Ram Navami Violence: ಗುಜರಾತ್‌, ಬಂಗಾಳದಲ್ಲಿ ರಾಮನವಮಿ ಹಿಂಸಾಚಾರ; 60 ಜನರ ಬಂಧನ, ರಾಜಕೀಯ ಮೇಲಾಟ - Vistara News

ದೇಶ

Ram Navami Violence: ಗುಜರಾತ್‌, ಬಂಗಾಳದಲ್ಲಿ ರಾಮನವಮಿ ಹಿಂಸಾಚಾರ; 60 ಜನರ ಬಂಧನ, ರಾಜಕೀಯ ಮೇಲಾಟ

Ram Navami Violence: ರಾಮನವಮಿ ಹಿನ್ನೆಲೆಯಲ್ಲಿ ರಾಮನ ಮೂರ್ತಿಯ ಮೆರವಣಿಗೆ ಮಾಡುವಾಗ ಪಶ್ಚಿಮ ಬಂಗಾಳ, ಗುಜರಾತ್‌ ಹಾಗೂ ಮಹಾರಾಷ್ಟ್ರದಲ್ಲಿ ಹಿಂಸಾಚಾರ ನಡೆದಿದೆ. ಕಲ್ಲುತೂರಾಟ ಕೂಡ ನಡೆದಿದ್ದು, ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Ram Navami Violence erupted in West Bengal and Gujarat, 24 detained
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲ್ಕೊತಾ/ಗಾಂಧಿನಗರ: ಪಶ್ಚಿಮ ಬಂಗಾಳ ಹಾಗೂ ಗುಜರಾತ್‌ನಲ್ಲಿ ರಾಮನವಮಿ ದಿನವೇ ಭಾರಿ ಹಿಂಸಾಚಾರ (Ram Navami Violence) ನಡೆದಿದ್ದು, ಗುಜರಾತ್‌ನಲ್ಲಿ 24 ಮಂದಿಯನ್ನು ಬಂಧಿಸಲಾಗಿದೆ. ಬಂಗಾಳದಲ್ಲೂ 36 ಜನರನ್ನು ಬಂಧಿಸಲಾಗಿದೆ. ಹಾಗೆಯೇ, ನೂರಾರು ಜನರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಬಂಗಾಳದ ಹೌರಾದಲ್ಲಂತೂ ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಗುಜರಾತ್‌ನ ವಡೋದರಾದಲ್ಲೂ ಹಿಂಸಾಚಾರ ನಡೆದಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್‌ ಮಾಡಲಾಗಿದೆ. ಹಾಗೆಯೇ, ಇದು ರಾಜಕೀಯ ಮೇಲಾಟಕ್ಕೂ ಕಾರಣವಾಗಿದೆ. ಅತ್ತ, ಮಹಾರಾಷ್ಟ್ರದ ಹಲವೆಡೆಯೂ ಹಿಂಸಾಚಾರದ ಪ್ರಕರಣಗಳು ವರದಿಯಾಗಿವೆ.

ಬಂಗಾಳದಲ್ಲಿ ಶುಕ್ರವಾರವೂ ಗಲಭೆ

ಹೌರಾದ ಶಿಬ್‌ಪುರದಲ್ಲಿ ಶುಕ್ರವಾರವೂ ಗಲಾಟೆ ಮುಂದುವರಿದಿದ್ದು, ಪೊಲೀಸ್‌ ವಾಹನಗಳಿಗೇ ಬೆಂಕಿ ಹಚ್ಚಲಾಗಿದೆ. ಕಲ್ಲು ತೂರಾಟ, ಅಂಗಡಿ-ಮುಂಗಟ್ಟುಗಳ ಮೇಲೆ ದಾಳಿ ಸೇರಿ ಹಲವು ರೀತಿಯಲ್ಲಿ ಹಿಂಸಾಚಾರ ನಡೆಸಲಾಗಿದೆ. ಶಿಬ್‌ಪುರವೊಂದರಲ್ಲಿಯೇ ಪೊಲೀಸರು 36 ಜನರನ್ನು ಬಂಧಿಸಿದ್ದು, ನೂರಾರು ಜನರ ವಿರುದ್ಧ ಕೇಸ್‌ ದಾಖಲಿಸಿದ್ದಾರೆ. ರಾಮನವಮಿ ಮೆರವಣಿಗೆ ವೇಳೆ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಬಳಿಕ ಗಲಭೆ ಉಂಟಾಗಿದೆ ಎಂದು ತಿಳಿದುಬಂದಿದೆ. ಇದಾದ ಬಳಿಕ ಪೊಲೀಸರಿಗೂ ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗದಷ್ಟು ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು ಎನ್ನಲಾಗಿದೆ.

ಬಂಗಾಳದಲ್ಲಿ ಹಿಂಸಾಚಾರದ ದೃಶ್ಯ

ಬಿಜೆಪಿ-ಟಿಎಂಸಿ ಮಧ್ಯೆ ವಾಕ್ಸಮರ

ಪಶ್ಚಿಮ ಬಂಗಾಳದಲ್ಲಿ ಭಾರಿ ಕಲ್ಲುತೂರಾಟದಿಂದಾಗಿ ಅಂಗಡಿ-ಮುಂಗಟ್ಟು, ಜನರ ಆಸ್ತಿಪಾಸ್ತಿಗೆ ಹಾನಿಯಾಗಿರುವ ಪ್ರಕರಣವೀಗ ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ಹೌರಾದಲ್ಲಿ ನಡೆದ ಹಿಂಸಾಚಾರಕ್ಕೆ ಹಿಂದುಗಳೂ ಕಾರಣವಲ್ಲ, ಮುಸ್ಲಿಮರೂ ಕಾರಣವಲ್ಲ. ಬಿಜೆಪಿ ಹಾಗೂ ಬಜರಂಗದಳದ ಕಾರ್ಯಕರ್ತರು ರಾಮನವಮಿ ಮೆರವಣಿಗೆ ವೇಳೆ ಪ್ರಚೋದನೆ ನೀಡಿದ ಕಾರಣ ಹಿಂಸಾಚಾರ ನಡೆದಿದೆ. ಗಲಭೆ ವೇಳೆ ಯಾರ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆಯೋ, ಅವರಿಗೆ ನೆರವು ನೀಡಲಾಗುತ್ತದೆ” ಎಂದು ತಿಳಿಸಿದರು. ಅತ್ತ, ಬಿಜೆಪಿಯು ಗಲಭೆಗೆ ಟಿಎಂಸಿಯ ದುರಾಡಳಿತವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಚಾವಣಿ ಮೇಲೆ ನಿಂತು ಕಲ್ಲು ತೂರಾಟ

ಗುಜರಾತ್‌ನ ವಡೋದರ ನಗರದಲ್ಲಿ ರಾಮನ ಮೂರ್ತಿಯ ಮೆರವಣಿಗೆ ವೇಳೆ ಚಾವಣಿ ಮೇಲೆ ನಿಂತು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಫತೇಪುರ ಪ್ರದೇಶದಲ್ಲಿ ವಿಶ್ವ ಹಿಂದು ಪರಿಷತ್‌ ಹಾಗೂ ಬಜರಂಗದಳದ ಕಾರ್ಯಕರ್ತರು ಶ್ರೀರಾಮ ಮೂರ್ತಿಯ ಮೆರವಣಿಗೆ ಆಯೋಜಿಸಿದ್ದರು. ಇದೇ ವೇಳೆ ಮುಸ್ಲಿಮರು ಕಲ್ಲು ತೂರಾಟ ನಡೆಸಿದ ಕಾರಣ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಗಲಭೆಯಿಂದಾಗಿ ಹಲವರು ಗಾಯಗೊಂಡಿದ್ದು, ಇನ್ನೂ ಹಲವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದಕ್ಕೂ ಮೊದಲು ನಡೆದ ಮೆರವಣಿಗೆ ವೇಳೆಯೂ ಪಿತೂರಿ ನಡೆಸಿ ಕಲ್ಲು ತೂರಾಟ ಮಾಡಲಾಗುತ್ತಿತ್ತು. ಈಗಲೂ ಪಿತೂರಿ ನಡೆಸಲಾಗಿದೆ ಎಂದು ಬಜರಂಗದಳದ ಮುಖಂಡರು ಆರೋಪಿಸಿದ್ದಾರೆ.

ಇದನ್ನೂ ಓದಿ: Karnataka Elections: ನನ್ನ ರಾಮ ಅಂತಃಕರಣ ಸ್ವರೂಪಿ, ನಿಮಗೆ ರಾಮ ಚುನಾವಣೆ ಸರಕು: ಸಿದ್ದು, ಬಿಜೆಪಿ ನಡುವೆ ರಾಮನವಮಿ ಫೈಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

E-Pass Mandatory: ಬೇಸಿಗೆಯಲ್ಲಿ ಬೆಟ್ಟ ಗುಡ್ಡಗಳಿರುವ ತಂಪಾದ ಪ್ರದೇಶದಲ್ಲಿ ಸುತ್ತಾಡಬೇಕು ಎನ್ನುವ ಆಸೆಯಿಂದ ಊಟಿ, ಕೊಡೈಕೆನಾಲ್‌ ಗೆ ಪ್ರವಾಸ ಹೊರಡುವ ಯೋಜನೆ ಇದ್ದರೆ ಕೂಡಲೇ ಇ ಪಾಸ್ ಪಡೆಯಿರಿ.

VISTARANEWS.COM


on

By

E-Pass Mandatory
Koo

ಬೇಸಿಗೆಯ ಬಿಸಿಲಿನಿಂದ ಕಂಗೆಟ್ಟು ಎಲ್ಲಾದರೂ ತಂಪಾದ ಪ್ರದೇಶಗಳಲ್ಲಿ ಸುತ್ತಾಡಬೇಕು ಎನ್ನುವ ಆಸೆಯಿಂದ ಊಟಿ ಮತ್ತು ಕೊಡೈಕೆನಾಲ್‌ ಗೆ ಪ್ರವಾಸ ಹೊರಡಲು ಯೋಜನೆ ಹಾಕಿಕೊಂಡಿದ್ದೀರಾ. ಹಾಗಿದ್ದರೆ ಒಂದು ಮಹತ್ವದ ಸುದ್ದಿ ಇದೆ. ಈ ಬಾರಿ ಊಟಿ (Ooty) ಮತ್ತು ಕೊಡೈಕೆನಾಲ್‌ ಗೆ ( Kodaikanal) ಪ್ರವಾಸ (tour) ಹೋಗುವವರಿಗೆ ಇ-ಪಾಸ್ (E-Pass Mandatory) ಕಡ್ಡಾಯವಾಗಿದೆ.

ಬೇಸಗೆ ರಜೆ (summer vacation) ಹಿನ್ನೆಲೆಯಲ್ಲಿ ಊಟಿ ಮತ್ತು ಕೊಡೈಕೆನಾಲ್ ಪ್ರವಾಸಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳು ಬರುತ್ತಿರುವುದರಿಂದ ಪ್ರಸ್ತುತ ಇರುವ ವಿವಿಧ ವಾಹನಗಳು ಮತ್ತು ಬೇಸಿಗೆಯ ತಿಂಗಳುಗಳಲ್ಲಿ ಈ ಗಿರಿಧಾಮಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಗೆ ಸಂಬಂಧಿಸಿದಂತೆ ಡೇಟಾವನ್ನು ಸಂಗ್ರಹಿಸಲು ಜಿಲ್ಲಾಡಳಿತಗಳಿಗೆ ಅನುಕೂಲವಾಗುವಂತೆ ಇ-ಪಾಸ್ ಕಡ್ಡಾಯಗೊಳಿಸಲಾಗಿದೆ.

ಇದನ್ನೂ ಓದಿ: Summer Tour: ಬೇಸಿಗೆ ಪ್ರವಾಸಕ್ಕೆ ಸೂಕ್ತ ಈ 5 ಅದ್ಭುತ ಗಿರಿಧಾಮಗಳು!

ಇ-ಪಾಸ್ ಕಡ್ಡಾಯ

ಮೇ 7ರಿಂದ ಜೂನ್ 30ರವರೆಗೆ ಊಟಿ ಮತ್ತು ಕೊಡೈಕೆನಾಲ್‌ಗೆ ಭೇಟಿ ನೀಡುವ ಪ್ರವಾಸಿಗರು ಕಡ್ಡಾಯವಾಗಿ ಇ-ಪಾಸ್ ಪಡೆಯಬೇಕು ಎಂದು ನ್ಯಾಯಮೂರ್ತಿಗಳಾದ ಎನ್. ಸತೀಶ್ ಕುಮಾರ್ ಮತ್ತು ಡಿ. ಭರತ್ ಚಕ್ರವರ್ತಿ ಅವರನ್ನೊಳಗೊಂಡ ವಿಶೇಷ ವಿಭಾಗೀಯ ಪೀಠ ಆದೇಶ ನೀಡಿದೆ.


ವಿಶೇಷ ವಿಭಾಗೀಯ ಪೀಠವು ನೀಲಗಿರಿ ಮತ್ತು ದಿಂಡುಗಲ್ ಕಲೆಕ್ಟರೇಟ್‌ಗಳಿಂದ ಇ-ಪಾಸ್‌ಗಳ ವಿತರಣೆಗೆ ಯಾವುದೇ ಮಿತಿಯಿಲ್ಲ ಎಂದು ಹೇಳಿದೆ. ಈ ಪಾಸ್‌ಗಳನ್ನು ಪಡೆದುಕೊಳ್ಳುವುದರಿಂದ ಸ್ಥಳೀಯ ನಿವಾಸಿಗಳಿಗೆ ವಿನಾಯಿತಿ ನೀಡಲಾಗಿದೆ.

ಹಲವು ವ್ಯವಸ್ಥೆ

ಇ- ಪಾಸ್ ವ್ಯವಸ್ಥೆಯನ್ನು ವ್ಯಾಪಕವಾಗಿ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಇದರ ಜೊತೆಗೆ ಇಬ್ಬರು ಕಲೆಕ್ಟರ್‌ಗಳು, ಮಾಹಿತಿ ತಂತ್ರಜ್ಞಾನ ಇಲಾಖೆಯ ಬೆಂಬಲದೊಂದಿಗೆ, ಇ-ಪಾಸ್ ವ್ಯವಸ್ಥೆಯಲ್ಲಿ ಪಾವತಿ ಗೇಟ್‌ವೇ ಅನ್ನು ಸಂಯೋಜಿಸುವ ಬಗ್ಗೆ ಅನ್ವೇಷಿಸಲು ಪ್ರಸ್ತಾಪಿಸಲಾಗಿದೆ. ಇದು ಅರ್ಜಿದಾರರಿಗೆ ಆನ್‌ಲೈನ್‌ನಲ್ಲಿ ಟೋಲ್ ಶುಲ್ಕವನ್ನು ಪಾವತಿಸಲು, ಚೆಕ್‌ಪೋಸ್ಟ್‌ಗಳ ಬಳಿ ದಟ್ಟಣೆಯನ್ನು ಕಡಿಮೆ ಮಾಡಲು, ಇಂಧನವನ್ನು ಉಳಿಸಲು ಮತ್ತು ಇಂಗಾಲದ ಹೊರಸೂಸುವಿಕೆಯನ್ನು ತಡೆಯಲು ಅನುವು ಮಾಡಿಕೊಡುತ್ತದೆ.


ಯಾಕೆ ಈ ಕ್ರಮ?

ಪ್ರವಾಸಿಗರ ಸಂಖ್ಯೆಗೆ ಕಡಿವಾಣ ಹಾಕುವ ಹೈಕೋರ್ಟ್‌ನ ಚಿಂತನೆಗೆ ಪ್ರತಿಕ್ರಿಯೆಯಾಗಿ ನೀಲಗಿರಿ ಮತ್ತು ದಿಂಡುಗಲ್ ಜಿಲ್ಲಾಧಿಕಾರಿಗಳು ವಾಹನ ಸಂಚಾರವನ್ನು ನಿರ್ಬಂಧಿಸಲು ಈ ಹಿಂದೆ ಪ್ರಸ್ತಾಪಿಸಲಾಗಿತ್ತು. ರಜೆ ಸೀಸನ್‌ಗಳಲ್ಲಿ ಊಟಿ ಮತ್ತು ಕೊಡೈಕೆನಾಲ್‌ ಗೆ ಬರುವ ವಾಹನಗಳ ಸಂಖ್ಯೆ ದಿನಕ್ಕೆ 2,000 ರಿಂದ 20,000ಕ್ಕೆ ಏರುತ್ತದೆ. ಇದು ವಾಹನ ದಟ್ಟಣೆ ಮತ್ತು ಪರಿಸರ ಹಾನಿಗೆ ಕಾರಣವಾಗುತ್ತದೆ.


ಈ ವಿಷಯವನ್ನು ಅಂಗೀಕರಿಸಿದ ನ್ಯಾಯಮೂರ್ತಿಗಳ ವಿಶೇಷ ವಿಭಾಗೀಯ ಪೀಠವು ಈ ವಿಷಯದ ಬಗ್ಗೆ ಚರ್ಚೆ ನಡೆಸಿದೆ. ಘಾಟ್ ರಸ್ತೆಗಳ ಮೇಲಿನ ಒತ್ತಡ ಮತ್ತು ಬೇಸಿಗೆಯಲ್ಲಿ ಅತಿಯಾದ ಪ್ರವಾಸಿ ಚಟುವಟಿಕೆಯಿಂದ ಉಂಟಾಗುವ ಪರಿಸರ ನಾಶವನ್ನು ವಕೀಲರು ಎತ್ತಿ ತೋರಿಸಿದರು.

ಈ ಕುರಿತು ಮಾತನಾಡಿರುವ ನೀಲಗಿರಿ ಜಿಲ್ಲಾಧಿಕಾರಿ ಎಂ. ಅರುಣಾ, ಕೇರಳ ಮತ್ತು ಕರ್ನಾಟಕ ಗಡಿಯಲ್ಲಿರುವ ಊಟಿ ಮತ್ತು ಕೊಡೈಕೆನಾಲ್‌ ಗೆ ಒಂಬತ್ತು ಗಡಿ ಚೆಕ್ ಪೋಸ್ಟ್‌ ಗಳಿವೆ. ರಜೆಯ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಹೀಗಾಗಿ ವಾಹನ ದಟ್ಟಣೆಯಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತದೆ. ಹೀಗಾಗಿ ವಾಹನಗಳ ಎಣಿಕೆಯು ಅಗತ್ಯ. ಕೇವಲ ಪ್ರವಾಸಿ ವಾಹನಗಳಲ್ಲದೇ ಸರಕುಗಳ ಸಾಗಣೆಯ ವಾಹನಗಳನ್ನೂ ಇದು ಒಳಗೊಂಡಿರುತ್ತದೆ ಎಂದು ಹೇಳಿದರು.

Continue Reading

ರಾಜಕೀಯ

Maria Alam Khan: “ಜಿಹಾದ್‌ಗಾಗಿ ಮತ ನೀಡಿ..”ಮಾಜಿ ಕೇಂದ್ರ ಸಚಿವರ ಸೊಸೆಯಿಂದ ಭಾರೀ ಎಡವಟ್ಟು

Maria Alam Khan: I.N.D.I.A ಒಕ್ಕೂಟದ ಅಭ್ಯರ್ಥಿ ನಾವಲ್‌ ಕಿಶೋರ್‌ ಸಾಕ್ಯ ಪರ ಫಾರೂಖ್‌ಬಾದ್‌ನಲ್ಲಿ ಪ್ರಚಾರ ಕೈಗೊಂಡಿದ್ದ ಮರಿಯಾ ಮಾತಿನ ಭರದಲ್ಲಿ ಜಿಹಾದ್‌ಗಾಗಿ ಮತ ನೀಡಿ. ಬಿಜೆಪಿ ಸರ್ಕಾರದ ಆಡಳಿತದಿಂದ ಅಲ್ಪ ಸ‍ಂಖ್ಯಾತರಿಗಾಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಲು ಜಿಹಾದ್‌ನ ಅವಶ್ಯಕತೆ ಇದೆ ಎಂದು ಹೇಳುವ ಮೂಲಕ ವಿವಾದಕ್ಕೀಡಾಗಿದ್ದಾರೆ.

VISTARANEWS.COM


on

Maria alam Khan
Koo

ನವದೆಹಲಿ: ಸಮಾಜವಾದಿ ಪಕ್ಷದ (SP) ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್‌(Salman Khurshid) ಅವರ ಸೋದರ ಸೊಸೆ ಜಿಹಾದ್‌ಗಾಗಿ ಮತ ನೀಡಿ ಎಂದು ಕರೆ ನೀಡುವ ಮೂಲಕ ವಿವಾದಕ್ಕೀಡಾಗಿದ್ದಾರೆ. ಉತ್ತರಪ್ರದೇಶದ ಫಾರೂಖ್‌ಬಾದ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಸಲ್ಮಾನ್‌ ಖುರ್ಷಿದ್‌ ಅವರ ಸೊಸೆ ಮರಿಯಾ ಆಲಂ ಖಾನ್‌(Maria Alam Khan) ಹೀಗಿನ ಪರಿಸ್ಥಿತಿಯಲ್ಲಿ ಜಿಹಾದ್‌ಗಾಗಿ ವೋಟ್‌ ಮಾಡಬೇಕಿದೆ ಎಂದು ಹೇಳಿಕೆ ನೀಡಿದ್ದರು. ಈ ವಿಡಿಯೋ ವೈರಲ್‌(Viral Video) ಆಗುತ್ತಿದ್ದಂತೆ ಮರಿಯಾ ಖಾನ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮರಿಯಾ ಹೇಳಿದ್ದೇನು?

I.N.D.I.A ಒಕ್ಕೂಟದ ಅಭ್ಯರ್ಥಿ ನಾವಲ್‌ ಕಿಶೋರ್‌ ಸಾಕ್ಯ ಪರ ಫಾರೂಖ್‌ಬಾದ್‌ನಲ್ಲಿ ಪ್ರಚಾರ ಕೈಗೊಂಡಿದ್ದ ಮರಿಯಾ ಮಾತಿನ ಭರದಲ್ಲಿ ಜಿಹಾದ್‌ಗಾಗಿ ಮತ ನೀಡಿ. ಬಿಜೆಪಿ ಸರ್ಕಾರದ ಆಡಳಿತದಿಂದ ಅಲ್ಪ ಸ‍ಂಖ್ಯಾತರಿಗಾಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಲು ಜಿಹಾದ್‌ನ ಅವಶ್ಯಕತೆ ಇದೆ. ಹೀಗಾಗಿ ನಾವೆಲ್ಲಾ ಒಗ್ಗಟ್ಟಾಗಿ ಜಿಹಾದ್‌ಗಾಗಿ ಮತ ನೀಡೋಣ. ಯಾವುದೇ ಆಮೀಷ, ಭಾವನೆಗಳಿಗೆ ಬಲಿಯಾಗದೇ ಮತ ನೀಡೋಣ. ಈ ʼಸಂಘಿʼ ಸರ್ಕಾರವನ್ನು ಕೆಳಗಿಳಿಸಲು ಜಿಹಾದಿಯಿಂದ ಮಾತ್ರ ಸಾಧ್ಯ. ಇಲ್ಲವಾದಲ್ಲಿ ಈ ಸಂಘಿ ಸರ್ಕಾರ ನಮ್ಮ ಅಸ್ತಿತ್ವವನ್ನೇ ನಾಶ ಮಾಡುತ್ತದೆ ಎಂದು ಅವರು ಹೇಳಿಕೆ ನೀಡಿದ್ದರು.

ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂದು ಜನ ಭೀತಿಗೊಳಗಾಗಿದ್ದಾರೆ. ಆದರೆ ಪ್ರಜಾಪ್ರಭುತ್ವ ಮಾತ್ರವಲ್ಲ ಮಾನವೀಯತೆ ಕೂಡ ಅಪಾಯದಲ್ಲಿದೆ. ಈಗ ಮಾನವೀಯತೆ ಮೇಲೆ ದಾಳಿಗಳು ನಡೆಯುತ್ತಿವೆ. ನೀವು ನಮ್ಮ ಈ ದೇಶದ ಸಂಸ್ಕೃತಿ, ಪರಂಪರೆ ಮತ್ತು ಸೌಂದರ್ಯ ಉಳಿಯಬೇಕೆಂದು ಬಯಸುವುದಾದರೆ ಬುದ್ದಿವಂತಿಕೆಯಿಂದ ಮತ ಚಲಾಯಿಸಿ ಎಂದು ಕರೆ ನೀಡಿದ್ದರು.

ಮರಿಯಾ, ಖುರ್ಷಿದ್‌ ವಿರುದ್ಧ FIR

ಇನ್ನು ಮರಿಯಾ ನೀಡಿರುವ ಈ ಹೇಳಿಕೆ ಎಲ್ಲೆಡೆ ಭಾರೀ ವೈರಲ್‌ ಆಗುತ್ತಿದ್ದು, ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮರಿಯಾ ವಿರುದ್ಧ ದೂರು ದಾಖಲಾಗಿದೆ. ಅಲ್ಲದೇ ರ್ಯಾಲಿಯಲ್ಲಿ ಭಾಗಿಯಾಗಿದ್ದ ಸಲ್ಮಾನ್‌ ಖುರ್ಷಿದ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಇನ್ನು ಘಟನೆ ಬಗ್ಗೆ ಸಲ್ಮಾನ್‌ ಖುರ್ಷಿದ್‌ ಸ್ಪಷ್ಟನೆ ನೀಡಿದ್ದು, ಜಿಹಾದ್‌ ಅಂದರೆ ಪ್ರತಿಕೂಲ ಪರಿಸ್ಥಿತಿ ವಿರುದ್ಧ ಹೋರಾಡುವುದು. ಜನರ ಸಾಂವಿಧಾನಿಕ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಆಕೆ ಈ ಹೇಳಿಕೆಯನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Movie Release: ಈ ವಾರ ಒಟಿಟಿಯಲ್ಲಿ ನೀವು ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು; ಟ್ರೈಲರ್‌ಗಳನ್ನು ಇಲ್ಲಿ ನೋಡಿ

ಚುನಾವಣಾ ಪ್ರಚಾರದಲ್ಲಿ ವಿವಾದಾತ್ಮಕ ಹೇಳಿಕೆಗಳು, ಆ ಹೇಳಿಕೆ ಮೇಲೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಇತ್ತ ಛತ್ತೀಸ್‌ಗಡದಲ್ಲಿ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಅಧ್ಯಕ್ಷ ಎಐಸಿಸಿ ಮಲ್ಲಿಕಾರ್ಜುನ ಖರ್ಗೆಯವರು ಭಗವಾನ್‌ ಶಿವನ ಬಗ್ಗೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಛತ್ತೀಸ್‌ಗಡದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಶಿವಕುಮಾರ್‌ ದಹಾರಿಯಾ ಪರ ಪ್ರಚಾರದ ವೇಳೆ ಶಿವಕುಮಾರ್‌ ಅವರನ್ನು ಭಗವಾನ್‌ ಶಿವನಿಗೆ ಹೋಲಿಸಿ ಹೇಳಿಕೆಯೊಂದನ್ನು ನೀಡಿದ್ದಾರೆ. ಬಿಜೆಪಿ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ.

Continue Reading

ದೇಶ

GST Collection: ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಜಿಎಸ್‌ಟಿ ಸಂಗ್ರಹ; ಏಪ್ರಿಲ್‌ನ ಕಲೆಕ್ಷನ್‌ ಎಷ್ಟು?

GST Collection: ಏಪ್ರಿಲ್‌ನ ಜಿಎಸ್‌ಟಿ ಸಂಗ್ರಹ ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ. 2024ರ ಏಪ್ರಿಲ್‌ನ ಒಟ್ಟು ಜಿಎಸ್‌ಟಿ ಸಂಗ್ರಹವು 2.10 ಲಕ್ಷ ಕೋಟಿ ರೂ.ಗೆ ತಲುಪಿದೆ. ಒಟ್ಟಾರೆಯಾಗಿ ಪರೋಕ್ಷ ತೆರಿಗೆ ಆದಾಯವು ಶೇ. 12.4ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ದೇಶೀಯ ವಹಿವಾಟು ಮತ್ತು ಆಮದುಗಳಲ್ಲಿನ ಹೆಚ್ಚಳ ಇದಕ್ಕೆ ಕಾರಣ ಎನ್ನಲಾಗಿದೆ. ಮಹಾರಾಷ್ಟ್ರವು 37,671 ಕೋಟಿ ರೂ. ಸಂಗ್ರಹಿಸುವ ಮೂಲಕ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಕರ್ನಾಟಕ ಇದೆ. ಇಲ್ಲಿ 15,978 ಕೋಟಿ ರೂ. ಸಂಗ್ರಹವಾಗಿದೆ. ಗುಜರಾತ್ 13,301 ಕೋಟಿ ರೂ., ಉತ್ತರ ಪ್ರದೇಶ 12,290 ಕೋಟಿ ರೂ. ಮತ್ತು ತಮಿಳುನಾಡು 12,210 ಕೋಟಿ ರೂ. ಮೂಲಕ ನಂತರದ ಸ್ಥಾನಗಳಲ್ಲಿದೆ.

VISTARANEWS.COM


on

GST Collection
Koo

ನವದೆಹಲಿ: ಏಪ್ರಿಲ್‌ನ ಜಿಎಸ್‌ಟಿ ಸಂಗ್ರಹ ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ (GST Collection). ಬುಧವಾರ ಬಿಡುಗಡೆಯಾದ ಅಧಿಕೃತ ಅಂಕಿ-ಅಂಶಗಳ ಪ್ರಕಾರ, 2024ರ ಏಪ್ರಿಲ್‌ನ ಒಟ್ಟು ಜಿಎಸ್‌ಟಿ ಸಂಗ್ರಹವು 2.10 ಲಕ್ಷ ಕೋಟಿ ರೂ.ಗೆ ತಲುಪಿದೆ. ಒಟ್ಟಾರೆಯಾಗಿ ಪರೋಕ್ಷ ತೆರಿಗೆ ಆದಾಯವು ಶೇ. 12.4ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ದೇಶೀಯ ವಹಿವಾಟು ಮತ್ತು ಆಮದುಗಳಲ್ಲಿನ ಹೆಚ್ಚಳ ಇದಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ನಿವ್ವಳ ಜಿಎಸ್‌ಟಿ ಆದಾಯ (ಮರುಪಾವತಿಯ ನಂತರ) 1.92 ಲಕ್ಷ ಕೋಟಿ ರೂ.ಗಳಾಗಿದ್ದು, ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 17.1ರಷ್ಟು ಬೆಳವಣಿಗೆ ದಾಖಲಿಸಿದೆ.

ರಾಜ್ಯವಾರು ಸಂಗ್ರಹ

ಮಹಾರಾಷ್ಟ್ರವು 37,671 ಕೋಟಿ ರೂ. ಸಂಗ್ರಹಿಸುವ ಮೂಲಕ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಕರ್ನಾಟಕ ಇದೆ. ಇಲ್ಲಿ 15,978 ಕೋಟಿ ರೂ. ಸಂಗ್ರಹವಾಗಿದೆ. ಗುಜರಾತ್ 13,301 ಕೋಟಿ ರೂ., ಉತ್ತರ ಪ್ರದೇಶ 12,290 ಕೋಟಿ ರೂ. ಮತ್ತು ತಮಿಳುನಾಡು 12,210 ಕೋಟಿ ರೂ. ಮೂಲಕ ನಂತರದ ಸ್ಥಾನಗಳಲ್ಲಿದೆ.

“ಜಿಎಸ್‌ಟಿ (Goods and Services Tax) 2024ರ ಏಪ್ರಿಲ್‌ನಲ್ಲಿ ದಾಖಲೆಯ ಗರಿಷ್ಠ 2.10 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ. ಮರುಪಾವತಿಯನ್ನು ಲೆಕ್ಕ ಹಾಕಿದ ನಂತರ ನಿವ್ವಳ ಜಿಎಸ್‌ಟಿ ಆದಾಯವು 1.92 ಲಕ್ಷ ಕೋಟಿ ರೂ.ಗಳಷ್ಟಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇಕಡಾ 17.1ರಷ್ಟು ಬೆಳವಣಿಗೆಯನ್ನು ದಾಖಲಿಸಿದೆʼʼ ಎಂದು ಹಣಕಾಸು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ವಿವಿಧ ತೆರಿಗೆಗಳ ಅಂಕಿ ಅಂಶ

  • ಕೇಂದ್ರ ಸರಕು ಮತ್ತು ಸೇವಾ ತೆರಿಗೆ (CGST): 43,846 ಕೋಟಿ ರೂ.
  • ರಾಜ್ಯ ಸರಕು ಮತ್ತು ಸೇವಾ ತೆರಿಗೆ (SGST): 53,538 ಕೋಟಿ ರೂ.
  • ಸಮಗ್ರ ಸರಕು ಮತ್ತು ಸೇವಾ ತೆರಿಗೆ (IGST): ಆಮದು ಸರಕುಗಳ ಮೇಲೆ ಸಂಗ್ರಹಿಸಿದ 37,826 ಕೋಟಿ ರೂ. ಸೇರಿದಂತೆ ಒಟ್ಟು 99,623 ಕೋಟಿ ರೂ.
  • ಸೆಸ್: ಆಮದು ಮಾಡಿದ ಸರಕುಗಳ ಮೇಲೆ ಸಂಗ್ರಹಿಸಿದ 1,008 ಕೋಟಿ ರೂ. ಸೇರಿದಂತೆ ಒಟ್ಟು 13,260 ಕೋಟಿ ರೂ.

“ಭಾರತೀಯ ಆರ್ಥಿಕತೆಯು ವೇಗದ ಹಾದಿಯಲ್ಲಿದೆ ಮತ್ತು ವ್ಯವಹಾರಗಳು ವೇಗವಾಗಿ ಸಂಘಟಿತವಾಗುತ್ತಿವೆ” ಎಂದು ಟ್ಯಾಕ್ಸ್ ಕನೆಕ್ಟ್ ಅಡ್ವೈಸರಿ ಸರ್ವೀಸಸ್ ಎಲ್‌ಎಲ್‌ಪಿಯ ಪಾಲುದಾರ ವಿವೇಕ್ ಜಲನ್ ಹೇಳಿದ್ದಾರೆ. ಜಿಎಸ್‌ಟಿ ಸಂಗ್ರಹದ ಬಗ್ಗೆ ಮಾತನಾಡಿದ ಅವರು, ʼʼ2017ರ ಜುಲೈಯಲ್ಲಿ ಈ ನಿಯಮ ಜಾರಿಗೆ ಬಂದಾಗಿನಿಂದ 2024ರ ಏಪ್ರಿಲ್‌ವರೆಗೆ ಜಿಎಸ್‌ಟಿ ಸಂಗ್ರಹವು ಸರಾಸರಿ ಮಾಸಿಕ ಆದಾಯವನ್ನು ಸುಮಾರು 0.9 ಲಕ್ಷ ಕೋಟಿ ರೂ.ಗೆ ಹೆಚ್ಚಿಸಿದೆʼʼ ಎಂದು ತಿಳಿಸಿದ್ದಾರೆ. ʼʼ2017ರ ಜುಲೈ ಮತ್ತು 2024ರ ಏಪ್ರಿಲ್ ನಡುವೆ ಜಿಎಸ್‌ಟಿ ಆದಾಯವು ವರ್ಷಕ್ಕೆ ಸರಾಸರಿ ಶೇ. 13ರಷ್ಟು ಬೆಳವಣಿಗೆಯನ್ನು ದಾಖಲಿಸಿದೆʼʼ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: GST Collection : ಜನವರಿಯಲ್ಲಿ ಜಿಎಸ್ಟಿ ಸಂಗ್ರಹ 1.72 ಲಕ್ಷ ಕೋಟಿ ರೂ. ಇದುವರೆಗಿನ ಗರಿಷ್ಠ ಸಾಧನೆ

ಹಳೆಯ ಆದಾಯ ತೆರಿಗೆ ಕಾಯ್ದೆಯನ್ನು ಬದಲಿಸಿ ನೇರ ತೆರಿಗೆ ಸಂಹಿತೆಯನ್ನು ಜಾರಿಗೆ ತರುವುದರ ಜತೆಗೆ ಆಲ್ಕೋಹಾಲ್, ಪೆಟ್ರೋಲ್, ಡೀಸೆಲ್ ಮತ್ತು ರಿಯಲ್ ಎಸ್ಟೇಟ್ ಅನ್ನು ಜಿಎಸ್‌ಟಿ ಅಡಿಯಲ್ಲಿ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

Continue Reading

ಪ್ರಮುಖ ಸುದ್ದಿ

Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Covishield Vaccine: ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳು ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮವನ್ನು ಅನುಭವಿಸುತ್ತಾರೆ. ಭಾರತದಲ್ಲಿ ಇದರ ಪ್ರಮಾಣ ಇನ್ನೂ ಕಡಿಮೆ ಎಂದು ತಜ್ಞರು ಹೇಳಿದ್ದಾರೆ.

VISTARANEWS.COM


on

Covishield vaccine india
Koo

ಹೊಸದಿಲ್ಲಿ: ಭಾರತದಲ್ಲಿ ಕೊರೊನಾ ವೈರಸ್‌ (Corona Virus) ಎದುರಿಸಲು ಕೋವಿಶೀಲ್ಡ್‌ ಲಸಿಕೆ (Covishield vaccine) ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ (blood clotting) ಅಡ್ಡ ಪರಿಣಾಮದ (Side effects) ಅಪಾಯದ ಸಾಧ್ಯತೆಗಳು ತೀರಾ ಕಡಿಮೆ ಎಂದು ಭಾರತದ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ, ಮಾಜಿ ICMR ವಿಜ್ಞಾನಿ ಡಾ. ರಾಮನ್ ಗಂಗಾಖೇಡ್ಕರ್ ಹೇಳಿದ್ದಾರೆ.

ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳು ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮವನ್ನು ಅನುಭವಿಸುತ್ತಾರೆ. ಭಾರತದಲ್ಲಿ ಇದರ ಪ್ರಮಾಣ ಇನ್ನೂ ಕಡಿಮೆ ಎಂದವರು ತಿಳಿಸಿದ್ದಾರೆ. ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಅಡ್ಡ ಪರಿಣಾಮ ಕಾಣಿಸಿಕೊಳ್ಳಬಹುದು ಎಂದು ಮೊನ್ನೆ ಅದರ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ಯುಕೆ ನ್ಯಾಯಾಲಯದಲ್ಲಿ ಒಪ್ಪಿಕೊಂಡ ಬಳಿಕ ಈ ಬಗ್ಗೆ ಆತಂಕ ಮೂಡಿತ್ತು.

“ಮೊದಲ ಡೋಸ್ ಅನ್ನು ಪಡೆದಾಗ ಅಡ್ಡ ಪರಿಣಾಮದ ರಿಸ್ಕ್‌ ಅತ್ಯಧಿಕವಾಗಿರುತ್ತದೆ. ಆದರೆ ಎರಡನೇ ಡೋಸ್‌ನೊಂದಿಗೆ ಕಡಿಮೆಯಾಗುತ್ತದೆ; ಮೂರನೆಯದರೊಂದಿಗೆ ಮತ್ತೂ ಕಡಿಮೆಯಾಗುತ್ತದೆ. ಅಡ್ಡ ಪರಿಣಾಮ ಸಂಭವಿಸುವುದಾದಲ್ಲಿ, ಲಸಿಕೆ ಪಡೆದ ಎರಡು ಮೂರು ತಿಂಗಳೊಳಗೆ ಕಾಣಿಸಿಕೊಳ್ಳುತ್ತದೆ” ಎಂದು ಗಂಗಾಖೇಡ್ಕರ್ ತಿಳಿಸಿದ್ದಾರೆ. ಆದರೆ, ಭಾರತದಲ್ಲಿ ಮೂರು ಹಂತಗಳ ಲಸಿಕೆ ಅಭಿಯಾನ ವರ್ಷಗಳ ಹಿಂದೆಯೇ ಮುಗಿದಿದ್ದು, ಅಡ್ಡ ಪರಿಣಾಮಗಳ ಪ್ರಕರಣಗಳು ಅತ್ಯಂತ ವಿರಳವಾಗಿ ವರದಿಯಾಗಿವೆ.

ಬ್ರಿಟನ್‌ನ ಮಾಧ್ಯಮ ವರದಿಗಳು ಉಲ್ಲೇಖಿಸಿರುವ ನ್ಯಾಯಾಲಯದ ದಾಖಲೆಗಳ ಪ್ರಕಾರ, ತನ್ನ ಕೋವಿಡ್ ಲಸಿಕೆ ಅಪರೂಪವಾಗಿ ರಕ್ತ ಹೆಪ್ಪುಗಟ್ಟುವಿಕೆಯನ್ನು ಒಳಗೊಂಡ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ. ಈ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಸಹ ಉತ್ಪಾದಿಸಿದೆ. ಇದನ್ನು ಕೋವಿಶೀಲ್ಡ್ ಎಂದು ಕರೆಯಲಾಗುತ್ತದೆ. ಭಾರತೀಯ ಜನಸಂಖ್ಯೆಯ ಕನಿಷ್ಠ 90 ಪ್ರತಿಶತದಷ್ಟು ಜನರು ಈ ಲಸಿಕೆಯನ್ನು ಪಡೆದಿದ್ದಾರೆ. ಭಾರತದಲ್ಲಿ ಸುಮಾರು 175 ಕೋಟಿ ಕೋವಿಶೀಲ್ಡ್‌ ಲಸಿಕೆ ಡೋಸ್‌ ನೀಡಲಾಗಿದೆ.

ಕಂಪನಿಯು ನ್ಯಾಯಾಲಯದಲ್ಲಿ ಒಪ್ಪಿಕೊಂಡಂತೆ, ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂಬ ಅಪರೂಪದ ಅಡ್ಡ ಪರಿಣಾಮದ ಸಾಧ್ಯತೆ ಲಸಿಕೆಗೆ ಇದೆ. ಯುರೋಪ್‌ನಲ್ಲಿ ವ್ಯಾಕ್ಸಿನೇಷನ್ ಅಭಿಯಾನ ಪ್ರಾರಂಭವಾದ ತಿಂಗಳೊಳಗೆ ಕೆಲವು ಇಂಥ ಪ್ರಕರಣಗಳು ಬೆಳಕಿಗೆ ಬಂದವು. ಕೆಲವು ದೇಶಗಳು ಅಸ್ಟ್ರಾಜೆನೆಕಾ ಲಸಿಕೆಯ ಬಳಕೆಯನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಿದವು.

ʼವ್ಯಾಕ್ಸಿನೇಶನ್‌ ಬಳಿಕದ ಪ್ರತಿಕೂಲ ಘಟನೆಗಳ ಕುರಿತು ಸರ್ಕಾರಿ ಸಮಿತಿʼಯು (AEFI) ದೇಶದಲ್ಲಿ TTSನ ಕನಿಷ್ಠ 36 ಪ್ರಕರಣಗಳನ್ನು ಪರಿಶೀಲಿಸಿದೆ. 2021ರಲ್ಲಿ ದೇಶದಲ್ಲಿ ಕೋವಿಡ್-19 ಲಸಿಕೆ ಹಾಕಿದ ಮೊದಲ ವರ್ಷ 18 ಸಾವುಗಳನ್ನು ದೃಢಪಡಿಸಿದೆ. ಆದರೆ ಇದು ಭಾರತೀಯ ಕಾನೂನಿನ ವ್ಯಾಪ್ತಿಯಲ್ಲಿ ಬರುತ್ತಿದ್ದು, ಬ್ರಿಟನ್‌ನ ನ್ಯಾಯಾಲಯದಲ್ಲಿ ಆಗಿರುವ ವಾದವನ್ನು ಮಂಡಿಸಿ ನ್ಯಾಯ ಪಡೆಯಲು ಸಾಧ್ಯವಿಲ್ಲ.

ಐರೋಪ್ಯ ರಾಷ್ಟ್ರಗಳಲ್ಲಿ ಸಾಂಕ್ರಾಮಿಕ ರೋಗದ ವಿರುದ್ಧ ಲಸಿಕೆ ಹಾಕಲು ಆರಂಭಿಸಿದ ಅವಧಿಯಲ್ಲಿ TTS ವರದಿಯಾಗಿದೆ. ಆದರೆ ಭಾರತದಲ್ಲಿ ಇದು ಬಹಳ ಅಪರೂಪ ಎಂದು ತಜ್ಞರು ಹೇಳುತ್ತಾರೆ. “ಟಿಟಿಎಸ್ ಬಹಳ ಅಪರೂಪದ ಅಡ್ಡ ಪರಿಣಾಮ. ಯುರೋಪಿಯನ್ನರಿಗೆ ಹೋಲಿಸಿದರೆ ಭಾರತೀಯರು ಮತ್ತು ದಕ್ಷಿಣ ಏಷ್ಯಾದವರಲ್ಲಿ ಇನ್ನೂ ಅಪರೂಪ. ವ್ಯಾಕ್ಸಿನೇಷನ್ ಜೀವಗಳನ್ನು ಉಳಿಸಿದೆ. ಅದರ ಪ್ರಯೋಜನಕ್ಕೆ ಹೋಲಿಸಿದರೆ ಅಪಾಯಗಳನ್ನು ಕ್ಷುಲ್ಲಕ” ಎಂದು ತಜ್ಞರು ವಿವರಿಸಿದ್ದಾರೆ.

ಅಡ್ಡ ಪರಿಣಾಮದ ರಿಸ್ಕ್‌ ಮೊದಲ ವ್ಯಾಕ್ಸಿನೇಷನ್ ನಂತರದ ಮೊದಲ ಕೆಲವು ವಾರಗಳಲ್ಲಿ ಮಾತ್ರ ಹೆಚ್ಚು. ಹೆಚ್ಚಿನ ಭಾರತೀಯರು ಈಗಾಗಲೇ ಮೂರು ಡೋಸ್‌ ಪಡೆದಿದ್ದಾರೆ. ಇದಾಗಿ ಬಹಳ ಸಮಯ ಸಂದಿದೆ. “ನಾವೆಲ್ಲರೂ ಲಸಿಕೆಯನ್ನು ಬಹಳ ಹಿಂದೆಯೇ ಯಶಸ್ವಿಯಾಗಿ ಪಡೆದಿದ್ದೇವೆ” ಎಂದು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ಗ್ಲೋಬಲ್ ಹೆಲ್ತ್‌ನ ನಿರ್ದೇಶಕ ಡಾ ಗಗನ್‌ದೀಪ್ ಕಾಂಗ್ ಹೇಳಿದ್ದಾರೆ.

“ಜನರು ಈಗ ಪ್ರತಿಕ್ರಿಯಿಸುತ್ತಿರುವುದು ಆಶ್ಚರ್ಯಕರವಾಗಿದೆ. ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದ್ದಾಗಲೂ ಸೈಡ್‌ ಎಫೆಕ್ಟ್‌ಗಳನ್ನು ಉತ್ತಮವಾಗಿ ದಾಖಲಿಸಲಾಗಿದೆ ಮತ್ತು ವೈಜ್ಞಾನಿಕವಾಗಿ ಸ್ವೀಕರಿಸಲಾಗಿದೆ. ಸಾಂಕ್ರಾಮಿಕ ರೋಗ ಉತ್ತುಂಗದಲ್ಲಿದ್ದಾಗ ಲಸಿಕೆಯ ಪ್ರಯೋಜನವು ಅಪಾಯವನ್ನು ಮೀರಿಸಿತ್ತು” ಎಂದು ಅಶೋಕ ವಿಶ್ವವಿದ್ಯಾಲಯದ ತ್ರಿವೇದಿ ಸ್ಕೂಲ್ ಆಫ್ ಬಯೋಸೈನ್ಸ್‌ನ ಬಯೋಸೈನ್ಸ್ ಮತ್ತು ಆರೋಗ್ಯ ಸಂಶೋಧನೆಯ ಡೀನ್ ಡಾ. ಅನುರಾಗ್ ಅಗರ್ವಾಲ್ ಹೇಳುತ್ತಾರೆ.

ಲ್ಯಾನ್ಸೆಟ್ ಗ್ಲೋಬಲ್ ಹೆಲ್ತ್‌ನಲ್ಲಿನ 2022ರ ಅಧ್ಯಯನದ ಪ್ರಕಾರ ಅಸ್ಟ್ರಾಜೆನೆಕಾ ಮೊದಲ ಡೋಸ್ ಸ್ವೀಕರಿಸಿದ ಪ್ರತಿ ಹತ್ತು ಲಕ್ಷ ಜನರಲ್ಲಿ 8.1 ಟಿಟಿಎಸ್ ಪ್ರಕರಣಗಳು ಕಂಡುಬಂದಿವೆ. ಎರಡನೇ ಡೋಸ್ ಸ್ವೀಕರಿಸಿದ ಪ್ರತಿ ಹತ್ತು ಲಕ್ಷ ಮಂದಿಯಲ್ಲಿ 2.3 ಟಿಟಿಎಸ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಭೌಗೋಳಿಕ ವ್ಯತ್ಯಾಸವಿದೆ. ಹೆಚ್ಚಿನ ಪ್ರಕರಣಗಳು ನಾರ್ಡಿಕ್ ದೇಶಗಳಿಂದ (ನಾರ್ವೆ ಇತ್ಯಾದಿ- ಹತ್ತು ಲಕ್ಷಕ್ಕೆ 17.6) ವರದಿಯಾಗಿವೆ. ಏಷ್ಯಾದ ದೇಶಗಳಲ್ಲಿ ಅತಿ ಕಡಿಮೆ (ಪ್ರತಿ ಹತ್ತು ಲಕ್ಷಕ್ಕೆ 0.2).

ಈಗ ಲಸಿಕೆ ತೆಗೆದುಕೊಳ್ಳಬೇಕೇ?

ಈಗ ಹೆಚ್ಚಿನ ಜನರಲ್ಲಿ ಕೊರೊನಾ ರೋಗನಿರೋಧಕ ಶಕ್ತಿಯಿದ್ದು, ಲಸಿಕೆಯ ಅಗತ್ಯವಿಲ್ಲ ಎಂದು ಡಾ. ಅಗರ್ವಾಲ್ ಹೇಳುತ್ತಾರೆ. “ವೈರಸ್ ಸಂಚರಿಸುತ್ತಿದ್ದರೂ ಈಗ ಭಾರತೀಯರಲ್ಲಿ ಪ್ರತಿಕಾಯ ಮಟ್ಟ ತುಂಬಾ ಹೆಚ್ಚಿವೆ. ಒಮಿಕ್ರಾನ್‌ನಂತಹ ರೂಪಾಂತರಿಗಳಿಂದ ರಕ್ಷಿಸಬಹುದಾದ ಹೊಸ ಲಸಿಕೆಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: Covishield Vaccine: ಕೋವಿಡ್‌ ಲಸಿಕೆಯಿಂದ ಬರುತ್ತೆ ರಕ್ತ ಹೆಪ್ಪುಗಟ್ಟೋ ಕಾಯಿಲೆ! ವಿವರ ನಿಮಗೆ ತಿಳಿದಿರಲಿ

Continue Reading
Advertisement
E-Pass Mandatory
ಪ್ರವಾಸ19 mins ago

E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

Davanagere lok sabha constituency bjp candidate gayatri siddeshwar election campaign in mayakonda
ದಾವಣಗೆರೆ23 mins ago

Lok Sabha Election 2024: ಮಾಯಕೊಂಡ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮತಯಾಚನೆ

Hassan Pen Drive case Prajwal and Revanna arrested if they fail to appear before SIT
ಕ್ರೈಂ31 mins ago

Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

Medical Negligence
ಕೊಪ್ಪಳ33 mins ago

Medical Negligence : ಸಕಾಲಕ್ಕೆ ಸಿಗದ ಚಿಕಿತ್ಸೆ; ಹೆರಿಗೆಗೂ ಮೊದಲೇ ತಾಯಿ-ಮಗು ಸಾವು

Maria alam Khan
ರಾಜಕೀಯ38 mins ago

Maria Alam Khan: “ಜಿಹಾದ್‌ಗಾಗಿ ಮತ ನೀಡಿ..”ಮಾಜಿ ಕೇಂದ್ರ ಸಚಿವರ ಸೊಸೆಯಿಂದ ಭಾರೀ ಎಡವಟ್ಟು

GST Collection
ದೇಶ39 mins ago

GST Collection: ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಜಿಎಸ್‌ಟಿ ಸಂಗ್ರಹ; ಏಪ್ರಿಲ್‌ನ ಕಲೆಕ್ಷನ್‌ ಎಷ್ಟು?

Covishield vaccine india
ಪ್ರಮುಖ ಸುದ್ದಿ43 mins ago

Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Rupali Ganguly Of Anupamaa Fame Joins BJP
ಕಿರುತೆರೆ51 mins ago

Rupali Ganguly: ನಾನು ಮೋದಿಯ ʻಡೈ ಹಾರ್ಡ್‌ ಫ್ಯಾನ್‌ʼ ಎಂದು ಬಿಜೆಪಿ ಸೇರಿದ ಖ್ಯಾತ ಕಿರುತೆರೆ ನಟಿ!

Movie Release
ಒಟಿಟಿ55 mins ago

Movie Release: ಈ ವಾರ ಒಟಿಟಿಯಲ್ಲಿ ನೀವು ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು; ಟ್ರೈಲರ್‌ಗಳನ್ನು ಇಲ್ಲಿ ನೋಡಿ

Hassan Pen Drive Case POCSO case registered against Prajwal Revanna
ಕ್ರೈಂ1 hour ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್‌; ಬಾಲಕಿ ಉಲ್ಟಾ ಹೊಡೆದರೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌