Amritpal Singh rounds Delhi wearing sunglasses and a denim jacket!Amritpal Singh : ಸನ್​ಗ್ಲಾಸ್​, ಡೆನ್ಹಿಮ್​ ಜಾಕೆಟ್​ ಹಾಕಿಕೊಂಡು ಅಮೃತ್​ಪಾಲ್​ ಸಿಂಗ್ ಡೆಲ್ಲಿ ರೌಂಡ್ಸ್​! - Vistara News

ದೇಶ

Amritpal Singh : ಸನ್​ಗ್ಲಾಸ್​, ಡೆನ್ಹಿಮ್​ ಜಾಕೆಟ್​ ಹಾಕಿಕೊಂಡು ಅಮೃತ್​ಪಾಲ್​ ಸಿಂಗ್ ಡೆಲ್ಲಿ ರೌಂಡ್ಸ್​!

ಅಮೃತ್​ಪಾಲ್​ ಸಿಂಗ್​ (Amritpal Singh) ಪೊಲೀಸರು ಪಂಜಾಬ್​ನಲ್ಲಿ ಹುಡುಕುತ್ತಿರುವ ನಡುವೆಯೇ ಡೆಲ್ಲಿಯಲ್ಲಿ ಆರಾಮವಾಗಿ ಓಡಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Amritpal Singh rounds Delhi wearing sunglasses and a denim jacket!
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಖಲಿಸ್ತಾನಿ ನಾಯಕ ಅಮೃತ್​ಪಾಲ್​ ಸಿಂಗ್ (Amritpal Singh) ಬಂಧನಕ್ಕಾಗಿ ಪಂಜಾಬ್​ ಪೊಲೀಸರು ಬೆಟ್ಟ, ಬಿಲಗಳಲ್ಲಿ ಹುಡುಕುತ್ತಿದ್ದರೆ, ಆತ ನವ ದೆಹಲಿಯ ರಸ್ತೆಗಳಲ್ಲಿ ಸನ್​ಗ್ಲಾಸ್​, ಡೆನ್ಹಿಮ್​ ಜಾಕೆಟ್​ ಹಾಕಿಕೊಂಡು ಭರ್ಜರಿಯಾಗಿ ಓಡಾಟ ನಡೆಸುತ್ತಿದ್ದಾನೆ. ಒಂದೇ ಒಂದು ವ್ಯತ್ಯಾಸ ಅಂದರೆ ತಲೆಯಲ್ಲಿ ಟರ್ಬನ್​ ಇಲ್ಲ. ಯಾರಿಗೂ ಗುರುತು ಸಿಗುವುದಿಲ್ಲ ಎಂಬ ವಿಶ್ವಾಸದಲ್ಲಿ ಎದೆಯುಬ್ಬಿಸಿ ನಡೆಯುತ್ತಿದ್ದಾನೆ ಪ್ರತ್ಯೇಕತಾವಾದಿ ನಾಯಕ. ಜತೆಗೆ ಸಹಚರ ಪಾಪಲ್​ಪ್ರೀತ್​ ಸಿಂಗ್​ ಕೂಡ ಇದ್ದಾನೆ. ಸಿಸಿ ಟಿವಿ ಕ್ಯಾಮೆರಾವೊಂದರಲ್ಲಿ ಆತ ಬಿಂದಾಸ್​ ಆಗಿ ಬೀದಿ ಸುತ್ತುತ್ತಿರುವ ವಿಡಿಯೊ ಸೆರೆಯಾಗಿದೆ.

ಮಾರ್ಚ್​ 18ರಂದು ಅಮೃತ್​ಪಾಲ್​ ಸಿಂಗ್ ಬಂಧನಕ್ಕೆ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಿತ್ತು. 10 ದಿನಗಳಾದರೂ ಆತನ ಪತ್ತೆಯಿಲ್ಲ, ಸುಳಿವಿಲ್ಲ. ನೇಪಾಳದ ಮೂಲಕ ವಿದೇಶಕ್ಕೆ ಹಾರಿದ್ದಾನೆ, ಬಿಯರ್​ ಕ್ಯಾನ್​ ಹಿಡಿದುಕೊಂಡು ಆರಾಮಕ್ಕೆ ಇದ್ದಾನೆ ಎಂದೆಲ್ಲ ಹೇಳಲಾಗುತ್ತಿದ್ದರೂ ಪೊಲೀಸರಿಗೆ ಆತನ ಇರುವಿಕೆಯ ಬಗ್ಗೆ ಕಿಂಚಿತ್ತೂ ಮಾಹಿತಿ ಸಿಗುತ್ತಿಲ್ಲ. ಆದರೆ, ಪೊಲೀಸರು ಅಮೃತ್​ಪಾಲ್​ನನ್ನು ಬೆನ್ನಟ್ಟಿದ ಮೂರು ದಿನಗಳ ಬಳಿಕ ಆತ ದೆಹಲಿಯಲ್ಲಿ ಇದ್ದಿದ್ದು ವಿಡಿಯೊ ಫೂಟೇಜ್​ ಮೂಲಕ ಗೊತ್ತಾಗಿದೆ.

ಅಮೃತ್​ಪಾಲ್​ ಡೆಲ್ಲಿಯಲ್ಲೇ ಬಚ್ಚಿಕೊಂಡು ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದ್ದಾನೆ ಎಂಬ ಗುಮಾನಿಯೂ ಇದೀಗ ಶುರುವಾಗಿದೆ. ಪೊಲೀಸರು ಪಂಜಾಬ್​ನಲ್ಲಿ ಅಮೃತ್​ಪಾಲ್​ಗಾಗಿ ಅಟ್ಟಳಿಗೆ, ಮಂಚದಡಿಯಲ್ಲೆಲ್ಲ ಹುಡುಕುತ್ತಿರುವಾಗ ಆತ ನನ್ನ ಸಂಪರ್ಕಗಳನ್ನು ಬಳಸಿಕೊಂಡು ಹರಿಯಾಣದ ಕುರುಕ್ಷೇತ್ರದ ಮೂಲಕ ಡೆಲ್ಲಿ ತಲುಪಿರಬಹುದು ಎಂದು ಹೇಳಲಾಗುತ್ತಿದೆ. ಬಂದವನೇ ಮೊದಲು ತನ್ನ ಪ್ರಮುಖ ಗುರುತಾಗಿರುವ ಟರ್ಬನ್​ ಕಿತ್ತು ಮೂಲೆಗಿಟ್ಟು ಚಂದದ ತಂಪುಕನ್ನಡಕ ಹಾಕಿಕೊಂಡು ಓಡಾಡುತ್ತಿದ್ದಾನೆ. ಡೆನ್ಹಿಮ್​ ಜಾಕೆಟ್​ ಹಾಕಿಕೊಂಡ ಬಳಿಕವಂತೂ ಯಾರೆಂದು ಗುರ್ತು ಹಿಡಿಯಲೂ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.

ಗಡಿಯಲ್ಲಿ ಕಣ್ಗಾವಲು

ಅಮೃತ್​ಪಾಲ್​ ಸಿಂಗ್​ ಇನ್ನೂ ಡೆಲ್ಲಿಯಲ್ಲೇ ಇದ್ದಾನೆ ಎಂಬುದು ಪೊಲೀಸರ ಅನುಮಾನ. ಅಲ್ಲದೆ, ನಕಲಿ ಪಾಸ್​ಪೋರ್ಟ್​ ಬಳಸಿಕೊಂಡು ನೇಪಾಳಕ್ಕೆ ಪರಾರಿಯಾಗುವ ಸಾಧ್ಯತೆಗಳೂ ಹೆಚ್ಚು ಎನ್ನಲಾಗುತ್ತಿದೆ. ಹೀಗಾಗಿ ಅಲ್ಲಿನ ಗಡಿಗಳಲ್ಲಿ ಭಾರತದ ಪೊಲೀಸರು ಕಣ್ಗಾವಲು ಇಟ್ಟಿದ್ದಾರೆ.

ಸೋಮವಾರ ಅಮೃತ್​ಪಾಲ್​ ಸಿಂಗ್ ಬಿಯರ್​ ಟಿನ್​ ಹಿಡಿದುಕೊಂಡು ಆರಾಮವಾಗಿ ಕುಳಿತಿರುವ ಫೋಟೋ ಒಂದು ಸೋಶಿಯಲ್​ ಮೀಡಿಯಾಗಳಲ್ಲಿ ಹರಿದಾಡಿತ್ತು. ಪೊಲೀಸರ ಪ್ರಕಾರ ಪಂಜಾಬ್​ನಿಂದ ಓಡಿ ಹೋಗಿರುವ ಆತ ತನ್ನ ಪರಿಚಿತರ ಮೂಲಕ ಆರಾಮ ಜೀವನ ನಡೆಸುತ್ತಿದ್ದಾನೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Vis: ಕೇರಳದ ಯುವಕನನ್ನು ಮದುವೆಯಾದ ಮಂಗಳೂರಿನ ಹಿಂದೂ ಯುವತಿ; ಹಿಂದೂ ಸಂಘಟನೆಗಳ ಹೋರಾಟ ನಿಷ್ಫಲ

Love Jihad: ಕೇರಳದ ಕುಖ್ಯಾತ ಕ್ರಿಮಿನಲ್ ವಿರುದ್ಧ ಕೇಳಿಬಂದಿದ್ದ ಲವ್ ಜಿಹಾದ್ ಆರೋಪ ಕೇಸ್‌ಗೆ ಮತ್ತೊಂದು ಟ್ವಿಸ್ಟ್ ದೊರೆತಿದೆ. ತಂದೆ- ತಾಯಿ ಎಷ್ಟೇ ಒತ್ತಾಯಿಸಿದರೂ, ಹಿಂದೂ ಸಂಘಟನೆಗಳು ಹೋರಾಡಿದರೂ ಹಿಂದೂ ಯುವತಿ ವಿಸ್ಮಯ, ತನ್ನ ಪ್ರೇಮಿ ಮೊಹಮ್ಮದ್ ಅಶ್ಫಾಕ್‌ನನ್ನು ಮದುವೆಯಾಗಿದ್ದಾಳೆ. ಕೇರಳ ಹೈಕೋರ್ಟ್ ಇವರ ಮದುವೆಗೆ ಗ್ರೀನ್‌ ಸಿಗ್ನಲ್‌ ನೀಡಿದೆ.

VISTARANEWS.COM


on

love jihad mohammad ishphaq vismaya
Koo

ಮಂಗಳೂರು:‌ ತಂದೆ-ತಾಯಿ, ಹಿಂದೂ ಸಂಘಟನೆಗಳ (Hindu outfits) ಪ್ರತಿಭಟನೆ- ಹೋರಾಟದ ಬಳಿಕವೂ ಮನೆ ಬಿಟ್ಟು ಹೋದ ಹಿಂದೂ ಯುವತಿ, ತಾನು ಪ್ರೇಮಿಸಿದ ಕೇರಳದ ಮುಸ್ಲಿಂ ಯುವಕನನ್ನು ಮದುವೆಯಾಗಿದ್ದಾಳೆ. ಕ್ರಿಮಿನಲ್‌ ಆರೋಪ ಹೊಂದಿರುವ ಈತ ಲವ್‌ ಜಿಹಾದ್‌ನಲ್ಲಿ (Love Jihad) ತೊಡಗಿದ್ದಾನೆ ಎಂದು ವಿಶ್ವ ಹಿಂದೂ ಪರಿಷತ್‌ (Vishwa Hindu Parishat) ಆರೋಪಿಸಿದೆ. ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್ (Sharan Pumpwell) ಸೋಶಿಯಲ್‌ ಮೀಡಿಯಾದಲ್ಲಿ (Social media) ಯುವತಿಯ ತಂದೆಯ ಕ್ಷಮೆ ಕೋರಿದ್ದಾರೆ.

ʼಕ್ಷಮಿಸಿ ವಿನೋದ್ ಅವರೇ, ನಿಮ್ಮ ಮಗಳನ್ನು ಉಳಿಸಲು ನಮ್ಮಿಂದ ಸಾಧ್ಯವಾಗಿಲ್ಲ’ ಎಂದು ಯುವತಿ ವಿಸ್ಮಯಳ ತಂದೆಯ ಬಳಿ ಕ್ಷಮೆ ಕೋರಿ ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಪೋಸ್ಟ್ ಮಾಡಿದ್ದಾರೆ. ಈ ಹಿಂದೆ ಮಗಳನ್ನು ಉಳಿಸಿಕೊಡಿ ಎಂದು ವಿಎಚ್‌ಪಿ ಮುಖಂಡರ ಬಳಿಗೆ ವಿಸ್ಮಯಳ ತಂದೆ ವಿನೋದ್ ಬಂದಿದ್ದರು.

ಕೇರಳದ ಕುಖ್ಯಾತ ಕ್ರಿಮಿನಲ್ ವಿರುದ್ಧ ಕೇಳಿಬಂದಿದ್ದ ಲವ್ ಜಿಹಾದ್ ಆರೋಪ ಕೇಸ್‌ಗೆ ಮತ್ತೊಂದು ಟ್ವಿಸ್ಟ್ ದೊರೆತಿದೆ. ತಂದೆ- ತಾಯಿ ಎಷ್ಟೇ ಒತ್ತಾಯಿಸಿದರೂ, ಹಿಂದೂ ಸಂಘಟನೆಗಳು ಹೋರಾಡಿದರೂ ಹಿಂದೂ ಯುವತಿ ವಿಸ್ಮಯ, ತನ್ನ ಪ್ರೇಮಿ ಮೊಹಮ್ಮದ್ ಅಶ್ಫಾಕ್‌ನನ್ನು ಮದುವೆಯಾಗಿದ್ದಾಳೆ. ಕೇರಳ ಹೈಕೋರ್ಟ್ ಇವರ ಮದುವೆಗೆ ಗ್ರೀನ್‌ ಸಿಗ್ನಲ್‌ ನೀಡಿದೆ.

ಕಾನೂನು ಹೋರಾಟದ ಮೂಲಕ ಮಗಳನ್ನು ವಾಪಸ್ ಕರೆತರುವುದಾಗಿ ವಿಸ್ಮಯ ತಂದೆಗೆ ವಿಎಚ್‌ಪಿ ಭರವಸೆ ನೀಡಿತ್ತು. ವಿಸ್ಮಯಳನ್ನು ಮಂಗಳೂರಿನ ಕೌನ್ಸೆಲಿಂಗ್ ಸೆಂಟರ್‌ಗೆ ವಿಎಚ್‌ಪಿ ಕಳುಹಿಸಿತ್ತು. ಆದರೆ ಮೊಹಮ್ಮದ್ ಅಶ್ಫಾಕ್‌ ಕೇರಳ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಹಾಕಿದ್ದ. ಕೇರಳ ಹೈಕೋರ್ಟ್ ಆಕೆಯನ್ನು ಕರೆತರುವಂತೆ ಆದೇಶ ನೀಡಿತ್ತು. ಹೀಗಾಗಿ ಅಶ್ಫಾಕ್ ಜೊತೆ ತೆರಳಿ ವಿಸ್ಮಯ ವಿವಾಹವಾಗಿದ್ದಾಳೆ.

ಕೇರಳದ ಕಾಸರಗೋಡಿನ ವಿದ್ಯಾನಗರ ನಿವಾಸಿಯಾಗಿರುವ ವಿಸ್ಮಯಿ ಅಶ್ಫಾಕ್ ಪ್ರಕರಣ‌ ಕರಾವಳಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಮಂಗಳೂರಿನ ಉಳ್ಳಾಲದ ಅತ್ತೆ ಮನೆಯಲ್ಲಿ ಇದ್ದುಕೊಂಡು ಮಂಗಳೂರಿನಲ್ಲಿ ಬಿಸಿಎ ಶಿಕ್ಷಣ ಪಡೆಯುತ್ತಿದ್ದ ವಿಸ್ಮಯಳನ್ನು ವಿದ್ಯಾನಗರದಲ್ಲಿದ್ದಾಗಲೇ ಅಶ್ಫಾಕ್ ಪ್ರೀತಿಯ ಬಲೆಗೆ ಬೀಳಿಸಿದ್ದ. ಎರಡು ತಿಂಗಳ ಪರಿಚಯದಲ್ಲೇ ಈತ ವಿಸ್ಮಯಳ ಬ್ರೇನ್‌ವಾಶ್ ಮಾಡಿದ್ದಾನೆ ಎಂದು ಆಕೆಯ ಹೆತ್ತವರು ಆರೋಪಿಸಿದ್ದಾರೆ. ಈತ ಕ್ರಿಮಿನಲ್ ರೆಕಾರ್ಡ್ ಹೊಂದಿದ್ದಾನೆ ಎನ್ನಲಾಗಿದೆ.

ಕಳೆದ ಜೂ.6 ರಂದು ಉಳ್ಳಾಲದಿಂದ ವಿಸ್ಮಯಳನ್ನು ಈತ ಕರೆದುಕೊಂಡು ಹೋಗಿದ್ದ. ಬಳಿಕ ವಿದ್ಯಾನಗರ ಠಾಣೆ ಪೊಲೀಸರು ಈಕೆಯನ್ನು ಪತ್ತೆ ಹಚ್ಚಿ ಮನೆಯವರ ಜೊತೆ ಕಳುಹಿಸಿದ್ದರು. ಮತ್ತೆ ಜೂ‌.30ರಂದು ಉಳ್ಳಾಲದಿಂದ ವಿಸ್ಮಯಳನ್ನು ಅಪಹರಿಸಿ ಕೊಚ್ಚಿಗೆ ಕರೆದುಕೊಂಡು ಹೋಗಿದ್ದ. ಈ ಬಗ್ಗೆ ವಿಸ್ಮಯಳ ತಂದೆ ವಿನೋದ್ ಉಳ್ಳಾಲ ಠಾಣೆಗೆ ಅಪಹರಣ ದೂರು ನೀಡಿದ್ದರು. ಬಳಿಕ ವಿದ್ಯಾನಗರ ಪೊಲೀಸರು ಪತ್ತೆ ಹಚ್ಚಿ ಮಂಗಳೂರಿನ ಕೌನ್ಸಿಲಿಂಗ್ ಕೇಂದ್ರದಲ್ಲಿ ಇರಿಸಿದ್ದರು.

ಆದರೆ ಅಶ್ಫಾಕ್ ಜೊತೆಗೆ ತೆರಳುವುದಾಗಿ ವಿಸ್ಮಯ ಹಠ ಹಿಡಿದಿದ್ದಳು. ಈಕೆಯ ಬ್ರೇನ್‌ ವಾಶ್‌ ಮಾಡಲಾಗಿದೆ ಎಂದು ಆರೋಪಿಸಿ ಅಶ್ಫಾಕ್ ವಿರುದ್ಧ ವಿಸ್ಮಯ ತಂದೆ ದೂರು ನೀಡಿದ್ದರು. ಕೇರಳದಲ್ಲಿ ವಿಸ್ಮಯ ಮತಾಂತರಕ್ಕೆ ಯತ್ನಿಸಲಾಗಿದೆ ಎಂದು ಆರೋಪಿಸಿದ್ದರು. ಬಳಿಕ ಮಂಗಳೂರಿನ ವಿಎಚ್‌ಪಿ ನಾಯಕರನ್ನು ಭೇಟಿಯಾಗಿ ಕಣ್ಣೀರು ಹಾಕಿದ್ದರು. ಕೊನೆಗೂ ವಿಸ್ಮಯ, ಅಶ್ಫಾಕ್ ಜೊತೆಗೆ ತೆರಳಿ ಆತನನ್ನು ವರಿಸಿದ್ದಾಳೆ.

ಇದನ್ನೂ ಓದಿ: Love Jihad: ಲವ್‌ ಜಿಹಾದ್‌ ವಿರುದ್ಧ ಯೋಗಿ ದಿಟ್ಟ ಕ್ರಮ; ಇನ್ನು ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಗ್ಯಾರಂಟಿ!

Continue Reading

ವಾಣಿಜ್ಯ

Hindenburg: ಶೀಘ್ರದಲ್ಲೇ ಭಾರತದಲ್ಲಿ ಬಹುದೊಡ್ಡ ಸಂಚಲನ ಸೃಷ್ಟಿಯಾಗಲಿದೆ; ಹೊಸದೊಂದು ಬಾಂಬ್‌ ಸಿಡಿಸಿದ ಹಿಂಡನ್‌ಬರ್ಗ್‌

Hindenburg: ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯು 2023ರ ಜನವರಿಯಲ್ಲಿ ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ವರದಿ ಪ್ರಕಟಿಸಿ ಸಂಚಲನ ಸೃಷಿಸಿದ ಬಳಿಕ ಮತ್ತೊಂದು ಬಾಂಬ್‌ ಸಿಡಿಸಲು ಮುಂದಾಗಿದೆ. ʼʼಶೀಘ್ರದಲ್ಲೇ ಭಾರತದಲ್ಲಿ ಏನೋ ಬಹುದೊಡ್ಡ ಬದಲಾವಣೆ ನಡೆಯಲಿದೆʼʼ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದೆ.

VISTARANEWS.COM


on

Hindenburg
Koo

ವಾಷಿಂಗ್ಟನ್‌: ಗೌತಮ್‌ ಅದಾನಿ (Gautam Adani)  ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ (Hindenburg) ಸಂಸ್ಥೆಯು 2023ರ ಜನವರಿಯಲ್ಲಿ ವರದಿ ಪ್ರಕಟಿಸಿದ ದೇಶಾದ್ಯಂತ ಸಂಚಲ ಮೂಡಿಸಿತ್ತು. ಇದೀಗ ಮತ್ತೊಮ್ಮೆ ಭಾರತ ಕೇಂದ್ರೀತ ವರದಿ ಪ್ರಕಟಿಸುವುದಾಗಿ ಘೋಷಿಸಿದೆ. ಈ ಬಗ್ಗೆ ಶನಿವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸೂಚನೆ ನೀಡಿದೆ. ʼʼಶೀಘ್ರದಲ್ಲೇ ಭಾರತದಲ್ಲಿ ಏನೋ ಬಹುದೊಡ್ಡ ಬದಲಾವಣೆ ನಡೆಯಲಿದೆʼʼ (Something big soon India) ಎಂದು ಸಂಸ್ಥೆ ಬರೆದುಕೊಂಡಿದೆ. ಅದಾನಿ ಗ್ರೂಪ್ ಆಂತರಿಕ ವ್ಯಾಪಾರ ಮತ್ತು ಷೇರು ಮಾರುಕಟ್ಟೆಯಲ್ಲಿ ನಿಯಮ ಉಲ್ಲಂಘನೆಗಳನ್ನು ಮಾಡುತ್ತಿದೆ ಎಂದು ಆರೋಪಿಸಿ ಹಿಂಡನ್‌ಬರ್ಗ್‌ ವರದಿ ಪ್ರಕಟಿಸಿದ ಸುಮಾರು ಒಂದೂವರೆ ವರ್ಷದ ಬಳಿಕ ಮತ್ತೊಂದು ಬಾಂಬ್‌ ಸಿಡಿಸಲು ಸಜ್ಜಾಗಿದೆ.

2023ರ ಜನವರಿಯಲ್ಲಿ ಅದಾನಿ ಗ್ರೂಪ್ ಕುರಿತ ವರದಿ ಪ್ರಕಟವಾದ ಬಳಿಕ ಅದರ ಷೇರುಗಳ ಮೌಲ್ಯ ಗಣನೀಯವಾಗಿ ಕುಸಿದಿದ್ದವು. ಆದಾಗ್ಯೂ ಅದಾನಿ ಗ್ರೂಪ್ ಈ ಆರೋಪಗಳನ್ನು ನಿರಾಕರಿಸಿತ್ತು.

ಹಿಂಡನ್‌ಬರ್ಗ್‌ ವರದಿಯಲ್ಲಿ ಏನಿತ್ತು?

ಗೌತಮ್‌ ಅದಾನಿ ನೇತೃತ್ವದ ಅದಾನಿ ಗ್ರೂಪ್‌ ಅಕ್ರಮ ಎಸಗಿದೆ ಎಂದು ಅಮೆರಿಕದ ಹಿಂಡನ್‌ಬರ್ಗ್‌ ಸಂಸ್ಥೆಯು 2023ರ ಜನವರಿಯಲ್ಲಿ ಪ್ರಕಟಿಸಿದ ವರದಿಯು ದೇಶದಲ್ಲಿ ವ್ಯಾಪಕ ಚರ್ಚೆ ಹುಟ್ಟು ಹಾಕಿತ್ತು. “ಹೂಡಿಕೆದಾರರಿಗೆ ಅದಾನಿ ಗ್ರೂಪ್‌ ವಂಚನೆ ಮಾಡದೆ. ಷೇರು ಮಾರುಕಟ್ಟೆಯಲ್ಲಿ ಅದಾನಿ ಗ್ರೂಪ್‌ ಷೇರು ಮೌಲ್ಯಗಳನ್ನು ಹೆಚ್ಚು ತೋರಿಸಿರುವುದು ವಂಚನೆಯಾಗಿದೆ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಇದಾದ ಬಳಿಕ ಅದಾನಿ ಗ್ರೂಪ್‌ ಷೇರು ಮೌಲ್ಯವು ದಿಢೀರನೆ ಕುಸಿದು ಭಾರಿ ನಷ್ಟವಾಗಿತ್ತು. ಅಲ್ಲದೆ ಅದಾನಿ ಗ್ರೂಪ್‌ ದಿವಾಳಿಯಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು.

ಹಿಂಡನ್‌ಬರ್ಗ್‌ ವರದಿ ಕುರಿತು ತನಿಖೆಯಾಗಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಹಲವರು ಮೊರೆ ಹೋಗಿದ್ದರು. ಅಲ್ಲದೆ ಅದಾನಿ ಗ್ರೂಪ್‌ ಅಕ್ರಮ ಪತ್ತೆಹಚ್ಚುವಲ್ಲಿ ಸೆಬಿ ವಿಫಲವಾಗಿದೆ. ಹಾಗಾಗಿ ತನಿಖೆಗೆ ಎಸ್‌ಐಟಿ ರಚಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು. ಹಾಗಾಗಿ ಸರ್ವೋಚ್ಚ ನ್ಯಾಯಾಲಯವು 2023ರ ಮಾರ್ಚ್‌ನಲ್ಲಿ ಸೆಬಿ ತನಿಖೆ ಮೇಲೆ ನಿಗಾ ಇರಿಸಲು, ತನಿಖೆಯಲ್ಲಿ ದೋಷ ಪತ್ತೆಹಚ್ಚಲು ಆರು ಸದಸ್ಯರ ತನಿಖಾ ಸಮಿತಿ ರಚಿಸಿತ್ತು. ಇದಾದ ಎರಡು ತಿಂಗಳ ಬಳಿಕ ಸೆಬಿಯು ಸುಪ್ರೀಂ ಕೋರ್ಟ್‌ಗೆ ತನಿಖಾ ವರದಿ ಸಲ್ಲಿಸಿತ್ತು. “ಅದಾನಿ ಗ್ರೂಪ್‌ ವಂಚನೆ ಮಾಡಿದೆ ಎಂಬುದನ್ನು ಸಾಬೀತುಪಡಿಸಲು ಈ ಹಂತದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ” ಎಂದು ಉಲ್ಲೇಖಿಸಿತ್ತು.

ಇದನ್ನೂ ಓದಿ: Gautam Adani : ಎನ್​ಡಿಟಿವಿ ಆಯ್ತು; ಈಗ ಸುದ್ದಿ ಸಂಸ್ಥೆ ಐಎಎನ್​ಎಸ್​ ಅದಾನಿ ಪಾಲು

ಗೌತಮ್‌ ಅದಾನಿ-ಹಿಂಡನ್‌ಬರ್ಗ್‌ ವರದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಬಿ ನಡೆಸುತ್ತಿರುವ ತನಿಖೆಯ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿತ್ತು. “ಸೆಬಿಯು ತನಿಖೆ ಹಾಗೂ ನಿಯಂತ್ರಕ ಸಂಸ್ಥೆಯಾಗಿರುವುದರಿಂದ ಅದರ ತನಿಖೆಯಲ್ಲಿ ಸುಪ್ರೀಂ ಕೋರ್ಟ್‌ ಹಸ್ತಕ್ಷೇಪ ಮಾಡಲು ಆಗುವುದಿಲ್ಲ” ಎಂದು ಸುಪ್ರೀಂ ಕೋರ್ಟ್‌ ತಿಳಿಸಿತ್ತು. ಇದರಿಂದಾಗಿ ಗೌತಮ್‌ ಅದಾನಿ ನೇತೃತ್ವದ ಗ್ರೂಪ್‌ಗೆ ರಿಲೀಫ್‌ ಸಿಕ್ಕಿತ್ತು.

Continue Reading

ವಾಣಿಜ್ಯ

ಬ್ಯಾಂಕ್‌ ಖಾತೆಗೆ ನಾಲ್ವರು ನಾಮಿನಿಗಳನ್ನು ಸೇರಿಸಲು ಅವಕಾಶ; ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಮಸೂದೆಯಲ್ಲಿ ಏನೇನು ಬದಲಾವಣೆ?

Nirmala Sitharaman: ಠೇವಣಿದಾರರು ಇನ್ನು ಮುಂದೆ ಬ್ಯಾಂಕ್ ಖಾತೆಗೆ ನಾಲ್ವರು ನಾಮಿನಿಯಾಗಿ ಸೇರ್ಪಡೆಗೊಳಿಸುವ ಅವಕಾಶ ಹೊಂದಲಿದ್ದಾರೆ. ಶುಕ್ರವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಂಡಿಸಿದ ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಮಸೂದೆ–2024ರಲ್ಲಿ ಈ ಬಗ್ಗೆ ತಿಳಿಸಿದ್ದಾರೆ. ಪ್ರಸ್ತುತ ಬ್ಯಾಂಕ್ ಖಾತೆಗೆ ಒಬ್ಬರನ್ನು ನಾಮಿನಿ ಮಾಡಲು ಅವಕಾಶವಿದೆ.

VISTARANEWS.COM


on

Nirmala Sitharaman
Koo

ನವದೆಹಲಿ: ಠೇವಣಿದಾರರು ಇನ್ನು ಮುಂದೆ ಬ್ಯಾಂಕ್ ಖಾತೆಗೆ ನಾಲ್ವರು ನಾಮಿನಿಯಾಗಿ ಸೇರ್ಪಡೆಗೊಳಿಸುವ ಅವಕಾಶ ಹೊಂದಲಿದ್ದಾರೆ. ಶುಕ್ರವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಲೋಕಸಭೆಯಲ್ಲಿ ಮಂಡಿಸಿದ ಬ್ಯಾಂಕಿಂಗ್ ಕಾನೂನು (ತಿದ್ದುಪಡಿ) ಮಸೂದೆ–2024 (Banking Laws Amendment Bill)ರಲ್ಲಿ ಈ ಬಗ್ಗೆ ತಿಳಿಸಿದ್ದಾರೆ.

ಪ್ರಸ್ತುತ ಬ್ಯಾಂಕ್ ಖಾತೆಗೆ ಒಬ್ಬರನ್ನು ನಾಮಿನಿ ಮಾಡಲು ಅವಕಾಶವಿದೆ. ಇದೀಗ ಮಸೂದೆ ಏಕಕಾಲದಲ್ಲಿ ನಾಲ್ವರನ್ನು ವಾರಸುದಾರರನ್ನಾಗಿ ಮಾಡಲು ಅವಕಾಶ ನೀಡಿದೆ. ಠೇವಣಿದಾರರು ಮತ್ತು ಹೂಡಿಕೆದಾರರ ಹಿತ ಕಾಪಾಡಲು ಸರ್ಕಾರವು ಈ ಕ್ರಮ ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ. ಬ್ಯಾಂಕ್‌ನಲ್ಲಿರುವ ಠೇವಣಿ, ಚಿನ್ನಾಭರಣ, ದಾಖಲೆ ಪತ್ರಗಳು ಹಾಗೂ ಲಾಕರ್‌ಗಳಿಗೂ ಈ ಕಾನೂನಿನಡಿ ಠೇವಣಿದಾರರು ತಮ್ಮ ಉತ್ತರಾಧಿಕಾರಿಗಳ ನೇಮಿಸುವ ಅಧಿಕಾರ ಹೊಂದಲಿದ್ದಾರೆ.

ಮಸೂದೆಯಲ್ಲಿ ಏನೇನಿದೆ?

ವಾರಸುದಾರರಿಲ್ಲದ ಲಾಭಾಂಶ, ಷೇರು, ಬಡ್ಡಿ ಅಥವಾ ಬಾಂಡ್‌ಗಳನ್ನು ಹೂಡಿಕೆದಾರರ ಶಿಕ್ಷಣ ಮತ್ತು ರಕ್ಷಣಾ ನಿಧಿಗೆ ವರ್ಗಾಯಿಸಲು ಅನುವು ಮಾಡಿಕೊಡಲಿದೆ. ವಾರಸುದಾರರು ಇದ್ದರೆ ಆ ನಿಧಿಯ ಮೂಲಕ ಹಣ ವಾಪಸ್‌ ಪಡೆಯುವ ಅವಕಾಶವೂ ಇದೆ.

ಮಸೂದೆಯು ಸಬ್‌ಸ್ಟಾನ್ಶಿಯಲ್‌ ಇಂಟರೆಸ್ಟ್‌ (Substantial interest) ಅನ್ನು ಮರುವ್ಯಾಖ್ಯಾನಿಸುವುದನ್ನೂ ಪ್ರಸ್ತಾವಿಸುತ್ತದೆ. ಅಂದರೆ ಇಂದು ಕಂಪೆನಿಯಲ್ಲಿ ನಿರ್ದೇಶಕರು 5 ಲಕ್ಷ ರೂ.ಗಿಂತ ಹೆಚ್ಚಿನ ಮೌಲ್ಯದ ಆಸ್ತಿ ಹೊಂದಿದ್ದರೆ ಅದನ್ನು ಸಬ್‌ಸ್ಟಾನ್ಶಿಯಲ್‌ ಇಂಟರೆಸ್ಟ್‌ ಎಂದು ಪರಿಗಣಿಸಲಾಗುತ್ತದೆ. ಇಂತಹವರಿಗೆ ಸಾಲ ಕೊಡಲು ಮಂಡಳಿಯ ಅನುಮೋದನೆ ಅಗತ್ಯವಾಗಿರುತ್ತದೆ. ಇದೀಗ ಸಬ್‌ಸ್ಟಾನ್ಶಿಯಲ್‌ ಇಂಟರೆಸ್ಟ್‌ ಮೊತ್ತವನ್ನು 1968ರಲ್ಲಿ ನಿರ್ಧರಿಸಿದ 5 ಲಕ್ಷ ರೂ.ಗಳಿಂದ 2 ಕೋಟಿ ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ.

ಬ್ಯಾಂಕುಗಳು ಆರ್‌ಬಿಐಗೆ ಶಾಸನಬದ್ಧ ವರದಿಗಳನ್ನು ಸಲ್ಲಿಸುವ ದಿನಾಂಕಗಳನ್ನು ಪರಿಷ್ಕರಿಸುವ ಗುರಿಯನ್ನು ಮಸೂದೆ ಹೊಂದಿದೆ. ಪ್ರಸ್ತುತ ಬ್ಯಾಂಕುಗಳು ನಿಯಮಾವಳಿ ಅನುಸರಿಸಿರುವ ಬಗ್ಗೆ ಪ್ರತೀ ತಿಂಗಳ ಎರಡನೇ ಮತ್ತು ನಾಲ್ಕನೇ ಶುಕ್ರವಾರಗಳಂದು ವರದಿ ಸಲ್ಲಿಸಬೇಕು. ಆದರೆ ತಿದ್ದುಪಡಿ ಮಾಡಲಾದ ನಿಯಮದ ಪ್ರಕಾರ ತಿಂಗಳ 15ನೇ ತಾರೀಕು ಮತ್ತು ತಿಂಗಳಾಂತ್ಯಕ್ಕೆ ಈ ವರದಿ ಸಲ್ಲಿಸಿದರೆ ಸಾಕು.

ಪ್ರಸ್ತಾವಿತ ತಿದ್ದುಪಡಿಗಳು ಲೆಕ್ಕಪರಿಶೋಧಕರ (Auditors) ಸಂಭಾವನೆಯನ್ನು ನಿರ್ಧರಿಸಲು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಸ್ವಾತಂತ್ರ್ಯವನ್ನು ನೀಡಲು ಮುಂದಾಗಿದೆ. ಇದು ಬ್ಯಾಂಕುಗಳಿಗೆ ಅತ್ಯುತ್ತಮ ಪ್ರತಿಭೆಗಳನ್ನು ನೇಮಿಸಿಕೊಳ್ಳಲು ಅವಕಾಶ ನೀಡುವ ಮೂಲಕ ಲೆಕ್ಕಪರಿಶೋಧನೆಯ ಗುಣಮಟ್ಟವನ್ನು ಸುಧಾರಿಸುವ ಸಾಧ್ಯತೆಯಿದೆ.

ಕಳೆದ ವಾರ ಕೇಂದ್ರ ಸಚಿವ ಸಂಪುಟ ಅಂಗೀಕರಿಸಿದ ಈ ಮಸೂದೆಯು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ 1934, ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ 1955, ಬ್ಯಾಂಕಿಂಗ್ ಕಂಪನಿಗಳ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ 1970 ಮತ್ತು ಬ್ಯಾಂಕಿಂಗ್ ಕಂಪನಿಗಳ (ಸ್ವಾಧೀನ ಮತ್ತು ವರ್ಗಾವಣೆ) ಕಾಯ್ದೆ 1980 ಅನ್ನು ತಿದ್ದುಪಡಿ ಮಾಡಿದೆ.

ಬಜೆಟ್‌ನಲ್ಲಿ ಪ್ರಸ್ತಾವ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024ರ ಬಜೆಟ್ ಭಾಷಣದಲ್ಲಿ, ಬ್ಯಾಂಕ್ ಆಡಳಿತವನ್ನು ಸುಧಾರಿಸಲು ಮತ್ತು ಹೂಡಿಕೆದಾರರ ರಕ್ಷಣೆಯನ್ನು ಹೆಚ್ಚಿಸಲು, ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, ಬ್ಯಾಂಕಿಂಗ್ ಕಂಪನಿಗಳ ಕಾಯ್ದೆ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆಗೆ ಕೆಲವು ತಿದ್ದುಪಡಿಗಳನ್ನು ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದ್ದರು.

ಇದನ್ನೂ ಓದಿ: Lending Rate: ಬ್ಯಾಂಕ್‌ ಆಫ್‌ ಬರೋಡಾ ಬಡ್ಡಿದರ ಹೆಚ್ಚಳ; ಸಾಲಗಾರರಿಗೆ ಇಎಂಐ ಇನ್ನಷ್ಟು ಭಾರ

Continue Reading

ಪ್ರಮುಖ ಸುದ್ದಿ

PM Narendra Modi: ಭೂಕುಸಿತ ಪೀಡಿತ ವಯನಾಡಿಗೆ ಇಂದು ನರೇಂದ್ರ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ವಯನಾಡ್‌ ಭೂಕುಸಿತದ ಸಂತ್ರಸ್ತರನ್ನು ಆಸ್ಪತ್ರೆಗಳು ಮತ್ತು ಪರಿಹಾರ ಶಿಬಿರಗಳಲ್ಲಿ ಭೇಟಿ ಮಾಡಲಿದ್ದಾರೆ. ದುರಂತದಲ್ಲಿ ಸಂತ್ರಸ್ತರಾದವರಿಗೆ ಸರಿಯಾದ ಬೆಂಬಲ, ಪರಿಹಾರ ದೊರೆಯುವಿಕೆಯನ್ನು ಖಚಿತಪಡಿಸಿಕೊಳ್ಳಲಿದ್ದಾರೆ.

VISTARANEWS.COM


on

pm narendra modi wayanad landslide
Koo

ಹೊಸದಿಲ್ಲಿ: ದಾರುಣ ಭೂಕುಸಿತ (Kerala Landslide) ಸಂಭವಿಸಿದ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಲು, ಪರಿಹಾರ ಮತ್ತು ಪುನರ್ವಸತಿ ಪ್ರಯತ್ನಗಳ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು (ಆಗಸ್ಟ್ 10) ಕೇರಳದ ವಯನಾಡ್ (Wayanad Landslide) ಜಿಲ್ಲೆಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ಮೋದಿ ಭೂಕುಸಿತದ ಸಂತ್ರಸ್ತರನ್ನು ಆಸ್ಪತ್ರೆಗಳು ಮತ್ತು ಪರಿಹಾರ ಶಿಬಿರಗಳಲ್ಲಿ ಭೇಟಿ ಮಾಡಲಿದ್ದಾರೆ. ದುರಂತದಲ್ಲಿ ಸಂತ್ರಸ್ತರಾದವರಿಗೆ ಸರಿಯಾದ ಬೆಂಬಲ, ಪರಿಹಾರ ದೊರೆಯುವಿಕೆಯನ್ನು ಖಚಿತಪಡಿಸಿಕೊಳ್ಳಲಿದ್ದಾರೆ.

ವಯನಾಡ್‌ನ ಮಾಜಿ ಸಂಸದ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi), ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡುತ್ತಿರುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ. ಭೇಟಿಯ ನಂತರ ಪ್ರಧಾನಿ ವಯನಾಡ್ ಭೂಕುಸಿತವನ್ನು ʼರಾಷ್ಟ್ರೀಯ ವಿಪತ್ತುʼ ಎಂದು ಘೋಷಿಸುತ್ತಾರೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

“ಮೋದಿ ಜೀ, ಭೀಕರ ದುರಂತದ ಬಗ್ಗೆ ವೈಯಕ್ತಿಕವಾಗಿ ಅವಲೋಕನ ಮಾಡಲು ವಯನಾಡ್‌ಗೆ ಭೇಟಿ ನೀಡುತ್ತಿರುವುದಕ್ಕಾಗಿ ಧನ್ಯವಾದಗಳು. ಇದೊಂದು ಒಳ್ಳೆಯ ನಿರ್ಧಾರ. ಪ್ರಧಾನಿ ಒಮ್ಮೆ ವಿನಾಶದ ಪ್ರಮಾಣವನ್ನು ನೇರವಾಗಿ ನೋಡಿದ ನಂತರ, ಅವರು ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತಾರೆ ಎಂದು ನನಗೆ ವಿಶ್ವಾಸವಿದೆ” ಎಂದು ಗಾಂಧಿ ಶುಕ್ರವಾರ ರಾತ್ರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೋದಿ ಭೇಟಿಯ ಪೂರ್ಣ ವೇಳಾಪಟ್ಟಿ ಇಲ್ಲಿದೆ

ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಕೇರಳದ ಕಣ್ಣೂರು ತಲುಪುವ ನಿರೀಕ್ಷೆಯಿದೆ. ಅಲ್ಲಿಂದ ಅವರು ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಕೈಗೊಳ್ಳಲಿದ್ದಾರೆ. ನಂತರ, ಮಧ್ಯಾಹ್ನ 12:15ರ ಸುಮಾರಿಗೆ ಭೂಕುಸಿತದಿಂದ ಸಂತ್ರಸ್ತವಾಗಿರುವ ಸ್ಥಳಗಳಿಗೆ ನೇರ ಭೇಟಿ ನೀಡಲಿದ್ದಾರೆ.

ಪ್ರಸ್ತುತ ನಡೆಯುತ್ತಿರುವ ಸ್ಥಳಾಂತರ ಕಾರ್ಯಾಚರಣೆಗಳ ಕುರಿತು ರಕ್ಷಣಾ ತಂಡಗಳಿಂದ ವಿವರ ಪಡೆಯಲಿದ್ದಾರೆ. ಭೂಕುಸಿತದಿಂದ ಬದುಕುಳಿದವರು ಪ್ರಸ್ತುತ ಪುನರ್ವಸತಿ ಬಯಸುತ್ತಿರುವ ಪರಿಹಾರ ಶಿಬಿರ ಮತ್ತು ಆಸ್ಪತ್ರೆಗೆ ಪ್ರಧಾನಿ ಭೇಟಿ ನೀಡಲಿದ್ದಾರೆ. ಸಂತ್ರಸ್ತರೊಂದಿಗೆ ಸಂವಾದ ನಡೆಸಿ ಅವರ ಕುಂದುಕೊರತೆಗಳನ್ನು ಆಲಿಸಲಿದ್ದಾರೆ. ನಂತರ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅಲ್ಲಿನ ಪರಿಹಾರ ಪ್ರಯತ್ನಗಳ ಬಗ್ಗೆ ವಿವರವಾಗಿ ತಿಳಿಯಲಿದ್ದಾರೆ.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Kearala CM Pinarayi Vijayan) ಅವರು ಈ ವಾರದ ಆರಂಭದಲ್ಲಿ ಮೋದಿ ಅವರ ವಯನಾಡ್ ಭೇಟಿಯನ್ನು ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು. ಕೇಂದ್ರ ಸರ್ಕಾರ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

400ಕ್ಕೂ ಹೆಚ್ಚು ಸಾವು

ಜುಲೈ 30ರಂದು ವಯನಾಡಿನ ಚೂರಲ್ಮಲಾ ಮತ್ತು ಮುಂಡಕ್ಕೈನಲ್ಲಿ ಸಂಭವಿಸಿದ ಭಾರಿ ಭೂಕುಸಿತ ವ್ಯಾಪಕ ವಿನಾಶವನ್ನು ಸೃಷ್ಟಿಸಿದ್ದವು. ಭೂಕುಸಿತದಲ್ಲಿ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 150 ಜನರು ಇನ್ನೂ ನಾಪತ್ತೆಯಾಗಿದ್ದಾರೆ. ಪತ್ತೆಯಾದ ಮೃತದೇಹಗಳ ಡಿಎನ್‌ಎ ಫಲಿತಾಂಶದ ಬಳಿಕ ಅಂತಿಮ ಸಾವಿನ ಸಂಖ್ಯೆ ಖಚಿತವಾಗಲಿದೆ ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ: Wayanad Tragedy: ವಯನಾಡ್ ಭೂಕುಸಿತ; ದಕ್ಷಿಣ ಭಾರತದ ಸಿನಿಮಾ ನಟರಿಂದ ಸಂತ್ರಸ್ತರಿಗೆ ನೆರವಿನ‌ ಮಹಾಪೂರ

Continue Reading
Advertisement
love jihad mohammad ishphaq vismaya
ಕರ್ನಾಟಕ36 seconds ago

Vis: ಕೇರಳದ ಯುವಕನನ್ನು ಮದುವೆಯಾದ ಮಂಗಳೂರಿನ ಹಿಂದೂ ಯುವತಿ; ಹಿಂದೂ ಸಂಘಟನೆಗಳ ಹೋರಾಟ ನಿಷ್ಫಲ

Heart attack
ಉಡುಪಿ7 mins ago

Heart Attack : ಮಲಗಿದ್ದಲೇ ಹೃದಯ ಸ್ತಬ್ಧ! ನಾಲ್ಕೈದು ದಿನದ ಬಳಿಕ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

Paris Olympics
ಪ್ರಮುಖ ಸುದ್ದಿ18 mins ago

Paris Olympics Medal Table: ಪಾಕಿಸ್ತಾನ 1 ಪದಕ ಗೆದ್ದರೂ ಪದಕ ಪಟ್ಟಿಯಲ್ಲಿ ಮೇಲೆ, ಭಾರತ 6 ಪದಕ ಗೆದ್ದರೂ ಕೆಳಗೆ ಏಕೆ?

John Abraham slams actors for endorsing paan masala
ಬಾಲಿವುಡ್27 mins ago

John Abraham : ನಾನು ಸಾವನ್ನು ಮಾರಲ್ಲ ಎಂದು ಶಾರುಖ್ ಖಾನ್, ಅಜಯ್ ದೇವಗನ್‌ಗೆ ಪರೋಕ್ಷವಾಗಿ ತಿರುಗೇಟು ಕೊಟ್ಟ ಜಾನ್ ಅಬ್ರಹಾಂ!

ಚಿನ್ನದ ದರ35 mins ago

Gold Rate Today: ಮತ್ತೆ ಏರಿಕೆಯಾದ ಚಿನ್ನದ ಬೆಲೆ; ಇಂದಿನ ದರ ಚೆಕ್‌ ಮಾಡಿ

Viral Video
Latest45 mins ago

Viral Video: ವೇಗವಾಗಿ ಬಂದು ಅಪ್ಪಳಿಸಿದ ಸ್ಕಾರ್ಪಿಯೋ; ಒಂದೇ ಕುಟುಂಬದ ಮೂವರು ಪಾರಾಗಿದ್ದೇ ಅಚ್ಚರಿ!

anganawadi worker
ಕೊಪ್ಪಳ50 mins ago

Anganawadi workers: ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನೇ ಎಗರಿಸುತ್ತಿದ್ದ ಅಂಗನವಾಡಿ ಶಿಕ್ಷಕಿ, ಸಹಾಯಕಿ ವಜಾ!

Hindenburg
ವಾಣಿಜ್ಯ1 hour ago

Hindenburg: ಶೀಘ್ರದಲ್ಲೇ ಭಾರತದಲ್ಲಿ ಬಹುದೊಡ್ಡ ಸಂಚಲನ ಸೃಷ್ಟಿಯಾಗಲಿದೆ; ಹೊಸದೊಂದು ಬಾಂಬ್‌ ಸಿಡಿಸಿದ ಹಿಂಡನ್‌ಬರ್ಗ್‌

Indian Men’s Hockey Team
ಕ್ರೀಡೆ1 hour ago

Indian Men’s Hockey Team: ತವರಿಗೆ ಮರಳಿದ ಕಂಚು ವಿಜೇತ ಭಾರತ ಹಾಕಿ ತಂಡ; ದಿಲ್ಲಿಯಲ್ಲಿ ಭರ್ಜರಿ ಸ್ವಾಗತ

Road Accident
ರಾಯಚೂರು1 hour ago

Road Accident : ಜವರಾಯನಂತೆ ಬಂದ ಟಾಟಾಏಸ್‌ ಚಾಲಕ; ಪಾದಯಾತ್ರೆ ಹೊರಟಿದ್ದ ತಾಯಿ ದುರ್ಮರಣ, ಮಗಳು ಗಂಭೀರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌