Kareena Kapoor Tells urfi javed confidence Kareena Kapoor: ಉರ್ಫಿ ತುಂಬ ಧೈರ್ಯಶಾಲಿ ಎಂದು ಹಾಡಿ ಹೊಗಳಿದ ಕರೀನಾ ಕಪೂರ್‌ - Vistara News

South Cinema

Kareena Kapoor: ಉರ್ಫಿ ತುಂಬ ಧೈರ್ಯಶಾಲಿ ಎಂದು ಹಾಡಿ ಹೊಗಳಿದ ಕರೀನಾ ಕಪೂರ್‌

ಕರೀನಾ ಕಪೂರ್ (Kareena Kapoor) ಸಂದರ್ಶನವೊಂದರಲ್ಲಿ ಉರ್ಫಿಯನ್ನು ಹೊಗಳಿದ್ದಾರೆ. ನಟಿ ಮಾತನಾಡಿ ʻನಾನು ಉರ್ಫಿ ಜಾವೇದ್‌ ಅವರಷ್ಟು ಧೈರ್ಯಶಾಲಿಯಲ್ಲ ಎಂದಿದ್ದಾರೆ. ಸದಾ ಉಡುಪಿನ ಮೂಲಕವೇ ಕೆಂಗಣ್ಣಿಗೆ ಗುರಿಯಾಗುತ್ತಿರುವ ನಟಿಯ ಬಗ್ಗೆ ಕೆಲವು ಬಾಲಿವುಡ್‌ ಸೆಲೆಬ್ರಿಟಿಗಳು ನಟಿಯ ಫ್ಯಾಶನ್ ಸೆನ್ಸ್ ಕುರಿತು ಶ್ಲಾಘಿಸಿದ ಸಂದರ್ಭಗಳಿವೆ.

VISTARANEWS.COM


on

Kareena Kapoor Tells urfi javed confidence
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಫ್ಯಾಷನ್‌ ಐಕಾನ್‌ ಅಂತಯೇ ಖ್ಯಾತಿ ಪಡೆದಿರುವ ಉರ್ಫಿ ಜಾವೇದ್ (urfi javed) ಬಿಗ್ ಬಾಸ್ ಒಟಿಟಿ ಮೂಲಕ ಖ್ಯಾತಿಯನ್ನು ಗಳಿಸಿದರು. ಸದಾ ಉಡುಪಿನ ಮೂಲಕವೇ ಕೆಂಗಣ್ಣಿಗೆ ಗುರಿಯಾಗುತ್ತಿರುವ ನಟಿಯ ಬಗ್ಗೆ ಕೆಲವು ಬಾಲಿವುಡ್‌ ಸೆಲೆಬ್ರಿಟಿಗಳು ನಟಿಯ ಫ್ಯಾಶನ್ ಸೆನ್ಸ್ ಕುರಿತು ಶ್ಲಾಘಿಸಿದ ಸಂದರ್ಭಗಳಿವೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಬಾಲಿವುಡ್ ತಾರೆ ಕರೀನಾ ಕಪೂರ್ (Kareena Kapoor) ಅವರು ಉರ್ಫಿ ಜಾವೇದ್ ಅವರನ್ನು ಹೊಗಳಿದ್ದಾರೆ. ʻʻಉರ್ಫಿ ತುಂಬ ‘ಧೈರ್ಯಶಾಲಿ’ ಎಂದು ಹೇಳಿದ್ದಾರೆ.

ಕರೀನಾ ಕಪೂರ್ ಸಂದರ್ಶನವೊಂದರಲ್ಲಿ ಉರ್ಫಿಯನ್ನು ಹೊಗಳಿದ್ದಾರೆ. ನಟಿ ಮಾತನಾಡಿ ʻನಾನು ಉರ್ಫಿ ಜಾವೇದ್‌ ಅವರಷ್ಟು ಧೈರ್ಯಶಾಲಿಯಲ್ಲ. ಫ್ಯಾಷನ್ ಎನ್ನುವುದು ಅಭಿವ್ಯಕ್ತಿ ಮತ್ತು ವಾಕ್ ಸ್ವಾತಂತ್ರ್ಯಕ್ಕೆ ಸಂಬಂಧಿಸಿದೆ. ಅವರ ಒಂದು ಈ ಆತ್ಮವಿಶ್ವಾಸ ಇಂದು ಇಲ್ಲಿಗೆ ತಂದಿದೆ. ಉರ್ಫಿ ಅದ್ಭುತವಾಗಿ ಕಾಣುತ್ತಾರೆ ಎಂದು ನಾನು ಭಾವಿಸುತ್ತೇನೆʼʼಎಂದರು.

ಮಾತು ಮುಂದುವರಿಸಿ ʻʻತನಗೆ ಬೇಕಾದಂತಹ ಫ್ಯಾಷನ್‌ ಅನ್ನು ಅವರು ಆಯ್ಕೆ ಮಾಡಿಕೊಳ್ಳುತ್ತಾರೆ. ಅದು ಫ್ಯಾಷನ್‌ ಅಂದರೆ. ನಿಮ್ಮ ಸ್ಕಿನ್‌ಗೆ ಯಾವುದು ಆರಾಮದಾಯಕವಾಗಿರುತ್ತದೆಯೋ ಅದನ್ನು ನೀವು ಮುಂದುವರಿಸಿ. ಉರ್ಫಿ ಅವರ ನಾನು ಆತ್ಮವಿಶ್ವಾಸವನ್ನು ಪ್ರೀತಿಸುತ್ತೇನೆ. ನಾನು ಆತ್ಮವಿಶ್ವಾಸದ ಹುಡುಗಿ. ಉರ್ಫಿ ಅವರು ನಡೆದುಕೊಳ್ಳುವ ರೀತಿಯನ್ನು ಪ್ರೀತಿಸುತ್ತೇನೆ. ಹ್ಯಾಟ್ಸ್ ಆಫ್ ಉರ್ಫಿ.”ಎಂದಿದ್ದಾರೆ.

ಇದನ್ನೂ ಓದಿ: Urfi Javed: ಇದು ಡಬಲ್ ಧಮಾಕಾ! ಒಟ್ಟಿಗೆ ಕಾಣಿಸಿಕೊಂಡ ಉರ್ಫಿ ಜಾವೇದ್‌ ಮತ್ತು ಸನ್ನಿ ಲಿಯೋನ್!

ಕೆಲಸದ ಮುಂಭಾಗದಲ್ಲಿ, ಕರೀನಾ ಕೊನೆಯದಾಗಿ ಅಮೀರ್ ಖಾನ್ ಅವರೊಂದಿಗೆ ಲಾಲ್ ಸಿಂಗ್ ಚಡ್ಡಾದಲ್ಲಿ ಕಾಣಿಸಿಕೊಂಡರು. ಮುಂದೆ ದಿ ಡಿವೋಷನ್ ಆಫ್ ಸಸ್ಪೆಕ್ಟ್ ಎಕ್ಸ್, ದಿ ಬಕಿಂಗ್ಹ್ಯಾಮ್ ಮರ್ಡರ್ಸ್ ಮತ್ತು ದಿ ಕ್ರ್ಯೂನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Manvita Kamath: ಅರುಣ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ʼಟಗರು ಪುಟ್ಟಿʼ

Manvita Kamath: ಅರುಣ್‌ ಕೂಡ ಮಾನ್ವಿತಾ ಅವರು ಮದುವೆ ಬಳಿಕ ಸಿನಿಮಾ ಮಾಡಿದರೂ ಯಾವುದೇ ಅಭ್ಯಂತರ ಇಲ್ಲ ಎಂದಿದ್ದಾರೆ. ಮೈಸೂರಿನಲ್ಲಿ ಅರುಣ್ ಎಂಜಿನಿಯರಿಂಗ್ ಮಾಡಿದ್ದಾರೆ. ಅವರಿಗೆ ಸಿನಿಮಾ ರಂಗದಲ್ಲಿ ಹೆಚ್ಚು ಆಸಕ್ತಿ ಇಲ್ಲವಂತೆ.ಮಾನ್ವಿತಾ ಅವರದ್ದು ಅರೇಂಜ್ಡ್ ಮ್ಯಾರೇಜ್. ಮುಂದಿನ 3 ತಿಂಗಳು ಶುಭ ಮುಹೂರ್ತ ಇರಲಿಲ್ಲ. ಹೀಗಾಗಿ, ಮೇ 1ಕ್ಕೆ ಜೋಡಿ ಹಸೆಮಣೆ ಏರಿದೆ.

VISTARANEWS.COM


on

Manvita Kamath marriage with arun Pics are here
Koo

ಸ್ಯಾಂಡಲ್‌ವುಡ್‌ ನಟಿ ಮಾನ್ವಿತಾ ಕಾಮತ್‌ (Manvita Kamath) ಅವರು ಮೈಸೂರು ಮೂಲದ ಮ್ಯೂಸಿಕ್ ಪ್ರೊಡ್ಯೂಸರ್ ಅರುಣ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇಂದು (ಮೇ 1) ಚಿಕ್ಕಮಗಳೂರು ಜಿಲ್ಲೆಯ ಕಳಸದ ವೆಂಕಟರಮಣ ದೇವಸ್ಥಾನದಲ್ಲಿ ಈ ಜೋಡಿ ಶಾಸ್ತ್ರೋಕ್ತವಾಗಿ ಮದುವೆಯಾಗಿದೆ.

ಇದನ್ನೂ ಓದಿ: Manvita Kamath: ‘ಟಗರು ಪುಟ್ಟಿʼ ಮಾನ್ವಿತಾದ್ದು ಲವ್ ಮ್ಯಾರೇಜ್? ಕೊನೆಗೂ ಸ್ಪಷ್ಟನೆ ಕೊಟ್ಟ ನಟಿ!

ಮಾನ್ವಿತಾ ಅವರದ್ದು ಅರೇಂಜ್ಡ್ ಮ್ಯಾರೇಜ್. ಮುಂದಿನ 3 ತಿಂಗಳು ಶುಭ ಮುಹೂರ್ತ ಇರಲಿಲ್ಲ. ಹೀಗಾಗಿ, ಮೇ 1ಕ್ಕೆ ಜೋಡಿ ಹಸೆಮಣೆ ಏರಿದೆ.

ಸ್ನೇಹಿತರು, ಕುಟುಂಬಸ್ಥರ ಸಮ್ಮುಖದಲ್ಲಿ ಅದ್ಧೂರಿಯಾಗಿ ಮದುವೆಯಾಗಿದೆ ಜೋಡಿ.

ಮಾನ್ವಿತಾ ಅವರು ಮದುವೆ ಬಳಿಕ ಸಿನಿಮಾದಲ್ಲಿ ನಟಿಸಿದರೂ ಯಾವುದೇ ಅಭ್ಯಂತರ ಇಲ್ಲ ಎಂದಿದ್ದಾರೆ ಅರುಣ್‌. ಮೈಸೂರಿನಲ್ಲಿ ಅರುಣ್ ಎಂಜಿನಿಯರಿಂಗ್ ಮಾಡಿದ್ದಾರೆ. ಅವರಿಗೆ ಸಿನಿಮಾ ರಂಗದಲ್ಲಿ ಹೆಚ್ಚು ಆಸಕ್ತಿ ಇಲ್ಲವಂತೆ.

ʼಕೆಂಡಸಂಪಿಗೆ‘ (kendasampige Cinema Kannada) ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಹೆಜ್ಜೆ ಇಟ್ಟು ಸಕ್ಸೆಸ್‌ ಫುಲ್ ನಟಿಯಾಗಿ ಹೊರಹೊಮ್ಮಿರುವವರು ಮಾನ್ವಿತಾ ಕಾಮತ್ (Manvita Kamath). ಆರ್ ಜೆಯಾಗಿದ್ದ ಮಾನ್ವಿತಾ ಅವರು ದುನಿಯಾ ಸೂರಿ ನಿರ್ದೇಶನದ ʻಕೆಂಡಸಂಪಿಗೆʼ ಚಿತ್ರದಲ್ಲಿ ನಾಯಕಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟರು. ಬಳಿಕ ಶಿವಣ್ಣನ ʻಟಗರುʼ ಸಿನಿಮಾದಲ್ಲಿ ಬಣ್ಣ ಹಚ್ಚಿ ʻಟಗರು ಪುಟ್ಟಿʼಯಾಗಿ ಕರುನಾಡ ಪ್ರೇಕ್ಷಕರ ಮನ ಗೆದ್ದರು.

Continue Reading

ಸಿನಿಮಾ

Duniya Vijay: ಕೊಲ್ಲೂರಿನಲ್ಲಿ ʼಸ್ಯಾಂಡಲ್‌ವುಡ್‌ ಸಲಗʼವನ್ನು ಮುತ್ತಿಕೊಂಡ ಅಭಿಮಾನಿಗಳು!

Duniya Vijay: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಾಗ ಸೆಲೆಬ್ರಿಟಿಗಳು ಭೇಟಿ ನೀಡುತ್ತಲೇ ಇರುತ್ತಾರೆ. ದುನಿಯಾ ವಿಜಯ್ (Duniya Vijay) ಅವರು ಕೊಲ್ಲೂರು ಮೊಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.ದುನಿಯಾ ವಿಜಯ್ ಅವರು ‘ಭೀಮ’ ಸಿನಿಮಾದಲ್ಲಿ ನಟಿಸುವುದ ಜತೆಗೆ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ.

VISTARANEWS.COM


on

Duniya Vijay Visited Kolluru Shri Mookambika Devi Temple
Koo

ದುನಿಯಾ ವಿಜಯ್ (Duniya Vijay) ಅವರು ಕೊಲ್ಲೂರು ಮೊಕಾಂಬಿಕಾ ದೇವಸ್ಥಾನಕ್ಕೆ ಬುಧವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಈ ವೇಳೆ ದುನಿಯಾ ವಿಜಯ್ ಅವರನ್ನು ನೋಡಲು ಫ್ಯಾನ್ಸ್ ಮುತ್ತಿಕೊಂಡಿದ್ದಾರೆ. ಎಲ್ಲರೂ ಬಂದು ದುನಿಯಾ ವಿಜಯ್ ಬಳಿ ಸೆಲ್ಫಿ ಕೇಳಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಾಗ ಸೆಲೆಬ್ರಿಟಿಗಳು ಭೇಟಿ ನೀಡುತ್ತಲೇ ಇರುತ್ತಾರೆ. ಯುಗಾದಿ ಹಬ್ಬದ ಸಂದರ್ಭದಲ್ಲಿ ನಟಿ ಹರ್ಷಿಕಾ ಪೂಣಚ್ಚ ವಿಶೇಷ ಪೂಜೆ ಸಲ್ಲಿಸಿದ್ದರು.

ಇದನ್ನೂ ಓದಿ: Duniya Vijay: ಪುತ್ರಿಗಾಗಿ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌

ಇದಾದ ಬಳಿಕ ಚಿತ್ರರಂಗದ ಸ್ಟಾರ್ ನಟ ಮೋಹನ್‌ಲಾಲ್ ಭೇಟಿ ನೀಡಿ, ಮುಂಜಾನೆ ಮಹಾಮಂಗಳಾರತಿಯಲ್ಲಿ ಪಾಲ್ಗೊಂಡಿದ್ದರು.

ದುನಿಯಾ ವಿಜಯ್ ಅವರು ‘ಭೀಮ’ ಸಿನಿಮಾದಲ್ಲಿ ನಟಿಸುವುದ ಜತೆಗೆ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರ ಹೊಸ ಸಿನಿಮಾ ಘೋಷಣೆ ಆಗಿದೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ. ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌ (Duniya Vijay) ಕೆಲವು ದಿನಗಳ ಹಿಂದೆಯಷ್ಟೇ ಹೊಸ ಸಿನಿಮಾ ಘೋಷಣೆ ಮಾಡಿದ್ದರು. ವಿಶೇಷ ಅಂದರೆ ಈ ಸಿನಿಮಾ ಮೂಲಕ ದುನಿಯಾ ವಿಜಯ್‌ ಅವರ ಮಗಳು ಮೋನಿಕಾ ಸಿನಿರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ಕಾಟೇರ’ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ಸದ್ಯಕ್ಕೆ ಪ್ರೊಡಕ್ಷನ್ ನಂ 2. ಟೈಟಲ್ ಮೂಲಕ ಸಿನಿಮಾ ಚಿತ್ರೀಕರಣ ಚಾಲನೆ ದೊರೆತಿದೆ. ಸತ್ಯ ಪ್ರಕಾಶ್ ನಿರ್ಮಾಪಕರಾಗಿ, ಸಹ ನಿರ್ಮಾಪಕರಾಗಿ ಸೂರಜ್ ಗೌಡ ಇದ್ದಾರೆ.

Continue Reading

ಕಾಲಿವುಡ್

Vettaiyan Movie: ರಜನಿಕಾಂತ್ ಸಿನಿಮಾದಲ್ಲಿ ಅನಿರುದ್ಧ್ ರವಿಚಂದರ್; ಲೀಕ್‌ ಆಯ್ತು ಫೋಟೊ!

Vettaiyan Movie: ಅನಿರುದ್ಧ್ ರವಿಚಂದರ್ ಅವರು 2015 ರ ಚಿತ್ರ ʻಮಾರಿʼ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಧನುಷ್ ನಾಯಕನಾಗಿ ನಟಿಸಿರುವ ಸಿನಿಮಾ ಇದು. ಅದಲ್ಲದೇ . ಅನಿರುದ್ಧ್ ರವಿಚಂದರ್ ಅವರ ಹಾಡುಗಳ ಪ್ರಚಾರದ ಲಿರಿಕಲ್ ವೀಡಿಯೊಗಳಲ್ಲಿ ಕಾಣಿಸಿಕೊಂಡಿದ್ದರು. ಇದೀಗ ರಜನಿಕಾಂತ್ ಅವರ ಮುಂಬರುವ ಚಿತ್ರ ʻವೆಟ್ಟೈಯಾನ್‌ʼನಲ್ಲಿ ಕಂಡಿದ್ದಾರೆ ಅನಿರುದ್ಧ್‌.

VISTARANEWS.COM


on

Vettaiyan Movie Anirudh Ravichander to make a special appearance in Rajinikanth
Koo

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ (Rajinikanth) ನಟನೆಯ 170ನೇ ಸಿನಿಮಾ ʼವೆಟ್ಟೈಯಾನ್ʼ (Vettaiyan Movie) ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿತ್ತು. ತಮಿಳು ನಟ ಸೂರ್ಯ ಅಭಿನಯದ ‘ಜೈ ಭೀಮ್’ ಚಿತ್ರದ ನಿರ್ದೇಶಕ ಟಿ.ಎಸ್. ಜ್ಞಾನವೇಲ್ ‘ವೆಟ್ಟೈಯಾನ್’ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಮೇಲೆ ನಿರೀಕ್ಷೆ ದುಪ್ಪಟ್ಟಾಗೋದಿಕ್ಕೆ ಮತ್ತೊಂದು ಕಾರಣ ʻತಲೈವಾʼ ಹಾಗೂ ʻಬಿಗ್ ಬಿʼ ಸಂಗಮ. ಇದೀಗ ಅನಿರುದ್ಧ್ ರವಿಚಂದರ್ (Anirudh Ravichander) ಈ ಸಿನಿಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಅನಿರುದ್ಧ್ ರವಿಚಂದರ್ ನಟನೆ ಮಾಡಿರುವ ಪೋಟೊವೊಂದು ಲೀಕ್‌ ಆಗಿದೆ. ಹೀಗಾಗಿ ಅನಿರುದ್ಧ್ ರವಿಚಂದರ್ ನಟಿಸಿರೋದು ಪಕ್ಕಾ ಎನ್ನುತ್ತಿದೆ ಮೂಲ.

ಅನಿರುದ್ಧ್ ರವಿಚಂದರ್ ಅವರು 2015ರ ಚಿತ್ರ ʻಮಾರಿʼ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಧನುಷ್ ನಾಯಕನಾಗಿ ನಟಿಸಿರುವ ಸಿನಿಮಾ ಇದು. ಅದಲ್ಲದೇ . ಅನಿರುದ್ಧ್ ರವಿಚಂದರ್ ಅವರ ಹಾಡುಗಳ ಪ್ರಚಾರದ ಲಿರಿಕಲ್ ವೀಡಿಯೊಗಳಲ್ಲಿ ಕಾಣಿಸಿಕೊಂಡಿದ್ದರು. ಇದೀಗ ರಜನಿಕಾಂತ್ ಅವರ ಮುಂಬರುವ ಚಿತ್ರ ʻವೆಟ್ಟೈಯಾನ್‌ʼನಲ್ಲಿ ಕಂಡಿದ್ದಾರೆ ಅನಿರುದ್ಧ್‌.

ಇದನ್ನೂ ಓದಿ: Vettaiyan Movie: ಬಾಕ್ಸಾಫೀಸ್ ಬೇಟೆಗೆ ತಲೈವಾ ರೆಡಿ; ರಜನಿಯ ‘ವೆಟ್ಟೈಯಾನ್’ ಬಿಡುಗಡೆಗೆ ಮುಹೂರ್ತ ಫಿಕ್ಸ್!

ರಜನಿ ಪೋಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ಅಮಿತಾಭ್ ಬಚ್ಚನ್, ಫಹದ್ ಫಾಸಿಲ್, ರಾಣಾ ದಗ್ಗುಬಾಟಿ, ಮಂಜು ವಾರಿಯರ್, ದುಷಾರ ವಿಜಯನ್, ರಿತಿಕಾ ಸಿಂಗ್ ಮತ್ತು ಇನ್ನೂ ಅನೇಕರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ವೆಟ್ಟೈಯಾನ್ ಸಿನಿಮಾಗೆ ರಾಕ್ ಸ್ಟಾರ್ ಖ್ಯಾತಿಯ ಅನಿರುದ್ಧ್ ರವಿಚಂದರ್ ಸಂಗೀತ, ಎಸ್.ಆರ್. ಕಥಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನವಿರಲಿದೆ. ತಿರುವನಂತಪುರಂ, ತಿರುನೆಲ್ವೇಲಿ, ಚೆನ್ನೈ, ಮುಂಬೈ, ಆಂಧ್ರಪ್ರದೇಶ ಮತ್ತು ಹೈದರಾಬಾದ್‌ನಲ್ಲಿ ಚಿತ್ರದ ಚಿತ್ರೀಕರಣ‌ ನಡೆಸಲಾಗಿದೆ.

ಇಂಡಿಯನ್, ಖೈದಿ ನಂಬರ್ 150, ರೋಬೋ 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ ಪ್ರೊಡಕ್ಷನ್ ʼವೆಟ್ಟೈಯಾನ್ʼ ಸಿನಿಮಾ ನಿರ್ಮಿಸುತ್ತಿದೆ.

Continue Reading

ಟಾಲಿವುಡ್

SS Rajamouli: ʻಬಾಹುಬಲಿ: ಕ್ರೌನ್ ಆಫ್ ಬ್ಲಡ್ʼ ಸಿರೀಸ್‌ ಅನೌನ್ಸ್‌ ಮಾಡಿದ ರಾಜಮೌಳಿ!

SS Rajamouli: ನಿರ್ದೇಶಕ ಎಸ್‌ಎಸ್ ರಾಜಮೌಳಿ (SS Rajamouli) ಅವರು ತಮ್ಮ ಹೊಸ ಸಿರೀಸ್‌ ʻಬಾಹುಬಲಿ: ಕ್ರೌನ್ ಆಫ್ ಬ್ಲಡ್ʼ ( Baahubali Crown of Blood Animated Series) ಘೋಷಿಸಿದರು. ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಎಂದು ಸರಣಿಗೆ ಹೆಸರಿಡಲಾಗಿದೆ. ರಿಲೀಸ್ ಮಾಡಿದ ವಿಡಿಯೋದ ಹಿನ್ನೆಲೆಯಲ್ಲಿ ʻಬಾಹುಬಲಿ.. ಬಾಹುಬಲಿʼ ಎಂಬ ಘೋಷ ಕೇಳುತ್ತಿದೆ.ಆರ್​ಆರ್​ಆರ್​’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಾಜಮೌಳಿ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರ ಮುಂದಿನ ಸಿನಿಮಾ ಮಹೇಶ್ ಬಾಬು ಜತೆ. ಈ ಚಿತ್ರದ ಪ್ರೀಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

VISTARANEWS.COM


on

SS Rajamouli Announces Baahubali Crown of Blood Animated Series
Koo

ಬೆಂಗಳೂರು: ನಿರ್ದೇಶಕ ಎಸ್‌ಎಸ್ ರಾಜಮೌಳಿ (SS Rajamouli) ಅವರು ತಮ್ಮ ಹೊಸ ಸಿರೀಸ್‌ ʻಬಾಹುಬಲಿ: ಕ್ರೌನ್ ಆಫ್ ಬ್ಲಡ್ʼ ( Baahubali Crown of Blood Animated Series) ಅನ್ನು ಮಂಗಳವಾರ (ಏ.30) ಘೋಷಿಸಿದರು. ಶೀಘ್ರದಲ್ಲೇ ಟ್ರೈಲರ್‌ ಬಿಡುಗಡೆಯಾಗಲಿದೆ ಎಂದು ರಾಜಮೌಳಿ ಅವರು ಖಚಿತಪಡಿಸಿದ್ದಾರೆ. ಟೈಟಲ್‌ ಜತೆಗೆ ವಿಡಿಯೊವನ್ನು ಹಂಚಿಕೊಂಡಿದ್ದಾರೆ. ಇದು ಅನಿಮೇಟೆಡ್ ಸೀರಿಸ್. ‘ಬಾಹುಬಲಿ: ಕ್ರೌನ್ ಆಫ್ ಬ್ಲಡ್’ ಎಂದು ಸರಣಿಗೆ ಹೆಸರಿಡಲಾಗಿದೆ. ರಿಲೀಸ್ ಮಾಡಿದ ವಿಡಿಯೋದ ಹಿನ್ನೆಲೆಯಲ್ಲಿ ʻಬಾಹುಬಲಿ.. ಬಾಹುಬಲಿʼ ಎಂಬ ಘೋಷ ಕೇಳುತ್ತಿದೆ.

ವಿಡಿಯೊದಲ್ಲಿ, ದೃಶ್ಯಗಳೊಂದಿಗೆ, ರಾಜಮೌಳಿ ಬರೆದಿದ್ದಾರೆ, “ಮಾಹಿಷ್ಮತಿಯ ಜನರು ಅವನ ಹೆಸರನ್ನು ಜಪಿಸಿದಾಗ, ಬ್ರಹ್ಮಾಂಡದ ಯಾವುದೇ ಶಕ್ತಿಯು ಅವನನ್ನು ಹಿಂತಿರುಗಿವುಕೆಯನ್ನು ತಡೆಯಲು ಸಾಧ್ಯವಿಲ್ಲ. ಬಾಹುಬಲಿ: ಕ್ರೌನ್ ಆಫ್ ಬ್ಲಡ್, ಆನಿಮೇಟೆಡ್ ಸಿರೀಸ್‌ ಟ್ರೈಲರ್‌ ಶೀಘ್ರದಲ್ಲೇ ಬರಲಿದೆ!ʼಎಂದು ಬರೆದುಕೊಂಡಿದ್ದಾರೆ. ರಾಜಮೌಳಿ ಅವರೇ ಇದನ್ನು ನಿರ್ದೇಶನ ಮಾಡಿದ್ದಾರೆ. ಅಂದಹಾಗೆ ಇದು ‘ಬಾಹುಬಲಿ’ ಸಿನಿಮಾ ಕಥೆಯನ್ನೇ ಹೊಂದಿರಲಿದೆಯೇ ಎನ್ನುವ ಕುತೂಹಲ ಅಭಿಮಾನಿಗಳಿಗೆ ಮೂಡಿದೆ.

ಬಾಹುಬಲಿಗೆ ಅನಿಮೇಟೆಡ್ ಸ್ಪಿನ್ ನೀಡಿರುವುದು ಇದೇ ಮೊದಲಲ್ಲ. 2017 ರಲ್ಲಿ, ರಾಜಮೌಳಿ ʻಬಾಹುಬಲಿ: ದಿ ಲಾಸ್ಟ್ ಲೆಜೆಂಡ್ಸ್; ಎಂಬ ಶೀರ್ಷಿಕೆಯ ನಾಲ್ಕು-ಋತುವಿನ ಅನಿಮೇಟೆಡ್ ಸರಣಿಯನ್ನು ಬಿಡುಗಡೆ ಮಾಡಿದರು. ಸರಣಿಯನ್ನು ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: SS Rajamouli: ಹೆಂಡತಿ ಜತೆ ರಾಜಮೌಳಿ ಲವ್ಲಿ ಡ್ಯೂಯೆಟ್‌! ನೀವೆ ನೋಡಿ ಈ ಜೋಡಿಯ ಡ್ಯಾನ್ಸ್‌!

ಬಾಹುಬಲಿ ಬಿಡುಗಡೆಯ ನಂತರ ಭಾರತದಲ್ಲಿ ಮಾತ್ರವಲ್ಲದೆ ಜಪಾನ್, ಚೀನಾ ಮತ್ತು ಪ್ರಮುಖ ಯುರೋಪಿಯನ್ ರಾಷ್ಟ್ರಗಳು ಸೇರಿದಂತೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಹಲವಾರು ದಾಖಲೆಗಳನ್ನು ಮುರಿದಿದೆ. ಬಾಹುಬಲಿ 2 ಅನ್ನು ಎಸ್‌ಎಸ್ ರಾಜಮೌಳಿ ನಿರ್ದೇಶಿಸಿದ್ದಾರೆ. ದೇಶೀಯ ಬಾಕ್ಸ್ ಆಫೀಸ್ ಪ್ರದರ್ಶನಕ್ಕೆ ಸಂಬಂಧಿಸಿದಂತೆ, ಬಾಹುಬಲಿ 2 ಈಗಾಗಲೇ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ರಮ್ಯಾ ಕೃಷ್ಣನ್, ಸತ್ಯರಾಜ್ ಮತ್ತು ನಾಸರ್ ಸೇರಿದಂತೆ ಪ್ರತಿಭಾವಂತ ನಟರನ್ನು ಒಳಗೊಂಡಿತ್ತು ಬಾಹುಬಲಿ ಸಿನಿಮಾ.

‘ಆರ್​ಆರ್​ಆರ್​’ ಸಿನಿಮಾ ಸೂಪರ್ ಹಿಟ್ ಆದ ಬಳಿಕ ರಾಜಮೌಳಿ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿಲ್ಲ. ಅವರ ಮುಂದಿನ ಸಿನಿಮಾ ಮಹೇಶ್ ಬಾಬು ಜತೆ. ಈ ಚಿತ್ರದ ಪ್ರೀಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ಇದನ್ನೂ ಓದಿ: SS Rajamouli: ಜಪಾನ್‌ ಭೂಕಂಪದಲ್ಲಿ ಬದುಕುಳಿದ ರಾಜಮೌಳಿ, ಮಗ ಕಾರ್ತಿಕೇಯ!

ಟಾಲಿವುಡ್‌ ನಟ ಮಹೇಶ್‌ ಬಾಬು (Mahesh Babu) ಹಾಗೂ ನಿರ್ದೇಶಕ ರಾಜಮೌಳಿ (SS Rajamouli) ಅವರು ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್‌ ಆಗಿಲ್ಲ. 2022ರಲ್ಲಿ ತೆರೆಕಂಡ ʼಆರ್‌.ಆರ್‌.ಆರ್‌.ʼ ಸಿನಿಮಾ ಬಳಿಕ ರಾಜಮೌಳಿ ನಿರ್ದೇಶನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ. ಅವರು ಈ ಚಿತ್ರಕ್ಕಾಗಿಯೇ ಹಲವು ವರ್ಷಗಳಿಂದ ಸಿದ್ಧತೆ ನಡೆಸುತ್ತಿದ್ದಾರೆ. ದಾಖಲೆ ಬರೆದ ʼಬಾಹುಬಲಿʼ, ʼಬಾಹುಬಲಿ 2ʼ, ʼಆರ್‌.ಆರ್‌.ಆರ್‌.ʼ ಮುಂತಾದ ಸಿನಿಮಾಗಳಿಗೆ ಕಥೆ ಬರೆದಿದ್ದ ವಿಜಯೇಂದ್ರ ಪ್ರಸಾದ್‌ ಅವರೇ ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದ ಬರವಣಿಗೆಯಲ್ಲಿ ತೊಡಗಿರುವುದು ನಿರೀಕ್ಷೆ ಹೆಚ್ಚಲು ಮತ್ತೊಂದು ಕಾರಣ. ಇತ್ತೀಚೆಗೆ ತೆರೆಕಂಡ ಮಹೇಶ್‌ ಬಾಬು ಅಭಿನಯದ ʼಗುಂಟೂರು ಖಾರಂʼ ಸಿನಿಮಾ ಸಾಧಾರಣ ಗೆಲುವು ದಾಖಲಿಸಿದೆ. ಹೀಗಾಗಿ ಅವರು ʼಎಸ್‌.ಎಸ್‌.ಬಿ.ಎಂ. 29ʼ ಚಿತ್ರದತ್ತ ಗಮನ ಹರಿಸಿದ್ದಾರೆ.

Continue Reading
Advertisement
Hassan Pen Drive Case POCSO case registered against Prajwal Revanna
ಕ್ರೈಂ24 mins ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್‌; ಬಾಲಕಿ ಉಲ್ಟಾ ಹೊಡೆದರೆ?

Ambedkar Statue MP Umesh Jadhav Unwell
ಕಲಬುರಗಿ24 mins ago

Ambedkar Statue: ತಲೆ ತಿರುಗಿ ಬಿದ್ದ ಕಲಬುರಗಿ ಸಂಸದ ಉಮೇಶ್ ಜಾಧವ್

Manvita Kamath marriage with arun Pics are here
ಸ್ಯಾಂಡಲ್ ವುಡ್35 mins ago

Manvita Kamath: ಅರುಣ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ʼಟಗರು ಪುಟ್ಟಿʼ

Mallikarjuna Kharge
ರಾಜಕೀಯ42 mins ago

Mallikarjuna Kharge: ಶಿವ, ಶ್ರೀರಾಮನ ಬಗ್ಗೆ ಖರ್ಗೆ ವಿವಾದಾತ್ಮಕ ಹೇಳಿಕೆ; ಬಿಜೆಪಿ ಕಿಡಿ

Job Alert
ಉದ್ಯೋಗ50 mins ago

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

bomb threat delhi ncr schools
ಪ್ರಮುಖ ಸುದ್ದಿ50 mins ago

‌Bomb Threat: ಬಾಂಬ್‌ ಬೆದರಿಕೆ ಇಮೇಲ್ ಮೂಲ ಪತ್ತೆ, ದಿಲ್ಲಿಯ 100ಕ್ಕೂ ಅಧಿಕ ಶಾಲೆ ಕ್ಲೋಸ್

prajwal revanna actress swara bhasker angry government silence on prajwal revanna
ರಾಜಕೀಯ55 mins ago

Prajwal Revanna: ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ; ಮೋದಿ ವಿರುದ್ಧ ನಟಿಯ ಆಕ್ರೋಶ!

Hassan Pen Drive Case Victims reluctance to sit investigation and Suicide threat if he is disturbed by trial
ಕ್ರೈಂ57 mins ago

Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

Koppala ZP CEO Rahul Ratnam Pandeya Spoke in Progress review meeting at kanakagiri
ಕೊಪ್ಪಳ1 hour ago

Koppala News: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಸಿಗುವಂತೆ ಕ್ರಮ ಕೈಗೊಳ್ಳಲು ಜಿ.ಪಂ ಸಿಇಒ ಸೂಚನೆ

LPG Price Cut
ದೇಶ1 hour ago

LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌