horoscope today read your daily horoscope predictions for april 8, 2023Horoscope Today : ಇಂದು ನಾಲ್ಕು ರಾಶಿಯವರಿಗೆ ಶುಭ ಫಲ; ನಿಮ್ಮ ಭವಿಷ್ಯ ಹೀಗಿದೆ - Vistara News

ಪ್ರಮುಖ ಸುದ್ದಿ

Horoscope Today : ಇಂದು ನಾಲ್ಕು ರಾಶಿಯವರಿಗೆ ಶುಭ ಫಲ; ನಿಮ್ಮ ಭವಿಷ್ಯ ಹೀಗಿದೆ

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷದ ಬಿದಿಗೆಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today ) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

Horoscope Today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (08-04-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.

ತಿಥಿ: ಬಿದಿಗೆ 10:10 ವಾರ: ಶನಿವಾರ
ನಕ್ಷತ್ರ: ಸ್ವಾತಿ 13:57 ಯೋಗ: ವಜ್ರ 23:57
ಕರಣ: ಗರಜ 10:10 ಇಂದಿನ ವಿಶೇಷ: ಸದ್ಗುರು ಭಗವಾನ್ ಶ್ರೀಧರ ಸ್ವಾಮಿಗಳ ಆರಾಧನೆ
ಅಮೃತಕಾಲ: ಬೆಳಗ್ಗೆ 05 ಗಂಟೆ 12 ನಿಮಿಷದಿಂದ 06 ಗಂಟೆ 48 ನಿಮಿಷದವರೆಗೆ.

ಸೂರ್ಯೋದಯ : 06:12 ಸೂರ್ಯಾಸ್ತ : 06:32

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಆರೋಗ್ಯ ಮಧ್ಯಮ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗುವವು. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಆರ್ಥಿಕವಾಗಿ ಸಂಕಷ್ಟ ಎದುರಿಸುವ ಸಾಧ್ಯತೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಾಹನ ಖರೀದಿ ವಿಚಾರ ಮಾಡುವಿರಿ. ಹಿಂದೆ ನಡೆದ ಘಟನೆಯನ್ನು ನೆನಪಿಸಿಕೊಂಡು ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ. ಪ್ರಯಾಣ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಸಂಕಷ್ಟ ಎದುರಿಸುವ ಸಾಧ್ಯತೆ. ಕೆಲಸ ಕಾರ್ಯಗಳು ನಿಧಾನ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ. ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಕೇಳಿ ಬರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಅನಿವಾರ್ಯವಾಗುವ ಕೆಲ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ದಿಢೀರ್‌ ಪ್ರಯಾಣ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು. ಆರೋಗ್ಯ ಮಧ್ಯಮ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ: Navavidha Bhakti : ಪಾದಸೇವೆಯಿಂದಲೂ ಭಕ್ತಿಯ ವೃದ್ಧಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಅಸ್ಸಾಂನಲ್ಲಿ ʼವಿಐಪಿ ಸಂಸ್ಕೃತಿʼಗೆ ಬ್ರೇಕ್‌ ಹಾಕಲು ಮುಂದಾದ ಸಿಎಂ ಹಿಮಂತ ಬಿಸ್ವಾ; ತಮ್ಮ ವಿದ್ಯುತ್‌ ಬಿಲ್‌ ತಾವೇ ಪಾವತಿಸುವುದಾಗಿ ಘೋಷಣೆ

Himanta Biswa Sarm: ಸುಮಾರು 70 ವರ್ಷಗಳ ವಿಐಪಿ ಸಂಸ್ಕೃತಿಯನ್ನು ತೊಡೆದು ಹಾಕಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಂದಾಗಿದ್ದಾರೆ. ಇದರ ಮೊದಲ ಹೆಜ್ಜೆಯಾಗಿ ತಾವು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ತಮ್ಮ ವಿದ್ಯುತ್ ಬಿಲ್ ಅನ್ನು ತಾವೇ ಪಾವತಿಸುವುದಾಗಿ ಪ್ರಕಟಿಸಿದ್ದಾರೆ. ʼʼತೆರಿಗೆದಾರರ ಹಣವನ್ನು ಬಳಸಿಕೊಂಡು ಸರ್ಕಾರಿ ಅಧಿಕಾರಿಗಳ ವಿದ್ಯುತ್ ಬಿಲ್ ಪಾವತಿಸುವ ವಿಐಪಿ ಸಂಸ್ಕೃತಿಯ ನಿಯಮವನ್ನು ನಾವು ಕೊನೆಗೊಳಿಸುತ್ತಿದ್ದೇವೆ. ನಾನು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ನಮ್ಮ ವಿದ್ಯುತ್ ಬಿಲ್‌ಗಳನ್ನು ನಾವೇ ಪಾವತಿಸಲು ಪ್ರಾರಂಭಿಸುತ್ತೇವೆ” ಎಂದು ಘೋಷಿಸಿದ್ದಾರೆ.

VISTARANEWS.COM


on

Himanta Biswa Sarma
Koo

ದಿಸ್ಪುರ: ಅಸ್ಸಾಂನಲ್ಲಿ ಕೆಲವು ʼವಿಐಪಿ ಸಂಸ್ಕೃತಿʼ (VIP culture)ಯನ್ನು ತೊಡೆದು ಹಾಕುವುದಾಗಿ ಹೇಳಿರುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ಅವರು, ಇದರ ಮೊದಲ ಹೆಜ್ಜೆಯಾಗಿ ತಾವು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ತಮ್ಮ ವಿದ್ಯುತ್ ಬಿಲ್ ಅನ್ನು ತಾವೇ ಪಾವತಿಸುವುದಾಗಿ ಪ್ರಕಟಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ʼʼತೆರಿಗೆದಾರರ ಹಣವನ್ನು ಬಳಸಿಕೊಂಡು ಸರ್ಕಾರಿ ಅಧಿಕಾರಿಗಳ ವಿದ್ಯುತ್ ಬಿಲ್ ಪಾವತಿಸುವ ʼವಿಐಪಿ ಸಂಸ್ಕೃತಿʼಯ ನಿಯಮವನ್ನು ನಾವು ಕೊನೆಗೊಳಿಸುತ್ತಿದ್ದೇವೆ. ನಾನು ಮತ್ತು ಮುಖ್ಯ ಕಾರ್ಯದರ್ಶಿ ಜುಲೈ 1ರಿಂದ ನಮ್ಮ ವಿದ್ಯುತ್ ಬಿಲ್‌ಗಳನ್ನು ನಾವೇ ಪಾವತಿಸಲು ಪ್ರಾರಂಭಿಸುತ್ತೇವೆ” ಎಂದು ಘೋಷಿಸಿದ್ದಾರೆ.

ಜತೆಗೆ “ಜುಲೈಯಿಂದ ಎಲ್ಲ ಸರ್ಕಾರಿ ನೌಕರರು ತಮ್ಮ ಸ್ವಂತ ವಿದ್ಯುತ್ ಬಳಕೆಗೆ ತಾವೇ ಪಾವತಿಸಬೇಕಾಗುತ್ತದೆ” ಎಂದೂ ತಿಳಿಸಿದ್ದಾರೆ. “ಸಚಿವರು ಮತ್ತು ಹಿರಿಯ ಸರ್ಕಾರಿ ಅಧಿಕಾರಿಗಳ ನಿವಾಸಗಳ ವಿದ್ಯುತ್ ಬಿಲ್‌ಗಳನ್ನು ಸರ್ಕಾರವೇ ಇಷ್ಟು ದಿನ ಪಾವತಿಸುತ್ತ ಬಂದಿದೆ. ಈ ವ್ಯವಸ್ಥೆ ಇಂದು ನಿನ್ನೆಯದ್ದಲ್ಲ. ಸುಮಾರು 75 ವರ್ಷಗಳ ಸುದೀರ್ಘ ಕಾಲದಿಂದ ನಡೆದುಕೊಂಡು ಬಂದಿದೆʼʼ ಎಂದು ಅವರು ಹೇಳಿದ್ದಾರೆ. ಈ ವ್ಯವಸ್ಥೆಯನ್ನು ಬದಲಾಯಿಸುವುದಾಗಿ ನುಡಿದಿದ್ದಾರೆ.

ಕಾರಣವೇನು?

ಅಸ್ತಿತ್ವದಲ್ಲಿರುವ ವಿಐಪಿ ಸಂಸ್ಕೃತಿಯಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತಿದೆ. ಇದನ್ನು ತಪ್ಪಿಸಿದರೆ ವಿದ್ಯುತ್ ಮಂಡಳಿಗೆ ವಿದ್ಯುತ್ ಶುಲ್ಕವನ್ನು ಹೆಚ್ಚಿಸಬೇಕಾದ ಪ್ರಮೇಯ ಎದುರಾಗುವುದಿಲ್ಲ. ಹೀಗಾಗಿ ಈ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ ಎನ್ನಲಾಗಿದೆ. “ನಾನು ಕೂಡ ಮೂರು ವರ್ಷಗಳಿಂದ ಉಚಿತ ವಿದ್ಯುತ್ ಬಳಸಿದ್ದೇನೆ. ಈ ಬಗ್ಗೆ ನನಗೆ ತಿಳಿದಿರಲಿಲ್ಲ. ಇತ್ತೀಚೆಗೆ ಚರ್ಚೆಯ ಸಮಯದಲ್ಲಿ ಅದರ ಬಗ್ಗೆ ತಿಳಿದುಕೊಂಡೆ. ನಮ್ಮ ವಿದ್ಯುತ್‌ ಬಿಲ್‌ ನಾವೇ ಪಾವತಿಸುವುದಿಂದ ವಿದ್ಯುತ್ ಮಂಡಳಿಗೆ ಸಹಾಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ಶರ್ಮಾ ಹೇಳಿದ್ದಾರೆ.

“ಸಿಎಂ ಕಾರ್ಯದರ್ಶಿ, ಗೃಹ ಮತ್ತು ಹಣಕಾಸು ಇಲಾಖೆಗಳನ್ನು ಹೊರತುಪಡಿಸಿ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ರಾತ್ರಿ 8 ಗಂಟೆಗೆ ಸ್ವಯಂ ಚಾಲಿತವಾಗಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಕ್ರಮ ಕೈಗೊಂಡಿದ್ದೇವೆ. ಇದರಿಂದ ನಾವು ವಿದ್ಯುತ್ ಉಳಿಸಬಹುದು. ಈ ಕ್ರಮವು ಈಗಾಗಲೇ ರಾಜ್ಯದಾದ್ಯಂತ 8,000 ಸರ್ಕಾರಿ ಕಚೇರಿಗಳು, ಶಾಲೆಗಳಲ್ಲಿ ಜಾರಿಯಲ್ಲಿದೆ” ಎಂದು ಹಿಮಂತ ಶರ್ಮಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪ್ರಚಾರದ ವೇಳೆ ರಾಹುಲ್‌ ಗಾಂಧಿಯಿಂದ ಚೀನಾ ಸಂವಿಧಾನ ಪ್ರತಿ ಪ್ರದರ್ಶನ; ಹಿಮಂತ ಬಿಸ್ವಾ ಗಂಭೀರ ಆರೋಪ

ಇದಕ್ಕೂ ಮುನ್ನ ಗುವಾಹಟಿಯ ರಾಜ್ಯ ಸಚಿವಾಲಯ ಸಂಕೀರ್ಣದಲ್ಲಿ ನಡೆದ ಸಮಾರಂಭದಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರು 2.5 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಗ್ರಿಡ್-ಸಂಪರ್ಕಿತ ಮೇಲ್ಛಾವಣಿ ಮತ್ತು ನೆಲ-ಮೌಂಟೆಡ್ ಸೌರ ಪಿವಿ ವ್ಯವಸ್ಥೆಯಾದ ಜನತಾ ಭವನ ಸೌರ ಯೋಜನೆಯನ್ನು ಅನಾವರಣಗೊಳಿಸಿದರು. ಈ ವೇಳೆ ಅವರು, ಪ್ರತಿ ಸರ್ಕಾರಿ ಕಚೇರಿಗಳು ಹಂತಹಂತವಾಗಿ ಸೌರಶಕ್ತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. ಆರಂಭಿಕ ಹಂತದಲ್ಲಿ ವೈದ್ಯಕೀಯ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳನ್ನು ಸೌರ ಶಕ್ತಿಗೆ ಪರಿವರ್ತಿಸಲು ಕರೆ ನೀಡಿದರು.

Continue Reading

ಧಾರ್ಮಿಕ

Bakrid 2024: ತ್ಯಾಗ, ಬಲಿದಾನವನ್ನು ಸ್ಮರಿಸುವ ಈದುಲ್ ಅಝ್ಹಾ

Bakrid 2024: ಹಝ್ರತ್ ಇಬ್ರಾಹಿಂ ಅವರಿಗೆ ಖಲೀಲುಲ್ಲಾಹ್ ಅಲ್ಲಾಹನ ಸ್ನೇಹಿತ ಎಂಬ ಗೌರವ ಪದವಿಯನ್ನು ನೀಡಿ ಗೌರವಿಸುತ್ತಾನೆ. ಪ್ರವಾದಿ ಇಬ್ರಾಹಿಂ ಅವರ ಜೀವನ ಬದುಕು ಇತಿಹಾಸವನ್ನು ನೆನಪಿಸುವುದೇ ಹಜ್ ಬಕ್ರೀದ್‌ ಆಚರಣೆಯ ಉದ್ದೇಶ.

VISTARANEWS.COM


on

bakrid 2024
Koo

:: ಹಾಶಿಂ ಬನ್ನೂರು

ಮುಸ್ಲಿಮರು (Muslim) ಆಚರಿಸುವ ಹಬ್ಬಗಳ ಪೈಕಿ ಈದುಲ್ ಅಝ್ಹಾ (Eid UL Adha- Bakrid 2024) ಹಬ್ಬವು ಒಂದು. ಇದು ಬಹಳ ವಿಶೇಷತೆಯನ್ನು ಹೊಂದಿದೆ. ಜಾಗತಿಕ ವಲಯದಲ್ಲಿ ಸರ್ವ ಮುಸಲ್ಮಾನರು ಎಲ್ಲಾ ಹಬ್ಬಗಳ ಹಾಗೆ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಇದು ತ್ಯಾಗ ಮತ್ತು ಬಲಿದಾನ ಸಾವಿರಾರು ಹಿಂದಿನ ಐತಿಹಾಸಿಕ ಚಾರಿತ್ರಿಕ ಘಟನೆಯನ್ನು ಸ್ಮರಿಸುವ ಹಬ್ಬ. ಈ ಕುರಿತಾದ ಚರಿತ್ರೆಗಳು ಮತ್ತು ನೈಜ ಘಟನೆಗಳು ಖುರ್ ಆನ್ (Quran) ಹಾಗೂ ಇಸ್ಲಾಮಿನ ಧಾರ್ಮಿಕ ಗ್ರಂಥದಲ್ಲಿ ಪುರಾವೆ ಸಮೇತ ಉಲ್ಲೇಖವಿದೆ.

ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ಅರೇಬಿಕ್ ತಿಂಗಳ ಕೊನೇಯ ತಿಂಗಳ ಝುಲ್ ಹಿಜ್ಜ ಬಹಳ ಪವಿತ್ರ ತಿಂಗಳು. ಆರೋಗ್ಯ, ಸಂಪತ್ತು, ಸೌಕರ್ಯ ಹೊಂದಿ ಜವಾಬ್ದಾರಿ ಮುಕ್ತನಾಗಿರುವ ಮುಸ್ಲಿಂ ವ್ಯಕ್ತಿಯ ಮೇಲೆ ಇಸ್ಲಾಮಿನ ಐದು ಪಂಚ ಕರ್ಮಗಳಲ್ಲಿ ಒಂದಾದ ಹಜ್ ಕಡ್ಡಾಯವಾಗಿದೆ. ಅದರ ನಿರ್ವಹಣೆಗಿರುವ ಸಮಯ ಮತ್ತು ತಿಂಗಳು ಇದೇ ಝುಲ್ ಹಜ್ ಆಗಿರುತ್ತದೆ.

ಆಧ್ಯಾತ್ಮಿಕ ಶುದ್ಧೀಕರಣದೊಂದಿಗೆ ಮೆಕ್ಕಾದಲ್ಲಿರುವ ಪವಿತ್ರ್ ಭವನ ಕಅಬಾಗೆ ತೆರಳಿ ಕಅಬಾ ಭವನಕ್ಕೆ ಪ್ರದಕ್ಷಿಣೆ, ಸಫಾ ಮರ್ವಾ ಬೆಟ್ಟಗಳ ಮಧ್ಯೆ ನಡೆಯುವುದು, ಮಿನಾದಲ್ಲಿ ತಂಗುವುದು, ಅರಫಾ ಮೈದಾನಕ್ಕೆ ತೆರಳುವುದು, ಮುಝ್ದಲಿಫಾದಲ್ಲಿ ಇರುವುದು, ಜಮ್ರಾದಲ್ಲಿ ಕಲ್ಲೆಸೆಯುವುದು, ಮತ್ತೆ ಮಿನಾದಲ್ಲಿ ತಂಗಿ ಬಲಿ ನೀಡುವುದು ಈ ರೀತಿ ಕೆಲವೊಂದು ಕರ್ಮಗಳನ್ನು ಒಳಗೊಂಡ ಮಕ್ಕಾ ಪುಣ್ಯ ಯಾತ್ರೆಗೆ ಹಜ್ ಎಂದು ಕರೆಯುತ್ತೇವೆ. ಹಜ್ ನಂತೆಯೇ ಉಮ್ರಾ ಕೂಡ ಇದೇ ಕರ್ಮಗಳನ್ನು ಒಳಗೊಂಡಿವೆ. ಆದರೆ ಹಜ್ ವರ್ಷಕ್ಕೆ ಒಂದು ಬಾರಿ ಝುಲ್ ಹಿಜ್ಜ ತಿಂಗಳಲ್ಲಿ ಮಾತ್ರ. ಉಮ್ರಾ ವರ್ಷದ ಎಲ್ಲಾ ದಿನವು ಮಾಡಬಹುದಾಗಿದೆ.

ಧರ್ಮ ಪ್ರಚಾರ

ಇಸ್ಲಾಂ ದರ್ಮದ ಪ್ರಚಾರಕರಾಗಿ ಆಯುಕ್ತರಾಗಿದ್ದ ಒಂದು ಲಕ್ಷಕ್ಕಿಂತಲೂ ಅಧಿಕ ಪ್ರವಾದಿಗಳ ಪೈಕಿ ಅಲ್ಲಾಹನ ಇಷ್ಟ ದಾಸರಾಗಿ ವಿಶೇಷ ಸ್ಥಾನಮಾನ ಪಡೆದ ಮಹಾನರಾಗಿದ್ದರು ಹಜ್ರತ್ ಇಬ್ರಾಹಿಮ್ ಅಲೈಹಿಸ್ಸಲಾಮ್, ಅವರು ಪ್ರವಾದಿಯಾದ ಬಳಿಕ, ಧರ್ಮ ಪ್ರಚಾರಕ್ಕಿಳಿಯುತ್ತಾರೆ. ಈ ವೇಳೆ ದೇವರು ಇಬ್ರಾಹಿಮ್ ಅವರನ್ನು ಹಲವಾರು ಪರೀಕ್ಷೆಗಳಿಗೆ ಒಳಪಡಿಸುತ್ತಾನೆ. ಏಕದೇವ ವಿಶ್ವಾಸದ ಅನುಷ್ಠಾನಕ್ಕಾಗಿ ಸ್ವಂತ ಹೆತ್ತವರು, ಕುಟುಂಬ, ಮನೆ, ಆಸ್ತಿ, ಊರು ಎಲ್ಲವನ್ನೂ ತ್ಯಾಗ ಮಾಡಿ ದೇಶಾಂತರ ಹೊರಟು, ಸಂತಾನ ಭಾಗ್ಯ ಇಲ್ಲದೆ ಕೊರಗುತ್ತಿದ್ದ ಪ್ರವಾದಿ ಇಬ್ರಾಹಿಂ ಮತ್ತು ಹಾಜರ ಬೀವಿ ಅವರಿಗೆ ಪವಾಡದಂತೆ ವೃದ್ಧಾಪ್ಯದಲ್ಲಿ ಲಭಿಸಿದ ಗಂಡು ಮಗು ಇಸ್ಮಾಯಿಲ್ ಸ್ವಂತ ಮಗನನ್ನೂ ದೇವರ ಆದೇಶದಂತೆ ಬಲಿ ಕೊಡಲು ಮುಂದಾಗುತ್ತಾರೆ. ನಿರ್ಜಲ, ನಿರ್ಜನ ಮರುಭೂಮಿಯಲ್ಲಿ ಪುಟ್ಟ ಮಗುವನ್ನು ಮಡದಿಯನ್ನು ಏಕಾಂಗಿಯಾಗಿ ಬಿಟ್ಟು ಬಿಡುತ್ತಾರೆ.

ಅಲ್ಲಾಹನ ಎಲ್ಲಾ ಆಜ್ಞೆಗಳನ್ನು ಈಡೇರಿಸಿ ಪರೀಕ್ಷೆಗಳನ್ನು ಎದುರಿಸಿ ದೇವ ಪ್ರೀತಿಗೆ ಪಾತ್ರರಾಗಿ ಪ್ರವಾದಿ ಇಬ್ರಾಹಿಂ ಮತ್ತು ಮಡದಿ ಹಾಜರ ಮಗ ಇಸ್ಮಾಯಿಲ್ ತ್ಯಾಗ ಮತ್ತು ಅಛಲ ವಿಶ್ವಾಸ ಸ್ನೇಹ ನಂಬಿಕೆಯ ಬದುಕನ್ನು ರೂಪಿಸಿಕೊಳ್ಳುತ್ತಾರೆ. ಪ್ರವಾದಿ ಇಬ್ರಾಹಿಂ ಅವರ ನಂತರ ತಮ್ಮ ಮಗ ಇಸ್ಮಾಯಿಲ್ ಪ್ರವಾದಿ ಪಟ್ಟವನ್ನು ಸ್ವೀಕರಿಸುತ್ತಾರೆ. ಹಝ್ರತ್ ಇಬ್ರಾಹಿಂ ಅವರಿಗೆ ಖಲೀಲುಲ್ಲಾಹ್ ಅಲ್ಲಾಹನ ಸ್ನೇಹಿತ ಎಂಬ ಗೌರವ ಪದವಿಯನ್ನು ನೀಡಿ ಗೌರವಿಸುತ್ತಾನೆ. ಪ್ರವಾದಿ ಇಬ್ರಾಹಿಂ ಅವರ ಜೀವನ ಬದುಕು ಇತಿಹಾಸವನ್ನು ನೆನಪಿಸುವುದೇ ಹಜ್ ಬಕ್ರೀದ್‌ ಆಚರಣೆಯ ಉದ್ದೇಶ.

ಇದನ್ನೂ ಓದಿ:Govt Holidays : 2024ರಲ್ಲಿ ಸರ್ಕಾರಿ ನೌಕರರಿಗೆ ಭರ್ಜರಿ ರಜೆ; ಇಲ್ಲಿದೆ ಸರ್ಕಾರಿ ರಜೆಗಳ ಪಟ್ಟಿ

Continue Reading

ಭವಿಷ್ಯ

Dina Bhavishya : ಗೌಪ್ಯ ವಿಷಯವನ್ನು ಹಂಚಿಕೊಂಡರೆ ಈ ರಾಶಿಯವರಿಗೆ ಅಪಾಯ ಗ್ಯಾರಂಟಿ!

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷದ ಏಕಾದಶಿ ಅಹೋರಾತ್ರಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ತುಲಾ ರಾಶಿಯಿಂದ ಸೋಮವಾರ ಮಧ್ಯರಾತ್ರಿ 02:37ಕ್ಕೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ವೃಷಭ ರಾಶಿಯವರಿಗೆ ಕುಟುಂಬದ ಸದಸ್ಯರಿಗೆ ಸಂಬಂಧಿಗಳಿಂದ ಶುಭ ಸುದ್ದಿ ಬರುವುದು. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮನೆಯಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ ಮಾಡುವಿರಿ. ಕಟಕ ರಾಶಿಯವರು ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (17-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ಏಕಾದಶಿ ಅಹೋರಾತ್ರಿ ವಾರ: ಸೋಮವಾರ
ನಕ್ಷತ್ರ: ಚಿತ್ತಾ 13:49 ಯೋಗ: ಪರಿಘ 21:33
ಕರಣ: ವಣಿಜ 17:38 ಅಮೃತಕಾಲ: ಬೆಳಗ್ಗೆ 06:44ರಿಂದ 08:31ರವರೆಗೆ
ದಿನದ ವಿಶೇಷ: ಬೆಂಗಳೂರು ಪ್ರಸನ್ನ ವೀರಾಂಜನೆಯ ಉತ್ಸವ, ತಲಕಾಡು ಬ್ರಹ್ಮಾನಂದ ಸರಸ್ವತಿ ವರ್ಧಂತಿ

ಸೂರ್ಯೋದಯ : 05:54   ಸೂರ್ಯಾಸ್ತ : 06:47

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಭಾವನಾತ್ಮಕವಾಗಿ ನೀವಿಂದು ಸ್ಥಿರವಾಗಿರುವುದಿಲ್ಲ. ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರಿಕೆ ಇರಲಿ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಫಲ ಸಿಗುವುದರ ಜತೆಗೆ ಪುರಸ್ಕಾರ ಸಿಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದ ಸದಸ್ಯರಿಗೆ ಸಂಬಂಧಿಗಳಿಂದ ಶುಭ ಸುದ್ದಿ ಬರುವುದು. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಮನೆಯಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ ಮಾಡುವಿರಿ. ಕುಟುಂಬ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡುವಂತೆ ಮಾಡುವುದು. ಆತುರದಲ್ಲಿ ಯಾವುದೇ ತೀರ್ಮಾನ ಕೈಗೊಳ್ಳಬೇಡಿ. ಆಡಿದ ಮಾತುಗಳು ಅಪಾಯ ತಂದಿತು ಎಚ್ಚರಿಕೆ ಇರಲಿ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿಯಾಗಲಿದೆ. ಮನೆಯವರ ಧೈರ್ಯದ ಮಾತುಗಳು ಮನಸ್ಸಿಗೆ ಸಂತೋಷ ನೆಮ್ಮದಿ ತರುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕಟಕ:ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ ಇದೆ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಮನಸ್ಸಿಗೆ ಮುದ ನೀಡುವಳು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಸಿಂಹ:ನಿಮ್ಮ ವರ್ತನೆಯಲ್ಲಿ ಬದಲಾವಣೆ ಆಗಲಿದೆ. ಹಿರಿಯರ ಆಶೀರ್ವಾದದ ಬಲದಿಂದ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಭೇಟಿ ಮಾಡಿ ಸ್ವಾಂತನ ಹೇಳಬಹುದು. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಕುಟುಂಬ ಸದಸ್ಯರ ಅವಶ್ಯಕತೆಗಾಗಿ ಅನಗತ್ಯ ಖರ್ಚು ಮಾಡುವಿರಿ. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಇದರ ಮಧ್ಯೆ ಕುಟುಂಬ ಸದಸ್ಯರು ನಿಮ್ಮ ಮುಂದೆ ಸಮಸ್ಯೆ ಹಂಚಿಕೊಳ್ಳುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕೈಗೊಂಡ ಧಾರ್ಮಿಕ ಕಾರ್ಯಗಳು ಮನಸ್ಸಿಗೆ ಸಮಾಧಾನ ತರುವುದು. ಅಗತ್ಯಕ್ಕೆ ತಕ್ಕಂತೆ ಖರ್ಚು ಇರಲಿದೆ. ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿ ಅಚ್ಚರಿ ತರುವುದು, ಕೋಪದಲ್ಲಿ ಮಾತಿಗೆ ಇಳಿಯುವುದರಿಂದ ಕಠಿಣ ಪರಿಸ್ಥಿತಿ ನಿರ್ಮಾಣವಾಗಲಿದೆ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ :ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ. ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವುದು ಬೇಡ. ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕುಟುಂಬದ ಸದಸ್ಯರ ವರ್ತನೆಯಿಂದ ಕೋಪಗೊಳ್ಳುವ ಸಾಧ್ಯತೆ ಇದೆ. ಸಂಬಂಧಿಕರಿಂದ ವ್ಯಾಜ್ಯ ಉಂಟಾಗುವ ಸಾಧ್ಯತೆ ಇದೆ. ಆತುರದ ಮಾತುಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಕರ: ಜೀವನದಲ್ಲಿ ಹೊಸ ಪಾಠ ಕಲಿಯುವಿರಿ. ಕೌಟುಂಬಿಕ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ ಇದೆ. ಕೋಪದಲ್ಲಿ ಆಡಿದ ಮಾತುಗಳ ಮನವರಿಕೆ ಆಗುವುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವೈದ್ಯರ ಸಲಹೆ ಪಡೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ,ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ ಇದೆ. ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ. ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ ಇದೆ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

World War 3: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ದುರಂತದಿಂದ ಸಾವಿಗೀಡಾಗುತ್ತಾರೆ ಎಂಬುದಾಗಿ ಇದಕ್ಕೂ ಮೊದಲು ಕುಶಾಲ್‌ ಕುಮಾರ್ ಅವರು ಭವಿಷ್ಯ ನುಡಿದಿದ್ದರು. ಅದರಂತೆ, ಇಬ್ರಾಹಿಂ ರೈಸಿ ಅವರು ಮೇ 19ರಂದು ಸಂಭವಿಸಿದ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದರು. ಈಗ ರಾಜಕೀಯ ಹಾಗೂ ಜಾಗತಿಕ ಗಡಿ ಬಿಕ್ಕಟ್ಟಿನಿಂದಾಗಿ ಮೂರನೇ ಮಹಾಯುದ್ಧ ಸಂಭವಿಸಲಿದೆ ಎಂದು ಮಾಧ್ಯಮ ಸಂಸ್ಥೆಯೊಂದಕ್ಕೆ ಕುಶಾಲ್‌ ಕುಮಾರ್‌ ಅವರು ಭವಿಷ್ಯ ನುಡಿದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

VISTARANEWS.COM


on

World War 3
Koo

ನವದೆಹಲಿ: ಅಫಘಾನಿಸ್ತಾನದಲ್ಲಿ ತಾಲಿಬಾನಿಗಳ ಆಡಳಿತ ಜಾರಿಗೆ ಬಂದಿದ್ದು, ಮಾನವ ಹಕ್ಕುಗಳು ಸರ್ವನಾಶಗೊಂಡಿವೆ. ಉಕ್ರೇನ್‌ ಮೇಲೆ ರಷ್ಯಾ ದಾಳಿ ಮಾಡುತ್ತಲೇ ಇದೆ. ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿ ಮೇಲೆ ಇಸ್ರೇಲ್‌ ದಾಳಿ ನಡೆಸುತ್ತಲೇ ಇದೆ. ಇದೆಲ್ಲದ ಕಾರಣ ನಾಸ್ಟ್ರಾಡಾಮಸ್‌ ಹಾಗೂ ಬಾಬಾ ವಂಗಾ ಅವರು ಮೂರನೇ ಮಹಾಯುದ್ಧದ ಕುರಿತು ಭವಿಷ್ಯ ನುಡಿದಿದ್ದಾರೆ. ಇದರ ಬೆನ್ನಲ್ಲೇ, ಭಾರತದ ಜ್ಯೋತಿಷಿಯೊಬ್ಬರು ಮುಂದಿನ 48 ಗಂಟೆಗಳಲ್ಲಿಯೇ ಮೂರನೇ ಮಹಾಯುದ್ಧ ಆರಂಭವಾಗಲಿದ್ದು, ಜಗತ್ತಿನ ಬಹುತೇಕ ರಾಷ್ಟ್ರಗಳು ಸಂಕಷ್ಟಕ್ಕೆ ಸಿಲುಕಲಿವೆ ಎಂದು ಭವಿಷ್ಯ ನುಡಿದಿರುವುದು ಸಂಚಲನ ಮೂಡಿಸಿದೆ.

ಹೌದು, ಹರಿಯಾಣದವರಾದ ಕುಶಾಲ್‌ ಕುಮಾರ್‌ ಅವರು ಮೂರನೇ ಮಹಾಯುದ್ಧದ ಕುರಿತು ಭವಿಷ್ಯ ನುಡಿದಿದ್ದಾರೆ. “2024ರ ಜೂನ್‌ 18ರಿಂದಲೇ ಅಂದರೆ, ಮುಂದಿನ 48 ಗಂಟೆಗಳಲ್ಲಿಯೇ ಜಗತ್ತಿನಾದ್ಯಂತ ಬಿಕ್ಕಟ್ಟು ಸೃಷ್ಟಿಯಾಗಲಿದೆ. ತಮ್ಮನ್ನು ತಾವು ವೈದಿಕ ಜ್ಯೋತಿಷಿ ಎಂದು ಘೋಷಿಸಿಕೊಂಡಿರುವ ಕುಶಾಲ್‌ ಕುಮಾರ್‌ ಅವರು ಇದುವರೆಗೆ ನುಡಿದ ಭವಿಷ್ಯಗಳು ನಿಜವಾಗಿವೆ. ಜೂನ್‌ 18ರಂದೇ ಜಾಗತಿಕವಾಗಿ ಸಂಚಲನ ಮೂಡಿಸುವ ಬೆಳವಣಿಗೆಯೊಂದು ನಡೆಯಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಜ್ಯೋತಿಷಿ ಕುಶಾಲ್‌ ಕುಮಾರ್.‌

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ದುರಂತದಿಂದ ಸಾವಿಗೀಡಾಗುತ್ತಾರೆ ಎಂಬುದಾಗಿ ಇದಕ್ಕೂ ಮೊದಲು ಕುಶಾಲ್‌ ಕುಮಾರ್ ಅವರು ಭವಿಷ್ಯ ನುಡಿದಿದ್ದರು. ಅದರಂತೆ, ಇಬ್ರಾಹಿಂ ರೈಸಿ ಅವರು ಮೇ 19ರಂದು ಸಂಭವಿಸಿದ ಹೆಲಿಕಾಪ್ಟರ್‌ ದುರಂತದಲ್ಲಿ ಮೃತಪಟ್ಟಿದ್ದರು. ಈಗ ರಾಜಕೀಯ ಹಾಗೂ ಜಾಗತಿಕ ಗಡಿ ಬಿಕ್ಕಟ್ಟಿನಿಂದಾಗಿ ಮೂರನೇ ಮಹಾಯುದ್ಧ ಸಂಭವಿಸಲಿದೆ ಎಂದು ಮಾಧ್ಯಮ ಸಂಸ್ಥೆಯೊಂದಕ್ಕೆ ಕುಶಾಲ್‌ ಕುಮಾರ್‌ ಅವರು ಭವಿಷ್ಯ ನುಡಿದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಉತ್ತರ ಕೊರಿಯಾ ಸೈನಿಕರು ದಕ್ಷಿಣ ಕೊರಿಯಾ ಗಡಿಗಳತ್ತ ನುಗ್ಗುತ್ತಿದ್ದಾರೆ. ಇಸ್ರೇಲ್‌ ಹಾಗೂ ಗಾಜಾ ನಡುವಿನ ಸಮರವು ಭಾರಿ ಬಿಕ್ಕಟ್ಟು ಸೃಷ್ಟಿಸಿದೆ. ಉಕ್ರೇನ್‌ನಲ್ಲಿ ರಷ್ಯಾವಂತೂ ಮಾರಣಹೋಮ ನಡೆಸುತ್ತಿದೆ. ಇನ್ನು ಕಳೆದ ಜೂನ್‌ನಲ್ಲಿಯೇ ಜಮ್ಮು-ಕಾಶ್ಮೀರದಲ್ಲಿ ಯಾತ್ರಿಕರ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇದೆಲ್ಲ ಕಾರಣದಿಂದಾಗಿ ಜಾಗತಿಕ ರಾಜಕೀಯ ಬಿಕ್ಕಟ್ಟು ಸೃಷ್ಟಿಯಾಗಿ, ಇದು ಮಿಲಿಟರಿ ಕಾರ್ಯಾಚರಣೆಗಳಿಗೆ ಮುನ್ನುಡಿ ಬರೆಯುತ್ತದೆ. ಇದರಿಂದ ಜಾಗತಿಕ ಅಶಾಂತಿ ಸೃಷ್ಟಿಯಾಗುತ್ತದೆ ಎಂದೇ ಹೇಳಲಾಗುತ್ತಿದೆ.

ಇದನ್ನೂ ಓದಿ: Moscow Attack: ರಷ್ಯಾದಲ್ಲಿ ಉಗ್ರರ ದಾಳಿ; ಸಾವಿನ ಸಂಖ್ಯೆ 150, ಏನೆಲ್ಲ ಬೆಳವಣಿಗೆ?

Continue Reading
Advertisement
Drowned in river
ಕ್ರೈಂ13 mins ago

Drowned: ಈಜಲು ಹೋಗಿ ಬಾಲಕರು ನೀರುಪಾಲು; ಕಮಲ ಕೊಯ್ಯಲು ಹೋಗಿ ಕೆಸರಿನಲ್ಲಿ ವ್ಯಕ್ತಿ ಸಮಾಧಿ

Himanta Biswa Sarma
ದೇಶ27 mins ago

ಅಸ್ಸಾಂನಲ್ಲಿ ʼವಿಐಪಿ ಸಂಸ್ಕೃತಿʼಗೆ ಬ್ರೇಕ್‌ ಹಾಕಲು ಮುಂದಾದ ಸಿಎಂ ಹಿಮಂತ ಬಿಸ್ವಾ; ತಮ್ಮ ವಿದ್ಯುತ್‌ ಬಿಲ್‌ ತಾವೇ ಪಾವತಿಸುವುದಾಗಿ ಘೋಷಣೆ

Actor Darshan Renukaswamy Send His Photos To Pavitra Gowda
ಕ್ರೈಂ46 mins ago

Actor Darshan: ಹತ್ಯೆಯಾದ ರೇಣುಕಾಸ್ವಾಮಿ ಮೊಬೈಲ್‌ ಹೋಯಿತೆಲ್ಲಿ?

bakrid 2024
ಧಾರ್ಮಿಕ1 hour ago

Bakrid 2024: ತ್ಯಾಗ, ಬಲಿದಾನವನ್ನು ಸ್ಮರಿಸುವ ಈದುಲ್ ಅಝ್ಹಾ

Karnataka weather Forecast
ಮಳೆ2 hours ago

Karnataka weather : ಇಂದು ಕರಾವಳಿ, ಮಲೆನಾಡಿನಲ್ಲಿ ಹಗುರ, ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ

Dina Bhavishya
ಭವಿಷ್ಯ3 hours ago

Dina Bhavishya : ಗೌಪ್ಯ ವಿಷಯವನ್ನು ಹಂಚಿಕೊಂಡರೆ ಈ ರಾಶಿಯವರಿಗೆ ಅಪಾಯ ಗ್ಯಾರಂಟಿ!

World War 3
ಪ್ರಮುಖ ಸುದ್ದಿ9 hours ago

World War 3: ಜೂನ್ 18ರಿಂದ 3ನೇ ಮಹಾಯುದ್ಧ ಶುರು; ಖ್ಯಾತ ಜ್ಯೋತಿಷಿಯ ಭವಿಷ್ಯವಾಣಿ ಸಂಚಲನ

Cholera outbreak
ಕರ್ನಾಟಕ11 hours ago

Cholera outbreak: ಕಲುಷಿತ ನೀರು ಸೇವನೆ; ಮಧುಗಿರಿಯ ಚಿನ್ನೇನಹಳ್ಳಿಯಲ್ಲಿ ವ್ಯಕ್ತಿಗೆ ಕಾಲರಾ ದೃಢ

NCERT Textbooks
ಪ್ರಮುಖ ಸುದ್ದಿ11 hours ago

NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

Parenting Tips
ಪ್ರಮುಖ ಸುದ್ದಿ12 hours ago

Parenting Tips: ನೀವು ಹೊಸ ಅಪ್ಪ ಅಮ್ಮಂದಿರೇ? ನಿಮಗಿದೆ ಇಲ್ಲಿ ಮುಖ್ಯವಾದ ಟಿಪ್ಸ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ14 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ15 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ20 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌