ICC Rankings: ಏಕದಿನ ಶ್ರೇಯಾಂಕದಲ್ಲಿ ಬಡ್ತಿ ಪಡೆದ ರೋಹಿತ್​ ಶರ್ಮ, ಹಾರ್ದಿಕ್​ ಪಾಂಡ್ಯ - Vistara News

ಕ್ರಿಕೆಟ್

ICC Rankings: ಏಕದಿನ ಶ್ರೇಯಾಂಕದಲ್ಲಿ ಬಡ್ತಿ ಪಡೆದ ರೋಹಿತ್​ ಶರ್ಮ, ಹಾರ್ದಿಕ್​ ಪಾಂಡ್ಯ

ಐಸಿಸಿ ನೂತನ ಏಕದಿನ ಬ್ಯಾಟಿಂಗ್​ ಶ್ರೇಯಾಂಕದಲ್ಲಿ ಒಂದು ಸ್ಥಾನ ಮೇಲೇರುವ ಮೂಲಕ ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮಾ ಎಂಟನೇ ಸ್ಥಾನ ಪಡೆದಿದ್ದಾರೆ.

VISTARANEWS.COM


on

ICC Rankings: Rohit Sharma, Hardik Pandya promoted in ODI rankings
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದುಬೈ: ಐಸಿಸಿ ನೂತನ ಏಕದಿನ ಶ್ರೇಯಾಂಕ(ICC Rankings) ಪಟ್ಟಿಯಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ(Rohit Sharma) ಮತ್ತು ಹಾರ್ದಿಕ್​ ಪಾಂಡ್ಯ(Hardik Pandya) ಉತ್ತಮ ಪ್ರಗತಿ ಸಾಧಿಸಿದ್ದಾರೆ. ಬ್ಯಾಟರ್​ಗಳ ಶ್ರೇಯಾಂಕದಲ್ಲಿ ರೋಹಿತ್​ ಒಂದು ಸ್ಥಾನ ಏರಿಕೆ ಕಂಡು ಎಂಟನೇ ಸ್ಥಾನದಲ್ಲಿದ್ದರೆ, ಪಾಂಡ್ಯ ಬೌಲಿಂಗ್​ ಶ್ರೇಯಾಂಕದಲ್ಲಿ 10 ಸ್ಥಾನಗಳ ಜಿಗಿತ ಕಂಡು 76ನೇ ಸ್ಥಾನ ಪಡೆದಿದ್ದಾರೆ.

ಬುಧವಾರ ಐಸಿಸಿ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಪಾಕಿಸ್ತಾನದ ನಾಯಕ ಬಾಬರ್​ ಅಜಂ ಬ್ಯಾಟರ್​ಗಳ ಪಟ್ಟಿಯಲ್ಲಿ ಅಗ್ರ ಸ್ಥಾನ ಅಲಂಕರಿಸಿದ್ದಾರೆ. ದಕ್ಷಿಣ ಆಫ್ರಿಕಾದ ರಸ್ಸಿ ವಾನ್ ​ಡರ್​ ಡಸ್ಸೆನ್ 2ನೇ, ಪಾಕ್​ನ ಇಮಾಮ್-ಉಲ್-ಹಕ್ 3ನೇ ಮತ್ತು ಭಾರತದ ಶುಭಮನ್ ಗಿಲ್ 5ನೇ ಸ್ಥಾನ ಪಡೆದಿದ್ದಾರೆ. ಉಳಿದಂತೆ ವಿರಾಟ್ ಕೊಹ್ಲಿ ಏಳನೇ ಸ್ಥಾನದಲ್ಲಿದ್ದಾರೆ. ಕೆ.ಎಲ್. ರಾಹುಲ್ 38ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.

ಬೌಲಿಂಗ್​ ಶ್ರೇಯಾಂಕದಲ್ಲಿ ಸಿರಾಜ್​ ನಂ.3

ಬೌಲಿಂಗ್​ ಶ್ರೇಯಾಂಕದಲ್ಲಿ ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್​ವುಡ್ ಅವರು ನಂ.1 ಸ್ಥಾನದಲ್ಲಿಯೇ ಮುಂದುವರಿದಿದ್ದಾರೆ.​ ನ್ಯೂಜಿಲ್ಯಾಂಡ್​ನ ಹಿರಿಯ ವೇಗಿ ಟ್ರೆಂಟ್ ಬೌಲ್ಟ್ ದ್ವಿತೀಯ ಸ್ಥಾನದಲ್ಲಿದರೆ, ಟೀಮ್​ ಇಂಡಿಯಾದ ಮೊಹಮ್ಮದ್ ಸಿರಾಜ್ ಮೂರನೇ ಸ್ಥಾನದಲ್ಲಿದ್ದಾರೆ. ಮಿಚೆಲ್​ ಸ್ಟಾರ್ಕ್​ ಸ್ಟಾರ್ಕ್ 4 ಮತ್ತು ಅಫ್ಘಾನಿಸ್ಥಾನದ ರಶೀದ್ ಖಾನ್ 5ನೇ ಸ್ಥಾನದಲ್ಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ಮುಕ್ತಾಯ ಕಾಣುವ ಮೊದಲು ಮೊಹಮ್ಮದ್​ ಸಿರಾಜ್​ ನಂ.1 ಸ್ಥಾನದಲ್ಲಿದ್ದರು. ಆದರೆ ಆಸೀಸ್​ ವಿರುದ್ಧದ ಸರಣಿಯಲ್ಲಿ ಕಳಪೆ ಬೌಲಿಂಗ್​ ಪ್ರದರ್ಶನ ತೋರಿದ ಕಾರಣ ಅವರು ಹಠಾತ್​ 2 ಸ್ಥಾನಗಳ ಕುಸಿತ ಕಂಡು ಮೂರನೇ ಸ್ಥಾನ ಪಡೆದರು. ಸದ್ಯ ಅವರು ಇದೇ ಸ್ಥಾನದಲ್ಲಿ ಮುಂದುವರಿಸಿದ್ದಾರೆ. ಉಳಿದಂತೆ ಕುಲ್​ದೀಪ್ ಯಾದವ್ (23), ಬುಮ್ರಾ (26), ಮೊಹಮ್ಮದ್ ಶಮಿ (32), ರವೀಂದ್ರ ಜಡೇಜಾ (78) ಸ್ಥಾನದಲ್ಲಿದ್ದಾರೆ.

ಉಪನಾಯಕ ಹಾರ್ದಿಕ್ ಪಾಂಡ್ಯ ಆಲ್​ರೌಂಡರ್​ಗಳ ಪಟ್ಟಿಯಲ್ಲಿ 13 ನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ಬಾಂಗ್ಲಾದೇಶದ ಹಿರಿಯ ಆಟಗಾರ ಶಕೀಬ್ ಅಲ್ ಹಸನ್ ಕಾಣಿಸಿಕೊಂಡಿದ್ದಾರೆ. ದ್ವಿತೀಯ ಸ್ಥಾನ ಅಫಘಾನಿಸ್ತಾನದ ಮೊಹಮ್ಮದ್ ನಬಿ ಪಾಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೀಡೆ

India’s T20 World Cup Jersey: ಟಿ20 ವಿಶ್ವಕಪ್​ಗೆ ಹೊಸ ಜೆರ್ಸಿಯಲ್ಲಿ ಆಡಲಿದೆ ಭಾರತ; ಜೆರ್ಸಿ ಫೋಟೊ ವೈರಲ್​

India’s T20 World Cup Jersey: ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ

VISTARANEWS.COM


on

India's T20 World Cup Jersey
Koo

ಮುಂಬಯಿ: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್​ಗೆ ಭಾರತ ತಂಡ ಈಗಾಗಲೇ ಪ್ರಕಟಗೊಂಡಿದೆ. ಇದೀಗ ಜೆರ್ಸಿಯ(India’s T20 World Cup Jersey) ಫೋಟೊ ವೈರಲ್​ ಆಗಿದೆ. ಹೊಸ ಜೆರ್ಸಿಯ ಫೋಟೊವನ್ನು ಟಾಟಾ ಐಪಿಎಲ್​ ಕಾಮೆಂಟ್ರಿ ತನ್ನ ಅಧಿಕೃತ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದೆ. ಜತೆಗೆ ಇದೇ ಜೆರ್ಸಿಯಲ್ಲಿ ಭಾರತ ಟಿ20 ವಿಶ್ವಕಪ್​ ಆಡಲಿದೆ ಎಂದು ಬರೆದುಕೊಂಡಿದೆ.

ವೈರಲ್​ ಆಗಿರುವ ಟೀಮ್​ ಇಂಡಿಯಾದ ಜೆರ್ಸಿ ನೀಲಿ ಮತ್ತು ಕೇಸರಿ ಬಣ್ಣದ ಮಿಶ್ರಿತ ಕಂಡುಬಂದಿದೆ. ಜತೆಗೆ ಬಿಳಿ ಬಣ್ಣದ ಎರಡು ಗೆರೆಗಳಿವೆ. ಈ ಜೆರ್ಸಿಗಳನ್ನು ಶಾಫ್​ ಒಂದರಲ್ಲಿ ಮಾರಾಟಕ್ಕಿಟ್ಟಂತೆ ಕಾಣುತ್ತದೆ.

ಭಾರತ ತನ್ನ ಮೊದಲ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್‌ 9 ರಂದು ಪಾಕ್​ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್‌ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್‌ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್​ 29ಕ್ಕೆ ಫೈನಲ್​ ಪಂದ್ಯ ಸಾಗಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ಸ್ವರೂಪ ಬದಲು

ಹಿಂದಿನ ಆವೃತ್ತಿಗಳಿಗಿಂತ ಈ ಬಾರಿ ಟೂರ್ನಿ ವಿಭಿನ್ನ ಸ್ವರೂಪವನ್ನು ಹೊಂದಿದೆ. ಸೂಪರ್ 12 ತಂಡಗಳು ಸೇರಿ 20 ತಂಡಗಳನ್ನು ತಲಾ 5 ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನಿಂದ ಅಗ್ರ 2 ತಂಡಗಳು ಸೂಪರ್ 8ಗೆ ಅರ್ಹತೆ ಪಡೆಯುತ್ತವೆ. ಸೂಪರ್ 8 ತಂಡಗನ್ನು ತಲಾ ನಾಲ್ಕರ ಎರಡು ಗುಂಪುಗಳಾಗಿ ವಿಭಜಿಸಲಾಗುತ್ತದೆ. ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿವೆ. ಬಳಿಕ ಫೈನಲ್ ನಡೆಯಲಿದೆ. 2022ರ ಆವೃತ್ತಿಯಲ್ಲಿ 12 ತಂಡಗಳು ಭಾಗಿಯಾಗಿದ್ದವು. ಆದರೆ 2024ರ ಟೂರ್ನಿಯಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ.

ಭಾರತದ ಪಂದ್ಯಗಳು

ದಿನಾಂಕಎದುರಾಳಿಸ್ಥಳ
ಜೂನ್​ 5ಐರ್ಲೆಂಡ್​ನ್ಯೂಯಾರ್ಕ್​
ಜೂನ್​ 9ಪಾಕಿಸ್ತಾನನ್ಯೂಯಾರ್ಕ್​
ಜೂನ್​ 12ಅಮೆರಿಕನ್ಯೂಯಾರ್ಕ್
ಜೂನ್​ 15ಕೆನಡಾಫ್ಲೋರಿಡಾ
Continue Reading

ಕ್ರೀಡೆ

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Pakistan Cricket: ಟಿ20 ವಿಶ್ವಕಪ್(ICC T20 World Cup 2024)​ ಟೂರ್ನಿಗೆ ಪಾಕಿಸ್ತಾನ(Pakistan Cricket) ಇದುವರೆಗೂ ತನ್ನ ತಂಡ ಪ್ರಕಟಿಸದಿದ್ದರೂ ಕೂಡ ವಿಶ್ವಕಪ್​ ಗೆದ್ದರೆ ತಂಡದ ಸದಸ್ಯರಿಗೆ ತಲಾ 83 ಲಕ್ಷ ರೂ. ಬಹುಮಾನ ನೀಡುವುದಾಗಿ ಪಿಸಿಬಿ(PCB) ಮುಖ್ಯಸ್ಥ ಮೊಹ್ಸೀನ್‌ ನಖ್ವಿ(Mohsin Naqvi) ಘೋಷಣೆ ಮಾಡಿದ್ದಾರೆ.

VISTARANEWS.COM


on

Pakistan Cricket
Koo

ಕರಾಚಿ: ಬಹುನಿರೀಕ್ಷಿತ ಟಿ20 ವಿಶ್ವಕಪ್(ICC T20 World Cup 2024)​ ಟೂರ್ನಿಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿವೆ. ಈಗಾಗಲೇ ಟೂರ್ನಿಗಾಗಿ ಬಹುತೇಕ ತಂಡಗಳು ಕಠಿಣ ತಯಾರಿ ನಡೆಸುತ್ತಿವೆ. ಜತೆಗೆ 15 ಸದಸ್ಯರ ಬಲಿಷ್ಠ ಸಂಭಾವ್ಯ ತಂಡಗಳನ್ನು ಕೂಡ ಪ್ರಕಟಿಸಿವೆ. ಆದರೆ ಪಾಕಿಸ್ತಾನ(Pakistan Cricket) ಇದುವರೆಗೂ ತನ್ನ ತಂಡ ಪ್ರಕಟಿಸದಿದ್ದರೂ ಕೂಡ ವಿಶ್ವಕಪ್​ ಗೆದ್ದರೆ ತಂಡದ ಸದಸ್ಯರಿಗೆ ತಲಾ 83 ಲಕ್ಷ ರೂ. ಬಹುಮಾನ ನೀಡುವುದಾಗಿ ಪಿಸಿಬಿ(PCB) ಮುಖ್ಯಸ್ಥ ಮೊಹ್ಸೀನ್‌ ನಖ್ವಿ(Mohsin Naqvi) ಘೋಷಣೆ ಮಾಡಿದ್ದಾರೆ.

ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ ಅಧಕಾರಿಗಳೊಂದಿಗೆ 2 ಗಂಟೆಗಳ ಕಾಲ ಸಭೆ ನಡೆಸಿದ ನಖ್ವಿ, ಈ ಬಹುಮಾನ ಮೊತ್ತವನ್ನು ಘೋಷಣೆ ಮಾಡಿದೆ. ಈ ಘೋಷಣೆಯನ್ನು ಕಂಡು ಅನೇಕ ನೆಟ್ಟಿಗರು ಟ್ರೋಲ್​ ಮಾಡಿದ್ದಾರೆ. ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ಹೈರಾಣವಾಗಿರುವ ಮಧ್ಯೆ ಇದೆಲ್ಲ ಬೇಕಿತ್ತಾ ಎಂದು ಕಾಲೆಳೆದಿದ್ದಾರೆ. ಪಾಕಿಸ್ತಾನ ತಂಡ ಐರ್ಲೆಂಡ್‌ ಮತ್ತು ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿ ಆಡಿದ ಬಳಿಕ ತನ್ನ ವಿಶ್ವಕಪ್​ ತಂಡವನ್ನು ಪ್ರಕಟಿಸಲಿದೆ.

“ಎದುರಾಳಿ ಯಾರೇ ಆಗಿರಲಿ ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ. ಒಂದು ತಂಡವಾಗಿ ಆಟವಾಡಿ” ಎಂದು ನಖ್ವಿ ಪಾಕಿಸ್ತಾನ ತಂಡದ ಆಟಗಾರರನ್ನು ಹುರಿದುಂಬಿಸಿದ್ದಾರೆ. ಇವರ ನೇತೃತ್ವದಲ್ಲೇ ಇತ್ತೀಚೆಗೆ ಪಾಕಿಸ್ತಾನ ಆಟಗಾರರಿಗೆ ಫಿಟ್​ನೆಸ್​ ಕಾಯ್ದುಕೊಳ್ಳುವ ಸಲುವಾಗಿ ಸೈನ್ಯದಲ್ಲಿ ಕಠಿಣ ತರಬೇತಿ ನೀಡಲಾಗಿತ್ತು.

ಭಾರತದ ಮಾಜಿ ಮುಖ್ಯ ಕೋಚ್, 2011ರಲ್ಲಿ ಏಕದಿನ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್(Gary Kirsten) ಮಾರ್ಗದರ್ಶನದಲ್ಲಿ ಪಾಕಿಸ್ತಾನ ಈ ಬಾರಿ ಟಿ20 ವಿಶ್ವಕಪ್​ ಆಡಲಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್​ 9ರಂದು ನಡೆಯಲಿದೆ.

ಇದನ್ನೂ ಓದಿ Pakistan Cricket: ಭಾರತಕ್ಕೆ ವಿಶ್ವಕಪ್​ ಗೆಲ್ಲಿಸಿಕೊಟ್ಟ ಗ್ಯಾರಿ ಕರ್ಸ್ಟನ್ ಪಾಕ್​ ತಂಡಕ್ಕೆ ನೂತನ ಕೋಚ್​

ನ್ಯೂಯಾರ್ಕ್‌ನಲ್ಲಿ ಪಂದ್ಯ

ಇತ್ತಂಡಗಳ ನಡುವಣ ಹೈವೋಲ್ಟೇಜ್ ಕದನಕ್ಕೆ ನ್ಯೂಯಾರ್ಕ್(NEW YORK) ಅಣಿಯಾಗಲಿದೆ. ಈ ಪಂದ್ಯಕ್ಕಾಗಿ 34,000 ಆಸನ ಸಾಮರ್ಥ್ಯವುಳ್ಳ ತಾತ್ಕಾಲಿಕ ಕ್ರೀಡಾಂಗಣವನ್ನು ನಿರ್ಮಿಸಲಾಗಿದೆ. ಈ ಪಂದ್ಯವನ್ನು ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಪಂದ್ಯ ಇಲ್ಲಿ ನಡೆಸಲಾಗುತ್ತಿದೆ. ಅಲ್ಲದೆ ಭಾರತದ ಬಹುತೇಕ ಲೀಗ್​ ಪಂದ್ಯ ಕೂಡ ಇದೇ ಮೈದಾನದಲ್ಲಿ ನಡೆಯಲಿದೆ.

ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Continue Reading

ಕ್ರಿಕೆಟ್

Viral News: ಕ್ರಿಕೆಟ್‌ ಆಡುವಾಗ ಖಾಸಗಿ ಭಾಗಕ್ಕೆ ಚೆಂಡು ಬಡಿದು ಬಾಲಕ ದಾರುಣ ಸಾವು; ವಿಡಿಯೊ ಇದೆ

Viral News: ಪುಣೆಯಲ್ಲಿ ಕ್ರಿಕೆಟ್​ ಅಭ್ಯಾಸ ಆಡುತ್ತಿದ್ದ ವೇಳೆ ಚೆಂಡು ತನ್ನ ಖಾಸಗಿ(Ball hit boy’s private part) ಭಾಗಕ್ಕೆ ಬಡಿದು 11 ವರ್ಷದ(11-year-old ) ಬಾಲಕ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಈ ಘಟನೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ(viral news).

VISTARANEWS.COM


on

viral news
Koo

ಪುಣೆ: ಸ್ನೇಹಿತರೊಂದಿಗೆ ಕ್ರಿಕೆಟ್ ಅಭ್ಯಾಸ ಮಾಡುತ್ತಿದ್ದ ವೇಳೆ ಚೆಂಡು ತನ್ನ ಖಾಸಗಿ(Ball hit boy’s private part) ಭಾಗಕ್ಕೆ ಬಡಿದು 11 ವರ್ಷದ(11-year-old ) ಬಾಲಕ ಮೃತಪಟ್ಟಿರುವ ದಾರುಣ ಘಟನೆಯೊಂದು ಪುಣೆಯಲ್ಲಿ ನಡೆದಿದೆ. ಈ ಘಟನೆ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ(viral news). ಮೃತಪಟ್ಟ ಬಾಲಕನನ್ನು ಶೌರ್ಯ(Shaurya ) ಎಂದು ಗುರಿತಿಸಲಾಗಿದೆ.

ಬೌಲಿಂಗ್ ಮಾಡುತ್ತಿದ್ದಾಗ ಬ್ಯಾಟ್ಸ್‌ಮನ್ ಹೊಡೆದ ಚೆಂಡು ನೇರವಾಗಿ ಶೌರ್ಯನ ಖಾಸಗಿ ಭಾಗಕ್ಕೆ ಬಡಿದಿದೆ. ನೋವಿನಿಂದ ನರಳಿದ ಆತ ತಕ್ಷಣ ನೆಲದ ಮೇಲೆ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನ ಸ್ನೇಹಿತರು ಆರೈಕೆ ಮಾಡಿದರೂ ಕೂಡ ಯಾವುದೇ ಸ್ಪಂದನೆ ನೀಡದ ಕಾರಣ ಶೌರ್ಯನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ ವೈದ್ಯರು ಆತ ಈ ಮೊದಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಚೆಂಡಿನ ಬಲವಾದ ಹೊಡೆತಕ್ಕೆ ಆತ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಕೆಲ ತಿಂಗಳ ಹಿಂದಷ್ಟೇ ಕ್ರಿಕೆಟ್ ಪಂದ್ಯದ ವೇಳೆ ತಲೆಗೆ ಚೆಂಡು ಬಡಿದು 52 ವರ್ಷದ ಕ್ರಿಕೆಟಿಗ ಮೃತಪಟ್ಟ ಘಟನೆ ಮುಂಬೈನಲ್ಲಿ ನಡೆದಿತ್ತು. ಒಂದೇ ಮೈದಾನದಲ್ಲಿ ಎರಡು ಪಂದ್ಯಗಳು ನಡೆಯುತ್ತಿದ್ದ ವೇಳೆ ಮತ್ತೊಂದು ಪಂದ್ಯದ ಕ್ರಿಕೆಟ್ ಚೆಂಡು ತಲೆಗೆ ಬಡಿದು ಕ್ರಿಕೆಟಿಗ ಮೃತಪಟ್ಟಿದ್ದ. ಉದ್ಯಮಿ ಜಯೇಶ್ ಚುನ್ನಿಲಾಲ್ ಸಾವ್ಲಾ ಮೃತಪಟ್ಟ ಕ್ರಿಕೆಟಿಗ.

ಮಾಟುಂಗಾದ ದಾಡ್ಕರ್ ಮೈದಾನದಲ್ಲಿ ನಡೆಯುತ್ತಿದ್ದ ಕಚ್ಚಿ ವೀಸಾ ಓಸ್ವಾಲ್ ವಿಕಾಸ್ ಹಿರಿಯರ ಲೆಜೆಂಡ್ ಕಪ್ ಟಿ20 ಪಂದ್ಯಾವಳಿಯಲ್ಲಿ ಈ ಘಟನೆ ನಡೆದಿತ್ತು. ಸ್ಥಳಾವಕಾಶದ ಕೊರತೆ ಮತ್ತು ಸಮಯದ ಅಭಾವದಿಂದಾಗಿ ಒಂದೇ ಮೈದಾನದಲ್ಲಿ ಎರಡು ಪಂದ್ಯಗಳನ್ನು ಏಕಕಾಲದಲ್ಲಿ ಆಯೋಜಿಸಲಾಗಿತ್ತು. ಪಕ್ಕದ ಪಿಚ್‌ ನಿಂದ ಬಂದ ಚೆಂಡು ವ್ಯಕ್ತಿಯ ತಲೆಗೆ ಬಡಿದಿದಿತ್ತು. ಮೃತ ವ್ಯಕ್ತಿ ಪಕ್ಕದ ಪಿಚ್​ನಲ್ಲಿ ಆಡುತ್ತಿದ್ದ ಬ್ಯಾಟರ್​ನ ಕಡೆಗೆ ಬೆನ್ನು ಹಾಕಿ ಫೀಲ್ಡಿಂಗ್ ಮಾಡುತ್ತಿದ್ದರು, ಆದ್ದರಿಂದ ಚೆಂಡು ಅವರ ಕಡೆಗೆ ಬರುವುದನ್ನು ನೋಡಲು ಸಾಧ್ಯವಾಗಿರಲಿಲ್ಲ. ನೇರವಾಗಿ ಬಂದ ಚೆಂಡು ಸಾವ್ಲಾ ತಲೆಗೆ ಬಡಿದಿತ್ತು.

ಇದನ್ನೂ ಓದಿ Gadag News: ಮುಂಡರಗಿ ಬಳಿ ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು

ಹೃದಯಾಘಾತದಿಂದ ಮೈದಾನದಲ್ಲೇ ಮೃತಪಟ್ಟ ಇಂಜಿನಿಯರ್


ಕ್ರಿಕೆಟ್ ಆಡುವಾಗಲೇ ಹೃದಯಾಘಾತಕ್ಕೆ ಒಳಗಾಗಿ ಸಾಫ್ಟ್ ವೇರ್ ಇಂಜಿನಿಯರ್ ಮೈದಾನದಲ್ಲೇ ಕುಸಿದುಬಿದ್ದು ಮೃತಪಟ್ಟ ಘಟನೆ ಕಳೆದ ಡಿಸೆಂಬರ್​ನಲ್ಲಿ ನೋಯ್ಡಾದಲ್ಲಿ ಸಂಭವಿಸಿತ್ತು. ವಿಕಾಸ್ ಅವರು ಸ್ಟ್ರೈಕ್​ನಲ್ಲಿದ್ದ ಸಹ ಬ್ಯಾಟರ್​ ಜತೆ ಮಾತುಕತೆ ನಡೆಸಿ ಹಿಂದಿರುಗುವ ವೇಳೆ ಹಠಾತ್​ ಆಗಿ ಪಿಚ್​ನಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದರು.

Continue Reading

ಕ್ರಿಕೆಟ್

MS Dhoni: ಧೋನಿಯ ಕ್ಲೀನ್​ ಬೌಲ್ಡ್​ ಕಂಡು ಬೇಸರಗೊಂಡ ಅಭಿಮಾನಿಗಳು; ವಿಡಿಯೊ ವೈರಲ್​

MS Dhoni: ಒಂಬತ್ತನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಧೋನಿಯ ನಿರ್ಧಾರಕ್ಕೆ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಟೀಕೆ ವ್ಯಕ್ತಪಡಿಸಿದ್ದಾರೆ. ಧೋನಿ 9 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಕ್ಕಿಂತ ಚೆನ್ನೈ ಅವರ ಬದಲಿಗೆ ಮತ್ತೊಬ್ಬ ವೇಗಿಯನ್ನು ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

VISTARANEWS.COM


on

MS Dhoni
Koo

ಧರ್ಮಶಾಲಾ: ಹಿಮಾಲಯದ ತಪ್ಪಲಿನ ರಮಣೀಯ ತಾಣವಾದ ಧರ್ಮಶಾಲಾದಲ್ಲಿ ಭಾನುವಾರ ನಡೆದ ಪಂಜಾಬ್​ ಕಿಂಗ್ಸ್(Punjab Kings)​ ವಿರುದ್ಧದ ಐಪಿಎಲ್(IPL 2024)​ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ 28 ರನ್​ಗಳ ಗೆಲುವು ಸಾಧಿಸಿತು. ಆದರೆ, ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್​ ಧೋನಿ(MS Dhoni) ಮೊದಲ ಎಸೆತದಲ್ಲೇ ಕ್ಲೀನ್​ ಬೌಲ್ಡ್​ ಆಗಿ ಗೋಲ್ಡನ್​ ಡಕ್​(Dhoni golden duck) ಸಂಕಟಕ್ಕೆ ಸಿಲುಕಿದರು. ಇದನ್ನು ಕಂಡು ಅವರ ಅಭಿಮಾನಿಗಳು ಭಾರೀ ನಿರಾಸೆಗೊಂಡರು. ಇದರ ವಿಡಿಯೊ ವೈರಲ್​ ಆಗಿದೆ.

ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ. ಪಂಜಾಬ್​ ವಿರುದ್ಧದ ಪಂದ್ಯದಲ್ಲಿ ಧೋನಿ ಬ್ಯಾಟಿಂಗ್​ ನೋಡಲು ಅಭಿಮಾನಿಗಳು ಕಾಯುತ್ತಿದ್ದರು. ಆದರೆ ಶೂನ್ಯಕ್ಕೆ ಔಟ್​ ಆಗುವ ಮೂಲಕ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು. ಧೋನಿ ಔಟಾಗುತ್ತಿದ್ದಂತೆ ಅವರ ಅಭಿಮಾನಿಗಳು ಬೇಸರದಲ್ಲಿ ತಲೆ ಮೇಲೆ ಕೈ ಹೊತ್ತು ಕುಳಿತರ. ಈ ವಿಡಿಯೊ ವೈರಲ್​ ಆಗುತ್ತಿದೆ.

ಚೆನ್ನೈ ಬ್ಯಾಟಿಂಗ್​ ಇನಿಂಗ್ಸ್​ನ 19ನೇ ಓವರ್​ನಲ್ಲಿ ಧೋನಿ ಅವರು ಹರ್ಷಲ್​ ಪಟೇಲ್​ ಎಸೆದ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಆದರೆ ಕೀಪಿಂಗ್​ನಲ್ಲಿ ಧೋನಿ ಒಂದು ಸೊಗಸಾದ ಕ್ಯಾಚ್​ ಹಿಡಿದು ಮಿಂಚಿದರು. ಜಿತೇಶ್​ ಶರ್ಮ ಅವರ ಕ್ಯಾಚ್​ ಇದಾಗಿತ್ತು.

ಇದನ್ನೂ ಓದಿ IPL 2024 Points Table: ರಾಜಸ್ಥಾನ್​ ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಕೆಕೆಆರ್​; ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

ಹರ್ಭಜನ್​ ಟೀಕೆ


ಈ ಪಂದ್ಯದಲ್ಲಿ ಒಂಬತ್ತನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಧೋನಿಯ ನಿರ್ಧಾರಕ್ಕೆ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಟೀಕೆ ವ್ಯಕ್ತಪಡಿಸಿದ್ದಾರೆ. ಧೋನಿ 9 ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದಕ್ಕಿಂತ ಚೆನ್ನೈ ಅವರ ಬದಲಿಗೆ ಮತ್ತೊಬ್ಬ ವೇಗಿಯನ್ನು ತಂಡಕ್ಕೆ ಸೇರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯಲ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 167 ರನ್‌ ಗಳಿಸಿತು. ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಪಂಜಾಬ್‌ ಕಿಂಗ್ಸ್‌, ಸತತವಾಗಿ ವಿಕೆಟ್‌ ಕಳೆದುಕೊಂಡು ತನ್ನ ಪಾಲಿನ ಓವರ್​ಗಳು ಮುಕ್ತಾಯಗೊಂಡಾಗ 9 ವಿಕೆಟ್‌ ಕಳೆದುಕೊಂಡು 139 ರನ್‌ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.

Continue Reading
Advertisement
India's T20 World Cup Jersey
ಕ್ರೀಡೆ41 seconds ago

India’s T20 World Cup Jersey: ಟಿ20 ವಿಶ್ವಕಪ್​ಗೆ ಹೊಸ ಜೆರ್ಸಿಯಲ್ಲಿ ಆಡಲಿದೆ ಭಾರತ; ಜೆರ್ಸಿ ಫೋಟೊ ವೈರಲ್​

Job Alert
ಉದ್ಯೋಗ5 mins ago

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನಾಳೆಯೇ ಕೊನೆಯ ದಿನ

assault case in bengaluru
ಬೆಂಗಳೂರು1 hour ago

Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ

Prajwal Revanna Case site inspection by SIT team in HD Revanna Basavanagudi residence
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ಅತ್ಯಾಚಾರ ಕೇಸ್‌; ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

No Diet Day 2024
ಆರೋಗ್ಯ2 hours ago

No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

Pakistan Cricket
ಕ್ರೀಡೆ2 hours ago

Pakistan Cricket: ಟಿ20 ವಿಶ್ವಕಪ್​ ಗೆದ್ದರೆ ಪಾಕ್​ ಆಟಗಾರರಿಗೆ ಸಿಗಲಿದೆ ಭಾರೀ ಬಹುಮಾನ ಮೊತ್ತ

Gold Rate Today
ಕರ್ನಾಟಕ2 hours ago

Gold Rate Today: 22 ಕ್ಯಾರಟ್‌, 24 ಕ್ಯಾರಟ್‌ ಚಿನ್ನದ ಬೆಲೆ ಇಂದು ಹೀಗಿವೆ; ತುಸುವೇ ಏರಿಕೆ

Puttakkana makkalu sahana dead
ಕಿರುತೆರೆ2 hours ago

Puttakkana Makkalu: ಸಹನಾಳ ಸಾವಿನ ಸುದ್ದಿ ಕೇಳಿ ಮುಗಿಲುಮುಟ್ಟಿತು ಪುಟ್ಟಕ್ಕನ ಆಕ್ರಂದನ

Rekha Jhunjhunwala
ವಾಣಿಜ್ಯ2 hours ago

Rekha Jhunjhunwala: ಷೇರು ಮಾರುಕಟ್ಟೆಯಲ್ಲಿ ರೇಖಾ ಜುಂಜುನ್‌ವಾಲಾಗೆ 805 ಕೋಟಿ ರೂ. ನಷ್ಟ; ಕಾರಣವೇನು?

viral news
ಕ್ರಿಕೆಟ್2 hours ago

Viral News: ಕ್ರಿಕೆಟ್‌ ಆಡುವಾಗ ಖಾಸಗಿ ಭಾಗಕ್ಕೆ ಚೆಂಡು ಬಡಿದು ಬಾಲಕ ದಾರುಣ ಸಾವು; ವಿಡಿಯೊ ಇದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ21 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ22 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ23 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌