Gokuldas Exports Foundation donates drinking water unit, computer lab to Peenya govt high school, collegeGokaldas Exports: ಪೀಣ್ಯ ಸರ್ಕಾರಿ ಶಾಲೆ, ಕಾಲೇಜಿಗೆ ಕುಡಿಯುವ ನೀರಿನ ಘಟಕ, ಕಂಪ್ಯೂಟರ್ ಲ್ಯಾಬ್‌ ಕೊಡುಗೆ - Vistara News

ಬೆಂಗಳೂರು

Gokaldas Exports: ಪೀಣ್ಯ ಸರ್ಕಾರಿ ಶಾಲೆ, ಕಾಲೇಜಿಗೆ ಕುಡಿಯುವ ನೀರಿನ ಘಟಕ, ಕಂಪ್ಯೂಟರ್ ಲ್ಯಾಬ್‌ ಕೊಡುಗೆ

Gokaldas Exports: ಸರ್ಕಾರಿ ಶಾಲಾ ಮಕ್ಕಳಿಗೆ ಅನುಕೂಲವಾಗಲು ಗೋಕುಲ್ ದಾಸ್ ಎಕ್ಸ್‌ಪೋರ್ಟ್ಸ್ ಚಾರಿಟಬಲ್ ಫೌಂಡೇಷನ್‌ ವತಿಯಿಂದ ಕುಡಿಯುವ ನೀರಿನ ಘಟಕ ಹಾಗೂ ಗಣಕ ಯಂತ್ರ ಪ್ರಯೋಗಾಲಯದ ಕೊಡುಗೆ ನೀಡಲಾಗಿದೆ.

VISTARANEWS.COM


on

Gokuldas Exports Foundation donates drinking water unit, computer lab to Peenya govt high school, college
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪೀಣ್ಯ ದಾಸರಹಳ್ಳಿ: ಗಾರ್ಮೆಂಟ್ಸ್ ಜಗತ್ತಿನ ಪ್ರತಿಷ್ಠಿತ ಕಂಪೆನಿಗಳಲ್ಲೊಂದಾದ ಗೋಕುಲ್ ದಾಸ್ ಎಕ್ಸ್‌ಪೋರ್ಟ್ಸ್ ಚಾರಿಟಬಲ್ ಫೌಂಡೇಷನ್‌ (Gokaldas Exports) ವತಿಯಿಂದ ಪೀಣ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲೆಗೆ ಕುಡಿಯುವ ನೀರಿನ ಘಟಕ ಹಾಗೂ ಗಣಕ ಯಂತ್ರ ಪ್ರಯೋಗಾಲಯವನ್ನು ಕೊಡುಗೆಯಾಗಿ ನೀಡಲಾಗಿದೆ.

ಕುಡಿಯುವ ನೀರಿನ ಘಟಕ ಹಾಗೂ ಕಂಪ್ಯೂಟರ್ ಪ್ರಯೋಗಾಲಯವನ್ನು ಸಮರ್ಪಿಸಿ ಮಾತನಾಡಿದ ಗೋಕುಲ್ ದಾಸ್ ಎಕ್ಸ್‌ಪೋರ್ಟ್ಸ್ ಕಂಪೆನಿ ಉಪಾಧ್ಯಕ್ಷ ಟಿ.ಸ್ವಾಮಿ ಅವರು, ಖಾಸಗಿ ಶಾಲೆಗಳಲ್ಲಿ ಮಕ್ಕಳಿಂದ ಹೆಚ್ಚು ಡೊನೇಷನ್ ತೆಗೆದುಕೊಳ್ಳುತ್ತಾರೆ. ಇದರಿಂದ ಎಲ್ಲ ರೀತಿಯ ಸೌಲಭ್ಯಗಳು ದೊರೆಯುತ್ತವೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಕಡಿಮೆ ಇರುತ್ತದೆ. ಹೀಗಾಗಿ ಬಡಮಕ್ಕಳಿಗೆ ಅನುಕೂಲವಾಗಲು ಪೀಣ್ಯ ಸರ್ಕಾರಿ ಪ್ರೌಢಶಾಲೆ ಹಾಗೂ ಕಾಲೇಜಿಗೆ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಕಂಪ್ಯೂಟರ್‌ ಲ್ಯಾಬ್‌ ಅನ್ನು ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ | ರಾಜ ಮಾರ್ಗ ಅಂಕಣ : ಎಸ್ಸೆಸ್ಸೆಲ್ಸಿ ಪರೀಕ್ಷೆ ಅಂತಿಮ ತಯಾರಿ ಭಾಗ-4; ಗಣಿತದ ಕುತೂಹಲಕಾರಿ ಅಪ್ಲಿಕೇಶನ್ ಪ್ರಶ್ನೆಗಳು

ಬಡ ವಿದ್ಯಾರ್ಥಿಗಳು ಸೌಲಭ್ಯಗಳಿಂದ ವಂಚಿತರಾಗಬಾರದು ಎಂಬುದನ್ನು ಗುರಿಯಾಗಿಟ್ಟುಕೊಂಡು ವಿಶೇಷವಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಗೊಳಿಸಲು ಗೋಕುಲ್ ದಾಸ್ ಎಕ್ಸ್‌ಪೋರ್ಟ್ಸ್ ಸಂಸ್ಥೆ ಮುಂದಾಗಿದೆ. ಬೆಂಗಳೂರು ಮಾತ್ರವಲ್ಲದೆ ತುಮಕೂರು, ಹಾಸನ ಹಾಗೂ ಮೈಸೂರು ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ವಿವಿಧ ಸೌಲಭ್ಯ ನೀಡಲಾಗುತ್ತಿದೆ. ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಹಿರಿಯ ಜನರಲ್ ಮ್ಯಾನೇಜರ್ ಮಲ್ಲಿಕಾರ್ಜುನ ಮಾತನಾಡಿ, ಪೀಣ್ಯ ಸರ್ಕಾರಿ ಶಾಲೆ ಹಾಗೂ ಕಾಲೇಜಿಗೆ 1000 ಲೀ. ಸಾಮರ್ಥ್ಯದ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ 20 ಕಂಪ್ಯೂಟರ್‌ಗಳನ್ನು ಕೊಡುಗೆ ನೀಡಲಾಗಿದೆ. ಪೀಣ್ಯ ಬಹುದೊಡ್ಡ ಕೈಗಾರಿಕಾ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಇಲ್ಲಿ ವಿದ್ಯಾಭ್ಯಾಸ ಮಾಡುವ ಬಡಮಕ್ಕಳಿಗೆ ನೆರವಾಗಲು ಅಗತ್ಯ ಸೌಲಭ್ಯ ನೀಡಲಾಗಿದೆ ಎಂದು ತಿಳಿಸಿದರು.

ಪ್ರಾಂಶುಪಾಲ ಜಯರಾಮ್ ಮಾತನಾಡಿ, ಸರ್ಕಾರಿ ಶಾಲೆ ಹಾಗೂ ಕಾಲೇಜಿನಲ್ಲಿ ಸುಮಾರು 2000 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಕಂಪ್ಯೂಟರ್ ವಿಭಾಗ ನಿರ್ಮಿಸಿಕೊಟ್ಟಿರುವ ಗೋಕುಲ್ ದಾಸ್ ಕಂಪೆನಿಗೆ ಆಭಾರಿಯಾಗಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ | SSLC Exam 2023: ಮಾ.31ರಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು

ಶಾಲೆ ವಿದ್ಯಾರ್ಥಿಗಳು ಪ್ರತಿಕ್ರಿಯಿಸಿ, ಎಷ್ಟೋ ಖಾಸಗಿ ಶಾಲೆಗಳಲ್ಲೂ ಕಂಪ್ಯೂಟರ್‌ ಲ್ಯಾಬ್‌ ಇಲ್ಲ.‌ ಆದರೆ, ಸರ್ಕಾರಿ ಶಾಲೆಗೆ ಕಂಪ್ಯೂಟರ್‌ಗಳನ್ನು ನೀಡಿರುವುದರಿಂದ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿದೆ. ಕಂಪ್ಯೂಟರ್‌ ಲ್ಯಾಬ್‌ ಕೊಡುಗೆ ನೀಡಿರುವ ಗೋಕುಲ್ ದಾಸ್ ಎಕ್ಸ್‌ಪೋರ್ಟ್ಸ್ ಚಾರಿಟಬಲ್ ಫೌಂಡೇಷನ್‌ಗೆ ಧನ್ಯವಾದ ಹೇಳಲು ಬಯಸುತ್ತೇವೆ ಎಂದು ತಿಳಿಸಿದರು.

ಹಿರಿಯ ಜನರಲ್ ಮ್ಯಾನೇಜರ್ ಮಲ್ಲಿಕಾರ್ಜುನ. ಎಸ್‌ಡಿಎಂಸಿ ಉಪಾಧ್ಯಕ್ಷ ಮಹಂತೇಶ್ ಬಂಗಾರಿ, ಉಪ ಪ್ರಾಂಶುಪಾಲರಾದ ಮಂಜುಳ, ರಮೇಶ್ ಪಟೇಲ್, ಮುನಿಯಪ್ಪ, ನಾಗೇಶ್ ಮೊದಲಾದವರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Assembly Live: ಇಡಿಗೆ ಹೆದರುವುದಿಲ್ಲ, ನಿಮ್ಮನ್ನು ಬಲಿ ಹಾಕಿಯೇ ಸಿದ್ಧ: ವಾಲ್ಮೀಕಿ ಹಗರಣ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ

Karnataka Assembly Live: ಆಂಧ್ರಪ್ರದೇಶ, ತೆಲಂಗಾಣಕ್ಕೆ ಹೋಗಿರುವುದು 89 ಕೋಟಿ ಮಾತ್ರ. ಅದನ್ನು ವಾಪಸು ತರುವ ಕೆಲಸ ಮಾಡ್ತಿದ್ದೇವೆ. ನಾವು ಯಾರನ್ನು ಸಹ ರಕ್ಷಣೆ ಮಾಡುವುದಿಲ್ಲ. ಇವರ ಕಾಲದಲ್ಲಿ ನಡೆದ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಇವರು ಹೀಗೆ ಮಾಡುತ್ತಿದ್ದಾರೆ. ನಾವು ಈ ಬಿಜೆಪಿ ಹಾಗೂ ಇಡಿಗೆ ಹೆದರುವುದಿಲ್ಲ ಎಂದು ಸಿಎಂ ನುಡಿದರು. ಸಿಎಂ ಭಾಷಣಕ್ಕೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಬಾವಿಗಿಳಿದು ಪ್ರತಿಭಟಿಸಿ ಅಡ್ಡಿ ಒಡ್ಡಿದರು.

VISTARANEWS.COM


on

Karnataka assembly live cm siddaramaiah
Koo

ಬೆಂಗಳೂರು: “ನಾವು ಇಡಿಗೆ, ಬಿಜೆಪಿಗೆ ಹೆದರುವುದಿಲ್ಲ. ತಪ್ಪು ಮಾಡಿದವರನ್ನು ರಕ್ಷಿಸುವುದಿಲ್ಲ. ನಿಮ್ಮನ್ನು ಬಲಿ ಹಾಕಿಯೇ ಸಿದ್ಧ” ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ವಿಧಾನಸಭೆಯಲ್ಲಿ (Vidhan Sabha) ಬಿಜೆಪಿ ಸದಸ್ಯರಿಗೆ ಗುಡುಗಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ (Valmiki Corporation Scam) ಕುರಿತು ನಡೆದ ಚರ್ಚೆಗೆ ಅವರು ಇಂದು ಕಲಾಪದಲ್ಲಿ (Karnataka Assembly Live) ಉತ್ತರ ನೀಡಿದರು.

ʼʼನೀವು ಕಳ್ಳರು, ಲೂಟಿಕೋರರು ಎಂದು ನಿಮ್ಮನ್ನು ಅಲ್ಲಿ ಕೂರಿಸಿದ್ದಾರೆ. ತಾಕತ್ ಇದ್ಯಾ ಅಂದವರು 64ಕ್ಕೆ ಬಂದಿರಿ. ನಾವು 136 ಶಾಸಕರು ಗೆದ್ದು ಬಂದೆವು. ಬೊಮ್ಮಾಯಿ- ಯಡಿಯೂರಪ್ಪ ಆಡಳಿತಾವಧಿಯಲ್ಲಿ ಕೋಟ್ಯಂತರ ರೂಪಾಯಿ ಹಗರಣಗಳು ನಡೆದಿವೆ. ಎಲ್ಲದರ ಬಗ್ಗೆಯೂ ತನಿಖೆ ನಡೆಸುತ್ತೇವೆ. ಯಾರು ತಪ್ಪು ಮಾಡಿದ್ದರೋ ಅವರನ್ನು ಜೈಲಿಗೆ ಕಳುಹಿಸುತ್ತೇವೆ. ನಿಮ್ಮನ್ನು ಬಲಿ ಹಾಕಿಯೇ ಸಿದ್ಧ” ಎಂದು ಸಿಎಂ ಹೇಳಿದರು.

ಆಂಧ್ರಪ್ರದೇಶ, ತೆಲಂಗಾಣಕ್ಕೆ ಹೋಗಿರುವುದು 89 ಕೋಟಿ ಮಾತ್ರ. ಅದನ್ನು ವಾಪಸು ತರುವ ಕೆಲಸ ಮಾಡ್ತಿದ್ದೇವೆ. ನಾವು ಯಾರನ್ನು ಸಹ ರಕ್ಷಣೆ ಮಾಡುವುದಿಲ್ಲ. ಇವರ ಕಾಲದಲ್ಲಿ ನಡೆದ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಇವರು ಹೀಗೆ ಮಾಡುತ್ತಿದ್ದಾರೆ. ನಾವು ಈ ಬಿಜೆಪಿ ಹಾಗೂ ಇಡಿಗೆ ಹೆದರುವುದಿಲ್ಲ ಎಂದು ಸಿಎಂ ನುಡಿದರು. ಸಿಎಂ ಭಾಷಣಕ್ಕೆ ಪ್ರತಿಪಕ್ಷ ಬಿಜೆಪಿ ಸದಸ್ಯರು ಬಾವಿಗಿಳಿದು ಪ್ರತಿಭಟಿಸಿ ಅಡ್ಡಿ ಒಡ್ಡಿದರು.

ʼಬೊಮ್ಮಾಯಿ ಕಾಲದಲ್ಲಿ ಹಗರಣ ಆಗಿದೆ. ದೇವರಾಜ ಅರಸು ಟ್ರಕ್ ಟರ್ಮಿನಲ್ 50 ಕೋಟಿ ಅವ್ಯವಹಾರ ಆಗಿದೆ. ವೀರಯ್ಯ ಬಂಧನವಾಗಿದ್ದಾರೆ. ನಿಮಗೆ ನಾಚಿಕೆ ಆಗಲ್ವಾ?ʼ ಎಂದ ಸಿಎಂ ಬಿಜೆಪಿ ಕಾಲದ 21 ಹಗರಣಗಳ ದಾಖಲೆ ಬಿಡುಗಡೆ ಮಾಡಿದರು. ಕಿಯೋನಿಕ್ಸ್‌ನಲ್ಲಿ 500 ಕೋಟಿ ಅವ್ಯವಹಾರ ಆಗಿದೆ. ಆಗ ಯಡಿಯೂರಪ್ಪ ಸಿಎಂ, ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದರು. ಕೋವಿಡ್ ಹಗರಣ, ಭದ್ರಾ ಮೇಲ್ದಂಡೆ ಯೋಜನೆ ಸೇರಿ 40 ಸಾವಿರ ಕೋಟಿ ಹಗರಣ ನಡೆದಿದೆ. ಪಿಎಸ್ಐ ಹಗರಣ ಯಾರ ಕಾಲದಲ್ಲಿ ನಡೆಯಿತು? 40% ಕಮಿಷನ್ ಹಗರಣ ಸಿಎಂ ಬೊಮ್ಮಾಯಿ ಕಾಲದಲ್ಲಿ. ಕಾರ್ಕಳ ಪರುಶುರಾಮ ಥೀಮ್ ಪಾರ್ಕ್ ಹಗರಣ, ಬಿಟ್ ಕಾಯಿನ್ ಹಗರಣ ನಡೆಯಿತು. 750 ಕೋಟಿಗೂ ಹೆಚ್ಚು ಹಣ ಯಡಿಯೂರಪ್ಪ ಆಪ್ತರ ಬಳಿ ಸಿಕ್ಕಿತು. ಇಡಿ ಮತ್ತು ಸಿಬಿಐ ಬರಲಿಲ್ಲ. ಈಶ್ವರಪ್ಪ ರಾಜ್ಯಪಾಲರಿಗೆ ದೂರು ಕೊಟ್ಟರು. ಕೆಕೆಆರ್‌ಡಿಬಿ 200 ಕೋಟಿ ಹಗರಣ ನಡೆಯಿತು. ಆಗ ಕಂದಾಯ ಹಗರಣ ಆಶೋಕ್ ಸಚಿವರಾಗಿದ್ದರುʼ ಎಂದು ಸಿಎಂ ವಿವರಿಸಿದರು.

ಸಿಎಂ ಸಿದ್ದರಾಮಯ್ಯ ಅವರು ನೀಡಿದ ಲಿಖಿತ ಉತ್ತರದ ಪೂರ್ಣ ಪಾಠ ಇಲ್ಲಿದೆ:

ಮಾನ್ಯ ಅಧ್ಯಕ್ಷರೆ,
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ಹಗರಣ ಕುರಿತ ಮುಂದುವರೆದ ಉತ್ತರವನ್ನು ಸದನದಲ್ಲಿ ಲಿಖಿತ ರೂಪದಲ್ಲಿ ಮಂಡಿಸುತ್ತಿದ್ದೇನೆ.

1) ಬಿ.ಜೆ.ಪಿ. ಯವರ ಹುನ್ನಾರ ಇಷ್ಟೆ. ಒಂದು, ಮುಖ್ಯಮಂತ್ರಿಯ ಹೆಸರಿಗೆ ಮಸಿ ಬಳಿಯುವುದು. ಎರಡನೆಯದು, ಸರ್ಕಾರ ಪರಿಶಿಷ್ಟ ಜಾತಿ/ ಪಂಗಡಗಳ ವಿರುದ್ಧ ಎಂದು ಬಿಂಬಿಸುವುದು. ಈ ಎರಡೂ ಎಂದಾದರೂ ಸಾಧ್ಯವೆ? ಇಡೀ ಬಿಜೆಪಿ, ಬಿಜೆಪಿಯ ನಾಯಕತ್ವ ಸಂವಿಧಾನ ಜಾರಿಗೆ ಬಂದ ದಿನದಿಂದಲೂ ದಮನಿತ ಸಮುದಾಯಗಳ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಿರುದ್ಧವಾಗಿದೆ. ಮಹಿಳೆಯರ ವಿರುದ್ಧವಾಗಿದೆ. ದಮನಿತರ ಪರವಾದ ಪ್ರತಿ ನಿಲುವು, ಪ್ರತಿ ಕಾಯ್ದೆ, ಯೋಜನೆಗಳನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ನೇತೃತ್ವದ ಸರ್ಕಾರಗಳೆ.

2) ಇದೇ ಬಿಜೆಪಿ ಆಡಳಿತದಲ್ಲಿದ್ದಾಗ ಯಾವ ಯಾವ ನಿಗಮಗಳಲ್ಲಿ ಏನೇನೆಲ್ಲ ನುಂಗಿದ್ದಾರೆ ಎಂದು ಕೂಡ ಚರ್ಚೆ ನಡೆಯುತ್ತಿದೆ. ನುಂಗುವುದರಲ್ಲಿ ಜಾಣರಾಗಿರುವ ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ಮಾತನಾಡಿದ್ದಾರೆ. ಇದಕ್ಕಿಂತ ದುರಂತ ಬೇರೆ ಇಲ್ಲ. ವಿರೋಧ ಪಕ್ಷದವರು ತಮ್ಮ ಅಜೆಂಡಾ ಸಾಧಿಸಿಕೊಳ್ಳಲು ಯಾವ ಸುಳ್ಳನ್ನು ಬೇಕಾದರೂ ಹೇಳಬಲ್ಲರು ಎಂಬುದು ಇಲ್ಲಿ ಸಾಬೀತಾಗಿದೆ.

3) ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಈ 89.63 ಕೋಟಿಗಳಷ್ಟು ಹಣ ಅಕ್ರಮವಾಗಿ ಹೈದರಾಬಾದಿನ ಆರ್ ಬಿ ಎಲ್ ಬ್ಯಾಂಕಿಗೆ ವರ್ಗಾವಣೆಯಾಗಿರುತ್ತದೆ. [ಈ 89.63 ಕೋಟಿಗಳಲ್ಲಿ 5 ಕೋಟಿ ರೂ ವಾಪಸ್ಸು ಬಂದಿರುತ್ತದೆ]. 89.63 ಕೋಟಿ ರೂಪಾಯಿಗಳಲ್ಲಿ 45,02,98,000 ರೂಪಾಯಿಗಳು ಉಳಿತಾಯ ಖಾತೆಯಿಂದ ವರ್ಗಾವಣೆಯಾಗಿರುತ್ತವೆ. ಇನ್ನುಳಿದ 44.60 ಕೋಟಿ ರೂಪಾಯಿಗಳನ್ನು ನಿಗಮವು ಇಟ್ಟಿದ್ದ ಫಿಕ್ಸೆಡ್ ಡಿಪಾಸಿಟ್ ಮೇಲೆ ಓವರ್ ಡ್ರಾಫ್ಟ್ ತೆಗೆದಿದ್ದಾರೆ. ಓವರ್ ಡ್ರಾಫ್ಟ್ ಎಂದರೆ ಒಂದು ರೀತಿಯ ಸಾಲವೇ. ಇದು ಅತ್ಯಂತ ಪರಿಣತರಾದ, ಪಳಗಿದ ಖದೀಮರ ಕೆಲಸವೆ. ನಿಗಮವು ದಿನಾಂಕ: 30-3-2024 ರಂದು 50.00 ಕೋಟಿ ರೂಪಾಯಿಗಳನ್ನು ಫಿಕ್ಸೆಡ್ ಡಿಪಾಸಿಟ್ ನಲ್ಲಿಟ್ಟಿದೆ. ಸ್ಪಿಕ್ಸ್‌ಲಿ ಸ್ಪೀಕಿಂಗ್, ಈ 50.00 ಕೋಟಿ ಫಿಕ್ಸೆಡ್ ಡಿಪಾಸಿಟ್ ನಮ್ಮ ವಶದಲ್ಲಿಯೇ ಇದೆ. ಯಾಕೆಂದರೆ ಅದು ಫಿಕ್ಸೆಡ್ ಡಿಪಾಸಿಟ್.

4) ವಿರೋಧ ಪಕ್ಷದವರು [ ವಿಜಯೇಂದ್ರ ಹೇಳಿದ ಎರಡನೆ ಸುಳ್ಳು ರಾಜ್ಯ ಸರ್ಕಾರವು ಸಿಬಿಐನವರು ಎಫ್‌ಐಆರ್ ದಾಖಲಿಸಿದ ಮೇಲೆ ಎಸ್.ಐ.ಟಿ. ರಚಿಸಿದೆ ಎಂದು ಹೇಳಿದ್ದಾರೆ. ವಾಸ್ತವವಾಗಿ ನಮ್ಮಲ್ಲಿ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಿನಾಂಕ 28- 5-2024 ರಂದು ಕ್ರೈಂ ನಂ. 118/2024 ರಂತೆ ಏಫ್ ಐ ಆರ್ ದಾಖಲಾಗಿದೆ. ರಾಜ್ಯ ಸರ್ಕಾರವು 31-5-2024 ರಂದು ಆದೇಶ ಹೊರಡಿಸಿ ಎಸ್.ಐ.ಟಿ. ರಚಿಸಿದೆ. ಸಿಬಿಐ ದಿನಾಂಕ 3-6-2024 ರಂದು ಎಫ್‌ಐಆರ್ ದಾಖಲಿಸಿದ್ದಾರೆ.

5) ದಿನಾಂಕ: 03.06.2024 ರಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜನರಲ್ ಮ್ಯಾನೇಜರ್ (ಹೆಚ್.ಆರ್.) ಗಿರೀಶ್ ಚಂದ್ರ ಜೋಶಿ ಎನ್ನುವವರು ಎಂ.ಜಿ. ರಸ್ತೆ ಶಾಖೆಯ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶ್ರೀಮತಿ ಸುಚಿಸ್ಮಿತಾ ರಾವುಲ್, ಚೀಫ್ ಮ್ಯಾನೇಜರ್ (ಬ್ರಾಂಚ್ ಹೆಡ್) ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಹಾಗೂ Prevention of Corruption Act ರ Section 17(A) ರಡಿ ತನಿಖೆ ಮಾಡಲು ಅನುಮತಿ ನೀಡಿ ಸಿ.ಬಿ.ಐ. ಗೆ ಪತ್ರ ಬರೆದಿರುತ್ತಾರೆ. 17(A) ರಡಿ ತನಿಖೆ ಮಾಡಲು ಅನುಮತಿ ನೀಡಿ ಸಿ.ಬಿ.ಐ. ಗೆ ಪತ್ರ ಬರೆದಿರುತ್ತಾರೆ.

6) ಸಿ.ಬಿ.ಐ.ಗೆ ಬರೆದಿರುವ ಈ ಪತ್ರದ ಮುಖ್ಯಾಂಶಗಳನ್ನು ನಾನು ಅನುಬಂಧ-1 ರಲ್ಲಿಟ್ಟು ಸದನದಲ್ಲಿ ಮಂಡಿಸುತ್ತಿದ್ದೇನೆ. ಈ ಎರಡರಲ್ಲೂ ಬ್ಯಾಂಕಿನವರೆ ಒಪ್ಪಿಕೊಂಡಿರುವ ಹಾಗೆ ಬ್ಯಾಂಕಿನ ಸಿಬ್ಬಂದಿಗಳೇ ನೇರವಾಗಿ ಈ ಹಗರಣದಲ್ಲಿ ಶಾಮೀಲಾಗಿದ್ದಾರೆ ಎಂಬುದು ಕಂಡುಬರುತ್ತದೆ.

7) ದಿನಾಂಕ 28-5-2024 ರಂದು ಮಹರ್ಷಿ ವಾಲ್ಮೀಕಿ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಎನ್ನವವರು ನಿಗಮದ ಹಣ ಖಾಲಿಯಾಗಿರುವುದರ ಕುರಿತು ಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುತ್ತಾರೆ. ದಿನಾಂಕ: 28.05.2024 ರಂದು ಶ್ರೀ ಎ. ರಾಜಶೇಖರ, ಪ್ರಧಾನ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಇವರು ನಿಗಮದಲ್ಲಿ ನಡೆದ ಅವ್ಯವಹಾರದ ಕುರಿತು ಎ. ಮಣಿಮೇಖಲೈ, ಎಂ.ಡಿ. & ಸಿ.ಇ.ಓ., ಯುಬಿಐ, ಶ್ರೀ ನಿತೇಶ್ ರಂಜನ್, ಶ್ರೀ ರಾಮಸುಬ್ರಮಣ್ಯಂ, ಶ್ರೀ ಸಂಜಯ್‌ ರುದ್ರ, ಶ್ರೀ ಪಂಕಜ್ ದ್ವಿವೇದಿ, ಕಾರ್ಯನಿರ್ವಾಹಕ ನಿರ್ದೇಶಕರು ಯುಬಿಐನ ಮುಖ್ಯ ವ್ಯವಸ್ಥಾಪಕರಾದ ಶ್ರೀಮತಿ ಶುಚಿಸ್ಮಿತಾ ರವುಲ್, ಎಂ.ಜಿ. ರಸ್ತೆ ಶಾಖೆ ಇವರುಗಳ ವಿರುದ್ಧ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಿರುತ್ತಾರೆ.

8) ಅಕ್ರಮ ನಡೆದಿದೆಯೆಂದು ಗೊತ್ತಾದ ಕೂಡಲೆ ಎಫ್.ಐ.ಆರ್ ರಿಜಿಸ್ಟರ್ ಆಗಿದೆ. ಅಕ್ರಮದ ಕುರಿತು ತನಿಖೆ ಮಾಡಲು ಸಮರ್ಥ ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ ದಿನಾಂಕ: 31-5-2024 ರಂದು ಎಸ್‌ಐಟಿ ರಚಿಸಿದ್ದೇವೆ. ಮೇಲಿನ ಎರಡೂ ಕ್ರಿಮಿನಲ್ ಕೇಸುಗಳನ್ನು ತನಿಖೆ ಮಾಡುವ ಉದ್ದೇಶದಿಂದಲೇ 4 ಜನ ಪೊಲೀಸ್ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಎಚ್‌ಡಿ 64 ಸಿಐಡಿ 2024 ರ ಆದೇಶದಂತೆ ಈ ತಂಡ ರಚನೆಯಾಗಿದೆ.

9) ಎಸ್.ಐ.ಟಿ.ಯು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡುತ್ತಿದೆ. ಎಸ್.ಐ.ಟಿ. ರಚನೆಯಾದ ಕೂಡಲೆ ಕೂಡಲೆ ಕಾರ್ಯಪ್ರವೃತ್ತವಾದ ಈ ತಂಡವು ಕೆಳಕಂಡವರುಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

  1. ಜೆ ಜಿ ಪದ್ಮನಾಭ, ಪ್ರಧಾನ ವ್ಯವಸ್ಥಾಪಕ ಮಹರ್ಷಿ ವಾಲ್ಮೀಕಿ ನಿಗಮ
  2. ಪರಶುರಾಮ್ ದುರ್ಗಣ್ಣನವರ್ ಲೆಕ್ಕಾಧೀಕ್ಷಕ
  3. ಸತ್ಯನಾರಾಯಣ ಇಟಕಾರಿ ಅಧ್ಯಕ್ಷರು ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ
    ಆಪರೇಟಿವ್ ಸೊಸೈಟಿ ನಿಯಮಿತ
  4. ನೆಕ್ಕುಂಟೆ ನಾಗರಾಜ್‌- ಇವರು ಹಿಂದೆ ಶ್ರೀರಾಮುಲು ಜೊತೆ ಇದ್ದರು.
  5. ನಾಗೇಶ್ವರರಾವ್, ನೆಕ್ಕುಂಟೆ ನಾಗರಾಜ್ ಅವರ ಭಾವಮೈದುನ
  6. ಎಂ ಚಂದ್ರ ಮೋಹನ್, ಹೈದರಾಬಾದ್
  7. ಗಾದಿರಾಜು ಸೂರ್ಯನಾರಾಯಣ ವರ್ಮ, ಹೈದರಾಬಾದ್
  8. ಜಗದೀಶ್ ಜಿ ಕೆ ಉಡುಪಿ
  9. ತೇಜ ತಮಟಂ, ಬೆಂಗಳೂರು
  10. ಪಿಟ್ಟಲ ಶ್ರೀನಿವಾಸ ಗಚ್ಚಿ ಬೌಲಿ
  11. ಸಾಯಿತೇಜ ಹೈದರಾಬಾದ್
    12.ಕಾಕಿ ಶ್ರೀನಿವಾಸ ರಾವ್, ಆಂಧ್ರಪ್ರದೇಶ.

10) ವಿರೋಧ ಪಕ್ಷದವರು ಉದ್ದೇಶಪೂರ್ವಕವಾಗಿಯೆ ಅನೇಕ ವಿಚಾರಗಳನ್ನು ಮರೆಮಾಚುತ್ತಿದ್ದಾರೆ. ಪ್ರಮುಖವಾಗಿ, ಬ್ಯಾಂಕಿನವರೆ ದಿನಾಂಕ 3-6-2024 ರಂದು ಸಿಬಿಐಗೆ ನೀಡಿರುವ ದೂರಿನಲ್ಲಿ ಒಪ್ಪಿಕೊಂಡಿರುವ ಹಾಗೆ ಎಂಜಿ ರಸ್ತೆಯ ಬ್ರಾಂಚಿನ ಅಧಿಕಾರಿಗಳು ನೇರವಾಗಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಬ್ಯಾಂಕಿನ ಅಧಿಕಾರಿಗಳು ಶಿವಕುಮಾರ ಎಂಬ ಅಕ್ರಮ ವ್ಯಕ್ತಿ [ಇದುವರೆಗೆ ತಿಳಿದು ಬಂದ ಮಾಹಿತಿಯ ಪ್ರಕಾರ ಹೈದರಾಬಾದಿನ ಸಾಯಿತೇಜ ಎಂಬ ವ್ಯಕ್ತಿಯನ್ನು ಶಿವಕುಮಾರ ಎಂದು ಹೇಳಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ] ಯ ವಿವರಗಳನ್ನು ಸರಿಯಾಗಿ ಪರಿಶೀಲಿಸದೆ ಅಕ್ರಮವಾಗಿ ಹಣ ವರ್ಗಾಯಿಸಲು ನೆರವಾಗಿದ್ದಾರೆ. ಈ ಮಾತನ್ನು ನಾನು ಹೇಳುತ್ತಿಲ್ಲ. ಬ್ಯಾಂಕಿನವರೆ ಹೇಳಿದ್ದಾರೆ. ಈ ಅಕ್ರಮ ವ್ಯಕ್ತಿಗೆ ಚೆಕ್ ಬುಕ್ಕನ್ನು ಕೊಟ್ಟಿದ್ದು ಯಾಕೆ? ಆ ಚೆಕ್ಕುಗಳನ್ನು ಆಧರಿಸಿ
NEFT / RTGS ಮಾಡಲು ಅವಕಾಶಕೊಟ್ಟಿದ್ದು ಏಕೆ?

  • ಎಂಜಿ ರಸ್ತೆಯ ಶಾಖೆಯ ಮುಖ್ಯಸ್ಥರು ಉಪ ಮುಖ್ಯಸ್ಥರು ಚೆಕ್ಕುಗಳನ್ನು ಸರಿಯಾಗಿ ಪರಿಶೀಲಿಸದೆ ಅಕ್ರಮ ಎಸಗಿದ್ದಾರೆ ಎಂದು ಬ್ಯಾಂಕಿನವರೆ ಹೇಳಿದ್ದಾರೆ. ಇದನ್ನೆಲ್ಲ ಆಧರಿಸಿಯೇ ಬ್ಯಾಂಕಿನ ಮೇಲಧಿಕಾರಿಗಳು ಸಿಬಿಐಗೆ ಬರೆದ ದೂರಿನಲ್ಲಿ ತಮ್ಮ ಸಿಬ್ಬಂದಿಯ / ಅಧಿಕಾರಿಗಳ ತಪ್ಪುಗಳನ್ನು ಒಪ್ಪಿಕೊಂಡಿದ್ದಾರೆ.
  • ವಿರೋಧ ಪಕ್ಷದವರಿಗೆ ನಾನು ಕೇಳಬಯಸುವುದೇನೆಂದರೆ, ಯೂನಿಯನ್ ಬ್ಯಾಂಕು ರಾಷ್ಟ್ರೀಕೃತ ಬ್ಯಾಂಕ್ ಅಥವಾ ಖಾಸಗಿ ಬ್ಯಾಂಕೊ? ರಾಷ್ಟ್ರೀಕೃತ ಬ್ಯಾಂಕು ಹೌದಾದರೆ ಕೇಂದ್ರದ ಯಾವ ಇಲಾಖೆಯ ಕೆಳಗೆ ಬರುತ್ತಾರೆ? ಹಣಕಾಸು ಇಲಾಖೆಯ ಕೆಳಗೆ ತಾನೆ? ಹಣಕಾಸು ಇಲಾಖೆ ಯಾರ ಅಧೀನದಲ್ಲಿದೆ? ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಹಗರಣದ
    ಜವಾಬ್ದಾರಿಯನ್ನು ಹೊರುತ್ತಾರೆಯೆ? ನಾನು ಯಾಕೆ ಈ ಪ್ರಶ್ನೆಯನ್ನು ಕೇಳಿದೆ ಎಂದರೆ 47.16 ಕೋಟಿ ರೂಗಳ ರಾಜ್ಯದ APMC ಯಲ್ಲಿ ಹಗರಣ ನಡೆದಾಗ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು. ಬೊಮ್ಮಾಯಿ ಗೃಹ ಸಚಿವರು ಹಾಗೂ ಎಪಿಎಂಸಿ ಸಚಿವರೂ ಆಗಿದ್ದರು. ಈಗ ವಾಲ್ಮೀಕಿ ನಿಗಮದಲ್ಲಿ ಯಾವ ನಿಗಮದಲ್ಲಿ ಯಾವ ರೀತಿ ಹಗರಣ ನಡೆದಿತ್ತೊ ಅದೇ ರೀತಿಯಲ್ಲಿ ಹಗರಣ ನಡೆದಿತ್ತು. ಆದರೆ ಬ್ಯಾಂಕಿನವರು ತಮ್ಮ ಸಸ್ಪೆನ್ಸ್ ಅಕೌಂಟಿನಲ್ಲಿದ್ದ ಹಣವನ್ನು ತೆಗೆದು ವಾಪಸ್ಸು ತುಂಬಿದ್ದರು. ಈಗ ಹಣ ವಾಪಸ್ಸು ತುಂಬಿ ಎಂದು ಸಿಬಿಐಗೆ ಪತ್ರ ಬರೆದಿದ್ದಾರೆ. ವಾಪಸ್ಸು ಕಟ್ಟದಂತೆ ತಡೆದ ಶಕ್ತಿಗಳು ಯಾವುವು? ಎಂಬುದು ಕೂಡ ತನಿಖೆಯಿಂದ ಬಯಲಾಗಬೇಕು. ಸಸ್ಪೆನ್ಸ್ ಖಾತೆಯಿಂದ ಹಣ ವಾಪಾಸ್ ಕೊಟ್ಟರೆ ಲೂಟಿ ಮಾಡಿದವರಿಂದ ವಸೂಲಿ ಮಾಡುವುದು ಯಾವಾಗ? ಅದಕ್ಕೆ ಯಾರು ಜವಾಬ್ದಾರರು?

II) ವಾಲ್ಮೀಕಿ ಅಭಿವೃದ್ಧಿ ನಿಗಮದ ಹೆಸರಿನಲ್ಲಿ ಹಾಗೂ ಇತರೆ ಯಾವುದೇ ನಿಗಮದಲ್ಲಿ ಖಾತೆ ತೆರೆಯುವುದು, ವರ್ಗಾಯಿಸುವುದು ಮತ್ತು ತಮಗೆ ಬಿಡುಗಡೆಯಾದ ಅನುದಾನಗಳನ್ನು ಸಮರ್ಪಕ ರೀತಿಯಲ್ಲಿ ಜನರ ಕಲ್ಯಾಣಕ್ಕೆ ಬಳಸುವುದು ಮುಖ್ಯಸ್ಥರಾದ ವ್ಯವಸ್ಥಾಪಕ ನಿರ್ದೇಶಕರ ಜವಾಬ್ದಾರಿಯಾಗಿರುತ್ತದೆ.

12) ದಿನಾಂಕ:26.02.2014 ರಂದು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಎಂ.ಜಿ.ರಸ್ತೆ ಶಾಖೆಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಒಂದು ಪತ್ರವನ್ನು ಸಲ್ಲಿಸಿರುತ್ತಾರೆ. ಆ ಪತ್ರದಲ್ಲಿ ಉಳಿತಾಯ ಖಾತೆಯನ್ನು ವ್ಯವಸ್ಥಾಪಕ ನಿರ್ದೇಶಕರು ಮತ್ತು ಲೆಕ್ಕಾಧಿಕಾರಿಯವರು ಜಂಟಿಯಾಗಿ ನಿರ್ವಹಿಸುತ್ತಾರೆಂದು ತಿಳಿಸಿದ್ದು, ಎರಡು ಮಾದರಿ ಸಹಿ, ಇತರೆ ಕೆ.ವೈ.ಸಿ. ವಿವರಗಳು ಹಾಗೂ ದಾಖಲೆಗಳನ್ನು ಸಲ್ಲಿಸಿರುತ್ತಾರೆ.

13) ದಿನಾಂಕ: 04.03.2024 ರಂದು ವ್ಯವಸ್ಥಾಪಕ ನಿರ್ದೇಶಕರು ಮತ್ತು ಲೆಕ್ಕಾಧಿಕಾರಿಗಳು ಜಂಟಿಯಾಗಿ ಬ್ಯಾಂಕಿಗೆ ಪತ್ರವನ್ನು ನೀಡಿದಂತೆ ಅಕ್ರಮ ಪತ್ರ ನೀಡಲಾಗಿದೆಯೆಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಉಳಿತಾಯ ಖಾತೆಗೆ ಸಂಬಂಧಪಟ್ಟಂತೆ ಎಲ್ಲಾ ರೀತಿಯ ವ್ಯವಹಾರಗಳನ್ನು ಅಂದರೆ, ಚೆಕ್‌ಬುಕ್ ಪಡೆಯುವುದು, ಫಿಕ್ಸೆಡ್ ಡೆಪಾಸಿಟ್ ರಸೀದಿಯನ್ನು ಪಡೆಯುವುದು, ಓವರ್ ಡ್ರಾಫ್ಟ್ ದಾಖಲೆಗಳನ್ನು ಪಡೆಯುವುದು ಹಾಗೂ ನಿಗಮದ ಎಲ್ಲಾ ವ್ಯವಹಾರಗಳನ್ನು ಈ ಖಾತೆಯಲ್ಲಿ ನಿರ್ವಹಿಸಲು ನಕಲಿ ಪತ್ರವೊಂದನ್ನು ಸೃಷ್ಟಿಸಿ, ಅದರಲ್ಲಿ ನಿಗಮದಲ್ಲಿಯೇ ಇಲ್ಲದ ಶ್ರೀ ಶಿವಕುಮಾರ್‌ ಎಂಬ ಅಕ್ರಮ ವ್ಯಕ್ತಿಯನ್ನು ಸೃಷ್ಟಿಸಿ ಅವನನ್ನು ಕಿರಿಯ ಲೆಕ್ಕಾಧಿಕಾರಿ ಎಂದು ಹೇಳಿ ಆತನೇ ಇನ್ನು ಮುಂದಿನ ಅಧಿಕೃತ ಸಹಿದಾರ ಎಂದು ಅನಧಿಕೃತವಾಗಿ ಮಾಡಿ ಆತನ ವಶಕ್ಕೆ ಚೆಕ್ ಬುಕ್‌ನ್ನು ನೀಡಬೇಕೆಂದು ತಿಳಿಸುವ ಪತ್ರವೊಂದನ್ನು ನೀಡಿ, ಚೆಕ್‌ಬುಕ್ಕನ್ನು 04.03.2024 ರಂದು ಪಡೆದಿರುವುದಾಗಿ ತಿಳಿದು ಬಂದಿರುತ್ತದೆ. ಈ ಶಿವಕುಮಾರ್ ಎಂಬ ವ್ಯಕ್ತಿ ನಿಜವಾಗಿ ವಾಲ್ಮೀಕಿ ನಿಗಮದ ಸಿಬ್ಬಂದಿಯೆ? ಎಂಬ ಬಗ್ಗೆ ಬ್ಯಾಂಕಿನ ಮ್ಯಾನೇಜರ್ ತಿಳಿದುಕೊಳ್ಳುವ ಪ್ರಯತ್ನವನ್ನೆ ಮಾಡಲಿಲ್ಲ.

14) ನಿರ್ದೇಶಕರ ಮಂಡಳಿ ಸಭೆ ದಿನಾಂಕ;30-3-2024 ರಂದು ನಡೆಯಿತೆಂದು ಬ್ಯಾಂಕಿಗೆ ತಿಳಿಸಲಾಗಿದೆಯೆಂಬಂತೆ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಆದರೆ ಚುನಾವಣೆಯ ಕೋಡ್ ಆಫ್ ಕಂಡಕ್ಟ್ ಇರುವಾಗ ಯಾವ ಸಭೆ ನಡೆಯಲು ಹೇಗೆ ಸಾಧ್ಯ?

15) ಚುನಾವಣಾ ಸಂದರ್ಭದಲ್ಲಿ ಇಷ್ಟು ದೊಡ್ಡ ಪ್ರಮಾಣದ ವ್ಯವಹಾರಗಳು ನಡೆಯುವಾಗ ಆದಾಯ ತೆರಿಗೆ ಇಲಾಖೆಯವರು ಬ್ಯಾಂಕನ್ನು ಬ್ಯಾಂಕನ್ನು ಕೇಳಲಿಲ್ಲವೆ? ಬ್ಯಾಂಕಿನವರು ಚುನಾವಣಾ ಆಯೋಗದ ಗಮನಕ್ಕೆ ತರಬೇಕಾಗಿಲ್ಲ. ಯಾಕೆ ತರಲಿಲ್ಲ? ಬ್ಯಾಂಕಿನ ಮ್ಯಾನೇಜರ್ ಆದಿಯಾಗಿ ಅನೇಕ ಅಧಿಕಾರಿ, ಸಿಬ್ಬಂದಿಗಳು ವಾಲ್ಮೀಕಿ ನಿಗಮದ ಅಧಿಕಾರಿ ಸಿಬ್ಬಂದಿ ಮತ್ತು ಹೊರಗಿನ ಖಾಸಗಿ Fraud ಮಾಡುವ ವ್ಯಕ್ತಿಗಳು ಸೇರಿ ಇದು ಮಾಡಿರುವ ಹುನ್ನಾರ ಎಂದು ವ್ಯಕ್ತವಾಗುತ್ತದೆ. ತನಿಖೆಯಿಂದ ಈ ಎಲ್ಲಾ ಅಂಶಗಳು ಬಯಲಾಗುತ್ತವೆ.

16) ನಿಗಮದವರು ಹೊಸ ಖಾತೆ ತೆರೆಯಬೇಕಾದರೆ, ಖಾತೆ ವರ್ಗಾವಣೆ ಮಾಡಬೇಕಾದರೆ ಆರ್ಥಿಕ ಇಲಾಖೆಯ ಗಮನಕ್ಕೆ ತರಬೇಕು, ಅನುಮತಿ ಪಡೆದುಕೊಳ್ಳಬೇಕು. ಆದರೆ ಈ ಯಾವ ಕೆಲಸವನ್ನೂ ಮಾಡಿಲ್ಲ. ನೇರವಾಗಿ ಖಾತೆಯ ವಿವರವನ್ನು ಖಜಾನೆ-2 ರಲ್ಲಿ ಅಪ್ ಲೋಡ್ ಮಾಡಿದ್ದಾರೆ. ದಿನಾಂಕ: 19.03.2024 ರಂದು ಡಿಡಿಓ ಕಛೇರಿ, ಅಂದರೆ ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಇಲಾಖೆಯ ವ್ಯವಸ್ಥಾಪಕರು ಹೊಸ ಬ್ಯಾಂಕ್ ಖಾತೆಯನ್ನು ಕೆ-2 ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಇದನ್ನು ಡಿ.ಡಿ.ಓ.ರವರು (ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಇಲಾಖೆ) ಅನುಮೋದಿಸಿದ್ದಾರೆ. ಡಿ.ಡಿ.ಒ.ರವರ ಜವಾಬ್ದಾರಿಯ ಮೇಲೆ ದಿನಾಂಕ 25-2-2024 ರಂದು 43.33 ಕೋಟಿ ರೂಪಾಯಿಗಳನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂಜಿ ರಸ್ತೆಯ ಶಾಖೆಗೆ ಉಳಿತಾಯ ಖಾತೆಗೆ ವರ್ಗಾಯಿಸಲಾಗಿದೆ. ವರ್ಷದ ಕಡೆಯಲ್ಲಿ ಆಯವ್ಯಯದಲ್ಲಿ ಕಲ್ಪಿಸಿದ ಅನುದಾನವನ್ನು ಎಲ್ಲರಿಗೂ ಬಿಡುಗಡೆ ಮಾಡುವ ಹಾಗೆಯೇ ಈ ಖಾತೆಗೂ ಹಣ ಬಿಡುಗಡೆಯಾಗಿದೆ. ಯೂನಿಯನ್ ಬ್ಯಾಂಕು ಕೂಡ ರಾಷ್ಟ್ರೀಕೃತ ಬ್ಯಾಂಕೆ, ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಕಳ್ಳತನ ನಡೆದಿದೆ.

ಅಶೋಕ್ ಅವರು ನಿಗಮಕ್ಕೆ ಹಣ ಯಾಕೆ ಬಿಡುಗಡೆ ಮಾಡಿದ್ದು ಎಂದು ಕೇಳಿದ್ದಾರೆ. ಹಣ ವರ್ಷ ವರ್ಷವೂ ಬಿಡುಗಡೆಯಾಗಲೇಬೇಕು. ಇಲ್ಲದಿದ್ದರೆ ಲ್ಯಾಪ್ಸ್ ಆಗುತ್ತದೆ. ವಿಚಾರ ಇರುವುದು ಹಣ ಯಾಕೆ ಬಿಡುಗಡೆ ಮಾಡಿದ್ದು ಎಂಬುದಲ್ಲ. ಬಿಡುಗಡೆ ಮಾಡಿದ ಹಣವನ್ನು ಹೇಗೆ ಬಳಕೆ ಮಾಡಲಾಗುತ್ತದೆ ಎಂಬುದು ಮುಖ್ಯ. ಬಿಡುಗಡೆ ಮಾಡಿದ ಹಣಕ್ಕೆ ನಾನು ಟ್ರಸ್ಟಿ ಎಂಬ ನೈತಿಕತೆ ಪ್ರತಿಯೊಬ್ಬರಿಗೂ ಇರಬೇಕಾಗುತ್ತದೆ. ಕಳ್ಳತನ ಮಾಡಿ ಎಂದು ನಾವು ಹಣ ಬಿಡುಗಡೆ ಮಾಡುತ್ತೇವಾ? ಆದರೆ ಕಳ್ಳತನ ಮಾಡಿದ್ದಾರೆ. ಕಳ್ಳತನ ಮಾಡಿದವರು ಯಾರೇ ಆಗಿದ್ದರೂ ಕಳ್ಳರೆ, ಕಳ್ಳರನ್ನು ಈ ಸರ್ಕಾರವು ಸಹಿಸುವುದಿಲ್ಲ. ಬಿಜೆಪಿಯವರು ಇಮ್ಯುನಿಟಿ ಬೂಸ್ಟರ್ ನೀಡಿದ ಹಾಗೆ ನಾವು ನೀಡುವುದಿಲ್ಲ.

18) ಯಾವುದೇ ಸಂದರ್ಭದಲ್ಲಿ ಕಳ್ಳರು ಏಕಾಏಕಿ ಹುಟ್ಟುವುದಿಲ್ಲ. ಅವರು ಪ್ರೊಫೆಶನಲ್ ಆಗಬೇಕಾದರೆ ಅವರಿಗೆ ಹಿಂದೆ ಬಹಳ ಇಮ್ಯುನಿಟಿ ಸಿಕ್ಕಿರುತ್ತದೆ. ಹಾಗಾಗಿ ಕಳ್ಳರು ಎಲ್ಲಿಂದ ಪ್ರಾರಂಭವಾದರು? ಹೇಗೆ ಪ್ರಾರಂಭವಾದರು? ಅವರನ್ನು ಬೆಳೆಸಿದವರು ಯಾರು? ಎಂಬುದೆಲ್ಲ ಬಹಳ ಮುಖ್ಯವಾದ ಸಂಗತಿಗಳು. ಈ ಎಲ್ಲವುಗಳನ್ನು ತನಿಖಾ ಸಂಸ್ಥೆಗಳು ಗಮನದಲ್ಲಿಟ್ಟುಕೊಂಡು ತನಿಖೆ ನಡೆಸಬೇಕಾಗಿದೆ.

19) ಈ ವಿಷಯದಲ್ಲಿ ಆರೋಪಿಗಳಾಗಿರುವ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ 2017-18 ನೇ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆಯಲ್ಲಿ ಜಿಲ್ಲಾ ವ್ಯವಸ್ಥಾಪಕರಾಗಿರುವ ಸಂದರ್ಭದಲ್ಲಿ ಈ ವಾಲ್ಮೀಕಿ ನಿಗಮದಲ್ಲಿ ಮಾಡಿದ ಮಾದರಿಯಲ್ಲಿ 4.96 ಕೋಟಿಗೂ ಹೆಚ್ಚು ಅವ್ಯವಹಾರ ನಡೆಸಿದ್ದ ಆರೋಪದ ಮೇಲೆ ಅಮಾನತ್ತಾಗಿ ಇಲಾಖಾ ವಿಚಾರಣೆ ಪ್ರಾರಂಭಿಸಲಾಗಿತ್ತು. ಆದರೆ, ಅವರನ್ನು ನಿಮ್ಮ ಸರ್ಕಾರ ಆರೋಪಮುಕ್ತಗೊಳಿಸಿ ಆದೇಶಿಸಿತ್ತು.

20) ಹಾಗಿದ್ದರೆ, ಈ ಪದ್ಮನಾಭನನ್ನು ಆರೋಪಮುಕ್ತಗೊಳಿಸಿದ್ದಾಗ ಅಧಿಕಾರದಲ್ಲಿ ಬಿಜೆಪಿ ಸರ್ಕಾರವೆ ಇತ್ತು. ಹಾಗಾಗಿ ಆರೋಪ ಮುಕ್ತಗೊಳಿಸಿ ಅವನಿಗೆ ಇನ್ನೂ ದೊಡ್ಡ ದರೋಡೆ ಮಾಡಲು ಇಮ್ಯುನಿಟಿಯನ್ನು ಒದಗಿಸಿಕೊಟ್ಟಿದ್ದು ಬಿಜೆಪಿ ಸರ್ಕಾರವೇ ಅಲ್ಲವೆ? ಬಿಜೆಪಿ ಸರ್ಕಾರದ ಅಧೀನದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿಗಳು ಪ್ರಕರಣವನ್ನು ಸರಿಯಾಗಿ ನಿಭಾಯಿಸಿದ್ದರೆ ಆತ ಆರೋಪಮುಕ್ತನಾಗುತ್ತಿದ್ದನೆ?

21) ಪರಿಶಿಷ್ಟ ಜಾತಿ/ ಪಂಗಡಗಳ, ಹಿಂದುಳಿದವರ, ರೈತರ, ಕಾರ್ಮಿಕರ, ರೈತರ, ಮಹಿಳೆಯರ ಏಳಿಗೆಗಾಗಿ ಅವರ ಬದುಕು ಸುಧಾರಿಸುವುದಕ್ಕಾಗಿ ನಮ್ಮ ಸರ್ಕಾರ ಯಾವುದೇ ತ್ಯಾಗಕ್ಕೂ ಸಿದ್ಧ. ಈ ವರ್ಗಗಳ ಕಲ್ಯಾಣಕ್ಕಾಗಿ ಮೀಸಲಿಟ್ಟ ಒಂದು ರೂಪಾಯಿಯನ್ನೂ ಕದಿಯಲು ಬಿಡುವುದಿಲ್ಲ. ದುರುಪಯೋಗವಾಗಲು ಬಿಡುವುದಿಲ್ಲ.

22) ಬಿ.ಜೆ.ಪಿ. ಸರ್ಕಾರದ ಅವಧಿಯಲ್ಲಿ ಅಸಂಖ್ಯಾತ ಹಗರಣಗಳು ನಡೆದಿವೆ. ಕೆಲವು ಮುಖ್ಯ ಹಗರಣಗಳ ಮಾಹಿತಿಯನ್ನು ಸದನದಲ್ಲಿ ಸದನದಲ್ಲಿ ಅನುಬಂಧ-2 ಅನುಬಂಧ-2 ರಲ್ಲಿಟ್ಟು ಮಂಡಿಸುತ್ತಿದ್ದೇನೆ. ತಿಂದವರು ತಿಂದುಕೊಂಡು ಹೋಗಲಿ ಎಂದು ಬಿಡುವುದಕ್ಕೆ ನಮ್ಮದು ಯಡಿಯೂರಪ್ಪನವರ ಸರ್ಕಾರವಲ್ಲ, ಬೊಮ್ಮಾಯಿಯವರ ಸರ್ಕಾರವೂ ಅಲ್ಲ. ಮೋದಿ ಸರ್ಕಾರವೂ ಅಲ್ಲ. ಯಾರೇ ತಪ್ಪೆಸಗಿದ್ದರೂ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ. We will not compromise with corruption.

23) ಕಳ್ಳರಿಗೆ ಇಮ್ಯುನಿಟಿ ಸಿಕ್ಕಾಗ ಮಾತ್ರ ಬಲಿತುಕೊಳ್ಳುತ್ತಾರೆಂದು ಆಗಲೆ ಹೇಳಿದೆ. ಹಿಂದಿನ ಇಬ್ಬರು ಮುಖ್ಯ ಮಂತ್ರಿಗಳ ಕಾಲದಲ್ಲಿ ಈ ಕಳ್ಳರನ್ನು ಮಟ್ಟ ಹಾಕಿದ್ದರೆ, ಅಥವಾ ಮೋದಿ ಸರ್ಕಾರ ಖದೀಮ ಬ್ಯಾಂಕ್ ಮ್ಯಾನೇಜರುಗಳನ್ನು ಮಟ್ಟ ಹಾಕಿದ್ದರೆ ಇಂದು ದೇಶದಲ್ಲಿ ಈ ರೀತಿಯ ಪ್ರಕರಣಗಳು ನಡೆಯುತ್ತಿದ್ದವೆ? ದೇಶದ ಎಷ್ಟೊಂದು ಬ್ಯಾಂಕುಗಳಲ್ಲಿ ಈ ರೀತಿಯ ಪ್ರಕರಣಗಳು ನಡೆದಿವೆ ಎಂಬ ಮಾಹಿತಿಯನ್ನು ಆರ್‌ಬಿಐ ಪ್ರಕಟಿಸಬೇಕು ಆಗ ಸತ್ಯಾಂಶ ಹೊರಬರುತ್ತದೆ.

24) ಕರ್ನಾಟಕದಲ್ಲಿ ಕಳೆದ 5-6 ವರ್ಷಗಳಲ್ಲಿ ಅನೇಕ ಬ್ಯಾಂಕುಗಳಲ್ಲಿ ಫ್ರಾಡುಗಳು ನಡೆದಿವೆ. ರಾಷ್ಟ್ರೀಕೃತ ಬ್ಯಾಂಕುಗಳು ಯಾರ ಅಧೀನದಲ್ಲಿವೆ? ಆ ಖದೀಮ ಮ್ಯಾನೇಜರುಗಳು ಯಾರ ಅಧೀನದಲ್ಲಿದ್ದಾರೆ? ಕೇಂದ್ರದ ಹಣಕಾಸು ಸಚಿವರ ಅಧೀನದಲ್ಲಿದ್ದಾರೆ ತಾನೆ? ಅಂತಿಮವಾಗಿ ಮೋದಿಯವರ ಅಧೀನದಲ್ಲಿದ್ದಾರೆ ತಾನೆ? ನಮ್ಮ ಜನರ ದುಡ್ಡನ್ನು ಹೇಗೆಂದರೆ ಹಾಗೆ ಲೂಟಿ ಮಾಡುವುದಕ್ಕಾ ಈ ಬ್ಯಾಂಕುಗಳು ಇರುವುದು?

25) ಇದೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಿಂದೆಯೂ ಹಗರಣಗಳಾಗಿವೆ. ಹಗರಣಗಳನ್ನು ಹೊರತರುವ ಕೆಲಸವನ್ನು ನಾವು ಮಾಡುತ್ತೇವೆ. ವಿವಿಧ ಆರೋಪಿಗಳಿಂದ 34.25 ಕೋಟಿ ಹಣ ವಸೂಲಿ ಮಾಡಲಾಗಿದೆ. ಇದುವರೆಗೆ ಸರ್ಕಾರವು 85,25,07,698 ರೂ. ಹಣವನ್ನು (ರೂ. 85.25 ಕೋಟಿ) ವಿವಿಧ ಹಂತಗಳಲ್ಲಿ ತನ್ನ ವಶಕ್ಕೆ ಪಡೆದಿದೆ. ಉಳಿದದ್ದನ್ನು ವಶಕ್ಕೆ ಪಡೆಯುವ ಕೆಲಸ ಮಾಡುತ್ತಿದೆ. ಈ ವಿವರನ್ನು ಅನುಬಂಧ-2 ರಲ್ಲಿಟ್ಟು ಮಂಡಿಸುತ್ತಿದ್ದೇನೆ. ನಿಮ್ಮ ಅವಧಿಯಲ್ಲಿ ನಡೆದಿರುವ ಹಗರಣಗಳಲ್ಲಿ ಎಷ್ಟು ಮೊತ್ತವನ್ನು ರಿಕವರಿ ಮಾಡಿದ್ದೀರಿ ಹೇಳಿ? ನಾವು ತಪ್ಪು ಮಾಡಿದವರನ್ನು ಜೈಲಿಗೂ ಕಳಿಸಿದ್ದೇವೆ. ಹಣವನ್ನೂ ವಾಪಸ್ಸು ತರುತ್ತಿದ್ದೇವೆ. ಆದರೆ ನೀವು ಕಳ್ಳರು ಇನ್ನಷ್ಟು ಕಳ್ಳರಾಗುವಂತೆ ಮಾಡಿದಿರಿ. ಲೂಟಿ ಮಾಡಿದ ಹಣವನ್ನೂ ವಾಪಸ್ಸು ತರಲಿಲ್ಲ.

26) ಅಂತಿಮವಾಗಿ, ಈಗಾಗಲೇ ಈ ಹಗರಣದ ತನಿಖೆಯನ್ನು ರಾಜ್ಯ ಸರ್ಕಾರವು CID, SIT ಗೆ ನೀಡಿ ಆದೇಶಿರುತ್ತದೆ. ಸಿ.ಬಿ.ಐ. ಹಾಗೂ ಇ.ಡಿ. ಸಂಸ್ಥೆಗಳೂ ಕೂಡ ತನಿಖೆ ನಡೆಸುತ್ತಿವೆ. ಈ ಹಗರಣದಲ್ಲಿ ಯಾರು ಯಾರು ಭಾಗಿಯಾಗಿದ್ದಾರೆ ಹಾಗೂ ನಿಗಮದ ಖಾತೆಯಿಂದ ಯಾರ ಖಾತೆಗಳಿಗೆ ಹಣ ವರ್ಗಾವಣೆಯಾಗಿರುತ್ತದೆ ಹಾಗೂ ಇದರ ಮೂಲ (Ultimate) ಫಲಾನುಭವಿಗಳು ಯಾರು ಎಂಬುದು ತನಿಖೆಯು ಪೂರ್ಣಗೊಂಡ ನಂತರವೇ ತಿಳಿಯುತ್ತದೆ. ಕಾರಣಕರ್ತರು ತನಿಖೆ ನಡೆಯುತ್ತಿರುವಾಗ ನಾನು ಯಾವುದೇ ವ್ಯಕ್ತಿಯ ಬಗ್ಗೆ ಸ್ಪಷ್ಟವಾಗಿ ಇವರೇ ಎಂದು ಹೇಳಿದರೆ ತಪ್ಪಾಗುತ್ತದೆ. ಹಾಗೂ ತನಿಖಾ ಸಂಸ್ಥೆಯ ತನಿಖೆಯನ್ನು ದಾರಿ ತಪ್ಪಿಸಿದಂತಾಗುತ್ತದೆ. ಆದುದರಿಂದ, ತನಿಖೆ ಮುಗಿಯುವವರೆಗೂ ಕಾಯಬೇಕಾಗುತ್ತದೆ. ತದನಂತರ ತನಿಖೆಯ ಫಲಿತಾಂತದ ಆಧಾರದ ಮೇಲೆ ತಪ್ಪಿಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಹಾಗೂ ನಿಗಮಕ್ಕೆ ಹಣ ವಾಪಸ್ಸು ಪಡೆಯುವ ಕೆಲಸ ಮಾಡಬೇಕಾಗುತ್ತದೆ.

27) ರಾಜ್ಯ ಸರ್ಕಾರವು ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಜೆ.ಜಿ. ಪದ್ಮನಾಭ, ಹಾಗೂ ಲೆಕ್ಕಾಧೀಕ್ಷಕ ಪರಶುರಾಮ್ ದುರ್ಗಣ್ಣನವರ್ ಇವರನ್ನು ಅಮಾನತ್ತು ಮಾಡಿದೆ. ಎಸ್.ಐ.ಟಿ. ಯು ಬಂಧಿಸಿ ಜೈಲಿಗೆ ಅಟ್ಟಿದೆ. ಇಲಾಖೆಯ ಸಚಿವರಾಗಿದ್ದ ನಾಗೇಂದ್ರ ಅವರು ರಾಜೀನಾಮೆ ನೀಡಿ ವಿಚಾರಣೆ ಎದುರಿಸುತ್ತಿದ್ದಾರೆ. ಅವರನ್ನು ಇ.ಡಿ. ಯು ಬಂಧಿಸಿದೆ. ಹಾಗೆಯೇ, ಬ್ಯಾಂಕಿನ ಸಿಬ್ಬಂದಿಗಳನ್ನು ಸಹ ಎಸ್.ಐ.ಟಿ. ಯವರೆ ಅರೆಸ್ಟ್ ಮಾಡಿ ಜೈಲಿಗೆ ಅಟ್ಟಿದ್ದಾರೆ.

28) ಈ ಹಗರಣದಲ್ಲಿ ಹಣಕಾಸು ಇಲಾಖೆಯ ಯಾವುದೇ ಪಾತ್ರ ಇರುವುದಿಲ್ಲ. ಹಣಕಾಸು ಇಲಾಖೆಯ ಆದೇಶದಂತೆ, ಆಯವ್ಯಯದಲ್ಲಿ ತಿಳಿಸಿದಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯು ನಿಗಮಕ್ಕೆ 4 ಕಂತುಗಳಲ್ಲಿ ಅನುದಾನ ಬಿಡುಗಡೆ ಮಾಡಿರುತ್ತದೆ. ಆಡಳಿತ ಇಲಾಖೆಯ ಆದೇಶದ ನಂತರ ಸಂಬಂಧಪಟ್ಟ DDO (Drawing and Disbursing Officer) (ನಿರ್ದೇಶಕರು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ) ಇವರು ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕೋರಿಕೆಯಂತೆ, ಖಜಾನೆಯಿಂದ ಹಣ ಸೆಳೆದು ನಿಗಮದ ಖಾತೆಗೆ ಜಮೆ ಮಾಡಿರುತ್ತಾರೆ. ಇದು ಇಲಾಖೆಯಲ್ಲಿ ಪ್ರತಿ ಕಂತಿನ ಹಣವನ್ನು ಸೆಳೆಯಲು ಇರುವಂತಹ ವಿಧಾನ (Procedure).

ಮಾನ್ಯ ವಿರೋಧ ಪಕ್ಷದ ನಾಯಕರು ಎನ್.ಟಿ.ಟಿ. ಮಾಡ್ಯೂಲ್ ಬಗ್ಗೆ ಪ್ರಸ್ತಾಪಿಸಿದ್ದಾರೆ. ಅದರಿಂದ ಎಲ್ಲಾ ಬ್ಯಾಂಕ್ ಖಾತೆಗಳಲ್ಲಿ ನಡೆಯುವ ಟ್ರಾನ್ಸಾಕ್ಷನ್ ಆರ್ಥಿಕ ಇಲಾಖೆಗೆ ತಿಳಿಯುವುದರಿಂದ ಈ ಹಗರಣದ ಬಗ್ಗೆ ಮಾಹಿತಿ ಇದ್ದರೂ ಆರ್ಥಿಕ ಇಲಾಖೆ ಏನೂ ಮಾಡಿರುವುದಿಲ್ಲವೆಂದು ಆರೋಪಿಸಿದ್ದಾರೆ. ಆದರೆ, ಎನ್.ಟಿ.ಟಿ. ಮಾಡ್ಯೂಲ್‌ನ್ನು 2022 ರಲ್ಲಿ ಜಾರಿ ಮಾಡಲಾಗಿದೆ. ಇದರಲ್ಲಿ ದಾಖಲಾಗಿರುವ ಎಲ್ಲಾ ಬ್ಯಾಂಕ್ ಖಾತೆಗಳಲ್ಲಿ ಆಯಾ ದಿನ ಎಷ್ಟು ಹಣ ಬ್ಯಾಲೆನ್ಸ್ ಇದೆ ಎಂದು ಮಾಹಿತಿ ಖಜಾನೆಗೆ ಲಭ್ಯವಾಗುತ್ತದೆ. ಈ ಮಾಹಿತಿಯನ್ನು ಖಜಾನೆಯಿಂದ ಹಣ ಬಿಡುಗಡೆಗೊಳಿಸಲು ಓಪನಿಂಗ್ ಬ್ಯಾಲೆನ್ಸ್ ನಿರ್ಧಿಷ್ಟಪಡಿಸಲು ನೆರವಾಗುತ್ತದೆ. ಆಧಾರದ ಮೇಲೆ ಹೊಸದಾಗಿ ಹಣ ಬಿಡುಗಡೆಗೊಳಿಸಲು ನಿರ್ಧಾರ ಮಾಡಲಾಗುವುದು. ಇದನ್ನು ಹೊರತುಪಡಿಸಿ ಯಾವುದೇ ಖಾತೆಯಲ್ಲಿರುವ ಪ್ರತಿದಿನದ ವಹಿವಾಟಿನ ಮಾಹಿತಿ ಬ್ಯಾಂಕ್‌ಗಳಿಂದ ಆರ್ಥಿಕ ಇಲಾಖೆಗೆ ಲಭ್ಯವಾಗುವುದಿಲ್ಲ.

29) ವಿರೋಧ ಪಕ್ಷದವರು ನಿಗಮದಲ್ಲಿ ನಡೆದಿರುವ ಹಗರಣದ ಕುರಿತು ಮಾತನಾಡುವಾಗ ಮುಖ್ಯಮಂತ್ರಿಗಳನ್ನು, ಆರ್ಥಿಕ ಇಲಾಖೆಯನ್ನು ಗುರಿ ಮಾಡುತಿದ್ದಾರೆ. ಆದರೆ, ರಾಜ್ಯದಲ್ಲಿ ಹಗರಣಗಳ ಸರಮಾಲೆಯನ್ನೇ ನಡೆಸಿರುವ ಯೂನಿಯನ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಪಂಜಾಬ್ ನ್ಯಾಷನಲ್ ಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಹಾಗೂ ಇನ್ನಿತರೆ ಬ್ಯಾಂಕುಗಳು ಯಾರ ಅಧೀನದಲ್ಲಿ ಬರುತ್ತವೆ? ವಿರೋಧ ಪಕ್ಷದವರಿಗೆ ಅರ್ಥವಾಗದಿದ್ದರೆ ಬಿಡಿಸಿ ಹೇಳುತ್ತೇನೆ. ಇವೆಲ್ಲವೂ ರಾಷ್ಟ್ರೀಕೃತ ಬ್ಯಾಂಕುಗಳು, ಕೇಂದ್ರ ಸರ್ಕಾರದ ಹಣಕಾಸು ಇಲಾಖೆಯ ಅಧೀನದಲ್ಲಿ ಬರುತ್ತವೆ. ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವರಾಗಿದ್ದಾರೆ. ದೇಶದಲ್ಲಿ ಹೆಚ್ಚು ಬ್ಯಾಂಕಿಂಗ್ ಹಗರಣಗಳು ಪ್ರಾರಂಭವಾಗಿದ್ದೇ ಕಳೆದ 6-7 ವರ್ಷಗಳಿಂದ ಉದಾಹರಣೆಗೆ, ಗುರು ರಾಘವೇಂದ್ರ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಆಗಿರುವ ಬೃಹತ್ ಹಗರಣದ ಕುರಿತು ಯಾಕೆ ಕೇಂದ್ರ ಸರ್ಕಾರ ಯಾವುದೇ ಕ್ರಮವಹಿಸದೆ ಸುಮ್ಮನಿದೆ? ಬಡ ಠೇವಣಿದಾರರಿಗೆ ಮರಳಿಸಲಾಗಿದೆ? ಬ್ಯಾಂಕಿನ ಆಡಳಿತ ಮಂಡಳಿಯಲ್ಲಿದ್ದ ಬಲಿಷ್ಠ ರಾಜಕಾರಣಿಗಳಿಗೆ ಯಾವ ಶಿಕ್ಷೆ ಆಯಿತು? ಜಯನಗರ, ಬಸವನಗುಡಿಯ ಜನ ಮನೆಮನೆಗಳಲ್ಲಿ, ಬೀದಿ ಬೀದಿಗಳಲ್ಲಿ ಹಗರಣದಲ್ಲಿ ಭಾಗವಹಿಸಿದ್ದವರು ವಿಧಾನಸೌಧ, ಪಾರ್ಲಿಮೆಂಟಿಗೂ ಹೋಗಿದ್ದಾರೆ ಎಂದು ಮಾತನಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ಸೆಲೆಕ್ಟಿವ್ ಅಪ್ರೋಚ್‌ನಿಂದಾಗಿ ಹಗರಣಗಳು ಹೆಚ್ಚಾಗುತ್ತಿವೆಯೇ ಹೊರತು,
ಕಡಿಮೆಯಾಗುತ್ತಿಲ್ಲ. ವಿರೋಧ ಪಕ್ಷಗಳ ಮುಖಂಡರ ಮೇಲೆ ಹಗರಣಗಳ ಆರೋಪಗಳಿದ್ದರೆ ಅವರನ್ನು ಬಿ.ಜೆ.ಪಿ. ಗೆ ಸೇರಿಸಿಕೊಂಡ ನಂತರವೇ ಹಗರಣ ಮುಕ್ತ ಮಾಡಲಾಗುತ್ತಿದೆ. ಹೀಗಿದ್ದರೆ ಯಾವ ಕಳ್ಳರಿಗೆ ತಾನೆ ಭಯ ಹುಟ್ಟಲು ಸಾಧ್ಯ? ವಿರೋಧ ಪಕ್ಷದವರನ್ನು ನೋಡಿದರೆ ಇಲ್ಲಿ ಗಂಟೆಗಟ್ಟಲೆ ನಿಂತು ನೈತಿಕತೆಯ ಬಗ್ಗೆ ಪಾಠ ಮಾಡುತ್ತಾರೆ.

30) ನಾನು ಪದೆ ಪದೆ ಈ ಸದನಕ್ಕೂ ನಾಡಿನ ಜನರಿಗೂ ಭರವಸೆ ನೀಡಬಯಸುತ್ತೇನೆ. ನಾವು ಪರಿಶಿಷ್ಟ ಜಾತಿ, ಪಂಗಡ, ದಮನಿತ ಸಮುದಾಯದವರಿಗೆ ಒದಗಿಸಿದ ಪ್ರತಿ ಪೈಸೆಯನ್ನೂ ಖರ್ಚು ಮಾಡುತ್ತೇವೆ ಮತ್ತು ಗುಣಾತ್ಮಕವಾಗಿ ವಿನಿಯೋಗಿಸುತ್ತೇವೆ ಹಾಗೂ ಈ ಪ್ರಕರಣದಲ್ಲಿ ಭಾಗಿಯಾಗಿರುವ ಕಳ್ಳರು ಯಾರೇ ಇದ್ದರೂ ಅವರನ್ನು ನಿರ್ಧಾಕ್ಷಿಣ್ಯವಾಗಿ ಶಿಕ್ಷಿಸುತ್ತೇವೆ. ಬಿ.ಜೆ.ಪಿ. ಅವಧಿಯ ಎಲ್ಲ ಹಗರಣಗಳನ್ನೂ ತನಿಖೆಗೆ ಒಪ್ಪಿಸುತ್ತೇವೆ.

ಇದನ್ನೂ ಓದಿ: Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

Continue Reading

ಕರ್ನಾಟಕ

Assembly Session: ಸದನದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅಬ್ಬರ; ತಲೆ ನಿಯಂತ್ರಣದಲ್ಲಿ ಇಲ್ವಾ ಎಂದ ಸ್ಪೀಕರ್‌!

Assembly Session: ಸದನದಲ್ಲಿ ವಿಪಕ್ಷ ನಾಯಕರ ವಿರುದ್ಧ ಮುಗಿಬಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ರನ್ನು ನಿಯಂತ್ರಿಸಲು ಸ್ಪೀಕರ್‌ ಯು.ಟಿ.ಖಾದರ್‌ ಹೈರಾಣಾದರು. ಕುಳಿತುಕೊಳ್ಳಿ ಎಂದು ಹೇಳುತ್ತಿದ್ದರೂ ಮಾತು ಕೇಳದ ಹಿನ್ನೆಲೆಯಲ್ಲಿ ಸ್ಪೀಕರ್‌ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

VISTARANEWS.COM


on

Assembly Session
Koo

ಬೆಂಗಳೂರು: ಬಿಜೆಪಿ ವಿರುದ್ಧ ಸದನದಲ್ಲೂ (Assembly Session) ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ವಾಗ್ದಾಳಿ ಮುಂದುವರಿಸಿದ್ದಾರೆ. ಮಳೆ ಹಾನಿ, ಜನರ ಸಮಸ್ಯೆಗಳ ಬಗ್ಗೆ ಮಾತನಾಡಿ ಎಂಬ ಸೂಚನೆ ನಡುವೆಯೂ, ಬಿಜೆಪಿ ಅವಧಿಯ ಹಗರಣಗಳ ಪಟ್ಟಿ ಓದುತ್ತಾ ಪ್ರದೀಪ್ ಈಶ್ವರ್ ಸದ್ದು ಮಾಡಿದ್ದರಿಂದ ಅವರನ್ನು ಮನವೊಲಿಸಲು ಸ್ಪೀಕರ್‌ ಹೈರಾಣಾದರು. ಕುಳಿತುಕೊಳ್ಳಿ ಎಂದು ಹೇಳುತ್ತಿದ್ದರೂ ಮಾತು ಕೇಳದ ಹಿನ್ನೆಲೆಯಲ್ಲಿ “ಏನಾಗಿದೆ ಇವರಿಗೆ, ಕೈಗೆ ಕಬ್ಬಿಣ ಏನಾದರೂ ಕೊಡ್ರಿ, ತಲೆ ನಿಯಂತ್ರಣದಲ್ಲಿ ಇಲ್ವಾ?” ಎಂದು ಸ್ಪೀಕರ್‌ ಯು.ಟಿ.ಖಾದರ್ ಅಸಮಾಧಾನ ಹೊರಹಾಕಿದ್ದಾರೆ.

ಸ್ಪೀಕರ್‌ ಯು.ಟಿ.ಖಾದರ್ ಒತ್ತಾಯ ಮಾಡುತ್ತಿದ್ದರೂ ಮಾತು ನಿಲ್ಲಿಸದಿದ್ದರಿಂದ ಕೊನೆಗೆ ಪ್ರದೀಪ್ ಈಶ್ವರ್ ಬಳಿ ಸರ್ಕಾರಿ ಮುಖ್ಯ ಸಚೇತಕ ಅಶೋಕ್ ಪಟ್ಟಣ್ ಹೋಗಿ ಕುಳಿತುಕೊಳ್ಳುವಂತೆ ಕೈ ಮುಗಿದು ಮನವಿ ಮಾಡಿದರು. ನಂತರ ಪ್ರದೀಪ್ ಬಳಿ ಹೋಗಿ ಕುಳಿತುಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು. ಆಗ ಪ್ರದೀಪ್ ಈಶ್ವರ್‌ಗೆ ಬಿಜೆಪಿ ಸದಸ್ಯರು ಛೇಡಿಸಿದರು.

ಪ್ರದೀಪ್ ಈಶ್ವರ್ ಹೇಡಿ ಅಲ್ಲಾ, ಪ್ರದೀಪ್ ಈಶ್ವರ್ ಯು ಕೆನ್ ಡು ಇಟ್ ಎಂದು ಬಿಜೆಪಿ ಶಾಸಕರು ಕೂಗುತ್ತಾ ಛೇಡಿಸಿದರು. ಈ ವೇಳೆ ಬಿಜೆಪಿ ಶಾಸಕರು ಹಾಗೂ ಪ್ರದೀಪ್ ಈಶ್ವರ್ ನಡುವೆ ಮಾತಿನ ಚಕಮಕಿ ಉಂಟಾಯಿತು. ಆಗ ಪ್ರದೀಪ್ ಈಶ್ವರ್‌ನ ಸಮಾಧಾನ ಮಾಡಲು ಶಾಸಕ ನಾರಾಯಣ ಸ್ವಾಮಿ ಧಾವಿಸಿ ಹೋದರು.

ಈ ವೇಳೆ ವಿಪಕ್ಷನಾಯಕ ಆರ್‌.ಅಶೋಕ್‌ ಗರಂ ಆಗಿ, ಏನು ಬೆದರಿಕೆ ಹಾಕುತ್ತೀರಾ? ಪ್ರದೀಪ್ ಈಶ್ವರ್‌ನ ಕಂಟ್ರೋಲ್ ಮಾಡಕ್ಕೆ ಆಗಲ್ಲವೇ? ಕಾಂಗ್ರೆಸ್‌ನ ಮಾನ ಮರ್ಯಾದೆ ಎಲ್ಲ ಹೊರಟೇ ಹೋಯಿತು. ಪ್ರದೀಪ್ ಈಶ್ವರ್ ಯು ಕೆನ್ ಡು ಇಟ್ ಎಂದು ಕೂಗಿದರು.

ಗದ್ದಲದ ನಡುವೆಯೇ ಬಿಜೆಪಿ ವಿರುದ್ಧ ತರೀಕೆರೆ ಶಾಸಕ ಜಿ.ಎಚ್. ಶ್ರೀನಿವಾಸ್ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸಿದರು. ಬಿಜೆಪಿಯವರನ್ನು ಸದನದಿಂದ ಹೊರಗೆ ಹಾಕಿ ಎಂದು ಶ್ರೀನಿವಾಸ ಆಗ್ರಹಿಸಿದರು. ಈ ವೇಳೆ ಬಿಜೆಪಿ ಅವಧಿಯ ಹಗರಣಗಳ ಪಟ್ಟಿಯನ್ನು ಪ್ರದೀಪ್ ಈಶ್ವರ್ ಓದಿದರು. ಈ ವೇಳೆ ಬಿಜೆಪಿ ಸದಸ್ಯರು ಬಂಡಲ್ ಬಂಡಲ್ ಎಂದು ಕೂಗುತ್ತಾ ಸದನದ ಬಾವಿಯಿಂದಲೇ ಸನ್ನೆ ಮಾಡಿ ಕಿಚಾಯಿಸಿದರು.

ಈ ವೇಳೆ ಬಿಜೆಪಿ ಶಾಸಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರದೀಪ್ ಈಶ್ವರ್, ಸ್ಪೀಕರ್ ಮನವಿಗೂ ಜಗ್ಗದೇ ಬಿಜೆಪಿ ವಿರುದ್ಧ ಹರಿಹಾಯ್ದರು. ಕೊನೆಗೆ ಬಲವಂತವಾಗಿ ಪ್ರದೀಪ್ ಈಶ್ವರ್‌ರನ್ನು ಕಾಂಗ್ರೆಸ್ ಶಾಸಕರಾದ ಎಸ್.‌ಎನ್. ನಾರಾಯಣಸ್ವಾಮಿ ಮತ್ತು ಜಿ.ಎಚ್. ಶ್ರೀನಿವಾಸ್ ಸುಮ್ಮನಿರಿಸಿದರು. ಕುಳಿತುಕೊಂಡರೂ ಮತ್ತೆ ಬಿಜೆಪಿ ವಿರುದ್ಧ ಪ್ರದೀಪ್ ಈಶ್ವರ್ ವಾಗ್ದಾಳಿ ನಡೆಸುತ್ತಿದ್ದರು. ಆಗ ಪ್ರದೀಪ್ ನಡೆಗೆ ಸ್ಪೀಕರ್‌ ಕೂಡ ತೀವ್ರ ಅಸಮಾಧಾನ ಹೊರಹಾಕಿದರು.

ಇದನ್ನೂ ಓದಿ | Karnataka Job Reservation: ಕನ್ನಡಿಗರಿಗೆ ಮೀಸಲಾತಿ ನೀಡಲು ಕರವೇ ಆಗ್ರಹ; ʼಫೋನ್ ಪೇʼ ಬಾಯ್ಕಾಟ್ ಅಭಿಯಾನ ಶುರು!

ಈ ವೇಳೆ ಸರ್ಕಾರ ಗೂಂಡಾಗಿರಿ ಮಾಡುತ್ತಿದೆ, ಆಡಳಿತ ಪಕ್ಷದವರಿಗೇ ಮಾತನಾಡಲು ಬಿಡುತ್ತಿಲ್ಲ. ಪ್ರದೀಪ್ ಈಶ್ವರ್ ಟ್ಯಾಲೆಂಟ್ ಏನು? ಆದರೆ, ಅವರಿಗೆ ಮಾತನಾಡಲೂ ಸರ್ಕಾರ ಬಿಡುತ್ತಿಲ್ಲ ಎಂದ ವಿಪಕ್ಷ ನಾಯಕ ಅಶೋಕ್ ಸದನದಲ್ಲಿ ಲೇವಡಿ ಮಾಡಿದರು.

Continue Reading

ಪ್ರಮುಖ ಸುದ್ದಿ

Lokayukta Raid: ಲೋಕಾಯುಕ್ತ ದಾಳಿಯ ವೇಳೆ ಚಿನ್ನಾಭರಣ ಪಕ್ಕದ ಮನೆಗೆಸೆದ ಅಖ್ತರ್‌ ಅಲಿ!

Lokayukta Raid: ಪಕ್ಕದ ಮನೆಯ ಕಿಟಕಿಗೆ ಅಖ್ತರ್ ಆಲಿ ಮನೆ ಗೋಡೆ ಕನೆಕ್ಟ್‌ ಆಗಿದ್ದು, ಅಧಿಕಾರಿಗಳು ಮನೆಗೆ ಎಂಟ್ರಿ ನೀಡುತ್ತಿದ್ದಂತೆ ಪಕ್ಕದ ಮನೆಯ ಕಿಟಕಿಯೊಳಗೆ ಚಿನ್ನ ಇದ್ದ ಬ್ಯಾಗ್ ಎಸೆದಿದ್ದ ಅಖ್ತರ್ ಆಲಿ. ಪಕ್ಕದ ಮನೆಯ ಕಿಟಕಿಗೆ ಹತ್ತಿರದಲ್ಲೇ ಅಖ್ತರ್ ಆಲಿ ಮನೆಯ ಮೊದಲ ಅಂತಸ್ತು ಇದೆ. ಅಲ್ಲಿಂದ ಪಕ್ಕದ ಮನೆ ಕಿಟಕಿ ಒಳಗೆ ಬ್ಯಾಗ್‌ಗೆ ಚಿನ್ನ ತುಂಬಿ ಅಖ್ತರ್ ಆಲಿ ಎಸೆದಿದ್ದ.

VISTARANEWS.COM


on

lokayukta raid akhtar ali
ಅಖ್ತರ್‌ ಅಲಿ ಮನೆಯಿಂದ ವಶಪಡಿಸಿಕೊಂಡ ಚಿನ್ನಾಭರಣ ಮತ್ತು ನಗದು
Koo

ಬೆಂಗಳೂರು: ಇಂದು ಬೆಳಗ್ಗೆ ರಾಜ್ಯದ 54 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayukta Raid) ನಡೆಸಿದ್ದು, ಈ ಸಂದರ್ಭ ಬೆಂಗಳೂರಿನಲ್ಲಿ ಅಖ್ತರ್‌ ಅಲಿ ಎಂಬ ಅಧಿಕಾರಿಯ ಮನೆಗೆ ಅಧಿಕಾರಿಗಳು ದಾಳಿ ನಡೆಸಿದಾಗ ಆತ ಚಿನ್ನಾಭರಣಗಳನ್ನು (Gold Jewelry) ಪಕ್ಕದ ಮನೆಗೆ (neighbour house) ಎಸೆದು ಪಾರಾಗಲು ನೋಡಿದ್ದಾರೆ! ಇದನ್ನೂ ಲೋಕಾಯುಕ್ತ ಅಧಿಕಾರಿಗಳು (Lokayukta Officers) ವಶಪಡಿಸಿಕೊಂಡಿದ್ದಾರೆ.

ಭೂಮಾಪನ ಇಲಾಖೆ ಡೆಪ್ಯೂಟಿ ಕಂಟ್ರೋಲರ್ ಅಖ್ತರ್ ಅಲಿ ಮನೆಗೆ ದಾಳಿ ನಡೆಸಿದಾಗ ಈ ಘಟನೆ ನಡೆಯಿತು. ಪಕ್ಕದ ಮನೆಯ ಕಿಟಕಿಗೆ ಅಖ್ತರ್ ಆಲಿ ಮನೆ ಗೋಡೆ ಕನೆಕ್ಟ್‌ ಆಗಿದ್ದು, ಅಧಿಕಾರಿಗಳು ಮನೆಗೆ ಎಂಟ್ರಿ ನೀಡುತ್ತಿದ್ದಂತೆ ಪಕ್ಕದ ಮನೆಯ ಕಿಟಕಿಯೊಳಗೆ ಚಿನ್ನ ಇದ್ದ ಬ್ಯಾಗ್ ಎಸೆದಿದ್ದ ಅಖ್ತರ್ ಆಲಿ. ಪಕ್ಕದ ಮನೆಯ ಕಿಟಕಿಗೆ ಹತ್ತಿರದಲ್ಲೇ ಅಖ್ತರ್ ಆಲಿ ಮನೆಯ ಮೊದಲ ಅಂತಸ್ತು ಇದೆ. ಅಲ್ಲಿಂದ ಪಕ್ಕದ ಮನೆ ಕಿಟಕಿ ಒಳಗೆ ಬ್ಯಾಗ್‌ಗೆ ಚಿನ್ನ ತುಂಬಿ ಅಖ್ತರ್ ಆಲಿ ಎಸೆದಿದ್ದ.

ಬ್ಯಾಗ್ ಎಸೆದದ್ದನ್ನು ನೋಡಿ ನೆರೆ ಮನೆ ನಿವಾಸಿ ಖುದ್ದು ಅಧಿಕಾರಿಗಳನ್ನು ಕರೆದು ತೋರಿಸಿದ್ದಾರೆ. ಕೂಡಲೇ ಹೋಗಿ ಪರಿಶೀಲನೆ ಮಾಡಿದಾಗ ಬ್ಯಾಗ್‌ನಲ್ಲಿ ಚಿನ್ನ ಇರುವುದು ಪತ್ತೆಯಾಗಿದೆ. ಕೂಡಲೇ ಬ್ಯಾಗನ್ನು ಲೋಕಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಬ್ಯಾಗನ್ನು ಅಖ್ತರ್ ಆಲಿ ಮನೆಗೆ ತಂದು ಪರಿಶೀಲನೆ ಮಾಡಿದಾಗ, ಒಂದು ಬ್ಯಾಗ್ ತುಂಬಾ ಚಿನ್ನದ ಒಡವೆಗಳು ಇರುವುದು ಪತ್ತೆಯಾಗಿದೆ. ಸದ್ಯ ಸಿಕ್ಕಿರುವ ಚಿನ್ನ ತೂಕ ಹಾಕಲು ಸಿಬ್ಬಂದಿಯನ್ನು ಕರೆಸಲಾಗಿದೆ. ಅಖ್ತರ್‌ ಅಲಿ ಅಕ್ಕಪಕ್ಕದ ಮನೆಯಲ್ಲೂ ಅಧಿಕಾರಿಗಳ ತಂಡ ತಲಾಶ್ ಮಾಡಿದೆ.

ದಾಳಿ ವೇಳೆ ಮನೆಯಲ್ಲೇ ಇದ್ದ ಅಖ್ತರ್ ಆಲಿಯ ಬಳಿಯಿಂದ ಸದ್ಯ ಕೆಲವು ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದು ತಂಡ ಪರಿಶೀಲನೆ ಮಾಡುತ್ತಿದೆ. ಕೆಲವು ದಾಖಲೆಗಳನ್ನೂ ಪಕ್ಕದ ಮನೆಯ ಕಿಟಕಿಯ ಮೂಲಕ ಅಲಿ ತಳ್ಳಿರುವ ಶಂಕೆ ಇದೆ. ಹೀಗಾಗಿ ಪಕ್ಕದ ಮನೆಯನ್ನೂ ಶೋಧ ನಡೆಸಲಾಗಿದೆ. ಇದುವರೆಗೆ ಅಖ್ತರ್ ಅಲಿ ಮನೆಯಲ್ಲಿ 25 ಲಕ್ಷ ರೂ. ನಗದು, 2.20 ಕೆಜಿ ಚಿನ್ನಾಭರಣ, 2 ಕೆಜಿ ಬೆಳ್ಳಿ ವಸ್ತುಗಳು, ಐವತ್ತಕ್ಕೂ ಹೆಚ್ಚು ದುಬಾರಿ ವಾಚ್‌ಗಳು, ಲಕ್ಷಾಂತರ ಮೌಲ್ಯದ ಡೈಮಂಡ್ ಆಭರಣಗಳು ಪತ್ತೆಯಾಗಿವೆ.

ಲೋಕಾಯುಕ್ತ ಎಸ್‌ಪಿ ವಂಶಿಕೃಷ್ಣ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ʼಇವತ್ತು ಬೆಂಗಳೂರು ಸಿಟಿ ಘಟಕದಿಂದ ಮೂರು ಆಫೀಸರ್ಸ್ ಮನೆ ದಾಳಿ ಮಾಡಲಾಗಿದೆ. ಅಖ್ತರ್ ಅವರ ಮನೆಯಲ್ಲೂ ಚಿನ್ನಾಭರಣ ಸಿಕ್ಕಿದೆ. ಈಗಾಗಲೇ 2.2 ಕೆಜಿ ಚಿನ್ನಾಭರಣ, 25 ಲಕ್ಷ ಹಣ ಸಿಕ್ಕಿದೆ. ಅವರು ಚಿನ್ನದ ಬ್ಯಾಗನ್ನು ಪಕ್ಕದ ಮನೆಗೆ ಎಸೆದಿದ್ದಾರೆ. ಅದನ್ನು ಕೂಡ ನಮ್ಮ ಟೀಂ ರಿಕವರಿ ಮಾಡಿದೆ. ಸದ್ಯ ಇನ್ನೂ ಪರಿಶೀಲನೆ ಮುಂದುವರೆದಿದೆ. ಬಿ.ಕೆ ರಾಜ ಹಾಗೂ ರಮೇಶ್ ಕುಮಾರ್ ಅವರ ಮನೆಯಲ್ಲಿ ಪರಿಶೀಲನೆ ಮುಂದುವರೆದಿದೆʼ ಎಂದಿದ್ದಾರೆ.

ಯಾವ ಅಧಿಕಾರಿಗಳ ಮೇಲೆ ದಾಳಿ?

ತುಮಕೂರು – ಮುದ್ದುಕುಮಾರ್ ಅಡಿಷನಲ್ ಡೈರೆಕ್ಟರ್ ಇಂಡಸ್ಟ್ರಿ ಆ್ಯಂಡ್ ಕಾಮರ್ಸ್ ಡಿಪಾರ್ಟ್ಮೆಂಟ್
ಯಾದಗಿರಿ – ಬಲವಂತ್ ಯೋಜನ ನಿರ್ದೇಶಕ , ಯಾದಗಿರಿ ಜಿಲ್ಲಾ ಪಂಚಾಯತ್
ಬೆಂಗಳೂರು ಗ್ರಾಮಾಂತರ – ಸಿದ್ದಪ್ಪ ಹಿರಿಯ ಪಶು ವೈದ್ಯ ದೊಡ್ಡಬಳ್ಳಾಪುರ
ಬೆಂಗಳೂರು ಗ್ರಾಮಾಂತರ ನರಸಿಂಹ ಮೂರ್ತಿ ಕೆ – ಮುನ್ಸಿಪಲ್ ಅಡ್ಮಿನಿಸ್ಟ್ರೇಷನ್ ಸರ್ವಿಸ್ ಕಮೀಷನರ್ ಹೆಬ್ಬಗೋಡಿ
ಬೆಂಗಳೂರು ಸಿಟಿ – ಬಿವಿ ರಾಜ ಎಫ್‌ಡಿಎ ಕೆಐಎಡಿಬಿ
ಬೆಂಗಳೂರು ಸಿಟಿ – ರಮೇಶ್ ಕುಮಾರ್ ಜಂಟಿ ಆಯುಕ್ತ ವಾಣಿಜ್ಯ ತೆರಿಗೆ ಇಲಾಖೆ
ಬೆಂಗಳೂರು ಸಿಟಿ- ಅಕ್ತರ್ ಅಲಿ – ಡೆಪ್ಯೂಟಿ ಕಂಟ್ರೋಲರ್ ಮಾಪನಾ ಇಲಾಖೆ
ಶಿವಮೊಗ್ಗ – ಸಿ ನಾಗೇಶ್ – ಅಂತರಗಂಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಭದ್ರಾವತಿ
ಶಿವಮೊಗ್ಗ ಪ್ರಕಾಶ್ – ಡೆಪ್ಯೂಟಿ ಡೈರೆಕ್ಟರ್ – ತೋಟಗಾರಿಕಾ ಇಲಾಖೆ
ಬೆಂಗಳೂರು ಸಿಟಿ – ಚೇತನ್ ಕುಮಾರ್ – ಕಾರ್ಮಿಕ‌ ಇಲಾಖೆ ಅಧಿಕಾರಿ ಮಂಡ್ಯ ವಿಭಾಗ
ಬೆಂಗಳೂರು ಸಿಟಿ – ಆನಂದ್ ಸಿ ಎಲ್ – ಕಮೀಷನರ್ ಮಂಗಳೂರು ಮಹಾನಗರ ಪಾಲಿಕೆ
ಬೆಂಗಳೂರು ಸಿಟಿ – ಮಂಜುನಾಥ್ ಟಿ ಆರ್ – ಎಫ್ ಡಿಎ ಬೆಂಗಳೂರು‌ ನಾರ್ತ್ ಸಬ್ ಡಿವಿಷನ್ ಆಫೀಸರ್

ಇದನ್ನೂ ಓದಿ: Lokayukta Raid: ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಶಾಕ್‌, ರಾಜ್ಯಾದ್ಯಂತ ಲೋಕಾಯುಕ್ತ ದಾಳಿ

Continue Reading

ಕರ್ನಾಟಕ

DK Shivakumar: ಬಿಎಸ್‌ವೈ, ಬೊಮ್ಮಾಯಿ ಕಾಲದಲ್ಲಿ 300 ಕೋಟಿಗೂ ಹೆಚ್ಚು ಅಕ್ರಮ: ಡಿಕೆಶಿ ಆರೋಪ

DK Shivakumar: ಬಿಜೆಪಿಯ ಅಕ್ರಮಗಳನ್ನು ತನಿಖೆ ಮಾಡುತ್ತೇವೆ. ಅಕ್ರಮಗಳ ಹಿಂದೆ ಇದ್ದ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳ ಬಗ್ಗೆ ಜನರಿಗೆ ತಿಳಿಸುತ್ತೇವೆ ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: “ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು 300 ಕೋಟಿ ರೂ.ಗಳಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ 87 ಕೋಟಿ ರೂ., ಎಪಿಎಂಸಿಯ 47 ಕೋಟಿ ರೂ., 2019ರಲ್ಲಿ ಅಂಗವಿಕಲ ಕಲ್ಯಾಣ ಇಲಾಖೆಯ 22 ಕೋಟಿ ರೂ., ಅಂಬೇಡ್ಕರ್ ನಿಗಮದ ಕೆನರಾ ಬ್ಯಾಂಕ್ ಅಲ್ಲಿನ ಹಣ ಜೂನ್ 2018 ರಲ್ಲಿ 5 ಕೋಟಿ ರೂ., ದೇವರಾಜ್ ಅರಸು ನಿಗಮದ 47 ಕೋಟಿ ರೂ., ಮಾಲಿನ್ಯ ನಿಯಂತ್ರಣ ಮಂಡಲಿಯ 10 ಕೋಟಿ ರೂ. ಹಾಗೂ ಕೆಐಡಿಬಿಯ ಹಣ ಸೇಲಂಗೆ ಅಕ್ರಮವಾಗಿ ವರ್ಗಾವಣೆಯಾಗಿದೆ” ಎಂದು ಆರೋಪಿಸಿದರು.

ಬಿಜೆಪಿಯ ಅಕ್ರಮಗಳನ್ನು ತನಿಖೆ ನಡೆಸುವಿರಾ ಎಂದು ಪ್ರಶ್ನಿಸಿದಾಗ “ಖಂಡಿತವಾಗಿಯೂ ತನಿಖೆ ನಡೆಸುತ್ತೇವೆ. ಆದರೆ ಎಲ್ಲವೂ ದಾಖಲೆಯಲ್ಲಿ ಇರಬೇಕು ಎನ್ನುವ ಕಾರಣಕ್ಕೆ ಸದನದಲ್ಲಿ ಎಲ್ಲಾ ದಾಖಲೆಗಳನ್ನು ಬಯಲು ಮಾಡುತ್ತೇವೆ. ಅಕ್ರಮಗಳ ಹಿಂದೆ ಇರುವ ಯಾವ ಮಂತ್ರಿ, ಅಧ್ಯಕ್ಷರು, ಮುಖ್ಯಮಂತ್ರಿಗಳು ಇದ್ದರು ಎಂದು ಜನರಿಗೆ ತಿಳಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ | Karnataka Assembly Live: ವಿಧಾನಸಭೆಯಲ್ಲಿ ಶಾಸಕರಿಗೆ ಮಧ್ಯಾಹ್ನ ಮಲಗಲು ವ್ಯವಸ್ಥೆ ಮಾಡಿಸಿದ ಸ್ಪೀಕರ್!

“ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ ರೂ., ಮಂತ್ರಿ ಸ್ಥಾನಕ್ಕೆ 100 ಕೋಟಿ ರೂ. ನೀಡಬೇಕು ಎನ್ನುವ ಬಸನಗೌಡ ಪಾಟೀಲ ಯತ್ನಾಳ ಅವರ ಆರೋಪ ಹಾಗೂ ಭೋವಿ ನಿಗಮದ ಅಕ್ರಮದ ಬಗ್ಗೆ ಗೂಳಿಹಟ್ಟಿ ಶೇಖರ್ ಮಾಡಿದ ಆರೋಪಗಳ ಮೇಲೆ ಏಕೆ ಬಿಜೆಪಿ ತನಿಖೆ ನಡೆಸಲಿಲ್ಲ” ಎಂದು ಮರುಪ್ರಶ್ನಿಸಿದರು.

“ಯಾವುದೇ ಭ್ರಷ್ಟಾಚಾರದ ಮೇಲೆ ತನಿಖೆ ನಡೆಯುತ್ತಿದ್ದರೆ ಆ ವಿಚಾರದಲ್ಲಿ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಅವಕಾಶವಿಲ್ಲ. ಆದರೆ ನಾವು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಬೆಲೆಕೊಟ್ಟು ಸದನದಲ್ಲಿ ಚರ್ಚೆ ಅವಕಾಶ ಮಾಡಿಕೊಟ್ಟಿದ್ದೇವೆ. ಅಕ್ರಮ ಎಸಗಿದ್ದರೆ ಯಾವುದೇ ಅಧಿಕಾರಿ, ಮಂತ್ರಿ, ಶಾಸಕ, ಯಾರೇ ಆಗಿರಲಿ ಅವರನ್ನು ರಕ್ಷಿಸುವ ಉದ್ದೇಶ ನಮಗಿಲ್ಲ” ಎಂದು ಹೇಳಿದರು.

ಇದನ್ನೂ ಓದಿ | Sameer Nigam: 25,000 ಜನರಿಗೆ ಉದ್ಯೋಗ ಕೊಟ್ಟಿದ್ದೇನೆ, ನನ್ನ ಮಕ್ಕಳು ರಾಜ್ಯದಲ್ಲಿ ಕೆಲಸ ಮಾಡಬಾರದಾ?: ಫೋನ್‌ಪೇ ಸಿಇಒ ಆಕ್ರೋಶ

“ವಾಲ್ಮೀಕಿ ನಿಗಮದ 86 ಕೋಟಿ ರೂ. ಹಣ ತೆಲಂಗಾಣಕ್ಕೆ ಅಕ್ರಮವಾಗಿ ವರ್ಗಾವಣೆಯಾದ ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡಿದ್ದೇವೆ. ತನಿಖಾ ತಂಡವು ಸುಮಾರು 36 ಕೋಟಿ ರೂ.ಗಳಷ್ಟು ಹಣವನ್ನು ವಶಕ್ಕೆ ಪಡೆದುಕೊಂಡಿದೆ. ಬ್ಯಾಂಕ್ ಅಧಿಕಾರಿ ಒಂದೇ ದಿನದಲ್ಲಿ ಕೋಟ್ಯಂತರ ರೂಪಾಯಿ ಸಾಲ ಮಂಜೂರು ಮಾಡಿದ್ದಾನೆ. ಇದಕ್ಕೆ ಕೇಂದ್ರ ಹಣಕಾಸು ಸಚಿವರನ್ನು ಹೊಣೆಗಾರರನ್ನಾಗಿ ಮಾಡಲು ಆಗುತ್ತದೆಯೇ? ನಾವು ಪ್ರತಿಪಕ್ಷಗಳಿಗೆ ಈ ವಿಚಾರವಾಗಿ ಉತ್ತರ ಕೊಡಬೇಕಾಗಿದೆ” ಎಂದು ಖಾರವಾಗಿ ತಿಳಿಸಿದರು.

Continue Reading
Advertisement
Paris Olympics 2024
ಪ್ರಮುಖ ಸುದ್ದಿ5 mins ago

Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್ ಭದ್ರತೆಗಾಗಿ ಭಾರತೀಯ ಸೇನೆಯ ಶ್ವಾನದಳ!

Karnataka assembly live cm siddaramaiah
ಪ್ರಮುಖ ಸುದ್ದಿ7 mins ago

Karnataka Assembly Live: ಇಡಿಗೆ ಹೆದರುವುದಿಲ್ಲ, ನಿಮ್ಮನ್ನು ಬಲಿ ಹಾಕಿಯೇ ಸಿದ್ಧ: ವಾಲ್ಮೀಕಿ ಹಗರಣ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ

Wedding FilmerVishal Punjabi recent chat
ಬಾಲಿವುಡ್18 mins ago

Vishal Punjabi: ಮದುವೆಯಾದ 2 ತಿಂಗಳಿಗೆ ಪತ್ನಿಗೆ ಮೋಸ ಮಾಡಿ, ಇನ್ನೊಬ್ಬಳ ಜತೆ ಈ ನಟ ಬೆತ್ತಲೆಯಾಗಿ ಸಿಕ್ಕಿಬಿದ್ದಿದ್ದನಂತೆ!

Supreme Court
ದೇಶ22 mins ago

Supreme Court: ಕ್ರಿಮಿನಲ್ ಮೊಕದ್ದಮೆಯಿಂದ ರಾಜ್ಯಪಾಲರಿಗೆ ವಿನಾಯಿತಿ; ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಸಮ್ಮತಿ

Paris Olympics 2024:
ಪ್ರಮುಖ ಸುದ್ದಿ34 mins ago

Paris Olympics 2024 : ಸಿಗರೇಟ್​ ಸೇದಿದ ಕಾರಣಕ್ಕೆ ಒಲಿಂಪಿಕ್ಸ್​ ಸರ್ಧೆಯ ಅವಕಾಶ ಕಳೆದುಕೊಂಡ ಜಪಾನ್​ ಮಹಿಳಾ ಜಿಮ್ನಾಸ್ಟಿಕ್ ಪಟು

School Transfer Certificate
ದೇಶ35 mins ago

School Transfer Certificate: ಶಾಲಾ ಪ್ರವೇಶಕ್ಕೆ ವರ್ಗಾವಣೆ ಪ್ರಮಾಣಪತ್ರದ ಅಗತ್ಯ ಇಲ್ಲ; ಹೈಕೋರ್ಟ್‌ ಮಹತ್ವದ ತೀರ್ಪು

Road Accident
ಮೈಸೂರು35 mins ago

Road Accident : ಮೈಸೂರಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಛಿದ್ರಗೊಂಡ ದಂಪತಿ; ಎಎಸ್‌ಐಗೆ ಬಡಿದ ಅಪರಿಚಿತ ವಾಹನ

Khalistani Terrorist
ಕ್ರೈಂ45 mins ago

Khalistani Terrorist: ಖಲಿಸ್ತಾನಿ ಭಯೋತ್ಪಾದಕ ಲಾಂಡಾನ ಪ್ರಮುಖ ಸಹಾಯಕ ಬಲ್ಜೀತ್ ಸಿಂಗ್ ಬಂಧನ

Suryakumar Yadav
ಕ್ರಿಕೆಟ್1 hour ago

Suryakumar Yadav: ಸೂರ್ಯಕುಮಾರ್​ಗೆ ನಾಯಕತ್ವ ಒಲಿದದ್ದು ಕಾಪು ಮಾರಿಯಮ್ಮನ ಆಶೀರ್ವಾದದಿಂದ!

Trinity Golf Champions League
ಪ್ರಮುಖ ಸುದ್ದಿ1 hour ago

Trinity Golf Champions League : ಕಪಿಲ್ ದೇವ್​ ನೇತೃತ್ವದ ಟ್ರಿನಿಟಿ ಗಾಲ್ಫ್ ಚಾಂಪಿಯನ್ಸ್ ಲೀಗ್​​ನ 2ನೇ ಆವೃತ್ತಿಗೆ ಬೆಂಗಳೂರು ಆತಿಥ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ23 hours ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ4 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌