Crime News: ಯುವತಿ ಸ್ನಾನ ಮಾಡುವಾಗ ಮತ್ತೊಬ್ಬ ಯುವತಿಯಿಂದ ವಿಡಿಯೋ ಚಿತ್ರೀಕರಣ, ದೂರು - Vistara News

ಕ್ರೈಂ

Crime News: ಯುವತಿ ಸ್ನಾನ ಮಾಡುವಾಗ ಮತ್ತೊಬ್ಬ ಯುವತಿಯಿಂದ ವಿಡಿಯೋ ಚಿತ್ರೀಕರಣ, ದೂರು

ಹಾಸ್ಟೆಲ್‌ನಲ್ಲಿದ್ದ ಪಂಜಾಬಿ ಕ್ರೀಡಾಪಟು ಸ್ನಾನ ಮಾಡುತ್ತಿದ್ದಾಗ ವಾಲಿಬಾಲ್‌ ಕ್ರೀಡಾಪಟು ಅದನ್ನು ಕದ್ದು ಚಿತ್ರೀಕರಣ ಮಾಡಿಕೊಂಡಿದ್ದಳು.

VISTARANEWS.COM


on

bathing
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕ್ರೀಡಾ ತರಬೇತಿಗಾಗಿ ಬೆಂಗಳೂರಿಗೆ ಬಂದಿದ್ದ ಪಂಜಾಬಿ ಆಟಗಾರ್ತಿಯ ವಿಡಿಯೋ ಮಾಡಿದ ಹಿನ್ನೆಲೆಯಲ್ಲಿ ಮತ್ತೊಬ್ಬ ಯುವತಿಯ ಮೇಲೆ ದೂರು ದಾಖಲಿಸಲಾಗಿದೆ.

ಸಾಯ್ ಸ್ಪೋರ್ಟ್ಸ್ ಇಂಡಿಯಾದಲ್ಲಿ ಟೆಕ್ವಾಂಡೋ ಆಟದ ತರಬೇತಿಗಾಗಿ ನಗರಕ್ಕೆ ಬಂದ ಪಂಜಾಬಿನ ಯುವತಿ ಇಲ್ಲಿನ ಹಾಸ್ಟೆಲ್‌ನಲ್ಲಿ ನೆಲೆಸಿದ್ದರು. ಅದೇ ಹಾಸ್ಟೆಲ್‌ನಲ್ಲಿ ಮತ್ತೊಬ್ಬ ವಾಲಿಬಾಲ್ ಆಟಗಾರ್ತಿ ಕೂಡ ಇದ್ದು, ಪಂಜಾಬಿ ಕ್ರೀಡಾಪಟು ಸ್ನಾನ ಮಾಡುವ ವೇಳೆ ಕದ್ದು ವಿಡಿಯೋ ಚಿತ್ರೀಕರಣ ಮಾಡಿಕೊಂಡಿದ್ದಳು.

ಈ ವೇಳೆ ಅನುಮಾನಗೊಂಡು ಪಕ್ಕದ ಬಾತ್ ರೂಂನಲ್ಲಿದ್ದ ಯುವತಿಯನ್ನು ಪಂಜಾಬಿ ಕ್ರೀಡಾಪಟು ಪ್ರಶ್ನಿಸಿದಾಗ, ವಾಲಿಬಾಲ್ ಆಟಗಾರ್ತಿ ತಪ್ಪೊಪ್ಪಿಕೊಳ್ಳದೆ ತನ್ನ ಮೊಬೈಲ್ ಒಡೆದು ಹಾಕಿದ್ದಳು. ಈ ಹಿನ್ನೆಲೆಯಲ್ಲಿ ಪಂಜಾಬಿ ಆಟಗಾರ್ತಿ ದೂರು ದಾಖಲಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೊಬೈಲ್‌ನಲ್ಲಿ ಸ್ಟೇಟಸ್‌ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

ನೆಲ್ಯಾಡಿ: ಯುವಕನೊಬ್ಬ ಮೊಬೈಲ್‌ನಲ್ಲಿ ಸ್ಟೇಟಸ್ (Whatsapp status)ಹಾಕಿ ಮನೆ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಚ್ಲಂಪಾಡಿ ಗ್ರಾಮದಲ್ಲಿ ಮಾರ್ಚ್‌ 30ರ ಮಧ್ಯರಾತ್ರಿ ನಡೆದಿದೆ.

ಇಚ್ಲಂಪಾಡಿ ಗ್ರಾಮದ ಮೊಂಟೆತ್ತಡ್ಕ ನಿವಾಸಿ ರೆನೀಶ್ (27) ಮೃತ ಯುವಕ. ಈತನ ತಂದೆ ಕೆಲವು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು ತಾಯಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಈತನ ಸಹೋದರ ಮೂರು ವರ್ಷದ ಹಿಂದೆ ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ರೆನೀಶ್ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದು, ವಿದ್ಯುತ್ ಲೈನ್ ಕೆಲಸಕ್ಕೆ ಹೋಗುತ್ತಿದ್ದ. ಮಾ.30ರಂದು ರಾತ್ರಿ ಪಕ್ಕದ ಉಣ್ಣಿಕೃಷ್ಣನ್ ನಾಯರ್ ಎಂಬವರ ಮನೆಯಲ್ಲಿ ಊಟ ಮಾಡಿ, ಕೇರಂ ಆಡಿ ಮನೆಗೆ ಹೋಗಿದ್ದ.

ಮಧ್ಯರಾತ್ರಿ 12 ಗಂಟೆ ವೇಳೆಗೆ ಆತ್ಮಹತ್ಯೆ ಮಾಡಿಕೊಳ್ಳುವುದರ ಬಗ್ಗೆ ಮೊಬೈಲ್‌ನಲ್ಲಿ ಸ್ಟೇಟಸ್ ಬರೆದುಕೊಂಡು ಮೊಬೈಲ್ ಸ್ವಿಚ್ಡ್ ಆಫ್ ಮಾಡಿದ್ದ. ಈತನ ಸ್ಟೇಟಸ್ ನೋಡಿದ್ದ ಬೆಂಗಳೂರಿನಲ್ಲಿರುವ ಗೆಳೆಯರು ಉಣ್ಣಿಕೃಷ್ಣನ್‌ರವರಿಗೆ ಕರೆ ಮಾಡಿ ವಿಚಾರ ತಿಳಿಸಿದ್ದರು.

ಅವರೂ ರೆನೀಶ್ ಮನೆಗೆ ತಲುಪುವುದರೊಳಗೆ ಆತ ಮರಕ್ಕೆ ನೇಣುಬಿಗಿದುಕೊಂಡಿದ್ದ. ತಕ್ಷಣ ಹಗ್ಗ ಬಿಚ್ಚಿ ಪುತ್ತೂರಿನ ಆಸ್ಪತ್ರೆಗೆ ಕರೆ ತರಲಾಯಿತಾದರೂ ಆ ವೇಳೆಗೆ ಆತ ಮೃತಪಟ್ಟಿದ್ದ ಎಂದು ವರದಿಯಾಗಿದೆ.

ಇದನ್ನೂ ಓದಿ: 30 ಕೋಟಿ ರೂ. ಆಸ್ತಿ ಇದ್ದರೂ 3 ಹೊತ್ತು ಊಟ ಹಾಕದ ಮಗ, ಮಾತ್ರೆ ಸೇವಿಸಿ ತಂದೆ-ತಾಯಿ ಆತ್ಮಹತ್ಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Cyber Crime: ಆನ್‌ಲೈನ್‌ ಹೂಡಿಕೆ ಹೆಸರಲ್ಲಿ ವಂಚನೆ; 1.53 ಕೋಟಿ ರೂ. ಕಳೆದುಕೊಂಡ ಟೆಕ್ಕಿ ದಂಪತಿ

Cyber Crime: ವಂಚಕನೊಬ್ಬ ಆನ್‌ಲೈನ್‌ ಹೂಡಿಕೆ ಹೆಸರಿನಲ್ಲಿ ಬೆಂಗಳೂರಿನ ಟೆಕ್ಕಿ ದಂಪತಿ ಬಳಿಯಿಂದ ಬರೋಬ್ಬರಿ 1.53 ಕೋಟಿ ರೂಪಾಯಿ ಪೀಕಿಸಿದ್ದು, ಸದ್ಯ ಪೊಲೀಸರು 1.4 ಕೋಟಿ ರೂ. ಅನ್ನು 50ಕ್ಕೂ ಹೆಚ್ಚು ಖಾತೆಗಳಿಂದ ರಿಕವರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಂಚನೆಗೆ ಒಳಗಾದ ದಂಪತಿ ನೀಡಿ ದೂರು ಆಧರಿಸಿ ಪೂರ್ವ ವಲಯದ ಸೈಬರ್ ಕ್ರೈಂ ‌ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಲಾಭದ ಆಸೆ ತೋರಿಸಿ ಲಂಡನ್‌ಲ್ಲಿ ಕುಳಿತು ವಂಚಕ ಈ ಕೃತ್ಯ ಎಸಗಿದ್ದ.

VISTARANEWS.COM


on

Cyber Crime
Koo

ಬೆಂಗಳೂರು: ಸೈಬರ್‌ ಕ್ರೈಂ (Cyber Crime) ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇದೀಗ ವಂಚಕನೊಬ್ಬ ಆನ್‌ಲೈನ್‌ ಹೂಡಿಕೆ ಹೆಸರಿನಲ್ಲಿ ಬೆಂಗಳೂರಿನ ಟೆಕ್ಕಿ ದಂಪತಿ ಬಳಿಯಿಂದ ಬರೋಬ್ಬರಿ 1.53 ಕೋಟಿ ರೂಪಾಯಿ ಪೀಕಿಸಿದ್ದು, ಸದ್ಯ ಪೊಲೀಸರು 1.4 ಕೋಟಿ ರೂ. ಅನ್ನು 50ಕ್ಕೂ ಹೆಚ್ಚು ಖಾತೆಗಳಿಂದ ರಿಕವರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ವಂಚನೆಗೆ ಒಳಗಾದ ದಂಪತಿ ನೀಡಿ ದೂರು ಆಧರಿಸಿ ಪೂರ್ವ ವಲಯದ ಸೈಬರ್ ಕ್ರೈಂ ‌ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಬಾಣಸವಾಡಿಯಲ್ಲಿ ವಾಸಿಸುತ್ತಿರುವ ದಂಪತಿಗೆ ಬ್ಯಾಂಕ್‌ ಅಧಿಕಾರಿಗಳ ಜತೆ ಸೇರಿ ವಂಚಕ ಬಲೆ ಬೀಸಿದ್ದ. ಹೆಚ್ಚಿನ ಲಾಭದ ಆಸೆ ತೋರಿಸಿ ಈ ಕೃತ್ಯ ಎಸಗಿದ್ದ ಎನ್ನುವುದು ತನಿಖೆ ವೇಳೆ ತಿಳಿದು ಬಂದಿದೆ.

ಬ್ರಿಟನ್‌ನಲ್ಲಿ ಕುಳಿತು ವಂಚಕ ಈ ವಂಚನೆ ಜಾಲವನ್ನು ನಡೆಸುತ್ತಿದ್ದ. ಈತ ಹಣ ಸ್ವೀಕರಿಸಲು ಉತ್ತರ ಭಾರತೀಯರ ಒಂದಿಷ್ಟು ಖಾತೆಗಳನ್ನು ಬಾಡಿಗೆಗೆ ಪಡೆದಿದ್ದ. ಅಷ್ಟೇ ಅಲ್ಲ ಹೂಡಿಕೆ ನಿಜ ಎಂದು ಬಿಂಬಿಸಲು ಈತ ನಕಲಿ ವೆಬ್‌ಸೈಟ್‌ ಒಂದನ್ನು ತೆರೆದು ದಂಪತಿಗೆ ಇದರ ಆಕ್ಸೆಸ್‌ ಕೂಡ ನೀಡಿದ್ದ.

ಇದರಲ್ಲಿ ತಮ್ಮ ಹೂಡಿಕೆ ಬೆಳೆಯುತ್ತಿರುವುದನ್ನು ಕಂಡು ದಂಪತಿ ಖುಷಿಯಾಗಿದ್ದರು. ಕೆಲವು ತಿಂಗಳ ನಂತರ ಒಂದಿಷ್ಟು ಹಣವನ್ನು ಹಿಂಪಡೆಯಲು ನೋಡಿದ್ದಾರೆ. ಆದರೆ ಹಣ ತೆಗೆಯಲು ಆಗುತ್ತಿರಲಿಲ್ಲ. ಇದರಿಂದ ಅವರಿಗೆ ಅನುಮಾನ ಮೂಡತೊಡಗಿತ್ತು. ಅಷ್ಟೇ ಅಲ್ಲ ನಕಲಿ ವೆಬ್‌ಸೈಟ್‌ನ ಆಕ್ಸೆಸ್‌ ಕೂಡ ಹೋಗಿತ್ತು. ಕೊನೆಗೆ ದಂಪತಿಯನ್ನು ಈ ವೆಬ್‌ಸೈಟ್‌ ಬ್ಲಾಕ್ ಮಾಡಿತ್ತು.

ಇದರೊಂದಿಗೆ ತಾವು ವಂಚನೆಗೆ ಸಿಲುಕಿರುವುದು ದಂಪತಿಗೆ ದೃಢವಾಗಿತ್ತು. ಕೂಡಲೇ ದಂಪತಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ತನಿಖೆ ಆರಂಭಿಸಿದ್ದಲ್ಲದೆ ಬ್ಯಾಂಕ್‌ ಅಧಿಕಾರಿಗಳ ಜತೆ ಸೇರಿ ನಡೆಸಿದ್ದ ಈ ವಂಚನೆ ಜಾಲವನ್ನು ಭೇದಿಸಿದ್ದಾರೆ. ಈ ಹಗರಣದಲ್ಲಿ ಭಾಗಿಯಾಗಿದ್ದ 50ಕ್ಕೂ ಹೆಚ್ಚು ಖಾತೆಗಳನ್ನು ಬ್ಲಾಕ್‌ ಮಾಡಿದ್ದಾರೆ.

ಲಂಡನ್​​ನಿಂದ ಕೃತ್ಯ

ʼʼಆರೋಪಿ ಲಂಡನ್​​ನಲ್ಲಿ ಕುಳಿತು ಕೃತ್ಯ ಎಸಗಿರುವ ಬಗ್ಗೆ ಮಾಹಿತಿ ಇದ್ದು, ಇದಕ್ಕಾಗಿ ಉತ್ತರ ಭಾರತದ ಹಲವಾರು ಅಕೌಂಟ್​ಗಳನ್ನು ಬಳಕೆ ಮಾಡಿದ್ದಾನೆ. ಷೇರು ಮಾರ್ಕೆಟ್ ಬ್ರೋಕರೇಜ್ ರೀತಿಯ ನಕಲಿ ವೆಬ್​ಸೈಟ್ ರಚನೆ ಮಾಡಿದ್ದಾನೆ. ಸದ್ಯ ಆರೋಪಿ ಯಾರು ಎಂಬುದರ ಸ್ಪಷ್ಟತೆ ಇಲ್ಲʼʼ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಶಪಡಿಸಿಕೊಳ್ಳಲಾದ ಹಣವನ್ನು ಪೊಲೀಸರು ವಂಚನೆಗೆ ಒಳಗಾದ ದಂಪತಿಗೆ ಮರಳಿಸುತ್ತಿದ್ದಾರೆ.

ನೋಡ ನೋಡುತ್ತಲೇ ಸ್ಕೂಟರ್‌ ಕದ್ದ ಕಳ್ಳ

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಕ‍ಳ್ಳರ ಹಾವಳಿ ಮಿತಿ ಮೀರಿದೆ. ರಸ್ತೆ ಬದಿ ನಿಲ್ಲಿಸಿದ್ದ ಸ್ಕೂಟರ್‌ ಅನ್ನು ಕಳ್ಳನೊಬ್ಬ ರಾಜಾರೋಷವಾಗಿ ಕದ್ದುಕೊಂಡು ಹೋಗಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೆಬ್ಬಾಳದ ಚೋಳನಹಳ್ಳಿ ಮಿನಿ ಮಾರ್ಟ್ ಮುಂಭಾಗ ಈ ಘಟನೆ ನಡೆದಿದೆ. ಕೀ ಸಮೇತ ಸ್ಕೂಟರ್ ನಿಲ್ಲಿಸಿ ಮಹಿಳೆಯೊಬ್ಬರು ತರಕಾರಿ ತರಲು ಹೋಗಿದ್ದ ವೇಳೆ ಈ ಕೃತ್ಯ ನಡೆದಿದೆ. ಮಹಿಳೆ ತರಕಾರಿ ತಗೊಂಡು ವಾಪಸ್ ಬರುವ ವೇಳೆ ಆ್ಯಕ್ಟಿವಾ ಮಾಯವಾಗಿತ್ತು. ಮಹಿಳೆ ಕೀಯನ್ನು ಸ್ಕೂಟರ್‌ನಲ್ಲೇ ಬಿಟ್ಟು ಅಂಗಡಿಗೆ ತೆರಳಿರುವುದನ್ನು ಗಮನಿಸಿದ ಕಳ್ಳ ತನ್ನ ಕೈಚಳಕ ತೋರಿದ್ದ. ಅತ್ತ-ಇತ್ತ ನೋಡಿ ಸ್ಕೂಟರ್ ಸ್ಟಾರ್ಟ್ ಮಾಡಿಕೊಂಡು ಕಳ್ಳ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಇದನ್ನೂ ಓದಿ: Californium Stone: ಪೊಲೀಸರಿಂದ ಭರ್ಜರಿ ಬೇಟೆ; 850 ಕೋಟಿ ರೂ. ಮೌಲ್ಯದ ಅಪರೂಪದ ವಿಕಿರಣಶೀಲ ಹರಳು ವಶ

Continue Reading

ಪ್ರಮುಖ ಸುದ್ದಿ

Trainee Doctor: ವೈದ್ಯೆಯ ಕೊಂದ ಆರೋಪಿಯನ್ನು ಹಿಡಿದುಕೊಟ್ಟ ಬ್ಲ್ಯೂಟೂತ್‌ ಹೆಡ್‌ಫೋನ್; ಹೇಗಂತೀರಾ?

Trainee Doctor: ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಮಹಿಳೆಯು ಅಧ್ಯಾಯನ ಮಾಡುತ್ತಿದ್ದರು. ಇದೇ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶುಕ್ರವಾರ ಬೆಳಗ್ಗೆ ಮಹಿಳೆಯ ಶವವು ಪತ್ತೆಯಾಗಿದೆ. ಮರಣೋತ್ತರ ವರದಿ ಬಳಿಕ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬಯಲಾಗಿದೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ಆದರೆ, ಈ ಕೊಲೆಯ ಆರೋಪಿಯನ್ನು ಬಂಧಿಸಲು ಒಂದು ಬ್ಲ್ಯೂಟೂತ್‌ ಹೆಡ್‌ಫೋನ್‌ ಎಂದರೆ ನಂಬಲೇಬೇಕು.

VISTARANEWS.COM


on

Trainee Doctor
Koo

ಕೋಲ್ಕೊತಾ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕೊತಾ ಸರ್ಕಾರಿ ಆಸ್ಪತ್ರೆಯಲ್ಲಿ ಟ್ರೈನಿ ಮಹಿಳಾ ವೈದ್ಯೆಯ (Kolkata Trainee Doctor) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟೂ ಸ್ಫೋಟಕ ಮಾಹಿತಿ ಲಭ್ಯವಾಗುತ್ತಿದೆ. ಮಹಿಳಾ ವೈದ್ಯೆಯ ಹತ್ಯೆಗೂ ಮುನ್ನವೇ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿತ್ತು ಎಂಬ ಮಾಹಿತಿಯು ಮರಣೋತ್ತರ ಪರೀಕ್ಷೆ ವರದಿಯಲ್ಲಿ (Post Mortem Report) ಬಹಿರಂಗವಾಗಿದೆ. ಇದರ ಬೆನ್ನಲ್ಲೇ, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಈ ಆರೋಪಿಯ ಬಂಧನಕ್ಕೆ ಕಾರಣವಾಗಿದ್ದು ಒಂದು ಬ್ಲ್ಯೂಟೂತ್‌ ಹೆಡ್‌ಸೆಟ್‌ ಎಂಬುದು ಗಮನಾರ್ಹ ಸಂಗತಿಯಾಗಿದೆ.

ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ 31 ವರ್ಷದ ಮಹಿಳೆಯು ಕಳೆದ ಗುರುವಾರ (ಆಗಸ್ಟ್‌ 8) ಆರ್‌ ಕೆ ಕರ್‌ ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಅಧ್ಯಯನ ಮಾಡಲು ಹೋಗಿದ್ದ ಹತ್ಯೆಗೀಡಾಗಿದ್ದರು. ಶುಕ್ರವಾರ ಬೆಳಗ್ಗೆ ಮಹಿಳಾ ವೈದ್ಯೆಯ ಶವವು ಅರೆಬೆತ್ತಲೆ ಪತ್ತೆಯಾಗಿದೆ. ಶವ ಪತ್ತೆಯಾದ ಜಾಗದಲ್ಲಿ ಬ್ಲ್ಯೂಟೂತ್‌ ಹೆಡ್‌ಫೋನ್‌ ಒಂದು ಪತ್ತೆಯಾಗಿದ್ದು, ಅದರ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಆರೋಪಿಯನ್ನು ಬಂಧಿಸಿದ್ದು ಹೇಗೆ?

ಕೊಲೆ ಪ್ರಕರಣ ಬಯಲಾದ ಬಳಿಕ ಪೊಲೀಸರು ಎಲ್ಲ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ್ದಾರೆ. ಕೊಲೆ ನಡೆದ ಸೆಮಿನಾರ್‌ ಹಾಲ್‌ ಬಳಿಯಲ್ಲಿ ಸಂಜಯ್‌ ರಾಯ್‌ ಎಂಬ ಆರೋಪಿಯು ಅದೇ ರಾತ್ರಿ ಸಂಶಯಾಸ್ಪದವಾಗಿ ಓಡಾಡಿದ್ದಾನೆ. ಅಲ್ಲದೆ, ಶುಕ್ರವಾರ ಬೆಳಗಿನ ಜಾವ ಆಸ್ಪತ್ರೆಯಿಂದ ಹೊರಹೋಗಿದ್ದಾರೆ. ಇದಾದ ಬಳಿಕ ಶಂಕಿತ ಆರೋಪಿಗಳ ಮೊಬೈಲ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೊಬೈಲ್‌ಗಳನ್ನು ವಶಪಡಿಸಿಕೊಂಡು, ಆ ಬ್ಲ್ಯೂಟೂತ್‌ ಹೆಡ್‌ಫೋನ್‌ ಜತೆ ಪೇರ್‌ (Pair) ಮಾಡಿದ್ದಾರೆ. ಆಗ ಸಂಜಯ್‌ ರಾಯ್‌ನ ಮೊಬೈಲ್‌ ಹೆಡ್‌ಫೋನ್‌ಗೆ ಕನೆಕ್ಟ್‌ ಆಗಿದೆ.

“ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಮಹಿಳೆಯು ಅಧ್ಯಾಯನ ಮಾಡುತ್ತಿದ್ದರು. ಇದೇ ವೇಳೆ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಶುಕ್ರವಾರ ಬೆಳಗ್ಗೆ ಮಹಿಳೆಯ ಶವವು ಪತ್ತೆಯಾಗಿದೆ. ಮರಣೋತ್ತರ ವರದಿ ಬಳಿಕ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಆರೋಪಿ ವಿರುದ್ಧ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದೆ” ಎಂದು ಕೋಲ್ಕೊತಾ ಪೊಲೀಸ್‌ ಆಯುಕ್ತ ವಿನೀತ್‌ ಕುಮಾರ್‌ ಗೋಯಲ್‌ ಈಗಾಗಲೇ ತಿಳಿಸಿದ್ದಾರೆ.

ಇದನ್ನೂ ಓದಿ: Murder Case : ಬೆಂಗಳೂರಲ್ಲಿ ಗಂಡ-ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯ; ಬಾಳಸಂಗಾತಿ ಈಗ ಕೊಲೆಗಾರ್ತಿ

Continue Reading

ದೇಶ

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸರ ದಾಳಿ; ಅಪ್ರಾಪ್ತರು ಸೇರಿ 39 ವಿದ್ಯಾರ್ಥಿಗಳ ವಶ

Rave Party: ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉತ್ತರ ಪ್ರದೇಶದ ಪೊಲೀಸರು ರೇವ್‌ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿ ಅಪ್ರಾಪ್ತರು ಸೇರಿ ಸುಮಾರು 39 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ನೋಯ್ಡಾ ಸೆಕ್ಟರ್-94ರ ಐಷಾರಾಮಿ ಸೊಸೈಟಿಯ ಫ್ಲ್ಯಾಟ್‌ನಲ್ಲಿ ರೇವ್‌ ಪಾರ್ಟಿ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು. ʼʼಬಂಧಿತರು ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರ ವಿದ್ಯಾರ್ಥಿಗಳು. ಅವರ ವಯಸ್ಸು 16ರಿಂದ 20 ವರ್ಷʼʼ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Rave Party
ಸಾಂದರ್ಭಿಕ ಚಿತ್ರ
Koo

ಲಖನೌ: ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉತ್ತರ ಪ್ರದೇಶದ ಪೊಲೀಸರು ರೇವ್‌ ಪಾರ್ಟಿ (Rave Party)ಯೊಂದರ ಮೇಲೆ ದಾಳಿ ನಡೆಸಿ ಅಪ್ರಾಪ್ತರು ಸೇರಿ ಸುಮಾರು 39 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ನೋಯ್ಡಾ ಸೆಕ್ಟರ್-94ರ ಐಷಾರಾಮಿ ಸೊಸೈಟಿಯ ಫ್ಲ್ಯಾಟ್‌ನಲ್ಲಿ ರೇವ್‌ ಪಾರ್ಟಿ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು.

ʼʼಸೂಪರ್‌ನೋವಾ ಅಪಾರ್ಟ್‌ಮೆಂಟ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ಆಯೋಜಿಸಲಾಗಿತ್ತು. ಈ ವೇಳೆ ಫ್ಲ್ಯಾಟ್‌ನಲ್ಲಿ ಅನೇಕ ಮದ್ಯದ ಬಾಟಲಿ ಪತ್ತೆಯಾಗಿದೆ. ಬಂಧಿತರು ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರ ವಿದ್ಯಾರ್ಥಿಗಳು. ಅವರ ವಯಸ್ಸು 16ರಿಂದ 20 ವರ್ಷʼʼ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ ಫ್ಲ್ಯಾಟ್‌ನಿಂದ ಹೆಚ್ಚಿನ ಸಂಖ್ಯೆಯ ಹರಿಯಾಣ ಲೇಬಲ್ ಮಾಡಿದ ಮದ್ಯದ ಬಾಟಲಿಗಳು ಮತ್ತು ಹುಕ್ಕಾಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆಯ ಸಮಯದಲ್ಲಿ, ವಿದ್ಯಾರ್ಥಿಗಳನ್ನು ವಾಟ್ಸ್‌ಆ್ಯಪ್‌ ಮೂಲಕ ಪಾರ್ಟಿಗೆ ಆಹ್ವಾನಿಸಲಾಗಿದೆ ಎಂಬ ವಿಚಾರ ತಿಳಿದುಬಂದಿದೆ. ಪ್ರವೇಶ ಶುಲ್ಕವು ಪ್ರತಿ ಮಹಿಳೆಗೆ 500 ರೂ., ಜೋಡಿಗೆ 800 ರೂ. ಮತ್ತು ಪುರುಷರಿಗೆ 1,000 ರೂ. ನಿಗದಿಪಡಿಸಲಾಗಿತ್ತು. 6 ಗಂಟೆಗೆ ಪಾರ್ಟಿ ನಡೆಯಲಿದೆ ಎಂದು ವಾಟ್ಸ್‌ಆ್ಯಪ್‌ ಸಂದೇಶದಲ್ಲಿ ತಿಳಿಸಲಾಗಿತ್ತು.

ಪಾನಮತ್ತ ವಿದ್ಯಾರ್ಥಿಗಳು ಪಾರ್ಟಿ ಮಾಡಿದ ಬಳಿಕ ಅತಿರೇಕದಿಂದ ವರ್ತಿಸಿ ಗಲಾಟೆ ಮಾಡಿದ್ದಾರೆ ಎನ್ನುವ ದೂರು ಕೇಳಿ ಬಂದಿದೆ. ಎಲ್ಲೆಂದರಲ್ಲಿ ಬಾಟಲಿ ಎಸೆದು ರಾದ್ಧಾಂತ ಮಾಡಿದ್ದಾರೆ ಎಂದು ಅಕ್ಕ ಪಕ್ಕದ ಫ್ಲ್ಯಾಟ್‌ ನಿವಾಸಿಗಳು ಆರೋಪಿಸಿದ್ದಾರೆ.

ಎಲ್ವಿಶ್‌ ಯಾದವ್‌ ವಿರುದ್ಧ ಎಫ್‌ಐಆರ್‌

ಕಳೆದ ವರ್ಷ ನವೆಂಬರ್‌ನಲ್ಲಿ ಪಾರ್ಟಿಯೊಂದರಲ್ಲಿ ಹಾವಿನ ವಿಷವನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿ ಎನ್‌ಜಿಒದಿಂದ ದೂರು ಬಂದ ಹಿನ್ನಲೆಯಲ್ಲಿ ನೋಯ್ಡಾ ಪೊಲೀಸರು ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಹಿಂದಿ  ಬಿಗ್‌ಬಾಸ್ ಒಟಿಟಿ ಸೀಸನ್‌ 2 ಸ್ಪರ್ಧೆಯ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ಹೆಸರೂ ಇತ್ತು. ಬಳಿಕ ಎಲ್ವಿಶ್ ಯಾದವ್ ಹೆಸರನ್ನು ಎಫ್ಐಆರ್‌ನಲ್ಲಿ ಸೇರಿಸಲಾಗಿತ್ತು. ಆದರೆ 26 ವರ್ಷದ ಯೂಟ್ಯೂಬರ್ ತನ್ನ ವಿರುದ್ಧದ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ತನಿಖೆಗೆ ಸಹಕರಿಸುವುದಾಗಿ ತಿಳಿಸಿದ್ದಾರೆ.

ವಿದೇಶಿ ಪ್ರಜೆಗಳಿಗೂ ಆತಿಥ್ಯ ನೀಡಿದ ರೇವ್ ಪಾರ್ಟಿಗಳಲ್ಲಿ ಭಾಗವಹಿಸಿದ್ದ ಕೆಲವರು ಹಾವಿನ ವಿಷವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪಿಗಳಿಂದ ಐದು ನಾಗರಹಾವು ಸೇರಿದಂತೆ ಒಂಬತ್ತು ಹಾವುಗಳು ಹಾಗೂ 20 ಎಂ.ಎಲ್‌. ಹಾವಿನ ವಿಷವನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ವಶಪಡಿಸಿಕೊಂಡ ಹಾವುಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿತ್ತು. ವಿವಿಧ ಸ್ಥಳಗಳಿಂದ ಹಾವುಗಳನ್ನು ಹಿಡಿದು ಅವುಗಳ ವಿಷವನ್ನು ಹೊರತೆಗೆಯುತ್ತಿದ್ದರು. ಅದನ್ನು ಎಲ್ವಿಶ್ ಯಾದವ್‌ ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗಿತ್ತು.

ಇದನ್ನೂ ಓದಿ: Elvish Yadav: ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ಗೆ ಮತ್ತೆ ಸಂಕಷ್ಟ; ಎಲ್ವಿಶ್‌ ವಿರುದ್ಧ ಇಡಿ ಕೇಸ್‌

ಪ್ರಾಣಿ ಹಕ್ಕುಗಳಿಗಾಗಿ ಹೋರಾಟ ನಡೆಸುವ ಗುಂಪು ಪಿಎಫ್ಎ (People For Animals) ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಪಿಎಫ್ಎ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ಮೇನಕಾ ಗಾಂಧಿ ಈ ಬಗ್ಗೆ ಮಾತನಾಡಿ, ಎಲ್ವಿಶ್‌ ಯಾದವ್ ಹಾವಿನ ವಿಷವನ್ನು ಅಕ್ರಮವಾಗಿ ಮಾರಾಟ ಮಾಡುವ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಿದ್ದರು.

Continue Reading

ಬೆಂಗಳೂರು

Building Collapsed: ಬೆಂಗಳೂರಲ್ಲಿ ನಿರ್ಮಾಣ ಹಂತ ಕಟ್ಟಡ ಕುಸಿತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ

Building Collapsed : ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟರೆ, ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾನೆ.

VISTARANEWS.COM


on

By

building collapses in Bengaluru One dead another critical
Koo

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡ ಕುಸಿದು (Building Collapsed) ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಂಗಳೂರಿನ ಪೀಣ್ಯದ ಎನ್‌ಟಿಎಸ್ ಸರ್ಕಲ್‌ನಲ್ಲಿ‌ ಘಟನೆ ನಡೆದಿದೆ. ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮತೋರ್ವ ಗಾಯಾಳಾನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿತದಿಂದಾಗಿ ಈ ಘಟನೆ ನಡೆದಿದೆ. ಕಾರ್ಮಿಕರು ಏಷಿಯನ್ ಪೈಂಟ್ಸ್ ಕಟ್ಟಡ ನಿರ್ಮಾಣ ಮಾಡುತ್ತಿದ್ದರು. ಕಟ್ಟಡದ ನಾಲ್ಕನೇ ಮಹಡಿಗೆ ಕಾಂಕ್ರೀಟ್ ಹಾಕುತ್ತಿದ್ದಾಗ, ಏಕಾಏಕಿ ಸೆಂಟ್ರಿಂಗ್ ಕುಸಿದು ಬಿದ್ದಿದೆ. ಮೇಲ್ಭಾಗದಲ್ಲಿದ್ದ ಮೂವರು ಕಾರ್ಮಿಕರು ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೂರನೆ ಕಾರ್ಮಿಕ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅಗ್ನಿಶಾಮಕದಳ ಸಿಬ್ಬಂದಿ ಸದ್ಯ ಕಾಂಕ್ರೀಕ್ ತೆರವು ಮಾಡುತ್ತಿದ್ದಾರೆ.

building collapses in Bengaluru One dead another critical
building collapses in Bengaluru One dead another critical

ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಯೋಮಾ ಎಲೈಟ್ಸ್ ಎಂಬ ಖಾಸಗಿ ಕಂಪನಿಯ ಕಟ್ಟಡವಾಗಿದೆ. ಐದನೇ ಫ್ಲೋರ್‌ನಿಂದ ಬಿದ್ದು ಇಬ್ಬರು ಮೃತ ಪಟ್ಟಿದ್ದಾರೆ. ಐದಾರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕಲಬುರಗಿ ಮೂಲದವರು ವೀರೇಶ್ ಹಾಗೂ ಯಾದಗಿರಿ ಮೂಲದ ಹಿಮಾಂಶು ಮೃತರು ಎಂದು ತಿಳಿದು ಬಂದಿದೆ. ಸೋಲದೇವಹಳ್ಳಿ ಬಳಿ ವಾಸವಿದ್ದರು. ಫ್ಲೋರಿಂಗ್ ಹಾಕುತ್ತಿದ್ದಾಗ ಈ ರೀತಿ ಅವಘಡ ಸಂಭವಿಸಿದೆ. ಮಾಲೀಕರು ಯಾರು ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದೇವೆ. ದೂರು ಪಡೆದು ತನಿಖೆಯನ್ನು ನಡೆಸುತ್ತೇವೆ ಎಂದರು.

ಕರೆಂಟ್‌ ಶಾಕ್‌ಗೆ ಕಂಬದಲ್ಲೇ ನೇತಾಡಿದ ಲೈನ್‌ಮ್ಯಾನ್‌

ಲೈನ್‌ ಸರಿಪಡಿಸುವ ವೇಳೆ ವಿದ್ಯುತ್ ಪ್ರವಹಿಸಿದ್ದರಿಂದ ಕಂಬದಲ್ಲೇ ಲೈನ್‌ ಮ್ಯಾನ್‌ ನೇತಾಡಿದ್ದಾರೆ. ಬಾಗಲಕೋಟೆಯ ಮದಲಮಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಲೈನ್‌ಮ್ಯಾನ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರವೀಣ್ ಹಿರೇಮಠ (30) ಕರೆಂಟ್‌ ಶಾಕ್‌ಗೆ ಒಳಗಾದವರು.

ರಬಕವಿ ಹೆಸ್ಕಾಂ ಕಚೇರಿಯಲ್ಲಿ ಲೈನ್‌ಮನ್ ಆಗಿರುವ ಪ್ರವೀಣ್ ಮೂಲತಃ ವಿಜಯಪುರ ಜಿಲ್ಲೆ ಬಬಲೇಶ್ವರ ನಿವಾಸಿಯಾಗಿದ್ದಾರೆ. 10 ವರ್ಷಗಳಿಂದ ಕೆಇಬಿಯಲ್ಲಿ ಲೈನ್‌ಮನ್ ಆಗಿ ಸೇವೆ ಸಲ್ಲಿಸುತ್ತಿರುವ ಪ್ರವೀಣ್‌ ವಿದ್ಯುತ್‌ ಸರಿಪಡಿಸಲು ಮುಂದಾಗಿದ್ದರು. ಈ ವೇಳೆ ವಿದ್ಯುತ್‌ ಪ್ರವಹಿಸಿದೆ, ಇದನ್ನು ಗಮನಿಸಿದ ಯುವಕರು ಕೂಡಲೇ ರಬಕವಿ ಹೆಸ್ಕಾಂಗೆ ಕಚೇರಿಗೆ ಕರೆ ಮಾಡಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು. ಆನಂತರ ಏಣಿ ಮೂಲಕ ನೇತಾಡುತ್ತಿದ್ದ ಪ್ರವೀಣ್ ಕೆಳಗಿಳಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಕೆ‌ಎಲ್‌ಇಗೆ ಸ್ಥಳಾಂತರ ಮಾಡಿದ್ದಾರೆ.

ಉಡುಪಿಯಲ್ಲಿ ವಿದ್ಯಾರ್ಥಿನಿ ಮೇಲೆ ಬೀದಿನಾಯಿಗಳು ಅಟ್ಯಾಕ್‌

ಶಾಲಾ ವಿದ್ಯಾರ್ಥಿನಿಯ ಮೇಲೆ ಬೀದಿ ನಾಯಿಗಳು ಅಟ್ಯಾಕ್ ಮಾಡಿವೆ. ಉಡುಪಿಯ ಕೆಮ್ಮಣ್ಣು ಹೂಡೆಯಲ್ಲಿ ಘಟನೆ ನಡೆದಿದೆ. ಬೆಳಗ್ಗೆ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯ ಮೇಲೆ ನಾಯಿಗಳು ದಾಳಿ ಮಾಡಲು ಮುಂದಾಗಿವೆ. ಇದನ್ನೂ ಗಮಿನಿಸಿದ ವಿದ್ಯಾರ್ಥಿನಿ ಕೂಗಿ ಬೊಬ್ಬೆ ಹಾಕಿದ್ದಾಳೆ. ಬಳಿಕ ಕೈಯಲ್ಲಿದ್ದ ಕೊಡೆಯನ್ನು ಬೀಸಿ, ನಾಯಿಗಳಿಂದ ರಕ್ಷಿಸಿಕೊಂಡು ಬಚಾವಾಗಿ ಓಡಿದ್ದಾಳೆ. ಇದೆಲ್ಲವೂ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Cyber Crime
ಕ್ರೈಂ46 seconds ago

Cyber Crime: ಆನ್‌ಲೈನ್‌ ಹೂಡಿಕೆ ಹೆಸರಲ್ಲಿ ವಂಚನೆ; 1.53 ಕೋಟಿ ರೂ. ಕಳೆದುಕೊಂಡ ಟೆಕ್ಕಿ ದಂಪತಿ

Abhishek Bachchan confirms divorce with Aishwarya Rai Bachchan
ಬಾಲಿವುಡ್6 mins ago

Abhishek Bachchan: ಐಶ್ವರ್ಯಾ ಮತ್ತು ನಾನು ವಿಚ್ಛೇದನ ಪಡೆಯುತ್ತಿದ್ದೇವೆ ಎಂದ ಅಭಿಷೇಕ್ ಬಚ್ಚನ್; ವಿಡಿಯೊ ಇಲ್ಲಿದೆ!

Paris Olympics
ಕ್ರೀಡೆ9 mins ago

Paris Olympics: “ಇಂಡಿಯಾ ಹೌಸ್‌”ನಲ್ಲಿ ನೀರಜ್​ ಚೋಪ್ರಾ ಸೇರಿ ಪದಕ ವಿಜೇತರನ್ನು ಗೌರವಿಸಿದ ನೀತಾ ಅಂಬಾನಿ

Vinay Rajkumar KRG will distribute 'Pepe' movie
ಸ್ಯಾಂಡಲ್ ವುಡ್20 mins ago

Vinay Rajkumar: ವಿನಯ್ ರಾಜ್ ಕುಮಾರ್ ‘ಪೆಪೆ’ ಸಿನಿಮಾ ವಿತರಣೆ ಮಾಡಲಿದೆ ಕೆ ಆರ್ ಜಿ!

Munich Massacre
ವಿದೇಶ24 mins ago

Munich Massacre: 11 ಇಸ್ರೇಲಿ ಅಥ್ಲೀಟ್‌ಗಳ ಹತ್ಯೆಯ ಪ್ರತಿಕಾರ ರೋಚಕ! ʼಮೊಸಾದ್‌ʼ ಏಜೆಂಟರ ಆಪರೇಷನ್‌ ಹೀಗಿತ್ತು

Varamahalakshmi Festival 2024
ಧಾರ್ಮಿಕ29 mins ago

Varamahalakshmi Festival 2024: ವರಮಹಾಲಕ್ಷ್ಮಿ ಪೂಜೆಗೆ ಮನೆಯನ್ನು ಸುಂದರವಾಗಿ ಅಲಂಕರಿಸಲು ಇಲ್ಲಿದೆ ಟಿಪ್ಸ್‌

Tungabhadra Dam
ಕರ್ನಾಟಕ49 mins ago

Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

Independence day Fashion 2024
ಫ್ಯಾಷನ್59 mins ago

Independence day Fashion 2024: ಸ್ವಾತಂತ್ರ್ಯ ದಿನಾಚರಣೆ ಸೆಲೆಬ್ರೇಷನ್‌ಗೆ ಕಾಲಿಟ್ಟ ಸಿಂಪಲ್‌ ಎಥ್ನಿಕ್‌ ವೇರ್‌ಗಳಿವು

MNS v/s Shiv Sena
ದೇಶ1 hour ago

MNS v/s Shiv Sena: MNS ಕಾರ್ಯಕರ್ತರ ಪುಂಡಾಟ; ಉದ್ಧವ್‌ ಠಾಕ್ರೆ ಬೆಂಗಾವಲು ವಾಹನದ ಮೇಲೆ ದಾಳಿ

Almonds
ಆರೋಗ್ಯ2 hours ago

Almonds Benefits: ಈ 9 ಕಾರಣಗಳಿಗಾಗಿ ನೆನೆಸಿದ ಬಾದಾಮಿಯನ್ನು ಖಾಲಿ ಹೊಟ್ಟೆಯಲ್ಲಿ ನಿತ್ಯ ಸೇವಿಸಬೇಕು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ7 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌