯಶಸ್ವಿಯಾದರು ಎಂದು ತಿಳಿಸಿದರು.

ಮನೆಯ ಒಳಗೆ ಪ್ರವೇಶಿಸಿದಾಗ ಮತ್ತೋರ್ವ ದುಷ್ಕರ್ಮಿ ಹಾಗೂ ಮಹಿಳೆ ಮತ್ತು 17 ವರ್ಷದ ಬಾಲಕ ಅಲ್ಲಿದ್ದರು. ದುಷ್ಕರ್ಮಿಯನ್ನು ಪೊಲೀಸರು ಅರೆಸ್ಟ್‌ ಮಾಡಿದ್ದು, ಅವರ ಹೆಸರು ಬಹಿರಂಗಪಡಿಸಿಲ್ಲ. ಇನ್ನು ಮಹಿಳೆ ಮತ್ತು ಬಾಲಕನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಹುತಾತ್ಮರಾದ ಅಧಿಕಾರಿಗಳ ಕುಟುಂಬಸ್ಥರನ್ನು ಭೇಟಿಯಾಗಿರುವ ಅಲ್ಲಿನ ಗವರ್ನರ್‌ ಸಾಂತ್ವನ ಹೇಳಿದ್ದಾರೆ. ಇನ್ನು ಗಾಯಗೊಂಡಿರುವ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈ ದುರ್ಘಟನೆಗೆ ಕಾರಣ ಏನು? ದುಷ್ಕರ್ಮಿ ಏಕೆ ಅಲ್ಲಿದ್ದ? ಮಹಿಳೆ ಮತ್ತು ಬಾಲಕ ಏಕೆ ಅಲ್ಲಿದ್ದರು ಹೀಗೆ ಅನೇಕ ಪ್ರಶ್ನೆಗಳಿಗೆ ತನಿಖೆಯಲ್ಲಿ ಉತ್ತರ ಸಿಗಲಿದೆ ಎಂದು ಜೆನ್ನಿಂಗ್‌ ಹೇಳಿದಾರೆ.

ಇದನ್ನೂ ಓದಿ:Hassan Pen Drive Case: ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಅಸೆಂಬ್ಲಿಗೆ ಬರುವಂತೆ ಎಚ್‌ಡಿಕೆಗೆ ಡಿಕೆಶಿ ಸವಾಲು

ಅಮೆರಿಕದಲ್ಲಿ ಕಳೆದ ವರ್ಷವೂ ಒಂದೇ ದಿನ ಮೂರು ಸ್ಥಳಗಳಲ್ಲಿ ಶೂಟೌಟ್‌ ನಡೆದಿತ್ತು ಘಟನೆಯಲ್ಲಿ ಒಟ್ಟು 9 ಜನರು ಮೃತಪಟ್ಟಿದ್ದರು. ಫಿಲಡೆಲ್ಫಿಯಾದಲ್ಲಿ ಮೊದಲು ಇಬ್ಬರ ನಡುವೆ ಗಲಾಟೆ-ಜಗಳ ಶುರುವಾಗಿತ್ತು. ಅವರು ಕೆಲವೇ ಹೊತ್ತಲ್ಲಿ ಪರಸ್ಪರ ಗುಂಡು ಹಾರಿಸಿಕೊಳ್ಳಲು ಶುರು ಮಾಡಿದ್ದರು. ಈ ಹೊಡೆದಾಟದಲ್ಲಿ ಅಲ್ಲಿಯೇ ಇದ್ದ ಬಾರ್‌ & ರೆಸ್ಟೋರೆಂಟ್‌ ಮೇಲೆ ಗುಂಡು ಹಾರಿಸಿದ್ದರಿಂದ ಮೂವರು ಮೃತಪಟ್ಟಿದ್ದರು. 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅಮೆರಿಕಾದಲ್ಲಿ ಇತ್ತೀಚೆಗೆ ಪದೇಪದೆ ಗುಂಡಿನ ದಾಳಿಯಾಗುತ್ತಿದೆ. ಇದಕ್ಕೂ ಮುನ್ನ ಟೆಕ್ಸಾಸ್‌ನ ಶಾಲೆಯೊಂದರಲ್ಲಿ ನಡೆದ ಶೂಟೌಟ್‌ನಲ್ಲಿ 19 ವಿದ್ಯಾರ್ಥಿಗಳು ಮತ್ತು ಮೂವರು ಶಿಕ್ಷಕಿಯರು ಮೃತಪಟ್ಟಿದ್ದರು. ಅದಾದ ಮೇಲೆ ಓಕ್ಲಹಾಮಾದ ಆಸ್ಪತ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸರ್ಜನ್‌ ಸೇರಿ ಐವರ ಸಾವಾಗಿತ್ತು. ಅಷ್ಟಕ್ಕೇ ನಿಲ್ಲದೆ, ಮಿಲ್ವಾಕಿಯ ದಕ್ಷಿಣದಲ್ಲಿ ರೇಸಿನ್‌ ಪ್ರದೇಶದ ಸ್ಮಶಾನದಲ್ಲಿ ಮತ್ತು ಮಧ್ಯಪಶ್ಚಿಮ ಭಾಗದಲ್ಲಿರುವ ಅಯೋವಾದಲ್ಲಿನ ಕಾರ್ನರ್‌ ಸ್ಟೋನ್‌ ಚರ್ಚ್‌ನಲ್ಲಿ ಕೂಡ ಶೂಟೌಟ್‌ ಆಗಿತ್ತು.

Continue Reading
Advertisement
hassan pen drive case hd revanna prajwal revanna
ಕ್ರೈಂ5 mins ago

Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೊಟೀಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

Bhavyashree Poojary exit Neenade Naa Serial
ಕಿರುತೆರೆ8 mins ago

Bhavyashree Poojary: ರಮೇಶ್‌ ಅರವಿಂದ್‌ ನಿರ್ಮಾಣದ ಧಾರಾವಾಹಿಗೆ ಗುಡ್‌ಬೈ ಹೇಳಿದ ಭವ್ಯಶ್ರೀ ಪೂಜಾರಿ! ಕಾರಣವೇನು?

Heat Wave
ದೇಶ32 mins ago

Heat Wave: ಬಿಸಿಲಿನ ಬೇಗೆಗೆ ಹೈರಾಣಾದ ದೇಶ; ಹಲವು ಭಾಗಗಳಲ್ಲಿ ಏಪ್ರಿಲ್‌ನಲ್ಲಿ ಗರಿಷ್ಠ ತಾಪಮಾನ ದಾಖಲು

SS Rajamouli Announces Baahubali Crown of Blood Animated Series
ಟಾಲಿವುಡ್34 mins ago

SS Rajamouli: ʻಬಾಹುಬಲಿ: ಕ್ರೌನ್ ಆಫ್ ಬ್ಲಡ್ʼ ಸಿರೀಸ್‌ ಅನೌನ್ಸ್‌ ಮಾಡಿದ ರಾಜಮೌಳಿ!

Viral video
ವೈರಲ್ ನ್ಯೂಸ್42 mins ago

Viral Video: ಕತ್ತಿಯಿಂದ ಐವರ ಮೇಲೆ ಡೆಡ್ಲಿ ಅಟ್ಯಾಕ್‌; ದಾಳಿಕೋರನ ಅರೆಸ್ಟ್‌ ವಿಡಿಯೋ ಫುಲ್‌ ವೈರಲ್‌

lok sabha election 2024 voting
ಪ್ರಮುಖ ಸುದ್ದಿ56 mins ago

Lok Sabha Election 2024: ಎರಡು ಹಂತದ ಚುನಾವಣೆ ವೇಳೆ ಶೇ.84ರಷ್ಟು ಕ್ಷೇತ್ರಗಳಲ್ಲಿ ಮತದಾನ ಕುಸಿತ; ಎಫೆಕ್ಟ್ ಏನು?

Aamir Khan on collaborating with SRK, Salman Khan
ಸಿನಿಮಾ1 hour ago

Aamir Khan: ಬಿಗ್ ಸ್ಕ್ರೀನ್ ಮೇಲೆ ಮೂವರು ಖಾನ್​ಗಳು ಕಾಣೋದು ಕನ್‌ಫರ್ಮ್‌! ಸಿನಿಮಾ ಯಾವಾಗ ಶುರು?

Godrej Group
ದೇಶ2 hours ago

Godrej Group: ಶತಮಾನದ ಇತಿಹಾಸ ಹೊಂದಿರುವ ಗೋದ್ರೇಜ್‌ ಗ್ರೂಪ್‌ ಇಬ್ಬಾಗ; ಎರಡು ಕುಟುಂಬಗಳಲ್ಲಿ ಆಡಳಿತ ವಿಭಜನೆ

assault case finger cut basavanagudi
ಕ್ರೈಂ2 hours ago

Assault Case: ನನ್ನ ಪ್ರೇಯಸಿಗೆ ಮೆಸೇಜ್ ಮಾಡ್ತೀಯಾ ಎಂದು ಬೆರಳು ಕಟ್!

rajamarga column t20 world cup team
ಅಂಕಣ2 hours ago

ರಾಜಮಾರ್ಗ ಅಂಕಣ: ಟಿ20 ವಿಶ್ವಕಪ್- ಆಯ್ಕೆ ಮಂಡಳಿ ನಿರ್ಧಾರ ಸರಿ ಇದೆಯೇ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌