Dr Prakash Murthy slams Kasapa President Mahesh Joshi Open letter to change his behavior Kasapa: ಕಸಾಪ ಅಧ್ಯಕ್ಷ ಡಾ. ಮಹೇಶ ಜೋಶಿ ವಿರುದ್ಧ ಪ್ರಕಾಶಮೂರ್ತಿ ಗರಂ; ನಡೆ-ನುಡಿ ಬದಲಿಸಿಕೊಳ್ಳಲು ಬಹಿರಂಗ ಪತ್ರ - Vistara News

ಕ ಸಾ ಪ

Kasapa: ಕಸಾಪ ಅಧ್ಯಕ್ಷ ಡಾ. ಮಹೇಶ ಜೋಶಿ ವಿರುದ್ಧ ಪ್ರಕಾಶಮೂರ್ತಿ ಗರಂ; ನಡೆ-ನುಡಿ ಬದಲಿಸಿಕೊಳ್ಳಲು ಬಹಿರಂಗ ಪತ್ರ

DR Mahesh Joshi: ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ. ಮಹೇಶ್‌ ಜೋಶಿ ವಿರುದ್ಧ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಪ್ರಕಾಶಮೂರ್ತಿ ಬಹಿರಂಗ ಪತ್ರ ಬರೆದಿದ್ದು, ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ, ಸದಸ್ಯರಿಗೆ ಬೆದರಿಕೆ ಒಡ್ಡಲಾಗುತ್ತಿದೆ, ಪ್ರಶ್ನೆಗೆಳಿಗೆ ಉತ್ತರ ನೀಡುತ್ತಿಲ್ಲ ಎಂಬಿತ್ಯಾದಿ ಆರೋಪಗಳನ್ನು ಮಾಡಿದ್ದು, ಇದಕ್ಕೆ ಉತ್ತರ ನೀಡುವಂತೆ ಸವಾಲು ಹಾಕಿದ್ದಾರೆ.

VISTARANEWS.COM


on

Dr Prakash Murthy slams Kasapa President Mahesh Joshi Open letter to change his behavior
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ (Kasapa) ಅಧ್ಯಕ್ಷ ಡಾ. ಮಹೇಶ ಜೋಶಿ (DR Mahesh Joshi) ವಿರುದ್ಧ ಅಪಸ್ವರಗಳು ಕೇಳಿಬರುತ್ತಿದ್ದು, ಅವರ ನಡೆ-ನುಡಿಗಳ ಬಗ್ಗೆ ತೀವ್ರ ಆಕ್ಷೇಪವೊಂದು ಕೇಳಿಬಂದಿದೆ. ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಪ್ರಕಾಶಮೂರ್ತಿ (M Prakashmurthy) ಅವರು ಈ ಬಗ್ಗೆ ಜೋಶಿ ಅವರಿಗೆ ಬಹಿರಂಗ ಪತ್ರ ಬರೆದಿದ್ದು, “ರಾಜ್ಯಾಧ್ಯಕ್ಷರಾದ ತಮ್ಮಿಂದ ಕಸಾಪದ ಘನತೆ-ಗೌರವಗಳು ಹಿಂದೆಂದಿಗಿಂತಲೂ ಕುಸಿದು ಮಣ್ಣುಪಾಲಾಗುತ್ತಿದೆ” ಎಂದು ಗಂಭೀರವಾಗಿ ಆರೋಪ ಮಾಡಿದ್ದಾರೆ.

ಈವರೆಗೆ ಕೆಲವು ಸಮಸ್ಯೆಗಳ ಬಗ್ಗೆ, ನಿಲುವುಗಳ ಬಗ್ಗೆ ಆಂತರಿಕವಾಗಿ ಮಹೇಶ್‌ ಜೋಶಿಯವರಿಗೆ ಪತ್ರ ಬರೆದಿದ್ದರೂ ಅವರಿಂದು ಯಾವುದೇ ಪ್ರತಿಕ್ರಿಯೆ ಬಾರದೇ ಇರುವುದರಿಂದ ಈಗ ಅನಿವಾರ್ಯವಾಗಿ ಬಹಿರಂಗ ಪತ್ರವನ್ನು ಬರೆಯುತ್ತಿರುವುದಾಗಿ ಪ್ರಕಾಶಮೂರ್ತಿ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಕಾಶಮೂರ್ತಿ ಪತ್ರದ ಯಥಾವತ್‌ ಪ್ರತಿ

ತಮ್ಮ ನಡೆ-ನುಡಿ-ನಿಲುವುಗಳನ್ನು ಬದಲಾಯಿಸಿಕೊಂಡು, ದಿನದಿಂದ ದಿನಕ್ಕೆ ಕುಸಿಯುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಘನತೆಯನ್ನು ಎತ್ತಿ ಹಿಡಿಯುವಂತೆ ರಾಜ್ಯಾಧ್ಯಕ್ಷರಾದ ತಮಗೆ ಬಹಿರಂಗ ಮನವಿ.

ಇದನ್ನೂ ಓದಿ: Grapes Benefits: ದ್ರಾಕ್ಷಿ ಸೇವಿಸಿದ್ರೆ ಸನಿಹಕ್ಕೂ ಬರಲ್ಲ ಕ್ಯಾನ್ಸರ್! ಅಬ್ಬಾ ಎಷ್ಟೊಂದು ಲಾಭಗಳು?

108 ವರ್ಷಗಳಿಂದ ಕನ್ನಡದ-ಕನ್ನಡಿಗರ-ಕರ್ನಾಟಕದ ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದಗಳ ಸಂವರ್ಧನೆಗೆ ಸೃಜನಶೀಲ ನೆಲೆಯಲ್ಲಿ ಸದಾ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಾ ಬಂದಿರುವ ಕನ್ನಡ ಸಾಹಿತ್ಯ ಪರಿಷತ್ತಿನಂತಹ ಘನತೆವೆತ್ತ ಸಂಸ್ಥೆಯ ಪ್ರಸ್ತುತ ರಾಜ್ಯಾಧ್ಯಕ್ಷರಾದ ತಮ್ಮಿಂದ ಕಸಾಪದ ಘನತೆ-ಗೌರವಗಳು ಹಿಂದೆಂದಿಗಿಂತಲೂ ಕುಸಿದು ಮಣ್ಣುಪಾಲಾಗುತ್ತಿರುವ ವಿಚಾರಗಳು ವ್ಯಾಪಕವಾಗಿ ಹರಡಿ, ಎಲ್ಲೆಡೆಗಳಿಂದ ಎಲ್ಲರಿಗೂ ಮುಜುಗರ ಉಂಟುಮಾಡುತ್ತಿವೆ. ಈಗಾಗಲೇ ನಾನು ಆಂತರಿಕವಾಗಿ ಬರೆದಿರುವ ಪತ್ರಗಳಿಗೆ, ಸಭೆಗಳಲ್ಲಿ ನಡೆಸಿರುವ ಚರ್ಚೆಗಳಿಗೆ, ಸಾರ್ವಜನಿಕರ ತೀವ್ರ ಟೀಕೆ-ಟಿಪ್ಪಣಿಗಳಿಗೆ ಯಾವುದೇ ರೀತಿಯ ಸ್ಪಂದನೆಗಳು ಬಾರದ ಹಿನ್ನೆಲೆಯಲ್ಲಿ ಕೆಳಕಂಡ ವಿಚಾರಗಳನ್ನು ತಮ್ಮ ಗಮನಕ್ಕೆ ತರುತ್ತಾ, ಅನಿವಾರ್ಯವಾಗಿ ಈ ಬಹಿರಂಗ ಮನವಿಯನ್ನು ಮಾಡುತ್ತಿದ್ದೇನೆ.

ಸಾಮಾಜಿಕ ವಲಯದಲ್ಲಿ ಟೀಕೆಗೆ ಗುರಿ

ನವೆಂಬರ್ 21, 2021ರಂದು ನಡೆದ ಚುನಾವಣೆಯಲ್ಲಿ 30 ಜಿಲ್ಲಾಧ್ಯಕ್ಷರು, ನಾಲ್ಕು ಗಡಿನಾಡುಗಳ ಅಧ್ಯಕ್ಷರು, ಓರ್ವ ರಾಜ್ಯಾಧ್ಯಕ್ಷರಾದ ತಾವು ಏಕಕಾಲಕ್ಕೆ ಆಯ್ಕೆಯಾಗಿ ನೂತನ ಕಾರ್ಯಕಾರಿ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಪ್ರಾರಂಭದ ದಿನಗಳಿಂದಲೂ ರಾಜ್ಯಾಧ್ಯಕ್ಷರಾದ ತಮ್ಮ ನಡೆ-ನುಡಿ-ನಿಲುವುಗಳು ನಾಡಿನಾದ್ಯಂತ ಸಾಹಿತ್ಯಿಕ-ಸಾಂಸ್ಕೃತಿಕ-ಸಾಮಾಜಿಕ ವಲಯಗಳಲ್ಲಿ ವ್ಯಾಪಕ ಟೀಕೆ ಮತ್ತು ವಿವಾದಗಳಿಗೆ ಗುರಿಯಾಗಿವೆ. ಅಲ್ಲದೆ ಇಡೀ ಕಾರ್ಯಕಾರಿ ಸಮಿತಿಯೂ ಕೂಡ ತೀವ್ರ ನಿಂದನೆಗೆ ಒಳಗಾಗುತ್ತಿದೆ.

ಏಕಪಕ್ಷೀಯ ನಿರ್ಧಾರವನ್ನು ಕೈಬಿಡಿ

1915 ರಿಂದ 2018ರವರೆಗಿನ ವರ್ಷಗಳಲ್ಲಿ 6 ಬಾರಿ ಕಾಲಕ್ಕೆ ತಕ್ಕಂತೆ ಕೆಲವು ತಿದ್ದುಪಡಿಗಳನ್ನು ಕಂಡಿದ್ದ ಕಸಾಪದ ನಿಬಂಧನೆಗಳಿಗೆ ಸದರಿ ಅವಧಿಯಲ್ಲಿಯೂ ಕೆಲವೇ ಕೆಲವು ತಿದ್ದುಪಡಿಗಳನ್ನು ಮಾಡಲು ಕಾರ್ಯಕಾರಿ ಸಮಿತಿಯ ಒಪ್ಪಿಗೆ ಪಡೆದಿರಿ. ಆದರೆ, ನಿಬಂಧನೆಗಳ ತಿದ್ದುಪಡಿ ಸಲಹಾ ಸಮಿತಿಯ ಸಲಹೆಯ ಮೇರೆಗೆ ಎಂದು ನಿಬಂಧನೆಗಳಿಗೆ ಆಮೂಲಾಗ್ರ / ಕ್ರಾಂತಿಕಾರಿ ಬದಲಾವಣೆ ಎಂಬ ಹೆಸರಿನಲ್ಲಿ ತಿದ್ದುಪಡಿಗಳನ್ನು ಮಾಡಿದಿರಿ. ಸಲಹಾ ಸಮಿತಿಯಲ್ಲಿದ್ದ ಕಾರ್ಯಕಾರಿ ಸಮಿತಿಯ ಪ್ರತಿನಿಧಿಗಳಿಂದ, ಕಾರ್ಯಕಾರಿ ಸಮಿತಿಯ ಚುನಾಯಿತ ಸದಸ್ಯರಿಂದ, ಸಾಹಿತ್ಯಿಕ ಮತ್ತು ಸಾರ್ವಜನಿಕ ವಲಯದವರಿಂದ ತೀವ್ರ ಟೀಕೆ, ಆರೋಪಗಳಿಗೆ ಗುರಿಯಾದರೂ, ರಾಜ್ಯಾಧ್ಯಕ್ಷರಾದ ತಾವೇ ನಡೆಸಿದ ಸಮಾಲೋಚನಾ ಸಭೆಯಲ್ಲಿ ಕೆಲವು ಹಿರಿಯರು ಸೂಚಿಸಿದ ಸಲಹೆಗಳನ್ನೂ ಪರಿಗಣಿಸಲಿಲ್ಲ. ಮುಂದುವರಿದು, ದುಬಾರಿ ವೆಚ್ಚದಲ್ಲಿ ಮುದ್ರಿಸಿರುವ ನಿಬಂಧನೆಗಳ ಪುಸ್ತಕದ ಮೇಲೆ ನ್ಯಾಯಾಲಯದಲ್ಲಿ ದಾಖಲಾಗಿರುವ ಮೂಲ ದಾವೆಯ ತೀರ್ಪಿಗೆ ಒಳಪಟ್ಟ ಅನುಮೋದನೆ ಅಡಿಯಲ್ಲಿ ನೋಂದಾಯಿಸಿರುವ ನಿಬಂಧನೆಗಳನ್ನು ಕಾನೂನುಬಾಹಿರವಾಗಿ ಅನುಷ್ಠಾನಗೊಳಿಸುತ್ತಿರುವಿರಿ. ಸದಸ್ಯತ್ವದ ಅಮಾನತು, ಚುನಾಯಿತ ಕಾರ್ಯಕಾರಿ ಸಮಿತಿಗೆ ಕಟ್ಟುಪಾಡುಗಳ ಸುತ್ತೋಲೆ, ಹಣಕಾಸಿನ ನಿರ್ವಹಣೆ ಮುಂತಾದ ವಿಷಯಗಳಲ್ಲಿ ಕಾರ್ಯಕಾರಿ ಸಮಿತಿಯ ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚಿಸಿರುವುದಿಲ್ಲ. ಚುನಾಯಿತ ಸದಸ್ಯರುಗಳ ಸಲಹೆ, ಸೂಚನೆ, ಮನವಿಗಳನ್ನು ಪರಿಗಣಿಸದೇ, ರಾಜ್ಯಾಧ್ಯಕ್ಷರಾದ ತಮಗೇ ಪರಮಾಧಿಕಾರವಿದೆ ಎಂದು ಪ್ರತಿನಿಧಿಗಳ ಸ್ವಾಯತ್ತತೆಗಳೆಲ್ಲವನ್ನೂ ಹತ್ತಿಕ್ಕಿ, ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುತ್ತಾ ಬಂದಿರುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸುತ್ತೇನೆ.

ಇದನ್ನೂ ಓದಿ: Anil Shetty: ಬಿಜೆಪಿಯ ಅನಿಲ್‌ ಶೆಟ್ಟಿಗೆ ಕುಕ್ಕರ್‌ ʻಪ್ರೆಶರ್‌ʼ; ಕೋರಮಂಗಲ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು

ಪ್ರಶ್ನೆ ಮಾಡಿದವರಿಗೆ ಹೆದರಿಸುತ್ತೀರಿ

ತಾವು “ಸಂತ ಶಿಶುನಾಳ ಷರೀಫರ ಗುರು ಗೋವಿಂದಭಟ್ಟರ ಮರಿಮೊಮ್ಮಗ” ಎಂದೂ, “ಮುಖ್ಯಮಂತ್ರಿ ನನಗೆ ಹೋಗೋ ಬಾರೊ ಗೆಳೆಯ” ಎಂಬಿತ್ಯಾದಿ ಅನೇಕ ವೈಯಕ್ತಿಕ ಹಿನ್ನೆಲೆಯ (ಅತಿರೇಕದ) ವಿಚಾರಗಳನ್ನು ಕಾರ್ಯಕಾರಿ ಸಮಿತಿಯ ಸಭೆಗಳಲ್ಲಿ ಮಾತನಾಡುತ್ತಾ, ವೃಥಾ ಸಮಯ ವ್ಯರ್ಥ ಮಾಡುತ್ತಾ, ವಿಷಯಾಂತರ ಮಾಡುವ ತಂತ್ರಗಳನ್ನು ಹೂಡುತ್ತಾ, “ನಾವೆಲ್ಲರೂ ಗಾಜಿನ ಮನೆಯಲ್ಲಿ ಇರುವವರೇ… ಎಚ್ಚರವಿರಲಿ”, “ನಿಮ್ಮಗಳ ಮೇಲೆ ದೂರು ಬಂದಿವೆ” ಎನ್ನುವ ನೀವು, ದೂರುಗಳ ಪ್ರತಿ ಕೇಳಿದಾಗ “ಬೇಕಿದ್ದರೆ ಆರ್‌ಟಿಐ ಮೂಲಕ ಅರ್ಜಿ ಸಲ್ಲಿಸಿ” ಎಂದು ಹೇಳುತ್ತೀರಿ. “ನನ್ನ ವಿರುದ್ಧ ಯಾವುದೇ ರೀತಿಯಲ್ಲಿ ಟೀಕಿಸಿದರೂ ದೇಶದ ನಾನಾ ಭಾಗದಲ್ಲಿರುವ ನನ್ನ ಸ್ನೇಹಿತ ನ್ಯಾಯವಾದಿಗಳು, ನಿವೃತ್ತ ನ್ಯಾಯಾಧೀಶರ ಮೂಲಕ ಎಲ್ಲಿ ಬೇಕಾದರೂ ದಾವೆ ಹೂಡಿಸಿ, ಕೋರ್ಟಿಗೆ ಅಲೆಯುವಂತೆ ಮಾಡಿ ಹೈರಾಣಾಗಿಸುತ್ತೇನೆ”, “ನಿಮಗ್ಯಾರಿಗೂ ವಿವೇಕವೇ ಇಲ್ಲ; ನಿಬಂಧನೆಗಳನ್ನು ಮತ್ತು ನಡಾವಳಿಗಳನ್ನು ಸರಿಯಾಗಿ ಓದಿಕೊಂಡೇ ಬರುವುದಿಲ್ಲ” ಎಂಬ ಅನೇಕ ಬೆದರಿಕೆಯ ಮತ್ತು ಮೂದಲಿಕೆಯ ಮಾತುಗಳನ್ನಾಡುತ್ತಾ, ವಾಸ್ತವ ಹಾಗೂ ಅಗತ್ಯ ವಿಚಾರಗಳ ಬಗೆಗೆ ಪ್ರಶ್ನೆ ಮಾಡುವವರನ್ನು ಹತ್ತಿಕ್ಕುತ್ತಾ, “ನೀವೆಲ್ಲರೂ ಅದ್ಹೇಗೆ ಒಗ್ಗಟ್ಟಾಗಿರುವಿರಿ ನೋಡುತ್ತೇನೆ” ಎಂಬ ಒಡೆದಾಳುವ ನೀತಿಯನ್ನು ಅನುಸರಿಸುತ್ತಾ, ಪ್ರಶ್ನೆ ಮಾಡುವವರನ್ನು ಏರುಧ್ವನಿಯಲ್ಲಿ ಮಾತನಾಡುತ್ತೀರಿ. ಪದೇ ಪದೆ ಪ್ರಶ್ನೆ ಕೇಳುತ್ತೀರಿ, ಬೇರೆಯವರಿಗೆ ಮಾತನಾಡಲು ಅವಕಾಶ ನೀಡುವುದಿಲ್ಲ. ನೀವಷ್ಟೇ ಬುದ್ದಿವಂತರೇ?” ಎಂಬಿತ್ಯಾದಿ ಮಾತುಗಳಿಂದ ಸಭೆಯ ಉದ್ದೇಶದ ದಿಕ್ಕು ತಪ್ಪಿಸುತ್ತಾ, ಅಸಂಬದ್ಧ ತೀರ್ಮಾನಗಳನ್ನು ಕೈಗೊಂಡು ಮಾಧ್ಯಮಗಳ ಮೂಲಕ ಸಮಾಜಕ್ಕೆ ಸಿಹಿಲೇಪಿತ ಕಹಿ ವಿಚಾರಗಳನ್ನು ಉಣಬಡಿಸುತ್ತಿರುವುದನ್ನೂ ಕೈಬಿಡಬೇಕೆಂದು ಮನವಿ ಮಾಡಿಕೊಳ್ಳುತ್ತಿದ್ದೇನೆ.‌

ಸಾರ್ವಜನಿಕವಾಗಿ ಬರುವ ಸಲಹೆ-ಸೂಚನೆ, ಟೀಕೆ ಟಿಪ್ಪಣಿಗಳಿಗೆ ತಮ್ಮ ವಿತಂಡವಾದದ ಮೂಲಕ ಸಮರ್ಥನೆಗಳನ್ನು ಮಾಡುತ್ತಾ, ಕನ್ನಡದ ನೈಜ ಸಾಹಿತಿಗಳನ್ನೂ, ಲೇಖಕರನ್ನೂ, ಚಿಂತಕರನ್ನೂ, ಚಳವಳಿಗಾರರನ್ನೂ, ಹೋರಾಟಗಾರರನ್ನೂ, ಸಂಘಟಕರನ್ನೂ, ಸಾಂಸ್ಕೃತಿಕ ಲೋಕದ ಪ್ರತಿಭಾವಂತರನ್ನೂ ಸಾಹಿತ್ಯ ಪರಿಷತ್ತಿನಿಂದ ದೂರ ಮಾಡುತ್ತಿರುವುದನ್ನು ಇಲ್ಲಿಗೇ ನಿಲ್ಲಿಸಬೇಕೆಂದು ಕೋರುತ್ತೇನೆ.

ಇದುವರೆಗೆ ನಡೆದಿರುವ 8 ಕಾರ್ಯಕಾರಿ ಸಮಿತಿ ಸಭೆಗಳು, ಒಂದು ವಿಶೇಷ ಸರ್ವ ಸದಸ್ಯರ ಸಭೆ, ಒಂದು ವಾರ್ಷಿಕ ಸಾಮಾನ್ಯ ಸಭೆ ಇವುಗಳನ್ನು ನಿಯಮಾನುಸಾರ ನಡೆಸದೆ, ಕ್ರಿಯಾಲೋಪ ಎಸಗಿರುವುದರಿಂದ ಅನೇಕ ಕಾನೂನಾತ್ಮಕ ಎಡವಟ್ಟುಗಳಾಗುತ್ತಿರುವುದರ ಹೊಣೆಯನ್ನು ತಾವೇ ಹೊರಬೇಕೆಂದು ಒತ್ತಾಯಿಸುತ್ತೇನೆ.

ಇದನ್ನೂ ಓದಿ: Bangalore horror : 19ರ ಯುವತಿಯನ್ನು ಎಳೆದೊಯ್ದು ಚಲಿಸುವ ಕಾರಿನಲ್ಲೇ ನಾಲ್ಕು ಗಂಟೆ ಕಾಲ ನಿರಂತರ ಅತ್ಯಾಚಾರ

ಇವೆಲ್ಲದರ ನಡುವೆ ಪ್ರಾರಂಭದಿಂದಲೂ ಬೆಂಗಳೂರು ನಗರ ಜಿಲಾಧ್ಯಕ್ಷನಾದ ನಾನು ರಾಜ್ಯದ ಇತರ ಜಿಲ್ಲೆಗಳ ಅಧ್ಯಕ್ಷರ ಸ್ಥಿತಿ, ಸಂದರ್ಭ ಸನ್ನಿವೇಶಗಳೇ ಬೇರೆ, ರಾಜಧಾನಿ ಬೆಂಗಳೂರು ನಗರದ ಸ್ಥಿತಿ-ಸಂದರ್ಭ-ಸನ್ನಿವೇಶಗಳೇ ಬೇರೆ ಎಂದು ಪದೇ ಪದೆ ನೆನಪಿಸುತ್ತಾ, ಜನರು ನ್ಯಾಯಾಲಯಗಳಿಗೆ ಮೊರೆ ಹೋಗಬಹುದಾದ ಸಾಧ್ಯತೆ, ಟೀಕೆ ಟಿಪ್ಪಣಿಗಳು ಬರುವ ಸಾಧ್ಯತೆ, ಪ್ರತಿಭಟನೆಗಳಾಗುವ ಸಾಧ್ಯತೆಗಳನ್ನು ಎಲ್ಲ ಸಭೆಗಳಲ್ಲಿಯೂ ಗಮನಕ್ಕೆ ತಂದರೂ, ಅವುಗಳನ್ನು ನಿರ್ಲಕ್ಷಿಸಿ, ಮುಂದುವರಿದು ತಮ್ಮ ಮೇಲಿನ ಮತ್ತು ನಮ್ಮೆಲ್ಲರ ಮೇಲಿನ ಜನರ ವಿಶ್ವಾಸ ಹಾಳಾಗುವಂತೆ ಮಾಡುವುದರೊಂದಿಗೆ ಪರಿಷತ್ತಿನ ಘನತೆ ಮತ್ತು ಪಾವಿತ್ರ್ಯತೆಗಳನ್ನು ಮಣ್ಣು ಪಾಲು ಮಾಡುತ್ತಿರುವುದನ್ನು ನಿಲ್ಲಿಸಿ.

16 ತಿಂಗಳ ಈವರೆಗಿನ ಚರ್ಚೆಗಳಲ್ಲಿ ನನ್ನ ಜವಾಬ್ದಾರಿಗಳನ್ನು ತಮ್ಮ ಗಮನಕ್ಕೆ ತರುತ್ತಾ, ಪ್ರಶ್ನೆಗಳನ್ನು ಮತ್ತು ಸಲಹೆ ಸೂಚನೆ, ಮನವಿಗಳನ್ನು ಸೂಕ್ತ ರೀತಿಯಲ್ಲಿ, ಸೂಕ್ತ ವೇದಿಕೆಯಲ್ಲಿ ಮಾಡುತ್ತಿದ್ದ ಕಾರಣದಿಂದ ನನ್ನ ಬಗೆಗೆ ತಾವು ತಾತ್ಸಾರ ಮತ್ತು ಸಿನಿಕತನವನ್ನು ಹೊಂದಿ ಎರಡು ಬಾರಿ ಬೆಂಗಳೂರು ನಗರ ಜಿಲ್ಲಾ ಕಸಾಪ ಕಚೇರಿಯನ್ನು ತೆರವುಗೊಳಿಸಲು ಪತ್ರ ನೀಡಿಸಿದ್ದೀರಿ. ಎರಡನೇ ಬಾರಿಯ ಪತ್ರದಲ್ಲಿ ಬೀಗವನ್ನು ತೆರೆಸಿ, ಕಚೇರಿಯನ್ನು ವಶಪಡಿಸಿಕೊಳ್ಳುವುದಾಗಿ ತಿಳಿಸಿದ್ದೀರಿ. ಬೆಂ.ನ.ಜಿ. ಕಸಾಪದ ಕಾರ್ಯಕ್ರಮಗಳಿಗೆ ಸಭಾಂಗಣಗಳನ್ನು ನೀಡುವ ಬಗ್ಗೆ ಅಡಚಣೆಗಳನ್ನು ಉಂಟುಮಾಡಿದ್ದೀರಿ.

ನಮ್ಮ ಪತ್ರಗಳಿಗಿಲ್ಲ ಸ್ವೀಕೃತಿ

ಕಾರ್ಯಕಾರಿ ಸಮಿತಿಯ ಸಭೆಯ ನಡಾವಳಿಗಳಲ್ಲಿ ದಾಖಲಾಗಬೇಕಿದ್ದ ನನ್ನ ಮತ್ತು ಒಡನಾಡಿ ಜಿಲ್ಲಾಧ್ಯಕ್ಷರ ಮಾತುಗಳನ್ನು ಸರಿಯಾಗಿ ದಾಖಲಿಸದೇ, ತಮಗೆ ಸರಿ ಎನಿಸುವ ರೀತಿಯಲ್ಲಿ ದಾಖಲಿಸುತ್ತಿದ್ದೀರಿ. ನನ್ನ ಮಾತುಗಳನ್ನು ಸೇರಿಸದಿರುವುದು ಮತ್ತು ತಿರುಚಿರುವುದನ್ನು ಕುರಿತು ತಿದ್ದುಪಡಿಗೆ ಪತ್ರ ನೀಡಿದರೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ನಾವು ನೀಡುವ ಯಾವುದೇ ಪತ್ರಗಳಿಗೆ ಕಚೇರಿಯಲ್ಲಿ ಸ್ವೀಕೃತಿ ನೀಡದಂತೆ ಸೂಚಿಸಿದ್ದೀರೆಂದು ತಿಳಿದು ಬಂದಿದೆ.

ದುಂದು ವೆಚ್ಚ ಮಾಡಿದ್ದೀರಿ

ಕಾಲಕಾಲಕ್ಕೆ ಅನುದಾನವನ್ನು ಬಿಡುಗಡೆ ಮಾಡದೆ, ಅನುದಾನಗಳನ್ನು ಬಿಡುಗಡೆ ಮಾಡುವಲ್ಲಿ ಕಡಿತ ಮಾಡಿ ಕನ್ನಡದ ಕೆಲಸದ ಬದಲು ಕಟ್ಟಡದ ಕೆಲಸ ಮಾಡುತ್ತಿದ್ದೀರಿ. ಅತ್ಯಾಧುನಿಕವಾಗಿ ಕನ್ನಡ ಸಾಹಿತ್ಯ ಪರಿಷತ್ತನ್ನು ಕಟ್ಟುವ ಹೆಸರಿನಲ್ಲಿ ತಂತ್ರಾಂಶ ಅಭಿವೃದ್ಧಿ, ಕಟ್ಟಡಗಳ ನವೀಕರಣ, ವಾಹನ ಖರೀದಿ, ಸಿ.ಸಿ. ಕ್ಯಾಮೆರಾ ಅಳವಡಿಕೆ, ಕಚೇರಿ ನವೀಕರಣ ಮತ್ತಿತ್ಯಾದಿಗಳನ್ನು ಅಗತ್ಯಕ್ಕೂ ಮೀರಿ ಸರ್ಕಾರದಿಂದ ಬರುವ ಅನುದಾನವನ್ನು ದುಂದುವೆಚ್ಚ ಮಾಡಿದ್ದೀರೇ ವಿನಃ ಮೂಲಭೂತವಾಗಿ ಆಗಬೇಕಿದ್ದ ಗ್ರಂಥಾಲಯದ ಉನ್ನತೀಕರಣ, ನಿಘಂಟು ವಿಭಾಗದ ಅಭಿವೃದ್ಧಿ, ವಿವಿಧ ಜಿಲ್ಲೆಗಳಲ್ಲಿರುವ ಕಚೇರಿಗಳ ನವೀಕರಣ ಮತ್ತು ನಿರ್ವಹಣೆ, ಜಿಲ್ಲಾ ಮಟ್ಟದ ವಿಶೇಷ ಕಾರ್ಯಕ್ರಮಗಳಿಗೆ ಉತ್ತೇಜನ ಮೊದಲಾದ ಕನ್ನಡದ ರಚನಾತ್ಮಕ ಕೆಲಸಗಳನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುತ್ತೀರಿ ಏಕೆ?

ಕುವೆಂಪು ಸಭಾಂಗಣವನ್ನು ಸ್ಥಗಿತಗೊಳಿಸಿರುವುದಲ್ಲದೆ, ಮೊದಲ ಮಹಡಿಯಲ್ಲಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯನ್ನು ತೆರವುಗೊಳಿಸಿರುವುದೇಕೆ? ಪಂಪ ಮಹಾಕವಿ ರಸ್ತೆಯ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ರಸ್ತೆ ಎಂದು ಹೆಸರು ಬದಲಾಯಿಸುವುದಾಗಿ ಹೇಳಿದ್ದೀರಲ್ಲದೆ, ಮಹಾದ್ವಾರದ ಕಮಾನಿನ ಫಲಕದ ಒಳಭಾಗದಲ್ಲಿದ್ದ ಆದಿಕವಿ ಪಂಪನ ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂಬ ಕನ್ನಡ ಸಾಹಿತ್ಯ ಘೋಷವಾಕ್ಯವನ್ನು ತೆಗೆದಿರುವುದರ ಹಿಂದಿನ ಉದ್ದೇಶವೇನು?

ಇದನ್ನೂ ಓದಿ: Karnataka Election 2023: ಮುಗಿಯದ ಹಾಸನ ಜೆಡಿಎಸ್‌ ಅಭ್ಯರ್ಥಿ ಗೊಂದಲ; ಹೊಸ ಹೆಸರು ಹರಿಬಿಟ್ಟ ರೇವಣ್ಣ!

ನನ್ನ ಹಿಂದಿನ ಪ್ರಶ್ನೆಗಳಿಗೂ ಉತ್ತರಿಸಿ

ಕೆಲವು ಸಾಮಾಜಿಕ ಕಾರ್ಯಕರ್ತರು ಕಾನೂನು ಬದ್ಧವಾಗಿ ಕೇಳಿರುವ ಯಾವುದೇ ಮಾಹಿತಿಗಳನ್ನು ನೀಡದಿರುವುದರಿಂದ ಮಾಹಿತಿ ಹಕ್ಕು ಆಯೋಗದ ಮೊರೆ ಹೋಗಿರುವುದಾಗಿ ಪತ್ರದ ಮೂಲಕ ತಿಳಿಸಿದ್ದಾರೆ. ಇವೆಲ್ಲದರಿಂದ ಕಸಾಪದಲ್ಲಿ ಪಾರದರ್ಶಕತೆ ಇಲ್ಲವೆಂಬ ಅನುಮಾನಕ್ಕೆ ಎಡೆಮಾಡಿಕೊಟ್ಟಂತಾಗಿದೆ. ಈ ಹಿಂದಿನ (ದಿನಾಂಕ: 23.03.2023ರ) ಪತ್ರದಲ್ಲಿ 26.03.2023ರ ಕಾರ್ಯಕಾರಿ ಸಮಿತಿಯಲ್ಲಿ ಪ್ರಶ್ನಿಸಬೇಕೆಂದಿದ್ದ ಪ್ರಶ್ನೆಗಳಿಗೆ ಕಾರ್ಯಕಾರಿ ಸಮಿತಿಯಲ್ಲಿ ತಾವು ಉತ್ತರಿಸದಿರುವ ಹಿನ್ನೆಲೆಯಲ್ಲಿ ಈಗ ಕೇಳುತ್ತಿರುವ ಪ್ರಶ್ನೆಗಳ ಜತೆಗೆ ಹಿಂದಿನ ಪ್ರಶ್ನೆಗಳಿಗೂ ಉತ್ತರಗಳನ್ನು ಬಯಸುತ್ತೇನೆ.

ನೀವೇ ಕರೆದಿದ್ದ ಸಮಾಲೋಚನಾ ಸಭೆಗಳಲ್ಲಿ ನಿಮ್ಮ ನಿಲುವುಗಳನ್ನು ಬದಲಾಯಿಸಿಕೊಳ್ಳಲು ಕೆಲವು ಹಿರಿಯರು ನೀಡಿರುವ ಸಲಹೆ ಸೂಚನೆಗಳನ್ನು ಬಹಿರಂಗಪಡಿಸದಿರುವುದು, ನಿಮ್ಮ ಅಸಂಬದ್ಧ ತೀರ್ಮಾನ-ನಡೆ-ನುಡಿಗಳ ಬಗೆಗೆ ನಮಗೆ ಬರುವ ಪತ್ರಗಳು, ನಿಮಗೆ ಕಳುಹಿಸುವ ನೋಟಿಸ್‍ಗಳು, ಹೂಡಿರುವ ದಾವೆಗಳು ಇವಾವುಗಳನ್ನು ಕಾರ್ಯಕಾರಿ ಸಮಿತಿ ಸಭೆಗಳಲ್ಲಿ ಪ್ರಸ್ತಾಪಿಸದೆ, ಸಮಸ್ಯೆಗಳ ಪರಿಹಾರಕ್ಕೆ ಮಾರ್ಗೋಪಾಯಗಳನ್ನು ಕಾರ್ಯಕಾರಿ ಸಮಿತಿಯ ಮುಂದೆ ಚರ್ಚಿಸದಿರುವುದು ಎಷ್ಟು ಸರಿ?

ದೂರವಾಣಿ ಕರೆ ಸ್ವೀಕರಿಸಿ

ತಾವು ತಮ್ಮ ಮನೋಭೂಮಿಕೆಗೆ ಅನುಕೂಲವಾಗುವಂತೆ ಹೊರಡಿಸುವ ಸುತ್ತೋಲೆಗಳೊಂದಿಗೆ ಸಂವೇದನೆಯನ್ನೂ, ನಿಯಮಗಳೊಂದಿಗೆ ನೈತಿಕತೆಯನ್ನೂ ಅಳವಡಿಸಿಕೊಳ್ಳಬೇಕಾಗಿರುವ ಅಗತ್ಯತೆಯನ್ನು ಮನಗಾಣಬೇಕೆಂದು ಕೋರುತ್ತೇನೆ. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯ ಸದಸ್ಯರಿಗೆ “ನಾನು ಅಣ್ಣನಿದ್ದಂತೆ, ತಂದೆಯಿದ್ದಂತೆ” ಎಂದು ಉವಾಚಿಸುವ ತಾವು ಚುನಾಯಿತ ಪ್ರತಿನಿಧಿಗಳಾದ ನಾವು ಕರೆ ಮಾಡಿದಾಗ ಕರೆ ಸ್ವೀಕರಿಸುವುದು, ಸಂದೇಶಗಳಿಗೆ ಪ್ರತಿಕ್ರಿಯೆ ನೀಡುವುದು, ಕಚೇರಿಯಲ್ಲಿ ತಮ್ಮನ್ನು ಭೇಟಿ ಮಾಡಲು ಬಂದಾಗ ಸೌಜನ್ಯದಿಂದ ನಡೆಸಿಕೊಳ್ಳುವುದು ತಮ್ಮ ಕರ್ತವ್ಯವೆಂದು ಭಾವಿಸಬೇಕೆಂದು ಒತ್ತಾಯಿಸುತ್ತೇನೆ.

ಸಿಬ್ಬಂದಿ, ಸಾರಿಗೆ, ಸವಲತ್ತು, ಭತ್ಯೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ತಾವು “ನಾನು ಆಡಳಿತ ನಡೆಸಲು ಬಂದಿರುವುದು, ನೀವು ತಳಮಟ್ಟದಲ್ಲಿ ಕನ್ನಡದ ಕೆಲಸ ಮಾಡಲು ಬಂದಿರುವುದು” ಎಂದು ಹಿಂದೊಮ್ಮೆ ಹೇಳಿದ್ದಿರಿ. ನಿಮ್ಮಂತೆಯೇ ಚುನಾಯಿತರಾಗಿರುವ ನಾವುಗಳೂ ನಿಮ್ಮ ಹಾಗೆಯೇ ಹೇಳಿದರೆ ಕನ್ನಡದ ಕೆಲಸ ಸಾಗುವುದಾದರೂ ಹೇಗೆ? ಈ ಸಂದರ್ಭದಲ್ಲಿ ನಮಗೆ-ನಿಮಗೆಲ್ಲ ಈ ಹಿಂದೆ ಅಧ್ಯಕ್ಷರಾಗಿದ್ದ ಎಂ.ಆರ್. ಶ್ರೀನಿವಾಸಮೂರ್ತಿ ಅಂತಹವರು ಆದರ್ಶವಾಗಬೇಕು. ಕಸಾಪದ ಕಾರ್ಯಕ್ರಮದ ಸಿದ್ಧತೆಗಾಗಿ ಕಸ ಗುಡಿಸುತ್ತಿದ್ದ ಕಸಾಪ ಅಧ್ಯಕ್ಷರನ್ನು ಕಂಡು ತಡವಾಗಿ ಓಡಿಬಂದ ಸಿಬ್ಬಂದಿ “ಗುಡಿಸುತ್ತೇನೆ ಬಿಡಿ ಸ್ವಾಮಿ” ಎಂದಾಗ, ಎಂ.ಆರ್.ಶ್ರೀ ಅವರು ಹೇಳಿದ ಮಾತು: “ನಾನು ದೊಡ್ಡ ಕೂಲಿ, ನೀನು ಸಣ್ಣ ಕೂಲಿ, ಜನ ನನ್ನನ್ನು ಪ್ರಶ್ನಿಸುತ್ತಾರೆಯೇ ವಿನಃ ನಿನ್ನನ್ನಲ್ಲ!” ಎಂದು ಹೇಳುವ ಮೂಲಕ ತಮ್ಮ ಕಾಯಕದ ಕರ್ತೃತ್ವವನ್ನು ಮೆರೆದಿದ್ದರು. ಸಾಹಿತ್ಯ ಪರಿಷತ್ತಿನಂತಹ ಸಂಸ್ಥೆಗೆ ಎಂ.ಆರ್.ಶ್ರೀ ಅಂತಹ ಹಿರಿಯರು ಆದರ್ಶವಾಗಬೇಕೇ ವಿನಃ, ಅಧಿಕಾರಸ್ಥ ನೆಲೆಯಲ್ಲಿ ಆಲೋಚಿಸುವ ಮನಸ್ಥಿತಿಯಲ್ಲ.

ಇದನ್ನೂ ಓದಿ: Aadhaar Update: ಆನ್‌ಲೈನ್‌ನಲ್ಲಿ ಆಧಾರ್ ಅಪ್‌ಡೇಟ್ ಉಚಿತ; ಈ ಸೌಲಭ್ಯ ಜೂನ್ 14ರವರೆಗೆ ಮಾತ್ರ

ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಗೌರವದಿಂದ ಈವರೆಗೆ ಈ ಮೇಲಿನ ಎಲ್ಲವನ್ನೂ ಸಹಿಸಿಕೊಳ್ಳುತ್ತಲೇ ಬರುತ್ತಾ, ಆಂತರ್ಯದಲ್ಲಿಯೇ ನಿಮ್ಮ ಏಕಪಕ್ಷಿಯ ಹಾಗೂ ಅಧಿಕಾರ ಕೇಂದ್ರಿತ ಧೋರಣೆಗಳನ್ನು ತಿದ್ದುಕೊಳ್ಳಲು ತೀವ್ರ ಹಾಗೂ ವಿನಮ್ರ ಮನವಿ ಮಾಡುತ್ತಾ ಬಂದಿದ್ದಾಗ್ಯೂ, 21.11.2021ರಿಂದ ಈವರೆಗಿನ ಸಭೆಗಳಲ್ಲಿ ನಡೆದಿರುವ ವಿದ್ಯಮಾನಗಳಿಂದ, ಸಾರ್ವಜನಿಕ ವಲಯಗಳಲ್ಲಿ ಉಂಟಾಗಿರುವ ಟೀಕೆ-ಟಿಪ್ಪಣಿಗಳಿಂದ ಬೇಸತ್ತು ನನ್ನ ಜವಾಬ್ದಾರಿಯ ಭಾಗವಾಗಿ ಈ ಹಿಂದಿನ ಪತ್ರದಲ್ಲಿ ತಿಳಿಸಿರುವಂತೆ, ಈ ಎಲ್ಲ ಪ್ರಶ್ನೆಗಳನ್ನು ತಮಗೆ ಬಹಿರಂಗವಾಗಿ ಕೇಳಲೇಬೇಕಾದ ಅನಿವಾರ್ಯತೆಯಿಂದ ಪ್ರಶ್ನಿಸುತ್ತಿದ್ದೇನೆಯೇ ಹೊರತು ಬೇರಾವುದೇ ಉದ್ದೇಶದಿಂದಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಾ, ಸದ್ಯಕ್ಕೆ ಈ ಪತ್ರವನ್ನು ಇಲ್ಲಿಗೆ ಮುಗಿಸುತ್ತಿದ್ದೇನೆ ಎಂದು ಪ್ರಕಾಶ್‌ಮೂರ್ತಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ ಸಾ ಪ

ಕನ್ನಡಿಗರು ಯುದ್ಧ ಟ್ಯಾಂಕರ್ ಇದ್ದಂಗೆ, ಎದುರಿಗೆ ಬಂದ್ರೆ ಅಪ್ಪಚ್ಚಿ: ಟಿ.ಎ. ನಾರಾಯಣ ಗೌಡ

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕರವೇ ಸಂಸ್ಥಾಪಕ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರಿಗೆ ಮಂಗಳವಾರ ಸಂಜೆ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

VISTARANEWS.COM


on

Kuvempu Sirigannada Endowment Award to TA Narayana Gowda
Koo

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರಿಗೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ಮಂಗಳವಾರ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

ಈ ವೇಳೆ ಮಾತನಾಡಿದ ಕರವೇ ಸಂಸ್ಥಾಪಕ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, ನಾನು ಹೋರಾಟದ ಹಾದಿಯಲ್ಲಿ ಬರಲು ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ ಹಾಗೂ ಡಾ. ರಾಜಕುಮಾರ್‌ ಅವರ ಚಿತ್ರಗಳು ಕಾರಣ. ಕುವೆಂಪು ಅವರು ಕರ್ನಾಟಕ ರಕ್ಷಣಾ ವೇದಿಕೆಯ ಬಹುದೊಡ್ಡ ಆದರ್ಶವಾಗಿದ್ದಾರೆ. ಅವರ ಸಾಹಿತ್ಯ, ವಿಚಾರಧಾರೆಗಳನ್ನು ನಮ್ಮ ಕಾರ್ಯಕರ್ತರೊಂದಿಗೆ ಹಂಚಿಕೊಳ್ಳುತ್ತೇವೆ ಎಂದು ತಿಳಿಸಿದರು.

ಕನ್ನಡದ ಶತ್ರುಗಳಿಗೆ ಒಂದು ಮಾತು ಹೇಳುತ್ತಿರುತ್ತೇನೆ. ಕನ್ನಡದ ನಾಡು, ನುಡಿ ವಿಚಾರದಲ್ಲಿ ನಾನು ಯುದ್ಧ ಟ್ಯಾಂಕರ್‌ ಇದ್ದ ಹಾಗೆ, ಅಡ್ಡಿ ಬರಬೇಡಿ ಅಪ್ಪಚ್ಚಿ ಆಗಿಬಿಡುತ್ತೀರಾ ಎಂದು ಕುವೆಂಪು ಅವರು ಹೇಳುತ್ತಿದ್ದರು. ಕುವೆಂಪು ಪದ್ಯ ʼಮನುಜ ಮತ ವಿಶ್ವಪಥʼ ನನ್ನ ಅಚ್ಚುಮೆಚ್ಚಿನದ್ದಾಗಿದೆ. ಸಿಲುಕದಿರಿ ಮತವೆಂಬ ಮೋಹದಜ್ಞಾನಕ್ಕೆ, ಮತಿಯಿಂದ ದುಡಿಯಿರೈ ಲೋಕಹಿತಕೆ, ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ; ಓ ಬನ್ನಿ ಸೋದರರೇ ವಿಶ್ವಪಥಕ್ಕೆ! ಎಂಬ ಅವರ ಪದ್ಯದ ನುಡಿಗಳು ನನಗೆ ಬಹಳ ಇಷ್ಟ. ಇಂತಹ ರೋಮಾಂಚನಕಾರಿ ಪದ್ಯಗಳ ನುಡಿಗಳು ನನ್ನಂತಹವರಿಗೆ ಹೋರಾಟದ ಕಿಚ್ಚು ತುಂಬಿವೆ ಎಂದು ಹೇಳಿದರು.

ದಲಿತ, ರೈತ, ಕಮ್ಯುನಿಸ್ಟ್‌ ಸೇರಿ ಎಲ್ಲ ಚಳವಳಿಗೆ ಆದರ್ಶ ಎಂದು ಯಾರಾದರೂ ಇದ್ದರೆ ಅದು ಕುವೆಂಪು ಅವರು ಮಾತ್ರ. ಅವರು ಎಲ್ಲ ಹೋರಾಟಗಾರರಿಗೆ ಸ್ಫೂರ್ತಿ. ಕನ್ನಡಕ್ಕೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಅಂತಹ ಮಹಾಕವಿಯ ಹೆಸರಿನ ಪ್ರಶಸ್ತಿಯನ್ನು ನಾನು ಸ್ವೀಕರಿಸಿರುವುದು ನನ್ನ ಜೀವನದಲ್ಲಿ ಎಂದಿಗೂ ಮರೆಯಲಾರಂದತಹ, ಸುವರ್ಣ ಅಕ್ಷರಗಳಲ್ಲಿ ಬರೆದಿಡುವ ಗಳಿಗೆಯಾಗಿದೆ. ಈ ಪ್ರಶಸ್ತಿಯನ್ನು ನನಗೆ ಜನ್ಮ ಕೊಟ್ಟ ತಂದೆ-ತಾಯಿ ಅರ್ಪಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ | ಮಾನವೀಯ ಮೌಲ್ಯದ ಮೇರು ಸಂತ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ

ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ: ಕೋಡಿಮಠ ಶ್ರೀ

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮಾತನಾಡಿ, ನಮ್ಮ ಕನ್ನಡನಾಡಿನಲ್ಲಿ ಅನೇಕ ಸಾಹಿತಿಗಳು, ವೀರರು, ಶೂರರು, ಹೋರಾಟಗಾರರು, ಧೀರರು ಆಗಿ ಹೋಗಿದ್ದಾರೆ. ಅಂತಹವರಲ್ಲಿ ನಮ್ಮ ನಾರಾಯಣ ಗೌಡರು ಕೂಡ ಒಬ್ಬರು. ಅವರ ತಂದೆಯವರು ಕೂಡ ಬಹಳ ವಿನಯವಂತರು. ಅದೇ ಗುಣ ನಮ್ಮ ನಾರಾಯಣ ಗೌಡರಲ್ಲಿದೆ. ಆದರೆ, ಸ್ವಲ್ಪ ವ್ಯತ್ಯಾಸವಾದರೆ ಆತ ಹುಲಿಯಾಗುತ್ತಾನೆ. ನಮ್ಮ ದೃಷ್ಟಿಯಲ್ಲಿ ವಾರಿಧಿ ವಾರಿಧಿಯೇ, ಆಕಾಶ, ಆಕಾಶವೇ. ಸಮುದ್ರ ಮತ್ತು ಆಕಾಶವನ್ನು ಹೋಲಿಕೆ ಮಾಡಲು ಆಗಲ್ಲ. ಹೀಗಾಗಿ ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ನೆಲ, ಜಲಕ್ಕಾಗಿ ಹೋರಾಟ ಮಾಡಿದ ಡಾ. ರಾಜಕುಮಾರ್‌ ಅವರನ್ನು ಬಿಟ್ಟರೆ ನಮ್ಮ ನಾರಾಯಣಗೌಡರೇ ಅಂತಹ ಸ್ಥಾನ ಪಡೆದಿದ್ದಾರೆ. ಇನ್ನು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ತಾವು ಮಾಡಿದ ಒಳ್ಳೆ ಕೆಲಸಗಳನ್ನು ಮುಂದುವರಿಸಲು ನಾರಾಯಣಗೌಡರ ರೂಪದಲ್ಲಿ ಕೆಂಪೇಗೌಡರೇ ಬಂದಿದ್ದಾರೆ. ನಾಡು, ನುಡಿ, ಜಲದ ರಕ್ಷಣೆಗೆ ನಾರಾಯಣ ಗೌಡರು ಕಟಿಬದ್ಧರಾಗಿದ್ದು, ಅವರಿಗೆ ಎಲ್ಲ ದೈವಗಳ ಆಶೀರ್ವಾದ ಇರುತ್ತದೆ ತಿಳಿಸಿದರು.

ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸರಾದ ಪಂಪ ನಾಗರಾಜಯ್ಯ, ನ್ಯಾಯಮೂರ್ತಿ ಅರಳಿ ನಾಗರಾಜ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಟಿ.ಎ. ನಾರಾಯಣ ಗೌಡರು ಸ್ವೀಕರಿಸಿದ ಮೊಟ್ಟ ಮೊದಲ ಪ್ರಶಸ್ತಿ

ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

Continue Reading

ಕ ಸಾ ಪ

ಡಿ. 26ರಂದು ಟಿ.ಎ. ನಾರಾಯಣ ಗೌಡರಿಗೆ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ

ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಡಿ.26 ರಂದು ಸಂಜೆ 5.30ಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ ಅವರಿಗೆ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

VISTARANEWS.COM


on

TA Narayana Gowda
Koo

ಬೆಂಗಳೂರು: ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ. ಇವರಿಗೆ ಡಿಸೆಂಬರ್ 26 ರಂದು ಸಂಜೆ 5.30ಕ್ಕೆ ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆಯಿಂದ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ವಹಿಸಲಿದ್ದು, ಡಾ.ಹಂಪನಾಗರಾಜಯ್ಯನವರು ಉದ್ಘಾಟಿಸಲಿದ್ದಾರೆ. ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡರು ಅಭಿನಂದನಾ ನುಡಿಗಳನ್ನು ಆಡಲಿದ್ದಾರೆ. ಕೋಡಿ ಮಠದ ಶ್ರೀಗಳಾದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಮತ್ತು ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಜನಪದ ಸೇವಾಟ್ರಸ್ಟ್‌ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಕಸಾಪ ಹಮ್ಮಿಕೊಂಡಿದೆ.

ಇದನ್ನೂ ಓದಿ | Raja Marga Column : ಸಾವಿರದ ಹಾಡುಗಳ ಅಮರ ಕವಿ ಶೈಲೇಂದ್ರ; ಎಲ್ಲ 900 ಹಾಡು ಸೂಪರ್‌ಹಿಟ್

ಕಾರ್ಯಕ್ರಮಕ್ಕೂ ಮುನ್ನಾ ಸಂಜೆ 4:30ಕ್ಕೆ ಖ್ಯಾತ ಗಾಯಕರಾದ ಡಾ.ಶಮಿತಾ ಮಲ್ನಾಡ್ ಮತ್ತು ಆನಂದ ಮಾದಲಗೆರೆಯವರ ತಂಡದಿಂದ ಗೀತ ಗಾಯನ ಕಾರ್ಯಕ್ರಮವಿದ್ದು, ದಿವ್ಯಾ ಆಲೂರು ಜೊತೆಯಲ್ಲಿ ಟಿ. ತಿಮ್ಮೇಶ್ ಈ ಕಾರ್ಯಕ್ರಮದ ನಿರೂಪಣೆಯನ್ನು ಮಾಡಲಿದ್ದಾರೆ. ಕಸಾಪ ಗೌರವ ಕಾರ್ಯದರ್ಶಿಗಳಾದ ನೇ ಭ ರಾಮಲಿಂಗಶೆಟ್ಟಿ ಮತ್ತು ಡಾ ಪದ್ಮಿನಿ ನಾಗರಾಜು ಹಾಗೂ ಕೋಶಾಧ್ಯಕ್ಷರಾದ ಬಿ. ಎಂ. ಪಟೇಲ್ ಪಾಂಡು ಮತ್ತಿತರರು ಉಪಸ್ಥಿತರಿರಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ ಸಾ ಪ

HD Deve Gowda: ಎಚ್.ಡಿ. ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

HD Deve Gowda: ಬೆಂಗಳೂರಿನ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

VISTARANEWS.COM


on

Ex PM HD Devegowda
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (HD Deve Gowda) ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು. ಮಾಜಿ ಪ್ರಧಾನಿಗಳ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಹಾಗೂ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅವರು, ನಾಡಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ದೇಶದ ಮೊದಲ ಕನ್ನಡಿಗ ಪ್ರಧಾನಮಂತ್ರಿ, ರಾಜಕೀಯ ಮುತ್ಸದ್ಧಿ ಮತ್ತು ದೂರದೃಷ್ಟಿಯ ಆಡಳಿತಗಾರ ದೇವೇಗೌಡರಿಗೆ ಸಂದಿರುವುದು ನನಗೆ ಬಹಳ ಸಂತಸ ಉಂಟು ಮಾಡಿದೆ. ಅತ್ಯುನ್ನತ ಸಾಧಕರಿಗೆ ಪ್ರಶಸ್ತಿ ಸಂದಿದೆ ಎಂದು ಹೇಳಿದರು.

ನಾಡೋಜ ಮಹೇಶ್ ಜೋಶಿ ಅವರು ಮಾತನಾಡಿ, ರಾಜ್ಯ, ದೇಶಕ್ಕೆ ಮಹಾನ್ ಕೊಡುಗೆ ನೀಡಿದ ದೇವೇಗೌಡರಿಗೆ ನಾಲ್ವಡಿ ಪ್ರಶಸ್ತಿ ನೀಡುತ್ತಿರುವುದು ಆ ಪ್ರಶಸ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಅಭಿವೃದ್ಧಿಯ ಹರಿಕಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಜರಾಮರರಾದರೆ, ದೇವೇಗೌಡರು ಸ್ವಾತಂತ್ರೋತ್ತರ ಭಾರತದಲ್ಲಿ ಆರು ದಶಕಗಳ ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ನಾಡು, ದೇಶದ ಅಭಿವೃದ್ಧಿಗೆ ಆವಿಸ್ಮರಣೀಯ ಕೊಡುಗೆ ನೀಡಿದ್ದಾರೆ ಎಂದರು.

ಮಾಜಿ ಪ್ರಧಾನಿ ಸಂತಸ

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಅನಾರೋಗ್ಯದ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ನಾನು ಆ ಕಾರ್ಯಕ್ರಮಕ್ಕೆ ಹಾಜರಾಗುವುದು ಕಷ್ಟ ಸಾಧ್ಯವಿತ್ತು. ಹೀಗಾಗಿ ನ್ಯಾ. ಎಂ.ಎನ್. ವೆಂಕಟಾಚಲಯ್ಯ, ನಾಡೋಜ ಮಹೇಶ್ ಜೋಶಿ ಅವರು ನನ್ನ ಮನೆಗೇ ಬಂದು ಪ್ರಶಸ್ತಿ ನೀಡಿದ್ದಾರೆ. ಇವರಿಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ಇದನ್ನೂ ಓದಿ | CM Siddaramaiah : ಪ್ರಧಾನಿ ರಾಜಕೀಯ ಭಾಷಣ ಸುಳ್ಳಿನ ಕಂತೆ; ಇಂದು ದೇಶವೇ ದಿವಾಳಿಯಾಗಿದೆ ಎಂದ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು, ಕನ್ನಡದ ಕಟ್ಟಾಳುಗಳು ಹಾಜರಿದ್ದು, ಮಾಜಿ ಪ್ರಧಾನಿಗಳಿಗೆ ಶುಭ ಕೋರಿದರು.

Continue Reading

ಕ ಸಾ ಪ

ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ನಾ. ಡಿಸೋಜ ಹಾಗೂ ದು. ಸರಸ್ವತಿ ಆಯ್ಕೆ

Kannada sahitya parishat: ಸಂಚಲನ ಬಳಗದವರು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

VISTARANEWS.COM


on

By

DSouza and Du Saraswati
ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಮತ್ತು ಹಿರಿಯ ಸಾಹಿತಿ ನಾ. ಡಿಸೋಜ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು‌ (Kannada Sahitya Parishat) 2023ನೇ ಸಾಲಿನ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಸಾಹಿತಿ ನಾ. ಡಿಸೋಜ ಹಾಗೂ ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ (Dr. Nadoja Mahesh Joshi) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ, ಪರಿಷತ್ತಿನ ಪಂಪ ಸಭಾಭವನದಲ್ಲಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ದತ್ತಿ ದಾನಿಗಳ ಆಶಯದಂತೆ ಪ್ರತಿ ವರ್ಷ ಇಬ್ಬರು ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಒಬ್ಬರು ಕನ್ನಡ ಕ್ರೈಸ್ತ ಸಾಧಕರಿಗೆ ಮತ್ತು ಇನ್ನೊಬ್ಬರು ಕನ್ನಡ ಜನಪರ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದವರನ್ನು ಆಯ್ಕೆ ಮಾಡಲಾಗುತ್ತದೆ.

ಅದರಂತೆ ಈ ಬಾರಿಯ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಕಥೆಗಾರ, ಸಾಹಿತಿಗಳಾಗಿರುವ ಕ್ರೈಸ್ತ ಧರ್ಮಕ್ಕೆ ಸೇರಿದ ಶಿವಮೊಗ್ಗದ ಸಾಗರದ ನಾ. ಡಿಸೋಜ ಹಾಗೂ ಕನ್ನಡ ಪರ ಹೋರಾಟಗಾರ್ತಿ, ರಂಗಕರ್ಮಿ ಬೆಂಗಳೂರಿನ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ಹತ್ತು ಸಾವಿರ ರೂ.ನಗದು, ಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಸಂಚಲನ ಬಳಗದವರು 2017ರಲ್ಲಿ ಈ ದತ್ತಿ ನಿಧಿ ಸ್ಥಾಪಿಸಿದ್ದರು. ಇದುವರೆಗೆ 12 ಜನರಿಗೆ ಕನ್ನಡ ಸಾಹಿತ್ಯ ಪರಿಷತ್ತು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರದಾನ ಮಾಡಲಾಗಿದೆ. ಪ್ರಸ್ತುತ ದತ್ತಿ ಪ್ರಶಸ್ತಿಯನ್ನು ದತ್ತಿ ದಾನಿಗಳು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡ ಚಳುವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಜಿ.ಕೆ. ಸತ್ಯ ಆಯ್ಕೆ

ನಿತ್ಯ ಬದುಕಿನಲ್ಲಿ ಕನ್ನಡ ನಾಡು- ನುಡಿಯ ಕುರಿತು ಅಪಾರ ಗೌರವ ಹೊಂದಿರುವ ಹಿರಿಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ. ಪ್ರಶಸ್ತಿ ಪುರಸ್ಕಾರ ಪಡೆದ ಇಬ್ಬರೂ ತಮ್ಮ ಕ್ಷೇತ್ರದಲ್ಲಿ ನಿರಂತರ ಸೇವೆ ಮಾಡುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ಪುರಸ್ಕೃತರಿಂದ, ಕನ್ನಡ ನಾಡಿನ ನೆಲಮೂಲ ಸಂಸ್ಕೃತಿಯನ್ನು ಉಳಿಸಿ- ಬೆಳೆಸುವಲ್ಲಿ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದರು.

ಈ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳಾದ ಸಂಚಲನ ಬಳಗದವರ ಪರವಾಗಿ ರೀಟಾ ರೀನಿ ಹಾಗೂ ರಫಾಯಲ್ ರಾಜ್ ಸೇರಿ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
Cleric
ದೇಶ4 mins ago

Cleric: ಮಸೀದಿಯಲ್ಲಿ ಮಲಗಿದ್ದ 30 ವರ್ಷದ ಮೌಲ್ವಿಯನ್ನು ಬಡಿದು ಕೊಂದರು; ಹತ್ಯೆಗೆ ಕಾರಣ?

Congress fears defeat over EVMs Congress will not win a single seat in Karnataka says PM Narendra Modi
ರಾಜಕೀಯ5 mins ago

Narendra Modi: ಪ್ರಧಾನಿ ಮೋದಿ ಅನರ್ಹತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

T20 World Cup 2024
ಕ್ರೀಡೆ15 mins ago

T20 World Cup 2024: ಆಸ್ಟ್ರೇಲಿಯಾದಿಂದ ಹಡಗಿನಲ್ಲೇ 3 ಕ್ರಿಕೆಟ್ ಪಿಚ್ ತಂದ ಅಮೆರಿಕ

Revanth Reddy
ದೇಶ23 mins ago

Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Prajwal Revanna Hassan Pen Drive Case What will SIT probe look like
ಕ್ರೈಂ26 mins ago

Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

Drown in Mekedatu
ಕರ್ನಾಟಕ36 mins ago

Drown in Mekedatu: ಮೇಕೆದಾಟು ಬಳಿ ಈಜಲು ಹೋಗಿದ್ದ ಬೆಂಗಳೂರಿನ ಐವರು ಪ್ರವಾಸಿಗರ ಸಾವು

T20 World Cup 2024
ಕ್ರೀಡೆ43 mins ago

T20 World Cup 2024: ವಿಶ್ವಕಪ್​ಗೆ ಪಂತ್​ ಮೊದಲ ಆಯ್ಕೆಯ ಕೀಪರ್​​ ಅಲ್ಲ; ಮತ್ಯಾರು?

S M Krishna
ಕರ್ನಾಟಕ56 mins ago

S M Krishna: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ವೈರಲ್ ನ್ಯೂಸ್1 hour ago

Viral Video: ಪಾಪಿ ಮಗನಿಂದ ತಂದೆ ಮೇಲೆ ಇದೆಂಥಾ ಕ್ರೌರ್ಯ! ವಿಡಿಯೋ ನೋಡಿ

facebook whatsapp instagram
ಪ್ರಮುಖ ಸುದ್ದಿ1 hour ago

WhatsApp Exit India: ವಾಟ್ಸ್ಯಾಪ್‌ ಜೊತೆಗೇ ಭಾರತ ತೊರೆಯಲಿವೆಯೇ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20243 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ11 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202423 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌