Accident News: ಕೊಪ್ಪಳದಲ್ಲಿ ಬೈಕ್‌ಗೆ ಕಾರು ಡಿಕ್ಕಿ, ಬೈಕ್‌ ಸವಾರ ಸಾವು - Vistara News

ಕೊಪ್ಪಳ

Accident News: ಕೊಪ್ಪಳದಲ್ಲಿ ಬೈಕ್‌ಗೆ ಕಾರು ಡಿಕ್ಕಿ, ಬೈಕ್‌ ಸವಾರ ಸಾವು

ಕೊಪ್ಪಳದ ಕುಕನೂರು ಬಳಿ ಬೈಕ್‌ಗೆ ಹಿಂದಿನಿಂದ ಕಾರು ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟಿದ್ದಾರೆ.

VISTARANEWS.COM


on

koppala accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಹಿಂಬದಿಯಿಂದ ಬೈಕ್‌ಗೆ ಕಾರ್ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ನಡೆದಿದೆ.

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬನ್ನಿಕೊಪ್ಪ ಬಳಿ ಅಪಘಾತ ಸಂಭವಿಸಿದ್ದು, ಬೈಕ ಸವಾರ ಹಲಗೇರಿಯ ಶಿವಪ್ಪ ಬಿನ್ನಾಳ (48) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಈ ದುರ್ಘಟನೆ ನಡೆದಿದೆ. ಕಾರಿನಲ್ಲಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎರಡು ಗಂಟೆ ಲಿಫ್ಟ್‌ನಲ್ಲಿ ಸಿಕ್ಕಿಹಾಕಿಕೊಂಡವನ ರಕ್ಷಣೆ

ಎರಡು ಗಂಟೆಗಳ ಕಾಲ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಅಗ್ನಿಶಾಮಕ ದಳ ರಕ್ಷಿಸಿದ ಘಟನೆ ಬೆಂಗಳೂರಿನ ಬೊಮ್ಮಸಂದ್ರದಲ್ಲಿ ನಡೆದಿದೆ. ವಿಕ್ರಮ್ ಎಂಬವರು ಬೊಮ್ಮಸಂದ್ರದ ಆರ್‌ಆರ್ ಲಕ್ಸುರಿ ಪಿಜಿಯಲ್ಲಿ ವಾಸವಾಗಿದ್ದು, ಕಳೆದ ರಾತ್ರಿ 10.30ರ ಸುಮಾರಿಗೆ ಏಕಾಏಕಿ ಲಿಫ್ಟ್ ಆಫ್ ಆಗಿತ್ತು. ಈ ವೇಳೆ ಎಷ್ಟೇ ಕೂಗಾಡಿದರೂ ಪಿಜಿ ಸಿಬ್ಬಂದಿ ರಕ್ಷಣೆಗೆ ಬಂದಿಲ್ಲ. ರಾತ್ರಿ 12.30 ಆದರೂ ಯಾರೂ ಲಿಫ್ಟ್ ಕಡೆ ಸುಳಿದಿರಲಿಲ್ಲ. ಈ ವೇಳೆ ವಿಕ್ರಮ್‌ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಸಹಾಯ ಬೇಡಿದ್ದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ತೆರಳಿ, ನಾಲ್ಕು ಮತ್ತು ಐದನೇ ಮಹಡಿಯ ಮಧ್ಯದಲ್ಲಿ ಲಿಫ್ಟ್‌ನಲ್ಲಿ ಸಿಲುಕಿದ್ದ ವಿಕ್ರಮ್‌ನನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: Road Accident: ನಾಯಂಡಹಳ್ಳಿ ಬಳಿ ಭೀಕರ ಅಪಘಾತಕ್ಕೆ ಮಹಿಳೆ ತಲೆ ಛಿದ್ರ; ರೊಚ್ಚಿಗೆದ್ದ ಸಾರ್ವಜನಿಕರಿಂದ ಕಲ್ಲು ತೂರಾಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Tungabhadra Dam: ತುಂಗಭದ್ರಾ ಡ್ಯಾಂ ಗೇಟು ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿ.ಕೆ. ಶಿವಕುಮಾರ್

Tungabhadra Dam: ಸದ್ಯ ತುಂಗಭದ್ರಾ ಜಲಾಶಯದಿಂದ 98 ಸಾವಿರ ಕ್ಯೂಸೆಕ್ ನೀರು ಹೊರಗಡೆ ಬಿಡಲಾಗುತ್ತಿದೆ. 19ನೇ ಗೇಟ್ ಒಂದರಲ್ಲಿಯೇ 35 ಸಾವಿರ ಕ್ಯೂಸೆಕ್ ನೀರು ಹೊರಹೋಗುತ್ತಿದೆ. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

Tungabhadra Dam
Koo

ವಿಜಯನಗರ: ತುಂಗಭದ್ರಾ ಅಣೆಕಟ್ಟಿನ (Tungabhadra Dam) ಹಾನಿಗೊಳಗಾದ 19ನೇ ಗೇಟನ್ನು ದುರಸ್ತಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ನಮ್ಮ ತುಂಗಭದ್ರಾ ನೀರಾವರಿ ನಿಗಮದಲ್ಲಿಯೂ ಉತ್ತಮ ತಂತ್ರಜ್ಞರಿದ್ದಾರೆ. ಅಲ್ಲದೇ ಗುತ್ತಿಗೆದಾರ ಸಂಸ್ಥೆಗಳಾದ ಕೃಷ್ಣಯ್ಯ, ನಾರಾಯಣ ಹಾಗೂ ಹಿಂದುಸ್ಥಾನ್ ಸಂಸ್ಥೆಯ ತಂಡಗಳು ಈಗಾಗಲೇ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ತಂತ್ರಜ್ಞರಿಗೆ ಈಗಾಗಲೇ ಅಣೆಕಟ್ಟಿನ ವಿನ್ಯಾಸ ನಕ್ಷೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಭಾನುವಾರ ಮಧ್ಯಾಹ್ನ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಘಟನೆ ಅತ್ಯಂತ ದುಃಖಕರ. ಶನಿವಾರ ರಾತ್ರಿ ಜಲಾಶಯದ 10 ಗೇಟ್‌ಗಳನ್ನು ತೆರೆಯಲಾಗಿತ್ತು. ಏಕಾಏಕಿ ಜಲಾಶಯದ 19ನೇ ಗೇಟಿನ ಚೈನ್ ಲಿಂಕ್ ತುಂಡಾದ ಹಿನ್ನೆಲೆ ಎಲ್ಲಾ ಗೇಟ್ ತೆರೆದು ಅಣೆಕಟ್ಟಿನ ಮೇಲಿನ ಒತ್ತಡ ಕಡಿಮೆ ಮಾಡಲಾಗಿದೆ ಎಂದರು.

ಸದ್ಯ ಜಲಾಶಯದಿಂದ 98 ಸಾವಿರ ಕ್ಯೂಸೆಕ್ ನೀರು ಹೊರಗಡೆ ಬಿಡಲಾಗುತ್ತಿದೆ. 19ನೇ ಗೇಟ್ ಒಂದರಲ್ಲಿಯೇ 35 ಸಾವಿರ ಕ್ಯೂಸೆಕ್ ನೀರು ಹೊರಹೋಗುತ್ತಿದೆ. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ| Tungabhadra Dam: ಒಂದು ವಾರದಲ್ಲಿ ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿಯಾಗಲಿದೆ ಎಂದ ಡಿ.ಕೆ.ಶಿವಕುಮಾರ್‌

ರೈತರ ಒಂದು ಬೆಳೆಗಾದರೂ ನೀರನ್ನು ಉಳಿಸುತ್ತೇವೆ

ಜಲಾಶಯದಿಂದ 60 ಟಿಎಂಸಿ ನೀರು ಖಾಲಿ ಮಾಡಬೇಕಿದೆ. ಗೇಟನ್ನು ಮತ್ತೆ ಹಾಕಬೇಕೆಂದರೆ ಒತ್ತಡ ಕಡಿಮೆ ಮಾಡಬೇಕಿದೆ. ಜಲಾಶಯದಲ್ಲಿ 150 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು. ಜಲಾಶಯಕ್ಕೆ ಒಳಹರಿವು 28,000 ಕ್ಯೂಸೆಕ್ ಇದೇ. ಕನಿಷ್ಠ ನಮ್ಮ ರೈತರಿಗೆ ಒಂದು ಬೆಳಗಾದರೂ ಒದಗಿಸುವಷ್ಟು ನೀರನ್ನು ಉಳಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.

ಅಣೆಕಟ್ಟಿನ ಪ್ರಮುಖ ಮೂರು ಕಾಲುವೆಗಳಿಗೆ ನೀರನ್ನು ಹರಿಸಲು 115 ಟಿಎಂಸಿ ನೀರಿನ ಅವಶ್ಯಕತೆ ಇದೆ. ಇದೆಲ್ಲವನ್ನು ಲೆಕ್ಕಾಚಾರ ಹಾಕಿ ರೈತರನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಪಕ್ಕದ ರಾಜ್ಯಗಳಿಗೆ ಈಗಾಗಲೇ 25 ಟಿಎಂಸಿ ನೀರನ್ನು ಕೊಡಲಾಗಿದೆ. ಇನ್ನೂ 90 ಟಿಎಂಸಿ ನೀರನ್ನು ಕೊಡಬೇಕಾಗಿದೆ. ಮೂರು ರಾಜ್ಯಗಳು ಒಟ್ಟಿಗೆ ಸೇರಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ. ರೈತರು ಆತಂಕಕ್ಕೆ ಒಳಗಾಗಬೇಡಿ ಎಂದರು.

ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ಈ ಮೂರು ರಾಜ್ಯಗಳ ರೈತರಿಗೆ ಬಹುಮುಖ್ಯವಾದ ಜಲಾಶಯ ಇದಾಗಿದೆ. ನಮ್ಮ ಕರ್ನಾಟಕದ 12 ಲಕ್ಷ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವನ್ನು ಇದು ಹೊಂದಿದೆ. ಕೊಪ್ಪಳ, ರಾಯಚೂರು, ಬಳ್ಳಾರಿ ಸೇರಿದಂತೆ ಅನೇಕ ಜಿಲ್ಲೆಗಳು ಇದರಿಂದ ಲಾಭ ಪಡೆಯುತ್ತಿವೆ. ನಮ್ಮ ರೈತರು ಆತಂಕ ಪಡಬೇಕಾಗಿಲ್ಲ ಸರ್ಕಾರ ನಿಮ್ಮ ಜೊತೆಗಿದೆ” ಎಂದು ತಿಳಿಸಿದರು.

ಇದು 60 ರಿಂದ 70 ವರ್ಷ ಹಳೆಯ ಜಲಾಶಯವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ನಾನು ಯಾವ ಅಧಿಕಾರಿಗಳನ್ನೂ ದೂರುವುದಿಲ್ಲ. ದೇಶದ ಸಂಪತ್ತನ್ನು ಕಾಪಾಡಬೇಕಿದೆ. ಅಣೆಕಟ್ಟಿನ ಎರಡು ಕಿಲೋಮೀಟರ್ ಸುತ್ತಳತೆಯಲ್ಲಿ ತಂತ್ರಜ್ಞರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಹೊರತುಪಡಿಸಿ ಜನಪ್ರತಿನಿಧಿಗಳಿಗೂ ಸಹ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದರು.

ಬಾಗಿನ ಅರ್ಪಣೆ ಮುಂದೂಡಿಕೆ

ಆ.13 ರಂದು ಅಣೆಕಟ್ಟು ತುಂಬಿದ ಹಿನ್ನೆಲೆಯಲ್ಲಿ ನಾನು, ಸಿಎಂ ಬಾಗಿನ ಅರ್ಪಿಸುವ ಕಾರ್ಯಕ್ರಮವಿತ್ತು. ಈಗ ಅದನ್ನು ಮುಂದೂಡಲಾಗಿದೆ. ಮೊದಲು ಅಣೆಕಟ್ಟಿನ ಸುರಕ್ಷತೆ ನಮಗೆ ಮುಖ್ಯವಾಗಿದೆ ಎಂದರು.

ದುರಸ್ತಿಗೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಪ್ರಶ್ನೆ ಕೇಳಿದಾಗ, ನಮ್ಮ ಅಧಿಕಾರಿಗಳು ಪ್ರತಿಕ್ಷಣವೂ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ. ಈ ಘಟನೆ ಆದ ಕ್ಷಣದಿಂದ ತ್ವರಿತವಾಗಿ ಕೆಲಸ ಮಾಡುತ್ತಿದ್ದಾರೆ. ಯಾರ ನಿರ್ಲಕ್ಷ್ಯತೆಯಿಂದಲೂ ಈ ಅವಘಡ ನಡೆದಿಲ್ಲ. ಆಕಸ್ಮಿಕವಾಗಿ ಈ ಘಟನೆ ನಡೆದಿದೆ ಎಂದು ಹೇಳಿದರು.

ಇದನ್ನೂ ಓದಿ | Tungabhadra Dam: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; ಅಧಿಕಾರಿಗಳ ಜತೆ ಸಭೆ

ಇತರೆ ಜಲಾಶಯಗಳನ್ನು ಪರಿಶೀಲಿಸಲಾಗುತ್ತದೆಯೇ ಎಂದು ಕೇಳಿದಾಗ, ಬೇರೆ ಜಲಾಶಯಗಳಲ್ಲಿ ರೋಪ್ ಹಾಗೂ ಚೈನ್ ಎರಡು ವ್ಯವಸ್ಥೆ ಮಾಡಲಾಗಿರುತ್ತದೆ. ಈ ಜಲಾಶಯವನ್ನು ವಿನ್ಯಾಸ ಮಾಡುವಾಗ ಚೈನ್ ವ್ಯವಸ್ಥೆ ಮಾಡಿದ್ದಾರೆ. ಮೊದಲು ಇಲ್ಲಿನ ಸಮಸ್ಯೆ ಪರಿಹರಿಸಿ ಆನಂತರ ಇತರೆಡೆ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.

Continue Reading

ಮಳೆ

Karnataka Weather : ಸೋಬಾನೆ ಹಾಡುತ್ತಾ ಭತ್ತ ನಾಟಿ ಮಾಡಿದ ರೈತರು; ನಾಳೆಯಿಂದ ದಕ್ಷಿಣ ಒಳನಾಡಿನಲ್ಲಿ ಮಳೆ ಅಬ್ಬರ

Karnataka Weather Forecast : ಮಲೆನಾಡು ಭಾಗದಲ್ಲಿ ಮಳೆಯು ಬಿಡುವು ಕೊಟ್ಟಿದ್ದು, ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಸೋಬಾನೆ ಹಾಡುತ್ತಾ ಭತ್ತದ ನಾಟಿ ಮಾಡಿದ್ದಾರೆ. ಇತ್ತ ಹಾವೇರಿಯಲ್ಲಿ ನಿರಂತರ ಮಳಗೆ ಸರ್ಕಾರಿ ಆಸ್ಪತ್ರೆಯ ಕಟ್ಟಡ ಸೋರುತ್ತಿದೆ.

VISTARANEWS.COM


on

By

karnataka weather Forecast
Koo

ಚಿಕ್ಕಮಗಳೂರು: ಮಲೆನಾಡಿನ ಚಿಕ್ಕಮಗಳೂರಿನಲ್ಲಿ ವರುಣ (Karnataka weather Forecast) ಬಿಡುವು ಕೊಟ್ಟಿದ್ದು, ಇತ್ತ ಕೃಷಿ ಕುಟುಂಬಗಳು ಭತ್ತದ ನಾಟಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ರೈತರಿಂದ ಭತ್ತದ ನಾಟಿ ಸಂಭ್ರಮ ಮನೆ ಮಾಡಿತ್ತು. ಮಲೆನಾಡಿನ ಸೋಬಾನೆ ಗೀತೆ ಹಾಡುತ್ತಾ ಭತ್ತದ ನಾಟಿ ಮಾಡುವ ಚಿತ್ರಣ ಕಂಡು ಬಂತು. ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್ ಆರ್ ಪುರ ಭಾಗಗಳಲ್ಲಿ ಭತ್ತದ ನಾಟಿ ಕಾರ್ಯ ಶುರುವಾಗಿದೆ.

ನಿರಂತರ ಮಳೆಗೆ ಶಿಥಿಲಗೊಂಡ ಆಸ್ಪತ್ರೆ

ಹಾವೇರಿ: ನಿರಂತರ ಮಳೆಗೆ ಪ್ರಾಥಮಿಕ ಆರೋಗ್ಯ ಕೇಂದ್ರವು ಸೋರುತ್ತಿದೆ. ಬಡ ಜನರ ಪಾಲಿನ ಸಂಜೀವಿನಿದ್ದ ಆಸ್ಪತ್ರೆ ಕುಸಿದು ಬೀಳುವ ಸ್ಥಿತಿಯಲ್ಲಿದೆ. ಹಾವೇರಿ ಜಿಲ್ಲೆ ಹಿರೇಕೇರೂರು ತಾಲೂಕು ಕೋಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನೇ ನಂಬಿಕೊಂಡಿದ್ದ ಹಲವು ಗ್ರಾಮಗಳ ಜನರು ಕಂಗಾಲಾಗಿದ್ದಾರೆ.

ಕಟ್ಟಡ ಶಿಥಿಲವಾಗಿದ್ದರಿಂದ ಸಾರ್ವಜನಿಕರಿಗೆ ನೋ ಎಂಟ್ರೀ ಬೋರ್ಡ್ ಹಾಕಿದ್ದಾರೆ. ಆಸ್ಪತ್ರೆಯ ಚಾವಣಿ ಕಿತ್ತು ಬರುತ್ತಿದ್ದರು, ಇಕ್ಕಟ್ಟಿನಲ್ಲೇ ಎರಡು ಕೊಠಡಿಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡೇ ಕೊಠಡಿಗಳಲ್ಲಿ ರೋಗಿಗಳು, ಔಷಧ, ಪೀಠೋಪಕಣ, ವೈದ್ಯಕೀಯ ಸಲಕರಣೆಗಳನ್ನು ಇಟ್ಟುಕೊಂಡಿದ್ದಾರೆ.

ಖಾಯಂ ವೈದ್ಯಾಧಿಕಾರಿಯೂ ಇಲ್ಲ, ವ್ಯವಸ್ಥೆಯೂ ಇಲ್ಲದಂತಾಗಿದೆ. ಆಸ್ಪತ್ರೆ ಕಟ್ಟಡ ಕೆಡವಿ ಹೊಸ ಆಸ್ಪತ್ರೆಗೆ ಮನವಿ ಮಾಡಿದ್ದರೂ ಆರೋಗ್ಯ ಇಲಾಖೆ ಡೋಂಟ್ ಕೇರ್ ಎನ್ನುತ್ತಿದೆ. ಕೆಲ ದಿನಗಳ ಹಿಂದೆ ವೈದ್ಯರ ಮೇಲೆ ಮೇಲ್ಚಾವಣಿಯ ಸಿಮೆಂಟ್ ಕುಸಿದು ಬಿದ್ದಿತ್ತು. ನಂತರ ಎಚ್ಚೆತ್ತು ಪ್ರತ್ಯೇಕ ಕೊಠಡಿ ಮಾಡಿ ರೋಗಿಗಳಿಗೆ ಚಿಕಿತ್ಸೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: Hidden Camera : ಲೇಡಿಸ್‌ ವಾಶ್‌ರೂಮ್‌ನ ಕಸದ ಬುಟ್ಟಿಯಲ್ಲಿತ್ತು ಮೊಬೈಲ್‌; ರೆಕಾರ್ಡ್‌ ಆಯ್ತು 2 ಗಂಟೆಗಳ ವಿಡಿಯೊ!

ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಆ.12ರಂದು ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣದೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಶುಷ್ಕ ಹವಾಮಾನವು ಇರಲಿದೆ. ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌ ಪ್ರಕರಣ; ಪ್ರವಾಹದ ಭೀತಿ ಇಲ್ಲ ಎಂದ ಗೃಹ ಸಚಿವ ಡಾ. ಜಿ.ಪರಮೇಶ್ವರ್

Tungabhadra Dam: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯದ 19 ನಂಬರ್​ ಕ್ರಸ್ಟ್​​ ಗೇಟ್​​ನ ಚೈನ್​ ತುಂಡಾಗಿದ್ದು ಅಪಾರ ಪ್ರಮಾಣದ ನೀರು ನದಿಪಾತ್ರಕ್ಕೆ ಹರಿದು ಹೋಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ʼʼಸರ್ಕಾರ ಅಲ್ಲಿಗೆ ತಾಂತ್ರಿಕ ತಂಡವನ್ನು ಕಳುಹಿಸುತ್ತಿದೆ. ನದಿಪಾತ್ರದ ಊರುಗಳಲ್ಲಿ ಪ್ರವಾಹ ಆಗುವ ಭಯ ಬೇಡ” ಎಂದು ಹೇಳಿದ್ದಾರೆ.

VISTARANEWS.COM


on

Tungabhadra Dam
Koo

ಬೆಂಗಳೂರು: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿಯಿರುವ ತುಂಗಭದ್ರಾ ಜಲಾಶಯ (Tungabhadra Dam)ದ 19 ನಂಬರ್​ ಕ್ರಸ್ಟ್​​ ಗೇಟ್​​ನ ಚೈನ್​ ತುಂಡಾಗಿದ್ದು ಅಪಾರ ಪ್ರಮಾಣದ ನೀರು ನದಿಪಾತ್ರಕ್ಕೆ ಹರಿದು ಹೋಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ (Dr. G. Parameshwar) ಅವರು, ʼʼಸರ್ಕಾರ ಅಲ್ಲಿಗೆ ತಾಂತ್ರಿಕ ತಂಡವನ್ನು ಕಳುಹಿಸುತ್ತಿದೆ. ನದಿಪಾತ್ರದ ಊರುಗಳಲ್ಲಿ ಪ್ರವಾಹ ಆಗುವ ಭಯ ಬೇಡ ಎಂದು ಎಂಜಿನಿಯರ್‌ಗಳು ತಿಳಿಸಿದ್ದಾರೆ. ಕ್ರಸ್ಟ್ ಗೇಟ್ ರಿಪೇರಿ ಮಾಡಲು ಸಾಧ್ಯವಿದೆʼʼ ಎಂದು ಅಭಯ ನೀಡಿದ್ದಾರೆ.

ʼʼಪ್ರವಾಹ ಭೀತಿ ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನೂ ಕೈಗೊಳ್ಳುತ್ತಿದ್ದಾರೆ. ತಾಂತ್ರಿಕ ತಂಡ ಹೋದ ನಂತರ ಎಲ್ಲ ಸರಿಯಾಗುವ ವಿಶ್ವಾಸ ಇದೆʼʼ ಎಂದು ತಿಳಿಸಿದ್ದಾರೆ.

ಸರ್ಕಾರ ‌ಎಲ್ಲಿ‌ದೆ? ಮಾಜಿ ಸಚಿವ ಹಾಲಪ್ಪ ಆಚಾರ್ ಆಕ್ರೋಶ

ಕೊಪ್ಪಳ: ತುಂಗಭದ್ರಾ ಜಲಾಶಯ ಪರಿಶೀಲಿಸಿದ ಮಾಜಿ ಸಚಿವ ಹಾಲಪ್ಪ ಆಚಾರ್ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ʼʼಜಲಾಶಯದ 19ನೇ ಗೇಟ್ ಅಡ್ರೆಸ್ ಇಲ್ಲದಂತೆ ನಾಪತ್ತೆಯಾಗಿದೆ. ಉಳಿದ ಗೇಟ್‌ಗಳಲ್ಲಿ ಕೂಡ ಬಿರುಕು ಕಂಡು ಬಂದಿದೆ. ಇಂತಹ ಘಟನೆ ನಡೆದಿದ್ದರೂ ಜವಾಬ್ದಾರಿ ಇರುವ ಸರ್ಕಾರ ‌ಎಲ್ಲಿ‌ದೆ?ʼʼ ಎಂದು ಪ್ರಶ್ನಿಸಿದ್ದಾರೆ.

ʼʼ4 ಜಿಲ್ಲೆಯ 10 ಲಕ್ಷ ಎಕರೆ ಪ್ರದೇಶದ ರೈತರು ಇದೇ ಡ್ಯಾಂ ನೀರನ್ನು ನೆಚ್ಚಿಕೊಂಡಿದ್ದಾರೆ. ನೀರು ಅಪಾರ ಪ್ರಮಾಣದಲ್ಲಿ ಹರಿ ಹೋಗುತ್ತಿರುವುದಿಂದ ಪ್ರವಾಹ ಭೀತಿ ಜತೆಗೆ ಮುಂದೆ ನೀರು ಖಾಲಿಯಾಗುವ ಆತಂಕವೂ ಇದೆ. ರೈತರ ತಲೆ ಮೇಲೆ ಸರ್ಕಾರ ಬಂಡೆ ಹಾಕಿದಂತಾಗಿದೆ. ಯಾವುದೇ ಯೋಜನೆಯಿರಲಿ ಅದನ್ನು ಸೂಕ್ತವಾಗಿ ನಿರ್ವಹಣೆ ಮಾಡಬೇಕು. ಆದರೆ ಇಲ್ಲಿ ಸರಿಯಾಗಿ ನಿರ್ವಹಣೆ ಮಾಡದ ಕಾರಣ ನಿರ್ಲಕ್ಷ್ಯದಿಂದ ಈ ರೀತಿ ಪರಿಸ್ಥಿತಿ ಎದುರಾಗಿದೆʼʼ ಎಂದು ದೂರಿದ್ದಾರೆ.

ʼʼಇದು ಸರ್ಕಾರದ ತಪ್ಪು. ಜಲಾಶಯದ ಸ್ಥಿತಿಗೆ ಸರ್ಕಾರವೇ ನೇರ ಹೊಣೆ. ಜಲಾಶಯ ನಿರ್ವಹಣೆಗೆ ಅನುದಾನ ಇರುತ್ತದೆ. ಒಂದುವೇಳೆ ಇಲ್ಲದಿದ್ದರೆ ರಾಜ್ಯ ಸರ್ಕಾರ ‌ನೀಡಬೇಕು. ಕಾಂಗ್ರೆಸ್ ಸರ್ಕಾರದಿಂದ ಬೇಜವಬ್ದಾರಿತನದಿಂದ ಆಡಳಿತ ನಡೆಯುತ್ತಿದೆ. ಯುದ್ದೋಪಾದಿಯಲ್ಲಿ ಗೇಟ್ ರಿಪೇರಿ ಕೆಲಸವಾಗಬೇಕಿತ್ತು. ಆದರೆ ಇಲ್ಲಿವರಗೆ ರಿಪೇರಿ ‌ಕೆಲಸ‌ ಆರಂಭವಾಗಿಲ್ಲʼʼ ಎಂದು ಹೇಳಿದ್ದಾರೆ.

ನೀರು ಉಳಿಸಬೇಕು: ಸಂಸದ ತುಕಾರಾಂ

ವಿಜಯನಗರ: ʼʼತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿಯಲು ಏನು ಕಾರಣ ಎನ್ನುವುದು ಗೊತ್ತಾಗಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯ‌ವೋ ತಾಂತ್ರಿಕ ತೊಂದರೆಯೋ ಎನ್ನುವುದು ತಿಳಿದು ಬಂದಿಲ್ಲ. ಮೊದಲು ಹರಿದು ಹೋಗುತ್ತಿರುವ ನೀರನ್ನು ಉಳಿಸಬೇಕಿದೆ. ಈ ಬಗ್ಗೆ ಅಧಿಕಾರಿಗಳ ಜತೆಗೆ ಸಭೆ ನಡೆಸಿದ್ದೇನೆʼʼ ಎಂದ ಸಂಸದ ತುಕಾರಾಂ ತಿಳಿಸಿದ್ದಾರೆ.

ಜಲಾಶಯ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ʼʼಗೇಟ್ ದುರಸ್ತಿಗಾಗಿ ಪರಿಣಿತರನ್ನು ಕರೆಸುತ್ತಿದ್ದೇವೆ. ಈಗಾಗಲೇ ನೀರಾವರಿ ನಿಗಮದ ಎಂಡಿ ಬಂದಿದ್ದಾರೆ. ರೈತರು ಆತಂಕ ಪಡುವ ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರ ಮತ್ತು ನಾನು ರೈತರ ಜತೆ ಇದ್ದೇ ಇರುತ್ತೇವೆʼʼ ಎಂದು ತಿಳಿಸಿದ್ದಾರೆ.

ಬಾಗಿನ ಅರ್ಪಣೆ ಕಾರ್ಯಕ್ರಮ ಮುಂದೂಡಿಕೆ

ಸೋಮವಾರ (ಆಗಸ್ಟ್‌ 13) ನಿಗದಿಯಾಗಿದ್ದ ಹೇಮಾವತಿ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

Continue Reading

ಕರ್ನಾಟಕ

Tungabhadra Dam: ತುಂಗಭದ್ರಾ ಡ್ಯಾಂ ಗೇಟ್‌ ಚೈನ್‌ ಕಟ್‌; ನದಿಪಾತ್ರದಲ್ಲಿ ಪ್ರವಾಹ ಭೀತಿ

Tungabhadra Dam: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟಿನ ಚೈನ್‌ ತುಂಡಾಗಿ ಅಪಾರ ಪ್ರಮಾಣ ನೀರು ನದಿ ಪಾತ್ರದಕ್ಕೆ ಹರಿದು ಹೋಗುತ್ತಿದ್ದು, ಆತಂಕ ಸೃಷ್ಟಿಸಿದೆ. ಸ್ಥಳಕ್ಕೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಧಾವಿಸಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಸಂಪೂರ್ಣ ಭರ್ತಿಯಾಗಿದ್ದ ಜಲಾಶಯ ಗೇಟ್‌ಗೆ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಹೀಗಾಗಿ ತನ್ನಿಂದ ತಾನೇ ಓಪನ್ ಆಗಿದೆ.

VISTARANEWS.COM


on

Tungabhadra Dam
Koo

ಕೊಪ್ಪಳ / ವಿಜಯನಗರ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ (Tungabhadra Dam) 19ನೇ ಕ್ರಸ್ಟ್‌ ಗೇಟಿನ ಚೈನ್‌ ತುಂಡಾಗಿ ಅಪಾರ ಪ್ರಮಾಣ ನೀರು ನದಿ ಪಾತ್ರದಕ್ಕೆ ಹರಿದು ಹೋಗುತ್ತಿದ್ದು, ಆತಂಕ ಸೃಷ್ಟಿಸಿದೆ. ಸ್ಥಳಕ್ಕೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಧಾವಿಸಿ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.

ಒಂದೇ ಗೇಟ್‌ನಿಂದ 35 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಹರಿಯುತ್ತಿದ್ದು, ನದಿ ಪಾತ್ರದಲ್ಲಿರುವ ಜನರಲ್ಲಿ ಆತಂಕ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗಿರುವುಸಿಂದ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬಂದಿದೆ. ಸಂಪೂರ್ಣ ಭರ್ತಿಯಾಗಿದ್ದ ಜಲಾಶಯ ಗೇಟ್‌ಗೆ ಭಾರೀ ಪ್ರಮಾಣದಲ್ಲಿ ಹಾನಿ ಸಂಭವಿಸಿದೆ. ಹೀಗಾಗಿ ತನ್ನಿಂದ ತಾನೇ ಓಪನ್ ಆಗಿದೆ. ಜಲಾಶಯ ಇತಿಹಾಸದಲ್ಲೇ ಗೇಟ್ ಕಿತ್ತೋಗಿರುವುದು ಇದು ಮೊದಲ ಬಾರಿ.

ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು

ಶನಿವಾರ ರಾತ್ರಿ ಗೇಟ್‌ ಓಪನ್‌ ಆಗಿದ್ದು, ಕೂಡಲೇ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದರು. ವಿಜಯನಗರ ಜಿಲ್ಲಾ ಎಸ್‌ಪಿ ಶ್ರೀ ಹರಿಬಾಬು ಬಿ.ಎಲ್‌. ಆಗಮಿಸಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು. ಮಾತ್ರವಲ್ಲ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳು, ಅದಿಕಾರಿಗಳು ಅಲರ್ಟ್‌ ಆಗಿದ್ದಾರೆ. ವಿಜಯನಗರ ಶಾಸಕ ಗವಿಯಪ್ಪ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಮಧ್ಯರಾತ್ರಿಯಿಂದಲೇ ಡ್ಯಾಂ ಗೇಟ್ ಬಳಿ ಪೊಲೀಸರು ಜಮಾಯಿಸಿದ್ದು, ಪ್ರವೇಶ ನಿರಾಕರಿಸಲಾಗಿದೆ.

ಜಲಾಶಯದ 20 ಗೇಟ್‌ಗಳಿಂದ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಹರಿಬಿಡುವ ಸಾಧ್ಯತೆ ಇದೆ ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ತಿಳಿಸಿದರು. ʼʼಗೇಟ್ ಕಟ್ ಆಗಿರುವ ಕುರಿತು ಜಲ ಸಂಪನ್ಮೂಲ ಸಚಿವರಿಗೆ ಮಾಹಿತಿ ನೀಡಿಲಾಗಿದೆ. ಮುಖ್ಯಮಂತ್ರಿಗೂ ಮಾಹಿತಿ ನೀಡುವ ಪಯತ್ನ ನಡೆದಿದೆ. ಸುಮಾರು 60 ಟಿಎಂಸಿ ನೀರು ಜಲಾಶಯದಿಂದ ನದಿ ಮೂಲಕ ಹೊರ ಬಿಡಬೇಕಿದೆ. ಇಷ್ಟು ಪ್ರಮಾಣದ ನೀರು ಹೊರ ಹೋಗಲು ನಾಲ್ಕಕ್ಕೂ ಹೆಚ್ಚು ದಿನ ಬೇಕು. ಚೈನ್ ಲಿಂಕ್ ಕಟ್ ಆಗಿರುವ ಗೇಟ್ ಸರಿಪಡಿಸುವ ಬಗ್ಗೆ ವಿಶೇಷ ತಾಂತ್ರಿಕ ತಂಡ ಆಗಮಿಸಲಿದೆʼʼ ಎಂದು ಅವರು ಮಾಹಿತಿ ನೀಡಿದರು.

ತುಂಗಭದ್ರಾ ಜಲಾಶಯದ 19ನೇ ಗೇಟ್ ಸಂಪೂರ್ಣ ಡ್ಯಾಮೇಜ್ ಆಗಿರುವ ಸುದ್ದಿ ತಿಳಿಯುತ್ತಲೇ ವಿಜಯನಗರ ಶಾಸಕ ಗವಿಯಪ್ಪ ಅವರು ಸ್ವತಃ ಕಾರು ಚಲಾಯಿಸಿಕೊಂಡು ಡ್ಯಾಂಗೆ ಬಳಿಗೆ ಮಧ್ಯರಾತ್ರಿಯೇ ಆಗಮಿಸಿದರು. ಸ್ಥಳಕ್ಕೆ ಭೇಟಿ ನೀಡಿದ ವಿಜಯನಗರ ಎಸ್.ಪಿ ಹರಿಬಾಬು ಅವರಿಂದ ಶಾಸಕ ಗವಿಯಪ್ಪ ಮಾಹಿತಿ ಪಡೆದುಕೊಂಡರು.

ಸಿಇಎಲ್ ಭೇಟಿ

ಇನ್ನು ತುಂಗಭದ್ರಾ ನೀರಾವರಿ ವಲಯದ ಸಿಇಎಲ್ ಬಸವರಾಜ್ ಭೇಟಿ ನೀಡಿ ಪರಿಶೀಲಿಸಿದರು. ʼʼ19ನೇ ಕ್ರಸ್ಟಗೇಟ್ ಡಿಲೀಂಕ್ ಆಗಿ‌ ಕಟ್ ಆಗಿ ಹೋಗಿದೆ. ಇದೀಗ ಒಂದೇ ಕಡೆ ಒತ್ತಡ ಬೀಳುವುದನ್ನು ಕಡಿಮೆ ಮಾಡಲಾಗಿದೆ. ಉಳಿದ ಗೇಟ್‌ಗಳನ್ನು ಓಪನ್ ಮಾಡಿ ನೀರು ಬಿಡಲಾಗುತ್ತಿದೆ. ಭಾನುವಾರ ಬೆಂಗಳೂರಿನಿಂದ ತಜ್ಞರ ತಂಡ ಡ್ಯಾಂಗೆ ಬರಲಿದೆʼʼ ಎಂದು ತಿಳಿಸಿದರು. ʼʼಪ್ರತಿವರ್ಷ ಡ್ಯಾಂ ಗೇಟ್‌ಗಳನ್ನು ದುರಸ್ತಿ ಮಾಡಲಾಗುತ್ತದೆ. ಡ್ಯಾಂಗೆ ಯಾವುದೇ ತೊಂದರೆ ಇಲ್ಲ. ಹೀಗಾಗಿ ಆತಂಕಪಡಬೇಕಾಗಿಲ್ಲ. ಇರುವ ನೀರಲ್ಲಿಯೇ ಕೆಲಸ ಮಾಡಲು ಆಗುತ್ತಾ, ಇಲ್ವಾ ಅನ್ನೋದನ್ನು ತಜ್ಞರ ತಂಡ ನಿರ್ಧರಿಸಲಿದೆ. 69 ವರ್ಷದ ಡ್ಯಾಂ ಇತಿಹಾಸದಲ್ಲಿ ಮೊದಲ ಬಾರಿಗೆ ಈ ರೀತಿಯ ಘಟನೆ ಆಗಿದೆʼʼ ಎಂದು ಮಾಹಿತಿ ನೀಡಿದರು.

30 ಗೇಟ್ ಓಪನ್‌

ಸದ್ಯ 30 ಗೇಟ್‌ಗಳನ್ನು ತೆರೆದು ಟಿಬಿ ಬೋರ್ಡ್ ನೀರು ಹರಿಯಬಿಟ್ಟಿದೆ. ಇದರಿಂದ ಹಂಪಿ, ಜನತಾ ಪ್ಲಾಟ್, ಕಂಪಿ ಭಾಗದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ರಾತ್ರೋರಾತ್ರಿ ನದಿ ಪಾತ್ರದ ಜನರಲ್ಲಿ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ಸದ್ಯಕ್ಕೆ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ಹೊರಹರಿವು ಇದ್ದು, ಸಂಜೆ ವೇಳೆಗೆ ಜಾಸ್ತಿಯಾಗಲಿದೆ. 2.5 ಲಕ್ಷ ಕ್ಯೂಸೆಕ್ ನೀರು ನದಿಗೆ ಹರಿಯಬಿಟ್ಟಲ್ಲಿ ಪ್ರವಾಹ ಎದುರಾಗಲಿದೆ.

ಸಚಿವ ‌ಶಿವರಾಜ್ ತಂಗಡಗಿ ಭೇಟಿ

ಕೊಪ್ಪಳ: ತುಂಗಭದ್ರಾ ಜಲಾಶಯಕ್ಕೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ‌ಶಿವರಾಜ್ ತಂಗಡಗಿ ಭೇಟಿ ನೀಡಿದರು. ʼʼಅಧಿಕಾರಿಗಳ ಜತೆ ಈ ಬಗ್ಗೆ ಮಾತನಾಡಿದ್ದೇನೆ. ಸದ್ಯದ ಮಟ್ಟಿಗೆ 60ರಿಂದ 65 ಟಿಎಂಸಿಗೂ ಹೆಚ್ಚು ನೀರು ಖಾಲಿ ಮಾಡಬೇಕಾಗುತ್ತದೆ. 20 ಅಡಿ ನೀರು ಖಾಲಿಯಾದ್ರೆ ಮಾತ್ರ ಸಮಸ್ಯೆ ಏನಾಗಿದೆ ಅಂತ ಗೊತ್ತಾಗಲಿದೆ. ಹೀಗಾಗಿ ಡ್ಯಾಂ ನಲ್ಲಿರುವ ನೀರನ್ನು ಖಾಲಿ ಮಾಡುವ ಅನಿವಾರ್ಯತೆ ಉಂಟಾಗಿದೆ. ಡ್ಯಾಂ ನಿರ್ಮಾಣ ಸಮಯದಲ್ಲಿನ ಡಿಸೈನ್ ತರಿಸಲಾಗುತ್ತಿದೆ. ನೀರಿನ ಒತ್ತಡ ಹೆಚ್ಚಿರುವುದರಿಂದ ಕೆಳಗಿಳಿದು ಕೆಲಸ ಮಾಡಲು ಆಗುತ್ತಿಲ್ಲ. ಸದ್ಯ 1 ಲಕ್ಷ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. 2.35 ಲಕ್ಷ ಕ್ಯೂಸೆಕ್ ನೀರು ಬಿಟ್ಟರು ನದಿ ಪಾತ್ರದಲ್ಲಿ ಯಾರಿಗೂ ಯಾವುದೇ ತೊಂದರೆ ಆಗುವುದಿಲ್ಲ. 2.50 ಲಕ್ಷ ಕ್ಯೂಸೆಕ್ ದಾಟಿದರೆ ಪ್ರವಾಹದ ಭೀತಿ ಎದುರಾಗಲಿದೆ. ಘಟನೆ ಬಗ್ಗೆ ಸಿಎಂ ಮತ್ತು ಡಿಸಿಎಂಗೆ ಮಾಹಿತಿ ನೀಡಲಾಗುತ್ತಿದೆʼʼ ಎಂದರು. ಇಂದು ಬೆಂಗಳೂರು, ಹೈದ್ರಾಬಾದ್, ಚೆನ್ನೈಯಿಂದ ತಜ್ಞರ ತಂಡ ಆಗಮಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದೂ ತಿಳಿಸಿದರು.

ಇದನ್ನೂ ಓದಿ: Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Continue Reading
Advertisement
Hindenburg Report
ದೇಶ20 mins ago

Hindenburg Report : ಮೋದಿ ಹೆದರುತ್ತಿದ್ದಾರೆ; ಹಿಂಡೆನ್​ಬರ್ಗ್​ ವರದಿ ಉಲ್ಲೇಖಿಸಿ ಸೆಬಿ, ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

Hindenburg report
ಪ್ರಮುಖ ಸುದ್ದಿ58 mins ago

Hindenburg Report : ಹುರುಳಿಲ್ಲದ ಆರೋಪ; ಹಿಂಡೆನ್​ಬರ್ಗ್​ ವರದಿ ಬಗ್ಗೆ ಸೆಬಿ ಸ್ಪಷ್ಟನೆ

Paris Olympics 2024
ಕ್ರೀಡೆ2 hours ago

Paris Olympics 2024 : ಸಮಾರೋಪ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಐಫೆಲ್​ ಟವರ್​ ಏರಿ ಕುಳಿತ ಆಗಂತುಕ!

Self Harming
ಕರ್ನಾಟಕ2 hours ago

Self Harming: ಡೆತ್‌ ನೋಟ್‌ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

PR Sreejesh
ಕ್ರೀಡೆ2 hours ago

PR Sreejesh : ಮಲ್ಲು ಸ್ಟೈಲಲ್ಲಿ ಮುಂಡು ಉಟ್ಟು ಐಫೆಲ್ ಟವರ್ ಮುಂದೆ ಫೋಟೋ ತೆಗಿಸಿಕೊಂಡ ಪಿ.ಆರ್​ ಶ್ರೀಜೇಶ್​​

Vinesh Phogat
ಕ್ರೀಡೆ3 hours ago

Vinesh Phogat : ವಿನೇಶ್​ಗೆ ಬೆಳ್ಳಿಯ ಪದಕ ನೀಡಬೇಕು; ಸೌರವ್​ ಗಂಗೂಲಿ ಆಗ್ರಹ

Tungabhadra Dam
ಕರ್ನಾಟಕ3 hours ago

Tungabhadra Dam: ತುಂಗಭದ್ರಾ ಡ್ಯಾಂ ಗೇಟು ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿ.ಕೆ. ಶಿವಕುಮಾರ್

Paris Olympics 2024
ಕ್ರೀಡೆ3 hours ago

Paris Olympics 2024 : ನಮ್ಮ ರಾಜಕಾರಣಿಗಳು ಕ್ರೀಡಾಕ್ಷೇತ್ರದಲ್ಲೂ ರಾಜಕೀಯ ಮಾಡ್ತಾರೆ; ಉಕ್ರೇನ್​ ಸಂಸದ ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದಾರೆ!

Yakshagana Dance
ಬೆಂಗಳೂರು4 hours ago

Yakshagana Dance : ಯಕ್ಷಗಾನ ಕಲೆ ಪುರುಷರಿಗಷ್ಟೇ ಸೀಮಿತವಲ್ಲ: ಡಾ. ಧರಣೀದೇವಿ ಮಾಲಗತ್ತಿ

Road Accident
ಕರ್ನಾಟಕ4 hours ago

Road Accident: ಬೆಂಗಳೂರು-ತುಮಕೂರು ಹೆದ್ದಾರಿಯಲ್ಲಿ ಟೆಂಪೋಗೆ ಕ್ಯಾಂಟರ್‌ ಡಿಕ್ಕಿ; ಮೂವರ ದುರ್ಮರಣ, ಐವರ ಸ್ಥಿತಿ ಗಂಭೀರ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌