Naga Chaitanya and Sobhita Dhulipala date, viral pic deleted Naga Chaitanya: ಶೋಭಿತಾ-ನಾಗಚೈತನ್ಯ ಡೇಟಿಂಗ್‌ ಮಾಡಿರುವ ಫೋಟೊ ಇದ್ದಕ್ಕಿದ್ದಂತೆ ಮಾಯಾ! - Vistara News

South Cinema

Naga Chaitanya: ಶೋಭಿತಾ-ನಾಗಚೈತನ್ಯ ಡೇಟಿಂಗ್‌ ಮಾಡಿರುವ ಫೋಟೊ ಇದ್ದಕ್ಕಿದ್ದಂತೆ ಮಾಯಾ!

ಲಂಡನ್‌ (Naga Chaitanya) ರೆಸ್ಟೋರೆಂಟ್‌ನಲ್ಲಿ ದಂಪತಿ ಊಟ ಮಾಡುತ್ತಿರುವ ಹೊಸ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಫೋಟೊ ವೈರಲ್ ಆಗುತ್ತಿದ್ದಂತೆ ಬಾಣಸಿಗ ಸುರೇಂದರ್ ಮೋಹನ್ ಈಗ ಡಿಲೀಟ್ ಮಾಡಿದ್ದಾರೆ.

VISTARANEWS.COM


on

Naga Chaitanya and Sobhita Dhulipala date, viral pic deleted
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತೆಲುಗು ಸ್ಟಾರ್ ನಾಗ ಚೈತನ್ಯ (Naga Chaitanya) ಮತ್ತು ಬಾಲಿವುಡ್ ನಟಿ ಶೋಭಿತಾ ಧೂಲಿಪಾಲ (Sobhita Dhulipala ) ಅವರ ಡೇಟಿಂಗ್ ವದಂತಿಗಳು ಮತ್ತೊಮ್ಮೆ ಗಮನ ಸೆಳೆದಿವೆ. ಇದೀಗ ಜೋಡಿ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೊ ವೈರಲ್‌ ಆಗಿದೆ. ಲಂಡನ್‌ ರೆಸ್ಟೋರೆಂಟ್‌ನಲ್ಲಿ ದಂಪತಿ ಊಟ ಮಾಡುತ್ತಿರುವ ಹೊಸ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಫೋಟೊ ವೈರಲ್ ಆಗುತ್ತಿದ್ದಂತೆ ಬಾಣಸಿಗ ಸುರೇಂದರ್ ಮೋಹನ್ ಈಗ ಡಿಲೀಟ್ ಮಾಡಿದ್ದಾರೆ. ಈ ಕಾರಣದಿಂದಾಗಿ ಅನುಮಾನ ಹೆಚ್ಚಾಗುತ್ತಿದ್ದು ನೆಟ್ಟಿಗರು ಇಬ್ಬರ ಡೇಟಿಂಗ್ ಸುದ್ದಿ ಪಕ್ಕಾ ಎಂದು ಕಮೆಂಟ್ ಮಾಡಿದ್ದಾರೆ.

ಇಬ್ಬರು ಸಿಕ್ಕಿಬಿದ್ದಿದ್ದು ಆ ಹೋಟೆಲ್‌ನ ಬಾಣಸಿಗ ಸುರೇಂದರ್ ಮೋಹನ್ ಶೇರ್ ಮಾಡಿದ ಫೋಟೊದಿಂದ. ಶೋಭಿತಾ ಧೂಲಿಪಾಲ ಮೇಜಿನ ಮೇಲೆ ಹಿಂಭಾಗದಲ್ಲಿ ಕುಳಿತಿರುವುದನ್ನು ಕಾಣಬಹುದು. ಚಿತ್ರ ಫೆಬ್ರವರಿ 1ರಂದು ಹಂಚಿಕೊಳ್ಳಲಾಗಿದೆ. ಆದರೆ ಇದೀಗ ಅಭಿಮಾನಿಗಳು ಶೋಭಿತಾ ಅವರನ್ನು ಚಿತ್ರದಲ್ಲಿ ಗುರುತಿಸಿದ್ದಾರೆ.

ಚಿತ್ರದ ಜತೆಗೆ, ಬಾಣಸಿಗರು ಶೀರ್ಷಿಕೆಯಲ್ಲಿ ಹೀಗೆ ಬರೆದಿದ್ದಾರೆ, “ನಾಗಚೈತನ್ಯ ನಮ್ಮೊಂದಿಗೆ ಭೋಜನ ಮಾಡುವುದು ನಮಗೆ ಸಂತೋಷವಾಗಿದೆ. ನೀವು ಊಟವನ್ನು ಆನಂದಿಸಿದ್ದೀರಿʼ ಎಂದು ಬರೆದುಕೊಂಡಿದ್ದಾರೆ.

ಕಳೆದ ವರ್ಷ ನವೆಂಬರ್‌ನಲ್ಲಿಯೂ ನಾಗಚೈತನ್ಯ ಮತ್ತು ಶೋಭಿತಾ ಲಂಡಲ್‌ನಲ್ಲಿರುವ ಫೋಟೊ ವೈರಲ್ ಆಗಿತ್ತು. ಆ ಫೋಟೊಗಳು ಡೇಟಿಂಗ್ ವದಂತಿಗೆ ಪುಷ್ಟಿ ನೀಡಿತ್ತು. ಆದರೆ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಇಬ್ಬರ ಫೋಟೊಗಳನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಲಾಗಿದೆ, ಇದು ಫೇಕ್ ಎನ್ನುವ ಮಾತು ಕೇಳಿ ಬಂದಿತ್ತು.

ಇದನ್ನೂ ಓದಿ: Samantha Ruth Prabhu: ನಿಮ್ಮ ಕೆಲಸ ನೀವು ನೋಡಿಕೊಳ್ಳಿ ಎಂದು ಸಮಂತಾ ಹೇಳಿದ್ದು ಯಾಕೆ?

ಶೋಭಿತಾ ಧೂಲಿಪಾಲ ಯಾರು?

ಆಂಧ್ರ ಪ್ರದೇಶದ ಶೋಭಿತಾ ಧೂಲಿಪಾಲ ಅವರು ಮಾಡೆಲ್ ಆಗಿದ್ದವರು. ಇಲ್ಲಿಯವರೆಗೆ ತೆಲುಗು, ತಮಿಳು, ಹಿಂದಿ ಚಿತ್ರಗಳಲ್ಲಿ ನಟಿಸಿರುವ ಶೋಭಿತಾ 2016ರಲ್ಲಿ ರಮನ್ ರಾಘವ್ 2.0 ಸಿನಿಮಾದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಗೂಢಚಾರಿ, ದಿ ಬಾಡಿ, ಘೋಸ್ಟ್ ಸ್ಟೋರೀಸ್, ಕುರುಪ್, ಮೇಜರ್ ಮುಂತಾದ ಸಿನಿಮಾಗಳಲ್ಲಿ ಶೋಭಿತಾ ಧೂಲಿಪಾಲ ನಟಿಸಿದ್ದಾರೆ. ಪೊನ್ನಿಯಿನ್ ಸೆಲ್ವನ್: 1, ಸಿತಾರಾ, ಮಂಕಿ ಮ್ಯಾನ್ ಸಿನಿಮಾಗಳಲ್ಲಿಯೂ ಶೋಭಿತಾ ನಟಿಸಿದ್ದು, ಅವುಗಳು ರಿಲೀಸ್ ಆಗಬೇಕಿವೆ. 2013ರಲ್ಲಿ ಫೇಮಿನಾ ಮಿಸ್‌ ಇಂಡಿಯಾ ಅವಾರ್ಡ್‌ ಕೂಡ ಪಡೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಒಟಿಟಿ

The Goat Life: ಪೃಥ್ವಿರಾಜ್ ಸುಕುಮಾರನ್ ಅಭಿನಯದ ʻಆಡುಜೀವಿತಂʼ ಒಟಿಟಿ ರಿಲೀಸ್‌ ಎಲ್ಲಿ?

The Goat Life ಆಡು ಜೀವಿತಂʼ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ.

VISTARANEWS.COM


on

The Goat Life OTT Release Date Fix
Koo

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ಮಲಯಾಳಂ ಚಿತ್ರ ʻಆಡುಜೀವಿತಂʼ (The Goat Life) ಬಿಡುಗಡೆಯಾದ ದಿನವೇ ಒಳ್ಳೆಯ ಗಳಿಕೆ ಕಂಡಿತ್ತು. ಪೃಥ್ವಿರಾಜ್ ಸುಕುಮಾರನ್ ಮುಖ್ಯ ಭೂಮಿಕೆಯಯ ಈ ಸಿನಿಮಾ 150 ಕೋಟಿ ರೂ. ಗಳಿಕೆ ಕಂಡಿತ್ತು. ನೈಜ ಘಟನೆಗಳನ್ನು ಆಧರಿಸಿ ಬರೆದ ಕಾದಂಬರಿಯನ್ನು ತೆರೆಗೆ ತಂದು ಚಿತ್ರತಂಡ ಸಕ್ಸಸ್ ಕಂಡಿತ್ತು. ಸಾಕಷ್ಟು ಜನ ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಕಾಯುತ್ತಿದ್ದಾರೆ. ಡಿಸ್ನಿ ಪ್ಲಸ್ ಹಾಟ್‌ಸ್ಟರ್‌ಗೆ ಚಿತ್ರದ ಒಟಿಟಿ ರೈಟ್ಸ್ ಮಾರಾಟವಾಗಿದೆ ಎನ್ನುವ ಚರ್ಚೆ ನಡೀತಿದೆ.

ಬ್ಲೆಸ್ಸಿ ನಿರ್ದೇಶನದ ಈ ಚಿತ್ರ ಆರು ದಿನಗಳಲ್ಲಿ ಭಾರತದಲ್ಲಿ ಸುಮಾರು 40.4 ಕೋಟಿ ರೂ. ಸಂಗ್ರಹಿಸಿತ್ತು. ಮೊದಲ ದಿನ, ʻಆಡುಜೀವಿತಂʼ ಭಾರತದಲ್ಲಿ ಒಟ್ಟು ಎಲ್ಲಾ ಭಾಷೆಗಳು ಸೇರಿದಂತೆ 7.6 ಕೋಟಿ ರೂ. ಸಂಗ್ರಹಿಸಿದರೆ, ಎರಡನೇ ದಿನ ದಿನ 6.25 ಕೋಟಿ ರೂ. ಮೂರನೇ ದಿನ 7.75 ಕೋಟಿ ರೂ. ನಾಲ್ಕು ಮತ್ತು ಐದನೇ ದಿನ 8.7 ಕೋಟಿ ರೂ. ಮತ್ತು ಆರನೇ ದಿನ 4. 5 ಕೋಟಿ ರೂ. ವ್ಯವಹಾರ ಮಾಡಿತ್ತು.

ಆಡು ಜೀವಿತಂʼ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ ಕಥೆ ಆಧರಿಸಿದ ಚಿತ್ರವಾಗಿದೆ.

ಆಡು ಜೀವಿತಂʼ ಚಿತ್ರದ ಕಥೆ ವಲಸಿಗರ ಸಮಸ್ಯೆ ಸುತ್ತ ಸುತ್ತುತ್ತದೆ. ದುಡಿಮೆಗಾಗಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಪಟ್ಟಂತ ಕಷ್ಟಗಳು ಆತನ ಪಾಸ್‌ಪೋರ್ಟ್‌ ಕಸಿದು ಆತನಿಗೆ ಕೊಟ್ಟಂತಹ ಹಿಂಸೆಗಳು, ಆ ಬಿಸಿಲಿನ ಮರುಭೂಮಿಯಲ್ಲಿ ಆತ ಅನುಭವಿಸಿದ ಸಂಕಷ್ಟಗಳ ಕಥನವೇ ಈ ಆಡು ಜೀವಿತಂ.

ಇದನ್ನೂ ಓದಿ: Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

ಒಟಿಟಿಗೆ ಯಾವಾಗ?

ಮೇ 10ಕ್ಕೆ ಸಿನಿಮಾ ಒಟಿಟಿ ಬರುತ್ತದೆ ಎನ್ನಲಾಗುತ್ತಿದೆ. ಮೇ 26ಕ್ಕೆ ಡಿಸ್ನಿ ಹಾಟ್‌ಸ್ಟರ್‌ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಎನ್ನುವ ಚರ್ಚೆ ಕೂಡ ಇದೆ. ಆದರೆ ಯಾವಾಗ ಎನ್ನುವುದು ಶೀಘ್ರದಲ್ಲೇ ರಿವೀಲ್ ಆಗಲಿದೆ.

ಏನಿದೆ ಆಡುಜೀವಿತಂ ಸಿನಿಮಾ ಕಥೆ?

ಹಣ ಸಂಪಾದಿಸಲು ಸೌದಿ ಅರೇಬಿಯಾಕ್ಕೆ ಹೋದ ಭಾರತೀಯ ವಲಸೆ ಕಾರ್ಮಿಕ ನಜೀಬ್ ಮುಹಮ್ಮದ್ ನಿಜ ಜೀವನದ ಘಟನೆ ಇದು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ವಿಧಿಯ ವೈಚಿತ್ರ್ಯದಿಂದಾಗಿ ನಜೀಬ್‌ ಗುಲಾಮನ ಬದುಕನ್ನು ಬದುಕಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅವನು ಮರುಭೂಮಿಯ ಮಧ್ಯದಲ್ಲಿ ಮೇಕೆಗಳನ್ನು ಮೇಯಿಸಬೇಕಾಗುತ್ತದೆ. ಆಡು ಜೀವಿತಂ ಅಂದರೆ ಆಡಿನ ಬದುಕು ಅಂಥ ಅರ್ಥ. ಇಂಗ್ಲಿಷ್‌ನಲ್ಲಿ ಇದರ ಟೈಟಲ್‌ GOAT LIFE ಎಂದಿದೆ.

ಪರ್ಷಿಯನ್ ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಮನೆಗೆ ಕಳುಹಿಸುವಷ್ಟು ಹಣ ಸಂಪಾದಿಸುವುದು ನಜೀಬ್ ಅವರ ಕನಸಾಗಿತ್ತು. ಆದರೆ, ಸೌದಿ ಮರುಭೂಮಿಯ ಮಧ್ಯದಲ್ಲಿ ಆಡುಗಳನ್ನು ಮೇಯಿಸುವ ಗುಲಾಮಗಿರಿಯ ಕೆಲಸಕ್ಕೆ ಒಡ್ಡಿಕೊಳ್ಳಬೇಕಾದ ಅನಿವಾರ್ಯತೆ ಏನು ಬಂತು? ಅವನು ಕೊನೆಗೂ ತನ್ನನ್ನು ತಾನು ಹೇಗೆ ಬಂಧಮುಕ್ತಗೊಳಿಸಿಕೊಳ್ಳುತ್ತಾನೆ ಎನ್ನುವುದೊಂದು ದೊಡ್ಡ ಹೋರಾಟದ ಕಥೆ. ಅವನು ಸೆರೆಮನೆ ಸೇರಿ, ಅಲ್ಲಿಂದ ತಪ್ಪಿಸಿಕೊಳ್ಳುವ ಸಾಹಸ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ.

ಈ ಸಿನಿಮಾಕ್ಕಾಗಿ ನಿರ್ದೇಶಕ ಬ್ಲೆಸ್ಸಿ ಅವರು ತುಂಬಾ ಅಧ್ಯಯನ ಮಾಡಿದ್ದಾರೆ. ಈ ಕಥೆ ಅವರನ್ನು ಕಳೆದ 15 ವರ್ಷಗಳಿಂದ ಕೊರೆಯುತ್ತಿತ್ತಂತೆ. ಅಂತೆಯೇ ಅವರ ಕನಸಿನಲ್ಲಿ ಬಂದ ಚಿತ್ರದಂತೆ ತಮ್ಮನ್ನು ಮಾರ್ಪಾಡು ಮಾಡಿಕೊಂಡು ಹೊಸ ವ್ಯಕ್ತಿಯ ರೂಪದಲ್ಲಿ ಹೊಸ ಲುಕ್‌ನಲ್ಲಿ ಬಂದಿದ್ದಾರೆ ನಟ ಪೃಥ್ವಿರಾಜ್ ಸುಕುಮಾರನ್.

Continue Reading

ಸಿನಿಮಾ

Cauvery Theatre: ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ʻಕಾವೇರಿʼ ಥಿಯೇಟರ್! ಮುಂದೇನು?

Cauvery Theatre: ಡಾ.ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಸೇರಿದಂತೆ ಕನ್ನಡದ ದಿಗ್ಗಜರ ಸಿನಿಮಾಗಳು ಇದೇ ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡಿತ್ತು. ಸಿಂಗಲ್ ಸ್ಕ್ರೀನ್ ಆಗಿದ್ದರೂ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಈ ಚಿತ್ರಮಂದಿರದಲ್ಲಿ ಇತ್ತು. ಈ ವರ್ಷ ಜನವರಿ 11ಕ್ಕೆ 50 ವರ್ಷ ಪೂರೈಸಿ, ಗೋಲ್ಡನ್ ಜ್ಯುಬಿಲಿ ಸಂಭ್ರಮಾಚರಣೆಯಲ್ಲಿತ್ತು. ಕಮಲ್ ಹಾಸನ್ ಅವರ ಇಂಡಿಯನ್ (1996) 100 ದಿನ, ಕಾಂತಾರ 50-ದಿನಗಳ ಪ್ರದರ್ಶನ ಕಂಡಿದೆ.

VISTARANEWS.COM


on

Cauvery Theatre bengaluru another single screen close
Koo

ಬೆಂಗಳೂರು: ಒಟಿಟಿ , ಮಲ್ಟಿಪ್ಲೆಕ್ ಇತ್ಯಾದಿ ಕಾರಣಗಳಿಂದ ಇತ್ತೀಚೆಗೆ ಚಿತ್ರಮಂದಿರಗಳು ಮುಚ್ಚುತ್ತಿವೆ. ಕಲೆಕ್ಷನ್ ಕೂಡ ಕಡಿಮೆಯಾಗಿದ್ದು, ಹಲವು ಚಿತ್ರಮಂದಿರಗಳು ಮುಚ್ಚುವ ನಿರ್ಧಾರಕ್ಕೆ ಬಂದಿದೆ. 1974ರ ಜನವರಿ 11ರಂದು ಡಾ. ರಾಜ್‌ಕುಮಾರ್ ನಟನೆಯ ‘ಬಂಗಾರದ ಪಂಜರ’ (Bangarada Panjara) ಸಿನಿಮಾ ಪ್ರದರ್ಶನದ ಮೂಲಕ ʻʻಕಾವೇರಿʼʼ ಚಿತ್ರಮಂದಿರ ಶುರುವಾಗಿತ್ತು. 50 ವರ್ಷದ ಇತಿಹಾಸ ಹೊಂದಿದ್ದ, ಬೆಂಗಳೂರಿನ ಅತಿದೊಡ್ಡ ಚಿತ್ರಮಂದಿರಗಳಲ್ಲಿ ಒಂದಾಗಿದ್ದ ಸ್ಯಾಂಕಿ ರಸ್ತೆಯ ʻಕಾವೇರಿʼ ಚಿತ್ರಮಂದಿರ ಈಗ ಶಾಶ್ವತವಾಗಿ ಮುಚ್ಚಿದೆ.

ಚಿತ್ರಮಂದಿರ ನಡೆಸುವುದು ಕಷ್ಟ ಎಂಬ ಕಾರಣಕ್ಕೆ ಮಾಲೀಕರು ಪ್ರದರ್ಶನ ನಿಲ್ಲಿಸಿದ್ದಾರೆ. ಆ ಜಾಗದಲ್ಲಿ ವಾಣಿಜ್ಯ ಕಟ್ಟಡ ನಿರ್ಮಾಣವಾಗಲಿದೆ ಎನ್ನಲಾಗಿದೆ. ಮೆಜೆಸ್ಟಿಕ್‌ನ ʻಕಪಾಲಿʼ ಚಿತ್ರಮಂದಿರದ ನಂತರ ಅತಿ ಹೆಚ್ಚು ಸಿಟ್ಟಿಂಗ್‌ ವ್ಯವಸ್ಥೆ ಇದ್ದ ಈ ಚಿತ್ರಮಂದಿರ ಆರಂಭವಾಗಿದ್ದಾಗ 1300ರಷ್ಟು ಸೀಟುಗಳ ವ್ಯವಸ್ಥೆ ಇತ್ತು. ಜತೆಗೆ ಮಿನಿ ಬಾಲ್ಕನಿ ಇದ್ದ ಕೆಲವೇ ಚಿತ್ರಮಂದಿರಗಳಲ್ಲಿ ಇದೂ ಒಂದಾಗಿತ್ತು.

ಇದನ್ನೂ ಓದಿ: Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

ಪರಭಾಷೆಯ ಸಿನಿಮಾಗಳು ಪ್ರದರ್ಶನ

ಇಲ್ಲಿ ಕನ್ನಡವೂ ಸೇರಿದಂತೆ ಹಿಂದಿ ಹಾಗೂ ಪರಭಾಷೆಯ ಸಿನಿಮಾಗಳು ಪ್ರದರ್ಶನ ಕಾಣುತ್ತಿದ್ದವು. ಡಾ. ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಸೇರಿದಂತೆ ಕನ್ನಡದ ದಿಗ್ಗಜರ ಸಿನಿಮಾಗಳು ಇದೇ ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡಿತ್ತು. ಸಿಂಗಲ್ ಸ್ಕ್ರೀನ್ ಆಗಿದ್ದರೂ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಈ ಚಿತ್ರಮಂದಿರದಲ್ಲಿ ಇತ್ತು. ಈ ಚಿತ್ರಮಂದಿರದಲ್ಲಿ ಸಿನಿಮಾದ ಚಿತ್ರೀಕರಣ ಕೂಡ ನಡೆದಿದೆ. ಪುನೀತ್ ರಾಜ್‌ಕುಮಾರ್ ಅಭಿನಯದ ‘ಪರಮಾತ್ಮ’ ಸಿನಿಮಾದ ಆರಂಭಿಕ ಸೀನ್ ಅನ್ನು ಇಲ್ಲಿಯೇ ಶೂಟಿಂಗ್ ಮಾಡಲಾಗಿತ್ತು.

ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲಿನ ವಿಶೇಷತೆಯಾಗಿತ್ತು. ಎಲ್ಲಾ ಭಾಷೆಗಳ ಸಿನಿಮಾ ಪ್ರದರ್ಶನ ನಡೆಯುತ್ತಿದ್ದು, ಉತ್ತರ ಬೆಂಗಳೂರಿಗರಿಗೆ ಇದೊಂದು ಸಾಂಸ್ಕೃತಿಕ ಸ್ಥಳವೇ ಆಗಿತ್ತು. ‘ಬಂಗಾರದ ಪಂಜರ, ‘ಶಂಕರಾಭರಣಂ’, ‘ದಿಲ್‌ವಾಲೆ ದುಲ್ಹನಿಯಾ ಲೇ ಜಾಯೆಂಗೆ’ ಸಿನಿಮಾಗಳು ಇಲ್ಲಿ 25 ವಾರ ಪ್ರದರ್ಶನ ಕಂಡಿದ್ದವು. ಈ ವರ್ಷ ಜನವರಿ 11ಕ್ಕೆ 50 ವರ್ಷ ಪೂರೈಸಿ, ಗೋಲ್ಡನ್ ಜ್ಯುಬಿಲಿ ಸಂಭ್ರಮಾಚರಣೆಯಲ್ಲಿತ್ತು. ಕಮಲ್ ಹಾಸನ್ ಅವರ ʼಇಂಡಿಯನ್ʼ (1996) 100 ದಿನ, ʼಕಾಂತಾರʼ 50 ದಿನಗಳ ಪ್ರದರ್ಶನ ಕಂಡಿದೆ. ಮುಂದೆ ಇಲ್ಲಿ ವಾಣಿಜ್ಯ ಕಟ್ಟಡ ತಲೆ ಎತ್ತುವ ಸಾಧ್ಯತೆ ಇದೆ. ಅದರಲ್ಲಿ ಮಲ್ಟಿ ಪ್ಲೆಕ್ಸ್‌ ಚಿತ್ರ ಮಂದಿರ ನಿರ್ಮಾಣ ಆಗುವ ಸಾಧ್ಯತೆಯೂ ಇದೆ.

Continue Reading

ಸ್ಯಾಂಡಲ್ ವುಡ್

Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

Ranjani Raghavan: ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿರುವ ಚಿತ್ರ. ಕನ್ನಡತಿ ಖ್ಯಾತಿಯ ʻರಂಜಿನಿ ರಾಘವನ್ʼ ನಾಯಕಿಯಾಗಿ ಜತೆಯಾಗಿದ್ದಾರೆ. ಈ ಹಿಂದೆ ರಂಗಿತರಂಗ, ʻಕಾಂತಾರʼ ಚಿತ್ರಗಳಲ್ಲಿ ತುಳುನಾಡಿನ ದೈವಾರಾಧನೆಯ ಕಥೆಯಿತ್ತು. ಆ ಎರಡು ಸಿನಿಮಾಗಳ ದೊಡ್ಡ ಮಟ್ಟದ ಗೆಲುವಿನ ಶಕ್ತಿಯೂ ಅದೇ. ಅಂಥಾದ್ದೊಂದು ನೆಲದ ಘಮಲಿನ ಕಥೆಯನ್ನೊಳಗೊಂಡಿರುವ ಚಿತ್ರ `ಸತ್ಯಂ’.

VISTARANEWS.COM


on

Ranjani Raghavan Starrer Sathyam Kannada Movie Gets UA Certificate
Koo

ಬೆಂಗಳೂರು: ಇದುವರೆಗೂ ಭಿನ್ನ ಪಥದ ಮೂಲಕ ತಮ್ಮದೇ ಆದ ಛಾಪು ಮೂಡಿಸಿರುವವರು ಅಶೋಕ್ ಕಡಬ. ಇದೀಗ ಅವರು ʻಸತ್ಯಂ’ ಚಿತ್ರದ ಮೂಲಕ ವಿಭಿನ್ನ ಕಥೆಯನ್ನು ಹೇಲ ಹೊರಟ್ಟಿದ್ದಾರೆ. ಈ ಹಿಂದೆ ಸತ್ಯಂ ಟೀಸರ್ ಬಿಕಡುಗಡೆಯಾದಾಗಲೇ ಭಾರಿ ವೀಕ್ಷಣೆಗಳು (Ranjani Raghavan) ಸಿಕ್ಕಿ, ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ಬಿಡುಗಡೆಯ ಹೊಸ್ತಿಲಿನಲ್ಲಿರುವ ಸತ್ಯಂ ಸೆನ್ಸಾರ್ ಸರ್ಟಿಫಿಕೇಟ್ ಪಡೆದುಕೊಂಡಿದೆ. ಈ ವಿಚಾರವನ್ನು ನಿರ್ಮಾಪಕರಾದ ಮಹಾಂತೇಶ್ ವಿ.ಕೆ ಹಂಚಿಕೊಂಡಿದ್ದಾರೆ. ʻಯು\ಎʼ ಸರ್ಟಿಫಿಕೇಟ್‌ ಸಿಕ್ಕಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಸಂತೋಷ್ ಬಾಲರಾಜ್ ನಾಯಕನಾಗಿ ನಟಿಸಿರುವ ಚಿತ್ರ. ಕನ್ನಡತಿ ಖ್ಯಾತಿಯ ʻರಂಜಿನಿ ರಾಘವನ್ʼ ನಾಯಕಿಯಾಗಿ ಜತೆಯಾಗಿದ್ದಾರೆ. ಈ ಹಿಂದೆ ರಂಗಿತರಂಗ, ʻಕಾಂತಾರʼ ಚಿತ್ರಗಳಲ್ಲಿ ತುಳುನಾಡಿನ ದೈವಾರಾಧನೆಯ ಕಥೆಯಿತ್ತು. ಆ ಎರಡು ಸಿನಿಮಾಗಳ ದೊಡ್ಡ ಮಟ್ಟದ ಗೆಲುವಿನ ಶಕ್ತಿಯೂ ಅದೇ. ಅಂಥಾದ್ದೊಂದು ನೆಲದ ಘಮಲಿನ ಕಥೆಯನ್ನೊಳಗೊಂಡಿರುವ ಚಿತ್ರ `ಸತ್ಯಂ’. ಹಾಗೆಂದ ಮಾತ್ರಕ್ಕೆ ಇದು ಆ ಎರಡು ಸಿನಿಮಾಗಳ ಗೆಲುವಿನ ಪ್ರಭೆಯಲ್ಲಿ ರೂಪುಗೊಂಡಿರುವ ಚಿತ್ರ ಅಂದುಕೊಳ್ಳುವಂತಿಲ್ಲ. ಕಾಂತಾರಕ್ಕೂ ಮುನ್ನವೇ ಸತ್ಯಂ ಕಥೆ ಸಿದ್ಧವಾಗಿತ್ತೆಂಬ ವಿಚಾರವನ್ನು ಖುದ್ದು ನಿರ್ದೇಶಕರು ಖಚಿತಪಡಿಸಿದ್ದಾರೆ. ಇಂಥಾ ಭಿನ್ನ ಕಥಾನಕವನ್ನು ಕಂಡು ಸೆನ್ಸಾರ್ ಅಧಿಕಾರಿಗಳು ಖುಷಿಗೊಂಡಿದ್ದಾರೆ. ಒಂದು ಅತ್ಯಪರೂಪದ ಚಿತ್ರ ನೋಡಿದ ತುಂಬು ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Viral News: ಕಾಳಿಂಗ ಸರ್ಪವನ್ನು ಈ ಕುಟುಂಬ ಹೇಗೆ ಪೂಜಿಸುತ್ತಿದೆ ನೋಡಿ!

ಸಾಮಾನ್ಯವಾಗಿ, ಸೆನ್ಸಾರ್ ಅಧಿಕಾರಿಗಳು ಅದೆಷ್ಟೋ ಸಿನಿಮಾಗಳನ್ನು ವೀಕ್ಷಿಸುತ್ತಾರೆ. ಅವರ ಪಾಲಿಗೆ ಅದೊಂದು ಯಾಂತ್ರಿಕ ಕೆಲಸದಂತಾಗಿ ಬಿಡುವ ಸಾಧ್ಯತೆಗಳೇ ಹೆಚ್ಚು. ಅಂಥಾದ್ದರ ನಡುವೆ ಒಂದು ಸಿನಿಮಾ ಎಲ್ಲ ರೀತಿಯಿಂದಲೂ ಹೊಸತನದಿಂದ ಕಂಗೊಳಿಸಿದಾಗ ಅವರಲ್ಲೊಂದು ಖುಷಿ ಮೂಡಿಕೊಳ್ಳುತ್ತೆ. ಹೀಗೆ ಒಟ್ಟಾರೆ ಚಿತ್ರದ ಬಗ್ಗೆ ತುಂಬು ಮೆಚ್ಚುಗೆ ಸೂಚಿಸುತ್ತಲೇ, ಸೆನ್ಸಾರ್ ಮಂಡಳಿ ಕಡೆಯಿಂದ ಸತ್ಯಂಗೆ ಯು\ಎ ಸರ್ಟಿಫಿಕೇಟು ಸಿಕ್ಕಿದೆ. ಅಂದಹಾಗೆ, ಯಾವುದೇ ಕಟ್, ಎಡಿಟ್ ಇಲ್ಲದೆಯೇ ಈ ಸಿನಿಮಾ ಸೆನ್ಸಾರ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದೆ.

ಇದುವರೆಗೂ ನಿರ್ದೇಶಕರಾಗಿ ಒಂದಷ್ಟು ಪ್ರಯೋಗಗಳನ್ನು ಮಾಡುತ್ತಾ ಬಂದವರು, ಅದರಲ್ಲಿಯೂ ತಮ್ಮ ತನದ ಮೂಲಕ ಗೆಲುವು ದಾಖಲಿಸಿರುವವರು ಅಶೋಕ್ ಕಡಬ. ಇಂಥಾ ನಿರ್ದೇಶಕರು ಪಕ್ಕಾ ಮಾಸ್ ಕಥನದತ್ತ ಹೊರಳಿದಾಗ ಸಹಜವಾಗಿಯೇ ಕುತೂಹಲ ಮೂಡಿಕೊಳ್ಳುತ್ತೆ. ಅಶೋಕ್ ಕಡಬ ʻಸತ್ಯಂʼ ಎಂಬ ಪಕ್ಕಾ ಮಾಸ್ ಥ್ರಿಲ್ಲರ್ ಕಥಾನಕವನ್ನು ಕೈಗೆತ್ತಿಕೊಂಡಾಗಲೂ ಇಂಥಾದ್ದೇ ಛಳುಕು ಮೂಡಿಕೊಂಡಿತ್ತು. ಅದು ಟೀಸರ್ ಬಿಡುಗಡೆಯಾದಾಕ್ಷಣ ಮತ್ತಷ್ಟು ತೀವ್ರಗೊಂಡಿತ್ತು. ಮಿಲಿಯನ್ನುಗಟ್ಟಲೆ ವೀವ್ಸ್ ಪಡೆದುಕೊಳ್ಳುವ ಮೂಲಕ ಸತ್ಯಂ ಸೃಷ್ಟಿಸಿದ್ದ ಸಂಚಲನ ಸಣ್ಣದ್ದೇನಲ್ಲ.

ವಿಶೇಷವೆಂದರೆ, ಈ ಸಿನಿಮಾದಲ್ಲಿಯೂ ಪಂಜುರ್ಲಿ ದೈವದ ಆರಾಧನೆಯ ಕಥೆಯಿದೆ. ಅದರ ಸುತ್ತ ಮೈನವಿರೇಳಿಸುವ, ಸಲೀಸಾಗಿ ಅಂದಾಜಿಸಲಾಗದ ಕಥನವನ್ನು ಅಶೋಕ್ ಕಡಬ ದೃಷ್ಯವಾಗಿಸಿದ್ದಾರಂತೆ.
ಶ್ರೀ ಮಾತಾ ಕ್ರಿಯೇಷನ್ಸ್ ಬ್ಯಾನರಿನಡಿಯಲ್ಲಿ ಮಹಾಂತೇಶ್ ವಿ.ಕೆ ನಿರ್ಮಾಣ ಮಾಡಿರುವ ಸತ್ಯಂ ಕುಟುಂಬ ಸಮೇತರಾಗಿ ನೋಡುವ, ಎಲ್ಲ ವರ್ಗದ ಪ್ರೇಕ್ಷಕರನ್ನೂ ಆವರಿಸಿಕೊಳ್ಳುವ ಗುಣ ಹೊಂದಿರುವ ಚಿತ್ರವಂತೆ.

ವಿಶೇಷವೆಂದರೆ, ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಸತ್ಯಂಗೂ ಸಂಗೀತ ನಿರ್ದೇಶನ ಮಾಡಿದ್ದಾರೆ. ಸಿನೆಟೆಕ್ ಸೂರಿ ಛಾಯಾಗ್ರಹಣ, ಸಂತೋಷ್ ಬಾಲರಾಜ್, ರಂಜಿನಿ ರಾಘವನ್, ಸುಮನ್, ಸೈಯಾಜಿ ಶಿಂಧೆ, ಪವಿತ್ರಾ ಲೋಕೇಶ್, ಅವಿನಾಶ್, ವಿನಯಾ ಪ್ರಸಾದ್, ಮುಖ್ಯಮಂತ್ರಿ ಚಂದ್ರು, ಎಂ.ಎನ್ ಲಕ್ಷ್ಮಿದೇವಿ, ಶೃಂಗೇರಿ ರಾಮಣ್ಣ, ತನುಶ್ರೀ, ಎಂ.ಎಸ್ ಉಮೇಶ್, ಬಸವರಾಜ್ ಕಟ್ಟಿ, ಮೀನಾಕ್ಷಿ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ. ಇದೀಗ ಪೋಸ್ಟ್ ಪ್ರಡಕ್ಷನ್ ಕೆಲಸ ಕಾರ್ಯ ಸಂಪೂರ್ಣವಾಗಿ ಮುಗಿದಿದೆ. ಚುನಾವಣಾ ಭರಾಟೆ, ಐಪಿಎಲ್ ಹಂಗಾಮದ ನಡುವೆ ತಿಂಗಳೊಪ್ಪತ್ತಿನಲ್ಲಿಯೇ ಸತ್ಯಂ ಅನ್ನು ತೆರೆಗಾಣಿಸಲು ಚಿತ್ರ ತಂಡ ತಯಾರಿ ನಡೆಸುತ್ತಿದೆ. ಅತೀ ಶೀಘ್ರದಲ್ಲಿ ಸತ್ಯಂ ಬಿಡುಗಡೆ ದಿನಾಂಕ ಜಾಹೀರಾಗಲಿದೆ.

Continue Reading

ಟಾಲಿವುಡ್

Samantha Ruth Prabhu: ಬೆತ್ತಲೆ ಫೋಟೊ ಅಪ್​ಲೋಡ್ ಮಾಡಿದ್ರಾ ಸಮಂತಾ?

Samantha Ruth Prabhu: ಇತ್ತೀಚೆಗಷ್ಟೇ ಸಮಂತಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ‘ಫಾರ್ ಇನ್‌ಫ್ರಾರೆಡ್ ಸೌನಾ'(Far Infrared Sauna) ಉಪಯೋಗಗಳು ಎಂದು ಬರೆದು ಅರೆಬೆತ್ತಲೆ ಇರುವ ಫೋಟೊ ಶೇರ್‌ ಮಾಡಿಕೊಂಡಿದ್ದರು. ಯುವತಿ ಸಂಪೂರ್ಣ ಬೆತ್ತಲಾಗಿ ಬಾತ್‌ಟಬ್‌ನಲ್ಲಿ ಕುಳಿತಿರುವಂತೆ ಫೋಟೊ ವೈರಲ್ ಆಗುತ್ತಿದೆ. ಆದರೆ ಮುಖ ಮಾತ್ರ ಕಾಣುತ್ತಿರಲಿಲ್ಲ. .ಖುದ್ದು ಸಮಂತಾ ಈ ಫೋಟೊ ಹಾಕಿ ಡಿಲೀಟ್ ಮಾಡಿದ್ದಾರೆ ಎಂದು ಕೆಲವರು ವೈರಲ್ ಮಾಡುತ್ತಿದ್ದಾರೆ.

VISTARANEWS.COM


on

Samantha Ruth Prabhu Fake Viral Nude Pic
Koo

ಬೆಂಗಳೂರು: ಸಮಂತಾ (Samantha Ruth Prabhu) ಮಯೋಸಿಟಿಸ್‌ ಕಾಯಿಲೆಯಿಂದ ಬಳಲುತ್ತಿರುವುದು ಗೊತ್ತೇ ಇದೆ. ಸಮಂತಾ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಬಗ್ಗೆ ಮಾಹಿತಿ ನೀಡುತ್ತಾರೆ. ಈ ಬಗ್ಗೆ ಪಾಡ್‌ಕಾಸ್ಟ್‌ ನಡೆಸುತ್ತಾರೆ. ಈ ಮಧ್ಯೆ ಸಮಂತಾ ಅರೆಬೆತ್ತಲೆ ಫೋಟೊ ಒಂದು ವೈರಲ್ ಆಗಿದೆ. ಸಮಂತಾ ಇನ್​ಸ್ಟಾಗ್ರಾಮ್ ಸ್ಟೇಟಸ್​ಗೆ ಹಾಕಿ ನಂತರ ಡಿಲೀಟ್ ಮಾಡಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಆದರೆ ಈ ಫೋಟೊ ನಕಲಿ ಎಂದು ಹೇಳಲಾಗುತ್ತಿದೆ.

ಇತ್ತೀಚೆಗಷ್ಟೇ ಸಮಂತಾ ತಮ್ಮ ಇನ್‌ಸ್ಟಾಗ್ರಾಂನಲ್ಲಿ ‘ಫಾರ್ ಇನ್‌ಫ್ರಾರೆಡ್ ಸೌನಾ'(Far Infrared Sauna) ಉಪಯೋಗಗಳು ಎಂದು ಬರೆದು ಫೋಟೊ ಹೀಗೆ ಮುಂತಾದ ವಿವಿಧ ಉದ್ದೇಶಗಳಿಗಾಗಿ ಜನರು ಬಾತ್‌ ಟಬ್‌ನಲ್ಲಿ ಸ್ವಲ್ಪ ಸಮಯ ಇರುತ್ತಾರೆ ಎಂದು ಬರೆದುಕೊಂಡಿದ್ದಾರೆ. ಆದರೆ ಈ ಫೋಟೊ ಜತಗೆ ಸಮಂತಾ ಸಂಪೂರ್ಣ ಬೆತ್ತಲಾಗಿರುವ ಫೋಟೊ ಪೋಸ್ಟ್ ಮಾಡಿ ಕೂಡಲೇ ಡಿಲೀಟ್ ಮಾಡಿದ್ದಾರೆ ಎನ್ನುವ ಚರ್ಚೆ ಶುರುವಾಗಿದೆ.

ಯುವತಿ ಸಂಪೂರ್ಣ ಬೆತ್ತಲಾಗಿ ಬಾತ್‌ಟಬ್‌ನಲ್ಲಿ ಕುಳಿತಿರುವಂತೆ ಫೋಟೊ ವೈರಲ್ ಆಗುತ್ತಿದೆ. ಆದರೆ ಮುಖ ಮಾತ್ರ ಕಾಣುತ್ತಿರಲಿಲ್ಲ. .ಖುದ್ದು ಸಮಂತಾ ಈ ಫೋಟೊ ಹಾಕಿ ಡಿಲೀಟ್ ಮಾಡಿದ್ದಾರೆ ಎಂದು ಕೆಲವರು ವೈರಲ್ ಮಾಡುತ್ತಿದ್ದಾರೆ. ಆದರೆ ಇದೆಲ್ಲಾ ಸುಳ್ಳು. ಆಕೆಯ ಅಂತಹ ಯಾವುದೇ ಫೋಟೊ ಪೋಸ್ಟ್ ಮಾಡಿಲ್ಲ. ಕಿಡಿಗೇಡಿಗಳು ಈ ರೀತಿ ಫೋಟೊ ವೈರಲ್ ಮಾಡುತ್ತಿದ್ದಾರೆ ಎನ್ನುವ ಚರ್ಚೆಯೂ ನಡೀತಿದೆ.

ಈ ಬಗ್ಗೆ ಟ್ವಟರ್‌ನಲ್ಲಿ ಭಾರಿ ಚರ್ಚೆಗಳು ಆಗುತ್ತಿದೆ. “ದಯವಿಟ್ಟು ಈ ರೀತಿಯ ಚಟುವಟಿಕೆಗಳನ್ನು ಮಾಡುವ ಮೂಲಕ ನಿಮ್ಮ ಮೆಚ್ಚಿನ ನಟಿಯ ಹೆಸರನ್ನು ಹಾಳು ಮಾಡಬೇಡಿ! ಅವರೂಕೂ ಮಹಿಳೆ. ಅಗೌರವ ಮಾಡಬೇಡಿʼʼಎಂದು ಕಮೆಂಟ್‌ ಮಾಡುತ್ತಿದ್ದಾರೆ. ʻʻನಾವೆಲ್ಲರೂ ನಿಮ್ಮೊಂದಿಗೆ ನಿಲ್ಲುತ್ತೇವೆʼʼಎಂದು ನಟಿಗೆ ಸಾಥ್‌ ಕೊಟ್ಟಿದ್ದಾರೆ. ಈ ಪೋಸ್ಟ್ ಬಗ್ಗೆ ಸಮಂತಾ ಇನ್ನೂ ಪ್ರತಿಕ್ರಿಯಿಸಿಲ್ಲ.

ಇದನ್ನೂ ಓದಿ: Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

ನಟಿ ಇತ್ತೀಚೆಗೆ ತಮ್ಮ 37 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ತನ್ನ ಆತ್ಮೀಯ ಸ್ನೇಹಿತರೊಂದಿಗೆ ಅಥೆನ್ಸ್‌ನಲ್ಲಿ ಭರ್ಜರಿಯಾಗಿ ಜನುಮದಿನ ಆಚರಿಸಿಕೊಂಡರು. ಈ ಸಂದರ್ಭದಲ್ಲಿ ʻಬಂಗಾರಂʼ ಸಿನಿಮಾವನ್ನು ನಿರ್ಮಿಸಿ ನಟಿಸಲಿದ್ದೇನೆ ಎಂದು ಅವರು ಬಹಿರಂಗಪಡಿಸಿದ್ದಾರೆ.

ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ ನಟಿ ಸಮಂತಾ ಯೋಗ, ಧ್ಯಾನ, ಕುದುರೆ ಸವಾರಿ ಮತ್ತು ಕಿಕ್ ಬಾಕ್ಸಿಂಗ್ ಕಡೆಗೆ ಗಮನಹರಿಸುತ್ತಿದ್ದಾರೆ. ತಾವು ಕಲಿತ ಸಮರ ಕಲೆಗಳ ಪ್ರದರ್ಶನದ ವಿಡಿಯೊಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ನಟಿ ಸಮಂತಾ (Samantha Kickboxing) ಇದಕ್ಕೆ ‘ಒನ್ ಡೇ ಎಟ್ ಅ ಟೈಮ್ ‘ ಎಂಬ ಶೀರ್ಷಿಕೆ ನೀಡಿದ್ದಾರೆ.

ನಟಿ ಸಮಂತಾ ನಟನಾ ವೃತ್ತಿಗೆ ವಿದಾಯ ಹೇಳಿಲ್ಲ, ಬದಲಾಗಿ ಸ್ವಲ್ಪ ವಿರಾಮ ತೆಗೆದುಕೊಂಡಿದ್ದಾರೆ ಅಷ್ಟೇ. ನಟಿ ಈಗಾಗಲೇ ʻಸಿಟಾಡೆಲ್ ಇಂಡಿಯಾ: ಹನಿ ಬನ್ನಿʼ ವೆಬ್ ಸರಣಿಯಲ್ಲಿ ನಟಿಸಿದ್ದು ಅದರ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಇದರಲ್ಲಿ ಸಮಂತಾ ಜತೆ ವರುಣ್ ಧವನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಜತೆಗೆ ಸಿಕಂದರ್ ಖೇರ್, ಸಾಕಿಬ್ ಸಲೀಮ್ ಮತ್ತು ಕೇ ಕೇ ಮೆನನ್ ಪೋಷಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Continue Reading
Advertisement
Akshaya Tritiya-2024
ಲೈಫ್‌ಸ್ಟೈಲ್3 mins ago

Akshaya Tritiya 2024: ಅಕ್ಷಯ ತೃತೀಯದಂದು ಏನು ಮಾಡಬೇಕು, ಏನು ಮಾಡಬಾರದು?

Rahul Gandi
ದೇಶ7 mins ago

Rahul Gandhi : ಸುಳ್ಳು ಹರಡಬೇಡಿ, ಸುಮ್ಮನಿರಿ; ರಾಹುಲ್​ ಗಾಂಧಿಗೆ ಬಹಿರಂಗ ಪತ್ರ ಬರೆದು ಕುಟುಕಿದ ಯೂನಿವರ್ಸಿಟಿಗಳ ಕುಲಪತಿಗಳು

Lok Sabha Election 2024
ಬಾಗಲಕೋಟೆ17 mins ago

Lok Sabha Election 2024: ಚುನಾವಣಾ ಕರ್ತವ್ಯದ ಮೇಲೆ ತೆರಳುತ್ತಿದ್ದ ಮುಖ್ಯ ಶಿಕ್ಷಕ ಹೃದಯಾಘಾತದಿಂದ ಸಾವು

The Goat Life OTT Release Date Fix
ಒಟಿಟಿ25 mins ago

The Goat Life: ಪೃಥ್ವಿರಾಜ್ ಸುಕುಮಾರನ್ ಅಭಿನಯದ ʻಆಡುಜೀವಿತಂʼ ಒಟಿಟಿ ರಿಲೀಸ್‌ ಎಲ್ಲಿ?

No Diet Day
ಆರೋಗ್ಯ25 mins ago

No Diet Day: ಬೇಕಾಬಿಟ್ಟಿ ಡಯಟ್‌ ಮಾಡಿದರೆ ಏನಾಗುತ್ತದೆ? ಈ ಸಂಗತಿ ತಿಳಿದಿರಲಿ

Dead Body Found
ಕ್ರೈಂ31 mins ago

Dead Body Found: ಕಾಫಿ ತೋಟದ ಮಧ್ಯೆ ನೇತಾಡುತ್ತಿತ್ತು ವ್ಯಕ್ತಿ ಶವ; ಕೆರೆಯಲ್ಲಿ ತೇಲಿ ಬಂದ ಅಪರಿಚಿತ

Medical Students
ದೇಶ36 mins ago

Medical Students: ಸಮುದ್ರದಲ್ಲಿ ಮುಳುಗಿ 5 ಮೆಡಿಕಲ್‌ ವಿದ್ಯಾರ್ಥಿಗಳ ಸಾವು!

India's T20 World Cup Jersey
ಕ್ರೀಡೆ44 mins ago

India’s T20 World Cup Jersey: ಟಿ20 ವಿಶ್ವಕಪ್​ಗೆ ಹೊಸ ಜೆರ್ಸಿಯಲ್ಲಿ ಆಡಲಿದೆ ಭಾರತ; ಜೆರ್ಸಿ ಫೋಟೊ ವೈರಲ್​

Job Alert
ಉದ್ಯೋಗ48 mins ago

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನಾಳೆಯೇ ಕೊನೆಯ ದಿನ

assault case in bengaluru
ಬೆಂಗಳೂರು2 hours ago

Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ22 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ23 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ23 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ4 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ5 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌