Karnataka Election 2023: ಮುಗಿಯದ ಹಾಸನ ಜೆಡಿಎಸ್‌ ಅಭ್ಯರ್ಥಿ ಗೊಂದಲ; ಹೊಸ ಹೆಸರು ಹರಿಬಿಟ್ಟ ರೇವಣ್ಣ! - Vistara News

ಕರ್ನಾಟಕ

Karnataka Election 2023: ಮುಗಿಯದ ಹಾಸನ ಜೆಡಿಎಸ್‌ ಅಭ್ಯರ್ಥಿ ಗೊಂದಲ; ಹೊಸ ಹೆಸರು ಹರಿಬಿಟ್ಟ ರೇವಣ್ಣ!

HD Revanna: ಹಾಸನ ಜೆಡಿಎಸ್‌ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗಾಗಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಕುಟುಂಬದಲ್ಲಿ ಮುಸುಕಿನ ಗುದ್ದಾಟ ಇನ್ನೂ ಮುಗಿದಿಲ್ಲ. ಭವಾನಿಗೆ ಟಿಕೆಟ್‌ ನೀಡದಿದ್ದರೆ ಸ್ವರೂಪ್‌ಗೂ ಟಿಕೆಟ್‌ ಬೇಡ ಎಂದು ಪಟ್ಟು ಹಿಡಿದಿರುವ ಎಚ್‌.ಡಿ. ರೇವಣ್ಣ ಈಗ ಹೊಸ ಅಭ್ಯರ್ಥಿಯೊಬ್ಬರ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ.

VISTARANEWS.COM


on

JdS candidate from Hassan is in a dilemma Revanna suggest new name Karnataka Election 2023 updates
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ವಿಧಾನಸಭಾ ಚುನಾವಣೆ (Karnataka Election 2023) ದಿನಾಂಕ ಘೋಷಣೆಯಾಗಿದ್ದರೂ ಕಳೆದ ಎರಡು ತಿಂಗಳಿನಿಂದ ಗೊಂದಲದಲ್ಲಿರುವ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಗದ್ದಲ ಇನ್ನೂ ಬಗೆಹರಿದಿಲ್ಲ. ಈ ವಿಚಾರವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಹೋದರ, ಮಾಜಿ ಸಚಿವ ಎಚ್.ಡಿ. ರೇವಣ್ಣ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಸ್ವರೂಪ್‌ರನ್ನು ಕಣಕ್ಕಿಳಸಿಲು ಎಚ್‌ಡಿಕೆ ಒಲವು ತೋರಿದ್ದರೆ, ಪತ್ನಿ ಭವಾನಿಯೇ ಸ್ಪರ್ಧೆ ಮಾಡಬೇಕೆಂದು ರೇವಣ್ಣ ಪಟ್ಟು ಹಿಡಿದಿದ್ದಾರೆ. ಆದರೆ, ಈ ಗದ್ದಲದ ನಡುವೆ ಈಗ ರೇವಣ್ಣ ಮತ್ತೊಂದು ದಾಳವನ್ನು ಉರುಳಿಸಿದ್ದು, ಹೊಸ ಅಭ್ಯರ್ಥಿಯೊಬ್ಬರ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ.

ಹಾಸನ ಜೆಡಿಎಸ್ ಟಿಕೆಟ್ ಹಂಚಿಕೆ ವಿಚಾರದಲ್ಲಿ ಎಚ್‌.ಡಿ. ರೇವಣ್ಣ ಹೊಸ ದಾಳ ಉರುಳಿಸಿದ್ದಾರೆ. ನನ್ನ ಕುಟುಂಬಕ್ಕೆ ಟಿಕೆಟ್‌ ಕೊಡದೇ ಇದ್ದರೆ, ಇದಕ್ಕೆ ಅಡ್ಡಗಾಲಾಗಿರುವ ಎಚ್.ಪಿ. ಸ್ವರೂಪ್‌ಗೂ ಬೇಡ ಎಂಬ ವಾದವನ್ನು ಮುಂದಿಟ್ಟಿದ್ದಾರೆ. ಇದಕ್ಕಾಗಿ ಹೊಸ ಅಭ್ಯರ್ಥಿ ಎಚ್.ಕೆ. ಮಹೇಶ್‌ ಅವರ ಹೆಸರನ್ನು ಎಳೆದು ತಂದಿದ್ದಾರೆ. ಇಷ್ಟಾದರೂ ಕೇಳದ ಎಚ್‌.ಡಿ. ಕುಮಾರಸ್ವಾಮಿ, ಹಾಸನದಿಂದ ಸೂಕ್ತ ಅಭ್ಯರ್ಥಿ ಇದ್ದಾರೆ. ಭವಾನಿ ಅವಶ್ಯಕತೆ ಸದ್ಯಕ್ಕೆ ಇಲ್ಲ. ಸ್ವರೂಪ್ ಅವರನ್ನೇ ಕಣಕ್ಕೆ ಇಳಿಸೋಣ ಎಂಬ ವಾದವನ್ನು ಮುಂದಿಟ್ಟಿದ್ದಾರೆ.

ಇದನ್ನೂ ಓದಿ: IPL 2023: ಬೆಂಗಳೂರಲ್ಲಿ ಐಪಿಎಲ್‌ ಮ್ಯಾಚ್‌; ರಾತ್ರಿ 1.30ರವರೆಗೂ ಮೆಟ್ರೋ ಸಂಚಾರ ಸಮಯ ವಿಸ್ತರಣೆ

ಎಚ್‌ಡಿಕೆ-ರೇವಣ್ಣ ಗುದ್ದಾಟ

ಭವಾನಿ ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಟಿಕೆಟ್ ಕೊಡುವುದಿಲ್ಲ. ಅಲ್ಲದೆ, ಕೆ.ಎಂ. ರಾಜೇಗೌಡ ಸಹ ಕಣಕ್ಕಿಳಿಯುವುದು ಬೇಡ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದರು. ಆದರೆ, ಇದಕ್ಕೆ ಒಪ್ಪದ ರೇವಣ್ಣ ಅವರು ಕುಮಾರಸ್ವಾಮಿಗೆ ಟಕ್ಕರ್ ಕೊಡಲು ಮುಂದಾಗಿದ್ದಾರೆ. ಆ ಮೂಲಕ ಮತ್ತೊಂದು ಹೊಸ ಅಭ್ಯರ್ಥಿಯ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ.

ಎಚ್.ಕೆ. ಮಹೇಶ್‌ಗೆ ಗಾಳ

ಕಾಂಗ್ರೆಸ್ ನಾಯಕ, ಎರಡು ಬಾರಿ ಹಾಸನ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಎಚ್.ಕೆ. ಮಹೇಶ್‌ಗೆ ರೇವಣ್ಣ ಗಾಳ ಹಾಕಿದ್ದಾರೆ. 2013ರಲ್ಲಿ ಕೇವಲ 4196 ಅಂತರದಲ್ಲಿ ಪರಾಜಯಗೊಂಡಿದ್ದ ಅವರು ಈ ಬಾರಿ ಸ್ಪರ್ಧೆ ಮಾಡಿದರೆ ಗೆಲ್ಲುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿರುವ ರೇವಣ್ಣ, ಶತಾಯಗತಾಯ ಸ್ವರೂಪ್‌ಗೆ ಟಿಕೆಟ್ ಬೇಡವೇ ಬೇಡ ಎಂದು ರೇವಣ್ಣ ಕುಟುಂಬದವರು ಪಟ್ಟುಹಿಡಿದಿದ್ದಾರೆ.

ಎಚ್.ಕೆ. ಮಹೇಶ್‌ಗೆ ಟಿಕೆಟ್ ಕೊಟ್ಟರೆ ಎರಡು ಬಾರಿ ಸೋತಿರುವ ಸಿಂಪತಿ ವರ್ಕೌಟ್ ಆಗಲಿದೆ. ಹಾಲಿ ಶಾಸಕ ಪ್ರೀತಂಗೌಡ ವಿರುದ್ಧ ಕಣಕ್ಕಿಳಿಯಲು ಬಲಿಷ್ಠ ಅಭ್ಯರ್ಥಿ ಸಿಕ್ಕಂತೆ ಆಗುತ್ತದೆ ಎಂದು ಹೇಳಿರುವ ರೇವಣ್ಣ, ತಮ್ಮನ್ನು ಎದುರು ಹಾಕಿಕೊಂಡು ಟಿಕೆಟ್ ಪಡೆಯಲು ಮುಂದಾಗಿರುವ ಸ್ವರೂಪ್‌ಗೆ ಟಿಕೆಟ್ ತಪ್ಪಿಸುವ ಲೆಕ್ಕಾಚಾರವನ್ನು ಹೊಂದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Karnataka Election 2023: ಎಲೆಕ್ಷನ್‌ ಡ್ಯೂಟಿಯವರಿಗೆ ಬೂಸ್ಟರ್‌ ಡೋಸ್‌ ಕಡ್ಡಾಯ; ಕೋವಿಡ್‌ ಸೋಂಕಿತರಿಗೆ ವೋಟಿಂಗ್ ಟೈಂ ಫಿಕ್ಸ್‌!

ಮಹೇಶ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಪ್ರಬಲ ಪೈಪೋಟಿ ನೀಡಲು ರೇವಣ್ಣ ಪ್ಲ್ಯಾನ್‌ ಮಾಡಿದ್ದರೆ, ಇತ್ತ ಸ್ಚರೂಪ್‌ಗೆ ಟಿಕೆಟ್ ನೀಡಲು ಎಚ್‌ಡಿಕೆ ಒಲವು ಹೊಂದಿದ್ದಾರೆ. ಆದರೆ, ಕುಮಾರಸ್ವಾಮಿ ಲೆಕ್ಕಾಚಾರವನ್ನೇ ಉಲ್ಟಾ ಹೊಡೆಸಲು ರೇವಣ್ಣ ರಣತಂತ್ರ ರೂಪಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Lok Sabha Election 2024: ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕಗೆ ಬೆಂಬಲಿಸಲು ವೆಂಕಟರೆಡ್ಡಿ ಮುದ್ನಾಳ ಮನವಿ

Lok Sabha Election 2024: ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಪರ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಹಾಗೂ ಪಕ್ಷದ ಮುಖಂಡರು ಚುನಾವಣಾ ಪ್ರಚಾರ ಕೈಗೊಂಡು ಮತಯಾಚನೆ ನಡೆಸಿದರು.

VISTARANEWS.COM


on

Lok Sabha Election 2024 former MLA Venkatreddy Mudnala election campaign for Raichur Lok Sabha constituency BJP candidate Raja Amareshwar Nayaka
Koo

ಯಾದಗಿರಿ: ನರೇಂದ್ರ ಮೋದಿ (PM Narendra Modi) ಅವರು 10 ವರ್ಷಗಳ ಕಾಲ ಪಿಎಂ ಆಗಿ ದೇಶದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು, ಮತ್ತೊಮ್ಮೆ ಮೋದಿ ಅವರನ್ನು ಪಿಎಂ ಮಾಡಲು ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಅವರನ್ನು ಗೆಲ್ಲಿಸಬೇಕು ಎಂದು ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಮನವಿ (Lok Sabha Election 2024) ಮಾಡಿದರು.

ಜಿಲ್ಲೆಯ ವಡಗೇರಾ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಪರ ಹಮ್ಮಿಕೊಂಡ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಲೋಕಸಭಾ ಚುನಾವಣೆಯು ತೀವ್ರ ಜಿದ್ದಾಜಿದ್ದಿನ ಚುನಾವಣೆಯಾಗಿದೆ. ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಇಲ್ಲಸಲ್ಲದ ಸುಳ್ಳು ಹೇಳುತ್ತಿದ್ದಾರೆ ಎಂದು ಆರೋಪಿಸಿದ ಅವರು, ಪಿಎಂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡಜನರಿಗೆ ಪಡಿತರ ಅಕ್ಕಿ ನೀಡುವ ಮೂಲಕ ಬಡಜನರ ಹಸಿವು ನೀಗಿಸುವ ಕಾರ್ಯ ಮಾಡಿದೆ. ಸರ್ಕಾರವು ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಮಾಡುತ್ತಿಲ್ಲ. ಕೇಂದ್ರ ಸರಕಾರವು ಜೆಜೆಎಂ ಯೋಜನೆ ಜಾರಿಗೆ ತಂದು ಹಳ್ಳಿಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ನೀಗಿಸಿದೆ. ಮೋದಿ ಅವರು ಉತ್ತಮ ಆಡಳಿತ ನೀಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

ಕೇಂದ್ರ ಸರ್ಕಾರವು ಯಾದಗಿರಿ ಜಿಲ್ಲಾ ಕೇಂದ್ರದಲ್ಲಿ ಮೆಡಿಕಲ್ ಕಾಲೇಜು ಆರಂಭಕ್ಕೆ ಅನುದಾನ ನೀಡಿ ಮೆಡಿಕಲ್ ಕಾಲೇಜು ಸ್ಥಾಪಿಸಲು ಮಹತ್ವದ ಕೊಡುಗೆ ನೀಡಿದೆ. ನನ್ನ ಅಧಿಕಾರಾವಧಿಯಲ್ಲಿ ಯಾದಗಿರಿ ವಿಧಾನಸಭೆ ಕ್ಷೇತ್ರದಲ್ಲಿ ರಸ್ತೆ, ಶಾಲೆಗಳ ಅಭಿವೃದ್ಧಿ, ಕುಡಿಯುವ ನೀರಿನ ಯೋಜನೆ ಸೇರಿದಂತೆ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದೇನೆ ಎಂದ ಅವರು, ಅಭ್ಯರ್ಥಿ ರಾಜಾಅಮರೇಶ್ವರ ನಾಯಕ ಅವರನ್ನು ಹೆಚ್ಚು ಮತಗಳಿಂದ ಗೆಲ್ಲಿಸಿ ತರಬೇಕು ಎಂದು ಮತದಾರರದಲ್ಲಿ ಮನವಿ ಮಾಡಿದರು.

ಬಿಜೆಪಿ ಯುವ ಮುಖಂಡ ಮಹೇಶರೆಡ್ಡಿ ಮುದ್ನಾಳ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿಗೆ ತಂದು ಸರ್ಕಾರವು ಯಾವುದೇ ಅಭಿವೃದ್ಧಿ ಮಾಡಿಲ್ಲ. ರಾಜ್ಯ ಸರ್ಕಾರವು ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆಗೆ ಕೊಡಮಾಡುವ 4 ಸಾವಿರ ರೂಪಾಯಿ ಸಹಾಯಧನವನ್ನು ಕಡಿತ ಮಾಡಿ, ರೈತರ ಹಿತ ಮರೆತಿದೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡ ಸಿದ್ದಣ್ಣಗೌಡ ಕಾಡಂನೋರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ದೇವರಾಜ್ ನಾಯಕ ಮಾತನಾಡಿದರು.

ಇದನ್ನೂ ಓದಿ: Labour Day 2024: ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಉಪಯುಕ್ತ ಹಣಕಾಸು ಟಿಪ್ಸ್‌ ಇಲ್ಲಿದೆ

ಈ ಸಂದರ್ಭದಲ್ಲಿ ಮುಖಂಡರಾದ ಉಮಾರೆಡ್ಡಿ ವಡ್ಡವಡಗಿ, ಶರಣಗೌಡ ಬಟಗೇರಿ, ಸುರೇಶ್ ಗೌಡ, ಸಂತೋಷಗೌಡ ವಡ್ಡವಡಗಿ, ಡಾ.ಎಂ.ಡಿ. ಮೊಲ್ಲಾ ರಾಯಚೂರು, ಸತೀಶ್ ಗೌಡ, ಬಸವರಾಜ ಮೇತ್ರಿ, ಈಶೆಪ್ಪ ಕೊಲ್ಲುರು, ಮರಳ ಸಿದ್ದಪ್ಪ, ಮಹಿಪಾಲರೆಡ್ಡಿ, ಸುರೇಶ್‌ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಪ್ರಮುಖ ಸುದ್ದಿ

Mahanati Show: ʼಮಹಾನಟಿ ಶೋʼ ವಿರುದ್ಧ ಮೆಕ್ಯಾನಿಕ್‌ಗಳ ಆಕ್ರೋಶ; ಸ್ಪರ್ಧಿ ಗಗನಾ, ರಮೇಶ್‌ ಅರವಿಂದ್‌ ಸೇರಿ ಐವರ ವಿರುದ್ಧ ಮತ್ತೊಂದು ದೂರು

Mahanati Show: ಮೆಕ್ಯಾನಿಕ್ ವೃತ್ತಿ ಮಾಡುವ ಶ್ರಮಿಕ ವರ್ಗವನ್ನು ಅಪಮಾನಿಸಲಾಗಿದೆ ಎಂದು ಆರೋಪಿಸಿ ʼಮಹಾನಟಿʼ ರಿಯಾಲಿಟಿ ಶೋ ಸ್ಪರ್ಧಿ ಗಗನಾ ಹಾಗೂ ಜಡ್ಜ್‌ಗಳಾ ನಟ ರಮೇಶ್‌ ಅರವಿಂದ್‌, ನಟಿ ಪ್ರೇಮಾ ಸೇರಿ ಐವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ಮೆಕ್ಯಾನಿಕ್‌ ಮಿತ್ರ ವೆಲ್‌ಫೇರ್‌ ಅಸೋಸಿಯೇಷನ್‌ ದೂರು ನೀಡಿದೆ.

VISTARANEWS.COM


on

Mahanati Show
Koo

ಬೆಂಗಳೂರು: ʼಮಹಾನಟಿʼ ರಿಯಾಲಿಟಿ ಶೋ (Mahanati Show) ಸ್ಪರ್ಧಿ ಗಗನಾ ಹೇಳಿಕೆಯಿಂದ ಮೆಕ್ಯಾನಿಕ್‌ ವರ್ಗಕ್ಕೆ ನೋವಾಗಿದೆ ಎಂದು ಚಿಕ್ಕನಾಯಕನಹಳ್ಳಿಯ ದ್ವಿಚಕ್ರವಾಹನ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘ ದೂರು ನೀಡಿದ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ದೂರು ದಾಖಲಾಗಿದೆ. ಮೆಕ್ಯಾನಿಕ್ ವೃತ್ತಿ ಮಾಡುವ ಶ್ರಮಿಕ ವರ್ಗವನ್ನು ಕೀಳಾಗಿ ನಿಂದಿಸಿ, ಅಪಮಾನಿಸಲಾಗಿದೆ ಎಂದು ಆರೋಪಿಸಿ ʼಮಹಾನಟಿʼ ರಿಯಾಲಿಟಿ ಶೋ ನಡೆಸುವ ಜೀ ವಾಹಿನಿ ಮತ್ತು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಮುಖ ನಟ, ನಟಿಯರು ಹಾಗೂ ಸ್ಪರ್ಧಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೆಕ್ಯಾನಿಕ್‌ ಮಿತ್ರ ವೆಲ್‌ಫೇರ್‌ ಅಸೋಸಿಯೇಷನ್‌ ಅಧ್ಯಕ್ಷ ಆರ್‌.ನಾಗೇಶ್‌ ನೇತೃತ್ವದಲ್ಲಿ ಪದಾಧಿಕಾರಿಗಳು, ಸುಬ್ರಮಣ್ಯನಗರ ಪೊಲೀಸ್‌ ಠಾಣೆಗೆ ದೂರು‌ ನೀಡಿದ್ದಾರೆ.

ಮಹಾನಟಿ ಶೋ ಜಡ್ಜ್‌ಗಳಾದ ನಟಿ ಪ್ರೇಮಾ, ನಟ ರಮೇಶ್‌ ಅರವಿಂದ್‌, ನಿರ್ದೇಶಕ ತರುಣ್‌ ಸುಧೀರ್‌, ನಿರೂಪಕಿ ಅನುಶ್ರೀ ಹಾಗೂ ಸ್ಪರ್ಧಿ ಗಗನಾ ವಿರುದ್ಧ ದೂರು ದಾಖಲಾಗಿದೆ.

ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಹಾನಟಿ ಎಂಬ ರಿಯಾಲಿಟಿ ಶೋನ ಒಂದು ಕಾರ್ಯಕ್ರಮದಲ್ಲಿ ಮೆಕ್ಯಾನಿಕ್ ವೃತ್ತಿ ಮಾಡುವ ಶ್ರಮಿಕ ವರ್ಗದ ಜನರನ್ನು ತೀರಾ ಕೆಟ್ಟದಾಗಿ ಅಪಮಾನಿಸಲಾಗಿದೆ. ಈ ಕಾರ್ಯಕ್ರಮವನ್ನು ರಾಜ್ಯದ ಕೋಟ್ಯಂತರ ಜನರು ನೋಡುತ್ತಾರಾದ್ದರಿಂದ ನಮಗೆ ಆಗಿರುವ ಅವಮಾನಕ್ಕೆ ಎಣೆಯೇ ಇಲ್ಲದಂತಾಗಿದೆ. ಈ ಕಾರ್ಯಕ್ರಮದ ಒಂದು ಎಪಿಸೋಡ್‌ನಲ್ಲಿ, ಕಾರ್ಯಕ್ರಮದ ಜಡ್ಜ್ ಆಗಿರುವ ನಟ ರಮೇಶ್ ಅರವಿಂದ್ ಅವರು ಸ್ಪರ್ಧಿಯೊಬ್ಬರಿಗೆ ಟಾಸ್ಕ್ ನೀಡುತ್ತಾರೆ. ನಿಮ್ಮ ತಂಗಿ ಒಬ್ಬ ಮೆಕ್ಯಾನಿಕ್ ಜತೆ ಓಡಾಡುವುದನ್ನು ನೀವು ನೋಡುತ್ತೀರಿ. ನಿಮ್ಮ ತಂಗಿ ಮನೆಗೆ ಬಂದಾಗ ಏನು ಹೇಳುತ್ತೀರಿ ಎಂದು ಅವರು ಪ್ರಶ್ನಿಸಿ, ಅಭಿನಯಿಸಲು ಹೇಳುತ್ತಾರೆ. ಈ ಸಂದರ್ಭದಲ್ಲಿ ಸ್ಪರ್ಧಿ ಹೇಳುವ ಮಾತುಗಳು ಮೆಕ್ಯಾನಿಕ್ ಸಮುದಾಯಕ್ಕೆ ಅಪಮಾನಕಾರಿಯಾಗಿರುತ್ತದೆ ಎಂದು ಪದಾಧಿಕಾರಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ | Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

“ನೋಡು ಐಶು, ನೀನು ಅವನ ಜತೆ ಬೈಕಲ್ಲಿ ಸುತ್ತಾಡೋದನ್ನು ನಾನು ನೋಡಿದೆ. ಬಿದ್ರೆ ಯಾವಾಗೂ, ತುಪ್ಪದ ಕೊಳದಲ್ಲಿ ಬೀಳಬೇಕೇ ಹೊರತು ಕೊಚ್ಚೆಯ ಕೊಳೆಯಲ್ಲಿ ಬೀಳಬಾರದು. ಇದನ್ನ ನೆನಪಿಟ್ಕೋ. ಲೈಫು ನೀನು ಅಂದುಕೊಂಡಷ್ಟು ಈಜಿಯಾಗಿರೋದಿಲ್ಲ. ದುಡ್ಡು ಇಂಪಾರ್ಟೆಂಟ್ ಅಲ್ಲ, ಪ್ರೀತಿನೇ ಇಂಪಾರ್ಟೆಂಟ್ ಅಂತ ನೀನು ಅಂದುಕೊಂಡಿರಬಹುದು. ಆದರೆ ದುಡ್ಡು ಯಾವಾಗಲೂ ಬೇಕು. ಪ್ರೀತಿ ಮಾಡ್ಕೊಂಡೇ ಗ್ರೀಸ್ ತಿಂದುಕೊಂಡು ಇರುತ್ತೀನಿ ಅಂದ್ರ ಆಗಲ್ಲ. ನೀನು ಮೆಕಾನಿಕ್ ಜತೆನೇ ಹೋಗಿ ಅವನ ಜತೆ ಗ್ರೀಸ್ ತಿಂದುಕೊಂಡು ಇರುತ್ತೀನಿ ಅಂದ್ರೆ ತಪ್ಪಾಗುತ್ತೆ” ಎಂದು ಆಕೆ ಹೇಳುತ್ತಾರೆ.

ಸ್ಪರ್ಧಿ ಇಷ್ಟು ಕೆಟ್ಟದಾಗಿ ಒಂದು ದೊಡ್ಡ ಶ್ರಮಿಕ ವರ್ಗದ ಬಗ್ಗೆ ಮಾತನಾಡುತ್ತಿದ್ದರೂ ಜಡ್ಜ್‌ಗಳಾದ ರಮೇಶ್ ಅರವಿಂದ್, ನಟಿ ಪ್ರೇಮ, ನಿರ್ದೇಶಕ ತರುಣ್ ಸುಧೀರ್, ಆಂಕರ್ ಅನುಶ್ರೀ ಮತ್ತು ಅತಿಥಿಗಳಾಗಿ ಪಾಲ್ಗೊಂಡಿದ್ದ ನಟ ನಟಿಯರು ಹೀಗೆ ಮಾತನಾಡುವುದು ತಪ್ಪು ಎಂದು ಹೇಳುವ ಬದಲಾಗಿ, ಆಕೆಯ ಮಾತುಗಳಿಗೆ ಚಪ್ಪಾಳೆ ಹೊಡೆದು, ಪ್ರೋತ್ಸಾಹಿಸುತ್ತಾರೆ.

ಮೆಕ್ಯಾನಿಕ್ ವೃತ್ತಿಯೂ ಎಲ್ಲ ವೃತ್ತಿಗಳ ಹಾಗೆಯೇ ಗೌರವಾನ್ವಿತ ವೃತ್ತಿ. ಎಂಜಿನಿಯರ್, ಡಾಕ್ಟರ್, ಬ್ಯುಸಿನೆಸ್ ಮ್ಯಾನ್, ಪೊಲೀಸ್, ಮಿಲಿಟರಿಯಿಂದ ಹಿಡಿದು ಚಪ್ಪಲಿ ಹೊಲೆಯುವ ಕಾಯಕದವರೆಗೆ ಎಲ್ಲ ವೃತ್ತಿಗಳೂ ಶ್ರೇಷ್ಠ ವೃತ್ತಿಗಳೇ ಆಗಿವೆ. ಯಾವ ವೃತ್ತಿಯೂ ಕನಿಷ್ಠವಲ್ಲ, ಯಾವ ವೃತ್ತಿ ಮಾಡುವವನೂ ಕೊಚ್ಚೆ ಅಲ್ಲ. ಇದು ಈ ಮಹಾನಟ ನಟಿಯರಿಗೆ ಅರ್ಥವಾಗದೇ ಇರುವುದು ಆಶ್ಚರ್ಯಕರವಾಗಿದೆ ಎಂದು ಬೇಸರ ಹೊರಹಾಕಿದ್ದಾರೆ.

ಮಹಾನಟಿ ರಿಯಾಲಿಟಿ ಶೋನಲ್ಲಿ ಮೆಕ್ಯಾನಿಕ್ ಕೆಲಸ ಮಾಡುವವರು ಕೊಚ್ಚೆ ಎಂದು ನಿಂದಿಸಲಾಗಿದೆ. ಮೆಕಾನಿಕ್ ಮನೆಯವರು ಗ್ರೀಸ್ ತಿಂದು ಬದುಕುತ್ತಾರೆ ಎಂದು ಬಿಂಬಿಸಲಾಗಿದೆ. ಈ ಕಾರ್ಯಕ್ರಮ ಅತ್ಯಂತ ಜನಪ್ರಿಯ ಕಾರ್ಯಕ್ರಮವೂ ಆಗಿರುವುದರಿಂದ, ನಮ್ಮ ಬಗ್ಗೆ ಇಷ್ಟು ಕೊಳಕಾಗಿ ನಿಂದಿಸಿರುವುದರಿಂದ ನಾವುಗಳು ತಲೆ ಎತ್ತಿಕೊಂಡು ಓಡಾಡದಂತಾಗಿದೆ. ಇದೇ ಮಾತುಗಳನ್ನು ವೈದ್ಯ, ಪೊಲೀಸ್, ವಕೀಲ, ಪತ್ರಕರ್ತ, ಚಿತ್ರನಟರು ಅಥವಾ ಇನ್ಯಾವುದೇ ವೃತ್ತಿಪರ ಸಮುದಾಯದ ವಿರುದ್ಧ ಮಾತನಾಡಿದ್ದರೆ ಅವರು ಸುಮ್ಮನೆ ಇರುತ್ತಿದ್ದರೆ? ಅದಕ್ಕೂ ರಮೇಶ್ ಅರವಿಂದ್ ಅವರಾದಿಯಾಗಿ ಎಲ್ಲರೂ ಆಕೆಯನ್ನು ಹೊಗಳಿ ಅಟ್ಕ್ಕೇರಿಸುತ್ತಾರೆ. ಆ ಸಂದರ್ಭದಲ್ಲಿ ಇಡೀ ಒಂದು ಶ್ರಮಿಕ ವರ್ಗವನ್ನು ಕೊಚ್ಚೆ ಗುಂಡಿಯಲ್ಲಿರುವವರು ಹಾಗೂ ತಮ್ಮ ಕುಟುಂಬದವರಿಗೆ ಅನ್ನಕ್ಕೆ ಬದಲಾಗಿ ಗ್ರೀಸನ್ನು ತಿನ್ನಿಸುತ್ತಾರೆ ಎಂದು ಹೇಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಒಂದು ಶ್ರಮಿಕ ಸಮುದಾಯವನ್ನು ಕೊಚ್ಚೆ ಗುಂಡಿಯಲ್ಲಿರುವವರು, ಗ್ರೀಸ್ ತಿಂದು ಬದುಕುವವರು ಎಂದು ನಿಂದಿಸಿರುವ ಈ ಕಾರ್ಯಕ್ರಮ ಪ್ರಸಾರ ಮಾಡುವ ವಾಹಿನಿ ಮುಖ್ಯಸ್ಥರು, ಜಡ್ಜ್‌ಗಳಾದ ರಮೇಶ್ ಅರವಿಂದ್ ಮತ್ತು ಪ್ರೇಮ, ತರುಣ್ ಸುಧೀರ್, ಆಂಕರ್ ಅನುಶ್ರೀ, ಸ್ಪರ್ಧಿ ಗಗನ ಮೇಲೆ ಸಮುದಾಯಗಳ ನಡುವೆ ದ್ವೇಷ ಹರಡುವ, ಸಮಾಜದಲ್ಲಿ ಅಶಾಂತಿ ಹರಡುವ, ಒಂದಿಡೀ ಶ್ರಮಿಕ ಸಮುದಾಯವನ್ನು ಕೊಚ್ಚೆ ಎಂದು ನಿಂದಿಸಿ ಅವರ ಆತ್ಮಗೌರವಕ್ಕೆ ಧಕ್ಕೆ ತಂದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕೆಂದು ತಮ್ಮಲ್ಲಿ ಮನವಿ ಮಾಡುತ್ತೇವೆ ಎಂದು ಸಂಘ ಕೋರಿದೆ.

Continue Reading

ಹಾಸನ

Hassan Pen Drive Case: ನಾನು ವಿಡಿಯೊ ಕೊಟ್ಟಿದ್ದು ದೇವರಾಜೇಗೌಡರಿಗೆ ಮಾತ್ರ; ಅವರೇ ಲೀಕ್‌ ಮಾಡಿರಬೇಕು ಎಂದ ಕಾರ್ತಿಕ್!

Hassan Pen Drive Case: ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದಿಂದ ಕೆಲಸವನ್ನು ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದರು. ಹಿಂಸೆ ಕೊಟ್ಟರು. ಆದ್ದರಿಂದ ಅವರ ಮನೆಯಿಂದ ಹೊರಬಂದೆ. ಆ ಸಮಯದಲ್ಲಿ ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೊ ರಿಲೀಸ್ ಮಾಡಬಾರದು ಎಂದು ಅಂದು ನನ್ನ ವಿರುದ್ಧ ಪ್ರಜ್ವಲ್‌ ರೇವಣ್ಣ ಸ್ಟೇ ತಂದಿದ್ದರು. ನಿನ್ನ ಬಳಿ ಇರುವ ವಿಡಿಯೊ, ಫೋಟೊಗಳನ್ನು ಕೊಡು. ನಾನು ಯಾರಿಗೂ ತೋರಿಸುವುದಿಲ್ಲ ಎಂದು ದೇವರಾಜೇಗೌಡ ಕೇಳಿದ್ದರು. ಅವರನ್ನು ನಂಬಿ ನನ್ನ ಬಳಿಯಿದ್ದ ವಿಡಿಯೊದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಏನೋ ಎಂಬುದು ಗೊತ್ತಿಲ್ಲ ಎಂದು ಪ್ರಜ್ವಲ್‌ ಮಾಜಿ ಕಾರು ಚಾಲಕ ಹೇಳಿದ್ದಾರೆ.

VISTARANEWS.COM


on

Hassan Pen Drive Case I gave video only to Devaraje Gowda says Karthik
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಜ್ವಲ್‌ ಅವರ ಮಾಜಿ ಕಾರು ಚಾಲಕ ಕಾರ್ತಿಕ್ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ವಿಡಿಯೊಗಳು ನನ್ನ ಬಳಿ ಇತ್ತು ನಾನಿದನ್ನು ದೇವರಾಜೇಗೌಡ ಅವರಿಗೆ ಕೊಟ್ಟಿದ್ದೆ. ಅವರು ಇದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಏನೋ ಗೊತ್ತಿಲ್ಲ ಎಂದು ಹೇಳಿದ್ದಾರೆ.

ಕಾರ್ತಿಕ್ ಅಜ್ಞಾತ ಸ್ಥಳದಲ್ಲಿದ್ದುಕೊಂಡು ವಿಡಿಯೊ ಮಾಡಿದ್ದು, ವಿಡಿಯೊ ಲೀಕ್ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಾನು ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದಿಂದ ಕೆಲಸವನ್ನು ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದರು. ಹಿಂಸೆ ಕೊಟ್ಟರು. ಆದ್ದರಿಂದ ಅವರ ಮನೆಯಿಂದ ಹೊರಬಂದೆ. ಆ ಸಮಯದಲ್ಲಿ ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೊ ರಿಲೀಸ್ ಮಾಡಬಾರದು ಎಂದು ಅಂದು ನನ್ನ ವಿರುದ್ಧ ಪ್ರಜ್ವಲ್‌ ರೇವಣ್ಣ ಸ್ಟೇ ತಂದಿದ್ದರು. ನಿನ್ನ ಬಳಿ ಇರುವ ವಿಡಿಯೊ, ಫೋಟೊಗಳನ್ನು ಕೊಡು. ನಾನು ಯಾರಿಗೂ ತೋರಿಸುವುದಿಲ್ಲ ಎಂದು ದೇವರಾಜೇಗೌಡ ಕೇಳಿದ್ದರು. ಅವರನ್ನು ನಂಬಿ ನನ್ನ ಬಳಿಯಿದ್ದ ವಿಡಿಯೊದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಏನೋ ಎಂಬುದು ಗೊತ್ತಿಲ್ಲ ಎಂದು ಹೇಳಿದ್ದಾರೆ.

ದೇವರಾಜೇಗೌಡರಿಗೆ ಮಾತ್ರವೇ ಕೊಟ್ಟಿದ್ದೆ

ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ನಾನು ವಿಡಿಯೊವನ್ನು ಕೊಟ್ಟಿಲ್ಲ. ಕಾಂಗ್ರೆಸ್‌ನವರಿಗಂತೂ ನಾನು ವಿಡಿಯೊ ಕೊಟ್ಟಿಲ್ಲ. ಕಾಂಗ್ರೆಸ್‌ನವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್‌ ಡ್ರೈವ್ ಅನ್ನು ಯಾರು ಹಂಚಿದರೋ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ನಾನು ಕಾಂಗ್ರೆಸ್‌ನವರಿಗೆ ಕೊಡುವುದಿದ್ದರೆ ದೇವರಾಜೇಗೌಡ ಬಳಿ ಏಕೆ ಹೋಗುತ್ತಿದ್ದೆ? ಇವತ್ತು ಎಸ್‌ಐಟಿ ಮುಂದೆ ಹಾಜರಾಗಿ ಎಲ್ಲವನ್ನೂ ಹೇಳಿಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ ಎಂದು ಕಾರ್ತಿಕ್‌ ಹೇಳಿದರು.

ಇದನ್ನೂ ಓದಿ: Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

ಎಸ್‌ಐಟಿ ಮುಂದೆ ಕೂಲಂಕಷವಾಗಿ ಹೇಳುವೆ

ಕಾಂಗ್ರೆಸ್‌ನವರ ಹೆಸರನ್ನು ಬೆರೆಸಬೇಡಿ. ದೇವೇಗೌಡರನ್ನು ಬಿಟ್ಟರೆ ಯಾರಿಗೂ ಒಂದು ತುಣುಕು ಕೊಟ್ಟಿಲ್ಲ. ಇವತ್ತು ಎಸ್‌ಐಟಿ ಮುಂದೆ ಹಾಜರಾಗಿ ಕೂಲಂಕಷವಾಗಿ ಹೇಳುತ್ತೇನೆ. ರೇವಣ್ಣ ಮನೆಯಲ್ಲಿ ಏನೆಲ್ಲ ನಡೆದಿದೆ ಎಂಬುದನ್ನು ನಾನು ನೋಡಿದ್ದೇನೆ. ಎಲ್ಲವನ್ನೂ ಎಸ್‌ಐಟಿ ಮುಂದೆ ಹೇಳುತ್ತೇನೆ. ಯಾರಿಗೆ ಅನ್ಯಾಯ ಆಗಿದೆ ಧೈರ್ಯವಾಗಿ ಮುಂದೆ ಬನ್ನಿ ಎಂದು ಕಾರ್ತಿಕ್‌ ಹೇಳುವ ಮೂಲಕ ತಮ್ಮ ಬಳಿ ವಿಡಿಯೊ ಇತ್ತು ಎಂಬುದನ್ನು ಒಪ್ಪಿಕೊಂಡಿದ್ದಾರೆ.

Continue Reading

ಕ್ರೈಂ

Hassan Pen Drive Case: ಪ್ರಜ್ವಲ್‌ ಕೇಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ; 3 ದಿನದಲ್ಲಿ ವರದಿ ಕೊಡಲು ಡಿಜಿಗೆ ಪತ್ರ

Hassan Pen Drive Case: ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಮಹಿಳಾ ಆಯೋಗವು ಸುಮೊಟೊ ಕೇಸ್‌ ದಾಖಲು ಮಾಡಿಕೊಂಡಿದೆ. ಜತೆಗೆ ಡಿಜಿಗೆ ಪತ್ರ ಬರೆದು ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಕೇಂದ್ರ ಮಹಿಳಾ ಆಯೋಗದ ಸದಸ್ಯರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

VISTARANEWS.COM


on

National Commission for Women enters Prajwal Hassan Pen Drive Case Letter to DG to submit report within 3 days
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ರಾಷ್ಟ್ರೀಯ ಮಹಿಳಾ ಆಯೋಗ (National Commission for Women) ಎಂಟ್ರಿ ಕೊಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರು ದಿನದೊಳಗೆ ವರದಿ ನೀಡುವಂತೆ ಕರ್ನಾಟಕ ಪೊಲೀಸ್‌ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದೆ.

ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಮಹಿಳಾ ಆಯೋಗವು ಸುಮೊಟೊ ಕೇಸ್‌ ದಾಖಲು ಮಾಡಿಕೊಂಡಿದೆ. ಜತೆಗೆ ಡಿಜಿಗೆ ಪತ್ರ ಬರೆದು ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಕೇಂದ್ರ ಮಹಿಳಾ ಆಯೋಗದ ಸದಸ್ಯರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನಲಾಗಿದೆ.

ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಡಿಕೆಶಿ

ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ತಮ್ಮ ಮೇಲೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ನಿರಾಕರಣೆ ಮಾಡಿದ್ದಾರೆ. ಪೆನ್‌ಡ್ರೈವ್‌ ಹೊರಬಿಡುವಂತಹ ಚಿಲ್ಲರೆ ಕೆಲಸವನ್ನು ನಾನಂತೂ ಮಾಡಲ್ಲ. ಚುನಾವಣೆಯಲ್ಲಿ ಫೇಸ್ ಮಾಡುತ್ತೇನೆ. ನಾನು ಪೆನ್ ಡ್ರೈವ್ ಇದೆ ಎಂದು ಹೆಸರಿಸುವುದಿಲ್ಲ. ಅಸೆಂಬ್ಲಿಗೆ ಬನ್ನಿ ಎಂದು ಕರೆದಿದ್ದೇನೆ‌ ಎಂದು ಸವಾಲು ಹಾಕಿದರು.

ಬೆಂಗಳೂರಿನಲ್ಲಿ ದಿಢೀರ್‌ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನಾವು ನಮ್ಮ ಪೊಲಿಟಿಕಲ್ ಟೂರ್ ಬಗ್ಗೆ ಮೀಟಿಂಗ್ ಮಾಡಿದ್ದೇವೆ. ಯಾರು ಎಲ್ಲಿ ಪ್ರಚಾರ ಮಾಡಬೇಕು ಎಂದು ಚರ್ಚೆ ಮಾಡಿದ್ದೇವೆ. ಕಾಂಗ್ರೆಸ್‌ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಎಲ್ಲಿ ಭಾಗಿಯಾಗಬೇಕು, ನಾನು ಎಲ್ಲಿ ಭಾಗಿಯಾಗಬೇಕು ಎಂದು ಚರ್ಚೆ ಮಾಡಿದ್ದೇವೆಯೇ ವಿನಃ ಪೆನ್ ಡ್ರೈವ್ ವಿಚಾರದ ಬಗ್ಗೆ ಚರ್ಚೆ ಮಾಡಿಲ್ಲ ಎಂದು ಹೇಳಿದರು.

ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಮತ್ತು ಅವರ ಕುಟುಂಬಕ್ಕೆ ನನ್ನ ನೆನಸಿಕೊಳ್ಳದೆ ಸ್ಫೂರ್ತಿ ಇರಲ್ಲ. ಕುಮಾರಸ್ವಾಮಿ ಅವರ ಭಾಷಣ ಕೇಳಿದ್ದೇನೆ. ಪ್ರಜ್ವಲ್‌ನನ್ನು ನನ್ನ ಮಗ ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ. ಅವರ ಕುಟುಂಬದ ಕುಡಿ. ನೂಲಿನಂತೆ ಸೀರೆ ಎಂದು ಡಿಕೆಶಿ ವ್ಯಂಗ್ಯವಾಡಿದರು.

ಹಳೆ ವಿಡಿಯೋ ಎಂದು ಪ್ರಜ್ವಲ್‌ ತಂದೆ ಎಚ್‌.ಡಿ. ರೇವಣ್ಣ ಹೇಳಿದ್ದಾರೆ. ಅಂದರೆ ಅವರು ಒಪ್ಪಿಕೊಂಡಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ತೀರ್ಮಾನ ಮಾಡುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ಈ ಸಂಬಂಧ ದೇವರಾಜೇಗೌಡ ಅಮಿತ್ ಶಾಗೆ ಪತ್ರ ಬರೆದಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

10 ದಿನದ ಮುಂಚೆ ದೂರು ಕೊಡಬೇಕಿತ್ತು

ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗ ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಮಹಿಳೆಯರ ರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಉಡುಪಿಯಲ್ಲಿ ಪೋಟೊ ಹಿಡಿದು ಅಂತಾರಾಷ್ಟ್ರೀಯ ಮಹಿಳಾ ಆಯೋಗ ಕಳುಹಿಸಿದರು. ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ. ಅವರ ಕುಟುಂಬದವರು ಹೌದೋ ಇಲ್ಲವೋ ನೀವು ಹೇಳಬೇಕು. ವಾರ ಹತ್ತು ದಿನದ ಮುಂಚೆ ದೂರು ಕೊಟ್ಟಿದ್ದರೆ ಕ್ರಮ ತೆಗೆದುಕೊಳ್ಳುತ್ತಿದ್ದೆವು. ಮಹಿಳಾ ಆಯೋಗಕ್ಕೆ ದೂರು ಕೊಟ್ಟಿದ್ದಾರೆ. ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಬಳಿಕ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಅಮಿತ್ ಶಾ ಅವರು ಮೈಸೂರಿಗೆ ಬಂದಾಗ ಪ್ರಜ್ವಲ್‌ ರೇವಣ್ಣ ಅವರಿಗೆ ಟಿಕೆಟ್ ಕೊಡಬೇಡಿ ಎಂದು ಹೇಳಿದ್ದರು. ಆದರೆ, ಕೊನೆಗೆ ಏಕೆ ಕೊಟ್ಟರು? ಅಮಿತ್‌ ಶಾ ಬೇಡವನ್ನೆಲು ಏನು ಕಾರಣ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ಎಚ್‌ಡಿಕೆ ವಿರುದ್ಧ ಏಕವಚನ ಪ್ರಯೋಗ

ಪಕ್ಷದಿಂದ ವಜಾ ಮಾಡಲಿ, ಒಳಗೆ ಇಟ್ಟುಕೊಳ್ಳಲಿ‌. ಅದೆಲ್ಲ ಕಣ್ಣು ಒರೆಸುವ ನಾಟಕ. ಈ ಅಮಾನತಿನ ಬಗ್ಗೆ ರಾಜಕಾರಣದಲ್ಲಿ ನನಗೂ ಗೊತ್ತಿದೆ. ನನ್ನ ವಿರುದ್ಧ ಮೊದಲು ಪ್ರತಿಭಟನೆ ಮಾಡಲಿ. ಕುಮಾರಸ್ವಾಮಿ ಯಾವ ಕರೆ ಕೊಡುತ್ತೀಯೋ ಕೊಡು‌. ಕರೆ ಕೊಡಬೇಕು ನೀನು‌. ನೀನು ಕೊಡಲಿ ಅಂತನೇ ಹೇಳುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಎಚ್‌.ಡಿ. ಎಂದರೆ ಏನು? ಕುಟಂಬ ಅಲ್ಲವೆಂದರೆ ಹೇಗೆ?

ಈಗ ಪ್ರಜ್ವಲ್‌ ರೇವಣ್ಣ ಅವರು ತಮ್ಮ ಕುಟುಂಬ ಅಲ್ಲ ಅಂತ ಹೇಳಿದರೆ ಹೇಗೆ ಒಪ್ಪಲು ಆಗುತ್ತದೆ? ಎಚ್‌.ಡಿ. ಎಂದರೆ ಏನು? ಎಚ್ ಡಿ ರೇವಣ್ಣ ಎಂದರೆ ಹೊಳೆನರಸೀಪುರ ದೇವೇಗೌಡರ‌ ಮಗ ಎಂದಲ್ಲವೇ? ಎಚ್.ಡಿ. ಕುಮಾರಸ್ವಾಮಿ ಅಂದರೂ ಹಾಗೇ ಎಂದು ಡಿಕೆಶಿ ಹೇಳಿದರು.

ಭಗವಂತ ಇದನ್ನು ಕ್ಷಮಿಸಲ್ಲ

ಮಹಿಳೆಯರಿಗೆ ರಕ್ಷಣೆ ಕೊಡಬೇಕು. ಮರ್ಯಾದೆ ಹೋಗುತ್ತದೆ. ಇವರ ಚಟಕ್ಕೆ ವಿಡಿಯೊ ಮಾಡಿಕೊಂಡು ಪದೇ ಪದೆ ಬರಬೇಕು ಎಂದು ಪೀಡಿಸುತ್ತಾರೆ. ಭಗವಂತ ಇದನ್ನು ಕ್ಷಮಿಸಲ್ಲ. ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವಾಗ ಯಾರು ಜತೆಗೆ ಇದ್ದರು? ಯಾರು ಯಾರಿಗೆ ಕರೆ ಮಾಡಿದರು ಎಂದು ಅವರನ್ನೇ ಕೇಳಿ ಎಂದು ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದರು.

ಇದನ್ನೂ ಓದಿ: Hassan Pen Drive Case: ಲೈಂಗಿಕ ದೌರ್ಜನ್ಯ ಕೇಸ್;‌ ಪ್ರಜ್ವಲ್‌ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಬಿಜೆಪಿಯವರ ಸ್ಟ್ಯಾಂಡ್ ಹೇಳಲಿ

ಈ ವಿಚಾರದಲ್ಲಿ ಬಿಜೆಪಿಯವರ ಸ್ಟ್ಯಾಂಡ್ ಹೇಳಬೇಕು. ಪ್ರಲ್ಹಾದ್‌ ಜೋಶಿ, ಸುನೀಲ್ ಕುಮಾರ್, ಬಸವರಾಜ ಬೊಮ್ಮಾಯಿ, ಶೋಭಾ ಕರಂದ್ಲಾಜೆ ಯಾಕೆ ಮಾತನಾಡುತ್ತಿಲ್ಲ. ಅವರ ಪಾರ್ಟಿಯವರು ನೋಡಿಕೊಳ್ಳುತ್ತಾರೆ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್ ಹೇಳುತ್ತಾರೆ. ಅಶೋಕ್ ಬೆನ್ನು ಮೂಳೆ ಇಲ್ಲದ ನಾಯಕ ಎಂದು ಡಿ.ಕೆ. ಶಿವಕುಮಾರ್‌ ಕಿಡಿಕಾರಿದರು.

ಬಿಜೆಪಿಯವರು ಸ್ವಲ್ಪ ಪ್ರಾಬ್ಲಮ್ ಇದೆ ಎಂದು ಹೇಳಿದ್ದರು ಬ್ರದರ್. ಐ ವಿಲ್ ಟೇಕ್ ಕೇರ್ ಎಂದು ದೊಡ್ಡವರು ಹೇಳಿದ್ದಾರೆ ಬ್ರದರ್ ಎಂಬುದಾಗಿ ಹೇಳಿದ್ದಾರೆ ಎಂದು ಕುಮಾರಸ್ವಾಮಿ ಶೈಲಿಯಲ್ಲೇ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

Continue Reading
Advertisement
Physical Abuse
ಕ್ರೈಂ4 mins ago

Physical Abuse: ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದವನಿಗೆ 106 ವರ್ಷ ಜೈಲು ಶಿಕ್ಷೆ

Russia-Ukraine War
ರಷ್ಯಾ-ಉಕ್ರೇನ್‌ ಕದನ5 mins ago

Russia-Ukraine War: ಯುದ್ಧ ಭೂಮಿಯಿಂದ ಪಾರಾಗಲು 10 ಕಿ.ಮೀ ನಡೆದ 98 ವರ್ಷದ ವೃದ್ಧೆ!

Leg Swelling
ಆರೋಗ್ಯ11 mins ago

Leg Swelling: ಪ್ರಯಾಣಿಸುವಾಗ ನಮ್ಮ ಕಾಲುಗಳು ಊದಿಕೊಳ್ಳುವುದೇಕೆ?

Lok Sabha Election 2024 former MLA Venkatreddy Mudnala election campaign for Raichur Lok Sabha constituency BJP candidate Raja Amareshwar Nayaka
ರಾಜಕೀಯ15 mins ago

Lok Sabha Election 2024: ಬಿಜೆಪಿ ಅಭ್ಯರ್ಥಿ ರಾಜಾಅಮರೇಶ್ವರ ನಾಯಕಗೆ ಬೆಂಬಲಿಸಲು ವೆಂಕಟರೆಡ್ಡಿ ಮುದ್ನಾಳ ಮನವಿ

Manish Sisodia
ಪ್ರಮುಖ ಸುದ್ದಿ22 mins ago

Manish Sisodia : ಕೇಜ್ರಿವಾಲ್ ಜತೆಗಾರ ಮನೀಶ್ ಸಿಸೊಡಿಯಾ ಮತ್ತಷ್ಟು ದಿನ ಜೈಲಿನಲ್ಲೇ; ಜಾಮೀನು ಅರ್ಜಿ ವಜಾ

Mohammed Shami
ಕ್ರೀಡೆ23 mins ago

Mohammed Shami: ಸ್ಟಿಕ್​ ವಾಕರ್ ಸಹಾಯದೊಂದಿಗೆ ವ್ಯಾಯಾಮ ಆರಂಭಿಸಿದ ಶಮಿ

Lok Sabha Election 2024
Lok Sabha Election 202432 mins ago

Lok Sabha Election 2024: ಬಿಜೆಪಿ ಅಭ್ಯರ್ಥಿಗಳಿಗೆ ಪತ್ರ ಬರೆದ ಮೋದಿ; ಕಾಂಗ್ರೆಸ್‌ನ ತುಷ್ಟೀಕರಣ ನೀತಿಯ ಬಗ್ಗೆ ಅರಿವು ಮೂಡಿಸಲು ಕರೆ

Mahanati Show
ಪ್ರಮುಖ ಸುದ್ದಿ42 mins ago

Mahanati Show: ʼಮಹಾನಟಿ ಶೋʼ ವಿರುದ್ಧ ಮೆಕ್ಯಾನಿಕ್‌ಗಳ ಆಕ್ರೋಶ; ಸ್ಪರ್ಧಿ ಗಗನಾ, ರಮೇಶ್‌ ಅರವಿಂದ್‌ ಸೇರಿ ಐವರ ವಿರುದ್ಧ ಮತ್ತೊಂದು ದೂರು

jammu kashmir flash flood
ದೇಶ1 hour ago

Jammu Kashmir Flash Flood: ಜಮ್ಮ- ಕಾಶ್ಮೀರದಲ್ಲಿ ಭೂಕುಸಿತ, ಹಠಾತ್ ಪ್ರವಾಹ: 5 ಸಾವು

Love Jihad
ದೇಶ1 hour ago

‌Love Jihad: ಲವ್‌ ಜಿಹಾದ್‌ಗೆ ಮತ್ತೊಂದು ಬಲಿ? ಹೋಟೆಲ್ ರೂಮ್ ನಲ್ಲಿ ಹಿಂದೂ ಯುವತಿ ಶವ ಪತ್ತೆ; ಮುಸ್ಲಿಂ ಯುವಕ ಎಸ್ಕೇಪ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ12 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌