Hiriyuru News: ಹಿರಿಯೂರು ಬಿಜೆಪಿ ಶಾಸಕಿಗೆ ಬಿಗ್ ಶಾಕ್; ಪಕ್ಷ ತೊರೆದು ಕೈ ಹಿಡಿಯಲಾರಂಭಿಸಿದ ಆಪ್ತರು! - Vistara News

ಚಿತ್ರದುರ್ಗ

Hiriyuru News: ಹಿರಿಯೂರು ಬಿಜೆಪಿ ಶಾಸಕಿಗೆ ಬಿಗ್ ಶಾಕ್; ಪಕ್ಷ ತೊರೆದು ಕೈ ಹಿಡಿಯಲಾರಂಭಿಸಿದ ಆಪ್ತರು!

ಹಿರಿಯೂರಿನಲ್ಲಿ (Hiriyuru News) ಬಿಜೆಪಿ ಶಾಸಕಿ ಪೂರ್ಣಿಮಾ ಅವರಿಗೆ ಆಪ್ತವಾಗಿದ್ದ ಇಬ್ಬರು ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್‌ ಜತೆ ಕೈ ಜೋಡಿಸಿದ್ದಾರೆ. ಮಾಜಿ ಸಚಿವ ಡಿ.ಸುಧಾಕರ್ ಅವರು ಕಾಂಗ್ರೆಸ್‌ ಶಾಲನ್ನು ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಿರಿಯೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪಕ್ಷಾಂತರ ಪರ್ವ ಜೋರಾಗಿದ್ದು, ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ. ಶಾಸಕಿಗೆ ಹತ್ತಿರವಾಗಿದ್ದ ತನ್ನ ಸಮುದಾಯದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕರಿಯಮ್ಮ ಹಾಗೂ ಅವರ ಪತಿ ದಿಂಡವಾರ ಶಿವಣ್ಣ ಮತ್ತು ಮಾಜಿ ನಗರಸಭಾ ಸದಸ್ಯ ಜಿ. ಪ್ರೇಮ್ ಕುಮಾರ್ ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ, ಕಾಂಗ್ರೆಸ್ ಪಕ್ಷ (Hiriyuru News) ಸೇರಿಕೊಂಡಿದ್ದಾರೆ.

ಪಕ್ಷಾಂತರಗೊಂಡ ಇಬ್ಬರೂ ನಾಯಕರ ಮನೆಗೆ ಭೇಟಿ ನೀಡಿದ ಮಾಜಿ ಸಚಿವ ಡಿ.ಸುಧಾಕರ್ ಅವರು ಪಕ್ಷದ ಶಾಲು ಹಾಕಿ ಸ್ವಾಗತಿಸಿಕೊಂಡಿದ್ದಾರೆ. ಕಳೆದ ಚುನಾವಣೆ ಸಮಯದಲ್ಲಿ ಈ ಇಬ್ಬರು ನಾಯಕರು ಬಿಜೆಪಿ ಪಕ್ಷಕ್ಕೆ ಬೆಂಬಲ ನೀಡಿ ಪೂರ್ಣಿಮಾ ಅವರ ಗೆಲುವಿಗೆ ಶ್ರಮಿಸಿದ್ದರು. ಕಾರಣಾಂತರಗಳಿಂದ ಶಾಸಕಿಯಿಂದ ಅಂತರ ಕಾಯ್ದುಕೊಂಡಿದ್ದ ಇಬ್ಬರು ನಾಯಕರು ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸುತ್ತಾ ಬಂದಿದ್ದರು. ಮಂಗಳವಾರ (ಏ. 4) ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

ಇದನ್ನೂ ಓದಿ: Road accident : ಹಿರಿಯೂರು ಬಳಿ ಬಸ್‌, ಟಾಟಾ ಏಸ್‌, ಲಾರಿಗಳ ಸರಣಿ ಅಪಘಾತ; ಒಬ್ಬ ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

ಈ ಕುರಿತು ಮಾತನಾಡಿದ ಮಾಜಿ ಸಚಿವ ಡಿ.ಸುಧಾಕರ್ ಅವರು, “ಬಿಜೆಪಿ ಪಕ್ಷದ ದುರಾಡಳಿತ, ಬೆಲೆ ಏರಿಕೆ, ಜನಸಾಮಾನ್ಯರ ವಿರೋಧಿ ಆಡಳಿತ ನೋಡಿ ಬೇಸತ್ತು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ್ದಾರೆ. ಸ್ಥಳೀಯ ಶಾಸಕರ ಆಡಳಿತ ಭ್ರಷ್ಟಾಚಾರಕ್ಕೆ ಬೇಸತ್ತಿರುವ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ಹಿರಿಯೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವು ದೊರಕಲಿದೆ” ಎಂದು ತಿಳಿಸಿದರು.

ಶಾಸಕಿಗೆ ಹಿನ್ನಡೆ:

ಹಿರಿಯೂರಿನಲ್ಲಿ ದಿನ ಕಳೆದಂತೆ ಬಿಜೆಪಿ ಪಕ್ಷಕ್ಕಿದ್ದ ಬೆಂಬಲದಲ್ಲಿ ಕುಸಿತ ಕಾಣುತ್ತಿದೆ. ಕ್ಷೇತ್ರದಲ್ಲಿ ದಿನ ಬೆಳಗಾದರೆ ಬಿಜೆಪಿ ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿದ್ದಾರೆ. ಇದರಿಂದ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಅವರಿಗೆ ದೊಡ್ಡ ಹಿನ್ನಡೆ ಉಂಟಾಗಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಈಗಾಗಲೇ ಮಾಜಿ ನಗರಸಭೆ ಅಧ್ಯಕ್ಷ ಟಿ. ಚಂದ್ರಶೇಖರ್, ಎಸ್‌ಟಿ ಮೋರ್ಚಾದ ಅಧ್ಯಕ್ಷ ಮಂಜುನಾಥ್, ಮಾಜಿ ನಗರಸಭಾ ಸದಸ್ಯ ಪ್ರೇಮ್ ಕುಮಾರ್, ಮಾಜಿ ಜಿಪಂ ಸದಸ್ಯೆ ಕರಿಯಮ್ಮ, ಕಾಡುಗೊಲ್ಲ ಸಮುದಾಯ ಮುಖಂಡ ದಿಂಡವಾರ ಶಿವಣ್ಣ ಸೇರಿದಂತೆ ಮತ್ತಿತರರು ಪಕ್ಷ ತೊರೆದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Karnataka Weather Forecast : ರಾಜ್ಯಾದ್ಯಂತ ಮಳೆಯಾಗುವ ನಿರೀಕ್ಷೆ ಇದ್ದು, 8 ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದ್ದು (Rain alert) ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ರಾಮನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಈ ಪ್ರದೇಶದ ಉಳಿದ ಭಾಗಗಳಲ್ಲಿ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಲಿದೆ.

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದ್ದರೆ, ಉಳಿದ ಭಾಗಗಳಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಕೂಡಿರಲಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ಉಷ್ಣಾಂಶ 31 ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಭಾರೀ ಮಳೆಗೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

Karnataka Weather : ತುಮಕೂರಿನಲ್ಲಿ ಸಿಡಿಲಿಗೆ ಜಾನುವಾರೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯಗಳಾಗಿವೆ. ಚಿಕ್ಕಮಗಳೂರಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ. ರಾಯಚೂರು, ವಿಜಯಪುರ ಸೇರಿದಂತೆ ಹಲವೆಡೆ ಮಳೆಯು ಅವಾಂತರವನ್ನೇ (Rain News) ಸೃಷ್ಟಿಸಿದೆ.

VISTARANEWS.COM


on

By

karnataka weather Forecast
Koo

ತುಮಕೂರು/ ಚಿಕ್ಕಮಗಳೂರು: ರಾಜ್ಯದ ಹಲವೆಡೆ ಮಳೆಯು (Karnataka Weather) ಅಬ್ಬರಿಸುತ್ತಿದ್ದು, ಅವಾಂತರವನ್ನೇ ಸೃಷ್ಟಿ ಮಾಡಿದೆ. ತುಮಕೂರಲ್ಲಿ ಸಿಡಿಲಿಗೆ ಹಸುವೊಂದು ಬಲಿಯಾಗಿದ್ದು, ನಾಲ್ಕು ಜಾನುವಾರುಗಳಿಗೆ ಸುಟ್ಟ ಗಾಯವಾಗಿವೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದಲ್ಲಿ ಘಟನೆ ನಡೆದಿದೆ.

ಕರಿಯಪ್ಪ ಎಂಬುವರಿಗೆ ಸೇರಿದ ಜಾನುವಾರುಗಳನ್ನು ತೋಟದಲ್ಲಿದ್ದ ಗುಡಿಸಿಲಿನ ಕೊಟ್ಟಿಗೆಯಲ್ಲಿ ಕಟ್ಟಿದ್ದರು. ಆದರೆ ಸಿಡಿಲು ಬಡಿದು ಕೊಟ್ಟಿಗೆ ಹೊತ್ತಿ ಉರಿದಿದೆ. ಈ ವೇಳೆ ಬೆಂಕಿ ನಂದಿಸಲು ಹೋದ ಮಹಾಲಿಂಗನಿಗೂ ಗಾಯವಾಗಿದೆ. ಕರಿಯಪ್ಪ ಹಾಗೂ ಆತನ ಮಗ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಿಡಿಲು ಬಡಿದ ಪರಿಣಾಮ ಗುಡಿಸಲು ಭಸ್ಮವಾಗಿದೆ. ಅರಸಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Weather Forecast

ಚಿಕ್ಕಮಗಳೂರಲ್ಲಿ ಮಳೆ ಅವಾಂತರ

ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದಿದೆ. ಭಾರಿ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿತ್ತು. ಇದರಿಂದಾಗಿ ಮೇಲ್ಪಾಲ್, ಕೊಪ್ಪ, ಬಾಳೆಹೊನ್ನೂರು ರಸ್ತೆ ಸಂಪರ್ಕ ಕಡಿತವಾಗಿದೆ. ಎನ್‌ಆರ್ ಪುರ ತಾಲೂಕಿನ ಅರಳಿ ಕೊಪ್ಪ ತಿರುವಿನಲ್ಲಿ ಘಟನೆ ನಡೆದಿದೆ. ರಸ್ತೆಗೆ ಮರ ಬಿದ್ದ ಕಾರಣಕ್ಕೆ ಮಾರ್ಗ ಬಂದ್‌ ಆಗಿದ್ದು, ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಬದಲಿ ಮಾರ್ಗದಲ್ಲಿ ಸುತ್ತಾಡಿ ಸಂಚರಿಸುವಂತಾಯಿತು.

ಇತ್ತ ಭಾರಿ ಗಾಳಿ ಮಳೆಗೆ ಚಿಕ್ಕಮಗಳೂರು ತಾಲೂಕಿನ ಗಾಳಿಹಳ್ಳಿ, ತಿಮ್ಮನಹಳ್ಳಿ ಗ್ರಾಮಗಳು ತತ್ತರಿಸಿ ಹೋಗಿವೆ. ರಸ್ತೆಯ ಮೇಲೆ ನದಿಯಂತೆ ನೀರು ಹರಿಯುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಸಂಚಾರ ಸ್ಥಗಿತವಾಗಿತ್ತು.

ಇದನ್ನೂ ಓದಿ: Murder case : ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

Karnataka Weather Forecast

ರಾಯಚೂರಿನಲ್ಲಿ ಮಳೆಗೆ ಕೊಚ್ಚಿ ಹೋದ ರಸ್ತೆ

ರಾಯಚೂರಿನಲ್ಲಿ ಗುರುವಾರ ರಾತ್ರಿ ಸುರಿದ ಮಳೆಗೆ ರಸ್ತೆಯೇ ಕೊಚ್ಚಿ ಹೋಗಿದೆ. ರಾಯಚೂರು ಗ್ರಾಮೀಣ ತಾಲೂಕಿನ ಬಿ ಯದ್ಲಾಪುರ ಗ್ರಾಮದಲ್ಲಿ ಹಳ್ಳದ ನೀರಿನ ರಭಸಕ್ಕೆ ರಸ್ತೆ ಕೊಚ್ಚಿ ಹೋಗಿದೆ. ಸದ್ಯ ಬಿ ಯದ್ಲಾಪುರ ಮತ್ತು ಗಿಲ್ಲೆಸಗೂರು ಕ್ಯಾಂಪ್ ನಡುವಿನ ಸಂಪರ್ಕ ಕಡಿತವಾಗಿದೆ. ರಸ್ತೆ ಕಡಿತವಾಗಿದ್ದರಿಂದ ರಾಯಚೂರು ಮತ್ತು ಮಂತ್ರಾಲಯಕ್ಕೆ ತೆರಳುವವರಿಗೆ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಪರದಾಡಬೇಕಾಯಿತು.

Karnataka Weather Forecast

ವಿಜಯಪುರದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮರ

ವಿಜಯಪುರ ನಗರದ ನಾಲಬಂದ್ ಗಲ್ಲಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಭಾರಿ ಮಳೆಯಿಂದಾಗಿ ತೆಂಗಿನ ಗರಿಯು ವಿದ್ಯುತ್ ಕಂಬದ ಮೇಲೆ ಬಿದ್ದಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ತೆಂಗಿನ ಮರದಲ್ಲಿ ಬೆಂಕಿ ಆವರಿಸಿತ್ತು. ಇದರಿಂದಾಗಿ ಕೆಲಕಾಲ ಆತಂಕ ಉಂಟಾಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರು, ಕೊಪ್ಪಳದಲ್ಲಿ ಮಳೆಗೆ ತುಂಬಿ ಹರಿದ ಹಳ್ಳ ಕೊಳ್ಳಗಳು

ಚಿಕ್ಕಮಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿದವು. ಕಳಸಾಪುರ, ಬೆಳವಾಡಿ, ಕೆ.ಬಿ ಹಾಳ್, ಈಶ್ವರ ಹಳ್ಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ. ತುಂಗ, ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಆಗಿದೆ. ಕುದುರೆಮುಖ ಪರ್ವತ ಶ್ರೇಣಿಯಲ್ಲಿ ಭಾರಿ ಮಳೆ ಹಿನ್ನೆಲೆ ತುಂಗಾ ಹಾಗೂ ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ಅಲ್ಪ ಪ್ರಮಾಣದ ಏರಿಕೆ ಆಗಿದೆ.

ಕೊಪ್ಪಳದಲ್ಲೂ ಭಾರಿ ಮಳೆಯಾಗುತ್ತಿದ್ದು, ಹಳ್ಳ- ಕೊಳ್ಳಗಳು ತುಂಬಿ ಹರಿಯುತ್ತಿವೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಗುಂಡೂರು ಗ್ರಾಮದಲ್ಲಿ ಬ್ರಿಡ್ಜ್ ಮುಳುಗಡೆಗೆ ಕೆಲವೇ ಅಡಿಗಳು ಬಾಕಿ ಇದೆ. ಲಕ್ಷ್ಮೀ ಕ್ಯಾಂಪ್-ಗುಂಡೂರು ರಸ್ತೆ ಸಂಪರ್ಕ ಸೇತುವೆ‌ ಇದಾಗಿದೆ. ಇನ್ನೂ ಬ್ರಿಡ್ಜ್ ಮೇಲೆ ನಿಂತು ತುಂಬಿ ಹರಿಯುತ್ತಿರುವ ಹಳ್ಳವನ್ನು ಕಣ್ತುಂಬಿಕೊಂಡರು.

ರಾಯಚೂರಿನಲ್ಲಿ ವಾಹನ ಸವಾರರ ಪರದಾಟ

ರಾಯಚೂರಲ್ಲಿ ರಾತ್ರಿ ಸುರಿದ ಮಳೆಗೆ ವಾಹನ ಸವಾರರು ಪರದಾಡಿದರು. ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ರೈಲ್ವೆ ಬಿಡ್ಜ್ ಕೆಳಗೆ ನೀರು ನಿಂತು, ತಗ್ಗು ಗುಂಡಿ ತಪ್ಪಿಸಿ ವಾಹನ ಚಲಾಯಿಸಲು ಸವಾರರು ಹರಸಾಹಸ ಪಟ್ಟರು. ರಾಯಚೂರು-ಹೈದ್ರಬಾದ್ ಮಾರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. 2 ಬದಿಯಲ್ಲಿ ಕಿಲೋ ಮೀಟರ್ ಗಟ್ಟಲೆ ಸಾಲುಗಟ್ಟಿ ವಾಹನಗಳು ನಿಂತಿದ್ದವು. ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಇಲ್ಲದೆ ಇರುವುದೇ ಈ ಅವಾಂತರಕ್ಕೆ ಕಾರಣ ಎನ್ನಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Rain News : ರಾಜ್ಯಾದ್ಯಂತ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಬಿಸಿಲಿನಿಂದ ಕಂಗೆಟ್ಟ ಜನತೆಗೆ ಮಳೆಯು ತತ್ತರಿಸುವಂತೆ ಮಾಡಿದೆ. ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು : ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ರಾಜ್ಯಾದ್ಯಂತ ಪ್ರತ್ಯೇಕ ಕಡೆಯಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು (Rain News) ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚಾಮರಾಜನಗರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಉಳಿದ ಉಳಿದ ಭಾಗಗಳಲ್ಲಿ ಹಗುರ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಅನುಕ್ರಮವಾಗಿ 33 ಮತ್ತು 23 ಡಿ.ಸೆ ಇರಲಿದೆ.

ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇತರ ಪ್ರದೇಶಗಳಲ್ಲಿ ಸಣ್ಣ ಪ್ರಮಾಣದಲ್ಲಿ ಇರಲಿದೆ. ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಇಲ್ಲೆಲ್ಲ ಭಯಂಕರ ಮಳೆ

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗುಡುಗು ಮತ್ತು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಕೊಟ್ಟೂರು ಬಸ್ ಸ್ಟ್ಯಾಂಡ್‌ನಲ್ಲಿ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

ವಿಜಯನಗರದ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದರು.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿತ್ತು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದರು.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Karnataka Weather Forecast : ರಾಜ್ಯದ ವಿವಿಧೆಡೆ ಮಳೆಯು ಅಬ್ಬರಿಸುತ್ತಿದೆ. ಭಾರಿ ಮಳೆಗೆ ಕೊಟ್ಟೂರು ಬಸ್ ನಿಲ್ದಾಣವು ಕೆರೆಯಾಗಿ ಪರಿವರ್ತನೆ ಆಗಿತ್ತು. ಬಲಿಗಾಗಿ ಕಾಯುತ್ತಿದ್ದ ದೊಡ್ಡ ಚರಂಡಿಯೊಂದು ಬಾಯ್ತೆರೆದಿತ್ತು. ಸ್ವಲ್ಪ ಯಾಮಾರಿದ್ರೂ ತಾಯಿ-ಮಗ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು.

VISTARANEWS.COM


on

By

Karnataka Weather Forecast
Koo

ವಿಜಯನಗರ/ಚಿಕ್ಕಮಗಳೂರು: ರಾಜ್ಯಾದ್ಯಂತ ಮಳೆಯಾಟ (Karnataka Weather Forecast) ಜೋರಾಗಿದೆ. ನಿನ್ನೆ ಬುಧವಾರ ಕೊಟ್ಟೂರು ಪಟ್ಟಣದಲ್ಲಿ ಸುರಿದ ಭಾರಿ ಮಳೆಗೆ (Heavy Rain) ಕೊಟ್ಟೂರು ಬಸ್ ನಿಲ್ದಾಣ ಸಂಪೂರ್ಣ ಜಲಾವೃತ ಆಗಿತ್ತು. ಈ ವೇಳೆ ಬಸ್ ನಿಲ್ದಾಣ ಬಳಿಯ ದೊಡ್ಡ ಚರಂಡಿಗೆ ರಭಸವಾಗಿ ಮಳೆ ನೀರು ಹರಿದು ಹೋಗುತ್ತಿತ್ತು. ಅದೇ ಚರಂಡಿ ಪಕ್ಕದಲ್ಲಿ ನಿಧಾನವಾಗಿ ನಡೆದುಕೊಂಡು ಬರುವಾಗ ತಾಯಿ -ಮಗ ಇಬ್ಬರು ಆಯ ತಪ್ಪಿ ಬಿದ್ದಿದ್ದಾರೆ. ಒಂದು ಕೈಯಲ್ಲಿ ಮಗ, ಇನ್ನೊಂದು ಕೈಯಲ್ಲಿ ಲಗೇಜ್‌ ಹಿಡಿದು ಬರುವಾಗ ಬಿದ್ದಿದ್ದಾರೆ.

ಈ ಸಂದರ್ಭದಲ್ಲಿ ಆಚೆ – ಇಚೆ ಹೆಜ್ಜೆ ಇಟ್ಟಿದ್ದರೂ ಚರಂಡಿ ನೀರಲ್ಲಿ ಕೊಚ್ಚಿ ಹೋಗುತ್ತಿದ್ದರು. ಕೊಟ್ಟೂರು ಬಸ್ ನಿಲ್ದಾಣದಲ್ಲಿ ತಾಯಿ – ಮಗುವಿನ ಪರದಾಟದ ವಿಡಿಯೋ ಅಲ್ಲಿದ್ದ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಬಸ್ ನಿಲ್ದಾಣದಲ್ಲಿ ಇಷ್ಟೆಲ್ಲ ಅವ್ಯವಸ್ಥೆ ಇದ್ದರೂ ತಿರುಗಿ ನೋಡದ ಅಧಿಕಾರಿಗಳು, ಶಾಸಕರ ವಿರುದ್ಧ ಪ್ರಯಾಣಿಕರು ಕಿಡಿಕಾರಿದರು.

Karnataka Weather Forecast

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಬಳಿಯೇ ಸರ್ಕಾರಿ ಆಸ್ಪತ್ರೆ ಇದೆ. ನೂರಾರು ಜನರು ಇದೇ ಮಾರ್ಗದಲ್ಲಿ ಓಡಾಡುತ್ತಾರೆ. ಬಾಯ್ತೆರೆದಿರುವ ದೊಡ್ಡ ಚರಂಡಿ ಬಲಿಗಾಗಿ ಕಾಯುತ್ತಿದೆ. ಇದನ್ನೂ ಮುಚ್ಚಿಸಿಬೇಕಿದ್ದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಕೊಟ್ಟೂರು ಬಸ್ ನಿಲ್ದಾಣದಲ್ಲಿ ಮಳೆಯಿಂದ ಅವಾಂತರದ ಸುದ್ದಿ ಪ್ರಸಾರ ಆಗುತ್ತಿದ್ದಂತೆ ಸ್ಥಳಕ್ಕೆ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ್ ನಾಯಕ್, ವಿಜಯನಗರ ಡಿಸಿ ಜಗದೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸ್ ನಿಲ್ದಾಣ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಬಸ್ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳ ವೀಕ್ಷಿಸಿದರು.

ಇದನ್ನೂ ಓದಿ: Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

ಹಾವೇರಿಯಲ್ಲಿ ಸಿಡಿಲಿಗೆ ಯುವಕ ಬಲಿ

ಹಾವೇರಿ ಜಿಲ್ಲೆಯಾದ್ಯಂತ ಗುಡುಗು ಸಿಡಿಲಿನ ಆರ್ಭಟಕ್ಕೆ ಯುವಕ ಬಲಿಯಾಗಿದ್ದಾನೆ. ಹಾವೇರಿ ತಾಲೂಕಿನ ಕುರುಬಗೊಂಡ ಗ್ರಾಮದಲ್ಲಿ ಘಟನೆ ನಡೆದಿದೆ. ದಯಾನಂದ (22) ಸಿಡಿಲು ಬಡಿದು ಮೃತಪಟ್ಟಿದ್ದಾನೆ. ಭಾರಿ ಮಳೆಯೊಂದಿಗೆ ಗುಡುಗು ಸಿಡಿಲಿನ ಆರ್ಭಟಕ್ಕೆ ದಯಾನಂದ ಮರದ ಕೆಳಗೆ ನಿಂತಿದ್ದ. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ದಯಾನಂದ ಮೃತಪಟ್ಟಿದ್ದಾನೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚಿಕ್ಕಮಗಳೂರಲ್ಲಿ ಮಲ್ಲಿಗೆ ಹೂವಿನಂತೆ ಸುರಿದ ಆಲಿಕಲ್ಲು

ಚಿಕ್ಕಮಗಳೂರಿನಲ್ಲಿ ಗುರುವಾರ ಸಂಜೆ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಮುತ್ತೋಡಿ ಅಭಯಾರಣ್ಯದ ಬಳಿ ಭಾರಿ ಆಲಿಕಲ್ಲು ಮಳೆಯು ಮಲ್ಲಿಗೆ ಹೂವಿನಂತೆ ಕಂಡು ಬಂತು. ಚಿಕ್ಕಮಗಳೂರು ತಾಲೂಕಿನ ಮಲ್ಲಂದೂರು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಾಗುತ್ತಿದ್ದು, ಪ್ರವಾಸಿಗರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಮಳೆ ನೀರಿಗಿಂತ ಆಲಿಕಲ್ಲು ಆರ್ಭಟ ಜೋರಾಗಿತ್ತು.

ಚಿಕ್ಕಮಗಳೂರಲ್ಲಿ ಮಳೆಗೆ ಮನೆ ಮೇಲೆ ಮರ ಬಿದ್ದು ಜಖಂ

ಚಿಕ್ಕಮಗಳೂರಿನಲ್ಲಿ ಗುರುವಾರವೂ ಮಳೆಯು ಆರ್ಭಟಿಸಿದೆ. ಭಾರಿ ಮಳೆಗೆ ತೆಂಗಿನ ಮರವೊಂದು ಮನೆಯ ಮೇಲೆ ಬಿದ್ದು ಅವಾಂತರವೇ ಸೃಷ್ಟಿಯಾಗಿತ್ತು. ಮನೆಯಲ್ಲಿದ್ದ ವಸ್ತುಗಳು, ದವಸ ಧಾನ್ಯಗಳು ನಾಶವಾಗಿದ್ದವು. ಗಾಳಿ- ಮಳೆಗೆ ಮನೆಯ ಹೆಂಚುಗಳು ಹಾರಿ ಹೋಗಿದ್ದವು. ಕಳಸ ಪಟ್ಟಣದಲ್ಲಿ ರಸ್ತೆಗೆ ಅಡ್ಡಲಾಗಿ ಮರ ಬಿದ್ದು ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಕಳಸ-ಕುದುರೆಮುಖ, ಬಾಳೆಹೊನ್ನೂರು-ಕಳಸ ಹೆದ್ದಾರಿಯಲ್ಲಿ ಸುಮಾರು 15 ಹೆಚ್ಚು ಕಡೆ ಮರ ಬಿದ್ದು, ಪ್ರಯಾಣಿಕರು ಪರದಾಟ ಅನುಭವಿಸಿದರು.

ಕಳಸ ತಾಲೂಕಿನ ನೆಲ್ಲಿಕೆರೆ, ಕಲ್ಮಕ್ಕಿ, ಕೈಮರ ಗ್ರಾಮಗಳಲ್ಲಿ ಹಲವು ಮನೆಗಳ ಮೇಲೆ ಬೃಹತ್ ಗಾತ್ರದ ಮರಗಳು ಬಿದ್ದಿತ್ತು. ಮನೆಗಳ ಹೆಂಚುಗಳು, ಕೊಟ್ಟಿಗೆಯ ಚಾವಣಿ ಹಾನಿಯಾಗಿತ್ತು. ಇನ್ನೂ ಮರಗಳ ಕೊಂಬೆ ತಂತಿಯ ಮೇಲೆ ಬಿದ್ದು ವಿದ್ಯುತ್ ಸ್ಥಗಿತವಾಗಿತ್ತು. ಧಾರವಾಡದಲ್ಲೂ ಗುಡುಗು, ಮಿಂಚು ಸಹಿತ ಮಳೆ ಸುರಿಯುತ್ತಿದೆ. ಗುರುವಾರ ಮಧ್ಯಾಹ್ನದ ವೇಳೆಗೆ ಮೋಡ ಕವಿದ ವಾತಾವರಣ ಇತ್ತು. ನೋಡ ನೋಡುತ್ತಿದ್ದಂತೆ ಮಳೆ ಸುರಿದಿದೆ.

ವಿಜಯನಗರದಲ್ಲಿ ಗಾಳಿ ಮಳೆಯ ಅವಾಂತರ

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಗಾಳಿ ಮಳೆಯ ಅವಾಂತರಕ್ಕೆ ಗುರುವಾರ ಸಂಜೆ ಸಾರ್ವಜನಿಕ ಗ್ರಂಥಾಲಯ ಮುಂಭಾಗ ವಿದ್ಯುತ್ ಕಂಬ ಧರೆಗೆ ಉರುಳಿದೆ. ಅದೇ ರೀತಿ ಪಟ್ಟಣದ ಕುಡಿಯುವ ನೀರಿನ ಘಟಕದ ಬಳಿ ಬೃಹತ್ ಮರ ಬಿದ್ದಿದೆ. ಇತ್ತ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಳೆ ನೀರು ನುಗ್ಗಿ ಚಿಕಿತ್ಸೆಗೆ ಬಂದಿದ್ದವರು ತೊಂದರೆ ಅನುಭವಿಸಿದರು. ಗಾಳಿಯ ರಭಸಕ್ಕೆ ವಿದ್ಯುತ್ ಕಂಬಗಳ ಮೇಲೆ ಮರಗಳು ಬಿದ್ದು ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಉಂಟಾಗಿತ್ತು.

ಕೆರೆಯಲ್ಲಿ ಮರಿಯಾನೆಯೊಂದಿಗೆ ಮಳೆಯಾಟ

ಮೈಸೂರಿನಲ್ಲೂ ಮಳೆಯಾಗುತ್ತಿದ್ದು, ಹನಿಗಳ ನಡುವೆ ಕೆರೆಯಲ್ಲಿ ಕಾಡಾನೆಗಳ ಜಲಕ್ರೀಡೆ ನೋಡುಗರ ಸೆಳೆದವು. ನಾಗರಹೊಳೆಯ ಕುಟ್ಟ ಬಳಿ ಕೆರೆಯಲ್ಲಿ ಆನೆಯು ಮರಿಯೊಂದಿಗೆ ಆಟವಾಡುತ್ತಿರುವ ದೃಶ್ಯ ಕಂಡು ಬಂತು. ಖ್ಯಾತ ವನ್ಯಜೀವಿ ಫೋಟೋಗ್ರಾಫರ್ ರವಿಶಂಕರ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ನಾಗರಹೊಳೆ ಅಭಯಾರಣ್ಯದಲ್ಲಿ ಸಫಾರಿಗರನ್ನು ಕೈಬೀಸಿ ಕರೆಯುತ್ತಿದೆ.

ಮೇ 21ರವರೆಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ

ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಬಿರುಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು, ಮಂಡ್ಯ, ಹಾಸನದಲ್ಲಿ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ, ಬೀದರ್‌, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿಯಲ್ಲಿ ರಭಸವಾಗಿ ಗಾಳಿ ಬೀಸಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶ ಇಳಿಕೆ

ಮುಂದಿನ 5 ದಿನ ಗರಿಷ್ಠ ಉಷ್ಣಾಂಶ 2-3 ಡಿ.ಸೆ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದಾಗಿ ವಾತಾವರಣವು ತಂಪಾಗಿ ಇರಲಿದೆ.

ಬೆಂಗಳೂರಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೆಡೆ ಸಂಜೆ ಅಥವಾ ರಾತ್ರಿ ನಂತರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಹಾಗೂ ಕನಿಷ್ಠ ತಾಪಮಾನವು ಕ್ರಮವಾಗಿ 30 ಹಾಗೂ 22 ಡಿ.ಸೆ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Nitin Gadkari
Lok Sabha Election 202443 seconds ago

Nitin Gadkari: ಯಾವ ಸರ್ಕಾರದಿಂದಲೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ನಿತಿನ್‌ ಗಡ್ಕರಿ

Mother Teresa Series life in the works
ಸಿನಿಮಾ11 mins ago

Mother Teresa Series: 30 ಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ‘ಮದರ್ ಥೆರೆಸಾʼ ಸಿರೀಸ್‌!

Virat Kohli
ಪ್ರಮುಖ ಸುದ್ದಿ31 mins ago

Virat kohli : ಗವಾಸ್ಕರ್​​ಗೆ ವಿರಾಟ್​ ಕೊಹ್ಲಿಯನ್ನು ಬೈಯುವುದೇ ಕೆಲಸ, ಇದೀಗ ಮತ್ತೊಂದು ಬಾರಿ ಟೀಕೆ

gold rate today aditi
ಚಿನ್ನದ ದರ33 mins ago

Gold Rate Today: ಬಂಗಾರದ ದರಗಳಲ್ಲಿ ಭಾರಿ ಏರಿಕೆ; ಇಂದು ಕೊಳ್ಳಲು ಮುಂದಾಗುತ್ತೀರಾ? ಗಮನಿಸಿ

Advisory for Students
ವಿದೇಶ33 mins ago

Advisory for Students: ಕಿರ್ಗಿಸ್ತಾನದಲ್ಲಿನ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಭಾರತ, ಪಾಕಿಸ್ತಾನ; ಕಾರಣವೇನು?

Gas Cylinder Blast
ಬೆಳಗಾವಿ41 mins ago

Gas Cylinder Blast: ಲೈಟ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟ; ಪತಿ- ಪತ್ನಿ ಗಂಭೀರ

crimes in karnataka
ಕ್ರೈಂ56 mins ago

Crimes in Karnataka: 4 ತಿಂಗಳಲ್ಲಿ ಮಿತಿಮೀರಿದ ಕ್ರೈಂ; ಸ್ತ್ರೀಯರೇ ಹೆಚ್ಚಿನ ಟಾರ್ಗೆಟ್!‌ ʼಗೃಹ ಇಲಾಖೆ ಇದೆಯಾ?ʼ ಎಂದು ಪ್ರಶ್ನಿಸಿದ ಎಚ್‌ಡಿಕೆ

Kiara Advani Makes Cannes Debut In Thigh-High Slit Dress
ಬಾಲಿವುಡ್1 hour ago

Cannes 2024: ಕಾನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಶ್ವೇತ ವರ್ಣದ ಗೌನ್​ ಧರಿಸಿ ಮಿಂಚಿದ ಕಿಯಾರ! ಇಲ್ಲಿದೆ ವಿಡಿಯೊ

Accident Case in Mysuru
ಮೈಸೂರು1 hour ago

Accident Case : ಟ್ರ್ಯಾಕ್ಟರ್ ರೋಟವೇಟರ್‌ಗೆ ಸಿಲುಕಿ ಬಾಲಕನ ದೇಹ ಛಿದ್ರ ಛಿದ್ರ

JP Nadda
Lok Sabha Election 20242 hours ago

JP Nadda: ಬಿಜೆಪಿ ಈಗ ಬೆಳೆದಿದೆ, ಸಶಕ್ತವಾಗಿದೆ; ಆರ್‌ಎಸ್‌ಎಸ್ ನೆರವಿನ ಪ್ರಶ್ನೆಗೆ ನಡ್ಡಾ ಉತ್ತರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ16 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌