ಅಗ್ನಿಪಥ ಯೋಜನೆ ಸ್ಥಗಿತಗೊಳಿಸಿ, ಚರ್ಚೆ ನಡೆಸಿ ಎಂದ ಸಿದ್ದರಾಮಯ್ಯ - Vistara News

ಕರ್ನಾಟಕ

ಅಗ್ನಿಪಥ ಯೋಜನೆ ಸ್ಥಗಿತಗೊಳಿಸಿ, ಚರ್ಚೆ ನಡೆಸಿ ಎಂದ ಸಿದ್ದರಾಮಯ್ಯ

ಅಗ್ನಿಪಥ ಯೋಜನೆಗೆ ವಿರೋಧವಿದ್ದರೂ, ಹಿಂಸಾತ್ಮಕ ಪ್ರತಿಭಟನೆಗಳಿಗೆ ಬೆಂಬಲಿಸುವುದಿಲ್ಲ ಎಂದು ಸಿದ್ದರಾಂಯ್ಯ ಹೇಳಿದ್ದಾರೆ.

VISTARANEWS.COM


on

siddaramaiah
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹುಬ್ಬಳ್ಳಿ: ಸೇನಾ ನೇಮಕಾತಿ ಕುರಿತಂತೆ ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆಯನ್ನು ಕೇಂದ್ರ ಸರ್ಕಾರ ಸ್ಥಗಿತಗೊಳಿಸಬೇಕು ಎಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರದ ಯೋಜನೆ ವಿರುದ್ಧ ಯುವಕರು ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದಾರೆ. ಅವರನ್ನು ಯಾರೂ ಪ್ರಚೋದಿಸಿಲ್ಲ. ಕೇಂದ್ರ ಸರ್ಕಾರ ಮೊದಲು ಯೋಜನೆಯನ್ನು ಸ್ಥಗಿತಗೊಳಿಸಬೇಕು. ದೇಶಾದ್ಯಂತ ಯೋಜನೆಯ ಕುರಿತು ಮಾಹಿತಿ ನೀಡಬೇಕು. ಎಲ್ಲರೂ ಒಪ್ಪುವಂತಹ ವಾತಾವರಣ ನಿರ್ಮಾಣ ಮಾಡಬೇಕು ಎಂದಿದ್ದಾರೆ.

ಇದನ್ನೂ ಓದಿ | ಅಗ್ನಿಪಥ್‌ ವಿರೋಧವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ, ರಾಜನಾಥ್‌ ನೇತೃತ್ವದಲ್ಲಿ ಸೇನಾ ಮುಖ್ಯಸ್ಥರ ಸಭೆ

ಹಿಂಸಾತ್ಮಕ ಪ್ರತಿಭಟನೆಗಳ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಹಿಂಸಾತ್ಮಕ ಪ್ರತಿಭಟನೆಗೆ ಬೆಂಬಲ ಇಲ್ಲ ಎಂದು ಮೊದಲೇ ಹೇಳಿದ್ದೇನೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಎಲ್ಲರಿಗೂ ಹಕ್ಕಿದೆ. ಶಾಂತಿ ಬಿಟ್ಟು ಹಿಂಸಾತ್ಮಕ ಕೃತ್ಯಕ್ಕೆ ಮುಂದಾಗಬಾರದು ಎಂದರು.

ಛಲವಾದಿ ನಾರಾಯಣಸ್ವಾಮಿಯ ತಪ್ಪಲ್ಲ

ತಮ್ಮ ವಿರುದ್ಧ ಜಾತಿ ನಿಂದನೆ ಆರೋಪವನ್ನು ಬಿಜೆಪಿ ಎಸ್‌ಸಿ. ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಮಾಡಿರುವ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ನನಗೆ ಜಾತಿಗಳ ಬಗ್ಗೆ ತಿಳಿದಿದೆ. ನಾನು ಲಾಯರ್‌ ಆಗಿದ್ದರಿಂದ ಅರಿತಿದ್ದೇನೆ. ನಾನ್ಯಾಕೆ ಜಾತಿ ನಿಂದನೆ ಮಾಡಲಿ? ಬಿಜೆಪಿಯವರು ಛಲವಾದಿ ನಾರಾಯಣಸ್ವಾಮಿ ಅವರ ತಲೆ ಮೇಲೆ ಹಳೆ ಚಡ್ಡಿ ಹೊರಿಸಿ ಅವಮಾನ ಮಾಡಿದ್ದಾರೆ ಎಂದು ಹೇಳಿದ್ದೆ. ಇದರಲ್ಲಿ ಛಲವಾದಿ ನಾರಾಯಣಸ್ವಾಮಿ ಅವರ ತಪ್ಪೇನೂ ಇಲ್ಲ. ಬಿಜೆಪಿಯವರ ತಪ್ಪು ಎಂದು ಸಮಜಾಯಿಶಿ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Mysore News: ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು, ಆದರೆ ಆ ಹುಡುಗಿ ಒಪ್ಪಲಿಲ್ಲ ಎಂದ ಸಿದ್ದರಾಮಯ್ಯ

Mysore News: ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಹುಡುಗಿಯೂ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ತಮ್ಮ ಕಾಲೇಜು ದಿನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

VISTARANEWS.COM


on

CM Siddaramaiah inaugurated the website of the inter caste marriage registration website in Mysore
Koo

ಮೈಸೂರು: ಅಂತರ್ಜಾತಿ ವಿವಾಹಗಳಿಂದ ಜಾತಿ ನಾಶ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Mysore News) ಅಭಿಪ್ರಾಯಪಟ್ಟರು. ನನಗೂ ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು. ಕಾನೂನು ಓದುವಾಗ ಬೇರೆ ಜಾತಿಯ ಸ್ನೇಹಿತೆಯೊಬ್ಬರನ್ನು ಮದುವೆ ಆಗಬೇಕು ಅಂದುಕೊಂಡಿದ್ದೆ. ಆದರೆ ಆ ಹುಡುಗಿ ಒಪ್ಪಲಿಲ್ಲ, ಅವರ ಮನೆಯವರೂ ಒಪ್ಪಲಿಲ್ಲ ಎಂದು ತಮ್ಮ ಕಾಲೇಜು ದಿನಗಳನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

ಮೈಸೂರಿನಲ್ಲಿ ಜನ ಸ್ಪಂದನ ಮತ್ತು ಮಾನವ ಮಂಟಪ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆಯ ವೆಬ್‌ಸೈಟ್ ಉದ್ಘಾಟಿಸಿ ಮಾತನಾಡಿದ ಅವರು, ಅಂತರ್ಜಾತಿ ವಿವಾಹಗಳ ಜತೆಗೆ ಮಹಿಳೆಯರಿಗೆ ಹಾಗೂ ಎಲ್ಲಾ ವರ್ಗದ ದುರ್ಬಲರಿಗೆ ಆರ್ಥಿಕ ಶಕ್ತಿ ಸಿಕ್ಕಾಗ ಸಮಾಜದಲ್ಲಿ ಚಲನೆಯುಂಟಾಗುತ್ತದೆ. ಸಮ ಸಮಾಜದ ಆಶಯ ಈಡೇರಲು, ಜಾತಿ ನಾಶವಾಗಲು ಸಾಧ್ಯ ಎಂದು ಹೇಳಿದರು.

ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

ನಮ್ಮ ಸರ್ಕಾರ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡುವ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ ಎಂದ ಅವರು, ಅಂಬೇಡ್ಕರ್ ಮತ್ತು ಕುವೆಂಪು ಅವರ ಆಶಯದಂತೆ ಸಮ ಸಮಾಜ ನಿರ್ಮಾಣ ಆಗಬೇಕಾದರೆ ಅಂತರ್ಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ಇದಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದರು.

Continue Reading

ಶಿಕ್ಷಣ

COMEDK UGET 2024: ನಾಳೆ ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ ಪ್ರಕಟ; ವೀಕ್ಷಣೆ, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

COMEDK UGET 2024: ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ ನಡೆಸಲಾಗಿದ್ದು, 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಈ ಪ್ರವೇಶ ಪರೀಕ್ಷೆಯು ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಬುನಾದಿಯಾಗಲಿದೆ. ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುತ್ತದೆ. COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.

VISTARANEWS.COM


on

COMEDK UGET 2024 Result Declared Tomorrow Afternoon How to view and download
Koo

ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) 2024ರ ಪ್ರವೇಶ ಪರೀಕ್ಷೆಯ (UGET) ಫಲಿತಾಂಶವನ್ನು ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುತ್ತದೆ. COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದ್ದು, ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶವನ್ನೂ ಕಲ್ಪಿಸಲಾಗಿದೆ.

ಕರ್ನಾಟಕದ 150 ಪ್ರೈವೇಟ್‌ ಎಂಜಿನಿಯರಿಂಗ್ ಕಾಲೇಜು, ದೇಶದ ಕೆಲವು ಕಡೆ ಇರುವ 40 ಖಾಸಗಿ ವಿವಿಗಳಲ್ಲಿನ ಸುಮಾರು 22 ಸಾವಿರ ಎಂಜಿನಿಯರಿಂಗ್ ಸೀಟುಗಳ ಪ್ರವೇಶಾತಿಗಾಗಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ದೇಶದ 1,03,799 (ಶೇಕಡಾ 87.96) ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಶುಕ್ರವಾರ ಅವರ ಭವಿಷ್ಯ ನಿರ್ಧಾರ ಆಗಲಿದೆ. ವಿದ್ಯಾರ್ಥಿಗಳು ತಮ್ಮ ಶ್ರೇಯಾಂಕದ ಪಟ್ಟಿಯನ್ನು ಪರಿಶೀಲಿಸಿಕೊಂಡು ಸ್ಕೋರ್‌ ಕಾರ್ಡ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

COMEDK UGET ಫಲಿತಾಂಶ 2024 ಪರಿಶೀಲನೆ ಹೇಗೆ?

ಹಂತ 1: ಕಾಮೆಡ್‌ಕೆ ಪರೀಕ್ಷಾ ಪೋರ್ಟಲ್‌ಗೆ ಭೇಟಿ ನೀಡಿ.

ಹಂತ 2: COMEDK UGET 2024 ಫಲಿತಾಂಶದ ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹಂತ 3: ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ – ಅಪ್ಲಿಕೇಶನ್ ಸಂಖ್ಯೆ ಅಥವಾ ಬಳಕೆದಾರ ID ಮತ್ತು ಪಾಸ್‌ವರ್ಡ್ ಮತ್ತು ನಂತರ ಸಲ್ಲಿಸು ಮೇಲೆ ಕ್ಲಿಕ್ ಮಾಡಿ.

ಹಂತ 4: COMEDK UGET ಫಲಿತಾಂಶ 2024 ಪರದೆಯ ಮೇಲೆ ಕಾಣಿಸುತ್ತದೆ.

ಹಂತ 5: ಕೀ ಉತ್ತರವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.

ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭ

ಮೇ 24ರಂದು ಕಾಮೆಡ್‌ಕೆ ರಿಸಲ್ಟ್‌ ಪ್ರಕಟವಾಗಿ ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭವಾಗಲಿದೆ. ಕರ್ನಾಟಕದಲ್ಲಿರುವ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು ಮತ್ತು ದೇಶದ ವಿವಿಧ ಕಡೆ ಇರುವ 40 ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಯಾವ ಕಡೆಯಲ್ಲಾದರೂ ಪ್ರವೇಶ ಪಡೆಯಬೇಕೆಂದರೆ ಇಲ್ಲಿ ನೋಂದಣಿಯನ್ನು ಮಾಡಿಕೊಂಡಿರಬೇಕು.

ಇದನ್ನೂ ಓದಿ: Rave party: ರೇವ್‌ ಪಾರ್ಟಿಯಲ್ಲಿ ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

ಪ್ರತಿ ವರ್ಷ ಮೇ ತಿಂಗಳಲ್ಲಿ ಕಾಮೆಡ್‌-ಕೆ ಪರೀಕ್ಷೆ

ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ ನಡೆಸಲಾಗಿದ್ದು, 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಈ ಪ್ರವೇಶ ಪರೀಕ್ಷೆಯು ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಬುನಾದಿಯಾಗಲಿದೆ.

Continue Reading

ಸಿನಿಮಾ

Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

Golden Star Ganesh: ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಬಹು ನಿರೀಕ್ಷಿತ ಮೊದಲ ಹಾಡು ಇದೇ ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಸುಮಧುರ ಹಾಡುಗಳು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿದೆ. ಆ ಪೈಕಿ ನಿಶಾನ್ ರಾಯ್ ಅವರು ಬರೆದು ಹೆಸರಾಂತ ಗಾಯಕ ಚಂದನ್ ಶೆಟ್ಟಿ ಹಾಡಿರುವ ಈ ಚಿತ್ರದ ಮೊದಲ ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

VISTARANEWS.COM


on

Golden Star Ganesh Krishnam Pranaya Sakhi movie first song release on May 25 in Mysore
Koo

ಬೆಂಗಳೂರು: ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ (Golden Star Ganesh) ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಬಹು ನಿರೀಕ್ಷಿತ ಮೊದಲ ಹಾಡು ಇದೇ ಮೇ 25 ರಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

“ಕೃಷ್ಣಂ ಪ್ರಣಯ ಸಖಿ” ಸಿನಿಮಾ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದ್ದು, ಈ ಚಿತ್ರದ ಫಸ್ಟ್ ಲುಕ್ ಹಾಗೂ ಪೋಸ್ಟರ್‌ಗಳು ಎಲ್ಲರ ಮೆಚ್ಚುಗೆ ಗಳಿಸಿದೆ. ಬಹು ನಿರೀಕ್ಷಿತ ಈ ಚಿತ್ರದ ಮೊದಲ ಹಾಡು ಮೇ 25ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ.

ಇದನ್ನೂ ಓದಿ: Jagannath Puri Temple: ಪುರಿ ಜಗನ್ನಾಥ ದೇವಸ್ಥಾನದ 7 ಅಚ್ಚರಿಯ ಸಂಗತಿಗಳಿವು!

ಅರ್ಜುನ್ ಜನ್ಯ ಅವರು ಸಂಗೀತ ನೀಡಿರುವ ಆರು ಸುಮಧುರ ಹಾಡುಗಳು “ಕೃಷ್ಣಂ ಪ್ರಣಯ ಸಖಿ” ಚಿತ್ರದಲ್ಲಿದೆ. ಆ ಪೈಕಿ ನಿಶಾನ್ ರಾಯ್ ಅವರು ಬರೆದು ಹೆಸರಾಂತ ಗಾಯಕ ಚಂದನ್ ಶೆಟ್ಟಿ ಹಾಡಿರುವ ಈ ಚಿತ್ರದ ಮೊದಲ ಹಾಡು ಸಾಂಸ್ಕೃತಿಕ ನಗರಿ ಮೈಸೂರಿನ “ಮಾಲ್ ಆಫ್ ಮೈಸೂರಿನಲ್ಲಿ” ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಮೈಸೂರಿನಲ್ಲಿ ಮೊದಲ ಹಾಡು ಬಿಡುಗಡೆ ಮಾಡುವುದರ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ಸಿಗಲಿದೆ.

ಸದ್ಯದಲ್ಲೇ ಚಿತ್ರ ತೆರೆಗೆ

ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಬೆಂಗಳೂರು, ವಿಯೆಟ್ನಾಂ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ಧತೆ ನಡೆಯುತ್ತಿದೆ‌.

ಇದನ್ನೂ ಓದಿ: Chardham Yatra 2024: ಚಾರ್‌ಧಾಮ್‌, ಕೇದಾರನಾಥನ ದರ್ಶನ ಮಾಡಲು ಬಯಸಿದ್ದೀರಾ? ನಿಮಗೆ ಬೇಕಾದ ಮಾಹಿತಿ ಇಲ್ಲಿದೆ

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41ನೇ ಚಿತ್ರ

ಬಹು ನಿರೀಕ್ಷಿತ “ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41ನೇ ಚಿತ್ರ. ಚಿತ್ರದ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

Continue Reading

ಮಳೆ

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Rain News : ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮೈಸೂರಿನ ಹುಣಸೂರಿನಲ್ಲಿ ಜೋರು ಮಳೆಗೆ ಮನೆ ಕುಸಿದು ಬಿದ್ದರೆ, ಬೆಳಗಾವಿಯಲ್ಲಿ ಗಾಳಿ ಮಳೆಗೆ ಶಾಲೆಯ ಶೆಡ್‌
(Karnataka Weather Forecast) ಹಾರಿ ಹೋಗಿದೆ. ಯಾದಗಿರಿ, ಧಾರವಾಡದಲ್ಲಿ ಮರಗಳು ಧರೆಗುರುಳಿದ್ದವು.

VISTARANEWS.COM


on

By

Karnataka rain
Koo

ಮೈಸೂರು: ಮೈಸೂರಿನ ಹುಣಸೂರು ಭಾಗದಲ್ಲಿ ವರುಣನ (Rain News) ಅಬ್ಬರ ಜೋರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ (Karnataka Rain) ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಾಳೇನಹಳ್ಳಿಯಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಮನೆಯು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜೋರಾಗಿ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿದೆ. ವಾಸಕ್ಕೆ ಮನೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

ಇತ್ತ ಹನಗೋಡಿನಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದರು. ಹುಣಸೂರು ತಾಲೂಕಿನ ಹನಗೋಡಿ ಗ್ರಾಮದಲ್ಲಿ ವಾರದಿಂದ ಸುರಿಯುತ್ತಿರುವ ಮಳೆಗೆ ಮನೆ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿತ್ತು. ಬಸ್ ನಿಲ್ದಾಣ ಕೆರೆಯಂತಾಗಿತ್ತು. ಚರಂಡಿಗಳ ವ್ಯವಸ್ಥೆ ಸರಿಯಿಲ್ಲದೆ ನೀರು ಹೋಗದೆ ನಿಂತಲ್ಲೇ ನಿಂತು ಜನರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಶೆಡ್‌

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜೋರು ಗಾಳಿ ಮಳೆಗೆ ಶೆಡ್ ಹಾರಿ ಹೋಗಿತ್ತು. ಶಾಲೆಗೆ ರಜೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿತ್ತು. ಶಾಲೆಯ ಶೆಡ್ ಹಾರಿ ಅಕ್ಕಪಕ್ಕದ ಮನೆಗಳು ಹಾಗೂ ವಿದ್ಯುತ್ ತಂತಿಗಳು ಮೇಲೆ ಬಿದ್ದು ಹಾನಿಯಾಗಿತ್ತು.

ಯಾದಗಿರಿಯಲ್ಲಿ ಧರೆಗುರುಳಿದ ಮರಗಳು

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದವು. ಸತತ ಒಂದು ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಮರಗಳ ಮೇಲ್ಭಾಗದ ರಂಬೆ, ಕೊಂಬೆಗಳು ಸಂಪೂರ್ಣ ಗಾಳಿಗೆ ಮುರಿದು ಬೋಳಾಗಿದ್ದವು. ಕೆಲವೆಡೆ ಮನೆ ಮುಂದೆ ಇದ್ದ ಮರಗಳು ನೆಲಕ್ಕುರುಳಿದ್ದವು. ಭಾರಿ ಮಳೆಗೆ ಸುಭಾಷ್ ವೃತ್ತದ ಸಮೀಪದ ಪಿಡ್ಲೂಡಿ ಕಚೇರಿ ಆವರಣದೊಳಗೆ ಮಳೆ ನೀರು ನುಗ್ಗಿತ್ತು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರ ಜನಸಂಪರ್ಕದ ಕಚೇರಿ ಆವರಣದಲ್ಲಿ ಮರಗಳು ಧರೆಗುರುಳಿದ್ದವು.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಆರು ಜನರ ಕುಟುಂಬವೊಂದು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದೆ. ಯಾದಗಿರಿಯ ಮಾತಾಮಣಿಕೇಶ್ವರಿ ನಗರದಲ್ಲಿ ಭಾರೀ ಮಳೆ ಗಾಳಿಗೆ ಮನೆಗೆ ಹಾಕಿದ ಟಿನ್ ಶೆಡ್ ಹಾರಿಹೋಗಿದೆ. ಮಳೆ ಗಾಳಿ ಜೋರಾಗುತ್ತಿದ್ದಂತೆ ಇಡೀ ಕುಟುಂಬ ಮನೆಯಿಂದ ಹೊರಬಂದು ಬಚಾವ್ ಆಗಿದ್ದಾರೆ. ಮನೆಯಿಂದ ಹೊರ ಬಂದ ಕೆಲವೇ ಕ್ಷಣದಲ್ಲಿ ಟಿನ್ ಶೆಡ್ ಕುಸಿದು ಬಿದ್ದಿದೆ. ಇತ್ತ ದಿನಸಿ ಸಾಮಾನು ಸೇರಿದಂತೆ ಎಲ್ಲ ವಸ್ತುಗಳು ಹಾಳಾಗಿವೆ.

ಧಾರಾವಾಡದಲ್ಲಿ ಧಾರಾಕಾರ ಮಳೆಗೆ ರಸ್ತೆ ಮೇಲೆ ನಿಂತ ನೀರು

ಧಾರವಾಡದಲ್ಲಿ ಗುರುವಾರದಂದು ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿತ್ತು. ಎರಡು ದಿನದಿಂದ ಬ್ರೇಕ್‌ ಕೊಟ್ಟಿದ್ದ ಮಳೆಯು ಗುರುವಾರ ದಿಢೀರ್‌ ಅಪ್ಪಳಿಸಿತ್ತು. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಧಾರವಾಡ ಹೊರವಲಯದ ಕೆಎಂಎಫ್ ಬಳಿ ಧಾರಾಕಾರ ಮಳೆಗೆ ರಸ್ತೆಯಲ್ಲೇ ನೀರು ನಿಂತಿತ್ತು. ಬಿಆರ್‌ಟಿಎಸ್ ಕಾರಿಡಾರ್‌ನಿಂದ ಹರಿದು ಹೋಗದೇ ಇರುವುದೇ ಕಾರಣ ಎಂದು ಸ್ಥಳೀಯರು ಆಕ್ರೋಶಿಸಿದರು.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರೀಕಟ್ಟೆ, ತರೀಕೆರೆಯಲ್ಲೂ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ಎರಡು ಅಡಿ ನೀರು ನಿಂತಿತ್ತು. ತರೀಕೆರೆ ಪಟ್ಟಣದ ಗಣಪತಿ ಪೆಂಡಾಲ್ ಮುಂಭಾಗ ಕಾರು, ಬೈಕ್‌ಗಳು ಅರ್ಧದಷ್ಟು ಮುಳುಗಿತ್ತು. ಎನ್ಆರ್‌ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲೂ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
CM Siddaramaiah inaugurated the website of the inter caste marriage registration website in Mysore
ಕರ್ನಾಟಕ2 seconds ago

Mysore News: ಅಂತರ್ಜಾತಿ ವಿವಾಹ ಆಗುವ ಆಸೆ ಇತ್ತು, ಆದರೆ ಆ ಹುಡುಗಿ ಒಪ್ಪಲಿಲ್ಲ ಎಂದ ಸಿದ್ದರಾಮಯ್ಯ

COMEDK UGET 2024 Result Declared Tomorrow Afternoon How to view and download
ಶಿಕ್ಷಣ3 mins ago

COMEDK UGET 2024: ನಾಳೆ ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ ಪ್ರಕಟ; ವೀಕ್ಷಣೆ, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

IPL 2024
ಪ್ರಮುಖ ಸುದ್ದಿ34 mins ago

IPL 2024 : ಸಚಿನ್​, ಧೋನಿ, ರೋಹಿತ್​; ಒಂದೇ ಜಾಹೀರಾತಿನಲ್ಲಿ ಮೂರು ಪೀಳಿಗೆಯ ನಾಯಕರು; ಇಲ್ಲಿದೆ ವಿಡಿಯೊ

Share Market
ದೇಶ44 mins ago

Share Market: ಸೆನ್ಸೆಕ್ಸ್‌ ನೆಗೆತ, ನಿಫ್ಟಿ ಜಿಗಿತ; ಮೋದಿ ಭವಿಷ್ಯ ನಿಜವಾಗುತ್ತಾ? ಇಂದಿನ ಏರಿಕೆಗೆ ಕಾರಣಗಳು ಗೊತ್ತಾ?

IPL 2024
ಪ್ರಮುಖ ಸುದ್ದಿ1 hour ago

IPL 2024 : ಮಾಜಿ ನಾಯಕ ಶೇನ್​ ವಾರ್ನ್​ ದಾಖಲೆ ಸರಿಗಟ್ಟಿದ ಸಂಜು ಸ್ಯಾಮ್ಸನ್​

IPL 2024
ಕ್ರೀಡೆ1 hour ago

IPL 2024 : ಮುಂದಿನ ವರ್ಷವೂ ಧೋನಿ ಐಪಿಎಲ್​ ಆಡ್ತಾರೆ; ಸಿಎಸ್​ಕೆ ಸಿಇಒ ಸ್ಪಷ್ಟನೆ

Golden Star Ganesh Krishnam Pranaya Sakhi movie first song release on May 25 in Mysore
ಸಿನಿಮಾ2 hours ago

Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

Prashant Kishor
ದೇಶ2 hours ago

Prashant Kishor: ಜೂನ್‌ 4ರಂದು ಪ್ರತಿಪಕ್ಷಗಳು ನೀರು ಕುಡಿಯಲಿವೆ; ಪ್ರಶಾಂತ್‌ ಕಿಶೋರ್‌ ಮಾತಿನ ಮರ್ಮವೇನು?

Virat Kohli
ಕ್ರೀಡೆ2 hours ago

Virat Kohli : ಕೊಹ್ಲಿಗೆ ಗೌರವ ಸಲ್ಲಿಸಲೇಬೇಕು ಎಂದು ಹೇಳಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟರ್​​

Karnataka rain
ಮಳೆ3 hours ago

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ16 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌