Gold ornaments worth Rs 44 lakh seized in Dharwad Karnataka Election: ಧಾರವಾಡದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 44 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ - Vistara News

ಕರ್ನಾಟಕ

Karnataka Election: ಧಾರವಾಡದಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 44 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

Karnataka Election: ಬೆಳಗಾವಿಯಿಂದ ಧಾರವಾಡಕ್ಕೆ ಬರುತ್ತಿದ್ದ ಸರ್ಕಾರಿ ಬಸ್‌ನಲ್ಲಿ ವ್ಯಕ್ತಿಯೊಬ್ಬರು ಚಿನ್ನಾಭರಣ ಸಾಗಿಸುತ್ತಿದ್ದರು. ತಪಾಸಣೆ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Gold ornaments worth Rs 44 lakh seized in Dharwad
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಧಾರವಾಡ: ವಿಧಾನಸಭೆ ಚುನಾವಣೆ (Karnataka Election) ಹಿನ್ನೆಲೆಯಲ್ಲಿ ಎಲ್ಲೆಡೆ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಬಿಗಿಗೊಳಿಸಲಾಗಿದೆ. ಈ ನಡುವೆ ತಾಲೂಕಿನ ತೆಗೂರು ಚೆಕ್ ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 44 ಲಕ್ಷ ರೂಪಾಯಿ ಮೌಲ್ಯದ 710 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿಯಿಂದ ಧಾರವಾಡಕ್ಕೆ ಬರುತ್ತಿದ್ದ ಸರ್ಕಾರಿ ಬಸ್‌ನಲ್ಲಿ ರಮೇಶ್ ನಾಯಕ್ ಎಂಬಾತ ಚಿನ್ನಾಭರಣದೊಂದಿಗೆ ತೆರಳುತ್ತಿದ್ದರು. ಈ ವೇಳೆ ಪೊಲೀಸರು ತಪಾಸಣೆ ನಡೆಸಿದಾಗ ಚಿನ್ನಾಭರಣ ಕಂಡುಬಂದಿದೆ. ಹೀಗಾಗಿ ಚಿನ್ನಾಭರಣ ಹಾಗೂ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಹುಕ್ಕೇರಿಯಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 11. 49 ಲಕ್ಷ ರೂಪಾಯಿ ಜಪ್ತಿ

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿಯ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 11.49 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುಶಾಲ್ ಔಜಾ ಎಂಬುವವರು ಕಾರಿನಲ್ಲಿ ನಗದು ತೆಗೆದುಕೊಂಡು ಹೋಗುವಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಸಾವಂತವಾಡಿಯಿಂದ ಕೊಲ್ಲಾಪುರಕ್ಕೆ ಕುಶಾಲ್ ಹಣ ಸಾಗಿಸುತ್ತಿದ್ದ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐಟಿ ಅಧಿಕಾರಿಗಳಿಗೆ ಕೇಸ್ ವರ್ಗಾವಣೆ ಮಾಡಲಾಗಿದೆ.

ಇದನ್ನೂ ಓದಿ | Cow slaughter : ಜಾನುವಾರು ಸಾಗಾಟಗಾರನ ಸಾವು; ಪುನೀತ್‌ ಕೆರೆಹಳ್ಳಿ ಸೇರಿ ಐವರು ರಾಜಸ್ಥಾನದಲ್ಲಿ ಸೆರೆ

ಅದೇ ರೀತಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ‌ ಹಳ್ಳೂರು ಗ್ರಾಮದ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ಇಲ್ಲದೆ ಸಾಗಿಸಿತ್ತಿದ್ದ 1.25 ಕೆ.ಜಿ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಲಿಂಗಪುರದಿಂದ ಬೆಳಗಾವಿಯತ್ತ ಸಾಗುತ್ತಿದ್ದ ಕಾರನ್ನು ತಪಾಸಣೆ ನಡೆಸಿದಾಗ ಬಂಗಾರ ಪತ್ತೆಯಾಗಿದೆ. ಚಿನ್ನ ಹಾಗೂ ಕಾರು ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಆರ್‌.ಟಿ.ನಗರದಲ್ಲಿ 231 ಕುಕ್ಕರ್‌ ವಶ

ಬೆಂಗಳೂರು: ಆರ್‌.ಟಿ.ನಗರದ ಮನೆಯೊಂದರಲ್ಲಿ ಮತದಾರರಿಗೆ ಹಂಚಿಕೆ ಮಾಡಲು ದಾಸ್ತಾನು ಮಾಡಿದ್ದ 231 ಕುಕ್ಕರ್‌ಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರಲ್ಲಿ ಪುಲಿಕೇಶಿನಗರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಭಾವಚಿತ್ರವಿರುವ 60 ಕುಕ್ಕರ್‌ ಇದ್ದು, ಉಳಿದ ಕುಕ್ಕರ್‌ಗಳೆಲ್ಲವೂ ಬಾಕ್ಸ್‌ಗಳಲ್ಲಿ ಪ್ಯಾಕ್ ಆಗಿವೆ. ಚುನಾವಣಾ ಪ್ಲೈಯಿಂಗ್ ಸ್ಕ್ವಾಡ್‌ನೊಂದಿಗೆ ಆರ್.ಟಿ.ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Karnataka Elections : ಕಾಂಗ್ರೆಸ್‌ ಆರೋಪದ ಬೆನ್ನಲ್ಲೇ ಐಟಿ ರೇಡ್‌ ಶುರು; ರಾಜ್ಯಾದ್ಯಂತ ಒಂದೇ ದಿನ 2.6 ಕೋಟಿ ಸೀಜ್

ದ್ವಿಚಕ್ರ ವಾಹನದ ಡಿಕ್ಕಿಯಲ್ಲಿಟ್ಟು ಸಾಗಿಸುತ್ತಿದ್ದ 1.5 ಲಕ್ಷ ರೂ. ವಶ

ಕೋಲಾರ: ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಕೆಂಪಾಪುರ ಚೆಕ್‌ಪೋಸ್ಟ್‌ನಲ್ಲಿ ದ್ವಿಚಕ್ರ ವಾಹನದ ಡಿಕ್ಕಿಯಲ್ಲಿಟ್ಟು ಸಾಗಿಸುತ್ತಿದ್ದ 1.55 ಲಕ್ಷ ರೂ.ಗಳನ್ನು ಎಸ್‌ಎಸ್‌ಟಿ ತಂಡ ವಶಕ್ಕೆ ಪಡೆದಿದೆ. ಸೂಕ್ತ ದಾಖಲೆ ಇಲ್ಲದ ಹಿನ್ನೆಲೆ ಆಂಧ್ರ ಪ್ರದೇಶದ ಪೊಗರಪಲ್ಲಿಯ ಮಧುಸೂದನ್‌ರೆಡ್ಡಿ ಎಂಬುವವರಿಂದ ಹಣ ಹಾಗೂ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಗದಗ ತಾಲೂಕಿನ ದುಂದೂರು ಚೆಕ್‌ಪೋಸ್ಟ್‌ನಲ್ಲಿ 50 ಲಕ್ಷ ರೂ. ಜಪ್ತಿ

ಗದಗ: ತಾಲೂಕಿನ ದುಂದೂರು ಚೆಕ್‌ ಪೋಸ್ಟ್ ನಲ್ಲಿ ಪೊಲೀಸರು ತಪಾಸಣೆ ನಡೆಸುವ ವೇಳೆ ಟ್ರಂಕ್‌ನಲ್ಲಿ ತುಂಬಿ ಸಾಗಿಸುತ್ತಿದ್ದ ದಾಖಲೆ‌ ಇಲ್ಲದ 50 ಲಕ್ಷ ನಗದು ಹಣ ಜಪ್ತಿಯಾಗಿದೆ. ಹುಬ್ಬಳ್ಳಿಯಿಂದ ಗದಗ ನಗರಕ್ಕೆ ಬರುತ್ತಿದ್ದ ಅಕ್ರಮ ಹಣ ಇದಾಗಿದೆ. ಗದಗ ಎಸ್ಪಿ ಬಿ.ಎಸ್.ನೇಮಗೌಡ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಧಾರವಾಡ

Dharwad News: ಜ್ಯೋತಿರ್ವಿಜ್ಞಾನ ಕಲಿಕೆಯಲ್ಲಿ ವಿದೇಶಿಯರ ಆಸಕ್ತಿ ಹೆಚ್ಚಳ: ಡಾ. ನವೀನಶಾಸ್ತ್ರಿ ಪುರಾಣಿಕ

Dharwad News: ಜ್ಯೋತಿಷ್ಯಶಾಸ್ತ್ರ ಒಂದು ವಿಜ್ಞಾನ ಎಂಬುದನ್ನು ಅರ್ಥ ಮಾಡಿಕೊಂಡಿರುವ ವಿದೇಶಿಯರು ಉತ್ಸಾಹದಿಂದ ಕಲಿಯುತ್ತಿದ್ದಾರೆ. ವಿದೇಶಿ ಜ್ಯೋತಿಷಿಗಳು ನಮ್ಮ ಭವಿಷ್ಯ ಹೇಳಿದರೂ ಅಚ್ಚರಿಪಡಬೇಕಿಲ್ಲ ಎಂದು ವಿದ್ವಾನ್ ಡಾ. ನವೀನಶಾಸ್ತ್ರಿ ಪುರಾಣಿಕ ತಿಳಿಸಿದ್ದಾರೆ.

VISTARANEWS.COM


on

Increasing interest of foreigners in learning astrology says Dr Navinashastri Puranika
Koo

ಧಾರವಾಡ: ಜ್ಯೋತಿಷ್ಯ ಜನರನ್ನು ಹೆದರಿಸುವ ಶಾಸ್ತ್ರವಲ್ಲ, ಮಾನವನನ್ನು ಉನ್ನತಿಯೆಡೆಗೆ ಕರೆದೊಯ್ಯುವುದು ಜ್ಯೋತಿಷ್ಯಶಾಸ್ತ್ರದ ಉದ್ದೇಶ ಎಂದು ವಿದ್ವಾನ್ ಡಾ. ನವೀನಶಾಸ್ತ್ರಿ ಪುರಾಣಿಕ (Dharwad News) ತಿಳಿಸಿದರು.

ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಆಯೋಜಿಸಿದ್ದ ಎನ್.ಕೆ. ಜೋಗಳೇಕರ ಸ್ಮರಣಾರ್ಥ ದತ್ತಿ ಕಾರ್ಯಕ್ರಮದಲ್ಲಿ “ಜ್ಯೋತಿಷ್ಯಶಾಸ್ತ್ರ ಮತ್ತು ವೈಜ್ಞಾನಿಕ ಚಿಂತನೆಗಳು’ ಕುರಿತು ಉಪನ್ಯಾಸ ನೀಡಿ, ಅವರು ಮಾತನಾಡಿದರು.

ವ್ಯಕ್ತಿಯ ಹಿಂದಿನ ಮೂರು ತಲೆಮಾರು ಹಾಗೂ ಮುಂದಿನ ಮೂರು ತಲೆಮಾರು ಜ್ಯೋತಿಷ್ಯ ಹೇಳುವ ಜ್ಯೋತಿಷಿಗಳು ಪ್ರಸ್ತುತ ನಮ್ಮ ಸಮಾಜದಲ್ಲಿದ್ದಾರೆ. ಆದರೆ ಅವರನ್ನು ನಾವು ಗುರುತಿಸುತ್ತಿಲ್ಲ. ರೋಗಗಳ ಬಗ್ಗೆ ಮುನ್ನೆಚ್ಚರಿಕೆ ನೀಡುವ ಜ್ಯೋತಿಷ್ಯದಲ್ಲಿ ರೋಗಗಳಿಗೂ ಚಿಕಿತ್ಸೆ ತಿಳಿಸಲಾಗಿದೆ. ಆಯುಷ್ಯ ವೃದ್ಧಿ ಹಾಗೂ ಮನಸನ್ನು ಸ್ಥಿರವಾಗಿಡಲು ಜ್ಯೋತಿಷ್ಯ ನಮಗೆ ಅಗತ್ಯವಾಗಿದೆ ಎಂದರು.

ಇದನ್ನೂ ಓದಿ: Ballari News: ಭಕ್ತಿ ಭಾವದಿಂದ ನಡೆದ ಚೇಳ್ಳಗುರ್ಕಿ ಶ್ರೀ ಎರ‍್ರಿತಾತ ಮಹಾರಥೋತ್ಸವ

ಜ್ಯೋತಿಷ್ಯಶಾಸ್ತ್ರ ಒಂದು ವಿಜ್ಞಾನ ಎಂಬುದನ್ನು ಅರ್ಥ ಮಾಡಿಕೊಂಡಿರುವ ವಿದೇಶಿಯರು ಉತ್ಸಾಹದಿಂದ ಕಲಿಯುತ್ತಿದ್ದಾರೆ. ವಿದೇಶಿ ಜ್ಯೋತಿಷಿಗಳು ನಮ್ಮ ಭವಿಷ್ಯ ಹೇಳಿದರೂ ಅಚ್ಚರಿಪಡಬೇಕಿಲ್ಲ. ಕೆಲ ದಿನಗಳಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಜ್ಯೋತಿಷ್ಯ ಕೂಡ ಬರಲಿದೆ ಎಂದರು.

ಜ್ಯೋತಿಷ್ಯಶಾಸ್ತ್ರ ಕಾಲ ಗಣನೆ ಮಾಡಿ ಹೇಳುವ ಶಾಸ್ತ್ರ, ಇದು ಗಣಿತ, ಖಗೋಳಶಾಸ್ತ್ರ ಎಂಬುದನ್ನು ಒಪ್ಪಿಕೊಂಡ ಪಾಶ್ಚಾತ್ಯರು ಜ್ಯೋತಿಷ್ಯ ಕಲಿಯುವುದರೊಂದಿಗೆ ಅದಕ್ಕನುಗುಣವಾಗಿ ಜೀವನ ಕ್ರಮ ರೂಪಿಸಿಕೊಳ್ಳುತ್ತಿದ್ದಾರೆ ತಿಳಿಸಿದರು.

ಸಹಸ್ರಾರು ವರ್ಷಗಳ ಇತಿಹಾಸ ಹೊಂದಿರುವ ಜ್ಯೋತಿಷ್ಯಶಾಸ್ತ್ರದ ಜ್ಞಾನ, ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆಯಾಗದಿರುವುದು ಬೇಸರದ ಸಂಗತಿ. ಜ್ಯೋತಿಷ್ಯವು ಮೂಢನಂಬಿಕೆ ಎಂದು ಹೇಳುವ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಕೂಡ ಭವಿಷ್ಯಕ್ಕಾಗಿ ಜ್ಯೋತಿಷಿಗಳ ಮನೆ ಮುಂದೆ ಸರದಿಯಲ್ಲಿ ನಿಲ್ಲುತ್ತಾರೆ ಎಂದ ಅವರು, ನಿರಂತರ ಕಲಿಕೆ ಇದ್ದರೆ ಮಾತ್ರ ಜ್ಯೋತಿಷ್ಯಶಾಸ್ತ್ರದಲ್ಲಿ ಪ್ರಾವಿಣ್ಯ ಗಳಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಮಾನಸಿಕ ಆರೋಗ್ಯ ತಜ್ಞ ಡಾ. ಆನಂದ ಹಂದಿಗೋಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

ಈ ಸಂದರ್ಭದಲ್ಲಿ ದತ್ತಿದಾನಿ ಸುಹಾಸ ಜೋಗಳೇಕರ ಹಾಗೂ ಇತರರು ಉಪಸ್ಥಿತರಿದ್ದರು. ಗುರು ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಜಿನದತ್ತ ಹಡಗಲಿ ನಿರೂಪಿಸಿದರು.

Continue Reading

ಪ್ರಮುಖ ಸುದ್ದಿ

Actor Darshan Arrested : ಪದೇ ಪದೆ ಕ್ರಿಮಿನಲ್ ಚಟುವಟಿಕೆ; ನಟ ದರ್ಶನ್​ ರೌಡಿ ಪಟ್ಟಿಗೆ ಸೇರ್ಪಡೆ?

VISTARANEWS.COM


on

Actor Darshan Arrested
Koo

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವರನ್ನು ಹೊಡೆದು ಕೊಂದ ಆರೋಪದ ಮೇಲೆ ಪೊಲೀಸ್​ ವಶದಲ್ಲಿರುವ ನಟ ದರ್ಶನ್ ವಿರುದ್ಧ (Actor Darshan Arrested) ರೌಡಿ ಪಟ್ಟಿ ತೆರೆಯಲು ಬೆಂಗಳೂರು ನಗರ ಪೊಲೀಸರು ಸಿದ್ದ ರಾಗಿದ್ದಾರೆ ಎಂಬುದಾಗಿ ವರದಿಯಾಗಿದೆ. ಪದೇ ಪದೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಅವರ ಮೇಲೆ ಕಾನೂನಿನ ಹಿಡಿತ ಸ್ಥಾಪಿಸಲು ರೌಡಿ ಪಟ್ಟಿ ಅನಿವಾರ್ಯ ಎಂಬ ಅಭಿಪ್ರಾಯ ಹಿರಿಯ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾದ ಆರೋಪಿ ಮೇಲೆ ರೌಡಿ ಪಟ್ಟಿಯನ್ನು ತೆರೆಯಲಾಗುತ್ತದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲೂ ದರ್ಶನ್​ ಪ್ರಮುಖ ಆರೋಪಿ. ಹೀಗಾಗಿ ಅವರ ಮೇಲೆಯೂ ರೌಡಿ ಶೀಟರ್​ ಓಪನ್ ಮಾಡಬೇಕು ಎಂಬ ಅಭಿಪ್ರಾಯಗಳು ಕೇಳಿ ಬಂದಿದೆ.

ದರ್ಶನ್​ ಈ ಹಿಂದೆಯೂ ಹಲವಾರು ಬಾರಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಬೆದರಿಕೆ, ನಿಂದನೆ ಸೇರಿದಂತೆ ನಾನಾ ರೀತಿಯಲ್ಲಿ ಅವರು ಕಾನೂನು ಕ್ರಮವನ್ನು ಎದುರಿಸಿದ್ದರು. ಹೀಗಾಗಿ ಅವರನ್ನು ರೌಡಿ ಪಟ್ಟಿಯೊಳಗೆ ಸೇರಿಸಿ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಪೊಲೀಸ್​ ಇಲಾಖೆಯ ಆಲೋಚನೆಯಾಗಿದೆ.

ಇದನ್ನೂ ಓದಿ: Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

ರೇಣುಕಾ ಸ್ವಾಮಿ ಅವರನ್ನು ಕೊಲೆ ಮಾಡುವ ಉದ್ದೇಶವಿಲ್ಲದೆ ಅಪಹರಣ ಮಾಡಿದ್ದರು. ಗಂಭೀರ ರೂಪದಲ್ಲಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕೊಲೆ ಮಾಡಿ ಶವ ಮುಚ್ಚಿಡುವ ಹಾಗೂ ಸಾಕ್ಷಿನಾಶ ಪಡಿಸುವ ಯತ್ನ ಮಾಡಿದ್ದಾರೆ. ಇವೆಲ್ಲವೂ ಅಪಾಯಕಾರಿ ಕ್ರಿಮಿನಲ್ ಚಟುವಟಿಕೆಗಳಾಗಿವೆ.

ರೌಡಿಶೀಟ್ ಓಪನ್ ಆದ್ರೆ ಏನಾಗುತ್ತೆ.?

ಇಷ್ಟು ವರ್ಷಗಳ ಕಾಲ ಸೆಲೆಬ್ರಿಟಿಯಾಗಿ ಕಾಣಿಸಿಕೊಂಡಿದ್ದ ಹಾಗೂ ಅಪಾರ ಗೌರವ ಗಳಿಸಿಕೊಂಡಿದ್ದ ನಟ ದರ್ಶನ್ ರೌಡಿಶೀಟರ್ ಅನ್ನೋ ಕಳಂಕ ಹೊತ್ತುಕೊಳ್ಳಬೇಕಾಗುತ್ತದೆ. ಶಾಂತಿಸುವ್ಯವಸ್ಥೆಗೆ ಭಂಗ ತರುವ ಆರೋಪದ ಮೇಲೆ ಆಗಾಗ ಸಿಆರ್ಪಿಸಿ 110 ಅಡಿಯಲ್ಲಿ ಕೇಸ್ ದಾಖಲಾಗುತ್ತದೆ. ಪದೇ ಪದೆ ಪೊಲೀಸ್ ಠಾಣೆಯ ಮೆಟ್ಟಿಲನ್ನು ಏರಬೇಕಾಗುತ್ತದೆ.

ಚುನಾವಣೆ ಹಾಗೂ ಇನ್ಯಾವುದಾದರೂ ತುರ್ತು ಸಂಧರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅವರ ಮನೆಯ ಮೇಲೆ ಪೊಲೀಸರು ದಾಳಿ ಮಾಡುತ್ತಾರೆ. ಯಾವುದೇ ಅನುಮತಿ ಇಲ್ಲದೆ ಪರಿಶೀಲನೆ ನಡೆಸುತ್ತಾರೆ. ರೌಡಿಚಟುವಟಿಕೆ ಸಕ್ರಿಯರಾಗಿದ್ದಾರೆ ಎಂಬ ಕಾರಣದಲ್ಲಿ ಅವರ ಮೇಲೆ ನಿಗಾ ಇಡುತ್ತಾರೆ. ಖಾಸಗಿತನ ನಷ್ಟವಾಗುತ್ತದೆ.

ತುರ್ತು ಸಂದರ್ಭದಲ್ಲಿ ತಹಸೀಲ್ದಾರರ ಮುಂದೆ ಹಾಜರಾಗಿ ಬಾಂಡ್ ಸಲ್ಲಿಸಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಪೊ ಲೀಸರು ನಡೆಸುವ ರೌಡಿ ಪೆರೇಡ್ ನಲ್ಲಿ ಇತರೆ ರೌಡಿಗಳಂತೆ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಲಿದೆ. ಅವರ ಟೀಕೆಗಳನ್ನು ಕೇಳಬೇಕಾಗುತ್ತದೆ.

ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಅರೆಸ್ಟ್ (Actor Darshan Arrested) ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ದರ್ಶನ್‌ ಜತೆಗಿದ್ದ ಇನ್​ಸ್ಟಾಗ್ರಾಮ್​ ಪ್ರೊಫೈಲ್‌​ ಫೋಟೊ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್​ಫಾಲೋ ಮಾಡಿದ್ದಾರೆ. ಇದೀಗ ವಿಜಯಲಕ್ಷ್ಮಿ ವಿಚ್ಛೇದನ ಪಡೆಯುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಕೌಟುಂಬಿಕ ಕಲಹದಲ್ಲಿ ʼದಾಸʼ

ದರ್ಶನ್‌ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇನ್ನು ಕೌಟುಂಬಿಕ ಕಲಹದಲ್ಲಿಯೂ 28 ದಿನಗಳ ಕಾಲ ಜೈಲಿನಲ್ಲಿ ಇದ್ದು ಬಂದಿದ್ದರು. 2011ರಲ್ಲಿ ವಿಜಯಲಕ್ಷ್ಮಿ ಮೇಲೆ ದರ್ಶನ್ ಮಾರಣಾಂತಿಕ ಹಲ್ಲೆ ಮಾಡಿದ್ದರು. 2016ರಲ್ಲಿ ಮತ್ತೊಮ್ಮೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ದೂರು ನೀಡಿದ್ದ ಘಟನೆಯೂ ನಡೆದಿತ್ತು. ಮಗನನ್ನು ಹತ್ಯೆ ಮಾಡುವುದಾಗಿಯೂ ದರ್ಶನ್‌ ಬೆದರಿಸುವುದಾಗಿ ಕೇಳಿ ಬಂದಿತ್ತು. ಮಾತ್ರವಲ್ಲ ವಿಜಯಲಕ್ಷ್ಮಿ ಅವರಿಗೆ ಸಿಗರೇಟ್‌ನಿಂದ ಸುಟ್ಟು ಗಾಯಗೊಳಿಸಿದ್ದರು. ಅಂಬರೀಶ್ ಮಧ್ಯಪ್ರವೇಶದಿಂದ ವಿಜಯಲಕ್ಷ್ಮಿ ಎಲ್ಲವನ್ನೂ ಮರೆತು ರಾಜಿ ಸಂಧಾನಕ್ಕೆ ಒಪ್ಪಿದ್ದರು.

Continue Reading

ಪ್ರಮುಖ ಸುದ್ದಿ

Polluted Water : ಕಲುಷಿತ ನೀರು ಕುಡಿದು ಒಂದೇ ಗ್ರಾಮದ ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ

Polluted Water : ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿರುವ ವರಲಕ್ಷ್ಮೀ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರಿತಿ ವಾಂತಿ, ಭೇದಿಯಿಂದ ಇಬ್ಬರು ಗ್ರಾಮಸ್ಥರು. ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವರಲಕ್ಷ್ಮಿ ಲಕ್ಷ್ಮೀದೇವಮ್ಮ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

VISTARANEWS.COM


on

Polluted Water
Koo

ಚಿಕ್ಕಬಳ್ಳಾಪುರ : ಕಲುಷಿತ ನೀರು (Polluted Water ) ಸೇವಿಸಿದ್ದರಿಂದ ಉಂಟಾದ ಅಸ್ವಸ್ಥೆಯಿಂದ ಒಂದೇ ಗ್ರಾಮದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇಲ್ಲಿನ ವೀರಪ್ಪಲ್ಲಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಪ್ರಕರಣದಿಂದ ಈ ನಾಲ್ವರು ಮೃತಪಟ್ಟಿದ್ದಾರೆ. ಅದೇ ರೀತಿ ವೀರಾಪುರ ಗ್ರಾಮದಲ್ಲಿಯೂ ‌ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಗ್ರಾಮದಲ್ಲಿ ಗಂಗಮ್ಮ (70) ಮುನಿನಾರಾಯಣಮ್ಮ (74), ಲಕ್ಷ್ಮಮ್ಮ (70). ನರಸಿಂಹಪ್ಪ (75) ಎಂಬುವರು ಮೃತಪಟ್ಟಿದ್ದರು.

ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿರುವ ವರಲಕ್ಷ್ಮೀ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರಿತಿ ವಾಂತಿ, ಭೇದಿಯಿಂದ ಇಬ್ಬರು ಗ್ರಾಮಸ್ಥರು. ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವರಲಕ್ಷ್ಮಿ ಲಕ್ಷ್ಮೀದೇವಮ್ಮ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮ ಪಂಚಾಯ್ತಿ ವತಿಯಿಂದ ಪೂರೈಸಿದ್ದ ನೀರು ಕಲುಷಿತ ಗೊಂಡಿದ್ದ ಕಾರಣ ಆರೋಗ್ಯ ಸಮಸ್ಯೆ ಉಂಟಾಗಿದೆ. ನೀರು ಸರಬರಾಜು ಮಾಡಿರುವ ಕೋಟಗಲ್ ಗ್ರಾಮಪಂಚಾಯಿತಿ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೇ ವಾರದಲ್ಲಿ ಗ್ರಾಮದಲ್ಲಿ ನಾಲ್ಕು ಸರಣಿ ಸಾವಾದರೂ ಎಚ್ಚೆತ್ತುಕೊಳ್ಳದ ಪಿಡಿಒ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: HSRP Number Plate : ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಗಡುವು ಜುಲೈ 4 ರವರೆಗೆ ವಿಸ್ತರಣೆ; ವಾಹನ ಮಾಲೀಕರಿಗೆ ನೆಮ್ಮದಿ

ಗ್ರಾಮದಲ್ಲಿ ಚರಂಡಿಗಳು ಕಟ್ಟಿಕೊಂಡು ವಾಸನೆ ಬರುತ್ತಿವೆ. ಅದನ್ನೆಲ್ಲ ರಿಪೇರಿ ಮಾಡದ ಕಾರಣ ಕುಡಿಯುವ ನೀರಿನೊಂದಿಗೆ ಮಿಶ್ರಣಗೊಳ್ಳುತ್ತಿದೆ. ಅದರಿಂದಾಗಿಯೇ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

ಮುಂಗಾರು ಚುರುಕಾಗುತ್ತಿದೆ. ಮಳೆಗಾಲವನ್ನು ಸಿಕ್ಕಾಪಟ್ಟೆ ಪ್ರೀತಿಸುವವರು ಇದ್ದಷ್ಟೇ ಮುಖ ಹಿಂಡುವವರೂ ಇದ್ದಾರೆ. ಇದಕ್ಕೆ ಕಾರಣಗಳು ಬಹಳಷ್ಟಿದ್ದರೂ, ಈ ಒದ್ದೆ-ಥಂಡಿ-ಶೀತದ ದಿನಗಳಲ್ಲಿ ಕಾಡುವ ಸೋಂಕುಗಳು ಅವುಗಳಲ್ಲಿ ಒಂದು ಪ್ರಮುಖ ಕಾರಣ. ಹೊರಗೆ ಮೋಡ ಕಟ್ಟಿದಂತೆಯೇ ಒಳಗೆ ಮೂಗು ಕಟ್ಟಿ, ಹೊರಗಿನಂತೆ ಒಳಗೂ ಧಾರಾಕಾರ ಹರಿದು, ಗುಡುಗು-ಸಿಡಿಲಿನಂತೆ ಕೆಮ್ಮು ಪ್ರಾರಂಭವಾದರೆ- ಮಳೆಯನ್ನು ಪ್ರೀತಿಸಲು ಹೇಗೆ ಸಾಧ್ಯ? ರೋಗಾಣುಗಳನ್ನು ತಡೆಯಲು ಸಾಧ್ಯವಿಲ್ಲದಿದ್ದರೂ, ನಮ್ಮ ದೇಹವನ್ನು ಸದೃಢವಾಗಿ ಇರಿಸಿಕೊಳ್ಳಬಹುದಲ್ಲ. ರೋಗ ನಿರೋಧಕ ಶಕ್ತಿಗೆ ಬಲ ಬರುವುದೇ ನಮ್ಮ ಆಹಾರದಿಂದ. ಸೋಂಕು ದೂರ ಇರಿಸುವುದಕ್ಕೆ (Tips For Rainy Season) ಎಂಥ ಆಹಾರ ಒಳ್ಳೆಯದು?

ವಿಟಮಿನ್‌ ಸಿ ಆಹಾರಗಳು

ದೇಹದ ರೋಗ ನಿರೋಧಕ ಶಕ್ತಿಯನ್ನು ಉದ್ದೀಪಿಸುವಲ್ಲಿ ಸಿ ಜೀವಸತ್ವ ಪ್ರಧಾನವಾಗಿ ಬೇಕು. ಅದರಲ್ಲೂ ನೆಗಡಿ, ಕೆಮ್ಮು, ಜ್ವರದಂಥ ಮಳೆಗಾಲದ ಸೋಂಕು ರೋಗಗಳನ್ನು ದೂರ ಇಡುವುದಕ್ಕೆ ವಿಟಮಿನ್‌ ಸಿ ಅಗತ್ಯವಾಗಿ ಬೇಕು. ಹಾಗಾಗಿ ಕಿತ್ತಳೆ, ನಿಂಬೆ, ದಾಳಿಂಬೆ, ಪಪ್ಪಾಯ, ಪೇರಳೆ, ಬ್ರೊಕೊಲಿ, ದಪ್ಪಮೆಣಸು, ಮೊಳಕೆ ಕಟ್ಟಿದ ಕಾಳುಗಳನ್ನು ತಪ್ಪದೆ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

ginger

ಶುಂಠಿ

ಇದಕ್ಕೆ ಹಲವಾರು ಔಷಧೀಯ ಗುಣಗಳಿವೆ. ಅದರಲ್ಲೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ, ಬ್ಯಾಕ್ಟೀರಿಯ ನಿರೋಧಕ ಮತ್ತು ಉರಿಯೂತ ಶಾಮಕ ಗುಣಗಳು ಇದರಲ್ಲಿ ಧಾರಾಳವಾಗಿವೆ. ಕೆಮ್ಮು, ನೆಗಡಿ, ಕಫದಂಥ ಸಮಸ್ಯೆಗಳಿಗೆ ಶುಂಠಿ ಚಹಾ, ಶುಂಠಿ ಕಷಾಯಗಳು ಉಪಶಮನ ನೀಡಬಲ್ಲವು. ಗಂಟಲು ಕಟ್ಟಿದ್ದರೆ, ಗಂ

Continue Reading

ಪ್ರಮುಖ ಸುದ್ದಿ

HSRP Number Plate : ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಗಡುವು ಜುಲೈ 4 ರವರೆಗೆ ವಿಸ್ತರಣೆ; ವಾಹನ ಮಾಲೀಕರಿಗೆ ನೆಮ್ಮದಿ

HSRP Number Plate : ಹೊಸ ಮಾದರಿಯ ಸುರಕ್ಷಿತ ನಂಬರ್ ಪ್ಲೇಟ್​ ಅಳವಡಿಕೆಗೆ ನೀಡಲಾಗಿರುವ ಗಡುವು ವಿಸ್ತರಿರಣೆಗೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಚ್‌ಎಸ್‌ಆರ್‌ಪಿ ತಯಾರಿಕಾ ಕಂಪನಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು .ಅದನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಜುಲೈ 4ರ ವರೆಗೆ ವಿಸ್ತರಣೆ ಮಾಡುವಂತೆ ಹೇಳಿದೆ.

VISTARANEWS.COM


on

HSRP Number plate
Koo

ಬೆಂಗಳೂರು: 2019ಕ್ಕಿಂತ ಹಿಂದೆ ಮಾರುಕಟ್ಟೆಗೆ ಇಳಿದ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಸಂಖ್ಯೆ ಫಲಕ (HSRP Number Plate) ಕಡ್ಡಾಯವಾಗಿ ಅಳವಡಿಸಬೇಕೆಂಬ ಗಡುವು ಜುಲೈ 4ರವರೆಗೆ ವಿಸ್ತರಣೆಯಾಗಿದೆ. ಹೀಗಾಗಿ ನಾನಾ ತಾಂತ್ರಿಕ ಕಾರಣಗಳಿಂದಾಗಿ ಇನ್ನೂ ನಂಬರ್​ಪ್ಲೇಟ್​ ಅಳವಡಿಸದ ವಾಹನಗಳ ಮಾಲೀಕರಿಗೆ ನೆಮ್ಮದಿ ಸಿಕ್ಕಿದೆ. ಹೊಸ ನಂಬರ್​ ಪ್ಲೇಟ್ ಅಳವಡಿಸದ ವಾಹನ ಮಾಲೀಕರ ವಿರುದ್ಧ ಯಾವುದೇ ಕಠಿಣ ಕೈಗೊಳ್ಳಬಾರದು ಎಂದು ಹೈಕೋರ್ಟ್‌ ಮೇ 21ರಂದು ಹೊರಡಿಸಿದ್ದ ಆದೇಶ ಜುಲೈ 4ರವರೆಗೆ ವಿಸ್ತರಣೆಯಾಗಿರುವುದರಿಂದ ವಾಹನ ಮಾಲೀಕರಿಗೆ ತೊಂದರೆ ತಪ್ಪಿದೆ.

ಹೊಸ ಮಾದರಿಯ ಸುರಕ್ಷಿತ ನಂಬರ್ ಪ್ಲೇಟ್​ ಅಳವಡಿಕೆಗೆ ನೀಡಲಾಗಿರುವ ಗಡುವು ವಿಸ್ತರಿರಣೆಗೆ ಸರಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಎಚ್‌ಎಸ್‌ಆರ್‌ಪಿ ತಯಾರಿಕಾ ಕಂಪನಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು .ಅದನ್ನು ವಿಚಾರಣೆ ಮಾಡಿದ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆವಿ ಅರವಿಂದ್‌ ಅವರಿದ್ದ ವಿಭಾಗೀಯ ಪೀಠ ಜುಲೈ 4ರ ವರೆಗೆ ವಿಸ್ತರಣೆ ಮಾಡುವಂತೆ ಹೇಳಿದೆ.

ಪ್ರಕರಣದಲ್ಲಿ ಸರಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ವಿಕ್ರಮ್‌ ಹುಯಿಲಗೋಳ, ಅವರೂ ಸರ್ಕಾರದ ನಿಲುವನ್ನು ಇದೇ ವೇಳೆ ವ್ಯಕ್ತಪಡಿಸಿದ್ದಾರೆ. “ಎಚ್‌ಎಸ್‌ಆರ್‌ಪಿ ಫಲಕಗಳ ಅಳವಡಿಕೆ ಅವಧಿಯನ್ನು ರಾಜ್ಯ ಸರಕಾರ 2024ರ ಆಗಸ್ಟ್‌ ಇಲ್ಲವೇ ಸೆಪ್ಟೆಂಬರ್‌ವರೆಗೂ ವಿಸ್ತರಿಸುವ ಚಿಂತನೆ ನಡೆಸಿದೆ. ಹೈಕೋರ್ಟ್‌ ಅನುಮತಿ ನೀಡಿದಲ್ಲಿ ಸರಕಾರ ಈ ಸಂಬಂಧ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಲಿದೆ,” ಎಂದು ಮನವರಿಕೆ ಮಾಡಿದರು. ಈ ವೇಳೆ ನ್ಯಾಯಪೀಠ, ವಾಹನ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳುವ ಅವಧಿಯನ್ನು ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲು ಸರಕಾರ ಸ್ವತಂತ್ರ,” ಎಂದು ಹೇಳಿತು.

ರಾಜ್ಯದಲ್ಲಿ 2019ರ ಏಪ್ರಿಲ್‌ 1ಕ್ಕಿಂತ ಮುನ್ನ ನೋಂದಣಿಯಾದ ಎಲ್ಲ ಮಾದರಿಯ ವಾಹನಗಳಿಗೆ ಮೂಲ ಉಪಕರಣ ತಯಾರಕ (ಓಇಎಂ) ಅಧಿಕೃತ ಡೀಲರ್‌ಗಳ ಮೂಲಕ ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಲು ರಾಜ್ಯ ಸರಕಾರ 2023ರ ಆಗಸ್ಟ್‌ 17ರಂದು ಅಧಿಸೂಚನೆ ಹೊರಡಿಸಿತ್ತು. ಆದರೆ, ವಿತರಣೆ, ಅಳವಡಿಕೆ ಸೇರಿದಂತೆ ನಾನಾ ಸಮಸ್ಯೆಗಳಿಂದ ಈ ಯೋಜನೆಗೆ ಸಮಸ್ಯೆಯಾಗುತ್ತಿದೆ. ಸುರಕ್ಷಿತ ನಂಬರ್​ ಪ್ಲೇಟ್ ಅಳವಡಿಸಲು ಸುಮಾರು ಅರ್ಧದಷ್ಟು ವಾಹನ ಮಾಲೀಕರಿಗೆ ಇನ್ನೂ ಆಗಿಲ್ಲ. ಹೀಗಾಗಿ ಗಡುವು ವಿಸ್ತರಣೆ ಆಗುತ್ತಲೇ ಇದೆ. ಇದೀಗ ಕೋರ್ಟ್​ ಆದೇಶದ ಮೂಲಕ ಮತ್ತಷ್ಟು ವಿಸ್ತರಣೆಯಾಗಿದೆ. ಸರ್ಕಾರವೂ ಇದನ್ನು ಇನ್ನಷ್ಟು ಮುಂದುವರಿಸುವ ಯೋಜನೆ ಹೊಂದಿದೆ.

ಕೇಂದ್ರ ಮೋಟಾರು ವಾಹನಗಳ ನಿಯಮಗಳನ್ನು ಮೀರಿ ಕೆಲವು ಸಂಸ್ಥೆಗಳನ್ನು ಅಧಿಸೂಚನೆಯಿಂದ ಹೊರಗಿಡಲಾಗಿದೆ. ಪ್ರಭಾವಿ ಸಂಸ್ಥೆಗಳಿಗಷ್ಟೇ ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಆಕ್ಷೇಪಿಸಿ ಹೈ ಸೆಕ್ಯುರಿಟಿ ರೆಜಿಸ್ಪ್ರೇಷನ್‌ ಪ್ಲೇಟ್‌ ಮ್ಯಾನುಫ್ಯಾಕ್ಚರರ್ಸ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ ಸೇರಿ ಅವಕಾಶ ವಂಚಿತ ಕೆಲ ಸಂಸ್ಥೆಗಳು ನ್ಯಾಯಾಲಯದ ಮೊರೆ ಹೋಗಿವೆ. ಆ ಅರ್ಜಿ ಜತೆಗೆ ಮಧ್ಯಂತರ ಅರ್ಜಿ ಹೂಡಿರುವ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಎಚ್‌ಎಸ್‌ಆರ್‌ಪಿ ಅಳವಡಿಕೆ ವಿಧಿಸಿರುವ ಗಡುವು ವಿಸ್ತರಿಸಲು ಕೋರಿದೆ.

Continue Reading
Advertisement
Doda Terror Attacks
ದೇಶ1 min ago

Doda Terror Attacks: ಶಂಕಿತ ನಾಲ್ವರು ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ; ಸುಳಿವು ನೀಡಿದವರಿಗೆ 20 ಲಕ್ಷ ರೂ. ಬಹುಮಾನ

Increasing interest of foreigners in learning astrology says Dr Navinashastri Puranika
ಧಾರವಾಡ4 mins ago

Dharwad News: ಜ್ಯೋತಿರ್ವಿಜ್ಞಾನ ಕಲಿಕೆಯಲ್ಲಿ ವಿದೇಶಿಯರ ಆಸಕ್ತಿ ಹೆಚ್ಚಳ: ಡಾ. ನವೀನಶಾಸ್ತ್ರಿ ಪುರಾಣಿಕ

Bhubaneswar Tour
Latest7 mins ago

Bhubaneswar Tour: ಭುವನೇಶ್ವರಕ್ಕೆ ಪ್ರವಾಸ ಮಾಡಿದಾಗ ಏನೆಲ್ಲ ನೋಡಬಹುದು?

Richest MP's
ರಾಜಕೀಯ11 mins ago

Richest MP’s: ಇವರೇ ನೋಡಿ, ಟಾಪ್ 10 ಶ್ರೀಮಂತ ಸಂಸದರು! ಇವರ ಆಸ್ತಿ ಎಷ್ಟು?

Actor Darshan Arrested
ಪ್ರಮುಖ ಸುದ್ದಿ14 mins ago

Actor Darshan Arrested : ಪದೇ ಪದೆ ಕ್ರಿಮಿನಲ್ ಚಟುವಟಿಕೆ; ನಟ ದರ್ಶನ್​ ರೌಡಿ ಪಟ್ಟಿಗೆ ಸೇರ್ಪಡೆ?

IND vs USA
ಕ್ರೀಡೆ16 mins ago

IND vs USA: ಭಾರತಕ್ಕೆ 5​ ಪೆನಾಲ್ಟಿ ರನ್ ಲಭಿಸಿದ್ದು ಹೇಗೆ?

Himachal tour
ಲೈಫ್‌ಸ್ಟೈಲ್25 mins ago

Himachal Tour: ರೋಮಾಂಚನ ಉಂಟುಮಾಡುವ ಹಿಮಾಚಲ ಪ್ರದೇಶದ ಡಾಲ್ ಹೌಸಿ ಗಿರಿಧಾಮ!

Coconut in Worship
ಧಾರ್ಮಿಕ27 mins ago

Coconut in Worship: ಪೂಜೆ, ಶುಭ ಕಾರ್ಯಗಳಲ್ಲಿ ತೆಂಗಿನಕಾಯಿ ಬಳಸುವುದೇಕೆ ಗೊತ್ತಿದೆಯೆ?

Baba Vanga Predictions
ಭವಿಷ್ಯ41 mins ago

Baba Vanga Predictions: ಪ್ರಪಂಚದ ಅಂತ್ಯ ಯಾವಾಗ? ಈ ವರ್ಷ ಏನೇನಾಗಲಿವೆ? ಬಾಬಾ ವಂಗಾ ಭವಿಷ್ಯ ಹೀಗಿದೆ!

Viral Video
ಸಿನಿಮಾ42 mins ago

Viral Video: ಪುಷ್ಪ 2 ಚಿತ್ರದ ‘ಅಂಗಾರನ್’ ಹಾಡಿಗೆ ಪತ್ನಿ ಜೊತೆ ಸ್ಟೆಪ್‌ ಹಾಕಿದ ವಿಶೇಷ ಚೇತನ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌