Karnataka Election 2023: ಕಾಂಗ್ರೆಸ್‌ 2ನೇ ಪಟ್ಟಿ ಪ್ರಕಟ; ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಉಡುಪಿಯಲ್ಲಿ ಭಿನ್ನಮತ ಸ್ಫೋಟ - Vistara News

ಉಡುಪಿ

Karnataka Election 2023: ಕಾಂಗ್ರೆಸ್‌ 2ನೇ ಪಟ್ಟಿ ಪ್ರಕಟ; ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಉಡುಪಿಯಲ್ಲಿ ಭಿನ್ನಮತ ಸ್ಫೋಟ

Assembly Election: ಕಾಂಗ್ರೆಸ್‌ನಲ್ಲಿ ಎರಡನೇ ಪಟ್ಟಿಯನ್ನು ಪ್ರಕಟ ಮಾಡುತ್ತಿದ್ದಂತೆ ಬಂಡಾಯ ಭುಗಿಲೆದ್ದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ ಹೈಕಮಾಂಡ್‌ ಮೇಲೆ ಅಸಮಾಧಾನಿತರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

VISTARANEWS.COM


on

Congress releases second list Dissent erupts in Chitradurga Davanagere Belagavi Udupi Karnataka Elections 2023 updates
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನಸಭಾ ಚುನಾವಣೆ ಕಣ ದಿನೇ ದಿನೆ ರಂಗು ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನೂ ಬಿಡುಗಡೆ ಮಾಡುವ ಮೂಲಕ ಒಂದು ಹಂತದಲ್ಲಿ ಮುಂದಿದೆ. ಆದರೆ, ಎಷ್ಟೇ ಅಳೆದು ತೂಗಿ ಮಾಡಿದರೂ ಪಕ್ಷದಲ್ಲಿ ಬಂಡಾಯದ ಕೂಗು ಕೇಳಿ ಬರುತ್ತಲೇ ಇದೆ. ಗುರುವಾರ (ಏ. 6) ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಉಡುಪಿ ಸೇರಿದಂತೆ ಹಲವು ಕಡೆ ಆಕಾಂಕ್ಷಿಗಳು ಅಸಮಾಧಾನವನ್ನು ಹೊರಹಾಕಿದ್ದಾರೆ. ವಿಧಾನ ಪರಿಷತ್‌ ಮಾಜಿ ಸದಸ್ಯ ರಘು ಆಚಾರ್‌ ಪಕ್ಷೇತರವಾಗಿ ನಿಲ್ಲುವ ಸಾಧ್ಯತೆ ದಟ್ಟವಾಗಿದೆ.

ಟಿಕೆಟ್ ಕೈ ತಪ್ಪಿದ್ದಕ್ಕೆ ಪಕ್ಷದ ವಿರುದ್ಧ ರಘು ಆಚಾರ್ ಗುಡುಗು

ಚಿತ್ರದುರ್ಗ: ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಪಕ್ಷದ ವಿರುದ್ಧ ವಿಧಾನ ಪರಿಷತ್‌ ಮಾಜಿ ಸದಸ್ಯ ರಘು ಆಚಾರ್‌ ಗುಡುಗಿದ್ದಾರೆ. ನಾನು ದುರ್ಗದಿಂದ ಸ್ಪರ್ಧೆ ಮಾಡೋದು ಖಚಿತ. ನಾನು ಏಪ್ರಿಲ್‌ 17ಕ್ಕೆ ನಾಮಪತ್ರ ಸಲ್ಲಿಸುವುದು ಪಕ್ಕಾ ಎಂದು ಹೇಳುವ ಮೂಲಕ ಚಿತ್ರದುರ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸೂಚನೆಯನ್ನು ನೀಡಿದ್ದಾರೆ. ಯಾರೂ ಸೋಲುತ್ತಾರೆ ಎಂದು ಫಲಿತಾಂಶದ ದಿನ ಗೊತ್ತಾಗಲಿದೆ. ವೀರೇಂದ್ರ ಪಪ್ಪಿಗೆ ಒಳ್ಳೇದು ಆಗಲಿ. ನಡು ದಾರಿಯಲ್ಲಿ ನನಗೆ ಕತ್ತು ಕೊಯ್ದು ಬಿಟ್ಟರು ಎಂದು ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ: IT Notice: ತಿಂಗಳಿಗೆ 58 ಸಾವಿರ ಸ್ಯಾಲರಿ ಇರುವ ಯುವಕನಿಗೆ 113 ಕೋಟಿ ರೂ. ತೆರಿಗೆ ಕಟ್ಟುವಂತೆ ಐಟಿ ನೋಟಿಸ್!

ಸಿದ್ದರಾಮಯ್ಯ ಅವರು ಎರಡು ಬಾರಿಗೆ ವಿಧಾನ ಪರಿಷತ್‌ ಸದಸ್ಯ ಆಗೋದು ಬೇಡ. ವಿಧಾನಸಭೆ ಸ್ಪರ್ಧೆ ಮಾಡಿ ಎಂದು ಹೇಳಿದ್ದರು. ಹೀಗೆ ಹೇಳಿಕೊಂಡು ಬಂದು ಅರ್ಧ ದಾರಿಯಲ್ಲಿ ನನ್ನ ಕತ್ತು ಕೊಯ್ದಿದ್ದಾರೆ. ನನಗೆ ಜಾತಿ ಇಲ್ಲವೆಂಬ ಸಣ್ಣ ಕಾರಣಕ್ಕೆ ಈ ರೀತಿ ಮಾಡಿದ್ದಾರೆ. ಈ ಜಿಲ್ಲೆಯ ಜನ ಇದಕ್ಕೆ ಉತ್ತರಿಸುತ್ತಾರೆ. ನನಗೊಬ್ಬನಿಗೆ ಅಲ್ಲ, ಗೋಪಿಕೃಷ್ಣನಿಗೂ ಕಾಂಗ್ರೆಸ್ ಅನ್ಯಾಯ ಮಾಡಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರಲ್ಲ. 197 ಸಣ್ಣ ಸಮುದಾಯಗಳಿಗೆ ಕಾಂಗ್ರೆಸ್ ಒಂದು ಸ್ಥಾನವನ್ನೂ ನೀಡಿಲ್ಲ. ಆ ಸಮುದಾಯಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರಿಗೆ ಗೌರವ ಇದೆಯೋ ಇಲ್ಲವೊ ಗೊತ್ತಿಲ್ಲ. ಸಾಮಾಜಿಕ ನ್ಯಾಯ ಮರೆತು ಕಾಂಗ್ರೆಸ್ ತೀರ್ಮಾನ ತೆಗೆದುಕೊಂಡಿದೆ. ಇಡೀ ರಾಜ್ಯ ಸುತ್ತುತ್ತೇನೆ. ವಿಶ್ವಕರ್ಮ ಸಮಾಜದವರು ಕಾಂಗ್ರೆಸ್‌ಗೆ ಮತ ಹಾಕದಂತೆ ಹೋರಾಟ ಮಾಡುತ್ತೇನೆ. ಮಾರ್ಚ್ 17ರಂದು ಚಿತ್ರದುರ್ಗದಲ್ಲಿ ನಾಮಪತ್ರ ಸಲ್ಲಿಸುತ್ತೇನೆ ಎಂದು ರಘು ಆಚಾರ್‌ ತಿಳಿಸಿದರು.

ಚನ್ನಗಿರಿಯಲ್ಲಿ ಮಾಜಿ ಶಾಸಕ ವಡ್ನಾಳ್ ರಾಜಣ್ಣ ಗರಂ

ದಾವಣಗೆರೆ: ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಬಸವರಾಜ್ ಶಿವಗಂಗಾ ಅವರಿಗೆ ಘೋಷಣೆಯಾಗುತ್ತಿದ್ದಂತೆ ಮಾಜಿ ಶಾಸಕ ವಡ್ನಾಳ್ ರಾಜಣ್ಣ ಕುಟುಂಬದವರು ಅಸಮಾಧಾನಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವಡ್ನಾಳ್ ಬೆಂಬಲಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವಡ್ನಾಳ್ ರಾಜಣ್ಣಗೆ ಟಿಕೆಟ್ ಘೋಷಣೆ ಮಾಡಿ ಹೋಗಿದ್ದರು. ಈ ಬಾರಿ ವಡ್ನಾಳ್ ರಾಜಣ್ಣ ಸಹೋದರನ ಪುತ್ರ ವಡ್ನಾಳ್ ಆಶೋಕ್‌ಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿತ್ತು. ಆದರೆ, ಟಿಕೆಟ್‌ ಬೇರೆಯವರ ಪಾಲಾಗಿರುವುದು ಈಗ ಕಾಂಗ್ರೆಸ್‌ ಪಾಳೆಯದಲ್ಲಿ ಆಕ್ರೋಶ ಮಡುಗಟ್ಟಿದೆ.

ಇದನ್ನೂ ಓದಿ: Murder Case: ವೃದ್ಧೆಯನ್ನೂ ಬಿಡದ ಕಾಮ ಪಿಶಾಚಿ; ಕಲ್ಲು ಎತ್ತಿ ಹಾಕಿ ಕೊಂದು ಅತ್ಯಾಚಾರ: ಪಾಪಿ ಸೆರೆ

ಕಿತ್ತೂರಲ್ಲಿ ಹಬೀಬ್ ಶಿಲೇದಾರ್ ಬಂಡಾಯ?

ಬೆಳಗಾವಿ: ಕಿತ್ತೂರು ಕ್ಷೇತ್ರಕ್ಕೆ ಬಾಬಾಸಾಹೇಬ್ ಪಾಟೀಲ್‌ಗೆ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ಹಬೀಬ್ ಶಿಲೇದಾರ್ ಆಕ್ರೋಶಗೊಂಡಿದ್ದಾರೆ. ಹೈಕಮಾಂಡ್ ಮಾಡಿದ ಎಡವಟ್ಟಿನಿಂದ ಕ್ಷೇತ್ರದಲ್ಲಿ ಪಕ್ಷವು ಸೋಲನ್ನು ಅನುಭವಿಸುತ್ತದೆ ಎಂದ ಹಬೀಬ್ ಹೇಳಿದ್ದಾರೆ. ಈ ಮೂಲಕ ಬಂಡಾಯ ಏಳುವ ಮುನ್ಸೂಚನೆ ನೀಡಿದ್ದಾರೆ. ಪರೋಕ್ಷವಾಗಿ ಲಕ್ಷ್ಮಿ ಹೆಬ್ಬಾಳಕರ್ ಹಾಗೂ ವಿನಯ ಕುಲಕರ್ಣಿ ಮೇಲೆ ಹರಿಹಾಯ್ದಿದ್ದಾರೆ.

ಕುಂದಾಪುರದಲ್ಲಿ ಕೊಳ್ಕಬೈಲು ಕಿಶನ್ ಹೆಗ್ಡೆ ಕೆಂಡ

ಉಡುಪಿ: ಕುಂದಾಪುರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಮೊಳಹಳ್ಳಿ ದಿನೇಶ್ ಹೆಗ್ಡೆ ಅವರಿಗೆ ಟಿಕೆಟ್ ಘೋಷಣೆ ಮಾಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಆ ಪಕ್ಷದ ಹಿರಿಯ ನಾಯಕ, ಸಹಕಾರಿ ಧುರೀಣ ಕೊಳ್ಕಬೈಲು ಕಿಶನ್ ಹೆಗ್ಡೆ ಈಗ ಮುನಿಸಿಕೊಂಡಿದ್ದು, ಪಕ್ಷೇತರವಾಗಿ ಕಣಕ್ಕೆ ಇಳಿಯುವ ಮುನ್ಸೂಚನೆ ನೀಡಿದ್ದಾರೆ. ಸದ್ಯ ಕಿಶನ್ ಹೆಗ್ಡೆ ಪರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ಗಳು ಹರಿದಾಡುತ್ತಿವೆ.

ಇದನ್ನೂ ಓದಿ: IPL 2023: ಆರ್​ಸಿಬಿ ಈ ಬಾರಿಯೂ​ ಕಪ್ ಗೆಲ್ಲಲ್ಲ; ಎಬಿಡಿ ವಿಲಿಯರ್ಸ್​ ಅಚ್ಚರಿಯ ಹೇಳಿಕೆ

ಗಂಗಾವತಿಯಲ್ಲಿ ಎಚ್.ಆರ್. ಶ್ರೀನಾಥ್ ಅಸಮಾಧಾನ

ಕೊಪ್ಪಳ: ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ದರಿಂದ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಆರ್ ಶ್ರೀನಾಥ್ ತೀವ್ರ ಅಸಮಾಧಾನಗೊಂಡಿದ್ದಾರೆ. ಟಿಕೆಟ್ ಕೈತಪ್ಪಿದ್ದಕ್ಕೆ ಬೇಸರವಿದೆ. ಮುಂದೆ ಬೆಂಬಲಿಗರ ಸಭೆ ಕರೆದು ತೀರ್ಮಾನ ಮಾಡುತ್ತೇನೆ. ಹೈಕಮಾಂಡ್‌ಗೆ ಇನ್ನೂ ಸಮಯಾವಕಾಶವಿದೆ. ಅಭ್ಯರ್ಥಿ ಹೆಸರನ್ನು ಬದಲಾವಣೆ ಮಾಡಬೇಕು. ಗಂಗಾವತಿ ಬದಲಿಗೆ ರಾಯಚೂರು ಕ್ಷೇತ್ರಕ್ಕೆ ಅಲ್ಪಸಂಖ್ಯಾತ ಅಭ್ಯರ್ಥಿ ಘೋಷಣೆ ಮಾಡಲಿ. ರಾಯಚೂರಿನಲ್ಲಿ ಅಲ್ಪಸಂಖ್ಯಾತ ಸಮುದಾಯ ಮತಗಳು ಸಾಕಷ್ಟಿವೆ. ಹೀಗಾಗಿ ಇಲ್ಲಿ ಇಕ್ಬಾಲ್ ಅನ್ಸಾರಿ ಬದಲಿಗೆ ನನಗೆ ಟಿಕೆಟ್ ಕೊಡಿ ಎಂದು ಶ್ರೀನಾಥ್ ಕೇಳಿದ್ದಾರೆ.

ನಾವು ಮೂಲ ಕಾಂಗ್ರೆಸ್ಸಿಗರು, ನಮ್ಮ ಕಣ ಕಣದಲ್ಲೂ ಕಾಂಗ್ರೆಸ್ ರಕ್ತ ಹರಿಯುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಕ್ಕೆ ನಾನು ಜೆಡಿಎಸ್ ಬಿಟ್ಟು ಕಾಂಗ್ರೆಸ್‌ಗೆ ಬಂದಿದ್ದೆ. ಆದರೆ ಎಲ್ಲೋ ಒಂದು ಕಡೆ ತಪ್ಪಾಗಿದೆ. ಇದನ್ನು ಹೈಕಮಾಂಡ್ ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಧಾರವಾಡ ಗ್ರಾಮೀಣದಲ್ಲೂ ಬಂಡಾಯ?

ಧಾರವಾಡ: ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿಗೆ ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಇಸ್ಮಾಯಿಲ್ ತಮಟಗಾರ ಬಂಡಾಯ ಏಳುವ ಸಾಧ್ಯತೆ ದಟ್ಟವಾಗಿದೆ. ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ಅವರು ಶುಕ್ರವಾರ ಧಾರವಾಡಕ್ಕೆ ವಾಪಸ್ ಬರುವ ಸಾಧ್ಯತೆ ಇದೆ. ಧಾರವಾಡ ಜಿಲ್ಲೆಯಲ್ಲಿ ಓರ್ವ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಕೊಡಲು ಅವರು ಒತ್ತಾಯ ಮಾಡಿದ್ದರು. ತನಗೆ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ಈಗ ಟಿಕೆಟ್‌ ಕೈ ತಪ್ಪಿದ ಹಿನ್ನೆಲೆಯಲ್ಲಿ ಅವರು ಶುಕ್ರವಾರ ತೀರ್ಮಾನ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ: Karnataka Elections : ಯಾದಗಿರಿಯಲ್ಲಿ ಕಾಂಗ್ರೆಸ್‌- ಬಿಜೆಪಿ ಸಂಘರ್ಷ; ಕಾರ್ಯಕರ್ತರ ನಡುವೆ ಕಲ್ಲು ತೂರಾಟ, ವಾಹನಗಳು ಜಖಂ

ಶಿರಹಟ್ಟಿಯಲ್ಲಿ ಘೋಷಣೆಗೆ ಮೊದಲೇ ಅಸಮಾಧಾನ

ಗದಗ: ಜಿಲ್ಲೆಯ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಘೋಷಣೆ ಆಗುವ ಮೊದಲೇ ಅಲ್ಲಿ ಅಸಮಾಧಾನ ಭುಗಿಲೆದ್ದಿದೆ. ಟಿಕೆಟ್ ಘೋಷಣೆ ಮುನ್ನವೇ ಕ್ಷೇತ್ರದಲ್ಲಿ ವಿರೋಧಿ ಅಲೆ ಶುರುವಾಗಿದೆ. ಶಿರಹಟ್ಟಿ ಮೀಸಲು ಕ್ಷೇತ್ರಕ್ಕೆ ಹೊಸಬರಿಗೆ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂಬ ವದಂತಿ ಹಬ್ಬಿರುವುದರಿಂದ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ರಾಯಚೂರು ಮೂಲದ ದಲಿತ ಹೋರಾಟಗಾರ ಅಂಬಣ್ಣ ಎಂಬುವರಿಗೆ ಟಿಕೆಟ್‌ ಕೊಡಲಾಗುವುದು ಎಂಬ ಸುದ್ದಿ ಹರಡಿದ್ದು, ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಲಾಗಿದ್ದು, “ಗೋ ಬ್ಯಾಕ್ ಅಂಬಣ್ಣ” ಎಂದು ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಸೇರಿ ವಿವಿಧೆಡೆ ಮಳೆ ಅಬ್ಬರ; ಆರೆಂಜ್‌ ಅಲರ್ಟ್‌ ಘೋಷಣೆ

Karnataka Weather Forecast : ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜೂನ್‌ 27ರವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Heavy Rain Alert) ಸಾಧ್ಯತೆಯಿದೆ. ಪ್ರತ್ಯೇಕ ಕಡೆಗಳಲ್ಲಿ ವ್ಯಾಪಕ (Rain News) ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಭಾಗದಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಊತ್ತರ ಒಳನಾಡಿನ ಕೆಲ ಪ್ರದೇಶದಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಬೆಳಗಾವಿಯಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.

ಮಲೆನಾಡಿನ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಮತ್ತು 21 ಡಿಗ್ರಿ ಸೆಲಿಯಸ್‌ ಇರಲಿದೆ.

ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರೀ ಮಳೆಯೊಂದಿಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ಘೋಷಿಸಿದೆ.

ಜೂನ್‌ 27ರವರೆಗೆ ಮೀನುಗಾರರಿಗೆ ಎಚ್ಚರಿಕೆ

ಜೂನ್‌ 27 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ

ಇದನ್ನೂ ಓದಿ: Tumkur Shoot out : ತುಮಕೂರಿನಲ್ಲಿ ಸದ್ದು ಮಾಡಿದ ಪೊಲೀಸ್ ತುಪಾಕಿ; ಸರಗಳ್ಳನ ಹೆಡೆಮುರಿ ಕಟ್ಟಿದ ಖಾಕಿ

ಮಾನ್ಸೂನ್‌ಗೂ ಕಾಲಿಟ್ಟ ಟ್ರೆಂಚ್‌ ಕೋಟ್‌ ಫ್ಯಾಷನ್‌!

ಮಳೆಗಾಲಕ್ಕೂ ಟ್ರೆಂಚ್‌ ಕೋಟ್‌ (Monsoon trench coat fashion) ಫ್ಯಾಷನ್‌ ಎಂಟ್ರಿ ನೀಡಿದೆ. ಹೌದು, ಕೇವಲ ಚಳಿಗಾಲದಲ್ಲಿ ಟ್ರೆಂಡಿಯಾಗುತ್ತಿದ್ದ, ಟ್ರೆಂಚ್‌ ಕೋಟ್‌ಗಳು ಇದೀಗ ಮಾನ್ಸೂನ್‌ ಸೀಸನ್‌ಗೂ ಕಾಲಿಟ್ಟಿದ್ದು, ಸೆಲೆಬ್ರೆಟಿಗಳನ್ನು ಮಾತ್ರವಲ್ಲ, ಸಾಮಾನ್ಯ ಹುಡುಗಿಯರನ್ನು ಸವಾರಿ ಮಾಡತೊಡಗಿವೆ. ಇದಕ್ಕೆ ಪೂರಕ ಎಂಬಂತೆ, ಕಿಂಗ್‌ ಖಾನ್‌ ಮಗಳು ಹಾಗೂ ನಟಿ ಸುಹಾನಾ ಖಾನ್‌ ಟ್ರೆಂಚ್‌ ಕೋಟ್‌ ಧರಿಸಿದ್ದು, ಈ ಫ್ಯಾಷನ್‌ ಜೆನ್‌ ಜಿ ಹುಡುಗಿಯರನ್ನು ಸೆಳೆದಿದೆ. ಮಾನ್ಸೂನ್‌ನಲ್ಲೂ ಟ್ರೆಂಚ್‌ ಕೋಟ್‌ ಕ್ಲಾಸಿಯಾಗಿ ಕಾಣಿಸುತ್ತದೆ ಎಂಬುದನ್ನು ಪ್ರೂವ್‌ ಮಾಡಿದೆ.

Monsoon Trench Coat Fashion

ಟ್ರೆಂಚ್‌ಕೋಟ್‌ ವೆರೈಟಿ ವಿನ್ಯಾಸ

ಟ್ರೆಂಚ್‌ ಕೋಟ್‌ಗಳು ನೋಡಲು ಒಂದೇ ಬಗೆಯದ್ದಾಗಿ ಕಾಣುತ್ತವಾದರೂ ಸ್ಟಿಚ್ಚಿಂಗ್‌ ನಾನಾ ಶೈಲಿಯಲ್ಲಿರುತ್ತವೆ. ಸ್ಲೀಕ್‌ ಲುಕ್‌, ಫಾರ್ಮಲ್‌ ಬ್ಲೇಜರ್‌ ಸ್ಟೈಲ್‌ನಲ್ಲೂದೊರಕುತ್ತವೆ. ಮೊದಲೆಲ್ಲಾ ಹಿಲ್‌ ಸ್ಟೇಷನ್‌ಗಳಲ್ಲಿ ಮಾತ್ರ ಇವುಗಳ ಬಳಕೆ ಹೆಚ್ಚಾಗಿತ್ತು. ಬರಬರುತ್ತಾ ಸಿನಿಮಾ ತಾರೆಯರ ವಾರ್ಡ್‌ರೋಬ್‌ ಸೇರಿದ ನಂತರ ಸಾಮಾನ್ಯ ಹುಡುಗಿಯರ ಮನಸ್ಸನ್ನು ಗೆಲ್ಲತೊಡಗಿದವು. ಸ್ವೆಟರ್‌ ಹಾಗೂ ಜಾಕೆಟ್‌ ಧರಿಸುವಂತೆ, ಟ್ರೆಂಚ್‌ ಕೋಟ್‌ಗಳನ್ನು ಧರಿಸುವುದು ಹೆಚ್ಚಾಯಿತು ಎನ್ನುತ್ತಾರೆ ಜಿಯಾ.

ಕ್ಲಾಸಿಕ್‌ ಲುಕ್‌ ಗ್ಯಾರಂಟಿ

ಅಂದಹಾಗೆ, ವೆಸ್ಟರ್ನ್‌ ಲುಕ್‌ ನೀಡುವಲ್ಲಿಈ ಟ್ರೆಂಚ್‌ ಕೋಟ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ. ಡಿಸೈನರ್‌ ಋತು ಹೇಳುವಂತೆ, ಇದೀಗ ಇಂಡೋ – ವೆಸ್ಟರ್ನ್ ಸ್ಟೈಲ್‌ನಲ್ಲೂ ಈ ಕೋಟ್‌ಗಳನ್ನು ಬಳಸುವುದು ಹೆಚ್ಚಾಗತೊಡಗಿದೆ. ಹಾಗಾಗಿ ಫಾರ್ಮಲ್‌ , ಎಥ್ನಿಕ್‌ ಡ್ರೆಸ್‌ ಧರಿಸುವ ಮಾನಿನಿಯರಿಗೂ ಪ್ರಿಯವಾಗತೊಡಗಿವೆ ಎನ್ನುತ್ತಾರೆ ಅವರು.

ಹೀಗಿರಲಿ ಟ್ರೆಂಚ್‌ ಕೋಟ್‌ ಸ್ಟೈಲಿಂಗ್‌

  • ಟ್ರೆಂಚ್‌ ಕೋಟ್‌ ಬೆಚ್ಚಗಿಡುವುದರಿಂದ ಧರಿಸುವವರು ಸಿಂಪಲ್‌ ಇನ್ನರ್‌ ಡ್ರೆಸ್‌ ಧರಿಸುವುದು ಬೆಸ್ಟ್.
  • ಉದ್ದಗಿರುವವರಿಗೆ ಯಾವುದೇ ಬಗೆಯ ಟ್ರೆಂಚ್‌ ಕೋಟ್‌ ಆದರೂ ಸೂಟ್‌ ಆಗುತ್ತವೆ.
  • ಪ್ಲಂಪಿಯಾಗಿರುವವರು ಆದಷ್ಟು ಡಿಸೈನರ್‌ ಕೋಟ್‌ ಧರಿಸುವುದು ಉತ್ತಮ.
  • ವಿಂಟೆಂಜ್‌ ಹಾಗೂ ರಾಯಲ್‌ ಕಲರ್‌ಗಳ ಟ್ರೆಂಚ್‌ ಕೋಟ್‌ಗಳು ರಾಯಲ್‌ ಲುಕ್‌ ನೀಡುತ್ತವೆ.
  • ಪ್ರಿಂಟೆಡ್‌ ಕೋಟ್‌ಗಳು ಟ್ರೆಂಡ್‌ನಲ್ಲಿಲ್ಲ.
  • ಫಿಟ್ಟಿಂಗ್‌ ಇದ್ದರೇ ಮಾತ್ರ ಚೆನ್ನಾಗಿ ಕಾಣಿಸುತ್ತವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

Karnataka Weather Forecast : ರಾಜ್ಯಾದ್ಯಂತ ನೈರುತ್ಯ ಮುಂಗಾರು ದುರ್ಬಲವಾಗಿದ್ದರೂ, ಕರಾವಳಿ ಹಾಗೂ ಒಳನಾಡಿನ ವಿವಿಧೆಡೆ ಮಳೆಯು (Rain News) ಅಬ್ಬರಿಸುತ್ತಿದೆ. ಕಡಲ ತೀರದಲ್ಲಿ ಅಲೆಗಳು ಆಳೆತ್ತರದಲ್ಲಿ ಅಪ್ಪಳಿಸುತ್ತಿದ್ದು, ನಾಳೆಗೂ ಮಳೆ ಮುನ್ಸೂಚನೆಯನ್ನು ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಕರಾವಳಿಯಲ್ಲಿ ವರುಣಾರ್ಭಟ (Rain News) ಮುಂದುವರೆದಿದೆ. ಕಳೆದ ಎರಡು ಮೂರು ದಿನಗಳಿಂದ ಕರಾವಳಿಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುತ್ತಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿದ್ದು, ಭಾರೀ ಗಾಳಿ ಹಿನ್ನೆಲೆಯಲ್ಲಿ ದಡಕ್ಕೆ ಆಳೆತ್ತರದ ಅಲೆಗಳು ಅಪ್ಪಳಿಸುತ್ತಿದೆ. ರೆಡ್‌ ಅಲರ್ಟ್‌ ನೀಡಲಾಗಿದ್ದು, ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್ ಬಿದ್ದಿದೆ. ಮೀನುಗಾರಿಕೆಗೆ ತೆರಳದಂತೆ ಹವಾಮಾನ ಇಲಾಖೆ ಮುನ್ಸೂಚನೆ (Karnataka Weather Forecast) ನೀಡಿದೆ.

ಜೂನ್‌ 25ರವರೆಗೆ ಕರಾವಳಿ ಮತ್ತು ದಕ್ಷಿನ ಒಳನಾಡಿನಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಾದ ಬೀದರ್‌, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಚಿಕ್ಕಬಳ್ಳಾಪುರ , ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರದಲ್ಲಿ ಬಿರುಗಾಳಿ ಸಹಿತ ಗುಡುಗು, ಮಿಂಚಿನ ಮಳೆಯಾಗಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿ ಬೀಸಲಿದೆ.

ರಾಜ್ಯಾದ್ಯಂತ ಮುಂಗಾರು ದುರ್ಬಲವಾಗಿದ್ದರೂ, ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ಪಣಂಬೂರು, ಭಾಲ್ಕಿ 5 ಸೆಂ.ಮೀ, ಮಂಗಳೂರು ವಿಮಾನ ನಿಲ್ದಾಣ , ಕೊಟ್ಟಿಗೆಹಾರ ತಲಾ 4 ಸೆಂ.ಮೀ ಮಳೆಯಾಗಿದೆ. ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿಯಲ್ಲಿ 3 ಸೆಂ.ಮೀ ಮಳೆಯಾಗಿದೆ. ಧರ್ಮಸ್ಥಳ, ಮಂಕಿ, ಪುತ್ತೂರು , ಅಂಕೋಲಾ, ರೋನ್, ಭಾಗಮಂಡಲ, ಆಗುಂಬೆಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಕಾರವಾರ, ಮೂಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ, ಉಪ್ಪಿನಂಗಡಿ, ನರಗುಂದ, ನಿಪ್ಪಾಣಿ, ಶಹಪುರ, ಕುಷ್ಟಗಿ, ಲಿಂಗನಮಕ್ಕಿ ಎಚ್‌ಎಂಎಸ್ , ಪೊನ್ನಂಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ಕರಾವಳಿಗೆ ವರ್ಷಧಾರೆಯ ಎಚ್ಚರಿಕೆ; ಬೆಂಗಳೂರಿನಲ್ಲಿ ಹೇಗೆ?

Rain News : ಕರಾವಳಿ ಹಾಗೂ ಒಳನಾಡಿನ ಭಾಗದಲ್ಲಿ ಮಳೆಯು ಅಬ್ಬರಿಸಲಿದ್ದು, ಹವಾಮಾನ ಇಲಾಖೆ (karnataka Weather Forecast) ಮುನ್ನೆಚ್ಚರಿಕೆಯನ್ನು ನೀಡಿದೆ. ವಿವಿಧೆಡೆ ಮಳೆಯೊಂದಿಗೆ ಬಿರುಗಾಳಿ ಬೀಸಲಿದ್ದು, ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕವಾಗಿ ಮಧ್ಯಮದಿಂದ ಭಾರಿ ಮಳೆಯಾಗುವ (Rain News) ನಿರೀಕ್ಷೆಯಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳ ಸುತ್ತಮುತ್ತ ಪ್ರತ್ಯೇಕವಾಗಿ ಅತಿ ಹೆಚ್ಚು ಮಳೆಯಾಗುವ (Heavy Rain) ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು ಗಾಳಿಯೊಂದಿಗೆ (30-40 ಕಿ.ಮೀ) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಸಾಕಷ್ಟು ವ್ಯಾಪಕವಾದ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ ಮತ್ತು ಕಲಬುರಗಿಯಲ್ಲಿ ಭಾರಿ ಮಳೆಯಾಗಲಿದೆ.

ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Theft case : ಕಳ್ಳತನ ಮಾಡುತ್ತಿರುವಾಗಲೇ ಕಳ್ಳ ಲಾಕ್‌; ಸಿಸಿ ಕ್ಯಾಮೆರಾ ಲೈವ್ ಸ್ಟ್ರೀಮ್ ಆಧರಿಸಿ ಅರೆಸ್ಟ್‌

ಇಲ್ಲೆಲ್ಲ ಸಿಕ್ಕಾಪಟ್ಟೆ ಮಳೆ

ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯು 40-50 ಕಿ.ಮೀ ವೇಗದಲ್ಲಿ ಬೀಸದಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಬೆಳಗಾವಿ, ಧಾರವಾಡ, ಹಾವೇರಿ, ಚಾಮರಾಜನಗರ, ದಾವಣಗೆರೆ, ಮಂಡ್ಯ ಮತ್ತು ಮೈಸೂರಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ

ಹೈವೇವ್‌ ಅಲರ್ಟ್‌!

ಜೂನ್‌ 24ರಂದು ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ತೀವ್ರ ಗಾಳಿ ಬೀಸಲಿದೆ. ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳ ಎಚ್ಚರಿಕೆ ನೀಡಲಾಗಿದೆ. 2.8 ರಿಂದ 3.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಹೇಳಲಿದೆ. ಇನ್ನೂ ಉಡುಪಿಯ ಬೈಂದೂರಿನಿಂದ ಕಾಪುವರೆಗೆ ಹೈ ವೇವ್ ಅಲರ್ಟ್ ನೀಡಲಾಗಿದೆ. 2.9 – 3.2 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ 3.0 -3.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದೆ. ಹೀಗಾಗಿ ಪ್ರವಾಸಿಗರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

karnataka Weather : ನಾಳೆಗೆ ಹೈವೇವ್‌ ಅಲರ್ಟ್‌- ಬಿರುಗಾಳಿ ಸಹಿತ ಮಳೆಯೊಂದಿಗೆ ಅಪ್ಪಳಿಸಲಿದೆ ರಕ್ಕಸ ಅಲೆ

karnataka Weather Forecast : ಕರಾವಳಿಯಲ್ಲಿ ಬಿರುಗಾಳಿ ಬೀಸಲಿದ್ದು, ಕಡಲತೀರದಲ್ಲಿ ಅಲೆಗಳು ಅಪ್ಪಳಿಸಲಿದೆ. ಹಲವಡೆ ಹೈವೇವ್‌ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಬಿರುಗಾಳಿಯೊಂದಿಗೆ (Rain News) ಮಳೆಯಾಗಲಿದೆ.

VISTARANEWS.COM


on

By

karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಜೂನ್‌ 25ರವರೆಗೆ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ (Heavy rain) ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಸುತ್ತಮುತ್ತ ವ್ಯಾಪಕ (Rain News) ಮಳೆಯಾಗಲಿದ್ದು, ಬಲವಾದ ಗಾಳಿಯು ಬೀಸಲಿದೆ. ಕೆಲವೆಡೆ ಭೂ ಕುಸಿತವಾಗುವ ಸಾಧ್ಯತೆ ಕುರಿತು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರದ ಹಲವೆಡೆ ಬಿರುಗಾಳಿ ಸಹಿತ (40-50 ಕಿ.ಮೀ) ಗುಡುಗಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಜಿಲ್ಲೆಗಳಿಗೆ ಎಚ್ಚರಿಕೆ

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಪ್ರತ್ಯೇಕ ಕಡೆಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ. ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ, ಕೊಡಗು ಜಿಲ್ಲೆಗಳಲ್ಲಿ ಗಾಳಿ ವೇಗವು 40-50 ಕಿ,ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಗದಗ, ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆಯಲ್ಲೂ ವಿಪರೀತ ಮಳೆಯಾಗಲಿದೆ.

ಹೈವೇವ್‌ ಅಲರ್ಟ್‌!

ಜೂನ್‌ 24ರಂದು ಕರಾವಳಿಯಲ್ಲಿ ಗಂಟೆಗೆ 35 ರಿಂದ 55 ಕಿ.ಮೀ ವೇಗದಲ್ಲಿ ತೀವ್ರ ಗಾಳಿ ಬೀಸಲಿದೆ. ದಕ್ಷಿಣ ಕನ್ನಡದ ಮುಲ್ಕಿಯಿಂದ ಮಂಗಳೂರಿನವರೆಗೆ ಅಲೆಗಳ ಎಚ್ಚರಿಕೆ ನೀಡಲಾಗಿದೆ. 2.8 ರಿಂದ 3.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಹೇಳಲಿದೆ. ಇನ್ನೂ ಉಡುಪಿಯ ಬೈಂದೂರಿನಿಂದ ಕಾಪುವರೆಗೆ ಹೈ ವೇವ್ ಅಲರ್ಟ್ ನೀಡಲಾಗಿದೆ. 2.9 – 3.2 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳದವರೆಗೆ 3.0 -3.3 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳು ಅಪ್ಪಳಿಸಲಿದೆ. ಹೀಗಾಗಿ ಪ್ರವಾಸಿಗರು ಹಾಗೂ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ: Bengaluru Power Cut: ತುರ್ತು ನಿರ್ವಹಣಾ ಕೆಲಸ; ಜೂ.25ರಂದು ಬೆಂಗಳೂರಿನಲ್ಲಿ ವಿದ್ಯುತ್‌ ಕಡಿತ

ಕರಾವಳಿಯಲ್ಲಿ ಮಳೆಯಾಟ

ನೈರುತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಕರಾವಳಿಯ ಬಹುತೇಕ ಕಡೆಗಳಲ್ಲಿ, ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡದ ಪಣಂಬೂರು, ಬೀದರ್‌ನ ಭಾಲ್ಕಿಯಲ್ಲಿ 5 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಕೊಟ್ಟಿಗೆಹಾರದಲ್ಲಿ 4 ಸೆಂ.ಮೀ, ಉಡುಪಿ, ಸುಳ್ಯ, ಬಾದಾಮಿ, ದೇವರಹಿಪ್ಪರಗಿಯಲ್ಲಿ 3 ಸೆಂ.ಮೀ ಮಳೆ ಸುರಿದಿದೆ.

ಧರ್ಮಸ್ಥಳ, ಮಂಕಿ, ಪುತ್ತೂರು, ಅಂಕೋಲಾ, ರೋಣ, ಭಾಗಮಂಡಲ, ಆಗುಂಬೆಯಲ್ಲಿ ತಲಾ 2 ಸೆಂ.ಮೀನಷ್ಟು ಮಳೆಯಾಗಿದೆ. ಕಾರವಾರ, ಮೂಲ್ಕಿ, ಕುಂದಾಪುರ, ಬೆಳ್ತಂಗಡಿ, ಹೊನ್ನಾವರ, ಕಾರ್ಕಳ , ಉಪ್ಪಿನಂಗಡಿ , ನರಗುಂದ, ನಿಪ್ಪಾಣಿ, ಶಹಪುರ, ಕುಷ್ಟಗಿ, ಲಿಂಗನಮಕ್ಕಿ ಎಚ್‌ಎಂಎಸ್ , ಪೊನ್ನಂಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Gold Rate Today
ಚಿನ್ನದ ದರ24 mins ago

Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕ್ರೀಡೆ28 mins ago

IND vs ENG Semi Final: ಆಂಗ್ಲರನ್ನು ಸದೆಬಡಿದು ಫೈನಲ್​ ಪ್ರವೇಶಿಸಲಿ ಭಾರತ

Rashmika Mandanna Ayushmann Khurrana Team Up For Horror Comedy
ಟಾಲಿವುಡ್34 mins ago

Rashmika Mandanna: ರಶ್ಮಿಕಾ ಇದೀಗ ಟಾಲಿವುಡ್‌ಗೆ ಬೈ ಬೈ; ಬಾಲಿವುಡ್‌ನಲ್ಲಿಯೇ ಬಿಡಾರ!

Self Harming
ಕರ್ನಾಟಕ40 mins ago

Self Harming: ಕೆಲಸದಿಂದ ತೆಗೆದು ಕಿರುಕುಳ; ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

jewellery robbery case
ಕ್ರೈಂ40 mins ago

Robbery Case: 30 ಸೆಕೆಂಡ್‌ನಲ್ಲಿ ಇಡೀ ಜ್ಯುವೆಲ್ಲರಿ ದರೋಡೆ, ಸಿಸಿಟಿವಿಯಲ್ಲಿ ಕೃತ್ಯ ಸೆರೆ

Parineethi Chopra
Latest52 mins ago

Parineethi Chopra: ಏಳುಮಲ್ಲಿಗೆ ತೂಕದ ಚೆಲುವೆ ಪರಿಣಿತಿ ಚೋಪ್ರಾ ಸಿಕ್ಕಾಪಟ್ಟೆ ದಪ್ಪಗಾಗಿದ್ದು ಯಾಕೆ?

Asaduddin Owais
ದೇಶ54 mins ago

Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

Actor Darshan support by anchor hemalatha
ಸ್ಯಾಂಡಲ್ ವುಡ್59 mins ago

‌Actor Darshan: ರೇಣುಕಾಸ್ವಾಮಿಯನ್ನ ಹೀರೊ ಮಾಡೋದು ನಿಲ್ಲಿಸಿ, ದರ್ಶನ್‌ನ ಬಿಟ್ಟುಕೊಡಲ್ಲ ಎಂದ ಖ್ಯಾತ ನಿರೂಪಕಿ!

Life threat
ಕರ್ನಾಟಕ1 hour ago

Life threat: ಹುಬ್ಬಳ್ಳಿ ಏರ್‌ಪೋರ್ಟ್‌ ನಿರ್ದೇಶಕರಿಗೆ ಜೀವ ಬೆದರಿಕೆ; ʼಲಾಂಗ್ ಲಿವ್ ಪ್ಯಾಲೆಸ್ತೀನ್ʼ ಮೇಲ್‌ ಐಡಿಯಿಂದ ಸಂದೇಶ

Para Badminton Ranking
ಕ್ರೀಡೆ1 hour ago

Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌