Gujarat High Court: ಪಿಎಂ ಮೋದಿ ಪದವಿ ಸರ್ಟಿಫಿಕೇಟ್ ಕೇಳಿದ್ದ ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ 25 ಸಾವಿರ ರೂ. ದಂಡ! - Vistara News

ದೇಶ

Gujarat High Court: ಪಿಎಂ ಮೋದಿ ಪದವಿ ಸರ್ಟಿಫಿಕೇಟ್ ಕೇಳಿದ್ದ ದಿಲ್ಲಿ ಸಿಎಂ ಕೇಜ್ರಿವಾಲ್‌ಗೆ 25 ಸಾವಿರ ರೂ. ದಂಡ!

Gujarat High Court: ಪ್ರಧಾನಿ ಮೋದಿ ಅವರ ಶೈಕ್ಷಣಿಕ ಸರ್ಟಿಫಿಕೇಟ್‌ಗಳನ್ನು ಒದಗಿಸುವ ಅವಶ್ಯಕತೆ ಇಲ್ಲ ಎಂದು ಹೇಳಿರುವ ಗುಜರಾತ್ ಹೈಕೋರ್ಟ್, ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ದಂಡ ವಿಧಿಸಿ, ಆದೇಶ ಹೊರಡಿಸಿದೆ.

VISTARANEWS.COM


on

Gujarat high court imposes rs 25,000 penalty on delhi CM Kejriwal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶಿಕ್ಷಣ ಅರ್ಹತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಗುಜರಾತ್ ಹೈಕೋರ್ಟ್ (Gujarat High Court) 25 ಸಾವಿರ ದಂಡ ವಿಧಿಸಿದೆ. ಪ್ರಧಾನಿ ಮೋದಿ ಅವರ ಪದವಿ ಮತ್ತು ಸ್ನಾತಕೋತ್ತರ ಪದವಿ ಸರ್ಟಿಫಿಕೇಟ್‌ಗಳನ್ನು ಪ್ರಧಾನಿ ಕಾರ್ಯಾಲಯವು(PMO) ಒದಗಿಸುವ ಅಗತ್ಯವಿಲ್ಲ ಎಂದು ಹೇಳಿರುವ ಗುಜರಾತ್ ಹೈಕೋರ್ಟ್, ಆರ್‌ಟಿಐನಡಿ ಮಾಹಿತಿ ಕೇಳಿದ್ದ ಅರವಿಂದ್ ಕೇಜ್ರಿವಾಲ್‌ಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ವಿವರಗಳನ್ನು ಒದಗಿಸುವಂತೆ ಪ್ರಧಾನಿ ಕಾರ್ಯಾಲಯದ ಸಾರ್ವಜನಿಕ ಮಾಹಿತಿ ಅಧಿಕಾರಿ(PIO) ಮತ್ತು ವಿಶ್ವವಿದ್ಯಾಲಯಗಳ ಸಾರ್ವಜನಿಕ ಮಾಹಿತಿ ಅಧಿಕಾರಿ(PIO)ಗಳಿಗೆ ಮಾಹಿತಿ ಆಯೋಗದ ಮುಸ್ಥರು(CIC) ಆದೇಶಿಸಿದ್ದರು. ಈ ಆದೇಶವನ್ನು ಗುಜರಾತ್‌ನ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರಿ ಪೀಠವು ರದ್ದು ಮಾಡಿದೆ. ಇದೇ ವೇಳೆ, ಪ್ರಧಾನಿ ಮೋದಿ ಅವರ ಶೈಕ್ಷಣಿಕ ಅರ್ಹತೆಯ ಪದವಿಗಳನ್ನು ಪತ್ರಗಳನ್ನು ಪೂರೈಸುವಂತೆ ಮಾಹಿತಿ ಕೇಳಿದ್ದ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ 25 ಸಾವಿರ ದಂಡ ವಿಧಿಸಿದೆ. ಸಿಐಸಿ ಆದೇಶವನ್ನು ಪ್ರಶ್ನಿಸಿ ಗುಜರಾತ್ ವಿಶ್ವವಿದ್ಯಾಲಯವು ಹೈಕೋರ್ಟ್‌ ಮೊರೆ ಹೋಗಿತ್ತು.

ಇದನ್ನೂ ಓದಿ: ಪ್ರಧಾನಿ ಮೋದಿ ಪದವಿ ವಿವಾದ; ಬಾಲಿಶ ಕುತೂಹಲವೆಲ್ಲ ಸಾರ್ವಜನಿಕ ಹಿತಾಸಕ್ತಿ ಅಲ್ಲ ಎಂದ ಗುಜರಾತ್​ ವಿವಿ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್​

ತೀರ್ಪು ಕಾಯ್ದಿರಿಸಿದ್ದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿಯವರ ಪದವಿ ಪ್ರಮಾಣಪತ್ರವನ್ನು ನೀಡುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಅವರು ಆರ್​ಟಿಐ ಕಾಯ್ದೆಯಡಿ ಕೇಳಿದ್ದರು. ಅರವಿಂದ್ ಕೇಜ್ರಿವಾಲ್​ ಕೇಳಿದ ದಾಖಲೆಯನ್ನು ನೀಡುವಂತೆ ಮುಖ್ಯ ಮಾಹಿತಿ ಆಯುಕ್ತರು (CIC) ಗುಜರಾತ್​ ವಿಶ್ವವಿದ್ಯಾಲಯಕ್ಕೆ 2016ರಲ್ಲಿ ನಿರ್ದೇಶನ ನೀಡಿದ್ದರು. ಸಿಐಸಿಯ ಈ ನಿರ್ದೇಶನದ ವಿರುದ್ಧ ಗುಜರಾತ್​ ಯೂನಿವರ್ಸಿಟಿ ಹೈಕೋರ್ಟ್​ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​ ತನ್ನ ತೀರ್ಪನ್ನು ಫೆಬ್ರವರಿ 10ರಂದು ಕಾಯ್ದಿರಿಸಿತ್ತು.

ಗುಜರಾತ್​ ಯೂನಿವರ್ಸಿಟಿ ಪರ ವಾದ ಮಂಡಿಸಿದ್ದ ಸಾಲಿಸಿಟರ್ ಜನರಲ್​ ತುಷಾರ್​ ಮೆಹ್ತಾ ಅವರು, ‘ಆರ್​ಟಿಐ ಕಾಯ್ದೆಯ ದುರುಪಯೋಗ ಆಗುತ್ತಿದೆ’ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ ಪದವಿ ಪ್ರಮಾಣ ಪತ್ರ ಪಡೆಯಲು ಆರ್​ಟಿಐ ಕಾಯ್ದೆ ಅನ್ವಯ ಮಾಡಲು ಆಗುವುದಿಲ್ಲ. ಯಾರೋ ಒಬ್ಬರ ಬಾಲಿಶ ಕುತೂಹಲವೆಲ್ಲ ಸಾರ್ವಜನಿಕ ಹಿತಾಸಕ್ತಿ ಆಗುವುದಿಲ್ಲ ಎಂದು ಕೋರ್ಟ್​​ಗೆ ತಿಳಿಸಿದರು.

ಯಾವುದೇ ಸಾರ್ವಜನಿಕ ಆಡಳಿತ ಹುದ್ದೆಯಲ್ಲಿರುವ ಯಾರೇ ಆಗಿರಲಿ, ಅವರ ಸಾರ್ವಜನಿಕ ಚಟುವಟಿಕೆಗಳಿಗೆ ಸಂಬಂಧವಿಲ್ಲದೆ ಇರುವ, ಇನ್ನೊಬ್ಬರ ವೈಯಕ್ತಿಕ ವಿಷಯಗಳನ್ನೆಲ್ಲ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳುವಂತಿಲ್ಲ. ಅಷ್ಟಕ್ಕೂ ಪ್ರಧಾನಿ ನರೇಂದ್ರ ಮೋದಿಯವರ ಪದವಿ ಬಗ್ಗೆ ಸಾರ್ವಜನಿಕ ಡೊಮೇನ್​ನಲ್ಲಿ ಮಾಹಿತಿ ನೀಡಲಾಗಿದೆ. ಗುಜರಾತ್​ ವಿಶ್ವವಿದ್ಯಾಲಯವೂ ಕೂಡ ಈ ಹಿಂದೆ ತನ್ನ ವೆಬ್​ಸೈಟ್​​ನಲ್ಲಿ ಈ ಬಗ್ಗೆ ವಿವರವನ್ನು ನೀಡಿತ್ತು ಎಂದು ಸಾಲಿಸಿಟರ್ ಜನರಲ್ ವಾದಿಸಿದರು.

ಇನ್ನೊಂದೆಡೆ ಅರವಿಂದ್ ಕೇಜ್ರಿವಾಲ್​ ಪರ ವಕೀಲರು ಮಾಹಿತಿ ಹಕ್ಕು ಕಾಯ್ದೆಯಡಿಯಲ್ಲಿ ಕೇಳಲಾದ ಪ್ರಶ್ನೆಗೆ ಉತ್ತರಿಸಬೇಕು. ಪ್ರಧಾನಿ ಮೋದಿಯವರ ಪದವಿ ಬಗೆಗಿನ ಮಾಹಿತಿ ಯಾವುದೇ ಸಾರ್ವಜನಿಕ ಡೊಮೇನ್​ನಲ್ಲಿ ಸಿಗುತ್ತಿಲ್ಲ ಎಂದು ವಾದಿಸಿದ್ದರು. ಎರಡೂ ಕಡೆಯವರ ವಾದವನ್ನು ಆಲಿಸಿದ ನ್ಯಾಯಮೂರ್ತಿ ಬಿರೆನ್​ ವೈಷ್ಣವ್​ ಅವರು ತೀರ್ಪು ಕಾಯ್ದಿರಿಸಿದ್ದರು.

ಏನಿದು ಪಿಎಂ ಮೋದಿ ಪದವಿ ವಿವಾದ?

ಪ್ರಧಾನಿ ನರೇಂದ್ರ ಮೋದಿ ಅವರು 2014ರಲ್ಲಿ ಪ್ರಧಾನಿಯಾಗುತ್ತಿದ್ದಂತೆ ಪ್ರತಿಪಕ್ಷಗಳು ಅವರ ಶೈಕ್ಷಣಿಕ ಅರ್ಹತೆಯ ಬಗ್ಗೆ ಪ್ರಶ್ನಿಸಲಾರಂಭಿಸಿದವು. ಆಗ, ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ವಿವಿಯಿಂದ ಪದವಿ ಹಾಗೂ ದಿಲ್ಲಿ ವಿವಿಯಿಂದ ಎಂಎ ಪದವಿಯನ್ನು ಪಡೆದುಕೊಂಡಿದ್ದಾರೆಂದು ಹೇಳಿತ್ತು. ಅಲ್ಲದೇ ಸಂಬಂಧಿಸಿದ ದಾಖಲೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರದರ್ಶಿಸಿದ್ದರು. ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಹಾಗೂ ಸ್ನಾತಕೋತ್ತರ ಪದವಿ ಪತ್ರಗಳ ಬಹಿರಂಗ ಕೋರಿ, ಮಾಹಿತಿ ಹಕ್ಕಿನ ಕಾಯ್ದೆಯಡಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ಮಾಹಿತಿ ಹಕ್ಕು ಆಯೋಗವು, ಅರ್ಜಿದಾರರ ಮಾಹಿತಿಯನ್ನು ಪೂರೈಸುವಂತೆ ಪಿಎಂಒ ಹಾಗೂ ವಿಶ್ವವಿದ್ಯಾಲಯಗಳಿಗೆ ಆದೇಶಿಸಿತ್ತು. ಗುಜರಾತ್ ವಿವಿಯು ಆಯೋಗ ಈ ಆದೇಶವನ್ನು ಪ್ರಶ್ನಿಸಿ ಗುಜರಾತ್‌ ಹೈಕೋರ್ಟ್‌ಗೆ ಮೊರೆ ಹೋಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Patanjali: ಪತಂಜಲಿ ಆಯುರ್ವೇದ ಸಂಸ್ಥೆಯ ಉತ್ಪನ್ನಗಳ ದಕ್ಷತೆ ಹಾಗೂ ಅವುಗಳ ದಕ್ಷತೆ ಕುರಿತು ನೀಡಿರುವ ಜಾಹೀರಾತಿಗೂ ತಾಳೆಯಾಗದ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರವು 14 ಉತ್ಪನ್ನಗಳ ಪರವಾನಗಿಯನ್ನು ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ. ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂಧನೆ ಭೀತಿ ಎದುರಿಸುತ್ತಿರುವ ಬಾಬಾ ರಾಮದೇವ್‌ ಅವರಿಗೆ ಇದರಿಂದ ಮತ್ತೊಂದು ಹಿನ್ನಡೆಯಾದಂತಾಗಿದೆ.

VISTARANEWS.COM


on

Patanjali
Koo

ಡೆಹ್ರಾಡೂನ್:‌ ಜನರ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಂಸ್ಥೆ (Patanjali Ayurved) ಮುಖ್ಯಸ್ಥ ಬಾಬಾ ರಾಮದೇವ್‌ (Baba Ramdev) ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ (Acharya Balkrishna) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪತಂಜಲಿ (Patanjali) ಸಂಸ್ಥೆಯ 14 ಉತ್ಪನ್ನಗಳ ಪರವಾನಗಿಯನ್ನು ಉತ್ತರಾಖಂಡ ಸರ್ಕಾರವು (Uttarakhand Government) ರದ್ದುಗೊಳಿಸಿದೆ.

ಪತಂಜಲಿ ಉತ್ಪನ್ನಗಳ ಪರವಾನಗಿ ರದ್ದುಗೊಳಿಸುವ ಜತೆಗೆ ಡ್ರಗ್ಸ್‌ ಆ್ಯಂಡ್‌ ಮ್ಯಾಜಿ ರೆಮೆಡೀಸ್‌ ಆ್ಯಕ್ಟ್‌ನ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರ ವಿರುದ್ಧ ಕ್ರಿಮಿನಲ್‌ ಕೇಸ್‌ ಕೂಡ ದಾಖಲಿಸಲಾಗಿದೆ. ಜನರ ದಾರಿ ತಪ್ಪಿಸುವ ರೀತಿಯ ಜಾಹೀರಾತು ಪ್ರಕರಣದಲ್ಲಿ ನ್ಯಾಯಾಂಗ ನಿಂದನೆ ಭೀತಿ ಎದುರಿಸುತ್ತಿರುವ ಕೇಸ್‌ ಕುರಿತು ಕೂಡ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಇದರ ಮಧ್ಯೆಯೇ ಪತಂಜಲಿ ಉತ್ಪನ್ನಗಳ ಪರವಾನಗಿ ರದ್ದುಗೊಳಿಸಿರುವುದು ಬಾಬಾ ರಾಮದೇವ್‌ ಅವರಿಗೆ ಭಾರಿ ಹಿನ್ನಡೆಯಾದಂತಾಗಿದೆ.

ಪತಂಜಲಿ ಆಯುರ್ವೇದ ಸಂಸ್ಥೆಯ ಉತ್ಪನ್ನಗಳ ದಕ್ಷತೆ ಹಾಗೂ ಅವುಗಳ ದಕ್ಷತೆ ಕುರಿತು ನೀಡಿರುವ ಜಾಹೀರಾತಿಗೂ ತಾಳೆಯಾಗದ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರವು ಉತ್ಪನ್ನಗಳ ಪರವಾನಗಿಯನ್ನು ರದ್ದುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಪರವಾನಗಿ ರದ್ದು ಕುರಿತು ಇದುವರೆಗೆ ಉತ್ತರಾಖಂಡ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿಲ್ಲ.

ಪತಂಜಲಿ ಸಂಸ್ಥೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು (IMA) ಅರ್ಜಿ ಸಲ್ಲಿಸಿದೆ. ಪತಂಜಲಿ ಸಂಸ್ಥೆಯು ಕೊರೊನಾ ನಿರೋಧಕ ಲಸಿಕೆ ಹಾಗೂ ಆಧುನಿಕ ಔಷಧ ಪದ್ಧತಿ ಬಗ್ಗೆ ಸುಳ್ಳು ಅಭಿಯಾನ ಆರಂಭಿಸಿದೆ. ಅಷ್ಟೇ ಅಲ್ಲ, ಅಲೋಪಥಿ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಜನರ ದಾರಿ ತಪ್ಪಿಸುವ ರೀತಿ ಪತಂಜಲಿ ಸಂಸ್ಥೆಯು ಜಾಹೀರಾತುಗಳನ್ನು ನೀಡುತ್ತಿದೆ. ಇದು ಡ್ರಗ್ಸ್‌ ಆ್ಯಂಡ್‌ ಮ್ಯಾಜಿಕ್‌ ರೆಮೆಡೀಸ್‌ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಐಎಂಎ ಅರ್ಜಿ ಸಲ್ಲಿಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾನುದ್ದೀನ್‌ ಅಮಾನುಲ್ಲಾ ಅವರು ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇಬ್ಬರೂ ಸುಪ್ರೀಂ ಕೋರ್ಟ್‌ಗೆ ತೆರಳಿ ಕ್ಷಮೆಯಾಚಿಸಿದರೂ ಕೇಳಿರಲಿಲ್ಲ. ಕೊನೆಗೆ ಪತ್ರಿಕೆಯಲ್ಲಿ ಜಾಹೀರಾತು ಹೊರಡಿಸಿ ಇಬ್ಬರೂ ಕ್ಷಮೆ ಕೇಳುವಂತೆ ಮಾಡಿದ್ದರು.

ಇದನ್ನೂ ಓದಿ: Baba Ramdev: ನೀವೇನು ಅಮಾಯಕರಲ್ಲ, ಕ್ಷಮಿಸಲ್ಲ; ಬಾಬಾ ರಾಮದೇವ್‌ಗೆ ಸುಪ್ರೀಂ ಚಾಟಿ!

Continue Reading

ದೇಶ

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Chandrayaan 3: 2023ರ ಜುಲೈ 14ರಂದು ಚಂದ್ರಯಾನ 3 ಮಿಷನ್‌ ಉಡಾವಣೆಗೆ ಕೆಲವೇ ನಿಮಿಷಗಳು ಬಾಕಿ ಇರುವಾಗಲೇ ಇಸ್ರೋ ವಿಜ್ಞಾನಿಗಳಿಗೆ ಹೊಸ ಸಮಸ್ಯೆ ಎದುರಾಗಿತ್ತು. ಬಾಹ್ಯಾಕಾಶ ತ್ಯಾಜ್ಯವೊಂದು ಚಂದ್ರಯಾನ 3 ಮಿಷನ್‌ ಉಡಾವಣೆಗೆ ಅಡ್ಡಿಯಾಗಿತ್ತು. ಆದರೆ, ಇಸ್ರೋ ವಿಜ್ಞಾನಿಗಳು ಚಾಣಾಕ್ಷತನ ಮೆರೆದ ಕಾರಣ ಇಡೀ ಮಿಷನ್‌ ಯಶಸ್ವಿಯಾಗಿದೆ.

VISTARANEWS.COM


on

Chandrayaan 3
Koo

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಐತಿಹಾಸಿಕ ಚಂದ್ರಯಾನ 3 ಮಿಷನ್‌ಅನ್ನು ಯಶಸ್ವಿಯಾಗಿ ಕೈಗೊಳ್ಳುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. ಅದರಲ್ಲೂ, ಚಂದ್ರನ ದಕ್ಷಿಣ ಧ್ರುವದಲ್ಲಿ ಮಿಷನ್‌ಅನ್ನು ಸಾಫ್ಟ್‌ ಲ್ಯಾಂಡ್‌ ಮಾಡಿದ ಜಗತ್ತಿನ ಮೊದಲ ದೇಶ ಎನಿಸಿದೆ. ಇದಾದ ಬಳಿಕ ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೋ ಛಾಪು ಮೂಡಿಸಿದೆ. ಆದರೆ, ಉಡಾವಣೆಯಾದ ಕೆಲವೇ ಹೊತ್ತಿನಲ್ಲಿ ಚಂದ್ರಯಾನ 3 ಮಿಷನ್‌ (Chandrayaan 3) ಬಾಹ್ಯಾಕಾಶದಲ್ಲೇ ಛಿದ್ರವಾಗುತ್ತಿತ್ತು. ಆದರೆ, ಅದನ್ನು ಇಸ್ರೋ ವಿಜ್ಞಾನಿಗಳು ಕೇವಲ 4 ಸೆಕೆಂಡ್‌ಗಳಲ್ಲಿ ತಡೆದರು ಎಂಬ ಮಾಹಿತಿ ಲಭ್ಯವಾಗಿದೆ.

2023ರ ಜುಲೈ 14ರಂದು ಚಂದ್ರಯಾನ 3 ಮಿಷನ್‌ ಉಡಾವಣೆಗೆ ಕೆಲವೇ ನಿಮಿಷಗಳು ಬಾಕಿ ಇದ್ದವು. ಇನ್ನೇನು ಉಡಾವಣೆ ಮಾಡಬೇಕು ಎನ್ನುವಷ್ಟರಲ್ಲಿಯೇ ಚಂದ್ರಯಾನ 3 ರಾಕೆಟ್‌ ಸಾಗುವ ಮಾರ್ಗದಲ್ಲಿ ಬಾಹ್ಯಾಕಾಶ ತ್ಯಾಜ್ಯವೊಂದು ಇಸ್ರೋ ವಿಜ್ಞಾನಿಗಳಿಗೆ ಕಾಣಿಸಿದೆ. ಇದರಿಂದಾಗಿ ಇಸ್ರೋ ವಿಜ್ಞಾನಿಗಳಲ್ಲಿ ಆತಂಕ ಮನೆ ಮಾಡಿತ್ತು. ಇನ್ನೇನು ಕೆಲವೇ ನಿಮಿಷಗಳಲ್ಲಿ ಉಡಾವಣೆ ಮಾಡಬೇಕಿದೆ. ಉಡಾವಣೆ ಮಾಡಿದರೆ ಬಾಹ್ಯಾಕಾಶ ತ್ಯಾಜ್ಯಕ್ಕೆ ಚಂದ್ರಯಾನ 3 ರಾಕೆಟ್‌ ಡಿಕ್ಕಿಯಾಗಿ, ಇಡೀ ಮಿಷನ್‌ ಹಾಳಾಗುತ್ತಿತ್ತು.

ಇಸ್ರೋ ವಿಜ್ಞಾನಿಗಳ ಚಾಣಾಕ್ಷತನ

ಚಂದ್ರಯಾನ 3 ಉಡಾವಣೆ ಮಾಡಲೇಬೇಕಿತ್ತು. ಹಾಗಾಗಿ, ಇಸ್ರೋ ವಿಜ್ಞಾನಿಗಳು ಚಾಣಾಕ್ಷತನ ಮೆರೆದರು. ಕೊನೆಯ ಕ್ಷಣದಲ್ಲಿ ಉಡಾವಣೆಯನ್ನು 4 ಸೆಕೆಂಡ್‌ ವಿಳಂಬ ಮಾಡಿದರು. ಇದೇ ಅವಧಿಯಲ್ಲಿ ಬಾಹ್ಯಾಕಾಶ ತ್ಯಾಜ್ಯವು ಚಂದ್ರಯಾನ 3 ಮಿಷನ್‌ ಮಾರ್ಗದಿಂದ ಬೇರೆಡೆ ವಾಲಿತು. ಆಗ, ವಿಜ್ಞಾನಿಗಳು ಯಶಸ್ವಯಾಗಿ ಚಂದ್ರಯಾನ 3 ಮಿಷನ್‌ಅನ್ನು ಉಡಾವಣೆ ಮಾಡಿದರು. ನಿಗದಿತ ಸಮಯಕ್ಕೆ ಉಡಾವಣೆ ಮಾಡಿದ್ದರೆ ಇಡೀ ಮಿಷನ್‌ ವಿಫಲವಾಗುತ್ತಿತ್ತು ಎನ್ನಲಾಗಿದೆ.

2023ರ ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ LVM3 ರಾಕೆಟ್‌ನ ಮೂಲಕ ಉಡಾವಣೆಗೊಂಡ ಚಂದ್ರಯಾನ-3, ಒಂದು ತಿಂಗಳ ಕಾಲ ಬಾಹ್ಯಾಕಾಶ ಹಾರಾಟದ ನಂತರ ಆಗಸ್ಟ್ 23ರಂದು ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಇಳಿಯಿತು. ಆ ಮೂಲಕ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್‌ ಲ್ಯಾಂಡ್‌ ಆದ ಜಗತ್ತಿನ ಮೊದಲ ಮಿಷನ್‌ ಎಂಬ ಖ್ಯಾತಿಗೆ ಭಾಜನವಾಯಿತು. ಇದರೊಂದಿಗೆ ಇಸ್ರೋ ಮೈಲುಗಲ್ಲು ಸ್ಥಾಪಿಸಿತು.

ಅಷ್ಟೇ ಅಲ್ಲ, ಚಂದ್ರಯಾನ 3 ಮಿಷನ್‌ ಲ್ಯಾಂಡ್‌ ಆದ ಪ್ರದೇಶವನ್ನು ಶಿವಶಕ್ತಿ ಎಂಬುದಾಗಿ ಕರೆಯಲು ಅಂತಾರಾಷ್ಟ್ರೀಯ ಖಗೋಳ ಒಕ್ಕೂಟವು (International Astronomical Union) ಮಾರ್ಚ್‌ 19ರಂದು ಅನುಮತಿ ನೀಡಿದೆ. ಇದರೊಂದಿಗೆ ಬಾಹ್ಯಾಕಾಶ ನೌಕೆ ಇಳಿದ ಪ್ರದೇಶವೀಗ ಅಧಿಕೃತವಾಗಿ ಶಿವಶಕ್ತಿ ಪಾಯಿಂಟ್‌ ಎನಿಸಿದೆ.

ಇದನ್ನೂ ಓದಿ: Chandrayaan-3 mission: ಇಸ್ರೋದ ಚಂದ್ರಯಾನ-3 ಟೀಮ್‌ಗೆ ಅಮೆರಿಕದ ಪ್ರಶಸ್ತಿ: ʼಸ್ಫೂರ್ತಿʼ ಎಂದ ಸ್ಪೇಸ್‌ ಫೌಂಡೇಶನ್

Continue Reading

ದೇಶ

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Lok Sabha Election 2024: ಮೂರನೇ ಹಂತದಲ್ಲಿ 1,352 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಇವರಲ್ಲಿ ಶೇ.18ರಷ್ಟು ಅಂದರೆ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. 172 ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಅತ್ಯಾಚಾರ ಸೇರಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಕುರಿತಂತೆ 38 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ದ್ವೇಷ ಭಾಷಣಕ್ಕೆ ಕುರಿತಂತೆ 17 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿವೆ ಎಂದು ಎಡಿಆರ್‌ ವರದಿ ತಿಳಿಸಿದೆ.

VISTARANEWS.COM


on

Lok Sabha Election
Koo

ನವದೆಹಲಿ: ದೇಶಾದ್ಯಂತ ಬೇಸಿಗೆಯ ಬಿಸಿಲಿನಷ್ಟೇ ಲೋಕಸಭೆ ಚುನಾವಣೆ (Lok Sabha Election 2024) ಕಾವು ಕೂಡ ಜೋರಾಗಿದೆ. ರಾಜಕೀಯ ನಾಯಕರ ಅಬ್ಬರದ ಸಮಾವೇಶಗಳು, ಪ್ರಚಾರದ ಭರಾಟೆ, ತೀಕ್ಷ್ಣ ಹೇಳಿಕೆಗಳು, ಪ್ರತಿಸ್ಪರ್ಧಿಗಳ ವಿರುದ್ಧ ಮಾಡುವ ಆರೋಪಗಳು ಸುದ್ದಿಯಾಗುತ್ತಿವೆ. ಇನ್ನು ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದ್ದು, ಇದಕ್ಕಾಗಿ ಅಭ್ಯರ್ಥಿಗಳು, ನಾಯಕರು ಇನ್ನಿಲ್ಲದ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ, ಮೂರನೇ ಹಂತದಲ್ಲಿ 1,352 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಇವರಲ್ಲಿ ಶೇ.18ರಷ್ಟು ಅಂದರೆ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ (Criminal Case) ದಾಖಲಾಗಿವೆ ಎಂದು ತಿಳಿದುಬಂದಿದೆ.

ನ್ಯಾಷನಲ್‌ ಎಲೆಕ್ಷನ್‌ ವಾಚ್‌ ಹಾಗೂ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ (ADR) ಬಿಡುಗಡೆ ಮಾಡಿರುವ ವರದಿ ಪ್ರಕಾರ, ಮೂರನೇ ಹಂತದ 244 ಅಭ್ಯರ್ಥಿಗಳ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ ಎಂದು ತಿಳಿದುಬಂದಿದೆ. 172 ಅಭ್ಯರ್ಥಿಗಳ ವಿರುದ್ಧ ಗಂಭೀರ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಅತ್ಯಾಚಾರ ಸೇರಿ ಮಹಿಳೆಯರ ಮೇಲೆ ದೌರ್ಜನ್ಯಕ್ಕೆ ಕುರಿತಂತೆ 38 ಜನರ ವಿರುದ್ಧ ಕೇಸ್‌ ದಾಖಲಾಗಿದೆ. ದ್ವೇಷ ಭಾಷಣಕ್ಕೆ ಕುರಿತಂತೆ 17 ಅಭ್ಯರ್ಥಿಗಳ ವಿರುದ್ಧ ಪ್ರಕರಣ ದಾಖಲಾಗಿವೆ. ಅಭ್ಯರ್ಥಿಗಳು ಚುನಾವಣೆ ಆಯೋಗಕ್ಕೆ ನೀಡಿರುವ ಮಾಹಿತಿ ಆಧರಿಸಿ ವರದಿ ತಯಾರಿಸಲಾಗಿದೆ.

Lok Sabha Election-2024

ಬಿಜೆಪಿಯಿಂದ ಸ್ಪರ್ಧಿಸಿದ 82 ಅಭ್ಯರ್ಥಿಗಳಲ್ಲಿ 22 ಮಂದಿ ವಿರುದ್ಧ ಕ್ರಿಮಿನಲ್‌ ಕೇಸ್‌ ಇವೆ. ಇನ್ನು ಕಾಂಗ್ರೆಸ್‌ನ 68 ಅಭ್ಯರ್ಥಿಗಳ ಪೈಕಿ 26, ಆರ್‌ಜೆಡಿಯ ಮೂರಕ್ಕೆ ಮೂವರ ವಿರುದ್ಧವೂ ಕ್ರಿಮಿನಲ್‌ ಕೇಸ್‌ ದಾಖಲಾಗಿವೆ. ಶಿವಸೇನೆ (ಉದ್ಧವ್‌ ಬಾಳಾಸಾಹೇಬ್‌ ಠಾಕ್ರೆ) ಶೇ.80, ಎನ್‌ಸಿಪಿ (ಶರದ್‌ ಪವಾರ್)‌ ಶೇ.67, ಸಮಾಜವಾದಿ ಪಾರ್ಟಿ ಶೇ.50, ಜೆಡಿಯು ಶೇ.33 ಹಾಗೂ ತೃಣಮೂಲ ಕಾಂಗ್ರೆಸ್‌ನ ಶೇ.17ರಷ್ಟು ಅಭ್ಯರ್ಥಿಗಳು ಕ್ರಿಮಿನಲ್‌ ಕೇಸ್‌ ಹೊಂದಿದ್ದಾರೆ ಎಂಬುದು ವರದಿ ಮೂಲಕ ಬಹಿರಂಗವಾಗಿದೆ.

ಇವರ ಆಸ್ತಿ-ಪಾಸ್ತಿ ಎಷ್ಟು?

ಮೂರನೇ ಹಂತದಲ್ಲಿ 1,352 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದ್ದು, ಇವರಲ್ಲಿ 292 ಅಭ್ಯರ್ಥಿಗಳು ಕೋಟ್ಯಧೀಶರಾಗಿದ್ದಾರೆ. ಇವರಲ್ಲಿ ಬಿಜೆಪಿಯ 77, ಕಾಂಗ್ರೆಸ್‌ನ 60 ಅಭ್ಯರ್ಥಿಗಳು ಕೋಟ್ಯಧೀಶರಾಗಿದ್ದಾರೆ. ಗೋವಾದ ಪಲ್ಲವಿ ಶ್ರೀನಿವಾಸ್‌ ಡೆಂಪೊ ಅವರ ಆಸ್ತಿಯ ಮೌಲ್ಯವು 1,361 ಕೋಟಿ ರೂ. ಆಗಿದ್ದು, ಇವರೇ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ. ಇನ್ನು ಮಧ್ಯಪ್ರದೇಶದ ಜ್ಯೋತಿರಾದಿತ್ಯ ಸಿಂಧಿಯಾ ಅವರ ಆಸ್ತಿಯ ಮೌಲ್ಯವು 424 ಕೋಟಿ ರೂ. ಆಗಿದ್ದು, ಎರಡನೇ ಶ್ರೀಮಂತ ಅಭ್ಯರ್ಥಿ ಎನಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಶಾಹು ಶಹಾಜಿ ಅವರು ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದು, ಇವರ ಆಸ್ತಿ ಮೌಲ್ಯ 342 ಕೋಟಿ ರೂ. ಆಗಿದೆ. ಇವರು ಮೂರನೇ ಶ್ರೀಮಂತ ಅಭ್ಯರ್ಥಿ ಆಗಿದ್ದಾರೆ.

ಇದನ್ನೂ ಓದಿ: Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

Continue Reading

ದೇಶ

Narendra Modi: ತಾಕತ್ತಿದ್ದವರು 370ನೇ ವಿಧಿ ಜಾರಿಗೆ ತರಲಿ; ಪ್ರತಿಪಕ್ಷಗಳಿಗೆ ಮೋದಿ ಸವಾಲು!

Narendra Modi: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ 370ನೇ ವಿಧಿಯು ರಾಜ್ಯಗಳ ಪಟ್ಟಿಯಲ್ಲಿ ಬರುವುದಿಲ್ಲ. ಇದು ರಾಜ್ಯಗಳಿಗೆ ಸಂಬಂಧಿಸಿದ ವಿಷಯವಲ್ಲ. ಹಾಗಾಗಿ, ಯಾವುದೇ ರಾಜ್ಯ ಸರ್ಕಾರಗಳು ಸಿಎಎ ಜಾರಿಯನ್ನು ತಡೆಯುವ ಹಾಗೂ 370ನೇ ವಿಧಿಯನ್ನು ಮತ್ತೆ ಜಾರಿಗೆ ತರುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆ ಚುನಾವಣೆ (Lok Sabha Election 2024) ಕಾವು ದಿನೇದಿನೆ ಜಾಸ್ತಿಯಾಗುತ್ತಿದೆ. ರಾಜಕಾರಣಿಗಳ ಹೇಳಿಕೆಗಳು, ಅವರು ಮಾತನಾಡುವ ವಿಷಯಗಳು ಇನ್ನಷ್ಟು ಕಾವು ಪಡೆದುಕೊಳ್ಳುತ್ತಿವೆ. “ನಾವು ಅಧಿಕಾರಕ್ಕೆ ಬಂದರೆ ಕಾಶ್ಮೀರದಲ್ಲಿ 370ನೇ ವಿಧಿ ಮತ್ತೆ ಜಾರಿಗೆ ತರುತ್ತೇವೆ. ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯನ್ನು ತಡೆಯುತ್ತೇವೆ” ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ಇದರ ಬೆನ್ನಲ್ಲೇ, ಪ್ರತಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಸವಾಲು ಹಾಕಿದ್ದಾರೆ. “ತಾಕತ್ತಿದ್ದವರು 370ನೇ ವಿಧಿಯನ್ನು ಮತ್ತೆ ಜಾರಿಗೆ ತರಲಿ. ತಾಕತ್ತಿದ್ದವರು ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಡೆಯಲಿ” ಎಂದು ನ್ಯೂಸ್‌ 18ಗೆ ನೀಡಿದ ಸಂದರ್ಶನದ ವೇಳೆ ನರೇಂದ್ರ ಮೋದಿ ಹೇಳಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಸಿಎಎ ಜಾರಿಯಾಗಲು ಬಿಡುವುದಿಲ್ಲ. ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ಮತ್ತೆ ಜಾರಿಗೆ ತರಲಾಗುವುದು” ಎಂಬುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿರುವ ಕುರಿತು ಸಂದರ್ಶನದ ವೇಳೆ ಪ್ರಶ್ನೆಗೆ ನರೇಂದ್ರ ಮೋದಿ ಉತ್ತರಿಸಿದರು. “ನಾನು ಕಾಂಗ್ರೆಸ್‌ ಸೇರಿ ಯಾವುದೇ ಪ್ರತಿಪಕ್ಷಗಳಿಗೆ ಸವಾಲು ಹಾಕುತ್ತೇನೆ. ತಾಕತ್ತಿದ್ದವರು 370ನೇ ವಿಧಿಯನ್ನು ಜಾರಿಗೆ ತರಲಿ. ಹಾಗೆಯೇ, ಸಿಎಎ ಜಾರಿಯನ್ನು ಯಾರಿಗೂ ತಡೆಯಲು ಆಗುವುದಿಲ್ಲ” ಎಂದು ಹೇಳಿದರು.

“ಯಾರು ಸಂವಿಧಾನವನ್ನು ಸರಿಯಾಗಿ ಓದಿರುತ್ತಾರೋ, ಯಾರು ಒಕ್ಕೂಟ ವ್ಯವಸ್ಥೆಯನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುತ್ತಾರೋ, ಅವರು ಇಂತಹ ಹೇಳಿಕೆ ನೀಡುವುದಿಲ್ಲ. ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ 370ನೇ ವಿಧಿಯು ರಾಜ್ಯಗಳಿಗೆ ಸಂಬಂಧಿಸಿದ ವಿಷಯವಲ್ಲ. ರಾಜ್ಯಗಳ ಪಟ್ಟಿಯಲ್ಲಿ ಇವು ಬರುವುದಿಲ್ಲ. ನರೇಂದ್ರ ಮೋದಿ ಕೂಡ ಯಾವುದೇ ರಾಜ್ಯದ ಮುಖ್ಯಮಂತ್ರಿಯಾಗಿದ್ದರೂ, ಇಂತಹ ನಿರ್ಧಾರ ತೆಗೆದುಕೊಳ್ಳಲು ಬರುವುದಿಲ್ಲ. ಇದು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ವಿಷಯವಾಗಿದೆ” ಎಂದು ತಿಳಿಸಿದರು.

“ಯಾವುದೇ ರಾಜ್ಯಗಳಿಗೆ 370ನೇ ವಿಧಿ ಮರು ಜಾರಿಗೊಳಿಸಲು ಆಗುವುದಿಲ್ಲ. ಕಾಂಗ್ರೆಸ್‌ ಸೇರಿ, ಯಾವುದೇ ಪಕ್ಷಗಳಿಗೆ ನಾನು ಸವಾಲು ಹಾಕುತ್ತೇನೆ. ತಾಕತ್ತಿದ್ದರೆ, 370ನೇ ವಿಧಿಯನ್ನು ಮತ್ತೆ ಜಾರಿಗೊಳಿಸುತ್ತೇವೆ ಎಂದು ಘೋಷಿಸಲಿ ನೋಡೋಣ. ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೆಸರು ಹೇಳಿಕೊಂಡು ನಮ್ಮ ವಿರುದ್ಧ ಟೀಕೆ ಮಾಡುತ್ತಾರೆ. ಆದರೆ, ಸ್ವಾತಂತ್ರ್ಯದ ಬಳಿಕ ಅಂಬೇಡ್ಕರ್‌ ಅವರು ರಚಿಸಿದ ಸಂವಿಧಾನವು ಜಮ್ಮು-ಕಾಶ್ಮೀರದಲ್ಲಿ ಅನ್ವಯವಾಗಿರಲಿಲ್ಲ. 370ನೇ ವಿಧಿ ರದ್ದುಗೊಳಿಸಿ, ನಾವು ಅಂಬೇಡ್ಕರ್‌ ಸಂವಿಧಾನವು ಜಮ್ಮು-ಕಾಶ್ಮೀರದಲ್ಲೂ ಜಾರಿಯಾಗುವಂತೆ ಮಾಡಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: PM Narendra Modi: ಶಿರಸಿಗೆ ಬಂದಾಗ ಮೋದಿ ಭೇಟಿ ಮಾಡಿದ ನಾಲ್ವರು ವಿಶೇಷ ವ್ಯಕ್ತಿಗಳಿವರು! ಏನಿವರ ಸಾಧನೆ?

Continue Reading
Advertisement
KKR vs DC
ಕ್ರೀಡೆ4 mins ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ14 mins ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ21 mins ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ41 mins ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ42 mins ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Murder Case
ಕರ್ನಾಟಕ52 mins ago

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Chandrayaan 3
ದೇಶ1 hour ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Champions Trophy 2025
ಕ್ರೀಡೆ1 hour ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

Karnataka Weather
ಕರ್ನಾಟಕ2 hours ago

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Lok Sabha Election
ದೇಶ2 hours ago

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202410 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202411 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌